Tag: Wife

  • ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

    ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

    ಬೆಂಗಳೂರು: ಮದುವೆ ಅನ್ನೋದು ಒಂದು ಮಧುರ ಅನುಬಂಧ. ಅಲ್ಲದೆ ಇದು ಜೀವನದ ಒಂದು ಮುಖ್ಯವಾದ ಘಟ್ಟವೂ ಹೌದು. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ನೆಪದಲ್ಲಿ ಹಲವು ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತವೆ. ಅಂತೆಯೇ ಸಿಲಿಕಾನ್ ಸಿಟಿಯಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಪತಿಗೆ ತಾನು ಎರಡನೇ ಪತ್ನಿ ಎಂದು ಗೊತ್ತಾಗಿ ನವವಧು ನೇಣಿಗೆ ಕೊರಳೊಡ್ಡಿದ್ದಾಳೆ.

    ಈ ಘಟನೆ ಬೆಂಗಳೂರಿನ ಮಾತರಹಳ್ಳಿಯ ಕಾವೇರಿ ಲೇಔಟ್‍ (Kaveri Layout) ನಲ್ಲಿ ನಡೆದಿದೆ. ನವಧುವನ್ನು ಗೌತಮಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಒಳಗಡೆ ಗೌತಮಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಢನಿದ್ರೆಯಲ್ಲಿದ್ದ ಪತಿ ಪ್ರಸಾದ್ ರೆಡ್ಡಿ ಬೆಳಗ್ಗಿನ ಜಾವ ಕಣ್ಣು ಬಿಟ್ಟಾಗ ಗೌತಮಿ ಫ್ಯಾನಿನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

    ಘಟನೆ ಸಂಬಂಧ ಗೌತಮಿ ತಂದೆ ಬಾನು ನೀಡಿದ ದೂರಿನನ್ವಯ ಮಾರತಹಳ್ಳಿ ಪೊಲೀಸರು (Marathahalli Police Station) ಪತಿ ಪ್ರಸಾದ್ ಹಾಗೂ ಆತನ ಮೊದಲ ಪತ್ನಿ ಆಯಿಷಾ ಬಾನು ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌತಮಿ ಬಿಕಾಂ (Bcom) ಓದಿದ್ದು, ಆಂಧ್ರಪ್ರದೇಶ (Andhrapradesh) ದ ಪುಂಗನೂರಿನಲ್ಲಿ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದಳು. ಈ ಸಂದರ್ಭದಲ್ಲಿ ಈಕೆಗೆ ಪ್ರಸಾದ್ ಮೇಲೆ ಲವ್ (Love) ಆಗಿದೆ. ಪರಿಣಾಮ ಆಕೆ ಅವನ ಜೊತೆ ಓಡಿ ಹೋಗಿದ್ದಾಳೆ. ಬಳಿಕ 2022ರ ಮಾರ್ಚ್ 19ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ (Gouthami- Prasad Reddy)Marriage) ಕಾಲಿಟ್ಟಿದ್ದಾರೆ.

    ಇತ್ತ ಮಗಳು ಓಡಿ ಹೋದ ಸಂದರ್ಭದಲ್ಲಿ ಮಗಳು ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಿದ್ದರು. ಆದರೆ ಆಕೆ ಪೊಲೀಸರ ಮುಂದೆ ಹಾಜರಾಗಿ ತಾನು ಮದುವೆಯಾಗಿರುವುದಾಗಿ ಹೇಳಿಕೆ ನೀಡಿದ್ದಳು. ನಂತರ ದಂಪತಿಗೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ- ಹಿಂದೂ ಯುವಕನ ಜೊತೆಗಿದ್ದ ಅನ್ಯಧರ್ಮದ ಯುವತಿ ಮೇಲೆ ಹಲ್ಲೆ

    ಪ್ರಸಾದ್ ಹಾಗೂ ಬಾನುಗೆ ಈಗಾಗಲೇ ಓರ್ವ ಮಗಳಿರುವುದಾಗಿ ಗೌತಮಿಗೆ ಗೊತ್ತಾಗಿದೆ. ಮಂಗಳವಾರ ತಂದೆ ಬಾಬುಗೆ ಕರೆ ಮಾಡಿದ ಗೌತಮಿ, ಬಾನು ಮನೆಗೆ ಬಂದಿರುವುದಾಗಿ ತಿಳಿಸಿದ್ದಾಳೆ. ಅಲ್ಲದೆ ತಾನು ಬಾನು ಯಾಕೆ ಮನೆಗೆ ಬರುವುದು ಎಂದು ಪ್ರಶ್ನೆ ಮಾಡಿದೆ. ಈ ವೇಳೆ ಇಬ್ಬರೂ ಸೇರಿ ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕಿರುಕುಳ ನೀಡಿದ್ದಾರೆ ಎಂದು ಗೌತಮಿ ಹೇಳಿಕೊಂಡಿರುವುದಾಗಿ ಬಾಬು ಪೊಲೀಸರಿಗೆ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೀನು ಕಪ್ಪಗಿದ್ದೀಯಾ ಅಂತ ರೇಗಿಸಿದ್ದಕ್ಕೆ ಪತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪತ್ನಿ

    ನೀನು ಕಪ್ಪಗಿದ್ದೀಯಾ ಅಂತ ರೇಗಿಸಿದ್ದಕ್ಕೆ ಪತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪತ್ನಿ

    ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಪ್ರತಿನಿತ್ಯ ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ (Chhattisgarh) ದುರ್ಗ್ (Durg) ಜಿಲ್ಲೆಯಲ್ಲಿ ನಡೆದಿದೆ.

    ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಇದನ್ನೂ ಓದಿ : ಪ್ರಧಾನಿ ಭೇಟಿ ಬಚಾವೋ ಅಂದ್ರೆ, ಬಿಜೆಪಿಯವರು ರೇಪಿಸ್ಟ್‌ಗಳನ್ನು ಬಚಾವ್ ಮಾಡ್ತಿದ್ದಾರೆ: ರಾಹುಲ್ ಗಾಂಧಿ

    ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ ಆಗಾಗ ನಿಂದಿಸುತ್ತಿದ್ದ. ಇದೇ ವಿಚಾರವಾಗಿ ಹಲವಾರು ಬಾರಿ ನಮ್ಮಿಬ್ಬರ ನಡುವೆ ಜಗಳ ಕೂಡ ನಡೆದಿತ್ತು. ಭಾನುವಾರ ರಾತ್ರಿ ಮತ್ತೆ ಇದೇ ವಿಚಾರವಾಗಿ ಜಗಳ ನಡೆದಿತ್ತು. ಈ ವೇಳೆ ಕೋಪದಿಂದ ಮನೆಯಲ್ಲಿದ್ದ ಕೊಡಲಿಯಿಂದ ನನ್ನ ಪತಿಯ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ನನ್ನ ಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದರು ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ.

    ಮರುದಿನ ಬೆಳಗ್ಗೆ ತನ್ನ ಪತಿಯನ್ನು ಯಾರೋ ಕೊಂದಿದ್ದಾರೆ ಎಂದು ಗ್ರಾಮಸ್ಥರ ಮುಂದೆ ಹೈಡ್ರಾಮಾ ಮಾಡಿದ್ದಾಳೆ. ಆದರೆ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟಿದ್ದಾಳೆ. ಅಲ್ಲದೇ ಪತಿಯ ಗುಪ್ತಾಂಗವನ್ನು ಸಹ ಕತ್ತರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ : ಶಾಂತಿ ಭಂಗ, ಅಕ್ರಮಕೂಟ ಆರೋಪದಡಿ 7 ಮಂದಿ PFI ಮುಖಂಡರು ಅರೆಸ್ಟ್ – 14 ದಿನ ನ್ಯಾಯಾಂಗ ಬಂಧನ

    ಅನಂತ್ ಸೋನ್ವಾನಿ ತನ್ನ ಮೊದಲ ಪತ್ನಿ ಸಾವಿನ ನಂತರ ಸಂಗೀತಾ ಸೋನ್ವಾನಿಯನ್ನು ಮದುವೆಯಾಗಿದ್ದನು. ಇದೀಗ ಮಹಿಳೆಯ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು ಇತರ ಸಂಬಂಧಿತ ಕಾಯಿದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಈ ಘಟನೆ ಸಂಬಂಧ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ

    ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ

    ಅಮರಾವತಿ: ಪತ್ನಿ (Wife) ಹಾಗೂ ತನ್ನ ಬಣ್ಣ ಬಿಳಿಯದ್ದಾಗಿದ್ದರೂ ಮಗುವಿನ ಬಣ್ಣ ಮಾತ್ರ ಏಕೆ ಕಪ್ಪಾಗಿದೆ ಎಂದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

    ಒಡಿಶಾದ ಉಮ್ಮರ್‌ಕೋಟ್‌ನ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್ ಇಂತಹದ್ದೊಂದು ಕೃತ್ಯ ಎಸಗಿದ್ದಾನೆ. ಈತನ ಕೃತ್ಯಕ್ಕೆ ಬಲಿಯಾದವರು ಕರಗಾಂವ್ ಗ್ರಾಮದ ಲಿಪಿಕಾ ಮಂಡಲ್. ಮೊದಲು ಸಹಜ ಸಾವು ಎಂದೇ ಬಿಂಬಿತವಾಗಿದ್ದ ಈ ಸಾವಿನ ಪ್ರಕರಣ ನಂತರದಲ್ಲಿ ಕೊಲೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ

    ಏನಿದು ಮರ್ಡರ್ ಮಿಸ್ಟ್ರಿ?: ಕಳೆದ 7 ವರ್ಷಗಳ ಹಿಂದೆ ಮಾಣಿಕ್ ಘೋಷ್ ಹಾಗೂ ಲಿಪಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ (Marriage) ನಂತರ ಇಬ್ಬರೂ ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ವಲಸೆ ಬಂದಿದ್ದರು. ಎರಡೂವರೆ ವರ್ಷಗಳ ಹಿಂದೆ ಈ ದಂಪತಿಗೆ ಹೆಣ್ಣು ಮಗು (Daughter) ಹುಟ್ಟಿತ್ತು. ಆದರೆ ಇಬ್ಬರೂ ಬೆಳ್ಳಗಿದ್ದರೂ ಮಗು ಮಾತ್ರ ಏಕೆ ಕಪ್ಪಗೆ ಇದೆ ಎಂದು ಘೋಷ್ ಸದಾ ಪತ್ನಿಯ ಬಗ್ಗೆ ಸಂದೇಹಪಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಪತಿಯ ದೌರ್ಜನ್ಯದಿಂದ ಬೇಸತ್ತ ಲಿಪಿಕಾ ತನ್ನ ತವರು ಮನೆಗೆ ಬಂದಿದ್ದಳು. ನಂತರ ಕುಟುಂಬಸ್ಥರು ಇಬ್ಬರನ್ನೂ ಸಮಾಧಾನಪಡಿಸಿ ವಾಪಸ್ ಕಳುಹಿಸಿದ್ದರು. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ಮೋದಿಯವರಿಂದ್ಲೇ ಧಾರವಾಡ IIT ಕ್ಯಾಂಪಸ್‌ ಉದ್ಘಾಟನೆ – ಜೋಶಿ

    ಆದರೆ ಇದೇ ತಿಂಗಳ 18ರಂದು ರಾತ್ರಿ ಲಿಪಿಕಾಗೆ ಮೂರ್ಛೆ ಹೋಗಿರುವುದಾಗಿ ಹೇಳಿದ್ದ ಪತಿ, ಅವರನ್ನು ಆಸ್ಪತ್ರೆಗೆ (Hospital) ಕರೆದೊಯ್ದಿದ್ದ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಮೊದಲು ಇದು ಸಹಜ ಸಾವು ಎನ್ನಲಾಗಿತ್ತು. ನಂತರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡುಬಂದಿದ್ದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿತ್ತು. ಆದರೆ ಪತಿಯೇ ಈ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪುರಾವೆಗಳು ಇರಲಿಲ್ಲ. ನಂತರ ಸಾಕ್ಷಿ ಹೇಳಿದ್ದೆ ಪುಟ್ಟ ಕಂದಮ್ಮ. ಅಮ್ಮನ ಸಾವಿನ ಬಳಿಕ ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗು, ಅಜ್ಜ-ಅಜ್ಜಿಗೆ ಅಂದು ತಾನು ಕಂಡಿರುವ ದೃಶ್ಯ ವಿವರಿಸಿದೆ. ಅಮ್ಮನ ಗಂಟಲನ್ನು ಎರಡೂ ಕೈಗಳಿಂದ ಅಪ್ಪ ಹಿಡಿದುಕೊಂಡಿದ್ದು, ಅಮ್ಮ ಒದ್ದಾಡಿದ್ದು, ನಂತರ ಅಮ್ಮ ಏನೂ ಮಾತನಾಡದೇ ಇದ್ದುದನ್ನು ಮಗು ವಿವರಿಸಿದೆ.

    ಅಲ್ಲಿಯವರೆಗೂ ಮಗಳು ಪ್ರಜ್ಞೆ ತಪ್ಪಿ ಸತ್ತಿದ್ದಾಳೆ ಎಂದುಕೊಂಡಿದ್ದ ಅವರಿಗೆ ಅಳಿಯನೇ ಮಗಳನ್ನು ಕೊಂದಿದ್ದಾನೆ ಎಂಬುದು ಮೊಮ್ಮಗಳ ಮಾತಿನ ಮೂಲಕ ಅರ್ಥವಾಗಿ ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಪೊಲೀಸರ (Police) ಬಳಿ ಕೂಡ ಮಗು ಅಂದು ನಡೆದ ಘಟನೆ ವಿವರಿಸಿದೆ. ಪತಿಯನ್ನು ಪೊಲೀಸರು ಬಂಧಿಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತಿ ಇಷ್ಟಪಟ್ಟವಳೊಂದಿಗೆ ಮದುವೆ ಮಾಡಿಸಿ ಒಂದೇ ಮನೆಯಲ್ಲಿ ಸಂಸಾರ ನಡೆಸಲು ಮುಂದಾದ ಪತ್ನಿ

    ಪತಿ ಇಷ್ಟಪಟ್ಟವಳೊಂದಿಗೆ ಮದುವೆ ಮಾಡಿಸಿ ಒಂದೇ ಮನೆಯಲ್ಲಿ ಸಂಸಾರ ನಡೆಸಲು ಮುಂದಾದ ಪತ್ನಿ

    ಹೈದರಾಬಾದ್: ಮಹಿಳೆಯೊಬ್ಬಳು ತನ್ನ ಪತಿ ಇಷ್ಟಪಟ್ಟ ಹುಡುಗಿಯೊಂದಿಗೆ ಸಾಂಪ್ರದಾಯಿಕವಾಗಿ ಆಂಧ್ರಪ್ರದೇಶದ (Andhra Pradesh) ತಿರುಪತಿಯಲ್ಲಿ (Tirupati) ಮದುವೆ ಮಾಡಿದ್ದಾರೆ.

