Tag: wedding

  • ‘ಗಿಚ್ಚಿ ಗಿಲಿಗಿಲಿ’ ವೇದಿಕೆಯಲ್ಲಿ ಚಂದ್ರಪ್ರಭಾ ಮತ್ತೆ ಮದುವೆ- ಕಣ್ಣೀರಿಟ್ಟ ನಟ

    ‘ಗಿಚ್ಚಿ ಗಿಲಿಗಿಲಿ’ ವೇದಿಕೆಯಲ್ಲಿ ಚಂದ್ರಪ್ರಭಾ ಮತ್ತೆ ಮದುವೆ- ಕಣ್ಣೀರಿಟ್ಟ ನಟ

    ಜಾಭಾರತ, ಗಿಚ್ಚಿ ಗಿಲಿಗಿಲಿ ಶೋ ಮೂಲಕ ಮನೆ ಮಾತಾದ ನಟ ಚಂದ್ರಪ್ರಭಾ (Chandraprabha) ಅವರು ಇತ್ತೀಚಿಗೆ ಸೈಲೆಂಟ್‌ ಆಗಿ ಹಸೆಮಣೆ ಏರಿದ್ದರು. ತಮ್ಮ ಮದುವೆ (Wedding) ಬಗ್ಗೆ ಎಲ್ಲೂ ಹೇಳದೇ ಮುಚ್ಚಿಟ್ಟಿದ್ದಾರೆ ಎಂದು ನೆಟ್ಟಿಗರ ಕೆಂಗಣ್ಣಿಗೆ ನಟ ಗುರಿಯಾಗಿದ್ದರು. ಈಗ ತಮ್ಮ ಮದುವೆ ಬಗ್ಗೆ ಚಂದ್ರಪ್ರಭಾ ಅವರು ಮಾತನಾಡಿದ್ದಾರೆ. ‘ಗಿಚ್ಚಿ ಗಿಲಿಗಿಲಿ’ 2 (Gicchi Giligili 2) ವೇದಿಕೆಯಲ್ಲಿ ನಟ ಮತ್ತೆ ಮದುವೆಯಾಗಿದ್ದಾರೆ.

    ಕಾಮಿಡಿ ಶೋ ಕಾರ್ಯಕ್ರಮದ ಮೂಲಕ ಸ್ಪರ್ಧಿಯಾಗಿ ಅಭಿಮಾನಿಗಳನ್ನ ನಗೆಗಡಲಲ್ಲಿ ತೇಲಿಸಿದ ನಟ ಚಂದ್ರಪ್ರಭಾ ಅವರು ಕೆಲ ದಿನಗಳ ಹಿಂದೆ ಭಾರತಿ ಎಂಬುವವರನ್ನ ಮದುವೆಯಾಗಿದ್ದರು. ಸರಳವಾಗಿ ಆಪ್ತರ ಸಮ್ಮುಖದಲ್ಲಿ ಚಂದ್ರಪ್ರಭಾ ಮದುವೆ ನೆರವೇರಿತ್ತು. ಆದರೆ ತಮ್ಮ ಮದುವೆ ಬಗ್ಗೆ ಎಲ್ಲೂ ಕೂಡ ನಟ ಪೋಸ್ಟ್ ಹಾಕಿರಲಿಲ್ಲ. ಮದುವೆ ಆಗಿರುವ ಬಗ್ಗೆ ಎಲ್ಲೂ ಸುಳಿವು ನೀಡಿರಲಿಲ್ಲ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಚಂದ್ರಪ್ರಭಾ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

     

    View this post on Instagram

     

    A post shared by Chandraprabha G (@chandra_prabha_g)

