Tag: watsapp

  • ಕೋರ್ಟ್ ಗೆ ಸಾಕ್ಷ್ಯವಾಯ್ತು ವಾಟ್ಸಪ್ ಚರ್ಚೆ- ಐವರು ಅಧಿಕಾರಿಗಳ ವಿರುದ್ಧ ಎಫ್‍ಐಆರ್

    ಕೋರ್ಟ್ ಗೆ ಸಾಕ್ಷ್ಯವಾಯ್ತು ವಾಟ್ಸಪ್ ಚರ್ಚೆ- ಐವರು ಅಧಿಕಾರಿಗಳ ವಿರುದ್ಧ ಎಫ್‍ಐಆರ್

    ತುಮಕೂರು: ವಾಟ್ಸಪ್ ಗ್ರೂಪಲ್ಲಿ ಚರ್ಚೆಯಾಗುವ ವಿಚಾರ ಕೆಲವೊಮ್ಮೆ ಗ್ರೂಪ್ ಅಡ್ಮಿನ್ ಗೆ ಮುಳುವಾಗತ್ತೆ. ಆದ್ರೆ ಇಲ್ಲೊಂದು ಪ್ರಕರಣದಲ್ಲಿ ವಾಟ್ಸಪ್ ಗ್ರೂಪಲ್ಲಿ ನಡೆದ ಚರ್ಚೆ, ಶೇರ್ ಮಾಡಿದ ವೀಡಿಯೋವನ್ನೇ ಸಾಕ್ಷ್ಯವಾಗಿ ಪರಿಗಣಿಸಿದ ನ್ಯಾಯಾಲಯ ಐದು ಜನ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಅಪರೂಪದ ಆದೇಶ ಹೊರಡಿಸಿದೆ.

    ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಎಮ್.ಎಪ್.ಸಿ ನ್ಯಾಯಾಲಯ ಇಂತಹದೊಂದು ಮಹತ್ವದ ಆದೇಶ ಹೊರಡಿಸಿದೆ. ಚಿಕ್ಕನಾಯಕನಹಳ್ಳಿ ಕೆರೆ ನೀರನ್ನು ದಂಧೆಕೋರರು ಕದ್ದು ಮಾರುತ್ತಿದ್ದರು. ಈ ದಂಧೆಯ ವೀಡಿಯೋ ಸಹಿತ “ಚಿಕ್ಕನಾಯಕನಹಳ್ಳಿ ಅಭಿವೃದ್ದಿಗಾಗಿ” ಎಂಬ ವಾಟ್ಸಪ್ ಗ್ರೂಪ್ ಮೂಲಕ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ನೆಪಮಾತ್ರಕ್ಕೆ ಕೆರೆಗೆ ಭೇಟಿ ಕೊಟ್ಟ ಪುರಸಭೆ ಅಧಿಕಾರಿಗಳು ಕದ್ದುಮಾರುತ್ತಿದ್ದ ನೀರಿನ ಟ್ಯಾಂಕರನ್ನು ಬಿಟ್ಟು, ಕೇವಲ ಪೈಪನ್ನು ವಶಪಡಿಸಿಕೊಂಡು ದಂಧೆಕೋರರ ವಿರುದ್ಧ ಕ್ರಮಕೈಗೊಳ್ಳದೆ ಸುಮ್ಮನಾಗಿದ್ದರು.

    ಅಧಿಕಾರಿಗಳ ಈ ನಿರ್ಲಕ್ಷ್ಯತನವನ್ನು ಪ್ರಶ್ನಿಸಿ ಗ್ರೂಪ್ ಅಡ್ಮಿನ್ ಮಲ್ಲಿಕಾರ್ಜುನ್, ಕೋರ್ಟ್ ಮೊರೆ ಹೋಗಿದ್ದರು. ತಾವು ಕ್ರಿಯೆಟ್ ಮಾಡಿದ `ಚಿಕ್ಕನಾಯಕನಹಳ್ಳಿ ಅಭಿವೃದ್ದಿಗಾಗಿ’ ಎಂಬ ಗ್ರೂಪ್ ಲ್ಲಿ ಅಧಿಕಾರಿಗಳೂ ಸದಸ್ಯರಾಗಿದ್ದಾರೆ. ದಂಧೆಕೋರರು ಕೆರೆಯ ನೀರು ಕದ್ದುಮಾರುತ್ತಿರುವ ಎಲ್ಲಾ ಮಾಹಿತಿಯನ್ನು ಅವರಿಗೆ ಕೊಟ್ಟಿದ್ದೇವೆ. ನೀರು ಕಳ್ಳತನ ಆಗುತ್ತಿರುವುದನ್ನು ಗ್ರೂಪ್ ನಲ್ಲಿ ನಡೆಯುತ್ತಿರುವ ಚರ್ಚೆಯಲ್ಲಿ ಒಪ್ಪಿಕೊಂಡಿದ್ದಾರೆ. ಆದರೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ವಾಟ್ಸಪ್ ಚರ್ಚೆಯ ಸ್ಕ್ರಿನ್ ಶಾಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಮನವರಿಕೆ ಮಾಡಿಕೊಟ್ಟಿದ್ದರು.

