Tag: Wife

  • ಚಾಟ್ ಮಾಡಿದ್ದಕ್ಕೆ ಹೆಂಡತಿಯನ್ನೇ ಉಸಿರುಗಟ್ಟಿಸಿ ಕೊಂದ!

    ಚಾಟ್ ಮಾಡಿದ್ದಕ್ಕೆ ಹೆಂಡತಿಯನ್ನೇ ಉಸಿರುಗಟ್ಟಿಸಿ ಕೊಂದ!

    ಲಕ್ನೋ: ಹೆಂಡತಿ ಹೆಚ್ಚು ಸಮಯ ಚಾಟ್ ಮಾಡುವುದರಲ್ಲೇ ಸಮಯವನ್ನು ಕಳೆಯುತ್ತಿದ್ದ ಹಿನ್ನೆಲೆ, ಪತಿಯು ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಂದಿರುವ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

    ಉನ್ನಾವೋ ಜಿಲ್ಲೆಯ ಹಸನ್‍ಗಂಜ್ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಹ್ಮದ್‍ಪುರ ವಡೆ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹೆಂಡತಿಯನ್ನು ಕೊಂದ ನಂತರ ಪತಿಯೇ ಪೊಲೀಸರ ಬಳಿ ಬಂದು ತಪ್ಪನ್ನು ಒಪ್ಪಿಕೊಂಡಿದ್ದಾನೆ. ನನ್ನ ಪತ್ನಿ ಹೆಚ್ಚು ಸಮಯ ಫೋನ್ ನೋಡುವುದರಲ್ಲಿ ಮತ್ತು ಬೇರೆಯವರ ಜೊತೆ ಚಾಟ್ ಮಾಡುವುದರಲ್ಲಿ ಕಾಲ ಕಳೆಯುತ್ತಿದ್ದಳು. ಅದಕ್ಕೆ ಆಕೆ ಮೇಲೆ ಕೋಪ ಹೆಚ್ಚಾಗಿ ಈ ಕೆಲಸ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ನಾನಾ ವೇಷ ತೊಟ್ಟು ಜನರಿಗೆ ಟೋಪಿ ಹಾಕಿದ್ದ ಸ್ವಾಮೀಜಿ ಪೊಲೀಸರ ಅತಿಥಿ!

    ಈ ಕುರಿತು ಮಾತನಾಡಿದ ಪೊಲೀಸ್ ಅಧಿಕಾರಿಗಳು, ಪತ್ನಿ ಆರತಿ ಯಾವಾಗಲೂ ತನ್ನ ಫೋನ್‌ನಲ್ಲಿ ಬ್ಯುಸಿಯಾಗಿರುತ್ತಿದ್ದಳು. ಪತಿ ಅರುಣ್ ಒಂದು ವೇಳೆ ಆಕೆಯ ಫೋನ್ ಚೆಕ್ ಮಾಡಲು ಬಂದ್ರೆ ಅವನ ಜೊತೆಗೆ ಜಗಳವಾಡುತ್ತಿದ್ದಳು. ಈ ಹಿನ್ನೆಲೆ ಅರುಣ್‍ ಕೋಪಗೊಂಡು ಜಗಳವಾಡಿದ್ದಾರೆ. ಈ ವೇಳೆ ಪಕ್ಕದಲ್ಲೇ ಇದ್ದ ಸೀರೆಯನ್ನು ತೆಗೆದುಕೊಂಡು ಆಕೆಯ ಕುತ್ತಿಗೆಗೆ ಸುತ್ತಿ ಬಿಗಿದಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ವಿವರಿಸಿದ್ದಾರೆ.

    ಪ್ರಸ್ತುತ ಪೊಲೀಸರು ಆರೋಪಿ ಅರುಣ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಿದ್ದಾರೆ. ಅರುಣ್ ಎಂಟು ವರ್ಷಗಳ ಹಿಂದೆ ಆರತಿ ಅವರನ್ನು ಮದುವೆಯಾಗಿದ್ದರು. ಇವರಿಗೆ ಒಬ್ಬ ಮಗನಿದ್ದ. ಅವರು ತಮ್ಮ ಮನೆ ಸಮೀಪದ ಅಂಗಡಿಯಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಂಜನೇಯನ ಜನ್ಮಭೂಮಿ ಹೈಜಾಕ್ – ಬಿಜೆಪಿ ಯಾಕೆ ಸುಮ್ಮನಿದೆ ಉಗ್ರಪ್ಪ ಪ್ರಶ್ನೆ

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

  • ವರದಕ್ಷಿಣೆಗಾಗಿ ಪತ್ನಿ, ಮಗಳನ್ನೇ ಮನೆಯಿಂದ ಹೊರಹಾಕಿದ ವೈದ್ಯ!

    ವರದಕ್ಷಿಣೆಗಾಗಿ ಪತ್ನಿ, ಮಗಳನ್ನೇ ಮನೆಯಿಂದ ಹೊರಹಾಕಿದ ವೈದ್ಯ!

    ಗಾಂಧಿನಗರ: ವೈದ್ಯನೊಬ್ಬ ವರದಕ್ಷಿಣೆ ತರುವಂತೆ ಹಿಂಸಿಸಿದ್ದಲ್ಲದೇ ಪತ್ನಿ ಹಾಗೂ ತನ್ನ 7 ವರ್ಷದ ಮಗಳನ್ನೇ ಮನೆಯಿಂದ ಹೊರಹಾಕಿದ ಘಟನೆಯೊಂದು ಗುಜರಾತ್‍ನ ಅಹಮ್ಮದಾಬಾದ್‍ನಲ್ಲಿ ನಡೆದಿದೆ.

    ರಾಜಸ್ಥಾನ ಮೂಲದ ವೈದ್ಯ 2011ರಲ್ಲಿ ಮದುವೆಯಾಗಿದ್ದಾನೆ. ಮೊದ ಮೊದಲು ಪತ್ನಿ ಜೊತೆ ಚೆನ್ನಾಗಿಯೇ ಇದ್ದ ಆತ, ನಂತರ ತನ್ನ ಹೆತ್ತವರ ಜೊತೆ ಸೇರಿಕೊಂಡು ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸಲು ಆರಂಭಿಸಿದ್ದಾನೆ. ಈ ಮಧ್ಯೆ ದಂಪತಿಗೆ ಹೆಣ್ಣು ಮಗು ಕೂಡ ಜನಿಸಿತ್ತು. ಆ ಬಳಿಕವಂತೂ ಆತ ಪತ್ನಿಯನ್ನು ಮತ್ತಷ್ಟು ಪೀಡಿಸಲು ಶುರು ಮಾಡಿದ. ಇದನ್ನೂ ಓದಿ: ಉಕ್ರೇನ್‌ಗೆ ಸಹಕಾರ ನೀಡುತ್ತೇವೆ ಎಂದಿದ್ದ ಅಮೆರಿಕ ಸೇನೆಯನ್ನು ಕಳುಹಿಸಿಲ್ಲ ಯಾಕೆ?

