Tag: Wife

  • ಗಂಡನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಊರೆಲ್ಲಾ ಅರಚಾಡಿ ಹೈ-ಡ್ರಾಮಾ ಮಾಡಿದ ಪತ್ನಿ

    ಗಂಡನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಊರೆಲ್ಲಾ ಅರಚಾಡಿ ಹೈ-ಡ್ರಾಮಾ ಮಾಡಿದ ಪತ್ನಿ

    ಚಿಕ್ಕಬಳ್ಳಾಪುರ: ಪ್ರತಿನಿತ್ಯ ಕುಡಿದು ಬಂದು ವಿನಾಕಾರಣ ಗಲಾಟೆ ಮಾಡ್ತಿದ್ದ ಪತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಕೊಲೆ ಮಾಡಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಜಕ್ಕಸಂದ್ರ ಗ್ರಾಮದಲ್ಲಿ ನಡೆದಿದೆ.

    ಜಕ್ಕಸಂದ್ರ ಗ್ರಾಮದ ಹನುಮಯ್ಯ(35) ಕೊಲೆಯಾದ ವ್ಯಕ್ತಿ. ಹನುಮಯ್ಯ ಪತ್ನಿ ಭಾಗ್ಯಳನ್ನು ಕುಡಿದುಬಂದು ಯಾವಾಗಲೂ ಹಿಂಸೆ ಕೊಡುತ್ತಿದ್ದ. ಇದರಿಂದ ಬೇಸತ್ತ ಭಾಗ್ಯ, ಹನುಮಯ್ಯ ಮನೆಯಲ್ಲಿ ಮಲಗಿದ ಮೇಲೆ ದೊಡ್ಡ ಸೈಜುಗಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ. ನಂತರ ಕೊಲೆ ಮಾಡಿದ್ದು ಯಾರಿಗೂ ಗೊತ್ತಾಗಬಾರದು ಅಂತ ಸೈಜುಗಲ್ಲನ್ನು ಮನೆ ಪಕ್ಕದ ಬಾವಿಯಲ್ಲಿ ಬಿಸಾಡಿದ್ದಾಳೆ. ಇದನ್ನೂ ಓದಿ: ಡ್ಯಾನ್ಸ್ ಕಲಿಸುವುದಾಗಿ ಹೇಳಿ ಕ್ಲಾಸ್‍ಗೆ ಕರೆಸಿ ಪ್ರೀತಿಸುಂತೆ ಪಿಡಿಸಿದ ಯುವಕ

    ಬೆಳಗ್ಗೆ ‘ಎದ್ದು ಅಯ್ಯೋ ನನ್ನ ಗಂಡನನ್ನ ಯಾರೋ ಕೊಲೆ ಮಾಡಿದ್ದಾರೆ’ ಅಂತ ಊರೆಲ್ಲಾ ಅರಚಾಡಿ ಕಿರುಚಾಟ ಮಾಡಿ ನಾಟಕ ಮಾಡಿದ್ದಾಳೆ. ವಿಷಯ ತಿಳಿದು ಗ್ರಾಮಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭಾಗ್ಯಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿದ ವಿಷಯ ಬಾಯ್ಬಿಟ್ಟಿದ್ದಾಳೆ.

    ಪ್ರಸ್ತುತ ಭಾಗ್ಯಳನ್ನ ವಶಕ್ಕೆ ಪಡೆದಿರುವ ಪೊಲೀಸರು, ಮೃತದೇಹವನ್ನ ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್ ನೋಡಿ ಬೆಚ್ಚಿಬಿದ್ದ ಪತಿ 

  • ಉದ್ಯಮಿ ರಾಜು ಹತ್ಯೆಗೆ 10 ಲಕ್ಷ ರೂ. ಸುಪಾರಿ ನೀಡಿದ ಎರಡನೇ ಪತ್ನಿ!

    ಉದ್ಯಮಿ ರಾಜು ಹತ್ಯೆಗೆ 10 ಲಕ್ಷ ರೂ. ಸುಪಾರಿ ನೀಡಿದ ಎರಡನೇ ಪತ್ನಿ!

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ ಹತ್ಯೆಗೆ ಆತನ ಎರಡನೇ ಹೆಂಡತಿ ಕಿರಣ ಹಾಗೂ ಇಬ್ಬರು ಬ್ಯುಸಿನೆಸ್ ಪಾರ್ಟ್ನರ್ ಗಳು 10 ಲಕ್ಷ ಸುಪಾರಿ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.

    ಬೆಳಗಾವಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷ ಸಂಜಯ್ ರಜಪೂತಗೆ ಸುಪಾರಿ ನೀಡಿರುವುದು ಬಯಲಾಗಿದೆ. ಬೆಳಗಾವಿ ಚೆನ್ನಮ್ಮ ನಗರದಲ್ಲಿ 10 ವರ್ಷಗಳ ಹಿಂದೆ ಗ್ಲೋಬಲ್ ಡೆವಲಪರ್ಸ್ ಹೆಸರಿನಲ್ಲಿ ಅಪಾರ್ಟ್‍ಮೆಂಟ್ ನಿರ್ಮಾಣ ಸಂಬಂಧ ಧರ್ಮೇಂದ್ರ, ಶಶಿಕಾಂತ ಹಾಗೂ ರಾಜು ಮಧ್ಯೆ ಪಾರ್ಟ್ನರ್ ಶಿಪ್ ಆಗಿತ್ತು. ಹತ್ತು ವರ್ಷವಾದರೂ ಮೊದಲು ಆರಂಭಿಸಿದ ಪ್ರಾಜೆಕ್ಟ್ ಮುಗಿಯದ ಹಿನ್ನೆಲೆ ವೈಷಮ್ಯವಿತ್ತು.

    ಇನ್ನೊಂದೆಡೆ ಎರಡನೇ ಹೆಂಡತಿ ಕಿರಣ ಹಾಗೂ ಪತಿ ರಾಜು ಮೇಲೆ ದ್ವೇಷವಿತ್ತು. ಮೊದಲ ಮದುವೆಯನ್ನು ಬಚ್ಚಿಟ್ಟು ತನ್ನ ವಿವಾಹವಾಗಿದ್ದನೆಂಬ ದ್ವೇಷವಿತ್ತು. ತನ್ನ ಹಾಗೂ ತನ್ನ ಇಬ್ಬರ ಮಕ್ಕಳ ಹೆಸರಿನಲ್ಲಿ ಆಸ್ತಿ ಮಾಡುವಂತೆ ಪ್ರತಿ ದಿನ ರಾಜುಗೆ ಪತ್ನಿ ಕಿರಣ ಒತ್ತಾಯಿಸುತ್ತಿದ್ದರು. ಆದರೆ ರಾಜು ಯಾವುದೇ ಆಸ್ತಿ ಎರಡನೇ ಹೆಂಡತಿ ಹೆಸರಲ್ಲಿ ಮಾಡದೇ ಇದ್ದಿದ್ದಕ್ಕೆ ಸಿಟ್ಟು ಇತ್ತು. ಹೀಗಾಗಿ ಪತಿಯ ಬ್ಯುಸಿನೆಸ್ ‌ಪಾರ್ಟ್ನರ್ ಗಳ ಜೊತೆಗೂಡಿ ಹತ್ಯೆಗೆ ಸಂಚು ರೂಪಿಸಿದ್ದರು. ಇದನ್ನೂ ಓದಿ: ಬಪ್ಪನಾಡು ದೇವಸ್ಥಾನ ಹಾಗೂ ಮಾರಿಕಾಂಬಾ ದೇವಸ್ಥಾನ ಕಟ್ಟಿದವರು ಮುಸ್ಲಿಮರು: ರಿಜ್ವಾನ್

    ಮಾರ್ಚ್ 15ರ ಬೆಳಗ್ಗೆ 6 ಗಂಟೆ ಸುಮಾರಿಗೆ ರಾಜು ದೊಡ್ಡಬೊಮ್ಮನ್ನವರ ಹತ್ಯೆಗೈದು ಹಂತಕರು ಪರಾರಿಯಾಗಿದ್ದರು. ಕೆಲ ಸಮಯದ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಎರಡನೇ ಪತ್ನಿ ಕಿರಣ ಹಾಗೂ ಮತ್ತೋರ್ವ ಆರೋಪಿ ಧರ್ಮೇಂದ್ರ ತಮಗೇನೂ ಗೊತ್ತೇ ಇಲ್ಲದ ರೀತಿ ಸ್ಥಳಕ್ಕೆ ಬಂದು ನಾಟಕವಾಡಿದ್ದರು. ಈ ವೇಳೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಬೆಳಗಾವಿ ಗ್ರಾಮೀಣ ಪೋಲಿಸರು ಮೊಬೈಲ್ ಕರೆ ವಿವರ ಪರಿಶೀಲಿಸುವ ವೇಳೆ ಬ್ಯುಸಿನೆಸ್ ಪಾರ್ಟ್ನರ್ ಗಳ ಮೇಲೆ ಅನುಮಾನ ಮೂಡಿತ್ತು. ಹೀಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

    ಸದ್ಯ ಸುಪಾರಿ ಹಂತಕರ ಪೈಕಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಜೇಮ್ಸ್ ಚಿತ್ರವನ್ನೂ ಯಾವುದೇ ಕಾರಣಕ್ಕೂ ತೆಗೆಯಬಾರದು: ಡಿಕೆಶಿ