    ಈ ಸಾಕ್ಷ್ಯವನ್ನು ಪರಿಗಣಿಸಿದ ನ್ಯಾಯಾಲಯ ಚಿಕ್ಕನಾಯಕನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮುಖ್ಯಾಧಿಕಾರಿ ಮಂಜುಳಾದೇವಿ, ಪರಿಸರ ಎಂಜಿನಿಯರ್ ಚಂದ್ರಶೇಖರ್, ಪಿಎಸೈ ಮಂಜುನಾಥ್ ಹಾಗೂ ಸಿಪಿಐ ಮಾರಪ್ಪ ಸೇರಿ ಒಟ್ಟು ಐದು ಜನ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ತಿಪಟೂರು ಡಿವೈಎಸ್ ಪಿಗೆ ತಾಕೀತು ಮಾಡಿ ಆದೇಶ ಹೊರಡಿಸಿದೆ. ಇದರಂತೆ ಇದೀಗ ಐವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

  • ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಉಡುಪಿ: ಶಿರೂರು ಸ್ವಾಮೀಜಿ ಅವರು ತುಳುವಿನಲ್ಲಿ ಮಾತನಾಡಿರುವ ವಾಟ್ಸಪ್ ವಾಯ್ಸ್ ನೋಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಜ್ಜರಿಗೆ ಒಂದು ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್ ಆಗುತ್ತೆ. 50 ಲಕ್ಷ ಪಲಿಮಾರು ಸ್ವಾಮೀಜಿಗೆ. 50 ಲಕ್ಷ ಅವರಿಗೆ ಕೊಡಬೇಕಂತೆ ಎಂದು ಮಾತನಾಡಿದ್ದಾರೆ. ಸೋದೆ ಸ್ವಾಮೀಜಿ ವಿಶ್ವವಲ್ಲಭ ತೀರ್ಥಶ್ರಿಗಳ ಹೆಸರು ಪ್ರಸ್ತಾಪ ಮಾಡಿದ್ದಾರೆ.

    ಅವರ ಎಂಟು ಸಾವಿರ ಭಕ್ತರಿಂದ ಪ್ರತಿ ಮನೆಯಿಂದ ಒಂದು ಪವನ್ ಚಿನ್ನ ಒಟ್ಟುಗೂಡಿಸ್ತಾರಂತೆ. ಆದ್ರೆ ಆಡಿಯೋದಲ್ಲಿ ಯಾವುದೂ ಸ್ಪಷ್ಟ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಯಾರಿಗೆ ಈ ಆಡಿಯೋ ಕಳುಹಿಸಿದ್ದಾರೋ ಎಂಬ ಬಗ್ಗೆ ಮಾಹಿತಿಯಿಲ್ಲ.

    ಪಟ್ಟದ ದೇವರನ್ನು ಮರಳಿ ನೀಡುವ ವಿಚಾರದಲ್ಲಿ ವ್ಯವಹಾರ ಮಾತುಕತೆ ನಡೆದಿತ್ತಾ? ಅಥವಾ ಯಾವುದೊ ಮಹತ್ವದ ಯೋಜನೆಗೆ ಹಣ ಸಂಗ್ರಹಿಸುವ ಬಗ್ಗೆ ನಡೆದ ಮಾತುಕತೆಯೋ ಸ್ಪಷ್ಟವಾಗಿಲ್ಲ. ಆಡಿಯೊದ ಮೂಲ ತನಿಖೆ ಮಾಡಿದ್ರೆ ಸಾಕಷ್ಟು ವಿಚಾರ ಬೆಳಕಿಗೆ ಬರುವ ಸಾಧ್ಯತೆ ಇದೆ.