    ಇತ್ತ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಆತ 2014ರಲ್ಲಿ ತಮಿಳುನಾಡಿನ ತಂಜಾವೂರಿಗೆ ಶಿಫ್ಟ್ ಆದ. ಈ ವೇಳೆ ಪತ್ನಿ ಕೂಡ ಪತಿ ಜೊತೆಗೇ ತೆರಳಿದ್ದಾಳೆ. ಆದರೆ ಅಲ್ಲಿ ಆತ ಬೇರೊಂದು ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ. ಈ ವಿಚಾರ ಪತ್ನಿ ಗಮನಕ್ಕೆ ಬಂದಿದೆ. ಕೂಡಲೇ ಈ ಕುರಿತು ಪತಿಯನ್ನು ಪ್ರಶ್ನೆ ಮಾಡಿದಳು. ಇದರಿಂದ ಸಿಟ್ಟಿಗೆದ್ದ ವೈದ್ಯ, ಪತ್ನಿಯನ್ನು ಚೆನ್ನಾಗಿ ಥಳಿಸಿದ್ದಾನೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷ ಪುಟಿನ್‌ಗೆ ವೈಯಕ್ತಿಕ ನಿರ್ಬಂಧ ಹೇರಲು ಮುಂದಾದ ಅಮೆರಿಕ

     

    ಪತಿಯ ಹಿಂಸೆ ತಾಳಲಾರದೆ ಪತ್ನಿ ತನ್ನ ತವರಿಗೆ ತೆರಳಿದಳು. ಆದರೆ ತವರು ಮನೆಯವರು ಅವಳ ಮನಸ್ಸನ್ನು ಪರಿವರ್ತನೆ ಮಾಡಿ, ಇಬ್ಬರನ್ನು ಬಲವಂತವಾಗಿ ಹೊಂದಾಣಿಕೆ ಮಾಡಿಸಿ ಮತ್ತೆ ಪತಿ ಬಳಿ ಕಳುಹಿಸಿದ್ದಾರೆ. 2020ರಲ್ಲಿ ಮತ್ತೆ 20 ಲಕ್ಷ ಹಣ ತರುವಂತೆ ಬೇಡಿಕೆ ಇಟ್ಟ. ಆಸ್ಪತ್ರೆ ಕಟ್ಟಿಸಬೇಕು ಹಣ ಬೇಕು, ತವರಿಂದ ಹಣ ತರುವಂತೆ ತಿಳಿಸಿದ್ದಾನೆ. ಅಂತೆಯೇ ಪತ್ನಿ ತನ್ನ ತವರು ಮನೆಯಲ್ಲಿ ಹಣ ಕೇಳಿದ್ದಾಳೆ. ಆದರೆ ಅವರು ಹಣ ಕೊಡಲು ಒಪ್ಪಲಿಲ್ಲ. ಇದರಿಂದ ರೊಚ್ಚಿಗೆದ್ದ ವೈದ್ಯ ತನ್ನ ಪತ್ನಿ ಹಾಗೂ ಮಗಳನ್ನು ಮನೆಯಿಂದ ಹೊರಹಾಕಿದ್ದಾನೆ.

    ಸದ್ಯ ಪತ್ನಿ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪತಿ ದೂರು ದಾಖಲಿಸಿದ್ದಾಳೆ.

  • ಪತಿ ಕೊಂದು ದೇಹದ ತುಂಡುಗಳನ್ನು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ

    ಪತಿ ಕೊಂದು ದೇಹದ ತುಂಡುಗಳನ್ನು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ

    ಭೋಪಾಲ್: 40 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ವಿಭಿನ್ನ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯನ್ನು ಸುನೀತಾ ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ ತನ್ನ ಪತಿ ಬಬ್ಲು ಜಾಡೋನ್ ಹತ್ಯೆಗೈದಿದ್ದಾಳೆ. ಮಹಿಳೆಯ ಮೃತ ವ್ಯಕ್ತಿಯ ಪುತ್ರ ಪ್ರಶಾಂತ್ ಮದ್ಯದ ಅಮಲಿನಲ್ಲಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕುಡಿಯಲು ಹಣ ನೀಡದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

    ಫೆಬ್ರವರಿ 6ರಂದು ಈ ಘಟನೆ ನಡೆದಿದ್ದು, ಸುನೀತಾ ಜಾಡೋನ್ ಊಟದಲ್ಲಿ ವಿಷವನ್ನು ಬೆರೆಸಿ ಬಬ್ಲು ಜಾಡೋನ್‍ಗೆ ನೀಡಿದ್ದಾಳೆ. ಇದರಿಂದ ಆತ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆ ತನ್ನ ಸ್ನೇಹಿತ ರಿಜ್ವಾನ್ ಜೊತೆ ಸೇರಿ ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ನಗರದಲ್ಲಿ ಮಾಂಸದ ಅಂಗಡಿ ನಡೆಸುತ್ತಿದ್ದ ರಿಜ್ವಾನ್ ಮತ್ತು ಭಯ್ಯು ಬಬ್ಲು ಜಾಡೋನ್ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ, ಶವದ ತುಂಡುಗಳನ್ನು ವಿವಿಧೆಡೆ ಎಸೆದಿದ್ದಾರೆ. ಆತನ ಕಾಲು ಮತ್ತು ಕೈಗಳನ್ನು ದೇವಾಸ್ ಅರಣ್ಯಪ್ರದೇಶದಲ್ಲಿ ಎಸೆದಿದ್ದು, ಸುನೀತಾ ಮುಂಡ ಮತ್ತು ತಲೆಯನ್ನು ಅವರ ಮನೆಯ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಹೂತಿಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗುರುವಾರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಮಗ ಪ್ರಶಾಂತ್ ಜೇಡನ್ ತನ್ನ ಸ್ನೇಹಿತನಿಗೆ ತನ್ನ ತಂದೆಯನ್ನು ಕೊಂದು ಹೂತಿಟ್ಟಿರುವುದಾಗಿ ತಿಳಿದಾಗ ವಿಷಯ ಬೆಳಕಿಗೆ ಬಂದಿದೆ. ಮತ್ತು ತನ್ನ ತಂದೆಯನ್ನು ತಾಯಿ ಕೊಂದ ಈ ವಿಚಾರ ಯಾರಿಗೂ ತಿಳಿದಿಲ್ಲ. 20 ದಿನಗಳ ಹಿಂದೆ ತಂದೆಯನ್ನು ಕೊಂದು ಶವವನ್ನು ಎಸೆದಿರುವುದಾಗಿ ಪ್ರಶಾಂತ್ ಜೇಡನ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಈ ಪ್ರಕರಣ ಸಂಬಂಧ ಪೊಲೀಸರು ಶುಕ್ರವಾರ ಬೆಳಗ್ಗೆ ಸುನೀತಾ ಮತ್ತು ಪ್ರಶಾಂತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಸುನೀತಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ ಮತ್ತು ತನ್ನ ಪತಿ ತನಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾಳೆ. ಮತ್ತೊಂದೆಡೆ ರಿಜ್ವಾನ್ ಮತ್ತು ಭಯ್ಯೂ ತಲೆಮರೆಸಿಕೊಂಡಿದ್ದಾರೆ.

