Tag: wedding

  • ಕೃತಿ ಕರಬಂಧ ಮದುವೆಗೆ ಯಾರಿಗೆಲ್ಲಾ ಆಹ್ವಾನವಿದೆ?

    ಕೃತಿ ಕರಬಂಧ ಮದುವೆಗೆ ಯಾರಿಗೆಲ್ಲಾ ಆಹ್ವಾನವಿದೆ?

    ಶ್ (Yash) ನಾಯಕಿ, ಗೂಗ್ಲಿ ಬೆಡಗಿ ಕೃತಿ ಕರಬಂಧ (Kriti Kharbanda) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೇ ಮಾರ್ಚ್ 15ಕ್ಕೆ ದೆಹಲಿಯಲ್ಲಿ ಅದ್ಧೂರಿಯಾಗಿ ಪುಲ್ಕಿತ್ ಸಾಮ್ರಾಟ್ (Pulkit Samrat) ಜೊತೆ ಮದುವೆಯಾಗುತ್ತಿದ್ದಾರೆ. ಹಾಗಾದ್ರೆ ಯಾರಿಗೆಲ್ಲಾ ಕೃತಿಯ ಮದುವೆಗೆ ಆಹ್ವಾನವಿದೆ. ಯಾರೆಲ್ಲಾ ‘ಗೂಗ್ಲಿ’ (Googly) ನಟಿಯ ಮದುವೆಗೆ ಹಾಜರಿ ಹಾಕಲಿದ್ದಾರೆ.

    ಹಲವು ವರ್ಷಗಳ ಪ್ರೀತಿಗೆ ಮದುವೆಯ (Wedding) ಮುದ್ರೆ ಒತ್ತಲು ನಟಿ ಸಜ್ಜಾಗಿದ್ದಾರೆ. ಇನ್ನೂ ಬಾಲಿವುಡ್ ಸ್ಟಾರ್‌ಗಳಾದ ರಿಚಾ ಚಡ್ಡಾ, ಅಲಿ ಫಜಲ್, ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್, ಜೋಯಾ ಅಕ್ತರ್, ರಿತೇಶ್ ಸಿದ್ವಾನಿ, ಲವ್ ರಂಜನ್ ಸೇರಿದಂತೆ ಆಪ್ತರನ್ನು ಕೃತಿ-ಪುಲ್ಕಿತ್ ಜೋಡಿ ಮದುವೆಗೆ ಆಮಂತ್ರಣ ನೀಡಿದ್ದಾರೆ. ಇದನ್ನೂ ಓದಿ:‘ಕಾಂತಾರ’ ಪ್ರೀಕ್ವೇಲ್‌ನಲ್ಲಿ ರಿಷಬ್ ಶೆಟ್ಟಿ ಜೊತೆ ಜ್ಯೂ.ಎನ್‌ಟಿಆರ್

    ಮಾರ್ಚ್ 13ರಂದು ಮೆಹಂದಿ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 14ರಂದು ಹಳದಿ ಶಾಸ್ತ್ರ ಮತ್ತು ಕಾಕ್‌ಟೈಲ್ ಪಾರ್ಟಿ ಆಯೋಜನೆ ಮಾಡಲಾಗಿದೆ. ಮಾರ್ಚ್ 15ರಂದು ಕೃತಿ-ಪುಲ್ಕಿತ್ ಮದುವೆ ನಡೆಯಲಿದೆ. ಈಗ ಈ ಜೋಡಿ ಮದುವೆ ಆಗುತ್ತಿರುವ ಸ್ಥಳದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್‌ನಲ್ಲಿ ಈ ಜೋಡಿ ಹಸಮಣೆ ತುಳಿಯಲಿದ್ದಾರೆ.

    ಕೃತಿ ಕರಬಂಧ ಹಾಗೂ ಪುಲ್ಕಿತ್ ಸಮರ್ಥ್ ದೆಹಲಿಯಲ್ಲಿರುವ ಐಟಿಸಿ ಗ್ರ‍್ಯಾಂಡ್ ಐಷಾರಾಮಿ ರೆಸಾರ್ಟ್‌ನಲ್ಲಿ ಮದುವೆ ಆಗುತ್ತಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಈ ರೆಸಾರ್ಟ್ 300 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದೆ. ಈ ಭವ್ಯವಾದ ರೆಸಾರ್ಟ್ ಅರಮನೆಯ ವಾಸ್ತುಶಿಲ್ಪವನ್ನು ಹೊಂದಿದೆ. ಪ್ರಾಚೀನ ಶೈಲಿಯಲ್ಲಿ ಸುಂದರವಾದ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ.