    ಶಿರೂರು ಶ್ರೀ ವಾಟ್ಸಾಪ್ ವಾಯ್ಸ್ ನೋಟ್:

    ಆಗ ನೋಡಿದೆ ನಿನ್ನ ವಾಟ್ಸಪ್…
    ಭಾರಿ ಖುಷಿ ಆಯ್ತು.
    ಅಜ್ಜರದ್ದು ಒಂದು ಡಿಮ್ಯಾಂಡ್ ಉಂಟು ಮಾರಾಯಾ.
    ಅವರಿಗೆ ಒಂದು ಕೋಟಿ ಕೊಡಬೇಕಂತೆ.
    ಐವತ್ತು ಲಕ್ಷ ಪಲಿಮಾರು ಸ್ವಾಮೀಜಿಗೆ ಕೊಡಬೇಕಂತೆ.
    ಐವತ್ತು ಲಕ್ಷ ಅವರಿಗೆ (ಪೇಜಾವರ?) ಬೇಕಂತೆ.
    ಆಮೇಲೆ ಈ ಮ್ಯಾಟರ್ ಫಿನೀಷ್ ಅಂತೆ.

    ಆಮೇಲೆ ಏನೂಂತ ಅಂದ್ರೆ… ಕರ್ನಾಟಕದಲ್ಲಿ ಸೋದೆ ಮಠದ ಶಿಷ್ಯಂದಿರ ಒಟ್ಟು ಎಂಟು ಸಾವಿರ ಮನೆ ಉಂಟಂತೆ. ಎಂಟು ಸಾವಿರ ಮನೆಗೆ ಒಂದೊಂದು ಮನೆಯಿಂದ ಒಂದೊಂದು ಪವನ್ ಚಿನ್ನ ವ್ಯವಸ್ಥೆ ಮಾಡಿ ಕೊಡುತ್ತೇನೆ ಅಂತ ಹೇಳಿದ್ದಾನೆ. ವಿಶ್ವವಲ್ಲಭ (ಸೋದೆ ಮಠಾಧೀಶರು) ಹೇಳಿದ್ದಾನೆ. ಅದನ್ನು ಇವರು ಬೇಡುತ್ತಿದ್ದಾರೆ.

    ವಿಷಯ ಇವತ್ತು ಬೆಳಗ್ಗೆ ಗೊತ್ತಾಯ್ತು. ಇಷ್ಟೇ ವಿಷಯ, ಎಲ್ಲರಿಗೂ ತಿಳಿಸು ಆಯ್ತಾ ಅಂತ ಹೇಳಿದ್ದಾರೆ.

  • ಅಮ್ಮ ಬಂದ್ರು ಅಂತಾ ಪತ್ನಿ ಪಾದ ತೊಳೆದಿದ್ದ ನೀರನ್ನೇ ತಲೆ ಮೇಲೆ ಹಾಕ್ಕೊಂಡ- ವಿಡಿಯೋ ವೈರಲ್

    ಅಮ್ಮ ಬಂದ್ರು ಅಂತಾ ಪತ್ನಿ ಪಾದ ತೊಳೆದಿದ್ದ ನೀರನ್ನೇ ತಲೆ ಮೇಲೆ ಹಾಕ್ಕೊಂಡ- ವಿಡಿಯೋ ವೈರಲ್

    ಮುಂಬೈ: ಭಯ ಎನ್ನುವ ಸಾರ್ವತ್ರಿಕ ಸಮಸ್ಯೆ. ಅದರಲ್ಲೂ ಅತ್ತೆಯ ಭಯ ಜಗತ್ತಿನ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ ಎನ್ನುವ ಸಂದೇಶ ಹೊತ್ತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪತ್ನಿಯ ಪಾದಗಳನ್ನು ತೊಳೆಯುತ್ತಿರುವ ವ್ಯಕ್ತಿಯೊಬ್ಬ ತನ್ನ ತಾಯಿಯು ಮನೆ ಒಳಗೆ ಬಂದಿದ್ದು ತಿಳಿದು ಹೆದರಿ ತಬ್ಬಿಬ್ಬಾಗುತ್ತಾನೆ. ಅವನ ಹಾಗೂ ಪತ್ನಿಯ ವರ್ತನೆ ನೋಡುಗರಲ್ಲಿ ಭಾರೀ ನಗುವನ್ನು ತರಿಸುತ್ತದೆ. ಅಲ್ಲದೇ ಈ ವಿಡಿಯೋ ಕೆಲವೊಬ್ಬರ ಅನುಭವವನ್ನು ಕೆರಳಿಸುತ್ತದೆ.

