Tag: Wife

  • ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಜೈಪುರ: ಕೌಟುಂಬಿಕ ಹಿಂಸಾಚಾರದ ಆಘಾತಕಾರಿ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹೊರಹೊಮ್ಮಿದ್ದು, ಮಹಿಳೆಯೊಬ್ಬಳು ಮಗನ ಮುಂದೆಯೇ ಕ್ರಿಕೆಟ್ ಬ್ಯಾಟ್‍ನಿಂದ ಪತಿಯನ್ನು ಥಳಿಸಿದ್ದಾಳೆ. ಈ ಹಿನ್ನೆಲೆ ಪತಿಯೂ ತನ್ನ ರಕ್ಷಣೆ ಮಾಡಿ ಎಂದು ನ್ಯಾಯಾಲಯಕ್ಕೆ ಮೊರೆ ಹೋಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.

    ತೊಂದರೆಗೀಡಾದ ಪತಿಯೂ ಶಾಲೆಯ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಇವರು ಪೊಲೀಸರಿಗೆ ದೂರನ್ನು ಕೊಟ್ಟಿದ್ದು, ನನ್ನ ಪತ್ನಿಯೂ ನನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ. ಈ ಹಿನ್ನೆಲೆ ನನಗೆ ರಕ್ಷಣೆ ಕೊಡಿ ಎಂದು ಪ್ರಾಂಶುಪಾಲರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪಗೆ ಕೊಟ್ಟು ಗೊತ್ತೇ ಹೊರತು ಬೇಡಿ ಪಡೆದು ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ 

    ಪತಿಯು ದೂರಿನಲ್ಲಿ, ಪತ್ನಿ ನನ್ನ ಮೇಲೆ ಪ್ಯಾನ್, ಸ್ಟಿಕ್ ಮತ್ತು ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ನಡೆಸುತ್ತಿದ್ದಾಳೆ. ಇದರಿಂದ ಗಾಬರಿಗೊಂಡ ನಾನು ಸಾಕ್ಷ್ಯ ಸಂಗ್ರಹಿಸಲು ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದೆ ಎಂದು ತಿಳಿಸಿದ್ದಾರೆ. ಪತ್ನಿ ಹಲ್ಲೆ ಮಾಡುತ್ತಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದ್ದು, ವೈರಲ್ ಆಗಿದೆ.

    ವೀಡಿಯೋದಲ್ಲಿ ಏನಿದೆ?
    ಪತ್ನಿಯೂ ತಮ್ಮ ಮಗ ಮುಂದೆಯೇ ಕ್ರಿಕೆಟ್ ಬ್ಯಾಟ್ ಹಿಡಿದು ಪತಿಗೆ ಕ್ರಿಕೆಟ್ ಬ್ಯಾಟ್‍ನಿಂದ ಹೊಡೆಯುತ್ತಿರುವುದನ್ನು ಕಾಣಬಹುದು. ಈ ಹಿನ್ನೆಲೆ ಪತಿಯೂ ರಕ್ಷಣೆಗಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ಘಟನೆಯ ದೃಶ್ಯಾವಳಿಗಳನ್ನು ಹಾಜರುಪಡಿಸಿದ್ದಾರೆ. ಅವರಿಗೆ ಭದ್ರತೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ನಡೆದಿದ್ದೇನು?
    ಪ್ರಾಂಶುಪಾಲರಾದ ಅಜಿತ್ ಸಿಂಗ್ ಯಾದವ್ ಅವರು ಏಳು ವರ್ಷಗಳ ಹಿಂದೆ ಹರಿಯಾಣದ ಸೋನಿಪತ್ ನಿವಾಸಿ ಸುಮನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ, ಅವರ ಜೀವನವು ಚೆನ್ನಾಗಿತ್ತು. ಆದರೆ ಸ್ವಲ್ಪ ಸಮಯದ ನಂತರ ಸುಮನ್ ಅವರು ಅಜಿತ್ ಅವರಿಗೆ ಹೊಡೆಯುವುದನ್ನು ಪ್ರಾರಂಭಿಸಿದರು. ಆಗಾಗ್ಗೆ ಪತ್ನಿ ನೀಡುತ್ತಿದ್ದ ಹಿಂಸೆಯಿಂದ ಅಜಿತ್‍ಗೆ ಹಲವು ಗಾಯವಾಗಿದೆ. ಅವುಗಳನ್ನು ಗುಣಪಡಿಸಲು ಅವರು ವೈದ್ಯಕೀಯ ಸಹಾಯವನ್ನು ಪಡೆಯುತ್ತಿದ್ದರು ಎಂದು ಅವರೇ ತಿಳಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿದ್ದರೆ, ಈ ದೇವಸ್ಥಾನಕ್ಕೆ ಭೇಟಿ ಪಕ್ಕಾ 

    ಯಾವುದೇ ರೀತಿಯ ಸಾಕ್ಷ್ಯಿಗಳು ಇಲ್ಲದ ಹಿನ್ನೆಲೆ ಅಜಿತ್ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕ್ಯಾಮೆರಾ ಇಟ್ಟಿದ್ದಾರೆ. ನಂತರ ಸುಮನ್ ಬ್ಯಾಟ್‍ನಲ್ಲಿ ಹೊಡೆಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಹೆಂಡತಿ ಮಿತಿಗಳನ್ನು ಮೀರಿದ್ದರಿಂದ ನಾನು ನ್ಯಾಯಾಲಯದ ಆಶ್ರಯ ಪಡೆದಿದ್ದೇನೆ. ಸೋದರ ಮಾವ ಸಹ ನನ್ನ ಪತ್ನಿಯನ್ನು ಹಿಂಸೆಗೆ ಪ್ರೇರೇಪಿಸುತ್ತಾನೆ ಎಂದು ಆರೋಪಿಸಿದರು.

  • ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಕಟುಕ ಪತಿ!

    ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಕಟುಕ ಪತಿ!

