Tag: West Bengal

  • ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್

    ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್

    ಪಾಟ್ನಾ: ಚುನಾವಣಾ ತಂತ್ರಜ್ಞ, ರಾಜಕಾರಣಿ ಪ್ರಶಾಂತ್ ಕಿಶೋರ್ (Prashant Kishor) ಅವರ ಹೆಸರು ಬಿಹಾರ ಹಾಗೂ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳಲ್ಲಿ ಕಂಡು ಬಂದಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದು, ಬಿಹಾರ ಚುನಾವಣೆ (Bihar Election) ಹೊತ್ತಲ್ಲೇ ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ.

    ಜನ್ ಸೂರಜ್ ಪಕ್ಷದ ಮೂಲಕ ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆ ಅಖಾಡದಲ್ಲಿ ಪ್ರಶಾಂತ್ ಕಿಶೋರ್ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ. ಭಾರೀ ಪ್ರಚಾರದ ಭರದಲ್ಲಿರುವ ಅವರಿಗೆ ಈ ಸುದ್ದಿ ಆಘಾತ ಮೂಡಿಸಿದೆ.ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

    ಅಧಿಕೃತ ದಾಖಲೆಗಳ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಹೆಸರು ಪಶ್ಚಿಮ ಬಂಗಾಳದ (West Bengal) ಮತದಾರರ ಪಟ್ಟಿಯಲ್ಲಿದೆ. 121, ಕಾಲಿಘಾಟ್ ರಸ್ತೆ ವಿಳಾಸದಲ್ಲಿ ನೋಂದಣಿಯಾಗಿದ್ದು, ಇದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಚೇರಿಯ ವಿಳಾಸವಾಗಿದೆ. ಈ ಕ್ಷೇತ್ರವು ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಈ ಕ್ಷೇತ್ರದಿಂದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿಯ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು.

    ಮತ್ತೊಂದು ಕಡೆ ಬಿಹಾರದ (Bihar) ರೋಹ್ತಾಸ್ ಜಿಲ್ಲೆಯ ಸಸಾರಾಮ್ ಸಂಸದೀಯ ಕ್ಷೇತ್ರದ ಕಾರ್ಗಹರ್ ವಿಧಾನಸಭಾ ಕ್ಷೇತ್ರದಲ್ಲಿ ಕಿಶೋರ್ ಅವರ ಹೆಸರು ನೋಂದಾಯಿಸಲಾಗಿದೆ. ಅಲ್ಲಿ ಅವರ ಮತಗಟ್ಟೆ ಕೋನಾರ್‌ನ ಮಧ್ಯ ವಿದ್ಯಾಲಯದಲ್ಲಿದೆ.

    ಈ ಬಗ್ಗೆ ಮಾತನಾಡಿದ ಚುನಾವಣಾ ಅಧಿಕಾರಿಯೊಬ್ಬರು, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ, ಯಾವುದೇ ವ್ಯಕ್ತಿಯನ್ನು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ನೋಂದಾಯಿಸಲು ಸಾಧ್ಯವಿಲ್ಲ. ಸೆಕ್ಷನ್ 18ರ ಅಡಿಯಲ್ಲಿ, ಒಂದೇ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಎರಡು ಬಾರಿ ನೋಂದಾಯಿಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮತದಾರರು ತಮ್ಮ ಮನೆಯನ್ನು ಬದಲಾಯಿಸಿದ ನಂತರ ತಮ್ಮ ಹೆಸರುಗಳನ್ನು ವರ್ಗಾಯಿಸಲು ಫಾರ್ಮ್ 8 ಅನ್ನು ಭರ್ತಿ ಮಾಡಬೇಕಾಗುತ್ತದೆ. ಮತದಾರರ ಪಟ್ಟಿಗಳಲ್ಲಿ ನಕಲು ಮಾಡುವುದು ಸಾಮಾನ್ಯ ಸಮಸ್ಯೆ ಎಂದು ಚುನಾವಣಾ ಆಯೋಗ ಒಪ್ಪಿಕೊಂಡಿದೆ. ಇದಕ್ಕಾಗಿಯೇ ಆಯೋಗವು ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ವಿಜಯ್‌ TVK ಕಾರ್ಯಕ್ರಮ| #GetOutModi, #GetOutStalin ಫಲಕಕ್ಕೆ ಸಹಿ ಹಾಕದ ಪ್ರಶಾಂತ್‌ ಕಿಶೋರ್‌

  • ವಿರೂಪಗೊಳಿಸಿದ ಮಹಾಕಾಳಿ ಮೂರ್ತಿಯನ್ನೇ ವಶಕ್ಕೆ ಪಡೆದ ಪೊಲೀಸ್‌ – ಬಂಗಾಳದಲ್ಲಿ ರಾಜಕೀಯ ಬಿರುಗಾಳಿ