    ಇದೀಗ ‘ಗಿಚ್ಚಿ ಗಿಲಿಗಿಲಿ 2’  ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಚಂದ್ರಪ್ರಭಾ ಅವರು ಮತ್ತೆ ಮಡದಿ ಭಾರತಿ ಪ್ರಿಯಾ (Bharathi Priya) ಜೊತೆ ಮದುವೆಯಾಗಿದ್ದಾರೆ. ನಾನು ಇಷ್ಟಪಟ್ಟ ಹುಡುಗಿ ಎಂದು ಹೇಳುವುದ್ದಕ್ಕಿಂತ, ನನ್ನನ್ನು ಹೆಚ್ಚಿಗೆ ಇಷ್ಟಪಡುತ್ತಿರುವ ವ್ಯಕ್ತಿ ಎಂದು ಹೇಳಲು ಖುಷಿಯಾಗುತ್ತದೆ. ಆಕೆಯನ್ನು ಕಣ್ಣೀರು ಹಾಕಿಸದಂತೆ ನೋಡಿಕೊಳ್ಳಬೇಕು ಅನ್ನೋದು ನನ್ನ ಆಸೆ ಎಂದು ಚಂದ್ರಪ್ರಭಾ ಮಾತನಾಡಿದ್ದಾರೆ. ಇದನ್ನೂ ಓದಿ:ಶಕುನಿ ಪಾತ್ರಧಾರಿ ಗೂಫಿ ಆರೋಗ್ಯ ಸ್ಥಿತಿ ಗಂಭೀರ

    ನಮ್ಮ ತಂದೆ ಇರಬೇಕಿತ್ತು ನನ್ನ ಮದುವೆ ನೋಡಬೇಕಿತ್ತು. ನನ್ನ ಮದುವೆ ನೋಡಿ ಸಾಯಬೇಕು ಎಂಬುದು ನನ್ನ ತಂದೆಯ ಆಸೆಯಾಗಿತ್ತು ಎಂದು ಚಂದ್ರಪ್ರಭಾ ವೇದಿಕೆಯಲ್ಲಿ ಕಣ್ಣೀರಿಟ್ಟಿದ್ದಾರೆ. ಈ ವಾಹಿನಿಯ ‘ಗಿಚ್ಚಿ ಗಿಲಿಗಿಲಿ 2’ ವಾರಾಂತ್ಯದ ಚಂದ್ರಪ್ರಭಾ ಪ್ರೋಮೋ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಹೊಸ ಜೋಡಿಗೆ ಫ್ಯಾನ್ಸ್‌ ಶುಭಕೋರುತ್ತಿದ್ದಾರೆ.

  • ಅದ್ದೂರಿಯಾಗಿ ನಡೆಯಿತು ಅಂಬಿ ಪುತ್ರನ ಅರಿಶಿನ ಶಾಸ್ತ್ರ

    ಅದ್ದೂರಿಯಾಗಿ ನಡೆಯಿತು ಅಂಬಿ ಪುತ್ರನ ಅರಿಶಿನ ಶಾಸ್ತ್ರ

    ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬಿ ಪುತ್ರನ ಮಗನ ಮದುವೆಗೆ (Wedding) ಕೌಂಟ್‌ಡೌನ್ ಶುರುವಾಗಿದೆ. ಸದ್ಯ ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿರುವ ನಟ ಅಭಿಷೇಕ್ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಅಭಿಷೇಕ್ ಅಂಬರೀಶ್- ಅವಿವ ಬಿಡಪ (Aviva Bidapa) ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸಿ, ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ಮದುವೆ (Wedding) ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ. ಅಭಿಷೇಕ್- ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಸದ್ಯ ವೈಟ್ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ (Arishina Shastra) ಮಿಂಚಿದ್ದಾರೆ. ಮನೆ ಕೂಡ ಅದ್ದೂರಿಯಾಗಿ ಅಲಂಕರಿಸಲಾಗಿದೆ.

    ಇನ್ನೂ 2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಜರುಗಲಿದೆ. ಇದನ್ನೂ ಓದಿ:ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೇಟ್ ಡೇಟ್ ಫಿಕ್ಸ್

    ಸಿನಿಮಾ- ರಾಜಕೀಯ (Politics) ಎರಡೂ ಕ್ಷೇತ್ರದ ಗಣ್ಯರು ಅಭಿಷೇಕ್- ಅವಿವ ಆರತಕ್ಷತೆಗೆ ಬರಲಿದ್ದಾರೆ. ಮದುವೆಗೆ ಆಪ್ತ ಬಳಗದವರಿಗಷ್ಟೇ ಆಹ್ವಾನ ನೀಡಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಹೊಸ ಬಾಳಿಗೆ ಕಾಲಿಡುತ್ತಿರುವ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೆಂಟ್‌ ಡೇಟ್ ಫಿಕ್ಸ್

