Tag: watermelon

  • ರಾಯಚೂರಿನಲ್ಲಿ ದಾಖಲೆಯ ಬಿಸಿಲು – ಮಣ್ಣಿನ ಮಡಿಕೆಗೆ ಹೆಚ್ಚಾದ ಡಿಮ್ಯಾಂಡ್

    ರಾಯಚೂರಿನಲ್ಲಿ ದಾಖಲೆಯ ಬಿಸಿಲು – ಮಣ್ಣಿನ ಮಡಿಕೆಗೆ ಹೆಚ್ಚಾದ ಡಿಮ್ಯಾಂಡ್

    ರಾಯಚೂರು: ಜಿಲ್ಲೆಯಲ್ಲಿ ದಿನೇ ದಿನೇ ಬಿಸಿಲು ಹೆಚ್ಚಾಗುತ್ತಿದ್ದು, ದಾಖಲೆ ಬರೆಯುತ್ತಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದು, ಮಡಿಕೆ, ಹಣ್ಣುಗಳು ಸೇರಿದಂತೆ ಇನ್ನಿತರ ವ್ಯಾಪಾರದ ಬೇಡಿಕೆ ಹೆಚ್ಚಾಗುತ್ತಿದೆ.

    ಹೌದು, ರಾಯಚೂರು ಜಿಲ್ಲೆಯಲ್ಲಿ ಈಗಾಗಲೇ ತಾಪಮಾನ ದಾಖಲೆಯ ಮಟ್ಟಕ್ಕೆ ತಲುಪಿದ್ದು, ಮಾರ್ಚ್ ತಿಂಗಳಲ್ಲೇ 41.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಪ್ರತಿದಿನ ಸರಾಸರಿ 38-40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವುದು ಸಾಮಾನ್ಯವಾಗಿದೆ.ಇದನ್ನೂ ಓದಿ: ರಾಯಚೂರಿನಲ್ಲಿ ಖೋಟಾ ನೋಟು ಜಾಲ ಪತ್ತೆ – ಎಎಸ್‌ಐ ಸೇರಿ ನಾಲ್ವರು ಅರೆಸ್ಟ್‌

    ಜಿಲ್ಲೆಯಲ್ಲಿ ಮಧ್ಯಾಹ್ನವಾದರೆ ಸಾಕು ಹೊರಗೆ ಓಡಾಡುತ್ತಿರುವ ಜನರು ಕಣ್ಣಿಗೆ ಬೀಳುವುದೇ ಇಲ್ಲ. ಆರಾಮಾಗಿ ಮನೆಯಲ್ಲಿ ಕುಳಿತುಕೊಳ್ಳುವುದೇ ಒಳಿತು ಎನ್ನುವಂತಾಗಿದೆ. ಬೇಸಿಗೆಯ ಬಿಸಿಲಿಗೆ ಜನರು ಕಂಗಾಲಾಗಿದ್ದು, ಇತ್ತ ಸೀಸನ್ ವ್ಯಾಪಾರಗಳು ಜೋರಾಗಿ ನಡೆಯುತ್ತಿವೆ. ಹಿಂದೆಂದೂ ಕಾಣದ ಪೈಪೋಟಿ ವ್ಯಾಪಾರಿಗಳಲ್ಲಿ ಕಾಣುತ್ತಿದೆ.

    ರಾಜಸ್ಥಾನದ ಮಣ್ಣಿನ ಗಡಿಗೆ, ಮಡಿಕೆ, ಬಾಟಲ್‌ಗಳ ಮಾರಾಟಕ್ಕೆ ನಗರದಲ್ಲಿ ತೀವ್ರ ಪೈಪೋಟಿಯಿದೆ. ಯಾವುದೇ ರಸ್ತೆಯಲ್ಲಿ ಹೋದರೂ ಕೂಡ ಮಡಿಕೆಗಳು ಕಾಣಸಿಗುತ್ತಿವೆ. 50-800 ರೂ.ವರೆಗೆ ಮಣ್ಣಿನ ಮಡಿಕೆ, ಬಾಟಲ್‌ಗಳು ಮಾರಾಟವಾಗುತ್ತಿದೆ. ಆದರೆ ವ್ಯಾಪಾರಿಗಳ ಸಂಖ್ಯೆ ಹೆಚ್ಚಾಗಿದ್ದಕ್ಕೆ ಕೆಲವರು ದೂರದಿಂದ ತಂದ ವಸ್ತುಗಳು ಮಾರಾಟವಾಗದೇ ನಷ್ಟವನ್ನೂ ಅನುಭವಿಸುತ್ತಿದ್ದಾರೆ.

    ಮಣ್ಣಿನ ಮಡಿಕೆ ವ್ಯಾಪಾರದ ಜೊತೆ ಕಲ್ಲಂಗಡಿ, ಕರಬೂಜ ಸೇರಿ ವಿವಿಧ ಹಣ್ಣುಗಳು, ತೆಂಗಿನಕಾಯಿ, ಎಳನೀರು ವ್ಯಾಪಾರದಲ್ಲೂ ಪೈಪೋಟಿ ಜೋರಾಗಿದೆ. ಮಂಡ್ಯ, ಮದ್ದೂರು, ಮೈಸೂರಿನಿಂದ ಬರುವ ಎಳೆನೀರಿನ ಬೆಲೆ ದುಬಾರಿಯಾಗಿದ್ದು, ಒಂದಕ್ಕೆ 60 ರೂ.ಯಂತೆ ಮಾರಾಟವಾಗುತ್ತಿದೆ. ಹೀಗಾಗಿ ಗ್ರಾಹಕರಿಗೆ ಬೇಸಿಗೆಯ ಬಿಸಿಲಿನ ಜೊತೆಗೆ ಬೆಲೆ ಏರಿಕೆಯ ಬಿಸಿಯೂ ತಟ್ಟುತ್ತಿದೆ.

    ಒಟ್ಟಿನಲ್ಲಿ ಬಿಸಿಲನಾಡು ರಾಯಚೂರಿನಲ್ಲಿ ಈ ಬಾರಿ ಬೇಸಿಗೆ ಆರಂಭದಿಂದಲೇ ರಣಬಿಸಿಲು ಅಬ್ಬರಿಸುತ್ತಿದೆ. ಬಿಸಿಲನ್ನು ಬಂಡವಾಳ ಮಾಡಿಕೊಂಡ ವ್ಯಾಪಾರಿಗಳು ಗ್ರಾಹಕರನ್ನು ಆಕರ್ಷಿಸುತ್ತಿದ್ದರೂ, ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ.ಇದನ್ನೂ ಓದಿ: ಅಪ್ಪು ಕೇವಲ ಹೆಸರಲ್ಲ, ಕನ್ನಡಿಗರಿಗೆ ಅದೊಂದು ಭಾವನೆ: ಶ್ರೀದೇವಿ ಭೈರಪ್ಪ

     

  • ತೂಕ ಇಳಿಸಲು ತಲೆಕೆಡಿಸಿಕೊಳ್ಳಬೇಡಿ ತಿನ್ನಿ ಕಲ್ಲಂಗಡಿ ಹಣ್ಣು

    ತೂಕ ಇಳಿಸಲು ತಲೆಕೆಡಿಸಿಕೊಳ್ಳಬೇಡಿ ತಿನ್ನಿ ಕಲ್ಲಂಗಡಿ ಹಣ್ಣು

    ಬೇಸಿಗೆಯಲ್ಲಿ (Summer) ಹೇಳಿ ಮಾಡಿಸಿದ ಹಣ್ಣು ಕಲ್ಲಂಗಡಿ (Watermelon). ಬೇಸಿಗೆಯಲ್ಲಿ ಆಗುವ ಆಯಾಸ, ಬಾಯಾರಿಕೆ ಹೋಗಲಾಡಿಸಲು ಇದು ಈ ರಸಭರಿತ ಹಣ್ಣನ್ನು ಹೆಚ್ಚಾಗಿ ಖರೀದಿಸುತ್ತಾರೆ. ಈ ಹಣ್ಣನ್ನು ತಿನ್ನುವುದರಿಂದ ಟೇಸ್ಟ್ ಜೊತೆಗೆ ಅನೇಕ ಪ್ರಯೋಜನಗಳಿವೆ.

