Tag: wedding

  • ‘ಹನಿಮೂನ್’ ಗೂ ಮುನ್ನ ಮನೆದೇವರ ಆಶೀರ್ವಾದ ಪಡೆದ ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್

    ‘ಹನಿಮೂನ್’ ಗೂ ಮುನ್ನ ಮನೆದೇವರ ಆಶೀರ್ವಾದ ಪಡೆದ ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್

    ಟಿ ಮಹಾಲಕ್ಷ್ಮಿ (Mahalakshmi) ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ (Ravinder Chandrasekaran) ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ (Wedding)ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ (Honeymoon) ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಹನಿಮೂನ್ ಅನ್ನು ಎಂಜಾಯ್ ಮಾಡುತ್ತಿದ್ದರೆ ಈ ನಡುವೆ ಮತ್ತೊಂದು ಸ್ಪೂಟಕ ಸುದ್ದಿ ಹೊರ ಬಂದಿದ್ದು, ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು.

    ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ. ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ವೈರಲ್

    ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ವೈರಲ್

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ (Mahalakshmi) ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ (Wedding) ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು (Photo) ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್  (Viral) ಕೂಡ ಆಗಿವೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ ರಶ್ಮಿಕಾ ಮಂದಣ್ಣಗೆ ಭರ್ಜರಿ ಡಿಮ್ಯಾಂಡ್

    ಮಹಾಲಕ್ಷ್ಮಿ ಮತ್ತು ರವೀಂದರ್ (Ravinder Chandrasekaran) ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.

    ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಹನಿಮೂನ್ (Honeymoon) ಅನ್ನು ಎಂಜಾಯ್ ಮಾಡುತ್ತಿದ್ದರೆ ಈ ನಡುವೆ ಮತ್ತೊಂದು ಸ್ಪೂಟಕ ಸುದ್ದಿ ಹೊರ ಬಂದಿದ್ದು, ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು.

    ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ. ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಕೊನೆಗೂ ಫಿಕ್ಸ್ ಆಯ್ತು ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮದುವೆ ದಿನಾಂಕ

    ಕೊನೆಗೂ ಫಿಕ್ಸ್ ಆಯ್ತು ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮದುವೆ ದಿನಾಂಕ

    ಬಾಲಿವುಡ್‌ನಲ್ಲಿ ಸದ್ಯ ಗಟ್ಟಿಮೇಳದ ಸೌಂಡ್ ಜೋರಾಗಿದೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿ ಹಸೆಮಣೆ ಏರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಅಷ್ಟೇ ಅಲ್ಲ, ಮದುವೆ ದಿನಾಂಕದ ಜೊತೆ ಸ್ಥಳ ಕೂಡ ನಿಗದಿಯಾಗಿದೆ.

    ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟ ಸುನೀಲ್ ಶೆಟ್ಟಿ ಕೂಡ ಮಗಳ ಮದುವೆಯ ಸಕಲ ತಯಾರಿಯಲ್ಲಿದ್ದಾರೆ. ಮದುವೆಗೆ ಡೇಟ್ ಅಷ್ಟೇ ಫಿಕ್ಸ್ ಮಾಡಿರುವುದಲ್ಲ, ಸ್ಥಳ ಕೂಡ ಫಿಕ್ಸ್ ಮಾಡಿದ್ದಾರೆ.

     

    View this post on Instagram

     

    A post shared by Athiya Shetty (@athiyashetty)

    ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸುನೀಲ್ ಶೆಟ್ಟಿ ಅವರ ಖಂಡಾಲ ಬಂಗಲೆಯಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಇದನ್ನೂ ಓದಿ:ಸಿನಿಮಾಗೆ 2 ಕೋಟಿ, ಟಿವಿಗೆ ಹೋದರೆ 3 ಕೋಟಿ ಸಂಭಾವನೆ ಪಡೆಯುತ್ತಾರಂತೆ ಜಗ್ಗೇಶ್: ತಮ್ಮ ಸಂಭಾವನೆ ಬಹಿರಂಗ ಪಡಿಸಿದ ನಟ

