Tag: whatsapp group

  • ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಬೆಂಗಳೂರು: ನಗರದ ಸಂಚಾರಿ ಪೊಲೀಸರ (Traffic Police) ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಸಂಚಾರಿ ಪೊಲೀಸರ ಗ್ರೂಪ್‍ನಲ್ಲಿ ಚರ್ಚೆ ಆಗಿರುವ ಮೇಸೆಜ್‍ಗಳಿಂದ ರಿವೀಲ್ ಆಗಿದೆ. ಹಿರಿಯ ಅಧಿಕಾರಿಗಳ ದಬ್ಬಾಳಿಕೆ ಬಗ್ಗೆ ಕಿರಿಯ ಅಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.

    ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ (Cubban Park Police Station) ಸಂಚಾರಿ ಪೊಲೀಸರ ವಾಟ್ಸಾಪ್ ಗ್ರೂಪ್‍ನಲ್ಲಿ (Whatsapp Group) ಎಎಸ್‍ಐಗಳ ದಬ್ಬಾಳಿಕೆ ಬಗ್ಗೆ ಕಿರಿಯ ಸಹೋದ್ಯೋಗಿಗಳು ಅಸಮಾಧಾನ ಹೊರಹಾಕಿದ್ದಾರೆ. ಎಷ್ಟರ ಮಟ್ಟಿಗೆ ಅಂದರೆ ಎಎಸ್‍ಐಗಳಿಗೆ ಲಂಗು ಲಗಾಮು ಇಲ್ಲ. ಎಸ್‍ಐಗಳು ಠಾಣೆಗಳನ್ನು ತಾವೇ ಬರೆಸಿಕೊಂಡವಂತೆ ನಡೆದುಕೊಳುತ್ತಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ: ಬೊಮ್ಮಾಯಿ

    ನಾವುಗಳು ಸ್ವಲ್ಪ ತಡವಾಗಿ ಠಾಣೆಗೆ ಬಂದರೆ ಡೈರಿ ಬರೆಸಿಕೊಳ್ಳುತ್ತಾರೆ. ಅವರು ಮಾತ್ರ ಬೇಕಾಬಿಟ್ಟಿಯಾಗಿ ಬರುತ್ತಾರೆ. ಕೆಲಸದ ಸಮಯದಲ್ಲಿ ನಾವು ಒಂದು ಕೇಸ್ ಹಾಕುವುದಕ್ಕೆ ಹೋದರೆ ಸೈಡಿಗೆ ಕಳಿಸಿಕೊಡುತ್ತಾರೆ. ಎಎಸ್‍ಐಗಳು ಸತ್ಯ ಹರಿಶ್ಚಂದ್ರರ ತುಂಡುಗಳ ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಇದು ಇಲ್ಲಿಗೆ ನಿಲ್ಲಬೇಕೆಂದು ಕಿರಿಯ ಸಹೋದ್ಯೋಗಿಗಳು ವಾಟ್ಸಾಪ್ ಗ್ರೂಪ್‍ನಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: 8 ವರ್ಷದ ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

    Live Tv
    [brid partner=56869869 player=32851 video=960834 autoplay=true]

  • ವಾಟ್ಸಪ್‌ನಲ್ಲಿ ಇನ್ಮುಂದೆ ಸ್ಕ್ರೀನ್‌ಶಾಟ್ ತೆಗೆಯೋಕ್ಕಾಗಲ್ಲ – ಹೊಸ ಫೀಚರ್ ಬಗ್ಗೆ ಇಲ್ಲಿದೆ ಮಾಹಿತಿ

    ವಾಟ್ಸಪ್‌ನಲ್ಲಿ ಇನ್ಮುಂದೆ ಸ್ಕ್ರೀನ್‌ಶಾಟ್ ತೆಗೆಯೋಕ್ಕಾಗಲ್ಲ – ಹೊಸ ಫೀಚರ್ ಬಗ್ಗೆ ಇಲ್ಲಿದೆ ಮಾಹಿತಿ

    ವಾಷಿಂಗ್ಟನ್: ವಾಟ್ಸಪ್ ತನ್ನ ಬಳಕೆದಾರರಿಗೆ ಹೆಚ್ಚು ಹೆಚ್ಚು ಗೌಪ್ಯತೆಯನ್ನು ಕಾಪಾಡಲು ಹೊಸ ಹೊಸ ಫೀಚರ್‌ಗಳನ್ನು ತರುತ್ತಲೇ ಇದೆ. ಇದೀಗ ವಾಟ್ಸಪ್ ಬಳಕೆದಾರರ ಗೌಪ್ಯತೆಯನ್ನು ಕಾಪಾಡುವಂತಹ ಅತಿ ಉಪಯುಕ್ತ 3 ಫೀಚರ್‌ಗಳನ್ನು ತರಲು ಸಿದ್ಧವಾಗಿದೆ. ಅವುಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

    ಗೌಪ್ಯವಾಗಿಯೇ ಗ್ರೂಪ್‌ನಿಂದ ನಿರ್ಗಮಿಸಿ:
    ಮೆಸೆಜಿಂಗ್ ದೈತ್ಯ ಇದೀಗ ಬಳಕೆದಾರರಿಗೆ ವಾಟ್ಸಪ್ ಗ್ರೂಪ್‌ಗಳಿಂದ ಮೌನವಾಗಿ ತೊರೆಯಲು ಸಹಾಯ ಮಾಡುತ್ತಿದೆ. ಯಾವುದಾದರೂ ಗ್ರೂಪ್ ನಿಮಗೆ ಬಹಳಷ್ಟು ಕಿರಿಕಿರಿ ಉಂಟುಮಾಡುತ್ತಿದ್ದರೆ, ಆ ಗ್ರೂಪ್‌ನ ಸದಸ್ಯರಾರಿಗೂ ತಿಳಿಯದಂತೆ ನಿರ್ಗಮಿಸಲು ಸಾಧ್ಯವಿದೆ. ನೀವು ಗ್ರೂಪ್ ತೊರೆಯುವ ಬಗ್ಗೆ ಆ ಗ್ರೂಪ್‌ನ ಅಡ್ಮಿನ್‌ಗೆ ಮಾತ್ರ ತಿಳಿಯುವಂತಹ ಹೊಸ ಫೀಚರ್ ಅನ್ನು ವಾಟ್ಸಪ್ ತರುತ್ತಿದೆ.

