Tag: Wife

  • ಪತ್ನಿಯನ್ನು ನೋಡುತ್ತಿದ್ದಂತೆ ಓಟಕ್ಕಿತ್ತ ವರನಿಗೆ ಮದ್ವೆ ಮಂಟಪದಲ್ಲೇ ಥಳಿತ

    ಪತ್ನಿಯನ್ನು ನೋಡುತ್ತಿದ್ದಂತೆ ಓಟಕ್ಕಿತ್ತ ವರನಿಗೆ ಮದ್ವೆ ಮಂಟಪದಲ್ಲೇ ಥಳಿತ

    ಲಕ್ನೋ: ವಿವಾಹಿತ ಪುರುಷನೊಬ್ಬ ಎರಡನೇ ಮದುವೆಯಾಗಲು ಪ್ರಯತ್ನಿಸಿ ಮಂಟಪದಲ್ಲೇ ಸಿಕ್ಕಿ ಬಿದ್ದು, ಥಳಿತಕ್ಕೊಳಗಾದ ಘಟನೆ ಇತ್ತೀಚೆಗೆ ಉತ್ತರಪ್ರದೇಶದ ಗೋರಖ್‍ಪುರದಲ್ಲಿ ನಡೆದಿದೆ. ಪೆಟ್ಟು ತಿಂದ ವ್ಯಕ್ತಿ ತನ್ನ ಮೊದಲ ಪತ್ನಿಯ ಕೈಯಲ್ಲೇ ಸಿಕ್ಕಿ ಬಿದ್ದಿದ್ದಾನೆ.

    ವಿವಾಹಿತ ವ್ಯಕ್ತಿ ತನ್ನ ಮೊದಲ ಮದುವೆಯ ಬಗ್ಗೆ ಹುಡುಗಿಯ ಮನೆಯವರಿಗೆ ತಿಳಿಸಿರಲಿಲ್ಲ. ಆದರೂ ಆತನ ಮೊದಲ ಪತ್ನಿ ಮದುವೆಯ ಬಗ್ಗೆ ತಿಳಿದು ಸ್ಥಳಕ್ಕೆ ಸರಿಯಾದ ಸಮಯದಲ್ಲಿ ತಲುಪಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ಗುಡಿಸಲು? – ಫೋಟೋ ಶೇರ್ ಮಾಡಿದ ವಿಜ್ಞಾನಿಗಳು

    ಘಟನೆಯಲ್ಲಿ ಏನಾಗಿತ್ತು?
    ಗೋರಖ್‍ಪುರದ ನಿವಾಸಿಯೊಬ್ಬನ ಮದುವೆಯನ್ನು ಒಂದು ವರ್ಷಗಳ ಹಿಂದೆ ನಿಶ್ಚಯಿಸಲಾಗಿತ್ತು. ಡಿಸೆಂಬರ್ 5 ರಂದು ವರ ಮೆರವಣಿಗೆಯೊಂದಿಗೆ ಹುಡುಗಿ ಮನೆಗೆ ತಲುಪಿದ್ದ. ಆದರೆ ಅದೇ ಸಮಯದಲ್ಲಿ ತನ್ನ ಮೊದಲ ಪತ್ನಿ ನಾಲ್ಕು ವರ್ಷದ ಮಗುವಿನೊಂದಿಗೆ ಸ್ಥಳಕ್ಕೆ ಆಗಮಿಸಿದ್ದರು. ಹೆಂಡತಿಯನ್ನು ನೋಡಿದ ತಕ್ಷಣ ವ್ಯಕ್ತಿ ಅಲ್ಲಿಂದ ಓಟಕ್ಕಿತ್ತಿದ್ದಾನೆ.

