Tag: Wife

  • ಗರ್ಭಿಣಿ ಪತ್ನಿ ಹತ್ಯೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

    ಗರ್ಭಿಣಿ ಪತ್ನಿ ಹತ್ಯೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

    ಚಾಮರಾಜನಗರ: ಗರ್ಭಿಣಿ ಪತ್ನಿಗೆ(Pregnant Wife) ಜ್ಯೂಸ್‍ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ(Chamarajanagara) ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ(Life imprisonment) ವಿಧಿಸಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ರಾಚಪ್ಪಾಜಿನಗರದ ಮುತ್ತುರಾಜ್ ಶಿಕ್ಷೆಗೊಳಗಾಗಿರುವ ಅಪರಾಧಿ. ಕಳೆದ 2013ರಲ್ಲಿ ಗರ್ಭಿಣಿ ಪತ್ನಿ ಕೊಂದ ಆರೋಪ ಸಾಬೀತಾದ ಹಿನ್ನೆಲೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ(B.S.Bharathi) ಅವರು ಮುತ್ತುರಾಜ್‍ಗೆ(Mutturaj) ಜೀವಾವಧಿ ಶಿಕ್ಷೆ ಮತ್ತು 2.10 ಲಕ್ಷ ರೂ. ದಂಡ ವಿಧಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಮುತ್ತುರಾಜ್ ಟ್ರಾಕ್ಟರ್ ಚಾಲಕನಾಗಿದ್ದು, ಅದೇ ಗ್ರಾಮದ ಜ್ಯೋತಿ(Jyothi) ಎಂಬ ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆ ವಿವಾಹವಾಗಿದ್ದ. ಬಳಿಕ, ತಗಾದೆ ತೆಗೆದು ಪತ್ನಿ ಜೊತೆ ನಿತ್ಯ ರಂಪಾಟ ಮಾಡುತ್ತಿದ್ದ. ಈ ಮಧ್ಯೆ ಜ್ಯೋತಿ 3 ತಿಂಗಳ ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿರುವುದರಿಂದ ತವರು ಮನೆಗೆ ಹೋಗಿ ಬಾರೋಣಾ ಎಂದು ಪುಸಲಾಯಿಸಿ ಬೈಕಿನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಜ್ಯೂಸ್(Juice) ನೊಟ್ಟಿಗೆ ಮದ್ಯ(Liquor) ಸೇರಿಸಿ ಕುಡಿಸಿ ಬಳಿಕ ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದನು.

    ಗುರುತು ಪತ್ತೆಯಾಗದಿರಲೆಂದು ಎಡಕೆನ್ನೆಯನ್ನೇ ಸುಟ್ಟು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುತ್ತುರಾಜ್‍ನನ್ನು ಬಂಧಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನಿರಂತರ ವಿಚಾರಣೆ ನಡೆದು ಮುತ್ತುರಾಜ್‍ನ(Mutturajan) ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು(Judge) ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಇಬ್ಬರು ಉಗ್ರರು ಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಮಂಗಳಮುಖಿಯನ್ನು ಪ್ರೀತಿಸಿ, ಪತ್ನಿಯ ಸಮ್ಮುಖದಲ್ಲಿಯೇ ಮದ್ವೆಯಾದ ವಿವಾಹಿತ

    ಮಂಗಳಮುಖಿಯನ್ನು ಪ್ರೀತಿಸಿ, ಪತ್ನಿಯ ಸಮ್ಮುಖದಲ್ಲಿಯೇ ಮದ್ವೆಯಾದ ವಿವಾಹಿತ

    ಭುವನೇಶ್ವರ್: ಓಡಿಶಾದ(Odisha) ಕಲಹಂಡಿ ಜಿಲ್ಲೆಯಲ್ಲಿ ವಿವಾಹಿತನೊಬ್ಬ ತನ್ನ ಪತ್ನಿಯ(Wife) ಸಮ್ಮುಖದಲ್ಲಿ ಮಂಗಳಮುಖಿಯನ್ನು ವಿವಾಹವಾಗಿದ್ದಾನೆ.