    ಆನ್‌ಲೈನ್ ಸ್ಥಿತಿ ಮರೆಮಾಡಿ:
    ವಾಟ್ಸಪ್ ಬಳಕೆದಾರರಿಗೆ ತಮ್ಮ ಪ್ರೊಫೈಲ್ ಚಿತ್ರ ಹಾಗೂ ಕೊನೆಯದಾಗಿ ಆನ್‌ಲೈನ್ ಇದ್ದ ಸಮಯವನ್ನು ಮರೆ ಮಾಡುವಂತಹ ಅವಕಾಶ ಈ ಮೊದಲೇ ನೀಡಿತ್ತು. ಆದರೆ ನೀವು ಆನ್‌ಲೈನ್ ಇರುವುದನ್ನು ಮರೆ ಮಾಡಲು ಅವಕಾಶ ನೀಡಿರಲಿಲ್ಲ. ಇದೀಗ ವಾಟ್ಸಪ್ ಪ್ರತಿ ಚ್ಯಾಟ್‌ನ ಮೇಲ್ಗಡೆ ತೋರಿಸುವ ಆನ್‌ಲೈನ್ ಅಥವಾ ಆಫ್‌ಲೈನ್ ಸ್ಥಿತಿಯನ್ನು ಮರೆ ಮಾಡಲು ಅವಕಾಶ ನೀಡಲಿದೆ. ನೀವು ಆನ್‌ಲೈನ್ ಇರುವುದರಿಂದ ನಿಮ್ಮ ಸ್ನೇಹಿತರು ಕಿರಿಕಿರಿ ಮಾಡುತ್ತಿದ್ದರೆ, ಅವರಿಗೆ ತಿಳಿಯದಂತೆ ಈ ಫೀಚರ್ ಅನ್ನು ಬಳಸಿ ಕಿರಿಕಿರಿ ತಪ್ಪಿಸಬಹುದಾಗಿದೆ. ಇದನ್ನೂ ಓದಿ: 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್‌ ಬ್ಯಾನ್‌? – ಭಾರತದಲ್ಲಿ ಯಾವ ಕಂಪನಿಯ ಪಾಲು ಎಷ್ಟಿದೆ?

    ಸ್ಕ್ರೀನ್‌ಶಾಟ್‌ಗೆ ನಿರ್ಬಂಧ:
    ಗೌಪ್ಯತೆಗೆ ಬಹಳ ಮುಖ್ಯವಾದ ಫೀಚರ್ ಅನ್ನು ವಾಟ್ಸಪ್ ಕೊನೆಗೂ ತರಲಿದೆ. ವಾಟ್ಸಪ್ ವೀವ್ ವನ್ಸ್(ಒಂದು ಬಾರಿ ಮಾತ್ರ ತೋರಿಸು) ಫೀಚರ್ ಅನ್ನು ಬಳಸುವ ಸಮಯ ಸ್ಕ್ರೀನ್‌ಶಾಟ್ ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಿದೆ. ವಾಟ್ಸಪ್ ಮೊದಲ ಬಾರಿ ವಿವ್ ವನ್ಸ್ ಫೀಚರ್ ಬಗ್ಗೆ ತಿಳಿಸಿದಾಗ ಬಹಳಷ್ಟು ಜನ ಸ್ಕ್ರೀನ್‌ಶಾಟ್ ತೆಗೆದುಕೊಳ್ಳುವ ಮೂಲಕ ಫೀಚರ್‌ನ ಫೈಲ್ಯೂರ್ ಬಗ್ಗೆ ಟೀಕಿಸಿದ್ದರು. ಇದೀಗ ವೀವ್ ವನ್ಸ್ ಫೀಚರ್‌ನಲ್ಲಿ ಸ್ಕ್ರೀನ್‌ಶಾಟ್ ತೆಗೆದುಕೊಳ್ಳುವುದನ್ನು ವಾಟ್ಸಪ್ ನಿರ್ಬಂಧಿಸುತ್ತಿದ್ದು, ಈ ಮೂಲಕ ಬಳಕೆದಾರರ ಗೌಪ್ಯತೆಗೆ ಮತ್ತಷ್ಟು ಒತ್ತು ನೀಡುತ್ತಿದೆ. ಇದನ್ನೂ ಓದಿ: ಆರೋಗ್ಯ ಸೇತು ಕಾರ್ಯ ನಿರ್ವಹಿಸುತ್ತಿಲ್ಲ – ವೈಯಕ್ತಿಕ ಮಾಹಿತಿಗಳ ಕತೆಯೇನು?

    Live Tv
    [brid partner=56869869 player=32851 video=960834 autoplay=true]

  • ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಕಳಿಸಿ ತಗಲಾಕ್ಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ

    ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಕಳಿಸಿ ತಗಲಾಕ್ಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ

    ನವದೆಹಲಿ: ಆನ್‌ಲೈನ್ ತರಗತಿ ವೇಳೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಹೋಂ ವರ್ಕ್‌ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ದೆಹಲಿ ಸರ್ಕಾರಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕರು ಹೋಂ ವರ್ಕ್‌ಗಳನ್ನು ಹಂಚಿಕೊಳ್ಳಲು ವಿದ್ಯಾರ್ಥಿಗಳಿಗಾಗಿ ಮಾಡಿದ್ದ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಹೋಂ ವರ್ಕ್‌ ಬದಲಾಗಿ ಅಶ್ಲೀಲ ವೀಡಿಯೋ ಹಂಚಿಕೊಂಡಿದ್ದಾನೆ. ಇದನ್ನೂ ಓದಿ: 1.30 ಲಕ್ಷಕ್ಕೆ ಮಾರಾಟವಾಗಿದ್ದ ಬಾಲಕ – ಚಿಕ್ಕಮ್ಮ ಅರೆಸ್ಟ್