    ವರ ಮದುವೆ ಮಂಟಪದಿಂದ ಓಡಿ ಹೋಗುತ್ತಿದ್ದುದನ್ನು ಕಂಡ ಅತಿಥಿಗಳು ಅವನನ್ನು ಹಿಡಿದು ಥಳಿಸಿದ್ದಾರೆ ಹಾಗೂ ಸ್ಥಳಕ್ಕೆ ಆಗಮಿಸಿದ ಪೊಲೀಸರ ಕೈಗೆ ಒಪ್ಪಿಸಿದ್ದಾರೆ. ವಶಕ್ಕೆ ಪಡೆದ ಪೊಲೀಸರು ವರನನ್ನು ವಿಚಾರಿಸಿದ್ದಾರೆ. ಸ್ಥಳದಲ್ಲಿ ಹಾಜರಿದ್ದ ಆರೋಪಿಯ ಪತ್ನಿ ಆತ 5 ವರ್ಷಗಳ ಹಿಂದೆಯೇ ಎರಡು ಮದುವೆಯಾಗಿದ್ದ ವಿಚಾರವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಬದಲಾಗದಿದ್ದರೆ ಮುಂದೆ ಎಲ್ಲವೂ ಬದಲಾಗುತ್ತೆ: ಸಂಸದರಿಗೆ ಮೋದಿ ಎಚ್ಚರಿಕೆ

    ಆರೋಪಿಗೆ ನಾಲ್ಕು ವರ್ಷದ ಮಗು ಇರುವ ವಿಷಯ ಮಹಿಳೆ ಪೊಲೀಸರಿಗೆ ತಿಳಿಸಿದ್ದು, ಆತ ಮತ್ತೊಂದು ಮದುವೆಯಾಗುತ್ತಿರುವ ವಿಚಾರ ತಿಳಿದ ತಕ್ಷಣ ಮದುವೆಯನ್ನು ತಡೆಯಲು ಸ್ಥಳಕ್ಕೆ ಆಗಮಿಸಿದ್ದಾಗಿ ಹೇಳಿದ್ದಾರೆ. ಸದ್ಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿ ವರನನ್ನು ಬಂಧಿಸಿದ್ದಾರೆ.

     

  • ಮಾವನ ನಿವೃತ್ತಿ ಹಣಕ್ಕಾಗಿ ಪತ್ನಿಯನ್ನುಕೊಲೆಗೈದ ಪತಿ ಬಂಧನ

    ಮಾವನ ನಿವೃತ್ತಿ ಹಣಕ್ಕಾಗಿ ಪತ್ನಿಯನ್ನುಕೊಲೆಗೈದ ಪತಿ ಬಂಧನ

    ರಾಯಚೂರು: ಪತ್ನಿ ತಂದೆಯ ನಿವೃತ್ತಿ ಹಣಕ್ಕಾಗಿ ಕಿರುಕುಳ ಮಾಡಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಗರದ ಅಂದ್ರೂನ್‍ಕಿಲ್ಲಾದಲ್ಲಿ ನಡೆದಿದೆ.

    ಆಸ್ಮಾ ಬಾನು ( 30) ಸಾವನ್ನಪ್ಪಿರುವ ಮಹಿಳೆ. ಪತಿ ಫಸಲುದ್ದೀನ್ ಹಾಗೂ ಮನೆಯವರು ಹಣಕ್ಕಾಗಿ ಕಿರುಕುಳ ನೀಡಿ ಕೊಲೆ ಮಾಡಿರುವ ಬಗ್ಗೆ ಆರೋಪಿಸಲಾಗಿದೆ. ಮೃತಳ ತಾಯಿ ಹಾಗೂ ಸಂಬಂಧಿಕರು ಗಂಡನ ಮನೆಯವರ ವಿರುದ್ದ ಆರೋಪಿಸಿದ್ದಾರೆ.

    BRIBE

    ಹಣಕ್ಕಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ ಕೊಲೆ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಫಸಲುದ್ದೀನ್ ನನ್ನ  ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರೆದಿದೆ. ಇದನ್ನೂ ಓದಿ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ

    MONEY

    ಆಸ್ಮಾ ಹಾಗೂ ಫಸಲುದ್ದೀನ್‍ಗೆ ಮದ್ವೆಯಾಗಿ ಒಂಬತ್ತು ವರ್ಷವಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಮೃತ ಆಸ್ಮಾ ಬಾನು ತಂದೆ ಕೆಎಸ್‍ರ್‌ಟಿಸಿ ನಿವೃತ್ತ ನೌಕರ. ತಂದೆಗೆ ಬಂದಿರುವ ನಿವೃತ್ತಿ ಹಣ ತೆಗೆದುಕೊಂಡು ಬರುವಂತೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಅಂತ ಮೃತಳ ಕಡೆಯವರು ಆರೋಪಿಸಿದ್ದಾರೆ. ಘಟನೆ ಹಿನ್ನೆಲೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

  • ಓಮಿಕ್ರಾನ್ ಖಿನ್ನತೆಯಿಂದ ಮಡದಿ, ಮಕ್ಕಳನ್ನು ಕೊಂದ ವೈದ್ಯ

    ಓಮಿಕ್ರಾನ್ ಖಿನ್ನತೆಯಿಂದ ಮಡದಿ, ಮಕ್ಕಳನ್ನು ಕೊಂದ ವೈದ್ಯ

    ಲಕ್ನೋ: ಖಿನ್ನತೆಗೆ ಒಳಗಾಗಿದ್ದ ವೈದ್ಯನೊಬ್ಬ ಪತ್ನಿ ಹಾಗೂ ಮಕ್ಕಳನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಕಲ್ಯಾಣ್‍ಪುರ ಪ್ರದೇಶದಲ್ಲಿ ನಡೆದಿದೆ.

    ಘಟನೆ ಬಳಿಕ ಪರಾರಿಯಾಗಿರುವ ವೈದ್ಯ ಕೊರೊನಾ ಹೊಸ ರೂಪಾಂತರ ತಳಿ ಓಮಿಕ್ರಾನ್ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿರುವ ವಿಚಾರ ಕುರಿತಂತೆ ಆರೋಪಿ ತನ್ನ ಸಹೋದರನಿಗೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಮುಂಚೂಣಿ ಕಾರ್ಯಕರ್ತರಾಗಿ 10 ತಿಂಗಳ ಬಳಿಕ ಲಸಿಕೆಯ ಮೊದಲ ಡೋಸ್‌ ಪಡೆದ ʼಮಹಾʼ ಸರ್ಕಾರದ ಸಿಎಸ್‌

    ಆರೋಪಿಯ ಸಹೋದರ ಘಟನೆ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ತನ್ನ ಪತ್ನಿ ಹಾಗೂ ಮಕ್ಕಳಿಬ್ಬರನ್ನು ಹತ್ಯೆಗೈದು ನಂತರ ವಾಟ್ಸಾಪ್‍ನಲ್ಲಿ ಸಹೋದರನಿಗೆ ಮಾಹಿತಿ ನೀಡಿದ್ದು, ತಾನು ಖಿನ್ನತೆಗೆ ಒಳಗಾಗಿರುವುದಾಗಿ ತಿಳಿಸಿದ್ದಾನೆ. ಸದ್ಯ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಆತಂಕ ಬೇಡ- ಸೋಂಕಿತನ ಅಭಯ

  • ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ

    ಅನೈತಿಕ ಸಂಬಂಧ ಶಂಕೆ – ಪತ್ನಿಯ ಕತ್ತು ಸೀಳಿ ಕೊಂದ ಪತಿ

    ಲಕ್ನೋ: ಸಹೋದ್ಯೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಶಂಕಿಸಿ ಪತ್ನಿಯ ಕತ್ತು ಸೀಳಿ ಪತಿ ಕ್ರೂರವಾಗಿ ಕೊಂದಿರುವ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ.

    ಈ ಘಟನೆಯು ಗುರುವಾರ ಬುಧಾನಾ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಖಾನೆಯ ಆವರಣದಲ್ಲಿ ನಡೆದಿದೆ. ಆರೋಪಿ ಪತಿ ಮತ್ತು ಆತನ ಪತ್ನಿ ಒಂದೇ ಟೈಲ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಕಾರ್ಖಾನೆಯ ಆವರಣದಲ್ಲಿಯೇ ವಾಸಿಸುತ್ತಿದ್ದರು.

    ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಹೊಂದಿದ್ದ ಆರೋಪಿ ಗುರುವಾರ ತಡರಾತ್ರಿ ಪತ್ನಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಕತ್ತು ಸೀಳಿಕೊಂದಿದ್ದಾನೆ ಎಂದು ಸ್ಟೇಷನ್ ಹೌಸ್ ಆಫೀಸರ್(ಎಸ್‍ಎಚ್‍ಒ) ಸಂಜೀವ್ ಕುಮಾರ್ ತಿಳಿಸಿದ್ದಾರೆ.  ಇದನ್ನೂ ಓದಿ:  ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

