Tag: water man

  • ಕೋರ್ಟ್ ಆದೇಶ ನೀಡಿದ್ರೂ ಕೆಲಸಕ್ಕೆ ನೇಮಿಸಿಲ್ಲ – ವಾಟರ್ ಮ್ಯಾನ್ ಆತ್ಮಹತ್ಯೆಗೆ ಯತ್ನ

    ಕೋರ್ಟ್ ಆದೇಶ ನೀಡಿದ್ರೂ ಕೆಲಸಕ್ಕೆ ನೇಮಿಸಿಲ್ಲ – ವಾಟರ್ ಮ್ಯಾನ್ ಆತ್ಮಹತ್ಯೆಗೆ ಯತ್ನ

    ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯ ಮುಂಭಾಗದಲ್ಲಿ ವಾಟರ್ ಮ್ಯಾನ್ ಒಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಹಂಪಾಪುರ ಗ್ರಾಮದ ಕುಮಾರಸ್ವಾಮಿ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ನೇರಳೆ ಗ್ರಾಮ ಪಂಚಾಯ್ತಿ ಹಂಪಾಪುರ ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿಯವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ವಜಾ ಅದೇಶ ಪ್ರಶ್ನಿಸಿ ಕುಮಾರಸ್ವಾಮಿ ಕೊರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಟ್ರಸ್ಟ್‌ಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆ

    ಕುಮಾರಸ್ವಾಮಿಯನ್ನು ಮತ್ತೆ ವಾಟರ್ ಮ್ಯಾನ್ ಕೆಲಸದಲ್ಲಿ ಮುಂದುವರಿಸುವಂತೆ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶವಿದ್ದರೂ ಮತ್ತೆ ಕೆಲಸಕ್ಕೆ ನೇಮಿಸಿಕೊಂಡಿಲ್ಲ ಎಂದು ವಿಷ ಕುಡಿದು ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಮಸೀದಿಗಳಿಗಾಗಿ ಕೆಡವಿದ ದೇವಸ್ಥಾನಗಳ ಮರು ನಿರ್ಮಾಣ: ಸಂಗೀತ್ ಸೋಮ್

    ಕೂಡಲೇ ವಿಷ ಕುಡಿದಿರುವ ಕುಮಾರಸ್ವಾಮಿಯನ್ನು ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಸದ್ಯ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

  • ಮಹಿಳೆಯರ ಮೇಲೆ ವಾಟರ್ ಮೆನ್ ಪೌರುಷ

    ಮಹಿಳೆಯರ ಮೇಲೆ ವಾಟರ್ ಮೆನ್ ಪೌರುಷ

    ತುಮಕೂರು: ನೀರಿನ ಟ್ಯಾಂಕ್ ಶುಚಿಗೊಳಿಸಿ ಎಂದಿದ್ದಕ್ಕೆ ವಾಟರ್ ಮೆನ್ ಒಬ್ಬ ಮಹಿಳೆಯರ ಮೇಲೆ ಪೌರುಷ ತೋರಿಸಿದ್ದಾನೆ. ಏಕಾಏಕಿ ಮಹಿಳೆಯರ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಏಡೆಯೂರು ಗ್ರಾಮದ ತಟ್ಟೆಕೆರೆಯಲ್ಲಿ ಈ ಘಟನೆ ನಡೆದಿದೆ.

    ತಟ್ಟೆಕೆರೆಯಲ್ಲಿರುವ ವಾಟರ್ ಟ್ಯಾಂಕ್ ಕಲುಷಿತವಾಗಿದ್ದು ಅದನ್ನು ಶುಚಿಗೊಳಿಸಿ ನೀರು ಬಿಡಿ ಎಂದು ಏಡೆಯೂರು ಗ್ರಾಮ ಪಂಚಾಯ್ತಿ ವಾಟರ್ ಮೆನ್ ಹರೀಶ್ ಗೆ ಗ್ರಾಮಸ್ಥರು ತಾಕೀತು ಮಾಡಿದ್ದಾರೆ. ಈ ದ್ವೇಷವನ್ನೇ ಮನಸ್ಸಿನಲಿಟ್ಟುಕೊಂಡ ಹರೀಶ್, ಮಗದೊಂದು ದಿನ ಬಂದು ಮಹಿಳೆಯರ ಮೇಲೆ ಪರಾಕ್ರಮ ತೋರಿದ್ದಾನೆ. ಪರಿಣಾಮ ಘಟನೆಯಲ್ಲಿ ಕಲಾವತಿ ಮತ್ತು ಸವಿತಾ ಸೇರಿದಂತೆ ಹಲವು ಮಹಿಳೆಯರಿಗೆ ಗಾಯವಾಗಿದೆ. ಈ ಸಂಬಂಧ ಅಮೃತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹರೀಶ್ ವಾಟರ್ ಮೆನ್ ಆಗಿದ್ದರೂ ಗ್ರಾಮಸ್ಥರನ್ನ ಹೆದರಿಸಿ ದೌರ್ಜನ್ಯ ಮಾಡುತಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ ಈ ಕೂಡಲೇ ಹರೀಶ್ ನನ್ನ ಗ್ರಾಮ ಪಂಚಾಯ್ತಿ ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.