    ಈ ಕುರಿತು ಶಾಲೆ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಬಾಲಾಪರಾಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿಯನ್ನು ಬಾಲಮಂದಿರದಲ್ಲಿರಿಸಿ ಕೌನ್ಸೆಲಿಂಗ್ ನೀಡಲಾಗಿದೆ ಎಂದು ಡಿಸಿಪಿ (ಈಶಾನ್ಯ ಜಿಲ್ಲೆ) ಸಂಜಯ್‌ಕುಮಾರ್ ಸೇನ್ ಒಪ್ಪಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇನ್ಸ್‌ಪೆಕ್ಟರ್

    ಕೆಲ ದಿನಗಳ ಹಿಂದೆ ವಿದ್ಯಾರ್ಥಿಯೊಬ್ಬ ಆಕ್ಷೇಪಾರ್ಹ ವೀಡಿಯೋ ಕ್ಲಿಪ್ಪಿಂಗ್ ಹಾಕಿದಾಗ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರು ಒತ್ತಾಯಿಸಿದ್ದರು. ಅಂತಹ ಚಿತ್ರಗಳು ಅಥವಾ ವೀಡಿಯೋಗಳನ್ನು ವಾಟ್ಸಾಪ್ ಗ್ರೂಪ್‌ಗಳಿಗೆ ಹಾಕದಂತೆ ವಿದ್ಯಾರ್ಥಿಗಳಿಗೆ ಮನವಿಯನ್ನೂ ಮಾಡಲಾಗಿತ್ತೆಂದು ಪ್ರಾಂಶುಪಾಲರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    Live Tv

  • ‘ಕಟ್ಟೋಣ ಬಾಳಿಗೊಂದು ಸೂರು’- ವಾಟ್ಸಪ್ ಗ್ರೂಪ್‍ನಿಂದ ಮನೆ ನಿರ್ಮಾಣ

    ‘ಕಟ್ಟೋಣ ಬಾಳಿಗೊಂದು ಸೂರು’- ವಾಟ್ಸಪ್ ಗ್ರೂಪ್‍ನಿಂದ ಮನೆ ನಿರ್ಮಾಣ

    – ಲಾಕ್‍ಡೌನ್‍ನಲ್ಲೇ ಬಡ ಕುಟುಂಬದ ಹೊಸ ಮನೆಯ ಲಾಕ್ ಓಪನ್

    ಮಂಗಳೂರು: ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಎಲ್ಲರೂ ಮನೆಯೊಳಗಿದ್ದು ಆರೋಗ್ಯ ಮತ್ತು ಭವಿಷ್ಯದ ಚಿಂತೆಯಲ್ಲಿದ್ದರೆ ಜಿಲ್ಲೆಯ ಯುವಕರ ಗುಂಪೊಂದು ಮತ್ತೊಬ್ಬರ ಬದುಕು ಕಟ್ಟುವ ಕೆಲಸ ಮಾಡಿದೆ.

    ಹೌದು.. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ವಾಟ್ಸಪ್ ಗ್ರೂಪ್ ರಚಿಸಿದ್ದಾರೆ. ಅವರು ದಾನಿಗಳ ನೆರವಿನ ಜೊತೆಗೆ ಶ್ರಮದಾನದ ಮೂಲಕ ಬಡ ಕುಟುಂಬವೊಂದಕ್ಕೆ ಮನೆ ಕಟ್ಟಿ ಮಾದರಿಯಾಗಿದ್ದಾರೆ.

    ಈ ಎರಡು ಯುವಕ ಮಂಡಲದ ಸದಸ್ಯರು ಶ್ರಮದಾನ ನಡೆಸುವ ಮೂಲಕ ಅಸಹಾಯಕ ಕುಟುಂಬವೊಂದಕ್ಕೆ ಆಸರೆಯಾಗಿದ್ದಾರೆ. ಸುಮಾರು 2.5 ಲಕ್ಷ ರೂ.ವೆಚ್ಚದಲ್ಲಿ ಮನೆಯೊಂದನ್ನು ನಿರ್ಮಿಸಿ ಹಸ್ತಾಂತರಿಸಲು ಸಿದ್ಧತೆ ನಡೆಸಿದ್ದಾರೆ. ಸವಣೂರು ಗ್ರಾಮ ಪಂಚಾಯತ್‍ನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ಮಾಣಿ ಎಂಬವರ ಮಗಳು ಸುಂದರಿ ಅವರು ತನ್ನ ಮಕ್ಕಳಾದ ಆಶಾ, ಧನ್ವಿ, ಸನತ್ ಜತೆ ಸಣ್ಣ ಟರ್ಪಾಲ್ ಕಟ್ಟಿದ ಜೋಪಡಿಯಲ್ಲಿ ವಾಸವಾಗಿದ್ದಾರೆ. ಕಟ್ಟಿಗೆ ದಾಸ್ತಾನಿನಂತಿರುವ ಸಣ್ಣ ಮನೆ, ಅಡುಗೆ ಕೋಣೆಯಿಂದ ಹಿಡಿದು ಎಲ್ಲವೂ ಅದರಲ್ಲಿಯೇ ನಡೆಯಬೇಕು.