    ಇನ್ನೂ ಮಗಳ ಮದುವೆಯ ಬಗ್ಗೆ ಸುನೀಲ್‌ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಧರಿಸಿದ ತಕ್ಷಣ ನಾನು ಮದುವೆಗೆ ಒಪ್ಪಿಕೊಂಡೆ. ಆದರೆ ರಾಹುಲ್‌ಗೆ ಸದ್ಯ ಹಲವು ಪಂದ್ಯಗಳಿವೆ. ಅವರು ಏಷ್ಯಾಕಪ್, ವಿಶ್ವಕಪ್, ದಕ್ಷಿಣ ಆಫ್ರಿಕಾ ಪ್ರವಾಸ ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಸರಣಿ ಆಡಬೇಕಿದೆ. ಆ ಕೆಲಸಗಳಿಂದ ವಿರಾಮ ಸಿಕ್ಕ ಕೂಡಲೇ ಮದುವೆಯಾಗುತ್ತಾರೆ. ಏಕೆಂದರೆ ಮದುವೆ ಒಂದು ದಿನದಲ್ಲಿ ಆಗಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

    ಈ ಹಿಂದೆಯೂ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಸುನೀಲ್ ಶೆಟ್ಟಿ, ನನ್ನ ಆಶೀರ್ವಾದ ಯಾವಾಗಲೂ ಅವರೊಂದಿಗೆ ಇರುತ್ತದೆ. ಈಗ ಕಾಲ ಬದಲಾಗಿದೆ ಅವರವರ ಇಚ್ಛೆಗೆ ಅನುಗುಣವಾಗಿ ಏನು ಮಾಡಬೇಕೆಂದು ಅವರೇ ನಿರ್ಧರಿಸುತ್ತಾರೆ. ನನ್ನ ಮಗಳು ಮತ್ತು ಮಗ ಇಬ್ಬರೂ ಜವಾಬ್ದಾರಿಯುತರಾಗಿದ್ದಾರೆ. ಅವರ ಭವಿಷ್ಯದ ನಿರ್ಧಾರ ಅವರೇ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನನ್ನ ಆಶೀರ್ವಾದ ಅವರಿಗೆ ಯಾವಾಗಲೂ ಇರುತ್ತದೆ ಎಂದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮದುವೆಯಾಗುವಂತೆ ಕೋರಿ ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ವಧು!

    ಮದುವೆಯಾಗುವಂತೆ ಕೋರಿ ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ವಧು!

    ಪಾಟ್ನಾ: ವಧುವೊಬ್ಬಳು ನನ್ನನ್ನು ಮದುವೆಯಾಗು ಎಂದು ಮಾರುಕಟ್ಟೆಯಲ್ಲಿ ಯುವಕನ ಹಿಂದೆ ಓಡಿದ ಘಟನೆ ಬಿಹಾರದಲ್ಲಿ ನಡೆದಿದೆ.

    ಬಿಹಾರದ ನವಾಡದಲ್ಲಿ ಈ ಘಟನೆ ನಡೆದಿರುವ ವೀಡಿಯೋವು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಧುವಿನ ಕುಟುಂಬಸ್ಥರ ಪ್ರಕಾರ, ವಧುವಿಗೂ ಯುವಕನಿಗೂ 3 ತಿಂಗಳ ಹಿಂದೆ ಮದುವೆ ನಿಶ್ಚಯಿಸಲಾಗಿತ್ತು. ಅಷ್ಟೇ ಅಲ್ಲದೇ ಯುವಕನಿಗೆ ಬೈಕ್ ಹಾಗೂ 50 ಸಾವಿರ ನಗದನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೆ ಯುವಕ ಸಬೂಬನ್ನು ಹೇಳಿ ಮದುವೆಯನ್ನು ವಿಳಂಬ ಮಾಡುತ್ತಲೇ ಇದ್ದ. ಈ ಹಿನ್ನೆಲೆಯಲ್ಲಿ ವಧು ಮಾರುಕಟ್ಟೆಯಲ್ಲಿ ನನ್ನನ್ನು ಮದುವೆಯಾಗಿ ಎಂದು ಯುವಕನ ಹಿಂದೆ ಓಡಿದ್ದಾಳೆ.

