ಮುಂಬೈ: ಚಿನ್ನದ ಕಿವಿಯೋಲೆಯನ್ನು (Gold Earring) ಕೊಟ್ಟಿಲ್ಲವೆಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಪತ್ನಿಯನ್ನೇ (Wife) ಕೊಂದು ಪತಿಯೊಬ್ಬ (Husband) ಪರಾರಿಯಾಗಿದ್ದಾರೆ,
32 ವರ್ಷದ ವ್ಯಕ್ತಿಯನ್ನು ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇತ್ತೀಚೆಗೆ ಆತ ತನ್ನ ತಾಯಿಯ ಅಂತ್ಯಸಂಸ್ಕಾರದ ನಂತರದ ವಿಧಿವಿಧಾನಗಳನ್ನು ಮಾಡಲು ಹಣ ಕಡಿಮೆ ಇರುವುದರಿಂದ ಪತ್ನಿ ಬಳಿ ತನ್ನ ಚಿನ್ನದ ಕಿವಿಯೋಲೆಗಳನ್ನು ನೀಡಲು ಒತ್ತಾಯಿಸಿದ್ದಾನೆ. ಅದರೆ ಚಿನ್ನದ ಕಿವಿಯೋಲೆಯನ್ನು ನೀಡಲು ಆಕೆ ನಿರಾಕರಿಸಿದ್ದಾಳೆ. ಇದನ್ನೂ ಓದಿ:ಬೇರೆಯವಳು ಕಾಲ್ ಪಿಕ್ ಮಾಡಿದ್ದಕ್ಕೆ ಬಾಯ್ಫ್ರೆಂಡ್ ಮನೆಗೆ ಬೆಂಕಿ ಇಟ್ಲು
ಇದರಿಂದ ಕೋಪಗೊಂಡ ಪತಿ ನ.19ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಮಹಾರಾಷ್ಟç ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಆರೋಪಿ ವಾರಣಾಸಿಗೆ ಪರಾರಿಯಾಗುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಮೀರಾ ಭಯಂದರ್ ವಸಾಯಿ ವಿರಾರ್ (ಎಂಬಿವಿವಿ) ಪೊಲೀಸರ ತಂಡವು ಲಲಿತ್ಪುರಕ್ಕೆ ಧಾವಿಸಿ ರೈಲಿನಲ್ಲಿ ಬಂಧಿಸಿದೆ. ಇದನ್ನೂ ಓದಿ:ಪತ್ನಿಯನ್ನು ಕೊಂದು ಆಕೆಯ ಶವವನ್ನು ತುಂಡರಿಸಿ ವಿಕೃತಿ ಮೆರೆದ ಪತಿ
Live Tv
[brid partner=56869869 player=32851 video=960834 autoplay=true]
ಲಕ್ನೋ: ಪತಿಯೊಬ್ಬ (Husband) ಪತ್ನಿಯ (Wife) ಶವವನ್ನು ತುಂಡರಿಸಿ ದೂರದ ಸ್ಥಳದಲ್ಲಿ ವಿಲೇವಾರಿ ಮಾಡಿರುವ ಪ್ರಕರಣ ಉತ್ತರಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಉತ್ತರಪ್ರದೇಶದ ಸೀತಾಪುರ ಜಿಲ್ಲೆಯ ರಾಮ್ಪುರ ಕಲಾನ್ ಪ್ರದೇಶದ ನಿವಾಸಿ ಜ್ಯೋತಿ ಅಲಿಯಾಸ್ ಸ್ನೇಹಾ ಎಂಬಾಕೆ ಮೃತ ಮಹಿಳೆಯಾಗಿದ್ದು, ಆಕೆಯ ಪತಿ ಪಂಕಜ್ ಮೌರ್ಯ ಹಾಗೂ ಆತನ ಸ್ನೇಹಿತ ದುರ್ಜನ್ ಪಾಸಿ ಬಂಧಿತ (Arrest) ವ್ಯಕ್ತಿಗಳು.