    ಗ್ರ‍್ಯಾಂಡ್ ಭಾರತ್ ರೆಸಾರ್ಟ್‌ನಲ್ಲಿ ಸುಮಾರು 4 ಪ್ರೆಸಿಡೆಂನ್ಸಿಯಲ್ ವಿಲ್ಲಾವಿದೆ. ಐಷಾರಾಮಿ ಸ್ಪಾಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಇನ್ನೂ ಕೃತಿ, ಪುಲ್ಕಿತ್ ಇಬ್ಬರೂ ದೆಹಲಿಯಲ್ಲೇ ಹುಟ್ಟಿ ಬೆಳೆದಿದ್ದಾರೆ. ಇವರ ಕುಟುಂಬ ದೆಹಲಿಯಲ್ಲಿಯೇ ನೆಲೆಸಿರುವುದರಿಂದ ಇದೇ ಸೂಕ್ತ ಆಯ್ಕೆ ಎಂದು ಜೋಡಿ ನಿರ್ಧರಿಸಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ

    ಹಾಲಿವುಡ್, ಹಿಂದಿ ಸಿನಿಮಾ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಅವರು ಬಹುಕಾಲದ ಗೆಳೆಯನ  ಜೊತೆ ಮದುವೆಯಾಗಿದ್ದಾರೆ. ಮಾರ್ಚ್ 12ರಂದು ರಕ್ಷಿತ್ (Rakshit) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಮೀರಾ ಹಂಚಿಕೊಂಡಿದ್ದಾರೆ.

    ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮೊಂದಿಗೆ ಪ್ರತಿ ಜನ್ಮ ಬದುಕುತ್ತೇನೆ ಎಂದು ಮೀರಾ ಮದುವೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಝೈದ್ ಖಾನ್ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕನಿಂದ ಆ್ಯಕ್ಷನ್ ಕಟ್

    ಕನ್ನಡದ ‘ಅರ್ಜುನ್’ ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಅವರು ಮಾರ್ಚ್ 11ರಂದು ಮೆಹೆಂದಿ, ಸಂಗೀತ ಕಾರ್ಯಕ್ರಮದ ಜೊತೆ ಸೆಲೆಬ್ರೆಟಿ ಸ್ನೇಹಿತರಿಗೆ ಕಾಕ್‌ಟೈಲ್ ಪಾರ್ಟಿ ಆಯೋಜಿಸಿದ್ದರು. ಇಂದು (ಮಾ.12) ಅದ್ಧೂರಿಯಾಗಿ ಜೈಪುರನಲ್ಲಿ ಮದುವೆಯಾಗಿದ್ದಾರೆ.

    ಮುಂಬೈ ಬೆಡಗಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ಉದ್ಯಮಿ ರಕ್ಷಿತ್ ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆದಿದೆ. ಮೀರಾ ಮದುವೆ ಸಂಭ್ರಮದಲ್ಲಿ ಬಾಲಿವುಡ್ ನಟ-ನಟಿಯರು ಭಾಗಿಯಾಗಿದ್ದಾರೆ.

    ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ (Arjun Kannada Film) ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.

    ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ. ಇದನ್ನೂ ಓದಿ:ಪತಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ಯಾಮಿ ಗೌತಮ್

    ‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

  • ಮದುವೆ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ

    ಮದುವೆ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ

    ಹಾಲಿವುಡ್, ಹಿಂದಿ ಸಿನಿಮಾ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಮದುವೆ ಸಡಗರ ಜೋರಾಗಿದೆ. ಮಾರ್ಚ್ 12ಕ್ಕೆ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಮದುವೆ ಕಾರ್ಯಕ್ರಮದಲ್ಲಿ ಮೀರಾ ಮಿಂಚ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಕನ್ನಡದ ‘ಅರ್ಜುನ್’ (Arjun) ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಅವರು ಮದುವೆ ಸಂಭ್ರಮದಲ್ಲಿದ್ದಾರೆ. ಮಾರ್ಚ್ 11ರಂದು ಮೆಹೆಂದಿ, ಸಂಗೀತ ಕಾರ್ಯಕ್ರಮದ ಜೊತೆ ಸೆಲೆಬ್ರೆಟಿ ಸ್ನೇಹಿತರಿಗೆ ಕಾಕ್‌ಟೈಲ್ ಪಾರ್ಟಿ ಆಯೋಜಿಸಲಾಗಿದೆ. ಮಾರ್ಚ್ 12ರಂದು ಅದ್ಧೂರಿಯಾಗಿ ಮದುವೆ (Wedding) ಜರುಗಲಿದೆ.

    ಮುಂಬೈ ಬೆಡಗಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ಉದ್ಯಮಿ ರಕ್ಷಿತ್ ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆಯಲಿದೆ. ಮೀರಾ ಮದುವೆ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಕಿಯಾರಾ, ಪರಿಣಿತಿ ಚೋಪ್ರಾ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ‘ಅರ್ಜುನ್’ ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.

    ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.

    ‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

  • ‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ ಯಾವಾಗ, ಎಲ್ಲಿ?

    ‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ ಯಾವಾಗ, ಎಲ್ಲಿ?

    ನ್ನಡದ ನಟಿ, ಬಾಲಿವುಡ್ ಬೆಡಗಿ ಕೃತಿ ಕರಬಂಧ (Kriti Kharbanda) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬಹುಕಾಲದ ಗೆಳೆಯ ಪುಲ್ಕಿತ್ ಸಾಮ್ರಾಟ್ (Pulkit Samrat) ಜೊತೆ ಕೃತಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಾಗಾದ್ರೆ ಕೃತಿ ಯಾವಾಗ, ಎಲ್ಲಿ? ಇಲ್ಲಿದೆ ಮಾಹಿತಿ.

