Tag: Wife

  • ಸೌದಿಯಲ್ಲಿ ಪತ್ನಿ ಮೋಜು – ತುಮಕೂರಿನಲ್ಲಿ ಮೂವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

    ಸೌದಿಯಲ್ಲಿ ಪತ್ನಿ ಮೋಜು – ತುಮಕೂರಿನಲ್ಲಿ ಮೂವರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

    – ಸಮೀವುಲ್ಲಾ ಸಾವು, ಜೀವನ್ಮರಣ ಹೋರಾಟದಲ್ಲಿ ಮಕ್ಕಳು

    ತುಮಕೂರು: ಮೂರು ಮಕ್ಕಳ ತಾಯಿ ವಿದೇಶಕ್ಕೆ ಹಾರಿ ಮೋಜು-ಮಸ್ತಿ ಮಾಡುತ್ತಿದ್ದರಿಂದ ಇತ್ತ ಪತಿ ಹಾಗೂ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಮಕ್ಕಳು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

    ಹೌದು. ಹೆಂಡತಿಯ ವರ್ತನೆಯಿಂದ ಬೇಸತ್ತು ಸಮೀವುಲ್ಲಾ ತನ್ನ ಮೂವರು ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಸಮೀವುಲ್ಲಾ ಅವರು ತುಮಕೂರಿನಲ್ಲಿ ಪೇಯಿಂಟ್ ಕೆಲಸ ಮಾಡಿಕೊಂಡಿದ್ದಾರೆ. ಇತ್ತ ಪತ್ನಿ ಮನೆಯಲ್ಲಿಯೇ ವಾಸವಿದ್ದಳು. ಆದರೆ ಅದೇಕೋ ಈಕೆಗೆ ದುಡಿಯುವ ಮನಸ್ಸಾಯ್ತೋ ಗೊತ್ತಿಲ್ಲ. ತನ್ನ ಅಕ್ಕನ ಜೊತೆ ಸೌದಿಗೆ ಹಾರಿದ್ದಾಳೆ.

    ತನ್ನ ಕುಟುಂಬಕ್ಕೆ ತಿಂಗಳಿಗೊಮ್ಮೆ 10 ಸಾವಿರ ಹಣವೂ ಕಳಿಸುತ್ತಿದ್ದಳಂತೆ. ಆದರೆ ಕ್ರಮೇಣ ಹಣ ಕಳುಹಿಸುವುದನ್ನು ನಿಲ್ಲಿಸಿದ್ದಾಳೆ. ದುಡಿಮೆಗೆಂದು ಹೋದ ಸಾಹೇರಾ ಬಾನು, ಹುಕ್ಕಾ ಬಾರ್ ಡ್ಯಾನ್ಸ್ ಅಂತಾ ಮೋಜು ಮಸ್ತಿಗೆ ಇಳಿದಿದ್ದಾಳೆ. ಈ ಬಗ್ಗೆ ಅಲ್ಲಿಂದಲೇ ತನ್ನ ಪತಿ ಸಮೀವುಲ್ಲಾಗೆ ವೀಡಿಯೋ ಕಾಲ್ ಮಾಡಿ ತೋರಿಸುತ್ತಿದ್ದಳಂತೆ. ಅಲ್ಲದೆ ನಾನು ವಾಪಸ್ ಬರಲ್ಲ ಇಲ್ಲೇ ಇರುತ್ತೇನೆ, ಇಲ್ಲೆ ಚೆನ್ನಾಗಿದೆ ಅಂತಾ ಹೇಳಿ ಪತಿಗೆ ರೇಗಿಸುತ್ತಿದ್ದಳಂತೆ. ಜೊತೆಗೆ ಪ್ರಿಯಕರನೊಂದಿಗೂ ಕೂಡ ವೀಡಿಯೋ ಕಾಲ್ ಮಾಡುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ `ಸಿಎಂ ಬದಲಾವಣೆ’ ವರದಿ

    ಯಾವಾಗ ಸಾಹೇರಾ ಬಾನು ತನ್ನ ಮೋಜು-ಮಸ್ತಿಯಲ್ಲಿ ಬಿದ್ದು ಸೌದಿಯಲ್ಲಿ ಸೆಟ್ಲ್ ಆದ್ಲೋ, ಇತ್ತ ಸಮೀವುಲ್ಲಾ ಕುಟುಂಬ ನಲುಗಿದೆ. ತನ್ನ ಮೂವರು ಮಕ್ಕಳೊಂದಿಗೆ ಸಮೀವುಲ್ಲಾ ಪಡಬಾರದ ಕಷ್ಟ ಪಟ್ಟಿದ್ದಾರೆ. ತಾನೇ ದುಡಿದು ಮಕ್ಕಳನ್ನ ನೋಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪ್ರತಿದಿನ ಕೂಡ ಸಮೀವುಲ್ಲಾ ಪತ್ನಿಗೆ ವೀಡಿಯೋ ಕಾಲ್ ಮಾಡಿದಾಗ ವಾಪಸ್ ತುಮಕೂರಿಗೆ ಬಂದು ಬಿಡು ಅಂತಾ ಗೋಗರೆದಿದ್ದಾರೆ. ಸಾಲದ್ದಕ್ಕೆ ಮಕ್ಕಳು ಕೂಡ ತಾಯಿಗೆ ಬಾ ಅಮ್ಮ ಅಂತಾ ಕರೆದಿದ್ದಾರೆ. ಆದರೂ ನವರಂಗಿ ನಾಟಕದ ಸಾಹೇರ ಬಾನು ಮನಸ್ಸು ಕರಗಿಲ್ಲ.

    ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗಳೊಂದಿಗೆ ಸಮೀವುಲ್ಲಾ ತುಮಕೂರಿನ ಪುರೋಸ್ ಕಾಲೋನಿಯಲ್ಲಿ ವಾಸವಿದ್ದರು. ಪತ್ನಿ ಸೌದಿಗೆ ಹೋದ ಕಾರಣಕ್ಕೆ ಕಳೆದ ಆಗಸ್ಟ್ 13 ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಮಕ್ಕಳ ಸಮೇತ ಸಮೀವುಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದು, ತುಮಕೂರಿನ ಜಿಲ್ಲಾಸ್ಪತ್ರೆಗೆ ಸಂಬಂಧಿಕರು ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 15ಕ್ಕೆ ಸಮೀವುಲ್ಲಾ ಸಾವನ್ನಪ್ಪಿದ್ದು, ಸದ್ಯ ಮೂವರು ಮಕ್ಕಳು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

    ಮಕ್ಕಳು ವಿಷ ಕುಡಿಯುವ ಮುನ್ನ ತನ್ನ ತಾಯಿಗೆ ಕಳುಹಿಸಿರುವ ಆ ವಾಯ್ಸ್ ರೆಕಾರ್ಡ್‍ಗಳು ಎಂಥವರನ್ನೂ ಮೌನವಾಗಿಸುತ್ತೆ. ಇವತ್ತು ಒಂದು ದಿನ ಮಾತನಾಡು ಅಮ್ಮ ಇಂದು ಕೊನೆದಿನ, ನಾವು ನಾಲ್ಕು ಮಂದಿ ಸಾಯುತ್ತಿದ್ದೇವೆ ಎಂದು ಮಕ್ಕಳು ಹೇಳಿರುವುದನ್ನು ಕೇಳಿಸಿಕೊಂಡರೆ ಹೃದಯ ಚುರುಕ್ ಅನ್ನುತ್ತೆ. ಮಕ್ಕಳು ಅಳುವ ವಾಯ್ಸ್‍ಗೂ ತಾಯಿಯ ಹೃದಯ ಕರಗಲಿಲ್ಲ. ಅಲ್ಲದೆ ಗಂಡ ಸತ್ತು ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ರೂ ಕರಗದ ಸಾಹೇರಾ ಭಾನು ವಿರುದ್ಧ ಮೋಯಿದ್ದಿನ್ ಕುಟುಂಬಸ್ಥರು ಹರಿಹಾಯ್ದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

    ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಫ್ಯಾಮಿಲಿ ಆತ್ಮಹತ್ಯೆಗೆ ಶರಣು

    ಬೆಂಗಳೂರು: ಕ್ಯಾನ್ಸರ್ ಇದೆ ಎಂದು ತಿಳಿದು ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

    ಮಹೇಶ್ (44), ಪತ್ನಿ ಜ್ಯೋತಿ ಮತ್ತು ಮಗ ನಂದೀಶ್ ಗೌಡ (9) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಮಹೇಶ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಅಷ್ಟೇ ಅಲ್ಲದೇ ಪ್ರತಿದಿನ ಟ್ಯಾಬ್ಲೇಟ್ ತೆಗೆದುಕೊಂಡು ಸುಸ್ತಾಗಿ ಹೋಗಿದ್ದ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹೊಟ್ಟೆ ನೋವಿಗೆ ಕಾರಣವೇನು ಎಂದು ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿಕೊಂಡಿದ್ದಾರೆ. ಈ ವೇಳೆ ಕ್ಯಾನ್ಸರ್ ಇದೆ ಎಂದು ಡಾಕ್ಟರ್ ತಿಳಿಸಿದ್ದಾರೆ.

    crime

    ಈ ವಿಷಯ ಗೊತ್ತಾದ ಮಹೇಶ್ ತಾನು ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ರೆ ತನ್ನ ಕುಟುಂಬ ಅನಾಥವಾಗುತ್ತದೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ. ತನ್ನ ಸಾವಿನ ನಂತರ ತನ್ನ ಹೆಂಡತಿ, ಮಕ್ಕಳ ಜೀವನ ಕಷ್ಟ ಎಂದು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದಾರೆ.

