Tag: What’s App

  • ಇಂಥ ಅಪ್ಪ ಇನ್ಯಾರಿಗೂ ಸಿಗದಿರಲಿ – ತಾಯಿ ಜೊತೆಗೆ ಇಬ್ಬರು ಮಕ್ಕಳು ಆತ್ಮಹತ್ಯೆ

    ಇಂಥ ಅಪ್ಪ ಇನ್ಯಾರಿಗೂ ಸಿಗದಿರಲಿ – ತಾಯಿ ಜೊತೆಗೆ ಇಬ್ಬರು ಮಕ್ಕಳು ಆತ್ಮಹತ್ಯೆ

    ಬೆಂಗಳೂರು: ಅಪ್ಪನ ವರ್ತನೆ ಸರಿ ಇಲ್ಲ ಎಂದು ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿ ತಾಯಿ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ.

    ರಾಜೇಶ್ವರಿ, ಮಾನಸ ಹಾಗೂ ಭೂಮಿಕ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಕ್ಕಳು. ಮೂಲತಃ ಮಂಡ್ಯದವರಾದ ರಾಜೇಶ್ವರಿ 18 ವರ್ಷಗಳ ಹಿಂದೆ ಸಿದ್ದಯ್ಯ ಎಂಬವನನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದರು. ಸಿದ್ದಯ್ಯನಿಗೆ ಅನುಕಂಪದ ಅಧಾರದಲ್ಲಿ ಕೆಇಬಿಯಲ್ಲಿ ಕೆಲಸ ಸಿಕ್ಕಿತ್ತು. ಆಗ ಸಿದ್ದಯ್ಯನ ಸಂಸಾರದಲ್ಲಿ ಬಿರುಕು ಶುರುವಾಗಿದೆ. ಸಿದ್ದಯ್ಯ ಈ ವಯಸ್ಸಿನಲ್ಲೂ, ಹೆಣ್ಣಿನ ಶೋಕಿಗೆ ಬಿದ್ದಿದ್ದನು. ಇದೇ ವಿಚಾರವಾಗಿ ಸಂಸಾರದಲ್ಲಿ ಪದೇ ಪದೇ ಜಗಳವಾಗುತ್ತಿತ್ತು.

    ಅಲ್ಲದೆ ಎದೆಯೆತ್ತರಕ್ಕೆ ಬೆಳೆದಿರುವ ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ಪತಿ-ಪತ್ನಿ ಜಗಳವಾಡುತ್ತಿದ್ದರು. ವರಮಹಾಲಕ್ಷ್ನೀ ಹಬ್ಬಕ್ಕೆ ಮನೆಗೆ ಬಾರದ ಪತಿ, ಬೇರೊಂದು ಹೆಣ್ಣಿನ ಜೊತೆ ಟ್ರಿಪ್ ಹೋಗಿದ್ದನು. ಇದರಿಂದ ತೀವ್ರವಾಗಿ ಬೇಸತ್ತ ಮೂವರು ಆತ್ಮಹತ್ಯೆಗೆ ನಿರ್ಧರಿಸಿದ್ದರು. ಮಗಳು ಭೂಮಿಕ, “ಎಲ್ಲರಿಗೂ ಒಳ್ಳೆಯ ತಂದೆ ಸಿಗಬೇಕು. ನಮ್ಮ ಜೀವನನ ಹಾಳು ಮಾಡಿಬಿಟ್ಟ. ನಮ್ಮ ಸಾವಿಗೆ ಸಿದ್ದನೇ ಕಾರಣ” ಎಂದು ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿಕೊಂಡಳು. ಬಳಿಕ ರಾತ್ರಿ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಆರೋಪಿ ಸಿದ್ದಯ್ಯ ತಮಿಳುನಾಡಿನ ಕಡೆಗೆ ಟ್ರಿಪ್ ಹೋಗಿದ್ದು, ಹನುಮಂತನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.

     

  • ಫೇಕ್ ನ್ಯೂಸ್‍ಗಳಿಗೆ ಕಡಿವಾಣ-ಶೀಘ್ರವೇ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ

    ಫೇಕ್ ನ್ಯೂಸ್‍ಗಳಿಗೆ ಕಡಿವಾಣ-ಶೀಘ್ರವೇ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ

    ನವದೆಹಲಿ: ಸಾಮಾಜಿಕ ಜಾಲತಾಣಗಲ್ಲಿ ಅನಧಿಕೃತ ಪೋಸ್ಟ್ ಗಳ ಹಾವಳಿ ಹೆಚ್ಚುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ.

    ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಶೀಘ್ರ ಈ ಕುರಿತು ಅಧಿಸೂಚನೆ ಹೊರಡಿಸಲಿದೆ. ಈ ಮೂಲಕ ಮಸೇಜಿಂಗ್ ಅಪ್ಲಿಕೇಶನ್ ವಾಟ್ಸಪ್, ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿನ ಕಾನೂನು ಬಾಹಿರ ಪೋಸ್ಟ್ ಗಳಿಗೆ ಕಡಿವಾಣ ಹಾಕಲು ಚಿಂತಿಸಿದೆ. ಸುಳ್ಳು ಸುದ್ದಿ, ಪೋಸ್ಟ್‍ಗಳನ್ನು ಪತ್ತೆ ಹಚ್ಚಿ ಡಿಲೀಟ್ ಮಾಡುವುದು ಮಾತ್ರವಲ್ಲದೆ, ಪೋಸ್ಟ್ ಮಾಡಿದ ಮೂಲ ವ್ಯಕ್ತಿಯನ್ನು ಪತ್ತೆ ಹಚ್ಚಲು ಈ ಕಾಯ್ದೆಯಲ್ಲಿ ತಿಳಿಸಲಾಗಿದೆ.