    ‘ಗೂಗ್ಲಿ’ ಬೆಡಗಿ ಕೃತಿ ಜೊತೆ ಪುಲ್ಕಿತ್ ಇದೇ ಮಾರ್ಚ್ 15ರಂದು ದೆಹಲಿಯಲ್ಲಿ ಗ್ರ‍್ಯಾಂಡ್ ಆಗಿ ಮದುವೆ (Wedding) ಆಗುತ್ತಿದ್ದಾರೆ. ಈ ಜೋಡಿ ತಮ್ಮ ಆಪ್ತರಿಗೆ, ಬಾಲಿವುಡ್‌ನ ನಟ-ನಟಿಯರಿಗೆ ಆಮಂತ್ರಣ ನೀಡಿದ್ದಾರೆ.

    ಈಗ ಈ ಜೋಡಿ ಮದುವೆ ಆಗುತ್ತಿರುವ ಸ್ಥಳದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್‌ನಲ್ಲಿ ಕೃತಿ ಮದುವೆಯಾಗುತ್ತಿದ್ದಾರೆ. ಮಾರ್ಚ್ 13ರಿಂದ ಮಾರ್ಚ್ 16ರವರೆಗೆ ಮದುವೆ ಶಾಸ್ತ್ರಗಳು ನಡೆಯಲಿದೆ. ಮಾರ್ಚ್‌ 15ರಂದು ಹೊಸ ಬಾಳಿಗೆ ಕಾಲಿಡಲಿದ್ದಾರೆ. ಇದನ್ನೂ ಓದಿ:Bigg Boss: ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನ

    ‘ಗೂಗ್ಲಿ’ ಬ್ಯೂಟಿ ಕೃತಿ ಕರಬಂಧ ಹಾಗೂ ಪುಲ್ಕಿತ್ ಸಮರ್ಥ್ ದೆಹಲಿಯಲ್ಲಿರುವ ಐಟಿಸಿ ಗ್ರ‍್ಯಾಂಡ್ ಐಷಾರಾಮಿ ರೆಸಾರ್ಟ್‌ನಲ್ಲಿ ಮದುವೆ ಆಗುತ್ತಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಈ ರೆಸಾರ್ಟ್ 300 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದೆ. ಪ್ರಾಚೀನ ಶೈಲಿಯಲ್ಲಿ ಸುಂದರವಾದ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ.

    ಗ್ರ‍್ಯಾಂಡ್ ಭಾರತ್ ರೆಸಾರ್ಟ್‌ನಲ್ಲಿ ಸುಮಾರು 4 ಪ್ರೆಸಿಡೆಂನ್ಸಿಯಲ್ ವಿಲ್ಲಾವಿದೆ. ಐಷಾರಾಮಿ ಸ್ಪಾಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಇನ್ನೂ ಕೃತಿ, ಪುಲ್ಕಿತ್ ಇಬ್ಬರೂ ದೆಹಲಿಯಲ್ಲೇ ಹುಟ್ಟಿ ಬೆಳೆದಿದ್ದಾರೆ. ಇವರ ಕುಟುಂಬ ದೆಹಲಿಯಲ್ಲಿಯೇ ನೆಲೆಸಿರುವುದರಿಂದ ಇದೇ ಸೂಕ್ತ ಆಯ್ಕೆ ಎಂದು ಜೋಡಿ ನಿರ್ಧರಿಸಿದೆ.

    2019ರಲ್ಲಿ ತೆರೆಕಂಡ ‘ಪಾಗಲ್‌ಪಂತಿ’ ಸಿನಿಮಾದಲ್ಲಿ ಪುಲ್ಕಿತ್ ಸಾಮ್ರಾಟ್, ಕೃತಿ ಜೋಡಿಯಾಗಿ ನಟಿಸಿದ್ದರು. ಈ ವೇಳೆ, ಇಬ್ಬರ ಪರಿಚಯವಾಗಿತ್ತು. ಈ ಪರಿಚಯ ಪ್ರೀತಿಗೆ ತಿರುಗಿದೆ. ಹಲವು ವರ್ಷಗಳ ಡೇಟಿಂಗ್ ನಂತರ ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಮದುವೆಯಾಗುತ್ತಿದ್ದಾರೆ.

  • ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು

    ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು

    ದುವೆ ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು ‘ಬಿಗ್ ಬಾಸ್’ ಬೆಡಗಿ ದೀಪಿಕಾ ದಾಸ್. ಇದೀಗ ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಆರತಕ್ಷತೆ ಮತ್ತು ಬೀಗರೂಟ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ದೀಪಿಕಾ ದಾಸ್ (Deepika Das) ದಂಪತಿ ಶುಭಹಾರೈಸಲು ಸ್ಯಾಂಡಲ್‌ವುಡ್ ನಟ-ನಟಿಯರು ಭಾಗಿಯಾಗಿದ್ದಾರೆ.