    ಕಾರವಾರ: ಕಟುಕ ಪತಿ ಮಹಾಶಯನೊಬ್ಬ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಕಾರವಾರದಲ್ಲಿ ನಡೆದಿದೆ.

    ಮಂಜುಳಾ ಚನ್ನಯ್ಯ (46) ಕೊಲೆಯಾದ ದುರ್ದೈವಿ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗೋಡ್ಮನೆಯಲ್ಲಿ ನಡೆದಿದೆ. ದಾಂಪತ್ಯ ಕಲಹದಿಂದ ಪತಿ ಮಂಜುನಾಥ ಚನ್ನಯ್ಯ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು

    ಇಬ್ಬರ ಸಂಸಾರದಲ್ಲಿ ಕಲಹ ಉಂಟಾಗಿದ್ದು, ಈ ವೇಳೆ ಸಿಟ್ಟುಗೊಂಡ ಪತಿ, ಮಂಜುಳಾಳನ್ನು ಮಚ್ಚಿನಿಂದ ಕೊಚ್ಚಿದ್ದಾನೆ. ಆಕೆ ಮೃತಪಟ್ಟ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸದ್ಯ ಪರಾರಿಯಾದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

     

  • ಪತ್ನಿಗೆ ಸೀರೆ ಉಡಲು ಬರಲ್ಲವೆಂದು ಮನನೊಂದು ಪತಿ ಆತ್ಮಹತ್ಯೆ

    ಪತ್ನಿಗೆ ಸೀರೆ ಉಡಲು ಬರಲ್ಲವೆಂದು ಮನನೊಂದು ಪತಿ ಆತ್ಮಹತ್ಯೆ

    ಮುಂಬೈ: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ ಎಂದು ಅಸಮಾಧಾನಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಗರದಲ್ಲಿ ನಡೆದಿದೆ.

    ಮುಕುಂದನಗರದ ನಿವಾಸಿ ಸಮಾಧಾನ್ ಸಾಬಲ್(34) ಮೃತ ವ್ಯಕ್ತಿ. ಸಾಬಲ್ 6 ತಿಂಗಳ ಹಿಂದೆ ಅವನಿಗಿಂತ 6 ವರ್ಷ ದೊಡ್ಡವಳನ್ನು ಮದುವೆಯಾಗಿದ್ದ. ಆದರೆ ಈ ಮದುವೆಯಿಂದ ಆತ ಖುಷಿಯಾಗಿರಲಿಲ್ಲ.

    MARRIAGE

    ಸಾಬಲ್ ಪತ್ನಿಯ ಮೇಲೆ ಅಸಮಾಧಾನಗೊಂಡಿದ್ದನು. ಪತ್ನಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ. ಇದರ ಜೊತೆಗೆ ಸರಿಯಾಗಿ ನಡೆಯಲು ಮತ್ತು ಮಾತನಾಡಲು ಬರುವುದಿಲ್ಲ ಎಂದು ಮನನೊಂದಿದ್ದನು. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ. ಇದನ್ನೂ ಓದಿ: ಇಂದು ಭಗತ್ ಸಿಂಗ್, ನಾಳೆ ಗಾಂಧಿಯವರ ಪಾಠ ತೆಗೆಯಬಹುದು: ಡಿಕೆಶಿ

    POLICE JEEP

    ಸಾಬಾಲ್ ಮೃತ ದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದ ಕೊಠಡಿಯಲ್ಲಿ ಡೆತ್‍ನೋಟ್ ಪತ್ತೆಯಾಗಿದೆ. ಅದನ್ನು ಮುಕುಂದವಾಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಬಂಪರ್: ಒಂದೇ ಬಾರಿಗೆ ಸಂಬಳ ಡಬಲ್

  • ಪತ್ನಿ ಜೊತೆ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಡಿಕೆಶಿ

    ಪತ್ನಿ ಜೊತೆ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಡಿಕೆಶಿ

    ಬೆಂಗಳೂರು: ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

    ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಡಿಕೆ ಶಿವಕುಮಾರ್ ಈ ತಿಂಗಳಿನಲ್ಲಿ ತೀರ್ಥಯಾತ್ರೆ ಕೈಗೊಂಡಿದ್ದಾರೆ. ಮೇ 13, 14, 15 ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತಕರ ಸಭೆಯಲ್ಲಿ ಡಿಕೆಶಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಪಕ್ಷದ ಕಾರ್ಯಕ್ರಮ ಮುಗಿದ ಬಳಿಕ ಡಿಕೆಶಿ ಉತ್ತರಾಖಂಡದಲ್ಲಿರುವ ಪವಿತ್ರ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಬದರೀನಾಥ, ಹರಿದ್ವಾರಕ್ಕೆ ಡಿಕೆ ಶಿವಕುಮಾರ್ ತೆರಳಲಿದ್ದು, ಎರಡು ದಿನ ಪ್ರವಾಸ ಕೈಗೊಂಡ ಬಳಿಕ ಅವರು ಕರ್ನಾಟಕಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

  • ಕರಿಯಲ್ಲಿ ಖಾರ ಹೆಚ್ಚಾಗಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ

    ಕರಿಯಲ್ಲಿ ಖಾರ ಹೆಚ್ಚಾಗಿದ್ದಕ್ಕೆ ಪತ್ನಿಯ ತಲೆ ಬೋಳಿಸಿದ

    ಗಾಂಧಿನಗರ: ಕರಿಯಲ್ಲಿ ಉಪ್ಪು, ಖಾರ ಹೆಚ್ಚಾಗಿದೆ ಎಂದು ಗುಜರಾತ್‍ನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ತಲೆ ಬೋಳಿಸಿದ ವಿಚಿತ್ರ ಘಟನೆ ಗುಜರಾತ್‍ನಲ್ಲಿ ನಡೆದಿದೆ.