    ಮಾರ್ಗಸೂಚಿ ಸಿದ್ಧ: ಕಾಯ್ದೆ ತಿದ್ದುಪಡಿ ಕುರಿತು ಈಗಾಗಲೇ ಮಾರ್ಗ ಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಸರ್ಕಾರ ಸಾರ್ವಜನಿಕ ಅಭಿಪ್ರಾಯಗಳಿಗೆ ಅವಕಾಶ ನೀಡಿತ್ತು. ನಕಲಿ ಸುದ್ದಿಗಳ ಹರಡುವಿಕೆಯನ್ನು ತಡೆಯುವ ಐಟಿ ಕಾಯ್ದೆಯ ಕರಡು ತಿದ್ದುಪಡಿಗಳ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಅಭಿಪ್ರಾಯ ಸಂಗ್ರಹದ ನಂತರ ಸಂದೇಶ ಕಳುಹಿಸಿದ ಮೂಲ ವ್ಯಕ್ತಿಯನ್ನು ಟ್ರೇಸ್ ಮಾಡುವುದು ಹಾಗೂ ಕಾನೂನು ಬಾಹಿರ ಪೋಸ್ಟ್‍ಗಳನ್ನು 24 ಗಂಟೆಗಳಲ್ಲಿ ಜಾಲತಾಣದಿಂದ ತೆಗೆದು ಹಾಕುವುದರ ಕುರಿತು ಕರಡು ನಿಯಮಗಳನ್ನು ಸಲ್ಲಿಸಲಾಗಿದೆ.

    ತಿದ್ದುಪಡಿಗೆ ವಿರೋಧ: ಕರಡು ನಿಯಮಗಳ ಕುರಿತು ಕೆಲ ತಜ್ಞರು ಪೋಸ್ಟ್, ಸಂದೇಶಗಳ ಮೇಲೆ ‘ನಿಗಾ ವಹಿಸುಸುವ ಹಾಗೂ ಸೆನ್ಸಾರ್‍ಶಿಪ್’ (“Surveillance And Censorship”) ಭಯದ ಕುರಿತು ಟೀಕೆ ವ್ಯಕ್ತವಾಗಿವೆ. ಅಲ್ಲದೆ, ಪೋಸ್ಟ್‍ನ ಮೂಲವನ್ನು ಪತ್ತೆ ಹಚ್ಚುವ ವಿಷಯದಲ್ಲಿ ವಾಟ್ಸಪ್ ಹಾಗೂ ಇತರ ಸಾಮಾಜಿಕ ಜಾಲತಾಣಗಳು ವಿರೋಧ ವ್ಯಕ್ತಪಡಿಸಿವೆ ಎಂದು ವರದಿಯಾಗಿದೆ.

    2018ರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಕಲಿ ಸುದ್ದಿಗಳಿಂದ ಹಲವಾರು ಸಾವು-ನೋವುಗಳು ಸಂಭವಿಸಿವೆ ಎಂಬುದು ಸರ್ಕಾರದ ವಾದವಾಗಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳು ಭಯೋತ್ಪಾದನಾ ಚಟುವಟಿಕೆ, ಅಶ್ಲೀಲ ವಿಷಯಗಳ ಪ್ರಸಾರ, ಸುಳ್ಳು ಸುದ್ದಿಗಳನ್ನು ಹರಡುವುದು, ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಸೇರಿದಂತೆ ವಿವಿಧ ರೀತಿಯ ಅಕ್ರಮಗಳನ್ನು ತಡೆಯಲು ಕಾನೂನು ಜಾರಿ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣಗಳು ಸವಾಲಾಗಿ ಪರಿಣಮಿಸಿವೆ ಎಂದು ಸರ್ಕಾರ ವಿವರಿಸಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವಾಟ್ಸಾಪ್, ಫೇಸ್‍ಬುಕ್ ನೋಡಿ ಜನ ವೋಟ್ ಹಾಕಲ್ಲ: ಸುಮಲತಾಗೆ ಸಚಿವ ಪುಟ್ಟರಾಜು ಟಾಂಗ್

    ವಾಟ್ಸಾಪ್, ಫೇಸ್‍ಬುಕ್ ನೋಡಿ ಜನ ವೋಟ್ ಹಾಕಲ್ಲ: ಸುಮಲತಾಗೆ ಸಚಿವ ಪುಟ್ಟರಾಜು ಟಾಂಗ್

    ಮಂಡ್ಯ: ವಾಟ್ಸಾಪ್ ಹಾಗೂ ಫೇಸ್‍ಬುಕ್ ನೋಡಿ ಜನ ವೋಟ್ ಹಾಕಲ್ಲ ಎಂದು ಸಚಿವ ಪುಟ್ಟರಾಜು ಸುಮಲತಾ ಅವರಿಗೆ ಟಾಂಗ್ ನೀಡಿದ್ದಾರೆ.