    ಮಾರ್ಚ್ 10ರಂದು ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ಜರುಗಿದ್ದು, ಬಿಗ್ ಬಾಸ್ ಖ್ಯಾತಿ ದಿವ್ಯಾ ಉರುಡುಗ (Divya Uruduga), ಪ್ರಶಾಂತ್ ಸಂಬರಗಿ, ನೀತು ವನಜಾಕ್ಷಿ, ಅನುಪಮಾ ಗೌಡ, ಚಂದನಾ ಅನಂತಕೃಷ್ಣ, ಪ್ರಿಯಾಂಕಾ, ಪನ್ನಗ ಭರಣ, ಕಿಶನ್, ಸಿಂಗರ್ ವಾಸುಕಿ ವೈಭವ್ (Vasuki Vaibhav) ಸೇರಿದಂತೆ ಅನೇಕರು ಮದುವೆ ಆರತಕ್ಷತೆಯಲ್ಲಿ ಭಾಗಿಯಾಗಿ ವಿಶ್ ಮಾಡಿದ್ದಾರೆ.‌ ಇದನ್ನೂ ಓದಿ:ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ನಯನತಾರಾ

    ಅದಷ್ಟೇ ಅಲ್ಲ, ಸ್ನೇಹಿತೆ ದೀಪಿಕಾ ದಾಸ್ ‘ಇನ್ನೂನು ಬೇಕಾಗಿದೆ ಒಲವು’ ಎಂಬ ಸಾಂಗ್ ಹಾಡಿ ನವ ಜೋಡಿಗೆ ವಿಶೇಷವಾಗಿ ಶುಭಕೋರಿದ್ದಾರೆ ವಾಸುಕಿ ವೈಭವ್. ವಾಸುಕಿ-ದೀಪಿಕಾ ಸ್ನೇಹ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

    ಮಾರ್ಚ್ 1ರಂದು ದೀಪಿಕಾ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ (Deepak) ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.

    ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.

    ‘ನಾಗಿಣಿ’ (Nagini) ಸೀರಿಯಲ್ ಬಿಗ್ ಬಾಸ್ ಸೀಸನ್ 7ರ (Bigg Boss Kannada 7) ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಬೆಂಗಳೂರಿನ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿಯಾಗಿದ್ದರು.

  • ಅಂಬಾನಿ ಮಗನ ಪ್ರೀ-ವೆಡ್ಡಿಂಗ್‌ನಲ್ಲಿ ಬಾಯ್‌ಫ್ರೆಂಡ್ ಜೊತೆ ಶ್ರದ್ಧಾ ಕಪೂರ್

    ಅಂಬಾನಿ ಮಗನ ಪ್ರೀ-ವೆಡ್ಡಿಂಗ್‌ನಲ್ಲಿ ಬಾಯ್‌ಫ್ರೆಂಡ್ ಜೊತೆ ಶ್ರದ್ಧಾ ಕಪೂರ್

    ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shradha Kapoor) ಹೆಸರು ಆಗಾಗ ರಾಹುಲ್ ಮೋದಿ (Rahul Mody) ಅವರ ಜೊತೆ ಕೇಳಿ ಬಂದಿತ್ತು. ಇದೀಗ ಅನಂತ್ ಅಂಬಾನಿ-ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಜೊತೆಯಾಗಿ ಶ್ರದ್ಧಾ- ರಾಹುಲ್ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಕಿರುತೆರೆಗೆ ಕಾಲಿಟ್ಟ ಹಾಸ್ಯ ನಟ ಟೆನ್ನಿಸ್ ಕೃಷ್ಣ

    ಅಂಬಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಆಯೋಜಿಸಿರುವ ಪ್ರೀ-ವೆಡ್ಡಿಂಗ್ ಕಾರ್ಯಕ್ರಮಕ್ಕೆ ಬಾಲಿವುಡ್ ಸ್ಟಾರ್ ಕಲಾವಿದರ ದಂಡೇ ಸಾಕ್ಷಿಯಾಗಿದೆ. ಇದರ ನಡುವೆ ಶ್ರದ್ಧಾ ಕಪೂರ್ ಬಾಯ್‌ಫ್ರೆಂಡ್ ರಾಹುಲ್ ಜೊತೆ ಎಂಟ್ರಿ ಕೊಡುವ ಮೂಲಕ ಹೈಲೆಟ್ ಆಗಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ಸಂಬಂಧದ ಬಗ್ಗೆ ನಟಿ ಅಧಿಕೃತವಾಗಿ ಹೇಳಿಲ್ಲ. ಆದರೆ ಮೊದಲ ಬಾರಿಗೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರೋದು ಎಂಗೇಜ್ ಆಗಿದ್ದಾರೆ ಎನ್ನಲಾದ ಸುದ್ದಿಗೆ ಪುಷ್ಠಿ ಸಿಕ್ಕಂತೆ ಆಗಿದೆ. ಇಬ್ಬರೂ ಜೊತೆಯಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಕಾಶಿ ವಿಶ್ವನಾಥನ ದರ್ಶನ ಪಡೆದ ತಮನ್ನಾ ಭಾಟಿಯಾ

    ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ ಶುರುವಾಗಿದ್ದು, 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಗುಜರಾತ್‌ನ ಜಾಮ್‌ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ-ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ನಡೆಯುತ್ತಿದೆ.

     

    View this post on Instagram

     

    A post shared by Viral Bhayani (@viralbhayani)

    ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನ ಮುಖ್ಯ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ ಅವರ ಸಂಗೀತ ಕಾರ್ಯಕ್ರಮ. ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಸುಂದರ ಸಂಜೆಗೆ ರಿಯಾನಾ ಗಾಯನ ಕಿಕ್ ಕೊಟ್ಟಿದೆ. ಕಾರ್ಯಕ್ರಮದಲ್ಲಿ ಹಾಡಲು ರಿಯಾನಾ, ಬರೋಬ್ಬರಿ 74 ಕೋಟಿ ರೂ. ಸಂಭಾವನೆ ಪಡೆದು ಎಲ್ಲರ ಹುಬ್ಬೇರಿಸಿದ್ದಾರೆ.

    ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು.

     

    View this post on Instagram

     

    A post shared by Viral Bhayani (@viralbhayani)

    ಮದುವೆಯ ಪೂರ್ವ ಸಂಭ್ರಮದಲ್ಲಿ ಶಾರುಖ್ ಖಾನ್, ಗೌರಿ ಖಾನ್, ಸಲ್ಮಾನ್ ಖಾನ್, ಬಿಲ್ ಗೇಟ್ಸ್, ಮಾರ್ಕ್ ಜುಕರ್‌ಬರ್ಗ್, ಸದ್ಗುರು, ಅಕ್ಷಯ್ ಕುಮಾರ್, ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಆಲಿಯಾ ಭಟ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ರಣಬೀರ್ ಕಪೂರ್, ನೀತು ಕಪೂರ್, ಅನನ್ಯಾ ಪಾಂಡೆ, ಜಾಹ್ನವಿ ಕಪೂರ್, ಶನಯಾ ಕಪೂರ್, ಶ್ರದ್ಧಾ ಕಪೂರ್, ಸೋನಮ್ ಕಪೂರ್ ಅಹುಜಾ, ಅನಿಲ್ ಕಪೂರ್ ಭಾಗಿಯಾಗಿದ್ದರು.

    ಡೇವಿಡ್ ಧವನ್, ಎಂಎಸ್ ಧೋನಿ, ರೋಹಿತ್ ಶರ್ಮಾ, ಹಾರ್ದಿಕ್ ನೆಹ್ವಾಲ್, ಹಾರ್ದಿಕ್ ಪಾಂಡ್ಯ ಜಾಫ್ರಿ, ಅಮೀರ್ ಖಾನ್, ಸುಹಾನಾ ಖಾನ್, ರಿಯಾ ಕಪೂರ್, ಕರೀನಾ ಕಪೂರ್ ಖಾನ್, ಸೈಫ್ ಅಲಿ ಖಾನ್, ಸಾರಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್, ಜಾನ್ ಅಬ್ರಹಾಂ, ಕರಿಷ್ಮಾ ಕಪೂರ್, ಅಟ್ಲೀ, ರಾಮ್ ಚರಣ್, ಮನೀಶ್ ಮಲ್ಹೋತ್ರಾ, ಮಾಧುರಿ ದೀಕ್ಷಿತ್ ನೇನೆ, ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತರರ ಇದ್ದರು.

  • ಸದ್ದಿಲ್ಲದೇ ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

    ಸದ್ದಿಲ್ಲದೇ ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

    ಕಿರುತೆರೆಯ ಬ್ಯೂಟಿ ದೀಪಿಕಾ ದಾಸ್ (Deepika Das) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ದಿಲ್ಲದೇ ಬಿಗ್ ಬಾಸ್ ಕನ್ನಡ 7ರ ಸ್ಪರ್ಧಿ (Bigg Boss Kannada 7) ಬೆಡಗಿ ಹಸೆಮಣೆ ಏರಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

    ಕೃಷ್ಣ ರುಕ್ಮಿಣಿ, ನಾಗಿಣಿ ಸೀರಿಯಲ್ ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ (Goa) ಡೆಸ್ಟಿನೇಷನ್ ವೆಡ್ಡಿಂಗ್ (Wedding) ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಕರ್ನಾಟಕ ಮೂಲದ ದುಬೈ ಉದ್ಯಮಿಯನ್ನು ನಟಿ ಮದುವೆ ಆಗಿದ್ದಾರೆ.

    ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿದ್ದರು. ಮದುವೆಯ ಸುಂದರ ಫೋಟೋಗಳನ್ನು ಶೇರ್ ಮಾಡಿ ಕಾಮೆಂಟ್ ಬಾಕ್ಸ್ ಅನ್ನು ಆಫ್ ಮಾಡಿದ್ದಾರೆ. ಇದನ್ನೂ ಓದಿ:ಹಳ್ಳಿ ಸೊಗಡಿನ ಹಿಮ್ಮೇಳದಲ್ಲಿ ‘ಕೆರೆಬೇಟೆ’ ಟೈಟಲ್ ಸಾಂಗ್ ಬಿಡುಗಡೆ

    ಮೂರು ಫೋಟೋಗಳನ್ನು ಹಂಚಿಕೊಂಡಿರುವ ದೀಪಿಕಾ ದಾಸ್ ‘ಮಿಸ್ಟರ್ & ಮಿಸೆಸ್ ಡಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಡಿ-ದೀಪಿಕಾ ಎಂಬುದು ಎಲ್ಲರಿಗೂ ಗೊತ್ತು. ಹುಡುಗನ ಹೆಸರು ಕೂಡ ‘ಡಿ’ ಅಕ್ಷರಿದಿಂದಲೇ ಶುರುವಾಗಲಿದೆಯಾ? ಗೊತ್ತಿಲ್ಲ.

