Tag: West Bangal

  • ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನೂ ಶೂಟ್ ಮಾಡಿ ಎಂದಿದ್ದ ವಿದ್ಯಾರ್ಥಿನಿ ಅರೆಸ್ಟ್

    ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನೂ ಶೂಟ್ ಮಾಡಿ ಎಂದಿದ್ದ ವಿದ್ಯಾರ್ಥಿನಿ ಅರೆಸ್ಟ್

    ಕೊಲ್ಕತ್ತಾ: ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರವಾಗಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದ್ವಿತೀಯ ಬಿಕಾಂ ವಿದ್ಯಾರ್ಥಿನಿಯನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

    ಕೊಲ್ಕತ್ತಾದ (Kolkata) ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಹಾಗೂ ಹತ್ಯೆಗೀಡಾದ 31 ವರ್ಷದ ಸ್ನಾತಕ್ಕೋತ್ತರ ತರಬೇತಿ ವೈದ್ಯೆಯ ಗುರುತು ಹಾಗೂ ಫೋಟೋವನ್ನು ವಿದ್ಯಾರ್ಥಿ ಬಹಿರಂಗ ಪಡಿಸಿದ್ದಾರೆ ಎಂದು ಕೊಲ್ಕತ್ತಾ ಪೊಲೀಸರು ಆರೋಪಿಸಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್

    ಕೃತಿ ಶರ್ಮಾ ಬಂಧಿತ ವಿದ್ಯಾರ್ಥಿ. ಈಕೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ `ಕೃತಿ ಸೋಶಿಯಲ್’ (kirtisocial) ಎಂಬ ಖಾತೆಯನ್ನು ನಿರ್ವಹಿಸುತ್ತಿದ್ದಳು ಎಂದು ಪೊಲೀಸರಿಂದ ತಿಳಿದು ಬಂದಿದೆ. ಸಿಎಂ ಮಮತಾ ಬ್ಯಾನರ್ಜಿಯನ್ನ ಇಂದಿರಾಗಾಂಧಿ (Indira Gandhi) ಮಾದರಿಯಲ್ಲೇ ಹತ್ಯೆ ಮಾಡಬೇಕು ಎಂದು ಕರೆ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ 2 ಪೋಸ್ಟ್ ಗಳನ್ನೂ ಹಾಕಿದ್ದಳು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಪೋಸ್ಟ್ ಗಳು  ಪ್ರಚೋದನಕಾರಿ, ಅಶಾಂತಿ ಉಂಟುಮಾಡುವಲ್ಲಿ ಹಾಗೂ ದ್ವೇಷ ಭಾವನೆ ಮೂಡಿಸುವಂತಿದೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ – ಸಿಎಂ ಬೆಂಬಲಿಗನಿಗೆ ಹೃದಯಾಘಾತ, ಸಾವು

    ಇದಕ್ಕೂ ಮುನ್ನ ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವ ಯುವಕನನ್ನು ಬಂಗಾಳ (Bengal) ಪೊಲೀಸರು ಬಂಧಿಸಿದ್ದರು. ಸಾದ್ನಿಕ್ ಲಾಹಾ (23) ಬಂಧಿತ ಆರೋಪಿಯಾಗಿದ್ದಾನೆ. ಈತ ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೃಣಮೂಲ ಕಾಂಗ್ರೆಸ್(Congress) (ಟಿಎಂಸಿ) ನಾಯಕನನ್ನು ಗುರಿಯಾಗಿಸಿಕೊಂಡಿದ್ದಾನೆ. ವಿದ್ಯಾರ್ಥಿ ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನ ವಿಚಾರಗಳನ್ನು ಮಾತನಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ಎಡವಟ್ಟು; 1 ತಿಂಗಳಿಗೆ ಬರೋಬ್ಬರಿ 5.86 ಲಕ್ಷ ರೂ. ವಿದ್ಯುತ್‌ ಬಿಲ್‌ – ಹೌಹಾರಿದ ಮನೆ ಮಾಲೀಕ

  • ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ: ಕಾಂಗ್ರೆಸ್ ಆಗ್ರಹ

    ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ: ಕಾಂಗ್ರೆಸ್ ಆಗ್ರಹ

    ನವದೆಹಲಿ: ಬಿರ್‌ಭುಮ್‌ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಆಡಳಿತವಿರು ಪಶ್ಚಿಮ ಬಂಗಾಳದಲ್ಲಿ 355ನೇ ವಿಧಿಯನ್ನು ಹೇರಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿಯಿಂದ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ರಾಷ್ಟ್ರಪತಿ ಕೋವಿಂದ್‌ ಅವರನ್ನು ಭೇಟಿ ಮಾಡಿ 355ನೇ ವಿಧಿಯನ್ನು ಹೇರಲು ಒತ್ತಾಯಿಸುತ್ತೇನೆ ಎಂದ ಅವರು, ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಇದರಿಂದಾಗಿ ಬಂಗಾಳದಲ್ಲಿ ಜನರು ಅಸುರಕ್ಷಿತರಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

    ಪರಿಚ್ಛೇದ 355ರ ಪ್ರಕಾರ, ಬಾಹ್ಯ ಆಕ್ರಮಣ ಮತ್ತು ಆಂತರಿಕ ಅಡಚಣೆಯಿಂದ ಪ್ರತಿ ರಾಜ್ಯವನ್ನು ರಕ್ಷಿಸುವುದು ಮತ್ತು ಈ ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ಪ್ರತಿ ರಾಜ್ಯದ ಸರ್ಕಾರ ನಿರ್ವಹಿಸುತ್ತಿರುವ ಕಾರ್ಯವನ್ನು ಖಚಿತಪಡಿಸಿಕೊಳ್ಳುವುದು ಒಕ್ಕೂಟದ ಕರ್ತವ್ಯವಾಗಿದೆ.

    ಮಮತಾ ರಾಜೀನಾಮೆಗೆ ಬಿಜೆಪಿ ಒತ್ತಾಯ: ಬಿರ್‌ಭುಮ್‌ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕು. ಜೊತೆಗೆ ಘಟನೆಗೆ ಸಂಬಂಧಿಸಿ ಕೇಂದ್ರ ಏಜೆನ್ಸಿಗಳು ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕ ಮನೋಜ್ ಮಾಳವಿಕಾ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?

    ಏನಿದು ಘಟನೆ?: ಬುಧವಾರ ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, 11 ಮಂದಿ ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ: ಕಾಟನ್ ಜಿನ್ನಿಂಗ್ ಮಿಲ್‍ನಲ್ಲಿ ಬೆಂಕಿ ಅವಘಡ- ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮ

    ಸೋಮವಾರ ರಾಮಪುರಹಾಟ್‍ನ ಬಗುಟಿ ಗ್ರಾಮ ಪಂಚಾಯಿತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು ಅವರ ಗ್ರಾಮದಲ್ಲಿನ ವಿರೋಧಿ ಗುಂಪಿನ ಕೆಲವು ಮನೆಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ.

    ದಾಳಿ ಹಿನ್ನೆಲೆಯಲ್ಲಿ 10 ರಿಂದ 12 ಮಂದಿಗೆ ಬೆಂಕಿ ಬಿದ್ದಿದ್ದು, 11 ಮಂದಿ ಸಜೀವ ದಹನವಾಗಿದ್ದಾರೆ. ಸುಟ್ಟು ಕರಕಲಾದ 11 ಮೃತದೇಹವನ್ನು ಹೊರತೆಗೆಲಾಗಿದ್ದು, ಒಂದೇ ಮನೆಯಿಂದ 7 ಮೃತದೇಹಗಳನ್ನು ಹೊರತೆಗೆದಿರುವುದು ಇದೇ ವೇಳೆ ಬೆಳಕಿಗೆ ಬಂದಿದೆ.

  • ಬಾಂಬ್ ತಯಾರಿಕೆ ವೇಳೆ ಸ್ಫೋಟ- ಟಿಎಂಸಿ ಕಾರ್ಯಕರ್ತನ ಸಾವು

    ಬಾಂಬ್ ತಯಾರಿಕೆ ವೇಳೆ ಸ್ಫೋಟ- ಟಿಎಂಸಿ ಕಾರ್ಯಕರ್ತನ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಶಮಶೇರ ಗಂಜ್ ವ್ಯಾಪ್ತಿಯಲ್ಲಿ ಟಿಎಂಸಿ (ತೃಣಮೂಲ ಕಾಂಗ್ರೆಸ್) ಕಾರ್ಯಕರ್ತನೋರ್ವ ಬಾಂಬ್ ತಯಾರಿಕೆ ವೇಳೆ ಸಾವನ್ನಪ್ಪಿದ್ದಾನೆ. ಕಾರ್ಯಕರ್ತನ ಮನೆಯ ಮೇಲೆ ಬಾಂಬ್ ತಯಾರಿಸುವ ಸ್ಫೋಟಕ ವಸ್ತು ಸ್ಫೋಟಗೊಂಡಿದೆ.