    ಉಪ್ಪು ಹೆಚ್ಚಾಗಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಗುಜರಾತ್‍ನಲ್ಲಿ ವ್ಯಕ್ತಿಯೊಬ್ಬ ತನ್ನ 28 ವರ್ಷದ ಪತ್ನಿಯ ತಲೆ ಬೋಳಿಸಿ, ಹಲ್ಲೆ ಮಾಡಿದ್ದಾನೆ. ಈ ಹಿನ್ನೆಲೆ ಕೋಪಗೊಂಡ ಪತ್ನಿ, ಪತಿ ವಿರುದ್ಧ ವತ್ವಾ ಪೊಲೀಸರಿಗೆ ದೂರು ಕೊಟ್ಟಿದ್ದಾಳೆ. ಇದನ್ನೂ ಓದಿ: ತನ್ನ ಪುಟ್ಟ ಮಗುವಿನೊಂದಿಗೆ ಪತ್ನಿಗಾಗಿ ಅಲೆದಾಡುತ್ತಿರುವ ಪತಿ 

    ನಡೆದಿದ್ದೇನು?
    ಪತ್ನಿ ರಿಜ್ವಾನಾ ಪತಿ ವಿರುದ್ಧ ದೂರು ಕೊಟ್ಟಿದ್ದು, 8 ವರ್ಷಗಳ ಹಿಂದೆ ನಾನು ಮತ್ತು ನನ್ನ ಪತಿ ಇಮ್ರಾನ್ ಮದುವೆಯಾಗಿದ್ದೇವೆ. ಅವನು ಕೂಲಿ ಕೆಲಸ ಮಾಡುತ್ತಿದ್ದಾನೆ. ಮೇ 8 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಮ್ರಾನ್ ಊಟಕ್ಕೆ ಮನೆಗೆ ಬಂದಿದ್ದ. ನಾನು ಅವನಿಗೆ ಚಪಾತಿ ಮತ್ತು ಕರಿ ಕೊಟ್ಟೆ. ಅವನು ಊಟವನ್ನು ಇಷ್ಟಪಡಲಿಲ್ಲ. ಆಹಾರಕ್ಕೆ ಹೆಚ್ಚು ಉಪ್ಪು, ಖಾರ ಸೇರಿಸಿದ್ದಕ್ಕಾಗಿ ನನ್ನನ್ನು ನಿಂದಿಸಲು ಪ್ರಾರಂಭಿಸಿದನು. ಬೇರೆ ಏನಾದ್ರೂ ಮಾಡ್ತೀನಿ ಅಂತ ಹೇಳಿದರೂ ಆತ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಲೇ ಇದ್ದ.

    ರೇಜರ್ ತೆಗೆದುಕೊಂಡ
    ಈ ಕ್ಷುಲ್ಲಕ ಕಾರಣಕ್ಕೆ ಇಮ್ರಾನ್ ಒಂದು ಕೋಲು ತೆಗೆದುಕೊಂಡು ನನಗೆ ಹೊಡೆಯಲು ಪ್ರಾರಂಭಿಸಿದನು. ಆದರೆ ನಾನು ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕಿದೆ. ಅವನು ಸುತ್ತಲೂ ನೋಡಿ ರೇಜರ್ ತೆಗೆದುಕೊಂಡ. ಇದು ಏಕೆ ಎಂದು ನಾನು ಅರ್ಥಮಾಡಿಕೊಳ್ಳುವ ಮೊದಲೇ ಅವನು ನನ್ನನ್ನು ಬಲವಂತವಾಗಿ ಹಿಡಿದುಕೊಂಡು ನನ್ನ ಕೂದಲನ್ನು ಬೋಳಿಸಲು ಪ್ರಾರಂಭಿಸಿದನು. ಇದನ್ನೂ ಓದಿ:  ಕ್ಷುಲ್ಲಕ ಕಾರಣಕ್ಕೆ ಜಗಳ ಅರಣ್ಯ ರಕ್ಷಕನ ಕೈ ತುಂಡು

    ಭಯಗೊಂಡಿದ್ದೆ
    ನನ್ನ ಸಂಪೂರ್ಣ ತಲೆ ಬೋಳಿಸಿದ ನಂತರವೇ ಇಮ್ರಾನ್ ನನ್ನನ್ನು ಬಿಟ್ಟ ಎಂದು ನೊಂದುಕೊಂಡು ಹೇಳಿದಳು. ನಾನು ಕಿರುಚಾಡಿದ್ದಾರಿಂದ ನೆರೆಹೊರೆಯವರು ಓಡಿ ಬಂದರು. ಅವರೇ ನನ್ನನ್ನು ಬಿಡಿಸಿ ಪೊಲೀಸರ ಬಳಿಗೆ ಹೋಗುವಂತೆ ಸೂಚಿಸಿದರು. ಆದರೆ ನಾನು ಆ ಸಮಯದಲ್ಲಿ ತುಂಬಾ ಭಯಗೊಂಡಿದ್ದೆ, ಆಘಾತಕ್ಕೊಳಗಾಗಿದ್ದೆ. ಪರಿಣಾಮ ಘಟನೆ ನಡೆದ ಮೂರು ದಿನಗಳ ಬಳಿಕ ದೂರು ಕೊಡುತ್ತಿದ್ದೇನೆ ಎಂದು ದೂರಿನಲ್ಲಿ ವಿವರಿಸಿದ್ದಾಳೆ.

    ಪ್ರಸ್ತುತ ಪೊಲೀಸರು ಇಮ್ರಾನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕುತ್ತಿದ್ದಾರೆ.

