Tag: Wife

  • ಶೌಚಾಲಯಕ್ಕೆ ಹೋಗಿದ್ದ ಪತ್ನಿಯನ್ನು ಮರೆತು ಟ್ರಿಪ್ ಮುಂದುವರಿಸಿ ಫಜೀತಿಗೊಳಗಾದ ಪತಿ!

    ಶೌಚಾಲಯಕ್ಕೆ ಹೋಗಿದ್ದ ಪತ್ನಿಯನ್ನು ಮರೆತು ಟ್ರಿಪ್ ಮುಂದುವರಿಸಿ ಫಜೀತಿಗೊಳಗಾದ ಪತಿ!

    ಬ್ಯಾಂಕಾಕ್: ವ್ಯಕ್ತಿಯೊಬ್ಬ ಶೌಚಾಲಯಕ್ಕೆ ಹೋಗಿದ್ದ ತನ್ನ ಪತ್ನಿಯನ್ನು ಮರೆತು ಪ್ರವಾಸವನ್ನು ಮುಂದುವರಿಸಿದ ವಿಚಿತ್ರ ಘಟನೆ ಥೈಲ್ಯಾಂಡ್‍ನಲ್ಲಿ (Thailand) ನಡೆದಿದೆ.

    ಬೂಂಟೊಮ್ ಚೈಮೂನ್ (55) ಮತ್ತು ಆತನ ಪತ್ನಿ (Wife) ಅಮ್ನುವೇ ಚೈಮೂನ್ (49) ರಜೆಯ ಮಜಾ ಕಳೆಯಲು ರೋಡ್ ಟ್ರಿಪ್ (Road Trip) ಕೈಗೊಂಡಿದ್ದರು. ಟ್ರಿಪ್ ಸಮಯದಲ್ಲಿ ಶೌಚಾಲಯಕ್ಕೆಂದು ಬೆಳಗಿನ ಜಾವ 2 ಗಂಟೆಗೆ ತಮ್ಮ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಆದರೆ ಅಲ್ಲಿ ಸುತ್ತಲೂ ಕಾಡುಗಳಿದ್ದರಿಂದ ಕಾರಿನಿಂದ ಇಳಿದು ಶೌಚಕ್ಕೆಂದು ಮಹಿಳೆ ಹತ್ತಿರದ ಕಾಡಿನೊಳಗೆ ಹೋಗಿದ್ದಾಳೆ. ಆದರೆ ಇತ್ತ ಆಕೆಯ ಪತಿ ಬೂಂಟೊಮ್ ತನ್ನ ಪತ್ನಿ ಅಮ್ನುವೇ ಚೈಮೂನ್ ವಾಹನದಿಂದ ಇಳಿದಿರುವುದನ್ನು ಗಮನಿಸಿರಲಿಲ್ಲ. ಇದರಿಂದಾಗಿ ಆತ ತನ್ನ ಪ್ರವಾಸವನ್ನು ಮುಂದುವರಿಸಿದ್ದಾನೆ.

    ಇತ್ತ ಅಮ್ನುವೇ ಚೈಮೂನ್ ಕಾಡಿನಿಂದ ಹಿಂದಿರುಗಿ ಬಂದಿದ್ದಾಳೆ. ಆದರೆ ಆ ವೇಳೆ ಕಾರಾಗಲೀ, ಗಂಡನಾಗಲೀ ಕಾಣಿಸಲಿಲ್ಲ. ಇದರಿಂದಾಗಿ ಆಕೆ ತನ್ನನ್ನು ಬಿಟ್ಟು ಹೋಗಿದ್ದಾನೆ ಎಂದು ಬಹುಬೇಗನೇ ಅರಿತುಕೊಂಡಿದ್ದಾಳೆ. ಈ ವಿಷಯವನ್ನು ತನ್ನ ಪತಿಗೆ ತಿಳಿಸಬೇಕು ಎಂದುಕೊಂಡರೂ ಆಕೆ ಬಳಿ ಮೊಬೈಲ್ ಇರಲಿಲ್ಲ ಬದಲಿಗೆ ಕಾರಿನಲ್ಲೇ ಇರುವುದನ್ನು ನೆನಪಿಸಿಕೊಂಡಿದ್ದಾಳೆ. ಇತ್ತ ತುಂಬಾ ಕತ್ತಲಾಗಿದ್ದರಿಂದ ಭಯಭೀತಳಾಗಿದ್ದಳು.

    ಆದರೂ ಆಕೆ ಸುಮಾರು 20 ಕಿ.ಮೀ ಸಂಚರಿಸಿ ಕಬಿನ್ ಬುರಿ ಜಿಲ್ಲೆಯನ್ನು ತಲುಪಿದ್ದಾಳೆ. ಅಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿದ್ದು, ತನ್ನ ಪತಿಗೆ ಈ ವಿಷಯವನ್ನು ತಿಳಿಸಲು ಕೇಳಿಕೊಂಡಿದ್ದಾಳೆ. ಆದರೆ ಆಕೆಗೆ ಪತಿಯ ನಂಬರ್ ನೆನಪಿಲ್ಲದ ಕಾರಣ 20 ಬಾರಿ ತನ್ನ ನಂಬರ್‌ಗೆ ಕರೆ ಮಾಡಿದ್ದಾಳೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

    ಅದಾದ ಬಳಿಕ ಬೆಳಗ್ಗೆ 8ರ ಸುಮಾರಿಗೆ ಪೊಲೀಸರ ಸಹಾಯದಿಂದ ಪತಿಯನ್ನು ಸಂಪರ್ಕಿಸಿದ್ದಾಳೆ. ಆದರೆ ಆವರೆಗೂ ಆತನಿಗೆ ಪತ್ನಿ ಕಾರಿನಲ್ಲಿ ಇರಲಿಲ್ಲವೆಂಬ ಯಾವುದೇ ಸುಳಿವಿರಲಿಲ್ಲ. ಆತ ಕಾರಿನ ಹಿಂಬದಿ ಸೀಟಿಯಲ್ಲಿ ತನ್ನ ಪತ್ನಿ ಗಾಢ ನಿದ್ದೆಯಲ್ಲಿದ್ದಾಳೆ ಎಂದುಕೊಂಡಿದ್ದ. ಅಷ್ಟೇ ಅಲ್ಲದೇ ಆತ ಸುಮಾರು 159 ಕಿ.ಮೀ ದೂರದವರೆಗೆ ಹೋಗಿದ್ದ. ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ಯುವಕನ ಮೇಲೆ ಗುಂಡೇಟು – ಕ್ಷಣಮಾತ್ರದಲ್ಲಿ ತಪ್ಪಿದ ಅನಾಹುತ

