ನವದೆಹಲಿ: ಇಂದಿನ ಲೋಕಸಭೆ (Lok Sabha) ಮತ್ತು ರಾಜ್ಯಸಭಾ (Rajya Sabha) ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಬಿಜೆಪಿ (BJP) ಸದಸ್ಯರಿಗೆ ವಿಪ್ (Whip) ಜಾರಿ ಮಾಡಲಾಗಿದೆ. ಅಯೋಧ್ಯೆಯ ರಾಮಮಂದಿರ (Ayodhya Ram Mandir) ನಿರ್ಮಿಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಅಭಿನಂದಿಸಿ ಸಂಸತ್ತಿನ ಉಭಯ ಸದನಗಳು ನಿರ್ಣಯ ಅಂಗೀಕರಿಸಲಿವೆ.
ಬಿಜೆಪಿ ಸಂಸದ ಸತ್ಯಪಾಲ್ ಸಿಂಗ್ ಮತ್ತು ಶಿವಸೇನೆ ಸಂಸದ ಶ್ರೀಕಾಂತ್ ಅವರು ರಾಮಮಂದಿರದ ಬಗ್ಗೆ ಚರ್ಚೆ ಆರಂಭಿಸಲಿದ್ದಾರೆ. ವಿರೋಧ ಪಕ್ಷಗಳು ಈ ಚರ್ಚೆಗೆ ಹೇಗೆ ಪ್ರತಿಕ್ರಿಯಿಸಲಿದೆ ಎನ್ನುವುದು ಸದ್ಯದ ಕುತೂಹಲ. ರಾಮನು ಭಾರತದ ಸಂಕೇತ, ರಾಮ ಭಾರತದ ಸಂಸ್ಕೃತಿಯ ಪ್ರತೀಕ, ರಾಮ ಏಕ ಭಾರತ ಶ್ರೇಷ್ಠ ಭಾರತದ ಪ್ರತೀಕ ಎಂಬ ನಿರ್ಣಯಗಳು ಅಂಗೀಕಾರವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಕೇಂದ್ರ ಸಚಿವರನ್ನು ಭೇಟಿಯಾದ 6 ವರ್ಷದ ʼರೈಲ್ ಮಂತ್ರಿʼ!
ಯುಪಿಎ (UPA) ಅವಧಿ ಆರ್ಥಿಕ ವೈಫಲ್ಯದ ಬಗ್ಗೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ ಶ್ವೇತ ಪತ್ರದ (White Paper) ಬಗ್ಗೆ ಇಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ.
ಶುಕ್ರವಾರ ಅಂತ್ಯವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ಕೇಂದ್ರ ಸರ್ಕಾರ ಒಂದು ದಿನ ವಿಸ್ತರಣೆ ಮಾಡಿದ್ದು, ಇದೀಗ ಕಲಾಪದ ಅಂತಿಮ ದಿನ ತನ್ನೆಲ್ಲಾ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಹಾಜರಿರುವಂತೆ ವಿಪ್ ಜಾರಿಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ಇಂದಿನ ಕಲಾಪದಲ್ಲಿ ಮೋದಿ ಸರ್ಕಾರದ ನಡೆಯತ್ತ ಕುತೂಹಲ ಕೆರಳಿಸುವಂತೆ ಮಾಡಿದೆ.
ಬಜೆಟ್ ಅಧಿವೇಶನದ ಕೊನೆಯ ದಿನ ಅಂದರೆ ಇಂದು ಫೆಬ್ರವರಿ 10 ಕೆಲ ಪ್ರಮುಖ ಶಾಸಕಾಂಗ ವ್ಯವಹಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಹಾಜರಾತಿ ಇರಬೇಕು ಎಂದು ಬಿಜೆಪಿ ಮುಖ್ಯ ಸಚೇತಕ ಲಕ್ಷ್ಮೀಕಾಂತ್ ಬಾಜ್ಪೇಯ್ ವಿಪ್ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ ಅಖಾಡಕ್ಕಿಳಿಯುವ ಮೊದಲು ನಡೆಯುತ್ತಿರುವ ಕೊನೆಯ ಅಧಿವೇಶನ ಇದಾಗಿದೆ. ಹೀಗಾಗಿ ಪ್ರಧಾನಿ ಮೋದಿ ಸರ್ಕಾರ ಕೆಲ ಅಚ್ಚರಿ ನೀಡುವ ಸಾಧ್ಯತೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸುತ್ತಿದ್ದಾರೆ.
ಹೈದರಾಬಾದ್: ಭಾರತ್ ಜೋಡೋ (Bharat Jodo Yatra) ಯಾತ್ರೆಯಲ್ಲಿರುವ ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ಚಾಟಿಯಲ್ಲಿ (Whip) ಹೊಡೆದುಕೊಂಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ 58ನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕದ ಬಳಿಕ ಇದೀಗ ತೆಲಂಗಾಣದಲ್ಲಿ (Telangana) ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ತೆಲಂಗಾಣ 19 ಅಸೆಂಬ್ಲಿ ಮತ್ತು 7 ಸಂಸದೀಯ ಕ್ಷೇತ್ರಗಳನ್ನು ದಾಟಿ ನವೆಂಬರ್ 7 ರಂದು ಮಹಾರಾಷ್ಟ್ರವನ್ನು ಪ್ರವೇಶಿಸಲಿದೆ. ಇದನ್ನೂ ಓದಿ: Breaking-ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್
ಈ ನಡುವೆ ನಿನ್ನೆ ತೆಲಂಗಾಣದಲ್ಲಿ ಸಾಂಪ್ರದಾಯಿಕ ಬೋನಾಲು ಹಬ್ಬವಿತ್ತು. ಈ ಹಬ್ಬದಲ್ಲಿ ಮಹಿಳೆಯರು ‘ಪೋತರಾಜು’ ಅವತಾರದ ಪುರುಷರೊಂದಿಗೆ ದೇವಸ್ಥಾನಗಳಿಗೆ ಮೆರವಣಿಗೆಯಲ್ಲಿ ನಡೆದುಕೊಂಡು ಹೋಗುತ್ತಾರೆ. ‘ಪೋತರಾಜು’ ಅವತಾರದ ಪುರುಷ ಜೋರಾಗಿ ಡೋಲು ಬಾರಿಸುತ್ತಿದ್ದಂತೆ ಮೈಮೇಲೆ ಚಾಟಿಯಿಂದ ಹೊಡೆದುಕೊಂಡು ನೃತ್ಯ ಮಾಡುತ್ತಾರೆ. ಹೀಗೆ ರಾಹುಲ್ ಗಾಂಧಿ ಕೂಡ ಚಾಟಿಯಲ್ಲಿ ಬೆನ್ನಿಗೆ ಹೊಡೆದುಕೊಂಡಿದ್ದಾರೆ. ಇದನ್ನೂ ಓದಿ: ED ಪ್ರಕರಣದಲ್ಲಿ ಬಂಧನದ ಭೀತಿ – ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಕೋರ್ಟ್ ಮೊರೆ
ಇಂದು ಒಂದು ದಿನ ಭಾರತ್ ಜೋಡೋ ಯಾತ್ರೆಗೆ ವಿರಾಮವನ್ನು ನೀಡಲಾಗಿತ್ತು. ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದು, ಯಾತ್ರೆಯು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯು 3,500 ಕಿ.ಮೀ ದೂರವನ್ನು ಕ್ರಮಿಸುತ್ತಿದ್ದು 12 ರಾಜ್ಯಗಳನ್ನು ಹಾದುಹೋಗಲಿದೆ.
Live Tv
[brid partner=56869869 player=32851 video=960834 autoplay=true]
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.
ಒಟ್ಟು ಬಿಜೆಪಿ ಮತ್ತು ಶಿವಸೇನೆ ಬಣದ ಒಟ್ಟು 164 ಶಾಸಕರು ಶಿಂಧೆ ಪರ ನಿಂತರೇ, 99 ಶಾಸಕರು ವಿರುದ್ಧವಾಗಿ ನಿಂತಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಶಿವಸೇನೆ ಬಂಡಾಯ ಸರ್ಕಾರ ಎರಡೂವರೆ ವರ್ಷದ ಬಳಿಕ ಅಧಿಕಾರ ಹಿಡಿದಿದೆ. ಇದನ್ನೂ ಓದಿ:ಪ್ರವಾಹಕ್ಕೆ ಕೊಚ್ಚಿ ಹೋದ ಚೀನಾ-ಭಾರತ ಗಡಿಯಲ್ಲಿನ ಸೇತುವೆ
ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗಲಿಲ್ಲ. ಇದನ್ನೂ ಓದಿ:ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ 55, ಎನ್ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ 2, ಎಐಎಂಐಎಂ 2, ಪ್ರಹರ್ ಜನಶಕ್ತಿ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1, ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1 ಸ್ಥಾನಗಳನ್ನು ಹೊಂದಿದೆ.
107 ಮತಗಳನ್ನು ಹೊಂದಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ವಿರೋಧ ಪಕ್ಷವಾಗಲಿದೆ. ಈ ಮೂಲಕ ಮೂರು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಅಧಿಕೃತ ತೆರೆ ಬಿದ್ದಿದೆ.
Live Tv
[brid partner=56869869 player=32851 video=960834 autoplay=true]
ಯಾದಗಿರಿ: ವಿಪ್ ಉಲ್ಲಂಘಿಸಿದ್ದ ಗುರಮಿಠಕಲ್ ಪುರಸಭೆಯ ಕಾಂಗ್ರೆಸ್ ಪಕ್ಷದ ಮೂವರು ಸದಸ್ಯರ ಸದಸ್ಯತ್ವ ಅನರ್ಹಗೊಂಡಿದೆ. ಸದಸ್ಯತ್ವ ಅನರ್ಹಗೊಳಿಸಿ ಡಿಸಿ ಡಾ.ರಾಗಪ್ರಿಯಾ ಆದೇಶ ಹೊರಡಿಸಿದ್ದಾರೆ.
ಅಶನ್ನ ಬುದ್ಧ, ಅಶೋಕ ಕಲಾಲ, ಪವಿತ್ರ ಮನ್ನೆ ಅನರ್ಹಗೊಂಡ ಮೂವರು ಪುರಸಭೆ ಸದಸ್ಯರು. ಸೆಪ್ಟೆಂಬರ್ 2020ರಲ್ಲಿ ಗುರಮಿಠಕಲ್ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂವರು ಗೈರಾಗಿದ್ದರು. ಕಾಂಗ್ರೆಸ್ನಿಂದ ಬಿ.ಫಾರ್ಮ್ ಪಡೆದು ಚುನಾವಣೆಯಲ್ಲಿ ಗೆದ್ದಿದ್ದರು, ಪುರಸಭೆ ಅಧ್ಯಕ್ಷ ಚುನಾವಣೆಯಲ್ಲಿ ವಿವಿಧ ಕಾರಣಗಳಿಂದ ಗೈರಾಗಿ, ವಿಪ್ ಉಲ್ಲಂಘಿಸಿದ್ದರು. ಇದನ್ನೂ ಓದಿ: ಹಳ್ಳಿಗರು ಹೇಳುವ ಸಮಯಕ್ಕೆ, ಹೇಳಿದ ಸ್ಥಳಕ್ಕೆ ಬರುತ್ತೆ ಕೋವಿಡ್ ಲಸಿಕೆ
ಈ ಬಗ್ಗೆ ಪುರಸಭೆ ಸದಸ್ಯ ಖಾಜಾ ಮೈನೂದ್ದೀನ್ ವಿಪ್ ಉಲ್ಲಂಘಿಸಿದವರನ್ನು ಅನರ್ಹಗೊಳಿಸಲು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಪಕ್ಷಾಂತರ ಕಾಯ್ದೆಯಡಿ ಮೂವರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಕಂಪನಿಗಳ ಖಾಸಗೀಕರಣ ಇಲ್ಲ: ಸುನೀಲ್ ಕುಮಾರ್
ನವದೆಹಲಿ: ವಿಶ್ವಾಸ ಮತಯಾಚನೆಗೆ ಈಗಾಗಲೇ ವಿಳಂಬ ಮಾಡುತ್ತಿರುವ ದೋಸ್ತಿ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪಕ್ಷೇತರ ಶಾಸಕರಾದ ಆರ್ ಶಂಕರ್ ಮತ್ತು ನಾಗೇಶ್ ಇಂದೇ ವಿಶ್ವಾಸಮತ ಸಾಬೀತಿಗೆ ಸೂಚಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಇಂದು ಈ ಅರ್ಜಿಯ ವಿಚಾರಣೆ ನಡೆಸುವುದಿಲ್ಲ. ಇಂದೇ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶಿಸುವುದಿಲ್ಲ ಎಂದು ಹೇಳುವ ಮೂಲಕ ಬಿಗ್ ರಿಲೀಫ್ ನೀಡಿದೆ.
ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ಅತೃಪ್ತರ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ, ವಿಶ್ವಾಸ ಮತಯಾಚನೆ ವಿಳಂಬವಾಗುತ್ತಿದೆ. ಹೀಗಾಗಿ ಇಂದೇ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿ ಎಂದು ಮನವಿ ಮಾಡಿದರು.
ಈ ವೇಳೆ ನ್ಯಾ.ರಂಜನ್ ಗೊಗೋಯ್ ಅವರು, ಸ್ಪೀಕರ್ ನಿರ್ಧಾರದ ವಿಚಾರದ ಬಗ್ಗೆ ನಾವು ಮಧ್ಯಪ್ರವೇಶಿಸುವುದಿಲ್ಲ. ಇಂದೇ ವಿಶ್ವಾಸ ಮತಯಾಚನೆ ನಡೆಸುವಂತೆ ನಾವು ಆದೇಶ ನೀಡುವುದಿಲ್ಲ ಎಂದಾಗ ರೋಹ್ಟಗಿ ಹಾಗಾದರೆ ನಾಳೆಯಾದರೂ ವಿಚಾರಣೆ ನಡೆಸಿ ಎಂದು ಮನವಿ ಮಾಡಿದರು. ಇದಕ್ಕೆ ನೋಡೋಣ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದರು.
ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ವಕೀಲೆ ಲಿಲ್ಲಿ ಥೋಮಸ್ ಕರ್ನಾಟಕದಲ್ಲಿ ಈಗ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಪತ್ರಿಕೆಗಳಲ್ಲಿ ಮತ್ತು ಸುದ್ದಿ ವಾಹಿನಿಗಳಲ್ಲಿ ಸುದ್ದಿ ಬರುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು, ಮೇಡಂ ನೀವು ಸುದ್ದಿ ಪತ್ರಿಕೆ ಓದಬೇಡಿ. ಸುದ್ದಿ ವಾಹಿನಿಗಳನ್ನು ವೀಕ್ಷಿಸಬೇಡಿ. ಏನು ಹೇಳಬೇಕೋ ಅದನ್ನು ಒಂದು ಪ್ರತ್ಯೇಕ ಅರ್ಜಿ ಸಲ್ಲಿಸಿ ಹೇಳಿಬಿಡಿ ಎಂದು ಸೂಚಿಸಿದರು.
ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಇಂದಿನ ವಿಚಾರಣೆಯ ಪಟ್ಟಿಯಲ್ಲಿ ಇರದ ಕಾರಣ ಈ ಅರ್ಜಿಯ ವಿಚಾರಣೆ ನಡೆಯಲಿಲ್ಲ.
ಕಾಂಗ್ರೆಸ್ ಅರ್ಜಿಯಲ್ಲಿ ಏನಿದೆ?
ಜುಲೈ 17ರಂದು ಅತೃಪ್ತರ ಬಗ್ಗೆ ನೀಡಿರುವ ಮಧ್ಯಂತರ ಆದೇಶದಿಂದ ಗೊಂದಲ ಸೃಷ್ಟಿಯಾಗಿದೆ. ಕಲಾಪಕ್ಕೆ ಹಾಜರಾಗಬೇಕೇ? ಬೇಡವೇ ಎನ್ನುವುದನ್ನು ಶಾಸಕರ ವಿವೇಚನೆಗೆ ಬಿಡಲಾಗಿದೆ. ಈ ಆದೇಶ ರಾಜಕೀಯ ಪಕ್ಷಗಳ ವಿಪ್ ಅಧಿಕಾರವನ್ನು ಕಿತ್ತುಕೊಳ್ಳಲಿದೆ. ಶೆಡ್ಯೂಲ್ 102(1)ಬಿ ಅನ್ವಯ ರಾಜಕೀಯ ಪಕ್ಷಗಳಿಗೆ ವಿಪ್ ಅಧಿಕಾರವಿದೆ. ವಿಶ್ವಾಸಮತ ಸಾಬೀತು ವೇಳೆ ಶಾಸಕರಿಗೆ ವಿಪ್ ನೀಡುವುದು ಅನಿವಾರ್ಯವಾಗಿದೆ. ನೀವು ನೀಡಿರುವ ಆದೇಶ ಈ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು.
ಜೆಡಿಎಸ್ ವಾದ ಏನು?
ರಾಜ್ಯಪಾಲರು 2 ಬಾರಿ ಬಹುಮತ ಸಾಬೀತಿಗೆ ಸೂಚಿಸಿದ್ದಾರೆ. ಸಿಎಂ ಅವರೇ ವಿಶ್ವಾಸ ಮತಯಾಚನೆ ಕೇಳಿದ್ದು ಈ ಚರ್ಚೆ ನಡೆಯತ್ತಿರುವಾಗಲೇ ಈ ರೀತಿಯ ನಿರ್ದೇಶನ ನೀಡಬಾರದಿತ್ತು. ವಿಶ್ವಾಸಮತದ ಚರ್ಚೆ ಬಳಿಕ ಮತಕ್ಕೆ ಹಾಕುವುದಾಗಿ ಸ್ಪೀಕರ್ ಹೇಳಿದ್ದಾರೆ. ಚರ್ಚೆ ಮುಕ್ತಾಯವಾಗುವವರೆಗೂ ರಾಜ್ಯಪಾಲರು ಸಮಯ ನಿಗದಿಪಡಿಸದಂತೆ ಸೂಚಿಸಿ.
ಬೆಂಗಳೂರು: ಅತೃಪ್ತರ ಹಠ ಕಂಡು ದೋಸ್ತಿ ನಾಯಕರು ದಿಕ್ಕು ಕಾಣದಂತಾಗಿದ್ದಾರೆ. ಪಕ್ಷದ ಹಿರಿಯ ನಾಯಕರ ಮನವೊಲಿಕೆಗೂ ಜಗ್ಗದ ಅತೃಪ್ತರ ಮೇಲೆ ವಿಪ್ ಅಸ್ತ್ರ ಪ್ರಯೋಗಿಸಲು ದೋಸ್ತಿಗಳು ಮುಂದಾಗಿದ್ದರೂ ಅತೃಪ್ತರು ಮಾತ್ರ ಡೋಂಟ್ ಕೇರ್ ಅಂತಿದ್ದಾರೆ.
ಹೌದು, ಸದನದಲ್ಲಿ ಕಾಲ ವಿಳಂಬ, ಕಾನೂನು ಕಗ್ಗಂಟ್ಟಿನ ಆಟಕ್ಕೆ ಅತೃಪ್ತರು ಬಗ್ಗುತ್ತಾರೆ ಎಂಬ ದೋಸ್ತಿಗಳ ಪ್ಲಾನ್ ಮಕಾಡೆ ಮಲಗಿದೆ. ಎಷ್ಟೇ ಕಾನೂನು ಕಗ್ಗಂಟ್ಟಿಗೆ ದೋಸ್ತಿಗಳು ಯತ್ನಿಸಿದರೂ ನಮ್ಮ ನಿರ್ಧಾರ ಅಚಲ, ನಮ್ಮ ಒಗಟ್ಟು ಹೀಗೆ ಇರುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರೆಬೆಲ್ ಶಾಸಕರು ರವಾನಿಸಿದ್ದಾರೆ. ಅಲ್ಲದೆ ಇತ್ತ ರಾಜೀನಾಮೆ ವಾಪಾಸ್ ಪಡೆದ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ವಿರುದ್ಧ ಅತೃಪ್ತರು ಸಿಡಿದೆದ್ದಿದ್ದಾರೆ.
ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ನಮ್ಮ ಗುರಿ, ನಿರ್ಧಾರ ಸ್ಪಷ್ಟವಿದೆ ಎಂಬ ಅತೃಪ್ತರ ಸಂದೇಶದಿಂದ ದೋಸ್ತಿಗಳು ಕಂಗಾಲಾಗಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಾಸ್ ಪಡೆದಿರುವುದಕ್ಕೂ ನಮಗೂ ಸಂಬಂಧ ಇಲ್ಲ. ಅವರ ದಾರಿಗೆ ನಾವು ಬರಲ್ಲ, ಅವರನ್ನ ನಾವು ಫಾಲೋ ಮಾಡಲ್ಲ ಎಂದು ಅತೃಪ್ತ ಶಾಸಕರು ಧೃಢ ನಿರ್ಧಾರ ಮಾಡಿದ್ದಾರೆ. ಇದರಿಂದ ರಾಮಲಿಂಗಾ ರೆಡ್ಡಿ ಪುನರ್ ಆಗಮನ ಅತೃಪ್ತರ ಒಗ್ಗಟ್ಟು ಮುರಿಯೋಕೆ ಅಸ್ತ್ರ ಎಂಬ ದೋಸ್ತಿಗಳ ಲೆಕ್ಕಚಾರ ಸಂಪೂರ್ಣ ಉಲ್ಟಾ ಆಗಿದೆ.
ಸಂಧಾನಕ್ಕೂ ಮಣಿಯುತ್ತಿಲ್ಲ, ರಾಮಲಿಂಗಾ ರೆಡ್ಡಿ ಯೂಟರ್ನ್ ಗೂ ಅತೃಪ್ತರು ಬದಲಾಗುತ್ತಿಲ್ಲ. ಇತ್ತ ಅತೃಪ್ತರು ವಿಪ್ ಅಸ್ತ್ರಕ್ಕೂ ಹೆದರುತ್ತಿಲ್ಲ. ಈ ರೆಬೆಲ್ ಶಾಸಕರ ಒಗ್ಗಟ್ಟು ಸಮಿಶ್ರ ಸರ್ಕಾರದ ಹಡಗನ್ನು ಮುಳುಗಿಸುತ್ತೆ ಎಂಬ ಮಾತುಗಳು ಕೇಳಿಬರುತ್ತಿದೆ.
ನವದೆಹಲಿ: ವಿಶ್ವಾಸ ಮತಯಾಚನೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಈ ವೇಳೆ ರಾಜೀನಾಮೆ ಅಂಗೀಕಾರಕ್ಕೆ ದಿನ ನಿಗದಿ ಪಡಿಸದ ಕೋರ್ಟ್ ನಿರ್ದಿಷ್ಟ ಸಮಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ನಿರ್ಧಾರ ಮಾಡಿ ಎಂದು ಸ್ಪೀಕರ್ ಅವರಿಗೆ ಆದೇಶ ನೀಡಿದೆ.
ನಾಳೆ ವಿಶ್ವಾಸಮತಯಾಚನೆ ಮಾಡಬಹುದು. ಆದ್ರೆ ರಾಜೀನಾಮೆ ನೀಡಿರುವ 15 ಶಾಸಕರು ಭಾಗವಹಿಸುವುದು ಕಡ್ಡಾಯವಲ್ಲ. ಹಾಜರಾಗಬೇಕೋ ಬೇಡವೋ ಎನ್ನುವುದು ಶಾಸಕರ ವಿವೇಚನೆಗೆ ಬಿಟ್ಟ ವಿಚಾರ. ಅತೃಪ್ತ ಶಾಸಕರನ್ನು ಒತ್ತಾಯಪೂರ್ವಕವಾಗಿ ಕರೆತರುವ ಹಾಗಿಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ರಾಜೀನಾಮೆ ಅಂಗೀಕರಿಸಿಲ್ಲ ಅಂತ ಸ್ಪೀಕರ್ ವಿರುದ್ಧ 15 ಅತೃಪ್ತ ಶಾಸಕರು ಸಲ್ಲಿಸಿರೋ ಅರ್ಜಿಯ ಬಗ್ಗೆ ಮಂಗಳವಾರ ಸುಮಾರು 212 ನಿಮಿಷ ವಿಚಾರಣೆ ನಡೆದರೂ, ತೀರ್ಪು ಪ್ರಕಟವಾಗಿರಲಿಲ್ಲ. ಅರ್ಜಿದಾರರು, ಸಿಎಂ, ಸ್ಪೀಕರ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ವಕೀಲರು ಸುದೀರ್ಘವಾಗಿ ತಮ್ಮ ಕಕ್ಷಿದಾರರ ಪರವಾಗಿ ವಾದ ಮಂಡಿಸಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ದೀಪಕ್ ಗುಪ್ತಾ ಹಾಗೂ ಜಸ್ಟೀಸ್ ಅನಿರುದ್ಧ್ ಬೋಸ್ ಅವರಿದ್ದ ತ್ರಿಸದಸ್ಯ ಪೀಠದ ಎದುರು ಮುಕುಲ್ ರೋಹಟಗಿ – ಅಭಿಷೇಕ್ ಸಿಂಘ್ವಿ – ರಾಜೀವ್ ಧವನ್ ನಡುವೆ ಅಕ್ಷರಶಃ ವಾಗ್ಯುದ್ಧವೇ ನಡೆದಿತ್ತು. ಸುಮಾರು 3 ಗಂಟೆ 45 ನಿಮಿಷಗಳ ವಾದ ವಿವಾದಗಳನ್ನು ಆಲಿಸಿದ ತ್ರಿಸದಸ್ಯ ಪೀಠ ತೀರ್ಪನ್ನು ಬುಧವಾರ ಬೆಳಗ್ಗೆ 10.30ಕ್ಕೆ ಕಾಯ್ದಿರಿಸಿತ್ತು.
ಮಂಗಳವಾರ ಸುಪ್ರೀಂಕೋರ್ಟ್ ನಲ್ಲಿ ಏನಾಗಿತ್ತು: ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹಟಗಿ:
10 ಶಾಸಕರು ಜುಲೈ 10ರಂದೇ ರಾಜೀನಾಮೆ ನೀಡಿದ್ದಾರೆ. ಆರ್ಟಿಕಲ್ 190 ಮತ್ತು ಶೆಡ್ಯೂಲ್ 10ರ ನಡುವೆ ವ್ಯತ್ಯಾಸ ಇದ್ದು ಸ್ಪೀಕರ್ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸಬಹುದು. ಅನರ್ಹತೆ ಬಾಕಿ ಇರೋದು ರಾಜೀನಾಮೆ ಸ್ವೀಕಾರಕ್ಕೆ ಅಡ್ಡಿಯಾಗಬಾರದು. ಉಮೇಶ್ ಜಾಧವ್ ಮೇಲೆ ಅನರ್ಹತೆ ದೂರು ಇದ್ದರೂ ರಾಜೀನಾಮೆ ಅಂಗೀಕರಿಸಲಾಗಿತ್ತು. ಅದೇ ರೀತಿ ಎಲ್ಲ ಶಾಸಕರು ರಾಜೀನಾಮೆಯನ್ನು ಅಂಗೀಕರಿಸಬೇಕು. ಈ ವಿಚಾರದಲ್ಲಿ ಸ್ಪೀಕರ್ ದ್ವಂದ್ವ ನೀತಿಯನ್ನು ಹೊಂದಿದ್ದಾರೆ. ಶಾಸಕರು ಅನರ್ಹ ಮಾಡುವಂತಹ ತಪ್ಪು ಏನು ಮಾಡಿದ್ದಾರೆ? ಅನರ್ಹತೆಗೊಳಿಸಲು ಯಾವುದೇ ಕಾರಣ ಇಲ್ಲ. ನಮ್ಮ ಕಕ್ಷಿದಾರರ ಮೇಲೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಆರೋಪವನ್ನು ಹೊರಿಸಲಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ಸದನದ ಹೊರಗಿನ ಸಭೆಯಲ್ಲಿ ಭಾಗಿಯಾಗುತ್ತಿಲ್ಲ. ವಿಧಾನಸಭಾ ಕಲಾಪಕ್ಕೆ ಹಾಜರಾಗುವಂತೆ ಒತ್ತಡ ಹಾಕುವುದು ಸರಿಯೇ?
ನನ್ನ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ಭಾಗಿಯಾಗಿಲ್ಲ. ರಾಜೀನಾಮೆ ನೀಡಿದ ಬಳಿಕ ವಿಪ್ ಜಾರಿಯಾದ್ರೆ ಅನರ್ಹಗೊಳಿಸಲು ಹೇಗೆ ಸಾಧ್ಯ? ಪಕ್ಷಾಂತರ ನಮ್ಮ ಉದ್ದೇಶ ಅಲ್ಲ, ಸರ್ಕಾರದಿಂದ ಹೊರಬರುವುದು ನಮ್ಮ ಉದ್ದೇಶವಾಗಿದೆ. ಶಾಸಕರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಟ್ ಮೂಲಕವೇ ಹೇಳಿದ್ದಾರೆ. ಹೀಗಿರುವಾಗ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಮಾಡುವುದು ಸರಿಯೇ?
ನಾನು ಅನರ್ಹತೆ ಪ್ರಕರಣ ಕೈ ಬಿಡುವಂತೆ ಹೇಳಿಲ್ಲ. ಇಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಅನಹರ್ತತೆಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಆರ್ಟಿಕಲ್ 191/2 ರಾಜೀನಾಮೆ ನೀಡುವುದು ಶಾಸಕರ ಹಕ್ಕು. ಈ ಹಕ್ಕನ್ನು ತಡೆಯಲು ಸ್ಪೀಕರ್ ಅವರಿಗೆ ಸಾಧ್ಯವಿಲ್ಲ. ಶಾಸಕರು ಇಷ್ಟಪಟ್ಟಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ವ ಸ್ವತಂತ್ರರು. ಎಲ್ಲ ಶಾಸಕರು ನಿಯಮಬದ್ಧವಾಗಿಯೇ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಈ ಕೂಡಲೇ ಸ್ಪೀಕರ್ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಮುಕುಲ್ ರೋಹಟಗಿ ವಾದ ಮಂಡಿಸಿದ್ದರು.
ಸ್ಪೀಕರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ:
ಸ್ಪೀಕರ್ ರಾಜೀನಾಮೆ ಅಂಗೀಕಾರ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಕೆಲವರನ್ನು ವಿಚಾರಣೆಗೂ ಕೂಡ ಕರೆದಿದ್ದಾರೆ. ಆದರೆ ಅವರು ವಿಚಾರಣೆಗೆ ಬಂದಿಲ್ಲ. ಅನರ್ಹತೆ ಮತ್ತು ರಾಜೀನಾಮೆ ಅಂಗೀಕಾರಕ್ಕೆ ಸಂಬಂಧ ಇಲ್ಲ ಎನ್ನುವುದು ತಪ್ಪು. ಅನರ್ಹತೆ ಮತ್ತು ರಾಜೀನಾಮೆಗೆ ಸಂಬಂಧವಿದೆ. ರಾಜೀನಾಮೆಗಿಂತ ಮುಂಚೆಯೇ ಅನರ್ಹತೆಯ ದೂರು ಸಲ್ಲಿಕೆಯಾಗಿದೆ. ವಿಪ್ ಉಲ್ಲಂಘಿಸಿದರೆ ಅದು ಅನರ್ಹತೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ರಾಜೀನಾಮೆ ಅನರ್ಹತೆ ಬಗ್ಗೆ ನಿರ್ಧಾರಕೈಗೊಳ್ಳುವ ಅಧಿಕಾರ ಸ್ವೀಕರ್ ಅವರಿಗೆ ಇದೆ. ವಿಪ್ ಉಲ್ಲಂಘನೆ ಮಾಡಿದರೆ ಶಾಸಕರನ್ನು ಅನರ್ಹತೆ ಮಾಡುವ ಅಧಿಕಾರವನ್ನು ಸ್ಪೀಕರ್ ಹೊಂದಿದ್ದಾರೆ.
ನಿಯಮದ ಪ್ರಕಾರ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಬೇಕು. ಖುದ್ದು ಹಾಜರಾಗದೇ ರಾಜೀನಾಮೆ ನೀಡಿದರೆ ಆರ್ಟಿಕಲ್ 190ರ ಅನ್ವಯ ಆಗಲ್ಲ. ವಿಚಾರಣೆಗೂ ಕೂಡ ಶಾಸಕರು ಖುದ್ದು ಹಾಜರಾಗಬೇಕು. ಕೆಲವೊಂದು ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಬೇಕಾಗಿರುವ ಕಾರಣ ಒಂದೇ ರಾತ್ರಿಯಲ್ಲಿ ವಿಚಾರಣೆ ಮುಗಿಸಲು ಸಾಧ್ಯವಿಲ್ಲ. ಅನರ್ಹತೆಯಿಂದ ತಪ್ಪಿಸಿಕೊಳ್ಳಲು ಶಾಸಕರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ. ಸ್ಪೀಕರ್ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಜುಲೈ 11ರಂದು 15 ಶಾಸಕರಲ್ಲಿ 11 ಮಂದಿ ಖುದ್ದು ಹಾಜರಾಗಿ ರಾಜೀನಾಮೆ ನೀಡಿದ್ದಾರೆ. ಉಳಿದ ನಾಲ್ವರು ಇದೂವರೆಗೂ ಬಂದಿಲ್ಲ.
ಫೆಬ್ರವರಿಯಲ್ಲಿ ಇಬ್ಬರು ಶಾಸಕರ ಅನರ್ಹತೆ ವಿಚಾರಣೆ ಪ್ರಕ್ರಿಯೆ ಶುರುವಾಗಿದೆ. ಜುಲೈ 6ರಂದು ಶಾಸಕರು ರಾಜೀನಾಮೆ ನೀಡಲು ಹೋದಾಗ ಸ್ಪೀಕರ್ ಕಚೇರಿಯಲ್ಲಿ ಇರಲಿಲ್ಲ. ಶಾಸಕರು ಮೊದಲು ಸ್ಪೀಕರ್ ಬಳಿ ಸಮಯ ಕೇಳಿರಲಿಲ್ಲ. ಅನರ್ಹತೆ ಪ್ರಕರಣ ವಿಚಾರಣೆ ಹಂತದಲ್ಲಿರುವಾಗ ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಹಲವು ಅನರ್ಹತೆ ಪ್ರಕರಣಗಳನ್ನು ಪರಿಶೀಲಿಸಿ ತೀರ್ಪು ನೀಡಬೇಕಿದೆ. ಹಾಗಾಗಿ ತಡವಾಗ್ತಿದೆ. ನಾನು ಬಹಳ ಗಟ್ಟಿಯಾಗಿ ಶಾಸಕರು ಅನರ್ಹರಾಗುತ್ತಾರೆಂದು ಹೇಳುತ್ತೇನೆ. ಇವತ್ತಲ್ಲ ನಾಳೆ ಅನರ್ಹತೆ ಆಗಲೇಬೇಕು. ಅನರ್ಹತೆ ತಪ್ಪಿಸಿಕೊಳ್ಳಲು ರಾಜೀನಾಮೆ ಮಾರ್ಗ ಆಗಬಾರದು. ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣವನ್ನು ಸ್ಪೀಕರ್ ಇತ್ಯರ್ಥ ಮಾಡುತ್ತಾರೆ. ಶುಕ್ರವಾರ ನೀಡಿದ್ದ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದರು.
ಸಿಎಂ ಪರ ವಕೀಲ ರಾಜೀವ್ ಧವನ್ ಅವರ ವಾದ:
ಸ್ಪೀಕರ್ ಕಣ್ಣುಮುಚ್ಚಿಕೊಂಡು ಕುಳಿತಿಲ್ಲ. ಶಾಸಕರು ಆಸೆ, ಆಮಿಷಗಳಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸ್ಪೀಕರ್ ಅವರಿಗೆ ನೀಡಲಾಗಿದೆ. 11 ಮಂದಿ ಶಾಸಕರು ಮುಂಬೈಗೆ ತೆರಳುವ ಬದಲು ಸ್ಪೀಕರ್ ಬಳಿ ಹೋಗಬೇಕಿತ್ತು. ಇದೊಂದು 11 ಜನರ ಬೇಟೆಯ ತಂಡವಾಗಿದೆ. ಗುಂಪು ರಾಜೀನಾಮೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ರಾಜೀನಾಮೆ ಬಳಿಕ 10 ಶಾಸಕರು ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೀಘ್ರ ರಾಜೀನಾಮೆ ಅಂಗೀಕಾರವಾದರೆ ಸಂವಿಧಾನ ವಿರೋಧಿ ಆಗುತ್ತದೆ. ಹಾಗಾಗಿ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಸುಪ್ರೀಂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಸ್ಪೀಕರ್ ಪ್ರಶ್ನೆ ಮಾಡುವ ಅಧಿಕಾರ ನ್ಯಾಯಾಲಯಕ್ಕೆ ಇರಲಿಲ್ಲ. ಈಗಲೂ ಇಲ್ಲ.
ಸ್ಪೀಕರ್ ಅಧಿಕಾರವನ್ನು 10ನೇ ಶೆಡ್ಯೂಲ್ ಜೊತೆಗೆ ಓದಬೇಕು. ಸಂವಿಧಾನದ 190ನೇ ವಿಧಿಯನ್ನು 10ನೇ ಶೆಡ್ಯೂಲ್ ಪ್ರಕಾರ ಅರ್ಥೈಸಿಕೊಳ್ಳಬೇಕಿದೆ. ಸ್ಪೀಕರ್ ಅವರಿಗೆ ವಿಚಾರಣೆ ನಡೆಸಲು ಸಮಯಾವಕಾಶದ ಅಗತ್ಯವಿದೆ. ಇದೆಲ್ಲವೂ ರಾಜಕೀಯ ಪ್ರೇರಿತವಾಗಿದ್ದು, ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ. ಹೀಗಾಗಿ ವಿಧಿ 190 ಮತ್ತು ಶೆಡ್ಯೂಲ್ 10ನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕಕ್ಕೆ ಮಾರಕ. ಇಂತಹ ಬೆಳವಣಿಗೆಯಿಂದ ಪ್ರಜಾಪ್ರಭುತ್ವದ ಬುಡ ಅಲುಗಾಡುತ್ತಿದೆ.
ಶಾಸಕರ ರಾಜೀನಾಮೆಗಳಿಗೆ ಕಾರಣಗಳೇ ಇಲ್ಲ. ಶಾಸಕರು ನೀಡುವ ಕಾರಣಗಳು ಸ್ಪೀಕರ್ ಅವರಿಗೆ ತೃಪ್ತಿಯಾದ್ರೆ ಮಾತ್ರ ರಾಜೀನಾಮೆ ಸಾಂವಿಧಾನಿಕವಾಗಲಿದೆ. 10 ರಿಂದ 13 ಶಾಸಕರು ರಾಜೀನಾಮೆ ನೀಡಲು ಸರ್ಕಾರ ಕೆಡವಲು ಬೇಟೆಗೆ ಹೊರಟಿದ್ದಾರೆ. ರಾಜಕೀಯ ಆಟದಲ್ಲಿ ಕೋರ್ಟ್ ಮಧ್ಯಪ್ರವೇಶಕ್ಕೆ ಶಾಸಕರು ಬಯಸಿದ್ದಾರೆ ಎಂದು ತಮ್ಮ ವಾದದಲ್ಲಿ ಮಂಡಿಸಿದ್ದರು.
ರಾಜೀನಾಮೆ ಇದೊಂದು ರಾಜಕೀಯ ಕುತಂತ್ರವಾಗಿದ್ದು, ಅಧಿವೇಶನಕ್ಕೂ ಮುನ್ನ ಸರ್ಕಾರಕ್ಕೆ ಸಂಖ್ಯಾಬಲ ಇಲ್ಲದಂತೆ ಮಾಡುವ ಪ್ಲಾನ್ ಇದಾಗಿದೆ. ಇಂತಹ ಬೆಳವಣಿಗೆಗಳನ್ನು ಪರಿಗಣಿಸಬಾರದು. ಬಜೆಟ್ ಅಂಗೀಕಾರಕ್ಕೂ ಮೊದಲೇ ಸರ್ಕಾರ ಬೀಳಿಸುವುದು ಇವರೆಲ್ಲರ ಉದ್ದೇಶವಾಗಿದೆ. ಗುರುವಾರಕ್ಕೆ ಪೂರ್ಣ ಪ್ರಮಾಣದ ಚರ್ಚೆ ಆಗಲಿ. ಅಂದು ಎಲ್ಲ ಶಾಸಕರು ಹಾಜರಾಗಲಿ ಎಂದು ವಾದಿಸಿದ್ದರು.
Supreme Court says, "Karnataka MLAs not compelled to participate in the trust vote tomorrow." https://t.co/qSfPf8oQ2x
ನವದೆಹಲಿ: ವಿಶ್ವಾಸ ಮತ ಯಾಚನೆಯ ಮುನ್ನದಿನವಾದ ಬುಧವಾರ ಶಾಸಕರ ರಾಜೀನಾಮೆ ಮತ್ತು ಅನಹರ್ತತೆ ವಿಚಾರವನ್ನು ಸ್ಪೀಕರ್ ರಮೇಶ್ ಕುಮಾರ್ ಇತ್ಯರ್ಥ ಮಾಡಲಿದ್ದಾರೆ.
ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಸ್ಪೀಕರ್ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ಬುಧವಾರ ಅನಹರ್ತತೆ ಮತ್ತು ರಾಜೀನಾಮೆಯನ್ನು ಇತ್ಯರ್ಥ ಮಾಡಲಿದ್ದಾರೆ ಎಂದು ತಿಳಿಸಿದರು.
ಅಭಿಷೇಕ್ ಮನು ಸಿಂಘ್ವಿ ವಾದ ಹೀಗಿತ್ತು:
ಸ್ಪೀಕರ್ ರಾಜೀನಾಮೆ ಅಂಗೀಕಾರ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಕೆಲವರನ್ನು ವಿಚಾರಣೆಗೂ ಕೂಡ ಕರೆದಿದ್ದಾರೆ. ಆದರೆ ಅವರು ವಿಚಾರಣೆಗೆ ಬಂದಿಲ್ಲ. ಅನರ್ಹತೆ ಮತ್ತು ರಾಜೀನಾಮೆ ಅಂಗೀಕಾರಕ್ಕೆ ಸಂಬಂಧ ಇಲ್ಲ ಎನ್ನುವುದು ತಪ್ಪು. ಅನರ್ಹತೆ ಮತ್ತು ರಾಜೀನಾಮೆಗೆ ಸಂಬಂಧವಿದೆ.
Senior Advocate AM Singhvi said 'all cases of presentation of resignation only happened on 11th July. 4 MLAs who have moved a petition to resign haven't even presented themselves before the Speaker.' CJI Gogoi asked, 'if the letters were given on July 6, what did Speaker do?' https://t.co/RZPFswXSzb
ರಾಜೀನಾಮೆಗಿಂತ ಮುಂಚೆಯೇ ಅನರ್ಹತೆಯ ದೂರು ಸಲ್ಲಿಕೆಯಾಗಿದೆ. ವಿಪ್ ಉಲ್ಲಂಘಿಸಿದರೆ ಅದು ಅನರ್ಹತೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ರಾಜೀನಾಮೆ ಅನರ್ಹತೆ ಬಗ್ಗೆ ನಿರ್ಧಾರಕೈಗೊಳ್ಳುವ ಅಧಿಕಾರ ಸ್ವೀಕರ್ ಅವರಿಗೆ ಇದೆ. ವಿಪ್ ಉಲ್ಲಂಘನೆ ಮಾಡಿದರೆ ಶಾಸಕರನ್ನು ಅನರ್ಹತೆ ಮಾಡುವ ಅಧಿಕಾರವನ್ನು ಸ್ಪೀಕರ್ ಹೊಂದಿದ್ದಾರೆ. ಪಕ್ಷ ವಿರೋಧ ಚಟುವಟಿಕೆ ಆಧಾರದ ಮೇಲೆ ಅನರ್ಹತೆ ಮಾಡಬೇಕು. ಪಕ್ಷ ವಿರೋಧಿ ಚಟುವಟಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದೇ ರಾತ್ರಿಯಲ್ಲಿ ರಾಜೀನಾಮೆ ಅಂಗೀಕಾರ ಮಾಡಲು ಸಾಧ್ಯವಿಲ್ಲ. ಮುಕುಲ್ ರೋಹಟಗಿ ಅವರ ವಾದದಲ್ಲಿ ಹುರುಳಿಲ್ಲ. ತ್ವರಿತವಾಗಿ ರಾಜೀನಾಮೆ ಅಂಗೀಕರಿಸುವುದು ಸೂಕ್ತ ತೀರ್ಮಾನವಲ್ಲ.
Hearing in the matter of rebel Karnataka MLAs: Mukul Rohatgi, representing 10 rebel MLAs says, The Speaker can't hold the resignation for so many days. The rule states it has to be decided soon." https://t.co/sAtuuF2Hs5
ಅನರ್ಹತೆ ಪ್ರಶ್ನೆಯೂ ಅನರ್ಹತೆಗೆ ದೂರು ನೀಡಲು ಕಾರಣವಾದ ಘಟನೆ ಮತ್ತು ಸಮಯವನ್ನು ಆಧರಿಸಿರುತ್ತದೆ. ನಿಯಮದ ಪ್ರಕಾರ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಬೇಕು. ಖುದ್ದು ಹಾಜರಾಗದೇ ರಾಜೀನಾಮೆ ನೀಡಿದರೆ ಆರ್ಟಿಕಲ್ 190ರ ಅನ್ವಯ ಆಗಲ್ಲ. ವಿಚಾರಣೆಗೂ ಕೂಡ ಶಾಸಕರು ಖುದ್ದು ಹಾಜರಾಗಬೇಕು. ಕೆಲವೊಂದು ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಬೇಕಾಗಿರುವ ಕಾರಣ ಒಂದೇ ರಾತ್ರಿಯಲ್ಲಿ ವಿಚಾರಣೆ ಮುಗಿಸಲು ಸಾಧ್ಯವಿಲ್ಲ. ಅನರ್ಹತೆಯಿಂದ ತಪ್ಪಿಸಿಕೊಳ್ಳಲು ಶಾಸಕರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ. ಸ್ಪೀಕರ್ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಜುಲೈ 11ರಂದು 15 ಶಾಸಕರಲ್ಲಿ 11 ಮಂದಿ ಖುದ್ದು ಹಾಜರಾಗಿ ರಾಜೀನಾಮೆ ನೀಡಿದ್ದಾರೆ. ಉಳಿದ ನಾಲ್ವರು ಇದೂವರೆಗೂ ಬಂದಿಲ್ಲ.
#KarnatakaPoliticalCrisis: Singhvi reiterating that all resignations happened only on July 11 and all disqualification proceedings pre-date resignations.
ಆರಂಭದಲ್ಲಿ ಶಾಸಕರು ಸಲ್ಲಿಸಿದ್ದ ರಾಜೀನಾಮೆ ಕ್ರಮಬದ್ಧವಾಗಿರಲಿಲ್ಲ. ತದನಂತರ ಸಲ್ಲಿಸಿದ ರಾಜೀನಾಮೆ ಕ್ರಮಬದ್ಧವಾಗಿದೆ. ಫೆಬ್ರವರಿಯಲ್ಲಿ ಇಬ್ಬರು ಶಾಸಕರ ಅನರ್ಹತೆ ವಿಚಾರಣೆ ಪ್ರಕ್ರಿಯೆ ಶುರುವಾಗಿದೆ. ಜುಲೈ 6ರಂದು ಶಾಸಕರು ರಾಜೀನಾಮೆ ನೀಡಲು ಹೋದಾಗ ಸ್ಪೀಕರ್ ಕಚೇರಿಯಲ್ಲಿ ಇರಲಿಲ್ಲ. ಶಾಸಕರು ಮೊದಲು ಸ್ಪೀಕರ್ ಬಳಿ ಸಮಯ ಕೇಳಿರಲಿಲ್ಲ. ಅನರ್ಹತೆ ಪ್ರಕರಣ ವಿಚಾರಣೆ ಹಂತದಲ್ಲಿರುವಾಗ ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಹಲವು ಅನರ್ಹತೆ ಪ್ರಕರಣಗಳನ್ನು ಪರಿಶೀಲಿಸಿ ತೀರ್ಪು ನೀಡಬೇಕಿದೆ. ಹಾಗಾಗಿ ತಡವಾಗ್ತಿದೆ. ನಾನು ಬಹಳ ಗಟ್ಟಿಯಾಗಿ ಶಾಸಕರು ಅನರ್ಹರಾಗುತ್ತಾರೆಂದು ಹೇಳುತ್ತೇನೆ. ಇವತ್ತಲ್ಲ ನಾಳೆ ಅನರ್ಹತೆ ಆಗಲೇಬೇಕು. ಅನರ್ಹತೆ ತಪ್ಪಿಸಿಕೊಳ್ಳಲು ರಾಜೀನಾಮೆ ಮಾರ್ಗ ಆಗಬಾರದು. ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣವನ್ನು ಸ್ಪೀಕರ್ ಇತ್ಯರ್ಥ ಮಾಡುತ್ತಾರೆ. ಶುಕ್ರವಾರ ನೀಡಿದ್ದ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡರು.
#KarnatakaPolitics: Dr. Singhvi places reliance on Kihoto Hollohan and asks, 'whether all of it should be ignored'.
ಶಾಸಕರ ರಾಜೀನಾಮೆ ಅಂಗೀಕರಿಸುವಂತೆ ಗಡುವು ನೀಡುವಂತಿಲ್ಲ. ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವಂತಿಲ್ಲ. 2018 ಮೇ ತಿಂಗಳಲ್ಲಿ ಸರ್ಕಾರ ರಚನೆಯಾದಾಗ ಸ್ಪೀಕರ್ ಗೆ ಸುಪ್ರೀಂ ಯಾವುದೇ ನಿರ್ದೇಶನ ನೀಡಿರಲಿಲ್ಲ. ರಾಜೀನಾಮೆ ವಿಚಾರದಲ್ಲಿ ಬಿಜೆಪಿ ನಾಯಕರ ಪಾತ್ರ ಇದೆ. ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್, ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ್ ಹೆಸರನ್ನು ಪ್ರಸ್ತಾಪಿಸಿ, ರಾಜೀನಾಮೆ ನೀಡಿರುವ ಶಾಸಕರು ಬಿಜೆಪಿ ನಾಯಕರೊಂದಿಗೆ ಒಡನಾಟ ಹೊಂದಿದ್ದಾರೆ ಎಂದು ಸಿಂಘ್ವಿ ವಾದಿಸಿದರು.
ಸಿಜೆಐ ಪ್ರಶ್ನೆ:
ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ತಡವಾಗಲು ಕಾರಣವೇನು? ರಾಜೀನಾಮೆಯನ್ನು ಸರ್ಕಾರ ತಡೆಯುತ್ತಿದ್ಯಾ? ಮೊದಲು ರಾಜೀನಾಮೆ ಇತ್ಯರ್ಥಪಡಿಸಿ ನಂತರ ಅನರ್ಹತೆಯನ್ನು ತೆಗೆದುಕೊಳ್ಳಿ ಎಂದು ನಮ್ಮ ಕಾರ್ಯವ್ಯಾಪ್ತಿಯನ್ನು ಪ್ರಶ್ನೆ ಮಾಡಬೇಡಿ ಎಂದು ಸಿಜೆಐ ಪ್ರಶ್ನೆ ಮಾಡಿದರು. ಈ ಹಿಂದೆ 24 ಗಂಟೆಯ ಒಳಗಡೆ ವಿಶ್ವಾಸ ಮತಯಾಚನೆ ನಡೆಸಲು ಸೂಚನೆ ನೀಡಿ ಎಂದು ನಾವು ರಾಜ್ಯಪಾಲರಿಗೆ ನೀಡಿದ ಆದೇಶವನ್ನು ನೀವು ಒಪ್ಪಿಕೊಂಡಿದ್ದರೆ ಈಗ ಯಾಕೆ ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಪ್ರಶ್ನೆ ಮಾಡಿದರು.
#KarnatakaPoliticalCrisis: CJI Gogoi asks about Speaker being unavailable for an appointment and eventually MLAs having to come to court.@DrAMSinghvi says that it is factually wrong and Speaker has filed an affidavit to that effect that an appointment was not sought.
