ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಡಾ.ಗುರುಪ್ರೀತ್ ಕೌರ್ ಅವರನ್ನು ಇಂದು ಗುರು ಹಿರಿಯರ ಸಮ್ಮುಖದಲ್ಲಿ ತಮ್ಮ ನಿವಾಸದಲ್ಲಿ ವಿವಾಹವಾಗಿದ್ದಾರೆ. ವಿಶೇಷವೆಂದರೆ ಈ ಮದುವೆ ಸಮಾರಂಭದಲ್ಲಿನ ಫುಡ್ ಮೆನು ಎಲ್ಲರ ಗಮನ ಸೆಳೆದಿದೆ.

ಸಾಮಾನ್ಯವಾಗಿ ಮದುವೆ ಸಮಾರಂಭ ಊಟವಿಲ್ಲದೇ ಪರಿಪೂರ್ಣವಾಗುವುದಿಲ್ಲ. ಮದುವೆ ವೇಳೆ ಅನೇಕ ವಿವಿಧ ಖಾದ್ಯಗಳನ್ನು ಮಾಡಿಸಲಾಗಿರುತ್ತದೆ. ಸದ್ಯ ಭಗವಂತ್ ಮಾನ್ ಅವರು ತಮ್ಮ ಮದುವೆಗೆ ಆಗಮಿಸಿರುವ ಅಥಿತಿಗಳಿಗೆ ವಿಶೇಷ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ. ಎಲ್ಲ ರೀತಿಯ ಖಾದ್ಯಗಳು ಎಲ್ಲರ ಬಾಯಿಯಲ್ಲಿ ನೀರು ತರಿಸುವಂತಿದೆ. ಇದನ್ನೂ ಓದಿ: ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ

ಹೌದು ಭಗವಂತ್ ಮಾನ್ ಅವರ ಮದುವೆ ಸಮಾರಂಭದಲ್ಲಿ ಅತಿಥಿಗಳಿಗಾಗಿ ಕರಾಹಿ ಪನೀರ್, ತಂದೂರಿ ಕುಲ್ಚಾ, ದಾಲ್ ಮಖಾನಿ, ನವರತನ್ ಬಿರಿಯಾನಿ, ಮೌಸಮಿ ಸಬ್ಜಿಯಾನ್, ಏಪ್ರಿಕಾಟ್ ಸ್ಟಫ್ಡ್ ಕೋಫ್ತಾ, ಲಸಾಗ್ನಾ ಸಿಸಿಲಿಯಾನೋ ಮತ್ತು ಬಿರಿಯಾನಿ ರೈತಾ ಸೇರಿದಂತೆ ಭಾರತೀಯ ಮತ್ತು ಇಟಾಲಿಯನ್ ಫುಡ್ಗಳನ್ನು ಮಾಡಿಸಲಾಗಿದೆ. ಇದನ್ನೂ ಓದಿ: ನಾಳೆ ಪಂಜಾಬ್ ಸಿಎಂ 2ನೇ ಮದುವೆ – ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್
ಇನ್ನೂ ಸಿಹಿ ತಿಂಡಿ ವಿಚಾರಕ್ಕೆ ಬಂದರೆ ಫ್ರೆಶ್ ಫ್ರೂಟ್ ಟ್ರಫಲ್, ಮೂಂಗ್ ದಾಲ್ ಹಲ್ವಾ, ಶಾಹಿ ತುಕ್ಡಾ, ಅಂಗೂರಿ ರಸಮಲೈ ಮತ್ತು ಡ್ರೈ ಫ್ರೂಟ್ ರಬರಿ, ಬಿಸಿ ಗುಲಾಬ್ ಜಾಮೂನ್ನಂತಹ ವಿವಿಧ ಸಿಹಿತಿಂಡಿಗಳಿವೆ ಮತ್ತು ಆರೋಗ್ಯ ಸಮಸ್ಯೆಗೆ ಹೊಂದಿರುವವರಿಗೆ ವಿವಿಧ ರೀತಿಯ ಸಲಾಡ್ಗಳ ವ್ಯವಸ್ಥೆಗೊಳಿಸಲಾಗಿದೆ.
ಸಿಎಂ ನಿವಾಸದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

















ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿರುವ ಅನುಶ್ರೀ, ತಮ್ಮ ವಿಭಿನ್ನ ನಿರೂಪಣೆಯ ಮೂಲಕ ಸ್ಯಾಂಡಲ್ವುಡ್ನಲ್ಲಿ ಮನೆಮಾತಾಗಿದ್ದಾರೆ. ಚಿತ್ರರಂಗದ ಕಾರ್ಯಕ್ರಮಗಳ ಜೊತೆಗೆ ಟಿವಿ ಶೋ ಮುಖಾಂತರ ಅನುಶ್ರೀ, ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಮತ್ತೆ ನಟಿ ಕಮ್ ನಿರೂಪಕಿ ಅನುಶ್ರೀ ಸುದ್ದಿಯಲ್ಲಿದ್ದಾರೆ. ಈ ಬಾರಿ ಮದುವೆಯ ವಿಚಾರದ ಮೂಲಕ ಗಾಂಧಿನಗರದಲ್ಲಿ ಸದ್ದು ಮಾಡ್ತಿದ್ದಾರೆ. ಇದನ್ನೂ ಓದಿ:
ಅನುಶ್ರೀ ಅವರಿಗೆ ಮದುವೆಯಾಗಲು ಮನಸ್ಸು ಮಾಡಿದ್ದಾರೆ. ಮದುವೆ ಆಗುವುದಕ್ಕೆ ಆಸೆಯಾಗುತ್ತಿದೆ ಅಂತೆ ಹಾಗಂತ ಸ್ವತಃ ತಮ್ಮ ಮನದಾಳದ ಮಾತನ್ನ ಖಾಸಗಿ ಶೋವೊಂದರಲ್ಲಿ ಅನುಶ್ರೀ ಹೇಳಿಕೊಂಡಿದ್ದಾರೆ. ಖಾಸಗಿ ವಾಹಿನಿವೊಂದರಲ್ಲಿ ಜೋಡಿಗಳ ರಿಯಾಲಿಟಿ ಶೋ ನಡೆಯುತ್ತಿದ್ದು, ಆ ಜೋಡಿಗಳ ಪ್ರೀತಿ, ಬಾಂಧವ್ಯ ನೋಡಿ ಶೋನಲ್ಲಿ ತಾನು ಕೂಡ ಮದುವೆಯಾಗಬೇಕು ಅಂತಾ ಆಸೆಯಾಗುತ್ತದೆ ಅಂತಾ ಅನುಶ್ರೀ ಮುಕ್ತವಾಗಿ ಹಂಚಿಕೊಂಡಿದ್ದಾರೆ.