    ತೂಕ ಇಳಿಕೆ: ಕಲ್ಲಂಗಡಿ ತಿನ್ನುವುದರಿಂದ ನಿಮ್ಮ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಬೆಳಗ್ಗಿನ ಉಪಹಾರದಲ್ಲಿ ನೀವು ಕಲ್ಲಂಗಡಿಯನ್ನು ತಿನ್ನಬೇಕು. ಇದರಿಂದಾಗಿ ದಿನವಿಡೀ ಫ್ರೆಶ್ ಆಗಿರುತ್ತೀರಿ. ಜೊತೆಗೆ ತೂಕದ ಇಳಿಕೆಯು ಆಗುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಈ ಹಣ್ಣುಗಳು ನೆಗೆಟಿವ್ ಕ್ಯಾಲೋರಿಯನ್ನು ಸುಡುವಲ್ಲಿ ಸಹಾಯ ಮಾಡುತ್ತದೆ.

    ಜೀರ್ಣಕ್ರಿಯೆಗೆ ಸಹಾಯ: ಕಲ್ಲಂಗಡಿ ಹಣ್ಣು ತಿನ್ನುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೊತೆಗೆ ಇದು ಚರ್ಮದ ಆರೋಗ್ಯ ಹಾಗೂ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಜೊತೆಗೆ ಚಯಾಪಚಯ ಹಾಗೂ ಹಸಿವನ್ನು ಸುಧಾರಿಸುತ್ತದೆ. ಇದನ್ನೂ ಓದಿ: ಪೀರಿಯಡ್ಸ್ ಸಮಯದಲ್ಲಾಗುವ ಹೊಟ್ಟೆನೋವಿಗೆ ಇಲ್ಲಿದೆ ಮನೆ ಮದ್ದು

    ಕಡಿಮೆ ಆಗುತ್ತೆ ಮೂತ್ರಪಿಂಡದ ಅಸ್ವಸ್ಥತೆ: ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಅಂಶಗಳು ಕಲ್ಲಂಗಡಿಯಲ್ಲಿ ಹೇರಳವಾಗಿ ದೊರೆಯುತ್ತದೆ. ಇದು ನಿಮ್ಮ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಕ್ಯಾಲ್ಸಿಯಂ ರಕ್ತದಲ್ಲಿನ ಯೂರಿಕ್ ಆಮ್ಲದ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದಾಗಿ ಮೂತ್ರಪಿಂಡದ ಕಾಯಿಲೆಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

    ಕಡಿಮೆ ರಕ್ತದೊತ್ತಡ: ಕಲ್ಲಂಗಡಿಯಲ್ಲಿ ಸಿಟ್ರುಲಿನ್ ಎಂಬ ಅಮೈನೋ ಆಮ್ಲವಿದೆ. ಇದನ್ನು ದೇಹದಿಂದ ಅರ್ಜಿನೈನ್ ಆಗಿ ಪರಿವರ್ತಿಸಲಾಗುತ್ತದೆ. ಸಿಟ್ರುಲಿನ್ ಜೊತೆಗೆ ಈ ಅರ್ಜಿನೈನ್ ನೈಟ್ರಿಕ್ ಆಕ್ಸೈಡ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ನೈಟ್ರಿಕ್ ಆಕ್ಸೈಡ್ ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ಸಡಿಲಗೊಳಿಸುತ್ತದೆ. ಜೊತೆಗೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.

    ನಿಮ್ಮ ತ್ವಚೆಗೆ ಒಳ್ಳೆಯದು: 95 ಪ್ರತಿಶತದಷ್ಟು ಕಲ್ಲಂಗಡಿಯುವ ಕೇವಲ ನೀರಿನ್ನು ಹೊಂದಿರುತ್ತದೆ. ಇದು ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಿಮ್ಮ ಚರ್ಮವು ಹೆಚ್ಚು ಕಾಂತಿಯುತವಾಗಿಸುತ್ತದೆ. ಇದನ್ನೂ ಓದಿ: ಮಧುಮೇಹಿಗಳಿಗೆ ಆಹಾರದ ಹೊರತಾಗಿ ಸಕ್ಕರೆ ಮಟ್ಟ ನಿಯಂತ್ರಿಸಲು ಇಲ್ಲಿದೆ ಕೆಲವು ಸಲಹೆ

  • ಕಲ್ಲಂಗಡಿ ಸಿಪ್ಪೆಯನ್ನು ಎಸೆಯುವ ಬದಲು ಮಾಡಿ ನೋಡಿ ದೋಸೆ

    ಕಲ್ಲಂಗಡಿ ಸಿಪ್ಪೆಯನ್ನು ಎಸೆಯುವ ಬದಲು ಮಾಡಿ ನೋಡಿ ದೋಸೆ

    ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣನ್ನು ತಿಂದ ಬಳಿಕ ನಾವದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯಿಂದ ಎಂತೆಂತಹ ರುಚಿಕರವಾದ ಅಡುಗೆಗಳನ್ನು ಮಾಡಬಹುದು ಎಂಬುದು ನಿಮಗೆ ತಿಳಿದಿದೆಯಾ? ಕಲ್ಲಂಗಡಿ ಸಿಪ್ಪೆಯ ರಾಯಿತಾ ಮಾಡುವುದು ಹೇಗೆಂದು ನಾವು ಇತ್ತೀಚೆಗಷ್ಟೇ ಹೇಳಿಕೊಟ್ಟಿದ್ದೇವೆ. ಇಂದು ನಾವು ಕಲ್ಲಂಗಡಿ ಸಿಪ್ಪೆ ಬಳಸಿಕೊಂಡು ದೋಸೆ (Watermelon Rind Dosa) ಹೇಗೆ ಮಾಡಬಹುದು ಎಂದು ಹೇಳಿಕೊಡುತ್ತೇವೆ. ನೀವು ಕೂಡಾ ಕಲ್ಲಂಗಡಿ ಹಣ್ಣಿನ ಸಿಪ್ಪೆ ಎಸೆಯದೇ ಈ ರೀತಿ ಡಿಫರೆಂಟ್ ರೆಸಿಪಿಗಳನ್ನು ಟ್ರೈ ಮಾಡಿ.

