Tag: Wife

  • ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    -ಶವ ಸಾಗಿಸಲು ಅಳಿಯನಿಗೆ ಮಾವನಿಂದಲೇ ಸಾಥ್

    ಮಂಡ್ಯ: ಪರಪುರುಷರೊಂದಿಗೆ ಅನೈತಿಕ ಸಂಬಂಧ (Immoral Relationship) ಹೊಂದಿರುವ ಶಂಕೆಯ ಮೇಲೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ (Wife) ಗಂಡ (Husband) ಕೊಲೆ ಮಾಡಿದ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಪೂಜಾ (26) ಪತಿಯಿಂದ ಕೊಲೆಯಾದ ಮಹಿಳೆಯಾಗಿದ್ದು, ಶ್ರೀನಾಥ್ (33) ವೇಲ್‌ನಿಂದ ತನ್ನ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ. ಪೂಜಾ ಹಾಗೂ ಶ್ರೀನಾಥ್ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಗೆ ಒಂದು ಹೆಣ್ಣುಮಗು ಇದೆ. ಕಳೆದ ಕೆಲವು ವರ್ಷಗಳಿಂದ ಪೂಜಾ ಟಿಕ್‌ಟಾಕ್ (TikTok) ಗೀಳು ಬೆಳೆಸಿಕೊಂಡಿದ್ದಳು. ರೀಲ್ಸ್ (Reels) ಮಾಡುವ ಜೊತೆಗೆ ಸ್ನೇಹಿತರೊಂದಿಗೆ ಚಾಟಿಂಗ್ ಹುಚ್ಚನ್ನೂ ಬೆಳೆಸಿಕೊಂಡಿದ್ದಳು. ಅತಿಯಾದ ಮೊಬೈಲ್ ಬಳಕೆಯಿಂದಾಗಿ ಗಂಡನಿಗೆ ಅನುಮಾನ ಶುರುವಾಗಿದ್ದು, ದಂಪತಿ ಮಧ್ಯೆ ಪದೇ ಪದೇ ಜಳವಾಗುತ್ತಿತ್ತು. ಇದನ್ನೂ ಓದಿ: ಟಿವಿ ನೋಡ್ತಿದ್ದ ವೇಳೆ ಹೃದಯಾಘಾತದಿಂದ ಉಪನ್ಯಾಸಕ ಸಾವು

    ಪರಪುಷರೊಂದಿಗೆ ಸಂಬಂಧದ ಶಂಕೆಯಿಂದ ಜಗಳ ತೆಗೆಯುತ್ತಿದ್ದ ಶ್ರೀನಾಥ್ ಪೂಜಾಳ ಕುತ್ತಿಗೆಗೆ ವೇಲ್‌ನಿಂದ ಬಿಗಿದು ಹತ್ಯೆಮಾಡಿದ್ದಾನೆ. ಕೊಲೆಗೈದ ಬಳಿಕ ಶ್ರೀನಾಥ್ ಮಾವ ಶೇಖರ್‌ಗೆ ಕರೆ ಮಾಡಿ ಕೊಲೆ ಮಾಡಿರುವುದಾಗಿ ಹೇಳಿದ್ದು, ಮಗಳ ಹತ್ಯೆಯ ಬಗ್ಗೆ ತಿಳಿದರೂ ಮಾವ ಪೊಲೀಸರಿಗೆ ಹೇಳದೆ ಅಳಿಯನಿಗೆ ಸಾಥ್ ನೀಡಿದ್ದಾರೆ. ಪೂಜಾಳ ತಂದೆ ಅಳಿಯನೊಂದಿಗೆ ಸೇರಿ ಆಕೆಯ ಮೃತದೇಹವನ್ನು ಮನೆಯಿಂದ ಬೈಕ್‌ನಲ್ಲಿ ಸಾಗಿಸಿ ಬಳಿಕ ಮೃತದೇಹಕ್ಕೆ ಭಾರವಾದ ಕಲ್ಲನ್ನು ಕಟ್ಟಿ ಕಾವೇರಿ ನದಿಗೆ (Kaveri River) ಎಸೆದಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯರ ಅಶ್ಲೀಲ ವೀಡಿಯೋ ಅಪ್ಲೋಡ್ – ಆರೋಪಿ ಅರೆಸ್ಟ್