    ತಿರುಪತಿಯ (Tirupati) ದಕ್ಕಿಲಿಯ (Dakkili ) ಅಂಬೇಡ್ಕರ್ ನಗರದ (Ambedkar Nagar) ನಿವಾಸಿ ಕಲ್ಯಾಣ್ ಯೂಟ್ಯೂಬ್ ಮತ್ತು ಶೇರ್ ಚಾಟ್‍ನಲ್ಲಿ ರೀಲ್ಸ್ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು. ಈ ವೇಳೆ ಅವರಿಗೆ ಕಡಪಾ ಮೂಲದ ವಿಮಲಾ ಅವರು ಪರಿಚಯವಾಗಿ ಇಬ್ಬರ ನಡುವೆ ಸ್ನೇಹ ಬೆಳೆದು ನಂತರ ಪ್ರೀತಿ ಚಿಲುಮಿದೆ. ಕೆಲವು ವರ್ಷಗಳ ಹಿಂದೆ ಇಬ್ಬರೂ ವಿವಾಹ ಕೂಡ ಆದರು. ನಂತರ ಇಬ್ಬರೂ ಜೊತೆಗೂಡಿ ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾ (Social Media) ಫ್ಲಾಟ್‍ಫಾರ್ಮ್‍ಗಳಲ್ಲಿ ಶೇರ್ ಮಾಡಿಕೊಳ್ಳುವುದರ ಮೂಲಕ ಫೇಮಸ್ ಆಗಿದ್ದರು. ಜೊತೆಗೆ ಈ ಜೋಡಿಗೆ ಸಾಕಷ್ಟು ಫಾಲೋವರ್ಸ್ ಕೂಡ ಇದ್ದಾರೆ. ಇದನ್ನೂ ಓದಿ: IND Vs AUS: 3ನೇ T20 ಇಂದು – ಸರಣಿ ಗೆಲ್ಲುವ ತವಕದಲ್ಲಿ ಭಾರತ!

    ಹೀಗಿದ್ದರೂ ಗಂಡನ ನಡವಳಿಕೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಲಾರಂಭಿಸಿದ ವಿಮಲಾಗೆ, ಕಲ್ಯಾಣ್ ವಿಶಾಖಪಟ್ಟಣಂನ (Visakhapatnam) ಯುವತಿಯನ್ನು ಇಷ್ಟಪಟ್ಟಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಇಬ್ಬರೂ ಬೇರೆಯಾಗಿದ್ದರು. ಅಂದಿನಿಂದ ಇಬ್ಬರ ನಡುವೆ ಯಾವುದೇ ಸಂಪರ್ಕ ಇರಲಿಲ್ಲ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಪಹಣಿ ಬದಲಾವಣೆಗೆ 50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಲೆಕ್ಕಿಗ!

    ಮತ್ತೊಂದೆಡೆ ಕಲ್ಯಾಣ್ ಮದುವೆಯಾಗಿರುವ ಸುದ್ದಿಯನ್ನು ಕೇಳಿದ ನಿತ್ಯಾ, ನಂತರ ಕಲ್ಯಾಣ್‍ನನ್ನು ಮದುವೆಯಾಗಲು (Marriage) ಅನುಮತಿ ನೀಡುವಂತೆ ವಿಮಲಾರನ್ನು ಬೇಡಿಕೊಂಡಿದ್ದಾಳೆ. ಅಲ್ಲದೇ ಕಲ್ಯಾಣ್ ಮತ್ತು ನನ್ನ ಮದುವೆಯಾದ ಬಳಿಕ ಎಲ್ಲರೂ ಒಟ್ಟಿಗೆ ಒಂದೇ ಮನೆಯಲ್ಲಿ ವಾಸಿಸೋಣ ಎಂದು ವಿಮಾಲಾರಿಗೆ ಕೇಳಿಕೊಂಡಿದ್ದಾಳೆ. ಇದನ್ನೂ ಓದಿ: ಪಾಲಿಕೆಯ ಹೊಸ ಪಾರ್ಕಿಂಗ್ ರೂಲ್ಸ್ – ಲೂಟಿ ಯೋಜನೆಯೆಂದು ಜನಾಕ್ರೋಶ

    ಇದರಿಂದ ಒಂದು ಕ್ಷಣ ತಬ್ಬಿಬ್ಬಾದ ವಿಮಲಾ ಆಲೋಚಿಸಲು ಕೊಂಚ ಸಮಯ ತೆಗೆದುಕೊಂಡು ನಂತರ ಮದುವೆಗೆ ಗ್ರೀನ್ ಸಿಗ್ನಿಲ್ ನೀಡಿದ್ದಾರೆ. ಅಲ್ಲದೇ ತಾವೇ ಮುಂದೆ ನಿಂತು ಪತಿ ಕಲ್ಯಾಣ್ ಹಾಗೂ ನಿತ್ಯ ಮದುವೆಯನ್ನು ಸಾಂಪ್ರದಾಯಿಕವಾಗಿ ಮಾಡಿದ್ದಾರೆ. ಬಳಿಕ ಮೂವರು ಒಟ್ಟಿಗೆ ನಿಂತುಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

    ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

    ಬೆಳಗಾವಿ: ಪ್ರಿಯಕರನ ಜೊತೆ ಸೇರಿಕೊಂಡ ತನ್ನ ಗಂಡನನ್ನು (Husband) ಪತ್ನಿಯೇ(Wife) ಕೊಲೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಪಾಂಡಪ್ಪ ಜಟಕನ್ನವರ(35) ಮೃತ ವ್ಯಕ್ತಿ. ಈತನ ಪತ್ನಿ ಲಕ್ಷ್ಮಿ ಜಟಕನ್ನವರ ಹೊಸೂರ ಗ್ರಾಮದ ರಮೇಶ್ ಬಡಿಗೇರ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದೇ ಕಾರಣಕ್ಕೆ ಆಗಾಗ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ ರಾತ್ರಿ ಪಾಂಡಪ್ಪ ಹಾಗೂ ಲಕ್ಷ್ಮೀ ನಡುವೆ ಇದೇ ವಿಷಯಕ್ಕೆ ಜಗಳವಾಡಿದ್ದು, ಈ ವಿಷಯ ರಮೇಶ್(36)ಗೆ ಲಕ್ಷ್ಮಿ ತಿಳಿಸಿ, ಬಳಿಕ ಗಂಡನನ್ನು ಕೊಲೆ ಮಾಡಲು ತಂತ್ರ ರೂಪಿಸಿದ್ದಾಳೆ.

    ಈ ಪ್ರಕಾರವಾಗಿಯೇ ರಮೇಶ್ ಬಡಿಗೇರ ಲಕ್ಷ್ಮಿ ಮನೆಗೆ ಬಂದಿದ್ದ. ಈ ವೇಳೆ ರಮೇಶ್ ಹಾಗೂ ಪಾಂಡಪ್ಪ ಮಧ್ಯೆ ನಡೆದಿದ್ದ ಜಗಳ ವಿಕೋಪಕ್ಕೆ ತಿರುಗಿತ್ತು. ಆಗ ಪಾಂಡಪ್ಪನ ತಲೆಗೆ ಲಕ್ಷ್ಮಿ ಕೃಷಿ ಉಪಕರಣದಿಂದ ಹೊಡೆದಿದ್ದಾಳೆ. ಇದರಿಂದಾಗಿ ಪಾಂಡಪ್ಪನ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಾದ ಬಳಿಕ ಲಕ್ಷ್ಮಿ ತನ್ನ ಪ್ರಿಯಕರನ ಜೊತೆ ಸೇರಿ ಪಾಂಡಪ್ಪ ಜಕ್ಕನವರ ಶವವನ್ನು ಬೈಕ್ ಮೇಲೆ ಹೊತ್ತೊಯ್ದು, ರಾಮದುರ್ಗ ತಾಲೂಕಿನ ಹೊಸೂರು ಹೊರವಲಯದ ಕಿರುಸೇತುವೆ ಬಳಿ ಎಸೆಯಲಾಗಿತ್ತು. ಇದನ್ನೂ ಓದಿ: ಹನೂರಿನಲ್ಲಿ 20 ಅಡಿ ಆಳದ ಹಳ್ಳಕ್ಕೆ ಬಿದ್ದ ಬೆಂಗಳೂರಿನ ಕಾರು

    POLICE JEEP

    ಈ ಹಿನ್ನೆಲೆಯಲ್ಲಿ ಪಾಂಡಪ್ಪ ಅಪಘಾತದಿಂದ ಮೃತ ಪಟ್ಟಿದ್ದಾನೆ ಎಂದು ಬಿಂಬಿಸಬೇಕು ಎಂಬ ಕಾರಣಕ್ಕೆ ಲಕ್ಷ್ಮಿ ತನಗೆ ಏನೂ ಗೊತ್ತೆ ಇಲ್ಲದ ರೀತಿಯಲ್ಲಿ ಮನೆಗೆ ಹೋಗಿ ಮರುದಿನ ತನ್ನ ಗಂಡ ಮನೆಗೆ ಮರಳಿ ಬಂದಿಲ್ಲ ಎಂದು ನಾಟಕವಾಡಿದ್ದಾಳೆ. ಇದನ್ನೂ ಓದಿ: ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ

    ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದ ಕಟಕೋಳ ಪೊಲೀಸರು 24 ಗಂಟೆಯೊಳಗಾಗಿಯೇ ಪ್ರಕರಣವನ್ನು ಭೇದಿಸಿದ್ದಾರೆ. ಲಕ್ಷ್ಮಿ ಮೇಲೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಘಟನೆ ಕುರಿತು ಲಕ್ಷ್ಮಿ ಹಾಗೂ ಆಕೆಯ ಪ್ರಿಯಕರ ರಮೇಶ್ ಬಡಿಗೇರನನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಯನ್ನು ಕೊಲೆ ಮಾಡಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆ

    ಪತ್ನಿಯನ್ನು ಕೊಲೆ ಮಾಡಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆ

    ಹಾಸನ: ಪತ್ನಿಯನ್ನು(Wife) ಕೊಲೆ ಮಾಡಿದ್ದ ಪತಿ(Husband) ಹತ್ತು ದಿನಗಳ ಬಳಿಕ ಶವವಾಗಿ ಪತ್ತೆಯಾದ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

    ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ಎಸ್ಕೇಪ್ ಆಗಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾನೆ. ಸೆ.6ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಕೇಶವಮೂರ್ತಿ ಮೂರ್ತಿ ಎಂಬುವವರ ತೋಟದ ಕೆಲಸಕ್ಕೆ ತೆರಳುತ್ತಿದ್ದ ಪತ್ನಿ ಇಂದ್ರಮ್ಮನನ್ನು ಪತಿ ಚಂದ್ರಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ. ಕೊಲೆ ಮಾಡಿದ ಬಳಿಕ ಚಂದ್ರಯ್ಯ ಕಾಣಿಯಾಗಿದ್ದನು.

    ಪತ್ನಿ ಹತ್ಯೆ ಮಾಡಿದ ದಿನದಂದೇ ಕೊಲೆಯಾದ ಜಾಗದಿಂದ ಒಂದು ಕಿ.ಮೀ ದೂರದಲ್ಲಿರುವ ಚಕ್ರವರ್ತಿ ಎಂಬುವವರ ತೋಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಚಂದ್ರಯ್ಯ ಆತ್ಮಹತ್ಯೆ ಶರಣಾಗಿದ್ದಾನೆ. ಇತ್ತ ಕೊಲೆ ಆರೋಪಿ ಚಂದ್ರಯ್ಯನಿಗಾಗಿ ಅರೇಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ತೋಟದ ಕೆಲಸಕ್ಕೆ ಕಾರ್ಮಿಕರು ತೆರಳಿದಾಗ ದುರ್ವಾಸನೆ ಬಂದಿದ್ದು, ಸ್ಥಳಕ್ಕೆ ಹೋಗಿ ನೋಡಿದಾಗ ಮರದಲ್ಲಿ ನೇತಾಡುತ್ತಿದ್ದ ಸಂಪೂರ್ಣ ಕೊಳೆತು ಹೋಗಿರುವ ಚಂದ್ರಯ್ಯನ ಶವ ಪತ್ತೆಯಾಗಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ- 25ಕ್ಕೂ ಹೆಚ್ಚು ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಮುಸ್ಲಿಂ ಮುಖಂಡ

    ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಶಾಲೆಯ ಲಿಫ್ಟ್‌ನಲ್ಲಿ ಸಿಲುಕಿ ಶಿಕ್ಷಕಿ ಸಾವು

    Live Tv
    [brid partner=56869869 player=32851 video=960834 autoplay=true]

  • ಮನೆಯಲ್ಲಿ ಹೆಂಡತಿ ಮಕ್ಕಳು ಮಲಗಿದ್ದಾಗಲೇ ವ್ಯಕ್ತಿಯ ಬರ್ಬರ ಹತ್ಯೆ

    ಮನೆಯಲ್ಲಿ ಹೆಂಡತಿ ಮಕ್ಕಳು ಮಲಗಿದ್ದಾಗಲೇ ವ್ಯಕ್ತಿಯ ಬರ್ಬರ ಹತ್ಯೆ

    ಬೆಳಗಾವಿ: ಮನೆಯಲ್ಲಿ ಹೆಂಡತಿ (Wife) ಮಕ್ಕಳು (Children) ಮಲಗಿದ್ದಾಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು(Person) ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರದ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    CRIME 2

    ನಗರದ ಫಿಶ್ ಮಾರ್ಕೆಟ್ (Fish Market) ಬಳಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆಯಾದವರು. ಕೊಲೆಯಾದ ವ್ಯಕ್ತಿ ದುಬೈನಲ್ಲಿ (Dubai) ವಾಸವಾಗಿದ್ದರು. ಕೋವಿಡ್ (Covid) ಕಾರಣಕ್ಕೆ ಕಳೆದ ಎರಡು ವರ್ಷಗಳ ಹಿಂದಷ್ಟೇ ಬೆಳಗಾವಿಗೆ (Belgavi) ಬಂದು ನೆಲೆಸಿದರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್

    ಶುಕ್ರವಾರ ತಡರಾತ್ರಿ ಮನೆಗೆ ನುಗ್ಗಿದ ಹಂತಕರು ಹೆಂಡತಿ, ಮಕ್ಕಳು ಪಕ್ಕದ ರೂಮ್‍ನಲ್ಲಿ ಮಲಗಿದ್ದಾಗಲೇ ಯಾರಿಗೂ ಗೊತ್ತಾಗದಂತೆ ಬಂದಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಸುಧೀರ್ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕ್ಯಾಂಪ್ ಪೊಲೀಸರು, ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಈಶ್ವರ ಖಂಡ್ರೆ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    Live Tv
    [brid partner=56869869 player=32851 video=960834 autoplay=true]

  • ಕೋಟ್ಯಧಿಪತಿ ಗಂಡನ ಮನೆ ಮುಂದೆ ಪತ್ನಿ ಧರಣಿ

    ಕೋಟ್ಯಧಿಪತಿ ಗಂಡನ ಮನೆ ಮುಂದೆ ಪತ್ನಿ ಧರಣಿ

    ತುಮಕೂರು: ಪ್ರೀತಿಸಿ ಮದುವೆಯಾದ(Love Marriage) ಪತ್ನಿಯೊಬ್ಬಳು ತನ್ನ ಕೋಟ್ಯಧಿಪತಿ ಪತಿಯ(Husband) ಮನೆ ಮುಂದೆ ಧರಣಿ(Protest) ಕುಳಿತ ಘಟನೆ ತುಮಕೂರು(Tumkuru) ನಗರದ ವಿದ್ಯಾ ನಗರದಲ್ಲಿ(Vidya Nagar) ನಡೆದಿದೆ.

    ವಿದ್ಯಾ ನಗರದ ನಾಲ್ಕನೇ ಕ್ರಾಸಿನಲ್ಲಿರುವ ಪತಿ ಜಿತೇಂದ್ರ ಕುಮಾರ್(Jitendra Kumar) ಅವರ ಬೃಹತ್ ಬಂಗಲೆ ಮುಂದೆ ಪತ್ನಿ ಮಂಜುಳಾ(Manjula) ಧರಣಿ ಕುಳಿತಿದ್ದಾರೆ. ಕಳೆದ ನಾಲ್ಕು ವರ್ಷದ ಹಿಂದೆ ರೈಸ್ ಮಿಲ್ (Rice Mill) ಮಾಲೀಕ ಜಿತೇಂದ್ರ ಕುಮಾರ್ ಹಾಗೂ ಮಂಜುಳಾ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಅಂತರ್ ಜಾತಿ ವಿವಾಹ(Inter Caste Marriage) ಆಗಿದ್ದರು. ಇದನ್ನೂ ಓದಿ: ಮೊಬೈಲ್ ಕದಿಯಲು ಹೋಗಿ ಕಳ್ಳನ ಫಜೀತಿ – 10 ಕಿ.ಮೀ ಕಿಟಕಿಯಲ್ಲಿ ಜೋತಾಡ್ಕೊಂಡು ಬಂದ

    ಕುಡಿತಕ್ಕೆ ದಾಸನಾಗಿದ್ದ ಜಿತೇಂದ್ರ ಕುಮಾರ್ ಲಿವರ್ ಜಾಂಡಿಸ್‍ನಿಂದ (Liver Jaundice) ಜುಲೈ 2 ರಂದು ನಿಧನರಾಗಿದ್ದಾರೆ. ಅತ್ತ ಜಿತೇಂದ್ರ ಕುಮಾರ್ ನಿಧನವಾಗುತ್ತಿದ್ದಂತೆ ಇತ್ತ ಜಿತೇಂದ್ರ ಕುಮಾರ್ ಮನೆಯವರು ಮಂಜುಳಾರನ್ನು ತಮ್ಮ ಮನೆಯೊಳಗೆ ಸೇರಿಸಿಕೊಳ್ಳುತ್ತಿಲ್ಲ. ಕಳೆದ ಎರಡೂವರೆ ತಿಂಗಳಿನಿಂದ ಮಂಜುಳಾ ಪತಿಯ ಮನೆಗೆ ಬಂದು ಹೋಗುತ್ತಿದ್ದಾರೆ. ಮನೆಯೊಳಗೆ ಪ್ರವೇಶ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಜಿತೇಂದ್ರ ಕುಟುಂಬದವರು ಪ್ರವೇಶ ನಿಷೇಧಿಸಿದ್ದಾರೆ. ಇದರಿಂದ ಘಾಸಿಗೊಂಡ ಮಂಜುಳಾ ತನ್ನ ಎರಡೂವರೆ ವರ್ಷದ ಮಗಳೊಂದಿಗೆ ಪತಿ ಮನೆ ಮುಂದೆ ಧರಣಿ ಕುಳಿತಿದ್ದಾರೆ. ಇದನ್ನೂ ಓದಿ: 8 ವರ್ಷದ ಬಳಿಕ ಗೊತ್ತಾಯ್ತು ತನ್ನ ಪತಿ ಅವನಲ್ಲ ಅವಳು – ಗಂಡನ ಲಿಂಗ ಬದಲಾವಣೆ ತಿಳಿದು ಮಹಿಳೆ ಶಾಕ್

    Live Tv
    [brid partner=56869869 player=32851 video=960834 autoplay=true]

  • ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ಲಕ್ನೋ: ಪ್ರಿಯಕರನೊಂದಿಗೆ (Lover) ಓಡಾಡುತ್ತಿದ್ದ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪತಿಯೊಬ್ಬ (Husband) ನಡುರಸ್ತೆಯಲ್ಲಿ ಥಳಿಸಿರುವ ಘಟನೆ ಆಗ್ರಾದಲ್ಲಿ (Agra) ನಡೆದಿದೆ.

    ದಂಪತಿಗೆ ಮದುವೆಯಾಗಿ 10 ವರ್ಷಗಳಾಗಿದ್ದು, ಓರ್ವ ಮಗಳಿದ್ದಾಳೆ(Daughter). ಉದ್ಯಮಿಯೊಂದಿಗೆ(Businessman) ತನ್ನ ಹೆಂಡತಿ (Wife) ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ವಿಚಾರ ವ್ಯಕ್ತಿಗೆ ಮೊದಲೇ ತಿಳಿದಿತ್ತು. ಹೀಗಾಗಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಹೀಗಿದ್ದರೂ ಭಾನುವಾರ ಪತ್ನಿ ಯಾರಿಗೂ ತಿಳಿಸದೇ ಮನೆಯಿಂದ ಹೊರಗೆ ಹೋಗಿದ್ದಾಳೆ. ಅವಳನ್ನು ಹೇಗಾದರೂ ಕಂಡು ಹಿಡಿಯಲೇ ಬೇಕೆಂದು ನಿರ್ಧರಿಸಿ ವ್ಯಕ್ತಿ ತನ್ನ ಪುತ್ರಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹುಡುಕಾಟ ನಡೆಸಲು ಆರಂಭಿಸಿದ್ದಾನೆ.

    ಈ ವೇಳೆ ಕೈಲಾಸ ಮಂದಿರ ರಸ್ತೆಯ (Kailash Mandir Road) ಬಳಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಸ್ಕೂಟಿಯಲ್ಲಿ ತನ್ನ ಪತ್ನಿ ಹೋಗುತ್ತಿರುವುದನ್ನು ನೋಡಿ, ಗಾಡಿಯನ್ನು ಫಾಲೋವ್ ಮಾಡಿಕೊಂಡು ಹೋಗಿದ್ದಾನೆ. ಇನ್ನೂ ಈ ವೀಡಿಯೋವನ್ನು ವ್ಯಕ್ತಿ ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದುಕೊಂಡಿದ್ದಾನೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮೇಲ್ಜಾತಿಯ ಜನರಿಗೆ ಸೇರಿದ ಮಡಿಕೆಯಿಂದ ನೀರು ಕುಡಿದ ದಲಿತನ ಮೇಲೆ ಹಲ್ಲೆ

    ಈ ಪ್ರಕರಣದ ಮಧ್ಯೆ ಪೊಲೀಸರು ಎಂಟ್ರಿ ನೀಡುವುದಕ್ಕೂ ಮುನ್ನವೇ ವ್ಯಕ್ತಿ ಪತ್ನಿಯ ಪ್ರಿಯಕರನಿಗೆ(Lover) ಅಡ್ಡಹಾಕಿ ಕಪಾಳಮೋಕ್ಷ(Slapped) ಮಾಡಿದ್ದಾನೆ. ಇದೀಗ ಸಾರ್ವಜನಿಕ ಶಾಂತಿ (Public Peace) ಕದಡಿದ ಕಾರಣಕ್ಕಾಗಿ ಇಬ್ಬರಿಗೂ ದಂಡ ವಿಧಿಸಲಾಗಿದೆ. ಆದರೆ ಮಹಿಳೆ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    Live Tv
    [brid partner=56869869 player=32851 video=960834 autoplay=true]

  • ಮೂಲಂಗಿ ಮಾರಿ ಜೀವನ ನಡೆಸುತಿದ್ದ ಪತ್ನಿಯನ್ನ ಕುಡಿದ ಅಮಲಿನಲ್ಲಿ ಕೊಲೆ ಮಾಡಿದ ಪತಿ

    ಮೂಲಂಗಿ ಮಾರಿ ಜೀವನ ನಡೆಸುತಿದ್ದ ಪತ್ನಿಯನ್ನ ಕುಡಿದ ಅಮಲಿನಲ್ಲಿ ಕೊಲೆ ಮಾಡಿದ ಪತಿ

    ಧಾರವಾಡ: ಮೂಲಂಗಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಪತ್ನಿಯನ್ನು ಪತಿಯೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಧಾರವಾಡದಲ್ಲಿ(Dharwad) ನಡೆದಿದೆ.

    ನಗರದ ಕೋಳಿಕೇರಿ ತೋಟದಲ್ಲಿ ಈ ಕೊಲೆ ನಡೆದಿದ್ದು, ಮಂಜವ್ವ ಪಠಾದ್ (42) ಅವಳನ್ನು ಆಕೆಯ ಪತಿ ಗದಿಗೆಪ್ಪ ಕೊಲೆ ಮಾಡಿದ್ದಾನೆ. ಗದಿಗೆಪ್ಪ ಕುಡಿತದ ಚಟಕ್ಕೆ ಬಿದ್ದಿದ್ದ. ಈ ಹಿನ್ನೆಲೆ ಪತಿ(Husband) ಹಾಗೂ ಪತ್ನಿಯ(Wife) ನಡುವೆ ಆಗಾಗ ಜಗಳ ಆಗುತಿತ್ತು. ಕಳೆದ ರಾತ್ರಿ ಕೂಡಾ ಪತಿ, ಪತ್ನಿ ನಡುವೆ ಜಗಳ ಆಗಿತ್ತು. ಆದರೆ ಇಂದು ಮಂಜವ್ವ ಹೊಲದಲ್ಲಿ ಮೂಲಂಗಿ ತೊಳೆಯುವಾಗ ಗದಿಗೆಪ್ಪ ಕಲ್ಲಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಎಷ್ಟೇ ದೊಡ್ಡ ಹುಲಿ ಆದ್ರೂ, ಕಾನೂನಿಗೆ ಒಂದೇ – ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

    crime

    ಮಂಜವ್ವ ಪತಿ ಗದಿಗೆಪ್ಪ ಈ ಹಿಂದೆ ಕೂಡಾ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಹೊಲದ ವಿಚಾರವಾಗಿ ಒಂದು ಕೊಲೆ ಮಾಡಿ ಜೈಲು ಸೇರಿದ್ದ. ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೇ ಈತ ಸೆರೆವಾಸ ಮುಗಿಸಿ ಜೈಲಿನಿಂದ ಹೊರ ಬಂದಿದ್ದ. ಅಲ್ಲದೇ ಮಂಜವ್ವಳ ಸಹೋದರಿ ಕೂಡಾ ಕೆಲ ವರ್ಷಗಳ ಹಿಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ಸದ್ಯ ಶಹರ ಪೊಲೀಸ್ ಠಾಣೆ ಪೊಲೀಸರು ಮಂಜವ್ವಳ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ:  ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ

    Live Tv
    [brid partner=56869869 player=32851 video=960834 autoplay=true]