    ಮಹೇಶ್ ತಾನು ಮಾಡಿದ್ದ ನಿರ್ಧಾರದಂತೆ ಮನೆಯ ಒಂದು ರೂಂನಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮತ್ತೊಂದು ರೂಂನ ಬೆಡ್ ಮೇಲೆ ಪತ್ನಿ ಹಾಗೂ ನಂದೀಶ್ ಶವವಾಗಿ ಪತ್ತೆ ಆಗಿದ್ದಾರೆ. ಘಟನೆಯಲ್ಲಿ ಪತ್ನಿ ಹಾಗೂ ಮಗು ವಿಷ ಸೇವಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಗರ್ಲ್ ಫ್ರೆಂಡ್ ಭೇಟಿಗಾಗಿ ಬುರ್ಕಾ ಧರಿಸಿದವ ಜೈಲು ಪಾಲು

    POLICE JEEP

    ಘಟನೆ ಕುರಿತು ಮಹೇಶ್ ಡೆತ್‍ನೋಟ್ ಬರೆದಿಟ್ಟಿದ್ದಾರೆ. ಮಹೇಶ್ ಬರೆದಿರುವ ಅರ್ಧ ಪುಟದ ಡೆತ್ ನೋಟ್‍ನಲ್ಲಿ ಆರೋಗ್ಯ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: No Follow Up, ಯಾವುದೇ ಕಾರಿಡಾರ್‌ ಸುತ್ತಿಲ್ಲ, 30 ವರ್ಷದಲ್ಲಿ ಇದು ಫಸ್ಟ್‌ – ಕೇಂದ್ರವನ್ನು ಹೊಗಳಿದ ಸುನಿಲ್‌ ಮಿತ್ತಲ್‌

    Live Tv
    [brid partner=56869869 player=32851 video=960834 autoplay=true]

  • ಅನೈತಿಕ ಸಂಬಂಧ ಶಂಕೆ – ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ್ಲು

    ಅನೈತಿಕ ಸಂಬಂಧ ಶಂಕೆ – ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ್ಲು

    ಚೆನ್ನೈ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯೇ ಪತಿಯ ಗುಪ್ತಾಂಗಕ್ಕೆ ಕುದಿಯುವ ಬಿಸಿ ನೀರು ಎರಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದೀಗ ಸುಟ್ಟ ಗಾಯದಿಂದ ಬಳಲುತ್ತಿರುವ 32 ವರ್ಷದ ವ್ಯಕ್ತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಗಾಯಗೊಂಡಿರುವ ವ್ಯಕ್ತಿಯನ್ನು ಪುದುಪಟ್ಟು ಮೂಲದ ತಂಗರಾಜ್ ಎಂದು ಗುರುತಿಸಲಾಗಿದ್ದು, ಏಳು ವರ್ಷಗಳ ಹಿಂದೆ 29 ವರ್ಷದ ಪ್ರಿಯಾಳನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದನ್ನೂ ಓದಿ: ಈ ಬಾರಿ ಗಣಪನ ಜೊತೆ ಸಾವರ್ಕರ್ ಫೋಟೋ- ಹಿಂದೂ ಸಂಘಟನೆಗಳಿಂದ ಹೊಸ ಪ್ಲ್ಯಾನ್

    POLICE JEEP

    ತಂಗರಾಜ್ ಮೊಬೈಲ್ ತಯಾರಿಸುವ ಕಂಪನಿಯಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ತಂಗರಾಜ್ ತನ್ನ ಕೆಲಸದ ಸ್ಥಳದಲ್ಲಿ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಪ್ರಿಯಾ ಅನೇಕ ಬಾರಿ ಪತಿಯೊಂದಿಗೆ ಜಗಳವಾಡಿದ್ದಳು ಎಂದು ತಿಳಿದುಬಂದಿದೆ.

    ಮಂಗಳವಾರ ದಂಪತಿ ನಡುವೆ ಮತ್ತೆ ಜಗಳ ಆಗಿದ್ದು, ನಂತರ ತಂಗರಾಜ್ ಮಲಗಿದ್ದರು. ಆದರೆ ಇನ್ನೂ ಅಸಮಾಧಾನಗೊಂಡ ಪ್ರಿಯಾ, ಕುದಿಯುವ ನೀರನ್ನು ಕಾಯಿಸಿ ತಂಗರಾಜ್ ಅವರ ಗುಪ್ತಾಂಗದ ಮೇಲೆ ಸುರಿದಿದ್ದಾಳೆ. ಇದನ್ನೂ ಓದಿ: ದೇಶದ ಮೊದಲ ಎಲೆಕ್ಟ್ರಿಕ್‌ ಡಬ್ಬಲ್ ಡೆಕ್ಕರ್ ಬಸ್‌ ಇಂದಿನಿಂದ ಕಾರ್ಯಾರಂಭ – ಏನಿದರ ವಿಶೇಷತೆ?

    ಈ ವೇಳೆ ತಂಗರಾಜ್ ನೋವಿನಿಂದ ಕಿರುಚಾಡುತ್ತಿರುವುದನ್ನು ಕೇಳಿಸಿಕೊಂಡ ಅಕ್ಕಪಕ್ಕದ ಮನೆಯವರು ಆತನನ್ನು ರಕ್ಷಿಸಿ ವಾಲಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ವ್ಯಕ್ತಿಯ ಗುಪ್ತಾಂಗಕ್ಕೆ ಶೇ.50ರಷ್ಟು ಸುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಕಾವೇರಿಪಾಕ್ಕಂ ಪೊಲೀಸರು ಇದೀಗ ಪ್ರಿಯಾ ವಿರುದ್ಧ 294, 324, 506 ಮತ್ತು 506 (ii) ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ತಿರುವನಂತರಪುರಂ: ಹೆಂಡತಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಹಾಗೂ ಆಕೆ ನಿರೀಕ್ಷೆಯ ಸಂಗಾತಿಯಲ್ಲ ಎಂದು ಅವಳನ್ನು ನಿರಂತರವಾಗಿ ನಿಂದಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮವಾಗಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಸುಮಾರು 13 ವರ್ಷಗಳ ಕಾಲದಿಂದ ಪತ್ನಿಯಿಂದ ಬೇರ್ಪಟ್ಟಿದ್ದ ಪತಿಯು ತಮ್ಮ ಮದುವೆಯನ್ನು ರದ್ದು ಮಾಡಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿ ಈ ತೀರ್ಪು ನೀಡಿದೆ. ಮಹಿಳೆಯೂ ಪತಿಯಿಂದ ಈ ರೀತಿಯ ನಡುವಳಿಕೆಯನ್ನು ಸಹಿಸಿಕೊಳ್ಳಬಾರದು ಎಂದಿದೆ.

    ನ್ಯಾಯಮೂರ್ತಿಗಳಾದ ಅನಿಲ್ ಕೆ. ನರೇಂದ್ರನ್ ಹಾಗೂ ಸಿಎಸ್ ಸುಧಾ ಅವರ ಪೀಠವು ವಿಚ್ಛೇದಿತ ಕಾಯ್ದೆಯಡಿಯಲ್ಲಿ ಈ ತೀರ್ಪನ್ನು ನೀಡಿದೆ. ಪತಿಯು ಪದೇ ಪದೇ ಪತ್ನಿಯನ್ನು ತಮ್ಮ ನಿರೀಕ್ಷೆಯ ಪತ್ನಿಯಲ್ಲ ಎನ್ನುವುದರ ಜೊತೆಗೆ ಇತರ ಮಹಿಳೆಯರೊಂದಿಗೆ ಹೋಲಿಕೆ ಮಾಡುವುದು ಮಾನಸಿಕ ಕ್ರೌರ್ಯವಾಗಿದೆ. ಇದನ್ನು ಪತ್ನಿಯು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಸಹೋದ್ಯೋಗಿ ಗಟ್ಟಿಯಾಗಿ ತಬ್ಬಿಕೊಂಡಿದ್ರಿಂದ ಮುರಿಯಿತಂತೆ ಮಹಿಳೆಯ 3 ಪಕ್ಕೆಲುಬು!

    ದಾಖಲೆಗಳ ಪ್ರಕಾರ ದಂಪತಿ ಕೇವಲ ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಒಟ್ಟಿಗೆ ಇದ್ದಂತೆ ಕಂಡುಬರುತ್ತದೆ. ನಂತರ ಅವರು ಬೇರ್ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಪತಿಯು ಪತ್ನಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ವಿಚಾರಣೆ ಸಂದರ್ಭದಲ್ಲಿ ತಿಳಿದುಬಂದಿದೆ. ಜೊತೆಗೆ ಪತ್ನಿಯು ದೈಹಿಕವಾಗಿ ಆಕರ್ಷಣೀಯವಾಗಿ ಇಲ್ಲ ಎಂಬ ಕಾರಣಕ್ಕೆ ಆಕೆಯೊಂದಿಗೆ ಪತಿ ಒಡನಾಟದಲ್ಲಿ ತೊಡಗಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದಿದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಕೊಡಲಿಯಿಂದ ಪತ್ನಿ ಹತ್ಯೆಗೈದ ಪತಿ

    Law

    ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಪತಿ, ಪತ್ನಿಯರಾಗಿ ಮುಂದುವರಿಯಲು ಹೆಚ್ಚು ಉತ್ಸಾಹಕರಾಗಿಲ್ಲ. ಪತ್ನಿಗೆ 26 ಮತ್ತು ಪತಿಗೆ 29 ವರ್ಷ ವಯಸ್ಸಾಗಿದ್ದು, ಮದುವೆ ಬಳಿಕ ಅವರ ನಡುವೆ ಯಾವುದೇ ಭಾವನಾತ್ಮಕ ಸಂಬಂಧ ಏರ್ಪಟ್ಟಂತೆ ಕಾಣುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಅನೈತಿಕ ಸಂಬಂಧ ಶಂಕೆ – ಕೊಡಲಿಯಿಂದ ಪತ್ನಿ ಹತ್ಯೆಗೈದ ಪತಿ

    ಅನೈತಿಕ ಸಂಬಂಧ ಶಂಕೆ – ಕೊಡಲಿಯಿಂದ ಪತ್ನಿ ಹತ್ಯೆಗೈದ ಪತಿ

    ರಾಯಚೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೇ ಪತ್ನಿಯ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ.

