Tag: Wife

  • ಡಿವೋರ್ಸ್ ಕೊಡು ಇಲ್ಲದಿದ್ರೆ  ಅಶ್ಲೀಲ ವೀಡಿಯೋ ವೈರಲ್ ಮಾಡ್ತೀನಿ- ಪತ್ನಿಗೆ ಬ್ಲ್ಯಾಕ್‍ಮೇಲ್

    ಡಿವೋರ್ಸ್ ಕೊಡು ಇಲ್ಲದಿದ್ರೆ ಅಶ್ಲೀಲ ವೀಡಿಯೋ ವೈರಲ್ ಮಾಡ್ತೀನಿ- ಪತ್ನಿಗೆ ಬ್ಲ್ಯಾಕ್‍ಮೇಲ್

    ಬೆಳಗಾವಿ: ಜಿಲ್ಲೆಯಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳನ್ನ ವೀಡಿಯೋ ರೆಕಾರ್ಡ್ ಮಾಡಿ. ಮತ್ತೆ ಹೆಂಡತಿಗೆ ಗಂಡನೇ ಬ್ಲ್ಯಾಕ್ ಮೇಲ್ (Blackmail) ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.

    ಹೌದು. ಮತ್ತೊಂದು ಮದುವೆಗಾಗಿ ಹೆಂಡತಿಯಿಂದ ವಿಚ್ಛೇದನ ಪಡೆಯಲು ಬೆಳಗಾವಿ (Belagavi) ನಗರದ ನಿವಾಸಿ ಕಿರಣ್ ಪಾಟೀಲ್ ಎಂಬಾತ ಈ ರೀತಿ ಕೃತ್ಯ ಎಸಗಿದ್ದಾನೆ. ವಿಚ್ಛೇದನ (Divorce) ನೀಡು ಇಲ್ಲವಾದರೆ ಅಶ್ಲೀಲ ವೀಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಗಂಡನ ಮಾತನ್ನು ಕೇಳಿ ಹೆಂಡತಿ ಶಾಕ್‍ಗೆ ಒಳಗಾಗಿದ್ದಾರೆ. ಅಲ್ಲದೇ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದ್ರೂ ಯಾವುದೇ ಪ್ರಯೋಜನವಾಗಿಲ್ಲ.

    ಇತ್ತ ವಿಚ್ಛೇದನ ಕೋರಿ ಗಂಡ ಕಿರಣ್ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಇನ್ನು ಕೋರ್ಟಿಗೆ ಹೋದ ಬಳಿಕವೂ ಹೆಂಡತಿಗೆ ನಿರಂತರವಾಗಿ ಕಿರಣ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ದಿಕ್ಕೆ ತೋಚದಾದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ನೊಂದ ಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ಪ್ರಕರಣ ದಾಖಲಾದ ಬಳಿಕ ಠಾಣೆಗೆ ಕಿರಣ್ ಪಾಟೀಲ್ ನನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹೆಂಡತಿ ಅಶ್ಲೀಲ ವೀಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಅರೆಸ್ಟ್ ಮಾಡಲು ಮುಂದಾದಾಗ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ರಕ್ಷಣೆ ಮಾಡಿದ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಹಿಂಡಲಗಾ ಜೈಲಿಗೆ ಆರೋಪಿ ಕಿರಣ್ ನನ್ನು ರವಾನಿಸಲಾಗಿದೆ.

  • ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯಿಂದಲೇ ಪತಿಯ ಕೊಲೆ

    ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯಿಂದಲೇ ಪತಿಯ ಕೊಲೆ

    – ಪತ್ನಿ ಜೊತೆ ಪ್ರಿಯಕರ ಅರೆಸ್ಟ್‌

    ಬೀದರ್ : ಅನೈತಿಕ ಸಂಬಂಧವನ್ನು (Illicit affairs) ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ (Husband) ಸಂಚು ರೂಪಿಸಿ ಪತ್ನಿ (Wife) ಹಾಗೂ ಪ್ರಿಯಕರ ಸೇರಿ ‌ಕೊಲೆ ಮಾಡಿದ ಪ್ರಕರಣವನ್ನು ಕೊನೆಗೂ ಬೀದರ್ ಪೊಲೀಸರು (Bidar Police) ಬೇಧಿಸಿದ್ದಾರೆ.