    ಬೇಕಾಗುವ ಪದಾರ್ಥಗಳು:
    ದೋಸೆ ಅಕ್ಕಿ – 4 ಕಪ್
    ಕಲ್ಲಂಗಡಿ ಸಿಪ್ಪೆ – 2 ಕಪ್
    ಉದ್ದಿನಬೇಳೆ – ಅರ್ಧ ಕಪ್
    ಮೆಂತ್ಯ – 2 ಟೀಸ್ಪೂನ್
    ಮಂಡಕ್ಕಿ – 2 ಕಪ್
    ತೆಂಗಿನ ತುರಿ – ಅರ್ಧ ಕಪ್
    ಉಪ್ಪು – ರುಚಿಗೆ ತಕ್ಕಷ್ಟು
    ಎಣ್ಣೆ – ದೋಸೆ ಮಾಡಲು ಬೇಕಾಗುವಷ್ಟು

    ಮಾಡುವ ವಿಧಾನ:
    * ಮೊದಲಿಗೆ ಕಲ್ಲಂಗಡಿ ಹಣ್ಣಿನ ಸಿಪ್ಪೆಯನ್ನು ತೆಗೆದುಕೊಂಡು, ಅದರ ಹಸಿರು ಪದರವನ್ನು ಪೀಲರ್ ಸಹಾಯದಿಂದ ತೆಗೆದುಹಾಕಿ. ನಮಗೆ ದೋಸೆ ಮಾಡಲು ಸಿಪ್ಪೆಯ ಬಿಳಿ ಪದರ ಮಾತ್ರ ಉಪಯೋಗಕ್ಕೆ ಬರುತ್ತದೆ. ಬಳಿಕ ಅದನ್ನು ತುಂಡುಗಳಾಗಿ ಕತ್ತರಿಸಿ ಪಕ್ಕಕ್ಕಿಡಿ.
    * ಅಕ್ಕಿ ಹಾಗೂ ಉದ್ದಿನಬೇಳೆಯನ್ನು ತೊಳೆದು, 4-5 ಗಂಟೆಗಳ ಕಾಲ ನೆನೆಸಿಡಿ. ಅಕ್ಕಿಯನ್ನು ರುಬ್ಬುವುದಕ್ಕೂ 1 ಗಂಟೆ ಮೊದಲು ಮಂಡಕ್ಕಿಯನ್ನು ಸೇರಿಸಿ ನೆನೆಸಿ.
    * ಈಗ ಮಿಕ್ಸರ್ ಜಾರ್‌ಗೆ ಕತ್ತರಿಸಿಟ್ಟ ಕಲ್ಲಂಗಡಿ ಹಣ್ಣಿನ ಸಿಪ್ಪೆ ಹಾಗೂ ತೆಂಗಿನ ತುರಿ ಹಾಕಿ ನೀರನ್ನು ಸೇರಿಸದೇ ಸ್ವಲ್ಪ ರುಬ್ಬಿಕೊಳ್ಳಿ.
    * ಈಗ ನೆನೆಸಿದ ಅಕ್ಕಿ ಮಿಶ್ರಣವನ್ನು ಸೇರಿಸಿ, ಎಲ್ಲವನ್ನೂ ನಯವಾಗಿ ರುಬ್ಬಿಕೊಳ್ಳಿ. ಇದನ್ನೂ ಓದಿ: ಡಿಫರೆಂಟ್ ರುಚಿ – ಸಬ್ಬಕ್ಕಿ ಇಡ್ಲಿ ಮಾಡಿ ನೋಡಿ

    * ಬಳಿಕ ಹಿಟ್ಟಿಗೆ ಉಪ್ಪು ಸೇರಿಸಿ, ಮಿಶ್ರಣ ಮಾಡಿ 6-7 ಗಂಟೆಗಳ ಕಾಲ ಹುದುಗಲು ಬಿಡಿ. (ರಾತ್ರಿಯಿಡೀ ಹುದುಗಲು ಬಿಡಬಹುದು)
    * ಬೆಳಗ್ಗೆ ದೋಸೆ ಹಿಟ್ಟಿನ ಸ್ಥಿರತೆ ಪರಿಶೀಲಿಸಿ, ಅಗತ್ಯವಿದ್ದರೆ ಇನ್ನಷ್ಟು ನೀರು ಸೇರಿಸಿ ಮಿಶ್ರಣ ಮಾಡಿ.
    * ಈಗ ದೋಸೆ ಮಾಡುವ ತವಾ ಬಿಸಿ ಮಾಡಿ, ಒಂದು ಸೌಟು ಹಿಟ್ಟನ್ನು ಸುರಿದು, ದೋಸೆಯನ್ನು ದಪ್ಪನೆ ಹರಡಿ. ಕೆಲ ಹನಿ ಎಣ್ಣೆ ಹಾಕಿ, ಮುಚ್ಚಿ ದೋಸೆಯನ್ನು ಬೇಯಿಸಿ.
    * ದೋಸೆ 2 ನಿಮಿಷ ಕಾದ ಬಳಿಕ ಮಗುಚಿ ಹಾಕಿ 1 ನಿಮಿಷ ಕಾಯಿಸಿಕೊಳ್ಳಿ.
    * ಇದೀಗ ಕಲ್ಲಂಗಡಿ ಹಣ್ಣಿನ ಸಿಪ್ಪೆಯ ದೋಸೆ ತಯಾರಾಗಿದ್ದು, ಚಟ್ನಿಯೊಂದಿಗೆ ಸವಿಯಿರಿ. ಇದನ್ನೂ ಓದಿ: ಕಲ್ಲಂಗಡಿ ಸಿಪ್ಪೆಯ ರಾಯಿತಾ – ಒಮ್ಮೆ ನೀವೂ ಟ್ರೈ ಮಾಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಲ್ಲಂಗಡಿ ಸಿಪ್ಪೆಯ ರಾಯಿತಾ – ಒಮ್ಮೆ ನೀವೂ ಟ್ರೈ ಮಾಡಿ

    ಕಲ್ಲಂಗಡಿ ಸಿಪ್ಪೆಯ ರಾಯಿತಾ – ಒಮ್ಮೆ ನೀವೂ ಟ್ರೈ ಮಾಡಿ

    ನಾವು ಅದೆಷ್ಟೋ ಹಣ್ಣು, ತರಕಾರಿಗಳನ್ನು ಸೇವಿಸಿ, ಅದರ ಸಿಪ್ಪೆ, ಬೀಜಗಳ ಉಪಯುಕ್ತ ಗುಣಗಳನ್ನು ತಿಳಿಯದೇ ಎಸೆಯುತ್ತೇವೆ. ನಾವಿಂದು ಅಂತಹುದೇ ಒಂದು ಪದಾರ್ಥದಿಂದ ರುಚಿಕರ ಹಾಗೂ ಆರೋಗ್ಯಕರ ಅಡುಗೆ ಮಾಡುವುದನ್ನು ಹೇಳಿಕೊಡುತ್ತೇವೆ. ನೀವು ಕಲ್ಲಂಗಡಿ ಹಣ್ಣನ್ನು ಸವಿದಿರುತ್ತೀರಿ. ಆದರೆ ಅದರ ಸಿಪ್ಪೆಯನ್ನು ಪ್ರತಿ ಬಾರಿ ಎಸೆದಿರುತ್ತೀರಿ ಅಲ್ವಾ? ಇದೇ ಸಿಪ್ಪೆಯನ್ನು ಬಳಸಿ ನಾವಿಂದು ರಾಯಿತಾ (Watermelon Rind Raita) ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ. ಮುಂದಿನಬಾರಿ ನೀವು ಕಲ್ಲಂಗಡಿ ಹಣ್ಣು ಸವಿದಾಗ ಅದರ ಸಿಪ್ಪೆಯಿಂದ ಮರೆಯದೇ ಈ ರೆಸಿಪಿ ಮಾಡಿ ನೋಡಿ.