    ಮಳೆ ಬಂದರೆ ಸೋರುವ ಮೇಲ್ಛಾವಣಿ, ಭದ್ರತೆ ಇಲ್ಲವೇ ಇಲ್ಲ ಇಂತಹ ಅಸಹಾಯಕ ಸ್ಥಿತಿಯಲ್ಲಿಯೇ ಸುಂದರಿ ಅವರ ಜೀವನ ಕಳೆಯುತ್ತಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ ಇಲ್ಲಿನ ಯುವಕ ಮಂಡಲ ಹಾಗೂ ಸೇವಾ ಭಾರತಿ ವತಿಯಿಂದ ಆಹಾರದ ಕಿಟ್ ಕೊಡುವ ಸಂದರ್ಭದಲ್ಲಿ ಅವರ ದಯನೀಯ ಸ್ಥಿತಿ ಕಂಡಿದ್ದರು. ಮಳೆಗಾಲದಲ್ಲಿ ಇಂತಹ ಮನೆಯಲ್ಲಿರುವುದು ಕಷ್ಟಕರ ಎಂಬುದನ್ನು ಅರಿತು ಯುವಕರು ಮನೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು.

    ಸುಂದರಿ ಅವರ ಮನೆಯ ದಾಖಲೆ ಪತ್ರಗಳು ಸರಿಯಿಲ್ಲದ ಕಾರಣ ಸರ್ಕಾರದ ನಿವೇಶನವೂ ದೊರಕಿರಲಿಲ್ಲ. ಇದಕ್ಕಾಗಿ ವಾಟ್ಸಪ್‍ನಲ್ಲಿ “ಕಟ್ಟೋಣ ಬಾಳಿಗೊಂದು ಸೂರು” ಎಂಬ ಗುಂಪು ರಚಿಸಲಾಗಿತ್ತು. ಅದರಲ್ಲಿ ದಾನಿಗಳನ್ನು ಸೇರಿಸಿ, ಯುವಕ ಮಂಡಳಿಗಳ ಸದಸ್ಯರನ್ನು ಸೇರಿಸಿ ಕಾರ್ಯೋನ್ಮುಖರಾದರು. ಇದೀಗ ಮನೆ ನಿರ್ಮಾಣದ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದೆ.

    ಗ್ರಾಮ ಪಂಚಾಯತಿಯ ಕುಡಿಯುವ ನೀರಿನ ಸಂಪರ್ಕ ಬಿಟ್ಟರೆ ಬೇರೆ ಯಾವುದೇ ನೀರಿನ ಆಶ್ರಯ ಇಲ್ಲದಿರುವುದರಿಂದ ಪುತ್ತೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಅವರು ಉದ್ಯೋಗ ಖಾತರಿ ಯೋಜನೆಯ ಮೂಲಕ ಬಾವಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರು. ಜೂನ್ 5ರೊಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ ಕುಟುಂಬಕ್ಕೆ ಹಸ್ತಾಂತರ ಮಾಡುವ ಇರಾದೆ ಈ ತಂಡಕ್ಕೆ ಇದೆ.

    ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸಮೀಪದಲ್ಲಿ ನಿರ್ಗತಿಕ ಕುಟುಂಬವೊಂದಕ್ಕೆ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯ ಸತೀಶ್ ಅಂಗಡಿಮೂಲೆ, ಸಾಮಾಜಿಕ ಕಾರ್ಯಕರ್ತ,ವಿದ್ಯುತ್ ಗುತ್ತಿಗೆದಾರ ಸುಬ್ರಾಯ ಗೌಡ ಅವರ ನೇತೃತ್ವದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ಸಹಭಾಗಿತ್ವದಲ್ಲಿ ಮನೆ ನಿರ್ಮಾಣ ಮಾಡುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.

  • ಸೆಲ್ಫಿ ವಿಡಿಯೋ ಮೂಲಕ ಬಾಲ್ಯದ ನೆನಪು ಹಂಚಿಕೊಂಡ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ

    ಸೆಲ್ಫಿ ವಿಡಿಯೋ ಮೂಲಕ ಬಾಲ್ಯದ ನೆನಪು ಹಂಚಿಕೊಂಡ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ

    ಗದಗ: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ನೇಮಕಗೊಂಡ ಟೀಂ ಇಂಡಿಯಾದ ಮಾಜಿ ಆಟಗಾರ ಗದಗದ ಸುನಿಲ್ ಜೋಶಿ ತಮ್ಮ ಬಾಲ್ಯದ ನೆನಪುಗಳನ್ನ ಸೆಲ್ಫಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

    ಬಾಲ್ಯದ ತುಂಟಾಟ, ಶಾಲಾ-ಕಾಲೇಜ್, ಆಟ-ಹುಡುಗಾಟದ ದಿನಗಳನ್ನು ನೆನಪಿಸಿಕೊಂಡು ವಿಡಿಯೋ ಒಂದನ್ನು ಮಾಡಿ ಗದಗದ ವಕೀಲಚಾಳ್ ವಾರಿಯರ್ಸ ವಾಟ್ಸಪ್ ಗ್ರೂಪ್‍ಗೆ ಕಳುಹಿಸಿದ್ದಾರೆ. ಈ ಒಂದು ವಿಡಿಯೋ ಗದಗ ಫ್ರೆಂಡ್ಸ್ ಗ್ರೂಪ್ ಮತ್ತು ಆ ಬಡಾವಣಿಯ ಜನರ ಸಂತಸ ಹೆಚ್ಚಿಸಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲಿ ಜೋಶಿ ಅವರು ಮಾತನಾಡಿದ್ದು ವಕೀಲಚಾಳ್ ಮಂದಿಯ ಸಂತಸವನ್ನು ಇನ್ನಷ್ಟು ಇಮ್ಮುಡಿಗೊಳಿಸಿದೆ.