    ಪತ್ನಿಯನ್ನು ಕೊಲೆಗೈದು ಶ್ರೀನಾಥ್ ಮನೆಯಲ್ಲಿಯೇ ಇದ್ದ. ಮಗಳ ಶವವನ್ನು ನದಿಗೆಸೆದ ಬಳಿಕ ಮಾವ ರಾಜಶೇಖರ್ ಹೊಟೇಲ್ ಕೆಲಸದಲ್ಲಿ ತೊಡಗಿದ್ದ. ಶ್ರೀನಾಥ್ ನಿಮಿಷಾಂಬ ದೇವಸ್ಥಾನಕ್ಕೆ ಹೋಗಿಬರುವುದಾಗಿ ತೆರಳಿದ್ದು, ದೇವರ ದರ್ಶನದ ಬಳಿಕ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾನೆ. ಅಲ್ಲದೇ ಶವ ಸಾಗಿಸಲು ಸಾಥ್ ನೀಡಿದ ಮಾವನ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅರಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಜೈಪುರ: ಹೊಸದಾಗಿ ಮದುವೆಯಾದ ಜೋಡಿಯೊಂದು ಹನಿಮೂನ್ (Honeymoon) ಬಂದು, ಪತಿಯನ್ನು ಹೋಟೆಲ್‍ನಲ್ಲಿಯೇ ಪತ್ನಿ ಬಿಟ್ಟು ಹೋಗಿರುವ ಅಚ್ಚರಿಯ ಪ್ರಕರಣವೊಂದು ರಾಜಸ್ಥಾನದ ಜೈಪುರದಿಂದ ಬೆಳಕಿಗೆ ಬಂದಿದೆ.

    ಪತಿಯೊಂದಿಗೆ ಹೋಟೆಲ್ (Hotel) ವಿಚಾರವಾಗಿ ಈಕೆ ಪತಿ ಜೊತೆ ಮುನಿಸಿಕೊಂಡಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ರಿಂಗಾಸ್‍ನಲ್ಲಿರುವ ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲೆಂದು ವಾಹನ ಬುಕ್ ಮಾಡಲು ಪತಿ ಹೋದಾಗ ಆತನನ್ನು ಕೋಪದಿಂದ ಪತ್ನಿ ಬಿಟ್ಟು ಹೋಗಿದ್ದಾಳೆ.

    ಮಧ್ಯಪ್ರದೇಶದ (Madhyapradesh) ಭೋಪಾಲ್ ಮೂಲದ ದಂಪತಿ ಜುಲೈ 29 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಬಳಿಕ ಹನುಮೂನಿಗೆಂದು ಆಗಸ್ಟ್ 5 ರಂದು ಜೈಪುರಕ್ಕೆ ಬಂದಿದ್ದು, ಚೌಮು ಪುಲಿಯಾ ಸಮೀಪದ ಹೋಟೆಲ್‍ನಲ್ಲಿ ತಂಗಿದ್ದರು. ಮರುದಿನ ಬೆಳಗ್ಗೆ ದಂಪತಿ ಜೈಪುರ ಸುತ್ತಾಡಿ ನಂತರ ಅಮೇರ್ ಫೋರ್ಟ್‍ಗೆ ಭೇಟಿ ನೀಡಿದರು.

    ಸಂಜೆ 3 ಗಂಟೆ ಸುಮಾರಿಗೆ ಹೋಟೆಲ್‍ಗೆ ಹಿಂದಿರುಗಿದರು. ಇದಾದ ಬಳಿಕ ಅವರು ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸಿದ್ದರು. ಅಂತೆಯೇ ಪತಿ ವಾಹನ ಬುಕ್ ಮಾಡಲು ತೆರಳಿದರು. ಹೀಗೆ ಹೋದವನು ವಾಪಸ್ ರೂಮಿಗೆ ಬರುವಾಗ ಪತ್ನಿ ತನ್ನ ಲಗೇಜ್‍ನೊಂದಿಗೆ ಕಾಣೆಯಾಗಿದ್ದಳು. ಇದನ್ನು ಕಂಡ ಪತಿ ದಿಗ್ಭ್ರಮೆಗೊಂಡನು. ಇದನ್ನೂ ಓದಿ: ಪೈಗಂಬರ್ ಬಗ್ಗೆ ಅವಹೇಳನ ಮಾಡಿದವರ ತಲೆ ತೆಗೆಯಿರಿ – ಪೋಸ್ಟ್ ಹಾಕಿದ ಯುವಕರು ಅರೆಸ್ಟ್

    ಆಕೆಗಾಗಿ ಇಡೀ ಹೋಟೆಲ್‍ನಲ್ಲಿ ಹುಡುಕಾಟ ನಡೆಸಿದನು. ಎಲ್ಲಯೂ ಸಿಗದೇ ಇದ್ದಾಗ ಆಕೆಯ ಮೊಬೈಲ್ ನಂಬರಿಗೆ ಕರೆ ಮಾಡಿದ್ದಾನೆ. ಆದರೆ ಆಕೆ ಕರೆ ಸ್ವೀಕರಿಸುತ್ತಿರಲಿಲ್ಲ. ಬಳಿಕ ಅವರು ಹೋಟೆಲ್‍ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಆಕೆ ಫೋನ್‍ನಲ್ಲಿ ಮಾತನಾಡುತ್ತಾ ಹೋಟೆಲ್‍ನಿಂದ ಹೊರಟು ಹೋಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪತಿ ಝೋತ್ವಾರಾ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆಯಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