ಬೆಳಗ್ಗೆ 10.52ಕ್ಕೆ ವಿಚಾರಣೆ ಆರಂಭಗೊಂಡಿದ್ದು, ಮೊದಲು ರಾಜೀನಾಮೆ ಸಲ್ಲಿಸಿದ ಶಾಸಕರ ಪರವಾಗಿ ಮುಕುಲ್ ರೋಹಟಗಿ ವಾದ ಮಂಡಿಸಿದರು. ಇದಾದ ಬಳಿಕ ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ದೀರ್ಘ ವಿಚಾರಣೆ ನಡೆಸಿದ ಪೀಠ ಭೋಜನ ವಿರಾಮದ ನಂತರವೂ ವಾದವನ್ನು ಆಲಿಸಲಿದೆ.
ಬೆಂಗಳೂರು: ಶುಕ್ರವಾರದಿಂದ ಅಧಿವೇಶನ ಆರಂಭವಾಗಲಿದ್ದು ದೋಸ್ತಿ ಸರ್ಕಾರದ ಎಲ್ಲ ಶಾಸಕರಿಗೆ ವಿಪ್ ಜಾರಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.
15ನೇ ವಿಧಾನಸಭೆಯ 4ನೇ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿದೆ. ಅಲ್ಲದೇ ಗೈರು ಹಾಜರಾದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸಂವಿಧಾನದ ಅನುಚ್ಛೇದ-10 (ಪಕ್ಷಾಂತರ ನಿಷೇಧ ಕಾಯ್ದೆ)ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖಿಸಲಾಗಿದೆ.
ಅತೃಪ್ತ ಶಾಸಕರು ಇಂದು ಸಂಜೆಯಷ್ಟೇ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಲಾಗಿದ್ದು, ಸ್ಪೀಕರ್ ಅವರು ರಾಜೀನಾಮೆ ಸ್ವೀಕರಿಸಿದ್ದಾರೆ. ಆದರೆ ಸದ್ಯ ವಿಪ್ ಜಾರಿ ಆಗಿರುವುದರಿಂದ ಯಾವ ರೀತಿ ವಿಪ್ ನೀಡುತ್ತಾರೆ ಹಾಗೂ ಅತೃಪ್ತ ಶಾಸಕರು ಸದನಕ್ಕೆ ಗೈರಾದರೆ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.
ಪಕ್ಷಾಂತರ ಕಾಯ್ದೆ ಏನು ಹೇಳುತ್ತೆ?
ಪಕ್ಷಾಂತರ ನಿಷೇಧ ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಬಹುದು. ಆಗ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ. ಅನರ್ಹ ಶಾಸಕರು ವಿಧಾನಸಭೆ ಅವಧಿ ಮುಗಿಯುವವರೆಗೆ ಬೇರೆ ಪಕ್ಷಕ್ಕೆ ಸೇರುವಂತಿಲ್ಲ. ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೂ ಉಪ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ. ಅನರ್ಹಗೊಂಡ ಶಾಸಕರು ಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದುವಂತಿಲ್ಲ.
ಅನರ್ಹಗೊಂಡ ದಿನದಿಂದ ಅವರ ಶಾಸಕತ್ವ ಅವಧಿ ಯಾವಾಗ ಮುಗಿಯುತ್ತೋ ಅಲ್ಲಿವರೆಗೆ ಹುದ್ದೆಗಳನ್ನ ಹೊಂದುವಂತಿಲ್ಲ. ಪಕ್ಷದ ಒಟ್ಟು ಶಾಸಕರಲ್ಲಿ 2/3ರಷ್ಟು ಶಾಸಕರು ಗುಂಪಾಗಿ ಪಕ್ಷಾಂತರ ಮಾಡಿದರಷ್ಟೇ ಅನರ್ಹತೆ ಅನ್ವಯಿಸುವುದಿಲ್ಲ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಕೈಯಲ್ಲಿದ್ದು, ಅನರ್ಹತೆ ಪ್ರಶ್ನಿಸಿ ಸ್ಪೀಕರ್ ಅವರಿಗೂ ಮನವಿ, ಕಾನೂನು ಹೋರಾಟವನ್ನೂ ಮಾಡಬಹುದು.
ವಿಪ್ ಅನ್ವಯವಾಗುತ್ತಾ?
ರಾಜೀನಾಮೆ ಅಂಗೀಕಾರವಾಗದ ಶಾಸಕರಿಗೆ ವಿಪ್ ಅನ್ವಯವಾಗುತ್ತದೋ ಇಲ್ಲವೋ ಎನ್ನುವುದು ಇನ್ನು ಗೊಂದಲದಲ್ಲಿದೆ. ರಾಜೀನಾಮೆ ಅಂಗೀಕಾರವಾಗುವವರೆಗೂ ವಿಪ್ ಅನ್ವಯವವಾಗುತ್ತದೆ ಎಂದು ಕೆಲ ಕಾನೂನು ಪಂಡಿತರು ಹೇಳಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ರಾಜೀನಾಮೆಯನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ನಾವು ರಾಜೀನಾಮೆಯನ್ನು ನೀಡಿದ್ದರೂ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡಲು ತಡ ಮಾಡುತ್ತಿದ್ದಾರೆ ಎಂದು ಅತೃಪ್ತ ಶಾಸಕರು ದೂರು ನೀಡಿದ್ದಾರೆ. ಹೀಗಾಗಿ ಈ ಅರ್ಜಿಯ ವಿಚಾರಣೆ ಶುಕ್ರವಾರ ನ್ಯಾಯಾಲಯದಲ್ಲಿ ಬರುವ ಕಾರಣ ಏನು ನಡೆಯಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.
ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ.
ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರು ವಿಪ್ನಲ್ಲಿ ಜಾರಿಗೊಳಿಸಿದ್ದಾರೆ.
ಈ ಮೂಲಕ ಹಣಕಾಸು ವಿಧೇಯಕ ಮಂಡನೆ ವೇಳೆ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ಅತೃಪ್ತ ಶಾಸಕರು ಕಲಾಪಕ್ಕೆ ಹಾಜರಾಗದೇ ದೂರ ಉಳಿಯುತ್ತಿದ್ದಾರೆ. ಇದನ್ನೆ ಅಸ್ತ್ರವಾಗಿ ಪ್ರಯೋಗಿಸಿ ಹಣಕಾಸು ವಿಧೇಯಕಕ್ಕೆ ಬೆಂಬಲ ಸಿಗದಂತೆ ನೋಡಿಕೊಳ್ಳಲು ಬಿಜೆಪಿಯಿಂದ ಸಿದ್ಧತೆ ನಡೆದಿದೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆಪರೇಷನ್ ಕಮಲ ಆಡಿಯೋ ಪ್ರಕರಣ ವಿಚಾರಣೆಯ ಕುರಿತು ಕಲಾಪದಲ್ಲಿ ಇಂದು ಆಡಳಿತ ಪಕ್ಷ ಹಾಗೂ ವಿಪಕ್ಷದ ಶಾಸಕರ ಮಧ್ಯೆ ವಾಗ್ದಾಳಿಯೇ ನಡೆಯಿತು. ಹೀಗಾಗಿ ಸದನವು ಸಂಜೆ 6.45ರವರೆಗೆ ನಡೆಯಬೇಕಾಯಿತು. ಆದರೂ ತನಿಖೆಯನ್ನು ಎಸ್ಐಟಿಗೆ ಒಪ್ಪಿಸಬೇಕೋ? ಅಥವಾ ಸದನ ಸಮಿತಿಗೆ ನೀಡಬೇಕು ಎನ್ನುವುದು ನಿರ್ಧಾರವಾಗಲಿಲ್ಲ. ಇದರಿಂದಾಗಿ ಕಲಾಪವನ್ನು ಬುಧವಾರ ಬೆಳಗ್ಗೆ 10.30ಕ್ಕೆ ಮುಂದೂಡಿದರು.