    ಸುನಿಲ್ ಜೋಷಿ ವಿಡಿಯೋದ ಸಂಭಾಷಣೆ:
    ನಮಸ್ಕಾರ ಎಲ್ಲಾ ಗದಗನ ವಕೀಲಚಾಳ್ ವಾರಿಯರ್ಸ್‍ಗೆ. ಏನು ಹೇಳಬೇಕು ಸಿಕ್ಕಾಪಟ್ಟೆ ಖುಷಿ ಆಗ್ತಿದೆ. ಏನಂತಂದ್ರ ವಕೀಲಚಾಳ್‍ದಲ್ಲಿ ಹುಟ್ಟಿ, ವಕೀಲಚಾಳ್‍ನಲ್ಲಿ ನೀರು ಕುಡಿದು, ವಕೀಲಚಾಳ್‍ದಲ್ಲಿ ಬೆಳದು ಇವತ್ತು ನಿಮ್ಮೆಲರ ಪ್ರೋತ್ಸಾಹದಿಂದ ಇಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದೇನೆ. ನಮ್ಮೆಲ್ಲಾ ಸೀನಿಯರ್ಸ್, ನನ್ನ ಸ್ನೇಹಿತರು ಪ್ರೋತ್ಸಾಹಿಸಿದ್ದಾರೆ. ಸ್ನೇಹಿತರ ಜೊತೆ ಗುಂಡಾ ಆಡಿರಬಹುದು, ಚಿಣಿಪಣಿ, ಸರಿಬಡಗಿ, ಛಾಪಾ ಆಡಿರಬಹುದು ಎಲ್ಲಾ ನೆನೆಸಿಕೊಂಡರೆ ಖುಷಿ ಆಗ್ತದ. ಎಲ್ಲಾ ನಿಮ್ಮ ಆಶೀರ್ವಾದ. ಬೆಸ್ಟ್ ವಿಷಸ್ ಅಂದ್ರೆ ನಮ್ಮ ಓಣಿ ಒಳಗ್ ಏನ್ ಒಗ್ಗಟ್ಟು ಇತ್ತು. ಯಾವುದೇ ಹಬ್ಬ ಬರಲಿ, ಕಾರ ಹುಣ್ಣಿಮೆ ಬರಲಿ, ಪಟಾ ಹಾರಸೋದ ಇರಲಿ, ಹೋಳಿ ಹುಣ್ಣಿಮೆ ಬಂದ್ರ ಕಟ್ಟಿಗಿ ಕಳವು ಮಾಡುವುದು ಇರ್ಲಿ, ಎಷ್ಟು ಖುಷಿ ಕೊಡ್ತಿತ್ತು ಅಂದ್ರ ಇವತ್ತಿನ ದಿನ ಈ ಸ್ಟೇಜಿಗೆ ಬಂದಿನಿ ಅಂದ್ರೆ ನಿಮ್ಮೆದೆಲ್ಲಾ ಸಪೋರ್ಟ್ ಕಾರಣ. ನನ್ನ ಜೊತೆ ನಿಮ್ಮ ಆಶಿರ್ವಾದ ಇರಲಿ. ನಾನು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥನಾಗಿ ನೇಮಕಗೊಂಡ ಬಳಿಕ ನನಗೆ ಶುಭಕೋರಿದ ಎಲ್ಲರಿಗೂ ಧನ್ಯವಾದ. ನಿಮ್ಮ ಪ್ರೀತಿ, ಪ್ರೋತ್ಸಾಹ ನೋಡಿ ಖುಷಿ ಆಗುತ್ತಿದೆ ಎಂದು ತಾವೇ ಒಂದು ಸೆಲ್ಫಿ ವಿಡಿಯೋ ಮಾಡಿ ವಕೀಲಚಾಳ್ ವಾರಿಯರ್ಸ್ ಗ್ರೂಪ್‍ನಲ್ಲಿ ಹಾಕಿದ್ದಾರೆ.

    ದೊಡ್ಡ ಸ್ಥಾನದಲ್ಲಿ ಇದ್ದರೂ ಸಹ ಬಾಲ್ಯದ ದಿನಗಳನ್ನು ಮರೆಯದೆ, ನೆನಪಿನಲ್ಲಿ ಇಟ್ಟುಕೊಂಡಿರುವ ಸುನಿಲ್ ಜೋಶಿ ಅವರ ಬಗ್ಗೆ ಹೆಮ್ಮೆ ಅನಿಸುತ್ತದೆ ಅಂತ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.

  • ಅಮೂಲ್ಯ, ಆರ್ದ್ರಾ ವಾಟ್ಸಪ್ ಗ್ರೂಪ್‍ನಲ್ಲಿ ಗೌಪ್ಯ ಚರ್ಚೆ – ಎಸ್‍ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

    ಅಮೂಲ್ಯ, ಆರ್ದ್ರಾ ವಾಟ್ಸಪ್ ಗ್ರೂಪ್‍ನಲ್ಲಿ ಗೌಪ್ಯ ಚರ್ಚೆ – ಎಸ್‍ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

    ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‍ಐಟಿ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

    ಪಾಕ್ ಪ್ರೇಮಿ ಅಮೂಲ್ಯ ಸೇರಿದಂತೆ ಕೆಲ ವಿದ್ಯಾರ್ಥಿಗಳು ಬೆಂಗಳೂರು ಸ್ಟೂಡೆಂಟ್ ಫೆಡರೇಶನ್(ಬಿಎಸ್‍ಎಫ್) ಹೆಸರಿನಲ್ಲಿ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದರು. ಸಿಎಎ, ಎನ್‌ಆರ್‌ಸಿ ಸೇರಿದಂತೆ ಕೆಲ ಹಿಂದೂ ವಿರೋಧಿ ವಿಚಾರಗಳಿಗೆ ಹೇಗೆ ಪ್ರತಿಭಟನೆಯ ರೂಪುರೇಷಗಳು ಇರಬೇಕು ಅನ್ನೋದನ್ನ ಈ ಗ್ರೂಪ್‍ನಲ್ಲಿ ಚರ್ಚೆ ಮಾಡುತ್ತಿದ್ದರು. ನೂರಾರು ಎಡಪಂಥೀಯ ವ್ಯಕ್ತಿಗಳು, ವಿದ್ಯಾರ್ಥಿಗಳು ಈ ಗ್ರೂಪ್‍ನಲ್ಲಿದ್ದರು.