    ವರುಣ್‌ ತೇಜ್-‌ ನಟಿ ಲಾವಣ್ಯ ಎಂಗೇಜ್‌ಮೆಂಟ್‌ ಡೇಟ್ ಫಿಕ್ಸ್

    ಟಾಲಿವುಡ್‌ನ ಯಂಗ್ ಹೀರೋ, ಮೆಗಾಸ್ಟಾರ್ ಕುಟುಂಬದ (Megastar Family) ಮನೆ ಮಗ ವರುಣ್ ತೇಜ್ (Varun Tej) ಮದುವೆಗೆ (Wedding) ಸಕಲ ಸಿದ್ಧತೆ ನಡೆಯುತ್ತಿದೆ. ನಟಿ ಲಾವಣ್ಯ (Lavanya) ಜೊತೆಗೆ ವರುಣ್ ಮದುವೆ ಎಂಬ ಎಲ್ಲಾ ಊಹಾಪೋಹಗಳಿಗೂ ಸ್ಪಷ್ಟನೆ ಸಿಕ್ಕಿದೆ. ಬಹುಕಾಲದ ಗೆಳತಿ ನಟಿ ಲಾವಣ್ಯ ಜೊತೆ ಎಂಗೇಜ್ ಆಗಲು ವರುಣ್ ರೆಡಿಯಾಗಿದ್ದಾರೆ.

    ಚಿತ್ರರಂಗದಲ್ಲಿ ಮದುವೆಯ ಮಂಗಳ ವಾದ್ಯ ಸೌಂಡ್ ಮಾಡುತ್ತಿದೆ. ಅಥಿಯಾ ಶೆಟ್ಟಿ ಜೋಡಿ, ಸಿದ್- ಕಿಯಾರಾ, ಹೀಗೆ ಸ್ಟಾರ್ ಜೋಡಿಗಳು ಹಸೆಮಣೆ ಏರುತ್ತಿದ್ದಾರೆ. ಇದೀಗ ಮೆಗಾಸ್ಟಾರ್ ಕುಟುಂಬದ ಕುಡಿ ವರುಣ್ ತೇಜ್ ನಿಶ್ಚಿತಾರ್ಥಕ್ಕೆ (Engagement) ಕೌಂಟ್‌ಡೌನ್ ಶುರುವಾಗಿದೆ. ಇದನ್ನೂ ಓದಿ:ನಿರಾಶ್ರಿತರ ಜೊತೆ ನಿಂತುಕೊಂಡು ನಟ ಕಿರಣ್ ರಾಜ್

    ನಟಿ ಲಾವಣ್ಯ ತ್ರಿಪಾಠಿ ಜೊತೆ ವರುಣ್ ತೇಜ್ ಕಳೆದ ಐದಾರು ವರ್ಷಗಳಿಂದ ಡೇಟ್ ಮಾಡುತ್ತಿದ್ದಾರೆ. ಗುರುಹಿರಿಯರು ಕೂಡ ಇಬ್ಬರ ಪ್ರೀತಿಗೆ ಸಮ್ಮತಿ ಸೂಚಿಸಿದ್ದಾರೆ. ಜೂನ್ 9ಕ್ಕೆ (June 9) ವರುಣ್- ಲಾವಣ್ಯ ಎಂಗೇಜ್‌ಮೆಂಟ್ ಡೇಟ್ ಫಿಕ್ಸ್ ಆಗಿದೆ. ಹೈದರಾಬಾದ್‌ನಲ್ಲಿ ಸರಳವಾಗಿ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಜರುಗಲಿದೆ.

    ಶ್ರೀಜಾ, ನಿಹಾರಿಕಾ ಕೊನಿಡೆಲಾ, ಡಿವೋರ್ಸ್ ಸಂಗತಿಯ ನಡುವೆ ವರುಣ್ ತೇಜ್ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ವರುಣ್- ಲಾವಣ್ಯ ಮದುವೆ ಕೂಡ ರಿವೀಲ್ ಆಗಲಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ನಟಿ ಯಶಸ್ವಿನಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ನಟಿ ಯಶಸ್ವಿನಿ

    ‘ಕಮಲಿ’ (Kamali) ಧಾರಾವಾಹಿ ಮೂಲಕ ಮನೆ ಮಾತಾದ ನಟಿ ಯಶಸ್ವಿನಿ ರವೀಂದ್ರ (Yashaswini Ravindra) ಅವರು ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಟಿವಿ ಪ್ರೇಕ್ಷಕರಿಗೆ ರಚನಾ ಆಗಿ ಗಮನ ಸೆಳೆದವರು ನಟಿ ಯಶಸ್ವಿನಿ ರವೀಂದ್ರ, ಜನಪ್ರಿಯ ‘ಕಮಲಿ’ ಧಾರಾವಾಹಿಯಲ್ಲಿ ಹೀರೋ ರಿಷಿ (Rishi) ಸಹೋದರಿ ಪಾತ್ರದಲ್ಲಿ ನಟಿಸಿದ್ದರು. ರಚನಾ ಎಂಬ ಪಾತ್ರಕ್ಕೆ ಯಶಸ್ವಿನಿ ಜೀವ ತುಂಬಿದ್ದರು.

    ಇದೀಗ ಬಹುಕಾಲದ ಗೆಳೆಯ ಚೇತನ್ ರಾಜ್ (Chethan Raj) ಜೊತೆ ನಟಿ ಯಶಸ್ವಿನಿ ರವೀಂದ್ರ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ನಟಿ ಮದುವೆಯಾಗಿದ್ದಾರೆ. ಇದನ್ನೂ ಓದಿ:ರಾಜಕಾರಣ ಬದಿಗಿಟ್ಟು ಪುತ್ರನ ಮದುವೆಗೆ ಮುಖ್ಯಮಂತ್ರಿಯನ್ನು ಆಹ್ವಾನಿಸಿದ ಸುಮಲತಾ

    ನಟಿ ಯಶಸ್ವಿನಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದಾರೆ. ಆಪ್ತರ ಸಮ್ಮುಖದಲ್ಲಿ ಯಶಸ್ವಿನಿ- ಚೇತನ್ ರಾಜ್ ಸಿಂಪಲ್ ಆಗಿ ಮದುವೆಯಾಗಿದ್ದಾರೆ. ನವ ಜೋಡಿಗೆ ಹೊಸ ಬಾಳಿಗೆ ಫ್ಯಾನ್ಸ್ ಶುಭಹಾರೈಸಿದ್ದಾರೆ.

  • ರಾಜಸ್ಥಾನದಲ್ಲಿ ನಡೆಯಲಿದೆ ಪರಿಣಿತಿ- ರಾಘವ್ ಮದುವೆ

    ರಾಜಸ್ಥಾನದಲ್ಲಿ ನಡೆಯಲಿದೆ ಪರಿಣಿತಿ- ರಾಘವ್ ಮದುವೆ

    ಬಾಲಿವುಡ್ (Bollywood) ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadda) ಇತ್ತೀಚಿಗಷ್ಟೇ ಉಂಗುರ ಬದಲಿಸುವ ಮೂಲಕ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ರಾಜಸ್ಥಾನದಲ್ಲಿ ಪರಿಣಿತಿ- ರಾಘವ್ ಮದುವೆ ನಡೆಯಲಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಇದನ್ನೂ ಓದಿ:ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    ಬಿಟೌನ್ ‘ಲವ್ ಬರ್ಡ್ಸ್’ ರಾಘವ್ – ಪರಿಣಿತಿ ಚೋಪ್ರಾ (Parineeti Chopra) ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ದೆಹಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಮೇ 13ರಂದು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈಗ ಈ ಜೋಡಿಯ ಮದುವೆ ಯಾವಾಗ? ಎಲ್ಲಿ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

    ಉದಯ್‌ಪುರ, ಜೈಪುರ ಸೇರಿದಂತೆ ಹಲವು ಕಡೆ ಪರಿಣಿತಿ ಜೋಡಿ ಮದುವೆ ಸ್ಥಳ ನೋಡಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ರಾಜಸ್ಥಾನದಲ್ಲಿ (Rajasthan) ಮದುವೆ ಸ್ಥಳ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ. ಇದೇ ಸೆಪ್ಟೆಂಬರ್‌ನಿಂದ ನವೆಂಬರ್ ನಡುವೆ ಅದ್ದೂರಿ ಮದುವೆಯಾಗಲು ಈ ಜೋಡಿ ನಿರ್ಧಾರ ಮಾಡಿದ್ದಾರೆ.