    ಕಲಹಂಡಿಯ ದೇಪುರ್ ಎಂಬ ಪುಟ್ಟ ಗ್ರಾಮದ ಸಂಗೀತಾ ತೃತೀಯ ಲಿಂಗಿಯಾಗಿದ್ದು(Trans Woman), ಈಕೆಯನ್ನು ಫಕೀರ್ ನಿಯಾಲ್ ಎಂಬಾತ ಸಾಂಪ್ರದಾಯಿಕವಾಗಿ ಮದುವೆ ಆಗಿದ್ದಾನೆ.

    5 ವರ್ಷಗಳ ಹಿಂದೆ ಫಕೀರ್ ಮಹಿಳೆಯೊಬ್ಬಳನ್ನು ಮದುವೆಯಾಗಿದ್ದ. ದಂಪತಿಗೆ 2 ವರ್ಷದ ಮಗುವಿದೆ. ಆದರೆ ಕಳೆದ ಒಂದು ವರ್ಷದಿಂದ ಹಿಂದೆ ತೃತೀಯ ಲಿಂಗಿ ಸಮೂದಾಯಕ್ಕೆ ಸೇರಿದ್ದ ಸಂಗೀತಾಳೊಂದಿಗೆ ಫಕೀರ್ ದೈಹಿಕ ಸಂಬಂಧವನ್ನು ಬೆಳೆಸಿಕೊಂಡಿದ್ದ. ಸ್ವಲ್ಪ ದಿನಗಳ ಬಳಿಕ ಈ ಸಂಬಂಧವು ಫಕೀರನ ಪತ್ನಿಗೆ ತಿಳಿದಿದೆ. ಇದನ್ನೂ ಓದಿ: ಓದಲು ಇಷ್ಟವಿಲ್ಲವೆಂದು ಮೂವರು ನಾಪತ್ತೆ- ವಾರವಾದರೂ ಪತ್ತೆಯಾಗದ ಹೆಣ್ಣು ಮಕ್ಕಳನ್ನು ನೆನೆದು ಪೋಷಕರು ಕಣ್ಣೀರು

    ಫಕೀರ್‍ನ ಪತ್ನಿಯು ಇದನ್ನು ವಿರೋಧಿಸದೇ ಅಥವಾ ಯಾವುದೇ ಅಸಮಾಧಾನವನ್ನು ವ್ಯಕ್ತಪಡಿಸದೇ ತನ್ನ ಪತಿಯೊಂದಿಗೆ ಚರ್ಚೆ ನಡೆಸಿದ್ದಾಳೆ. ನಂತರ ಅವರಿಬ್ಬರು ಮದುವೆ ಆಗಲು ಒಪ್ಪಿಗೆಯನ್ನು ಸೂಚಿಸಿದ್ದಾಳೆ.

    ಮಂಗಳಮುಖಿಯರ ಸಮುದಾಯವು ಅನುಸರಿಸುವ ಪದ್ಧತಿಗಳ ಪ್ರಕಾರವೇ ಶಾಸ್ತ್ರೋಕ್ತವಾಗಿ ಫಕೀರ್ ಮತ್ತು ಸಂಗೀತಾ ಅವರ ವಿವಾಹವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಫಕೀರನ ಪತ್ನಿಯೇ ಉಪಸ್ಥಿತಳಿದ್ದು, ಕಾರ್ಯಕ್ರಮಕ್ಕೆ ಸಕಲ ವ್ಯವಸ್ಥೆ ಕಲ್ಪಿಸಿದಳು. ಇದನ್ನೂ ಓದಿ: ಕೇಂದ್ರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿ ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ವಾಪಸ್ ಮನೆಗೆ ಬರ್ತಿಯೋ, ಇಲ್ಲವೋ ಅಂತ ತವರು ಸೇರಿದ ಪತ್ನಿ ಮೇಲೆ ಪತಿ ಫೈರಿಂಗ್!

    ವಾಪಸ್ ಮನೆಗೆ ಬರ್ತಿಯೋ, ಇಲ್ಲವೋ ಅಂತ ತವರು ಸೇರಿದ ಪತ್ನಿ ಮೇಲೆ ಪತಿ ಫೈರಿಂಗ್!