    ವಿರೂಪಗೊಳಿಸಿದ ಮಹಾಕಾಳಿ ಮೂರ್ತಿಯನ್ನೇ ವಶಕ್ಕೆ ಪಡೆದ ಪೊಲೀಸ್‌ – ಬಂಗಾಳದಲ್ಲಿ ರಾಜಕೀಯ ಬಿರುಗಾಳಿ

    ಕೋಲ್ಕತ್ತಾ: ಸುಂದರ್‌ಬನ್ಸ್‌ ಬಳಿಯ ಕಾಕ್‌ದ್ವೀಪದಲ್ಲಿ ಕಾಳಿವಿಗ್ರಹ ಧ್ವಂಸಗೊಳಿಸಿದ ಬಳಿಕ ಬಂಗಾಳದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎದ್ದಿದೆ. ಮಹಾಕಾಳಿ ಮೂರ್ತಿಯನ್ನೇ ಪೊಲೀಸರು ಬಂಧಿಸಿ ಪೊಲೀಸ್‌ ವ್ಯಾನ್‌ನಲ್ಲಿ ಹೊತ್ತೊಯ್ದಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಮತ್ತು ವಿಪಕ್ಷ ಬಿಜೆಪಿ ಜಟಾಪಟಿ ಏರ್ಪಟ್ಟಿದೆ.

    ಕಾಳಿ ಮಾತೆ ಮೂರ್ತಿ ಧ್ವಂಸಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಕಾಳಿ ಮೂರ್ತಿಯನ್ನೇ ಪೊಲೀಸ್ ವ್ಯಾನ್‌ಗೆ ತುಂಬಿ ಕೊಂಡೊಯ್ಯುತ್ತಿರುವ ದೃಶ್ಯವನ್ನು ಪೋಸ್ಟ್ ಮಾಡಿರುವ ಬಿಜೆಪಿ, ಇದಕ್ಕಿಂತ ಅವಮಾನ, ದುಸ್ಥಿತಿ ಇನ್ನೇನಿದೆ ಎಂದು ಪ್ರಶ್ನೆ ಮಾಡಿದೆ.

    ಪೊಲೀಸ್‌ ವ್ಯಾನ್‌ನಲ್ಲಿ ಮಹಾಕಾಳಿ ಮಾತೆ
    ಮಮತಾ ಬ್ಯಾನರ್ಜಿ ಅವರ ಸರ್ಕಾರ ಆರೋಪಿಗಳನ್ನು, ವಶಕ್ಕೆ ಪಡೆದವರನ್ನು ಕೊಂಡೊಯ್ಯುವ ಪೊಲೀಸ್ ವಾಹನದಲ್ಲಿ ಕಾಳಿ ಮಾತೆ ವಿಗ್ರಹ ತುಂಬಿಸಿ ಕೊಂಡೊಯ್ದಿದೆ. ಹಿಂದೂಗಳ ನಂಬಿಕೆಗೆ ಘಾಸಿಗೊಳಿಸಿರುವುದು ಅತೀ ದೊಡ್ಡ ಅಪರಾಧ ಎಂದು ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

    ಚಂದಾನಗರ ಗ್ರಾಮದಲ್ಲಿ ದೇವಸ್ಥಾನದ ಕಾಳಿ ಮಾತೆ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಕಾಳಿ ಮೂರ್ತಿಯ ತಲೆ, ಕೈ ಕಾಲುಗಳನ್ನು ಧ್ವಂಸಗೊಳಿಸಿದ್ದಾರೆ. ಸೂಕ್ಷ್ಮವಾಗಿ ಕಾರ್ಯನಿರ್ವಹಿಸಬೇಕಿದ್ದ ಪೊಲೀಸರು ದೇವಸ್ಥಾನದ ಬಾಗಿಲು ಲಾಕ್ ಮಾಡಿದ್ದಾರೆ. ಪಶ್ಚಿಮ ಬಂಗಾಳ ಪೊಲೀಸರು, ಸರ್ಕಾರ ಹಿಂದೂ ನಂಬಿಕೆಗೆ ಮಾತ್ರ ಘಾಸಿ ಮಾಡಿಲ್ಲ, ಅವರು ಬಂಗಾಳದ ಆತ್ಮವನ್ನೇ ಘಾಸಿಗೊಳಿಸಿದ್ದಾರೆ ಎಂದು ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವಿಯಾ ಕಿಡಿ ಕಾರಿದ್ದಾರೆ.