    ಬೇಕಾಗುವ ಪದಾರ್ಥಗಳು:
    ಕಲ್ಲಂಗಡಿ ಹಣ್ಣಿನ ಸಿಪ್ಪೆ – 1 ಕಪ್
    ಮೊಸರು – 2 ಕಪ್
    ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಟೀಸ್ಪೂನ್
    ಜೀರಿಗೆ ಪುಡಿ – ಅರ್ಧ ಟೀಸ್ಪೂನ್
    ಕೊತ್ತಂಬರಿ ಪುಡಿ – ಕಾಲು ಟೀಸ್ಪೂನ್
    ಅರಿಶಿನ – ಚಿಟಿಕೆ
    ಉಪ್ಪು – ರುಚಿಗೆ ತಕ್ಕಷ್ಟು
    ಒಗ್ಗರಣೆಗೆ:
    ಎಣ್ಣೆ – 2 ಟೀಸ್ಪೂನ್
    ಸಾಸಿವೆ – ಅರ್ಧ ಟೀಸ್ಪೂನ್
    ಜೀರಿಗೆ – ಅರ್ಧ ಟೀಸ್ಪೂನ್
    ಹಿಂಗ್ – ಚಿಟಿಕೆ
    ಕರಿಬೇವಿನ ಸೊಪ್ಪು – ಕೆಲವು
    ಸಣ್ಣಗೆ ಹೆಚ್ಚಿದ ಹಸಿರು ಮೆಣಸಿನಕಾಯಿ – 2 ಇದನ್ನೂ ಓದಿ: ಆಲೂ ಸೇರಿಸಿ ಬೆಂಡೆಕಾಯಿ ಪಲ್ಯ ಮಾಡಿದ್ರೆ ಸಖತ್ ಟೇಸ್ಟ್

    ಮಾಡುವ ವಿಧಾನ:
    * ಮೊದಲಿಗೆ ಕಲ್ಲಂಗಡಿ ಹಣ್ಣಿನ ಸಿಪ್ಪೆಯನ್ನು ಶುಚಿಗೊಳಿಸಿ, ಅದರ ಹಸಿರು ಭಾಗವನ್ನು ಪೀಲರ್ ಸಹಾಯದಿಂದ ತೆಗೆದು ಕೇವಲ ಬಿಳಿ ಭಾಗವನ್ನು ಮಾತ್ರವೇ ತುರಿದು ಇಟ್ಟುಕೊಳ್ಳಿ.
    * ಈಗ ಒಂದು ಬಾಣಲೆಗೆ ಎಣ್ಣೆ ಹಾಕಿ, ಬಿಸಿಯಾದ ಬಳಿಕ ಸಾಸಿವೆ, ಜೀರಿಗೆ ಸೇರಿಸಿ ಸಿಡಿಸಿ. ಬಳಿಕ ಕರಿಬೇವಿನ ಸೊಪ್ಪು ಹಾಗೂ ಹಸಿರು ಮೆಣಸಿನಕಾಯಿ ಹಾಕಿ 1 ನಿಮಿಷ ಹುರಿಯಿರಿ.
    * ತುರಿದ ಕಲ್ಲಂಗಡಿ ಸಿಪ್ಪೆ, ಅರಿಶಿನ ಹಾಗೂ ಉಪ್ಪು ಸೇರಿಸಿ 1 ನಿಮಿಷ ಫ್ರೈ ಮಾಡಿ.
    * ಈಗ ಜೀರಿಗೆ ಪುಡಿ, ಕೊತ್ತಂಬರಿ ಪುಡಿ ಸೇರಿಸಿ, ಕಲ್ಲಂಗಡಿ ಸಿಪ್ಪೆ ಮೃದುವಾಗುವವರೆಗೆ 5 ನಿಮಿಷ ಮುಚ್ಚಿ ಬೇಯಿಸಿ.
    * ಈಗ ಉರಿಯನ್ನು ಆಫ್ ಮಾಡಿ, ತಣ್ಣಗಾಗಲು ಬಿಡಿ.
    * ಬಳಿಕ ಮೊಸರು, ಉಪ್ಪು ಹಾಗೂ ಕೊತ್ತಂಬರಿ ಸೊಪ್ಪು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ.
    * ಇದೀಗ ಕಲ್ಲಂಗಡಿ ಸಿಪ್ಪೆಯ ರಾಯಿತಾ ತಯಾರಾಗಿದ್ದು, ಅನ್ನ, ಚಪಾತಿಯೊಂದಿಗೆ ಸವಿಯಿರಿ. ಇದನ್ನೂ ಓದಿ: ಆರೋಗ್ಯಕರ ದೊಡ್ಡಪತ್ರೆ ಸೊಪ್ಪಿನ ರಸಂ ಮಾಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಮ್ದು ಕಲ್ಲಂಗಡಿಯಾದರೆ ನಿಮ್ದು ಹಾರ್ಪಿಕ್ – ಇಂಡೋ ಪಾಕ್ ಅಭಿಮಾನಿಗಳ ಜೆರ್ಸಿ ಫೈಟ್

    ನಮ್ದು ಕಲ್ಲಂಗಡಿಯಾದರೆ ನಿಮ್ದು ಹಾರ್ಪಿಕ್ – ಇಂಡೋ ಪಾಕ್ ಅಭಿಮಾನಿಗಳ ಜೆರ್ಸಿ ಫೈಟ್

    ಮುಂಬೈ: ಟಿ20 ವಿಶ್ವಕಪ್‍ಗಾಗಿ (T20 World)  ಭಾರತದ ನೂತನ ಜೆರ್ಸಿ ಅನಾವರಣಗೊಂಡಿದೆ. ಅತ್ತ ಪಾಕಿಸ್ತಾನ (Pakistan) ತಂಡದ ಟಿ20 ವಿಶ್ವಕಪ್‌ ಜೆರ್ಸಿ (Jersey) ಎನ್ನುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೀಗ ಈ ಜೆರ್ಸಿ ಕುರಿತಾಗಿ ಭಾರತ ಹಾಗೂ ಪಾಕಿಸ್ತಾನ ಅಭಿಮಾನಿಗಳು ಪರಸ್ಪರ ಕಾಲೆಳೆಯುತ್ತಿದ್ದಾರೆ.

    ಟಿ20 ವಿಶ್ವಕಪ್‍ಗಾಗಿ ಭಾರತದ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಕ್ಕೆ ನೀಲಿ ಹಾಗೂ ಕಡು ನೀಲಿ ಬಣ್ಣ ಮಿಶ್ರಿತ ಜೆರ್ಸಿ ಸಿದ್ಧವಾಗಿದೆ. ಈಗಾಗಲೇ ಬಿಸಿಸಿಐ (BCCI) ಈ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ತಂಡದ ಆಟಗಾರರಿರುವ ಪೋಸ್ಟರ್ ಒಂದು ವೈರಲ್ ಆಗುತ್ತಿದ್ದು, ಈ ಪೋಸ್ಟರ್‌ನಲ್ಲಿ ಹಸಿರು ಮತ್ತು ಲೈಟ್ ಹಸಿರು ಬಣ್ಣದ ಜೆರ್ಸಿಯಲ್ಲಿ ಪಾಕಿಸ್ತಾನ ತಂಡ ಕಾಣಿಸಿಕೊಂಡಿದೆ ಇದು ಟಿ20 ವಿಶ್ವಕಪ್‍ಗೆ ಪಾಕಿಸ್ತಾನ ತಂಡದ ಜೆರ್ಸಿ ಎಂದು ವೈರಲ್ ಆಗುತ್ತಿದೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ರಾಹುಲ್ ಗಾಂಧಿ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ರೋಹಿತ್ – ಆ್ಯಂಕರ್ ಎಡವಟ್ಟು