  • ಪತ್ನಿ ಮಟನ್ ಕರಿ ಮಾಡ್ಲಿಲ್ಲ ಅಂತ ಪೊಲೀಸರಿಗೆ ಟಾರ್ಚರ್ ಕೊಟ್ಟ ವ್ಯಕ್ತಿ

    ಪತ್ನಿ ಮಟನ್ ಕರಿ ಮಾಡ್ಲಿಲ್ಲ ಅಂತ ಪೊಲೀಸರಿಗೆ ಟಾರ್ಚರ್ ಕೊಟ್ಟ ವ್ಯಕ್ತಿ

    ಹೈದರಾಬಾದ್: ಪತ್ನಿ ಮಟನ್ ಕರಿ ಮಾಡಿ ಕೊಡಲಿಲ್ಲ ಎಂದು ಪೊಲೀಸರಿಗೆ ಪದೇ, ಪದೇ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ತೆಲಂಗಾಣದ ನಲ್ಗೊಂಡ ಪೊಲೀಸರು ಬಂಧಿಸಿದ್ದಾರೆ.

    ಮಾರ್ಚ್ 18ರ ಶುಕ್ರವಾರ ರಾತ್ರಿ ಊಟದ ವೇಳೆ ತನಗೆ ಇಷ್ಟವಾದ ಮಟನ್ ಕರಿ ಮಾಡಲಿಲ್ಲ ಎಂಬ ಕಾರಣಕ್ಕೆ ನವೀನ್ ಮತ್ತು ಪತ್ನಿಯ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ನವೀನ್ ಪೊಲೀಸ್ ಸಹಾಯವಾಣಿ ಸಂಖ್ಯೆ 100ಕ್ಕೆ ಪದೇ ಪದೇ ಕರೆ ಮಾಡಿದ್ದಾನೆ. ಇದನ್ನೂ ಓದಿ: ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನೇ ಕೊಂದ ಪಾಗಲ್ ಪ್ರೇಮಿ

    POLICE JEEP

    ಆರಂಭದಲ್ಲಿ ನವೀನ್ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಗೆ ಡಯಲ್ ಮಾಡಿ ಘಟನೆಯನ್ನು ವಿವರಿಸಿ ತನ್ನ ಹೆಂಡತಿಯ ವಿರುದ್ಧ ದೂರು ನೀಡಿದಾಗ, ನಿರ್ವಾಹಕರು ಮದ್ಯದ ಅಮಲಿನಲ್ಲಿ ಕರೆ ಮಾಡಿದ್ದಾನೆ ಎಂದು ಭಾವಿಸಿ ಸುಮ್ಮನಿದ್ದರು. ಆದರೆ ನಿರಂತರವಾಗಿ ಕರೆ ಮಾಡುತ್ತಿದ್ದರಿಂದ ಕರ್ತವ್ಯದಲ್ಲಿದ್ದ ಪೊಲೀಸ್ ತನ್ನ ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ.

    ನಂತರ ನವೀನ್ ಅವರ ಮನೆಗೆ ಗಸ್ತು ಕಾರನ್ನು ಕಳುಹಿಸಿ ಪರಿಶೀಲನೆ ನಡೆಸಿದಾಗ ಸೋಮಾರಿಯಂತೆ ಮಲಗಿರುವ ಸ್ಥಿತಿಯಲ್ಲಿ ನವೀನ್‍ನನ್ನು ಕಂಡು ಪೊಲೀಸರು ಆತನನ್ನು ಮಲಗಲು ಬಿಟ್ಟು ಹೊರಟು ಹೋಗಿದ್ದರು. ಆದರೆ ಶನಿವಾರ ಬೆಳಗ್ಗೆ ಕಣಗಲ್ ಮಂಡಲದ ಚೆರ್ಲಾ ಗೌರಾರಂ ಗ್ರಾಮದಲ್ಲಿ ಪೊಲೀಸರು ಮತ್ತೆ ಆತನ ಮನೆ ತೆರಳಿ ನವೀನ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

  • 2.8 ಕೋಟಿ ಸಾಗಾಟ -ಸಿಕ್ಕಿ ಬಿದ್ದ ಮಾಜಿ ಸಂಸದನ ಪತ್ನಿ

    2.8 ಕೋಟಿ ಸಾಗಾಟ -ಸಿಕ್ಕಿ ಬಿದ್ದ ಮಾಜಿ ಸಂಸದನ ಪತ್ನಿ

    ಕೀವ್: ಉಕ್ರೇನ್‍ನ ಮಾಜಿ ಸಂಸದನ ಪತ್ನಿ 28 ಮಿಲಿಯನ್ ಡಾಲರ್(2.8 ಕೋಟಿ), 1.3 ಮಿಲಿಯನ್‍ಯುರೋ ನಗದು ಹಣದೊಂದಿಗೆ ದೇಶದಿಂದ ಪಲಾಯನ ಮಾಡುವಾಗ ಸಿಕ್ಕಿ ಬಿದ್ದಿದ್ದಾರೆ.