  • ತನ್ನ ಪುಟ್ಟ ಮಗುವಿನೊಂದಿಗೆ ಪತ್ನಿಗಾಗಿ ಅಲೆದಾಡುತ್ತಿರುವ ಪತಿ

    ತನ್ನ ಪುಟ್ಟ ಮಗುವಿನೊಂದಿಗೆ ಪತ್ನಿಗಾಗಿ ಅಲೆದಾಡುತ್ತಿರುವ ಪತಿ

    ಹಾಸನ: ಕಾಣೆಯಾದ ಪತ್ನಿಗಾಗಿ ತನ್ನ ಪುಟ್ಟ ಮಗುವಿನೊಂದಿಗೆ ಪತಿ ಅಲೆದಾಡುತ್ತಿರುವ ಘಟನೆ ಹಾಸನದಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ, ಅವಲಹಳ್ಳಿ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್ ಆಗಿದ್ದ ಪತ್ನಿ ರುದ್ರಾಂಬಿಕೆ ಒಂದೂವರೆ ವರ್ಷದಿಂದ ಪತಿ ಮಂಜುನಾಥ್ ಮತ್ತು ಪುಟ್ಟ ಮಗುವನ್ನು ಬಿಟ್ಟು ಹೋಗಿದ್ದಾಳೆ. ಈ ಹಿನ್ನೆಲೆ ಮಂಜುನಾಥ್‍ಗೆ ರುದ್ರಾಂಬಿಕೆ ಹಾಸನದಲ್ಲಿ ಬೇರೆಯವರ ಜೊತೆ ಸಂಸಾರ ಮಾಡುತ್ತಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿ ಪ್ರವಾಸ ಕೈಗೊಂಡಿರುವ ನಿರ್ಮಲಾ ಸೀತಾರಾಮನ್

    ಮಾಹಿತಿ ತಿಳಿದ ತಕ್ಷಣ ಮಂಜುನಾಥ್ ತನ್ನ ಕುಟುಂಬದ ಸದಸ್ಯರೊಂದಿಗೆ ಮನೆ ಬಳಿ ಹೋಗಿದ್ದಾನೆ. ಹಾಸನದಲ್ಲಿರುವ ಮನೆ ಒಳಗೆ ಯಾವುದು  ಕುಟುಂಬ ಇರುವುದನ್ನು ಗಮನಿಸಿ ಹೊರಗಿನಿಂದ ಬಾಗಿಲು ಬಂದ್ ಮಾಡಿ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಮನೆಯ ಒಳಗೆ ಹೋಗಿ ಪರಿಶೀಲನೆ ಮಾಡಿದ್ದಾರೆ.

    ಈ ವೇಳೆ ಮನೆಯಲ್ಲಿ ಬೇರೆಯವರು ವಾಸಿಸುತ್ತಿರುವುದು ಪತ್ತೆಯಾಗಿದೆ. ಇದರಿಂದ ಅಸಹಾಯಕತೆ ಹೊರಹಾಕಿದ ಮಂಜುನಾಥ್, 15 ಲಕ್ಷ ರೂ. ಸಾಲ ಮಾಡಿ ನನ್ನ ಪತ್ನಿ ರುದ್ರಾಂಬಿಕೆ ಪರಾರಿಯಾಗಿದ್ದಾಳೆ. ಯಾರ ಕೈಗೂ ಸಿಗದೆ ಪತ್ನಿ ಮತ್ತೆ ಇನ್ನೊಬ್ಬರ ಜೊತೆ ಸಂಸಾರ ನಡೆಸುತ್ತಿದ್ದಾಳೆ ಎಂದು ಆರೋಪಿಸಿದ್ದಾನೆ.

    POLICE JEEP

    ಏನಿದು ಘಟನೆ?
    ಬೆಂಗಳೂರು ಮೂಲದ ರುದ್ರಾಂಬಿಕೆ ಹಾಗೂ ಕೋಲಾರ ಮೂಲದ ಮಂಜುನಾಥ್ ಎಂಟು ವರ್ಷದ ಹಿಂದೆ ಮದುವೆಯಾಗಿದ್ದರು. ರುದ್ರಾಂಬಿಕ, ಮಂಜುನಾಥ್ ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಮಂಜುನಾಥ್ ವಿರುದ್ಧ ರುದ್ರಾಂಬಿಕ ದೌರ್ಜನ್ಯ ಆರೋಪದಲ್ಲಿ ಹಲವು ಕೇಸ್ ದಾಖಲಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಈಗ ಮಂಜುನಾಥ್ ಹಾಸನದ ಉದಯಗಿರಿ ಬಡಾವಣೆಯಲ್ಲಿ ಪತ್ನಿಯನ್ನು ಹುಡುಕಿಕೊಂಡು ಹೈಡ್ರಾಮಾ ಮಾಡುತ್ತಿದ್ದಾನೆ.

    ಪ್ರಸ್ತುತ ಪೊಲೀಸರು ಮಂಜುನಾಥ್‍ನನ್ನು ವಶಕ್ಕೆ ಪಡೆದು ಬಡಾವಣೆ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ತಾನು ಬಾಗಿಲು ಬಂದ್ ಮಾಡಿದ್ದ ಮನೆಯಲ್ಲೇ ಪತ್ನಿ ಇದ್ದಳು ಎಂದು ಮಂಜುನಾಥ್ ಆರೋಪ ಮಾಡುತ್ತಿದ್ದಾನೆ. ಇದನ್ನೂ ಓದಿ:  ಟ್ವಿಟ್ಟರ್‌ನಲ್ಲಿ ಯಾರು ದೀಪ ಬೆಳಗಿಸಲು ಕೆಲಸ ಮಾಡುತ್ತಿಲ್ಲ: ಟ್ವಿಟ್ಟರ್ ಸಿಇಒ 

    ಈ ಕುರಿತು ಸೂಕ್ತ ಠಾಣೆಗೆ ದೂರು ನೀಡಲು ಪೊಲೀಸರು ಸಲಹೆ ಕೊಟ್ಟಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • PSI ಎಕ್ಸಾಂ ಗೋಲ್ಮಾಲ್ – ಜೈಲಿನಲ್ಲಿ ಪತಿ ಕಂಡು ಕಿಂಗ್‍ಪಿನ್ ಕಣ್ಣೀರು

    PSI ಎಕ್ಸಾಂ ಗೋಲ್ಮಾಲ್ – ಜೈಲಿನಲ್ಲಿ ಪತಿ ಕಂಡು ಕಿಂಗ್‍ಪಿನ್ ಕಣ್ಣೀರು

    ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಆರೋಪಿ ದಿವ್ಯಾ ಹಾಗರಗಿ ಕಲಬುರಗಿ ಸೆಂಟ್ರಲ್ ಜೈಲು ಸೇರಿಕೊಂಡಿದ್ದು, ಕಣ್ಣೀರಾಕುತ್ತಿದ್ದಾಳೆ.

    ಜೈಲಿನ ಬ್ಯಾರಕ್ ಹಿಂದೆ ಇದ್ದ ಪತಿ ರಾಜೇಶ್ ಕಂಡು ದಿವ್ಯಾ ಹಾಗರಗಿ ಕಣ್ಣೀರು ಹಾಕಿದ್ದಾಳೆ. ದೂರದಿಂದಲೇ ಪತಿ ರಾಜೇಶ್‍ನನ್ನು ನೋಡ್ತಿದ್ದ ಹಾಗೆಯೇ ಕುಸಿದು ಬಿದ್ದು ಕಣ್ಣೀರು ಸುರಿಸಿದ್ದಾಳೆ. ಇತ್ತ ದಿವ್ಯಾ ಕಂಡು ಜೈಲಿನ ಬ್ಯಾರಕ್ ಹಿಂದೆಯಿಂದ ರಾಜೇಶ್ ಕೂಡ ಅತ್ತಿದ್ದಾರೆ. ಒಟ್ಟಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಗಂಡ-ಹೆಂಡತಿ ಕಣ್ಣೀರು ಹಾಕಿದರು. ಬಳಿಕ ದಿವ್ಯಾ ಹಾಗರಗಿಯನ್ನ ಮಹಿಳಾ ಬ್ಯಾರಕ್ ನಲ್ಲಿ ಹಾಕಿ ಸಿಬ್ಬಂದಿ ಲಕ್ ಮಾಡಿದರು.

    ದಿವ್ಯಾ ಜ್ಞಾನ ಜ್ಯೋತಿ ಶಾಲೆಯ ಶಿಕ್ಷಕರ ಮಹಿಳಾ ಬ್ಯಾರಕ್ ನಲ್ಲಿ ಹಾಕುವಂತೆ ಪಟ್ಟು ಹಿಡಿದಿದ್ದಳು. ತನ್ನ ಶಾಲೆಯ ಶಿಕ್ಷಕರ ಬ್ಯಾರಕ್ ನಲ್ಲಿಯೇ ಇರೊದಾಗಿ ಹಠ ಮಾಡಿದ್ದಳು. ಆದರೆ ಜೈಲು ಸಿಬ್ಬಂದಿ ದಿವ್ಯಾ ಹಣಕ್ಕೆ ಮಣಿಯದೆ 18219 ದಿವ್ಯಾಳ ಕೈದಿ ನಂಬರ್ ನೀಡಿ ಪ್ರತ್ಯೇಕ 9ನೇ ಬ್ಯಾರಕ್ ನಲ್ಲಿ ಕೂಡಿ ಹಾಕಿದ್ದಾರೆ. ದಿನದ 24 ಗಂಟೆಯು ಲಾಕ್ ಆಗಿರುವ ಬ್ಯಾರಕ್ ನಲ್ಲಿ ದಿವ್ಯಾಳನ್ನ ಹಾಕಿದ್ದಾರೆ.

    ದಿವ್ಯಾಳ ಯಾವ ಬೇಡಿಕೆಯನ್ನ ಪೂರೈಸೋದಕ್ಕೆ ಆಗೋದಿಲ್ಲ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಸವಲತ್ತೇ ನೀಡುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ – ಇಂದು ಹೈಕಮಾಂಡ್‍ನಿಂದ ಬಿಗ್ ಸಂದೇಶ ನಿರೀಕ್ಷೆ

  • ಫಸ್ಟ್‌ ಟೈಂ ಜಸ್ಟ್ ಮಿಸ್, ಸೆಕೆಂಡ್‌ ಟೈಂ ಸಕ್ಸಸ್ – ಮದುವೆಯಾದ 1 ತಿಂಗಳಲ್ಲೇ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಂದಳು

    ಫಸ್ಟ್‌ ಟೈಂ ಜಸ್ಟ್ ಮಿಸ್, ಸೆಕೆಂಡ್‌ ಟೈಂ ಸಕ್ಸಸ್ – ಮದುವೆಯಾದ 1 ತಿಂಗಳಲ್ಲೇ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಂದಳು

    ಹೈದರಾಬಾದ್: ಮದುವೆಯಾದ ಕೇವಲ 36 ದಿನಗಳಲ್ಲಿಯೇ ಮಹಿಳೆಯೊಬ್ಬಳು ನಂತರ ತನ್ನ ಪ್ರಿಯಕರ, ಆತನ ನಾಲ್ವರು ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಸೇರಿ ಪತಿಯನ್ನು ಕೊಂದಿದ್ದಾಳೆ.

    ಏಪ್ರಿಲ್ 28 ರಂದು ತೆಲಂಗಾಣದ ಸಿದ್ದಿಪೇಟ್‍ನಲ್ಲಿ ಈ ಭಯಾನಕ ಘಟನೆ ಸಂಭವಿಸಿದ್ದು, 10 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಮುನ್ನ ಆರೋಪಿ ಮಹಿಳೆ, ತನ್ನ ಪತಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಳು. ಆದರೆ ಮೃತ ವ್ಯಕ್ತಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ವಿಚಾರಣೆ ನಡೆಸುವಾಗ ಮಹಿಳೆಯೇ ಕೊಲೆ ಮಾಡಿರುವುದು ಸಾಬೀತಾಗಿದೆ.