  • ಕೌಟುಂಬಿಕ ಕಲಹ – ನಾಪತ್ತೆಯಾದ ಪತ್ನಿ ಫೋಟೋಗೆ ಫೇಸ್‍ಬುಕ್‍ನಲ್ಲಿ RIP ಸಿಂಬಲ್

    ಕೌಟುಂಬಿಕ ಕಲಹ – ನಾಪತ್ತೆಯಾದ ಪತ್ನಿ ಫೋಟೋಗೆ ಫೇಸ್‍ಬುಕ್‍ನಲ್ಲಿ RIP ಸಿಂಬಲ್

    ಚಿಕ್ಕಬಳ್ಳಾಪುರ: ಬರ್ತ್‍ಡೇ ಪಾರ್ಟಿ ವಿಚಾರವಾಗಿ ಗಂಡ, ಹೆಂಡತಿ ನಡುವೆ ಜಗಳ ನಡೆದಿದ್ದು, ಹೆಂಡತಿ ನಾಪತ್ತೆಯಾಗಿದ್ದಾಳೆ. ನಂತರ ಗಂಡನ ಫೇಸ್‍ಬುಕ್ ಖಾತೆಯಲ್ಲಿ ಹೆಂಡತಿ ಫೋಟೋಗೆ RIP ಅಂತ ಹಾಕಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಇನ್ನು ಈ ಪೋಸ್ಟ್ ಕಂಡು ಯುವತಿಯ ಪೋಷಕರು ಮಗಳನ್ನು ಹುಡುಕಿಕೊಂಡು ಗಂಡನ ಮನೆಗೆ ಬಂದಿದ್ದು, ಅಳಿಯನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

    ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಉದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 22 ವರ್ಷದ ಲೀಲಾವತಿ ನಾಪತ್ತೆಯಾದ ಗೃಹಿಣಿಯಾಗಿದ್ದಾರೆ. ಲೀಲಾವತಿ ಅವರನ್ನು ಊದನಹಳ್ಳಿ ಗ್ರಾಮದ ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ಜೊತೆ ಮದುವೆ ಮಾಡಿಕೊಡಲಾಗಿತ್ತು. ಫೆಬ್ರವರಿ 23ರ ರಾತ್ರಿ ಮುನಿಕೃಷ್ಣ ತನ್ನ ತಂಗಿ ಮಗನ ಬರ್ತ್‍ಡೇ ಪಾರ್ಟಿಗೆ ಹೋಗಿದ್ದರು. ಇದೇ ವಿಚಾರಕ್ಕೆ ಲೀಲಾವತಿ ಹಾಗೂ ಮುನಿಕೃಷ್ಣನ ಇಬ್ಬರು ಜಗಳವಾಡಿದ್ದರು. ಈ ವೇಳೆ ಮುನಿಕೃಷ್ಣ ಹೆಂಡತಿಗೆ ಹೊಡೆದಿದ್ದರು. ಮರುದಿನ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮುನಿಕೃಷ್ಣ ತನ್ನ ಫೇಸ್‍ಬುಕ್ ಅಕೌಂಟ್‍ನಲ್ಲಿ ಹೆಂಡತಿಯ ಫೋಟೋಗೆ RIP ಅಂತ ಬರೆದು ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಹಾಕಲಾಗಿತ್ತು. ಇದನ್ನೂ ಓದಿ: ಪ್ರವಾಸಿಗರಿಗೆ ಸಿಹಿ ಸುದ್ದಿ- ಡಾರ್ಜಿಲಿಂಗ್‍ನ ಟಾಯ್ ರೈಲಿನ ದರ ಇಳಿಕೆ

    chikkaballapur

    ಈ ಪೋಸ್ಟ್ ನೋಡಿ ಗಾಬರಿಗೊಂಡ ಲೀಲಾವತಿ ತಂದೆ ಉದನಹಳ್ಳಿಗೆ ಬಂದು ಮಗಳನ್ನು ಹುಡುಕಾಡಿದ್ದಾರೆ. ಆದರೆ ಮಗಳು ಪತ್ತೆಯಾಗದ ಕಾರಣ ತನ್ನ ಮಗಳನ್ನು ಹೊಡೆದು ಸಾಯಿಸಿದ್ದಾನೆಂದು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ ಮುನಿಕೃಷ್ಣನ ತಮ್ಮ ಮುನಿರಾಜು ಬೇರೆಯದೇ ಕಥೆ ಹೇಳುತ್ತಿದ್ದಾರೆ. ಬರ್ತ್‍ಡೇ ಪಾರ್ಟಿ ವಿಚಾರಕ್ಕೆ ಅಣ್ಣ, ಅತ್ತಿಗೆ ನಡುವೆ ಜಗಳವಾಗಿ ಮರುದಿನ ಬೆಳಗ್ಗೆ ಅತ್ತಿಗೆಗೆ ಅಣ್ಣ ಹೊಡೆದಿದ್ದು ನಿಜ. ಆ ನಂತರ ಅತ್ತಿಗೆ ಬ್ಯಾಗ್ ತೆಗೆದುಕೊಂಡು ಮನೆ ಬಿಟ್ಟು ಹೋಗಿದ್ದಾರೆ. ಅಣ್ಣನ ಮೊಬೈಲ್ ಆಕೆಯ ಬಳಿ ಇದ್ದು, ಅತ್ತಿಗೆಯೇ ಅಣ್ಣನ ಫೇಸ್‍ಬುಕ್ ಅಕೌಂಟ್‍ನಲ್ಲಿ ತನ್ನ ಫೋಟೋ ಹಾಕಿ RIP ಎಂದು ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಎಂದು ವಾದ ಮಾಡಿದ್ದಾರೆ.