    ವಿಡಿಯೋದಲ್ಲಿ ಏನಿದೆ?:
    ಮನೆಯಲ್ಲಿ ಯಾರು ಇಲ್ಲದಿರುವಾಗ ವ್ಯಕ್ತಿಯೊಬ್ಬ ಟಬ್ ನಲ್ಲಿ ನೀರು ತುಂಬಿಕೊಂಡು ಅದರಲ್ಲಿ ತನ್ನ ಹೆಂಡತಿಯ ಪಾದಗಳನ್ನು ತೊಳೆಯುತ್ತಿರುತ್ತಾನೆ. ದಂಪತಿ ಏಕಾಂತದಲ್ಲಿ ಏನ್ನನೋ ಮಾತನಾಡುತ್ತ ಕಾಲ ಕಳೆಯುತ್ತಿರುತ್ತಾರೆ. ಈ ವೇಳೆ ಸಡನ್ ಆಗಿ ಅತ್ತೆ ಒಳಗೆ ಬರುತ್ತಾರೆ. ಅತ್ತೆ ಬಂದಿರುವುದನ್ನು ಗಮನಿಸಿದ ಸೊಸೆ ತನ್ನ ಕಾಲನ್ನು ಟಬ್ ನಿಂದ ಹಿಂದಕ್ಕೆ ತಗೆಯುತ್ತಾಳೆ. ಇತ್ತ ವ್ಯಕ್ತಿಯೂ ಕೂಡ ತನ್ನ ತಾಯಿಗೆ ಯಾವುದೇ ರೀತಿಯ ಸಂದೇಹ ಬಾರದಿರಲಿ ಎಂದು ಹೆದರಿಕೆಯಿಂದ ಪತ್ನಿಯ ಪಾದ ತೊಳೆದ ನೀರನ್ನು ತಲೆ ಮೇಲೆ ಹಾಕಿಕೊಳ್ಳುತ್ತಾನೆ. ಇದಕ್ಕೆ ಪತ್ನಿಯೂ ಕೂಡ ಸಹಾಯ ಮಾಡುತ್ತಾಳೆ.

    https://twitter.com/FarooqFantastic/status/1001350970234818560

    ಈ ದೃಶ್ಯವು ಕೆಲವರಿಗೆ ಅಷ್ಟೊಂದು ಪರಿಣಾಮಕಾರಿ ಅಲ್ಲ ಅನಿಸಬಹುದು. ಆದರೆ ಯಾವುದೇ ತಾಯಿಯು ಮಗ ಹೀಗೆ ಮಾಡುವುದನ್ನು ಇಷ್ಟಪಡುವುದಿಲ್ಲ. ಅಲ್ಲದೇ ಸೊಸೆ ಕೂಡಾ ಅತ್ತೆಗೆ ಹೆದರುತ್ತಾಳೆ ಎನ್ನುವುದನ್ನು ವಿಡಿಯೋ ಹೇಳುತ್ತದೆ.

    ಸದ್ಯ ಈ ವಿಡಿಯೋ ಫೇಸ್ ಬುಕ್, ವ್ಯಾಟ್ಸಪ್, ಟ್ವೀಟ್ಟರ್ ಸೇರಿದಂತೆ ಅನೇಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

  • ಮೊಬೈಲ್ ನಲ್ಲಿ ಬ್ಯುಸಿಯಾಗಿ ಊಟ ರೆಡಿ ಮಾಡಲು ಮರೆತಿದ್ದ ಪತ್ನಿಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

    ಮೊಬೈಲ್ ನಲ್ಲಿ ಬ್ಯುಸಿಯಾಗಿ ಊಟ ರೆಡಿ ಮಾಡಲು ಮರೆತಿದ್ದ ಪತ್ನಿಯನ್ನು ಬರ್ಬರವಾಗಿ ಕೊಂದೇ ಬಿಟ್ಟ!

    ಕೋಲ್ಕತ್ತಾ: ಸಾಮಾಜಿಕ ಜಾಲತಾಣ ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಪರಿಣಾಮ ಮಹಿಳೆಯೊಬ್ಬರು ಮಧ್ಯಾಹ್ನ ಅಡುಗೆ ಮಾಡಲು ಮರೆತಿದ್ದರಿಂದ ಸಿಟ್ಟುಗೊಂಡ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆಯೊಂದು ನಡೆದಿದೆ.