    ವೀಡಿಯೋದಲ್ಲಿ ಏನಿದೆ?: ನವಡಾದ ಭಗತ್ ಸಿಂಗ್ ಚೌಕ್‍ನಲ್ಲಿ ಯುವಕನೊಬ್ಬ ಹೋಗುತ್ತಿದ್ದ. ಈ ವೇಳೆ ಆತನನ್ನು ನೋಡಿದ ವಧು ನನ್ನನ್ನು ಮದುವೆಯಾಗು ಎಂದು ಅವನ ಕೈಯನ್ನು ಹಿಡಿದು ಅಳುತ್ತಾ ಒತ್ತಾಯಿಸಿದ್ದಾಳೆ. ಇದರಿಂದಾಗಿ ಆತ ವಧುವಿನಿಂದ ತಪ್ಪಿಸಿಕೊಂಡು ಅಲ್ಲಿಂದ ಓಡಲು ಪ್ರಯತ್ನಿಸಿದ್ದಾರೆ. ಆದರೆ ವಧು ಆತನನ್ನು ಹಿಡಿಯಲು ಅವನ ಹಿಂದೆ ಓಡುತ್ತಾಳೆ. ಕೊನೆಗೂ ಆ ಯುವಕನ ಶತಪ್ರಯತ್ನಗಳೆಲ್ಲಾ ವಿಫಲವಾಗಿ ವಧುವಿನ ಕೈಯಲ್ಲಿ ಸಿಕ್ಕಿಬಿಳುತ್ತಾನೆ. ಇದನ್ನೂ ಓದಿ: ಪಂದ್ಯ ಸೋತ್ರೂ ರೋಮ್ಯಾಂಟಿಕ್ ಮೂಡ್- ಗೆಳತಿಗೆ ಪ್ರಪೋಸ್ ಮಾಡಿದ ಕ್ರಿಕೆಟಿಗ

    ಆ ವೇಳೆಗಾಗಲೇ ಅಲ್ಲಿ ಜನರೆಲ್ಲರೂ ಸೇರಿರುತ್ತಾರೆ. ಅವರೆಲ್ಲರ ಎದುರೇ ವಧು, ಅಳುತ್ತಾ, ನನ್ನನ್ನು ಮದುವೆಯಾಗು ಎಂದು ಒತ್ತಾಯಿಸುತ್ತಾಳೆ. ಅಷ್ಟೇ ಅಲ್ಲದೇ ಆತನನ್ನು ಬಿಟ್ಟರೇ ಮತ್ತೆ ಎಲ್ಲಿ ತಪ್ಪಿಸಿಕೊಳ್ಳುತ್ತಾನೋ ಎನ್ನುವ ಭಯದಿಂದ ಆತನ ಕೈಯನ್ನು ಹಿಡಿಕೊಂಡು ಗಲಾಟೆ ಪ್ರಾರಂಭಿಸುತ್ತಾಳೆ. ಆಗ ಪೊಲೀಸರು ಮಧ್ಯಪ್ರವೇಶಿಸಿ, ಘಟನೆಗೆ ಸಂಬಂಧಿಸಿ ಎರಡು ಕಡೆಯವರನ್ನು ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ಮಾಡಿ ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ. ಆನಂತರದಲ್ಲಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ದೇವಸ್ಥಾನದಲ್ಲಿ ಇಬ್ಬರು ವಿವಾಹವಾದರು. ಇದನ್ನೂ ಓದಿ: ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್‌ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    Live Tv
    [brid partner=56869869 player=32851 video=960834 autoplay=true]

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ಮನೋರಂಜನ್ ರವಿಚಂದ್ರನ್

    ವೈವಾಹಿಕ ಜೀವನಕ್ಕೆ ಕಾಲಿಟ್ಟ ಮನೋರಂಜನ್ ರವಿಚಂದ್ರನ್

    ಸಾಹೇಬ, ಮುಗಿಲುಪೇಟೆ, ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ರವಿಂಚಂದ್ರನ್ ಪುತ್ರ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸಂಗೀತಾ ದೀಪಕ್ ಜತೆ ಮನೋರಂಜನ್ ಹಸೆಮಣೆ ಏರಿದ್ದಾರೆ.

    ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರ ಹಿರಿಯ ಪುತ್ರ ನಟ ಮನೋರಂಜನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್ 21 ರಂದು 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಸಂಗೀತಾ ಎಂಬವರ ಕೈ ಹಿಡಿದಿದ್ದಾರೆ.‌ ಇದನ್ನೂ ಓದಿ:ಇಂದಿನಿಂದ 3 ದಿನಗಳ ಕಾಲ ರವಿಚಂದ್ರನ್ ಪುತ್ರನ ಮದುವೆ ಸಡಗರ: ಸಿಂಗಾರಗೊಂಡ ಪ್ಯಾಲೇಸ್ ಮೈದಾನ

    ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿನ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ನಡೆದ ಶುಭಘಳಿಗೆಯಲ್ಲಿ ಚಿತ್ರರಂಗದ ಕೆಲ ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು.

    ಇದೇ ವೇಳೆ ರವಿಚಂದ್ರನ್ ಅವರ ಆಪ್ತರೆನಿಸಿಕೊಂಡಿರುವ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ನಟಿ ಖುಷ್ಬೂ, ಉಮಾಶ್ರೀ, ನಟ ಶರಣ್, ಉಮಾಶ್ರೀ, ಮಾಸ್ಟರ್‌ ಆನಂದ್‌, ಗಾಯಕ ಹೇಮಂತ್‌, ಅಕುಲಗ ಬಾಲಾಜಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    ಈ ವೇಳೆ ಅಭಿಮಾನಿಗಳು ಕೂಡ ನೆಚ್ಚಿನ ನಟನ ಹೊಸ ಬಾಳಿಗೆ ಶುಭಹಾರೈಸಿದ್ದಾರೆ. ಚಿತ್ರರಂಗದಲ್ಲಿ ಕೂಡ ಉತ್ತುಂಗಕ್ಕೆ ಎರಲಿ ಎಂಬುದೇ ಅಭಿಮಾನಿಗಳ ಆಶಯ.

    Live Tv
    [brid partner=56869869 player=32851 video=960834 autoplay=true]

  • ಮದುವೆ ಮನೆಯಲ್ಲಿ ನವಜೋಡಿಗೆ ಸಾವರ್ಕರ್ ಫೋಟೋ ಗಿಫ್ಟ್

    ಮದುವೆ ಮನೆಯಲ್ಲಿ ನವಜೋಡಿಗೆ ಸಾವರ್ಕರ್ ಫೋಟೋ ಗಿಫ್ಟ್

    ತುಮಕೂರು: ರಾಜ್ಯದಲ್ಲಿ ಸಾವರ್ಕರ್ ಫೋಟೋ ವಿವಾದ ನಡುವೆ ಮದುವೆ ಮನೆಯಲ್ಲಿ ನವಜೋಡಿಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಫೋಟೋ ಗಿಫ್ಟ್ ನೀಡಿದ್ದಾರೆ.

    ಈ  ತುಮಕೂರಿನ ಸಿದ್ದಿ ವಿನಾಯಕ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಯಾನಂದ- ಸೌಮ್ಯ ಮದುವೆ ನಡೆದಿದೆ. ಈ ಮದುವೆಯ ಆರತಕ್ಷತೆಯ ಸಮಯದಲ್ಲಿ ನವಜೋಡಿಗೆ ಬಿಜೆಪಿ ಎಸ್‍ಟಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋವನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿರೋಧಿಸಿ ಧಾರವಾಡದಲ್ಲಿ ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕೃತಿ ದಹಿಸಿ ಸಾವರ್ಕರ್ ಭಾವಚಿತ್ರಕ್ಕೆ ಮೊಟ್ಟೆಯಿಂದ ಹೊಡೆದಿದ್ದರು. ಅಷ್ಟೇ ಅಲ್ಲದೇ ಸಾವರ್ಕರ್ ಫೋಟೋಗಳನ್ನೂ ಕಾರ್ಯಕರ್ತರು ಸುಟ್ಟಿದ್ದರು.

    ಇದನ್ನೂ ಓದಿ: ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ

    ಇತ್ತೀಚೆಗಷ್ಟೇ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿತ್ತು. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು. ಇದೇ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದರು. ಇದನ್ನೂ ಓದಿ: ಮೊಟ್ಟೆ ಕಾಳಗ: ಆ.26ಕ್ಕೆ ಮಡಿಕೇರಿಯಲ್ಲಿ ಕಾಂಗ್ರೆಸ್‌, ಬಿಜೆಪಿ ಮಧ್ಯೆ ಕೋಳಿ ಜಗಳ!

