Tag: Water Resources Department

  • ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ: ಸಿಎಸ್‌ಗೆ ಖಾರವಾದ ಪತ್ರ ಬರೆದಿದ್ದಕ್ಕೆ ಡಿಕೆಶಿ ಸಮರ್ಥನೆ

    ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ: ಸಿಎಸ್‌ಗೆ ಖಾರವಾದ ಪತ್ರ ಬರೆದಿದ್ದಕ್ಕೆ ಡಿಕೆಶಿ ಸಮರ್ಥನೆ

    ಬೆಂಗಳೂರು: ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲದ ಕಾರಣ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

    ಜಲಸಂಪನ್ಮೂಲ ಇಲಾಖೆ ಎಂಜಿನಿಯರ್‌ಗಳ ವರ್ಗಾವಣೆ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ. ನಮಗೆ ತುರ್ತಾಗಿ ಇಂಜಿನಿಯರ್‌ಗಳು ಬೇಕು. ಹೀಗಾಗಿ ನಮ್ಮ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳಿಸಬೇಡಿ ಎಂದು ಪತ್ರ ಬರೆದಿದ್ದೇನೆ. ನಮ್ಮ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.ಇದನ್ನೂ ಓದಿ: ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

    ನಿಮ್ಮ ಅನುಮತಿ ಇಲ್ಲದೆ ಯಾರು ವರ್ಗಾವಣೆ ಮಾಡಿದ್ದಾರೆ ಎಂದು ಕೇಳಿದಾಗ, ಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶ ಇದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡಲು ಎಂಜಿನಿಯರ್‌ಗಳು ಮುಂದೆ ಬರುತ್ತಿಲ್ಲ. ಈ ದೃಷ್ಟಿಯಿಂದ ನನ್ನ ಗಮನಕ್ಕೆ ತರದೇ ಯಾರನ್ನೂ ವರ್ಗಾವಣೆ ಮಾಡಬೇಡಿ ಎಂದು ಹೇಳಿದ್ದೇನೆ ಎಂದರು.

    ಡಿಕೆಶಿ ಸಿಎಸ್‌ಗೆ ಬರೆದ ಪತ್ರದಲ್ಲಿ ಏನಿತ್ತು?
    ನನ್ನ ಇಲಾಖೆಗೆ ಒಳಪಡುವ ವಿಭಾಗಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಆದೇಶಕ್ಕೆ ನನ್ನ ಅನುಮತಿ ಬೇಕು. ಡಿಪಿಎಆರ್‌ನಿಂದ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆದ ನಂತರವೇ ಹೊರಡಿಸಬೇಕು. ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿತ್ತು. ನಂತರ ಮುಖ್ಯ ಎಂಜಿನಿಯರ್‌ಗಳ ಕರ್ತವ್ಯಕ್ಕೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಡಿಪಿಎಆರ್‌ಗೆ ವಹಿಸುವ ಕಡತದಲ್ಲಿಯೂ ಸೂಚನೆ ಕೊಡಲಾಗಿತ್ತು.

    ನನ್ನ ಗಮನಕ್ಕೆ ತಂದು ನನ್ನ ಅನುಮೋದನೆ ಪಡೆದ ನಂತರವೇ ಡಿಪಿಎಆರ್‌ನಿಂದ ಆದೇಶ ಹೊರಡಿಸಬಹುದೆಂದು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಆದರೆ ಮೇ 9ರಂದು ಹೊರಡಿಸಿದ ಆದೇಶದಲ್ಲಿ ನನ್ನ ಅನುಮೋದನೆ ಪಡೆಯದೇ ಕೆಲವು ಮುಖ್ಯ ಎಂಜಿನಿಯರ್‌ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ.

    ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿರುವುದನ್ನು ನಾನು ಆಕ್ಷೇಪಿಸುತ್ತಿದ್ದೇನೆ. ಆದ್ದರಿಂದ ಈ ಆದೇಶವನ್ನು ಕೂಡಲೇ ವಾಪಸು ಪಡೆಯಬೇಕು.ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆಯಬೇಕು.ಇದನ್ನೂ ಓದಿ: ಸಿಎಂ Vs ಡಿಸಿಎಂ – ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗ, ಡಿಕೆಶಿ ಕೆಂಡಾಮಂಡಲ

  • ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆ

    ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸಲು ಸಂಪುಟ ಅಸ್ತು – 2,633 ಕೋಟಿ ರೂ. ಯೋಜನೆಗೆ ಒಪ್ಪಿಗೆ

    – ಫ್ಯಾಂಟಸಿ ಪಾರ್ಕ್‌ನಲ್ಲಿ ಇರಲಿದೆ ಹತ್ತಾರು ವಿಶೇಷತೆ

    ಬೆಂಗಳೂರು: ಕೆಆರ್‌ಎಸ್‌ ಬೃಂದಾವನ ಗಾರ್ಡನ್‌ ಅನ್ನು (Brindavan Gardens) ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್‌ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ. ಟೆಂಡರ್ ಮೂಲಕ ಅನುಮೋದನೆಗೆ ಕ್ಯಾಬಿನೆಟ್ (Cabinet) ಒಪ್ಪಿಗೆ ಸೂಚಿಸಿದೆ.

    ಜಲ ಸಂಪನ್ಮೂಲ ಇಲಾಖೆ (Water Resources Department) ಈ ಯೋಜನೆ ಕೈಗೆತ್ತಿಕೊಂಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪ್ರಸ್ತಾಪಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. 2,633 ಕೋಟಿ ರೂ. ವೆಚ್ಚದಲ್ಲಿ ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಕೆಆರ್‌ಎಸ್‌ ಉದ್ಯಾನವನ್ನು ಮೇಲ್ದರ್ಜೆಗೇರಿಸುವ ಪ್ರಾಜೆಕ್ಟ್ ಇದಾಗಿದೆ.

    ಫ್ಯಾಂಟಸಿ ಪಾರ್ಕ್‌ನಲ್ಲಿ ಏನೆಲ್ಲಾ ಇರಲಿದೆ?
    ಕೆಆರ್‌ಎಸ್‌ ಸರ್ಕಲ್‌ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆಂಫಿಥಿಯೇಟರ್, ಕಾವೇರಿ ಪ್ರತಿಮೆ, ಸ್ವಾಗತ ಕಮಾನುಗಳು, ಮೀನಾ ಬಜಾರ್, ಜಂಗಲ್ ಟ್ರ‍್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ, ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್, ಜೈಹೋ ಫೌಂಟನ್ ಇರಲಿದೆ.

    ಇದಲ್ಲದೇ ಹಲವು ಮಹತ್ವದ ವಿಚಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ‌ನೀಡಿದೆ. KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್‌ಗೆ ಹಂಚಿಕೆ ಮಾಡಲು ಮೊತ್ತಕ್ಕೆ ರಿಯಾಯತಿ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಜೊತೆಗೆ ಕರ್ನಾಟಕ ವೃತ್ತಿ ಕೌಶಲ್ಯಾಭಿವೃದ್ದಿ ನಿಗಮ ಸ್ಥಾಪನೆಗೂ ಸಂಪುಟ ಒಪ್ಪಿಗೆ ಸೂಚಿಸಿದೆ.

    ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0. – ʻಉತ್ಕೃಷ್ಟತಾ ಕೇಂದ್ರವನ್ನುʼ ರೂ. 16.00 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಅನುಮೋದನೆಗೆ ಕ್ಯಾಬಿನೆಟ್ ಒಪ್ಪಿಗೆ. ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲ್ಲೂಕುಗಳಲ್ಲಿ ತಲಾ 1 ಹಾಸ್ಟೆಲ್‌ಗಳ ಕಟ್ಟಡಗಳನ್ನು ಒಟ್ಟು 105.00 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ – ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿತು.

    ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ ʻಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ಅನುಮೋದನೆಗೆ ಕ್ಯಾಬಿನೆಟ್ ಒಪ್ಪಿಗೆ. ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿಗೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷಾ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಈ ಬಾರಿ ವಿಶೇಷ ಅವಕಾಶ ಕೊಡಲು ಕ್ಯಾಬಿನೆಟ್ ಒಪ್ಪಿಗೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ. ಎರಡು ವರ್ಷ ವಯಸ್ಸು ಸಡಿಲಿಕೆಗೆ ಕ್ಯಾಬಿನೆಟ್ ಒಪ್ಪಿಗೆ.