    ಈ ಘಟನೆ ಗುರುವಾರ ಕೋಲ್ಕತ್ತಾದ ಚೆಟ್ಲಾ ಪ್ರದೇಶದ ಅಲಿಪೊರೆ ರಸ್ತೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಪತಿ ಸುರಜಿತ್ ಪಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತಿ ಆತನ 36 ವರ್ಷದ ಪತ್ನಿಗೆ ಅಕ್ರಮ ಸಂಬಂಧವಿದೆ. ಹೀಗಾಗಿ ಪತ್ನಿ ಟುಂಪಾ ತನ್ನ ಹೆಚ್ಚಿನ ಸಮಯವನ್ನು ಸಾಮಾಜಿಕ ಜಾಲತಾಣದಲ್ಲೇ ಕಳೆಯತ್ತಾಳೆ ಅಂತ ಶಂಕಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಏನಿದು ಘಟನೆ?:
    ಜನವರಿ 24ರಂದು ಸುರಜಿತ್ ಮಧ್ಯಾಹ್ನ ಊಟಕ್ಕಾಗಿ ಮನೆಗೆ ಬಂದಿದ್ದಾನೆ. ಈ ವೇಳೆ ಪತ್ನಿ ತನ್ನ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದಳು. ಹೀಗಾಗಿ ಅಡುಗೆ ಮಾಡುವುದನ್ನು ಮರೆತಿದ್ದಳು. ಪರಿಣಾಮ ಸಿಟ್ಟುಗೊಂಡ ಪತಿರಾಯ ಚಾಕು ತೋರಿಸಿ ಬೆದರಿಸಿದ್ದಾನೆ. ಆದ್ರೂ ಆಕೆ ಮೊಬೈಲ್ ನಲ್ಲೇ ಬ್ಯುಸಿಯಾಗಿದ್ದಳು. ಇದರಿಂದ ಮತ್ತಷ್ಟು ಕೋಪಗೊಂಡ ಪತಿ ಸುರಜಿತ್ ತನ್ನ ಕೈಯಲ್ಲಿದ್ದ ಚಾಕುವಿನಿಂದ ಆಕೆಯ ತಲೆಗೆ ಹಲವು ಬಾರಿ ಇರಿದ್ದಾನೆ. ಅಲ್ಲದೇ ಟವೆಲ್ ನಿಂದ ಆಕೆಯ ಕುತ್ತಿಗೆಗೆ ಬಿಗಿದು ಕೊಲೆಗೈದಿದ್ದಾನೆ.

    ಹೀಗೆ ಮಾಡಿದ ಬಳಿಕ ತಾನೇನು ಮಾಡುತ್ತಿದ್ದೇನೆಂದು ತಿಳಿದ ಸುರಜಿತ್, ತನ್ನ ಕೈಯ ಮಣಿಕಟ್ಟನ್ನು ಕುಯ್ದುಕೊಳ್ಳುವ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಇದು ಸಾಧ್ಯವಾಗದಾಗ ನಂತರ ಗಾಯಗಳಾದ ಕಡೆ ಬ್ಯಾಂಡೇಜ್ ಸುತ್ತಿದ್ದಾನೆ. ಅಲ್ಲದೇ ನಗರದ ಮೂಲಕ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಈತನ ಮೇಲೆ ಅನುಮಾನಗೊಂಡ ಪೊಲೀಸರು ಬಂಧಿಸಿದ್ದಾರೆ.

     

    ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅದರಲ್ಲಿ ಓರ್ವ ಮದುವೆಗೆಂದು ನಗರದ ಕಡೆ ತೆರಳಿದ್ದನು. ಇನ್ನೋರ್ವ ಕಾಲೇಜು ಓದುತ್ತಿದ್ದು, ಕಾಲೇಜಿನಿಂದ ಬಂದ ಬಳಿಕ ಕೊಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವ ತನ್ನ ತಾಯಿಯ ದೇಹವನ್ನು ನೋಡಿ ದಂಗಾಗಿದ್ದಾನೆ.

    ಪತ್ನಿ ಟುಂಪಾ ಫೇಸ್ ಬುಕ್ ಮತ್ತು ವಾಟ್ಸಪ್ ನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದುದರಿಂದ ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿದೆಯೆಂದು ಶಂಕಿಸಿ ಪತಿ ಸರ್ಜಿತ್ ಕೃತ್ಯ ಎಸಗಿರಬಹುದು ಅಂತ ಸ್ಥಳಿಯ ನಿವಾಸಿಗಳು ತಿಳಿಸಿದ್ದಾರೆ. ಕೆಲ ದಿನಗಳ ನಾದಿನಿ ಜೊತೆ ಗಂಡನಿಗೆ ಅಕ್ರಮ ಸಂಬಂಧ ಇರುವ ವಿಚಾರ ಟುಂಪಾಗೆ ಗೊತ್ತಾಗಿದೆ ಎನ್ನಲಾಗಿದೆ.