    chikkaballapur

    ಸದ್ಯ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೀಲಾವತಿ ನಾಪತ್ತೆಗೆ ಸಂಬಂಧಿಸಿದಂತೆ ದೂರು ನೀಡಲಾಗಿದ್ದು, ಆಕೆಯ ಗಂಡ ಮುನಿಕೃಷ್ಣನನ್ನು ಠಾಣೆಗೆ ಕರೆದು ವಿಚಾರಣೆ ಮಾಡಲಾಗಿದೆ. ಜೊತೆಗೆ ಮೊಬೈಲ್ ಟವರ್ ಲೋಕೇಷನ್ ಪತ್ತೆ ಮಾಡಿದ್ದಾಗ ಆ ಮೊಬೈಲ್ ತಿರುಪತಿಯಲ್ಲಿರುವ ಮಾಹಿತಿ ಬರುತ್ತಿದೆ. ಆಸರೆ ಆಕೆ ಬದುಕಿದ್ದಾಳಾ ಇಲ್ಲವಾ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಬಾಂಬ್ ಆರ್ಭಟ – 30 ಗಂಟೆಗಳ ಕಾಲ ಮೆಟ್ರೋ ಸುರಂಗದಲ್ಲೇ ಕುಳಿತ ಭಾರತೀಯ ವಿದ್ಯಾರ್ಥಿಗಳು

  • ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಚ್ಚಿನಿಂದ ಕೊಚ್ಚಿ ಹೆಂಡತಿ, ಅತ್ತೆ ಕೊಲೆ

    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಚ್ಚಿನಿಂದ ಕೊಚ್ಚಿ ಹೆಂಡತಿ, ಅತ್ತೆ ಕೊಲೆ

    ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದ ವ್ಯಕ್ತಿಯೋರ್ವ ಪತ್ನಿ ಹಾಗೂ ಅತ್ತೆಯನ್ನು ಕೊಂದಿರುವ ಘಟನೆ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಸಾವಿತ್ರಿ ಹಾಗೂ ಸರೋಜಮ್ಮ ಎಂದು ಗುರುತಿಸಲಾಗಿದ್ದು, ರವಿಕುಮಾರ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಹೆಂಡತಿಯ ಅನೈತಿಕ ಸಂಬಂಧಕ್ಕೆ ಬೇಸತ್ತಿದ್ದ ರವಿಕುಮಾರ್, ಪದೇ ಪದೇ ಹೆಂಡತಿಗೆ ಬುದ್ಧಿವಾದ ಹೇಳಿದ್ದನು. ಆದರೂ ಹೆಂಡತಿ ತನ್ನ ಛಾಳಿಯನ್ನು ತಿದ್ದುಕೊಳ್ಳದ ಹಿನ್ನೆಲೆ ಮೊದಲು ವಾಸ ಮಾಡುತ್ತಿದ್ದ ಮನೆಯನ್ನು ಖಾಲಿ ಮಾಡಿ ಬೇರೆ ಕಡೆ ಮನೆ ಮಾಡಿದನು. ಬಳಿಕವೂ ಹೆಂಡತಿ ತನ್ನ ಹಳೇ ಗೆಳಯನನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತ ರವಿಕುಮಾರ್ ಇಂದು ಮಕ್ಕಳನ್ನು ಸ್ವತಃ ತಾನೇ ಸ್ಕೂಲ್‍ಗೆ ಬಿಟ್ಟಿದ್ದಾನೆ. ಇದನ್ನೂ ಓದಿ:  ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ನಂತರ ಸ್ಕೂಲಿನಿಂದ ಮನೆಗೆ ಬಂದು ಹೆಂಡತಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಎಳ ನೀರು ಕೊಚ್ಚುವ ಮಚ್ಚಿನಿಂದ ಪತ್ನಿ ಸಾವಿತ್ರಿ ಮತ್ತು ಆಕೆಯ ತಾಯಿ ಸರೋಜಮ್ಮ ಇಬ್ಬರನ್ನೂ ಕೊಚ್ಚಿ ಕೊಂದಿದ್ದಾನೆ. ಕೊಲೆ ಮಾಡಿ ತಕ್ಷಣ ತಾನೇ ತನ್ನ ಸ್ಕೂಟರ್ ಮೂಲಕ ಪೊಲೀಸ್ ಠಾಣೆಗೆ ತೆರಳಿ ಹೆಂಡತಿಯನ್ನು ಹತ್ಯೆ ಮಾಡಿರುವ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾನೆ. ಇದನ್ನೂ ಓದಿ:  ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

     

  • ಪೊಲೀಸ್ ಮಗಳನ್ನೆ ಕತ್ತು ಹಿಸುಕಿ ಕೊಂದ ಸ್ನೇಹಿತೆಯ ಪತಿ!

    ಪೊಲೀಸ್ ಮಗಳನ್ನೆ ಕತ್ತು ಹಿಸುಕಿ ಕೊಂದ ಸ್ನೇಹಿತೆಯ ಪತಿ!

    ನವದೆಹಲಿ: ಸ್ನೇಹಿತೆಯ ಪತಿ ಪೊಲೀಸ್ ಮಗಳನ್ನು ಕತ್ತು ಹಿಸುಕಿ ಕೊಂದ ಸುದ್ದಿ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.

    ಪೊಲೀಸ್ ಅಧಿಕಾರಿ ಮಗಳನ್ನು ಆಕೆಯ ಸ್ನೇಹಿತೆಯ ಪತಿ ಕತ್ತು ಹಿಸುಕಿ ಕೊಂದಿದ್ದು, ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಡಿಸಿಪಿ ಸಾಗರ್ ಸಿಂಗ್ ಕಲ್ಸಿ ಕೊಲೆ ಕುರಿತು ತನಿಖೆ ಮಾಡುತ್ತಿದ್ದಾರೆ.  ಇದನ್ನೂ ಓದಿ: ನ್ಯಾಯ ಪಂಚಾಯ್ತಿ ನೆಪದಲ್ಲಿ ಮುಖಂಡನ ಕೊಲೆ – ಇಬ್ಬರ ಬಂಧನ, ಮೂವರಿಗಾಗಿ ಶೋಧ!