     

    View this post on Instagram

     

    A post shared by Deepika Das (@deepika__das)

    ದೀಪಿಕಾ ದಾಸ್ ಅವರ ಜೊತೆಗೆ ಫೋಟೋದಲ್ಲಿ ಇರುವ ವ್ಯಕ್ತಿ ಯಾರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ದೀಪಿಕಾ ಕೂಡ ಆ ಬಗ್ಗೆ ಮಾಹಿತಿ ನೀಡಿಲ್ಲ. ಇದನ್ನೂ ಓದಿ:‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್

    ದೀಪಿಕಾ ಹೊಸ ಬಾಳಿಗೆ ಶುಭವಾಗಲಿ ಎಂದು ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ (Shine Shetty) ಸೇರಿದಂತೆ ಹಲವರು ಶುಭಕೋರಿದ್ದಾರೆ.

  • ಮಾರ್ಚ್ 2ಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಸುರಭಿ ಚಂದ್ನಾ ಮದುವೆ

    ಮಾರ್ಚ್ 2ಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಸುರಭಿ ಚಂದ್ನಾ ಮದುವೆ

    ಹಿಂದಿ ಕಿರುತೆರೆಯಲ್ಲಿ ಮೋಡಿ ಮಾಡಿದ ಮುದ್ದು ಮುಖದ ಸುಂದರಿ ಸುರಭಿ ಚಂದ್ನಾ(Surabhi Chandna)  ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಬಹುಕಾಲದ ಗೆಳೆಯ ಕರಣ್ ಶರ್ಮಾ (Karan Sharma) ಜೊತೆ ಜೈಪುರನಲ್ಲಿ ಅದ್ಧೂರಿಯಾಗಿ ಮದುವೆಯಾಗುತ್ತಿದ್ದಾರೆ.

    ನಾಗಿನ್ 5, ಬಿಗ್ ಬಾಸ್ ಸೀಸನ್ 15 ಸೇರಿದಂತೆ ಹಲವು ಟಿವಿ ಶೋಗಳಲ್ಲಿ ಜನಪ್ರಿಯತೆ ಗಳಿಸಿದ್ದ ನಟಿ ಸುರಭಿ ಅವರು ಉದ್ಯಮಿ ಕರಣ್ ಶರ್ಮಾ ಜೊತೆ ಕಳೆದ 13 ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಈಗ ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಮಾರ್ಚ್‌ 2ರಂದು ಮದುವೆ (Wedding) ಜರುಗಲಿದೆ.

     

    View this post on Instagram

     

    A post shared by WeddingSutra.com (@weddingsutra)

    ಜೈಪುರ ರಾಜಸ್ಥಾನದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ಶುಭಕಾರ್ಯ ನಡೆಯುತ್ತಿದೆ. ಮೆಹೆಂದಿ, ಅರಿಶಿನ ಶಾಸ್ತ್ರದ ಕಾರ್ಯಕ್ರಮಗಳು ಈಗಾಗಲೇ ಶುರುವಾಗಿದೆ. ಇದನ್ನೂ ಓದಿ:ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಕಿಭಾಯ್? ಯಶ್ ಸ್ಪಷ್ಟನೆ

    ನಟಿ ಸುರಭಿ ಮದುವೆಗೆ ನಟಿ ಶ್ರೇನು, ಮಾನಸಿ ಶ್ರೀವಾಸ್ತವ್, ಶಿವಾಂಗಿ ಜೋಶಿ, ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಸದ್ಯ ಈ ಮದುವೆ ಸುದ್ದಿ ಕೇಳಿ ನಾಗಿನ್ ನಟಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ.

  • ಪ್ರಭಾಸ್ ಬೆನ್ನು ಬಿಡದ ಜ್ಯೋತಿಷಿ- ಸ್ಫೋಟಕ ಭವಿಷ್ಯ ನುಡಿದ ಸ್ವಾಮಿ

    ಪ್ರಭಾಸ್ ಬೆನ್ನು ಬಿಡದ ಜ್ಯೋತಿಷಿ- ಸ್ಫೋಟಕ ಭವಿಷ್ಯ ನುಡಿದ ಸ್ವಾಮಿ

    ತೆಲುಗು ಪ್ರಭಾಸ್ (Actor Prabhas) ಎಲ್ಲೇ ಹೋದರೂ, ಈ ಜ್ಯೋತಿಷಿ ವೇಣು ಸ್ವಾಮಿ ಮಾತ್ರ ಬಿಡುತ್ತಿಲ್ಲ. ಒಂದರ ಹಿಂದೊಂದು ಭವಿಷ್ಯ ಹೇಳುತ್ತಿರುತ್ತಾರೆ. ಸಿನಿಮಾ ಫ್ಲಾಪ್ ಆಗುತ್ತವೆ ಎನ್ನುವುದರಿಂದ ಹಿಡಿದು ಪ್ರಭಾಸ್ ಲಗ್ನ ಈ ಜನ್ಮದಲ್ಲಿ ಸಾಧ್ಯ ಇಲ್ಲ ಅನ್ನೋ ತನಕ ಇವರ ವಾಣಿ ವಿಜೃಂಭಿಸಿದೆ. ಪ್ರಭಾಸ್ ಫ್ಯಾನ್ಸ್ ತಿರುಗಿ ಬಿದ್ದರೂ ಸ್ವಾಮಿ ಡೋಂಟ್ ಕೇರ್. ಇದೀಗ ಅದೇ ವೇಣು ಸ್ವಾಮಿ ಅವರು ಪ್ರಭಾಸ್ ಕುರಿತು ಹೊಸ ವಿಷಯ ಹೇಳಿದ್ದಾರೆ. ಇದನ್ನೂ ಓದಿ:ತಮಿಳಿನ ಸ್ಟಾರ್ ನಟನಿಗೆ ರಶ್ಮಿಕಾ ನಾಯಕಿ- ಶೂಟಿಂಗ್‌ ವಿಡಿಯೋ ಲೀಕ್‌