    ಮೃತನನ್ನು ಕೆ. ಚಂದ್ರಶೇಖರ್(28) ಎಂದು ಗುರುತಿಸಲಾಗಿದ್ದು, 19 ವರ್ಷದ ಶ್ಯಾಮಲಾ, 20 ವರ್ಷದ ತನ್ನ ಪ್ರಿಯಕರ ಶಿವ ಕುಮಾರ್ ಜೊತೆ ಸೇರಿ ಪತಿ ಚಂದ್ರಶೇಖರ್ ಕತ್ತು ಹಿಸುಕಿ ಕೊಂದಿದ್ದಾಳೆ. ಮೊದಲು ವಿಷ ಹಾಕಿ ಗಂಡನನ್ನು ಕೊಲ್ಲಲು ಯತ್ನಿಸಿ ವಿಫಲವಾದ ಬಳಿಕ, ಪ್ರಿಯಕರ ಶಿವ, ಆತನ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಸೇರಿ ಹತ್ಯೆಗೆ ಪ್ಲಾನ್ ಮಾಡಿದ್ದಾಳೆ. ಇದನ್ನೂ ಓದಿ: ಸಂಸಾರದ ತೊಂದರೆ ಸರಿಪಡಿಸುವ ನೆಪದಲ್ಲಿ ಮಾಂತ್ರಿಕನಿಂದ 79 ದಿನ ಮಹಿಳೆಯ ಮೇಲೆ ಅತ್ಯಾಚಾರ

    ಶ್ಯಾಮಲಾ ಕಳೆದ ಮೂರು ವರ್ಷಗಳಿಂದ ಶಿವನನ್ನು ಪ್ರೀತಿಸುತ್ತಿದ್ದಳು. ಆದರೆ ಮನೆಯವರ ಒತ್ತಡದಿಂದ ಮಾರ್ಚ್ 23 ರಂದು ಚಂದ್ರಶೇಖರ್ ಅವರನ್ನು ವಿವಾಹವಾಗಿದ್ದಳು. ಮದುವೆಯ ನಂತರವೂ ಪ್ರಿಯಕರ ಶಿವ ಜೊತೆಗೆ ಸಂಬಂಧವನ್ನು ಮುಂದುವರೆಸಿದಳು. ಬಳಿಕ ಚಂದ್ರಶೇಖರ್‍ನನ್ನು ಸಾಯಿಸಲು ಪ್ಲಾನ್ ಮಾಡಿದಳು. ಅದರಂತೆ ಏಪ್ರಿಲ್ 19 ರಂದು ತನ್ನ ಗಂಡನಿಗೆ ಊಟದಲ್ಲಿ ಇಲಿ ಪಾಷಣವ ಬೆರೆಸಿ ಕೊಲ್ಲಲು ಯತ್ನಿಸಿದಳು. ಆದರೆ ಚಂದ್ರಶೇಖರ್ ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

    crime

    ತದನಂತರ ಪ್ರಿಯಕರನೊಂದಿಗೆ ಹೊಸ ಸಂಚು ರೂಪಿಸಿ, ಅದರಂತೆ ಏಪ್ರಿಲ್ 19 ರಂದು ಚಂದ್ರಶೇಖರ್‌ಗೆ ದೇವಸ್ಥಾನಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದಾಳೆ. ಅನಂತಸಾಗರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಪ್ರದೇಶವನ್ನು ತಲುಪಿದಾಗ, ಶಿವ ತನ್ನ ಸ್ನೇಹಿತರಾದ ರಾಕೇಶ್, ರಂಜಿತ್ ಮತ್ತು ಆತನ ಇಬ್ಬರು ಸಂಬಂಧಿಕರಾದ ಸಾಯಿಕೃಷ್ಣ ಮತ್ತು ಭಾರ್ಗವ್ ಅವರೊಂದಿಗೆ ದ್ವಿಚಕ್ರ ವಾಹನದಿಂದ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ಶ್ಯಾಮಲಾ, ಶಿವ ಇಬ್ಬರು ಸೇರಿ ಕತ್ತು ಚಂದ್ರಶೇಖರ್ ಕತ್ತು ಹಿಸುಕಿ ಹತ್ಯೆಗೈದು, ಎದೆನೋವು ಕಾಣಿಸಿಕೊಂಡು ಚಂದ್ರಶೇಖರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರಿಗೆ ತಿಳಿಸಿದ್ದಾಳೆ. ಆದರೆ ಈ ಬಗ್ಗೆ ಅನುಮಾನಗೊಂಡ ಮೃತನ ತಾಯಿ ಶ್ಯಾಮಲಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

    POLICE JEEP

    ಕೊನೆಗೆ ತನಿಖೆ ವೇಳೆ ಪೊಲೀಸರ ಬಳಿ ಆರೋಪಿ ಮಹಿಳೆ ಸತ್ಯ ಬಾಯ್ಬಿಟ್ಟಿದ್ದಾಳೆ. ಇದೀಗ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಸಿದ್ದಿಪೇಟೆ ಎರಡರ ಟೌನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ರವಿಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ನಿದ್ರೆ ಮಾಡುತ್ತಿರುವಾಗಲೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

  • 21 ವರ್ಷಗಳಿಂದ ಪತ್ನಿ ಶವದೊಂದಿಗಿದ್ದ ವೃದ್ಧನಿಂದ ಕೊನೆಗೂ ಅಂತ್ಯಕ್ರಿಯೆ!

    21 ವರ್ಷಗಳಿಂದ ಪತ್ನಿ ಶವದೊಂದಿಗಿದ್ದ ವೃದ್ಧನಿಂದ ಕೊನೆಗೂ ಅಂತ್ಯಕ್ರಿಯೆ!

    ಬ್ಯಾಂಕಾಕ್: ಪತ್ನಿಯ ಶವದೊಂದಿಗೆ 21 ವರ್ಷಗಳಿಂದ ಬದುಕುತ್ತಿದ್ದ ಥೈಲ್ಯಾಂಡ್‍ನ 72 ವರ್ಷದ ವೃದ್ಧ ಕೊನೆಗೂ ಪತ್ನಿಯ ಅಂತ್ಯಕ್ರಿಯೆಯನ್ನು ಮಾಡಿದ್ದಾನೆ.

    ಫೆಟ್ ಕಾಸೆಮ್ ಬ್ಯಾಂಕಾಕ್ ಫೌಂಡೇಶನ್‍ನಿಂದ ಸಹಾಯ ಪಡೆದು ಚಾರ್ನ್ ಜನವಾಚ್ಚಕಲ್ ಅವರು, 21 ವರ್ಷಗಳ ಬಳಿಕ ಕೊನೆಗೂ ಅಂತ್ಯ ಸಂಸ್ಕಾರ ಮಾಡಿ, ತಮ್ಮ ಪತ್ನಿಗೆ ವಿದಾಯ ಹೇಳಿದ್ದಾನೆ.

    ರಾಜಧಾನಿ ಬ್ಯಾಂಕಾಕ್‍ನ ಬ್ಯಾಂಗ್ ಖೇನ್ ಜಿಲ್ಲೆಯಲ್ಲಿರುವ ವೃದ್ಧನ ನಿವಾಸದಿಂದ ಆತನ ಪತ್ನಿಯ ಶವವನ್ನು ಫೆಟ್ ಕಾಸೆಮ್ ಬ್ಯಾಂಕಾಕ್ ಫೌಂಡೇಶನ್ ಸಿಬ್ಬಂದಿ ಹೊರಗೆ ತೆಗೆದುಕೊಂಡು ಹೋಗುತ್ತಿರುವ ವೀಡಿಯೋ ಫೇಸ್‍ಬುಕ್‍ನಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಹರಿಯಾಣದಲ್ಲಿ 5,000 ವರ್ಷಗಳ ಹಳೆಯ ಆಭರಣ ಕಾರ್ಖಾನೆ ಪತ್ತೆ

    ನೀವು ವ್ಯವಹಾರವೊಂದಕ್ಕೆ ಹೋಗುತ್ತಿದ್ದೀರಿ. ಮತ್ತೆ ಮನೆಗೆ ಆದಷ್ಟು ಬೇಗ ಹಿಂತಿರುಗುತ್ತೀರಿ. ಅಲ್ಲಿ ನೀವು ಹೆಚ್ಚು ಸಮಯ ಇರುವುದಿಲ್ಲ ಅಂತ ನಾನು ಭರವಸೆ ನೀಡುತ್ತೇನೆ ಎಂದು ವೃದ್ಧ ಭಾವುಕದಿಂದ ಹೇಳುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

    ಚಾರ್ನ್ ಜನವಾಚ್ಚಕಲ್ ತಾನು ಮಲಗುವ ಕೋಣೆಯಲ್ಲಿ ಮೃತಪಟ್ಟ ತನ್ನ ಹೆಂಡತಿ ಬದುಕಿದ್ದಾಳೆ ಭಾವಿಸಿ ಶವವನ್ನು ಇಟ್ಟುಕೊಂಡಿದ್ದನು. ಹಗಲಿನಲ್ಲಿ ಮನೆಯ ಪಕ್ಕದ ಸಣ್ಣ ಜಾಗದಲ್ಲಿ ಮುದ್ದಾದ ಬೆಕ್ಕುಗಳು ಮತ್ತು ನಾಯಿಗಳೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದನು.

    ತನ್ನ ಪತ್ನಿ ಸಾವನ್ನು ಎಲ್ಲೂ ದಾಖಲಿಸದೇ ಇದ್ದಿದ್ದರಿಂದ ವೃದ್ಧನ ವಿರುದ್ಧ ಇಲ್ಲಿಯವರೆಗೂ ಅಧಿಕಾರಿಗಳು ಯಾವುದೇ ಕಾನೂನು ಕ್ರಮಕೈಗೊಂಡಿರಲಿಲ್ಲ. ಆದರೆ ಕಳೆದ ತಿಂಗಳು ಮೋಟಾರ್ ಸೈಕಲ್ ಅಪಘಾತದಲ್ಲಿ ಗಾಯಗೊಂಡ ವೃದ್ಧನಿಗೆ ಆಹಾರ ಮತ್ತು ಪಾನೀಯವನ್ನು ನೀಡಲು ಫೌಂಡೇಶನ್‍ನ ಕಾರ್ಯನಿರ್ವಾಹಕರು ಮನೆಗೆ ಭೇಟಿ ನೀಡಿದ್ದ ವೇಳೆ ಶವ ಪೆಟ್ಟಿಗೆಯನ್ನು ಗಮನಿಸಿದ್ದಾರೆ.

    ನಂತರ ವೃದ್ಧ ತನ್ನ ಪತ್ನಿಯ ಅಂತ್ಯಕ್ರಿಯೆಯನ್ನು ಉತ್ತಮ ರೀತಿಯಲ್ಲಿ ನಡೆಸಲು ಫೌಂಡೇಶನ್‍ನ ಕಾರ್ಯನಿರ್ವಾಹಕರ ಸಹಾಯವನ್ನು ಕೋರಿದ್ದಾರೆ. ಈ ಕುರಿತಂತೆ ವಕೀಲರೊಬ್ಬರು ವೃದ್ಧನ ಸಂಭಾಷಣೆ ನಡೆಸಿದಾಗ, ವೃದ್ಧ ತನ್ನ ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದನು. ಆದರೆ ಪತ್ನಿ ತೀರಿಕೊಂಡ ನಂತರ ಆಕೆಯ ಮೃತದೇಹವನ್ನು ಮನೆಯಲ್ಲಿಯೇ ಇರಿಸಿಕೊಳ್ಳಲು ಮಕ್ಕಳು ಒಪ್ಪದೇ ಮನೆ ಬಿಟ್ಟು ಹೋಗಲು ನಿರ್ಧರಿಸಿದರು ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

    ಚಾರ್ನ್ ಜನವಾಚ್ಚಕಲ್ ಅವರು, ಚುಲಾಂಗ್‍ಕಾರ್ನ್ ವಿಶ್ವವಿದ್ಯಾಲಯದ ಫಾರ್ಮಸಿ ಫ್ಯಾಕಲ್ಟಿಯಿಂದ ಪದವಿ ಪಡೆದಿದ್ದರು. ನಂತರ ರಾಯಲ್ ಥಾಯ್ ಸೈನ್ಯದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು ಹಾಗೂ ಅವರ ಪತ್ನಿ ಸಾರ್ವಜನಿಕ ಆರೋಗ್ಯ ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಿದ್ದಾರೆ.