  • ನನಗೆ ದರ್ಶನ್ ಮೇಲೆ‌ ಕೇಸು ದಾಖಲಾಗಿ 24 ಗಂಟೆ ನಂತ್ರ ವಿಷಯ ಗೊತ್ತಾಯ್ತು – ಡಿಕೆಶಿ

    ನನಗೆ ದರ್ಶನ್ ಮೇಲೆ‌ ಕೇಸು ದಾಖಲಾಗಿ 24 ಗಂಟೆ ನಂತ್ರ ವಿಷಯ ಗೊತ್ತಾಯ್ತು – ಡಿಕೆಶಿ

    – ದರ್ಶನ್‌ ಕೇಸ್‌ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತಾ? – ಡಿಸಿಎಂ ಹೇಳಿದ್ದೇನು?

    ಬೆಂಗಳೂರು: ಆರೋಪಿ ನಟ ದರ್ಶನ್ (Actor Darshan) ಇರಿಸಿರುವ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಮ್ಮನ್ನು ಜೈಲಿನ ಅನುಭವವನ್ನು ಹೇಳಿಕೊಂಡಿದ್ದಾರೆ. ನನ್ನನ್ನೂ ಸ್ಟೇಷನ್‌ಗೆ, ಕೊರ್ಟ್‌ಗೆ ಕರೆದುಕೊಂಡು ಹೋಗಬೇಕಾದ್ರೆ ಪೊಲೀಸರು ಮರೆಮಾಚಿ ಕರೆದುಕೊಂಡು ಹೋಗ್ತಿದ್ರು ಅಂತ ಹಳೆಯ ನೆನಪೊಂದನ್ನು ಮೆಲುಕು ಹಾಕಿದ್ದಾರೆ.

    ನಗರದ ವಿಕಾಸ ಸೌಧದಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆಯ (Water Resources Department) ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ಟಿ.ಬಿ ಜಯಚಂದ್ರ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು. ಭದ್ರಾ ಮೇಲ್ದಂಡೆ ಯೋಜನೆಗಳ ಅರಣ್ಯ ತೀರುವಳಿ ಮತ್ತು ಭೂಸ್ವಾಧೀನ ಪ್ರಸ್ತಾವನೆ ಕುರಿತು ಚರ್ಚೆ ನಡೆಸಲಾಯಿತು. ಇದನ್ನೂ ಓದಿ: ದರ್ಶನ್ ಕೊಲೆ ಮಾಡಿದ್ದರೆ ದೊಡ್ಡ ತಪ್ಪು – ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರ ನೆರವಾಗಲಿ: ಅಶೋಕ್

    ಇದಕ್ಕೂ ಮುನ್ನ ದರ್ಶನ್ ಅರೆಸ್ಟ್ (Darshan Arrest) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ದರ್ಶನ್ ಕೇಸ್ ಮುಚ್ಚಿಹಾಕುವ ವಿಚಾರದಲ್ಲಿ ತಮ್ಮನ್ನು ಸಂಪರ್ಕ ಮಾಡಿದ್ರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಬಳಿ ಮಾತು-ಕತೆ ಆಡಿಲ್ಲ. ನನ್ನ ಜೊತೆಗೆ ಸಂಪರ್ಕವೂ ಇರಲಿಲ್ಲ. ಕೇಸ್ ಆಗಿ 24 ಗಂಟೆ ಆದ್ಮೇಲೆ ನನಗೆ ಗೊತ್ತಾಯ್ತು ಎಂದು ಹೇಳಿದ್ದಾರೆ.

    ಇದೇ ವೇಳೆ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದೆಲ್ಲ ನನಗೆ ಗೊತ್ತಿಲ್ಲ. ನನ್ನ ಕೇಸ್‌ನಲ್ಲಿ ಆದ ಅನುಭವ ಹೇಳ್ತೀನಿ ಕೇಳಿ. ನನ್ನನ್ನ ಸ್ಟೇಷನ್‌ಗೆ, ಕೊರ್ಟ್‌ಗೆ ಕರೆದುಕೊಂಡು ಹೋಗಬೇಕಾದ್ರೆ ಪೊಲೀಸರು ಮರೆಮಾಚಿ ಕರೆದುಕೊಂಡು ಹೋಗ್ತಿದ್ರು. ಕೆಲ ಸಮಯ ದಾರಿ ಬದಲಾಯಿಸುತ್ತಿದ್ದರು. ಹಾಗೆಯೇ ದರ್ಶನ್ ಅಭಿಮಾನಿಗಳು ಹಾಕೋದು, ಬಾವುಟ ಹಾರಿಸೋದು ಮಾಡ್ತಾರೆ, ಕೆಲವೊಮ್ಮೆ ಓಡೋಡಿ ಬರುತ್ತಿದ್ದರು. ಹೆಚ್ಚು ಅಭಿಮಾನಿಗಳು ಸೇರುತ್ತಾರೆ ಎಂಬ ಕಾರಣಕ್ಕೆ ಹಾಗೆ ಮಾಡಿರಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟ್ರೇಲರ್‌ನಲ್ಲಿ ಆಕ್ಷೇಪಾರ್ಹ ಸಂಭಾಷಣೆಗಳಿವೆ: ‘ಹಮಾರೆ ಬಾರಹ್‌’ ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ

    ಎತ್ತಿನಹೊಳೆ ಯೋಜನೆಗೆ ವಿಶೇಷ ತಾಂತ್ರಿಕ ತಂಡ ರಚನೆ:
    ಸಭೆ ಬಳಿಕ ಎತ್ತಿನಹೊಳೆ ಯೋಜನೆ ಕುರಿತು ಮಾತನಾಡಿದ ಡಿಸಿಎಂ, ಎತ್ತಿನಹೊಳೆಯಲ್ಲಿ ಏನೆಲ್ಲ ಸಮಸ್ಯೆ ಇದೆ, ಅನ್ನೋದರ ಬಗ್ಗೆ ಚರ್ಚಿಸಿದ್ದೇವೆ. ಪ್ರತ್ಯೇಕವಾದ ಸರ್ವೇ ಮಾಡುತ್ತೇವೆ. ಕಂದಾಯ ಹಾಗೂ ಅರಣ್ಯ ಇಲಾಖೆಗಳಿಂದಲೂ ಸರ್ವೇ ಮಾಡುತ್ತೇವೆ. ಎತ್ತಿನಹೊಳೆ ಪ್ರಾಜೆಕ್ಟ್‌ನಲ್ಲಿ 50 ಕೋಟಿ ಹಣ ರೈತರಿಗೆ ಕೊಡಬೇಕಾಗಿತ್ತು. ಈಗಾಗಲೇ 10 ಕೋಟಿ ರೂಪಾಯಿ ಕೊಟ್ಟಿದ್ದೇವೆ. ಆದರೆ ಕೆಲವು ಜಾಗ ಅರಣ್ಯ ಇಲಾಖೆ ನಮ್ದೇ ಅಂತ ಹೇಳ್ತಿದ್ದಾರೆ. ಹೀಗಾಗಿ ಇದನ್ನು ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚೆ ಮಾಡುತ್ತಾರೆ. ನೀರನ್ನು ಹೊರಗಡೆ ತೆಗೆದು ತೋರಿಸಬೇಕು ಎಂದು ಹೇಳಿದ್ದೇನೆ. ಮೊದಲ ಹಂತದಲ್ಲಿ 45 ಕಿಲೋ ಮೀಟರ್ ವರೆಗೂ ನೀರು ಹರಿಸಬೇಕು. ಇದಕ್ಕಾಗಿ ವಿಶೇಷ ತಾಂತ್ರಿಕ ತಂಡವನ್ನು ರಚನೆ ಮಾಡುತ್ತೇವೆ. ಯಾವ ಕಡೆ ನೀರು ಸಮುದ್ರಕ್ಕೆ ಸೇರುತ್ತಿದೆ, ಅದನ್ನು ಗಮನಕ್ಕೆ ತರುವಂತೆ ಒಂದು ಟೀಮ್ ರಚನೆ ಮಾಡುಲು ಹೇಳಿದ್ದೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ‌250 ಕೋಟಿ ರೂ. ವೆಚ್ಚದಲ್ಲಿ ಐದೇ ತಿಂಗಳಲ್ಲಿ ನಿರ್ಮಿಸಿದ್ದ ನಸ್ಸೌ ಕೌಂಟಿ ಸ್ಟೇಡಿಯಂ ನೆಲಸಮ?