    Live Tv
    [brid partner=56869869 player=32851 video=960834 autoplay=true]

  • ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

    ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರಾ ಪ್ರಿಯಾಮಣಿ: ವದಂತಿಗೆ ಸ್ಪಷ್ಟನೆ ನೀಡಿದ ನಟಿ

    ಹುಭಾಷಾ ನಟಿ ಪ್ರಿಯಾಮಣಿ ಇದೀಗ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸಿನಿಮಾ, ರಿಯಾಲಿಟಿ ಶೋ, ನಡುವೆ ಬ್ಯುಸಿಯಿರುವ ನಟಿಯ ಬಗ್ಗೆ ಈ ನಡುವೆ ಡಿವೋರ್ಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಪತಿ ಮುಸ್ತಾಫ್‌ರಿಂದ ಡಿವೋರ್ಸ್ ವದಂತಿಗೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ.

    ಪುನೀತ್‌ಗೆ ನಾಯಕಿಯಾಗಿ `ರಾಮ್’ ಚಿತ್ರದ ಮೂಲಕ ಚಂದನವನಕ್ಕೆ ಲಗ್ಗೆಯಿಟ್ಟ ನಟಿ ನಂತರ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಬಹುಭಾಷಾ ನಾಯಕಿಯಾಗಿ ಗುರುತಿಸಿಕೊಂಡರು. ಬೇಡಿಕೆ ಇರುವಾಗಲೇ ಉದ್ಯಮಿ ಮುಸ್ತಾಫ್ ಜತೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಮದುವೆ ಆಗಿ ಇಷ್ಟು ವರ್ಷಗಳಾದರು ಮಕ್ಕಳಾಗಿಲ್ಲ, ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬೆಲ್ಲಾ ವದಂತಿಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಹಾಗಾಗಿ ಪ್ರಿಯಾಮಣಿ ಡಿವೋಸ್‌ ಪಡೆಯುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ನಟಿ ಕೂಡ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸುಳ್ಳು, ನಾವು ಡಿವೋರ್ಸ್ ಪಡೆಯುತ್ತಿಲ್ಲ. ನಮ್ಮ ದಾಂಪತ್ಯ ಚೆನ್ನಾಗಿದೆ. ನಾವು ಖುಷಿಯಿಂದ ಬಾಳುತ್ತೀದ್ದೇವೆ ಎಂದು ಪ್ರಿಯಾಮಣಿ ಮಾತನಾಡಿದ್ದಾರೆ. ಈ ಮೂಲಕ ಡಿವೋರ್ಸ್ ವಿಚಾರದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ಕಿರುತೆರೆಯಲ್ಲಿ ಸಾಕಷ್ಟು ಶೋ ಮತ್ತು ಸೀರಿಯಲ್ ಮೂಲಕ ಕಮಾಲ್ ಮಾಡಿರುವ ಕಾನಿಷ್ಕಾ ಸೋನಿ ಅವರ ಮದುವೆಯ ಪ್ರಸಂಗ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ತನ್ನನ್ನು ತಾನೇ ಮದುವೆಯಾಗಿರುವ ನಟಿ ಕಾನಿಷ್ಕಾ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

     

    View this post on Instagram

     

    A post shared by Kanishka Soni (@itskanishkasoni)

    ಕಿರುತೆರೆ ಜನಪ್ರಿಯ ಸೀರಿಯಲ್ `ದಿಯಾ ಔರ್ ಬಾತಿ ಹಮ್’ ಖ್ಯಾತಿಯ ನಟಿ ಕಾನಿಷ್ಕಾ ಸೋನಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಆಕೆಯ ಕೆಲವು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡುತ್ತಿದೆ. ಅದರಲ್ಲಿ ಅವರು ಹಣೆಗೆ ಸಿಂಧೂರವಿಟ್ಟು ಮತ್ತು ಕತ್ತಿಗೆ ಮಂಗಳಸೂತ್ರವನ್ನು ಧರಿಸಿದ್ದಾರೆ. ಕಾನಿಷ್ಕಾ ತನ್ನ ಇನ್ಸ್ಟಾಗ್ರಾಂ ಮೂಲಕ ತಾನು ಮದುವೆಯಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದುಬಾರಿ ಮೊತ್ತದ ಕಾರು ಖರೀದಿಸಿದ `ಬಿಗ್ ಬಾಸ್’ ಖ್ಯಾತಿಯ ಅನುಪಮಾ ಗೌಡ