    ಈ ಗ್ರೂಪ್ ಹೊರತುಪಡಿಸಿ ಅಮೂಲ್ಯ, ಆರ್ದ್ರಾ ಸೇರಿದಂತೆ ಕೆಲವೇ ಸಮಾನ ಮನಸ್ಕರು ಸೇರಿಕೊಂಡು ಯಂಗ್ ಇಂಡಿಯಾ ಅನ್ನೋ ಮತ್ತೊಂದು ವಾಟ್ಸಪ್ ಗ್ರೂಪ್ ಮಾಡ್ಕೊಂಡಿದ್ದರು. ಯಂಗ್ ಇಂಡಿಯಾ ಗ್ರೂಪ್‍ನಲ್ಲಿ ಆಯ್ದ ಕೆಲವರಿಗಷ್ಟೇ ಅವಕಾಶವಿದ್ದು, ಪ್ರತಿಭಟನೆಗಳು, ಸಭೆ ಸಮಾರಂಭಗಳ ಬಗ್ಗೆ ಗೌಪ್ಯ ಮಾಹಿತಿಗಳನ್ನು ಇದರಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

    ಸದ್ಯ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ತಂಡ ಆರೋಪಿಗಳ ಬಳಿ ಸೋಷಿಯಲ್ ಮೀಡಿಯಾದ ಪೋಸ್ಟ್ ಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಯಂಗ್ ಇಂಡಿಯಾ ವಾಟ್ಸಪ್ ಗ್ರೂಪ್‍ನಲ್ಲಿ ಯಾರೆಲ್ಲಾ ಸದಸ್ಯರು ಇದ್ದಾರೋ, ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ತಿರ್ಮಾನ ಮಾಡಿದ್ದಾರೆ.

    ಅಷ್ಟೇ ಅಲ್ಲದೇ ವಿಚಾರಣೆ ವೇಳೆ ಕಾರ್ಪೋರೇಟರ್ ಇಮ್ರಾನ್ ಪಾಷ ಆಯೋಜನೆ ಮಾಡಿದ್ದ ಎರಡು ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗವಹಿಸರೋದಾಗಿ ಅಮೂಲ್ಯ ಹೇಳಿಕೊಂಡಿದ್ದಾಳೆ. ಸದ್ಯ ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದ್ದು, ಹಂತ ಹಂತವಾಗಿ ವಿವಿಧ ಪೊಲೀಸರ ತಂಡಗಳು ಅಮೂಲ್ಯ, ಆರ್ದ್ರಾಳನ್ನು ವಿಚಾರಣೆ ನಡೆಸಲಿದ್ದಾರೆ.

  • ವಾಟ್ಸಪ್ ಗ್ರೂಪಿನಿಂದ ಬಡವರಿಗೆ ಮನೆ ನಿರ್ಮಾಣ

    ವಾಟ್ಸಪ್ ಗ್ರೂಪಿನಿಂದ ಬಡವರಿಗೆ ಮನೆ ನಿರ್ಮಾಣ

    ಮಂಗಳೂರು: ಸಾಮಾಜಿಕ ಜಾಲತಾಣವನ್ನು ಬಳಸಿ ಕ್ರೈಂ ಮಾಡುವ ಜನರ ಮಧ್ಯೆ ಬೆಳ್ತಂಗಡಿಯ ಒಂದು ವಾಟ್ಸಪ್ ಗ್ರೂಪ್ ಸಂಘಟನೆ ಸದ್ದಿಲ್ಲದೆ ಸಮಾಜ ಸೇವೆ ಕಾರ್ಯ ಮಾಡುತ್ತಿದೆ.

    ವೀರ ಕೇಸರಿ ಎಂಬ ವಾಟ್ಸಪ್ ಗ್ರೂಪಿನ ಸದಸ್ಯರು ಕಳೆದ ಮೂರೂವರೆ ವರ್ಷದಲ್ಲಿ 42 ಲಕ್ಷ ರೂ. ಹಣವನ್ನು ಸಂಗ್ರಹಿಸಿ ಬಡವರಿಗೆ ನೀಡಿದೆ. 40ನೇ ತಿಂಗಳ 100ನೇ ಯೋಜನೆಯನ್ನು ಈ ವಾಟ್ಸಪ್ ಗುಂಪಿನ ಸದಸ್ಯರು ಸೇರಿ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಅರ್ಥಪೂರ್ಣಗೊಳಿಸಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸೂರು ಇಲ್ಲದ ಕುಟುಂಬಕ್ಕೆ ಮನೆ ಕಟ್ಟಿ ನೀಡಿದ್ದಾರೆ. ಈ 100ನೇ ಯೋಜನೆಯನ್ನು ಅದ್ಧೂರಿಯಿಂದ ಮಾಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಯುವ ಉದ್ಯಮಿ ಅಶ್ವಥ್ ಬಳಂಜ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಮನೆ ಹಸ್ತಾಂತರಿಸಿದ್ದಾರೆ.

    ಮಧ್ಯಮ ಕುಟುಂಬದ ಜನರೇ ಈ ವಾಟ್ಸಪ್ ಗುಂಪಿನ ಸದಸ್ಯರಾಗಿದ್ದು, ತಾವು ದುಡಿದ ಹಣದಲ್ಲಿ ಒಂದು ಭಾಗವನ್ನು ಸಮಾಜದ ಬಡಬಗ್ಗರಿಗೆ ನೆರವಾಗಿ ಮಾದರಿಯಾಗಿದ್ದಾರೆ.

  • ತುಂಗಭದ್ರ ನದಿ ಪಾತ್ರವನ್ನು ಸ್ವಚ್ಛಗೊಳಿಸಲು ಪಣ ತೊಟ್ಟ ಹರಿಹರ ಯುವಜನತೆ

    ತುಂಗಭದ್ರ ನದಿ ಪಾತ್ರವನ್ನು ಸ್ವಚ್ಛಗೊಳಿಸಲು ಪಣ ತೊಟ್ಟ ಹರಿಹರ ಯುವಜನತೆ

    ದಾವಣಗೆರೆ: ವಾಟ್ಸಪ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ ಅನಾವಶ್ಯಕ ಚರ್ಚೆಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಾರೆ. ಆದರೆ ದಾವಣಗೆರೆಯ ಹರಿಹರ ತಾಲೂಕಿನ ಯುವ ಸಮೂಹ ಈ ವಾಟ್ಸಪ್ ಗ್ರೂಪ್ ನಿಂದ ತುಂಗಭದ್ರ ನದಿಯನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಪಣ ತೊಟ್ಟಿದ್ದಾರೆ.