  • ಉತ್ತರ ಕರ್ನಾಟಕಕ್ಕೆ ಸ್ವಲ್ಪ ನ್ಯಾಯ ಸಿಕ್ಕಿದೆ: ಎಂಬಿ ಪಾಟೀಲ್

    ಉತ್ತರ ಕರ್ನಾಟಕಕ್ಕೆ ಸ್ವಲ್ಪ ನ್ಯಾಯ ಸಿಕ್ಕಿದೆ: ಎಂಬಿ ಪಾಟೀಲ್

    -ನಾನು ಸೆಕೆಂಡ್ ಕ್ಲಾಸ್ ಸಿಟಿಜನ್ ಅಲ್ಲ ಅಂದಿದ್ದ ಪಾಟೀಲ್ರು ಸಚಿವರಾಗ್ತಾರಾ?

    ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನಾನು ಮೊದಲೇ ಮಂತ್ರಿಯಾಗಬೇಕಿತ್ತು. ಮಂತ್ರಿಯಾಗುವ ಎಲ್ಲ ಅರ್ಹತೆಗಳು ನಾನು ಹೊಂದಿದ್ದೇನೆ. ಈಗ ಉತ್ತರ ಕರ್ನಾಟಕಕ್ಕೆ 5 ಸಚಿವ ಸ್ಥಾನ ನೀಡಿದ್ದರಿಂದ ಸ್ವಲ್ಪ ನ್ಯಾಯ ಸಿಕ್ಕಿದೆ ಎಂದು ಸಂಭಾವ್ಯ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

    ಸಂಪುಟ ವಿಸ್ತರಣೆ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ಯಾವುದೋ ಒಂದು ಕಾರಣಕ್ಕಾಗಿ ನನ್ನ ಹೆಸರು ಸಂಪುಟ ರಚನೆಯಲ್ಲಿ ಬಿಟ್ಟುಹೋಗಿತ್ತು. ಆದ್ದರಿಂದ ನನಗೆ ಆಗ ಅಸಮಾಧಾನವಿತ್ತು. ಆದರೆ ನಾನು ಮಂತ್ರಿಯಾಗುವ ಎಲ್ಲ ಅರ್ಹತೆಗಳನ್ನು ಹೊಂದಿರುವ ಕಾರಣ ಮತ್ತೆ ಆ ಸ್ಥಾನ ನೀಡಿದ್ದಾರೆ ಎಂದು ತಿಳಿಸಿದರು.

    ಪಕ್ಷದ ಹೈಕಮಾಂಡ್ ಈಗ ಸಚಿವರಾಗಿ ಮಾಡಿದೆ. ಆದರೆ ಸಚಿವ ಸ್ಥಾನ ಸಿಗದಿದ್ದಾಗಲೂ ನಾನು ಕುಗ್ಗಿಲ್ಲ, ಏಕೆಂದರೆ 5 ವರ್ಷ ನೀರಾವರಿ ಸಚಿವನಾಗಿ ಪ್ರಮುಖ ಕಾರ್ಯವನ್ನು ಮಾಡಿದ್ದೆ. ರಾಜ್ಯದ ಜನರು ಈಗಲೂ ಆ ಕಾರ್ಯವನ್ನು ಮೆಚ್ಚುತ್ತಾರೆ. ಆದರೆ ಸಚಿವ ಸ್ಥಾನ ನೀಡಿದ ಬಗ್ಗೆ ಸದ್ಯ ನಾನು ಮಾತನಾಡಲು ಹೋಗಲ್ಲ. ಸಂಪುಟ ವಿಸ್ತರಣೆಯಲ್ಲಿ 5 ಸ್ಥಾನಗಳನ್ನು ಉತ್ತರ ಕರ್ನಾಟಕಕ್ಕೆ ನೀಡಿ ತಾರತಮ್ಯವನ್ನು ಸ್ವಲ್ಪ ಕಡಿಮೆ ಮಾಡಿದ್ದಾರೆ ಎಂದರು.