  • ಪತಿ ಕಣ್ಣೆದುರೇ ಪ್ರಿಯಕರನೊಂದಿಗೆ ಪತ್ನಿ ಸೆಕ್ಸ್ – ಸ್ಕ್ರೂಡ್ರೈವರ್‌ನಿಂದ ಇಬ್ಬರನ್ನು ಇರಿದು ಕೊಂದ

    ಪತಿ ಕಣ್ಣೆದುರೇ ಪ್ರಿಯಕರನೊಂದಿಗೆ ಪತ್ನಿ ಸೆಕ್ಸ್ – ಸ್ಕ್ರೂಡ್ರೈವರ್‌ನಿಂದ ಇಬ್ಬರನ್ನು ಇರಿದು ಕೊಂದ

    ಹೈದರಾಬಾದ್: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನ ಹತ್ಯೆಗೈದಿರುವ ಘಟನೆ ತೆಲಂಗಾಣದ ಹೈದರಾಬಾದ್‍ನ ರಾಚಕೊಂಡದಲ್ಲಿ ನಡೆದಿದೆ.

    ಕಾರು ಚಾಲಕನಾಗಿದ್ದ ಯಶವಂತ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿಗೆ ಎಷ್ಟು ಬಾರಿ ತಿಳುವಳಿಕೆ ಹೇಳಿದರೂ ಕೇಳದ ಹಿನ್ನೆಲೆ ಅವಮಾನ ಅನುಭವಿಸಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಲ್‍ಬಿ ನಗರದ ಉಪ ಪೊಲೀಸ್ ಆಯುಕ್ತ ಸನ್‍ಪ್ರೀತ್ ಸಿಂಗ್ ತಿಳಿಸಿದ್ದಾರೆ.

    KILLING CRIME

    ವಿಜಯವಾಡದಿಂದ ಹೈದರಾಬಾದ್‍ಗೆ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಶಿಫ್ಟ್ ಆಗಿದ್ದರು. ಈ ವೇಳೆ ತನ್ನ ಪತ್ನಿಗೆ ಯಶವಂತ್ ಪರಿಚಯವಾಗಿ ನಂತರ ಇಬ್ಬರ ನಡುವೆ ಅಕ್ರಮ ಸಂಬಂಧ ಶುರುವಾಗಿತ್ತು. ಈ ವಿಚಾರ ತಿಳಿದು ನಿರಾಕರಿಸಿ ಆರೋಪಿ ತನ್ನ ಪತ್ನಿಗೆ ಅನೇಕ ಬಾರಿ ಬುದ್ಧಿವಾದ ಹೇಳಿದ್ದಾನೆ. ಆದರೆ ಆಕೆ ಪತಿಯನ್ನೇ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಾಳೆ. ನಂತರ ಆರೋಪಿ ಮತ್ತೆ ವಿಜಯವಾಡಕ್ಕೆ ಹಿಂತಿರುಗುವುದಾಗಿ ಹೆಂಡತಿ ಬಳಿ ಪ್ರಸ್ತಾಪಿಸಿದಾಗ ಆಕೆ ಕೂಡ ಒಪ್ಪಿಕೊಂಡಿದ್ದಳು. ಆದರೆ ಜೊತೆಯಲ್ಲಿ ಯಶವಂತ್‍ನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಕೇಳಿಕೊಂಡಿದ್ದಳು. ಇದೇ ವೇಳೆ ಆರೋಪಿ ಕೊಲ್ಲಲು ಪ್ಲಾನ್ ಮಾಡಿದ್ದನು. ಇದನ್ನೂ ಓದಿ: 2024ರಲ್ಲಿ ಶುಕ್ರಯಾನಕ್ಕೆ ISRO ಸಜ್ಜು- ಇಲ್ಲಿದೆ ಶುಕ್ರಗ್ರಹದ ಸ್ವಾರಸ್ಯಕರ ಸಂಗತಿ

    ನಂತರ ಮೂವರೂ ಎರಡು ವಾಹನಗಳಲ್ಲಿ ಕೊತಗುಡೆಂ ಪಟ್ಟಣವನ್ನು ತಲುಪಿದರು. ಬಳಿಕ ತನ್ನನ್ನು ಮತ್ತು ಯಶವಂತ್‍ನನ್ನು ಒಬ್ಬಂಟಿಯಾಗಿ ಬಿಡುವಂತೆ ಮಹಿಳೆ ತನ್ನ ಪತಿಯನ್ನು ಕೇಳಿದ್ದಾಳೆ. ಈ ವೇಳೆ ಆರೋಪಿ ಮದ್ಯ ಸೇವಿಸಲು ಪ್ರಾರಂಭಿಸಿದಾಗ, ಆತನ ಹೆಂಡತಿ ಮತ್ತು ಆಕೆಯ ಪ್ರಿಯಕರ ಆರೋಪಿ ಮುಂದೆಯೇ ಲೈಂಗಿಕ ಸಂಭೋಗವನ್ನು ಪ್ರಾರಂಭಿಸಿದ್ದಾರೆ. ಇದನ್ನು ಕಂಡು ಕೋಪಗೊಂಡ ಆರೋಪಿ ಬಂಡೆಕಲ್ಲುಗಳಿಂದ ಇಬ್ಬರಿಗೂ ಹೊಡೆದು ಸ್ಕ್ರೂಡ್ರೈವರ್‌ನಿಂದ ಇರಿದಿದ್ದಾನೆ. ಇದರಿಂದಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತದೇಹಗಳನ್ನು ಜನನಿಬಿಡ ಪ್ರದೇಶದಲ್ಲಿ ಬಿಟ್ಟು ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫಿನ್‍ಲ್ಯಾಂಡ್ ಪ್ರಧಾನಿಯನ್ನು ಭೇಟಿ ಮಾಡಿದ ಮೋದಿ – ಕಾರಣವೇನು?