    Cop’s daughter strangled to death by friend’s husband in Delhi; accused on the run

    ಡಿಸಿಪಿ(ಉತ್ತರ) ಸಾಗರ್ ಸಿಂಗ್ ಕಲ್ಸಿ ಈ ಕುರಿತು ಮಾಹಿತಿ ನೀಡಿದ್ದು, ಶುಕ್ರವಾರ ಸಂಜೆ 7:56 ಕ್ಕೆ ಘಟನೆಯ ಬಗ್ಗೆ ಕರೆ ಮಾಡಿ ನಮಗೆ ಎಚ್ಚರಿಕೆ ನೀಡಲಾಯಿತು. ಕರೆ ಬಂದ ತಕ್ಷಣ ಸ್ಥಳಕ್ಕೆ ಬಂದು ನೊಡಿದಾಗ ರೂಮ್ ನಲ್ಲಿ ಮಹಿಳೆ ಶವ ಪತ್ತೆಯಾಗಿದೆ. ತನಿಖೆ ಮಾಡಿದ ನಂತರ ಕೊಲೆಯಾದವರು ಪೊಲೀಸ್ ಮಗಳು ಎಂಬುದು ತಿಳಿದುಬಂದಿದೆ. ನಂತರ ಆಕೆಯ ಕುಟುಂಬದವರಿಗೆ ಕರೆ ಮಾಡಿ ವಿಷಯ ತಿಳಿಸಲಾಗಿದೆ. ಪ್ರಸ್ತುತ ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಇನ್ನು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

    ಆರೋಪಿ ವಿಮಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಎರಡು ತಿಂಗಳ ಹಿಂದೆ ಕೆಲಸ ಕಳೆದುಕೊಂಡಿದ್ದಾನೆ. ಅವರ ಪತ್ನಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಿಖೆ ಮಾಡುವಾಗ ಮೃತಳ ತಾಯಿ, ನನ್ನ ಮಗಳಿಗೆ ತನ್ನ ಸ್ನೇಹಿತೆಯ ಪತಿಯಿಂದ ಕರೆ ಬಂದಿದೆ. ಈ ಹಿನ್ನೆಲೆ ಆಕೆ ಅವನ ಜೊತೆ ಹೋಗಿದ್ದಾಳೆ ಎಂದು ವಿವರಿಸಿದರು.

    ಏನಿದು ಘಟನೆ?
    ಸಂಜೆ 4 ಗಂಟೆಯ ಸುಮಾರಿಗೆ ಸ್ನೇಹಿತೆಯ ಪತಿ ನನ್ನ ಮಗಳಿಗೆ ಕರೆ ಮಾಡಿದ್ದು, ಆತ ನನ್ನ ಹೆಂಡತಿಗೆ ‘ಪ್ರೇಮಿಗಳ ದಿನ’ದ ಉಡುಗೊರೆಯಾಗಿ ಸೀರೆಯನ್ನು ಖರೀದಿಸಬೇಕು. ಅದಕ್ಕೆ ನಿನ್ನ ಸಹಾಯಬೇಕು ಎಂದು ಕೇಳಿಕೊಂಡನು. ಶಾಲೆಯಿಂದಲೂ ಅವರಿಬ್ಬರು ಒಳ್ಳೆಯ ಸ್ನೇಹಿತರು ಎಂದು ಮೃತಳ ತಾಯಿ ವಿವರಿಸಿದರು.

    ಆತ ನನ್ನ ಮಗಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಲು ಬಂದನು. ಸಂಜೆ 5 ಗಂಟೆ ಸುಮಾರಿಗೆ, ನನ್ನ ಚಿಕ್ಕ ಮಗಳು ಮನೆಗೆ ಹಿಂದಿರುಗದ ಕಾರಣ ಅವಳಿಗೆ ಕರೆ ಮಾಡಿದೆ. ಆದರೆ ಅವಳ ಫೋನ್ ಸ್ವಿಚ್ ಆಫ್ ಆಗಿತ್ತು. ಅವಳು ಎಂದಿಗೂ ಸ್ವಿಚ್ ಆಫ್ ಮಾಡದ ಕಾರಣ ನಾವು ಚಿಂತಿತರಾಗಿದ್ದೆವು. ನಂತರ ನಾವು ಆಕೆಯ ಸ್ನೇಹಿತನಿಗೆ ಕರೆ ಮಾಡಲು ಪ್ರಾರಂಭಿಸಿದೆವು, ಅವರ ಫೋನ್ ಸಹ ಸ್ವಿಚ್ ಆಫ್ ಆಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ‘ಡ್ಯಾಡಿಸ್ ಏಂಜೆಲ್’ – ಆಲಿಯಾ ವಿರುದ್ಧ ಸಿಡಿದೆದ್ದ ತಲೈವಿ

    ರಾತ್ರಿ 9.30 ರ ಸುಮಾರಿಗೆ ನಮಗೆ ಪೊಲೀಸ್ ಠಾಣೆಯಿಂದ ಕರೆ ಬಂದಾಗ ಘಟನೆ ಬಗ್ಗೆ ನಮಗೆ ತಿಳಿಯಿತು. ಅವರು ನಮ್ಮನ್ನು ಸ್ಥಳಕ್ಕೆ ಬರುವಂತೆ ತಿಳಿಸಿದರು. ನನ್ನ ಮಗಳನ್ನು ಸ್ನೇಹಿತೆಯ ಪತಿಯೇ ಹತ್ಯೆಗೈದಿದ್ದಾನೆ ಎಂದು ಪೊಲೀಸರು ನಮಗೆ ತಿಳಿಸಿದಾಗ ನಾವು ಆಘಾತಕ್ಕೆ ಒಳಗಾದೆವು ಎಂದು ಹೇಳಿದರು.