    40 ವರ್ಷದ ಕಬೀರ್ ಮೃತ ಟಿಎಂಸಿ ಕಾರ್ಯಕರ್ತ. ಈ ಘಟನೆಯಲ್ಲಿ ಕಾರ್ಯಕರ್ತನ 10 ವರ್ಷದ ಮಗ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಟಿಎಂಸಿ ಸ್ಪಷ್ಟನೆ ನೀಡಿದೆ.

    ಪ್ರಾಥಮಿಕ ತನಿಖೆಯಲ್ಲಿ ಮೃತ ಕಬೀರ್ ತನ್ನ ಮನೆಯ ಮೇಲೆ ದೇಶಿ ಬಾಂಬ್ ಗಳ ತಯಾರಿಕೆಯಲ್ಲಿ ತೊಡಗಿಕೊಂಡಿರೋದು ಖಚಿತವಾಗಿದೆ. ಈ ವೇಳೆ ಒಂದು ಬಾಂಬ್ ಕೆಳಗೆ ಬಿದ್ದು ಸ್ಫೋಟಗೊಂಡಿದ್ದರಿಂದ ಕಬೀರ್ ಗಂಭೀರವಾಗಿ ಗಾಯಗೊಂಡಿದ್ದನು. ಈ ವೇಳೆ ಅಲ್ಲಿಯೇ ಇದ್ದ ಆತನ ಮಗ ಸಹ ಗಾಯಗೊಂಡಿದ್ದಾನೆ. ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಪ್ರಸನ್‍ಜೀತ್ ಬ್ಯಾನರ್ಜಿ ತಿಳಿಸಿದ್ದಾರೆ.

    ಮೃತ ಕಬೀರ್ ಸ್ಥಳೀಯ ಬೀಡಿ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದನು. ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಸ್ಫೋಟದ ಸದ್ದು ಕೇಳಿಸಿದಾಗ ನಾವೆಲ್ಲ ಅವನ ಮನೆಗೆ ಹೋಗಿ ನೋಡಿದಾಗ ಕಬೀರ್ ರಕ್ತದ ಮಡುವಿನಲ್ಲಿ ಬಿದ್ದಿದ್ದನು ಎಂದು ಸ್ಥಳೀಯರು ಹೇಳಿದ್ದಾರೆ. ರಾತ್ರಿ ಊಟದ ಬಳಿಕ ಕಬೀರ್ ಮನೆಯ ಮೇಲೆ ಹೋದನು. ಆತ ಮೇಲೆ ಹೋದ ಕೆಲ ಸಮಯದಲ್ಲಿ ಸ್ಫೋಟವಾಯ್ತು ಎಂದು ಕಬೀರ್ ತಾಯಿ ಹೇಳಿದ್ದಾರೆ.

    ಕಬೀರ್ ಈ ಹಿಂದೆ ಹಲವು ಬಾರಿ ಬಂಧನಕ್ಕೊಳಗಾಗಿದ್ದು, ಅಪರಾಧ ಹಿನ್ನೆಲೆಯುಳ್ಳಿ ವ್ಯಕ್ತಿ. ಸ್ಫೋಟದ ಬಳಿಕ ಕಬೀರ್ ಕುಟುಂಬಸ್ಥರು ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ. ಇನ್ನು ಮೃತ ಕಬೀರ್ ತಾಯಿ, ಮಗನ ಮೇಲಿನ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ನಮ್ಮ ಮನೆಯ ಮೇಲೆ ಯಾರೋ ಬಾಂಬ್ ಎಸೆದಿದ್ದಾರೆ ಎಂದು ಕಬೀರ್ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ವಕ್ತಾರ ಗೌತಮ್ ಘೋಷ್, ನಮ್ಮ ಪಕ್ಷಕ್ಕೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ. ನಿಷ್ಪಕ್ಷವಾಗಿ ತನಿಖೆ ನಡೆಸುವಂತೆ ಪೊಲೀಸರ ಬಳಿ ಮನವಿ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ. ಈ ಘಟನೆಗೂ ಮುನ್ನ ಜುಲೈ 3ರಂದು ಶಮಶೇರ್ ಗಂಜ್ ಬಳಿಯಲ್ಲಿ ಬಾಂಬ್ ತಯಾರಿಕೆ ವೇಳೆ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರು.