Tag: Wife

  • ಪತಿಗೆ ಬೆಟ್ಟಿಂಗ್ ಚಟ- ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆ

    ಪತಿಗೆ ಬೆಟ್ಟಿಂಗ್ ಚಟ- ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆ

    ಹಾಸನ:  ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ದೊಡ್ಡ ಮಂಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ತೇಜಸ್ವಿನಿ(28) ಮೃತ ಮಹಿಳೆ. ನಗರದ ದೊಡ್ಡ ಮಂಡಿಗನಹಳ್ಳಿ ಗ್ರಾಮದಲ್ಲಿ ತೇಜಸ್ವಿನಿ ಎಂಬ ಗೃಹಿಣಿಯ ಶವ ನಿನ್ನೆ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಈಕೆಯ ಪತಿ ಮಧು ಮತ್ತು ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

    ಕ್ರಿಕೆಟ್ ಬೆಟ್ಟಿಂಗ್‍ಗೆ ದಾಸನಾಗಿದ್ದ ಗಂಡ ಮಧು ಲಕ್ಷಾಂತರ ಹಣ ಕಳೆದುಕೊಂಡಿದ್ದ. ಗಂಡನ ಬೆಟ್ಟಿಂಗ್ ಚಟ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿ ಕೊಂದು, ನೇಣು ಹಾಕಿದ್ದಾನೆ ಎಂದು ಮೃತ ತೇಜಸ್ವಿನಿ ಕುಟುಂಬದ ಸದಸ್ಯರು ಆರೋಪ ಮಾಡಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿದ ಹಾಸನ ಎಸ್‍ಪಿ ಹರಿರಾಮ್ ಶಂಕರ್ ಅವರು, ದೊಡ್ಡಮಂಡಿಗನಹಳ್ಳಿಯ ತೇಜಸ್ವಿನಿ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಳ ತಾಯಿ ಬೆಟ್ಟಿಂಗ್‍ನಿಂದ ಹಣ ಕಳೆದುಕೊಂಡ ಗಂಡನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಮಧು, ದುಡಿದ ಹಣವನ್ನು ಅಲ್ಲೇ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಗಳ ಆಗಿ ಕೊಲೆ ಆಗಿದೆ ಎಂದು ಮೃತಳ ಮನೆಯವರು ಆರೋಪಿಸಿದ್ದಾರೆ. ಇದನ್ನೂ ಓದಿ: ಸಮಯ ಸಂದರ್ಭ ಬಂದಾಗ ಏನು ಬೇಕಾದರೂ ಆಗಬಹುದು ಉ.ಕ ಪ್ರತ್ಯೇಕ ರಾಜ್ಯ ಕೂಗಿಗೆ ದನಿಗೂಡಿಸಿದ ಬಿಸಿ.ಪಾಟೀಲ್

    ತೇಜಸ್ವಿನಿ ಮನೆಯವರ ಆರೋಪಗಳನ್ನು ಅಲ್ಲಗಳೆದಿರುವ ಗಂಡನ ಮನೆಯವರು, ತೇಜಸ್ವಿನಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಗಂಡ ಕೆಲಸ ಬಿಡಿಸಿದ್ದ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳುತ್ತಿದ್ದಾರೆ. ಈ ಎಲ್ಲ ಆರೋಪಕ್ಕೆ ಪೋಸ್ಟ್‌ಮಾರ್ಟಂ ವರದಿ ಬಂದ ನಂತರ ಉತ್ತರ ಸಿಗಲಿದೆ ಎಂದು ಎಸ್.ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಬ್ಬರದ ಮಳೆ – ಮನೆಯ ಮೇಲೆ ಮರ ಬಿದ್ದು 6 ಜನರಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಸುಳ್ಳಾದ ಆತ್ಮಹತ್ಯೆ ನಾಟಕ – ಪತಿಗೆ ಮೂಹೂರ್ತ ಇಟ್ಟಿದ್ದ ಪತ್ನಿ, ಪ್ರಿಯಕರ ಅರೆಸ್ಟ್

    ಸುಳ್ಳಾದ ಆತ್ಮಹತ್ಯೆ ನಾಟಕ – ಪತಿಗೆ ಮೂಹೂರ್ತ ಇಟ್ಟಿದ್ದ ಪತ್ನಿ, ಪ್ರಿಯಕರ ಅರೆಸ್ಟ್

    ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿ ಎಂಬ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆಗೈದಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