    ಅಮಿತ್‌ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ ಪಾಟೀಲ್ ಅಲ್ಲದೇ ಕೃತ್ಯಕ್ಕೆ ಸಹಕಾರ ನೀಡಿದ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ಬಂಧಿಸಿದ್ದಾರೆ.
    ಇದನ್ನೂ ಓದಿ: ನಾನು ನ್ಯಾಯದ ದಾರಿಯಲ್ಲಿದ್ದೇನೆ, ಸತ್ಯಕ್ಕೆ ಜಯ ಸಿಕ್ಕಿದೆ: ವಿಕ್ರಂ ಸಿಂಹ

    ಚೈತ್ರ ಮತ್ತು ಗೆಳೆಯ ಅಮಿತ್‌ ಪಾಟೀಲ್‌
    ಚೈತ್ರಾ ಮತ್ತು ಗೆಳೆಯ ಅಮಿತ್‌ ಪಾಟೀಲ್‌

    ಏನಿದು ಪ್ರಕರಣ?
    ನವೆಂಬರ್‌ 11 ರಂದು ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ಬಳಿ ಅಮಿತ್‌ ಶವ ಪತ್ತೆಯಾಗಿತ್ತು. ಇದನ್ನು ಅಪಘಾತ ಎಂಬಂತೆ ಬಿಂಬಿಸಲಾಗಿತ್ತು. ಆದರೆ ಮೃತದೇಹ ನೋಡಿದಾಗ ಪೊಲೀಸರಿಗೆ ಅನುಮಾನ ವ್ಯಕ್ತವಾಗಿತ್ತು.

    ತನಿಖೆಗೆ ಇಳಿದ ಪೊಲೀಸರಿಗೆ ಶವ ಪತ್ತೆಯಾದ ಜಗದಲ್ಲಿ ಸಕ್ರಿಯವಾಗಿದ್ದ ಮೊಬೈಲ್‌ ನಂಬರ್‌ ಪತ್ತೆಹಚ್ಚಿದ್ದಾರೆ. ಬಳಿಕ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ರವಿ ಪಾಟೀಲ್ ಇವರಿಗೆ ಮುಂಗಡವಾಗಿ ಹಣ ನೀಡಿ ಕೃತ್ಯ ನಡೆಸಿ ವಿಚಾರಣೆಯನ್ನು ಬಾಯಿಬಿಟ್ಟಿದ್ದಾರೆ.

    ನಂತರ ರವಿಪಾಟೀಲ್‌ ವಿಚಾರಣೆ ವೇಳೆ ಚೈತ್ರಾ ಪಾತ್ರ ಬಹಿರಂಗವಾಗಿದೆ. ವಿಚಾರಣೆ ವೇಳೆ ನಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂದು ಚೈತ್ರಾ ತಿಳಿಸಿದ್ದಾಳೆ.

    ಪೊಲೀಸರು ಈಗ ಕೃತ್ಯಕ್ಕೆ ಬಳಸಿದ ರಾಡ್, ಮೊಬೈಲ್‌ ಹಾಗೂ ಕೊಲೆ ಮಾಡಲು ಸಹಚರರಿಗೆ ನೀಡಿದ ಮುಂಗಡ ಹಣವನ್ನು ಜಪ್ತಿ ಮಾಡಿದ್ದಾರೆ.

     

  • ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ  ಪತ್ನಿ

    ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪತ್ನಿಯಿಂದಲೇ ಪತಿ ಬರ್ಬರ ಹತ್ಯೆಗೈದ ಪ್ರಕರಣವೊಂದು ನಡೆದಿದೆ.

    ಉಮೇಶ್ ದಾಮಿ (27) ಕೊಲೆಯಾದ ಪತಿಯಾಗಿದ್ದು, ಈತನನ್ನು ಪತ್ನಿ ಮನಿಷಾ ದಾಮಿ ಕೊಲೆ ಮಾಡಿದ್ದಾಳೆ. ಈ ಘಟನೆ ಹುಳಿಮಾವು (Hulimavu) ಸಮೀಪದ ಕಾಲೇಜಿನಲ್ಲಿ ನಡೆದಿದೆ.

    ಈ ದಂಪತಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದಂದು ಉಮೇಶ್ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ರಾತ್ರಿ 12 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದ. ಆ ವೇಳೆ ಮನಿಷಾ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ಉಮೇಶ್ ಆಕೆಯ ಜೊತೆಗೆ ಜಗಳವಾಡಿದ್ದಾನೆ. ಇದನ್ನೂ ಓದಿ: ಲಾರಿ, ಜೀಪ್ ಡಿಕ್ಕಿ- ಸ್ಥಳದಲ್ಲೇ ನಾಲ್ವರ ದುರ್ಮರಣ

    ಅನೈತಿಕ ಸಂಬಂಧ ಹೊಂದಿರೋ ಬಗ್ಗೆ ಅನುಮಾನದಿಂದ ಪತ್ನಿ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋದಾಗ ಮನಿಷಾ, ಚಾಕು ತೆಗೆದುಕೊಂಡು ಉಮೇಶ್ ದಾಮಿಗೆ ಇರಿದಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಉಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಉಮೇಶ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಇತ್ತ ಆರೋಪಿ ಮನಿಷಾಳನ್ನ ಬಂಧಿಸಿ ಹುಳಿಮಾವು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಹುಳಿಮಾವು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವರ್ಷದ ತಿಥಿ ಮುನ್ನವೇ ಹೆಂಡತಿ ಸಮಾಧಿ ಎದುರು ಗಂಡ ನೇಣಿಗೆ ಶರಣು

    ವರ್ಷದ ತಿಥಿ ಮುನ್ನವೇ ಹೆಂಡತಿ ಸಮಾಧಿ ಎದುರು ಗಂಡ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ಹೆಂಡತಿ ಸಮಾಧಿಗೆ (Grave) ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ಗಂಡ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ (Bagepalli) ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ.