    ಮಂಡ್ಯದಲ್ಲಿ ಇಂದು ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನರು ವಾಟ್ಸಾಪ್ ಹಾಗೂ ಫೇಸ್‍ಬುಕ್ ನೋಡಿ ವೋಟ್ ಹಾಕುವುದಿಲ್ಲ. ಹಾಗಿದ್ದರೆ ಮೋದಿ ಏಕೆ ಬೀದಿ ಬೀದಿ ಸುತ್ತಬೇಕಿತ್ತು ಎಂದು ಹೇಳುವ ಮೂಲಕ ಸುಮಲತಾ ಅವರಿಗೆ ಟಾಂಗ್ ನೀಡಿದ್ದಾರೆ.

    ಮಂಡ್ಯದಲ್ಲಿ ನಾವು- ಕಾಂಗ್ರೆಸ್ ಸಾಂಪ್ರದಾಯಿಕ ಎದುರಾಳಿಗಳು. ನಾವೇ ಈಗ ಒಂದಾಗಿದ್ದೇವೆ. ಆದರೆ ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ. ಅವರು ಮಂಡ್ಯದಲ್ಲಿ ಅಭ್ಯರ್ಥಿ ಹಾಕೋದಿಲ್ಲ. ಸ್ವಾಭಿಮಾನವಿರುವ ಮಂಡ್ಯ ಜನ ಬೇರೆಯವರ ಕೈಯಲ್ಲಿ ಹೇಳಿಸಿಕೊಳ್ಳಲ್ಲ ಎಂದರು.

    ಸುಮಲತಾ ಸ್ಪರ್ಧೆ ಹಿಂದೆ ಸಿದ್ದರಾಮಯ್ಯ ಇದ್ದಾರೆ ಎಂಬುದು ಶುದ್ಧ ಸುಳ್ಳು. ಏಕೆಂದರೆ ಅಭಿವೃದ್ಧಿಯೇ ನಮ್ಮ ಅಜೆಂಡಾ. ನಾಮಪತ್ರ ಸಲ್ಲಿಕೆಯಾದ ಮೇಲೆ ತಂತ್ರಗಾರಿಕೆ ಗೊತ್ತಾಗುತ್ತದೆ. ಮಂಡ್ಯ ಜಿಲ್ಲೆಯ ಜನರಿಗೆ ಸ್ವಾಭಿಮಾನದ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ನಾನು ಮಲಗಿಕೊಳ್ಳೋದು ಚಿನಕುರಳಿಯಲ್ಲಿ, ಬೆಳಗ್ಗೆ ಎದ್ದು ಗದ್ದೆಗೆ ನೀರು ಕಟ್ಟಿ ಅಲ್ಲಿಯೇ ವಾಕ್ ಮಾಡಿ ಬರುತ್ತೇನೆ. ಇದು ಸ್ವಾಭಿಮಾನ ಅಲ್ಲವೆ ಎಂದು ಪುಟ್ಟರಾಜು ಹೇಳಿದ್ದಾರೆ.

    ಈ ಮೂಲಕ ಸುಮಲತಾ ಅವರು ಬೆಂಗಳೂರಿನಲ್ಲಿ ಇದ್ದುಕೊಂಡು ಸ್ವಾಭಿಮಾನದ ಬಗ್ಗೆ ಮಾತನಾಡುವುದಕ್ಕೆ ಪರೋಕ್ಷವಾಗಿ ಕೆದಕಿದ್ದಾರೆ.

  • ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳ ಮದುವೆ

    ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳ ಮದುವೆ

    ಚಿತ್ರದುರ್ಗ: ಪೋಷಕರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿರೋ ವಿಡಿಯೋವನ್ನು ವಾಟ್ಸಪ್‍ಗಳಲ್ಲಿ ಹರಿಬಿಟ್ಟಿರೋ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಖಂಡೆನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ನವೀನ್ ಮತ್ತು ವಿದ್ಯಾ(ಹೆಸರು ಬದಲಾಯಿಸಲಾಗಿದೆ) ಪ್ರೇಮಿಗಳಿಬ್ಬರು ವಯಸ್ಕರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಪ್ರೀತಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಆ ಪ್ರೇಮಿಗಳು ಮನೆ ಬಿಟ್ಟು ಹೋಗಿ ಮದುವೆಯಾದರು.

    ನಮ್ಮನ್ನು ಹುಡುಕಬೇಡಿ, ನನ್ನ ಹುಡುಗ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೆ ಅಂತ ಯುವತಿ ವಿಡಿಯೋ ಮಾಡಿ ಅದನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಅಲ್ಲದೇ ಈ ಪ್ರೇಮಿಗಳಿಬ್ಬರು ಒಂದೇ ಗ್ರಾಮದವರಾಗಿದ್ದು, ನವೀನ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಶುರುವಾದ ಪ್ರೀತಿಗೆ ಯುವತಿ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಮನೆ ಬಿಟ್ಟು ಹೋಗಿ ವಿವಾಹವಾಗಿದ್ದೇವೆಂದು ಹೇಳಿಕೊಂಡಿರೋ ವಿಡಿಯೋ ಗ್ರಾಮಸ್ಥರ ವಾಟ್ಸಪ್ ಗ್ರೂಪ್ ಗಳಿಗೆ ಹರಿದಾಡುತ್ತಿದೆ.

