Tag: Wife

  • ಸಬ್‍ಇನ್‍ಸ್ಪೆಕ್ಟರ್ ಪತ್ನಿ ಅನುಮಾನಾಸ್ಪದ ಸಾವು – ಪತಿಯ ವಿರುದ್ಧ ಕೊಲೆ ಆರೋಪ

    ಸಬ್‍ಇನ್‍ಸ್ಪೆಕ್ಟರ್ ಪತ್ನಿ ಅನುಮಾನಾಸ್ಪದ ಸಾವು – ಪತಿಯ ವಿರುದ್ಧ ಕೊಲೆ ಆರೋಪ

    ಬೆಂಗಳೂರು: ನಗರದ ಸಬ್‍ಇನ್‍ಸ್ಪೆಕ್ಟರ್  (Sub Inspector) ಒಬ್ಬರ ಮೇಲೆ ಪತ್ನಿಗೆ (Wife) ಕಿರುಕುಳ ನೀಡಿ ಕೊಲೆಗೈದ ಆರೋಪ ಕೇಳಿ ಬಂದಿದೆ.

    ಮೃತ ಮಹಿಳೆಯನ್ನು ಶಿಲ್ಪಾ (33) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ರಮೇಶ್ ಅವರ ಮೇಲೆ ಶಿಲ್ಪಾ ಪೊಷಕರು ಕೊಲೆ ಆರೋಪ ಹೊರಿಸಿದ್ದಾರೆ. ಅಲ್ಲದೆ ನಿರಂತರ ಪತ್ನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ. ಇದನ್ನೂ ಓದಿ: ಎಲ್ಲರಿಗೂ ಎಐ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಅನ್ನೋ ಆಲೋಚನೆ ಬೇಡ: ಹೆಚ್‌.ಆರ್.ರಂಗನಾಥ್‌

    ರಮೇಶ್ ಹಾಗೂ ಶಿಲ್ಪಾ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಐದಾರು ವರ್ಷಗಳಿಂದ ಲಿವಿಂಗ್ ಟುಗೇದರ್ (Living Together) ರಿಲೇಶನ್‍ಶಿಪ್‍ನಲ್ಲಿದ್ದರು. ಆದರೆ ಮದುವೆಯಾಗಲು (Marriage) ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದ. ಬಳಿಕ ಹಠಬಿಡದೆ ಪೊಲೀಸರ ಸಮ್ಮುಖದಲ್ಲಿ ಶಿಲ್ಪಾ, ರಮೇಶ್‍ನನ್ನು ಮದುವೆಗೆ ಒಪ್ಪಿಸಿದ್ದಳು.

    ಮದುವೆ ಬಳಿಕ ಮನೆಯವರು ಒಪ್ಪುತ್ತಿಲ್ಲ ಎಂದು ಪತ್ನಿಗೆ ಪ್ರತ್ಯೇಕ ಮನೆ ಮಾಡಿಕೊಟ್ಟಿದ್ದ. ಆದರೆ ಜೀವನಕ್ಕೆ ಯಾವುದೇ ಅರ್ಥಿಕ ನೆರವು ನೀಡುತ್ತಿರಲಿಲ್ಲ. ಪದೇ ಪದೇ ಜಾತಿ ನಿಂದನೆ ಮಾಡಿ, ತನ್ನ ಅಕ್ಕನ ಮಗಳನ್ನು ಮದುವೆಯಾಗಲು ನೀನು ಅಡ್ಡಿಯಾಗಿದ್ದೀಯಾ ಮನೆಬಿಟ್ಟು ಹೋಗು ಎಂದು ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಪೋಷಕರು ದೂರಿದ್ದಾರೆ.

    ಶುಕ್ರವಾರ ರಾತ್ರಿ ಕುಟುಂಬದವರ ಜೊತೆ ಫೋನಿನಲ್ಲಿ ಮಾತನಾಡಿದ್ದ ಶಿಲ್ಪಾ ಖರ್ಚಿಗೆ ಹಣ ಬೇಕು ಎಂದು ಹಾಕಿಸಿಕೊಂಡಿದ್ದಳು. ಆದರೆ ಇಂದು ಬೆಳಗ್ಗೆ ಮನೆಯ ಮಾಲೀಕರು ಬಾಗಿಲು ತೆರೆಯುತ್ತಿಲ್ಲ ಎಂದು ಕುಟುಂಬದವರಿಗೆ ತಿಳಿಸಿದ್ದಾರೆ. ಕುಟುಂಬದವರು ಬರುವ ಮುನ್ನವೇ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಶಿಲ್ಪಾ ಕುಟುಂಬ ಆಗ್ರಹಿಸಿದೆ. ಇದನ್ನೂ ಓದಿ: ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

  • ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

    ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

    ಬೆಳಗಾವಿ: ಮನೆಯಲ್ಲೇ ಕಾಲಕಳೆಯುತ್ತಿದ್ದ ಪತಿಗೆ (Husband) ಕೆಲಸಕ್ಕೆ ಹೋಗುವಂತೆ ಹೇಳಿದಕ್ಕೆ ಪತ್ನಿಯನ್ನೇ (Wife) ಕೊಲೆಗೈದ ಪ್ರಕರಣ ಮೂಡಲಗಿಯ (Mudalagi) ನಾಗನೂರ ಗ್ರಾಮದಲ್ಲಿ ನಡೆದಿದೆ.