    ಇದೀಗ ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿದ್ದಾರೆ ಮತ್ತು ಹತ್ಯೆಗೈಯ್ಯಲು ಆರೋಪಿ ಬಳಸಿದ್ದ ಆಯುಧಗಳನ್ನು ವಶಕ್ಕೆ ಒಡೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರೇಯಸಿಯ ಪತಿಯನ್ನು ಕೊಂದು ದೇಹವನ್ನು ಛಿದ್ರಗೊಳಿಸಿದ- ಸಿನಿಮಾ ಸ್ಟೈಲ್‌ನಂತೆ ಶವ ಎಸೆದ

  • ದಿನಕ್ಕೆ ಆರು ಬಾರಿ ಸ್ನಾನ ಮಾಡುವ ಪತ್ನಿಗೆ ಡೈವೋರ್ಸ್ ನೀಡಲು ಮುಂದಾದ ಪತಿ

    ದಿನಕ್ಕೆ ಆರು ಬಾರಿ ಸ್ನಾನ ಮಾಡುವ ಪತ್ನಿಗೆ ಡೈವೋರ್ಸ್ ನೀಡಲು ಮುಂದಾದ ಪತಿ

    ಬೆಂಗಳೂರು: ದಿನಕ್ಕೆ ಆರು ಬಾರಿ ಸ್ನಾನ, ಬಳಸಿದ ಸೋಪನ್ನು ಮತ್ತೊಂದು ಸೋಪಿನಿಂದ ಸ್ವಚ್ಛಗೊಳಿಸುವ ಪತ್ನಿಯ ಅತಿಯಾದ ಸ್ವಚ್ಛತೆಯ ಗೀಳಿನಿಂದ ಬೇಸತ್ತಿರುವ ಪತಿ ದಾಂಪತ್ಯ ಕಡಿದುಕೊಂಡು ವಿವಾಹ ವಿಚ್ಛೇದನಕ್ಕೆ ಮುಂದಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಒಸಿಡಿ ಸಮಸ್ಯೆಯಿಂದ ಬಳಲುತ್ತಿರುವ 35 ವರ್ಷದ ಮಹಿಳೆ ಲ್ಯಾಪ್‍ಟಾಪ್, ಸೆಲ್‍ಫೋನ್‍ಗಳನ್ನು ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸುವ ಅತಿರೇಕದ ವರ್ತನೆಯಿಂದ ರೋಸಿರುವ ಪತಿ ಪೊಲೀಸರ ಮೊರೆ ಹೋಗಿದ್ದಾನೆ. ಪೊಲೀಸರು ಈ ಪ್ರಕರಣವನ್ನು ವನಿತಾ ಸಹಾಯವಾಣಿ ಪರಿಹಾರ್‌ಗೆ ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ:  ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

    ಆರ್.ಟಿ.ನಗರ ಸುಮಾ ಮತ್ತು ಜಯಂತ್ 2009ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಜಯಂತ್, ವಿವಾಹ ಬಳಿಕ ಪತ್ನಿ ಸುಮಾ ಜೊತೆಗೆ ಲಂಡನ್‍ಗೆ ಹೋಗುತ್ತಾರೆ. ಎಂಬಿಎ ಪದವೀಧರೆಯಾಗಿರುವ ಸುಮಾ ಲಂಡನ್‍ನಲ್ಲಿ ಮನೆಯನ್ನು ತುಂಬಾ ಸ್ವಚ್ಛವಾಗಿ ಇರಿಸಿಕೊಳ್ಳುತ್ತಾರೆ. ಮೊದಲ ಮಗು ಹುಟ್ಟಿದ 2 ವರ್ಷದ ಬಳಿಕ ಸುಮಾಗೆ ಈ ಸ್ವಚ್ಛತೆ ಗೀಳು ಮತ್ತಷ್ಟು ಹೆಚ್ಚಾಗುತ್ತದೆ. ಪತಿ ಕೆಲಸ ಮುಗಿಸಿ ಮನೆಗೆ ಬಂದಾಗ ಶೂ, ಬಟ್ಟೆ, ಸೆಲ್‍ಫೋನ್ ಸ್ವಚ್ಛ ಮಾಡುವಂತೆ ಪದೇ ಪದೇ ಹೇಳುತ್ತಿರುತ್ತಾಳೆ. ಇದರಿಂದ ಕಿರಿಕಿರಿಗೆ ಒಳಗಾಗುವ ಪತಿ, ಈಕೆಯ ಸ್ವಚ್ಛತೆಯ ಅತಿರೇಕದ ವರ್ತನೆಯಿಂದ ಬೇಸತ್ತು ಹೋಗುತ್ತಾನೆ. ಇದನ್ನೂ ಓದಿ: ನನ್ನ ಹುಟ್ಟಿಸಿದ್ಯಾಕೆ?- ತಾಯಿಯ ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಯುವತಿ ಕೇಸ್