    ಸದ್ಯ ಈ ಸಂಬಂಧ ಯುವತಿಯ ಪೋಷಕರು ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ.

  • ವಯಸ್ಸು ನಂಬರ್ ಅಷ್ಟೇ ಎನ್ನುವಂತೆ ಅಂಕಲ್ ಹಾಕಿದ್ರು ಸಖತ್ ಸ್ಟೆಪ್- ವಿಡಿಯೋ ವೈರಲ್

    ವಯಸ್ಸು ನಂಬರ್ ಅಷ್ಟೇ ಎನ್ನುವಂತೆ ಅಂಕಲ್ ಹಾಕಿದ್ರು ಸಖತ್ ಸ್ಟೆಪ್- ವಿಡಿಯೋ ವೈರಲ್

    ಮುಂಬೈ: ವ್ಯಕ್ತಿಯೊಬ್ಬ ಹಿಂದಿ ಚಿತ್ರಗೀತೆಗೆ ಸಖತ್ ಹೆಜ್ಜೆ ಹಾಕುವ ಮೂಲಕ ವಯಸ್ಸು ಕೇವಲ ನಂಬರ್ ಮಾತ್ರ ಎನ್ನುವ ಮಾತನ್ನು ಸಾಬೀತು ಪಡೆಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವ್ಯಕ್ತಿಯೊಬ್ಬ ವಿವಾಹ ಸಮಾರಂಭದಲ್ಲಿ ಸೃಜನಾತ್ಮ ನೃತ್ಯ ಪ್ರದರ್ಶಿಸಿದ್ದಾರೆ. ಇದನ್ನು ಗೌತಮ್ ತ್ರಿವೇದಿ ಎಂಬವರು “ವಿವಾಹ ಸಮಾರಂಭದ ಅತ್ಯುತ್ತಮ ಪ್ರದರ್ಶನವೆಂದು ಯುನೆಸ್ಕೋ ಆಯ್ಕೆ ಮಾಡಿದೆ” ಅಂತ ಬರೆದು ಟ್ವೀಟ್ ಮಾಡಿದ್ದಾರೆ.

    ಈ ವಿಡಿಯೋ 1.30 ನಿಮಿಷವಿದೆ. ನಟ ಗೋವಿಂದ ಹಾಗೂ ನಟಿ ನಿರ್ಮಲಾ ಅಭಿನಯದ ಬಾಲಿವುಡ್ ಖುದ್ಗರ್ಜ್ ಚಿತ್ರದ ‘ಆಪ್ ಕೆ ಆ ಜಾನೆ ಸೆ’ ಹಾಡಿಗೆ 40ರ ವ್ಯಕ್ತಿ ಸೃಜನಾತ್ಮಕವಾಗಿ ಹೆಜ್ಜೆ ಹಾಕಿದ್ದಾರೆ. ಮುಖದ ಹಾವಭಾವ, ಅಭಿವ್ಯಕ್ತಿ, ದೇಹದ ಚಲನವಲ ನಟ ಗೋವಿಂದು ಅವರನ್ನೇ ಹೋಲುವಂತಿವೆ. ವೇದಿಕೆಯ ತುಂಬಾ ನಡೆದಾಡುತ್ತ ಯುವಕರಂತೆ ನೃತ್ಯ ಮಾಡುವ ಮೂಲಕ ವಯಸ್ಸು ಕೇವಲ ಸಂಖ್ಯೆ ಅಷ್ಟೇ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ.

    ಮೇ 30ರಂದು ಟ್ವೀಟ್ ಮಾಡಲಾದ ವಿಡಿಯೋವನ್ನು 4 ಸಾವಿರಕ್ಕೂ ಅಧಿಕ ಜನರು ರೀ ಟ್ವೀಟ್ ಮಾಡಿದ್ದು, 9 ಸಾವಿರಕ್ಕೂ ಅಧಿಕ ಜನರು ಲೈಕ್ ಮಾಡಿದ್ದಾರೆ. ಕೇವಲ ಟ್ವಿಟರ್ ಅಲ್ಲದೇ ವಾಟ್ಸಪ್ ನಲ್ಲಿಯೂ ಈ ವಿಡಿಯೋ ಹರಿದಾಡುತ್ತಿದೆ. ಒಟ್ಟಿನಲ್ಲಿ 40ರ ವ್ಯಕ್ತಿ, ಯುವಕರಿಗಿಂತ ತಾನೇನೂ ಕಮ್ಮಿ ಇಲ್ಲ ಎನ್ನುವಂತೆ ಸ್ಟೆಪ್ ಹಾಕುವ ಮೂಲಕ ಎಲ್ಲರ ಮನಗೆದ್ದಿದ್ದಾರೆ.

  • ರಾಮ್‍ದೇವ್ ಸ್ವದೇಶಿ ಚಾಟ್ ಆ್ಯಪ್ ಗೂಗಲ್ ಪ್ಲೇ ಸ್ಟೋರಿನಲ್ಲಿ ಲಭ್ಯವಿಲ್ಲ!

    ರಾಮ್‍ದೇವ್ ಸ್ವದೇಶಿ ಚಾಟ್ ಆ್ಯಪ್ ಗೂಗಲ್ ಪ್ಲೇ ಸ್ಟೋರಿನಲ್ಲಿ ಲಭ್ಯವಿಲ್ಲ!