    ಬಿಜೆಪಿ ರಾಜಕೀಯ ಮಾಡ್ತಿದೆ
    ಇನ್ನೂ ಇದಕ್ಕೆ ಕೌಂಟರ್‌ ನೀಡಿರುವ ಟಿಎಂಸಿ, ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ತಿರುಗೇಟು ನೀಡಿದೆ. ಘಟನೆಉನ್ನು ಪೊಲೀಸರು ಘಟನೆಯನ್ನ ಸಂಪೂರ್ಣವಾಗಿ ವಿವರಿಸಿದ್ದಾರೆ. ಕಾಳಿಮಾತೆ ವಿರೂಪಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ರೆ ಬಿಜೆಪಿಯವರು ವಿಕೃತ ರಾಜಕೀಯ ಮಾಡ್ತಿರೋದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ.

  • ಆರ್‌ಜಿ ಕರ್ ಅತ್ಯಾಚಾರ ಅಪರಾಧಿಯ ಅಪ್ರಾಪ್ತ ಸೊಸೆ ಶವ ಮನೆ ಕಪಾಟಿನಲ್ಲಿ ಪತ್ತೆ

    ಆರ್‌ಜಿ ಕರ್ ಅತ್ಯಾಚಾರ ಅಪರಾಧಿಯ ಅಪ್ರಾಪ್ತ ಸೊಸೆ ಶವ ಮನೆ ಕಪಾಟಿನಲ್ಲಿ ಪತ್ತೆ

    •  ಚಿತ್ರಹಿಂಸೆ ಆರೋಪ – ತಂದೆ, ಮಲತಾಯಿಗೆ ಧರ್ಮದೇಟು

    ಕೋಲ್ಕತ್ತಾ: ಆರ್‌ಜಿಕರ್ ಅತ್ಯಾಚಾರ ಅಪರಾಧಿಯ (RG Kar Case) 11 ವರ್ಷದ ಸೊಸೆಯ ಶವ ಮನೆಯ ಕಪಾಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಸಾವನ್ನಪ್ಪಿದ ಬಾಲಕಿಯನ್ನು ಸುರಂಜನಾ ಸಿಂಗ್ ಎಂದು ಗುರುತಿಸಲಾಗಿದೆ. ಬಾಲಕಿ ಆರ್‌ಜಿಕರ್ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾದ ಸಂಜಯ್ ರಾಯ್‌ನ ಸೊಸೆಯಾಗಿದ್ದಾಳೆ. ಬಾಲಕಿಯ ಅನುಮಾನಾಸ್ಪದ ಸಾವಿನಿಂದ ಕೋಪಗೊಂಡ ಸ್ಥಳೀಯರು ಆಕೆಯ ತಂದೆ ಮತ್ತು ಮಲತಾಯಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ಬಾಲಕಿಯ ಶವ ಪತ್ತೆಯಾಗುತ್ತಿದ್ದಂತೆ ಆಕೆಯ ತಂದೆ ಭೋಲಾ ಸಿಂಗ್ ಮತ್ತು ಅವನ ಪತ್ನಿ ಪೂಜಾ ದಂಪತಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ, ನೆರೆಹೊರೆಯವರು ಮಲತಾಯಿಯ ಕೂದಲನ್ನು ಎಳೆದುಕೊಂಡು ಹೋಗಿ ಹೊಡೆದಿದ್ದಾರೆ. ಅಲ್ಲದೇ ಭೋಲಾ ಸಿಂಗ್‌ ಮೇಲೆ ಶೂಗಳಿಂದ ಥಳಿಸಿದ್ದಾರೆ. ಬಳಿಕ ಪೊಲೀಸರು ಉದ್ರಿಕ್ತರಿಂದ ರಕ್ಷಿಸಿ ಅಲಿಪೋರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

    ಭೋಲಾ ಸಿಂಗ್‌ ಈ ಹಿಂದೆ ಸಂಜಯ್ ರಾಯ್‌ನ ಅಕ್ಕ ಬಬಿತಾ ಅವರನ್ನು ವಿವಾಹವಾಗಿದ್ದು, ಸುರಂಜನಾ ಅವರ ಏಕೈಕ ಮಗಳಾಗಿದ್ದಳು. ಕೆಲವು ವರ್ಷಗಳ ಹಿಂದೆ ಬಬಿತಾ ಆತ್ಮಹತ್ಯೆ ಮಾಡಿಕೊಂಡ ನಂತರ, ಆತ ಆಕೆಯ ತಂಗಿ ಪೂಜಾಳನ್ನು ಮದುವೆಯಾಗಿದ್ದ.

