Tag: whale vomit

  • ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ಕೇಸ್‌ – ಮಫ್ತಿಯಲ್ಲಿದ್ದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ಕೇಸ್‌ – ಮಫ್ತಿಯಲ್ಲಿದ್ದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ಉಡುಪಿ: ಕುಂದಾಪುರ ಕೋಡಿ ಸಮುದ್ರ ತೀರದಲ್ಲಿ ತಿಮಿಂಗಿಲ ವಾಂತಿಯ ಅಕ್ರಮ ಮಾರಾಟದ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಫ್ತಿಯಲ್ಲಿ ಬಂದ ಸಿಐಡಿ ಅಧಿಕಾರಿಗಳ ಬಗ್ಗೆ ಸ್ಥಳೀಯರು ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

    ಉಡುಪಿ ಜಿಲ್ಲೆಯ ಕುಂದಾಪುರ ಕೋಡಿಯಲ್ಲಿ ಅಂಬರ್ ಗ್ರೀಸ್ ಡೀಲ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಯುನಿಫಾರ್ಮ್ ಇಲ್ಲದೆ, ಮೂರು ಕಾರಿನಲ್ಲಿ ಬಂದ ಅರಣ್ಯ ಇಲಾಖೆಯ ಸಿಐಡಿ ವಿಭಾಗದ ಅಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದಾರೆ. ಸ್ಥಳೀಯರ ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಈ ವೇಳೆ ಸುತ್ತಮುತ್ತಲಿನ ಜನ ಸೇರಿದ್ದರಿಂದ ತಳ್ಳಾಟ ನಡೆದಿದೆ. ಇದರಿಂದಾಗಿ ಅಧಿಕಾರಿಗಳಿಗೆ ಗಾಯಗಳಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರು ತಿಂಗಳ ಹಿಂದೆ ಕೋಟ ಮಣೂರಿನಲ್ಲಿ ಸಿಐಡಿ ಸೋಗಿನಲ್ಲಿ ದರೋಡೆಕೋರರು ಬಂದು ಮನೆ ದರೋಡೆಗೆ ವಿಫಲ ಪ್ರಯತ್ನ ಮಾಡಿದ್ದರು. ಸಿಸಿಟಿವಿ ಕ್ಯಾಮೆರಾದಲ್ಲಿ ದರೋಡೆ ಯತ್ನದ ದೃಶ್ಯ ಸೆರೆಯಾಗಿತ್ತು. ಈ ಘಟನೆ ನೆನಪಿಸಿಕೊಂಡ ಜನರು ಇದು ಕೂಡ ಅಂತಹದ್ದೇ ಮತ್ತೊಂದು ದರೋಡೆ ಯತ್ನ ಎಂದು ತಪ್ಪು ತಿಳಿದು ಅಧಿಕಾರಿಗಳ ಜೊತೆಗೆ ಘರ್ಷಣೆಗೆ ಇಳಿದಿದ್ದರು ಎನ್ನಲಾಗಿದೆ.

    ಅಂಬರ್ ಗ್ರೀಸ್ ವ್ಯವಹಾರ ನಡೆಯುತ್ತಿದ್ದು, ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ತಕ್ಷಣ ಕುಂದಾಪುರದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಲಕ್ಷಾಂತರ ರೂ. ಬೆಲೆ ಬಾಳುವ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಇಬ್ಬರು ಅಂದರ್

    ಲಕ್ಷಾಂತರ ರೂ. ಬೆಲೆ ಬಾಳುವ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಇಬ್ಬರು ಅಂದರ್

    ಚಾಮರಾಜನಗರ: ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ.

    ಮೈಸೂರು ಆಶೋಕಪುರಂ ನಿವಾಸಿ ವಸಂತ ಕುಮಾರ್ (50), ರಾಮನಗರ ಜಿಲ್ಲೆಯ ಮೂಲದ ವೈರಮುಡಿ (40) ಬಂಧಿತರಾಗಿದ್ದಾರೆ.

    ಅಂಬರ್ ಗ್ರೀಸ್ ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿಟ್ಟಿದ್ದ 4.386 ಕೆಜಿ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದಾರೆ.

    ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    ತಿಮಿಂಗಿಲ ವಾಂತಿಗೆ ಯಾಕಿಷ್ಟು ಬೇಡಿಕೆ?
    ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ. ಹಾಗಾಗಿ ತಿಮಿಂಗಲ ವಾಂತಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ.

  • 5 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ – ಇಬ್ಬರ ಬಂಧನ

    5 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ – ಇಬ್ಬರ ಬಂಧನ

    ಕಾರವಾರ: ಐದು ಕೋಟಿ ಮೌಲ್ಯದ ನಿಬರ್ಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

    ಡಿವೈಎಸ್‍ಪಿ ರವಿ ಡಿ ನಾಯ್ಕ್ ಅವರ ನೇತೃತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್, ಪಿಎಸ್‍ಐ ಭೀಮಾಶಂಕರ್, ಪಿಎಸ್‍ಐ ಈರಯ್ಯ ನೇತೃತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್, ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು, ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಟಿ ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡ ಗ್ರಾಮ ಪಂಚಾಯ್ತಿಗಳು!