    ನವದೆಹಲಿ: ನಿನ್ನೆ ಒಂದು ದಿನಕ್ಕೆ ಪರೀಕ್ಷಾರ್ಥವಾಗಿ ಬಿಡುಗಡೆ ಮಾಡಿದ್ದ ಬಾಬಾ ರಾಮ್‍ದೇವ್ ಅವರ ಪತಂಜಲಿ ಸ್ವದೇಶಿ ಚಾಟ್ ಅ್ಯಪ್ ಕಿಂಬೊಹೋ ತಾಂತ್ರಿಕ ದೋಷದಿಂದ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿಲ್ಲ ಎಂದು ಪತಂಜಲಿ ವಕ್ತಾರ ಎಸ್ ಕೆ ಟಿಜಾರಾವಾಲಾ ಟ್ವೀಟ್ ಮಾಡಿದ್ದಾರೆ.

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲ್ಯಾಂಡ್ ಆದ ಮೂರು ಗಂಟೆಯಲ್ಲಿ 1.5 ಲಕ್ಷ ಮಂದಿ ಜನರು ಡೌನ್ ಲೋಡ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ ಹಾಗಾಗಿ ತಾಂತ್ರಿಕ ದೋಷ ಎದುರಾಗಿದೆ. ಎಲ್ಲಾ ಗ್ರಾಹಕರಿಗೂ ಅಭಾರಿಯಾಗಿದ್ದೇವೆ. ಆದಷ್ಟು ಬೇಗ ಕಿಂಬೊಹೋ ಅ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಬಹಳಷ್ಟು ಜನ ಹೊಸ ಅ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳುವ ಪ್ರಯತ್ನ ಮಾಡಿ ನಿರಾಶರಾಗಿದ್ದಾರೆ.

    ಸಿಮ್ ಕಾರ್ಡ್ ಗಳನ್ನು ಬಿಡುಗಡೆಗೊಳಿಸಿದ ನಂತರ ಬಾಬಾ ರಾಮ್‍ದೇವ್ ಅವರು ಸ್ವದೇಶಿ ಚಾಟ್ ಆ್ಯಪ್ ಕಿಂಬೊಹೋ ವನ್ನು ವಾಟ್ಸ್ ಆ್ಯಪ್ ಗೆ ಪ್ರತಿಸ್ಪರ್ಧಿಯಾಗಿ ಬಿಡುಗಡೆಗೊಳಿಸಿದ್ದಾರೆ. ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಕಿಂಬೊಹೋ ಸಂಸ್ಕøತ ಪದ. ಇದರ ಅರ್ಥ ಹೇಗಿದಿಯಾ? ಅಥವಾ ಏನು ಸಮಾಚಾರ? ಎಂದು ಪತಂಜಲಿ ವಕ್ತಾರ ಎಸ್ ಕೆ ಟಿಜಾರಾವಾಲಾ ಟ್ವೀಟ್ ಮಾಡಿದ್ದಾರೆ.

    ಈ ಆ್ಯಪ್ ನಲ್ಲಿ ಟೆಕ್ಸ್ಟ್, ಆಡಿಯೊ, ಫೋಟೋ, ವಿಡಿಯೊ, ಸ್ಟಿಕರ್ಸ್ ಹಾಗೂ ಇತರೆ ಫೈಲ್ ಗಳನ್ನು ವಿನಿಮಯ ಮಾಡಿಕೊಳ್ಳಬಹುದು. ಅನಗತ್ಯ ಸಂವಾದ ಇಲ್ಲ ಯೂಸರ್ಸ್ ನ ಬ್ಲಾಕ್ ಮಾಡಬಹುದು. ಗ್ರಾಹಕರು ಇಚ್ಛೆ ಬಂದ ಫೋಟೊವನ್ನು ವಾಲ್ ಪೇಪರ್ ಆಗಿ ಮಾಡಿಕೊಳ್ಳಬಹುದಾಗಿದೆ.

     

     

  • ಹಂದಿಯ ಮುಖದಂತೆ ಮೋದಿ ಚಿತ್ರಣ – ವಾಟ್ಸಪ್ ಗ್ರೂಪ್ ವಿರುದ್ಧ ದೂರು ದಾಖಲು

    ಹಂದಿಯ ಮುಖದಂತೆ ಮೋದಿ ಚಿತ್ರಣ – ವಾಟ್ಸಪ್ ಗ್ರೂಪ್ ವಿರುದ್ಧ ದೂರು ದಾಖಲು

    ಮಂಗಳೂರು: ಪ್ರಧಾನಿ ಮೋದಿ ಭಾವಚಿತ್ರವನ್ನು ವಿರೂಪಗೊಳಿಸಿ ವಾಟ್ಸಪ್ ಗ್ರೂಪ್ ಗೆ ಹಾಕಿದ್ದು, ಈಗ ವಾಟ್ಸಪ್ ಗ್ರೂಪ್ ವಿರುದ್ಧ ದೂರು ದಾಖಲಾಗಿದೆ.