    ಬಸವ್ವ (35) ಕೊಲೆಯಾದ ಮಹಿಳೆ. ಹಣಮಂತ ಹಿಡಕಲ್ ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ಆರೋಪಿ ಕೆಲಸಕ್ಕೆ ಹೋಗದೆ ಮನೆಯಲ್ಲಿ ಇರುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಕೆಲಸಕ್ಕೆ ಹೋಗುವಂತೆ ಹೇಳಿದ್ದಾಳೆ. ಈ ವೇಳೆ ಸಿಟ್ಟಿಗೆದ್ದ ಆರೋಪಿ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದನ್ನೂ ಓದಿ: ಎಲ್ಲರಿಗೂ ಎಐ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಅನ್ನೋ ಆಲೋಚನೆ ಬೇಡ: ಹೆಚ್‌.ಆರ್.ರಂಗನಾಥ್‌

    ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ

  • ಪತ್ನಿಯನ್ನೇ ಕೊಂದು ಮನೆಗೆ ಬೀಗ ಜಡಿದುಕೊಂಡು ಪರಾರಿಯಾದ್ನಾ ಶಿಕ್ಷಕ?

    ಪತ್ನಿಯನ್ನೇ ಕೊಂದು ಮನೆಗೆ ಬೀಗ ಜಡಿದುಕೊಂಡು ಪರಾರಿಯಾದ್ನಾ ಶಿಕ್ಷಕ?

    – 3 ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ

    ಚಿಕ್ಕಬಳ್ಳಾಪುರ: ಪತ್ನಿಯನ್ನು ಪತಿಯೇ ಕೊಂದು ಮನೆಗೆ ಬೀಗ ಜಡಿದು ನಾಪತ್ತೆಯಾಗಿರುವ ಅನುಮಾನಸ್ಪದ ಪ್ರಕರಣ ಚಿಕ್ಕಬಳ್ಳಾಪುರ (Wife Murder In Chikkaballapur) ಜಿಲ್ಲೆಯ ಗೌರಿಬಿದನೂರಿನ ಗಂಗಾನಗರದಲ್ಲಿ ಬೆಳಕಿಗೆ ಬಂದಿದೆ.

    ಲಕ್ಷ್ಮಿದೇವಿ (40) ಕೊಲೆಯಾದ ಮಹಿಳೆ. ಈಕೆಯ ಪತಿ (Husband) ಕೃಷ್ಣಪ್ಪ (50) ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಲಕ್ಷ್ಮಿದೇವಿ ಹಾಗೂ ಕೃಷ್ಣಪ್ಪ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಹಿರಿಯ ಮಗಳಿಗೆ ಮದುವೆಯಾಗಿದೆ. ಕಿರಿಯ ಮಗಳು ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಗಂಡ-ಹೆಂಡತಿ ಇಬ್ಬರೇ ಮನೆಯಲ್ಲಿದ್ದು ಸದಾ ಸಣ್ಣ-ಪುಟ್ಟ ವಿಚಾರಕ್ಕೂ ಕಿರಿಕ್ ಗಲಾಟೆ ಮಾಮೂಲಿಯಾಗಿತ್ತಂತೆ.

    ಇದೇ ರೀತಿ ಮೇ 19 ರಂದು ಸಹ ಮನೆಯಲ್ಲಿ ಒಡವೆಗಳ ವಿಚಾರವಾಗಿ ಗಂಡ-ಹೆಂಡತಿ ನಡುವೆ ದೊಡ್ಡ ಜಗಳವೇ ನಡೆದಿತ್ತು. ಮಕ್ಕಳ ಮುಂದೆಯೆ ಶಿಕ್ಷಕ ಕೃಷ್ಣಪ್ಪ ಮಚ್ಚಿನಿಂದ ಪತ್ನಿ ಹತ್ಯೆಗೆ ಮುಂದಾಗಿದ್ದ ಎನ್ನಲಾಗಿದೆ. ಆಗ ಮಕ್ಕಳು, ಬಂಧು-ಬಳಗ ಎಲ್ಲರೂ ಬುದ್ಧಿ ಹೇಳಿ ತಮ್ಮ ಪಾಡಿಗೆ ತಾವು ಹೊರಟು ಹೋಗಿದ್ದಾರೆ. ಆದರೆ ಎಲ್ಲರೂ ಹೋದ ನಂತರವೂ ಜಗಳ ದೊಡ್ಡದಾಗಿ ಕೃಷ್ಣಪ್ಪ ಮಚ್ಚಿನಿಂದ ತಲೆಗೆ ಹೊಡೆದು ಕೊಲೆ ಮಾಡಿ ಪರಾರಿಯಾಗಿರಬಹುದು ಅಂತ ಶಂಕಿಸಲಾಗಿದೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ..?: ಮೇ 19 ರಂದು ಮನೆಯಲ್ಲಿ ಗಲಾಟೆ ಆದ ನಂತರ ಬುದ್ಧಿವಾದ ಹೇಳಿ ಸಮಾಧಾನ ಮಾಡಿ ಮಕ್ಕಳು ಹೊರಟು ಹೋಗಿದ್ದರು. ಆದರೆ ಅದಾದ ನಂತರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. 3 ದಿನಗಳ ನಂತರ ಮನೆಯಿಂದ ಅಕ್ಕಪಕ್ಕದ ನಿವಾಸಿಗಳಿಗೆ ಕೆಟ್ಟ ವಾಸನೆ ಬರಲಾರಂಭಿಸಿದೆ. ಮಕ್ಕಳು ಸಹ ಮೂರು ದಿನದಿಂದ ಫೋನ್ ಮಾಡಿದ್ರೂ ಸ್ವಿಚ್‍ಆಫ್ ಅಂತಲೇ ಬಂದಿದೆ. ಹೀಗಾಗಿ ಅನುಮಾನಗೊಂಡು ಅಕ್ಕ-ಪಕ್ಕದ ಮನೆಯವರನ್ನ ಮನೆ ಬಳಿ ಕಳುಹಿಸಿ ನೋಡಲು ತಿಳಿಸಿದ್ದಾರೆ. ಆಗ ಪರಿಚಯಸ್ಥರು ಮನೆ ಬಳಿ ಬಂದಾಗ ಮನೆಗೆ ಬೀಗ ಹಾಕಲಾಗಿದೆ. ಆದರೆ ಮನೆಯ ಒಳಭಾಗದಲ್ಲಿ ಕಿಟಕಿಗಳಲ್ಲಿ ನೊಣಗಳು ಮುತ್ತಿಕೊಂಡಿವೆ. ಇದನ್ನೂ ಓದಿ: ನಂಬಿದ್ರೆ ನಂಬಿ… ಒಂದು ವರ್ಷಕ್ಕೆ 8.26 ಕೋಟಿ ಸಂಪಾದಿಸುತ್ತೆ ಈ ನಾಯಿ

    ಕೆಟ್ಟ ದುರ್ವಾಸನೆ ಮೂಗಿಗೆ ಬಡಿದಿದೆ. ಹಾಗಾಗಿ ನಡೆಯಬಾರದ್ದು ಏನೋ ನಡೆದಿದೆ ಅಂತ ಕಿಟಕಿ ಬಾಗಿಲು ತೆಗೆದು ನೋಡಿದಾಗ ಮನೆಯ ರೂಂನಲ್ಲಿ ರಕ್ತ ಸಿಕ್ತವಾಗಿ ಕೊಳೆತು ಗಬ್ಬು ನಾರುವ ಸ್ಥಿತಿಯಲ್ಲಿ ಲಕ್ಷ್ಮಿದೇವಿ ಮೃತದೇಹ ಕಂಡಿದೆ. ಇದರಿಂದ ಕೂಡಲೇ ಮಕ್ಕಳು ಹಾಗೂ ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಪೊಲೀಸರು ಬಂದು ಬಾಗಿಲು ಒಡೆದು ಒಳ ಹೋಗಿದ್ದಾರೆ. ಮನೆಯಲ್ಲಿ ಕೃಷ್ಣಪ್ಪನ ಮೊಬೈಲ್ ಅಲ್ಲೇ ಇದೆ ಅದ್ರೆ ಆತ ಮಾತ್ರ ಇಲ್ಲ. ಮಂಚದ ಬಳಿ ಲಕ್ಷ್ಮಿದೇವಿಯ ಶವ ಬಿದ್ದಿದ್ದು, ತಲೆಗೆ ಬಲವಾದ ಆಯುಧದಿಂದ ಹೊಡೆಯಲಾಗಿದೆ. ಮತ್ತೊಂದೆಡೆ ಮೃತಳ ಗಂಡ ಕೃಷ್ಣಪ್ಪನ ಫೋನ್ ಮಂಚದ ಮೇಲೆ ಇದ್ದು, ಆತ ನಾಪತ್ತೆಯಾಗಿದ್ದಾನೆ.

    ಇದರಿಂದ ಗಂಡ-ಹೆಂಡತಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಅನುಮಾನ ವ್ಯಕ್ತವಾಗಿದೆ. ಶಿಕ್ಷಕ ಕೃಷ್ಣಪ್ಪ ಜಿಪುಣನಾಗಿದ್ದು, ಹೆಂಡತಿ ಮಕ್ಕಳ ಖರ್ಚಿಗೂ ಹಣ ಕೊಡ್ತಿರಲಿಲ್ಲ. ಹೆಂಡತಿ ಹಾಗೂ ಮಕ್ಕಳಿಗೆ ಮಾಡಿಸಿದ್ದ ಚಿನ್ನಾಭರಣಗಳನ್ನು ತಾನೇ ತನ್ನ ಬೀರುವಿನಲ್ಲಿ ಲಾಕ್ ಮಾಡಿಕೊಳ್ತಿದ್ದ, ಹಣವನ್ನಂತೂ ಕೊಡ್ತಿರಲಿಲ್ಲ. ಇದರಿಂದ ಮನೆಯಲ್ಲಿದ್ದ ಒಡೆವೆಗಳ ವಿಚಾರದಲ್ಲಿ ಗಂಡ ಹೆಂಡಿರ ಮಧ್ಯೆ ಜಗಳ ವಿಕೋಪಕ್ಕೆ ಹೋಗಿ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಸ್ವತಃ ಶಿಕ್ಷಕ ಕೃಷ್ಣಪ್ಪನ ಮಗಳು ಲೀಲಾ ಪೆÇಲೀಸರಿಗೆ ತಂದೆಯ ವಿರುದ್ಧ ದೂರು ನೀಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಕೋಣೆಯೊಳಗೆ ಕೂಡಿ ಹಾಕಿದ್ದ ಪತ್ನಿಯ ರಕ್ಷಣೆಗೆ ಬಂದ ಪೊಲೀಸ್ ಅಧಿಕಾರಿಯ ಮೂಗು ಮುರಿದ ಪತಿ!

    ಕೋಣೆಯೊಳಗೆ ಕೂಡಿ ಹಾಕಿದ್ದ ಪತ್ನಿಯ ರಕ್ಷಣೆಗೆ ಬಂದ ಪೊಲೀಸ್ ಅಧಿಕಾರಿಯ ಮೂಗು ಮುರಿದ ಪತಿ!

    ತಿರುವನಂತಪುರಂ: ಕೋಣೆಯೊಳಗೆ ಕೂಡಿ ಹಾಕಿದ್ದ ಪತ್ನಿಯನ್ನು ರಕ್ಷಿಸಲು ಬಂದ ಪೊಲೀಸ್ ಅಧಿಕಾರಿಯ ಮೂಗನ್ನೇ ಮುರಿದ ಪ್ರಸಂಗವೊಂದು ಕೇರಳದ ಕೊಟ್ಟಾಯಂ (Kottayam Kerala) ನಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಮೇ 14 ರಂದು ರಾತ್ರಿ 10.15ರ ಸುಮಾರಿಗೆ ಪಂಪಾಡಿಯ ವೆಲ್ಲೂರು 8ನೇ ಮೈಲಿನಲ್ಲಿ ಈ ಘಟನೆ ನಡೆದಿದೆ. ಜಿಬಿನ್ ಲೋಬೋ (Jibin Lobo) ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿ. ಇವರು ಪಾಪಂಡಿ ಪೊಲೀಸ್ ಠಾಣೆಯ ಸೀನಿಯರ್ ಆಫೀಸರ್ ಆಗಿದ್ದಾರೆ. ಸ್ಯಾಮ್ ಝಕರಿಯಾ ( Sam Zakariya) (42) ಹಲ್ಲೆ ಮಾಡಿದ ವ್ಯಕ್ತಿಯಾಗಿದ್ದು, ಈತ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದನು. ಹಲ್ಲೆಯಿಂದಾಗಿ ಅಧಿಕಾರಿಯ ಮೂಗು ಮುರಿದು ಹೋಗಿದೆ. ಅಲ್ಲದೆ ಕಣ್ಣಿಗೂ ಗಾಯಗಳಾಗಿವೆ.

    ನಡೆದಿದ್ದೇನು..?: ಆರೋಪಿ ಸ್ಯಾಮ್ ಅವರ ಪತ್ನಿ ಬಿನಿ, ಪಂಪಾಡಿ ಪೊಲೀಸ್ ಠಾಣೆಗೆ ಕರೆ ಮಾಡಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನನ್ನನ್ನು ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಲಾಗಿದೆ ಎಂದು ದೂರು ನೀಡಿದ್ದರು. ಕೂಡಲೇ ಗ್ರೇಡ್ ಎಸ್‍ಐ ರಾಜೇಶ್, ಎಸ್‍ಸಿಪಿಒ ಜಿಬಿನ್ ಮತ್ತು ಹೋಂಗಾರ್ಡ್ ಜಯಕುಮಾರ್ ಸ್ಥಳಕ್ಕೆ ದೌಡಾಯಿಸಿದರು. ಇದನ್ನೂ ಓದಿ: ಹಾಡಹಗಲೇ ಡ್ರ್ಯಾಗರ್ ಹಿಡಿದು ಯುವತಿಗೆ ಕಿರುಕುಳ ನೀಡಿದ ದುಷ್ಕರ್ಮಿ – ಮತ್ತೊಬ್ಬ ಮಹಿಳೆಯಿಂದ ರಕ್ಷಣೆ

    ಅಲ್ಲದೆ ಮಹಿಳೆಯನ್ನು ಕೂಡಿ ಹಾಕಿದ್ದ ಕೊಠಡಿಯ ಬಾಗಿಲು ತೆರೆಯಲು ಪೊಲೀಸ್ ಅಧಿಕಾರಿ ಯತ್ನಿಸುತ್ತಿದ್ದಾಗ ಸ್ಯಾಮ್, ಜಿಬಿನ್ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಆರೋಪಿ, ರಾಜೇಶ್ ಮತ್ತು ಜಯಕುಮಾರ್ ಅವರನ್ನು ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮಂತುರುತಿಯ ಚಂಪಕ್ಕರ ಮೂಲದ ಪೊಲೀಸ್ ಅಧಿಕಾರಿ ಜಿಬಿನ್ ಅವರ ಕಣ್ಣಿನ ರೆಪ್ಪೆಯ ಮೇಲೆ ಗಾಯವಾಗಿದ್ದು, ನಾಲ್ಕು ಹೊಲಿಗೆಗಳನ್ನು ಹಾಕಲಾಗಿದೆ.

    ಬಿನಿ ತನ್ನ ಮೊದಲ ಪತಿಯಿಂದ ವಿಚ್ಛೇದನ ಪಡೆದ ನಂತರ ಎರಡು ವರ್ಷಗಳ ಹಿಂದೆ ಸ್ಯಾಮ್‍ನನ್ನು ವಿವಾಹವಾದಳು. ಆಕೆಗೆ ಮೊದಲ ಪತಿಯಿಂದ ಮೂವರು ಮಕ್ಕಳಿದ್ದಾರೆ. ಆದರೆ ಮಕ್ಕಳನ್ನು ಮನೆಗೆ ಕರೆತರುವುದಿಲ್ಲ ಎಂಬ ಷರತ್ತಿನ ಮೇಲೆ ಬಿನಿಯನ್ನು ಸ್ಯಾಮ್ ಮದುವೆಯಾಗಿದ್ದನು.

  • ಪತ್ನಿಯನ್ನು ಸ್ಕ್ಯಾನ್ ಮಾಡಲು 15 ನಿಮಿಷ ತೆಗೆದುಕೊಂಡಿದ್ದಕ್ಕೆ ಸಂಶಯಪಟ್ಟು ಹತ್ಯೆಗೆ ಸುಪಾರಿ ಕೊಟ್ಟ ಪತಿ

    ಪತ್ನಿಯನ್ನು ಸ್ಕ್ಯಾನ್ ಮಾಡಲು 15 ನಿಮಿಷ ತೆಗೆದುಕೊಂಡಿದ್ದಕ್ಕೆ ಸಂಶಯಪಟ್ಟು ಹತ್ಯೆಗೆ ಸುಪಾರಿ ಕೊಟ್ಟ ಪತಿ

    ಯಾದಗಿರಿ: ಹೆಂಡತಿಯನ್ನು (Wife) ಆರೋಗ್ಯ ತಪಾಸಣೆಗಾಗಿ ಸ್ಕ್ಯಾನಿಂಗ್ ಸೆಂಟರ್‌ಗೆ (Scanning Center) ಕರೆದುಕೊಂಡು ಹೋಗಿದ್ದಾಗ ಅಲ್ಲಿನ ಸಿಬ್ಬಂದಿ ಮೇಲೆ ಸಂಶಯಪಟ್ಟ ಪತಿ (Husband) ಆತನ ಹತ್ಯೆಗೆ ಸುಪಾರಿ ನೀಡಿದ್ದ. ಆದರೆ ಹತ್ಯೆಗೂ ಮುನ್ನವೇ ಸುಪಾರಿ ಪಡೆದಿದ್ದಾತನೊಂದಿಗೆ ಪತಿಯೂ ಸಹ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಯಾದಗಿರಿ (Yadgiri) ನಗರ ಪೊಲೀಸ್ ಠಾಣೆಯ ಪೊಲೀಸರು ಎಚ್ಚೆತ್ತುಕೊಂಡು ಕೊಲೆಗೆ ಹೊಂಚು ಹಾಕಿ ಕುಳಿತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್‌ಐ ದೇವೇಂದ್ರ ರೆಡ್ಡಿ ಹಾಗೂ ನೇತೃತ್ವದ ತಂಡ ಓರ್ವನ ಪ್ರಾಣ ಕಾಪಾಡಿದಂತಾಗಿದೆ.

    ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡಾ ಗ್ರಾಮದ ನಾನ್ಯಾ ನಾಯಕ್ ಕಳೆದ 8 ತಿಂಗಳ ಹಿಂದೆ ತನ್ನ ಹೆಂಡತಿಯನ್ನು ತಪಾಸಣೆಗಾಗಿ ಯಾದಗಿರಿ ನಗರದ ಶಿವಸಾಯಿ ಸ್ಕ್ಯಾನ್ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದ. ಸ್ಕ್ಯಾನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ನಾನ್ಯಾ ನಾಯಕನ ಹೆಂಡತಿಯನ್ನು 15 ನಿಮಿಷಗಳ ಕಾಲ ತಪಾಸಣೆ ಮಾಡಿದ್ದಾನೆ. ಇದರಿಂದ ನಾಯಕ್ ತನ್ನ ಹೆಂಡತಿ ಇಷ್ಟು ಸಮಯ ಒಳಗಡೆ ಇರುವುದಕ್ಕೆ ಸುರೇಶ್‌ನ ಮೇಲೆ ಸಂಶಯ ಪಟ್ಟಿದ್ದಾನೆ. ಇದೇ ಕಾರಣಕ್ಕೆ ಸುರೇಶ್‌ನನ್ನು ಕೊಲ್ಲಲು ಕಳೆದ 8 ತಿಂಗಳಿಂದ ಪರಿತಪಿಸುತ್ತಿದ್ದ.

    ನಾನ್ಯಾ ನಾಯಕ್ ಬೆಂಗಳೂರಿನಲ್ಲಿದ್ದ ತನ್ನ ಪರಿಚಯಸ್ಥನಿಗೆ ಸ್ಕ್ಯಾನ್ ಸೆಂಟರ್‌ನಲ್ಲಿ ಕೆಲಸ ಮಾಡುವ ಸುರೇಶ್‌ನ ಹತ್ಯೆಗೆ 50 ಸಾವಿರ ರೂ. ಹಣ ಹಾಗೂ ಬಂಗಾರದ ಉಂಗುರ ನೀಡಿದ್ದ. ಅದರಂತೆ ಸುಪಾರಿ ಪಡೆದಿದ್ದಾತ ಪುಣೆಯಲ್ಲಿ ಕಂಟ್ರಿ ಪಿಸ್ತೂಲ್, ಚಾಕು, ಪಂಚ್ ಖರೀದಿಸಿ ಸುರೇಶ್‌ನನ್ನು ಹತ್ಯೆ ಮಾಡಲು ಏಪ್ರಿಲ್ 20ರಂದು ಯಾದಗಿರಿ ನಗರದ ಲಾಡ್ಜ್ ಒಂದರಲ್ಲಿ ಹೊಂಚು ಹಾಕಿ ಕುಳಿತಿದ್ದ. ಇದನ್ನೂ ಓದಿ: ‘ಅಗ್ನಿಸಾಕ್ಷಿ’ ಸೀರಿಯಲ್‌ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

    ಚುನಾವಣೆ ಹಿನ್ನೆಲೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ವೇಳೆ ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‌ಐ ದೇವೇಂದ್ರ ರೆಡ್ಡಿ ಹಾಗೂ ಸಿಬ್ಬಂದಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಬೆಂಗಳೂರಿನ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆತ ತೊದಲುತ್ತಿದ್ದುದನ್ನು ಗಮನಿಸಿದ ಪಿಎಸ್‌ಐ ಆತ ಉಳಿದುಕೊಂಡಿದ್ದ ಲಾಡ್ಜ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ.

    ಈ ವೇಳೆ ಆತನ ರೂಮ್‌ನಲ್ಲಿ ಕಂಟ್ರಿ ಪಿಸ್ತೂಲ್, 3 ಜೀವಂತ ಗುಂಡುಗಳು, ಬಟನ್ ಚಾಕು, ಪಂಚ್ ಪತ್ತೆಯಾಗಿವೆ. ಇದನ್ನು ವಶಪಡಿಸಿಕೊಂಡು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹತ್ಯೆಗೆ ಸುಪಾರಿ ನೀಡಿರುವ ವಿಷಯ ಬೆಳಕಿಗೆ ಬಂದಿದೆ. ನಂತರ ಸುಪಾರಿ ನೀಡಿದ ನಾನ್ಯಾ ನಾಯಕ್‌ನನ್ನು ಹಾಗೂ ಹತ್ಯೆಗೆ ಸುಪಾರಿ ಪಡೆದವನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಇದನ್ನೂ ಓದಿ: 2 ಲಾರಿಗಳ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

    ಯಾದಗಿರಿ ವಿಭಾಗದ ಡಿವೈಎಸ್‌ಪಿ ಬಸವೇಶ್ವರ, ನಗರ ಠಾಣೆ ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ದೇವಿಂದ್ರ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡದಕ್ಕೆ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

  • ಪತಿಯನ್ನು ತಬ್ಬಿ ಕಣ್ಣೀರಿಟ್ಟ ಶಿಲ್ಪಾ ಜಗದೀಶ್

    ಪತಿಯನ್ನು ತಬ್ಬಿ ಕಣ್ಣೀರಿಟ್ಟ ಶಿಲ್ಪಾ ಜಗದೀಶ್

    ಹುಬ್ಬಳ್ಳಿ: ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ತಮ್ಮ ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಲೇ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ಅವರು ತಮ್ಮ ಪತಿಯನ್ನು ತಬ್ಬಿ ಕಣ್ಣೀರಿಟ್ಟಿದ್ದಾರೆ.

    ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಲೇ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ವೇಳೆ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ ಕಣ್ಣೀರು ಹಾಕಿದರು. ಪತ್ನಿಗೆ ಸಮಾಧಾನಪಡಿಸಲು ಮುಂದಾದ ಶೆಟ್ಟರ್ ಕೂಡಾ ಈ ವೇಳೆ ಗದ್ಗದಿತರಾದರು. ಇಬ್ಬರು ಕಣ್ಣೀರು ಹಾಕಿದ್ದನ್ನು ನೋಡಿದ ಶೆಟ್ಟರ್ ಬೆಂಬಲಿಗರು ಕೂಡಾ ಕಣ್ಣೀರಾಗಿದ್ದಾರೆ.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಕಳೆದ ಹಲವಾರು ತಿಂಗಳುಗಳಿಂದ ನನಗೆ ತೊಂದರೆ ಕೊಡುವ ಕೆಲಸ ಆಗಿದೆ. ಬಿಜೆಪಿಯಲ್ಲಿ ಅಪಮಾನ ಆಗುವ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ ಮನನೊಂದು ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ ಎಂದು ತಿಳಿಸಿದರು.

    ನನಗೆ ಬಿಜೆಪಿ ಪಕ್ಷ ಬಿಡುವ ಆಸೆ ಎಂದೂ ಇರಲಿಲ್ಲ. ಆದರೆ ನನ್ನ ಮನೆಯಿಂದ ಹೊರ ಹಾಕುವ ಪ್ರಯತ್ನ ಆಗಿತ್ತು. ನಾನು ಕಾಂಗ್ರೆಸ್‌ಗೆ ಯಾವುದೇ ಕರಾರು ಹಾಕಿಲ್ಲ. ನನ್ನನ್ನು ಗೌರವದಿಂದ ನೋಡಿಕೊಂಡರೆ ಸಾಕು ಎಂದು ಹೇಳಿದ್ದೇನೆ. ನನಗೆ ಕಾಂಗ್ರೆಸ್ ನಾಯಕರು ಹೃದಯಸ್ಪರ್ಶಿ ಸ್ವಾಗತ ಮಾಡಿಕೊಂಡಿದ್ದಾರೆ. ನಾನು ಬಿಜೆಪಿಯನ್ನು ಬೈಯಲ್ಲ. ಕೆಲವೊಂದು ನಾಯಕರ ಹಿಡಿತದಲ್ಲಿ ಬಿಜೆಪಿ ಇದೆ ಎಂದು ಶೆಟ್ಟರ್ ಹೇಳಿದರು. ಇದನ್ನೂ ಓದಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ – ಪೊಲಿಟಿಕಲ್ ಸೂಸೈಡ್ ಎಂದ ಸುಧಾಕರ್

    ಏಪ್ರಿಲ್ 19ರಂದು ನಾನು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಅಂದು ದೊಡ್ಡ ಪ್ರಮಾಣದ ಜನರು ಬರುತ್ತಾರೆ. 8-10 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. 5 ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶೆಟ್ಟರ್ 6ನೇ ಬಾರಿ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಇದನ್ನೂ ಓದಿ: ಲಿಂಗಾಯತ ನಾಯಕ ಶೆಟ್ಟರ್‌ಗೆ ಬಿಜೆಪಿಯಿಂದಾದ ಅವಮಾನ ಯಾವ ನಾಯಕನಿಗೂ ಆಗದಿರಲಿ: ಸಿದ್ದು

  • ಮದ್ವೆಯಾಗಿ 8 ತಿಂಗಳು ಕಳೆಯುವುದರೊಳಗೆ ಪತ್ನಿಯನ್ನು ಚಾಕುವಿನಿಂದ ಇರಿದೇ ಬಿಟ್ಟ!

    ಮದ್ವೆಯಾಗಿ 8 ತಿಂಗಳು ಕಳೆಯುವುದರೊಳಗೆ ಪತ್ನಿಯನ್ನು ಚಾಕುವಿನಿಂದ ಇರಿದೇ ಬಿಟ್ಟ!

    ಚಿಕ್ಕಬಳ್ಳಾಪುರ: ಮದುವೆಯಾಗಿ 8 ತಿಂಗಳು ಕಳೆಯೋದ್ರೊಳಗೆ ಪತಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪು (Doddaballapur) ರದ ಶ್ರೀನಗರದಲ್ಲಿ ನಡೆದಿದೆ.

    ಮೃತಳನ್ನು ಜೆನಿಲಾ ಜೋಬಿಯಾ ಎಂದು ಗುರುತಿಸಲಾಗಿದ್ದು, ಈಕೆಯನ್ನು ಪತಿ ಸ್ಯಾಮ್ ಕೊಲೆ ಮಾಡಿದ್ದಾನೆ. ಸ್ಯಾಮ್ ದೊಡ್ಡಬಳ್ಳಾಪುರದ ನಿವಾಸಿಯಾಗಿದ್ದು, ಜನಿಲಾ ಜೋಬಿಯಾ ಮೂಲತಃ ತಮಿಳುನಾಡಿನ ಕನ್ಯಾಕುಮಾರಿ (Kanyakumari) ಮೂಲದವಳು. ಇವರಿಬ್ಬರಿಗೂ ಕಳೆದ 8 ತಿಂಗಳ ಹಿಂದೆಯಷ್ಟೇ ಮನೆ ಮಂದಿಯೆಲ್ಲಾ ಸೇರಿ ಸಂಭ್ರಮದಿಂದ ಮದುವೆ ಮಾಡಿದರು. ಆದರೆ ಮದುವೆಯಾಗಿ ಕೇವಲ 8 ತಿಂಗಳು ಆಗುವುದರೊಳಗೆ ತಾಳಿ ಕಟ್ಟಿದ ಗಂಡನ ಕೈಯಿಂದಲೇ ಹೆಂಡತಿ ಸಾವನ್ನಪ್ಪಿದ್ದಾಳೆ.

    ಸ್ಯಾಮ್ ಹಾಗೂ ಜೋಬಿಯಾ ನಡುವೆ ಮಧ್ಯರಾತ್ರಿ ರೂಂನಲ್ಲಿ ಜೋರು ಜಗಳವಾಗಿದ್ದು, ಜಗಳದ ವೇಳೆ ಸ್ಯಾಮ್ ಚಾಕುವಿನಿಂದ ಜೋಬಿಯಾಳಿಗೆ ಮನಸ್ಸೋ ಇಚ್ಚೆ ಇರಿದಿದ್ದಾನೆ. ಈ ವೇಳೆ ಮನೆಯಲ್ಲೇ ಇದ್ದ ಸ್ಯಾಮ್ ಅಪ್ಪ-ಅಮ್ಮ ಹಾಗೂ ಅಕ್ಕಪಕ್ಕದ ಮನೆಯವರು ಏನಾಗ್ತಿದೆ ಯಾಕೆ ಗಲಾಟೆ ಅಂತ ರೂಂ ಬಾಗಿಲು ಬಡಿದು ಒಳಗೆ ಹೋದಾಗ ಸ್ಯಾಮ್ ಮಾಡಿರೋ ಕೃತ್ಯ ಬೆಳಕಿಗೆ ಬಂದಿದೆ. ಸೊಸೆ ಜೋಬಿಯಾ ರಕ್ಷಣೆಗೆ ಮುಂದಾದ ತಂದೆ-ತಾಯಿಯೂ ಮೇಲೂ ಸ್ಯಾಮ್ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ನಂತರ ಸ್ಯಾಮ್ ಸೇರಿ ಎಲ್ಲರೂ ಜೋಬಿಯಾಳನ್ನ ಖಾಸಗಿ ಆಸ್ಪತ್ರೆಗೆ ಕೆರೆದುಕೊಂಡು ಹೋಗಿದ್ರೂ ಜೋಬಿಯಾ ಬದುಕುಳಿದಿಲ್ಲ. ಇದನ್ನೂ ಓದಿ: ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ – ನಾಲ್ವರು ಸಾವು

    ಸ್ಯಾಮ್ ಬೇರೋಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದು ಚಾಟಿಂಗ್ ಮಾಡ್ತಿದ್ದ ಎನ್ನಲಾಗಿದೆ. ಇಲ್ಲ ಹೆಂಡತಿಯೇ ಸ್ಯಾಮ್ ಗೆ ಮೋಸ ಮಾಡಿ ಬೇರೆಯವರ ಜೊತೆ ಚಾಟಿಂಗ್ ಮಾಡ್ತಿದ್ಲಾ ಎಂಬ ಅನುಮಾನವೂ ಮೂಡಿದೆ. ಈ ವಿಚಾರಗಳಿಗೆ ಗಲಾಟೆ ನಡೆದಿರಬಹುದು ಎನ್ನಲಾಗಿದ್ದು, ಇದೇ ಗಲಾಟೆ ಜೋರಾಗಿ ಸ್ಯಾಮ್ ಮೊದಲೇ ಪ್ಲಾನ್ ಮಾಡಿದಂತೆ ಹೆಂಡತಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಸ್ಯಾಮ್ ನನ್ನ ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

    ಸ್ಯಾಮ್ ಮಾತ್ರ ಯಾಕೆ ಕೊಲೆ ಮಾಡಿದ ಅಂತ ಬಾಯಿ ಬಿಡ್ತಿಲ್ಲ. ಬದಲಾಗಿ ಅರೆ ಹುಚ್ಚನ ತರ ಪೊಲೀಸರ ದಿಕ್ಕು ತಪ್ಪಿಸೋ ಕೆಲಸ ಮಾಡ್ತಿದ್ದಾನೆ. ಜೆನಿಲಾ ಜೋಬಿಯಾ ಪೋಷಕರು ತಮಿಳುನಾಡಿನಿಂದ ಆಗಮಿಸುತ್ತಿದ್ದು, ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ.

  • ಸೆಕ್ಸ್‌ಗೆ ಒಪ್ಪದ ಪತ್ನಿಯ ಶೀಲ ಶಂಕಿಸಿ ಕೈ-ಕಾಲು ಕಟ್ಟಿ ಕೊಲೆಗೈದ!

    ಸೆಕ್ಸ್‌ಗೆ ಒಪ್ಪದ ಪತ್ನಿಯ ಶೀಲ ಶಂಕಿಸಿ ಕೈ-ಕಾಲು ಕಟ್ಟಿ ಕೊಲೆಗೈದ!

    ತಿರುವನಂತಪುರಂ: ಸೆಕ್ಸ್ ಗೆ ಒಪ್ಪದ ಪತ್ನಿಯ ಮೇಲೆ ಅಕ್ರಮ ಸಂಬಂಧದ ಅನುಮಾನ ಬಂದು ಪತಿ (Husband Killed Wife) ಬರ್ಬರವಾಗಿ ಕೊಲೆಗೈದ ಘಟನೆ ಕೇರಳದ ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ.

    ರಫೀಕ್ ಶನಿವಾರ ರಾತ್ರಿ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ ಕಟ್ಟಿ ಸಾಯಿಸಿದ್ದಾನೆ. ನಾಲ್ಕೂವರೆ ವರ್ಷದ ಮಗು ಜೊತೆ ದಂಪತಿ ಮಲಗಿದ್ದ ಸಂದರ್ಭದಲ್ಲಿ ಪತಿ ಈ ಕೃತ್ಯ ಎಸಗಿದ್ದಾನೆ. ಪತ್ನಿ ಸೆಕ್ಸ್ ಗೆ ಒಪ್ಪದಿದ್ದರಿಂದ ಸಿಟ್ಟುಗೊಂಡ ಪತಿ ರಫೀಕ್ ಆಕೆಗೆ ಬೇರೊಬ್ಬನ ಜೊತೆ ಸಂಬಂಧ ಇರಬೇಕು ಎಂದು ಶಂಕಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು

    ಕೊಲೆ ಮಾಡಿದ್ದು ಹೇಗೆ..?: ಪತ್ನಿಯ ತಾಯಿ ಪಕ್ಕದ ರೂಮಿನಲ್ಲಿ ಮಲಗಿದ್ದರು. ಇತ್ತ ರಫೀಕ್ ಮೊದಲು ತನ್ನ ಪತ್ನಿಯ ಕೈ-ಕಾಲುಗಳನ್ನು ಕಿಟಕಿಗೆ ಕಟ್ಟಿದ್ದಾನೆ. ಇದನ್ನು ಗಮನಿಸಿದ ಫಾತಿಮಾ ತಾಯಿ ಜೋರಾಗಿ ಕಿರುಚಿಕೊಂಡು ಸಹಾಯಕ್ಕಾ ಅಕ್ಕ-ಪಕ್ಕದ ಮನೆಯವರನ್ನು ಕರೆದಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಆಕೆ ಬದುಕುಳಿಯಲಿಲ್ಲ.

    ಇತ್ತ ಪತ್ನಿ ಮೃತಪಟ್ಟ ಬೆನ್ನಲ್ಲೇ ಪತಿ ರಫೀಕ್, ಆಕೆಯ ಚಿನ್ನಾಭರಣಗಳೊಂದಿಗೆ ತಲೆಮರೆಸಿಕೊಂಡಿದ್ದಾನೆ. ನಂತರ ಆತನನ್ನು ಹುಡುಕಿ ಬಂಧಿಸಲಾಯಿತು.

     

  • ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ

    ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ

    ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

    ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು.

    ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ ಬೇಸತ್ತು ಪತ್ನಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂದಿನಂತೆ ಸಂಜೆ ಕೆಲಸ ಮುಗಿಸಿ ಹೊರಡುವಾಗ ಪತಿ ನಂದಿನಿಗೆ ಕರೆ ಮಾಡಿದ್ದಾರೆ. ಈ ವೇಳೆ ಪತ್ನಿ ಕರೆ ಸ್ವೀಕರಿಸಲಿಲ್ಲ. ಮನೆಗೆ ಬಂದು ನೋಡಿದಾಗ ನೇಣು ಹಾಕಿಕೊಂಡಿರೋದು ಬೆಳಕಿಗೆ ಬಂದಿದೆ.

    ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆ (Hennuru Police Station) ಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್

  • ಧ್ರುವನಾರಾಯಣ ಪತ್ನಿ ವೀಣಾ ನಿಧನ

    ಧ್ರುವನಾರಾಯಣ ಪತ್ನಿ ವೀಣಾ ನಿಧನ

    ಮೈಸೂರು: ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ (R Dhruvanarayana) ಅವರ ಪತ್ನಿ ವೀಣಾ (Veena) ಶುಕ್ರವಾರ ನಿಧನರಾಗಿದ್ದಾರೆ.

    ಕ್ಯಾನ್ಸರ್ (Cancer) ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

    ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು. ಇದನ್ನೂ ಓದಿ: ವರುಣಾಗೆ ಬಿ.ವೈ ವಿಜಯೇಂದ್ರ ಹೆಸರು ಶಿಫಾರಸ್ಸಿಲ್ಲ!