    ಈ ಸಂಬಂಧ ಅಲ್ಲಿನ ಎಎಸ್‍ಐ ಬಜರಂಗಲಾಲ್ ಶರ್ಮಾ ಮಾತನಾಡಿ, ಹನಿಮೂನ್‍ಗೆ ಭೋಪಾಲ್ ಮೂಲದ ದಂಪತಿ ಆಗಸ್ಟ್ 5ರಂದು ಬಂದಿದ್ದರು. ಕೆಲ ವಿಚಾರಗಳಿಗೆ ಹೊಟೇಲ್‍ನಲ್ಲಿ ಪತಿ-ಪತ್ನಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಪತಿ ಕ್ಯಾಬ್ ಬುಕ್ ಮಾಡಲು ಕೆಳಗಿಳಿದಿದ್ದು, ಕೋಪಗೊಂಡ ಪತ್ನಿ ಹೋಟೆಲ್‍ನಿಂದ ಹೊರಟು ಹೋಗಿದ್ದಾರೆ.

    ಸದ್ಯ ಕಾಣೆಯಾದ ಪತ್ನಿಯನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಪತಿ-ಪತ್ನಿಯರ ನಡುವೆ ಜಗಳ ನಡೆದ ಬಳಿಕವೇ ಪತ್ನಿ ಕೋಪಗೊಂಡು ಹೋಟೆಲ್ ತೊರೆದಿದ್ದು, ನಾವು ಅವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದು, ಮತ್ತು ಶೀಘ್ರದಲ್ಲೇ ಹುಡಕುತ್ತೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳ್ಳಿ, ಕಳ್ಳಿ ಅಂತಾ ವ್ಯಂಗ್ಯವಾಡ್ತಾರೆಂದು ಪತ್ನಿಯನ್ನೇ ಮುಗಿಸಿದ!

    ಕಳ್ಳಿ, ಕಳ್ಳಿ ಅಂತಾ ವ್ಯಂಗ್ಯವಾಡ್ತಾರೆಂದು ಪತ್ನಿಯನ್ನೇ ಮುಗಿಸಿದ!

    ಬೆಂಗಳೂರು: ಕಳ್ಳಿ, ಕಳ್ಳಿ ಎಂದು ಎಲ್ಲರೂ ವ್ಯಂಗ್ಯ ಮಾಡುವುದರಿಂದ ಬೇಸತ್ತ ಪತಿ ಮಹಾಶಯನೊನ್ನ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಸರಿತಾ (35) ಕೊಲೆಯಾದ ಪತ್ನಿ. ಈಕೆಯನ್ನು ಪತಿ ತಾರಾನಾಥ್ ಕೊಲೆ ಮಾಡಿದ್ದಾನೆ. ಈ ದಂಪತಿ ಮೂಲತಃ ಮಂಗಳೂರಿನವರು (Mangaluru). ಇದನ್ನೂ ಓದಿ: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥಿಸಿಕೊಳ್ಳೋ ಲಜ್ಜೆಗೇಡಿ ಸಿಎಂ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ: ಹೆಚ್‍ಡಿಕೆ

    ಕೊಲೆ ಯಾಕೆ..?: ಪತ್ನಿ ಸರಿತಾ ಮೇಲೆ ಕಳ್ಳತನದ ಆರೋಪ ಕೇಳಿಬಂದಿತ್ತು. ನಂತರ ಬೆಂಗಳೂರಿನ ವೈಟ್ ಫೀಲ್ಡ್ ಗೆ ಶಿಫ್ಟ್ ಆಗಿದ್ರು. ಬಳಿಕ ಕೂಡ ಸಂಬಂಧಿಕರು, ಪರಿಚಿತರು ಸರಿತಾಳನ್ನು ಕಳ್ಳಿ ಕಳ್ಳಿ ಅಂತ ವ್ಯಂಗ್ಯ ಮಾಡುತ್ತಿದ್ದರು. ಇದರಿಂದ ಬೇಸತ್ತ ಪತಿ ತರಾನಾಥ್ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

    ನಂತರ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿ ವಿಫಲವಾಗಿ ತಾನೇ ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ವಿಜಯ ರಾಘವೇಂದ್ರ ಪತ್ನಿ ನಿಧನ