ಪಂಕಜ್ ಹತ್ತು ವರ್ಷದ ಹಿಂದೆ ಸ್ನೇಹಾಳನ್ನು ಮದುವೆಯಾಗಿದ್ದ. ಸ್ನೇಹಾ ಪ್ರತಿನಿತ್ಯ ಮದ್ಯ ಸೇವನೆ ಮಾಡುತ್ತಿದ್ದಳು. ಅಷ್ಟೇ ಅಲ್ಲದೇ ಹಲವು ದಿನಗಳಿಂದ ಆಕೆಗೆ ಬೇರೆಯವರ ಜೊತೆಗೂ ಸಂಬಂಧವಿದ್ದು, ಆಕೆ ಯಾರದ್ದೋ ಮನೆಯಲ್ಲಿ ಇರುತ್ತಿದ್ದಳು. ಇದರಿಂದಾಗಿ ಪ್ರತಿನಿತ್ಯ ಸ್ನೇಹಾ ಹಾಗೂ ಪಂಕಜ್ ಮಧ್ಯೆ ಜಗಳವಾಗುತ್ತಿತ್ತು. ಇದರಿಂದಾಗಿ ಪಂಕಜ್ ಸ್ನೇಹಾಳನ್ನು ಕೊಲೆ ಮಾಡಲು ನಿರ್ಧರಿಸಿದ್ದಾನೆ.
– ಸಾಯ್ತೀನಿ ಎಂದು ಮೇಸೆಜ್ ಮಾಡಿದ್ದ ಪತ್ನಿಗೆ ಗುಡ್ ಬೈ ಎಂದು ರಿಪ್ಲೈ ನೀಡಿದ ಪತಿ
ಬೆಂಗಳೂರು: ಪತಿಯ (Husband) ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು (Wife) ಮದುವೆಯಾದ ಒಂದೇ ವರ್ಷಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ನಲ್ಲಿ ನಡೆದಿದೆ.
ಐಟಿ ಉದ್ಯಮಿ ಆಗಿರುವ ಶ್ವೇತಾ (27) ನ.10ರಂದು ನೇಣಿಗೆ ಶರಣಾಗಿದ್ದಾಳೆ. ಐಬಿಎಂ ಕಂಪನಿಯ ಉದ್ಯೋಗಿಯಾಗಿದ್ದ ಶ್ವೇತಾ 11 ತಿಂಗಳ ಹಿಂದಷ್ಟೇ ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಆದರೆ ಮದುವೆಗೂ ಮುನ್ನ ಅಭಿಷೇಕ್ಗೆ ಯುವತಿಯೊಬ್ಬಳೊಂದಿಗೆ ಸಂಬಂಧವಿತ್ತು ಎನ್ನುವ ವಿಷಯವು ಶ್ವೇತಾಳಿಗೆ ಮದುವೆಯಾದ ಬಳಿಕ ತಿಳಿದಿದೆ. ಈ ವಿಚಾರ ಗೊತ್ತಾದ ಬಳಿಕ ಶ್ವೇತಾ ಹಾಗೂ ಅಭಿಷೇಕ್ ಮಧ್ಯೆ ಪ್ರತಿನಿತ್ಯ ಜಗಳವಾಗುತ್ತಿತ್ತು.
ಅದಾದ ಬಳಿಕ ಪರಸ್ಪರ ರಾಜಿ ಪಂಚಾಯತಿ ನಡೆದಿತ್ತು. ಆ ನಂತರ ಅಭಿಷೇಕ್ ಹಾಗೂ ಶ್ವೇತಾ ಇಬ್ಬರೂ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ನಡುವೆ ಅಭಿಷೇಕ್ ತನ್ನ ಹಳೆಯ ಚಾಳಿಯನ್ನೇ ಪುನಃ ಮುಯಂದುವರಿಸಿದ್ದಾನೆ. ಇದರಿಂದಾಗಿ ಬೇಸತ್ತ ಶ್ವೇತಾ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪಗಳು ಮೃತ ಶ್ವೇತಾಳ ಕುಟುಂಬದಿಂದ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾಳ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಪತ್ನಿಯ ಅಂತ್ಯ ಸಂಸ್ಕಾರದ ಬಳಿಕ ಅಭಿಷೇಕ್ ಸತ್ಯ ಒಪ್ಪಿಕೊಂಡಿದ್ದು, ಮದುವೆಗೂ ಮುನ್ನ ಇನ್ನೋರ್ವ ಯುವತಿಯ ಜೊತೆ ಸಂಬಂಧ ಹೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಶ್ವೇತಾಳೊಂದಿಗೆ ಮದುವೆ ನಿಶ್ಚಯವಾದ ನಂತರವೂ ಅದೇ ಯುವತಿಯೊಂದಿಗೆ ಟೂರ್ ಹೋಗಿದ್ದ. ಅಷ್ಟೇ ಅಲ್ಲದೇ ಮದುವೆಯ ನಂತರವೂ ಅನೈತಿಕ ಸಂಬಂಧ ಮುಂದುವರಿಸಿದ್ದ. ಈ ವಿಚಾರ ತಿಳಿದು ಶ್ವೇತಾ ಗಲಾಟೆ ಮಾಡಿದ್ದಳು. ಆ ಬಳಿಕ ಪತ್ನಿಯ ಬಳಿ ಕ್ಷಮೆಯಾಚಿಸಿ ಸುಮ್ಮನಾಗಿರುವ ಬಗ್ಗೆ ತಿಳಿಸಿದ್ದಾನೆ. ಇದನ್ನೂ ಓದಿ: 15 ವರ್ಷಗಳಿಂದ ಮಕ್ಕಳಿಲ್ಲದೇ ಹರಕೆ ಹೊತ್ತು ಹಿಂದಿರುಗುವಾಗಲೇ ದುರಂತ – ದಂಪತಿ ಸಾವು
ಅಷ್ಟೇ ಅಲ್ಲದೇ ಇತ್ತೀಚಿಗೆ ಕೊಯಮತ್ತೂರು ಹೋಗುವುದಾಗಿ ಅಭಿಷೇಕ್ ದೆಹಲಿಗೆ ಹೋಗಿದ್ದ. ಆ ಯುವತಿಯನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದ ಎನ್ನುವ ವಿಚಾರ ತಿಳಿದು ಪತ್ನಿ ಶ್ವೇತಾ ಗಲಾಟೆ ಮಾಡಿದ್ದಳು. ಅದಾದ ಬಳಿಕ ಶ್ವೇತಾ ಸಾಯ್ತೀನಿ ಗುಡ್ ಬೈ ಎಂದು ಮೇಸೆಜ್ ಕಳಿಸಿದ್ದಳು. ಅದಕ್ಕೆ ಅಭಿಷೇಕ್ ಗುಡ್ ಬೈ ಎಂದು ರಿಪ್ಲೈ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿ ರಾಮಮೂರ್ತಿ ನಗರ ಪೊಲೀಸರು ಆರೋಪಿ ಅಭಿಷೇಕ್ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ
Live Tv
[brid partner=56869869 player=32851 video=960834 autoplay=true]
ರಾಮನಗರ: ಕುಡಿದ ಅಮಲಿನಲ್ಲಿ ಪತ್ನಿಯನ್ನೇ (Wife) ಪತಿ (Husband) ಕಟ್ಟಿಗೆಯಿಂದ ಬಡಿದು ಕೊಲೆ ಮಾಡಿರುವ ಘಟನೆ ರಾಮನಗರ (Ramanagara) ಜಿಲ್ಲೆಯ ಅವೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೋರಯ್ಯ ತಡರಾತ್ರಿ ಕುಡಿದು ಜಗಳವಾಡಿ ಪತ್ನಿ ಭದ್ರಮ್ಮನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇಬ್ಬರೂ ಕೂಡಾ ಪಾನಮತ್ತರಾಗಿದ್ದರೆಂದು ಹೇಳಲಾಗಿದೆ. ಮೃತ ಭದ್ರಮ್ಮ ಬೋರಯ್ಯನ ನಾಲ್ಕನೇ ಪತ್ನಿಯಾಗಿದ್ದಳು. ಇದನ್ನೂ ಓದಿ: ಲೈಸೆನ್ಸ್ ರಿನ್ಯೂವಲ್ ಮಾಡಿಲ್ಲ- ಅಂಗಡಿ ವ್ಯಾಪಾರಿಗೆ ಜನಪ್ರತಿನಿಧಿಯಿಂದ ಹಲ್ಲೆ
ಈ ಮೊದಲು ಬೋರಯ್ಯ ತನ್ನ ಎರಡನೇ ಪತ್ನಿಯನ್ನು ಸಹ 2014ರಲ್ಲಿ ಇದೇ ರೀತಿ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ 6 ವರ್ಷಗಳ ಕಾಲ ಶಿಕ್ಷೆ ಅನುಭವಿಸಿ ಹೊರಬಂದು ಭದ್ರಮ್ಮಳನ್ನು ಮದುವೆಯಾಗಿದ್ದನು. ಈ ಮಧ್ಯ ಎರಡನೇ ಪತ್ನಿ ಬದುಕಿರುವಾಗಲೇ ಇನ್ನೊಂದು ಮದುವೆ ಆಗಿದ್ದ. ಇದೀಗ ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಿಲ್ಲೆಗಳಲ್ಲಿ ಸರ್ಕಾರಿ ಗೋಶಾಲೆ ಆರಂಭಕ್ಕೆ ಡಿಸೆಂಬರ್ ಡೆಡ್ಲೈನ್: ಪ್ರಭು ಚೌಹಾಣ್
Live Tv
[brid partner=56869869 player=32851 video=960834 autoplay=true]
ನೆಲಮಂಗಲ: ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ.
ನೆಲಮಂಗಲ (Nelamangala) ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಶೃತಿ (24) ಕೊಲೆಯಾದ ಗೃಹಿಣಿ. ಈತ ಮದುವೆಯಾಗಿ ಒಂದೂವರೆ ವರ್ಷದಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.
– ಮುಸ್ಲಿಂ ಲೇಡಿ ಲವ್ ಜಿಹಾದ್ಗೆ ಹಿಂದೂ ಪುರುಷ..? – ಶರಣಪ್ಪ ಈಗ ಸುಮೇರ್ ಉಜೆನ್
ಯಾದಗಿರಿ: ರಾಜ್ಯದಲ್ಲಿ ಬಲವಂತ ಮತಾಂತರ ಕಾಯ್ದೆ ಜಾರಿಯಲ್ಲಿದೆ. ಯಾವುದೇ ಒಬ್ಬ ವ್ಯಕ್ತಿಯನ್ನ ಬಲವಂತವಾಗಿ ಮತಾಂತರ ಮಾಡುವಂತಿಲ್ಲ. ಆದರೆ ಇಲ್ಲಿ ಮದುವೆಯಾಗಿದ್ದ ವ್ಯಕ್ತಿನ್ನು ಮಹಿಳೆಯೊಬ್ಬಳು ತನ್ನ ಮೋಹದ ಬಲೆಗೆ ಬೀಳಿಸಿಕೊಂಡು ಆತನನ್ನು ಬಲವಂತವಾಗಿ ಮತಾಂತರಗೊಳಿಸಿದ್ದಾಳೆ.
ಮೂಲತಃ ಯಾದಗಿರಿ (Yadagiri) ಜಿಲ್ಲೆಯ ಮಹಿಳೆ ಅಂಬಿಕಾ, ಕಲಬುರಗಿ (Kalburgi) ಮೂಲಕ ಶರಣಪ್ಪನ ಜೊತೆ ಕಳೆದ 4 ವರ್ಷಗಳ ಹಿಂದೆ ಮದುವೆಯಾಗಿದ್ದರು. ಶರಣಪ್ಪ ಕಲಬುರಗಿಯಲ್ಲಿ ಖಾಸಗಿ ಡಯಾಗ್ನೆಸಿಟ್ನಲ್ಲಿ ಕೆಲಸ ಮಾಡಿಕೊಂಡಿದ್ದ. ಇಬ್ಬರ ಸಂಸಾರ ಚೆನ್ನಾಗಿಯೇ ಇತ್ತು. ಆದರೆ ಶರಣಪ್ಪನಿಗೆ ತಾನು ಕೆಲಸ ಮಾಡುತ್ತಿದ್ದ ಡಯಾಗ್ನೆಸಿಟ್ನಲ್ಲಿ ಸುಮೈರಾ ಆಫ್ರಿನ್ ಎಂಬ ಮುಸ್ಲಿಂ ಮಹಿಳೆ ಪರಿಚಯವಾಗಿದೆ. ಇಬ್ಬರ ಪರಿಚಯ ಸ್ನೇಹವಾಗಿ ಪರಿವರ್ತನೆಯಾಗಿತ್ತು, ಹೀಗಿರುವಾಗ ಇಬ್ಬರ ನಡುವಿನ ಸಲುಗೆ ತುಂಬಾ ಹೆಚ್ಚಾಯಿತು. ನಂತರ ಈ ಸಲುಗೆಯಿಂದ ಅಫ್ರೀನಾ ಶರಣಪ್ಪನನ್ನು ಒತ್ತಾಯವಾಗಿ ಮದುವೆಯಾಗಿದಳು.
ಸುಮೈರಾ ಅಫ್ರೀನ್ ಮೊದಲೇ ವಿವಾಹವಾಗಿದ್ದಳು. ಆಕೆಗೆ ಈಗಾಗಲೇ ಮೂವರು ಮಕ್ಕಳಿದ್ದಾರೆ. ಒಂದೇ ಕಡೆ ಕೆಲಸ ಮಾಡುತ್ತಿದ್ದ ಶರಣಪ್ಪ ಹಾಗೂ ಅಫ್ರೀನ್ ನಡುವೆ ಏನಾದರೂ ಪ್ರೀತಿ, ಪ್ರೇಮ ಶುರುವಾಗಿತ್ತಾ? ಶರಣಪ್ಪ ಸಲುಗೆ ಬೆಳೆಸಿಕೊಂಡಿದ್ದ ಅಫ್ರೀನ್ ಮದುವೆ ಹೆಸರಿನಲ್ಲಿ ಕಿರುಕುಳ ನೀಡಿ ಆತನನ್ನು ಮದುವೆಯಾಗಿ ಬಲವಂತವಾಗಿ ಮತಾಂತರ ಮಾಡಿಸಿದ್ರಾ ಎಂಬ ಅನುಮಾನಗಳು ಶುರುವಾಗಿದೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲೂ ಅಕ್ರಮ?
ಅಫ್ರೀನ್ಳನ್ನು ಮದುವೆಯಾದ ಬಳಿಕ ಶರಣಪ್ಪ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಮದುವೆ ಬಳಿಕ ಶರಣಪ್ಪ ಸುಮೈರ್ ಉಜೆನ್ ಹೆಸರಿನಲ್ಲಿ ನ್ಯಾಯಾಲಯದಲ್ಲಿ ಅಫಿಡವಿಟ್ ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಅಫ್ರೀನ್ ನಮ್ಮ ವಿರುದ್ಧವೇ ಹೆಬಿಯಸ್ ಕಾರ್ಪಸ್ ಪ್ರಕರಣ ದಾಖಲಿಸಿದ್ದು, ನಮಗೆ ಜೀವ ಬೇದರಿಕೆ ಹಾಕಿದ್ದಾಳೆ ಎಂದು ನೊಂದ ಮಹಿಳೆ ಅಂಬಿಕಾ ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್, ಬೋಲ್ಟ್, ಬ್ಯಾಟರಿ ಪತ್ತೆ
ಮದುವೆಗೂ ಮುನ್ನವೇ ಶರಣಪ್ಪ ಇಸ್ಲಾಂ ಧರ್ಮ ಸ್ವೀಕರಿಸಿದ್ದನಾ ಎನ್ನುವುದಕ್ಕೆ ಉರ್ದುಭಾಷೆ ಕಲಿಯುವ ಪುಸ್ತಕ ದೊರೆತಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದೊಂದು ಬಲವಂತದ ಮತಾಂತರವಾಗಿದ್ದು, ಅಫ್ರೀನ್ಳನ್ನು ಪೊಲೀಸರು ಕೂಡಲೇ ಬಂಧಿಸಿ ಆಕೆಯ ಹಿಂದೆ ಇರುವ ಜಾಲವನ್ನು ಪತ್ತೆ ಮಾಡಿ ಬಲವಂತದ ಮತಾಂತರವನ್ನು ತಡೆಯಬೇಕು ಎಂದ ಶ್ರೀರಾಮ ಸೇನೆ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ಒತ್ತಾಯಿಸಿದ್ದಾರೆ.
ಸರ್ಕಾರ ಬಲವಂತದ ಮತಾಂತರ ನಿಷೇಧಕ್ಕೆ ಎಷ್ಟೆಲ್ಲಾ ಕ್ರಮ ಕೈಗೊಂಡರೂ ಜೀವ ಬೆದರಿಕೆಗೆ ಅಲ್ಲಲ್ಲಿ ಇನ್ನು ಬಲವಂತದ ಮತಾಂತರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಮತ್ತೊಂದು ಕಡೆ ಲವ್ ಜಿಹಾದ್ ಹೆಸರಿನಲ್ಲೂ ಮತಾಂತರ ನಡೆಯುತ್ತಿವೆ. ಇನ್ನಾದರೂ ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಬಲವಂತದ ಮತಾಂತರ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ.
Live Tv
[brid partner=56869869 player=32851 video=960834 autoplay=true]
ಹಾಸನ: ಪಾಪಿ ಪತಿ ಮಹಾಶಯನೊಬ್ಬ ತನ್ನ ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮನೆಗೇ ಬೆಂಕಿಯಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ತಾಲೂಕಿನ, ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಮನೆಯೊಳಗಿದ್ದ ಪತ್ನಿ, ಇಬ್ಬರು ಗಂಡು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಾದ ಗೀತಾ, ಚಿರಂತನ್ (7), ನಂದನ್ (5)ಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ರಂಗಸ್ವಾಮಿ ಆಗಾಗ ಬಂದು ಮಕ್ಕಳನ್ನು (Children) ನೋಡಿಕೊಂಡು ಹೋಗುತ್ತಿದ್ದ. ಆದರೆ ನಿನ್ನೆ ಮಕ್ಕಳನ್ನು ನೋಡಲು ಬಂದಾಗ ಪತ್ನಿ ಗೀತಾ ಬಿಡಲಿಲ್ಲ. ಇದರಿಂದ ಕೋಪಗೊಂಡ ರಂಗಸ್ವಾಮಿ, ಪೆಟ್ರೋಲ್ ಬಂಕ್ನಿಂದ ಪೆಟ್ರೋಲ್ (Petrol) ತಂದು ಮಧ್ಯರಾತ್ರಿ ಮನೆಗೆ ಸುರಿದು ಬೆಂಕಿ ಹಚ್ಚಿದ್ದಾನೆ.
ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಸ್ಥಳೀಯರ ನೆರವಿನಿಂದ ಗೀತಾ ಹಾಗೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಆರೋಪಿ ರಂಗಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಎಲ್ಲೆಡೆ ಧರ್ಮಸಂಘರ್ಷ ತಾರಕಕ್ಕೇರಿದೆ. ಇಂತಹ ವೇಳೆ ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ಮತಾಂತರವಾಗಲಿಲ್ಲ ಎಂಬ ಕಾರಣಕ್ಕೆ ಗಂಡನೇ ಕೊಲೆ ಮಾಡಲು ಯತ್ನಿಸಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ.
ಆರೋಪಿ ಖಾದರ್ ಶಿವಮೊಗ್ಗ (Shivamogga) ಮೂಲದ ಉಮಾರನ್ನು ಮೊದಲೇ ವಿವಾಹವಾಗಿದ್ದ. ಚಿತ್ರದುರ್ಗದ (Chitradurga) ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಉಮಾ ಅವರಿಗೆ ಖಾದರ್ ಪರಿಚಯವಾಗಿದೆ. ಆ ಪರಿಚಯ ಪ್ರೀತಿಯಾಗಿ ವಿವಾಹವಾಗಿದ್ದರು. ವಿವಾಹದ ಬಳಿಕ ಆತನ ವರಸೆ ಬದಲಾಗಿದ್ದು, ಹೆಂಡತಿಯನ್ನು ಮತಾಂತರವಾಗುವಂತೆ ಒತ್ತಾಯಿಸಿದ್ದನು. ಆಗ ಈ ಒತ್ತಡಕ್ಕೊಳಗಾದ ಉಮಾಳ ಆರೋಗ್ಯ ಹದಗೆಟ್ಟಿದ್ದು, ಎರಡು ಕಾಲುಗಳು ನಿಷ್ಕ್ರಿಯಗೊಂಡಿದ್ದವು. ಈ ವೇಳೆ ತನ್ನ ಪತ್ನಿಯ ಬಗ್ಗೆ ಕಾಳಜಿವಹಿಸಬೇಕಾದ ಖಾದರ್, ಉಮಾಗೆ ಚಿತ್ರಹಿಂಸೆ ನೀಡಿ, ಆಕೆಯ ಖಾಸಗಿ ಅಂಗಾಂಗಾಗಳ ಹಲ್ಲೆ ನಡೆಸಿ, ಕ್ರೌರ್ಯ ಮೆರೆದಿದ್ದಾನೆ. ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರವಾಗದಿದ್ದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾನೆ. ಯಾರು ಇಲ್ಲದ ವೇಳೆ ಉಮಾಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಖಾದರ್ ಯತ್ನಿಸಿದ್ದಾನೆ ಎಂದು ಉಮಾ ಆರೋಪಿಸಿದ್ದಾರೆ.
ಸದ್ಯ ಖಾದರ್ ಮೋಸದ ಬಲೆಗೆ ಸಿಲುಕಿಕೊಂಡಿರುವ ಉಮಾ ಕಟ್ಟುಕೊಂಡ ಗಂಡನನ್ನು ಬಿಟ್ಟು ಬಂದು, ಮತಾಂತರದ ಕೂಪಕ್ಕೆ ಸಿಲುಕಿದ್ದಾರೆ. ಅತ್ತ ಸಂಸಾರವೂ ಇಲ್ಲ, ಇತ್ತ ಆರೋಗ್ಯವು ಹದಗೆಟ್ಟಿದೆ. ಹೀಗಾಗಿ ಕಂಗಾಲಾಗಿರುವ ಉಮಾ, ಅವರ ಸಂಬಂಧಿಯಾದ ವಿಶ್ವನಾಥ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಇನ್ನೂ ತಮಗಾದ ಅನ್ಯಾಯಕ್ಕೆ ನ್ಯಾಯ ಒದಗಿಸಿಕೊಡುವಂತೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ – ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು
– ಮತಾಂತರಗೊಳ್ಳುವಂತೆ ಗಂಡನಿಗೆ ವಿಪರೀತ ಕಾಟ – ಸಮಾಜದ ಮುಖಂಡರ ಜೊತೆಗೆ ಠಾಣೆಯಲ್ಲಿ ದೂರು
ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ(Conversion) ಮಾತ್ರ ಸಂಸಾರ ಮಾಡುತ್ತೇನೆ ಎಂದ ಪತ್ನಿ ವಿರುದ್ಧ ಪತಿ ಸಮಾಜದ ಮುಖಂಡರ ಜೊತೆ ಹಳೇ ಹುಬ್ಬಳ್ಳಿ(Hubballi) ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ನಡೆದಿದೆ.
ಎಸ್ಟಿಗೆ ಸೇರುವ ಶಿಕ್ಕಲಗಾರ ಸಮುದಾಯದ ಸಂಪತ್ ಬಗನಿ ಮತ್ತು ಭಾರತಿ 15 ವರ್ಷಗಳ ಹಿಂದೆ ಮದುವೆಯಾಗಿದ್ದಾರೆ. ಆದರೆ ಈಗ ಭಾರತಿ ಮತ್ತು ಅವರ ತಂದೆ, ತಾಯಿಯನ್ನು ತಲೆಕೆಡಿಸಿ ಕೆಲವರು ಕ್ರೈಸ್ತ ಧರ್ಮಕ್ಕೆ(Christian Religion) ಮತಾಂತರ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಪತ್ನಿ, ಅತ್ತೆ, ಮಾವ ಹಲವು ದಿನಗಳಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮತಾಂತರವಾಗದಿದ್ದರೆ ನಾನು ಸಂಸಾರ ಮಾಡುವುದಿಲ್ಲ ಎಂದು ಪತ್ನಿ ಬೆದರಿಕೆ ಹಾಕಿದ್ದಾಳೆ. ಆದರೆ ಈಗ ಪತ್ನಿ ಮತ್ತು ಆಕೆ ಮನೆಯವರ ಕಾಟ ವಿಪರೀತವಾಗಿದೆ ಎಂದು ಸಂಪತ್ ದೂರು ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಪತ್ ಹಲವು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಈ ವೇಳೆ ಪೊಲೀಸರು ದಂಪತಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಆದರೆ ಮತ್ತೆ ಪತ್ನಿ ಮತ್ತು ಆಕೆಯ ಮನೆಯವರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಈಗ ಸಮುದಾಯದ ಮುಖಂಡರು ಮತ್ತು ಹಿಂದೂಪರ ಸಂಘಟನೆಗಳ ಜೊತೆ ಸಂಪತ್ ಠಾಣೆಯ ಮೆಟ್ಟಿಲೇರಿ ಮತಾಂತರ ನಿಷೇಧ ಕಾಯ್ದೆಯ ಅಡಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ವಾಸ ಮಾಡುವ ಪ್ರತಿಯೊಬ್ಬರು ಹಿಂದೂಗಳೇ: ಮೋಹನ್ ಭಾಗವತ್
ಹಳೇ ಹುಬ್ಬಳ್ಳಿ ವ್ಯಾಪ್ತಿಯಲ್ಲಿರುವ ಶಿಕ್ಕಲಗಾರ ಸಮುದಾಯದ ಬಡ ಕುಟುಂಬಗಳನ್ನು ಗುರಿಯಾಗಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಆಗುವಂತೆ ಪ್ರಚೋದನೆ ನೀಡಲಾಗುತ್ತಿದೆ. ಶಿಕ್ಕಲಗಾರ ಸಮುದಾಯದಿಂದ ರೌಡಿ ಶೀಟರ್ ಮದನ್ ಬುಗುಡಿ ಸೇರಿದಂತೆ 15 ಜನರ ತಂಡ ಈ ರೀತಿಯ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದು ವಾಟ್ಸಪ್ ಗ್ರೂಪ್ ಮಾಡಿ ನಿರಂತರ ಸಂದೇಶ ಹರಿಬಿಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈಗ ಮನೆ ಮನೆಗೆ ತೆರಳಿ ಕ್ರಿಶ್ಚಿಯನ್ ಧರ್ಮ ಬಗ್ಗೆ ಪ್ರಚಾರ ಮಾಡಿ, ಮತಾಂತರ ಮಾಡಲು ಹುನ್ನಾರ ನಡೆಸಿದ ಆರೋಪದ ಅಡಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಶ್ವ ಹಿಂದೂ ಪರಿಷತ್, ಶ್ರೀರಾಮಸೇನೆ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಪತ್ ಜೊತೆಗೆ ಹಳೇ ಹುಬ್ಬಳ್ಳಿ ಠಾಣೆ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರಾಜ್ಯದಲ್ಲಿ ಬಲವಂತದ ಮತಾಂತರ ನಿರಂತರವಾಗಿ ನಡೆಯುತ್ತಿದೆ. ಮತಾಂತರ ನಿಷೇಧ ಕಾಯ್ದೆ(Anti Conversion Act) ಸರಿಯಾಗಿ ಜಾರಿಯಾಗಿಲ್ಲ. ಕೂಲಿ ಕಾರ್ಮಿಕರನ್ನು, ಎಸ್ಸಿ, ಎಸ್ಟಿ ಸಮುದಾಯದವರನ್ನು ಟಾರ್ಗೆಟ್ ಮಾಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದರೂ ಪೊಲೀಸರು ಮೌನ ವಹಿಸಿದ್ದಾರೆ ಅಂತ ಹಿಂದು ಮುಖಂಡರು ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಹೆಂಡತಿಯ (Wife) ಕಿರುಕುಳಕ್ಕೆ ಬೇಸತ್ತು ಪತಿ (Husband) ಹಾಗೂ ಆತನ ತಾಯಿ (Mother) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಬೆಂಗಳೂರಿನ ರಾಜಗೋಪಾಲನಗರದ ಶ್ರೀಗಂಧ ನಗರದಲ್ಲಿ ಘಟನೆ ನಡೆದಿದ್ದು, ಮೃತರನ್ನು ಭಾಗ್ಯಮ್ಮ (57) ಹಾಗೂ ಶ್ರೀನಿವಾಸ್ (33) ಎಂದು ಗುರುತಿಸಲಾಗಿದೆ. ಮೃತ ಶ್ರೀನಿವಾಸ್ ಪೋಷಕರಿಗೆ ವಯಸ್ಸಾಗಿತ್ತು. ಹಾಗಾಗಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಶ್ರೀನಿವಾಸ್ ಮಡಿಕೇರಿಯಲ್ಲಿದ್ದ ತನ್ನ ತಂದೆ, ತಾಯಿಯನ್ನು ಬೆಂಗಳೂರಿನ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಆದರೆ ಶ್ರೀನಿವಾಸ್ ಪತ್ನಿ ಸಂಧ್ಯಾಳಿಗೆ ಇದು ಇಷ್ಟವಿರಲಿಲ್ಲ.
ತನ್ನ ತಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ವಯಸ್ಸಾದ ಅತ್ತೆ – ಮಾವನನ್ನು ನೋಡಿಕೊಳ್ಳೋರು ಯಾರು? ತನಗೆ ಅತ್ತೆ, ಮಾವನನ್ನು ನೋಡಿಕೊಳ್ಳೋಕೆ ಕಷ್ಟವಾಗಲಿದೆ ಎಂದು ಸಂಧ್ಯಾ ಗಲಾಟೆ ತೆಗೆದಿದ್ದಳು. ಇದೇ ವಿಚಾರವಾಗಿ ಮಧ್ಯರಾತ್ರಿ ಮೂರು ಗಂಟೆಗೆ ಗಲಾಟೆ ನಡೆದಿತ್ತು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಅಯೋಧ್ಯೆ ಮಸೀದಿ ನಿರ್ಮಾಣ ಕಾರ್ಯ 2023ಕ್ಕೆ ಪೂರ್ಣ ಸಾಧ್ಯತೆ – ಟ್ರಸ್ಟ್
ಅದಾದ ಬಳಿಕ ಮೊದಲಿಗೆ ತಾಯಿ ಭಾಗ್ಯಮ್ಮ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂತರ ಶ್ರೀನಿವಾಸ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಧ್ಯಾಹ್ನದ ತನಕ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಗಲಾಟೆಯಿಂದ ಬೇಸತ್ತು ತಾಯಿ- ಮಗ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್ನಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಬಿಗಿ – ಹಿಂಸೆ ವೈಭವೀಕರಿಸುವ ಹಾಡುಗಳು ಬ್ಯಾನ್
Live Tv
[brid partner=56869869 player=32851 video=960834 autoplay=true]