    CRIME 2

    ರೇಣುಕಾ (28) ಕೊಲೆಯಾದ ಮಹಿಳೆಯಾಗಿದ್ದು, ಆರೋಪಿಯನ್ನು ಜಟ್ಟೆಪ್ಪ ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆ ಮಾಡಿ ಆರೋಪಿ ಜಟ್ಟೆಪ್ಪ ನೇರವಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕೊಲೆಯಾದ ರೇಣುಕಾ ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಅಂತ ಆರೋಪಿ ಶಂಕಿಸಿದ್ದಾನೆ. ಇದನ್ನೂ ಓದಿ: ಶಿವಮೊಗ್ಗ ಕಿಡಿಗೇಡಿಗಳಿಗೆ ಗುಂಡೇಟು ಬರೀ ಸ್ಯಾಂಪಲ್: ಕೆ.ಎಸ್ ಈಶ್ವರಪ್ಪ

    ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಇಂದು ಬೆಳಗ್ಗೆ ಸಹ ಇದೇ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ವೇಳೆ ಮನೆಯಲ್ಲಿದ್ದ ಕೊಡಲಿಯಿಂದ ರೇಣುಕಾಳನ್ನು ಆರೋಪಿ ಹತ್ಯೆ ಮಾಡಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೊಬೈಲ್ ವಾಪಸ್ ಕೇಳಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಪ್ರೀತಿಸಿ ಮದುವೆಯಾದವಳ ಕಿರಿಕಿರಿ – ಫಿಲ್ಮಿ ಸ್ಟೈಲ್ ಕೊಲೆ, ಪತಿ ಅಂದರ್

    ಪ್ರೀತಿಸಿ ಮದುವೆಯಾದವಳ ಕಿರಿಕಿರಿ – ಫಿಲ್ಮಿ ಸ್ಟೈಲ್ ಕೊಲೆ, ಪತಿ ಅಂದರ್

    ಬೆಂಗಳೂರು: ಪ್ರೀತಿಸಿ ಮದುವೆಯಾದವಳ ಟಾರ್ಚರ್ ತಡೆಯೋಕಾಗದೇ ಫಿಲ್ಮಿ ಸ್ಟೈಲ್ ಪ್ಲ್ಯಾನ್ ಮಾಡಿ ಯಾರಿಗೂ ಗೊತ್ತಾಗದಂತೆ ಆಕೆಯ ಕೊಲೆ ಮಾಡಿ ಬಳಿಕ ತಾನೇ ಪೊಲೀಸ್ ಠಾಣೆಗೆ ದೂರು ನೀಡಿದ ಪತಿಯ ಕೃತ್ಯ ತನಿಖೆಯಿಂದ ಬಯಲಾಗಿದೆ

    ಹೌದು, ಮೊದಲೇ ಪ್ಲ್ಯಾನ್ ಹಾಕಿ, ಪತ್ನಿಯ ಕೊಲೆ ಮಾಡಿ ಬಳಿಕ ಮಡಿವಾಳ ಪೊಲೀಸರಿಗೆ ದೂರನ್ನೂ ಕೊಟ್ಟಿದ್ದಾನೆ. ಆದರೆ ಅನುಮಾನಗೊಂಡ ಪೊಲೀಸರು ಆತನನ್ನೇ ವಿಚಾರಣೆ ನಡೆಸಿದಾಗ ಖತರ್ನಾಕ್ ಪ್ಲ್ಯಾನ್ ಬಗ್ಗೆ ಬಾಯಿ ಬಿಟ್ಟಿದ್ದಾನೆ.

    ಘಟನೆಯೇನು?
    ಬೆಂಗಳೂರಿನ ಮಡಿವಾಳದ ಪೃಥ್ವಿರಾಜ್, ಜ್ಯೋತಿಯನ್ನು 8 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಮದುವೆಯ ಬಳಿಕ ನಿರಂತರವಾಗಿ ಜಗಳವಾಡುತ್ತಿದ್ದರಿಂದ ಪೃಥ್ವಿರಾಜ್ ಟಾರ್ಚರ್ ತಡೆಯಲಾಗದೇ ಪತ್ನಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ.

    ಮೊದಲೇ ಯೋಜಿಸಿದ ಪ್ಲ್ಯಾನ್‌ನಂತೆ ಪೃಥ್ವಿರಾಜ್ ತನ್ನ ಹಾಗೂ ಪತ್ನಿಯ ಮೊಬೈಲ್ ಫೋನ್‌ಗಳನ್ನು ಮನೆಯಲ್ಲಿಯೇ ಇರಿಸಿ ಟ್ರಿಪ್‌ಗೆ ಕರೆದುಕೊಂಡು ಹೋಗಿದ್ದ. ಆಗಸ್ಟ್ 2 ರಂದು ಹೆಂಡತಿಯನ್ನು ಉಡುಪಿಯ ಮಲ್ಪೆ ಬೀಚ್‌ಗೆ ಕರೆದುಕೊಂಡು ಹೋಗಿ, ಅಲ್ಲಿ ಸಮುದ್ರದಲ್ಲಿ ಮುಳುಗಿಸಿ ಆಕೆಯ ಕೊಲೆ ಮಾಡುವುದು ಪೃಥ್ವಿರಾಜ್‌ನ ಪ್ಲ್ಯಾನ್ ಆಗಿತ್ತು. ಬಳಿಕ ಅದನ್ನು ನ್ಯಾಚುರಲ್ ಡೆತ್ ಎಂದು ಬಣ್ಣಿಸುವ ಯೋಜನೆ ಮಾಡಿದ್ದ. ಆದರೆ ಸಮುದ್ರದ ಆಳಕ್ಕೆ ಇಳಿಯದಂತೆ ಬೋರ್ಡ್ ಹಾಕಿದ್ದರಿಂದ ಆತನ ಪ್ಲ್ಯಾನ್ ಫ್ಲಾಪ್ ಆಗಿತ್ತು. ಇದನ್ನೂ ಓದಿ: ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ NSUI ಕಾರ್ಯಕರ್ತರ ಮಧ್ಯೆ ಕಿತ್ತಾಟ