    ನಟ ವಿಜಯ ರಾಘವೇಂದ್ರ ಪತ್ನಿ ನಿಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

    ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

    ಬೆಂಗಳೂರು: ಜಗಳದ ವೇಳೆ ಪತ್ನಿಯ (Wife) ಎಡಗೈ ಬೆರಳನ್ನೇ (Finger) ಪತಿ (Husband) ಕಚ್ಚಿ ತಿಂದಿರುವ ಘಟನೆ ಬೆಂಗಳೂರಿನ (Bengaluru) ಕೋಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪುಷ್ಪಾ (40) ಎಂಬ ಮಹಿಳೆ 23 ವರ್ಷಗಳ ಹಿಂದೆ ವಿಜಯ್‌ಕುಮಾರ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆಯಾದ ಕೆಲ ವರ್ಷಗಳಿಂದ ವಿಜಯ್‌ಕುಮಾರ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಪತ್ನಿ ಆರೋಪಿಸಿದ್ದಾರೆ. ವಿವಾಹದ ಬಳಿಕ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದು, ದಂಪತಿಗೆ ಒಬ್ಬ ಮಗನೂ ಇದ್ದಾನೆ. ಇದನ್ನೂ ಓದಿ: ಜಾಮೀನಿಗಾಗಿ ವಕೀಲನ ಕಿಡ್ನಾಪ್ – ರಾತ್ರಿ ಇಡೀ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ರೌಡಿಶೀಟರ್

    ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ಬೇರೆಡೆ ಮನೆ ಮಾಡಿ ಪತಿಯಿಂದ ದೂರವಿದ್ದರು. ಜುಲೈ 28ನೇ ತಾರೀಕು ಪತಿ ವಿಜಯ್‌ಕುಮಾರ್ ಪತ್ನಿ ಇದ್ದ ಮನೆಗೆ ತೆರಳಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದು, ನಿನ್ನನ್ನು ಕೂಡಾ ಕೊಂದು ಇದೇ ರೀತಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ರೌಡಿಶೀಟರ್‌ಗಳನ್ನು ಬಿಟ್ಟು ಕೊಲೆ ಮಾಡಿಸುವುದಾಗಿ ಹೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 3 ಸಾವಿರಕ್ಕಾಗಿ ಯುವಕನನ್ನು ಹಾಡಹಗಲೇ ಚುಚ್ಚಿ ಚುಚ್ಚಿ ಕೊಂದ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಪ್ತಾಂಗಕ್ಕೆ ವಿಕೆಟ್‍ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ

    ಗುಪ್ತಾಂಗಕ್ಕೆ ವಿಕೆಟ್‍ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ

    ಚಿತ್ರದುರ್ಗ: ಗಂಡ-ಹೆಂಡ್ತಿ ನಡುವೆ ಜಗಳಗಳು ಸಾಮಾನ್ಯ. ಈ ಕೋಪ-ತಾಪಗಳು ಕೇವಲ ನಿಮಿಷಗಳಷ್ಟೇ ಇರುತ್ತವೆ. ಆದರೆ ಇಲ್ಲೊಬ್ಬ ಪತಿಮಹಾಶಯ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಆಘಾತಕಾರಿ ಘನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ.

    ಹೌದು. ಪತ್ನಿಯ (Husband- Wife Fight) ಶೀಲ ಶಂಕಿಸಿರುವ ಪತಿ ಆಕೆಯ ಗುಪ್ತಾಂಗಕ್ಕೆ ವಿಕೆಟ್‍ನಿಂದ ಹಲ್ಲೆ ನಡೆಸಿ ಅಮಾನವೀಯತೆ ತೋರಿದ್ದಾನೆ. ಚಳ್ಳಕೆರೆಯ ಆರೋಗ್ಯ ಇಲಾಖೆಯಲ್ಲಿ ಫಾರ್ಮಸಿಸ್ಟ್ ಆಗಿರುವ ಭಾಸ್ಕರ್ ಹಾಗೂ ರೇಖಾ ಎಂಬ ದಂಪತಿ ಪಾವಗಡ ರಸ್ತೆಯ ಮನೆಯಲ್ಲಿ ವಾಸವಾಗಿದ್ದಾರೆ. ಭಾಸ್ಕರ್ ತನ್ನ ಪತ್ನಿ ರೇಖಾ ಶೀಲ ಶಂಕಿಸಿ ಗಲಾಟೆ ಆರಂಭಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು ಕೋಪಗೊಂಡ ಭಾಸ್ಕರ್ ಪತ್ನಿಯ ಗುಪ್ತಾಂಗಕ್ಕೆ ವಿಕೆಟ್ ನಿಂದ ಹಲ್ಲೆ ನಡೆಸಿದ್ದಾನೆ.

    ಗುಪ್ತಾಂಗಕ್ಕೆ ಮನಬಂದಂತೆ ವಿಕೆಟ್ ನಿಂದ ಚುಚ್ಚಿರುವ ಆಸಾಮಿ, ಮನೆಯೊಳಗೆಲ್ಲಾ ರಕ್ತ ಚಿಮ್ಮಿದರು ಸಹ ಹಲ್ಲೆಯನ್ನು ನಿಲ್ಲಿಸದೇ ಥಳಿಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಹೀಗಾಗಿ ಆಕೆಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯ್ತು. ಆದರೆ ಗುಪ್ತಾಂಗದ ಸಮೀಪದಲ್ಲಿ ಗಂಭೀರವಾದ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಆಕೆಯ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

    ಸ್ಥಳೀಯರ ಮಾಹಿತಿ ಪ್ರಕಾರ, ಪತಿ ಭಾಸ್ಕರ್ ಮಾನಸಿಕ ಖಿನ್ನತೆಗೊಳಗಾಗಿ ಈ ರೀತಿ ವಿಕೃತಿ ಮೆರೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಆರೋಪಿ ಭಾಸ್ಕರ್ ಪೊಲೀಸರ ವಶದಲ್ಲಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಂಡನ ಮೊಬೈಲ್‌ಗೆ ಪತ್ನಿಯ ಅಕ್ರಮ ಸಂಬಂಧ ವಿಡಿಯೋ – ಮಾರಕಾಸ್ತ್ರಗಳಿಂದ ಹೊಡೆದು ಹೆಂಡತಿಯ ಹತ್ಯೆ

    ಗಂಡನ ಮೊಬೈಲ್‌ಗೆ ಪತ್ನಿಯ ಅಕ್ರಮ ಸಂಬಂಧ ವಿಡಿಯೋ – ಮಾರಕಾಸ್ತ್ರಗಳಿಂದ ಹೊಡೆದು ಹೆಂಡತಿಯ ಹತ್ಯೆ

    ಬೆಂಗಳೂರು: ಹೆಂಡತಿಯ ಅಕ್ರಮ ಸಂಬಂಧದ (Illicit Relationship) ವಿಡಿಯೋ (Video) ಮೊಬೈಲ್‌ನಲ್ಲಿ ನೋಡಿದ ಪತಿ ಮಾರಕಾಸ್ತ್ರಗಳಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನ (Bengaluru) ಮೂಡಲಪಾಳ್ಯದ ಶಿವಾನಂದ ನಗರದಲ್ಲಿ ನಡೆದಿದೆ.

    ಶಂಕರ್ ಕೊಲೆ ಮಾಡಿದ ಆರೋಪಿಯಾಗಿದ್ದು, ಪತ್ನಿ ಗೀತಾಳನ್ನು ಹತ್ಯೆ ಮಾಡಿದ ಬಳಿಕ ಆಕೆಯ ತಾಯಿಗೆ ಕರೆ ಮಾಡಿ ಮಗಳನ್ನು ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾನೆ ಎನ್ನಲಾಗಿದೆ. ವೃತ್ತಿಯಲ್ಲಿ ಗುತ್ತಿಗೆದಾರನಾಗಿದ್ದ ಆರೋಪಿ ಶಂಕರ್ 13 ವರ್ಷಗಳ ಹಿಂದೆ ಗೀತಾಳನ್ನು ಮದುವೆ ಆಗಿದ್ದ. ಇಬ್ಬರ ಸಂಸಾರಕ್ಕೆ ಸಾಕ್ಷಿ ಎಂಬಂತೆ ಒಂದು ಗಂಡು ಮಗು ಇದೆ. ಆರೋಪಿ ಶಂಕರ್‌ ಪತ್ನಿ ಗೀತಾ ಬೇರೋಬ್ಬನ ಜೊತೆ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಇದನ್ನೂ ಓದಿ: ಸಾಲ ವಾಪಸ್ ಕೊಟ್ಟಿಲ್ಲ ಅಂತ ಪತಿಯೆದುರೇ ಮಹಿಳೆಯ ಅತ್ಯಾಚಾರ

    ಹೆಂಡತಿಯ ಮೇಲೆ ಗಂಡನಿಗಿದ್ದ ಅನುಮಾನಕ್ಕೆ ಸಾಕ್ಷಿಯೆಂಬಂತೆ ಒಂದು ವಿಡಿಯೋ ಆತನಿಗೆ ಸಿಗುತ್ತದೆ. ಅಲ್ಲಿಗೆ ಗಂಡ ಶಂಕರ್‌ಗೆ ಹೆಂಡತಿಯ ಮೇಲಿದ್ದ ಅನುಮಾನ ಸ್ಪಷ್ಟವಾಗಿದೆ. ಮರ್ಯಾದೆ ಹೋಗುತ್ತದೆ ಎನ್ನುವ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ. ಪತ್ನಿಯ ಅಕ್ರಮ ಸಂಬಂಧ ವಿಡಿಯೋ ಪತಿಯ ಮೊಬೈಲ್‌ಗೆ ಪತ್ನಿ ಕಳುಹಿಸಿದ್ದು ಮಾತ್ರವಲ್ಲದೇ ಪತ್ನಿ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದ ವ್ಯಕ್ತಿ ಕೂಡ ಶಂಕರ್‌ಗೆ ಪತ್ನಿಯ ವಿಡಿಯೋವನ್ನು ಕಳುಹಿಸಿದ್ದ. ಈ ವಿಚಾರವಾಗಿ ಕಳೆದ 15 ದಿನದಿಂದ ನಿರಂತರವಾಗಿ ಗಲಾಟೆ ನಡೆಯುತ್ತಿತ್ತು. ಇದನ್ನೂ ಓದಿ: ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ – ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

    ಪತ್ನಿ ಗೀತಾಳಿಗೆ ಇವೆಲ್ಲಾ ಬಿಟ್ಟು ಸರಿಯಾಗುವಂತೆ ಪತಿ ಶಂಕರ್ ಎಷ್ಟೇ ಹೇಳಿದರು ಕಿವಿಗೆ ಹಾಕಿಕೊಳ್ಳದೆ ಆಕೆ ಚಾಳಿ ಮುಂದುವರೆಸಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಶಂಕರ್ ತನ್ನ ತಾಯಿಗೆ ಕರೆ ಮಾಡಿ ಮಗನನ್ನು ನೋಡಿಕೋ, ನಾನು ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಹೋಗುವುದಾಗಿ ಹೇಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಚಂದ್ರಲೇಔಟ್ (Chandra Layout) ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬಿಇ ಪದವೀಧರೆ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೇಸ್‍ಬುಕ್ ಗೆಳೆಯನಿಗಾಗಿ ಭಾರತದಿಂದ ಪಾಕ್‍ಗೆ ತೆರಳಿದ ವಿವಾಹಿತೆ

    ಫೇಸ್‍ಬುಕ್ ಗೆಳೆಯನಿಗಾಗಿ ಭಾರತದಿಂದ ಪಾಕ್‍ಗೆ ತೆರಳಿದ ವಿವಾಹಿತೆ

    ಜೈಪುರ: ತನ್ನ ಗೆಳೆಯನನ್ನು ಭೇಟಿಯಾಗಲು ಪಾಕಿಸ್ತಾನದಿಂದ (Pakistan) ಬಂದಿರುವ ಸೀಮಾ ಹೈದರ್ ಕುರಿತು ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಭಾರತದಿಂದ (Indian Woman) ಮಹಿಳೆಯೊಬ್ಬಳು ಪಾಕಿಸ್ತಾನಕ್ಕೆ ತೆರಳಿದ ಪ್ರಸಂಗ ನಡೆದಿದೆ.

    ಹೌದು. ಫೇಸ್‍ಬುಕ್ ಗೆಳೆಯನ (Facebook Friend) ಭೇಟಿಯಾಗಲು ಮಹಿಳೆಯೊಬ್ಬಳು ಭಾರತದ ಗಡಿ ದಾಟಿ ಪಾಕಿಸ್ತಾನಕ್ಕೆ ತೆರಳಿದ್ದಾಳೆ. ರಾಜಸ್ಥಾನದ ಬಿವಾಡಿ ಜಿಲ್ಲೆಯ ವಿವಾಹಿತೆ ತನ್ನ ಬಾಯ್‍ಫ್ರೆಂಡ್ ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸುವ ಮೂಲಕ ಎಲ್ಲರ ಅಚ್ಚರಿಗೆ ಕಾರಣವಾಗಿದ್ದಾಳೆ.

    ಮಹಿಳೆಯನ್ನು ಅಂಜು (Anju) ಎಂದು ಗುರುತಿಸಲಾಗಿದೆ. ಈಕೆಯ ಪತಿ ಅರವಿಂದ್ ಈ ಬಗ್ಗೆ ಪ್ರತಿಕ್ರಿಯಿಸಿ ಕೆಲ ದಿನಗಳ ಹಿಂದೆ ಅಂಜು ಜೈಪುರಕ್ಕೆ ತೆರಳಿದ್ದಾಳೆ. ಆದರೆ ಆಕೆ ಗಡಿ ದಾಟಿ ಹೋಗಿದ್ದಾಳೆ ಎಂಬುದು ಮಾಧ್ಯಮಗಳ ಮೂಲಕ ಭಾನುವಾರ ನನಗೆ ತಿಳಿಯಿತು ಎಂದರು. ಇದನ್ನೂ ಓದಿ: ಪ್ರಿಯಕರನಿಗಾಗಿ 6 ವರ್ಷದ ಮಗಳೊಂದಿಗೆ ಭಾರತಕ್ಕೆ ಹಾರಿಬಂದ 49ರ ಪೋಲೆಂಡ್‌ ಮಹಿಳೆ

    ನಾನು ಆಕೆಯ ಜೊತೆ ವಾಟ್ಸಾಪ್ (Whatsapp) ಸಂಪರ್ಕದಲ್ಲಿದ್ದೆ. ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಕರೆ ಮಾಡಿ ತಾನು ಲಾಹೋರ್‍ನಲ್ಲಿದ್ದೇನೆ. ಎರಡು-ಮೂರು ದಿನಗಳಲ್ಲಿ ವಾಪಸ್ ಬರುವುದಾಗಿ ತಿಳಿಸಿದ್ದಳು ಎಂದು ಅರವಿಂದ್ ಹೇಳಿದರು. ಇದೇ ವೇಳೆ ಪತ್ನಿಯ ಲವ್ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿದೆ. ನನ್ನ ಪತ್ನಿ ವಾಪಸ್ ಬಂದೇ ಬರುತ್ತಾಳೆ ಅನ್ನೋ ನಂಬಿಕೆಯಿದೆ ಎಂದು ಹೇಳಿದರು.

    ಅರವಿಂದ್ ಭಿವಾಡಿಯಲ್ಲಿ ಕೆಲಸ ಮಾಡುತ್ತಿದ್ದು, ಅಂಜು ಖಾಸಗಿ ಸಂಸ್ಥೆಯೊಂದರಲ್ಲಿ ಬಯೋಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ದಂಪತಿ ಇಬ್ಬರು ಮಕ್ಕಳನ್ನು ಹೊಂದಿದ್ದು, ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಅರವಿಂದ್ ಅವರೊಂದಿಗೆ ಮದುವೆಯಾಗಿದ್ದಾರೆ. ಅರವಿಂದ್ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಅಂಜು ಅವರ ಸಹೋದರನೊಂದಿಗೆ ಭಿವಾಡಿಯಲ್ಲಿ ಬಾಡಿಗೆ ಫ್ಲಾಟ್‍ನಲ್ಲಿ ವಾಸವಾಗಿದ್ದರು.

    ರಾಜಸ್ಥಾನ ಟು ಪಾಕಿಸ್ತಾನ: ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಫೇಸ್‍ಬುಕ್‍ನಲ್ಲಿ ಸ್ನೇಹಿತರಾದರು. ಇದೀಗ ಗುರುವಾರ ಅಂಜು ಜೈಪುರಕ್ಕೆ ಹೋಗುವ ನೆಪದಲ್ಲಿ ಭಿವಾಡಿಯಲ್ಲಿರುವ ತನ್ನ ಮನೆಯಿಂದ ಹೊರಟಿದ್ದಳು. ನಂತರ ಆಕೆ ತನ್ನ ಫೇಸ್‍ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿದ್ದಳು. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

    ಆಕೆ ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಳು. ಆಕೆಯ ಪ್ರಯಾಣ ದಾಖಲೆಗಳನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಯಿತು. ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಗೆ ಹೋಗಲು ಅನುಮತಿ ನೀಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ದೇಶಕ್ಕೆ ಕೆಟ್ಟ ಹೆಸರು ತರುವುದನ್ನು ಖಚಿತಪಡಿಸಿಕೊಳ್ಳಲು ಅವರಿಗೆ ಭದ್ರತೆಯನ್ನು ಒದಗಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ!

    ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ!

    ಲಕ್ನೋ: ತವರು ಮನೆಯಿಂದ ಪತ್ನಿಯನ್ನು (Wife) ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು (Husband) ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ (Agra) ನಡೆದಿದೆ.

    ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!

    ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಸಂತ್ರಸ್ತನ ಸಹೋದರ ನೀಡಿದ ದೂರಿನಲ್ಲಿ ಧರ್ಮೇಂದ್ರ ಮತ್ತು ಆತನ ಪತ್ನಿ ಪ್ರೀತಿ 2019 ರಲ್ಲಿ ಮದುವೆಯಾಗಿದ್ದರು. ಮದುವೆಯ ಆರಂಭದಿಂದಲೂ ಪ್ರೀತಿ ಮತ್ತು ಅವರ ಕುಟುಂಬದ ನಡವಳಿಕೆ ವಿಚಿತ್ರವಾಗಿತ್ತು. ಪ್ರೀತಿ ತನ್ನ ತವರು ಮನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಳು. ಮೂರು ತಿಂಗಳ ಹಿಂದೆ ಅವಳು ಮನೆಗೆ ಹೋಗಿದ್ದಳು. ಅವಳನ್ನು ಕರೆದುಕೊಂಡು ಬರಲು ಧರ್ಮೇಂದ್ರ ತೆರಳಿದ್ದ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟೊಮೆಟೋ ತಿನ್ನೋದನ್ನೇ ನಿಲ್ಲಿಸಿದ್ರೆ ಬೆಲೆ ಕಡಿಮೆಯಾಗುತ್ತೆ – ಯುಪಿ ಸಚಿವೆ ಸಲಹೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿಯ ಮುಂದೆಯೇ ಸೋದರ ಸಂಬಂಧಿಯನ್ನು ವರಿಸಿದ ಪತ್ನಿ!

    ಪತಿಯ ಮುಂದೆಯೇ ಸೋದರ ಸಂಬಂಧಿಯನ್ನು ವರಿಸಿದ ಪತ್ನಿ!

    ಭುವನೇಶ್ವರ: ಮಹಿಳೆಯೊಬ್ಬಳು ತನ್ನ ಗಂಡನ ಮುಂದೆಯೇ ಸೋದರ ಸಂಬಂಧಿಯನ್ನು ಮದುವೆಯಾದ ಅಚ್ಚರಿಯ ಘಟನೆಯೊಂದು ಒಡಿಶಾದಲ್ಲಿ (Odisha) ನಡೆದಿದೆ.

    ಸೋನೆಪುರ್ ಜಿಲ್ಲೆಯ ಬಿರ್ಮಹಾರಾಜಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬಲಯ ಗ್ರಾಮದಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. ಇದನ್ನೂ ಓದಿ: ಹೆಚ್ಚು ಜನ ಪ್ರಯಾಣಿಸುವ ಬಿಎಂಟಿಸಿ ರೂಟ್ ಮಾರ್ಕ್ ಮಾಡಿಕೊಂಡಿದ್ದ ಶಂಕಿತರು!

    ಘಟನೆ ವಿವರ: ಅಂಗುಲ್ ಜಿಲ್ಲೆಯ ಹಳ್ಳಿಯೊಂದರ 22 ವರ್ಷದ ಜಿಲ್ಲಿ ಪ್ರಧಾನ್ ಎಂಬಾಕೆ ಮೂರು ವರ್ಷಗಳ ಹಿಂದೆ ಮಾಧವ್ ಪ್ರಧಾನ್ ಎಂಬಾತನನ್ನು ವರಿಸಿದ್ದಳು. ಆದರೆ ಮಾಧವ್ ಮನೆಗೆ ಆಗಾಗ ಜಿಲ್ಲಿಯ ಸೋದರ ಸಂಬಂಧಿ ಭೇಟಿ ಕೊಡುತ್ತಿದ್ದ. ಇದರಿಂದ ಚೆನ್ನಾಗಿಯೇ ಇದ್ದ ಮಾಧವ್- ಜಿಲ್ಲಿ ದಂಪತಿ ಮಧ್ಯೆ ಬಿರುಕು ಮೂಡಲು ಆರಂಭವಾಗಿದೆ.

    ಮಾಧವ್‍ಗೆ ತಿಳಿಯದಂತೆ ಪರಮೇಶ್ವರ್ ಜಿಲ್ಲಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ. ಕ್ರಮೇಣ ಮಾಧವ್ ಇಲ್ಲದಿದ್ದ ಸಮಯದಲ್ಲಿ ಇಬ್ಬರೂ ಭೇಟಿಯಾಗಲು ಶುರುಮಾಡಿರು. ಇವರಿಬ್ಬರ ಪ್ರೇಮಕಥೆಯು ಕುಟುಂಬಸ್ಥರು ಹಾಗೂ ಗ್ರಾಮಸ್ಥರಿಗೆ ತಿಳಿದ ನಂತರ ವಿಷಯಗಳು ವಿಕೋಪಕ್ಕೆ ತಿರುಗಿದವು. ಇದಾದ ಬಳಿಕ ಇಬ್ಬರೂ ಓಡಿಹೋಗಿ ತಲೆಮರೆಸಿಕೊಂಡಿದ್ದರು.

    ಈ ಸಂಬಂಧ ಮಾಧವ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಬ್ಬರನ್ನು ರಕ್ಷಿಸಿ ಠಾಣೆಗೆ ಕರೆತಂದರು. ತಮ್ಮ ಕುಟುಂಬದ ಸದಸ್ಯರು ಪದೇ ಪದೇ ಪ್ರಯತ್ನಿಸಿದರೂ, ಇಬ್ಬರೂ ಪರಸ್ಪರ ಮದುವೆಯಾಗುವುದಾಗಿ ತಿಳಿಸಿದರು. ಇಬ್ಬರಿಗೂ ಬುದ್ಧಿ ಹೇಳಿದರೂ ಕುಟುಂಬಸ್ಥರು ನಡೆಸಿದ ಪ್ರಯತ್ನ ವಿಫಲವಾದ ಬಳಿಕ ಪೊಲೀಸ್ ಠಾಣೆಯಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಇಬ್ಬರಿಗೂ ವಿವಾಹ ನೆರವೇರಿಸಲಾಯಿತು.

    ಸದ್ಯ ಈ ವಿಲಕ್ಷಣ ವಿವಾಹವು ಪಟ್ಟಣದಾದ್ಯಂತ ಚರ್ಚೆಯಾಗಿದೆ. ಆದರೆ ಈ ಬಗ್ಗೆ ಮಾಧವ್ ಮತ್ತು ಅವರ ಕುಟುಂಬದ ಸದಸ್ಯರಿಂದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]