     

    View this post on Instagram

     

    A post shared by Kanishka Soni (@itskanishkasoni)

    ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಫೋಟೋ, ಕಾನಿಷ್ಕಾ ಹಣೆಯಲ್ಲಿ ಸಿಂಧೂರವೂ ಕಾಣುತ್ತದೆ ಅಲ್ಲದೇ ಆಕೆ ಕತ್ತಿನಲ್ಲಿ ಮಂಗಳಸೂತ್ರವನ್ನು ಧರಿಸಿದ್ದಾರೆ. ಈಗ ಕನಿಷ್ಕಾ ತಮ್ಮ ಪೋಸ್ಟ್‌ನಲ್ಲಿ, ನನ್ನನ್ನೇ ಮದುವೆಯಾಗಿದ್ದೇನೆ ಏಕೆಂದರೆ ನಾನು ನನ್ನ ಎಲ್ಲಾ ಕನಸುಗಳನ್ನು ಪೂರೈಸಿದ್ದೇನೆ ಮತ್ತು ನನ್ನನ್ನು ಪ್ರೀತಿಸುವ ಏಕೈಕ ವ್ಯಕ್ತಿ ನಾನೇ ಆಗಿದ್ದೇನೆ ಎಂದಿದ್ದಾರೆ. ಒಟ್ನಲ್ಲಿ ನಟಿಯ ನಡೆ ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ-ಸುಹಾಸ್

    ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ-ಸುಹಾಸ್

    ತ್ತಿಚೆಗಷ್ಟೇ `ಕಮಲಿ’ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಹಸೆಮಣೆ ಏರಿದ ಬೆನ್ನಲ್ಲೇ ಇದೇ ಧಾರಾವಾಹಿಯ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅನಿಕಾ ಅಲಿಯಾಸ್ ಗೇಬ್ರಿಯೆಲಾ ಮತ್ತು ಸುಹಾಸ್ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ.

     

    View this post on Instagram

     

    A post shared by Gabriella Smith (@gabby_ella_smith)

    `ಕಮಲಿ’ ಖ್ಯಾತಿಯ ಗೇಬ್ರಿಯೆಲಾ ಅಲಿಯಾಸ್ ರಚನಾ ಹಾಗೂ ಸುಹಾಸ್ ಅವರ ಮಧ್ಯೆ ರಿಯಲ್ ಆಗಿ ಪ್ರೀತಿ ಅರಳಿದೆ. ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಟ್ರೈಯಾಂಗಲ್‌ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ

    ಈ ಜೋಡಿ `ಕಮಲಿ’ ಸೀರಿಯಲ್‌ನಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಅನಿಕಾ ಪಾತ್ರಧಾರಿಯಾಗಿ ಗೇಬ್ರಿಯೆಲಾ ಕಾಣಿಸಿಕೊಂಡ್ರೆ, ಸುಹಾಸ್ ಅವರು ಶಂಭು ಪಾತ್ರ ಮಾಡುತ್ತಿದ್ದಾರೆ. ಆರಂಭದಲ್ಲಿ ಇಬ್ಬರೂ ಸ್ನೇಹಿತರಾಗಿದ್ದರು ನಂತರ ಔಟ್‌ಡೋರ್ ಶೂಟಿಂಗ್ ವೇಳೆಯಲ್ಲಿ ಸುಹಾಸ್ ಮತ್ತು ಅನಿಕಾ ಮಧ್ಯೆ ಮಾತು ಹೆಚ್ಚಾಗಿ ಸ್ನೇಹ ಬೆಳೆದು, ಪ್ರೀತಿಯಾಗಿ ತಿರುಗಿತು. ಕಳೆದ ೩ ವರ್ಷಗಳಿಂದ ರಿಲೇಶನ್‌ಶಿಪ್‌ನಲ್ಲಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

     

    View this post on Instagram

     

    A post shared by Gabriella Smith (@gabby_ella_smith)