    https://twitter.com/_troll_10/status/1571542005620289536

    ಪಾಕಿಸ್ತಾನದ ಈ ಜೆರ್ಸಿ ನೋಡಿದ ಬಳಿಕ ನೆಟ್ಟಿಗರು ಈ ಜೆರ್ಸಿ ಕಲ್ಲಂಗಡಿ ಹಣ್ಣಿನಂತೆ ವಿನ್ಯಾಸಗೊಳಿಸಲಾಗಿದೆ ಎಂದು ಕಾಲೆಳೆದಿದ್ದಾರೆ. ಇದಕ್ಕೆ ಟಕ್ಕರ್ ನೀಡಿರುವ ಪಾಕ್ ಅಭಿಮಾನಿಗಳು ಭಾರತದ ಜೆರ್ಸಿ ಹಾರ್ಪಿಕ್ ಬಾಟಲ್‍ನ ವಿನ್ಯಾಸದಂತಿದೆ ಎಂದು ಕಿಚಾಯಿಸಿದ್ದಾರೆ. ಇದೀಗ ಭಾರತ ಹಾಗೂ ಪಾಕಿಸ್ತಾನದ ಅಭಿಮಾನಿಗಳು ಟಿ20 ವಿಶ್ವಕಪ್‍ಗೂ ಮುನ್ನ ಜೆರ್ಸಿ ವಿಷಯವಾಗಿ ಫೈಟ್ ಆರಂಭಿಸಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌ಗಾಗಿ `One Blue Jersey’ – ಟೀಂ ಇಂಡಿಯಾಕ್ಕೆ ನ್ಯೂ ಲುಕ್

    ಬಿಸಿಸಿಐ ನೂತನ ಜೆರ್ಸಿಗೆ `ಒನ್ ಬ್ಲೂ ಜೆರ್ಸಿ ಎಂದು ಹೆಸರಿಟ್ಟಿದೆ. ಇದು ನೀಲಿ ಹಾಗೂ ರಾಯಲ್ ಬ್ಲೂ (ಕಡು ನೀಲಿ) ಬಣ್ಣದ ಮಿಶ್ರಣದಿಂದ ಕೂಡಿದೆ. ಈಗಾಗಲೇ ಜೆರ್ಸಿಯನ್ನು ಅನಾವರಣಗೊಳಿಸಲಾಗಿದೆ. ಆದರೆ ಪಾಕಿಸ್ತಾನ ಜೆರ್ಸಿಯನ್ನು ಅಧಿಕೃತವಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಅನಾವರಣಗೊಳಿಸಿಲ್ಲ. 2022ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ಆತಿಥ್ಯ ವಹಿಸುತ್ತಿದ್ದು, ಅಕ್ಟೋಬರ್ 16 ರಿಂದ ನವೆಂಬರ್ 13ರ ವರೆಗೆ ಟೂರ್ನಿ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ

    ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ಶ್ರೀರಾಮಸೇನೆಯ ನಾಲ್ವರ ಬಂಧನ

    ಧಾರವಾಡ: ಹಿಂದೂತೇರನ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಾಮ ಸೇನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನಕಾಯಿ ಒಡೆದುಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು

    ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಬಂಧಿತರು. ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಲಾಗಿತ್ತು. ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೂರು ಸ್ವೀಕರಿಸಿರುವ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.

    ನಡೆದಿದ್ದೇನು.?
    ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಾರೆ. ದೇವಸ್ಥಾನದ ಬಳಿ 4 ಹಿಂದೂಯೇತರ ಅಂಗಡಿಗಳಿದ್ದು, ಕಳೆದ 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದ್ದರು. ಶನಿವಾರ ಹಿಂದೂಯೇತರ ಅಂಗಡಿಗಳು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದರು.

  • ತಮ್ಮ ಕಲಾ ಕೌಶಲ್ಯದ ಮೂಲಕ ಅಪ್ಪುಗೆ ಗೌರವ ನಮನ ಸಲ್ಲಿಸಿದ ಕಲಾವಿದ

    ತಮ್ಮ ಕಲಾ ಕೌಶಲ್ಯದ ಮೂಲಕ ಅಪ್ಪುಗೆ ಗೌರವ ನಮನ ಸಲ್ಲಿಸಿದ ಕಲಾವಿದ

    ಶಿವಮೊಗ್ಗ: ಇತ್ತೀಚೆಗೆ ಅಕಾಲಿಕ ನಿಧನ ಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಲಾವಿದ ಮಹಮದ್ ಫೈಜಾನ್ ಎಂಬವರು ಕಲ್ಲಂಗಡಿ ಹಣ್ಣಿನಲ್ಲಿ ತಮ್ಮ ಕಲಾ ಕೌಶಲ್ಯದ ಮೂಲಕ ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

    ಪುನೀತ್ ರಾಜ್‍ಕುಮಾರ್ ಅವರ ಸ್ಮರಣಾರ್ಥ ಅವರಿಗೆ ಗೌರವ ಸಲ್ಲಿಸಲು ಕಲ್ಲಂಗಡಿ ಹಣ್ಣಿನಲ್ಲಿ ಆಕರ್ಷಕ ಕಲಾಕೃತಿಯನ್ನು ರಚಿಸಿದ್ದಾರೆ. ಕಲಾವಿದನ ಈ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ವಿಶೇಷ ಎಂದರೆ ಈ ಕಲಾಕೃತಿಗೆ ಬಣ್ಣ ಬಣ್ಣದ ವಿದ್ಯುತ್ ದೀಪ ಸಹ ಅಳವಡಿಕೆ ಮಾಡುವ ಮೂಲಕ ಮತ್ತಷ್ಟು ಆಕರ್ಷಕವಾಗಿ ಕಾಣುವಂತೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಮದ್ಯ ಭಾಗದಲ್ಲಿ ಪುನೀತ್ ಅಭಿಮಾನಿಗಳಿಗೆ ಕಾರ್ಯಕ್ರಮ

    ಮಹಮದ್ ಫೈಜಾನ್ ಅವರು ಸ್ಟಿಕ್ಕರ್ ಕಟಿಂಗ್ಸ್, ಬಣ್ಣ ಲೇಪನ ವೃತ್ತಿ ಜೊತೆಗೆ ಕುಂಚ ಕಲಾವಿದರಾಗಿ ಸಹ ಗುರುತಿಸಿಕೊಂಡಿದ್ದು, ತಮ್ಮಲ್ಲಿನ ಕೆತ್ತನೆಯ ಕಲಾ ಕೌಶಲ್ಯದ ಮೂಲಕ ಹಲವಾರು ಕಲಾಕೃತಿಗಳನ್ನು ರಚಿಸಿದ್ದಾರೆ. ಗಣ್ಯರ ಹುಟ್ಟುಹಬ್ಬ ಸೇರಿದಂತೆ ವಿಶೇಷ ದಿನಗಳಂದು ಕಲ್ಲಂಗಡಿ ಹಣ್ಣಿನಲ್ಲಿ ಅವರ ಕಲಾಕೃತಿಗಳನ್ನು ರಚಿಸಿದ್ದಾರೆ.