    ವೇಣು ಸ್ವಾಮಿ ಹೆಸರು ಹೇಳಿದರೆ ಸಾಕು ಟಾಲಿವುಡ್ ಸ್ಟಾರ್ಸ್ ಬೆಚ್ಚಿ ಬೀಳುತ್ತಾರೆ. ಕಾರಣ ಅವರು ಹೇಳಿದ ಬಹುತೇಕ ಭವಿಷ್ಯ ನಿಜವಾಗಿವೆ. ಸಮಂತಾ ಹಾಗೂ ನಾಗಚೈತನ್ಯ ಹೆಚ್ಚು ದಿನ ಜಂಟಿಯಾಗಿರಲ್ಲ. ಡಿವೋರ್ಸ್ ಖಚಿತ ಎಂದಿದ್ದರು. ಅದು ಸತ್ಯವಾಯಿತು. ಪ್ರಭಾಸ್ 3 ಸಿನಿಮಾ ಗೆಲ್ಲಲ್ಲ ಎಂದಿದ್ದರು. ಅದೂ ನಿಜವಾಯಿತು. ಆಗಲೇ ವೇಣು ಸ್ವಾಮಿ ಹವಾ ಜೋರಾಯಿತು. ಆಗ ಪ್ರಭಾಸ್ ಬಗ್ಗೆ ಇನ್ನಷ್ಟು ಮಾಹಿತಿ ನೀಡಿದರು ಸ್ವಾಮಿ. ಪ್ರಭಾಸ್ ಆರೋಗ್ಯದಲ್ಲಿ ಏರುಪೇರಾಗಲಿದೆ. ಅವರ ಮದುವೆ ಈ ಜನ್ಮದಲ್ಲಿ ನಡೆಯಲು ಸಾಧ್ಯವೇ ಇಲ್ಲ ಎಂದಿದ್ದರು. ಪ್ರಭಾಸ್ ಫ್ಯಾನ್ಸ್ ಕಿಡಿಕಾರಿದರು. ಈಗ ಮತ್ತೊಮ್ಮೆ ಪ್ರಭಾಸ್ ಚರಿತ್ರೆ ಹಿಡಿದು ನಿಂತಿದ್ದಾರೆ.

    ಪ್ರಭಾಸ್ ಮದುವೆ ಈ ಜನ್ಮದಲ್ಲಿ ಸಾಧ್ಯ ಇಲ್ಲ. ಅವರ ಜಾತಕವೇ ಇದಕ್ಕೆ ಕಾರಣ. ಹಿಂದೊಮ್ಮೆ ಇದೇ ಮಾತನ್ನು ಹೇಳಿದ್ದೆ. ಈಗ ಮತ್ತೆ ಅದನ್ನೇ ಹೇಳುತ್ತಿದ್ದೇನೆ. ನಾನು ಹೇಳುವುದು ಮಾತ್ರ ಸತ್ಯ. ಪ್ರಭಾಸ್ ಜಾತಕದಲ್ಲಿ ದೋಷ ಇದೆ. ಅದು ನನಗೆ ಗೊತ್ತು. ಹಾಗೆಯೇ ಯಾಕೆ ಮದುವೆ ಆಗಲ್ಲ ಎನ್ನುವ ಕಾರಣವೂ ಗೊತ್ತಿದೆ. ಆದರೆ ಅದನ್ನು ಹೇಳಲು ಸಾಧ್ಯ ಇಲ್ಲ. ಇವರ ತಂದೆ ನಟ ಕೃಷ್ಣಂರಾಜು ಜಾತಕವೂ ನನಗೆ ಗೊತ್ತು.

