Tag: waterman

  • ನೀರಿನ ಟ್ಯಾಂಕ್‌ಗೆ ವಿಷಬೆರಕೆ: ವಾಟರ್‌ಮನ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    ನೀರಿನ ಟ್ಯಾಂಕ್‌ಗೆ ವಿಷಬೆರಕೆ: ವಾಟರ್‌ಮನ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    ರಾಯಚೂರು: ಗ್ರಾಮಕ್ಕೆ ಸರಬರಾಜಾಗುವ ನೀರಿನ ಟ್ಯಾಂಕ್‌ಗೆ (Water Tank) ವಿಷ ಬೆರಕೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು (Lingasuguru) ತಾಲ್ಲೂಕಿನ ತವಗ ಗ್ರಾಮದಲ್ಲಿ ನಡೆದಿದೆ.

    ನೀರಿನ ಟ್ಯಾಂಕ್‌ಗೆ ವಿಷ ಬೆರಕೆಯಾಗಿದ್ದು, ಗ್ರಾಮ ಪಂಚಾಯಿತಿ ವಾಟರ್‌ಮನ್ (WaterMan) ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.ಇದನ್ನೂ ಓದಿ: ಲಂಡನ್‌ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮನ ಸಲ್ಲಿಸಿದ ಪೂಜಾ ಗಾಂಧಿ

    ನೀರು ಬಿಟ್ಟ ಕೂಡಲೇ ಕೆಲ ಗ್ರಾಮಸ್ಥರು ನೀರು ವಾಸನೆ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕೂಡಲೇ ನೀರನ್ನು ಪರಿಶೀಲಿಸಿದಾಗ ಅನುಮಾನ ಮೂಡಿ ನೀರಿನ ಸರಬರಾಜನ್ನು ನಿಲ್ಲಿಸಲಾಗಿದೆ. ಟ್ಯಾಂಕ್ ಬಳಿ ಬೀಳುವ ನೀರು ಸಹ ನೊರೆ, ದುರ್ವಾಸನೆಯಿಂದ ಕೂಡಿದ್ದಕ್ಕೆ ಅನುಮಾನ ಮೂಡಿದೆ. ವಾಟರ್‌ಮನ್ ಆದೆಪ್ಪ ಕೂಡಲೇ ಟ್ಯಾಂಕ್ ಖಾಲಿ ಮಾಡಿದ್ದಾನೆ ಹಾಗೂ ನೀರನ್ನು ಯಾರು ಬಳಸದಂತೆ ಎಚ್ಚರಿಕೆ ನೀಡಿದ್ದಾನೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

    ದುಷ್ಕರ್ಮಿಗಳು ಜೀವಹಾನಿ ಮಾಡಲು ಈ ಕೃತ್ಯ ಎಸಗಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದ್ದಾರೆ. ವಾಟರ್‌ಮನ್ ಆದಪ್ಪ ದೂರು ನೀಡಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Mysuru Dasara: ಸುಧಾಮೂರ್ತಿ ಸಾಕಿದ ಶ್ವಾನ ಗೋಪಿಗೆ ಬಹುಮಾನ

  • ಜಾಕವೆಲ್ ದುರಸ್ಥಿಗೆ ತೆರಳಿದ್ದ ವಾಟರ್ ಮನ್ ಶವವಾಗಿ ಪತ್ತೆ

    ಜಾಕವೆಲ್ ದುರಸ್ಥಿಗೆ ತೆರಳಿದ್ದ ವಾಟರ್ ಮನ್ ಶವವಾಗಿ ಪತ್ತೆ

    ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಜಾಕವೆಲ್ ದುರಸ್ಥಿಗೆ ತೆರಳಿ ಮಂಗಳವಾರ ನದಿಗೆ ಬಿದ್ದಿದ್ದ ವಾಟರ್ ಮನ್ ಶವ ಇಂದು ಪತ್ತೆಯಾಗಿದೆ.

    ನದಿಯಲ್ಲಿ ಸಿಲುಕಿದ್ದ ಶವವನ್ನು ಎನ್.ಡಿ.ಆರ್.ಎಫ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಶಿರಡಾಣ ಗ್ರಾಮದ ನದಿ ತೀರದ ಜಾಕವೆಲ್ ದುರಸ್ಥಿಗೆ ಮಂಗಳವಾರ ಬೆಳಿಗ್ಗೆ ತೆರಳಿದ್ದ ವಾಟರ್ ಮನ್ ಬಸವರಾಜ್ ಹರಿಜನ (32) ಸಾವನ್ನಪ್ಪಿದ್ದಾರೆ.

    ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕವೆಲ್‍ಗೆ, ಪಾಮಲದಿನ್ನಿ ಗ್ರಾಮ ಪಂಚಾಯತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಾಟರ್ ಮನ್ ಬಸವರಾಜ್ ದುರಸ್ಥಿಗೆ ಎಂದು ತೆರಳಿದ್ದರು. ಆದರೆ ಬಹಳ ಸಮಯವಾದರೂ ಬಾರದ ಕಾರಣ ಅವರು ನದಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿ ಹುಡಕಾಟ ನಡೆಸಲಾಗಿತ್ತು. ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಹುಡುಕಾಟದ ಸಂದರ್ಭದಲ್ಲಿ ಮೊಸಳೆ ಕಂಡು ಬಂದ ಕಾರಣ ಮೊಸಳೆಗೆ ವಾಟರ್ ಮನ್ ಬಲಿಯಾಗಿದ್ದಾರೆ ಎನ್ನಲಾಗಿತ್ತು.

    ಮಂಗಳವಾರ ಶವ ಸಿಗದ ಕಾರಣ ಇಂದು ಎನ್.ಡಿ.ಆರ್.ಎಫ್ ತಂಡ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಶವವನ್ನು ಹೊರ ತೆಗೆಯಲಾಗಿದೆ. ವಾಟರ್ ಮನ್ ನದಿ ನೀರಿನ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 10ನೇ ತರಗತಿ ಪಾಸ್ ಆಗದ್ದಕ್ಕೆ ಕೆಲ್ಸದಿಂದ ವಜಾ: 18 ವರ್ಷಗಳಿಂದ ಕೆಲ್ಸ ಮಾಡ್ತಿದ್ದ ವಾಟರ್‍ಮ್ಯಾನ್ ಆತ್ಮಹತ್ಯೆ

    10ನೇ ತರಗತಿ ಪಾಸ್ ಆಗದ್ದಕ್ಕೆ ಕೆಲ್ಸದಿಂದ ವಜಾ: 18 ವರ್ಷಗಳಿಂದ ಕೆಲ್ಸ ಮಾಡ್ತಿದ್ದ ವಾಟರ್‍ಮ್ಯಾನ್ ಆತ್ಮಹತ್ಯೆ

    ಧಾರವಾಡ: ಗ್ರಾಮ ಪಂಚಾಯ್ತಿಯವರು ಕೆಲಸದಿಂದ ತೆಗೆದ್ರು ಎಂಬ ಕಾರಣಕ್ಕೆ ಹಂಗಾಮಿ ವಾಟರ್ ಮ್ಯಾನ್‍ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಗೌಸಸಾಬ ಮಾರಡಗಿ (55) ಆತ್ಮಹತ್ಯೆ ಮಾಡಿಕೊಂಡ ವಾಟರ್‍ಮ್ಯಾನ್. ಮಾರಡಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಗೋವನಕೊಪ್ಪದಲ್ಲಿ ಗೌಸಸಾಬ್ ಕಳೆದ 18 ವರ್ಷಗಳಿಂದ ವಾಟರ್‍ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳ ಹಿಂದೆ ಪಂಚಾಯ್ತಿಯವರು ಏಕಾಏಕಿ 10ನೇ ತರಗತಿ ಪಾಸ್ ಆಗಿದ್ದರೆ ಮಾತ್ರ ಕೆಲಸಕ್ಕೆ ಇಟ್ಟುಕೊಳ್ಳುವದಾಗಿ ಹೇಳಿ ಕೆಲಸದಿಂದ ತೆಗೆದು ಹಾಕಿದ್ದಾರೆ.

    ಇದರಿಂದ ಮನನೊಂದು ಮಾರಡಗಿ ಇಂದು ಬೆಳಗಿನ ಜಾವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ನಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ. ಇನ್ನೂ ಮಕ್ಕಳ ಮದುವೆ ಕೂಡಾ ಮಾಡಬೇಕಿದ್ದ ಗೌಸಸಾಬ, ಕೆಲಸ ಹೋಗಿದ್ದರಿಂದ ಮನಸ್ಸಿಗೆ ಬೇಸರ ಮಾಡಿಕೊಂಡಿದ್ದರು. ಈ ಮಧ್ಯೆ ಕೆಲಸದಿಂದ ಹೊರಹಾಕಿದ ವಿಚಾರ ಅವರನ್ನು ಮತ್ತಷ್ಟು ಚಿಂತೆಗೀಡಾಗುವಂತೆ ಮಾಡಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಸದ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಂಚಾಯ್ತಿಯವರ ಮೇಲೆ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಆರಂಭಿಸಿದ್ದಾರೆ.