    ಚಿಕ್ಕೋಡಿ(ಬೆಳಗಾವಿ): ಗಂಡನ ಅನೈತಿಕ ಸಂಬಂಧ ಹಿನ್ನೆಲೆ ತವರು ಸೇರಿದ ಹೆಂಡತಿಗೆ ವಾಪಸ್ ಮನೆಗೆ ಬರ್ತಿಯೋ ಇಲ್ವೋ ಅಂತ ಕೇಳಿ ಗಂಡ (Husband) ರಿವಾಲ್ವರ್‍ನಿಂದ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ (Athani) ಪಟ್ಟಣದಲ್ಲಿ ನಡೆದಿದೆ.

    ತವರು ಮನೆಗೆ ಬಂದು ಹೆಂಡತಿಯ ಮೇಲೆ ಗುಂಡು ಹಾರಿಸಿ ಕೊಲ್ಲುವುದಾಗಿ ಧಮ್ಕಿ ಹಾಕಿ ರಿವಾಲ್ವರ್‍ನಿಂದ ಫೈರಿಂಗ್ ಮಾಡಿದ ಶಿವಾನಂದ ಕಾಗಲೇ(40) ಈಗ ಅರೆಸ್ಟ್ (Arrest) ಆಗಿದ್ದಾನೆ. ಶಿವಾನಂದನ ಫೈರಿಂಗ್ ತಪ್ಪಿಸಿಕೊಂಡು ಪತ್ನಿ (Wife) ಪ್ರೀತಿ ಪ್ರಾಣ ಉಳಿಸಿಕೊಂಡಿದ್ದಾಳೆ.

    ಶಿವಾನಂದ್ ಹಾಗೂ ಪ್ರೀತಿ ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇದೀಗ ಶಿವಾನಂದ್ ಪರಸ್ತ್ರೀ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನೆ ಮಾಡಿ ಪ್ರೀತಿ ತವರು ಮನೆ ಸೇರಿದ್ದಳು. ಬೆಳಗಾವಿ ಜಿಲ್ಲೆಯ ಅಥಣಿಗೆ ಬಂದು ತನ್ನ ತಾಯಿಯೊಂದಿಗೆ ವಾಸವಿದ್ದಳು.  ಇದನ್ನೂ ಓದಿ: ಪಾಕ್‌ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್‌ ಸಿಂಗ್‌ ಪತ್ನಿ ರಸ್ತೆ ಅಪಘಾತದಲ್ಲಿ ಸಾವು

    POLICE JEEP

    ನೀನು ಮನೆಗೆ ಬರಲೇಬೇಕು ಅಂತ ಲೈಸೆನ್ಸ್ ಡ್ ರಿವಾಲ್ವಾರ್ ಜೊತೆಗೆ ಮನೆಗೆ ಬಂದಿದ್ದ ಶಿವಾನಂದ್, ಎರಡು ಬಾರಿ ಗುಂಡು ಹಾರಿಸಿ ನಾಲ್ಕು ಗುಂಡು ಬಾಕಿ ಇಟ್ಟುಕೊಂಡಿದ್ದ. ಮನೆಗೆ ಬರಲಿಲ್ಲವೆಂದರೆ ಎರಡು ಗುಂಡು ನಿನಗೆ ಹಾರಿಸಿ ಎರಡು ಗುಂಡು ನಾನು ಹಾರಿಸಿಕೊಳ್ತೀನಿ ಅಂತ ಧಮ್ಕಿ ಹಾಕಿದ್ದ. ಇಬ್ಬರೂ ಸೇರಿ ಸತ್ತು ಹೋಗೊಣ ಎಂದು ಹೆಂಡತಿಗೆ ಧಮ್ಕಿ ಹಾಕಿದ್ದ ಭೂಪನ ವಿರುದ್ಧ ಪತ್ನಿ ನೀಡಿದ್ದಾರೆ. ಇದೀಗ ಈ ದೂರಿನನ್ವಯ ಶಿವಾನಂದ್ ನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

    ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬ್ಯಾಂಕ್ ಖಾತೆಯಿಂದ ಹೆಂಡತಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾದ ಬ್ಯಾಂಕ್ ಸಿಬ್ಬಂದಿ

    ಬ್ಯಾಂಕ್ ಖಾತೆಯಿಂದ ಹೆಂಡತಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾದ ಬ್ಯಾಂಕ್ ಸಿಬ್ಬಂದಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ Bank Of Baroda ಶಾಖೆಯ ಸಹಾಯಕ ವ್ಯವಸ್ಥಾಪಕನೇ (Branch Officer)  ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ (Wife) ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ಎಸ್ಕೇಪ್ ಆಗಿದ್ದಾನೆ.

    ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾವಣೆ ಮಾಡಿ ಇದೀಗ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ಅಪ್ಘಾನಿಸ್ತಾನದಲ್ಲಿ ಆನ್‌ಲೈನ್ ಶಾಪಿಂಗ್ ಸ್ಥಗಿತ

    ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಲಾದ ಎಸ್‍ಬಿಐ (SBI) ಬ್ಯಾಂಕ್‍ನಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ. ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ದರ್ಶನ ನೀಡಲಿರುವ ಅಯೋಧ್ಯೆ ಶ್ರೀರಾಮಚಂದ್ರ

    Live Tv
    [brid partner=56869869 player=32851 video=960834 autoplay=true]

  • ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ

    ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ

    ಬೀದರ್: ಅಪ್ರಾಪ್ತ ಸಹೋದರಿ(Sister) ಮೇಲೆ ಸಹೋದರನೇ(Brother) ಅತ್ಯಾಚಾರ ಮಾಡಿದ ಘಟನೆ ಬೀದರ್(Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಾಂಡಯೊಂದರಲ್ಲಿ ನಡೆದಿದೆ.

    ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಬಾಲಕಿಯ ತಂದೆಗೆ ಇಬ್ಬರು ಪತ್ನಿಯರಿದ್ದು, ಹಿರಿಯ ಪತ್ನಿಯ ಮಗನಿಂದ ಕಿರಿಯ ಪತ್ನಿಯ(Wife) ಮಗಳ ಮೇಲೆ ಅತ್ಯಾಚಾರ ಮಾಡಲಾಗಿದೆ.

    ಮೊದಲನೇಯ ಪತ್ನಿ ಮಗ ಆಗಾಗ ಕೆಲಸಕ್ಕೆಂದು ತನ್ನ ಮನೆಗೆ ಸಹೋದರಿಯನ್ನು ಕರೆದುಕೊಂಡು ಹೋಗುತ್ತಿದ್ದನು. ಈ ವೇಳೆ ಸಹೋದರಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗುತ್ತಿದ್ದಂತೆ ಅತ್ಯಾಚಾರ ಮಾಡಿದ ಸಹೋದರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಈ ಹಿಂದೆ ಹಾವಿನ ಮೊಟ್ಟೆ, ಇದೀಗ ಹಕ್ಕಿ ಗೂಡಿನಿಂದಾಗಿ ರಾ. ಹೆದ್ದಾರಿ ಕೆಲಸ ಸ್ಥಗಿತ!

    POLICE JEEP

    ಪತಿ ಸತ್ತ ಬಳಿಕ ಬಸವಕಲ್ಯಾಣದ ಅದೇ ತಾಂಡದ ಪ್ರತ್ಯೇಕ ಮನೆಯಲ್ಲಿ ಎರಡನೇ ಪತ್ನಿ ತನ್ನ ಮಕ್ಕಳೊಂದಿಗೆ ವಾಸವಿದ್ದರು. ಘಟನೆ ಕುರಿತು ಯಾರಿಗೂ ಹೇಳದಂತೆ ನನ್ನ ಮಗಳಿಗೆ ಬೆದರಿಸಿದ್ದಾನೆ. ಇದಕ್ಕೆ ಇನ್ನಿಬ್ಬರ ಸಹಕಾರವು ಇದೆ ಎಂದು ತಾಯಿ ದೂರು ನೀಡಿದ್ದು, ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿಯಲ್ಲಿ ಪಕರಣ ದಾಖಲಾಗಿದೆ. ಇದನ್ನೂ ಓದಿ: ಅಮಿತ್ ಶಾ ಭದ್ರತೆಯಲ್ಲಿ ಲೋಪ- ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸುತ್ತಿದ್ದ ವ್ಯಕ್ತಿ ಬಂಧನ

    Live Tv
    [brid partner=56869869 player=32851 video=960834 autoplay=true]

  • ಗಂಡ- ಹೆಂಡತಿ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ!

    ಗಂಡ- ಹೆಂಡತಿ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ!