    ಇದೇ ವೇಳೆ ರಮೇಶ್ ಜಾರಕಿಹೊಳಿ ಸಂಪುಟದಿಂದ ಕೈಬಿಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ನನಗೆ ಆತ್ಮೀಯ ಸ್ನೇಹಿತ, ಅವರು ನಮ್ಮ ಜೊತೆಗೆ ಇರುತ್ತಾರೆ. ಅವರೊಂದಿಗೆ ಮಾತನಾಡುತ್ತೇನೆ. ಮಾಜಿ ಸಿಎಂ ಯಡಿಯೂರಪ್ಪ ಅವರು 6 ತಿಂಗಳಿನಿಂದ ಕನಸು ಕಾಣುತ್ತಿದ್ದಾರೆ. ಆದರೆ ಅದು ನಡೆಯಲು ಸಾಧ್ಯವಿಲ್ಲ ಎಂದರು. ಕಳೆದ ಬಾರಿ ಸಚಿವ ಸ್ಥಾನ ಸಿಗದಿದ್ದಕ್ಕೆ ನಾನು ಸೆಕೆಂಡ್ ಕ್ಲಾಸ್ ಸಿಟಿಜನ್ ನಾನು ಅಲ್ಲ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆಗೆ ನೀಡಲು ಎಂ.ಬಿ ಪಾಟೀಲ್ ನಿರಾಕರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಿಕೆಶಿಯ ಜಲಸಂಪನ್ಮೂಲ ಇಲಾಖೆಗೆ ಸಿಕ್ಕಿದ್ದೇನು?

    ಡಿಕೆಶಿಯ ಜಲಸಂಪನ್ಮೂಲ ಇಲಾಖೆಗೆ ಸಿಕ್ಕಿದ್ದೇನು?

    ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಡಿಕೆ ಶಿವಕುಮಾರ್ ನೇತೃತ್ವ ವಹಿಸಿರುವ ಜಲಸಂಪನ್ಮೂಲ ಇಲಾಖೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ನೋಡುವುದಾದರೆ, ಮೇಕೆದಾಟು ಯೋಜನೆಗೆ ಚುರುಕು, ಯೋಜನೆ ಕಾರ್ಯಗತಗೊಳಿಸಲು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ.

    ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆ.ಆರ್.ಎಸ್ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲು 5 ಕೋಟಿ ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಂಡವಾಳ ಹೂಡಲು ವಿಶ್ವಮಟ್ಟದ ಉದ್ಯಮಿಗಳು ಉತ್ಸುಕರಾಗಿದ್ದಾರೆ.

    ಮಹದಾಯಿ ನದಿ ವಿವಾದದ ತೀರ್ಪು ಇದೇ ಆಗಸ್ಟ್ ನಲ್ಲಿ ಬರಲಿದ್ದು ಇದಾದ ಬಳಿಕ ನ್ಯಾಯಾಧಿಕರಣ ತೀರ್ಪಿನಂತೆ ಕಾಮಗಾರಿ ಕೈಗೊಳ್ಳಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡಸಲು ತೀರ್ಮಾನ. ಆಲಮಟ್ಟಿ ಜಲಾಶಯದಲ್ಲಿ ಹೆಚ್ಚುವರಿ ನೀರು ಸಂಗ್ರಹಕ್ಕೆ ಒತ್ತು. ಈಗ ಪ್ರಗತಿಯಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಮುಂದಿನ 5 ವರ್ಷಗಳಲ್ಲಿ ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.

    ಒಟ್ಟಾಗಿ ಜಲಸಂಪನ್ಮೂಲ ಕ್ಷೇತ್ರಕ್ಕೆ ಕುಮಾರಸ್ವಾಮಿಯವರು ಒಟ್ಟು 18,142 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.

  • ಸಣ್ಣ ನೀರಾವರಿ, ಜಲಸಂಪನ್ಮೂಲ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಸಣ್ಣ ನೀರಾವರಿ, ಜಲಸಂಪನ್ಮೂಲ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ರಾಜ್ಯ ಬಾಜೆಟ್‍ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಹಾಗೂ ಸಣ್ಣ ನೀರಾವರಿಗೆ ಸಿಕ್ಕ ಸನುದಾನವೆಷ್ಟು, ಘೋಷಣೆಗಳೇನು ಎಂಬ ಮಾಹಿತಿ ಇಲ್ಲಿದೆ.

    ಸಣ್ಣ ನೀರಾವರಿ ಇಲಾಖೆಗೆ ಒಟ್ಟು ಅನುದಾನ – 2099 ಕೋಟಿ ರೂ.

    – ಕೆರೆಗಳ ಹೂಳೆತ್ತಲು ಕೆರೆ ಸಂಜೀವಿನಿ ಯೋಜನೆ – 100 ಕೋಟಿ ರೂ.
    – ಪಶ್ಚಿಮ ವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ- 100 ಕೋಟಿ ರೂ.
    – ಅಂತರ್ಜಲ ತೀವ್ರವಾಗಿ ಕುಸಿದಿರುವ ಬೀದರ್, ಚಾಮರಾಜನಗರ, ಹಾವೇರಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಚೆಕ್ ಡ್ಯಾಮ್ ನಿರ್ಮಾಣ- 50 ಕೋಟಿ ರೂ.ವೆಚ್ಚ
    – ಕಲಬುರಗಿಯ ಅಳಂದ ತಾಲೂಕಿನಲ್ಲಿ ಅಂತರ್ಜಲ ಅಭಿವೃದ್ಧಿಪಡಿಸುವ ವಿಶೇಷ ಯೋಜನೆ

    ಜಲಸಂಪನ್ಮೂಲ ಇಲಾಖೆಗೆ ಒಟ್ಟು ಅನುದಾನ – 15,929 ಕೋಟಿ ರೂ

    * 6 ಸಾವಿರ ಕೋಟಿ ರೂ. ಮೊತ್ತದಲ್ಲಿ ಕೆಳಕಂಡ ಯೋಜನೆಗಳನ್ನು ಕೈಗೊಳ್ಳುವ ಉದ್ದೇಶ
    – ನಾರಾಯಣಪುರ ಎಡದಂಡೆ ಕಾಲುವೆ ಜಾಲದ ಆಧುನೀಕರಣ ಯೋಜನೆಯಡಿ ಎಸ್‍ಸಿಎಡಿಎ ಬೇಸ್ಡ್ ಆಟೋಮೇಷನ್ ಅನುಷ್ಠಾನ.
    – ಕೆಂಪೇವಾಡ ಏತ ನೀರಾವರಿ ಯೋಜನೆ.
    – ಹಗರಿಬೊಮ್ಮನಹಳ್ಳಿಯ ಚಿಲವಾರ ಬಂಡಿ ಏತ ನೀರಾವರಿ ಯೋಜನೆ.
    – ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ.
    – ಹನಗೋಡು ಸರಣಿ ನಾಲೆಗಳ ಆಧುನೀಕರಣ.
    – ಎತ್ತಿನಹೊಳೆ ಯೋಜನೆಯಡಿ, ಭೈರಗೊಂಡ್ಲು ಜಲಾಶಯ ನಿರ್ಮಾಣ, ಕಾಲುವೆ ಕಾಮಗಾರಿ ಆರಂಭ.
    – 68,264 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ.
    – 35 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಹೊಲಗಾಲುವೆ ನಿರ್ಮಾಣ.
    – 12,500 ಹೆಕ್ಟೇರ್ ಪ್ರದೇಶದ ಸವಳು- ಜವಳು ಭೂಮಿ ಅಭಿವೃದ್ಧಿ
    – 28 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಬಸಿಗಾಲುವೆ ನಿರ್ಮಾಣ.

    * ಕಾವೇರಿ ಕೊಳ್ಳದಲ್ಲಿ 374 ಕಿಮೀ ನಾಲೆ ಅಭಿವೃದ್ಧಿ – 509 ಕೋಟಿ ರೂ.
    * ಹಾರಂಗಿ ಎಡದಂಡೆ ನಾಲೆಯ ಸರಪಳಿ 27.083 ಕಿ.ಮೀ ನಿಂದ 149.38 ಕಿ.ಮೀ ವರೆಗಿನ ಆಧುನೀಕರಣ.
    * ಕಣ್ವ ನಾಲೆಗಳ ಆಧುನೀಕರಣ.
    * ಕೆಆರ್‍ಎಸ್ ಯೋಜನೆಯ ಆರ್‍ಬಿಎಲ್‍ಎಲ್ ಆಧುನೀಕರಣ.
    * ಮಾರ್ಕೋನಹಳ್ಳಿ ಎಡ, ಬಲದಂಡೆ ನಾಲೆ ಆಧುನೀಕರಣ.
    * ಹಾರೋಹಳ್ಳಿ ಮೇಲ್ಮಟ್ಟದ ನಾಲೆ ಆಧುನೀಕರಣ.
    * ತೀವ್ರ ಬರಗಾಲ ಎದುರಿಸುತ್ತಿರುವ ಪ್ರದೇಶಗಳಲ್ಲಿ ಮೋಡಬಿತ್ತನೆ- 30 ಕೋಟಿ ರೂ.