    CRIME

    ಆದರೂ ಪಟ್ಟು ಬಿಡದ ಪೃಥ್ವಿರಾಜ್, ಇನ್ನೊಂದು ಪ್ಲ್ಯಾನ್ ಮಾಡಿ, ಜ್ಯೋತಿಯನ್ನು ಸಕಲೇಶಪುರದ ಗುಂಡ್ಯ ಬಳಿ ಕರೆದುಕೊಂಡು ಹೋಗಿದ್ದ. ಅಲ್ಲಿ ಆಕೆಯ ವೇಲ್‌ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದ. ಬಳಿಕ ಆಕೆಯ ಶವವನ್ನು ಅಲ್ಲಿಯೇ ಪೊದೆಯೊಂದರಲ್ಲಿ ಎಸೆದಿದ್ದ.

    ಪ್ಲ್ಯಾನ್‌ನಂತೆ ಎಲ್ಲಾ ಮುಗಿಸಿಕೊಂಡು ಬೆಂಗಳೂರಿಗೆ ಬಂದ ಪೃಥ್ವಿರಾಜ್, ಮಡಿವಾಳ ಪೊಲೀಸ್ ಠಾಣೆಯಲ್ಲಿ ಪತ್ನಿ ಮಿಸ್ಸಿಂಗ್ ಎಂದು ದೂರು ನೀಡಿದ್ದಾನೆ. ಕಂಪ್ಲೆಂಟ್ ಪಡೆದ ಪೊಲೀಸರು ತನಿಖೆಗೆ ಇಳಿದಿದ್ದರು. ಈ ವೇಳೆ ಅವರಿಬ್ಬರ ಫೋನ್‌ಗಳು ಮನೆಯಲ್ಲಿಯೇ ಇದ್ದ ಬಗ್ಗೆ ತಿಳಿದು ಅನುಮಾನಗೊಂಡ ಪೊಲೀಸರು ಸಿಸಿಟಿವಿ ಹಾಗೂ ಸಿಡಿಆರ್ ಆಧರಿಸಿ ಪೃಥ್ವಿರಾಜ್‌ನನ್ನು ಬಂಧಿಸುತ್ತಾರೆ. ಈ ವೇಳೆ ಪೃಥ್ವಿರಾಜ್‌ನ ಬಾಯಿ ಬಿಡಿಸಿದ ಪೊಲೀಸರು ಕೊಲೆ ಹಿಂದಿನ ರಹಸ್ಯವನ್ನೆಲ್ಲಾ ರಿವೀಲ್ ಮಾಡಿದ್ದಾನೆ. ಇದನ್ನೂ ಓದಿ: ದಯಾಮರಣಕ್ಕೆ ಅನುಮತಿ ಕೋರಿದ ಮಂಗಳಮುಖಿ

    POLICE JEEP

    ನಾನು ಹೆಂಡತಿಯಿಂದ ಬಹಳ ಕಿರಿಕಿರಿ ಅನುಭವಿಸಿದ್ದೇನೆ. ಆಕೆ ಇನ್ನೊಬ್ಬ ಗೆಳೆಯನನ್ನು ಹೊಂದಿದ್ದಳು. 2 ಬಾರಿ ಯುಪಿಎಸ್‌ಸಿ ಎಕ್ಸಾಂ ಬರೆದಿದ್ದ ಆಕೆ ಟ್ರೈನಿಂಗ್‌ಗಾಗಿ ದೆಹಲಿಗೆ ಹೋಗಿದ್ದಳು. ಅಲ್ಲಿ ಅವಳು ಒಬ್ಬ ಯುವಕನೊಂದಿಗೆ ಸಖ್ಯ ಬೆಳೆಸಿದ್ದಳು. ಹೀಗಾಗಿ ನಾನು ಆಕೆಯ ಕೊಲೆಗೆ ಪ್ಲ್ಯಾನ್ ಮಾಡಿದ್ದೆ ಎಂದು ಬಾಯ್ಬಿಟ್ಟಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಊಟ ನೀಡೋ ವಿಚಾರಕ್ಕೆ ಜಗಳ – ಬಾಮೈದನಿಂದಲೇ ಯೋಧನ ಕೊಲೆ

    ಊಟ ನೀಡೋ ವಿಚಾರಕ್ಕೆ ಜಗಳ – ಬಾಮೈದನಿಂದಲೇ ಯೋಧನ ಕೊಲೆ

    ಬಾಗಲಕೋಟೆ: ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದ ಬಾವನನ್ನು ಬಾಮೈದನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ.

    POLICE JEEP

    ಕರಿಸಿದ್ದಪ್ಪ ಕಳಸದ(25) ಮೃತ ಭಾರತೀಯ ಸೇನೆ ಯೋಧರಾಗಿದ್ದು, ಆರೋಪಿಯನ್ನು ಸಿದ್ದನಗೌಡ ದೂಳಪ್ಪ ಎಂದು ಗುರುತಿಸಲಾಗಿದೆ. ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕರಿಸಿದ್ದಪ್ಪ ಕಳಸದ ಅವರು ರಜೆ ಹಿನ್ನೆಲೆ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    ಎರಡು ವರ್ಷಗಳ ಹಿಂದೆ ಕರಿಸಿದ್ದಪ್ಪ ಕಳಸದ, ವಿದ್ಯಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಗುರುವಾರ ರಾತ್ರಿ ಊಟ ನೀಡುವ ವೇಳೆ ದಂಪತಿ ನಡುವೆ ಜಗಳವಾಗಿದೆ. ಇದರಿಂದಾಗಿ ವಿದ್ಯಾ ತಮ್ಮ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಸಿದ್ದನಗೌಡ ದೂಳಪ್ಪ ತನ್ನ ಸಹೋದರಿಗೆ ಕಿರುಕುಳ ಕೊಡುತ್ತಿಯಾ ಎಂದು ಚಾಕು ಇರಿದು ಕರಿಸಿದ್ದಪ್ಪ ಕಳಸದರನ್ನು ಕೊಲೆ ಮಾಡಿದ್ದಾನೆ. ಇದೀಗ ಸ್ಥಳಕ್ಕೆ ಕೆರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ

    ಲಕ್ನೋ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಆಗ್ರಾ ವಿಭಾಗದ ಮಥುರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ರೇಖಾ ತನ್ನ ಪತಿ ಚಮನ್ ಪ್ರಕಾಶ್‍ನನ್ನು ಹತ್ಯೆಗೈದಿದ್ದಾಳೆ.

    ರೇಖಾ ವಿವಾಹೇತರ ಸಂಬಂಧವನ್ನು ಹೊಂದಿದ್ದಳು. ಈ ಬಗ್ಗೆ ಆಕೆಯ ಪತಿ ಚಮನ್ ಪ್ರಕಾಶ್ ಅನುಮಾನಗೊಂಡು ಪ್ರಶ್ನಿಸಿದ್ದಾನೆ. ಇದರಿಂದ ಕೋಪಗೊಂಡ ರೇಖಾ, ಚಮನ್ ಪ್ರಕಾಶ್ ಗಾಢ ನಿದ್ದೆಯಲ್ಲಿದ್ದಾಗ ಆತನ ಮೇಲೆ ಪೆಟ್ರೋಲ್ ಸುರಿದ್ದು ಬೆಂಕಿಯನ್ನು ಹಚ್ಚಿದ್ದಾಳೆ. ಇದನ್ನೂ ಓದಿ: ಮಸೀದಿ, ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಆರಂಭ!

    POLICE JEEP

    ಘಟನೆ ವೇಳೆ ಶೇ. 80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಚಮನ್ ಪ್ರಕಾಶ್‍ನನ್ನು ನೆರೆಹೊರೆಯವರು ದೆಹಲಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧಿಸಿ ಚಮನ್ ಪ್ರಕಾಶ್‍ನ ಕುಟುಂಬಸ್ಥರು ಪತ್ನಿ ರೇಖಾ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

    Live Tv
    [brid partner=56869869 player=32851 video=960834 autoplay=true]

  • 16 ವರ್ಷದ ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಿದ ದುಷ್ಕರ್ಮಿ

    16 ವರ್ಷದ ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಿದ ದುಷ್ಕರ್ಮಿ

    ಮೈಸೂರು: 16 ವರ್ಷದ ಮಗನ ಮುಂದೆಯೇ ತಂದೆಯನ್ನು ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

    ಸಂಪತ್ ಕುಮಾರ್(60) ಕೊಲೆಯಾದ ದುರ್ದೈವಿ. ಸಂಪತ್ ಕುಮಾರ್ ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವ್ಯಾಪಾರಿಯಾಗಿದ್ದರು. ಇವರ ಪತ್ನಿ ಗಾಯತ್ರಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಗಾಯತ್ರಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ಶಿಕ್ಷಕಿ ಕೊಲೆ ಪ್ರಕರಣ- ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ

    ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಸಂಪತ್ ಅವರನ್ನು ದುಷ್ಕರ್ಮಿ ರಾಡ್‍ನಿಂದ ಹೊಡೆದು ಅವರ 16 ವರ್ಷದ ಮಗನ ಮುಂದೆಯೇ ಹತ್ಯೆ ಮಾಡಿದ್ದಾನೆ. ಮನೆಗೆ ಬಂದು ನೋಡಿದ ಮೇಲೆ ಗಾಯತ್ರಿ ಅವರಿಗೆ ವಿಷಯ ತಿಳಿದಿದ್ದು, ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

    ಪ್ರಸ್ತುತ ಪ್ರಕರಣ ವಿ.ವಿ.ಪುರಂನಲ್ಲಿ ದಾಖಲಾಗಿದೆ. ದುಷ್ಕರ್ಮಿ ಯಾರು, ಯಾವ ಉದ್ದೇಶಕ್ಕೆ ಈ ಕೆಲಸ ಮಾಡಿದ್ದಾನೆ ಎಂಬುದು ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಕೆಂಪು, ಬಿಳಿ, ಹಸಿರು ಎಂದು ಬಾವುಟದ ಬಣ್ಣ ತಪ್ಪಾಗಿ ಹೇಳಿದ ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಗರ್ಲ್‍ಫ್ರೆಂಡ್‍ಗೆ ಗಿಫ್ಟ್ ಕೊಡಲು ಹೆಂಡತಿ ಚಿನ್ನಾಭರಣ ಕದ್ದ ಭೂಪ

    ಗರ್ಲ್‍ಫ್ರೆಂಡ್‍ಗೆ ಗಿಫ್ಟ್ ಕೊಡಲು ಹೆಂಡತಿ ಚಿನ್ನಾಭರಣ ಕದ್ದ ಭೂಪ

    ಚೆನ್ನೈ: 22 ವರ್ಷದ ಗರ್ಲ್ ಫ್ರೆಂಡ್‍ಗೆ ಗಿಫ್ಟ್ ನೀಡಲು 40 ವರ್ಷದ ವ್ಯಕ್ತಿಯೋರ್ವ ತನ್ನ ಹೆಂಡತಿಯ ಆಭರಣವನ್ನೇ ಕದ್ದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

    ಆರೋಪಿಯನ್ನು ಶೇಖರ್ ಎಂದು ಗುರುತಿಸಲಾಗಿದ್ದು, ಈತ ತನ್ನ ಸಹೋದರ ರಾಜೇಶ್ ಕುಟುಂಬ ಮತ್ತು ತಾಯಿಯೊಂದಿಗೆ ಚೆನ್ನೈನ ಪೂನಮಲ್ಲಿ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಎರಡು ವರ್ಷದ ಹಿಂದೆ ಕೌಟುಂಬಿಕ ಕಲಹ ಹಿನ್ನೆಲೆ ಶೇಖರ್‌ನನ್ನು ಪತ್ನಿ ತೊರೆದಿದ್ದರು. ಇದನ್ನೂ ಓದಿ: ಶ್ರೀಲಂಕಾದೊಂದಿಗೆ ತನ್ನ ವಿನಿಮಯಕ್ಕೆ ತೊಂದರೆ ಮಾಡುವುದನ್ನು ನಿಲ್ಲಿಸಿ – ಭಾರತಕ್ಕೆ ಚೀನಾ ಮನವಿ

    ಇತ್ತೀಚೆಗಷ್ಟೇ ಚಿನ್ನಾಭರಣ ವಾಪಸ್ ಪಡೆಯಲು ಮನೆಗೆ ಬಂದಿದ್ದ ವೇಳೆ ಚಿನ್ನಾಭರಣ ಕಾಣೆಯಾಗಿದ್ದನ್ನು ಕಂಡು ಶೇಖರ್ ಪತ್ನಿ ಶಾಕ್ ಆಗಿದ್ದಾರೆ. ನಂತರ ಈ ಕುರಿತಂತೆ ಆಕೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದಾಗ ಶೇಖರ್ ತನ್ನ ಪತ್ನಿಯ 300 ಸಾವರಿನ್ ಚಿನ್ನಾಭರಣ, ತಾಯಿಗೆ ಸೇರಿದ 200 ಸಾವರಿನ್ ಚಿನ್ನಾಭರಣ ಮತ್ತು 50 ಸಾವರಿನ್ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿರುವುದು ಪತ್ತೆಯಾಗಿದೆ.

    ಈ ಎಲ್ಲಾ ಚಿನ್ನಾಭರಣವನ್ನು 22 ವರ್ಷದ ಸ್ವಾತಿ ಎಂಬ ಯುವತಿಗೆ ಶೇಖರ್ ಉಡುಗೊರೆಯಾಗಿ ನೀಡಿದ್ದು, ಆಕೆಯೊಂದಿಗೆ ಸಂಬಂಧ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಶೇಖರ್ ಪ್ರೇಯಸಿಗೆ ಕಾರನ್ನು ಖರೀದಿಸಿ ಕೂಡ ನೀಡಿದ್ದಾರೆ. ಇದೀಗ ಪೊಲೀಸರು ಅದನ್ನು ವಶಪಡಿಸಿಕೊಂಡು, ವ್ಯಕ್ತಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌

    Live Tv
    [brid partner=56869869 player=32851 video=960834 autoplay=true]

    Live Tv
    [brid partner=56869869 player=32851 video=960834 autoplay=true]