    ಫ್ರೆಂಡ್ಸ್ ಪಡುಬೆಟ್ಟು ಎಂಬ ಗ್ರೂಪ್ ನಲ್ಲಿ ಪ್ರಧಾನಿ ಮೋದಿ ಅವರ ಮುಖವನ್ನು ಹಂದಿಯ ಮುಖದಂತೆ ಚಿತ್ರಿಸಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರೂಪ್ ಅಡ್ಮಿನ್ ಹಾಗೂ ಓರ್ವ ಸದಸ್ಯನ ವಿರುದ್ಧ ದೂರು ದಾಖಲಾಗಿದೆ.

    ನೆಲ್ಯಾಡಿಯ ಪ್ರಕಾಶ್ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

    ದೂರಿನಲ್ಲಿ ಏನಿದೆ?: ಫ್ರೆಂಡ್ಸ್ ಪಡುಬೆಟ್ಟು ವಾಟ್ಸಪ್ ಗ್ರೂಪ್ ನ ಅಡ್ಮಿನ್ ಮತ್ತು ಗ್ರೂಪ್ ನ ಸದಸ್ಯನೊಬ್ಬ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತಿರುಚಿ ಹಂದಿಯ ಮುಖದಂತೆ ಬದಲಾಯಿಸಿ ವಾಟ್ಸಪ್ ಗ್ರೂಪಿನಲ್ಲಿ ದಿನಾಂಕ 20ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಹಾಕಿದ್ದಾರೆ. ಇದರಿಂದ ನಮ್ಮ ಪ್ರಧಾನಿಯ ಘನತೆಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಈ ಬಗ್ಗೆ ಈ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ‘ನಮ್ಮುಡುಗ್ರು’ ವಾಟ್ಸಪ್ ಗ್ರೂಪಿನಿಂದ ಮೂಡಿಗೆರೆಯ ದೇವರಮನೆ ಗುಡ್ಡ ಕ್ಲೀನ್ ಆಯ್ತು!

    ‘ನಮ್ಮುಡುಗ್ರು’ ವಾಟ್ಸಪ್ ಗ್ರೂಪಿನಿಂದ ಮೂಡಿಗೆರೆಯ ದೇವರಮನೆ ಗುಡ್ಡ ಕ್ಲೀನ್ ಆಯ್ತು!

    ಚಿಕ್ಕಮಗಳೂರು: ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಇಂದು ಯುವ ಜನತೆ ಹಾಳಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ನಡುವೆ ಈ ಮಾಧ್ಯಮಗಳನ್ನು ಬಳಸಿ ಚಿಕ್ಕಮಗಳೂರಿನ ಯುವಕರು ಸಮಾಜ ಮೆಚ್ಚುವ ಕೆಲಸ ಮಾಡಿದ್ದಾರೆ.

    ಹೌದು. 4 ವರ್ಷದ ಹಿಂದೆ ನಿವಾಸಿ ದಿವಿನ್ ಎಂಬವರು ಮಾಡಿದ ನಮ್ಮುಡುಗ್ರು ಗ್ರೂಪ್ ಇಂದು ಒಂದು ಗುಡ್ಡವನ್ನೇ ಕ್ಲೀನ್ ಮಾಡಿದೆ.

    ಪ್ರವಾಸಿಗರಿಂದ ಹಾಳಾದ ಮೂಡಿಗೆರೆಯ ದೇವರಮನೆ ಗುಡ್ಡದ ಫೋಟೋವನ್ನ ಸದಸ್ಯರೊಬ್ಬರು ಗ್ರೂಪ್‍ನಲ್ಲಿ ಹಾಕಿದ್ದರು. ಈ ಫೋಟೋವನ್ನು ನೋಡಿ ಕೂಡಲೇ ಕಾರ್ಯಪ್ರವೃತರಾದ ಸದಸ್ಯರು ನಾವೇ ಕ್ಲೀನ್ ಮಾಡೋಣ ಎಂದು ನಿರ್ಧರಿಸಿ ಜನವರಿ 14ರ ಮಕರ ಸಂಕ್ರಾಂತಿ ಹಬ್ಬದ ದಿನದಂದು ಎಲ್ಲರೂ ಒಂದುಗೂಡಿ ದೇವರಮನೆ ಗುಡ್ಡವನ್ನ ಕ್ಲೀನ್ ಮಾಡಿದ್ದಾರೆ.

    ಗುಡ್ಡವನ್ನು ಕ್ಲೀನ್ ಮಾಡಿದ ಸದಸ್ಯರೇ ನಾಮಫಲಕವನ್ನು ಹಾಕಿದ್ದಾರೆ. ಇದು ನಿಮ್ಮ ಪ್ರಕೃತಿ, ಒಮ್ಮೆ ಹಾಳಾದರೆ ಮತ್ತೆ ಸೃಷ್ಟಿಸಲು ಸಾಧ್ಯವಿಲ್ಲ. ಇದನ್ನ ಉಳಿಸಿ-ಬೆಳೆಸುವ ಮನಸ್ಥಿತಿಯವರು ಮಾತ್ರ ಬನ್ನಿ ಎಂದು ಗ್ರೂಪ್ ಅಡ್ಮಿನ್ ದಿವಿನ್ ನಾಮಫಲಕ ಹಾಕಿದ್ದಾರೆ.