    ಉಕ್ರೇನ್‍ನ ಮಾಜಿ ಸಂಸದ ಕೊಟ್ವಿಟ್ಸ್ಕಿ ಪತ್ನಿ ಸೂಟ್‍ಕೇಸ್‍ಗಳಲ್ಲಿ 28 ಮಿಲಿಯನ್ ಡಾಲರ್ ಮತ್ತು 1.3 ಮಿಲಿಯನ್ ಯುರೋಗಳಷ್ಟು ಹಣವನ್ನು ಸಾಗಿಸುವ ಪ್ರಯತ್ನವನ್ನು ಮಾಡಿದ್ದಾರೆ.

    ಯುದ್ಧಪೀಡಿತ ಉಕ್ರೇನ್‍ನಿಂದ ತಪ್ಪಿಸಿಕೊಳ್ಳಲು ಮತ್ತು ಜಕರ್‍ಪಾಟಿಯಾ ಪ್ರಾಂತ್ಯದ ಮೂಲಕ ಹಂಗೇರಿಯನ್ನು ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಆದರೆ ಹಂಗೇರಿಯನ್ ಗಡಿಯಲ್ಲಿ ತಪಾಸಣೆ ಮಾಡುವಾಗ ಸಿಕ್ಕಿಬಿದ್ದಿದ್ದಾರೆ.  ಇದನ್ನೂ ಓದಿ: 7 ನಂಬರ್ ಜೆರ್ಸಿ ಹಿಂದಿನ ಕಹಾನಿ ಬಿಚ್ಚಿಟ್ಟ ಧೋನಿ

    ಫೆಬ್ರವರಿ 24 ರಂದು ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿತು. ಯುದ್ಧದ ಪರಿಣಾಮವಾಗಿ, ಉಕ್ರೇನ್‍ನಾದ್ಯಂತ 1 ಕೋಟಿಗೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಇದರಲ್ಲಿ ಸುಮಾರು 30 ಲಕ್ಷ ಜನರು ಪೋಲೆಂಡ್, ಸ್ಲೋವಾಕಿಯಾ, ರೊಮೇನಿಯಾ ಮತ್ತು ಹಂಗೇರಿಯಂತಹ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ. ಉಕ್ರೇನ್ ಯುದ್ಧದಲ್ಲಿ ಮಕ್ಕಳು ಸೇರಿದಂತೆ ನೂರಾರು ನಾಗರಿಕರು ಸಾವನ್ನಪ್ಪಿದ್ದಾರೆ. ಇದುವರೆಗೆ 14,000ಕ್ಕೂ ಹೆಚ್ಚು ರಷ್ಯಾದ ಸೈನಿಕರು ಹತರಾಗಿದ್ದಾರೆ ಎಂದು ಉಕ್ರೇನ್ ಹೇಳಿಕೊಂಡಿದೆ.

  • ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್  ನೋಡಿ ಬೆಚ್ಚಿಬಿದ್ದ ಪತಿ

    ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್ ನೋಡಿ ಬೆಚ್ಚಿಬಿದ್ದ ಪತಿ

    ಬ್ರೆಸಿಲಿಯಾ: ಭಿಕ್ಷುಕನ ಜೊತೆ ಪತ್ನಿ ರೊಮ್ಯಾನ್ಸ್ ಮಾಡುತ್ತಿರುವುದನ್ನು ನೋಡಿದ ಪತಿ ಶಾಕ್ ಆಗಿರುವ ಘಟನೆ ಬ್ರೆಜಿಲ್‍ನಲ್ಲಿ ನಡೆದಿದ್ದು, ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

    ಜಿಮ್ ಟ್ರೈನರ್ ಎಡ್ವರ್ಡೊ ಅಲ್ವೆಸ್ ಪತ್ನಿಯನ್ನು ಹುಡುಕುತ್ತ ಕಾರನ್ನು ಕಂಡು ಪಾರ್ಕ್ ಮಾಡಿದ್ದ ಕಡೆ ಬಂದಿದ್ದಾನೆ. ಕಾರಿನ ವಿಂಡ್‍ಶೀಲ್ಡ್ ಇಣುಕಿದಾದ ಪತ್ನಿ ಬೇರೆ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಿದ್ದಾನೆ. ಈ ದೃಶ್ಯ ನೋಡಿ ಆತ ಕೋಪಗೊಂಡು ವಿಂಡ್‍ಶೀಲ್ಡ್ ಒಡೆದು ಹಾಕಲು ಪ್ರಯತ್ನ ಮಾಡಿದ್ದಾನೆ. ಹೊರಗಡೆಯಿಂದಲೇ ಪತ್ನಿ ಜೊತೆಗಿಂದ್ದ ವ್ಯಕ್ತಿಯನ್ನು ಒಡೆಯಲು ಪ್ರಯತ್ನ ಮಾಡಿದ್ದಾನೆ. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    Personal trainer finds church-going wife 'cheating on him' with homeless man [Video] | Daily Mail Online

    ಪತಿ ತನ್ನನ್ನು ನೋಡಿರುವುದನ್ನು ತಿಳಿದ ಪತ್ನಿ ಅಲ್ಲಿಂದ ಓಡಲು ಪ್ರಯತ್ನ ಮಾಡಿದ್ದು, ಭಿಕ್ಷುಕ ಅರೆಬೆತ್ತಲೆಯಾಗೇ ಕಾರಿನಿಂದ ಪರಾರಿಯಾಗಲು ಪ್ರಯತ್ನ ಮಾಡುತ್ತಾನೆ. ಆದರೆ ಮೊದಲೇ ಕೋಪದಲ್ಲಿದ್ದ ಅಲ್ವೆಸ್ ಆತನನ್ನು ಹಿಡಿದು ಥಳಿಸುತ್ತಾನೆ. ನಂತರ ಪತ್ನಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾನೆ. ಈ ಇಡೀ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

    ಈ ಘಟನೆ ಮಾ.10ರಂದು ನಡೆದಿದ್ದು, ಬ್ರೆಜಿಲ್‍ನ ಫೆಡರಲ್ ಜಿಲ್ಲೆಯ ಜರ್ದಿಮ್ ರೊರಿಝ್‍ನಲ್ಲಿ ನಡೆದಿದೆ. ಅಲ್ವೇಸ್ ಪತ್ನಿ ಭಕ್ತಿ ಹೆಚ್ಚಿದ್ದು, ಚರ್ಚಿಗೆ ಹೆಚ್ಚು ಹೋಗುತ್ತಿದಳು ಎಂದು ಖಾಸಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈ ವೇಳೆಯೇ ಪತ್ನಿ, ನಾನು ದೇವರಿಂದ ನನಗೆ ಒಂದು ಸಂದೇಶ ಕೇಳಿಸಿತು. ಈ ಭಿಕ್ಷುಕನಿಗೆ ಸಹಾಯ ಮಾಡುವಂತೆ ದೇವರು ನನಗೆ ಹೇಳಿದರು. ಅದಕ್ಕೆ ಈ ಕೆಲಸ ಮಾಡಿದ್ದೇನೆ ಎಂದು ಪತಿಗೆ ತಿಳಿಸಿದ್ದಾಳೆ. ಸುದ್ದಿ ತಿಳಿದ ಪತಿ ತೀವ್ರ ಆಘಾತಗೊಂಡಿದ್ದಾನೆ.

    ಘಟನೆ ವಿವರ: ಅಲ್ವೆಸ್ ಪತ್ನಿ ಮತ್ತು ತಾಯಿ ಭಿಕ್ಷುಕನಿಗೆ ಆಶ್ರಯ ನೀಡಬೇಕು ಎಂದು ಮನೆಯಿಂದ ಬಂದಿದ್ದಾರೆ. ಆದರೆ ಇಬ್ಬರು ಒಟ್ಟಿಗೆ ಇಲ್ಲದೆ ಬೇರೆಕಡೆ ಇರುವುದು ತಿಳಿದುಬಂದಿದೆ. ಪತ್ನಿಗೆ ಎಷ್ಟೇ ಫೋನ್ ಟ್ರೈ ಮಾಡಿದ್ರೂ ಆಕೆ ಫೋನ್ ರಿಸಿವ್ ಮಾಡಿಲ್ಲ. ನಂತರ ಆಕೆಯನ್ನು ಹುಡುಕಿಕೊಂಡು ಬರುತ್ತಿದ್ದ ಪತಿಗೆ ಆಕೆಯ ಕಾರ್ ಕಾಣಿಸಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿವೆ ಡೇಜರಸ್ ಫ್ಲೈ ಓವರ್‌ಗಳು

    ಕಾರನ್ನು ಇಣುಕಿ ನೋಡಿದಾಗ ಪತ್ನಿ ಭಿಕ್ಷುಕನ ಜೊತೆ ಲೈಂಗಿಕ ಕ್ರಿಯೆಯಲ್ಲಿ ಇದ್ದಳು. ಇದನ್ನ ನೋಡಿ ಪತಿ ಶಾಕ್ ಆಗಿದ್ದಾನೆ. ಈ ವೇಳೆ ಅಲ್ವೆಸ್ ಹಿಗ್ಗಮುಗ್ಗ ಭಿಕ್ಷುಕನನ್ನು ಥಳಿಸಿದ್ದಾನೆ. ಪರಿಣಾಮ ಭಿಕ್ಷುಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಡರಲ್ ಜಿಲ್ಲೆಯ ಸಿವಿಲ್ ಪೊಲೀಸ್ ತನಿಖೆಯನ್ನು ಮಾಡುತ್ತಿದ್ದಾರೆ.