  • ಬಿಎಸ್‍ವೈ, ಶೋಭಾ ಕರಂದ್ಲಾಜೆ ಬಗ್ಗೆ ಬಿಜೆಪಿಯವರಿಂದ್ಲೇ ವಾಟ್ಸಪ್‍ನಲ್ಲಿ ಅವಹೇಳನ- ಕೇಸ್ ದಾಖಲು

    ಬಿಎಸ್‍ವೈ, ಶೋಭಾ ಕರಂದ್ಲಾಜೆ ಬಗ್ಗೆ ಬಿಜೆಪಿಯವರಿಂದ್ಲೇ ವಾಟ್ಸಪ್‍ನಲ್ಲಿ ಅವಹೇಳನ- ಕೇಸ್ ದಾಖಲು

    ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿಯಿಂದಲೇ ಅವಮಾನ ಮಾಡಲಾಗಿದೆ.

    ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಬರಹ ಹಾಗೂ ಇಬ್ಬರೂ ಜೊತೆಯಲ್ಲಿರುವ ಅಶ್ಲೀಲ ಫೋಟೋವೊಂದು ವಾಟ್ಸಪ್ ನಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಕಾವೇರಿ-ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ ಕಿಶೋರ್ ಕುಮಾರ್ ವಿರುದ್ಧ ಬಿಜೆಪಿಯ ಕುಂದಾಪುರ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ದೂರು ದಾಖಲಿಸಿದ್ದಾರೆ.

    ಪರಿವರ್ತನಾ ಸಮಾವೇಶದ ಸಂದರ್ಭದಲ್ಲಿ ಬಿಜೆಪಿಯೊಳಗೆ ಜಟಾಪಟಿ ನಡೆದಿತ್ತು. ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್ ಅವರು ಬಿಜೆಪಿ ಸೇರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ದೂರು ದಾಖಲಾಗಿರೋ ಕಿಶೋರ್, ರಾಜೇಶ್ ಹಾಲಾಡಿ ವಿರುದ್ಧ ಗುಂಪಿನ ನಾಯಕರಾಗಿದ್ದಾರೆ ಎನ್ನಲಾಗಿದೆ.

     

  • ಬಾಬಾ ರಾಮ್‍ದೇವ್ ಅಪಘಾತದ ಬಗ್ಗೆ ವದಂತಿ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

    ಬಾಬಾ ರಾಮ್‍ದೇವ್ ಅಪಘಾತದ ಬಗ್ಗೆ ವದಂತಿ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

    ಹರಿದ್ವಾರ್: ಯೋಗ ಗುರು ಬಾಬಾ ರಾಮ್ ದೇವ್ ಮುಂಬೈ-ಪುಣೆ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದಾರೆ ಎಂಬ ಸುದ್ದಿಯೊಂದು ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅಲ್ಲದೆ ಅಪಘಾತ ಸಂಭವಿಸಿದೆ ಎಂದು ನಂಬಿಸಲು ಕೆಲವು ಚಿತ್ರಗಳನ್ನೂ ಕೂಡ ಹಾಕಲಾಗಿತ್ತು. ಆದ್ರೆ ಇದು ಸುಳ್ಳು ಸುದ್ದಿ. ನಾನು ಆರೋಗ್ಯವಾಗಿದ್ದೇನೆ. ಭಕ್ತರು ವದಂತಿಗಳಿಗೆ ಕಿವಿಗೊಡಬೇಡಿ ಅಂತಾ ಸ್ವತಃ ಬಾಬಾ ರಾಮ್‍ದೇವ್ ಸ್ಪಷ್ಟ ಪಡಿಸಿದ್ದಾರೆ.

    ಟ್ವೀಟ್ ಮೂಲಕ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಹರಿದ್ವಾರದಲ್ಲಿದ್ದು, ಸಾವಿರಾರು ಭಕ್ತರಿಗೆ ಯೋಗ ಶಿಬಿರ ನಡೆಸಿದೆ. ನಾನು ಸುರಕ್ಷಿತನಾಗಿದ್ದೇನೆ, ಆರೋಗ್ಯವಾಗಿದ್ದೇನೆ. ವದಂತಿಗಳನ್ನ ನಂಬಬೇಡಿ ಅಂತಾ ಭಕ್ತರಿಗೆ ಮನವಿ ಮಾಡಿದ್ದಾರೆ.

    ಈ ಬಗ್ಗೆ ಹೆದ್ದಾರಿ ನಿಯಂತ್ರಣ ಅಧಿಕಾರಿಗಳು ಕೂಡ ಪ್ರತಿಕ್ರಿಯಿಸಿದ್ದು, ಮುಂಬೈ-ಪುಣೆ ಹೆದ್ದಾರಿಯಲ್ಲಿ ಇಂತಹ ಯಾವುದೇ ಅಪಘಾತ ಸಂಭವಿಸಿಲ್ಲ. ಇದೊಂದು ಸುಳ್ಳು ಸುದ್ದಿ ಅಂತಾ ತಿಳಿಸಿದ್ದಾರೆ.

