Tag: white house

  • ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    – ಭಯೋತ್ಪಾದನೆ ತಡೆಗೆ ಪಾಕ್‌ನಲ್ಲಿ ಸ್ಥಾಪನೆಯಾಗಲಿದೆಯಂತೆ ಸ್ಪೆಷಲ್‌ ಕಮಾಂಡ್‌
    – ಅಮೆರಿಕ-ಪಾಕ್‌ ನಡುವೆ ದ್ವಿಪಕ್ಷೀಪ ಒಪ್ಪಂದ

    ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif), ಫೀಲ್ಡ್‌ ಮಾರ್ಷಲ್‌ ಅಸೀಮ್‌ ಮುನೀರ್‌ ಶ್ವೇತಭವನದ ಓವಲ್‌ ಕಚೇರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

    ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಭಾಗಿಯಾಗಲು ಅಮೆರಿಕ ಪ್ರವಾಸದಲ್ಲಿರುವ ಷರೀಫ್ ಅವರಿಂದು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನವೇ ಸೇನಾ ಮುಖಸ್ಥರೊಟ್ಟಿಗೆ ಟ್ರಂಪ್‌ ಅವರನ್ನ ಭೇಟಿಯಾಗಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಭದ್ರತೆ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಅನೇಕ ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಭಯೋತ್ಪಾದನೆ ನಿಗ್ರಹ ಒಪ್ಪಂದಕ್ಕೂ ಸಹಿ ಮಾಡಲಾಗಿದ್ದು, ಪರಸ್ಪರ ಸಹಕಾರದೊಂದಿಗೆ ಮುಂದುವರಿಯಲು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಉಪಸ್ಥಿತರಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

    ಉಭಯ ದೇಶಗಳ ಒಪ್ಪಂದಗಳು ಭದ್ರತೆ, ಆರ್ಥಿಕತೆ, ಕಾರ್ಯತಂತ್ರದ ಪಾಲುದಾರಿಕೆ, ಭಯೋತ್ಪಾದನಾ ನಿಗ್ರಹ ಹಾಗೂ ಪಾಕ್‌ನಲ್ಲಿ (Pakistan) ಖನಿಜ ಸಂಪತ್ತಿನ ಶೋಧನೆ ತೈಲ ಪರಿಶೋಧನೆಯನ್ನು ಕೇಂದ್ರೀಕರಿಸಿತ್ತು. ಜೊತೆಗೆ ಬಾಗ್ರಾಮ್‌ ವಾಯುನೆಲೆ ಹಾಗೂ ಆ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಪಾಕ್‌ನಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪನೆ
    ಪಹಲ್ಗಾಮ್‌ ಉಗ್ರರಿಗೆ ಕುಮ್ಮಕ್ಕು ನೀಡಿದ್ದ ಪಾಕಿಸ್ತಾನ ಇದೀಗ ಅಮೆರಿಕದೊಟ್ಟಿಗೆ ಭಯೋತ್ಪಾದನೆ ನಿಗ್ರಹ ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಪಾಕಿಸ್ತಾನದಲ್ಲಿ ಜಂಟಿ ಭಯೋತ್ಪಾದನಾ ನಿಗ್ರಹ ಘಟಕ ಸ್ಥಾಪಿಸುವ ನಿರ್ಧಾರವನ್ನೂ ಕೈಗೊಂಡಿದೆ. ‌ಇದೇ ವೇಳೆ ಟ್ರಂಪ್‌ ಅಫ್ಘಾನ್‌ನಿಂದ ಬರುತ್ತಿರುವ ಉಗ್ರ ಬೆದರಿಕೆಗಳನ್ನು ಪರಿಹರಿಸುವುದಾಗಿ ಟ್ರಂಪ್‌ ಪಾಕ್‌ ಪ್ರಧಾನಿ, ಅಸಿಮ್‌ ಮುನೀರ್‌ಗೆ ಭರವಸೆ ನೀಡಿದ್ದಾರೆ.

    ಇನ್ನೂ ಸಭೆಯ ಬಳಿಕ ಮಾತನಾಡಿದ ಟ್ರಂಪ್‌, ಭಾರತ ಪಾಕಿಸ್ತಾನ ನಡುವಿನ ಭೀಕರ ಯುದ್ಧ ನಿಲ್ಲಿಸಿದ್ದು ನಾನೇ ಅಂತ ಬಾಯಿ ಬಡಿದುಕೊಂಡಿದ್ದಾರೆ. ಇದನ್ನೂ ಓದಿ: ಭಾರತ ನಮ್ಮ ಶಿಬಿರವನ್ನ ನಾಶಮಾಡಿದೆ – ಜೈಶ್ ಬಳಿಕ ಆಪರೇಷನ್ ಸಿಂಧೂರ ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ

    ಕದನ ವಿರಾಮ ಹೇಳಿಕೆಗೆ ಪಾಕ್ ಪ್ರಧಾನಿ ಪ್ರತಿಧ್ವನಿ
    ಟ್ರಂಪ್‌ ಭೇಟಿ ಬಳಿಕ ಮಾತನಾಡಿದ ಷರೀಫ್‌, ಕದನ ವಿರಾಮ ಉಲ್ಲೇಖಿಸಿ ಟ್ರಂಪ್‌ ಅವರನ್ನ ಶ್ಲಾಘಿಸಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ದಿಟ್ಟತನ ಮತ್ತು ನಿರ್ಣಾಯಕ ನಾಯಕತ್ವ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಅನುಕೂಲ ಮಾಡಿಕೊಟ್ಟಿತು. ಅಲ್ಲದೇ ಗಾಜಾದಲ್ಲಿನ ಸಂಘರ್ಷ ಕೊನೆಗೊಳಿಸಲು ಹಾಗೂ ಮಧ್ಯಪ್ರಾಚ್ಯದಲ್ಲಿ ಶಾಂತಿ ಪುನಸ್ಥಾಪಿಸುವ ನಿರ್ಧಾರ ಕೈಗೊಂಡಿರುವುದು ಶ್ಲಾಘನೀಯ ಎಂದು ಟ್ರಂಪ್‌ ಪರ ಹಾಡಿಹೊಗಳಿದರು.

  • ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ನೆತನ್ಯಾಹು-ಟ್ರಂಪ್‌ ಫಸ್ಟ್‌ ಮೀಟ್‌ – ಜು.7ರಂದು ವೈಟ್‌ಹೌಸ್‌ನಲ್ಲಿ ಮಹತ್ವದ ಭೇಟಿ

    ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ನೆತನ್ಯಾಹು-ಟ್ರಂಪ್‌ ಫಸ್ಟ್‌ ಮೀಟ್‌ – ಜು.7ರಂದು ವೈಟ್‌ಹೌಸ್‌ನಲ್ಲಿ ಮಹತ್ವದ ಭೇಟಿ

    ವಾಷಿಂಗ್ಟನ್‌: ಇರಾನ್‌-ಇಸ್ರೇಲ್‌ ಯುದ್ಧದ ಬಳಿಕ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮೊದಲ ಬಾರಿಗೆ ಮುಖಾಮುಖಿಯಾಗಲಿದ್ದಾರೆ. ಜು.7ರಂದು (ಸೋಮವಾರ) ಶ್ವೇತಭವನದಲ್ಲಿ ನೆತನ್ಯಾಹು ಟ್ರಂಪ್‌ ಅವರನ್ನು ಭೇಟಿ ಮಾಡಲಿದ್ದಾರೆ.

    ಭೇಟಿ ವೇಳೆ ಗಾಜಾ ಪಟ್ಟಿಯಲ್ಲಿ (Gaza Strip) ಕದನ ವಿರಾಮ, ಇರಾನ್‌ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಮಹತ್ವದ ಪಾತ್ರ ವಹಿಸಲಿದೆ ಎಂದು ತಜ್ಞರು ಅಂದಾಜಿಸಿರುವುದಾಗಿ ವರದಿಗಳು ತಿಳಿಸಿವೆ.

    ಇಸ್ರೇಲ್‌-ಇರಾನ್‌ ನಡುವಿನ ಕದನ ವಿರಾಮದ ಬಳಿಕ ಟ್ರಂಪ್‌ ಗಾಜಾ ಪಟ್ಟಿಯಲ್ಲಿ ಕದನ ವಿರಾಮಕ್ಕೆ ಆದ್ಯತೆ ನೀಡುತ್ತಿದ್ದಾರೆ. ಹೀಗಾಗಿ ಶ್ವೇತಭವನದ (White House) ಸಭೆಯಲ್ಲಿ ಉಭಯ ನಾಯಕರ ನಡುವಿನ ಪ್ರಮುಖ ಚರ್ಚಾ ವಿಷಯ ಇದೇ ಆಗಿರಲಿದೆ ಎಂದು ಸೆಂಟರ್ ಫಾರ್ ಸ್ಟ್ರಾಟೆಜಿಕ್ ಅಂಡ್ ಇಂಟರ್ನ್ಯಾಷನಲ್ ಸ್ಟಡೀಸ್ (CSIS) ನ ಹಿರಿಯ ಸಲಹೆಗಾರ್ತಿ ಮೋನಾ ಯಾಕೌಬಿಯನ್ ಹೇಳಿದ್ದಾರೆ.

    ಅಲ್ಲದೇ ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ಹಮಾಸ್‌ ಕೂಡ ಸಹಮತ ಸೂಚಿಸಿದೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಮಾತುಕತೆಗೆ ಸಿದ್ಧವಿರುವುದಾಗಿ ಹಮಾಸ್‌ ಹೇಳಿದೆ ಎಂದು ತಿಳಿಸಿದ್ದಾರೆ.

    ಇರಾನ್‌ ಬಗ್ಗೆಯೂ ಮಹತ್ವದ ಚರ್ಚೆ
    ಮುಂದುವರಿದು ಮಾತನಾಡಿರುವ ಯಾಕೌಬಿಯನ್, ಟ್ರಂಪ್‌ ಮತ್ತು ನೆತನ್ಯಾಹು ಇರಾನ್‌ ಬಗೆಗೆ ಒಂದೇ ರೀತಿಯ ಅಭಿಪ್ರಾಯ ಹೊಂದಿದ್ದಾರೆ. ಇತ್ತೀಚೆಗೆ ಇರಾನ್‌ ಮೇಲಿನ ಜಂಟಿ ಮಿಲಿಟರಿ ಕಾರ್ಯಾಚರಣೆ ಇದಕ್ಕೆ ನಿದರ್ಶನವಾಗಿದೆ. ಹೀಗಾಗಿ ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ಉಭಯ ನಾಯಕರು ಒಗ್ಗಟಿನ ನಿಲುವು ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

  • ಭಾರತದ ಜೊತೆ ಶೀಘ್ರವೇ ಬಿಗ್‌ ಟ್ರೇಡ್‌ ಡೀಲ್‌ – ಟ್ರಂಪ್‌ ಘೋಷಣೆ

    ಭಾರತದ ಜೊತೆ ಶೀಘ್ರವೇ ಬಿಗ್‌ ಟ್ರೇಡ್‌ ಡೀಲ್‌ – ಟ್ರಂಪ್‌ ಘೋಷಣೆ

    ವಾಷಿಂಗ್ಟನ್‌: ಭಾರತದ (India) ಜೊತೆ ಶೀಘ್ರವೇ ಬಹಳ ದೊಡ್ಡ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ.

    ಭಾರತ ಮತ್ತು ಅಮೆರಿಕ (USA) ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ ಸಮಯದಲ್ಲೇ ಟ್ರಂಪ್‌ ಅವರು ಶ್ವೇತ ಭವನದಲ್ಲಿ ನಡೆದ ಬಿಗ್ ಬ್ಯೂಟಿಫುಲ್ ಕಾರ್ಯಕ್ರಮದಲ್ಲಿ ಭಾರತದ ಜೊತೆಗಿನ ಒಪ್ಪಂದ ಬಗ್ಗೆ ಮಾತನಾಡಿದರು.

    ಪ್ರತಿಯೊಬ್ಬರೂ ಒಪ್ಪಂದ ಮಾಡಿಕೊಳ್ಳಲು ಮತ್ತು ಅದರಲ್ಲಿ ಭಾಗವಹಿಸಲು ಬಯಸುತ್ತಾರೆ. ನಾವು ನಿನ್ನೆ ಚೀನಾದೊಂದಿಗೆ ಸಹಿ ಹಾಕಿದ್ದೇವೆ. ನಾವು ಕೆಲವು ಉತ್ತಮ ಒಪ್ಪಂದಗಳನ್ನು ಹೊಂದಿದ್ದೇವೆ. ಬಹುಶಃ ಭಾರತದೊಂದಿಗೆ ಬಹಳ ದೊಡ್ಡ ಒಪ್ಪಂದ ಮಾಡುತ್ತಿದ್ದೇವೆ. ಈ ವೇಳೆ ಅವರು ನಾವು ಎಲ್ಲರೊದಿಗೆ ಒಪ್ಪಂದ ಮಾಡಿಕೊಳ್ಳುವುದಿಲ್ಲ. ಕೆಲವರಿಗೆ ಮಾತ್ರ ಪತ್ರ ಕಳುಹಿಸುತ್ತೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಬಾಂಬ್‌ ದಾಳಿ ನಡೆದಿರೋದು ಸ್ಪಷ್ಟ – ನಮ್ಮಲ್ಲೇನು ಆಗೇ ಇಲ್ಲ ಎನ್ನುತ್ತಿದ್ದ ಇರಾನ್‌ಗೆ ವಿಡಿಯೋ ಸಮೇತ ಅಮೆರಿಕ ತಿರುಗೇಟು

    ಮೆಗಾ ವ್ಯಾಪಾರ ಒಪ್ಪಂದದ ಕುರಿತು ನಾಲ್ಕು ದಿನಗಳ ಮಾತುಕತೆ ವೇಳೆ ಎರಡೂ ದೇಶಗಳಲ್ಲಿ ಕೈಗಾರಿಕಾ ಮತ್ತು ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶ, ಸುಂಕ ಕಡಿತ ಮತ್ತು ಸುಂಕ ರಹಿತ ವ್ಯಾಪಾರದ ಬಗ್ಗೆ ಚರ್ಚೆ ನಡೆಸಲಾಗಿದೆ.

    ಮಾತುಕತೆ ವೇಳೆ ಎರಡು ದೇಶಗಳ ನಡುವೆ ಪ್ರಸ್ತುತ ಇರುವ 190 ಬಿಲಿಯನ್ ಡಾಲರ್‌ ವಾರ್ಷಿಕ ದ್ವಿಪಕ್ಷೀಯ ವ್ಯಾಪಾರವನ್ನು 2023ರ ವೇಳೆಗೆ 500 ಬಿಲಿಯನ್ ಡಾಲರ್‌ಗೆ ಕೊಂಡೊಯ್ಯುವ ಗುರಿಯನ್ನು ಹಾಕಲಾಗಿದೆ.

    ಚೀನಾದ ಜೊತೆ ಅಮೆರಿಕದ ವ್ಯಾಪಾರ ಒಪ್ಪಂದದ ವಿವರ ಲಭ್ಯವಾಗದೇ ಇದ್ದರೂ ಅಪರೂಪದ ಭೂ ಖನಿಜ ರಫ್ತನ್ನು ತ್ವರಿತಗೊಳಿಸಲು ಈ ಒಪ್ಪಂದ ಗಮನಹರಿಸಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

  • ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

    ಇರಾನ್‌ ಮೇಲೆ ಅಮೆರಿಕ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ – ಟ್ರಂಪ್ ಮುಜುಗರಕ್ಕೆ ಕಾರಣವಾದ ಗುಪ್ತಚರ ವರದಿ

    ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ (Donald Trump) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮುಜುಗರವಾಗಿದೆ. ಇರಾನ್ ಮೇಲೆ ದಾಳಿ ನಡೆಸಿದ ಅಮೆರಿಕ ಸೇನೆ ಅಲ್ಲಿರುವ ಎಲ್ಲ ಪರಮಾಣು ಆಸ್ತಿಯನ್ನು ನಾಶ ಮಾಡಿರುವುದಾಗಿ ಟ್ರಂಪ್ ಹೇಳಿದ್ದರು. ಇದು ಇರಾನ್ (Iran) ಪರಮಾಣು ಕಾರ್ಯಕ್ರಮಕ್ಕೆ ದೊಡ್ಡ ಹಿನ್ನಡೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ, ಈ ನಡುವೆ ಬಂದಿರುವ ಗುಪ್ತಚರ ವರದಿಯೊಂದು ಟ್ರಂಪ್ ಅವರನ್ನು ಪೇಚಿಗೆ ಸಿಲುಕಿಸಿದೆ.

    Fordo Nuclear Facility

    ಗುಪ್ತಚರ ವರದಿಯ ಪ್ರಕಾರ, ಇರಾನ್ ದೇಶದ ಪರಮಾಣು ಕೇಂದ್ರಗಳ (Nuclear Sites) ಮೇಲೆ ಅಮೆರಿಕದ ದಾಳಿ ಸಂಪೂರ್ಣ ಯಶಸ್ವಿಯಾಗಿಲ್ಲ. ಬಿ2 ಬಾಂಬರ್ ದಾಳಿ ನಡೆಸಿದ್ದರೂ, ಅದರ ತೀವ್ರತೆ ಇರಾನ್ ದೇಶಕ್ಕೆ ನಷ್ಟವಾಗುವಂತದಲ್ಲ. ದಾಳಿ ನಡೆದಿದ್ದೇನೋ ಹೌದು, ಆದರೆ ಯಾವ ಉದ್ದೇಶಕ್ಕಾಗಿ ಅಮೆರಿಕ (America) ದಾಳಿಯನ್ನು ನಡೆಸಿತ್ತೋ ಅದು ಕೈಗೂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

    ಇದು ಇರಾನ್ ದೇಶದ ಪರಮಾಣು ಕಾರ್ಯಕ್ರಮಕ್ಕೆ ತಕ್ಕಮಟ್ಟಿನ ಹಿನ್ನಡೆ ಮಾತ್ರ ಎಂದು ವರದಿಯಲ್ಲಿ ಹೇಳಲಾಗಿದೆ. ಇರಾನ್‌ನಲ್ಲಿದ್ದ ಯುರೇನಿಯಂ ಸಂಗ್ರಹವನ್ನು ನಾಶ ಮಾಡವಲ್ಲೂ ಅಮೆರಿಕ ವೈಫಲ್ಯ ಕಂಡಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಇದು ಟ್ರಂಪ್ ಹೇಳಿಕೆಗೆ ತದ್ವಿರುದ್ಧವಾಗಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಶ್ವೇತಭವನ ಇದೊಂದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಈ ವರದಿಯನ್ನು ತಳ್ಳಿಹಾಕಿದೆ. ಇದನ್ನೂ ಓದಿ: ಅಭಿನಂದನ್‌ ವರ್ಧಮಾನ್‌ ಸೆರೆಹಿಡಿದಿದ್ದವ ಎನ್‌ಕೌಂಟರ್‌ನಲ್ಲಿ ಹತ್ಯೆ

    ಇಸ್ರೇಲ್ ಇರಾನ್ ಉಭಯ ದೇಶಗಳ ಸಂಘರ್ಷದಲ್ಲಿ ಅಮೆರಿಕ ಸೇನೆ ನೇರವಾಗಿ ಮಧ್ಯಪ್ರವೇಶಿಸುವ ಮೂಲಕ ಇರಾನ್ ಮೂರು ಅಣುಸ್ಥಾವರಗಳ ಮೇಲೆ ದಾಳಿ ನಡೆಸಿತ್ತು. ಆದರೆ ಯುದ್ದಕ್ಕೂ ಮೊದಲು ಇರಾನ್ ಬಳಿ ಇದ್ದ 400 ಕೆಜಿಯಷ್ಟು ಯುರೇನಿಯಂ ನಾಪತ್ತೆಯಾಗಿರುವುದಾಗಿ ಅಮೆರಿಕ ಉಪಾಧ್ಯಕ್ಷ ಜೆ.ಡಿ.ವಾನ್ಸ್ ತಿಳಿಸಿದ್ದಾರೆ. ಇದನ್ನೂ ಓದಿ: 3,000 ವಾಹನಗಳನ್ನು ಹೊತ್ತೊಯ್ಯುತ್ತಿದ್ದ ಕಾರ್ಗೋ ಶಿಪ್ ಪೆಸಿಫಿಕ್ ಸಾಗರದಲ್ಲಿ ಮುಳುಗಡೆ

    Iran Nuclear Sites

    ಅಮೆರಿಕದ ಎಬಿಸಿ ನ್ಯೂಸ್ ಜೊತೆಗೆ ಮಾತನಾಡಿರುವ ವಾನ್ಸ್, ಕಳೆದ ವಾರ ಇರಾನ್‌ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ 6 ಬಂಕರ್ ಬಸ್ಟರ್‌ಗಳಿಂದ ದಾಳಿ ನಡೆಸುವ ಮುನ್ನವೇ ಸುಮಾರು 10 ಅಣ್ವಸ್ತ್ರಗಳನ್ನು ತಯಾರಿಸಬಲ್ಲಷ್ಟು 400 ಕೆಜಿ ಯುರೇನಿಯಂ ಅನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು ಎಂದು ವಿವರಿಸಿದ್ದಾರೆ. ಈ ನಡುವೆ ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ) ಜೊತೆಗಿನ ಸಹಕಾರವನ್ನು ಸ್ಥಗಿತಗೊಳಿಸುವ ಮಸೂದೆಯನ್ನು ಇರಾನ್ ಸಂಸತ್ತು ಅನುಮೋದಿಸಿದೆ. ಈ ಬಗ್ಗೆ ಸಮಿತಿಯ ವಕ್ತಾರ ಇಬ್ರಾಹಿಂ ರೆಜೈ ಮಾಹಿತಿ ನೀಡಿದ್ದು, ಹೊಸ ಮಸೂದೆಯ ಪ್ರಕಾರ, ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸುವುದು, ತಪಾಸಣೆಗೆ ಅವಕಾಶ ನೀಡುವುದು ಮತ್ತು ಐಎಇಎಗೆ ವರದಿಗಳನ್ನು ಸಲ್ಲಿಸುವುದು ಪರಮಾಣು ಸೌಲಭ್ಯಗಳ ಸುರಕ್ಷತೆಯನ್ನು ಖಾತರಿಪಡಿಸುವವರೆಗೆ ಸ್ಥಗಿತಗೊಳಿಸಲಾಗುತ್ತದೆ. ಆದರೆ, ಈ ನಿಟ್ಟಿನಲ್ಲಿ ಸಂಸತ್ತು ಇನ್ನೂ ಪೂರ್ಣ ಅಧಿವೇಶನದಲ್ಲಿ ಮಸೂದೆಯನ್ನು ಅನುಮೋದಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

    ಐಎಇಎ ಕ್ಯಾಮೆರಾಗಳು ಮತ್ತು ತಪಾಸಣೆಗಳು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಮೇಲ್ವಿಚಾರಣೆ ಮಾಡುವ ಏಕೈಕ ವಿಶ್ವಾಸಾರ್ಹ ಮೂಲವಾಗಿದೆ. ಈಗ ಈ ಮಸೂದೆಯನ್ನು ಪರಿಚಯಿಸುವುದರೊಂದಿಗೆ, ಇರಾನ್ ಪಾರದರ್ಶಕತೆಯಿಂದ ಹಿಂದೆ ಸರಿಯುವತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.

  • ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

    ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

    – ಚೀನಾದ ಪ್ರತಿರೋಧಕ್ಕೆ ಮತ್ತೆ ಹೊಡೆತ ಕೊಟ್ಟ ಅಮೆರಿಕ

    ವಾಷಿಂಗ್ಟನ್‌/ಬೀಜಿಂಗ್‌: ಅಮೆರಿಕ-ಚೀನಾ (US-China) ನಡುವೆ ವಾಣಿಜ್ಯ ಸಮರ ಜೋರಾಗುತ್ತಿದೆ. ಈ ನಡುವೆ ಟ್ರಂಪ್‌ ಆಡಳಿತವು ಚೀನಾದ ಆಮದು ಸರಕುಗಳ ಮೇಲೆ ಶೇ.245 ರಷ್ಟು ಸುಂಕ (Tariffs) ವಿಧಿಸಿದೆ. ಶ್ವೇತಭವನದ ಫ್ಯಾಕ್ಟ್‌ ಶೀಟ್‌ನಿಂದ (White House Fact Sheet) ಈ ಮಾಹಿತಿ ಬಹಿರಂಗವಾಗಿದೆ.

    ಮಂಗಳವಾರ ಶ್ವೇತಭವನ ಬಿಡುಗಡೆ ಮಾಡಿದ ಫ್ಯಾಕ್ಟ್‌ ಶೀಟ್‌ ಪ್ರಕಾರ 245% ಸುಂಕ ನಿಗಧಿಪಡಿಸಿರುವುದು ಖಚಿತವಾಗಿದೆ. ಈ ಮೂಲಕ ಚೀನಾ (China) ಪ್ರತಿರೋಧಕ್ಕೆ ಅಮೆರಿಕ ದೊಡ್ಡ ಹೊಡೆತ ಕೊಟ್ಟಿದೆ. ಇದನ್ನೂ ಓದಿ: ವಾಹನ ಕಂಪನಿಗಳಿಗೆ ತಾತ್ಕಾಲಿಕ ವಿನಾಯತಿ – ಟ್ರಂಪ್‌ ಯೂಟರ್ನ್‌

    ವಿಶ್ವದ ಬಲಾಢ್ಯ ಆರ್ಥಿಕತೆ ಹೊಂದಿರುವ ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರ (Tariff War) ಜೋರಾಗುತ್ತಲೇ ಇದೆ. ಇತ್ತೀಚೆಗಷ್ಟೇ ಅಮೆರಿಕದ 145% ಪ್ರತಿಸುಂಕ ನೀತಿಗೆ ವಿರುದ್ಧವಾಗಿ ಚೀನಾ ಅಮೆರಿಕದ ವಸ್ತುಗಳಿಗೆ 125% ಸುಂಕ ವಿಧಿಸಿತ್ತು. ಅಲ್ಲದೇ ಒಂದು ದಿನದ ಹಿಂದೆಯಷ್ಟೇ ಸೆಮಿಕಂಡಕ್ಟರ್‌, ಐಟಿ ಉತ್ಪನ್ನಗಳಲ್ಲಿ ಬಳಕೆಯಾಗುವ ಅಪರೂಪದ ಲೋಹ ರಫ್ತಿಗೆ ನಿರ್ಬಂಧ ಹೇರಿತ್ತು. ಜೊತೆಗೆ ಅಮೆರಿಕದ ಬೋಯಿಂಗ್‌ ಕಂಪನಿಯ ವಿಮಾನ ಖರೀದಿ ನಿಲ್ಲಿಸುವಂತೆ ತನ್ನ ದೇಶದ ವಿಮಾನಯಾನ ಸಂಸ್ಥೆಗಳಿಗೆ ಆದೇಶ ನೀಡಿತ್ತು. ಇದಕ್ಕೆ ಪ್ರತೀಕಾರವಾಗಿ ಅಮೆರಿಕ ಚೀನಾದ ಆಮದು ವಸ್ತುಗಳ ಮೇಲಿನ ಸುಂಕವನ್ನು ಬರೋಬ್ಬರಿ 245%ಗೆ ಏರಿಕೆ ಮಾಡಿದೆ.

    ಅಮೆರಿಕದ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್, ಸುಂಕದ ವಿಷಯದಲ್ಲಿ ಚೀನಾ ತನ್ನ ಗಂಭೀರ ನಿಲುವನ್ನು ಪದೇ ಪದೇ ಹೇಳುತ್ತಲೇ ಇದೆ. ಸುಂಕದ ಸಮರವನ್ನು ಮೊದಲು ಪ್ರಾರಂಭಿಸಿದ್ದು ಅಮೆರಿಕ. ಚೀನಾ ತನ್ನ ಕಾನೂನುಬದ್ಧ ಹಕ್ಕುಗಳು, ಹಿತಾಸಕ್ತಿ ಕಾಪಾಡಲು ಅಗತ್ಯ ಪ್ರತಿಕ್ರಮಗಳನ್ನು ತೆಗೆದುಕೊಂಡಿದೆ ಅಷ್ಟೇ ಅಂತ ಹೇಳಿದ್ದಾರೆ. ಇದನ್ನೂ ಓದಿ: 30 ದಿನಗಳಿಗಿಂತ ಹೆಚ್ಚು ಕಾಲ ಇರುವ ವಿದೇಶಿ ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ

  • ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ವಾಷಿಂಗ್ಟನ್‌: ನೀವೇ ದೇಶವನ್ನು ತೊರೆಯಿರಿ ಅಥವಾ ಜೈಲು ಶಿಕ್ಷೆಯನ್ನು ಅನುಭವಿಸಿ ಎಂದು ಅಮೆರಿಕ (USA) ವಿದೇಶಿ ಉಗ್ರರಿಗೆ ಎಚ್ಚರಿಕೆ ನೀಡಿದೆ.

    ಟ್ರಂಪ್ (Donald Trump) ಆಡಳಿತವು ಏಲಿಯನ್ ಎನಿಮೀಸ್ ಆಕ್ಟ್ (AEA) ಬಳಸಿ ಗಡಿಪಾರು ಮಾಡುವುದನ್ನು ತಾತ್ಕಾಲಿಕವಾಗಿ ತಡೆಯುವ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಯುಎಸ್ ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದ ಬೆನ್ನಲ್ಲೇ ಶ್ವೇತ ಭವನ (White House) ವಿದೇಶಿ ಉಗ್ರರಿಗೆ ವಾರ್ನಿಂಗ್‌ ನೀಡಿದೆ.

    ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ (Karoline Leavitt) ಮಾತನಾಡಿ, ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತಕ್ಕೆ ಭಾರಿ ಕಾನೂನು ಜಯವನ್ನು ನೀಡಿದೆ. ಏಲಿಯನ್ ಎನಿಮೀಸ್ ಆಕ್ಟ್ ಅಡಿಯಲ್ಲಿ ವಿದೇಶಿ ಭಯೋತ್ಪಾದಕರನ್ನು ದೇಶದಿಂದ ಹೊರ ಹಾಕಲು ನಮಗೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ರಾಕ್ಷಸ, ಎಡಪಂಥೀಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ದೊಡ್ಡ ಹೊಡೆತ ಬಿದ್ದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ

    ಅಮೆರಿಕದಲ್ಲಿ ನೆಲೆಸಿರುವ ಉಗ್ರರು ಅವರಾಗಿಯೇ ದೇಶ ತೊರೆಯಬೇಕು. ಇಲ್ಲದಿದ್ದರೆ ಬಂಧಿಸಿ ಅವರ ದೇಶಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಕ್ಯಾರೋಲಿನ್ ಲೀವಿಟ್ ಕಟು ಪದಗಳಿಂದ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸತತ 2ನೇ ಬಾರಿ ರೆಪೋ ದರ ಕಡಿತ – ಇಳಿಕೆಯಾಗಲಿದೆ ಗೃಹ ಸಾಲ, ಇಎಂಐ

    ವೆನೆಜುವೆಲಾದ ಜನರನ್ನು ಗಡೀಪಾರು ಮಾಡಲು ಟ್ರಂಪ್ ಆಡಳಿತವು ಏಲಿಯನ್ ಎನಿಮೀಸ್ ಆಕ್ಟ್ (ಎಇಎ) ಬಳಸಿತ್ತು. ಆದರೆ ಜಿಲ್ಲಾ ನ್ಯಾಯಾಲಯ ಟ್ರಂಪ್‌ ಸರ್ಕಾರದ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿತ್ತು.

     

  • ರಂಜಾನ್‌ ಪ್ರಯುಕ್ತ ಶ್ವೇತಭವನದಲ್ಲಿ ಇಫ್ತಾರ್ ಕೂಟ – ಟ್ರಂಪ್ ವಿರುದ್ಧ ಅಮೆರಿಕನ್‌ ಮುಸ್ಲಿಮರ ಆಕ್ರೋಶ

    ರಂಜಾನ್‌ ಪ್ರಯುಕ್ತ ಶ್ವೇತಭವನದಲ್ಲಿ ಇಫ್ತಾರ್ ಕೂಟ – ಟ್ರಂಪ್ ವಿರುದ್ಧ ಅಮೆರಿಕನ್‌ ಮುಸ್ಲಿಮರ ಆಕ್ರೋಶ

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್‌ ಟ್ರಂಪ್‌ (Donald Trump) ಮೊದಲ ಬಾರಿಗೆ ರಂಜಾನ್‌ ಹಬ್ಬದ ಪ್ರಯುಕ್ತ ಇಫ್ತಾರ್‌ ಕೂಟ ಆಯೋಜಿಸಿದ್ದರು. ಆದ್ರೆ ಇಫ್ತಾರ್‌ ಕೂಟಗಳಲ್ಲಿ ಅಮೆರಿಕನ್‌ ಮುಸ್ಲಿಂ ಸಂಸದರು ಹಾಗೂ ಸಮುದಾಯದ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಟ್ರಂಪ್‌ ವಿರುದ್ಧ ಅಮೆರಿಕದ ಮುಸ್ಲಿಮರು (US Muslims) ಆಕ್ರೋಶ ಹೊರಹಾಕಿದ್ದಾರೆ.

    ಶ್ವೇತಭವನದಲ್ಲಿ ಇಫ್ತಾರ್‌ ಕೂಟ ಆಯೋಜಿಸಿದ್ದ ಟ್ರಂಪ್‌, ಇಸ್ಲಾಂ ಧರ್ಮದ ಪವಿತ್ರ ತಿಂಗಳು ರಂಜಾನ್ ಅನ್ನು ಆಚರಿಸುತ್ತಾ ಬಂದಿದ್ದೇವೆ. ಇದು ವಿಶ್ವದಾದ್ಯಂತ ಮುಸ್ಲಿಂ ಬಾಂಧವರಿಗೆ ಪುಣ್ಯ ಸಂಪಾದಿಸುವ ಮಾಸವಾಗಿದೆ. ಅದಕ್ಕಾಗಿ ವಿಶ್ವದ ಅತ್ಯುತ್ತಮ ಧರ್ಮಗಳಲ್ಲಿ ಒಂದಾಗಿರುವ ಮುಸ್ಲಿಂ ಧರ್ಮವನ್ನು ಗೌರವಿಸುತ್ತೇವೆ ಎಂದರಲ್ಲದೇ ಮುಸ್ಲಿಮರಿಗೆ ರಂಜಾನ್‌ ಪ್ರಯುಕ್ತ ಶುಭ ಕೋರಿದ್ದಾರೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸುವುದಕ್ಕೆ ಎರಡು ದಶಕಗಳ ಹಿಂದಿನ ಸಂಪ್ರದಾಯವಿದೆ. ಈ ಬಾರಿ ಆಯೋಜಿಸಿದ್ದ ಇಫ್ತಾರ್‌ ಕೂಟ ವಿವಾದಕ್ಕೆ ಕಾರಣವಾಗಿದೆ. ಕೂಟದಲ್ಲಿ ಅಮೆರಿಕನ್‌ ಮುಸ್ಲಿಂ ಸಂಸದರು, ಸಮುದಾಯಕ್ಕೆ ಸಂಬಂಧಿಸಿದ ಮುಖಂಡರನ್ನು ಆಹ್ವಾನಿಸಿಲ್ಲ. ಬದಲಾಗಿ ಮುಸ್ಲಿಂ ರಾಷ್ಟ್ರಗಳ ವಿದೇಶಿ ರಾಯಭಾರಿಗಳನ್ನು ಇಫ್ತಾರ್‌ ಕೂಟಕ್ಕೆ ಆಹ್ವಾನಿಸಲಾಗಿತ್ತು ಎಂದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ಇಲ್ಲಿನ ಮುಸ್ಲಿಂ ನಾಗರಿಕ ಹಕ್ಕುಗಳ ಗುಂಪುಗಳು ಶ್ವೇತಭವನದ ಎದುರು ಪ್ರತಿಭಟನೆ ನಡೆಸಿದ್ದು ತೀವ್ರ ಅಸಮಾಧಾನ ಹೊರಹಾಕಿವೆ. ಇದು ಟ್ರಂಪ್‌ ಅವರ ಬೂಟಾಟಿಕೆ. ಒಂದೆಡೆ ಮಸ್ಲಿಂ ದೇಶಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮತ್ತೊಂದೆಡೆ ಇಫ್ತಾರ್‌ ಕೂಟ ಆಯೋಜಿಸುತ್ತಾರೆ ಎಂದು ಕಿಡಿ ಕಾರಿವೆ. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್‌

    1996 ರಲ್ಲಿ ಅಂದಿನ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಅಧಿಕಾರಾವಧಿಯಲ್ಲಿ, ಶ್ವೇತಭವನದಲ್ಲಿ ಇಫ್ತಾರ್ ಕೂಟ ಪ್ರಾರಂಭಿಸಲಾಯಿತು, ಇದನ್ನು ನಂತರದ ಅಧ್ಯಕ್ಷರಾದ ಜಾರ್ಜ್ ಬುಷ್ ಮತ್ತು ಬರಾಕ್ ಒಬಾಮಾ ಕೂಡ ಮುಂದುವರಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಮುಸ್ಲಿಂ ಸಮುದಾಯದ ಗಣ್ಯರು ಹಾಗೂ ಮುಸ್ಲಿಂ ರಾಷ್ಟ್ರಗಳ ರಾಜತಾಂತ್ರಿಕರು ಮತ್ತು ಸೆನೆಟರ್‌ಗಳು ಭಾಗವಹಿಸುವುದು ಪದ್ಧತಿ. ಆದ್ರೆ ಟ್ರಂಪ್‌ ತಮ್ಮ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ 2017ರಲ್ಲಿ ಶ್ವೇತಭವನದ ಇಫ್ತಾರ್‌ ಕೂಟವನ್ನು ರದ್ದುಗೊಳಿಸಿದ್ದರು. ಇದೀಗ ಮತ್ತೆ ಆಯೋಜಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ

  • ಅಕ್ರಮ ವಲಸಿಗರ ಕೈಗೆ, ಕಾಲಿಗೆ ಸರಪಳಿ ಹಾಕಿ ದೇಶದಿಂದ ಹೊರದಬ್ಬುತ್ತಿದೆ ಅಮೆರಿಕ -ವಿಡಿಯೋ ನೋಡಿ

    ಅಕ್ರಮ ವಲಸಿಗರ ಕೈಗೆ, ಕಾಲಿಗೆ ಸರಪಳಿ ಹಾಕಿ ದೇಶದಿಂದ ಹೊರದಬ್ಬುತ್ತಿದೆ ಅಮೆರಿಕ -ವಿಡಿಯೋ ನೋಡಿ

    ವಾಷಿಂಗ್ಟನ್‌: ಟ್ರಂಪ್‌ (Donald Trump) ಸರ್ಕಾರ ಅಕ್ರಮ ವಲಸಿಗರ (Illegal Migrants) ಕೈಗೆ ಮತ್ತು ಕಾಲಿಗೆ ಸರಪಳಿ ತೊಡಿಸಿ ಅಮೆರಿಕದಿಂದ (USA) ಹೊರದಬ್ಬುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ.

    ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವನದ (White House) ಖಾತೆಯಿಂದಲೇ ವಿಡಿಯೋ ಬಿಡುಗಡೆ ಮಾಡುವ ಮೂಲಕ ಅಕ್ರಮ ವಲಸಿಗರಿಗೆ ಎಚ್ಚರಿಕೆ ನೀಡಿದೆ.

    ವಿಮಾನದಲ್ಲಿ ಗಡಿಪಾರು ಮಾಡುವ ಸಂದರ್ಭದಲ್ಲಿ ವಲಸಿಗರ ಮನಸ್ಥಿತಿ ಯಾವ ರೀತಿ ಇರುತ್ತದೆ ಎಂದು ಹೇಳಲು ಬರುವುದಿಲ್ಲ. ಉಳಿದವರ ಮೇಲೆ ಹಲ್ಲೆ ಅಥವಾ ವಿಮಾನದಲ್ಲೇ ಅಡ್ಡಾದಿಡ್ಡಿ ಓಡುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ವಲಸಿಗರ ಕೈಗೆ ಮತ್ತು ಕಾಲಿಗೆ ಸರಪಳಿ ತೊಡಿಸಿ ಗಡಿಪಾರು ಮಾಡಲಾಗುತ್ತಿದೆ.  ಇದನ್ನೂ ಓದಿ: ಭಾರತದ ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ದುಡ್ಡು ನೀಡಬೇಕು: ಟ್ರಂಪ್‌

    ಅಮೆರಿಕ ಚುನಾವಣೆಯಲ್ಲಿ ಟ್ರಂಪ್‌ ಅವರು ಅಕ್ರಮ ವಲಸಿಗರನ್ನು ದೇಶದಿಂದ ಹೊರದಬ್ಬುತ್ತೇವೆ. ದೇಶದಲ್ಲಿ ಅಪರಾಧ ಚಟುವಟಿಕೆ ಹೆಚ್ಚಾಗಲು ಅಕ್ರಮ ವಲಸಿಗರೇ ಕಾರಣ ಎಂದು ದೂರಿದ್ದರು.

     

  • ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು

    ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು

    ವಾಷಿಂಗ್ಟನ್‌: ನೂತನ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಅಮೆರಿಕದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಕ್ರಮ ವಲಸಿಗರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಅದರಂತೆ ಬೃಹತ್‌ ಕಾರ್ಯಾಚರಣೆಯೊಂದರಲ್ಲಿ 500ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು (Illegal Immigrants) ಬಂಧಿಸಿದ್ದು, ನೂರಾರು ಮಂದಿಯನ್ನ ಗಡಿಪಾರು ಮಾಡಲಾಗಿದೆ.

    ಈ ಕುರಿತು ಶ್ವೇತಭವನದ (White House) ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೀವಿಟ್ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯುಎಸ್‌ನ ಅಧಿಕಾರಿಗಳು ಸುಮಾರು 538 ಅಕ್ರಮ ವಲಸಿಗರನ್ನು ಬಂಧಿಸಿದ್ದು, ಮಿಲಿಟರಿ ವಿಮಾನಗಳನ್ನು ಬಳಸಿಕೊಂಡು ನೂರಾರು ಮಂದಿಯನ್ನ ಗಡಿಪಾರು (Deported) ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

    ಶಂಕಿತ ಭಯೋತ್ಪಾದಕರು, ಟ್ರೆನ್‌ ಡಿ ಅರಗುವಾ ಗ್ಯಾಂಗ್‌ನ ನಾಲ್ವರು ಸದಸ್ಯರು ಹಾಗೂ ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ಕೃತ್ಯ ಎಸಗಿ ಶಿಕ್ಷೆಗೊಳಾದವರು ಸೇರಿದಂತೆ 538 ಮಂದಿಯನ್ನು ಬಂಧಿಸಲಾಗಿದೆ. ಬಳಿಕ ಮಿಲಿಟರಿ ವಿಮಾನದ ಮೂಲಕ ನೂರಾರು ಮಂದಿಯನ್ನ ಗಡಿಪಾರು ಮಾಡಲಾಗಿದೆ. ಇದು ಅಮೆರಿಕದ ಇತಿಹಾಸದಲ್ಲೇ ಅತಿದೊಡ್ಡ ಗರಿಪಾರು ಕಾರ್ಯಾಚರಣೆ ಆಗಿದೆ. ಈ ಮೂಲಕ ಅಮೆರಿಕದ ನೂತನ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಬೀಗಿದ್ದಾರೆ.

    ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟ್ರಂಪ್‌ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದರು. ಈ ಪೈಕಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಆದೇಶವು ಪ್ರಮುಖವಾಗಿತ್ತು. ಇದರ ಭಾಗವಾಗಿ ಇಂದು ಮೊದಲ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ ಬೇಡಿಕೆ

    ಒಂದು ದಿನದ ಹಿಂದೆಯಷ್ಟೇ ಭಾರತದ ವಿದೇಶಾಂಗ ಸಚಿವ ಎಸ್‌.ಜೈಂಕರ್‌, ವಿದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಕ್ಯಾಪಿಟಲ್ ಭವನದ ಮೇಲೆ ದಾಳಿ ಮಾಡಿದ್ದ 1,600 ಮಂದಿಗೆ ಕ್ಷಮಾದಾನ – ಟ್ರಂಪ್ ನಿರ್ಧಾರಕ್ಕೆ ಖಂಡನೆ

  • ನಾಜಿ ಸಿದ್ಧಾಂತದ ಸರ್ಕಾರಕ್ಕಾಗಿ ಶ್ವೇತಭವನದ ಮೇಲೆ ದಾಳಿ – ಭಾರತೀಯ ಮೂಲದ ವ್ಯಕ್ತಿಗೆ 8 ವರ್ಷ ಜೈಲು

    ನಾಜಿ ಸಿದ್ಧಾಂತದ ಸರ್ಕಾರಕ್ಕಾಗಿ ಶ್ವೇತಭವನದ ಮೇಲೆ ದಾಳಿ – ಭಾರತೀಯ ಮೂಲದ ವ್ಯಕ್ತಿಗೆ 8 ವರ್ಷ ಜೈಲು

    ವಾಷಿಂಗ್ಟನ್: ಶ್ವೇತಭವನದ (White House) ಮೇಲೆ ದಾಳಿ ಮಾಡಲು ಯತ್ನಿಸಿದ ಆರೋಪದ ಮೇಲೆ ಗುರುವಾರ ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ (20) ಎಂಬಾತನಿಗೆ ಅಮೆರಿಕದ (America) ನ್ಯಾಯಾಲಯ (Court) 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

    2023 ರ ಮೇ 22 ರಂದು ಸಾಯಿ ವರ್ಷಿತ್‌ ಬಾಡಿಗೆ ಟ್ರಕ್ ಬಳಸಿ ಶ್ವೇತಭವನದ ಮೇಲೆ ದಾಳಿ ಮಾಡಲು ಯತ್ನಿಸಿದ್ದ. ಚುನಾಯಿತ ಅಮೇರಿಕನ್ ಸರ್ಕಾರವನ್ನು ಉರುಳಿಸಿ, ನಾಜಿ ಸಿದ್ಧಾಂತದ ಸರ್ವಾಧಿಕಾರವನ್ನು ಸ್ಥಾಪಿಸುವುದು ಈ ದಾಳಿಯ ಗುರಿಯಾಗಿದೆ. ಅಲ್ಲದೇ ಆತ ಸರ್ಕಾರಿ ಆಸ್ತಿಯನ್ನು ಉದ್ದೇಶಪೂರ್ವಕವಾಗಿ ಹಾನಿ ಮಾಡಿದ್ದ ಎಂದು ಆತನ ಮೇಲೆ ಆರೋಪಿಸಲಾಗಿತ್ತು. ಆತ 2024ರ ಮೇ 13 ರಂದು ತಪ್ಪೊಪ್ಪಿಕೊಂಡಿದ್ದ.

    ನ್ಯಾಯಾಲಯದ ದಾಖಲೆಗಳ ಪ್ರಕಾರ, 2023ರ ಮೇ 22 ರಂದು ಮಧ್ಯಾಹ್ನ ಮಿಸೌರಿಯ ಸೇಂಟ್ ಲೂಯಿಸ್‌ನಿಂದ ವಾಷಿಂಗ್ಟನ್ ಡಿ.ಸಿ.ಗೆ ವಾಣಿಜ್ಯ ವಿಮಾನದಲ್ಲಿ ವರ್ಷಿತ್ ಬಂದಿದ್ದ. ಅಲ್ಲಿ ಸಂಜೆ 6:30 ಕ್ಕೆ ಟ್ರಕ್ ಬಾಡಿಗೆಗೆ ಪಡೆದಿದ್ದ. ಅಲ್ಲಿಂದ ಶ್ವೇತಭವನದ ಬಳಿ ಹೋಗಿ ತಡೆಗೋಡೆಗೆ ಡಿಕ್ಕಿ ಹೊಡೆಸಿ ದಾಂಧಲೆ ನಡೆಸಿದ್ದ. ಕೂಡಲೇ ಆತನನ್ನು ಬಂಧಿಸಲಾಗಿತ್ತು.

    ಭಾರತದ ಚಂದನಗರದಲ್ಲಿ ವರ್ಷಿತ್ ಜನಿಸಿದ್ದ. ಆತ ಗ್ರೀನ್ ಕಾರ್ಡ್ ಹೊಂದಿರುವ ಯುಎಸ್‌ನ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿದ್ದ.