  • ಪ್ರೀತಿಸಿ ಮದುವೆಯಾಗಿ ವರ್ಷ ತುಂಬುವ ಮೊದಲೇ ಪತ್ನಿ ನೇಣಿಗೆ ಶರಣು

    ಪ್ರೀತಿಸಿ ಮದುವೆಯಾಗಿ ವರ್ಷ ತುಂಬುವ ಮೊದಲೇ ಪತ್ನಿ ನೇಣಿಗೆ ಶರಣು

    ಬೆಂಗಳೂರು: ಮದುವೆಯಾಗಿ ವರ್ಷ ತುಂಬುವ ಮೊದಲೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯ ಗಾಯತ್ರಿ ನಗರದಲ್ಲಿ ತಡರಾತ್ರಿ ನಡೆದಿದೆ.

    ವಿಂದ್ಯಾಶ್ರೀ ನೇಣಿಗೆ ಶರಣಾದ ಪತ್ನಿಯಾಗಿದ್ದು, ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ರಾಕೇಶ್ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆ ಮನನೊಂದ ಪತ್ನಿಯು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇಗುಲದ ಮೇಲೆ ದಾಳಿ

    ಎಂಕಾಂ ಮಾಡಿದ್ದ ವಿಂದ್ಯಾ ಅವರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ವಿಂದ್ಯಾ ಶ್ರೀ ಅವರ ತಂದೆಯು ಪತಿ ರಾಕೇಶ್ ವಿರುದ್ಧ ದೂರು ನೀಡಿದ್ದಾರೆ. ಸುಬ್ರಮಣ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೋಮವಾರ ಬೆಳಗ್ಗೆ 9.30ಕ್ಕೆ ಮೃತದೇಹ ಮನೆಗೆ ಬರಲಿದೆ: ನವೀನ್ ತಂದೆ

  • ಪತ್ನಿ ಜೊತೆ ಸೆಕ್ಸ್‌ಗೆ ಮುಂದಾದ ಪತಿಗೆ ಶಾಕ್- ಡಿವೋರ್ಸ್‍ಗಾಗಿ ಕೋರ್ಟ್ ಮೆಟ್ಟಿಲೇರಿದ!

    ಪತ್ನಿ ಜೊತೆ ಸೆಕ್ಸ್‌ಗೆ ಮುಂದಾದ ಪತಿಗೆ ಶಾಕ್- ಡಿವೋರ್ಸ್‍ಗಾಗಿ ಕೋರ್ಟ್ ಮೆಟ್ಟಿಲೇರಿದ!

    ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿ ಜೊತೆ ಲೈಂಗಿಕ ಕ್ರಿಯೆ ನಡೆಸಲು ಮುಂದಾದಾಗ ನೈಜ ಸತ್ಯ ತಿಳಿದುಬಂದಿದ್ದು, ಇದೀಗ ಆತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಸಂಗ ನಡೆದಿದೆ.

    ನಡೆದಿದ್ದೇನು..?
    2016ರಲ್ಲಿ ಜೋಡಿ ಮದುವೆಯಾಗಿದೆ. ಕೆಲ ದಿನಗಳ ಕಾಲ ಇಬ್ಬರೂ ಲೈಂಗಿಕ ಕ್ರಿಯೆ ನಡೆಸಿರಲಿಲ್ಲ. ಈ ವೇಳೆ ಆಕೆ ಪೀರಿಯೆಡ್ಸ್ ನೆಪ ಹೇಳಿ 6 ದಿನ ಪತಿಯಿಂದ ದೂರ ಉಳಿದು ಮತ್ತೆ ಮರಳಿದಳು.

    ಇದಾದ ಬಳಿಕವೂ ಪತ್ನಿ ಸೆಕ್ಸ್ ಗೆ ಒಪ್ಪಿರಲಿಲ್ಲ. ಇದರಿಂದ ರೋಸಿಹೋಗಿದ್ದ ಪತಿ, ಬಲವಂತವಾಗಿ ಸೆಕ್ಸ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಪತ್ನಿಯ ಜನನಾಂಗ ನೋಡಿ ಪತಿಗೆ ಶಾಕ್ ಆಗಿದೆ. ಆಕೆ ಮಹಿಳೆಯಾಗಿದ್ದರೂ ಜನನಾಂಗ ಮಾತ್ರ ಪುರುಷರಂತೆ ಇತ್ತು. ಇದನ್ನು ಕಂಡು ಆತ ಗಾಬರಿಗೊಳಗಾಗಿದ್ದಾನೆ. ಅಲ್ಲದೆ ತನಗೆ ಮೋಸ ಆಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾನೆ. ಇದನ್ನೂ ಓದಿ: ಸೌಂಡ್ ಕಡಿಮೆ ಮಾಡಲು ಹೇಳಿದ ಕಾನ್‍ಸ್ಟೇಬಲ್- ಬಿಯರ್ ಬಾಟ್ಲಿಯಲ್ಲಿ ಹೊಡೆದು ಎಸ್ಕೇಪ್