    ಬಾಬಾ ರಾಮ್‍ದೇವ್ ಅವರನ್ನ ಸ್ರೆಚ್ಚರ್‍ನಲ್ಲಿ ಕೊಂಡೊಯ್ಯಲಾಗುತ್ತಿರುವ ಫೋಟೋಗಳು 2011ನೇ ವರ್ಷದ್ದಾಗಿದೆ. ಈ ಹಿಂದೆ ಬಿಹಾರದಲ್ಲಿ ಬಾಬಾ ರಾಮ್ ದೇವ್ ಅಪಘಾತಕ್ಕೀಡಾಗಿದ್ದಾಗ ತಗೆಯಲಾದ ಈ ಫೋಟೋಗಳನ್ನು ಬಳಸಿಕೊಂಡು ಕಿಡಿಗೇಡಿಗಳು ಈ ವದಂತಿಯನ್ನ ಹರಡಿದ್ದಾರೆ.

    https://youtu.be/83aa2bwBgTw

  • ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

    ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

    ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ.

    ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು ದೂರವಾಣಿ ಮತ್ತು ವಾಟ್ಸಪ್ ಮೂಲಕ ಬೆದರಿಕೆಗಳು ಬರುತ್ತಿವೆ. ಈ ಬೆದರಿಕೆಗಳು ಲೀಡರ್ ಟೈಟಲ್ ವಿವಾದದ ನಂತರ ಬರುತ್ತಿವೆ. ಅಲ್ಲದೇ ವಾಟ್ಸಪ್ ಗ್ರೂಪ್ ಮಾಡಿ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿತ್ತು. ಆದ್ರೆ ಕ್ರಮ ಕೈಗೊಳ್ಳಲು ಚಲನಚಿತ್ರ ವಾಣಿಜ್ಯ ಮಂಡಳಿ ಹಿಂದೇಟು ಹಾಕುತ್ತಿದೆ ಅಂತಾ ದೂರಿನಲ್ಲಿ ಹೇಳಿದ್ದಾರೆ.

    ಇಂತಹವರ ಬಗ್ಗೆ ಕ್ರಮಕೈಗೊಂಡು ರಕ್ಷಣೆ ನೀಡುವಂತೆ ಮನವಿ ಮಾಡಿದ ನಿರ್ದೇಶಕ ರಮೇಶ್ ನಗರ ಪೊಲೀಸ್ ಆಯುಕ್ತರ ಜೊತೆ ಮನವಿ ಮಾಡಿದ್ದಾರೆ. ವಾಟ್ಸಪ್ ಮಾಡಿದ ಗ್ರೂಪಲ್ಲಿ ಶಿವಣ್ಣ ಫೋಟೋ ಡಿಪಿ ಹಾಕಿಕೊಂಡು ಕಿಡಿಕೇಡಿಗಳು ಬೆದರಿಕೆ ಹಾಕುತ್ತಿದ್ದಾರೆ ಅಂತಾ ಹೇಳಿದ್ದಾರೆ.

    ಇದನ್ನೂ ಓದಿ: ಲೀಡರ್ ಟೈಟಲ್ ಯಾರದ್ದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿತು

  • ಅಕ್ರಮ ಮರಳು ಸಾಗಾಣಿಕೆ- ಪಿಎಸ್‍ಐ ಲಂಚ ಸ್ವೀಕರಿಸಿದ ವಿಡಿಯೋ ವೈರಲ್

    ಅಕ್ರಮ ಮರಳು ಸಾಗಾಣಿಕೆ- ಪಿಎಸ್‍ಐ ಲಂಚ ಸ್ವೀಕರಿಸಿದ ವಿಡಿಯೋ ವೈರಲ್

    ಕಾರವಾರ: ಅಕ್ರಮವಾಗಿ ಮರಳು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಠಾಣೆಯ ಪಿಎಸ್‍ಐ ಲಂಚ ಸ್ವೀಕರಿಸಿ ಮತ್ತೆ ಬೇಡಿಕೆ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಬನವಾಸಿ ಠಾಣಾ ಪಿಎಸ್‍ಐ ಸುರೇಖಾ ಬಾಡ್ಕರ್ ನಾಲ್ಕು ದಿನಗಳ ಹಿಂದೆ ಅಕ್ರಮ ಮರಳು ಸಾಗಿಸುತಿದ್ದ ಲಾರಿಯನ್ನು ಹಿಡಿದು ಲಾರಿ ಮಾಲೀಕನಿಂದ 10 ಸಾವಿರ ರೂ. ಡಿಮ್ಯಾಂಡ್ ಮಾಡಿದ್ದರು. ಲಾರಿ ಮಾಲೀಕ 4 ಸಾವಿರ ಹಣ ನೀಡಿ ಉಳಿದ 6 ಸಾವಿರ ಹಣವನ್ನು ಠಾಣೆಯಲ್ಲಿ ನೀಡಿದ್ದಾನೆ.

    ಠಾಣೆಯಲ್ಲಿ ಲಂಚ ನೀಡುವಾಗ ತನ್ನ ಮೊಬೈಲ್‍ನಲ್ಲಿ ದೃಶ್ಯಾವಳಿಯನ್ನು ಸೆರೆ ಹಿಡಿದು ವಾಟ್ಸಪ್ ಮೂಲಕ ಹರಿಬಿಟ್ಟಿದ್ದಾನೆ. ಈಗ ಜಿಲ್ಲೆಯಾದ್ಯಾಂತ ಈ ವಿಡಿಯೋ ವೈರಲ್ ಆಗಿದೆ.

    https://www.youtube.com/watch?v=v8rNFVfckHk&feature=youtu.be

  • ತಾಯಿಯನ್ನು ನಿಂದಿಸಿದ್ದಕ್ಕೆ ಅರೆಬೆತ್ತಲೆಗೊಳಿಸಿ ನಡುರೋಡಲ್ಲೇ  ಹಲ್ಲೆ

    ತಾಯಿಯನ್ನು ನಿಂದಿಸಿದ್ದಕ್ಕೆ ಅರೆಬೆತ್ತಲೆಗೊಳಿಸಿ ನಡುರೋಡಲ್ಲೇ ಹಲ್ಲೆ

    – ಕಾನೂನು ಕೈಗೆತ್ತಿಕೊಂಡ ಯುವಕರು

    ಗದಗ: ತಾಯಿಯನ್ನು ನಿಂದಿಸಿದ್ದಕ್ಕೆ ಸಿಟ್ಟಿಗೆದ್ದ ಮಕ್ಕಳು ಮತ್ತು ಕುಟುಂಬಸ್ಥರು ಆರೋಪಿಗಳನ್ನು ಅರೆಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಗದಗದ ನರಗುಂದಪಟ್ಟದಲ್ಲಿ ನಡೆದಿದೆ.

    ನರಗುಂದ ಪಟ್ಟಣದ ಮಲ್ಲಿಕ್ ಜಾನ್ ನಲಬಂದ್, ಖಾದಿರ್ ಸಾಬ್ ಮಲ್ಲಸಮುದ್ರ, ಗೌಸುಸಾಬ್ ರಾಹುತ್ ಮೇಲೆ ಮಾರಣಾಂತಿಕ ಹಲ್ಲೆಗೊಳಗಾದವರು. ಬಸುರಾಜ್ ಗಡೇಕರ್, ಸಂಜೀವ್ ನಲವಡಿ, ತವನಪ್ಪ ಸಂಬಳ ಹಲ್ಲೆ ಮಾಡಿದವರು ಅಂತ ಗೊತ್ತಾಗಿದೆ.

    ನಡೆದಿದ್ದೇನು: ತಾಯಿಯನ್ನು ಹಿಯಾಳಿಸಿ ಮಾತನಾಡಿದ್ದ ವೀಡಿಯೋವೊಂದನ್ನು ಆರೋಪಿಗಳು ವಾಟ್ಸಾಪ್‍ನಲ್ಲಿ ಹಾಕಿದ್ರು. ಇದರಿಂದ ಸಿಟ್ಟುಗೊಂಡ ಮಕ್ಕಳು ಹಾಗೂ ಕುಟುಂಬಸ್ಥರು ರಸ್ತೆ ತುಂಬೆಲ್ಲಾ ಮೂವರನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪಟ್ಟಣದ ಮಾರುಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಪೊಲೀಸ್ ಠಾಣೆಯವರೆಗೂ ಬೆಲ್ಟ್ ನಿಂದ ಹಿಗ್ಗಾಮುಗ್ಗಾ ಥಳಿಸಿ ಆರೋಪಿಗಳನ್ನು ಪೊಲೀಸರು ಕೈಗೆ ನೀಡಿದ್ದಾರೆ.

    ಸದ್ಯಕ್ಕೆ ಹಲ್ಲೆಗೊಳಗಾದ ಯುವಕರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ ಮೂವರನ್ನ ಗದಗ ಜಿಲ್ಲೆ ನರಗುಂದ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    https://www.youtube.com/watch?v=hM4ppiA4l3Y&feature=youtu.be