    ಪೋಷಕರು ಬಾಲಕಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಮಗುವನ್ನು ರಾತ್ರಿ ವೇಳೆ ಮನೆಯಿಂದ ಹೊರಗೆ ಹಾಕಲಾಗುತ್ತಿತ್ತು. ಕೆಲವೊಮ್ಮೆ ಬೆಳಗಿನ ಜಾವ 2 ಗಂಟೆಯವರೆಗೂ ಹೊರಗೆ ಹಾಕಲಾಗುತ್ತಿತ್ತು. ಈ ದೌರ್ಜನ್ಯ ಆಕೆಯನ್ನು ತೀವ್ರವಾಗಿ ನೋಯಿಸಿತ್ತು ಎಂದು ನೆರೆಹೊರೆಯವರು ಆರೋಪಿಸಿದ್ದಾರೆ.

    ಬಾಲಕಿಯ ಅಜ್ಜಿ, ಪೋಷಕರು ಆಕೆಗೆ ಬೆಲ್ಟ್‌ಗಳಿಂದ ಹೊಡೆಯುತ್ತಿದ್ದರು. ಆಕೆಯ ತಲೆಯನ್ನು ಗೋಡೆಗಳಿಗೆ ಹೊಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದರ ನಡುವೆ ʻನನ್ನ ಮಗು ಉಳಿದಿಲ್ಲ, ನನ್ನ ಜೀವನಕ್ಕೆ ಅರ್ಥವಿಲ್ಲʼ ಎಂದು ಬಾಲಕಿಯ ತಂದೆ ಕಣ್ಣೀರಿಟ್ಟಿದ್ದಾನೆ ಎನ್ನಲಾಗಿದೆ.

    ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎನ್ನಲಾಗುತ್ತಿದೆ. ಅಲ್ಲದೇ ಕೊಲೆಯ ಶಂಕೆಯೂ ಇದೆ. ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

  • ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    – ಮ್ಯಾಜಿಸ್ಟ್ರೇಟ್‌ ಮುಂದೆ ಸಂತ್ರಸ್ತೆ ಹೇಳಿಕೆ ಬಳಿಕ ಅರೆಸ್ಟ್‌

    ಕೋಲ್ಕತ್ತಾ: ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಎದುರು ನೀಡಿದ ಹೇಳಿಕೆಯನ್ನಧಾರಿಸಿ ಆಕೆ ಜೊತೆಗೆ ಊಟಕ್ಕೆ ಬಂದಿದ್ದ ಸ್ನೇಹಿತನನ್ನ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ತಲುಪಿದೆ.

    West Bengal Police

    ನನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನ
    ವರದಿಗಳ ಪ್ರಕಾರ, ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಮುಂದೆ ನೀಡಿದ ಹೇಳಿಕೆಯಲ್ಲಿ, ಜೊತೆಗಿದ್ದ ಸಹಪಾಠಿ ತನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನಾಧರಿಸಿ ಊಟದ ಸಮಯದಲ್ಲಿ ಜೊತೆಗಿದ್ದ ಸಹಪಾಠಿಯನ್ನ 6ನೇ ಆರೋಪಿಯಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    Stop Rape Crime 2

    ಕಳೆದ ಶುಕ್ರವಾರ ಜಲೇಶ್ವರದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

    ಘಟನೆ ಬಳಿಕ ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

  • ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಹಲವರಿಗೆ ಗಾಯ

    ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಹಲವರಿಗೆ ಗಾಯ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ (Bardhaman Railway Station) ಭಾನುವಾರ (ಇಂದು) ಸಂಜೆ ಕಾಲ್ತುಳಿತ ಸಂಭವಿಸಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

    ಹಲವು ಮಾರ್ಗಗಳಿಗೆ ತೆರಳಬೇಕಿದ್ದ ರೈಲುಗಳು ಪ್ಲಾಟ್‌ಫಾರ್ಮ್‌ಗಳಲ್ಲಿ ನಿಂತಿದ್ದವು. ರೈಲಿನಿಂದ ಜನ ಇಳಿಯುತ್ತಿದ್ದಾಗಲೇ ಹತ್ತಬೇಕಿದ್ದ ಜನರು ಒಂದೇ ಸಮನೇ ನುಗ್ಗಿದ ಪರಿಣಾಮ ಕಾಲ್ತುಳಿತ (Stampede) ಸಂಭವಿಸಿದೆ. ಫ್ಲಾಟ್‌ ಫಾರ್ಮ್‌ 4 ಮತ್ತು 5ರಲ್ಲಿ ಕಾಲ್ತುಳಿತ ಸಂಭವಸಿದ್ದು, ಕನಿಷ್ಠ 7 ಮಂದಿ ಗಾಯಗೊಂಡಿದ್ದಾರೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂಜೆ ಸುಮಾರಿಗೆ, ಮೂರು ರೈಲುಗಳು 4, 6 ಮತ್ತು 7 ಪ್ಲಾಟ್‌ಫಾರ್ಮ್‌ಗಳಲ್ಲಿ ಏಕಕಾಲದಲ್ಲಿ ಬಂದು ನಿಂತಿದ್ದವು. ಹಾಗಾಗಿ ಮೂರು ರೈಲುಗಳಿಗೆ ಹತ್ತಲು ಜನ ಏಕಕಾಲಕ್ಕೆ ನುಗ್ಗಿದರು. ಇದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಗಾಯಾಳುಗಳನ್ನ ಬುರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