  • 100ನೇ ವರ್ಷದ ಹುಟ್ಟುಹಬ್ಬಕ್ಕೆ 90ರ ಹೆಂಡತಿಯನ್ನು ಮರುಮದುವೆಯಾದ

    100ನೇ ವರ್ಷದ ಹುಟ್ಟುಹಬ್ಬಕ್ಕೆ 90ರ ಹೆಂಡತಿಯನ್ನು ಮರುಮದುವೆಯಾದ

    ಕೋಲ್ಕತ್ತಾ: ಹುಟ್ಟು, ಸಾವು ನಮ್ಮ ಕೈಯಲ್ಲಿ ಇಲ್ಲ. ಆದರೆ ಇರುವಷ್ಟು ದಿನ ಸಂತೋಷವಾಗಿರಬೇಕು ಎಂದು ಹಿರಿಯರು ಹೇಳುತ್ತಾರೆ. ಇಲ್ಲೊಬ್ಬ ವ್ಯಕ್ತಿ ತನ್ನ 100ನೇ ಹುಟ್ಟುಹಬ್ಬವನ್ನು ಆಚರಿಸುವ ವೇಳೆ 90 ವರ್ಷದ ಹೆಂಡತಿಯನ್ನು ಮರುಮದುವೆ ಮಾಡಿಕೊಂಡಿದ್ದಾನೆ. ಈ ಮದುವೆಯಲ್ಲಿ ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಭಾಗವಹಿಸಿದ್ದರು.

    ಪಶ್ಚಿಮ ಬಂಗಾಳದ ಹಳ್ಳಿಯೊಂದರ ನಿವಾಸಿ ಬಿಸ್ವನಾಥ್ ಸರ್ಕಾರ್, ತಮ್ಮ 100ನೇ ಹುಟ್ಟುಹಬ್ಬವನ್ನು ಆಚರಿಸಲು 90 ವರ್ಷದ ಪತ್ನಿ ಸುರೋಧ್ವನಿ ಸರ್ಕಾರ್ ಅವರನ್ನು ಮರುಮದುವೆ ಮಾಡಿಕೊಂಡಿದ್ದಾರೆ. 100 ನೇ ವರ್ಷಕ್ಕೆ ಕಾಲಿಟ್ಟಾಗ ಬಿಸ್ವನಾಥ್ ಅವರಿಗೆ ಏನಾದರೂ ವಿಶೇಷವಾದದ್ದನ್ನು ಮಾಡಲು ಬಯಸಿದ್ದರು ಹೀಗಾಗಿ ಕುಟುಂಬಸ್ಥರು ಈ ಯೋಚನೆ ಮಾಡಿದ್ದಾರೆ.

    ಮಾವನ ಮದುವೆ ಕುರಿತಾಗಿ ಮಾತನಾಡಿದ ಸೊಸೆ, ಬಿಸ್ವನಾಥ್ ಅವರು ಆರು ಮಕ್ಕಳು, 23 ಮೊಮ್ಮಕ್ಕಳು ಮತ್ತು 10 ಮೊಮ್ಮಕ್ಕಳು ಉಪಸ್ಥಿತಿಯಲ್ಲಿ 90 ವರ್ಷದ ಪತ್ನಿ ಸುರೋಧ್ವನಿ ಅವರನ್ನು ಮರುಮದುವೆಯಾದರು. ಕೆಲವು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಇದೇ ರೀತಿಯದ್ದನ್ನು ನೋಡಿದಾಗ ಮರುಮದುವೆ ಮಾಡುವ ಆಲೋಚನೆ ತನಗೆ ಹೊಳೆದಿತ್ತು . ಈ ಬಗ್ಗೆ ನಾನು ಕುಟುಂಬಸ್ಥರಿಗೆ ಹೇಳಿದೆ. ಬೇರೆ ರಾಜ್ಯಗಳಲ್ಲಿ ವಾಸಿಸುವ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮಕ್ಕಳು ಹಳ್ಳಿಗೆ ಬಂದರು ಹೀಗಾಗಿ ಗ್ರ್ಯಾಂಡ್ ಆಗಿ ಸೆಲೆಬ್ರೆಟ್ ಮಾಡಲು ಸಾಧ್ಯವಾಯಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ವಿಶ್ವದ ಸ್ವೀಟೆಸ್ಟ್‌ ಭಯೋತ್ಪಾದಕ: ಅರವಿಂದ್‌ ಕೇಜ್ರಿವಾಲ್‌

    ನಮ್ಮ ಅಜ್ಜಿಯರು ಜಿಯಾಗಂಜ್‍ನ ಬೆನಿಯಾಪುಕುರ್ ಗ್ರಾಮದಲ್ಲಿ ವಾಸಿಸುತ್ತಿದ್ದರೂ, ನಮ್ಮ ಪೂರ್ವಜರ ಮನೆಯು ಸುಮಾರು ಐದು ಕಿಮೀ ದೂರದಲ್ಲಿರುವ ಬಮುನಿಯಾ ಗ್ರಾಮದಲ್ಲಿದೆ. ನನ್ನ ಅಜ್ಜಿಯನ್ನು ಎರಡು ದಿನಗಳ ಹಿಂದೆ ಅಲ್ಲಿಗೆ ಕರೆದೊಯ್ಯಲಾಯಿತು, ಅಜ್ಜಿ, ಅಜ್ಜನನ್ನು ಮದುವೆಗೆ ತಯಾರು ಮಾಡುವ ಜವಾಬ್ದಾರಿಯನ್ನು ಮೊಮ್ಮಕ್ಕಳು ವಹಿಸಿಕೊಂಡಿದ್ದೇವು.

    ವರನಾದ ಅಜ್ಜನನ್ನು ವಧು ಮನೆಗೆ ಕರೆತರುವಾಗ ಕುದುರೆ-ಬಂಡಿಯಲ್ಲಿ ಪಟಾಕಿ ಸೌಂಡ್ ಮಧ್ಯೆ ಭರ್ಜರಿಯಾಗಿ ಎಂಟ್ರಿಕೊಟ್ಟರು. ದಂಪತಿ ಧೋತಿ-ಕುರ್ತಾ ಮತ್ತು ಸೀರೆಯನ್ನು ಧರಿಸಿ ಮದುವೆಗೆ ಸಿಂಗಾರಗೊಂಡಿದ್ದರು. ನೋಟುಗಳಿಂದ ಮಾಡಿದ ಹಾರಗಳನ್ನು ಬದಲಾಯಿಸಿಕೊಂಡರು. ನಂತರ ರುಚಿಯಾದ ಭೋಜನವನ್ನು ಏರ್ಪಡಿಸಲಾಗಿತ್ತು. ಈ ಸಂತೋಷದ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ನೆರೆಹೊರೆಯವರನ್ನೂ ಆಹ್ವಾನಿಸಲಾಗಿತ್ತು.

     

  • ಪ್ರಿಯತಮನ ಕೊಲೆ ಮಾಡಿದ ಪ್ರಿಯತಮೆ – 7 ವರ್ಷದ ಬಳಿಕ ಅರೆಸ್ಟ್!

    ಪ್ರಿಯತಮನ ಕೊಲೆ ಮಾಡಿದ ಪ್ರಿಯತಮೆ – 7 ವರ್ಷದ ಬಳಿಕ ಅರೆಸ್ಟ್!

    ಬೆಂಗಳೂರು: ಅಕ್ರಮ ಸಂಬಂಧವನ್ನು ಮುಂದುವರೆಸುವಂತೆ ಒತ್ತಾಯ ಮಾಡುತ್ತಿದ್ದ ಪ್ರಿಯಕರನ ಕೊಂದು ಹೆಣವನ್ನು ಸಾಗಿಸಿದ್ದ ದಂಪತಿಯನ್ನು ಏಳು ವರ್ಷದ ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

    2015 ರ ಮರ್ಡರ್ ಮಿಸ್ಟರಿ ಕಥೆ!
    ಪತಿ ಮಹಮ್ಮದ್ ಗೌಸ್, ಪತ್ನಿ ಕೌಸರ್ ಸೇರಿ ಪ್ರಿಯತಮ ವಜೀರ್‍ನನ್ನು ಕೊಲೆ ಮಾಡಿದ್ದರು. 2015ರ ಮೇ 13 ರಂದು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಹೆಗ್ಗನಹಳ್ಳಿಯ ಮನೆಯಲ್ಲಿ ದಂಪತಿ ಸೇರಿ ವಜೀರ್ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಮತ್ತೆ ಕ್ಲೋಸ್ ಆಯ್ತು ಫ್ಲೈಓವರ್ – ಕಳಪೆ ಕಾಮಗಾರಿ ಎಂದ ತಜ್ಞರು

    ಮೃತ ವಜೀರ್ ಜೊತೆ ಕೌಸರ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಕೌಸರ್, ವಜೀರ್ ಜೊತೆ ಸಂಬಂಧವನ್ನು ಬಿಟ್ಟು ತನ್ನ ಪತಿ ಜೊತೆ ಇರೋದಕ್ಕೆ ಇಚ್ಚಿಸಿದ್ಲು. ಆದ್ರೆ, ವಜೀರ್ ಗೆ ಕೌಸರ್ ಬಿಟ್ಟುಕೊಡೋಕೆ ಇಷ್ಟ ಇರಲಿಲ್ಲ. ಈ ವಿಚಾರವಾಗಿ ಇವರಿಬ್ಬರ ನಡುವೆ ಪದೇ-ಪದೇ ಗಲಾಟೆಯಾಗುತ್ತಿತ್ತು.

    ಈ ಪರಿಣಾಮ ಪತಿ ಗೌಸ್ ಜೊತೆ ಸೇರಿ ಪ್ರಿಯತಮನ ಕೊಲೆಗೆ ಕೌಸರ್ ಸ್ಕೇಚ್ ಹಾಕಿದ್ದಳು. ಅದಕ್ಕೆ 2015 ಮೇ 13 ರಂದು ವಜೀರ್‍ನನ್ನು ಮನೆಗೆ ಕರೆಯಿಸಿಕೊಂಡಿದ್ದಾಳೆ. ವಜೀರ್ ಮನೆಗೆ ಬಂದಾಗ ಗೌಸ್ ಮಂಚದ ಕೆಳಗೆ ಅವಿತು ಕುಳಿತಿದ್ದು, ಮನೆ ಆತ ಬರ್ತಿದ್ದಂತೆ ವೇಲ್ ನಲ್ಲಿ ಕೌಸರ್ ಕತ್ತು ಬಿಗಿದಿದ್ದಾಳೆ. ನಂತರ ದಂಪತಿ ಸೇರಿ ವಜೀರ್ ಕತ್ತು ಬಿಗಿದು ಕೊಲೆ ಮಾಡಿದ್ರು.

    ಪ್ರಿಯತಮನ ಬೈಕ್‍ನಲ್ಲೇ ಹೆಣ ಪ್ಯಾಕ್!
    ಕೊಲೆ ಮಾಡಿದ ದಂಪತಿ ವಜೀರ್ ಬೈಕ್‍ನಲ್ಲೇ ಹೆಣ ಪ್ಯಾಕ್ ಮಾಡಿ ಸಾಗಿಸಿದ್ದಾರೆ. ನಂತರ ಈ ಇಬ್ಬರು ಆಂಧ್ರದ ಪಾಲಸಮುದ್ರಕ್ಕೆ ಶವವನ್ನು ಎಸೆದು ಅಲ್ಲಿಂದ ಎಸ್ಕೇಪ್ ಆಗಿದ್ರು. ಇದನ್ನೂ ಓದಿ:  ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ

    ವಜೀರ್ ಕುಟುಂಬದವರು ಕಾಮಾಕ್ಷಿಪಾಳ್ಯದಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದು, ಆತನನ್ನು ಪೊಲೀಸರು ಹುಡುಕುತ್ತಿದ್ದರು. ಇತ್ತೀಚಿಗಷ್ಟೆ ಬೆಂಗಳೂರು ಹೆಗ್ಗನಹಳ್ಳಿಗೆ ಬಂದಿದ್ದ ಗೌಸ್ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ನಂತರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ಮಾಡುತ್ತಿದ್ದಂತೆ ಕೊಲೆ ರಹಸ್ಯ ಬಯಲಾಗಿದೆ. ಬಳಿಕ ಗಂಡ-ಹೆಂಡತಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

  • ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ

    ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಜಗಳವಾಡಿದ್ದು, ಪರಿಣಾಮ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಸುರೇಂದ್ರ ಅವರ ಪತ್ನಿ ಸ್ನೇಹಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸುರೇಂದ್ರ ಸಹ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಸುರೇಂದ್ರ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!

    ಸ್ನೇಹಾ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತಳ ಪೋಷಕರು ಹಾಗೂ ಸಂಬಂಧಿಕರ ಆಗಮನಕ್ಕಾಗಿ ಕಾದಿದ್ದು, ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.

  • ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!