    ಏನಿದು ತಿಮಿಂಗಿಲದ ವಾಂತಿ?
    ಸಮುದ್ರದಲ್ಲಿ ತಿಮಿಂಗಿಲವು ತಿಂದ ಆಹಾರವು ಜೀರ್ಣಿಸಿಕೊಳ್ಳಲಾಗದೇ ಮರಳಿ ಅದನ್ನು ಹೊರ ಕಕ್ಕುತ್ತವೆ. ಈ ಹೊರ ಕಕ್ಕಿದ ಆಹಾರವು ದ್ರವರೂಪದಲ್ಲಿ ಗಟ್ಟಿಯಾಗಿರುತ್ತದೆ. ಇದಕ್ಕೆ ಅಂಬರ್ ಗ್ರೀಸ್ ಎಂದು ವೈಜ್ಞಾನಿಕವಾಗಿ ಕರೆಯಲಾಗುತ್ತದೆ. ಈ ದ್ರವರೂಪದ ಗಟ್ಟಿಯಾದ ವಸ್ತುವು ಮೊದಲು ಸಮುದ್ರ ಆಳದಲ್ಲಿ ಇದ್ದು ನಂತರ ಕೆಲವು ರಾಸಾಯನಿಕ ಕ್ರಿಯೆಯ ಮೂಲಕ ಸಮುದ್ರದಲ್ಲಿ ತೇಲುತ್ತವೆ. ಹೀಗೆ ತೇಲಿದ ತಿಮಿಂಗಿಲದ ವಾಂತಿಯು ಅತೀ ಅಮುಲ್ಯವಾಗಿದ್ದು ಕೆಟ್ಟ ವಾಸನೆ ಇದ್ದರೂ ಸಹ ಇದು ಕೋಟಿಗಟ್ಟಲೇ ಬೆಲೆಬಾಳುತ್ತದೆ. ಅರಣ್ಯ ಕಾಯ್ದೆಯಡಿ ಈ ತಿಮಿಂಗಿಲದ ವಾಂತಿಯನ್ನು ಮಾರಾಟಮಾಡುವುದು ಭಾರತದಲ್ಲಿ ಸಂಪೂರ್ಣ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಹಾಲಿ ಶಾಸಕನಿಗೆ ಬಾಗಿಲು ಮುಚ್ಚಿದ ಜೆಡಿಎಸ್ – ದೇವೇಗೌಡರಿಂದ್ಲೇ ಡೋರ್ ಕ್ಲೋಸ್ ಸಂದೇಶ

    ಕೋಟಿ ಮೌಲ್ಯ ಏಕೆ?
    ಈ ತಿಮಿಂಗಿಲದ ವಾಂತಿ ಅಪರೂಪದ್ದಾಗಿದೆ. ಇವುಗಳನ್ನು ಹೊರದೇಶಗಳಲ್ಲಿ ಸುಗಂದ ದ್ರವ್ಯ ತಯಾರಿಸಲು ಬಳಸಲಾಗುತ್ತದೆ. ಇದರಿಂದ ತಯಾರಾದ ಸುಗಂಧ ದ್ರವ್ಯಕ್ಕೆ ಗಲ್ಛ್ ರಾಷ್ಟ್ರಗಳಲ್ಲಿ ಹೆಚ್ಚಿನ ಬೇಡಿಕೆ ಸಹ ಇದೆ. ಹಲವು ದೇಶದಲ್ಲಿ ತಿಮಿಂಗಿಲದ ವಾಂತಿ ಮಾರಾಟಕ್ಕೆ ಅವಕಾಶಗಳಿವೆ. ಅತೀ ವಿರಳವಾಗಿ ಸಿಗುವುದರಿಂದ ಇವುಗಳಿಗೆ ಬೇಡಿಕೆ ಇದ್ದು ಭಾರತದಲ್ಲಿ ನಿರ್ಬಂಧ ಇರುವುದರಿಂದ ಮುಂಬೈ ಮೂಲಕ ಇತರೆ ದೇಶಗಳಿಗೆ ಇವುಗಳನ್ನು ಕಳ್ಳಹಾದಿಯಲ್ಲಿ ಸಾಗಿಸಿ ಹಣ ಸಂಪಾದಿಸುತ್ತಾರೆ. ಜಿಲ್ಲೆಯಲ್ಲಿ ಈ ಹಿಂದೆ ಮುರುಡೇಶ್ವರದಲ್ಲಿ ಒಂದು ಕೆಜಿಗೂ ಹೆಚ್ಚು ಮೌಲ್ಯದ ಅಂಬರ್ ಗ್ರೀಸ್ ಇತ್ತೀಚೆಗೆ ದೊರಕಿತ್ತು. ಇದನ್ನು ಅರಣ್ಯ ಇಲಾಖೆಗೆ ನೀಡಲಾಗಿತ್ತು. ಆದರೆ ಇದೀಗ ಐದು ಕೆಜಿಯಷ್ಟು ತೂಕದ ತಿಮಿಂಗಿಲದ ವಾಂತಿ ದೊರೆತಿದ್ದು ಇದೇ ಮೊದಲ ಘಟನೆಯಾಗಿದೆ.