    ಲಂಡನ್‍ನಿಂದ ಬೆಂಗಳೂರಿಗೆ ವಾಪಸ್ ಆಗಿರುವ ದಂಪತಿ ಕೌಟುಂಬಿಕ ಸಮಾಲೋಚನೆಗೆ ಬಳಗಾಗುತ್ತಾರೆ. ಈ ವೇಳೆ ಈ ಸ್ವಚ್ಛತೆಯ ಗೀಳು ಕೊಂಚ ಕಡಿಮೆಯಾಗುತ್ತದೆ. ಈ ನಡುವೆ ದಂಪತಿಗೆ 2ನೇ ಮಗು ಜನಿಸುತ್ತದೆ. ಕೋವಿಡ್ ಸಂದರ್ಭದಲ್ಲಿ ಸುಮಾಳಿಗೆ ಈ ಸ್ವಚ್ಛತೆಯ ಗೀಳು ಮತ್ತಷ್ಟು ಹೆಚ್ಚಾಗುತ್ತದೆ. ಮನೆಯನ್ನು ಪದೇ ಪದೇ ಸ್ಯಾನಿಟೈಸ್ ಮಾಡುವುದು ಮನೆಯ ಪೀಠೋಪಕರಣಗಳು, ಚಮಚ, ಪ್ಲೋರ್ ಮ್ಯಾಟ್ ಸೇರಿದಂತೆ ಎಲ್ಲ ವಸ್ತುಗಳನ್ನು ಪದೇ ಪದೇ ಸ್ವಚ್ಛ ಮಾಡಲು ಶುರು ಮಾಡುತ್ತಾಳೆ. ಇದನ್ನೂ ಓದಿ: ಸಿಪಿಎಂ ಸ್ಥಳೀಯ ಮುಖಂಡನ ಬರ್ಬರ ಹತ್ಯೆ- RSS ಮೇಲೆ ಆರೋಪ

    ಲಾಕ್‍ಡೌನ್ ಸಂದರ್ಭದಲ್ಲಿ ದಿನಕ್ಕೆ ಆರು ಬಾರಿ ಸ್ನಾನ ಮಾಡುವುದು, ಸ್ನಾನಕ್ಕೆ ಬಳಸಿದ ಸೋಪನ್ನು ಮತ್ತೊಂದು ಸೋಪಿನಿಂದ ಸ್ವಚ್ಛಗೊಳಿಸುವ ಮಟ್ಟಕ್ಕೆ ಇವಳ ವರ್ತನೆ ಬದಲಾಗುತ್ತದೆ ಎಂದಿದ್ದಾನೆ.


    ಈ ನಡುವೆ ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾ ತಾಯಿ ಮೃತಪಡುತ್ತಾರೆ. ಈ ಘಟನೆ ಬಳಿಕ ಸುಮಾಳ ಸ್ವಚ್ಛತೆ ಹೆಚ್ಚಾಗುತ್ತದೆ. ಲಾಕ್‍ಡೌನ್ ಸಂದರ್ಭದಲ್ಲಿ ಪತಿ ವರ್ಕ್ ಫ್ರಂ ಹೋಮ್ ಕೆಲಸ ಮಡುವಾಗ ಆತನ ಲ್ಯಾಪ್‍ಟಾಪ್, ಸೆಲ್‍ಫೋನ್‍ಗಳನ್ನು ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸಿದ್ದಳು. ಮಕ್ಕಳು ಶಾಲೆಗೆ ಹೋಗಿ ಬಂದರೆ ಅವರ ಬ್ಯಾಗ್, ಯೂನಿಫಾರ್ಮ್, ಶೂಗಳನ್ನು ಪ್ರತಿ ದಿನ ಸ್ವಚ್ಛ ಮಾಡುತ್ತಿದ್ದಳು. ಈಕೆಯ ಸ್ವಚ್ಛತೆಯ ಅತಿರೇಕದ ವರ್ತನೆಗೆ ಬೇಸತ್ತ ಪತಿ ಜಯಂತ್ ಇದೀಗ ಆಕೆಯಿಂದ ವಿಚ್ಛೇದನ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