    ತುಂಗಭದ್ರ ನದಿ ದಾವಣಗೆರೆಯ ಹಲವು ತಾಲೂಕುಗಳ ಜೀವನಾಡಿಯಾಗಿದ್ದು, ಹರಿಹರ ತಾಲೂಕಿನ ಪಕ್ಕದಲ್ಲೇ ತುಂಗಭದ್ರ ನದಿ ಹರಿಯುತ್ತಿದ್ದು, ನದಿಯ ಪಾತ್ರದಲ್ಲಿ ಸಾಕಷ್ಟು ಪ್ರವಾಸಿಗರು ಬಂದು ಎಂಜಾಯ್ ಮಾಡಿ ಹೋಗ್ತಾರೆ. ಆದರೆ ಅದರ ಸ್ವಚ್ಛತೆ ಬಗ್ಗೆ ಯಾರೂ ಕೂಡ ಕಾಳಜಿ ವಹಿಸುವುದಿಲ್ಲ.

    ಹರಿಹರದ ಪಟ್ಟಣದ ಯುವ ಸಮೂಹ ವಾಟ್ಸಪ್ ನಲ್ಲಿ ‘ನನ್ನ ಊರು ನನ್ನ ಹೊಣೆ’ ಎಂಬ ಗ್ರೂಪ್ ಕ್ರಿಯೇಟ್ ಮಾಡಿದ್ದಾರೆ. ಅದರ ಉದ್ದೇಶ ಕೇವಲ ಪರಿಸರ ಜಾಗೃತಿ ಹಾಗೂ ಪರಿಸರ ಸ್ವಚ್ಛತೆ ಎಂಬ ಧ್ಯೇಯ. ತಮ್ಮ ಸ್ನೇಹಿತರನ್ನು ಆ ಗ್ರೂಪ್‍ನಲ್ಲಿ ಸೇರ್ಪಡೆ ಮಾಡಿ ವಾರಕ್ಕೆ ಒಮ್ಮೆ ನದಿಯ ಪಾತ್ರದಲ್ಲಿ ಇರುವ ಕಸವನ್ನು ಸ್ವಚ್ಛ ಮಾಡುವುದಕ್ಕೆ ಪಣ ತೊಟ್ಟು ಕೆಲಸ ಮಾಡುತ್ತಿದ್ದಾರೆ.

    ಈಗ ಸಂಕ್ರಾಂತಿ ಹಬ್ಬ ಕೂಡ ಹತ್ತಿರ ಬಂದಿದೆ. ಹರಿಹರ ತುಂಗಭದ್ರಾ ನದಿ ಪಾತ್ರದಲ್ಲಿ ಪುಣ್ಯಸ್ನಾನ, ಪೂಜೆ ಮಾಡುವುದು ಇಲ್ಲಿನ ವಾಡಿಕೆ. ಪ್ರತಿ ವರ್ಷ ಮಕರ ಸಂಕ್ರಾಂತಿಗೆ ಪುಣ್ಯಸ್ನಾನ ಹಾಗೂ ಪೂಜೆಗೆಂದು ಸಾವಿರಾರು ಭಕ್ತರು ಹರಿಹರದ ತುಂಗಭದ್ರಾ ದಂಡೆಯಲ್ಲಿ ಸೇರುತ್ತಾರೆ. ಆ ಸಂದರ್ಭದಲ್ಲಿ ನದಿ ಪಾತ್ರ ಸ್ವಚ್ಛವಾಗಿರಬೇಕಂಬ ಸಂಕಲ್ಪದಿಂದ ನದಿ ಪಾತ್ರ ಸ್ವಚ್ಛತೆ ಆಂದೋಲನ ಆರಂಭಿಸಿದ್ದಾರೆ. ವಾರಕ್ಕೆ ಒಮ್ಮೆ ಬೆಳಗ್ಗೆ ನದಿಪಾತ್ರ ಸ್ವಚ್ಛತೆ ಗ್ರೂಪ್‍ನಲ್ಲಿಂದ ಸದಸ್ಯರು ಮಾತ್ರವಲ್ಲದೇ, ನಗರದ ಜನಪ್ರತಿನಿಧಿಗಳು, ನಾಗರಿಕರು, ಮಹಿಳೆಯರು, ಮಕ್ಕಳು ಕೈಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

  • ರಾಮನಗರದ ‘ನಮೋ’ ವಾಟ್ಸಪ್ ಗ್ರೂಪ್‍ನಲ್ಲಿ ಅಶ್ಲೀಲ ವಿಡಿಯೋ ಶೇರ್

    ರಾಮನಗರದ ‘ನಮೋ’ ವಾಟ್ಸಪ್ ಗ್ರೂಪ್‍ನಲ್ಲಿ ಅಶ್ಲೀಲ ವಿಡಿಯೋ ಶೇರ್

    ರಾಮನಗರ: ನರೇಂದ್ರ ಮೋದಿ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಲಾಗಿದೆ.

    ಇತ್ತೀಚೆಗೆ ರಾಜ್ಯದ 30 ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಹಾಗೂ ನರೇಂದ್ರ ಮೋದಿಯವರ ಕೆಲಸಗಳನ್ನು ಸಾರ್ವಜನಿಕರಿಗೆ ತಿಳಿಸುವ ಹಾಗೂ ಸಂಘಟನೆ ದೃಷ್ಟಿಯಿಂದ ವಾಟ್ಸಪ್ ಗ್ರೂಪ್‍ಗಳನ್ನು ಮಾಡಲಾಗಿದೆ. ಆದರೆ ಸೋಮವಾರ ನಮೋ ಸೇನೆ ರಾಮನಗರ ಗ್ರೂಪಿನಲ್ಲಿ ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿದೆ.