    ನ್ಯಾಯಾಲಯದ ಆದೇಶ ಮೇರೆಗೆ ವ್ಯಕ್ತಿ ತನ್ನ ಪತ್ನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾನೆ. ಈ ವೇಳೆ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಆಕೆಗೆ ಗರ್ಭಕೋಶ, ಗರ್ಭನಾಳ ಸೇರಿಧಮತೆ ಒಳಗಿನ ರಚನೆ ಮಹಿಳೆಯಂತೆ ಇತ್ತು. ಆದರೆ ಹೊರಗೆ ಜನನಾಂಗ ಮಾತ್ರ ಪುರುಷರಂತೆ ಇರುವುದು ಖಚಿತವಾಯಿತು. ಹೀಗಾಗಿ ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸುವುದು ಹಾಗೂ ಆಕೆ ಮಗು ಹುಟ್ಟಲು ಸಾಧ್ಯವಿಲ್ಲ ಎಂಬುದು ಸಾಬೀತಾಯಿತು.

    SUPREME COURT

    ಸದ್ಯ ಸ್ಥಳೀಯ ನ್ಯಾಯಾಲಯದಲ್ಲಿ ನ್ಯಾಯ ಸಿಗದ ಕಾರಣ ಪತಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾನೆ. ತನ್ನ ಪತ್ನಿ ಹಾಗೂ ಆಕೆಯ ಮನೆಯವರಿಂದ ತನಗೆ ಮೋಸ ಆಗಿದೆ ಎಂದು ದೂರಿದ್ದಾನೆ. ಪತಿಯ ದೂರಿನಂತೆ ಇದೀಗ ಕೋರ್ಟ್ 4ದಿನಗಳ ಒಳಗೆ ಉತ್ತರಿಸುವಂತೆ ಮಹಿಳೆಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

  • ಶೀಲ ಶಂಕಿಸಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ!

    ಶೀಲ ಶಂಕಿಸಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ!

    ವಿಜಯನಗರ: ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ.

    ಹೆಂಡತಿಯ ಶೀಲದ ಮೇಲೆ ಅನುಮಾನಗೊಂಡ ಪತಿ ದೊಡ್ಡ ಹೊನ್ನೂರಪ್ಪಾ, ಹೆಂಡತಿ ಶಾಂತಮ್ಮ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಕೊಂದು ತಾನೂ ಚಾಕು ಹಾಕಿಕೊಂಡು ಆತ್ಮಹತ್ಯೆ ಯತ್ನ ಮಾಡಿದ್ದಾನೆ. ಘಟನೆಯಲ್ಲಿ ಪತ್ನಿ ಶಾಂತಮ್ಮ ಸ್ಥಳದಲ್ಲೇ ಸಾವಿಗೀಡಾಗಿದ್ದು, ಪತಿ ದೊಡ್ಡ ಹೊನ್ನೂರಪ್ಪ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ತಾವು ಆಯ್ಕೆಯಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿ, ರಾಜಧಾನಿಯಲ್ಲಿ ಅಲ್ಲ: ಭಗವಂತ್ ಮಾನ್

    ಕಳೆದ ಒಂದು ವರ್ಷಗಳಿಂದ ಪತಿ ದೊಡ್ಡ ಹೊನ್ನೂರಪ್ಪಾ ಹೆಂಡತಿಯ ಜೊತೆ ಆಗಾಗ ಜಗಳವಾಡಿ ಹೆಂಡತಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದೇ ಕಾರಣಕ್ಕೆ ಇಂದು ಸಹ ಮನೆಯಲ್ಲಿ ಮಕ್ಕಳು ಇಲ್ಲದ ಸಮಯದಲ್ಲಿ ಜಗಳಕ್ಕೆ ಇಳಿದಿದ್ದಾನೆ.

    ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಮಯದಲ್ಲಿ ಕೊಡಲಿಯಿಂದ ಹೆಂಡತಿಯ ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು, ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತ್ತೆ ಬರ್ತಿದ್ಯ ಬಾಹುಬಲಿ 3 – ಪ್ರಭಾಸ್ ಉತ್ತರವೇನು?

  • ರಾಡ್‍ನಿಂದ ಹೊಡೆದು ಪತ್ನಿಯ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು

    ರಾಡ್‍ನಿಂದ ಹೊಡೆದು ಪತ್ನಿಯ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು

    ಧಾರವಾಡ: ಪತ್ನಿಯನ್ನು ಕೊಲೆ ಮಾಡಿ ಪತಿ ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.