    ಇನ್ನು ನಟ ಸುಹಾಸ್ ಅವರೇ ಗೇಬ್ರಿಯೆಲಾ ಪ್ರೇಮ ನಿವೇದನೆ ಮಾಡಿದ್ದರು. ನಟಿ ಕೂಡ ಒಪ್ಪಿ, ಪರಸ್ಪರ ಮೂರು ವರ್ಷಗಳ ಕಾಲ ಪ್ರೀತಿ ಮಾಡಿ ಈಗ ಗುರುಹಿರಿಯರ ಸಮ್ಮತಿಯ ಮೇರೆ ಹೊಸ ಬಾಳಿಗೆ ಕಾಲಿಡುತ್ತಿಡುತ್ತಿದ್ದಾರೆ. ಇದೀಗ ಸುಹಾಸ್ ಪ್ರಪೋಸ್ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಸೆಮಣೆ ಏರಲು ಸಜ್ಜಾದ ಮಹಾನಟಿ ಕೀರ್ತಿ ಸುರೇಶ್: ಹುಡುಗ ಯಾರು ಗೊತ್ತಾ?

    ಹಸೆಮಣೆ ಏರಲು ಸಜ್ಜಾದ ಮಹಾನಟಿ ಕೀರ್ತಿ ಸುರೇಶ್: ಹುಡುಗ ಯಾರು ಗೊತ್ತಾ?

    ಸೌತ್ ಅಂಗಳದಲ್ಲಿ ಸದ್ಯ ಸೌಂಡ್ ಮಾಡುತ್ತಿರುವ ಸುದ್ದಿ ಅಂದ್ರೆ ಮಹಾನಟಿ ಕೀರ್ತಿ ಸುರೇಶ್ ಮದುವೆ ವಿಚಾರ. ಉದ್ಯಮಿ ಜೊತೆ ಹಸೆಮಣೆ ಏರೋದಕ್ಕೆ ನಟಿ ಕೀರ್ತಿ ರೆಡಿಯಾಗಿದ್ದಾರೆ.

    ಮಹಾನಟಿ ಕೀರ್ತಿ ಸುರೇಶ್ ಸದ್ಯದಲ್ಲೇ ಮದುವೆಯಾಗಲಿದ್ದಾರಂತೆ. ನಟಿಯ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಎಂದಿನಂತೆ ಸೋಷಿಯಲ್ ಮೀಡಿಯಾದಲ್ಲಿ ನಾಯಕಿಯರ ಮದುವೆ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಿವೆ. ಸೌತ್ ಅಂಗಳದ ಚೆಲುವೆ ಕೀರ್ತಿ ಸುರೇಶ್ ವಿವಾಹವಾಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ತಲೈವಾ: ರಾಜಕೀಯ ಎಂಟ್ರಿಯ ಬಗ್ಗೆ ಚರ್ಚೆ

    ಗುರು ಹಿರಿಯರು ನಿಶ್ಚಯಿಸಿದ ವರನೊಂದಿಗೆ ಏಳು ಹೆಜ್ಜೆ ಇಡಲು ಕೀರ್ತಿ ಸುರೇಶ್ ಒಪ್ಪಿಗೆ ನೀಡಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರ ಬೀಳಲಿದೆ ಎನ್ನಲಾಗಿದೆ. ಇನ್ನು ಕೀರ್ತಿ ಸುರೇಶ್ ಮದುವೆ ಆಗುತ್ತಿರುವುದು ಉದ್ಯಮಿಯೋರ್ವನಾಗಿದ್ದು, ಸದ್ಯದಲ್ಲೇ ಹಸೆಮಣೆ ಏರೋದು ಪಕ್ಕಾ ಎನ್ನಲಾಗುತ್ತಿದೆ.

    ಸಾಮಾನ್ಯವಾಗಿ ನಟಿಮಣಿಯರು ಲವ್ ಮ್ಯಾರೇಜ್ ಆಗೋದೆ ಹೆಚ್ಚು. ಆದರೆ, ಕೀರ್ತಿ ಸುರೇಶ್ ಮಾತ್ರ ಅರೇಂಜ್ ಮ್ಯಾರೇಜ್‌ಗೆ ಒಪ್ಪಿಗೆ ನೀಡಿದ್ದಾರೆ. ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಶೇರ್ ಮಾಡುತ್ತಿದ್ದಾರೆ. ಜತೆಗೆ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]