    ಅಶ್ಲೀಲ ವಿಡಿಯೋ ನೋಡಿದ ಗ್ರೂಪಿನ ಸದಸ್ಯರು ವಿಡಿಯೋ ಶೇರ್ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೂಡಲೇ ಆತನನ್ನು ಗ್ರೂಪಿನಿಂದ ಹೊರಹಾಕುವಂತೆ ತಿಳಿಸ್ತಿದ್ದಂತೆ ಗ್ರೂಪ್ ಅಡ್ಮಿನ್ ಆತನನ್ನು ಗ್ರೂಪಿನಿಂದ ತೆಗೆದಿದ್ದಾರೆ. ಈ ನಮೋ ಸೇನೆ ರಾಮನಗರ ವಾಟ್ಸಪ್ ಗ್ರೂಪಿನಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಸಹ ಇದ್ದು, ಅಶ್ಲೀಲ ವಿಡಿಯೋ ಶೇರ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರೂಪ್‍ನ ಅಡ್ಮಿನ್ ಬ್ಯಾಡರಹಳ್ಳಿ ಕುಮಾರ್ ಈ ಬಗ್ಗೆ ಮಾತನಾಡಿ ಆತ ಅನ್ಯ ಕೋಮಿನವನು ಸೋಮವಾರ ಗ್ರೂಪ್‍ಗೆ ಬಂದಿದ್ದು ರಾತ್ರಿ ಈ ರೀತಿಯ ವಿಡಿಯೋಗಳನ್ನು ಹಾಕಿದ್ದಾನೆ. ಈ ರೀತಿ ವಿಡಿಯೋ ಶೇರ್ ಮಾಡೋದಕ್ಕೆ ಬೇರೆ ಗ್ರೂಪ್‍ಗಳಿವೆ ಅದರಲ್ಲಿ ಶೇರ್ ಮಾಡ್ಕೊ ಎಂದೇಳಿ ಗ್ರೂಪ್‍ನಿಂದ ಹೊರ ಹಾಕಿರುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಾಟ್ಸಾಪ್ ಗ್ರೂಪಿನಲ್ಲಿ 100ಕ್ಕೂ ಹೆಚ್ಚು ಸೆಕ್ಸ್ ಫೋಟೋ ಕಳಿಸಿದ ಅಧಿಕಾರಿ..!

    ವಾಟ್ಸಾಪ್ ಗ್ರೂಪಿನಲ್ಲಿ 100ಕ್ಕೂ ಹೆಚ್ಚು ಸೆಕ್ಸ್ ಫೋಟೋ ಕಳಿಸಿದ ಅಧಿಕಾರಿ..!

    ಬೆಂಗಳೂರು: ಅಧಿಕಾರಿಯೊಬ್ಬ ಶಿಕ್ಷಕರ ಹಾಗೂ ಹೆಡ್ ಮಾಸ್ಟರ್ ವಿರುವ ವಾಟ್ಸಾಪ್ ಗ್ರೂಪಿನಲ್ಲಿ ನೂರಕ್ಕೂ ಹೆಚ್ಚು ಸೆಕ್ಸ್ ಹಾಗೂ ಬೆತ್ತಲೆ ಫೋಟೋಗಳನ್ನು ಕಳುಹಿಸಿದ್ದಾನೆ.

    ಬೆಂಗಳೂರು ದಕ್ಷಿಣ ವಿಭಾಗ 2ರ ವಲಯ ಸಂಪರ್ಕ ಅಧಿಕಾರಿ ಅಣ್ಣೇಗೌಡ, ತಮ್ಮ ವಯಲದ ಶಾಲೆಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ಶಿಕ್ಷಕರಿಗೆ ಹಾಗೂ ಹೆಡ್ ಮಾಸ್ಟರ್ ಗಳಿಗೆ ವಿಚಾರ ತಿಳಿಸುವ ಉದ್ದೇಶದಿಂದ ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡಿದ್ದಾರೆ.

    ಶುಕ್ರವಾರ ಬೆಳಗ್ಗೆ ಅಣ್ಣೇಗೌಡ ಸೆಕ್ಸ್ ಫೋಟೋಗಳನ್ನು ಹಾಗೂ ಒಂದರ ಮೇಲೋಂದರಂತೆ ನೂರಕ್ಕೂ ಹೆಚ್ಚು ಬೆತ್ತಲೆ ಫೋಟೋಗಳನ್ನು ವಾಟ್ಸಾಪ್ ಗ್ರೂಪಿಗೆ ಸೆಂಡ್ ಮಾಡಿದ್ದಾನೆ. ಇದರಿಂದ ಕಂಗಾಲಾದ ಕೆಲ ಮಹಿಳಾ ಶಿಕ್ಷಕರು ಈ ಗ್ರೂಪ್ ಸಹವಾಸನೇ ಬೇಡ ಅಂತಾ ಎಗ್ಸಿಟ್ ಆಗಿದ್ದಾರೆ. ಈ ಕೆಲಸ ಮಾಡಿದ ಅಣ್ಣೇಗೌಡ ಗ್ರೂಪ್ ನಲ್ಲಿ ಉಳಿದುಕೊಂಡಿದ್ದ ಶಿಕ್ಷಕರಿಗೆ ಕರೆ ಮಾಡಿ ಆ ಫೋಟೋಗಳನ್ನು ಡಿಲೀಟ್ ಮಾಡುವಂತೆ ವಾರ್ನಿಂಗ್ ಕೂಡ ನೀಡಿದ್ದಾರೆ.

    ಇದೀಗ ಈ ಸಂಬಂಧ ಶಿಕ್ಷಕರೂ ಅಣ್ಣೇಗೌಡನ ವಿರುದ್ಧ ಬಿಇಓ ಮತ್ತೆ ಡಿಡಿಪಿಐಗೆ ದೂರು ನೀಡಲು ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv