Tag: West Bengal elections

  • ನನ್ನ ಗೆಲುವಿಗೆ ಸಹಾಯ ಮಾಡಿ- ನಂದಿಗ್ರಾಮದ ಬಿಜೆಪಿ ನಾಯಕನಿಗೆ ಮಮತಾ ಬ್ಯಾನರ್ಜಿ ಮನವಿ

    ನನ್ನ ಗೆಲುವಿಗೆ ಸಹಾಯ ಮಾಡಿ- ನಂದಿಗ್ರಾಮದ ಬಿಜೆಪಿ ನಾಯಕನಿಗೆ ಮಮತಾ ಬ್ಯಾನರ್ಜಿ ಮನವಿ

    – ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗಿದ್ದು, ಇದೇ ವೇಳೆ ಬಿಜೆಪಿ ನಾಯಕ ಪ್ರಳಯ್ ಪಾಲ್ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿಯವರ ಸ್ಫೋಟಕ ಆಡಿಯೋ ವೈರಲ್ ಆಗಿದೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಗೆಲುವು ಸಾಧಿಸಲು ಸಹಾಯ ಮಾಡುವಂತೆ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕನ ಬಳಿ ಮನವಿ ಮಾಡಿದ್ದಾರೆ. ಈ ಕುರಿತು ಸ್ವತಃ ಪ್ರಳಯ್ ಪಾಲ್ ಹೇಳಿಕೆಯನ್ನೂ ನೀಡಿದ್ದಾರೆ.

    ಬಿಜೆಪಿ ವೀಡಿಯೋ ಬಿಡುಗಡೆ ಮಾಡಿದ್ದು, ನಂದಿಗ್ರಾಮದಲ್ಲಿ ತಮ್ಮ ಹಾಗೂ ಟಿಎಂಸಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಂತೆ ಮಮತಾ ಬ್ಯಾನರ್ಜಿ ನನಗೆ ಕರೆ ಮಾಡಿ ಮನವಿ ಮಾಡಿದರು ಎಂದು ಪ್ರಳಯ್ ಪಾಲ್ ತಿಳಿಸಿದ್ದಾರೆ. ಮತ್ತೊಂದೆಡೆ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕ ಪಾಲ್ ಅವರಿಗೆ ಕರೆ ಮಾಡಿ ಮಾತನಾಡಿದ ಫೋನ್ ಸಂಭಾಷಣೆ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ನನಗಾಗಿ ಕೆಲಸ ಮಾಡಿ, ಟಿಎಂಸಿಗೆ ಮರಳಿ ಬನ್ನಿ ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿದರು. ಆದರೆ ನಾನು ಬಹಳ ಹಿಂದೆಯೇ ಸುವೇಂದು ಅಧಿಕಾರಿ ಹಾಗೂ ಅಧಿಕಾರಿ ಕುಟುಂಬದೊಂದಿಗೆ ನಂಟು ಹೊಂದಿದ್ದೇನೆ. ಅಲ್ಲದೆ ಈಗ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದೆ ಎಂದು ಪ್ರಳಯ್ ಪಾಲ್ ತಿಳಿಸಿದ್ದಾರೆ.

    ಎಡಪಂಥೀಯ ಸಿಪಿಐ(ಎಂ) ಪಕ್ಷದ ಆಡಳಿತವಿದ್ದಾಗ ನಂದಿಗ್ರಾಮದ ಜನರಿಗೆ ಚಿತ್ರಹಿಂಸೆ ನೀಡಲಾಗಿತ್ತು. ಈ ವೇಳೆ ಅಧಿಕಾರಿ ಕುಟುಂಬ ನಮ್ಮ ಪರವಾಗಿ ನಿಂತಿತು. ಹೀಗಾಗಿ ನಾನು ಅವರ ವಿರುದ್ಧ ಎಂದೂ ಹೋಗುವುದಿಲ್ಲ. ಆ ಧೈರ್ಯ ಸಹ ನನಗಿಲ್ಲ ಎಂದು ಪಾಲ್ ಅವರು ಆಡಿಯೋದಲ್ಲಿ ಹೇಳಿದ್ದಾರೆ.

    ನಂದಿಗ್ರಾಮದ ಸ್ಥಳೀಯರಿಗೆ ಟಿಎಂಸಿ ಎಂದಿಗೂ ಹಕ್ಕು ನೀಡಿಲ್ಲ. ಹೀಗಾಗಿ ಬಿಜೆಪಿ ಜೊತೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಅವರಿಗೆ ತಿಳಿಸಿದ್ದೇನೆ. ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

    ಈ ಸಂಭಾಷಣೆಯ ಆಡಿಯೋ ಕ್ಲಿಪ್‍ನ್ನು ಬಿಜೆಪಿ ಮುಖಂಡ ಅಮಿತ್ ಮಾಳ್ವಿಯಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಳಯ್ ಪಾಲ್ ಅವರಿಗೆ ಕರೆ ಮಾಡಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಈ ವೇಳೆ ಟಿಎಂಸಿಯಲ್ಲಿ ಅವಮಾನಕ್ಕೊಳಗಾಗಿದ್ದೇನೆಂದು, ಈ ಕುಟುಂಬವನ್ನು ಬಿಡಲು ಆಗುವುದಿಲ್ಲ. ಅಲ್ಲದೆ ಬಿಜೆಪಿಗೆ ದ್ರೋಹ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಟ್ವೀಟ್‍ನಲ್ಲಿ ಅಮಿತ್ ಮಾಳ್ವಿಯಾ ಬರೆದಿದ್ದಾರೆ.

    ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಪ್ರತಿಷ್ಠಿತ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಬಿಜೆಪಿಯಿಂದ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಇವರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದಾರೆ.

  • ಶಾಸಕಿಯ ಕೆನ್ನೆ ಹಿಂಡಿದ ಸಂಸದ – ವೀಡಿಯೋ ವೈರಲ್

    ಶಾಸಕಿಯ ಕೆನ್ನೆ ಹಿಂಡಿದ ಸಂಸದ – ವೀಡಿಯೋ ವೈರಲ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆರೋಪ-ಪ್ರತ್ಯಾರೋಪಗಳ ನಡುವೆ ವೀಡಿಯೋಗಳು ಸಹ ಹೆಚ್ಚು ಸದ್ದು ಮಾಡುತ್ತಿವೆ. ಇದೀಗ ಟಿಎಂಸಿ ಸಂಸದರೊಬ್ಬರು ಶಾಸಕಿಯ ಕೆನ್ನೆ ಹಿಂಡುವ ವೀಡಿಯೋ ವೈರಲ್ ಆಗಿದೆ.

    ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಅವರು ಟಿಎಂಸಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಸುದ್ದಿಗೋಷ್ಠಿಯಲ್ಲಿ ಬಂಕುರಾ ಶಾಸಕಿಯ ಕೆನ್ನೆ ಹಿಂಡಿದ್ದಾರೆ. ಶಾಸಕಿ  ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ. ಟಿಕೆಟ್ ಸಿಗದಿದ್ದಾಗ ನಿರಾಸೆಗೊಂಡಾಗ ಸಂಸದರು ಕೆನ್ನೆ ಹಿಂಡಿದ್ದಾರೆ ಎನ್ನಲಾಗುತ್ತಿದೆ. ಈ ವೀಡಿಯೋ ಎಲ್ಲಿಯದ್ದು ಅನ್ನೋದರ ಮಾಹಿತಿ ಸಿಕ್ಕಿಲ್ಲ. ಆದ್ರೆ ಈ ವೀಡಿಯೋವನ್ನ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಮಲ ನಾಯಕರು ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

    ವೀಡಿಯೋ ಶೇರ್ ಮಾಡಿಕೊಂಡಿರುವ ಲಾಕೆಟ್ ಬ್ಯಾನರ್ಜಿ, ಮಹಿಳೆಯರನ್ನ ಸಶಕ್ತರನ್ನಾಗಿ ಮಾಡಲಾಗ್ತಿದೆ ಎಂದು ಟಿಎಂಸಿ ಹೇಳುತ್ತಿದೆ. ಆದ್ರೆ ಇಲ್ಲಿ ಅವರದೇ ಸಂಸದರು ಟಿಕೆಟ್ ಸಿಗದ ಶಾಸಕಿಯ ಕೆನ್ನೆಯನ್ನು ಹಿಂಡಿದ್ದಾರೆ. ನಿಮಗೆ ನಾಚಿಕೆಯಾಗಬೇಕು ಎಂದು ಬರೆದುಕೊಂಡಿದ್ದಾರೆ.

    ಬಿಜೆಪಿಯವರು ಚುನಾವಣೆ ಸಮಯದಲ್ಲಿ ಮಾತ್ರ ಬಂಗಾಳಕ್ಕೆ ಬಂದು ಸುಳ್ಳುಗಳನ್ನು ಹೇಳಿ ಹೋಗುತ್ತಾರೆ. ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುವ ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿದ್ದಾರೆಯೇ? ಮೋದಿಯವರ ಪ್ರಿಯವಾದ ಗುಜರಾತ್ ರಾಜ್ಯದಲ್ಲಿನ ಪರಿಸ್ಥಿತಿ ಹೇಗಿದೆ? ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ರಾತ್ರಿ ಕೂಡ ಓಡಾಡುವಷ್ಟು ಸುರಕ್ಷತೆ ಇದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಎಲೆಕ್ಷನ್ ಕಾಂಪೇನ್ ನಲ್ಲಿ ಹೇಳಿದ್ದರು.

    ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಇಲ್ಲಸಲ್ಲದ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ. ತೃಣಮೂಲದ ಧ್ಯೇಯವಾಕ್ಯವನ್ನು ನೆನಪಿನಲ್ಲಿಟ್ಟುಕೊಳ್ಳಿ ಮಾ-ಮಾತಿ-ಮನುಷ್ಯ (ತಾಯಿ, ತಾಯಿನಾಡು ಮತ್ತು ಮಾನವೀಯತೆ) ಎಂದು ಹೇಳುವ ಮೂಲಕ ಕಿಡಿಕಾರಿದರು.

    ಮಹಿಳೆಯರು ಬಂಗಾಳದ ಪರ ಹೋರಾಡಲಿದ್ದಾರೆ. ಮಹಿಳೆಯರು ಬಂಗಾಳವನ್ನು ನಿರ್ಮಿಸಲಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಇದು ನಾನು ಮಾಡುತ್ತಿರುವ ಪ್ರತಿಜ್ಞೆ ಎಂದು ಹೇಳಿದರು.