    ಮತ್ತೊಂದು ವಿಷಯ ಏನೆಂದರೆ ಈ ಗ್ರೂಪಿನ ಬಹುತೇಕರು ಒಬ್ಬರಿಗೊಬ್ಬರು ಪರಿಚಯವಿಲ್ಲ. ಮುಖವನ್ನೂ ನೋಡಿಲ್ಲ. ಆದರು ಗ್ರೂಪ್‍ನಲ್ಲಿ ಬಂದ ಒಂದು ಮೇಸೆಜ್ ಹಾಗೂ ಫೋಟೋಗೆ ಎಲ್ಲರೂ ಸ್ಪಂದಿಸಿದ್ದಾರೆ. ಹಬ್ಬ ಎನ್ನುವುದನ್ನು ಮರೆತು 250ಕ್ಕೂ ಅಧಿಕ ಗ್ರೂಪಿನ ಸದಸ್ಯರು ಎಲ್ಲರೂ ಒಂದೆಡೆ ಸೇರಿ ದೇವರಮನೆ ಗುಡ್ಡವನ್ನ ಸ್ವಚ್ಛ ಮಾಡಿದ್ದಾರೆ. ಸ್ವಚ್ಛತಾ ಕಾರ್ಯದ ವೇಳೆ ಎರಡೂ ಟ್ರ್ಯಾಕ್ಟರ್ ಬಿಯರ್ ಬಾಟಲಿ, ಎರಡು ಟ್ರ್ಯಾಕ್ಟರ್ ಪ್ಲಾಸ್ಟಿಕ್ ಸಿಕ್ಕಿದೆ.

    ಎಲ್ಲ ರಾಜಕೀಯ ಪಕ್ಷದ ಸದಸ್ಯರು ಈ ಗ್ರೂಪಿನಲ್ಲಿದ್ದು ಎಲ್ಲರೂ ರಾಜಕೀಯವನ್ನು ಬಿಟ್ಟು ಈ ಒಳ್ಳೆ ಕಾರ್ಯದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದು ವಿಶೇಷ. ವಾಟ್ಸಪ್ ಹಾಗೂ ಫೇಸ್‍ಬುಕ್‍ಗಳು ಬರೀ ಮನೋರಂಜನೆಗಷ್ಟೆ ಇಲ್ಲ. ಇದರಿಂದಲೂ ಒಳ್ಳೆ ಕೆಲಸ ಆಗುತ್ತೆ ಅನ್ನೋದಕ್ಕೆ ಮಲೆನಾಡಿನ ಈ ಗ್ರೂಪ್ ಸಾಕ್ಷಿಯಾಗಿದೆ. ವಾಟ್ಸಪ್‍ನಿಂದ ಆರಂಭವಾದ ಒಂದು ಗ್ರೂಪ್ ಈ ಪ್ರಮಾಣದ ಕೆಲಸ-ಕಾರ್ಯ ಮಾಡಿರೋದಕ್ಕೆ ಮಲೆನಾಡಿಗರು ಶಹಬ್ಬಾಸ್ ಎಂದಿದ್ದಾರೆ.

  • ಟ್ಯಾಟೂ, ಹೊಟ್ಟೆ ತೋರಿಸು: ಜಾಬ್ ಇಂಟರ್ವ್ಯೂ ವೇಳೆ ಯುವತಿಗೆ ಸಂದರ್ಶಕನ ಪ್ರಶ್ನೆ

    ಟ್ಯಾಟೂ, ಹೊಟ್ಟೆ ತೋರಿಸು: ಜಾಬ್ ಇಂಟರ್ವ್ಯೂ ವೇಳೆ ಯುವತಿಗೆ ಸಂದರ್ಶಕನ ಪ್ರಶ್ನೆ

    ಚೆನ್ನೈ: ಸಂದರ್ಶನ ಹೆಸರಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ತಮಿಳುನಾಡಿನ ಸಂತ್ರಸ್ತ ಯುವತಿ ತನಗಾದ ಅನ್ಯಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈಗ ಈ ಪೋಸ್ಟ್ ವೈರಲ್ ಆಗಿದೆ.

    ಇತ್ತೀಚಿಗೆ ನಾನು ಕೆಲಸಕ್ಕಾಗಿ ಅಪ್ಲೈ ಮಾಡಿದೆ ಹಾಗೂ ನನ್ನ ಎಲ್ಲ ಸ್ನೇಹಿತರು ನನ್ನ ಫೋನ್ ನಂಬರ್ ನನ್ನು ಅವರಿಗೆ ಗೊತ್ತಿರುವ ವ್ಯಕ್ತಿಗಳಿಗೆ ನೀಡಿದ್ದರು. ಆಗ ಯಾರೋ ಒಬ್ಬರು ಏರ್ ಫ್ರಾನ್ಸ್ ನಿಂದ ಕರೆ ಮಾಡಿದ ವೇಳೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂದು ನಮ್ಯಾ ಬೈಡ್ ಎಂಬವರು ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ವ್ಯಕ್ತಿಯೊಬ್ಬ ಕರೆ ಮಾಡಿ ನಾನು ದೀಪಕ್ ಹಾಗೂ ಏರ್ ಫ್ರಾನ್ಸ್ ನ ಉದ್ಯೋಗಿ ಎಂದು ಹೇಳಿಕೊಂಡು ಪರಿಚಯಿಸಿದ್ದ. ಎರಡನೇ ಸುತ್ತಿನ ಸಂದರ್ಶನಕ್ಕಾಗಿ ಬೇರೆ ವ್ಯಕ್ತಿ ಕರೆ ಮಾಡುತ್ತಾರೆ ಎಂದು ಹೇಳಿ ಕಾಲ್ ಕಟ್ ಮಾಡಿದ್ದ. ಆದರೆ ಎರಡನೇ ಸುತ್ತಿನಲ್ಲಿ ಆ ವ್ಯಕ್ತಿನೇ ಕರೆ ಮಾಡಿ, ಸಂದರ್ಶನ ಸಲುವಾಗಿ ವಿಡಿಯೋ ಕಾಲ್ ಮಾಡಬೇಕಾಗುತ್ತದೆ ಹಾಗೂ ಯಾರೂ ಇಲ್ಲದ ಕೊಠಡಿಗೆ ಹೋಗಿ ನೀವು ಮಾತನಾಡಬೇಕು ಎಂದು ತಿಳಿಸಿದ್ದನು. ನಂತರ ನಾನು ಹಾಕಿದ ಉಡುಪಿನ ಬಣ್ಣಗಳ ಬಗ್ಗೆ ಕೇಳುತ್ತಿದ್ದ.

