Tag: water sump

  • ಅಂಗನವಾಡಿಯಲ್ಲಿ ನೀರಿನ ಸಂಪ್‍ಗೆ ಬಿದ್ದು 3 ವರ್ಷದ ಮಗು ಸಾವು

    ಅಂಗನವಾಡಿಯಲ್ಲಿ ನೀರಿನ ಸಂಪ್‍ಗೆ ಬಿದ್ದು 3 ವರ್ಷದ ಮಗು ಸಾವು

    ಬೀದರ್: ಜಿಲ್ಲೆಯ ಔರಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ನಡೆಯಬಾರದ ದುರಂತ ನಡೆದು ಹೋಗಿದೆ. ಅಂಗನವಾಡಿ (Anganavadi) ಕೇಂದ್ರದ ಸಿಬ್ಬಂದಿಯ ಮಹಾ ನಿರ್ಲಕ್ಷ್ಯಕ್ಕೆ ಅಮಾಯಕ ಪುಟ್ಟ ಕಂದ ಬಲಿಯಾಗಿದೆ.

    ಹೌದು. ಅಂಗನವಾಡಿ ಕೇಂದ್ರದ ಬಳಿ 3 ವರ್ಷದ ಸ್ಫೂರ್ತಿ ಎಂಬ ಬಾಲಕಿ (Girl) ಊಟ ಮಾಡುವಾಗಲೇ ಊಟದ ತಟ್ಟೆ ಸಮೇತ ಸಂಪ್‍ಗೆ ಬಿದ್ದು ಸಾವನ್ನಪ್ಪಿದ್ದಾಳೆ. ಸಂಪ್ ಮೇಲ್ಛಾವಣಿ ಮುಚ್ಚದ ಕಾರಣ ಈ ದುರ್ಘಟನೆ ನಡೆದಿದೆ. ಅಂಗನವಾಡಿ ಸಿಬ್ಬಂದಿಯ ಮಹಾ ನಿರ್ಲಕ್ಷ್ಯವೇ ಬಾಲಕಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ನ್ಯಾಯ ಒದಗಿಸಬೇಕು, ಪರಿಹಾರ ನೀಡಬೇಕೆಂದು ಮಗುವಿನ ತಂದೆ ಆಗ್ರಹಿಸಿದ್ದಾರೆ.

    ಎಂದಿನಂತೆ ಅಂಗನವಾಡಿಗೆ ತೆರಳಿದ ಬಾಲಕಿ ಮನೆಗೆ ಬಾರದಿದ್ದಾಗ ಪೋಷಕರು (Parents) ಅಂಗನವಾಡಿ ಕೇಂದ್ರಕ್ಕೆ ಹೋಗಿದ್ದಾರೆ. ಅಲ್ಲಿ ಕೂಡಾ ಮಗು ಇಲ್ಲದೆ ಇದ್ದಾಗ ಔರಾದ್ ಪಟ್ಟಣದ ಹಲವು ಕಡೆ ಹುಡುಕಾಡಿದ್ರು. ಆದರೂ ಮಗು ಸಿಗದೆ ಇದ್ದಾಗ ಅಂಗನವಾಡಿ ಕೇಂದ್ರದಲ್ಲಿರುವ ಆವರಣದಲ್ಲಿನ ಸಂಪ್‍ನಲ್ಲಿ ನೋಡಿದಾಗ ಬಾಲಕಿಯ ಶವ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಅಂಗನವಾಡಿ ಕೇಂದ್ರದ ಬಳಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

    ಅಧಿಕಾರಿಗಳ ಹಾಗೂ ಸಿಬ್ಬಂದಿ ಮಹಾ ನಿರ್ಲಕ್ಷ್ಯಕ್ಕೆ ಅಮಾಯಕ ಮಗು ಬಲಿಯಾಗಿದ್ದು, ಮಾತ್ರ ವಿಪರ್ಯಾಸದ ಸಂಗತಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಅವಘಢ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಕಬಡ್ಡಿ ಆಡುತ್ತಿದ್ದ ವೇಳೆ ವಿದ್ಯಾರ್ಥಿನಿ ದುರ್ಮರಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಂಪಿನಲ್ಲಿ ಮುಳುಗಿಸಿ ಮಗನ ಕೊಲೆ – ಮನೆಗೆ ಹೋಗಿ ತಾಯಿಯೂ ಆತ್ಮಹತ್ಯೆ

    ಸಂಪಿನಲ್ಲಿ ಮುಳುಗಿಸಿ ಮಗನ ಕೊಲೆ – ಮನೆಗೆ ಹೋಗಿ ತಾಯಿಯೂ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಸಂಪಿನಲ್ಲಿ ಮಗನ ಮುಳುಗಿಸಿ ಕೊಂದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ.