    ಪರಿಣಿತಿ- ರಾಘವ್ ಮದುವೆಯಲ್ಲಿ ರಾಜಕೀಯ- ಬಾಲಿವುಡ್ ಗಣ್ಯರ ದಂಡೇ ಇರಲಿದೆ. ಮದುವೆಗೆ ಈಗಿಂದಲೇ ಸಿದ್ಧತೆ ಭರದಿಂದ ಸಾಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಅಪ್‌ಡೇಟ್ ಸಿಗಲಿದೆ.

  • ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    ಸ್ಯಾಂಡಲ್‌ವುಡ್ (Sandalwood) ನಟ ರೆಬೆಲ್ ಸ್ಟಾರ್ ಅಂಬರೀಶ್ (Rebel Star Ambareesh) ಅವರ ಪುತ್ರ ಅಭಿಷೇಕ್ ಮದುವೆಗೆ ದಿನಗಣನೆ ಶುರುವಾಗಿದೆ. ಚಂದನವನದಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರೋದಕ್ಕೆ ಸಜ್ಜಾಗಿದೆ. ಅಂಬಿ ಪುತ್ರನ ಮದುವೆ ಯಾವಾಗ? ಎಲ್ಲಿ ಮದುವೆ ನಡೆಯಲಿದೆ. ಆಮಂತ್ರಣ ಪತ್ರಿಕೆ ಹೇಗಿದೆ.? ಈ ಎಲ್ಲಾ ಡಿಟೈಲ್ಸ್ ಇಲ್ಲಿದೆ.

    ಅಭಿಷೇಕ್ ಅಂಬರೀಶ್, ಮಾಡೆಲ್ ಅವಿವ ಬಿಡಪ ಮದುವೆಗೆ ಮುಹೂರ್ತ ನಿಗದಿ ಆಗಿದೆ. ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ. ಅಭಿಷೇಕ್- ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಇವರ ಮದುವೆಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಜರುಗಲಿದೆ. ಇದನ್ನೂ ಓದಿ:ಬಾಯ್‌ಫ್ರೆಂಡ್ ಖಾಸಗಿ ಫೋಟೋ ಶೇರ್ ಮಾಡಿದ ಮಲೈಕಾ- ಅರ್ಜುನ್ ಕಪೂರ್ ಟ್ರೋಲ್

    ಸಿನಿಮಾ- ರಾಜಕೀಯ ಎರಡೂ ಕ್ಷೇತ್ರದ ಗಣ್ಯರು ಅಭಿಷೇಕ್- ಅವಿವ ಆರತಕ್ಷತೆಗೆ ಬರಲಿದ್ದಾರೆ. ಮದುವೆಗೆ ಆಪ್ತ ಬಳಗದವರಿಗಷ್ಟೇ ಆಹ್ವಾನ ನೀಡಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಹೊಸ ಬಾಳಿಗೆ ಕಾಲಿಡುತ್ತಿರುವ ಹೊಸ ಜೋಡಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ಅಭಿ-ಅವಿ ಮ್ಯಾರೇಜ್ : ಬೆಂಗಳೂರಿನಲ್ಲಿ ಮದುವೆ, ಮಂಡ್ಯದಲ್ಲಿ ಬೀಗರ ಊಟ

    ಅಭಿ-ಅವಿ ಮ್ಯಾರೇಜ್ : ಬೆಂಗಳೂರಿನಲ್ಲಿ ಮದುವೆ, ಮಂಡ್ಯದಲ್ಲಿ ಬೀಗರ ಊಟ

    ಅಂಬರೀಶ್ ಮತ್ತು ಸುಮಲತಾ ಅವರ ಏಕೈಕ ಪುತ್ರ ಅಭಿಷೇಕ್ (Abhishek Ambarish) ಅವರ ವಿವಾಹ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಜೂನ್ 5ನೇ ತಾರೀಖು ನಡೆಯಲಿದೆ. ಜೂನ್ 5ರಂದು ಅಭಿಷೇಕ್ ಮತ್ತು ಅವಿವಾ (Aviva Biddappa)  ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಜೂನ್ 7 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಜೂನ್ 17ಕ್ಕೆ ಮಂಡ್ಯದಲ್ಲಿ ಬೀಗರ ಊಟವನ್ನು (Beegara Uta) ಏರ್ಪಡಿಸಿದ್ದಾರೆ.