    ಫೈಜಾನ್ ಅವರು ಕೇವಲ ಕಲ್ಲಂಗಡಿ ಹಣ್ಣು ಮಾತ್ರವಲ್ಲದೆ ಎಲೆಗಳ ಮೇಲೆ ಕಲಾಕೃತಿಗಳನ್ನು ರಚಿಸಿದ್ದಾರೆ. ಗೋಡೆಗಳ ಮೇಲೆ ಆಕರ್ಷಕವಾದ ಕುಂಚ ಕಲೆ, ವರ್ಣ ಚಿತ್ರ ಕಲೆಗಳಲ್ಲಿಯೂ ಸಹ ಪರಿಣಿತರಾಗಿದ್ದಾರೆ.

  • ಬೆಳೆದ ಬೆಳೆ ಮಾರಲು ರೈತನ ಹೊಸ ಐಡಿಯಾ – ಜಾಲತಾಣ ಬಳಸಿಕೊಂಡು ಕಲ್ಲಂಗಡಿ ಮಾರಾಟ

    ಬೆಳೆದ ಬೆಳೆ ಮಾರಲು ರೈತನ ಹೊಸ ಐಡಿಯಾ – ಜಾಲತಾಣ ಬಳಸಿಕೊಂಡು ಕಲ್ಲಂಗಡಿ ಮಾರಾಟ

    – ಕಲಬುರಗಿಯ ಅನ್ನದಾತ ಎಲ್ಲರಿಗೂ ಮಾದರಿ

    ಕಲಬುರಗಿ: ಲಾಕ್‍ಡೌನ್‍ನಿಂದ ರಾಜ್ಯದಲ್ಲಿ ಲಕ್ಷಾಂತರ ರೈತರು ತಾವು ಬೆಳೆದ ಬೆಳೆಗಳನ್ನ ಮಾರಾಟ ಮಾಡೊಕೆ ಆಗದೇ ತೀವ್ರ ಆರ್ಥಿಕ ಸಂಕಷ್ಟಕ್ಕಿಡಾಗೋ ಅನೇಕ ಉದಾಹರಣೆಗಳನ್ನ ದಿನನಿತ್ಯ ನೋಡ್ತಾನೆ ಇದ್ದೀವಿ. ಆದರೆ ಇಲ್ಲೊಬ್ಬ ಯುವ ರೈತ ಇದಕ್ಕೆ ತದ್ವಿರುದ್ದ. ಅಷ್ಟಕ್ಕೂ ತಮ್ಮ ಜಮೀನಿನಲ್ಲಿ ಬೆಳೆದ ಹಳದಿ ಕಲ್ಲಂಗಡಿ ಬೆಳೆಯನ್ನ ಸಾಮಾಜಿಕ ಜಾಲತಾಣವನ್ನ ಉಪಯೋಗಿಸಿಕೊಂಡು ಮಾರಾಟ ಮಾಡುತ್ತಿದ್ದಾನೆ.

    ಹೌದು. ಮೂಲತಃ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕೊರಳಿ ಗ್ರಾಮದ ಯುವ ರೈತ ಬಸವರಾಜ್, ಕಳೆದ ನಾಲ್ಕೈದು ತಿಂಗಳ ಹಿಂದೆ ತಮ್ಮದೇ ನಾಲ್ಕು ಎಕರೆ ಜಮೀನಿನಲ್ಲಿ ಜರ್ಮನ್ ತಳಿಯ ಹಳದಿ ಕಲ್ಲಂಗಡಿ ಹಣ್ಣನ್ನ ಬೆಳೆದಿದ್ದರು. ನಾಲ್ಕು ಲಕ್ಷ ರೂಪಾಯಿ ಬಂಡವಾಳ ಹಾಕಿ ಕಲ್ಲಂಗಡಿ ಬೆಳೆದ ಮೇಲೆ ಎರಡನೇ ಕೊರೊನಾ ಅಲೇ ಶುರುವಾಗಿ, ಸರ್ಕಾರವು ಲಾಕ್‍ಡೌನ್ ವಿಧಿಸಿತ್ತು. ಇದರಿಂದ ಎಲ್ಲಾ ಹಣ್ಣು, ತರಕಾರಿ ಮಾರುಕಟ್ಟೆಗಳು ಬಂದ್ ಆದ ಕಾರಣ, ಬೆಳೆದ ಲಕ್ಷಾಂತರ ರೂಪಾಯಿ ಮೌಲ್ಯದ ಕಲ್ಲಂಗಡಿ ಹಣ್ಣನ್ನ ಹೇಗಪ್ಪ ಮಾರಾಟ ಮಾಡೊದು ಅಂತಾ ತಲೆ ಮೇಲೆ ಕೈಇಟ್ಟುಕೊಂಡು ಕುಳಿತಿದ್ದರು. ಆಗ ಯುವ ರೈತನ ತಲೆಯಲ್ಲಿ ಹೊಳೆದಿದ್ದು ಸಾಮಾಜಿಕ ಜಾಲತಾಣ. ಇದನ್ನೂ ಓದಿ: ತಂಪಾದ ಕಲ್ಲಂಗಡಿ ಜ್ಯೂಸ್

    ಹಳದಿ ಕಲ್ಲಂಗಡಿ ಹಣ್ಣು ಬೆಂಗಳೂರು, ಮುಂಬೈ, ಪುಣೆ, ಹೈದರಾಬಾದ್ ಅಂತಹ ಮಹಾನಗರಗಳನ್ನ ಬಿಟ್ಟರೇ, ಹಳದಿ ಕಲ್ಲಂಗಡಿ ಹಣ್ಣು ಸಿಗೋದು ಕಲಬುರಗಿ ಜಿಲ್ಲೆಯಲ್ಲೆ. ಅದಕ್ಕಾಗಿ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸಪ್ ಗ್ರೂಪ್ ಸೇರಿದಂತೆ ಹಿಗೇ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಳದಿ ಕಲ್ಲಂಗಡಿ ಹಣ್ಣಿನ ಬಗ್ಗೆ ಭರ್ಜರಿ ಪ್ರಚಾರ ಮಾಡಿದ್ರು. ಅದರಂತೆ ನಿನ್ನೆಯಿಂದ ಎರಡು ಟಂಟಂ ವಾಹನಗಳಲ್ಲಿ ತಂದು ಕಲಬುರಗಿ ನಗರದ ವಿವಿಧೆಡೆ ಒಂದು ಹಳದಿ ಕಲ್ಲಂಗಡಿಗೆ ಐವತ್ತು ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಹಳದಿ ಬಣ್ಣದ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಯುವಕ

    ಅಂದಹಾಗೇ ಕಲಬುರಗಿ ಜಿಲ್ಲೆಯಲ್ಲಿ ನೂರಾರು ರೈತರು ಸಾವಿರಾರು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣನ್ನ ಬೆಳೆದಿದ್ದಾರೆ. ಲಾಕ್‍ಡೌನ್ ನಿಂದಾಗಿ ಕಲ್ಲಂಗಡಿ ಹಣ್ಣು ಮಾರಾಟವಾಗದ ಹಿನ್ನೆಲೆಯಲ್ಲಿ, ಬೇಸತ್ತು ಟ್ರ್ಯಾಕ್ಟರ್‍ನಿಂದ ಕಲ್ಲಂಗಡಿ ಬೆಳೆ ನಾಶ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನಮಗೆ ಪರಿಹಾರ ಬೇಕೆಂದು ಪ್ರತಿಭಟನೆ ಮಾಡುತ್ತಿರುವ ವಿಚಾರ ಸಾಮಾನ್ಯವಾಗಿದೆ. ಆದರೆ ಈ ಯುವ ಮಾದರಿ ರೈತ ಬಸವರಾಜ್ ಮಾತ್ರ, ಸಾಮಾಜಿಕ ಜಾಲತಾಣದಲ್ಲಿ ತಾನು ಬೆಳೆದ ಹಳದಿ ಕಲ್ಲಂಗಡಿ ಬಗ್ಗೆ ಪ್ರಚಾರ ಮಾಡಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಈ ಹಳದಿ ಕಲ್ಲಂಗಡಿ ಕಣ್ಣಿನ ದೃಷ್ಟಿಯನ್ನ ಹೆಚ್ಚಿಸುವುದು, ಹೃದಯ ಸಂಬಂಧಿ ಕಾಯಿಲೆಗಳನ್ನ ದೂರ ಮಾಡುವುದು, ಜೀರ್ಣಕ್ರಿಯೆ ವೃದ್ದಿಸುವುದು, ಕ್ಯಾನ್ಸರ್ ತಡೆಗಟ್ಟುವುದು, ಚರ್ಮ ಸೌಂದರ್ಯ ಹೆಚ್ಚಿಸುವುದು ಸೇರಿದಂತೆ ಆರೋಗ್ಯಕ್ಕೆ ಸಹಕಾರಿಯಾದ ಅಂಶಗಳನ್ನ ಹಳದಿ ಕಲ್ಲಂಗಡಿ ಹಣ್ಣು ಒಳಗೊಂಡಿದೆ. ಇನ್ನೂ ರೈತರು ತಾವು ಬೆಳೆದ ಕಲ್ಲಂಗಡಿ ಸೇರಿದಂತೆ ಇತರೇ ಹಣ್ಣುಗಳನ್ನ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಗಮನ ಸೆಳೆದು ಮಾರಾಟ ಮಾಡಬೇಕು ಎಂದು ಬಸವರಾಜ್‍ನ ಸ್ನೇಹಿತರು ಹೇಳುತ್ತಾರೆ.

    ಲಾಕ್‍ಡೌನ್ ಸಂದರ್ಭದಲ್ಲಿ ತಾನು ಹಾಕಿದ ಬಂಡವಾಳಕ್ಕೆ ಹಣ ಬರದಿದ್ದರು ಸಹ, ಬಂಡವಾಳ ಹಣ ಮಾತ್ರ ಈ ರೈತ ಪಡೆಯುತ್ತಿರುವುದು ಎಲ್ಲರ ಹುಬ್ಬೆರುವಂತೆ ಮಾಡಿದೆ. ಒಟ್ಟಾರೆಯಾಗಿ ಲಾಕ್‍ಡೌನ್ ಸಂದರ್ಭದಲ್ಲಿ ಸಹ ಕಲ್ಲಂಗಡಿ ಹಣ್ಣು ಮಾರಾಟ ಮಾಡಿ ಲಕ್ಷ ಲಕ್ಷ ರೂಪಾಯಿ ಲಾಭ ಪಡೆಯುತ್ತಿರುವ ರೈತ ಬಸವರಾಜ್ ಕಾರ್ಯಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ಹಳದಿ ಕಲ್ಲಂಗಡಿ ಫುಲ್ ಫೇಮಸ್- ಯಲ್ಲೋ ವಾಟರ್‌ಮೆಲನ್‌ಗೆ ಭರ್ಜರಿ ಡಿಮ್ಯಾಂಡ್

  • ಮೂರು ಎಕರೆ ಕಲ್ಲಂಗಡಿ ಬೆಳೆಯನ್ನು ನಾಶಗೊಳಿಸಿದ ರೈತ

    ಮೂರು ಎಕರೆ ಕಲ್ಲಂಗಡಿ ಬೆಳೆಯನ್ನು ನಾಶಗೊಳಿಸಿದ ರೈತ

    ಕಲಬುರಗಿ: ಲಾಕ್‍ಡೌನ್‍ನಿಂದ ಕಲ್ಲಂಗಡಿ ಹಣ್ಣು ಮಾರಾಟವಾಗದ ಹಿನ್ನಲೆ, ಟ್ರ್ಯಾಕ್ಟರ್ ಹೊಡೆದು ತಾನೇ ಬೆಳೆದ ಕಲ್ಲಂಗಡಿ ಹಣ್ಣನ್ನು ರೈತ ಹಾಳು ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದುಗನೂರು ಗ್ರಾಮದಲ್ಲಿ ನಡೆದಿದೆ.

    ರಾಮಲಿಂಗಯ್ಯ ಕಲಾಲ್ ಎಂಬ ರೈತ ಮೂರು ಎಕರೆಯಲ್ಲಿ ಎರಡು ಲಕ್ಷ ಹಣ ಖರ್ಚು ಮಾಡಿ ಕಲ್ಲಂಗಡಿ ಬೆಳೆದಿದ್ದರು. ಆದರೆ ಲಾಕ್‍ಡೌನ್‍ನಿಂದ ಹಣ್ಣು ಮಾರಾಟವಾಗದೇ ಹೊಲದಲ್ಲಿಯೇ ಹಾಳಾಗಿ ಹೋಗಿದೆ. ಹೀಗಾಗಿ ಕಲ್ಲಂಗಡಿ ಕಿತ್ತು ಬೇರೆ ಬೆಳೆಯಲು ರಾಮಲಿಂಗಯ್ಯ ಮುಂದಾಗಿದ್ದಾರೆ. ಇದನ್ನು ಓದಿ:ಕಠಿಣ ಲಾಕ್‍ಡೌನ್ ಮಧ್ಯೆ ಹೊರ ರಾಜ್ಯಗಳಿಂದ ಕಳ್ಳ ದಾರಿಗಳ ಮೂಲಕ ಎಂಟ್ರಿ- ಕೊರೊನಾ ಹೊತ್ತು ತರುವ ಆತಂಕ

    ಕಳೆದ ವರ್ಷ ಸಹ ಜಮೀನಿನಲ್ಲಿ ಕಲ್ಲಂಗಡಿ ಬೆಳೆದು ಕೈ ಸುಟ್ಟುಕೊಂಡಿದ್ದರು. ಈ ಬಾರಿ ಸಹ ಕೊರೊನಾ ಲಾಕ್ ಡೌನ್ ಹಿನ್ನಲೆ ಅದೇ ಪರಿಸ್ಥಿತಿ ಬಂದಿದೆ. ಮಾರುಕಟ್ಟೆಗೆ ಹಣ್ಣು ತೆಗೆದುಕೊಂಡು ಹೋಗಬೇಕು ಅಂದರೂ, ಗೂಡ್ಸ್ ವಾಹನದವರು ಯಾರು ಮುಂದೆ ಬರುತ್ತಿಲ್ಲ. ನಾವಾದರೂ ಹೋಗಿ ಮಾರಾಟ ಮಾಡಬೇಕು ಅಂದರೂ ಖರೀದಿ ಮಾಡುವವರಿಲ್ಲ. ಹೀಗಾಗಿ ಕಲ್ಲಂಗಡಿ ಹಣ್ಣು ಬೆಳೆದು ಕೈ ಸುಟ್ಟಾಗಿದೆ. ಹೀಗಾಗಿ ಸರ್ಕಾರ ಕಲ್ಲಂಗಡಿ ಬೆಳೆಗಾರರಿಗೆ ಹೆಚ್ಚಿನ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

  • ಲಾಕ್‍ಡೌನ್ ಸಂಕಷ್ಟ- ನೂರಾರು ಟನ್ ಕಲ್ಲಂಗಡಿ ಬೆಳೆ ನಾಶಮಾಡಿದ ರೈತರು

    ಲಾಕ್‍ಡೌನ್ ಸಂಕಷ್ಟ- ನೂರಾರು ಟನ್ ಕಲ್ಲಂಗಡಿ ಬೆಳೆ ನಾಶಮಾಡಿದ ರೈತರು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಕಲ್ಲಂಗಡಿ ಬೆಳೆದ ರೈತರಿಗ ಲಾಕ್‍ಡೌನ್ ಹಾಗೂ ಹವಾಮಾನ ವೈಪರಿತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಹಣ್ಣುಗಳನ್ನು ಕೊಳ್ಳುವವರಿಲ್ಲದ್ದಕ್ಕೆ ಬೆಳೆಯನ್ನು ನಾಶ ಮಾಡುತ್ತಿದ್ದಾರೆ.