    ತನ್ನ ಪತ್ನಿಯನ್ನು ಬಿಟ್ಟುಬಂದಿದ್ದೇನೆ ಎಂಬ ವಿಷಯ ತಿಳಿದಾಕ್ಷಣ ಆತ ತನ್ನ ಪತ್ನಿಯನ್ನು ಕರೆದುಕೊಂಡು ಬರಲು ವಾಪಸ್ ತೆರಳಿದ್ದಾನೆ. ಅಷ್ಟೇ ಅಲ್ಲದೇ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ. ದಂಪತಿಗೆ 27 ವರ್ಷಗಳ ಹಿಂದೆ ಮದುವೆಯಾಗಿದ್ದು, 26 ವರ್ಷದ ಮಗನಿದ್ದಾನೆ. ಇದನ್ನೂ ಓದಿ: ಪಹಣಿ ತಿದ್ದುಪಡಿಗೆ 5,000 ಲಂಚ ಪಡೆದ ಅಧಿಕಾರಿ – ವೀಡಿಯೋ ಮಾಡಿ ಹರಿಬಿಟ್ಟ ರೈತರು

    Live Tv
    [brid partner=56869869 player=32851 video=960834 autoplay=true]

  • ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಥಳಿಸಿದ ಪತಿ- ಖಾಸಗಿ ಅಂಗಕ್ಕೆ ಗಾಯ

    ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಥಳಿಸಿದ ಪತಿ- ಖಾಸಗಿ ಅಂಗಕ್ಕೆ ಗಾಯ

    ಲಕ್ನೋ: ಮದುವೆಯಾಗಿ (Marriage) ವರ್ಷಗಳೇ ಕಳೆದರೂ ಮಗುವಾಗಿಲ್ಲ (Baby) ಎಂಬ ಕೋಪಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು (Wife) ಥಳಿಸಿ ಆಕೆಯ ಖಾಸಗಿ ಅಂಗಕ್ಕೆ ಚೂಪಾದ ಬ್ಲೇಡ್‍ನಿಂದ ಇರಿದು ಗಾಯಗೊಳಿಸಿರುವ ಘಟನೆ ಉತ್ತರಪ್ರದೇಶದ (Uttar Pradesh) ಲಕ್ನೋದಲ್ಲಿ (Lucknow) ನಡೆದಿದೆ.

    ರವೀಂದ್ರ ಬಂಧಿತ ಆರೋಪಿ. ಮದುವೆಯಾಗಿ 6 ವರ್ಷಗಳಾದರೂ ಮಗುವಾಗಿಲ್ಲ ಎಂದು ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಇದರಿಂದಾಗಿ ಆಕೆ ತನ್ನ ತಾಯಿಯ ಮನೆಗೆ ಹೋಗಿ ಕಳೆದ 8 ತಿಂಗಳಿಂದ ಅಲ್ಲಿಯೇ ಇದ್ದಳು.

    ಆದರೆ ರವೀಂದ್ರ ಡಿ. 25ರಂದು ತನ್ನ ಪತ್ನಿಯನ್ನು ಮನವೊಲಿಸಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದಾನೆ. ಅದಾದ ಬಳಿಕ ಆಕೆಯೊಂದಿಗೆ ಲೈಗಿಕಕ್ರಿಯೆ ನಡೆಸಲು ಪ್ರಯತ್ನಿಸಿದ್ದಾನೆ. ಆದರೆ ಪತ್ನಿ ಇದಕ್ಕೆ ವಿರೋಧಿಸಿದಾಗ ಆಕೆಯನ್ನು ಥಳಿಸಿ, ಆಕೆಯ ಖಾಸಗಿ ಅಂಗಗಳಿಗೆ ಬ್ಲೇಡ್‍ನಿಂದ ಇರಿದು ಗಾಯಗೊಳಿಸಿದ್ದಾನೆ. ಇದನ್ನೂ ಓದಿ: ಬಿಜೆಪಿಯ ಭದ್ರಕೋಟೆ ಮೇಲೆ ಕೈಪಡೆ ಕಣ್ಣು- 2 ಕ್ಷೇತ್ರಗಳನ್ನ ದಕ್ಕಿಸಿಕೊಳ್ಳಲು ರಣತಂತ್ರ

    ಸಂತ್ರಸ್ತೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರವೀಂದ್ರ ವಿರುದ್ಧ ಪೊಲೀಸರು ಪ್ರಕರಣ ದಾಖಲಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು- ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

    Live Tv
    [brid partner=56869869 player=32851 video=960834 autoplay=true]

  • ರಾತ್ರಿ ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿ

    ರಾತ್ರಿ ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿ

    ರಾಯ್ಪುರ್: ರಾತ್ರಿ ಊಟ (Dinner) ನೀಡಲು ನಿರಾಕರಿಸಿದ ಪತ್ನಿಯನ್ನು (Wife) ಕೊಡಲಿಯಿಂದ ಕೊಂದ ಘಟನೆ ಛತ್ತಿಸ್‍ಗಢದಲ್ಲಿ (Chhattisgarh) ನಡೆದಿದೆ.