    ಮದುವೆ, ಆರತಕ್ಷತೆ ಸಮಾರಂಭದಲ್ಲಿ ಸುಮಾರು 10 ಸಾವಿರ ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ. ಏಪ್ರಿಲ್ 5ರಂದು ಅಭಿಷೇಕ್ (Abhishek Ambareesh) ಮತ್ತು ಸುಮಲತಾ ಅಂಬರೀಷ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಗೆ ಮದುವೆ (Wedding) ಆಮಂತ್ರಣ ಪತ್ರ ನೀಡಿದ್ದಾರೆ. ಅಲ್ಲದೇ ಅನೇಕ ಗಣ್ಯರಿಗೂ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ಅಭಿಷೇಕ್ ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಇನ್ನೂ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್‌ನಿಂದ ಶತ್ರುಘ್ನ ಸಿನ್ಹಾ ಇನ್ನೂ ಹಲವು ಪ್ರಮುಖ ತಾರೆಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ ಎನ್ನಲಾಗುತ್ತಿದೆ.

    ಮದುವೆಗೆ ಆಭರಣ, ವಸ್ತ್ರಗಳ ಖರೀದಿ ಜೋರಾಗಿ ನಡೆದಿದ್ದು, ಸ್ವತಃ ವಸ್ತ್ರ ವಿನ್ಯಾಸಕಿ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ ತೊಡಲಿರುವ ಉಡುಗೆಯನ್ನು ಡಿಸೈನ್ ಮಾಡುತ್ತಿರುವುದು ವಿಶೇಷ. ಫ್ಯಾಷನ್ ಈವೆಂಟ್‌ವೊಂದರಲ್ಲಿ ಅಭಿಷೇಕ್-ಅವಿವಾ ಭೇಟಿ, 3-4 ವರ್ಷಗಳ ಡೇಟಿಂಗ್ ನಂತರ ಇತ್ತೀಚಿಗೆ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿತ್ತು. ಖ್ಯಾತ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಮಗಳು ಅವಿವಾ ಜೊತೆ ಇದೀಗ ಹಸೆಮಣೆ ಏರಲು ಅಂಬಿ ಪುತ್ರ ಸಜ್ಜಾಗಿದ್ದಾರೆ.

  • ಕೆಲವೇ ಗಂಟೆಗಳಲ್ಲಿ ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಸಾವು

    ಕೆಲವೇ ಗಂಟೆಗಳಲ್ಲಿ ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಸಾವು

    ವಾಷಿಂಗ್ಟನ್: ವಿವಾಹವಾಗಲು (Wedding) ಕೆಲವೇ ಗಂಟೆಗಳು ಬಾಕಿ ಇರುವಾಗ ಅಗ್ನಿ ಅವಘಡದಲ್ಲಿ (Fire Incident) ವಧು (Bride) ದುರಂತ ಅಂತ್ಯ ಕಂಡ ಘಟನೆ ಅಮೆರಿಕಾದ (America) ವಿಸ್ಕಾನ್ಸಿನ್‌ನಲ್ಲಿ ನಡೆದಿದೆ ಎಂದು ವರದಿಗಳು ತಿಳಿಸಿವೆ.

    ಪೈಜ್ ರಡ್ಡಿ (19) ಮೃತಪಟ್ಟ ವಧು. ಮೇ 23ರಂದು ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ಪೈಜ್ ರಡ್ಡಿ ನಿದ್ರಿಸುತ್ತಿದ್ದಳು. ಈ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಹೊಗೆಯನ್ನು ಉಸಿರಾಡಿದ ವಧುವಿಗೆ ಮೆದುಳಿನ ರಕ್ತಸ್ರಾವವಾಗಿ (Brain Haemorrhage) ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬೈಬಲ್‌ ಹೊಂದಿದ್ದಕ್ಕೆ 2 ವರ್ಷದ ಮಗುವಿಗೆ ಜೀವಾವಧಿ ಶಿಕ್ಷೆ!