    ಶಿವಮೊಗ್ಗ: ಗಂಡ- ಹೆಂಡತಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಮೃತಳನ್ನು ಮಂಜುಳಾ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗ(Shivamogga) ದ ಪ್ರಿಯಾಂಕ ಲೇಔಟ್ (Priyanka Layout) ನಲ್ಲಿ ಈ ಘಟನೆ ನಡೆದಿದ್ದು, ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಮಂಜುಳಾ ಮೃತದೇಹ ಪತ್ತೆಯಾಗಿದೆ.

    ಇತ್ತ ಪತ್ನಿ ಕೊಲೆ ಬಳಿಕ ಪತಿ ದಿನೇಶ್ ಕೂಡ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಸ್ಥಳೀಯರು, ಮಂಗಳವಾರ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ ಎಂದು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಸದ್ಯ ಪ್ರಕರಣ ಸಂಬಂಧ ಮಹಿಳೆಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ..? ಅಥವಾ ಕೊಲೆಯೇ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ. ಸ್ಥಳಕ್ಕೆ ತುಂಗಾನಗರ ಠಾಣೆ (TungaNagar Police Station) ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಊಟಕ್ಕೆ ಬಿರಿಯಾನಿ ಮಾಡಿಲ್ಲ ಅಂತ ಪತ್ನಿಯನ್ನೇ ಇರಿದ ಪತಿ

    ಊಟಕ್ಕೆ ಬಿರಿಯಾನಿ ಮಾಡಿಲ್ಲ ಅಂತ ಪತ್ನಿಯನ್ನೇ ಇರಿದ ಪತಿ

    ಮುಂಬೈ: ರಾತ್ರಿ ಊಟಕ್ಕೆ ಬಿರಿಯಾನಿ ಮಾಡಿಲ್ಲ ಎಂಬ ಕಾರಣಕ್ಕೆ ಕುಡಿದ ನಶೆಯಲ್ಲಿದ್ದ ಪತಿರಾಯ ಪತ್ನಿಯನ್ನೇ ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ನಡೆದಿದೆ.

    ಆಗಸ್ಟ್ 31ರಂದು ರಾತ್ರಿ ವ್ಯಕ್ತಿ ಕುಡಿದ ಅಮಲಿನಲ್ಲಿ ಮನೆಗೆ ಬಂದು, ಊಟಕ್ಕೆ ಬಿರಿಯಾನಿ ಮಾಡದೇ ಇದ್ದುದಕ್ಕೆ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಬಳಿಕ ಕುಟುಂಬದ ಇತರ ಸದಸ್ಯರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗಲೂ ಆತ ತನ್ನ ಹೆಂಡತಿಗೆ ಥಳಿಸಿದ್ದಾನೆ. ಬಳಿಕ ಚಾಕು ತೆಗೆದುಕೊಂಡು ಆಕೆಗೆ ಇರಿದಿದ್ದಾನೆ. ಇದನ್ನೂ ಓದಿ: ಚೀನಾ ಭೂಕಂಪ – ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ ವೀಡಿಯೋಗಳು

    POLICE JEEP

    ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಆರೋಪಿ ವಿಕ್ರಂ ವಿನಾಯಕ್ ದೇಡೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೂ ಆತನನ್ನು ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ರಕ್ತಪಾತ – ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ

    Live Tv
    [brid partner=56869869 player=32851 video=960834 autoplay=true]

  • ಮಿಮ್ಸ್ ಸಿಬ್ಬಂದಿ ಎಡವಟ್ಟು- ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ ಪತ್ನಿ ಕೈಗಿಟ್ಟ ಸಿಬ್ಬಂದಿ

    ಮಿಮ್ಸ್ ಸಿಬ್ಬಂದಿ ಎಡವಟ್ಟು- ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ ಪತ್ನಿ ಕೈಗಿಟ್ಟ ಸಿಬ್ಬಂದಿ

    ಮಂಡ್ಯ: ಮಂಡ್ಯದ ಆಸ್ಪತ್ರೆ ಸಿಬ್ಬಂದಿಯಿಂದ ಮತ್ತೊಂದು ಎಡವಟ್ಟಾಗಿದ್ದು, ಗ್ಯಾಂಗ್ರಿನ್ ರೋಗಿಗೆ ಶಸ್ತ್ರ ಚಿಕಿತ್ಸೆ ಮಾಡಿದ ನಂತರ ಕತ್ತರಿಸಿದ ಕಾಲನ್ನು ಪತ್ನಿಗೆ ಹಸ್ತಾಂತರ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

    ಪದೇ ಪದೇ ವಿವಾದಗಳ ಕೇಂದ್ರ ಬಿಂದು ಆಗುತ್ತಿರುವ ಮಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಮಾಡಿದ್ದಾರೆ. ಮಂಡ್ಯದ ಕೀಲಾರ ಗ್ರಾಮದ ಭಾಗ್ಯಮ್ಮನ ಪತಿ ಪ್ರಕಾಶ್ ಗ್ಯಾಂಗ್ರಿನ್ ಖಾಯಿಲೆಗೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕಾಶ್ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಕಾಶ್‍ಗೆ ಆಸ್ಪತ್ರೆಯವರು ಕಳೆದ ಮೂರು, ನಾಲ್ಕು ದಿನಗಳಿಂದ ಚಿಕಿತ್ಸೆ ನೀಡುತ್ತಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಪ್ರಕಾಶನ ಕಾಲು ಕತ್ತರಿಸಿದ್ದಾರೆ.

    ಶಸ್ತ್ರ ಚಿಕಿತ್ಸೆ ಮುಗಿದ ಬಳಿಕ ಸಿಬ್ಬಂದಿಯು ಕತ್ತರಿಸಿದ ಕಾಲನ್ನು ಪತ್ನಿ ಭಾಗ್ಯಮ್ಮನ ಕೈಗೆ ನೀಡಿ ಎಡವಟ್ಟು ಮಾಡಿದ್ದಾರೆ. ಅಷ್ಟೇ ಅಲ್ಲದೇ ಕತ್ತರಿಸಿದ ಕಾಲನ್ನು ಎಲ್ಲಾದರೂ ಮಣ್ಣು ಮಾಡುವಂತೆ ಭಾಗ್ಯಮ್ಮನಿಗೆ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದಾಗಿ ದಿಕ್ಕು ತೋಚದೆ ತಬ್ಬಿಬ್ಬಾದ ಭಾಗ್ಯಮ್ಮ, ಗಂಡನ ಕಾಲನ್ನು ಹಿಡಿದು ಆಸ್ಪತ್ರೆ ಬಳಿ ಅಳುತ್ತಾ ನಿಂತಿದ್ದರು. ಇದನ್ನೂ ಓದಿ: ರಸ್ತೆ ಕಾಂಕ್ರೀಟಿಕರಣ ತಡೆದ ಮಹಿಳೆ – ಛತ್ರಿಯ ಹಿಡಿಯಲ್ಲಿ ತಲೆ ಒಡೆದ ಪಂಚಾಯಿತಿ ಸದಸ್ಯ

    ಘಟನೆಗೆ ಸಂಬಂಧಿಸಿ ಭಾಗ್ಯಮ್ಮ ಮಾತನಾಡಿ, ತಾವೇ ಮಣ್ಣು ಮಾಡಲು ಮಿಮ್ಸ್ ಆಸ್ಪತ್ರೆಯವರು ಸಾವಿರಾರು ರೂಪಾಯಿ ಹಣ ಕೇಳಿದ್ದಾರೆ ಆರೋಪಿಸಿದ್ದಾರೆ. ಒಟ್ಟಾರೆಯಾಗಿ ಮಿಮ್ಸ್ ಸಿಬ್ಬಂದಿ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    Live Tv
    [brid partner=56869869 player=32851 video=960834 autoplay=true]

  • ಪತ್ನಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪತಿರಾಯ – ಕಾರಣ ಮಾತ್ರ ಸಸ್ಪೆನ್ಸ್

    ಪತ್ನಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪತಿರಾಯ – ಕಾರಣ ಮಾತ್ರ ಸಸ್ಪೆನ್ಸ್