    ನಗರದ 16ನೇ ವಾರ್ಡ್ ನಿವಾಸಿ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಗುರುಮೂರ್ತಿ ಅಲಿಯಾಸ್ ಲೆಗ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಳೆದ ವರ್ಷ ಡಿಸೆಂಬರ್ 20 ರಂದು ಪತ್ನಿ ಮೌನಿಕಾ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಕಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಕಿ ತಗುಲಿ ಬೀದಿ ಬದಿ ಅಂಗಡಿಗಳು ಭಸ್ಮ

    ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋಗಿರುವ ಗುರುಮೂರ್ತಿ ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ತದನಂತರ ಅಲ್ಲೇ ಇದ್ದ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಸಹೋದರಿಯನ್ನು ಉಸಿರುಗಟ್ಟಿಸಿ ಕೊಂದು ದೇಹವನ್ನು ಕಾಲುವೆಗೆ ಎಸೆದ್ರು!

  • ಹೆರಿಗೆಯಾಗಿ ಕೆಲವೇ ದಿನಕ್ಕೆ ಪತ್ನಿ ಕೊಂದು ಆತ್ಮಹತ್ಯೆ ಕತೆಕಟ್ಟಿದ್ದ ಪಾಪಿ ಪತಿ ಅಂದರ್

    ಹೆರಿಗೆಯಾಗಿ ಕೆಲವೇ ದಿನಕ್ಕೆ ಪತ್ನಿ ಕೊಂದು ಆತ್ಮಹತ್ಯೆ ಕತೆಕಟ್ಟಿದ್ದ ಪಾಪಿ ಪತಿ ಅಂದರ್

    ರಾಯಚೂರು: ಹೆರಿಗೆಯಾದ ಇಪ್ಪತ್ತೇ ದಿನಕ್ಕೆ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದ ಪತಿಯನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಅವಿನಾಶ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿ ಸೋನಿ (23) ಎಂಬಾಕೆಯನ್ನು ಇತ್ತೀಚೆಗೆ ನಗರದ ಲಾಡ್ಜ್ ಒಂದರಲ್ಲಿ ಹತ್ಯೆಗೈದಿದ್ದ. ಬಳಿಕ ಮಹಿಳೆಗೆ ಸಿಸೇರಿಯನ್ ಆಗಿ ಮಗು ತೆಗೆದ ಕಾರಣ ನೋವನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕತೆ ಕಟ್ಟಿದ್ದ. ಇದನ್ನೂ ಓದಿ: ನಾಗ್ಪುರ ಕಾರ್ಖಾನೆಯಲ್ಲಿ ಭೀಕರ ಸ್ಫೋಟಕ್ಕೆ 9 ಮಂದಿ ಸಾವು – ಹಲವರಿಗೆ ಗಾಯ

    ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ 20 ದಿನಗಳ ಮಗುವಿದ್ದು, ಇಬ್ಬರೂ ಅದೇ ಲಾಡ್ಜ್‌ನಲ್ಲೇ ಕೆಲಸ ಮಾಡುತ್ತಿದ್ದರು. ಹಣಕಾಸಿನ ಸಮಸ್ಯೆಯಿಂದ ನೊಂದಿದ್ದ ಅವಿನಾಶ್ ಪತ್ನಿ ಜೊತೆ ಆಗಾಗ ಜಗಳವಾಡುತ್ತಿದ್ದ ಎಂದು ತಿಳಿದು ಬಂದಿದೆ. ಇದೇ ವಿಚಾರಕ್ಕೆ ಗಲಾಟೆ ನಡೆದು ಪತ್ನಿಯನ್ನು ಹತ್ಯೆಗೈದಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಅಲ್ಲದೇ ಮಹಿಳೆಯನ್ನು ಹತ್ಯೆಗೈದ ಬಳಿಕ ರಾತ್ರಿ ಪೂರ್ತಿ ಶವದೊಂದಿಗೆ ಇದ್ದ ಆರೋಪಿ ಬೆಳಗ್ಗೆ ಆತ್ಮಹತ್ಯೆಯ ಕತೆ ಕಟ್ಟಿದ್ದ.

    ಮಹಿಳೆಯ ಸಾವಿನ ಬಳಿಕ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಈಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

  • ಪತಿ ಸಾವಿನ ಬಳಿಕ ಲೈನ್‍ಮ್ಯಾನ್ ಸಖ್ಯ ಬೆಳೆಸಿದಾಕೆ ಕೊಳೆತ ಸ್ಥಿತಿಯಲ್ಲಿ ಪತ್ತೆ!

