Tag: Water Inflow

  • ಮಲೆನಾಡಿನಲ್ಲಿ ಅಧಿಕ ಮಳೆ – ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

    ಮಲೆನಾಡಿನಲ್ಲಿ ಅಧಿಕ ಮಳೆ – ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

    – ಮೂರೇ ದಿನಗಳಲ್ಲಿ 4 ಟಿಎಂಸಿ ನೀರು ಸಂಗ್ರಹ

    ಬಳ್ಳಾರಿ: ಮಲೆನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ ಒಳಹರಿವಿನ (Water Inflow) ಪ್ರಮಾಣ ಮತ್ತಷ್ಟು ಹೆಚ್ಚಳವಾಗಿದ್ದು, ಮೂರೇ ದಿನಗಳ ಅಂತರದಲ್ಲಿ ಜಲಾಶಯಕ್ಕೆ 4ಕ್ಕೂ ಅಧಿಕ ಟಿಎಂಸಿ ನೀರು ಸಂಗ್ರಹವಾಗಿದೆ.

    ಇದರಿಂದ ಬರಡಾಗಿದ್ದ ತುಂಗಭದ್ರಾ ಜಲಾಶಯಕ್ಕೆ (Tungabhadra Reservoir) ಮರುಜೀವ ಬಂದಂತಾಗಿದೆ. ಗುರುವಾರ (ಜು.4) 10.082 ಟಿಎಂಸಿ ನಷ್ಟಿದ್ದ ಜಲಾಶಯದ ನೀರಿನ ಮಟ್ಟ ಶುಕ್ರವಾರ (ಜು.5) 11.714 ಟಿಎಂಸಿಗೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಟಿಬಿ ಡ್ಯಾಂಗೆ 1.5 ಟಿಎಂಸಿ (TMC) ನೀರು ಹರಿದುಬಂದಿದೆ. ಇದನ್ನೂ ಓದಿ: ವಿಶ್ವನಾಥ್‌, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್‌ ಬಾಂಬ್‌!

    ಸದ್ಯ ಜಲಾಶಯಕ್ಕೆ 19,200ಕ್ಕೂ ಅಧಿಕ ಕ್ಯೂಸೆಕ್ ನೀರು ಒಳಹರಿವು ಇದ್ದು, ಕಳೆದ ಒಂದು ವಾರದಿಂದ ಸರಾಸರಿ ಒಳಹರಿವಿನ ಪ್ರಮಾಣದಲ್ಲಿಯೂ ಹೆಚ್ಚಳವಾಗಿದೆ. 105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ 11.714 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

    100 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ:
    ಮತ್ತೊಂದೆಡೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆ ಮಂಡ್ಯ ಜನರ ಜೀವನಾಡಿ ಕೆಆರ್‌ಎಸ್ ಡ್ಯಾಂ (KRS Dam) 100 ಅಡಿ ಭರ್ತಿಯಾಗಿದೆ. ಎರಡು ವಾರದಿಂದ ಪ್ರತಿದಿನ ಸರಾಸರಿ 10 ಸಾವಿರ ಕ್ಯೂಸೆಕ್‌ ಒಳಹರಿವು ಬರುತ್ತಿದೆ. ಇದರ ಬೆನ್ನಲ್ಲೇ ಇದೀಗ 100 ಅಡಿಗೆ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದೆ. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಎಲ್ಲೆಲ್ಲಿ ಏನಾಗಿದೆ? 

  • ಮಳೆ ಅಬ್ಬರ; ಕೆಆರ್‌ಎಸ್‌ ಡ್ಯಾಂಗೆ ಒಳಹರಿವು ಮತ್ತಷ್ಟು ಹೆಚ್ಚಳ

    ಮಳೆ ಅಬ್ಬರ; ಕೆಆರ್‌ಎಸ್‌ ಡ್ಯಾಂಗೆ ಒಳಹರಿವು ಮತ್ತಷ್ಟು ಹೆಚ್ಚಳ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಕೆಆರ್‌ಎಸ್‌ ಡ್ಯಾಂಗೆ (KRS Dam) 10 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳವಾಗಿದೆ.

    ಕಳೆದ ಮೂರು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಕೆಆರ್‌ಎಸ್‌ಗೆ ಹರಿದು ಬಂದ ಅಧಿಕ ಒಳಹರಿವು ಬಂದಿದೆ. ಇಂದು ಕೆಆರ್‌ಎಸ್‌ಗೆ 13,437 ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ. ಈ ವರ್ಷದಲ್ಲಿ ಸದ್ಯ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ನಿನ್ನೆ 3,856 ಕ್ಯೂಸೆಕ್‌ ಒಳಹರಿವು ಇತ್ತು. 24 ಗಂಟೆಯ ಅವಧಿಯಲ್ಲಿ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಅಲ್ಲದೇ ಒಂದೇ ದಿನದಲ್ಲಿ 1 ಟಿಎಂಸಿಗೂ ಅಧಿಕ ನೀರು ಡ್ಯಾಂಗೆ ಹರಿದು ಬಂದಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್‌ಎಸ್‌ನಲ್ಲಿ 16.118 ಟಿಎಂಸಿ ಸಂಗ್ರಹವಾಗಿದೆ. ನಿನ್ನೆ 15.007 ಟಿಎಂಸಿ ನೀರು ಇತ್ತು.

    124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ನೀರು ಈಗ 90.30 ಅಡಿ ತಲುಪಿದೆ. ಇಂದಿನ ಹೊರಹರಿವು 478 ಕ್ಯೂಸೆಕ್ ಆಗಿದೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣ

  • ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

    ಶುಕ್ರವಾರದಿಂದ (ಜೂ.8) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಇದನ್ನೂ ಓದಿ: Exclusive: ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ – ಅರ್ಜಿ ಸಲ್ಲಿಕೆ ಯಾವಾಗಾ, ಹೇಗೆ?

    ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ:
    ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

    ಕರಾವಳಿಯಲ್ಲಿ ಮುಂದಿನ 15 ದಿನ ಮಳೆ:
    ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: NCP ನಾಯಕ ಪ್ರಫುಲ್‌ ಪಟೇಲ್‌ಗೆ ಬಿಗ್‌ ರಿಲೀಫ್‌ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!