    ಹಾಸನ: ಪತಿಯೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಇಂದ್ರಮ್ಮ (48) ಕೊಲೆಯಾದ ಮಹಿಳೆಯಾಗಿದ್ದು, ಚಂದ್ರಯ್ಯ ಪತ್ನಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪಿ. ಇಂದು ಬೆಳಗ್ಗೆ ಇಂದ್ರಮ್ಮ ನಾಲ್ವರ ಜೊತೆ ಕೇಶವಮೂರ್ತಿ ಅವರ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರಕಾಸ್ತ್ರ ಹಿಡಿದು ಏಕಾಏಕಿ ದಾಳಿ ಮಾಡಿದ ಚಂದ್ರಯ್ಯ ತನ್ನ ಪತ್ನಿಯನ್ನು ಮನಸ್ಸೋ ಇಚ್ಚೆ ಕೊಚ್ಚಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: 10 ಕೋಟಿಗೆ ಒಂದು ವಿಲ್ಲಾ – ಮಳೆಗೆ ನಿವಾಸಿಗಳು ವಿಲವಿಲ

    POLICE JEEP

    ಈ ವೇಳೆ ಇಂದ್ರಮ್ಮನ ಜೊತೆಗಿದ್ದ ಮಹಿಳೆಯೊಬ್ಬರು ಕಾಪಾಡಲು ಮುಂದಾದಾಗ ಆ ಮಹಿಳೆಯ ಮೇಲು ಚಂದ್ರಯ್ಯ ಹಲ್ಲೆ ಮಾಡಿದ್ದಾನೆ. ಚಂದ್ರಯ್ಯ-ಇಂದ್ರಮ್ಮನ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಆರು ತಿಂಗಳ ಹಿಂದೆಯು ಇಂದ್ರಮ್ಮನನ್ನು ನೇಣು ಹಾಕಿ ಕೊಲ್ಲಲು ಚಂದ್ರಯ್ಯ ಯತ್ನಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ನಿಮ್ಮ ಸರ್ಕಾರದಲ್ಲಿ ದಿಂಬು, ಚೆಂಬು ಖರೀದಿಯಲ್ಲೂ ನಡೆದ ಭ್ರಷ್ಟಾಚಾರ ನೆನಪಿಸಿಕೊಳ್ಳಿ- ಸಿದ್ದುಗೆ ಸುನಿಲ್ ತಿರುಗೇಟು

    ಕಳೆದ ರಾತ್ರಿ ಕಂಠಪೂರ್ತಿ ಕುಡಿದು ಬಂದಿದ್ದ ಚಂದ್ರಯ್ಯ ಪತ್ನಿ ಜೊತೆ ಜಗಳವಾಡಿದ್ದ. ಈ ವೇಳೆ ಚಂದ್ರೇಗೌಡ-ಇಂದ್ರಮ್ಮ ಪುತ್ರ ಚೀಕನಹಳ್ಳಿ ಗ್ರಾ.ಪಂ. ಸದಸ್ಯ ಪ್ರದೀಪ್ ಜಗಳ ಬಿಡಿಸಿ ಇಬ್ಬರಿಗೂ ಬುದ್ದಿ ಹೇಳಿದ್ದರು. ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕ ಮರ್ಡರ್

    ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಯುವಕ ಮರ್ಡರ್

    ಯಾದಗಿರಿ: ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ತಾಲೂಕಿನ ಕಡೇಚೂರ್ ಬಳಿ ನಡೆದಿದೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗ್ರಾಮದ ಯಲಸತ್ತಿ ಗ್ರಾಮದ ಸಿದ್ದಪ್ಪ (25) ಕೊಲೆಯಾದ ಯುವಕನಾಗಿದ್ದು, ಆರೋಪಿಯನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಪತ್ನಿ ಜೊತೆ ಕಳೆದ ಎರಡು ವರ್ಷಗಳಿಂದ ಸಿದ್ದಪ್ಪ ಅನೈತಿಕ ಸಂಬಂಧ ಹೊಂದಿದ್ದನು. ಇದನ್ನೂ ಓದಿ: ಸಿಇಟಿ ರ್‍ಯಾಂಕ್ ರದ್ದು- ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

    ಈ ವಿಚಾರ ತಿಳಿದು ನಾಗರಾಜ್ ಬಡಿಗೆಯಿಂದ ಹೊಡೆದು ಸಿದ್ದಪ್ಪನನ್ನ ಕೊಲೆ ಮಾಡಿದ್ದಾನೆ. ಇದೀಗ ಈ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್

    Live Tv
    [brid partner=56869869 player=32851 video=960834 autoplay=true]