    ಪತಿ ಸಾವಿನ ಬಳಿಕ ಲೈನ್‍ಮ್ಯಾನ್ ಸಖ್ಯ ಬೆಳೆಸಿದಾಕೆ ಕೊಳೆತ ಸ್ಥಿತಿಯಲ್ಲಿ ಪತ್ತೆ!

    ಚಾಮರಾಜನಗರ: ಪತಿ ಸಾವಿನ ಬಳಿಕ ಲೈನ್ ಮ್ಯಾನ್ (Line Man) ಒಬ್ಬನ ಗೆಳೆತ ಬೆಳೆಸಿದಾಕೆಯು ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದ ಮನೆಯೊಂದರಲ್ಲಿ ರೇಖಾ (26) ಮೃತದೇಹ ಪತ್ತೆಯಾಗಿದೆ.

    27 ವರ್ಷದ ಅಗರ ಗ್ರಾಮದ ನಿವಾಸಿ ರೇಖಾಳ ಪತಿ ಕಳೆದ ಎರಡು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿಯ ಸಾವಿನ ಬಳಿಕ ಲೈನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಗೆಳೆಯ ನಾಗೇಂದ್ರ ಅಲಿಯಾಸ್ ಆನಂದ್ ಸಹವಾಸದಲ್ಲಿದ್ದಳು. ಇಬ್ಬರ ಲೀವಿಂಗ್ ಟು ಗೆದರ್ ರಿಲೇಷನ್ ಶಿಪ್ ಮನೆಗೆ ತಿಳಿದು ಗಲಾಟೆ ನಡೆದಿತ್ತು. ಮನೆಯಲ್ಲಿ ಗಲಾಟೆ ಗದ್ದಲವಾದ್ರು, ನಾಗೇಂದ್ರ ಗೆಳೆತನವನ್ನು ಮಾತ್ರ ರೇಖಾ ಬಿಟ್ಟಿರಲಿಲ್ಲ. ಈಗ ಅದೇ ಗೆಳೆಯ ನಾಗೇಂದ್ರ ಮನೆಯಲ್ಲಿ ರೇಖಾಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ – ಘೋರ ದುರಂತದಲ್ಲೂ ಪ್ರಾಣಾಪಾಯದಿಂದ ಪಾರಾದ ಮಗು

    ಗೆಳೆಯ ನಾಗೇಂದ್ರನೇ ರೇಖಾಳನ್ನ ಹೊಡೆದು ಕೊಂದಿರುವ ಆರೋಪ ಕೇಳಿಬಂದಿದ್ದು, ಸ್ಥಳಕ್ಕೆ ಕೊಳ್ಳೇಗಾಲ ಪೆÇಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮರಣೋತ್ತರ ಪರೀಕ್ಷೆಗಾಗಿ ರೇಖಾಳ ಮೃದೇಹವನ್ನ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ರವಾನಿಸಿದರು. ಈ ವೇಳೆ ಯಾವುದೇ ಕಾರಣಕ್ಕೂ ಶವ ಮುಟ್ಟದಂತೆ ಮೃತಳ ಸಂಬಂಧಿಕರು ಗಲಾಟೆ ಮಾಡಿದ್ದಾರೆ.

    ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ

    ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ

    – ಮಕ್ಕಳನ್ನು ಸರಿಯಾಗಿ ನೋಡದವನು ರಾಜ್ಯವನ್ನು ಹೇಗೆ ಆಳುತ್ತಾನೆ?
    – ತಾಯಿಗೆ ತಂದೆಯಿಂದ ದೈಹಿಕ ಕಿರುಕುಳ

    ಚಂಡೀಗಢ: ಪಂಜಾಬ್ (Punjab) ಸಿಎಂ ಅಸೆಂಬ್ಲಿ, ಗುರುದ್ವಾರ ಅಥವಾ ಪತ್ರಿಕಾಗೋಷ್ಠಿಗಳಿಗೆ ಅಮಲೇರಿದ ಸ್ಥಿತಿಯಲ್ಲಿ ಹೋಗುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಪುತ್ರಿ (Daughter) ಆರೋಪಿಸಿದ್ದಾರೆ.

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿ ಸೀರತ್ ಮಾನ್ (Seerat Mann) ತಮ್ಮ ತಂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ಸೀರತ್ ಅವರು ಸಿಎಂ ಭಗವಂತ್ ಮಾನ್ ಅವರ ಮಗಳು ಎಂದು ಹೇಳಿಕೊಂಡಿದ್ದಾರೆ. ಆದರೆ ಆಕೆ ಅಪ್ಪ ಎಂದು ಕರೆಯುವ ಹಕ್ಕನ್ನು ಕಳೆದುಕೊಂಡಿದ್ದು, ಅವರನ್ನು ಸಿಎಂ ಮಾನ್ ಎಂದು ಕರೆಯುವುದಾಗಿ ತಿಳಿಸಿದ್ದಾರೆ. ನಾನು ಈ ವಿಡಿಯೋ ಮಾಡುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ನನ್ನ ಕಥೆ ಹೊರಬರಲಿ ಎಂದು ನಾನು ಬಯಸುತ್ತೇನೆ. ಜನರು ನಮ್ಮ ಬಗ್ಗೆ ಏನು ಕೇಳಿದ್ದಾರೆಯೋ ಅದನ್ನು ಸಿಎಂ ಮಾನ್ ಅವರೇ ಹೇಳಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಮದುವೆಯಾಗಲು ಲಿಂಗವನ್ನೇ ಬದಲಾಯಿಸಿಕೊಂಡ ಮಹಿಳೆ

    ನಾನು ಇಲ್ಲಿಯವರೆಗೆ ಮೌನವಾಗಿದ್ದು, ತಾಯಿ ಕೂಡ ಮೌನವಾಗಿದ್ದಾರೆ. ನಮ್ಮ ಮೌನವನ್ನು ನಮ್ಮ ದೌರ್ಬಲ್ಯವೆಂದು ಅವರು ಭಾವಿಸಿದ್ದಾರೆ. ನಮ್ಮ ಮೌನದಿಂದಾಗಿ ಅವರು ಪ್ರಸ್ತುತ ಉನ್ನತ ಸ್ಥಾನದಲ್ಲಿ ಕುಳಿತಿದ್ದಾರೆ ಎಂದು ಅವರಿಗೆ ತಿಳಿದಿಲ್ಲ ಎಂದಿದ್ದಾರೆ. ಈ ವೀಡಿಯೋದಲ್ಲಿ ಸಿಎಂ ಮಾನ್ ಪತ್ನಿ ಡಾ.ಗುರುಕಿರತ್ ಗರ್ಭಿಣಿಯಾಗಿದ್ದು, ಸಿಎಂ ಮಾನ್ ಮೂರನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಸೀರತ್ ಮಾಹಿತಿ ನೀಡಿದ್ದಾರೆ. ಈ ವಿಚಾರ ಬೇರೆಯವರಿಂದ ತಿಳಿಯಿತು. ಮಾನ್ ತನಗೆ ಅಥವಾ ಸಹೋದರನಿಗೆ ಈ ಬಗ್ಗೆ ತಿಳಿಸಲು ಯಾವುದೇ ಕಾಳಜಿ ವಹಿಸಲಿಲ್ಲ ಎಂದು ಸೀರತ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಮಹಾರಾಷ್ಟ್ರದಲ್ಲಿ ಎನ್‌ಐಎ ದಾಳಿ, 15 ಮಂದಿ ಅರೆಸ್ಟ್‌ – 51 ಹಮಾಸ್‌ ಧ್ವಜ, ಪಿಸ್ತೂಲ್‌, ಗನ್‌, ಮಾರಕಾಸ್ತ್ರಗಳು ಜಪ್ತಿ

    ನಿಮಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನೀವು ಅವರನ್ನು ನಿರ್ಲಕ್ಷಿಸಿದ್ದೀರಿ ಮತ್ತು ಈಗ ಮೂರನೇ ಮಗುವನ್ನು ಈ ಜಗತ್ತಿಗೆ ತರಲು ಬಯಸಿದ್ದೀರಿ. ಇದಕ್ಕೆ ಕಾರಣವೇನು ಎಂದು ತಂದೆಯನ್ನು ಪ್ರಶ್ನಿಸಿದ ಸೀರತ್, ಭಗವಂತ್ ಮಾನ್ ಪುತ್ರ ದೋಷನ್ ತಂದೆಯನ್ನು ಭೇಟಿ ಮಾಡಲು ಎರಡು ಬಾರಿ ಪಂಜಾಬ್‌ಗೆ ಹೋಗಿದ್ದರು. ಅವನು ತನ್ನ ತಂದೆಯೊಂದಿಗೆ ಸಮಯ ಕಳೆಯಲು ಬಯಸುತ್ತಾನೆ. ಆದರೆ ಸಿಎಂ ತಮ್ಮ ಮನೆಗೆ ಬರಲು ದೋಷನ್‌ಗೆ ಅವಕಾಶ ನೀಡಲಿಲ್ಲ. ನಂತರ ಅವರು ಕುಟುಂಬದ ಸ್ನೇಹಿತರೊಂದಿಗೆ ಚಂಡೀಗಢದಲ್ಲಿ ಉಳಿದುಕೊಂಡರು. ಒಂದು ದಿನ ಅವರು ಮತ್ತೆ ಸಿಎಂ ಮಾನ್ ಮನೆಗೆ ಹೋದರು. ಆ ಸಂದರ್ಭದಲ್ಲಿ ಅವನನ್ನು ಮನೆಯಿಂದ ಹೊರಹಾಕಲಾಯಿತು ಮತ್ತು ಅಲ್ಲಿ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಅಲ್ಲಿಂದ ಹೊರಡಲು ಹೇಳಿದರು. ತನ್ನ ಸ್ವಂತ ಮಕ್ಕಳ ಜವಾಬ್ದಾರಿಯನ್ನು ಹೊರಲಾಗದ ವ್ಯಕ್ತಿ ಪಂಜಾಬ್ ಜನತೆಯ ಜವಾಬ್ದಾರಿಯನ್ನು ಹೇಗೆ ತೆಗೆದುಕೊಳ್ಳುತ್ತಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಈ ಬಾರಿ 7.43 ಲಕ್ಷ ನಕಲಿ MGNREGA ಜಾಬ್ ಕಾರ್ಡ್ ಡಿಲೀಟ್ – ಯುಪಿಯಲ್ಲೇ ಅತಿ ಹೆಚ್ಚು

    ನಾವು ನೋಡಿದ್ದೆಲ್ಲ ಪಂಜಾಬ್‌ನ ಜನರಲ್ಲೂ ನಡೆಯುತ್ತಿದೆ. ಸಿಎಂ ಮಾನ್ ಅವರು ರಾಜಕೀಯಕ್ಕೆ ಹೋಗಬಾರದು ಎಂದು ತಾಯಿ ಬಯಸಿದ್ದರು ಎಂದು ಭಗವಂತ್ ಮಾನ್ ವಿಚ್ಛೇದನಕ್ಕೆ ಕಾರಣ ನೀಡಿದ್ದರು. ವಿಚ್ಛೇದನಕ್ಕೆ ಹಲವು ಕಾರಣಗಳಿವೆ ಮತ್ತು ಅದು ನನ್ನ ತಾಯಿಯೇ ಹೇಳುತ್ತಾರೆ. ಯಾವಾಗ ನನ್ನ ತಾಯಿ ಈ ಸತ್ಯ ಹೇಳಲು ಸಿದ್ಧರಾಗುತ್ತಾರೋ ಅವತ್ತು ಖಂಡಿತವಾಗಿಯೂ ಎಲ್ಲರಿಗೂ ತಮ್ಮ ಕಥೆಯನ್ನು ಹೇಳುತ್ತಾರೆ ಎಂದು ಸೀರತ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಮಾನ್ ಮತ್ತು ತನ್ನ ತಾಯಿಯ ವಿಚ್ಛೇದನಕ್ಕೆ ತಂದೆಯ ಮದ್ಯಪಾನ, ಮಾನಸಿಕ ಮತ್ತು ದೈಹಿಕ ಕಿರುಕುಳ, ಸುಳ್ಳು ಹೇಳುವ ಅಭ್ಯಾಸ ಮತ್ತು ಬೆದರಿಕೆಗಳು ಕೆಲವು ಕಾರಣ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

  • ಪತ್ನಿಯನ್ನು ಕೊಂದು ರುಂಡ ಹಿಡಿದುಕೊಂಡೇ ಠಾಣೆಗೆ ಬಂದ ಪತಿ!

    ಪತ್ನಿಯನ್ನು ಕೊಂದು ರುಂಡ ಹಿಡಿದುಕೊಂಡೇ ಠಾಣೆಗೆ ಬಂದ ಪತಿ!

    ಭುವನೇಶ್ವರ: ಅಕ್ರಮ ಸಂಬಂಧದ ಶಂಕೆಯ ಮೇಲೆ ಪತ್ನಿಯನ್ನು ಕೊಂದು ಆಕೆಯ ತಲೆಯನ್ನು ಕತ್ತರಿಸಿ, ಅದನ್ನು ಹಿಡಿದುಕೊಂಡೇ ಪತಿ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಆಘಾತಕಾರಿ ಘಟನೆ ಒಡಿಶಾದ (Odisha) ನಯಾಗಢ (Nayagarh) ಜಿಲ್ಲೆಯಲ್ಲಿ ನಡೆದಿದೆ.

    ಬಿಡಪಾಜು ಗ್ರಾಮದ ನಿವಾಸಿ ಅರ್ಜುನ ಬಾಘಾ (35) ಪತ್ನಿ ಧರಿತ್ರಿಯನ್ನು (30) ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಹತ್ಯೆ ಮಾಡಿದ್ದಾನೆ. ಆಕೆಯನ್ನು ಕ್ರೂರವಾಗಿ ಕೊಂದ ಬಳಿಕ ಹರಿತವಾದ ಆಯುಧ ಬಳಸಿ ಶಿರಚ್ಛೇದನ (Beheading) ಮಾಡಿದ್ದಾನೆ. ಬಳಿಕ ಪತ್ನಿಯ ರುಂಡವನ್ನು ಹಿಡಿದುಕೊಂಡು ನಡೆದೇ ಪೊಲೀಸ್ ಠಾಣೆಗೆ ಹೋಗಿದ್ದಾನೆ. ವ್ಯಕ್ತಿ ದಾರಿಯುದ್ದಕ್ಕೂ ಪತ್ನಿಯ ತಲೆಯನ್ನು ಝಾಡಿಸಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದಾನೆ.

    ಪೊಲೀಸ್ ಠಾಣೆಗೆ ಬಂದ ಬಾಘಾ ಪೊಲೀಸರ ಮುಂದೆ ತಾನು ಪತ್ನಿಯನ್ನು ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆ ಕೊಂದಿರುವುದಾಗಿ ತಿಳಿಸಿ ಶರಣಾಗಿದ್ದಾನೆ. ಜೊತೆಗೆ ಪೊಲೀಸ್ ಠಾಣೆ ವರೆಗೂ ಹಿಡಿದುಕೊಂಡೇ ಬಂದಿದ್ದ ಪತ್ನಿಯ ತಲೆಯನ್ನು ತೋರಿಸಿದ್ದಾನೆ. ವ್ಯಕ್ತಿಯ ಅಮಾನವೀಯ ಕೃತ್ಯ ಕಂಡು ಪೊಲೀಸರು ತಬ್ಬಿಬ್ಬಾಗಿದ್ದಾರೆ. ಇದನ್ನೂ ಓದಿ: ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ

    ಪತ್ನಿಯನ್ನು ಕ್ರೂರವಾಗಿ ಕೊಂದ ಆರೋಪಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಬಳಿಕ ಬಾಘಾ ಪತ್ನಿಯ ತಲೆ ಇಲ್ಲದ ಮುಂಡವನ್ನೂ ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

  • ಜೀವ ಬೆದರಿಕೆ ಇದ್ದರೂ ಗೆಹ್ಲೋಟ್, ಪೊಲೀಸರು ಭದ್ರತೆ ನೀಡಲಿಲ್ಲ: ಕರ್ಣಿ ಸೇನಾ ಮುಖ್ಯಸ್ಥನ ಪತ್ನಿ ಆರೋಪ

    ಜೀವ ಬೆದರಿಕೆ ಇದ್ದರೂ ಗೆಹ್ಲೋಟ್, ಪೊಲೀಸರು ಭದ್ರತೆ ನೀಡಲಿಲ್ಲ: ಕರ್ಣಿ ಸೇನಾ ಮುಖ್ಯಸ್ಥನ ಪತ್ನಿ ಆರೋಪ

    ಜೈಪುರ: ರಾಜಸ್ಥಾನ (Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಮತ್ತು ಪೊಲೀಸ್ ಮಹಾನಿರ್ದೇಶಕರು ಸುಖದೇವ್ ಸಿಂಗ್ ಗೊಗಮೇಡಿಗೆ (Sukhdev Singh Gogamedi) ಜೀವ ಬೆದರಿಕೆ ಇದ್ದರೂ ಭದ್ರತೆ ನೀಡಲು ವಿಫಲರಾಗಿದ್ದಾರೆ ಎಂದು ಸುಖದೇವ್ ಸಿಂಗ್ ಪತ್ನಿ ಆರೋಪಿಸಿದ್ದಾರೆ.

    ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಮಂಗಳವಾರ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಘಟನೆಯ ಸಿಸಿಟಿವಿ ವೀಡಿಯೋದಲ್ಲಿ ಬಂದೂಕುಧಾರಿಗಳು ಗೊಗಮೆಡಿಗೆ ಗುಂಡು ಹಾರಿಸಿ ನಂತರ ಸ್ಥಳದಿಂದ ಪರಾರಿಯಾಗುವುದನ್ನು ತೋರಿಸುತ್ತದೆ. ಈ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಪೊಲೀಸ್ ಮಹಾನಿರ್ದೇಶಕರು ಗೋಗಮೆಡಿಗೆ ಜೀವ ಬೆದರಿಕೆಯ ನಡುವೆಯೂ ಭದ್ರತೆ ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: POK ನಮ್ಮದೇ, 24 ಅಸೆಂಬ್ಲಿ ಸೀಟ್‌ಗಳನ್ನು ಮೀಸಲಿಟ್ಟಿದ್ದೇವೆ: ಅಮಿತ್‌ ಶಾ

     

    ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಕೊಲ್ಲಲು ಯೋಜನೆ ರೂಪಿಸಲಾಗಿದೆ ಎಂದು ಮಾರ್ಚ್‌ನಲ್ಲಿ ರಾಜಸ್ಥಾನ ಡಿಜಿಪಿ ಉಮೇಶ್ ಮಿಶ್ರಾ ಅವರಿಗೆ ಪತ್ರವೊಂದನ್ನು ಕಳುಹಿಸಲಾಗಿತ್ತು ಎಂದು ಸುಖದೇವ್ ಸಿಂಗ್ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಗೊಗಮೆಡಿಗೆ ಕೊಲೆ ಬೆದರಿಕೆಗಳ ಕುರಿತು ಮಾಹಿತಿ ನೀಡಿದರೂ ಗೆಹ್ಲೋಟ್ ಮತ್ತು ಮಿಶ್ರಾ ಅವರು ಕರ್ಣಿ ಸೇನಾ ಮುಖ್ಯಸ್ಥರಿಗೆ ಭದ್ರತೆಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವೈದ್ಯ