    ನಗರದ ಹೊರವಲಯದ ಗಣೇಶನಗರದಲ್ಲಿ ಈ ಘಟನೆ ನಡೆದಿದ್ದು, ಚಟ್ಟು ತನ್ನ ಪತ್ನಿ ಮನಿಷಾಳನ್ನು ಹತ್ಯೆಗೈದು ನೇಣಿಗೆ ಶರಣಾಗಿದ್ದಾನೆ. ಕಳೆದ ರಾತ್ರಿ ಇದೇ ಬಡಾವಣೆಯ ತನ್ನ ತಾಯಿಯ ಮನೆಯಲ್ಲಿ ಇದ್ದ ಮನಿಷಾ, ಪತಿಗೆ ಊಟ ಕೊಡಲು ಬಂದು, ಪತಿಯ ಮನೆಯಲ್ಲಿಯೇ ಮಲಗಿದ್ದಳು. ರಾತ್ರಿ ಕುಡಿದು ಪತ್ನಿಯ ಜೊತೆ ಜಗಳ ಮಾಡಿದ ಚಟ್ಟು, ಪತ್ನಿ ಮಲಗಿದ್ದಾಗ ಕಬ್ಬಿಣದ ರಾಡ್‍ನಿಂದ ಹೊಡೆದು ಕೊಲೆ ಮಾಡಿ, ನಂತರ ತಾನು ಕೂಡ ನೇಣು ಹಾಕಿಕೊಂಡಿದ್ದಾನೆ. ಇದನ್ನೂ ಓದಿ: ಯುಪಿ ಚುನಾವಣಾ ಫಲಿತಾಂಶ ನಮಗೊಂದು ಪಾಠ: ಮಾಯಾವತಿ

    POLICE JEEP

    ಕಳೆದ ಮೂರು ದಿನಗಳ ಹಿಂದೆ ಕೂಡಾ ಚಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಆದರೆ ಪತ್ನಿ ಇದನ್ನು ತಡೆದಿದ್ದಳು. ಗೋವಾದಲ್ಲಿ ಪೈಪ್ ಲೈನ್ ಕೆಲಸ ಮಾಡುತಿದ್ದ ಚಟ್ಟು ಕಳೆದ ವಾರವಷ್ಟೇ ಧಾರವಾಡಕ್ಕೆ ಬಂದಿದ್ದ. ಈ ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಸದ್ಯ ಉಪನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ಮಹಿಳಾ ದಿನಾಚರಣೆ – ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರಿಗೆ ಗೌರವ


    Husband, wife, policeman, Dharwad

  • ಕುಡಿದ ಮತ್ತಿನಲ್ಲಿ ಪತ್ನಿಯನ್ನೆ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಂದ!

    ಕುಡಿದ ಮತ್ತಿನಲ್ಲಿ ಪತ್ನಿಯನ್ನೆ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಂದ!

    ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಯನ್ನ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

    ಜಯಮ್ಮ(52) ಕೊಲೆಯಾದ ದುರ್ದೈವಿ ಮಹಿಳೆ. ತುಮಕೂರು ಜಿಲ್ಲೆ ಹೆಬ್ಬೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ಪ್ರಕರಣ ನಡೆದಿದೆ. ಪಾಪಿ ಪತಿ ನಾಗರಾಜ್(58) ಕೊಲೆಗೈದ ಆರೋಪಿಯಾಗಿದ್ದಾನೆ. ನಾಗರಾಜ್ ಕ್ಷುಲ್ಲಕ ಕಾರಣಕ್ಕೆ ಜಯಮ್ಮಳನ್ನ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಲೆ ಮಾಡಿದ್ದೂ, ಅಲ್ಲದೆ ಬಾತ್ ರೂಂ ಫಿಟ್ ಗುಂಡಿಯಲ್ಲಿ ಬಿಸಾಡಿದ್ದಾನೆ. ಇದನ್ನೂ ಓದಿ: ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ

    ನಡೆದಿದ್ದೇನು?
    ನಾಗರಾಜ್, ಜಯಮ್ಮಳನ್ನು ಎರಡನೇ ಮದುವೆಯಾಗಿದ್ದನು. ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವೇಳೆ ಸ್ಕ್ರೂಡೈವರ್ ನಿಂದ ಪತ್ನಿಗೆ ಮನಬಂದಂತೆ ಚುಚ್ಚಿ ಕೊಲೆಗೈದಿದ್ದಾನೆ. ಬಳಿಕ ಮನೆ ಹಿಂಬದಿಯಿದ್ದ ಬಾತ್ ರೂಂ ಫಿಟ್ ಗೆ ಮೃತದೇಹವನ್ನ ಎಸೆದಿದ್ದಾನೆ.

    ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!