    ಕೆಲವು ಸಮಯದ ನಂತರ ಆ ವ್ಯಕ್ತಿ ವಿಡಿಯೋ ಕಾಲ್ ಮಾಡಿ ತನ್ನ ಹೆಸರು ಡಾ. ಮನೀಶ್ ರಾವ್ ಎಂದು ಹೇಳಿಕೊಂಡನು. ನನ್ನ ಎತ್ತರ ಹಾಗೂ ತೂಕವನ್ನು ತೋರಿಸಲು ಹೇಳಿದ್ದನು. ನಂತರ ನಾನು ಹಾಕಿದ ಟ್ಯಾಟು ಹಾಗೂ ನನ್ನ ಹೊಟ್ಟೆಯನ್ನು ತೋರಿಸು ಎಂದು ಹೇಳುತ್ತಿದ್ದನು. ಇದರಿಂದ ನಾನು ಮುಜುಗುರಗೊಂಡು ನಾನು ಆ ರೀತಿ ಮಾಡಲು ನಿರಾಕರಿಸಿದೆ. ನಂತರ ಸಮಯಪ್ರಜ್ಞೆಯಿಂದ ಆ ವ್ಯಕ್ತಿಯಿಂದ ದೂರವಾಗಿ ಆತನ ಬಗ್ಗೆ ಎಲ್ಲ ಮಾಹಿತಿ ಪಡೆದುಕೊಂಡೆ ಎಂದು ನಮ್ಯ ಪೋಸ್ಟ್ ಮಾಡಿದ್ದಾರೆ.

     

  • ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡು ಬೇರೊಬ್ಬನ ಮದುವೆಯಾದ್ಳು!

    ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡು ಬೇರೊಬ್ಬನ ಮದುವೆಯಾದ್ಳು!

    ಹಾಸನ: ಎಂಜಿನಿಯರ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು ಮತ್ತೊಬ್ಬನ ಜೊತೆ ಮದುವೆಯಾಗಿರೋ ಘಟನೆ ಹಾಸನದಲ್ಲಿ ನಡೆದಿದೆ.

    ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯಲ್ಲಿ ಈ ಘಟನೆ ನಡೆದಿದ್ದು, ಯುವತಿ ಮದರಂಗಿ ಶಾಸ್ತ್ರ ಮುಗಿಸಿಕೊಂಡು ಬಳಿಕ ಶನಿವಾರ ಮುಂಜಾನೆ ಸಿನಿಮೀಯ ಶೈಲಿಯಲ್ಲಿ ಎಸ್ಕೇಪ್ ಆಗಿದ್ದಳು.

    ಯುವತಿಗೆ ಬೆಂಗಳೂರು ಮೂಲದ ಎಂಜಿನಿಯರ್ ಜತೆ ಎರಡು ತಿಂಗಳ ಹಿಂದೆ ಆಕೆಗೆ ನಿಶ್ಚಿತಾರ್ಥವಾಗಿತ್ತು. ಆದ್ರೆ ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ವರಿಸುವ ಮುನ್ನವೇ ಯುವತಿ ಮಧ್ಯಪ್ರದೇಶದ ಇಂದೋರ್ ಯುವಕನ ಜೊತೆ ನವೆಂಬರ್ 11 ಮದುವೆಯಾಗಿದ್ದಾಳೆ. ಆದರೆ ಈ ವಿಷಯವನ್ನು ಯುವತಿ ಬೇರೆ ಯಾರಿಗೂ ತಿಳಿಸಿರಲಿಲ್ಲ ಎಂದು ತಿಳಿದುಬಂದಿದೆ.

    ಘಟನೆಯ ಹಿನ್ನೆಲೆಯಲ್ಲಿ ಇಂದು ಶನಿವಾರ ಸಂತೆಯಲ್ಲಿ ನಡೆಯಬೇಕಿದ್ದ ಮದುವೆ ರದ್ದಾಗಿದೆ. ವರನಿಗೆ ವಾಟ್ಸಪ್ ನಲ್ಲಿ ಮದುವೆ ಫೋಟೋ ಹಾಗೂ ಮದುವೆ ಪ್ರಮಾಣ ಪತ್ರವನ್ನು ಯುವತಿ ಕಳುಹಿಸಿದ್ದಾಳೆ ಎನ್ನಲಾಗಿದೆ.