    ಘಟನೆಯ ಕುರಿತು ಪೊಲೀಸರು ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಇಬ್ಬರು ಆರೋಪಿಗಳ ಗುರುತು ಪತ್ತೆ:
    ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಯ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ರೋಹಿತ್ ರಾಥೋಡ್ ಎಂದು ಗುರುತಿಸಲಾಗಿದೆ. ಈತ ಮಕ್ರಾನಾ ನಾಗೌರ್ ಮೂಲದವನಾಗಿದ್ದು, ಮತ್ತೊಬ್ಬನನ್ನು ಹರಿಯಾಣದ ಮಹೇಂದ್ರಗಾತ್ ಮೂಲದ ನಿತಿನ್ ಫೌಜಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಆರೋಪಿಗಳಾದ ನವೀನ್ ಶೇಖಾವತ್, ರೋಹಿತ್ ರಾಥೋಡ್ ಮತ್ತು ನಿತಿನ್ ಫೌಜಿ ಅವರು ಮದುವೆ ಕಾರ್ಡ್ ನೀಡುವ ನೆಪದಲ್ಲಿ ಕರ್ಣಿ ಸೇನಾ ಮುಖ್ಯಸ್ಥರನ್ನು ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ವರದಿಯ ಪ್ರಕಾರ, ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಅವರು ರೋಹಿತ್ ಗೋಡಾರಾ ಅವರ ಭೂ ವಿವಾದಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಜಮೀನು ವಿವಾವದವೇ ಕರ್ಣಿ ಸೇನಾ ಮುಖ್ಯಸ್ಥನ ಕೊಲೆಗೆ ಕಾರಣವಾಯ್ತಾ?

  • ಚಿಕನ್ ಸಾರು ಮಾಡಿಲ್ಲವೆಂದು ಪತ್ನಿ ಕೊಲೆಗೈದಿದ್ದ ಪತಿಗೆ 6 ವರ್ಷ ಜೈಲು

    ಚಿಕನ್ ಸಾರು ಮಾಡಿಲ್ಲವೆಂದು ಪತ್ನಿ ಕೊಲೆಗೈದಿದ್ದ ಪತಿಗೆ 6 ವರ್ಷ ಜೈಲು

    ದಾವಣಗೆರೆ: ಚಿಕನ್ ಸಾರು (Chicken) ಮಾಡಿಲ್ಲವೆಂದು ಕ್ಯಾತೆ ತೆಗೆದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿದ್ದ ಪತಿಗೆ ಇದೀಗ ನ್ಯಾಯಾಲಯ ಜೈಲು ಶಿಕ್ಷೆಯ ಜೊತೆಗೆ ದಂಡವನ್ನೂ ವಿಧಿಸಿದೆ.

    ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಮಾಗನಹಳ್ಳಿ ಕೆಂಚಪ್ಪ ಶಿಕ್ಷೆಗೊಳಗಾದವ. ಸದ್ಯ ಈತನಿಗೆ ದಾವಣಗೆರೆ (Davanagere) 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 6 ವರ್ಷ ಜೈಲು (Jail) ಶಿಕ್ಷೆ ಹಾಗೂ 10,000 ದಂಡ ವಿಧಿಸಿದೆ.

    ಏನಿದು ಪ್ರಕರಣ..?: 2022ರ ಜೂನ್ 8 ರಂದು ಕೆಂಚಪ್ಪ ಕಂಠಪೂರ್ತಿ ಮದ್ಯ ಸೇವಿಸಿ ಬಂದು ಚಿಕನ್ ಸಾಂಬಾರು ಮಾಡಿಲ್ಲ ಅಂತಾ ಪತ್ನಿ ಶೀಲಾರೊಂದಿಗೆ ಜಗಳವಾಡಿ ಚಾಕುವಿನಿಂದ ಎಡಭುಜಕ್ಕೆ ಚುಚ್ಚಿ ಕೊಲೆ ಮಾಡಿದ್ದ. ಈ ಸಂಬಂಧ ಶೀಲಾ ಅವರ ತಾಯಿ ಉಕ್ಕಡಗಾತ್ರಿ ಗುತ್ಯಮ್ಮ ಅವರು ಹರಿಹರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿಯ ತಂದೆ ಅನುಮಾನಾಸ್ಪದ ಸಾವು

    ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ತನಿಖಾಧಿಕಾರಿ ಸಿಪಿಐ ಸತೀಶ್, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ವಿಜಯಾನಂದ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರ ವಕೀಲ ಸತೀಶ್ ಕುಮಾರ್ ವಾದ ಮಂಡಿಸಿದ್ದರು.