    ರೈಲ್ವೆ ಪ್ರಯಾಣಿಕರು ಮತ್ತು ಆರ್‌ಪಿಎಫ್ ಮೂಲಗಳ ಪ್ರಕಾರ, ಇಂದು ಸಂಜೆ 5:15 ರಿಂದ 5:25ರ ನಡುವೆ ಪ್ಲಾಟ್‌ಫಾರ್ಮ್ 4 ಮತ್ತು 5 ಅನ್ನು ಸಂಪರ್ಕಿಸುವ ಮೆಟ್ಟಿಲುಗಳಲ್ಲಿ ಘಟನೆ ಸಂಭವಿಸಿದೆ.

    ಇನ್ನೂ ಹಲ್ದಿಬರಿ ಎಕ್ಸ್‌ಪ್ರೆಸ್ (ಪ್ಲಾಟ್‌ಫಾರ್ಮ್ 5 ರಲ್ಲಿ), ಹೌರಾ ಮೇನ್ ಲೈನ್ ಸ್ಥಳೀಯ ರೈಲು (ಪ್ಲಾಟ್‌ಫಾರ್ಮ್ 4 ರಲ್ಲಿ) ಪ್ರಯಾಣಿಕರು ಹತ್ತಲು ಮತ್ತು ಇಳಿಯಲು ಏಕಕಾಲಕ್ಕೆ ಧಾವಿಸಿದ್ದೇ ಘಟನೆ ಕಾರಣ ಎಂದು ವರದಿಗಳು ತಿಳಿಸಿವೆ.

  • ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

    ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

    – ತಡರಾತ್ರಿ 12:30ಕ್ಕೆ ಹೇಗೆ ಹೊರಗೆ ಬಂದಳು?

    ಕೋಲ್ಕತ್ತಾ: ವೈದ್ಯಕೀಯ ವಿದ್ಯಾರ್ಥಿನಿ (MBBS student) ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅಚ್ಚರಿ ಹೇಳಿಕೆ ನೀಡಿದ್ದಾರೆ. ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ ಬಂದಳು? ಅಂತ ರೇಪ್‌ ಸಂತ್ರಸ್ತೆ ಕುರಿತು ಪ್ರಶ್ನೆ ಮಾಡಿದರಲ್ಲದೇ, ಹುಡುಗಿಯರನ್ನ ರಾತ್ರಿ ಹೊತ್ತು ಹೊರಗೆ ಬಿಡದಂತೆ ಖಾಸಗಿ ಕಾಲೇಜುಗಳು ಜವಾಬ್ದಾರಿ ವಹಿಸಬೇಕು ಎಂದು ತಾಕೀತು ಮಾಡಿದರು.

    ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ದೀದಿ, ಕತ್ತಲಾದ ನಂತ್ರ ಹೆಣ್ಣುಮಕ್ಕಳು (Girls) ಹೊರಗೆ ಹೋಗುವುದನ್ನ ತಡೆಯಬೇಕು ಎಂದು ಹೇಳಿದ್ರು. ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಬಿಜೆಪಿ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

    West Bengal Police

    ವಿದ್ಯಾರ್ಥಿನಿ ಖಾಸಗಿ ಖಾಲೇಜಿನಲ್ಲಿ ಓದುತ್ತಿದ್ದಳು, ಹಾಗಾದ್ರೆ ಅದು ಯಾರ ಜವಾಬ್ದಾರಿ? ತಡರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ಎಂದು ಕಳವಳ ವ್ಯಕ್ತಪಡಿಸಿದರಲ್ಲದೇ, ಈಗ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಯಾರನ್ನೂ ಕ್ಷಮಿಸುವ ಮಾತೇ ಇಲ್ಲ, ಪೊಲೀಸರು ಎಲ್ಲ ಕಡೆ ಹುಡುಕುತ್ತಿದ್ದಾರೆ ಎಂದು ತಿಳಿಸಿದ್ರು.