    ವರ್ಷದ ಕೊನೆಯಲ್ಲಿ ಪ್ರಭಾಸ್ ಮದುವೆ ಆಗುತ್ತಾರೆ. ಹೀಗಂತ ಪ್ರಭಾಸ್ ಖಾಸಾ ಸಂಬಂಧಿ ಹೇಳಿದ್ದರು. ಆದರೆ ಇಲ್ಲಿ ನೋಡಿದರೆ ಸ್ವಾಮಿ ಅಡ್ಡಗಾಲು ಹಾಕುತ್ತಿದ್ದಾರೆ. ಅನುಷ್ಕಾ ಶೆಟ್ಟಿ(Anushka Shetty), ಕೃತಿ ಸನೋನ್ (Kriti Sanon) ಜೊತೆ ಪ್ರಭಾಸ್ ಹೆಸರು ಕೇಳಿತ್ತು. ಅದು ಅಲ್ಲಲ್ಲೇ ನಿಂತಿತು. ಇದರಲ್ಲಿ ಯಾವುದು ಸತ್ಯ ಯಾವುದು ಸುಳ್ಳು ? ದೇವರಿಗೇ ಗೊತ್ತು. ಈಗಾಗಲೇ ವಯಸ್ಸು 45 ಆಗಿದೆ. ಇನ್ನೈದು ವರ್ಷಕ್ಕೆ ಹಾಫ್ ಸೆಂಚುರಿ. ಸಲ್ಮಾನ್ ಖಾನ್ ಅರವತ್ತರ ಗಡಿ ಮುಟ್ಟಿದ್ದಾರೆ. ಆ ದಾಖಲೆ ಪ್ರಭಾಸ್ ಮುರಿಯುತ್ತಾರಾ ಅಥವಾ ಅದಕ್ಕೂ ಮುಂಚೆ ಮದುವೆ ಆಗಿ ಸೆಟಲ್ ಆಗುತ್ತಾರಾ ಕಾಯಬೇಕಿದೆ.

  • ರಕುಲ್ ನಂತರ ಮದುವೆಗೆ ಸಜ್ಜಾದ ಖ್ಯಾತ ನಟಿ ತಾಪ್ಸಿ ಪನ್ನು

    ರಕುಲ್ ನಂತರ ಮದುವೆಗೆ ಸಜ್ಜಾದ ಖ್ಯಾತ ನಟಿ ತಾಪ್ಸಿ ಪನ್ನು

    ಬಾಲಿವುಡ್ ಅಂಗಳದಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದೆ. ಕಳೆದ ವಾರವಷ್ಟೇ ರಕುಲ್ (Rakul Preet Singh) ಮತ್ತು ಜಾಕಿ ಭಗ್ನಾನಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಗೂಗ್ಲಿ ಬೆಡಗಿ ಕೃತಿ ಕರಬಂಧ ಮಾರ್ಚ್‌ನಲ್ಲಿ ಮದುವೆ ಆಗೋದಾಗಿ ಅನೌನ್ಸ್ ಮಾಡಿದ್ದರು. ಈ ಬೆನ್ನಲ್ಲೇ ಬಾಲಿವುಡ್ ನಟಿ ತಾಪ್ಸಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಫೆ.21ರಂದು ರಕುಲ್ ಜಾಕಿ ಜೊತೆ ಮದುವೆಯಾದರು. ಕೃತಿ ಇದೇ ಮಾರ್ಚ್ 13ಕ್ಕೆ ಹೊಸ ಬಾಳಿಗೆ ಕಾಲಿಡಲಿದ್ದಾರೆ. ಈ ಬೆನ್ನಲ್ಲೇ ತಾಪ್ಸಿ (Taapsee Pannu) ತಮ್ಮ ಬಹುಕಾಲದ ಗೆಳೆಯನ ಜೊತೆ ಮದುವೆಗೆ ರೆಡಿಯಾಗಿದ್ದಾರೆ. ಮಾರ್ಚ್ ಅಂತ್ಯದಲ್ಲಿ ಉದಯಪುರದಲ್ಲಿ ಮದುವೆ (Wedding) ನಡೆಯಲಿದೆ.‌ ಇದನ್ನೂ ಓದಿ:ಸೆಲೆಬ್ರಿಟಿಗಳ ಮೇಲೆ ಗಂಭೀರ ಆರೋಪ ಮಾಡಿದ ಕಂಗನಾ

    ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋ (Mathias Boe) ಜೊತೆ 10 ವರ್ಷಗಳ ಕಾಲ ಡೇಟಿಂಗ್ ಮಾಡ್ತಿದ್ದರು ತಾಪ್ಸಿ. ಈಗ ಗುರುಹಿರಿಯರ ಸಮ್ಮತಿಯ ಮೇರೆಗೆ ಮದುವೆಯಾಗುತ್ತಿದ್ದಾರೆ. ಮದುವೆಗೆ 2 ಕುಟುಂಬದವರು ಮತ್ತು ಆಪ್ತರಷ್ಟೇ ಭಾಗಿಯಾಗಲಿದ್ದಾರೆ. ಹಾಗಾಗಿ ಬಾಲಿವುಡ್ ಮತ್ತು ಸೌತ್ ಸಿನಿಮಾರಂಗದ ಸೆಲೆಬ್ರಿಟಿಗಳಿಗೆ ಮದುವೆಗೆ ಆಹ್ವಾನವಿಲ್ಲ ಎನ್ನಲಾಗುತ್ತಿದೆ.

    ಸದ್ಯ ಪಡ್ಡೆಹುಡುಗರ ನೆಚ್ಚಿನ ನಟಿ ತಾಪ್ಸಿ ಮದುವೆಗೆ ಸಿದ್ಧತೆ ಮಾಡಿಕೊಳ್ತಿರೋದಕ್ಕೆ ನಿರಾಸೆಯಾಗಿದ್ದಾರೆ. ಏನೇ ಆಗಲಿ ನಮ್ಮ ನಾಯಕಿಗೆ ಶುಭವಾಗಲಿ ಎಂದು ಹಾರೈಸುತ್ತಿದ್ದಾರೆ ಫ್ಯಾನ್ಸ್.