    ವಧು ತಮ್ಮ ಭಾವೀ ಪತಿಯಾದ ಲೋಗನ್ ಮಿಚೆಲ್ – ಕಾರ್ಟರ್ ಅವರೊಂದಿಗೆ ಸೋಮವಾರ ಪ್ರತಿಜ್ಞಾ ವಿಧಿಗಳನ್ನು ವಿನಿಮಯ ಮಾಡಿಕೊಂಡಿದ್ದಳು. ಅಲ್ಲದೇ ಸೌಕ್ ಕೌಂಟಿ ಕೋರ್ಟ್‌ಹೌಸ್‌ನಲ್ಲಿ ತಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸಣ್ಣ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ವಧು ಮತ್ತು ವರ ನೆಲೆಸಿದ್ದ ಮನೆ ವರನ ಅಜ್ಜಿಗೆ ಸೇರಿದ್ದು, ಘಟನೆ ನಡೆದ ಸಂದರ್ಭ ಹೊಗೆ ತುಂಬಿದ್ದರಿಂದ ವಧುವಿಗೆ ಹೊಗೆಯಿಂದ ಆಚೆಬರಲಾಗಲಿಲ್ಲ ಎಂದು ಅಗ್ನಿಶಾಮಕ (Fire Extinguisher)  ವಿಭಾಗದ ಮುಖ್ಯಸ್ಥ ಕ್ರೇಗ್ ಡೌಗ್ಲಾಸ್ ತಿಳಿಸಿದ್ದಾರೆ. ಇದನ್ನೂ ಓದಿ: 72 ವರ್ಷದ ವೃದ್ಧನನ್ನು ಕೊಂದು ತಿಂದ 40 ಮೊಸಳೆಗಳು!

    ಪ್ರಾಥಮಿಕ ತನಿಖೆಯು ಆಕೆ ಹೊಗೆ ಸೇವನೆ ಮಾಡಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ತೋರಿಸುತ್ತದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದ್ದು, ಯಾವುದೇ ಅನುಮಾನಾಸ್ಪದ ಘಟನೆಗಳು ನಡೆದಿಲ್ಲ ಎಂದು ಸೌಕ್ ಕೌಂಟಿಯ ಕರೋನರ್ ಕಚೇರಿಯು ಮಾಹಿತಿ ನೀಡಿದೆ. ಅಲ್ಲದೇ ಘಟನೆ ನಡೆದ ಸಂದರ್ಭ ಇನ್ನೂ ಮೂವರು ಮನೆಯಲ್ಲಿದ್ದು, ಅಗ್ನಿಶಾಮಕ ದಳ ಬರುವಷ್ಟರಲ್ಲಿ ಅವರು ಬೆಂಕಿಯಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ

    ಪೈಜ್ ರಡ್ಡಿ ರೀಡ್ಸ್‌ಬರ್ಗ್ ಏರಿಯಾ ಹೈಸ್ಕೂಲ್‌ನಿಂದ ಜೂನ್ 2022ರಲ್ಲಿ ಪದವಿ ಪಡೆದಿದ್ದಳು. ಅಲ್ಲದೇ ಮ್ಯಾಡಿಸನ್ ಏರಿಯಾದ ಟೆಕ್ನಿಕಲ್ ಕಾಲೇಜಿನಲ್ಲಿ ವೆಟ್ ಟೆಕ್ ಕಾರ್ಯಕ್ರಮಕ್ಕೆ ಸೇರಲು ಯೋಚಿಸಿದ್ದಳು ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ. ಮುಂದಿನ ವಾರ ಆಕೆಯ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಮತ್ತು ಆಕೆಯ ವೈದ್ಯಕೀಯ ಚಿಕಿತ್ಸೆಗಳ ವೆಚ್ಚವನ್ನು ಭರಿಸಲು ಆಕೆಯ ಕುಟುಂಬಸ್ಥರು ಗೋಫಂಡ್‌ಮೀ (GoFundMe) ಅನ್ನು ಸ್ಥಾಪಿಸಿದ್ದಾರೆ.‌ ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು