ಬೆಳಗಾವಿ: ಹೆಂಡತಿಯನ್ನು (Wife) ಚುಡಾಯಿಸುತ್ತಿದ್ದ ನೆರೆಮನೆಯವನನ್ನು (Neighbor) ಪತಿ (Husband) ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಕೋಪಗೊಂಡ ನೆರೆಮನೆಯಾತ ಪತಿಯನ್ನು ಕಟ್ಟಿಗೆಯಿಂದ ಹೊಡೆದು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಖಾನಾಪೂರದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ಮಾರುತಿಯ ಪತ್ನಿಯನ್ನು ಪ್ರಶಾಂತ್ ಚುಡಾಯಿಸುತ್ತಿದ್ದ. ಈ ಬಗ್ಗೆ ಮಾರುತಿ ಪ್ರಶಾಂತ್ನನ್ನು ಪ್ರಶ್ನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಪ್ರಶಾಂತ್ ಭಾನುವಾರ ರಾತ್ರಿ ಮಾರುತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ಘಟನೆ ಬಗ್ಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯರಿಗೆ ಎರಡು ಬೆರಳಿನ ಪರೀಕ್ಷೆ – ಸುಪ್ರೀಂಕೋರ್ಟ್ ಅಸಮಾಧಾನ
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಮದ್ಯಪಾನ (Alcohol) ಕ್ಕೆ ದಾಸನಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡನ ಟಾರ್ಚರ್ ತಾಳಲಾರದೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂ (Check Dam) ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತ ದುರ್ದೈವಿಗಳು. ಕಳೆದ 8ವರ್ಷದ ಹಿಂದೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾಳನ್ನು ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆಯಾಗಿದ್ದು, ಪತ್ನಿ ಮೇಲೆ ಅನುಮಾನ ಪಡುತ್ತಿದ್ದನು. ಇದನ್ನೂ ಓದಿ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು – ಕಣ್ಣುಗಳನ್ನು ದಾನ ಮಾಡಿದ ಪೋಷಕರು
ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬಂದು ಟಾರ್ಚರ್ (Torcher) ನೀಡುತ್ತಾ ಹಲ್ಲೆ ನಡೆಸುತ್ತಿದ್ದನಂತೆ. ಈ ಕಿರುಕುಳದಿಂದ ಮನನೊಂದ ಅರ್ಪಿತಾ ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅರ್ಪಿತಾ, ಮೊಬೈಲ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೆಲ್ಫಿ ವೀಡಿಯೋ ವೇಳೆ ಅಪ್ಪ ಎಂದು ಕೂಗಿರುವ ಪುಟ್ಟ ಬಾಲಕ ಮದನ್ನ ಮನಕಲಕುವ ಸೆಲ್ಫಿ ವೀಡಿಯೋ ವೈರಲ್ ಆಗಿದೆ.
ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
ಹೌದು, ಬೆಂಗಳೂರು ಚಿಕ್ಕಸಂದ್ರದ (Chikkasandra) ಇಂದ್ರೇಶ್-ಅನಿತ ದಂಪತಿ ಪುತ್ರ ಮಧುಸೂದನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಾಲ್ಕು ವರ್ಷದ ಹಿಂದೆ ವಸುಧ ಜೊತೆ ಮದುವೆಯಾಗಿ ಸಂಸಾರ ನಡೆಸುತ್ತಿದ್ದ. ಆದರೂ ಮತ್ತೊಂದು ಮದುವೆ ಆಗಲು ಸ್ಕೆಚ್ ಹಾಕಿ ಹಾಸನ (Hassan) ಮೂಲದ ಯುವತಿಯನ್ನು ಬಂದು ನೋಡಿಕೊಂಡು ಹೋಗಿದ್ದ. ಹುಡುಗಿ ಮನೆಯವರಿಗೆ ಇನ್ನಿಲ್ಲದ ಸುಳ್ಳು ಹೇಳಿ ನಂಬಿಸಿದ್ದ. ಈತನ ಮಾತಿಗೆ ಮರುಳಾದ ಯುವತಿ ಪೋಷಕರು ಮದುವೆ ಮಾಡಲು ಒಪ್ಪಿಕೊಂಡು ನಿಶ್ಚಿತಾರ್ಥ ಮಾಡಿದ್ದರು. ನಿನ್ನೆ ಬೆಂಗಳೂರಿನಲ್ಲಿ ರಿಸೆಪ್ಷನ್ ಇಟ್ಟುಕೊಂಡಿದ್ದರು. ಮಧುಸೂದನ್ ಪೋಷಕರು, ಇಬ್ಬರು ಅಕ್ಕಂದಿರು ಹಾಗೂ ಅವರ ಗಂಡಂದಿರು ಮಾತ್ರ ರಿಸಪ್ಷನ್ನಲ್ಲಿ ಭಾಗವಹಿಸಿದ್ದರು.