    ಮುಂದುವರಿದು.. ಖಾಸಗಿ ವೈದ್ಯಕೀಯ ಕಾಲೇಜುಗಳು ತಮ್ಮ ತಮ್ಮ ವಿದ್ಯಾರ್ಥಿಗಳ ಬಗ್ಗೆ ಜವಾಬ್ದಾರಿ ವಹಿಸಬೇಕು, ರಾತ್ರಿ ಸಂಸ್ಕೃತಿಯ ಬಗ್ಗೆ ಎಚ್ಚರ ವಹಿಸಬೇಕು. ಹೆಣ್ಣುಮಕ್ಕಳನ್ನ ರಾತ್ರಿಯಲ್ಲಿ ಹೊರಗೆ ಹೋಗಲು ಬಿಡಬಾರದು. ಮೊದಲು ತಮ್ಮನ್ನ ತಾವು ರಕ್ಷಿಸಿಕೊಳ್ಳಬೇಕು. ಏಕೆಂದ್ರೆ ಇದು ಅರಣ್ಯ ಪ್ರದೇಶ ಎಂದು ಹೇಳಿದ್ರು.

    ಸಂತ್ರಸ್ತೆ ತಂದೆ ಹೇಳಿದ್ದೇನು?
    ತಿನ್ನಲು ಏನಾದ್ರೂ ಬೇಕು ಅಂತ ತರೋದಕ್ಕೆ ಹೊರಗೆ ಸಹಪಾಠಿಯೊಂದಿಗೆ ಹೋಗಿದ್ದಳು. ಈ ವೇಳೆ ಮೂರು ಪುರುಷರು ಬಂದು ಅತ್ಯಾಚಾರ ಎಸಗಿದ್ದಾರೆ. ಕೃತ್ಯ ನಡೆಯುವಾಗ ಜೊತೆಯಲ್ಲಿದ್ದವನು ಆಕೆಯನ್ನ ಬಿಟ್ಟು ಓಡಿಹೋಗಿದ್ದಾನೆ ಎಂದು ಹೇಳಿದರು.

    ರಾತ್ರಿ 10 ಗಂಟೆ ಸುಮಾರಿಗೆ ಮಗಳ ಸ್ನೇಹಿತೆ ನಮಗೆ ಕರೆ ಮಾಡಿ, ನಿಮ್ಮ ಮಗಳ ಮೇಲೆ ಅತ್ಯಾಚಾರ ಆಗಿದೆ ಎಂದು ಹೇಳಿದಳು. ನಾವು ಒಡಿಶಾದ ಜುಲೇಶ್ವರದಲ್ಲಿ ವಾಸಿಸುತ್ತಿದ್ದೇವೆ. ಆಕೆಯನ್ನ ಹೊರಗೆ ತಿನ್ನಲು ಕರೆದುಕೊಂಡು ಹೋಗಿದ್ದ, ಮೂವರು ಪುರುಷರು ಬರುತ್ತಿದ್ದಂತೆ ಸ್ನೇಹಿತ ಆಕೆಯನ್ನ ಬಿಟ್ಟು ಓಡಿಹೋದ. ರಾತ್ರಿ 8 ರಿಂದ 9 ಗಂಟೆ ನಡುವೆ ಘಟನೆ ಸಂಭವಿಸಿದೆ. ಅಂತಹ ಗಂಭೀರ ಘಟನೆ ನಡೆದಿದ್ರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಲವತ್ತುಕೊಂಡಿದ್ದಾರೆ.

  • ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ (Medical Student) ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸ್ಥಳೀಯರಾಗಿದ್ದು, ಪೊಲೀಸರು ಅವರ ಗುರುತನ್ನು ಇನ್ನೂ ಬಹಿರಂಗಪಡಿಸಿಲ್ಲ.

    ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಯುವತಿಗೆ ದುರ್ಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಳು ಗುಣಮುಖಳಾಗುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

  • ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

    ಕೋಲ್ಕತ್ತಾ: ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical College Student) ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ ಬಂಗಾಳದಲ್ಲಿ (West Bengal) ಮತ್ತೊಂದು ಘೋರ ಘಟನೆ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

    ಒಡಿಶಾದ ಜಲೇಶ್ವರ ನಿವಾಸಿಯಾಗಿರುವ ಯುವತಿ, ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆ ಹೋಗಿ ಮರಳುವ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

    ಸಂತ್ರಸ್ಥ ಯುವತಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಇಲ್ಲಿಯವರೆಗೆ ಈ ಸಂಪೂರ್ಣ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

    ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ಹೇಳಿದರು. ವಿದ್ಯಾರ್ಥಿನಿಯ ತಂದೆ ಮಾತನಾಡಿ, ನಮಗೆ ಅವಳ ಸ್ನೇಹಿತರಿಂದ ಕರೆ ಬಂತು ಮತ್ತು ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು

    ನಾವು ಇಂದು ಬೆಳಗ್ಗೆ ಇಲ್ಲಿಗೆ ಬಂದು ಪೊಲೀಸ್ ದೂರು ದಾಖಲಿಸಿದ್ದೇವೆ. ಪ್ರಸ್ತುತ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ತನಿಖಾ ಅಧಿಕಾರಿಗಳು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ 

  • ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

    ಮನೆಗೆ ಊಟಕ್ಕೆ ಅಂತ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರೊಫೆಸರ್ ಅರೆಸ್ಟ್

    – ಪರೀಕ್ಷೆಯಲ್ಲಿ ಮಾರ್ಕ್ಸ್ ಕೊಡ್ತೀನಿ, ಅಟೆಂಡೆನ್ಸ್‌ ಕೊಡ್ತೀನಿ ಅಂತ ಮೈಕೈ ಮುಟ್ಟಿ ಕಿರುಕುಳ ನೀಡಿದ್ದ ಕಾಮುಕ

    ಬೆಂಗಳೂರು: ಮನೆಗೆ ಊಟಕ್ಕೆ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಖಾಸಗಿ ಕಾಲೇಜಿನ ಪ್ರೊಫೆಸರ್‌ನನ್ನು ತಿಲಕ್ ನಗರ ಪೊಲೀಸರು (Tilak Nagar Police) ಬಂಧಿಸಿದ್ದಾರೆ.

    ಪಶ್ಚಿಮ ಬಂಗಾಳ (West Bengal) ಮೂಲದ ಸಂಜೀವ್ ಕುಮಾರ್ ಮಂಡಲ್ ಬಂಧಿತ ಪ್ರೊಫೆಸರ್. ನಗರದ ಪ್ರತಿಷ್ಟಿತ ಕಾಲೇಜಿನಲ್ಲಿ ಹೆಚ್‌ಓಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯು ಅದೇ ಕಾಲೇಜಿನಲ್ಲಿ ಬಿಸಿಎ ಎರಡನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಆಕೆಯು ಪಶ್ಚಿಮ ಬಂಗಾಳ ಮೂಲದವಳಾಗಿದ್ದಳು. ಇದನ್ನೂ ಓದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 6 ಮಂದಿ ಸಜೀವ ದಹನ

    ಕಾಲೇಜಿನಲ್ಲಿ ಆಕೆಗೆ ಉಪನ್ಯಾಸಕನಾಗಿದ್ದರಿಂದ ಅ.2 ರಂದು ವಿದ್ಯಾರ್ಥಿನಿಯನ್ನು ಪ್ರೊಫೆಸರ್ ಮನೆಗೆ ಊಟಕ್ಕೆ ಕರೆದಿದ್ದ. ಹೀಗಾಗಿ ವಿದ್ಯಾರ್ಥಿನಿ ಪ್ರೊಫೆಸರ್ ಮನೆಗೆ ಊಟಕ್ಕೆ ಹೋಗಿದ್ದಳು. ಮನೆಯಲ್ಲಿ ಪ್ರೊಫೆಸರ್ ಒಬ್ಬನೇ ಇದ್ದುದ್ದರಿಂದ ವಿದ್ಯಾರ್ಥಿನಿಯು ಗಾಬರಿಗೊಂಡಿದ್ದಳು. ಈ ವೇಳೆ ಆಕೆಗೆ ಕುಡಿಯಲು ನೀರು ಕೊಟ್ಟು, ಆಕೆಯ ಪಕ್ಕದಲ್ಲೇ ಪ್ರೊಫೆಸರ್ ಕುಳಿತುಕೊಂಡಿದ್ದ. ಇದನ್ನೂ ಓದಿ: ದಾವಣಗೆರೆ | ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ

    ಬಳಿಕ ನಿನಗೆ ಹಾಜರಾತಿ ಕಡಿಮೆ ಇದೆ, ಹಾಜರಾತಿ ಹಾಕಿ ಕೊಡುತ್ತೇನೆ. ಪರೀಕ್ಷೆಯಲ್ಲಿ ಮಾರ್ಕ್ಸ್ ಕೊಡೋದಾಗಿ ಹೇಳಿ ವಿದ್ಯಾರ್ಥಿನಿ ಮೈ, ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಗಾಬರಿಗೊಂಡ ವಿದ್ಯಾರ್ಥಿನಿ ಅಲ್ಲಿಂದ ಎದ್ದು ಬಂದಿದ್ದಳು ಎನ್ನಲಾಗಿದೆ.

    ಬಳಿಕ ವಿದ್ಯಾರ್ಥಿನಿಯು ಮನೆಯವರ ಸಲಹೆ ಮೇರೆಗೆ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರೊಫೆಸರ್‌ನನ್ನು ಬಂಧಿಸಿದ್ದಾರೆ.