    ಮಂಜೀತಾ ಶ್ರೀವಾಸ್ (32) ಮೃತ ಮಹಿಳೆ. ಈಕೆಯ ಪತಿ ಯೋಗೇಂದ್ರ ಶ್ರೀನಿವಾಸ್ (38) ಕೊರ್ಬಾದ ಖಾಸಗಿ ಕ್ಲಿನಿಕ್‍ನಲ್ಲಿ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಯೋಗೇಂದ್ರ ರಾತ್ರಿ ಕೆಲಸ ಮುಗಿಸಿ ಹಿಂತಿರುಗಿ ಪುಸ್ತಕ ಓದುತ್ತಿದ್ದಾಗ ಪತ್ನಿಗೆ ಊಟ ಬಡಿಸುವಂತೆ ಕೇಳಿದ್ದ. ಆದರೆ ಮಂಜೀತಾ ಊಟ ನೀಡಲು ನಿರಾಕರಿಸಿದ್ದಾಳೆ.

    ಇದೇ ಕಾರಣಕ್ಕೆ ಯೋಗೇಂದ್ರ ಹಾಗೂ ಮಂಜೀತಾ ನಡುವೆ ಜಗಳವಾಗಿದೆ. ಈ ವೇಳೆ ಕೋಪದ ಭರದಲ್ಲಿ ಯೋಗೇಂದ್ರ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಂಜೀತಾ ಜೋರಾಗಿ ಕಿರುಚಿದ್ದಾಳೆ. ತಾಯಿಯ ಕಿರುಚಾಟ ಕೇಳಿದ ಯೋಗೇಂದ್ರ ಹಾಗೂ ಮಂಜಿತಾ ಮಕ್ಕಳು ಸ್ಥಳಕ್ಕೆ ಓಡಿ ಹೋಗಿದ್ದಾರೆ. ಈ ವೇಳೆ ರಕ್ತದ ಮಡುವಿನಲ್ಲಿ ಬಿದ್ದಿರುವ ತಾಯಿಯನ್ನು ನೋಡಿದ್ದಾರೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ- ಹೋಟೆಲ್‌ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಕೊಲೆ

    ಕೂಡಲೇ ತಾಯಿ ಕೊಲೆಯಾದ ಬಗ್ಗೆ ಮಕ್ಕಳು ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅದಾದ ಬಳಿಕ ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿ ಆರೋಪಿ ಯೋಗೇಂದ್ರನನ್ನು ಬಂಧಿಸಿದ್ದಾರೆ. ದಂಪತಿ ಆಗಾಗ್ಗೆ ಸಣ್ಣಪುಟ್ಟ ವಿಷಯಗಳಿಗೆ ಜಗಳವಾಡುತ್ತಿದ್ದರು. ಆರೋಪಿಯು ತನ್ನ ಹೆಂಡತಿಯ ವಾದದ ಸ್ವಭಾವದಿಂದ ತೀವ್ರ ಸಮಸ್ಯೆ ಹೊಂದಿದ್ದನು ಪೊಲೀಸ್‌ ಮೂಲಗಳು ತಿಳಿಸಿದೆ. ಇದನ್ನೂ ಓದಿ: ಶೀಘ್ರವೇ 2ನೇ ಬೂಸ್ಟರ್ ಡೋಸ್? – ಕೇಂದ್ರ ಆರೋಗ್ಯ ಸಚಿವರಿಗೆ ವೈದ್ಯಾಧಿಕಾರಿಗಳ ಡಿಮಾಂಡ್

    Live Tv
    [brid partner=56869869 player=32851 video=960834 autoplay=true]

  • ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

    ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

    ಹಾಸನ: ವರದಕ್ಷಿಣೆ (Dowry) ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ನಡೆದಿದೆ.

    ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೈಸೂರು (Mysuru) ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಮೇ 28ರಂದು ಕೇರಾಳಪುರದ ಕಲ್ಯಾಣಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆ ವೇಳೆ ಸುಮಂತ್‌ಗೆ 250 ಗ್ರಾಂ ಚಿನ್ನ ಇದರ ಜೊತೆಗೆ 20 ಲಕ್ಷ ರೂ. ಖರ್ಚು ಮಾಡಿ ಮದುವೆ ಮಾಡಿದ್ದರು. ಸುಮಂತ್‌ನ ತಂದೆ ಮೃತಪಟ್ಟಿದ್ದರಿಂದ, ತಾಯಿ ಮೀನಾಕ್ಷಿ ಜೊತೆ ಆತ ವಾಸವಿದ್ದನು.

    ಮದುವೆಯಾದ ಎರಡು ತಿಂಗಳು ದಂಪತಿ ಇಬ್ಬರು ಅನ್ಯೋನ್ಯವಾಗಿದ್ದರು. ಆದರೆ 2 ತಿಂಗಳು ಕಳೆಯುತ್ತಿದ್ದಂತೆ ಸುಮಂತ್ ತಾಯಿ ಮೀನಾಕ್ಷಿ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಲು ಆರಂಭಿಸಿದ್ದಳು. ಇದರ ಜೊತೆಗೆ ಸುಮಂತ್ ಮದುವೆ ವೇಳೆ ಬ್ಯಾಂಕ್‌‌ನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಸುಳ್ಳು ಹೇಳಿದ್ದಾನೆ ಎಂಬುದು ರೋಹಿಣಿಗೆ ಗೊತ್ತಾಗಿತ್ತು. ಇವರಿಬ್ಬರಲ್ಲದೇ ಸುಮಂತ್ ಅಕ್ಕ ಸುಶ್ಮಿತಾ ಹಾಗೂ ಭಾವ ಪ್ರಮೋದ್ ಕೂಡ ಮನೆಗೆ ಬಂದಾಗಲೆಲ್ಲಾ ರೋಹಿಣಿಗೆ ಚುಚ್ಚು ಮಾತನಾಡುತ್ತಿದ್ದರು.

    ಆದರೆ ರೋಹಿಣಿ ಈ ಬಗ್ಗೆ ಎಂದೂ ತನ್ನ ಪೋಷಕರ ಬಳಿ ಹೇಳಿಕೊಂಡಿರಲಿಲ್ಲ. ಆದರೆ ತನ್ನ ಸಹೋದರನಿಗೆ ಮೆಸೇಜ್‌ ಮಾಡಿ ಪತಿ ಸುಮಂತ್‌ ನೀಡುತ್ತಿದ್ದ ಕಿರುಕುಳದ ಬಗ್ಗೆ ಹೇಳಿದ್ದಳು. ಸುಮಂತ್‌ ರೋಹಿಣಿಗೆ ಯಾವುದಾದರೂ‌ ಫೋನ್ ಬಂದರೆ ಅನುಮಾನದಿಂದ ನೋಡುತ್ತಿದ್ದ. ಅಷ್ಟೇ ಅಲ್ಲದೇ ಪೋಷಕರಿಗೆ ಫೋನ್ ಮಾಡಿದರೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಿಕೊಂಡಿದ್ದ ರೋಹಿಣಿಯು, ಸಹೋದರಿಗೆ ನಿನ್ನ ಜೊತೆ ಮಾತನಾಡಬೇಕು, ಇನ್ನೂ ಕೆಲವು ವಿಷಯಗಳನ್ನು ಹೇಳಬೇಕು ಎಂದು ಸಹೋದರನಿಗೆ ಮೆಸೇಜ್‌ ಹಾಕಿದ್ದಳು.

    ಆದರೆ ಭಾನುವಾರ ರೋಹಿಣಿ ಹಾಗೂ ಸುಮಂತ್ ದಂಪತಿ, ಸುಶ್ಮಿತಾ ಸೀಮಂತ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದರು. ಮಂಗಳವಾರ ಬೆಂಗಳೂರಿನಿಂದ ಇಬ್ಬರು ರೈಲಿನಲ್ಲಿ ಹೊರಟಿದ್ದಾರೆ. ಈ ವೇಳೆ ರೋಹಿಣಿ ತಂದೆಗೆ 2 ಬಾರಿ ಕರೆ ಮಾಡಿ ಚೆನ್ನಾಗಿಯೇ ಮಾತನಾಡಿದ್ದಾಳೆ. ದಂಪತಿ ಇಬ್ಬರು ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ರೈಲಿನಿಂದ ಇಳಿದಿದ್ದಾರೆ. ಅದಾದ ಬಳಿಕ ಅಲ್ಲೇ ಸ್ವಲ್ಪ ದೂರದಲ್ಲಿದ್ದ ಕೆರೆಯ ಬಳಿ ನಡೆದುಕೊಂಡು ಬಂದಿದ್ದು, ಕೆರೆಯಲ್ಲಿ ಗ್ರಾಮದ ಮಹಿಳೆಯರು ಬಟ್ಟೆ ಒಗೆಯುತ್ತಿದ್ದನ್ನು ಕಂಡ ಸುಮಂತ್ ಪತ್ನಿಗೆ ಇಲ್ಲೇ ಇರು ಎಂದು ಹೇಳಿ ಮರೆಯಾಗಿದ್ದಾನೆ. ರೋಹಿಣಿ ಕೆರೆಯ ಬಳಿ ಒಬ್ಬಳೆ ನಿಂತಿದ್ದನ್ನು ಅಲ್ಲಿದ್ದ ಮಹಿಳೆಯರು ನೋಡಿದ್ದಾರೆ. ಇದಾದ ಬಳಿಕ ರೋಹಿಣಿ ನಾಪತ್ತೆಯಾಗಿದ್ದಾಳೆ. ತಂದೆ ಎಷ್ಟು ಬಾರಿ ಕರೆ ಮಾಡಿದರೂ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

    ಟವರ್ ಲೊಕೇಷನ್ ಮೂಲಕ ರೋಹಿಣಿ ಮೊಬೈಲ್ ಇರುವ ಜಾಗವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೆರೆಯ ಬಳಿ ಬಂದು ನೋಡಿದಾಗ ದಡದಲ್ಲಿ 1,760 ರೂ. ಹಣ, ಮೊಬೈಲ್ ಹಾಗೂ ಚಪ್ಪಲಿ ಕಂಡುಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಶೋಧಕಾರ್ಯ ನಡೆಸಿದಾಗ ರೋಹಿಣಿ ಶವ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

    ಈ ಬಗ್ಗೆ ರೋಹಿಣಿ ಪೋಷಕರು ಮಾತನಾಡಿ, ಸುಮಂತ್ ತನ್ನ ಮಗಳನ್ನು ಹೊಡೆದು ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ. ಆಕೆಯ ಮೈಮೇಲೆ ಇರುವ ಗಾಯದ ಗುರುತುಗಳೇ ಇದಕ್ಕೆ ಸಾಕ್ಷಿ. ನಮ್ಮ ಮಗಳನ್ನು ಆಕೆಯ ಪತಿ ಸುಮಂತ್ ರೈಲಿನಲ್ಲಿ ಕರೆದುಕೊಂಡು ಬಂದು ಹೊಡೆದು ಕೊಲೆ ಮಾಡಿ ನಂತರ ಕೆರೆಗೆ ತಳ್ಳಿದ್ದಾನೆ ಎಂದು ರೋಹಿಣಿ ಪೋಷಕರು ಆರೋಪಿಸಿದ್ದಾರೆ. ನಮ್ಮ ಮಗಳ ಸಾವಿಗೆ ಸುಮಂತ್, ಮೀನಾಕ್ಷಿ, ಸುಶ್ಮಿತಾ ಹಾಗೂ ಪ್ರಮೋದ್‌ ಕಾರಣ ಇವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್ ನಿಷೇಧ – ಪ್ರತಿಭಟನೆಗೆ ಪರೀಕ್ಷೆಯಿಂದಲೇ ಹೊರನಡೆದ ಅಫ್ಘನ್ ಯುವಕರು

    Live Tv
    [brid partner=56869869 player=32851 video=960834 autoplay=true]

  • ವಿಚ್ಛೇದನ ಪಡೆಯಲು ಪತ್ನಿಗೆ HIV ಸೋಂಕಿತ ರಕ್ತದ ಇಂಜೆಕ್ಷನ್ ಕೊಡಿಸಿದ ಭೂಪ

    ವಿಚ್ಛೇದನ ಪಡೆಯಲು ಪತ್ನಿಗೆ HIV ಸೋಂಕಿತ ರಕ್ತದ ಇಂಜೆಕ್ಷನ್ ಕೊಡಿಸಿದ ಭೂಪ

    ಅಮರಾವತಿ: ವ್ಯಕ್ತಿಯೊಬ್ಬ ಪತ್ನಿಯಿಂದ ವಿಚ್ಛೇದನ ಪಡೆಯಲು ಆಕೆಗೆ ಡಾಕ್ಟರ್ ಸಹಾಯದಿಂದ ಹೆಚ್‍ಐವಿ (HIV) ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ ಘಟನೆ ಆಂಧ್ರ ಪ್ರದೇಶದಲ್ಲಿ (Andhra Pradesh) ನಡೆದಿದೆ.

    ಎಂ. ಚರಣ್ (40) ಬಂಧಿತ ವ್ಯಕ್ತಿ. ಚರಣ್ ಮದುವೆ ಆಗಿ ಕೆಲವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಸಂತೋಷದಿಂದ ಇದ್ದ. ದಂಪತಿಗೆ ಒಬ್ಬಳು ಮಗಳು ಇದ್ದಾಳೆ. ಆದರೆ 2018ರಲ್ಲಿ ಚರಣ್ ವರದಕ್ಷಿಣೆಗಾಗಿ ಹಾಗೂ ಗಂಡು ಮಗುವನ್ನು ಹೆರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ವಿಶಾಖಪಟ್ಟಣಂನ 21 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದ ಎಂಬ ಆರೋಪ ಕೇಳಿ ಬಂದಿದೆ.

    ಈ ಎಲ್ಲಾ ಕಾರಣದಿಂದಾಗಿ ಆರೋಪಿ ಚರಣ್ ತನ್ನ ಪತ್ನಿ ಬಳಿ ವಿಚ್ಛೇದನ ನೀಡುವಂತೆ ಒತ್ತಾಯಿಸಿದ್ದಾನೆ. ಅಷ್ಟೇ ಅಲ್ಲದೇ ಆಕೆಯನ್ನು ಹೆಲ್ತ್ ಚೆಕಪ್‍ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರ ಸಹಾಯದಿಂದ ಹೆಚ್‍ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಆಧಾರದಲ್ಲಿ ಸಿಎಂ ಆಯ್ಕೆ ಮಾಡಲ್ಲ- ಜಿ.ಪರಮೇಶ್ವರ್

    ಇತ್ತೀಚೆಗೆ ಚರಣ್ ಪತ್ನಿ ಆಸ್ಪತ್ರೆಗೆ ಹೋದಾಗ ಆಕೆಗೆ ಹೆಚ್‍ಐವಿ ಇರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿ ಆಕೆ ಚರಣ್‍ನನ್ನು ಪ್ರಶ್ನಿಸಿದಾಗ, ಗರ್ಭಾವಸ್ಥೆಯಲ್ಲಿ ಹೆಚ್‍ಐವಿ ಸಂಪರ್ಕಿಸಿರಬಹುದು ಎಂದು ಚರಣ್ ತಿಳಿಸಿದ್ದಾನೆ. ಇದಾದ ಬಳಿಕ ಘಟನೆಗೆ ಸಂಬಂಧಿಸಿ ತಾಡಪಲ್ಲಿ ಪೊಲೀಸರಿಗೆ ಪತಿ ಚರಣ್ ವಿರುದ್ಧ ದೂರು ದಾಖಲಿಸಿದ್ದಾಳೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಚರಣ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಫ್ಲೈಟ್‌ನಲ್ಲಿ ನಾಯಿಯನ್ನು ಬಿಡದ ಪೈಲೆಟ್ – ಕ್ಯಾನ್ಸಲ್ ಆಯ್ತು 12 ದಿನದ ಟ್ರಿಪ್

    Live Tv
    [brid partner=56869869 player=32851 video=960834 autoplay=true]

  • ಪತ್ನಿಯೊಂದಿಗೆ ಜಗಳ- ಮಗುವನ್ನು 3ನೇ ಅಂತಸ್ತಿನಿಂದ ಬಿಸಾಕಿ ತಾನು ಜಿಗಿದ

    ಪತ್ನಿಯೊಂದಿಗೆ ಜಗಳ- ಮಗುವನ್ನು 3ನೇ ಅಂತಸ್ತಿನಿಂದ ಬಿಸಾಕಿ ತಾನು ಜಿಗಿದ

    ನವದೆಹಲಿ: ವ್ಯಕ್ತಿಯೊಬ್ಬ ಪತ್ನಿಯೊಂದಿಗೆ (Wife) ಜಗಳವಾಡಿದ ನಂತರ ಅಲ್ಲೇ ಇದ್ದ ತನ್ನ 2 ವರ್ಷದ ಮಗುವನ್ನು (Baby) ಮನೆಯ 3ನೇ ಅಂತಸ್ತಿನಿಂದ ಎಸೆದು ತಾನು ಅಲ್ಲಿಂದ ಜಿಗಿದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (NewDelhi) ನಡೆದಿದೆ.

    ನವದೆಹಲಿಯ ಕಲ್ಕಾಜಿಯ ಕೊಳೆಗೇರಿಯ ಮನೆಯ ಮೂರನೇ ಅಂತಸ್ತಿನ ಬಾಲ್ಕನಿಯಲ್ಲಿ ಈ ಘಟನೆ ನಡೆದಿದೆ. ಮಾನ್‍ಸಿಂಗ್ ಕೆಳಗೆ ಜಿಗಿದ ವ್ಯಕ್ತಿ. ಈತ ತನ್ನ ಪತ್ನಿ ಪೂಜಾಳೊಂದಿಗೆ ಕಳೆದ ಕೆಲವು ತಿಂಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ. ಪೂಜಾ ತನ್ನ ಇಬ್ಬರು ಮಕ್ಕಳೊಂದಿಗೆ ಕಲ್ಕಾಜಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ವಾಸಿಸುತ್ತಿದ್ದಳು.

    ಕಳೆದ ರಾತ್ರಿ ಪೂಜಾಳನ್ನು ಭೇಟಿಯಾಗಲು ಮಾನ್ ಸಿಂಗ್ ಬಂದಿದ್ದ. ಈ ವೇಳೆ ಮತ್ತೆ ದಂಪತಿ ನಡುವೆ ತೀವ್ರ ಜಗಳ ನಡೆದಿತ್ತು. ಈ ವೇಳೆ ಮಾನ್ ಸಿಂಗ್ ಕೋಪದಲ್ಲಿ ಅಲ್ಲೇ ಇದ್ದ ತನ್ನ 2 ವರ್ಷದ ಮಗುವನ್ನು ಬಾಲ್ಕನಿಯಿಂದ ಕೆಳಗೆ ಎಸೆದಿದ್ದಾನೆ. ಅದಾದ ಬಳಿಕ ತಾನು ಅಲ್ಲಿಂದ ಹಾರಿದ್ದಾನೆ.

    ಘಟನೆಗೆ ಸಂಬಂಧಿಸಿದಂತೆ ತಂದೆ ಮತ್ತು ಮಗನಿಗೆ ಗಂಭೀರ ಗಾಯಗಳಾಗಿದ್ದು, ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಗೋಕಾಕ್‍ನಲ್ಲಿ 6ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ರಮೇಶ್ ಜಾರಕಿಹೊಳಿ

    ಮಾನ್ ಸಿಂಗ್ ಮದ್ಯದ ಅಮಲಿನಲ್ಲಿದ್ದ ಎಂದು ಪೂಜಾಳ ಅಜ್ಜಿ ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾನ್ ಸಿಂಗ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಹಿಂದೂ’ ವರ್ಡ್ ವಾರ್

    Live Tv
    [brid partner=56869869 player=32851 video=960834 autoplay=true]

  • ಹನಿಮೂನ್‌ನಿಂದ ಬರುವಾಗ ಟೆಕ್ಕಿ ದಂಪತಿಗೆ ಅಪಘಾತ – ಪತಿಯನ್ನು ಕಳೆದುಕೊಂಡ ನವವಿವಾಹಿತೆ

    ಹನಿಮೂನ್‌ನಿಂದ ಬರುವಾಗ ಟೆಕ್ಕಿ ದಂಪತಿಗೆ ಅಪಘಾತ – ಪತಿಯನ್ನು ಕಳೆದುಕೊಂಡ ನವವಿವಾಹಿತೆ

    ದಾವಣಗೆರೆ: ನಿಂತಿದ್ದ ಟ್ರ್ಯಾಕ್ಟರ್‌ಗೆ (Tractor) ಬೈಕ್‌ ಡಿಕ್ಕಿ ಹೊಡೆದು, ಬೈಕ್‌ (Bike) ಸವಾರ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡದ ಬಳಿ ನಡೆದಿದೆ.

    ಮೃತರನ್ನು ಸಂಜಯ್‌ (28) ಎಂದು ಗುರುತಿಸಲಾಗಿದೆ. ಇವರು ಮೂಲತಃ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಮಠದವರಾಗಿದ್ದರು. ನ. 28ರಂದು ಬೈಲಹೊಂಗಲದ ಪ್ರೀತಿ ಎಂಬವರನ್ನು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಸಮುದಾಯ ಭವನದಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದರು. ಇವರಿಬ್ಬರು ಕೂಡ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದು, ಹನಿಮೂನ್‌ಗೆಂದು ಬೈಕ್‌ನಲ್ಲಿ ಡಿ. 10ಕ್ಕೆ ಹರಿಹರದ ಜಿಗಳಿಯಿಂದ ಧಾರ್ಮಿಕ ಕ್ಷೇತ್ರಗಳಿಗೆ ಬೈಕ್‌ನಲ್ಲಿ ಎರಡು ದಿನಗಳ ಕಾಲ ಹೋಗಿದ್ದರು.

    crime

    ಮೊದಲು ಸಾಗರ ತಾಲೂಕಿನ ಸಿಂಗಧೂರು ದೇವಿ ದರ್ಶನ ಪಡೆದಿದ್ದಾರೆ. ಬಳಿಕ ಮುರುಡೇಶ್ವರಕ್ಕೆ ಹೋಗಿ ರಾತ್ರಿ ತಂಗಿದ್ದಾರೆ. ಡಿಸೆಂಬರ್ 11ಕ್ಕೆ ಶಿರಸಿಗೆ ಬಂದು ಅಲ್ಲಿ ಮಾರಿಕಾಂಬಾ ದೇವಿ ದರ್ಶನ ಪಡೆದು ವಾಪಸ್ಸು ಜಿಗಳಿಗೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡದ ಬಳಿ ಬರುವಾಗ ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ.

    ಪರಿಣಾಮ ಬೈಕ್‌ ಸವಾರ ಸಂಜಯ್‌ ತಲೆಗೆ ತೀವ್ರ ಪೆಟ್ಟಾಗಿದ್ದು, ಎರಡೂ ಕಿವಿಯಲ್ಲಿ ರಕ್ತಸ್ರಾವವಾಗಿದೆ. ಜೊತೆಗೆ ಬೈಕ್‌ನಲ್ಲಿದ್ದ ಪ್ರೀತಿಗೂ ಗಂಭೀರ ಗಾಯಗಳಾಗಿದೆ. ಘಟನೆ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಹಂಸಬಾವಿ ಪೊಲೀಸರು ಗಾಯಗೊಂಡ ದಂಪತಿಯನ್ನು ರಾಣೆಬೆನ್ನೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ, ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ಕರೆದುಕೊಂಡು ಬರುವ ವೇಳೆ ದಾರಿ ಮಧ್ಯೆ ಸಂಜಯ್ ಮೃತಪಟ್ಟಿದ್ದಾರೆ. ಪತ್ನಿ ಪ್ರೀತಿಯ ಎರಡು ಕೈ ಹಾಗೂ ತಲೆಗೆ ಮತ್ತು ಸೊಂಟಕ್ಕೆ ತೀವ್ರ ಪೆಟ್ಟಾಗಿದೆ‌. ಸದ್ಯ ದಾವಣಗೆರೆ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

    ಇನ್ನು ಸಂಜಯ್ ಶವ ಪರೀಕ್ಷೆ ನಂತರ ತನ್ನ ಗಂಡ ಸಂಜಯ್ ನೋಡಲು ಪ್ರೀತಿ ಸ್ಟ್ರೆಚರ್​​ನಲ್ಲಿ ಶವಾಗಾರಕ್ಕೆ ಬಂದಿದ್ದರು. ಬಳಿಕ ಸ್ಟ್ರೆಚರ್ ನಲ್ಲಿದ್ದುಕೊಂಡೇ ತನ್ನ ಗಂಡನ ಮುಖ ಸವರಿ ದುಃಖಿಸಿದ ಕ್ಷಣ ಮನಕಲಕುವಂತಿತ್ತು.

    Live Tv
    [brid partner=56869869 player=32851 video=960834 autoplay=true]

  • ಪತ್ನಿಯಿಂದ ಕಿರುಕುಳ – ಮೂರು ತಿಂಗಳ ಹಿಂದೆ ಮದ್ವೆಯಾಗಿದ್ದ ವ್ಯಕ್ತಿ ಆತ್ಮಹತ್ಯೆ

    ಪತ್ನಿಯಿಂದ ಕಿರುಕುಳ – ಮೂರು ತಿಂಗಳ ಹಿಂದೆ ಮದ್ವೆಯಾಗಿದ್ದ ವ್ಯಕ್ತಿ ಆತ್ಮಹತ್ಯೆ

    ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ(Husband) ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ(Bengaluru) ಎಂವಿ ಲೇಔಟ್ ಉಲ್ಲಾಳದ ಬಳಿ ನಡೆದಿದೆ.

    ಮಹೇಶ್ವರ(24) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆಗಸ್ಟ್‌ 21 ರಂದು ಮಹೇಶ್ವರ ಮತ್ತು ಕವನ(22) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದ್ವೆಯಾಗಿ ಮೂರು ತಿಂಗಳಿಗೆ ಪತ್ನಿಯಿಂದ(Wife) ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನ ನಿವಾಸದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಬಂದಿದೆ. 5 ದಿನ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಮಹೇಶ್ವರನ ತಾಯಿ ರತ್ನಮ್ಮ ನೀಡಿದ ದೂರಿನ ಆಧಾರದಲ್ಲಿ ಜ್ಞಾನಭಾರತಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 34(ಏಕೋದ್ದೇಶವನ್ನು ಮುಂದುವರೆಸಲು ಅನೇಕ ವ್ಯಕ್ತಿಗಳೊಂದಿಗೆ ಎಸಗಿದ ಕೃತ್ಯ), 306(ಆತ್ಮಹತ್ಯೆಗೆ ಪ್ರಚೋದನೆ) ಅಡಿ ಕವನ ಮತ್ತು ಆಕೆಯ ಪೋಷಕರಾದ ಆತ್ಮಾನಂದ ಮತ್ತು ಪದ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    ಚನ್ನಪಟ್ಟಣ ತಾಲೂಕಿನ ಕೊಡರು ಗ್ರಾಮದಲ್ಲಿ ನಾನು ನೆಲೆಸಿದ್ದು ಆಗಸ್ಟ್‌ 21 ರಂದು ಮಗನ ಮದುವೆ ಮದ್ದೂರಿನ ಮದ್ದೂರಮ್ಮ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ. ವಿವಾಹ ಮಾಡಿದ ಕೆಲವೇ ದಿನಗಳ ನಂತರ ಹೊಂದಾಣಿಕ ಮನಸ್ಥಿತಿ ಇಲ್ಲದ ಕವನ ಪದೇ ಪದೇ ಜಗಳ ಮಾಡುತ್ತಿದ್ದಳು. ಇದನ್ನೂ ಓದಿ: ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ದುರಹಂಕಾರದಿಂದ ವರ್ತಿಸಿ, ಹಿರಿಯರಿಗೆ ಗೌರವ ನೀಡದೇ ದುಬಾರಿ ಬೆಲೆಯ ವಸ್ತುಗಳು, ಆಭರಣ ನೀಡುವಂತೆ ಪೀಡಿಸುತ್ತಿದ್ದಳು. ಆಭರಣ ನೀಡದೇ ಇದ್ದಾಗ ಮಗನನ್ನು ಹೀಯಾಳಿಸುತ್ತಿದ್ದಳು ಅಷ್ಟೇ ಅಲ್ಲದೇ ಆಕೆಯ ತಂದೆಗೆ ಹಣ ನೀಡುವಂತೆ ಹಠ ಮಾಡುತ್ತಿದ್ದಳು.

    ಸುಮಾರು 4-5 ವರ್ಷದಿಂದ ಅವಳ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ಮಗನಾದ ಮಹೇಶ್ವರನೇ ಹೊತ್ತಿದ್ದ. ವಿವಾಹದ ನಂತರವು ಎಲ್ಲಾ ಜವಾಬ್ದಾರಿಗಳನ್ನು ಹೊರುವಂತೆ ಹಿಂಸೆ ಕೊಟ್ಟು ಬೇರೆ ಮನೆ ಮಾಡುವಂತೆ ಒತ್ತಾಯಿಸಿದ್ದಳು.

    ಒಬ್ಬನೇ ಮಗನ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಬೇರೆ ಮನೆ ಮಾಡಲು ಮತ್ತು ಮನೆಗೆ ಬೇಕಾದ ಸಾಮಾಗ್ರಿಗಳನ್ನು ಕೊಟ್ಟು ಸಂತೋಷವಾಗಿರುವಂತೆ ಹೇಳಿದ್ದೆವು. ಆದರೆ ಆಕೆ ಅಲ್ಲಿಯೂ ತನ್ನ ಹಳೇಯ ವರ್ತನೆ ಮುಂದುವರಿಸಿದ್ದಳು. ಪ್ರತಿನಿತ್ಯ ಆಕೆಯ ಕಿರುಕುಳವನ್ನು ಸಹಿಸದೇ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    ಲಕ್ನೋ: ವೈದ್ಯನೊಬ್ಬ (Doctor) ತನ್ನ ಪತ್ನಿಯನ್ನು (Wife) ಕೊಂದು, ಆಕೆಯ ದೇಹವನ್ನು ಸೂಟ್‍ಕೇಸ್‍ನಲ್ಲಿ ತುಂಬಿಕೊಂಡು ಸುಮಾರು 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಉತ್ತರ ಪ್ರದೇಶದ ಲಖಿಂಪುರ ಖೇರಿಯ ವಂದನಾ ಅವಸ್ತಿ ಎಂದು ಗುರುತಿಸಲಾಗಿದೆ. ವಂದನಾ ಅವಸ್ತಿ ಪತಿ ಅಭಿಷೇಕ್ ಅವಸ್ತಿ ಆಯುರ್ವೇದದ ವೈದ್ಯನಾಗಿದ್ದ. ಈತ ತನ್ನ ತಂದೆ ಗೌರಿಶಂಕರ್ ಅವಸ್ತಿಯೊಂದಿಗೆ ಜಗಳ ಮಾಡುತ್ತಿದ್ದ ಸಂದರ್ಭದಲ್ಲಿ ಪತ್ನಿ ವಂದನಾಗೆ ಭಾರದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ವಂದನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

    ಇದಾದ ಬಳಿಕ ವಂದನಾಳ ಮೃತದೇಹವನ್ನು ಅಭಿಷೇಕ್ ಸೂಟ್‍ಕೇಸ್‍ನಲ್ಲಿ ಲಾಕ್ ಮಾಡಿ, ತನ್ನ ಆಸ್ಪತ್ರೆಯ ಅಂಬುಲೆನ್ಸ್‌ನಲ್ಲಿ ಶವವನ್ನು ಸುಮಾರು 400 ಕಿ.ಮೀ ದೂರದ ಗಢ್ ಮುಕ್ತೇಶ್ವರಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದಾನೆ.

    ಅದಾದ ಬಳಿಕ ನವೆಂಬರ್ 27ರಂದು ಕೊತ್ವಾಲಿ ಸದರ್ ಪೊಲೀಸ್ ಠಾಣೆಗೆ ಹೋಗಿರುವ ಅಭಿಷೇಕ್ ತನ್ನ ಪತ್ನಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾನೆ. ಅಷ್ಟೇ ಅಲ್ಲದೇ ವಂದನಾ ಕೆಲವು ಬೆಲೆಬಾಳುವ ವಸ್ತುಗಳೊಂದಿಗೆ ಮನೆಯಿಂದ ಬಿಟ್ಟು ಹೋಗಿದ್ದಾಳೆ ಎಂದು ದೂರಿನಲ್ಲಿ ದಾಖಲಿಸಲಾಗಿತ್ತು. ಇದನ್ನೂ ಓದಿ: ಕಸ್ಟಡಿಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ – ಸಿಬಿಐ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್‌ ದಾಖಲು

    ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ ದಂಪತಿ ಮಧ್ಯೆ ವೈವಾಹಿಕ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಆರೋಪಿ ಅಭಿಷೇಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಭಿಷೇಕ್ ತನ್ನ ತಂದೆಯೊಂದಿಗೆ ಸೇರಿ ವಂದನಾಳನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. (Arrest) ಇದನ್ನೂ ಓದಿ: ಸಿಎಂ ಸ್ಟಾಲಿನ್ ಪುತ್ರ ತಮಿಳುನಾಡಿನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ಪತ್ನಿ, ನಾಲ್ಕು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ

    ಪತ್ನಿ, ನಾಲ್ಕು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ

    ಚೆನ್ನೈ: ವ್ಯಕ್ತಿಯೊಬ್ಬ (Man) ತನ್ನ ಪತ್ನಿ (Wife) ಹಾಗೂ ನಾಲ್ಕು ಮಕ್ಕಳನ್ನು (Children) ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ (Tamil Nadu) ಚೆಂಗಂ ತಾಲೂಕಿನಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಪಳನಿಸ್ವಾಮಿ (45) ಎಂದು ಗುರುತಿಸಲಾಗಿದ್ದು, ಈತ ಚೆಂಗಂ ಸಮೀಪದ ಒರಂತವಾಡಿ ಗ್ರಾಮದ ರೈತನಾಗಿ ಕೆಲಸ ಮಾಡುತ್ತಿದ್ದ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಇಂದು ಮುಂಜಾನೆ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಚೀನಾ ಸೈನಿಕರು ಗಡಿ ನುಸುಳುವುದನ್ನು ಭಾರತ ತಡೆದಿದೆ; ನಮ್ಮ ಯೋಧರ ಧೈರ್ಯಕ್ಕೆ ಸಲಾಂ – ರಾಜನಾಥ್‌ ಸಿಂಗ್‌

    crime

    ಪಳನಿಸ್ವಾಮಿ ಮನೆಯ ಛಾವಣಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದ್ದು, ಆತನ 37 ವರ್ಷದ ಪತ್ನಿ, ಮೂವರು ಪುತ್ರಿಯರು ಮತ್ತು ಓರ್ವ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ. ಜೊತೆಗೆ ಸುಮಾರು 9 ವರ್ಷ ವಯಸ್ಸಿನ ಇನ್ನೊಂದು ಹೆಣ್ಣು ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ 13ರ ಬಾಲಕಿ ಗರ್ಭಿಣಿ – ಅತ್ಯಾಚಾರ ಎಸಗಿದ್ದ ಮೂವರು ಅರೆಸ್ಟ್

    Live Tv
    [brid partner=56869869 player=32851 video=960834 autoplay=true]