ಇಂದು ಹಾಸನದ ಕಲ್ಯಾಣ ಮಂಟಪವೊಂದರಲ್ಲಿ ಮದುವೆ ನಡೆಯಬೇಕಿತ್ತು. ಆದರೆ ಮದುವೆಗೂ ಕೂಡ ವರನ ಕಡೆಯಿಂದ ಬೆರಳೆಣಿಕೆಯಷ್ಟು ಮಂದಿ ಮಾತ್ರ ಭಾಗವಹಿಸಿದ್ದರು. ಇನ್ನೇನು ತಾಳಿ ಕಟ್ಟಲು ಕೆಲ ಸಮಯ ಮಾತ್ರ ಉಳಿದಿತ್ತು. ಅಷ್ಟರಲ್ಲಿ ಕಲ್ಯಾಣಮಂಟಪದ ಮಾಲೀಕರಿಗೆ ಮೊದಲನೇ ಪತ್ನಿ ವಸುಧ ಕರೆ ಮಾಡಿ ನಿಜಾಂಶ ತಿಳಿಸಿದ್ದಾರೆ. ಕೂಡಲೇ ಓಡಿ ಬಂದ ಮಾಲೀಕರು ವಧುವಿನ ಪೋಷಕರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣವೇ ಮದುವೆಯನ್ನು ನಿಲ್ಲಿಸಿದ್ದಾರೆ. ಇಷ್ಟಾದರೂ ಮಧುಸೂದನ್ ಮಾತ್ರ ತನಗೇನು ಗೊತ್ತಿಲ್ಲದಂತೆ ನಾಟವಾಡಲು ಶುರುಮಾಡಿದ್ದ. ಕೊನೆಗೆ ವಧುವಿನ ಸಂಬಂಧಿಕರು ಆತನನ್ನು ಹಿಡಿದುಕೊಂಡು ಕೇಳಿದಾಗ ನಿಜಾಂಶ ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ನಿಮ್ಮ ಮುಖ್ಯಮಂತ್ರಿಯನ್ನು ನೀವೇ ಆರಿಸಿ – ಗುಜರಾತ್ನಲ್ಲಿ ಕೇಜ್ರಿವಾಲ್ ಅಭಿಯಾನ
ಮಧುಸೂದನ್ ಎರಡನೇ ಮದುವೆಯಾಗಲು ಮೆಗಾಪ್ಲಾನ್ ಮಾಡಿದ್ದ. ಇಂದು ಬೆಳಿಗ್ಗೆಯಿಂದಲೂ ಬೇಗ ತಾಳಿ ಕಟ್ಟಿಸಿ ಒಂದು ಗಂಟೆಯೊಳಗೆ ಹೋಗಬೇಕು ಎಂದು ಪದೇ ಪದೇ ಒತ್ತಾಯಿಸುತ್ತಿದ್ದ. ಅಲ್ಲದೇ ಹನಿಮೂನ್ಗೆ ಮಾಲ್ಡೀವ್ಸ್ಗೆ ಎರಡು ಟಿಕೆಟ್ ಬುಕ್ ಮಾಡಿದ್ದ. ನಾಳೆ ಬೆಳಗ್ಗೆ ಆರು ಗಂಟೆಗೆ ವಧು-ವರರಿಬ್ಬರು ಮಾಲ್ಡೀವ್ಸ್ಗೆ ಹಾರಬೇಕಿತ್ತು. ಅಷ್ಟರಲ್ಲಿ ಮೊದಲನೇ ಪತ್ನಿಯ ಸಮಯಪ್ರಜ್ಞೆಯಿಂದ ಅಮಾಯಕ ಯುವತಿಗೆ ಆಗುತ್ತಿದ್ದ ವಂಚನೆ ತಪ್ಪಿದಂತಾಗಿದೆ.
ಮಧುಸೂದನ್ನನ್ನು ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದು ಮೊದಲನೇ ಪತ್ನಿ ವಸುಧ ಬೆಂಗಳೂರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಇತ್ತ ಸಂಭ್ರಮದಲ್ಲಿದ್ದ ವಧುವಿನ ಮನೆಯವರು ಮಗಳ ಜೀವನ ಹಾಳುಗುತ್ತಿದ್ದು ತಪ್ಪಿದ್ದಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕಾರವಾರ: ಗಂಧದಗುಡಿ (Gandhadagudi) ಸಿನಿಮಾ ವೀಕ್ಷಣೆಗಾಗಿ ಚಿತ್ರಮಂದಿರಕ್ಕೆ ತೆರಳಿದ್ದ ಅಪ್ಪು (Appu) ಅಭಿಮಾನಿಗಳು ಚಿತ್ರಮಂದಿರದ ದಿನಗೂಲಿ ನೌಕರನ ಪತ್ನಿಯ ಮೃತದೇಹ ತರಲು ಆಸ್ಪತ್ರೆಗೆ ಹಣ ಪಾವತಿಸಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ನಟರಾಜ ಚಿತ್ರಮಂದಿರದ ದಿನಗೂಲಿ ನೌಕರನಾಗಿರುವ ಪರಶುರಾಮ ಛಲವಾದಿಯ ಗರ್ಭಿಣಿ ಪತ್ನಿ ವನಜಾ ಅವರ ಹೊಟ್ಟೆಯಲ್ಲೇ ಮಗು ಸತ್ತು ಸೋಂಕಾಗಿತ್ತು. ಶಿರಸಿಯ ಟಿಎಸ್ಎಸ್ ಆಸ್ಪತ್ರೆಯಲ್ಲಿ ಮೃತ ಮಗುವನ್ನು ಹೊರತೆಗೆದು ಮಹಿಳೆಗೆ ಚಿಕಿತ್ಸೆ ನೀಡುವಾಗ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಾವನ್ನಪ್ಪಿದ್ದರು.
ಮಹಿಳೆಯ ಮೃತದೇಹ ಕೊಂಡೊಯ್ಯುವ ಮುನ್ನ ಶಿರಸಿಯ ಟಿಎಸ್ಎಸ್ ಆಸ್ಪತ್ರೆಯವರು 24,000ರೂ. ಚಾರ್ಜ್ ಮಾಡಿದ್ದರು, ಪತ್ನಿಯ ಮೃತದೇಹ ಬಿಡಿಸಿಕೊಳ್ಳಲು ಹಣವಿಲ್ಲದೇ ಪರದಾಡಿದ್ದ ಪರಶುರಾಮ ಛಲವಾದಿ ಇಂದು ತನ್ನ ನೋವನ್ನು ಚಿತ್ರಮಂದಿರಕ್ಕೆ ಆಗಮಿಸಿದ್ದ ಪುನೀತ್ ರಾಜ್ಕುಮಾರ್ (Puneeth Rajkumar) ಅಭಿಮಾನಿಗಳ ಜೊತೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಟೀ ನಿರಾಕರಿಸಿದ ಡಿಸಿಗೆ ಮದ್ಯ ಕುಡಿತೀರಾ ಅಂದ ಮಹಾರಾಷ್ಟ್ರ ಕೃಷಿ ಸಚಿವ – ವೀಡಿಯೋ ವೈರಲ್
ನಂತರ ವಿಷಯ ತಿಳಿದ ಅಪ್ಪು ಅಭಿಮಾನಿಗಳ ಬಳಗದಲ್ಲೇ 100 – 200 ರೂಪಾಯಿಯಂತೆ ಹಣವನ್ನು ಒಟ್ಟು ಸೇರಿಸಿ ಟಿಎಸ್ಎಸ್ ಆಸ್ಪತ್ರೆಗೆ ತೆರಳಿತ್ತು. ಈ ವೇಳೆ ಆಸ್ಪತ್ರೆಯವರು ಸಹ ಅಪ್ಪು ಅಭಿಮಾನಿಗಳ ಮನವಿಗೆ ಸ್ಪಂದಿಸಿ ವೆಚ್ಚವನ್ನು ಕಡಿತಗೊಳಿಸಿ ಮೃತದೇಹ ಬಿಟ್ಟುಕೊಟ್ಟಿದ್ದು, ನಂತರ ಅಭಿಮಾನಿಗಳು ಮಹಿಳೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ
Live Tv
[brid partner=56869869 player=32851 video=960834 autoplay=true]
ಲಕ್ನೋ: ಮಹಿಳೆಯೊಬ್ಬಳು ಸೀಲಿಂಗ್ ಫ್ಯಾನ್ಗೆ ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ (Husband) ಆಕೆಯನ್ನು ಉಳಿಸುವ ಬದಲು ಅದನ್ನು ವೀಡಿಯೋ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ.
ಉತ್ತರ ಪ್ರದೇಶದ ಗುಲ್ಮೊಹರ್ ನಗರದಲ್ಲಿ ಈ ಘಟನೆ ನಡೆದಿದೆ. ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಾಗೂ ಸಂಜೀವ್ ಗುಪ್ತಾ ವೀಡಿಯೋ ಮಾಡಿದ ಆಕೆ ಪತಿ. ಶೋಭೀತಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಆಕೆಯನ್ನು ಉಳಿಸುವ ಯಾವುದೇ ಪ್ರಯತ್ನವನ್ನು ಮಾಡಿರಲಿಲ್ಲ. ಬದಲಿಗೆ ವೀಡಿಯೋ ಮಾಡುತ್ತಾ ನಿಂತಿದ್ದ. ಈ ವೇಳೆ ಶೋಭಿತಾ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ ಎರಡನೇ ಪ್ರಯತ್ನದಲ್ಲಿ ನೇಣು ಹಾಕಿಕೊಳ್ಳುವಲ್ಲಿ ಆಕೆ ಯಶಸ್ವಿಯಾಗುತ್ತಾಳೆ.
ಶೋಭೀತಾ ನೇಣು ಬಿಗಿದುಕೊಂಡು ಎಷ್ಟೇ ಒದ್ದಾಡುತ್ತಿದ್ದರೂ ಇದನ್ನು ವೀಡಿಯೋ (Video) ಮಾಡಿಕೊಳ್ಳುತ್ತಿದ್ದ ಸಂಜೀವ್ ಗುಪ್ತಾ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರಲಿಲ್ಲ. ಅದಾದ ಬಳಿಕ ಸಂಜೀವ್ ಗುಪ್ತಾ ಘಟನೆಗೆ ಸಂಬಂಧಿಸಿ ಶೋಭಿತಾಳ ತಂದೆ ರಾಜ್ ಕಿಶೋರ್ ಗುಪ್ತಾಗೆ ಕರೆ ಮಾಡಿ, ಶೋಭೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ.
ಈ ಹಿನ್ನೆಲೆಯಲ್ಲಿ ಕಿಶೋರ್ ಗುಪ್ತಾ ಗುಲ್ಮೊಹರ್ ನಗರದಲ್ಲಿರುವ ಶೋಭಿತಾಳ ಮನೆಗೆ ಹೋಗಿದ್ದಾರೆ. ಈ ವೇಳೆ ಹಾಸಿಗೆಯ ಮೇಲೆ ಆಕೆಯ ಶವವನ್ನು ಕಂಡಿದ್ದಾರೆ. ಅಷ್ಟೇ ಅಲ್ಲದೇ ಸಂಜೀವ್ ಅವಳು ಬದುಕಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದಾಗಲೇ ಶೋಭಿತಾ ಶವವಾಗಿದ್ದಳು. ಘಟನೆಗೆ ಸಂಬಂಧಿಸಿ ರಾಜ್ ಕಿಶೋರ್ ಸಂಜೀವ್ನನ್ನು ವಿಚಾರಿಸಿದ್ದಾನೆ. ಆ ವೇಳೆ ಸಂಜೀವ್ ವೀಡಿಯೋವನ್ನು ರಾಜ್ ಕಿಶೋರ್ಗೆ ತೋರಿಸಿದ್ದಾನೆ. ಇದನ್ನೂ ಓದಿ: ತೆಲಂಗಾಣದಲ್ಲಿ TRS ಶಾಸಕರ ಖರೀದಿಗೆ ಯತ್ನ- 15 ಕೋಟಿ ಜೊತೆ ನಾಲ್ವರು ವಶಕ್ಕೆ
ಶೋಭಿತಾಳ ಕುಟುಂಬದವರು ಘಟನೆಗೆ ಸಂಬಂಧಿಸಿ ಹನುಮಂತ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಂಜೀವ್ ಗುಪ್ತಾನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಜೋಡಿ 4 ವರ್ಷಗಳ ಹಿಂದೆ ಮದುವೆಯಾಗಿತ್ತು. ಇದನ್ನೂ ಓದಿ:ಡೀಲ್ ಮುಗಿಯುವ ಮುನ್ನವೇ ಟ್ವಿಟ್ಟರ್ ಚೀಫ್ ಎಂದು ಘೋಷಿಸಿಕೊಂಡ ಮಸ್ಕ್
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪತಿ-ಪತ್ನಿ ಕಲಹ, ವರದಕ್ಷಿಣೆ ಕಿರುಕುಳ, ಮದುವೆಯಾಗೋದಾಗಿ ನಂಬಿಸಿ ಮೋಸ ಹೀಗೆ ನಾನಾ ಕೇಸ್ಗಳನ್ನು ಆಟೆಂಡ್ ಮಾಡ್ತಿರುವ ಮಹಿಳಾ ಆಯೋಗಕ್ಕೆ ಈಗ ಹೊಸ ತಲೆನೋವು ಶುರುವಾಗಿದೆ ಅದೇ ಲಿವಿಂಗ್ ಟುಗೆದರ್ (Living Together) ಕಂಟಕ.
ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗ (Women Commission) ದ ಮೆಟ್ಟಿಲೇರುತ್ತಿದ್ದಾರಂತೆ. ಕಾಲೇಜ್, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ ಟುಗೆದರ್ ನಿರ್ಧಾರವನ್ನು ತೆಗೆದುಕೊಂಡು ಒಟ್ಟಾಗಿ ಒಂದೇ ಮನೆಯಲ್ಲಿ ಜೀವನ ಸಾಗಿಸ್ತಾರೆ. ಆದರೆ ವರ್ಷ ಕಳೆಯೋದ್ರೊಳಗೆ ಗಲಾಟೆ ಶುರುವಾಗಿ ಹೆಣ್ಣುಮಕ್ಕಳು ನ್ಯಾಯ ಕೊಡಿಸಿ ಅಂತಾ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ. ಲಿವಿಂಗ್ ಟುಗೆದರ್ ಚಾಳಿಯಿಂದ ಹೆಣ್ಣುಮಕ್ಕಳು ತಮ್ಮ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ. ಇನ್ನು ಇಂತಹ ಕೇಸ್ನಲ್ಲಿ ನ್ಯಾಯ ಒದಗಿಸೋದು ಕೂಡ ಕಷ್ಟ ಅಂತ ಆಯೋಗದ ಅಧ್ಯಕ್ಷರು ಹೇಳುತ್ತಾರೆ.
ಇನ್ನು ಪ್ರಮುಖವಾಗಿ ವಿದ್ಯಾರ್ಥಿನಿಯರಲ್ಲಿ, ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಈಗಾಗಲೇ ಲಿವಿಂಗ್ ಟುಗೆದರ್ ಮೋಸದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಹಿಳಾ ಆಯೋಗ ಮಾಡಲು ನಿರ್ಧರಿಸಿದ್ದು ಹಲವಡೆ ಪ್ರಾಯೋಗಿಕವಾಗಿ ಆರಂಭಿಸಿದೆ. ಲಿವಿಂಗ್ ಟುಗೆದರ್ ಚಾಳಿಯಿಂದಾಗಿ ಮಹಿಳೆಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಸಮಸ್ಯೆಯಾಗುತ್ತಿದೆ. ಖಿನ್ನತೆಯಂತಹ ಸಮಸ್ಯೆ ಕೂಡ ಎದುರಿಸಬೇಕಾಗಿದ್ದು ಆತಂಕಕ್ಕೆ ಕಾರಣವಾಗ್ತಿದೆ.
ಮೋಸ ಹೋದ ಬಳಿಕ ನ್ಯಾಯಕ್ಕಾಗಿ ಮೊರೆ ಹೋಗುವ ಬದಲು, ಮೋಸ ಹೋಗದಂತೆ ಎಚ್ಚರ ವಹಿಸಬೇಕಾಗಿದೆ. ಬದುಕು ರೂಪಿಸಿಕೊಳ್ಳವ ಹಂತದಲ್ಲಿ ಮಹಿಳೆಯರು ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ.
ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ (Hindupura) ದ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ್ (Chandrashekhar) ಮತ್ತು ಶ್ವೇತಾ (Shwetha) ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ (Marriage) ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. ಆದರೂ ಅಕ್ಕನ ಮಗಳು ಅನ್ನೋ ಕಾರಣಕ್ಕೆ ಮನೆಯವರು ಬಲವಂತದಿಂದ ಮದುವೆ ಮಾಡಿಸಿದ್ದರು. ಇದನ್ನೂ ಓದಿ: ಪ್ಲ್ಯಾನ್ ಮಾಡಿಯೇ ಮಳವಳ್ಳಿಯ ಬಾಲಕಿಯನ್ನು ರೇಪ್ ಮಾಡಿದ್ದ ಆರೋಪಿ ಕಾಂತರಾಜು
ಮದುವೆಯಾದ ಬಳಿಕ ಇಬ್ಬರ ಸಂಸಾರ ಸರಿ ಇರಲಿಲ್ಲ. ಶ್ವೇತಾಗೆ ಕಾಲೇಜು ಗೆಳೆಯರು ಹಾಗೂ ಬೇರೆ ಸ್ನೇಹಿತರ ವಿಚಾರಕ್ಕೆ ಹಲವಾರು ಬಾರಿ ಜಗಳ ಆಗಿದೆ. ಇತ್ತ ಸುರೇಶ್ ಎಂಬಾತನ ಜೊತೆಗೂ ಶ್ವೇತಾ ಸಂಪರ್ಕದಲ್ಲಿದ್ದಳು. ಇಷ್ಟು ಮಾತ್ರವಲ್ಲದೇ ಪತಿ ಇಲ್ಲದ ಸಮಯದಲ್ಲಿ ಇಬ್ಬರು ಸೇರುತ್ತಿದ್ದರು. ಈ ನಡುವೆ ಪತಿ ಇದ್ದರೆ ಇದೆಲ್ಲಾ ಕಷ್ಟ ಅಂದುಕೊಂಡ ಶ್ವೇತಾಳಿಗೆ ಆತನನ್ನೆ ಇಲ್ಲದಂತೆ ಮಾಡು ಎಂದು ಸುರೇಶ್ ಐಡಿಯಾ ಕೊಟ್ಟಿದ್ದಾನೆ.
ಐಡಿಯಾದಂತೆ ಚಂದ್ರಶೇಖರ್ ನನ್ನು ಕೊಲ್ಲುವ ಪ್ಲಾನ್ ಮಾಡಿಕೊಂಡು ಸುರೇಶ್ ಬೆಂಗಳೂರಿಗೆ ಬಂದಿದ್ದ. ಚಂದ್ರಶೇಖರ್ ವಾಸ ಮಾಡ್ತಿದ್ದ ಮನೆಯ ಮೇಲೆಯೇ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ ಅಂದರೆ ಅಕ್ಟೋಬರ್ 22ರ ರಾತ್ರಿ ಎಸ್ಕೇಪ್ ಆಗಿದ್ದ. ಆದರೆ ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತೇ ಇಲ್ಲ ಎಂದು ಪೊಲೀಸರ ಮುಂದೆ ಹೇಳಿದ್ದ. ಇದೀಗ ವಿಚಾರಣೆ ಬಳಿಕ ಶ್ವೇತಾ ಹಾಗೂ ಸುರೇಶ್ ಸೇರಿ ಕೊಲೆ ಮಾಡಿರುವುದು ಬಯಲಿಗೆ ಬಂದಿದೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ (Husband), ಪತ್ನಿ (Wife) ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಹೊಳೆಪ್ಪ ಮಾರುತಿ ಮಸ್ತಿ (25), ಈತನ ಪತ್ನಿ ವಾಸಂತಿ (22) ಹಾಗೂ ಒಂದೂವರೆ ವರ್ಷದ ಮಗು ಮೃತ ದುರ್ದೈವಿ. ಮದ್ಯದ ಅಮಲಿನಲ್ಲಿ ಹೊಳೆಪ್ಪ ಪತ್ನಿಯೊಂದಿಗೆ ಜಗಳವಾಡಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದನು.
ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ:ಭೀಕರ ರಸ್ತೆ ಅಪಘಾತ – ಟ್ರಕ್ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ
ಮಗುವನ್ನು ಎತ್ತಿಕೊಂಡು ಊರ ಹೊರಗಿನ ಹೊಲಕ್ಕೆ ಹೋಗಿದ್ದ ವಾಸಂತಿ ಮರಳಿ ಮನೆಗೆ ಬಂದಿರಲಿಲ್ಲ. ಇದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಾಸಂತಿಯ ಶವ ಕಂಡುಬಂದಿದೆ. ವಾಸಂತಿ ಕಾಲಿನಡಿ ಪುಟ್ಟ ಮಗುವಿನ ಮೃತದೇಹ ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇವರಿಗೆ ಮೂರು ವರ್ಷದ ಮತ್ತೊಬ್ಬಳು ಪುತ್ರಿ ಇದ್ದು, ಆಟವಾಡಲು ಹೊರಗೆ ಹೋಗಿದ್ದರಿಂದ ಬದುಕುಳಿದಿದ್ದಾಳೆ. ಘಟನೆ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ:ಕಳ್ಳತನಕ್ಕೆ ಬಂದ ಮನೆಯಲ್ಲೇ ಖದೀಮ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
ಭುವನೇಶ್ವರ್: ಸುಟ್ಟು ಹೊಗಿದ್ದ ಹೋಗಿದ್ದ ಆಮೆ (Turtle) ಕರಿಯನ್ನು ಹಾಕಿದ್ದಕ್ಕೆ ಮದ್ಯವ್ಯಸನಿಯೊಬ್ಬ ಪತ್ನಿಯೊಂದಿಗೆ (Wife) ಜಗಳವಾಡಿ ಆಕೆಯನ್ನು ಕೊಂದು ಮನೆಯ ಹಿತ್ತಲಿನಲ್ಲಿ ಹೂತಿಟ್ಟ ಘಟನೆ ಪಶ್ಚಿಮ ಓಡಿಶಾದ (Odisha) ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ.
ರಂಜನ್ ಬಡಿಂಗ್ (36) ಎಂಬಾತ ಪತ್ನಿ ಸಾಬಿತ್ರಿ (35)ಯನ್ನು ಕೊಲೆ ಮಾಡಿದ್ದಾನೆ. ಈತ ಬದ್ಮಾಲ್ ಪಂಚಾಯತ್ನ ರೌತ್ಪಾರಾ ಗ್ರಾಮದ ತನ್ನ ಮನೆಗೆ ಆಮೆಯನ್ನು ತಂದಿದ್ದನು. ಇದಾದ ಬಳಿಕ ಸಾಬಿತ್ರಿ ಬಳಿ ಕರಿ ಮಾಡಿಕೊಡಲು ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಸಾಬಿತ್ರಿ ಕರಿ ಮಾಡುವಾಗ ಆಮೆಯ ಮಾಂಸ ಸ್ವಲ್ಪ ಸುಟ್ಟು ಹೋಗಿತ್ತು. ಈ ಹಿನ್ನೆಲೆಯಲ್ಲಿ ವಾಗ್ವಾದ ನಡೆದಿದೆ.
ಘಟನೆಗೆ ಸಂಬಂಧಿಸಿ ಆಕೆಯನ್ನು ರಂಜನ್ ತೀವ್ರವಾಗಿ ಥಳಿಸಿದ್ದಾನೆ. ಇದರಿಂದಾಗಿ ಆಕೆ ಪ್ರಜ್ಞಾ ಹೀನಸ್ಥಿತಿಗೆ ತಲುಪಿದ್ದಾಳೆ. ಇದಾದ ಬಳಿಕ ಆತ ಮನೆಯಿಂದ ಹೊರಬಂದಿದ್ದಾನೆ. ಸ್ವಲ್ಪ ಸಮಯದ ನಂತರ ಮನೆಗೆ ಬಂದಾಗ ಆಕೆ ಮೃತ ಪಟ್ಟಿರುವುದನ್ನು ರಂಜನ್ ಗಮನಿಸಿದ್ದಾನೆ. ಇದಾದ ಬಳಿಕ ಯಾರಿಗೂ ತಿಳಿಯದಂತೆ ರಂಜನ್ ಶವವನ್ನು ಹಿತ್ತಲಿನಲ್ಲಿ ಹೂತು ಹಾಕಿದ್ದಾನೆ. ನಂತರ ಸಾಬಿತ್ರಿ ಕೋಪದಿಂದ ಹೊರಟು ಹೋಗಿದ್ದಾಳೆ ಎಂದು ಪ್ರಚಾರ ಮಾಡಿದ್ದಾನೆ. ಇದನ್ನೂ ಓದಿ: ಕಳ್ಳತನಕ್ಕೆ ಬಂದ ಮನೆಯಲ್ಲೇ ಖದೀಮ ಆತ್ಮಹತ್ಯೆ
ಘಟನೆಗೆ ಸಂಬಂಧಿಸಿ ಸಾಬಿತ್ರಿ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಂಜನ್ನ್ನು ವಿಚಾರಣೆ ನಡೆಸಿದಾಗ ಆತ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದಾರೆ. ಈ ವೇಳೆ ರಂಜನ್ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಟ್ರಕ್ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ
Live Tv
[brid partner=56869869 player=32851 video=960834 autoplay=true]
ತಿರುವನಂತಪುರಂ: ಕೆಲಸ (Job) ಬಿಡಲು ನಿರಾಕರಿಸಿದ ಪತ್ನಿಯನ್ನು(Wife) ಪತಿಯೇ ಕ್ರೂರವಾಗಿ ಥಳಿಸಿದ ಘಟನೆ ಕೇರಳದ (Kerala) ತಿರುವನಂತಪುರಂನಲ್ಲಿ ನಡೆದಿದೆ.
ತಿರುವನಂತಪುರಂ ಮೂಲದ ದಿಲೀಪ್ (27) ಬಂಧಿತ (Arrest) ವ್ಯಕ್ತಿ. ಈತನ ಪತ್ನಿ ಸೂಪರ್ ಮಾರ್ಕೆಟ್ನಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ದಿಲೀಪ್ಗೆ ಆಕೆ ಅಲ್ಲಿ ಕೆಲಸ ಮಾಡುವುದು ಇಷ್ಟವಿರಲಿಲ್ಲ. ಇದರಿಂದಾಗಿ ಆತ ಪತ್ನಿಗೆ ಕೆಲಸವನ್ನು ಬಿಡಲು ತಿಳಿಸಿದ್ದಾನೆ. ಆದರೆ ಆಕೆ ಒಪ್ಪದಿದ್ದಾಗ ಕ್ರೂರವಾಗಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೇ ದಿಲೀಪ್ ಪತ್ನಿಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ವೀಡಿಯೋದಲ್ಲಿ ದಿಲೀಪ್ ಪತ್ನಿ ಸಾಲ ತೀರಿಸಲು ಕೆಲಸ ಮಾಡುತ್ತಿದ್ದೇನೆ ಎಂದು ಹೇಳುತ್ತಾಳೆ. ಆದರೆ ದಿಲೀಪ್ ಅದನ್ನು ಅರ್ಥ ಮಾಡಿಕೊಳ್ಳದೆ ಪತ್ನಿಯನ್ನು ಕ್ರೂರವಾಗಿ ಥಳಿಸಿದ್ದಾನೆ. ಇದರಿಂದಾಗಿ ಪತ್ನಿಯ ಮುಖವೆಲ್ಲವೂ ರಕ್ತ ಸಿಕ್ತವಾಗಿದೆ. ಇದನ್ನೂ ಓದಿ:ಇಎಂಐಯಲ್ಲಿ ಸ್ಮಾರ್ಟ್ ಫೋನ್ ಕೊಡಿಸಿದ ಪತಿ- ವಿಷಯ ತಿಳಿದ ಪತ್ನಿ ಆತ್ಮಹತ್ಯೆ