    ದಾಪಾಪೀರ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಪತ್ನಿ ಮೆಹರ್ ಹಾಗೂ ಪ್ರಿಯಕರ ತೌಸೀಫ್ ಆರೋಪಿಗಳಾಗಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಗಂಜಿಗುಂಟೆ ಗ್ರಾಮದಲ್ಲಿ 2021 ನವೆಂಬರ್ 26 ರಂದು ದಾದಾಪೀರ್ ಮನೆಯಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು. ಹೆಂಡತಿ ಮೆಹರ್ ತನ್ನ ಗಂಡ ಸೀಮೆಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಅಕ್ಕ-ಪಕ್ಕದ ಮನೆಯವರೆನ್ನೆಲ್ಲಾ ಕರೆದು, ಅವರ ಮುಂದೆಯೇ ಬಾಗಿಲು ಒಡೆದು ಹಾಕಿ, ನಾಟಕ ಮಾಡಿ ಆತ್ಮಹತ್ಯೆಯ ಕಥೆ ಕಟ್ಟಿದ್ದಳು. ಇದನ್ನೂ ಓದಿ: ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ – ಮೂವರು ಕಾರ್ಯಕರ್ತರ ಪ್ಯಾಂಟ್‍ಗೆ ತಗುಲಿದ ಬೆಂಕಿ

    ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿದ್ದ ದಿಬ್ಬೂರಹಳ್ಳಿ ಪಿಎಸ್‍ಐ ಪಾಪಾಣ್ಣ ಹಾಗೂ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಎಫ್ ಎಸ್‍ಎಲ್ ವರದಿ ಆಧಾರದ ಮೇಲೆ ಮೃತನ ಪತ್ನಿಯ ನಡೆ ಅನುಮಾನಿಸಿ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬಯಲಾಗಿದೆ. ಹೀಗಾಗಿ ಸದ್ಯ ಪ್ರಿಯಕರ ತೌಸೀಫ್ ಹಾಗೂ ಪತ್ನಿ ಮೆಹರ್ ಅನ್ನು ಶಿಡ್ಲಘಟ್ಟ ವೃತ್ತ ನೀರೀಕ್ಷಕ ಧರ್ಮೇಗೌಡ ನೇತೃತ್ವದಲ್ಲಿ ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿ ಕಿವಿಯಲ್ಲಿ ರಕ್ತ ಬರುವಂತೆ ಹೊಡೆದ – ಶಿಕ್ಷಕನ ವಿರುದ್ಧ ಪೋಷಕರ ಆಕ್ರೋಶ

    ಮೆಹರ್ ಹಾಗೂ ತೌಸೀಫ್ ದಾಪಾಪೀರ್‌ಗೆ ಹಾಲಿನಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿದ್ದರು. ತದನಂತರ ಪ್ರಿಯಕರ ಚಿಕನ್ ಅಂಗಡಿಯಲ್ಲಿ ಕೋಳಿ ಕ್ಲೀನ್ ಮಾಡುವ ಗ್ಯಾಸ್ ಗನ್ ನಿಂದ ಮೃತದೇಹವನ್ನ ಸುಟ್ಟು ಹಾಕಿದ್ದಾನೆ. ನಿದ್ರೆ ಮಾತ್ರೆ ಸೇವಿಸಿದ್ದ ಪರಿಣಾಮ ಅರೆ ಪ್ರಜ್ಞಾವಸ್ಥೆಗೆ ಜಾರಿದ್ದ ಗಂಡ ದಾದಾಪೀರ್ ಮೇಲೆ ಏಳಲಾಗದೇ ಸುಟ್ಟು ಹೋಗಿ ಸಾವನ್ನಪ್ಪಿದ್ದರು. ಅಲ್ಲದೇ ಈ ಪ್ರಕರಣ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Live Tv

  • ಕುಡಿಯಬೇಡಿ ಎಂದ ಪತ್ನಿಯನ್ನೇ ಗುಂಡಿಕ್ಕಿ ಕೊಂದ ವಕೀಲ

    ಕುಡಿಯಬೇಡಿ ಎಂದ ಪತ್ನಿಯನ್ನೇ ಗುಂಡಿಕ್ಕಿ ಕೊಂದ ವಕೀಲ

    ಲಕ್ನೋ: ಮದ್ಯ ಕುಡಿಯಬೇಡಿ ಎಂದು ವಿರೋಧಿಸಿದ್ದಕ್ಕಾಗಿ ಪತ್ನಿಯನ್ನು ವಕೀಲನೊಬ್ಬ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

    ಆರೋಪಿ ಅಶೋಕ್ ಕುಮಾರ್ ಚೌರಾಸಿಯಾ ಪತ್ನಿ ಪುಷ್ಪಾ ಚೌರಾಸಿಯಾಯನ್ನು ಹತ್ಯೆ ಮಾಡಿದ್ದ. ಇವರಿಬ್ಬರು ಲಕ್ನೋದ ಠಾಕುರ್‌ಗಂಜ್ ನಿವಾಸಿ ಆಗಿದ್ದಾರೆ. ಪತಿ ಅಶೋಕ್ ಕುಮಾರ್ ಮದ್ಯದ ಚಟವನ್ನು ಹೊಂದಿದ್ದ. ಇದನ್ನು ಪುಷ್ಪಾ ವಿರೋಧಿಸಿದ್ದಳು. ಈ ಹಿನ್ನೆಲೆಯಲ್ಲಿ ಆಗಾಗ ಇವರಿಬ್ಬರ ಮಧ್ಯೆ ಜಗಳವಾಗುತ್ತಿತ್ತು.

    ಈ ಹಿನ್ನೆಲೆಯಲ್ಲಿ ಕೋಪ ಮಿತಿಮೀರಿದ್ದು, ಕುಡಿದಿದ್ದ ಅಶೋಕ್ ತನ್ನ ಬಂದೂಕಿನಿಂದ ಪುಷ್ಪಾಗೆ ಗುಂಡು ಹಾರಿಸಿದ್ದಾನೆ. ತಕ್ಷಣ ಸ್ಥಳೀಯರು ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹಿರಿಯೂರು ತಾಲೂಕಿನ ಮಲ್ಲೇಣು ಗ್ರಾಮದಲ್ಲಿ ಮತಾಂತರ ಯತ್ನ- ಕ್ರಿಶ್ಚಿಯನ್ ಮಹಿಳೆಗೆ ತರಾಟೆ

    ಘಟನೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ವಕೀಲ ಅಶೋಕ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಯುವಕರು ಖಾಲಿ ಕೂರುವ ಬದಲು ವಡಾ ಪಾವ್, ಮಿರ್ಚಿ ಮಾರಲಿ ಇದರಲ್ಲಿ ತಪ್ಪೇನಿಲ್ಲ ಮೋದಿಯೇ ಚಹಾ ಮಾರಿದ್ದಾರೆ: ತೇಜಸ್ವಿನಿಗೌಡ

    Live Tv

  • ಬೈಡನ್ ಪತ್ನಿ, ಮಗಳು ಸೇರಿದಂತೆ 23 ಅಮೆರಿಕನ್ನರಿಗೆ ನಿಷೇಧ ಹೇರಿದ ರಷ್ಯಾ

    ಬೈಡನ್ ಪತ್ನಿ, ಮಗಳು ಸೇರಿದಂತೆ 23 ಅಮೆರಿಕನ್ನರಿಗೆ ನಿಷೇಧ ಹೇರಿದ ರಷ್ಯಾ

    ಮಾಸ್ಕೋ: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ ಹಾಗೂ ಮಗಳು ಆಶ್ಲೇ ಬ್ಲೇಜರ್ ಬೈಡನ್ ಸೇರಿದಂತೆ 23 ಅಮೆರಿಕನ್ನರಿಗೆ ನಿಷೇಧ ಹೇರಲಾಗಿದೆ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ.

    ರಷ್ಯಾದ ರಾಜಕೀಯ ಹಾಗೂ ಸಾರ್ವಜನಿಕರ ವಿರುದ್ಧ ಅಮೆರಿಕ ನಿರಂತರವಾಗಿ ನಿರ್ಬಂಧಗಳನ್ನು ವಿಧಿಸುತ್ತಿದ್ದು, ಈ ಹಿನ್ನೆಲೆ 25 ಅಮೆರಿಕನ್ನರನ್ನು ಸ್ಟಾಪ್ ಲಿಸ್ಟ್(stop list)ಗೆ ಸೇರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ನೇಪಾಳದಲ್ಲಿ ಪಾನಿಪುರಿ ಮಾರಾಟ ನಿಷೇಧ

    ಮೈನೆನ ಸುಸಾನ್ ಕಾಲಿನ್ಸ್, ಕೆಂಟುಕಿಯ ಮಿಚ್ ಮೆಕ್‌ಕಾನ್ನೆಲ್, ಅಯೋವಾದ ಚಾರ್ಲ್ಸ್ ಗ್ರಾಸ್ಲೆ, ನ್ಯೂಯಾರ್ಕ್ನ ಕರ್ಸ್ಟನ್ ಗಿಲ್ಲಿಬ್ರಾಂಡ್ ಸೇರಿದಂತೆ ಹಲವಾರು ಅಮೆರಿಕದ ಸೆನೆಟರ್‌ಗಳು ಈ ಪಟ್ಟಿಯಲ್ಲಿ ಸೇರಿದ್ದಾರೆ. ಹಲವು ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ಅಮೆರಿಕದ ಮಾಜಿ ಸರ್ಕಾರಿ ಅಧಿಕಾರಿಗಳೂ ಒಳಗೊಂಡಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್

    ಈ ಮೊದಲು ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳು ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಮಿಲಿಟರಿ ಅಧಿಕಾರಿಗಳಿಗೆ ನಿರ್ಬಂಧ ಹೇರಿತ್ತು.