    ಶೋಭಾ ತನ್ನ 7 ವರ್ಷದ ಮಗ ವಿಶಾಲ್‍ನನ್ನ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯ ಮುಂಭಾಗದ ಸಂಪಿನಲ್ಲಿ ಮಗನನ್ನ ಮುಳುಗಿಸಿ ಕೊಲೆ ಮಾಡಿದ್ದಾಳೆ. ನಂತರ ಮನೆಗೆ ಹೋಗಿ ಮೇಲಿನ ರೂಮಿನಲ್ಲಿ ಶೋಭಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಮಗ ವಿಶಾಲ್ ಮಾನಸಿಕ ಅಸ್ವಸ್ಥ ವಿಶೇಷ ಚೇತನಾಗಿದ್ದು, ನಡೆದಾಡಲು ಆಗುತ್ತಿರಲಿಲ್ಲ. ಅನೇಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಿಲ್ಲ ಅಂತ ಮನನೊಂದು ಈ ಕೃತ್ಯ ನಡೆಸಿದ್ದಾಳೆ ಎನ್ನಲಾಗಿದೆ.

    ಮನೆಗೆ ಪತಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಪತ್ತೆಯಾಗಿದ್ದ 2 ವರ್ಷದ ಬಾಲಕಿ ನೀರಿನ ಸಂಪ್‍ನಲ್ಲಿ ಶವವಾಗಿ ಪತ್ತೆ

    ನಾಪತ್ತೆಯಾಗಿದ್ದ 2 ವರ್ಷದ ಬಾಲಕಿ ನೀರಿನ ಸಂಪ್‍ನಲ್ಲಿ ಶವವಾಗಿ ಪತ್ತೆ

    – ಮುಗಿಲುಮುಟ್ಟಿದ ಪೋಷಕರ ಆಕ್ರಂದನ

    ಕೊಪ್ಪಳ: ಕಳೆದರೆಡು ದಿನಗಳಿಂದ ನಿಗೂಢವಾಗಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ಶವ ಎದುರಿನ ಮನೆಯ ನೀರಿನ ಸಂಪ್‍ನಲ್ಲಿ ಪತ್ತೆಯಾಗಿದೆ.

    ಕೊಪ್ಪಳದ ಯಲಬುರ್ಗಾ ಪಟ್ಟಣದ ಮೆಹಬೂಬ ನಗರದಲ್ಲಿ ಕಳೆದ ಜೂನ್ 28 ರಂದು ಬಾಲಕಿ ಕಾಣೆಯಾಗಿದ್ದಳು. ಬಾಬುಸಾಬ್ ವಣಗೇರಿ ದಂಪತಿಯ 2ನೇ ಪುತ್ರಿ ಉಸ್ನಾ ಪಕ್ಕದ ಮನೆಯಲ್ಲಿ ಆಟವಾಡಲು ಹೋಗಿ ಕಾಣೆಯಾಗಿದ್ದಳು.

    ಜೂನ್ 28 ರಂದು ಪಕ್ಕದ ಮನೆಯಲ್ಲಿದ್ದ ಬಾಲಕಿಯನ್ನ ಕರೆದುಕೊಂಡು ಹೋಗಲು ಬಾಲಕಿ ತಾಯಿ ಹೋಗಿದ್ದರು. ಆದ್ರೆ ಆ ಮನೆಯವರು ನಿಮ್ಮ ಬಾಲಕಿ ಆವಾಗ್ಲೆ ಮನೆಗೆ ಹೋಗಿದ್ದಾಳೆ ಅಂತಾ ಹೇಳಿದ್ದರು. ಅಂದಿನಿಂದಲೇ ಬಾಲಕಿ ನಾಪತ್ತೆ ಆಗಿದ್ದಳು. ಆ ಬಳಿಕ ಬಾಲಕಿ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದರು.

    ಬಾಲಕಿ ಕಾಣೆಯಾಗಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಕೂಡಾ ವೈರಲ್ ಆಗಿತ್ತು. ಆದ್ರೆ ಇಂದು ಬೆಳಗ್ಗೆ ಸಂಪ್ ತೆಗೆದು ನೋಡಿದಾಗ ನೀರಿನಲ್ಲಿ ಬಾಲಕಿ ಶವ ತೇಲುತ್ತಿರುವುದನ್ನು ಕಂಡಿದ್ದಾರೆ. ಸದ್ಯ ಬಾಲಕಿಯ ಶವ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆ ಮಾಡಿ ಸಂಪ್‍ನಲ್ಲಿ ಬಿಸಾಡಿ ಹೋಗಿದ್ದಾರೆ ಅಂತಾ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.