    ಹವಾಮಾನ ವೈಪರಿತ್ಯದಿಂದ ಈಗಾಗಲೇ ಬೆಳೆ ನಾಶವಾಗಿದ್ದು, ಉಳಿದ ಬೆಳೆಯನ್ನಾದರೂ ಮಾರುಕಟ್ಟೆಗೆ ಕೊಂಡೊಯ್ಯಬೇಕು ಎಂದರೆ ಲಾಕ್‍ಡೌನ್ ಅಡ್ಡಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ಪ್ರದೇಶಗಳಲ್ಲಿ 200 ಹೆಕ್ಟೇರ್ ನಲ್ಲಿ ಬೆಳೆದ ಕಲ್ಲಂಗಡಿಯನ್ನು ಲಾಕ್‍ಡೌನ್ ನಿಂದಾಗಿ ಮಾರುಕಟ್ಟೆಗೆ ಕೊಂಡೊಯ್ಯಲಾಗದೆ ರೈತರು ಹೊಲದಲ್ಲೇ ನಾಶ ಮಾಡುತ್ತಿದ್ದಾರೆ. ಹೊಲದಲ್ಲಿ ಬೆಳೆದ ಕಲ್ಲಂಗಡಿಯೇ ಗೋವುಗಳಿಗೆ ಆಹಾರವಾಗಿದೆ. ಇದನ್ನೂ ಓದಿ: ಪ್ರತಿ ಗ್ರಾಮ ಪಂಚಾಯ್ತಿಗೆ 50 ಸಾವಿರ ಅನುದಾನ: ಬಿಎಸ್‍ವೈ

    ಕರಾವಳಿ ಭಾಗದಲ್ಲಿ ಫೆಬ್ರವರಿಯಿಂದ ಜೂನ್ ಮೊದಲ ವಾರದ ವರೆಗೆ ಕಲ್ಲಂಗಡಿ ಹಣ್ಣು ಬೆಳೆಯಲಾಗುತ್ತದೆ. ನೆರೆಯ ಗೋವಾ, ಕೇರಳ, ಆಂಧ್ರ ಪ್ರದೇಶ, ತಮಿಳುನಾಡು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹಣ್ಣುಗಳನ್ನು ಸರಬರಾಜು ಮಾಡಲಾಗುತ್ತದೆ. ಆದರೆ ಇದೀಗ ಲಾಕ್‍ಡೌನ್ ಹಾಗೂ ಕೊರೊನಾದಿಂದಾಗಿ ಕಲ್ಲಂಗಡಿ ಹಣ್ಣಿನ ಬೇಡಿಕೆ ಸಂಪೂರ್ಣ ಇಳಿಕೆಯಾಗಿದೆ.

    ಕಲ್ಲಂಗಡಿ ಹಣ್ಣು ತಿಂದರೆ ಚಳಿ, ಜ್ವರ ಬರುತ್ತದೆ ಎಂಬ ಭಯ ಬಹುತೇಕ ಜನರಲ್ಲಿ ಕಾಡುತ್ತಿದೆ, ಹೀಗಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಗ್ರಾಹರನ್ನು ಇಲ್ಲವಾಗಿಸಿದೆ. ಇನ್ನು ಲಾಕ್‍ಡೌನ್ ಆದ್ದರಿಂದ ದೊಡ್ಡ ಬೇಡಿಕೆಯೂ ಕುಸಿದಿದ್ದು, ವರ್ತಕರು ರೈತರಿಂದ ಖರೀದಿ ನಿಲ್ಲಿಸಿದ್ದಾರೆ. ಇದರಿಂದಾಗಿ ಪ್ರತಿ ಕೆ.ಜಿ.ಗೆ 10 ರಿಂದ 12 ರೂ. ಇದ್ದ ಕಲ್ಲಂಗಡಿ ಇದೀಗ ಕೆ.ಜಿ ಗೆ 2 ರೂ. ಸಹ ಕೇಳುವವರಿಲ್ಲದಂತಾಗಿದೆ.

    ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯದಿಂದ ಚನ್ನಾಗಿ ಬೆಳೆದ ಕಲ್ಲಂಗಡಿ ಕೊಳೆಯಲು ಪ್ರಾರಂಭಿಸಿದೆ. ಲಕ್ಷಾಂತರ ರೂ. ಸಾಲ ಮಾಡಿ ಬೆಳೆದ ಬೆಳೆಯನ್ನು ಕೇಳುವವರಿಲ್ಲದಂತಾಗಿದೆ. ಜೊತೆಗೆ ಕಳೆದ ವರ್ಷ ಆದ ನಷ್ಟಕ್ಕೆ ಪರಿಹಾರ ಸಹ ಇದುವರೆಗೆ ಬಿಡುಗಡೆಯಾಗಿಲ್ಲ. ಹೀಗಾಗಿ ಮತ್ತಷ್ಟು ಸಂಕಷ್ಟದಲ್ಲಿ ರೈತ ದಿನ ದೂಡುವಂತಾಗಿದೆ.

    ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ಅಲ್ಪ ಹಾನಿಗೆ 2 ಸಾವಿರ ನಿಗದಿ ಮಾಡಿದೆ. ಆದರೆ ಕಳೆದ ಬಾರಿಯ ನಷ್ಟದ ಹಣ ಇನ್ನೂ ಖಾತೆಗೆ ಸೇರಿಲ್ಲ. ಹೀಗಾಗಿ ಈ ಬಾರಿ ಘೋಷಣೆ ಮಾಡಿರುವ ಹಣ ಸಿಗುವ ಭರವಸೆಯನ್ನು ರೈತ ಕಳೆದುಕೊಂಡಿದ್ದಾನೆ. ಜಿಲ್ಲೆಯಲ್ಲಿ 60 ಹೆಕ್ಟೇರ್ ಪ್ರದೇಶದ ಕಲ್ಲಂಗಡಿ ನಷ್ಟ ವಾಗಿದೆ. ಅಂದಾಜು ಒಂದು ಕೋಟಿ ರೂ.ನಷ್ಟು ಮೌಲ್ಯದ ಹಣ್ಣು ನಷ್ಟವಾಗಿದೆ. ಇದೀಗ ಫಸಲು ಉತ್ತಮವಾಗಿದ್ದರೂ ಕೊಳ್ಳುಕೊಳ್ಳುವವರಿಲ್ಲದೇ ಬೆಳೆ ಮಣ್ಣುಪಾಲಾಗಿದ್ದು, ರೈತ ಭರವಸೆಯನ್ನು ಕಳೆದುಕೊಂಡು ಮತ್ತಷ್ಟು ಸಂಕಷ್ಟಕ್ಕೊಳಗಾಗಿದ್ದಾನೆ.