    Live Tv

  • ಅನೈತಿಕ ಸಂಬಂಧ ಶಂಕೆ – ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ!

    ಅನೈತಿಕ ಸಂಬಂಧ ಶಂಕೆ – ಪತ್ನಿಯ ರುಂಡಮುಂಡ ಬೇರೆ ಮಾಡಿದ ಪತಿ!

    ಮೈಸೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪುಟ್ಟಮ್ಮ(40) ಕೊಲೆಯಾದ ಮಹಿಳೆ. ಪತಿ ದೇವರಾಜ್ ಬಂಧನಕ್ಕೆ ವರುಣಾ ಪೊಲೀಸರು ಜಾಲ ಬೀಸಿದ್ದಾರೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ ದೇವರಾಜ್, ನಂತರ ಎರಡನೇ ಮದುವೆಯಾಗಿ ಈಗ ಆಕೆಯನ್ನು ಕೂಡ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ – ಜನರಲ್ಲಿ ಹೆಚ್ಚಿದ ಆತಂಕ

    POLICE JEEP

    ಮೊದಲ ಹೆಂಡತಿಯಿಂದ ದೂರವಾದ ದೇವರಾಜ್, 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನು ಎರಡನೇ ವಿವಾಹವಾಗಿದ್ದ. ಎರಡನೇ ಮದುವೆಯಾದರೂ ಪುಟ್ಟಮ್ಮಳ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ. 20 ವರ್ಷದ ಮಗಳಿದ್ದರೂ ಪತ್ನಿ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ದೇವರಾಜ್ ಕಿರುಕುಳ ಹೆಚ್ಚಾಗಿತ್ತು.

    ಮಗಳು ಪವಿತ್ರ ಕಾಲೇಜಿಗೆ ಹೋಗಿದ್ದ ವೇಳೆ ಇದೇ ವಿಚಾರಕ್ಕೆ ಕ್ಯಾತೆ ತೆಗೆದ ದೇವರಾಜ್ ಪತ್ನಿಯನ್ನು ಭೀಕರವಾಗಿ ಕೊಂದಿದ್ದಾನೆ. ರುಂಡಮುಂಡವನ್ನು ಬೇರ್ಪಡಿಸಿ ಆಕ್ರೋಶ ತೀರಿಸಿಕೊಂಡಿದ್ದಾನೆ. ಇದೀಗ ದೇವರಾಜ್ ವಿರುದ್ಧ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಪತಿಯ ಅಕ್ರಮ ಸಂಬಂಧ- ಮಕ್ಕಳ ಜೊತೆ ಪತ್ನಿ ಆತ್ಮಹತ್ಯೆ

    Live Tv

  • 4ನೇ ಮಹಡಿಯಿಂದ ತಳ್ಳಿ ಪತ್ನಿಯನ್ನೇ ಕೊಂದ ಪತಿ

    4ನೇ ಮಹಡಿಯಿಂದ ತಳ್ಳಿ ಪತ್ನಿಯನ್ನೇ ಕೊಂದ ಪತಿ

    ಲಕ್ನೋ: ಮಹಿಳೆಯೊಬ್ಬಳನ್ನು ಆಕೆಯ ಪತಿ ಹಾಗೂ ನಾಲ್ವರು ಸೇರಿ 4ನೇ ಮಹಡಿಯ ಬಾಲ್ಕನಿಯಿಂದ ತಳ್ಳಿ ಹತ್ಯೆಗೈದಿದ್ದಾರೆ.

    ಮೃತ ಮಹಿಳೆಯನ್ನು ರಿತಿಕಾ ಸಿಂಗ್(30) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ಇದೀಗ ಪೊಲೀಸರು ಆರೋಪಿ ಪತಿ ಆಕಾಶ್ ಗೌತಮ್ ಸೇರಿದಂತೆ ಮೂವರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ

    ವಿಚಾರಣೆ ವೇಳೆ 2014ರಲ್ಲಿ ರಿತಿಕಾ ಸಿಂಗ್, ಫಿರೋಜಾಬಾದ್ ನಿವಾಸಿ ಆಕಾಶ್ ಗೌತಮ್ ಅವರನ್ನು ಮದುವೆಯಾಗಿದ್ದರು. ಆದರೆ 2018ರಲ್ಲಿ ಇಬ್ಬರು ಬೇರ್ಪಟ್ಟಿದ್ದರು. ಪತಿಯಿಂದ ದೂರವಾದ ರಿತಿಕಾ ಸಿಂಗ್ ನಂತರ ಫೇಸ್‍ಬುಕ್‍ನಲ್ಲಿ ಪರಿಚಯವಾಗಿದ್ದ ಸ್ನೇಹಿತ ವಿಪುಲ್ ಅಗರ್‍ವಾಲ್‍ನೊಂದಿಗೆ ತಾಜ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗ್ಲಾ ಮೇವಾಟಿಯ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದಳು ಎಂಬ ವಿಚಾರ ತಿಳಿದುಬಂದಿದೆ ಆಗ್ರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ಸುಧೀರ್ ಕುಮಾರ್ ಸಿಂಗ್ ಹೇಳಿದ್ದಾರೆ.

    ಶುಕ್ರವಾರ ಆಕಾಶ್ ಗೌತಮ್ ಇಬ್ಬರು ಮಹಿಳೆಯರು ಮತ್ತು ಇಬ್ಬರು ವ್ಯಕ್ತಿಗಳೊಂದಿಗೆ ರಿತಿಕಾ ಸಿಂಗ್ ಇದ್ದ ಅಪಾರ್ಟ್‍ಮೆಂಟ್‍ಗೆ ಹೋಗಿ, ಆಕೆಯ ಗೆಳೆಯ ವಿಪುಲ್ ಅಗರವಾಲ್ ಹಾಗೂ ಆಕೆಯೊಂದಿಗೆ ಜೊತೆಗೆ ಜಗಳವಾಡಿ, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸ್ಕೂಲ್ ಡೇಸ್‍ನಿಂದ ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ – ಯುವತಿಗೆ ಗಂಭೀರ ಗಾಯ

    ನಂತರ ವಿಪುಲ್ ಅಗರವಾಲ್ ಹಾಗೂ ರಿತಿಕಾ ಸಿಂಗ್ ಇಬ್ಬರ ಕೈಗಳನ್ನು ಆರೋಪಿಗಳು ಕಟ್ಟಿ ಹಾಕಿ, ಆತನನ್ನು ಬಾತ್‍ರೂಂಗೆ ತಳ್ಳಿ ಲಾಕ್ ಮಾಡಿದ್ದಾರೆ. ಬಳಿಕ ಅಪಾರ್ಟ್‍ಮೆಂಟ್‍ನ ಬಾಲ್ಕನಿಯಿಂದ ರಿತಿಕಾಳನ್ನು ಕೆಳಗೆ ತಳ್ಳಿದ್ದಾರೆ. ಈ ವೇಳೆ ಬಾತ್ ರೂಂ ಕಿಟಕಿಯಿಂದ ನೆರೆಹೊರೆಯವರನ್ನು ಸಹಾಯಕ್ಕಾಗಿ ವಿಪುಲ್ ಅಗರ್‍ವಾಲ್ ಕೂಗಾಡುತ್ತಿರುವುದನ್ನು ಕೇಳಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರೆ ಎಂದು ತಿಳಿಸಿದ್ದಾರೆ.

    ಇದೀಗ ಆಗ್ರಾದ ತಾಜ್‍ಗಂಜ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 302 ಮತ್ತು 34ರ ಅಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ ನಗರ) ವಿಕಾಸ್ ಕುಮಾರ್ ಹೇಳಿದ್ದಾರೆ.

    Live Tv

  • ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್

    ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್

    ಪಾಟ್ನಾ: ಗಂಡನೊಂದಿಗೆ ಬಳೆ ಖರೀದಿಸಲು ಹೋದ ಪತ್ನಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಬಿಹಾರದ ಮುಂಗೇರ್‌ನಲ್ಲಿ ನಡೆದಿದೆ.

    ಜೂನ್ 14ರಂದು ಮುಂಗೇರ್ ನಿವಾಸಿ ರಾಮವಿಲಾಸ್ ಗುಪ್ತಾ ಅವರ ಪುತ್ರ ವಿವೇಕ್ ಪೊದ್ದಾರ್ ಹಾಗೂ ನೌವಾಗರ್ಹಿ ನಿವಾಸಿ ರಾಮ್ವಿಲಾಸ್ ಪೊದ್ದಾರ್ ಅವರ ಪುತ್ರಿ ಮೋನಿ ಕುಮಾರಿ ವಿವಾಹವಾಗಿದ್ದರು. ಹೊಸದಾಗಿ ಮದುವೆಯಾದ ನವದಂಪತಿ ಕುಟುಂಬಸ್ಥರ ಮನೆಗೆ ಭೇಟಿ ನೀಡುತ್ತಿದ್ದರು.

    ಜೂನ್ 22ರಂದು ಸಂಜೆ ಮೋನಿ ಕುಮಾರಿ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಈ ವೇಳೆ ಕಾರ್‌ನಿಂದ ಬಂದ ನವದಂಪತಿಗೆ ಅಡ್ಡಹಾಕಿ ಪತಿ ವಿವೇಕ್‍ಗೆ ಗನ್ ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಮತ್ತೊಂದೆಡೆ ಮೋನಿ ಕುಮಾರಿಯನ್ನು ಕಾರ್ ಒಳಗೆ ಹತ್ತಿಸಿಕೊಂಡು ಪರಾರಿಯಾಗಿದ್ದಾರೆ. ನಂತರ ಗಾಬರಿಗೊಂಡ ಪತಿ ವಿವೇಕ್ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಇದು ಮಂಗಗಳ ನೃತ್ಯ – ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಓವೈಸಿ ವ್ಯಂಗ್ಯ

    ಇದಾದ ಬಳಿಕ ಮನೆಗೆ ಬಂದು ನೋಡಿದರೆ, ಮನೆಯಲ್ಲಿದ್ದ ಒಡವೆ ಯಾವುದೇ ಕಾಣಲಿಲ್ಲ. ಅಲ್ಲದೇ ಮೋನಿಗೆ ಬೇಕಾದ ವಸ್ತುಗಳು ಕೂಡ ರೂಮ್‍ನಲ್ಲಿ ಇರಲಿಲ್ಲ. ಈ ಬಗ್ಗೆ ಅನುಮಾನಗೊಂಡ ವಿವೇಕ್ ಪೊಲೀಸರಿಗೆ ತಿಳಿಸಿದ್ದಾರೆ. ಮೋನಿ ಮೊಬೈಲ್ ಪರಿಶೀಲನೆ ನಡೆಸಿದ ವಿವೇಕ್‍ಗೆ ವ್ಯಕ್ತಿಯೋರ್ವ ಪದೇ, ಪದೇ ಕರೆ ಮಾಡಿರುವ ವಿಚಾರ ತಿಳಿದುಬಂದಿದೆ.

    ಕೂಡಲೇ ತನಿಖೆ ಆರಂಭಿಸಿದ ಪೊಲೀಸರು ಮೋನಿ ಕುಮಾರಿ ಹಾಗೂ ಆಕೆಯ ಪ್ರಿಯಕರ ದಿವ್ಯಾಂಶು ಕುಮಾರ್ ಫೋನ್ ಟ್ರ್ಯಾಕ್ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮೋನಿ ಕುಮಾರಿ ಹಾಗೂ ದಿವ್ಯಾಂಶು ಕುಮಾರ್ ಇಬ್ಬರು ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರು ನಿರಾಕರಿಸಿದ್ದರಿಂದ ಮದುವೆಯಾದ ಬಳಿಕ ಓಡಿ ಹೋಗಲು ಮೋನಿ ಕುಮಾರಿ ಪ್ಲ್ಯಾನ್ ಮಾಡಿದ್ದಾಳೆ.

    ಜೂನ್ 22ರಂದು ಮೋನಿ ಕುಮಾರಿ ಪ್ರಿಯಕರ ದಿವ್ಯಾಂಶು ಕುಮಾರ್‌ಗೆ ತನ್ನನ್ನು ಕಿಡ್ನಾಪ್ ಮಾಡುವಂತೆ ತಿಳಿಸಿದ್ದಳು. ಅದರಂತೆ ದಿವ್ಯಾಂಶು ಕುಮಾರ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬಂದು ಮೋನಿಯನ್ನು ಅಪಹರಿಸಿದ್ದಾನೆ. ಎಲ್ಲವೂ ಮೋನಿ ಪ್ಲ್ಯಾನ್ ಪ್ರಕಾರವೇ ಮಾಡಿರುವುದಾಗಿ ದಿವ್ಯಾಂಶು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಇದೀಗ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವುದಾಗಿ ಎಸ್‍ಎಚ್‍ಒ ಧೀರೇಂದ್ರ ಕುಮಾರ್ ಪಾಂಡೆ ತಿಳಿಸಿದ್ದಾರೆ.  ಇದನ್ನೂ ಓದಿ: ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಒಟ್ಟಾರೆ ಮದುವೆ ಬಗ್ಗೆ ಸಾಕಷ್ಟು ಆಸೆ ಕನಸು ಇಟ್ಟುಕೊಂಡಿದ್ದ ಪತಿ ವಿವೇಕ್‍ಗೆ ಹೆಂಡತಿಯ ಕಥೆ ಕೇಳಿ ದಿಕ್ಕು ದೋಚದಂತೆ ಆಗಿದೆ.

    Live Tv

  • ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್

    ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್

    ತಲ್ಲಹಸ್ಸೀ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿ ಕೊಂದು ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ವಿಚಿತ್ರ ಘಟನೆ ಫ್ಲೋರಿಡಾದಲ್ಲಿ ನಡೆದಿದೆ.

    ಅಲ್ಟಾಮೊಂಟೆ ಸ್ಪ್ರಿಂಗ್ಸ್ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಕರೆ ಬಂದಿದ್ದು, ನಂತರ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಪಾಗಲ್ ಪತಿಯು ಪತ್ನಿಯ ಕತ್ತು ಸೀಳಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Man Kills Wife, Holds Hand And Plays Her Favourite Song After: Report

    ನಡೆದಿದ್ದೇನು?
    ಕ್ಸಿಚೆನ್ ಯಾಂಗ್(21) ಆರೋಪಿ. ಯಾಂಗ್‍ನ ಪತ್ನಿ ಆತನ ಪಾಸ್‍ಪೋರ್ಟ್ ಸುಟ್ಟು ಹಾಕಿದ್ದಾಳೆ. ಇದರಿಂದ ಯಂಗ್ ಅವರ ಬಾಸ್‍ನಿಂದ ಚೆನ್ನಾಗಿ ಬೈಯಿಸಿಕೊಂಡಿದ್ದಾನೆ. ಇದರಿಂದ ಕೋಪಗೊಂಡ ಆತ ಸಿಟ್ಟಿನಿಂದ ಪತ್ನಿಯನ್ನು ಬಾತ್‍ರೂಮ್‌ನಲ್ಲಿ ಗಂಟಲು ಕಟ್ ಮಾಡಿ ಸಾಯಿಸಿದ್ದಾನೆ. ಈ ವೇಳೆ ಆಕೆ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಕ್ಕೆ ಬಾತ್‍ರೂಂ ಟಾಬ್‍ಗೆ ಮುಳುಗಿಸಿದ್ದಾನೆ.

    ನಂತರ ಆಕೆಯ ಕೈ ಹಿಡಿದುಕೊಂಡು ಅವಳಿಗೆ ಇಷ್ಟವಾದ ಹಾಡನ್ನು ನುಡಿಸುತ್ತಿದ್ದ. ಇತ್ತ ಯಂಗ್‍ನ ಬಾಸ್ ಪೊಲೀಸರಿಗೆ, ಯಂಗ್ ಕೆಲಸಕ್ಕೆ ಬರುತ್ತಿಲ್ಲ ಎಂದು ದೂರು ನೀಡಿದ್ದಾರೆ. ನಂತರ ಪೊಲೀಸರು ಯಾಂಗ್ ಅಪಾರ್ಟ್‍ಮೆಂಟ್‍ಗೆ ಹೋಗಿದ್ದು, ದೃಶ್ಯ ನೋಡಿ ಶಾಕ್ ಆಗಿದ್ದಾರೆ.

    ಪೊಲೀಸರು ಯಂಗ್ ಮನೆಗೆ ಪ್ರವೇಶ ಮಾಡುತ್ತಿದ್ದಂತೆ ಬಾತ್‍ರೂಮ್‌ನಲ್ಲಿ ರಕ್ತದ ಮಡುವಿನ ಯಾಂಗ್‌ನ ಪತ್ನಿಯನ್ನು ನೋಡಿ ಶಾಕ್ ಆಗಿದ್ದಾರೆ. ಈ ಕುರಿತು ವಿಚಾರಣೆ ಮಾಡಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv

  • ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್ ಕೊಟ್ಟ ಪತಿಗೆ ಥಳಿಸಿದ್ದ 12 ಮಂದಿ ವಿರುದ್ಧ FIR

    ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್ ಕೊಟ್ಟ ಪತಿಗೆ ಥಳಿಸಿದ್ದ 12 ಮಂದಿ ವಿರುದ್ಧ FIR

    ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಸ್ನಾನ ಮಾಡುವ ವೇಳೆ ಪತ್ನಿಗೆ ಮುತ್ತು ಕೊಟ್ಟಿದ್ದ ಪತಿಯನ್ನು ಸಾರ್ವಜನಿಕರು ನಿಂದಿಸಿ ಹಿಗ್ಗಾಮುಗ್ಗಾ ಥಳಿಸಿದ್ದರು. ಈ ವೀಡಿಯೋ ವೈರಲ್ ಆದ ಒಂದು ದಿನದ ಬಳಿಕ ವ್ಯಕ್ತಿ ಮೇಲೆ ಹಲ್ಲೆಗೈದಿದ್ದದವರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ವೈರಲ್ ಆದ ವೀಡಿಯೋದಲ್ಲಿ ವ್ಯಕ್ತಿಯನ್ನು ಆತನ ಹೆಂಡತಿಯಿಂದ ಸುತ್ತಮುತ್ತಲಿನ ಜನ ಥಳಿಸುತ್ತಿದ್ದರೆ, ಪತಿಯನ್ನು ರಕ್ಷಿಸಲು ಪತ್ನಿ ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಅಯೋಧ್ಯೆಯಲ್ಲಿ ಇಂತಹ ಅಸಹ್ಯವನ್ನು ಸಹಿಸುವುದಿಲ್ಲ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ. ಈ ವೀಡಿಯೋ ವೈರಲ್ ಆದ ಬಳಿಕ ಅಯೋಧ್ಯೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆ),323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಅಡಿಯಲ್ಲಿ 10 ರಿಂದ 12 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೀಡಿಯೋ ಗಮನಕ್ಕೆ ಬಂದ ನಂತರ ನಾವು ಆರೋಪಿಗಳು ಹಾಗೂ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್‌ ಮಾಡಿದ ಪತಿಯನ್ನೇ ಥಳಿಸಿದ ಸಾರ್ವಜನಿಕರು… Video Viral

    ‘ಸರಯೂ’ ಗಂಗೆಯ ಏಳು ಉಪನದಿಗಳಲ್ಲಿ ಒಂದಾಗಿದೆ. ಇದನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯು ಸರಯೂ ನದಿಯ ದಡದಲ್ಲಿದೆ. ಇದನ್ನೂ ಓದಿ: ಜೆಪಿ ನಡ್ಡಾ ನಿವಾಸಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಬಂಧನ

    Live Tv

  • ಅನೈತಿಕ ಸಂಬಂಧ ಶಂಕೆ – ಪತ್ನಿ, ಮಗನ ಮೇಲೆ ವ್ಯಕ್ತಿಯಿಂದ ಆ್ಯಸಿಡ್ ದಾಳಿ

    ಅನೈತಿಕ ಸಂಬಂಧ ಶಂಕೆ – ಪತ್ನಿ, ಮಗನ ಮೇಲೆ ವ್ಯಕ್ತಿಯಿಂದ ಆ್ಯಸಿಡ್ ದಾಳಿ

    ಮುಂಬೈ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಮೂರು ವರ್ಷದ ಮಗನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    ನಿರುದ್ಯೋಗಿಯಾಗಿದ್ದ ವ್ಯಕ್ತಿ, ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ತನ್ನ ಹೆಂಡತಿ ಕೆಲಸದ ಸ್ಥಳದಲ್ಲಿ ಯಾರೊಂದಿಗೋ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಹೊಂದಿದ್ದನು. ಹೀಗಾಗಿ ತನ್ನ ಪತ್ನಿ ಹಾಗೂ ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಈ ವೇಳೆ ನೆರೆಹೊರೆಯವರು ದಾವಿಸಿ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಮತ್ತು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ: ಸತೀಶ್ ಜಾರಕಿಹೊಳಿ

    ಸದ್ಯ ಮಹಿಳೆ ಸ್ಥಿತಿ ಸ್ಥಿರವಾಗಿದ್ದು, ಆಕೆಯ ಮುಖ ಮತ್ತು ಎದೆಗೆ ಗಂಭೀರ ಗಾಯಗಳಾಗಿದೆ ಮತ್ತು ಮಗುವಿನ ತುಟಿಗೆ ಸುಟ್ಟಗಾಯಗಳಿವೆ. ದಂಪತಿ ಆಗಾಗ ಜಗಳವಾಡುತ್ತಿದ್ದರು. ಹೀಗಾಗಿ ಎರಡು ವರ್ಷಗಳಿಂದ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಮಹಿಳೆ ಕೆಲಸಕ್ಕೆ ಹೋಗುವ ಮುನ್ನ ತನ್ನ ಮಗನನ್ನು ತಾಯಿಯ ಮನೆಗೆ ಬಿಡುತ್ತಿದ್ದಳು. ಇದನ್ನೂ ಓದಿ:  ಮರಾಠಿ ಬೋರ್ಡ್ ಹಾಕಿ ಇಲ್ಲದಿದ್ದರೆ ಕನ್ನಡ ನಾಮಫಲಕ ಇರಲ್ಲ ಎಂದು MES ಪುಂಡಾಟ – ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು

    Live Tv