    ಪುಟ್ಟ ಕಂದಮ್ಮನೊಂದಿಗೆ ಪತಿಯನ್ನು ಹುಡುಕುತ್ತಾ ಕಾಡಿಗೆ ತೆರಳಿದ ಪತ್ನಿ..!

    ರಾಯ್‍ಪುರ: ಮಾವೋವಾದಿಗಳು ಅಪಹರಿಸಿದ ಪತಿಯನ್ನು ಹುಡುಕುತ್ತಾ ಪತ್ನಿ ತನ್ನ ಎರಡೂವರೆ ವರ್ಷದ ಮಗಳೊಂದಿಗೆ ಅರಣ್ಯಕ್ಕೆ ಹೋಗಿರುವ ಭಾವನಾತ್ಮಕ ಘಟನೆ ರಾಯ್‍ಪುರದಲ್ಲಿ ನಡೆದಿದೆ.

    ಛತ್ತೀಸ್‍ಗಢದಲ್ಲಿ ತನ್ನ ಎಂಜಿನಿಯರ್ ಪತಿ ಅಶೋಕ್ ಅವರನ್ನು ಮಾವೋವಾದಿಗಳು ಅಪಹರಿಸಿದ ಕೆಲವು ದಿನಗಳ ನಂತರ, ಪತ್ನಿ ಸೋನಾಲಿ ಪವಾರ್, ಅವರನ್ನು ಬಿಡುಗಡೆ ಮಾಡುವಂತೆ ಭಾವನಾತ್ಮಕ ಮನವಿ ಮಾಡಿಕೊಂಡಿದ್ದರು. ಆದರೆ ಕೊನೆಗೂ ಅವರನ್ನು ಕಿಡಿಗೇಡಿಗಳು ಬಿಡುಗಡೆ ಮಾಡಿಲ್ಲ. ಪರಿಣಾಮ ತನ್ನ ಅಪ್ರಾಪ್ತ ಮಗಳೊಂದಿಗೆ ಸೋನಾಲಿ ಅವರು ಮಾವೋವಾದಿಗಳ ದಟ್ಟವಾದ ಅಬುಜ್ಮದ್ ಅರಣ್ಯಕ್ಕೆ ಪ್ರಯಾಣಿಸಿದ್ದಾರೆ.

    ಮಂಗಳವಾರ ಸಂಜೆ ಎಂಜಿನಿಯರ್ ಅಶೋಕ್ ಪವಾರ್ ಮತ್ತು ಕೆಲಸಗಾರ ಆನಂದ್ ಯಾದವ್ ಅವರನ್ನು ಮಾವೋವಾದಿಗಳು ಅವರಿಗೆ ಯಾವುದೇ ರೀತಿಯ ಹಾನಿಯಾಗದಂತೆ ಬಿಡುಗಡೆ ಮಾಡಿದ್ದಾರೆ. ಆದರೆ ಸೋನಾಲಿ ಪವಾರ್ ಇನ್ನೂ ಕಾಡಿನೊಳಗಿದ್ದು, ಅವರು ಸ್ಥಳೀಯ ಪತ್ರಕರ್ತರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಕ್ಲಾಸ್‍ಗೆ ಅನುಮತಿ ನೀಡಿ ಎಂದು ವಿದ್ಯಾರ್ಥಿನಿಯರು ಪಟ್ಟು!

    ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‍ಪಿ) ಪಂಕಜ್ ಶುಕ್ಲಾ ಈ ಕುರಿತು ಪ್ರತಿಕ್ರಿಯಿಸಿದ್ದು, ಅಶೋಕ್ ಪವಾರ್ ಮತ್ತು ಯಾದವ್ ಅವರನ್ನು ಪ್ರಸ್ತುತ ಬಿಜಾಪುರದ ಕುಟ್ರುದಲ್ಲಿ ಇರಿಸಲಾಗಿದೆ. ಪತಿಯನ್ನು ಭೇಟಿಯಾಗಲು ಸೋನಾಲಿ ಶೀಘ್ರದಲ್ಲೇ ಕುಟ್ರು ತಲುಪಲಿದ್ದಾರೆ ಎಂದು ಹೇಳಿದ್ದಾರೆ.

    ವೀಡಿಯೋದಲ್ಲಿ ಏನಿತ್ತು?
    ನನ್ನ ಹೆಣ್ಣು ಮಕ್ಕಳಿಗಾಗಿ ಪತಿಯನ್ನು ಬಿಡುಗಡೆ ಮಾಡುವಂತೆ ಮಾವೋವಾದಿಗಳಿಗೆ ಭಾವನಾತ್ಮಕ ವೀಡಿಯೊವನ್ನು ಮಾಡಿ ಸೋನಾಲಿ ಅವರು ಕಳುಹಿಸಿದ್ದರು. ವೀಡಿಯೋ ಕಳುಹಿಸಿದ ನಂತರವೂ ಅಶೋಕ್ ಅವರನ್ನು ಬಿಡುಗಡೆ ಮಾಡದ ಪರಿಣಾಮ, ಸೋನಾಲಿ ಪವಾರ್ ಅವರನ್ನು ಹುಡುಕಲು ಛತ್ತೀಸ್‍ಗಢದ ಬಿಜಾಪುರ ಮತ್ತು ನಾರಾಯಣಪುರ ಜಿಲ್ಲೆಗಳ ಅಬುಜ್ಮದ್ ಅರಣ್ಯವನ್ನು ಪ್ರವೇಶಿಸಿದ್ದಾರೆ ಎಂದು ವರದಿಗಳ ಪ್ರಕಾರ ತಿಳಿದುಬಂದಿದೆ.

    ಪ್ರಸ್ತುತ ಸೋನಾಲಿ ಅವರು ಪತ್ರಕರ್ತರ ಮತ್ತು ಪೊಲೀಸರ ಸಹಾಯದಿಂದ ಕೆಲವು ಸ್ಥಳೀಯರನ್ನು ಸಂಪರ್ಕಿಸಿದ್ದಾರೆ. ಅಲ್ಲದೆ ಸೋನಾಲಿ ಪವಾರ್ ತನ್ನ ಎರಡೂವರೆ ವರ್ಷದ ಕಿರಿಯ ಮಗಳನ್ನು ತನ್ನೊಂದಿಗೆ ಕಾಡಿಗೆ ಕರೆದೊಯ್ದಿದ್ದಾಳೆ. ಐದು ವರ್ಷದ ಹಿರಿಯ ಮಗಳನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್