  • Darjeeling Flood | ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ

    Darjeeling Flood | ರಣಭೀಕರ ಮಳೆಗೆ ಭೂಕುಸಿತ – ಸಾವಿನ ಸಂಖ್ಯೆ 23ಕ್ಕೆ ಏರಿಕೆ

    – ಇಂದು ಡಾರ್ಜಿಲಿಂಗ್‌ಗೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್‌ನಲ್ಲಿ (Darjeeling) ಸುರಿಯುತ್ತಿರುವ ರಣಭೀಕರ ಮಳೆಗೆ ಹಲವೆಡೆ ಭೂಕುಸಿತ “(Landslide) ಉಂಟಾಗಿದ್ದು, ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

    ಭಾನುವಾರ (ಸೆ.6) ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 23 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸರ್ಸಾಲಿ, ಜಸ್ಬೀರ್‌ಗಾಂವ್, ನಾಗರಕಟಾ, ಮಿರಿಕ್ ಬಸ್ತಿ, ಧಾರ್‌ಗಾವ್ (ಮೆಚಿ), ಮತ್ತು ಮಿರಿಕ್ ಲೇಕ್ ಪ್ರದೇಶ ಸೇರಿದಂತೆ ಹಲವೆಡೆ ಜನ ಪ್ರಾಣಕಳೆದುಕೊಂಡಿದ್ದಾರೆ.ಇದನ್ನೂ ಓದಿ: Darjeeling Flood | 24/7 ಕಂಟ್ರೋಲ್‌ ರೂಮ್‌ ಓಪನ್‌ – ನಾಳೆ ಡಾರ್ಜಿಲಿಂಗ್‌ಗೆ ದೀದಿ ಭೇಟಿ

    ಕೇವಲ 12 ಗಂಟೆಯಲ್ಲಿ 300 ಮಿ.ಮೀ ಮಳೆಯಾಗಿದ್ದರಿಂದ ಪ್ರವಾಹ, ಭೂಕುಸಿತ ಉಂಟಾಗಿದೆ ಎನ್ನಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ. ನಾಗರಕಟಾದ ಧಾರ್‌ಗಾವ್‌ನಲ್ಲಿ ಭೂಕುಸಿತದಿಂದಾಗಿ ನೆಲಸಮವಾದ ಮನೆಗಳ ಅವಶೇಷಗಳಡಿಯಿಂದ ಕನಿಷ್ಠ 40 ಜನರನ್ನು ರಕ್ಷಿಸಲಾಗಿದೆ.

    ಇನ್ನೂ ಬಂಗಾಳ-ಸಿಕ್ಕಿಂ ಡಾರ್ಜಿಲಿಂಗ್-ಸಿಲಿಗುರಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತವು ಡಾರ್ಜಿಲಿಂಗ್‌ನ ಟೈಗರ್‌ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಪ್ರವಾಸಿ ತಾಣಗಳನ್ನು ಮುಚ್ಚಲು ನಿರ್ಧರಿಸಿದೆ. ಜೊತೆಗೆ ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸೋಮವಾರದವರೆಗೂ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಗಾಗಿ 9147889078 ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

    ಸಾರ್ವಜನಿಕರ ಸಹಾಯಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್ ರೂಮ್ ತೆರೆದಿದ್ದಾರೆ. ಈಗಾಗಲೇ ಪರಿಸ್ಥಿತಿಯನ್ನು ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡುತ್ತಿದ್ದು, ಇಂದು (ಅ.6) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

    ಸಿಕ್ಕಿಂ ಸಂಪರ್ಕ ಕಡಿತ:
    ಡಾರ್ಜಿಲಿಂಗ್‌ನಲ್ಲಿ ಸಂಭವಿಸಿದ ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಬಂಗಾಳ ಮತ್ತು ಸಿಕ್ಕಿಂ ಅನ್ನು ಸಂಪರ್ಕಿಸುವ ರಸ್ತೆ, ಡಾರ್ಜಿಲಿಂಗ್ ಮತ್ತು ಸಿಲಿಗುರಿಯನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಭೂಕುಸಿತಗಳು ರಸ್ತೆ ತಡೆಗಳಿಗೆ ಕಾರಣವಾಗಿವೆ. ದುರ್ಗಾ ಪೂಜೆಯ ನಂತರ ಕೋಲ್ಕತ್ತಾ ಮತ್ತು ಬಂಗಾಳದ ಇತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಡಾರ್ಜಿಲಿಂಗ್‌ಗೆ ಪ್ರಯಾಣಿಸುತ್ತಾರೆ. ಈ ವಿಪತ್ತಿನಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಳ್ಳುವ ಸಾಧ್ಯತೆಯಿದೆ.ಇದನ್ನೂ ಓದಿ: ಜೈಪುರ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ – 6 ರೋಗಿಗಳು ಸಜೀವ ದಹನ