  • ಎಸಿಬಿ ದಾಳಿಗೊಳಗಾಗಿದ್ದ ನಾಗರಾಜ್ ಪತ್ನಿ ನಿಧನ

    ಎಸಿಬಿ ದಾಳಿಗೊಳಗಾಗಿದ್ದ ನಾಗರಾಜ್ ಪತ್ನಿ ನಿಧನ

    ನೆಲಮಂಗಳ(ಬೆಂಗಳೂರು): ಇತ್ತೀಚೆಗಷ್ಟೇ ಎಸಿಬಿ ದಾಳಿಗೊಳಗಾಗಿದ್ದ ಕೆಎಎಸ್ ಅಧಿಕಾರಿ ಎಲ್ ಸಿ ನಾಗರಾಜ್ ಅವರ ಪತ್ನಿ ಇಂದು ನಿಧನರಾಗಿದ್ದಾರೆ.

    ತೀವ್ರ ಹೃದಯಾಘಾತದಿಂದ ನಾಗರತ್ನಮ್ಮ(53) ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ನೆಲಮಂಗಲ ಪರಮಣ್ಣ ಬಡಾವಣೆಯ ಮನೆಯ ಬಳಿ ನೀರವ ಮೌನ ಆವರಿಸಿದೆ.

    ಎಲ್ ಸಿ ನಾಗರಾಜ್ ಅವರ ನೆಲಮಂಗಲ ಪರಮಣ್ಣ ಬಡಾವಣೆಯ ಮೇಲೆ ಇತ್ತೀಚೆಗೆ ಎಸಿಬಿ ದಾಳಿಯಾಗಿತ್ತು. ಐಎಂಎ ಪ್ರಕರಣದ ಆರೋಪಿಯೂ ಆಗಿರುವ ಕೆಎಎಸ್ ಅಧಿಕಾರಿ ಎಲ್.ಸಿ.ನಾಗರಾಜ್ ಹಾಗೂ ಸಂಬಂಧಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ನಗದು, ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಎಸ್.ಆರ್ ವಿಶ್ವನಾಥ್ ನೀಡಿದ್ದ ಎಚ್ಚರಿಕೆಯೇ ಕೊಲೆ ಸಂಚಿಗೆ ಕಾರಣವಾಯ್ತಾ..?

    ಈ ಬಗ್ಗೆ ಮಾತನಾಡಿದ್ದ ನಾಗರಾಜ್, ಹಿರಿಯ ಅಧಿಕಾರಿಯೊಬ್ಬರು ಬೇಕಂತಲೇ ದಾಳಿ ಮಾಡಿದ್ದಾರೆ. ನಾನು ಪ್ರಮಾಣಿಕವಾಗಿ ಇದ್ದೇನೆ. ಪದೇ ಪದೇ ನನ್ನ ಮೇಲೆ ದಾಳಿ ಮಾಡಲಾಗುತ್ತಿದೆ. ದಾಳಿಗೆ ಭಯ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ನನ್ನನ್ನು ಗುರಿಯಾಗಿಸಿ ಇದು 3 ನೇ ಬಾರಿ ದಾಳಿ ಮಾಡಲಾಗಿದೆ. 43 ಲಕ್ಷ ರೂ. ಹಣಕ್ಕೆ ದಾಖಲಾತಿಗಳು ಇವೆ. ನನ್ನ ಪತ್ನಿಗೆ ಸಂಬಂಧಿಸಿದ ಆಸ್ತಿ ಮಾರಾಟ ಮಾಡಲು ಯತ್ನಿಸಿದ್ದೆ. 2.4 ಕೋಟಿಗೆ ಆಸ್ತಿ ಮಾರಾಟ ಮಾಡಿದ್ದೆ. ಅದರ ಹಣವನ್ನು ನಾನು ಪಡೆದಿದ್ದೆ. ಎಲ್ಲಾ ಕೂಡ ವೈಟ್ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

  • ಪತ್ನಿಯ ಕೊಂದು ಜನರಿಗೆ ಲಾಂಗ್ ಬೀಸಿದ ಪತಿ- ಇಬ್ಬರ ಸ್ಥಿತಿ ಗಂಭೀರ

    ಪತ್ನಿಯ ಕೊಂದು ಜನರಿಗೆ ಲಾಂಗ್ ಬೀಸಿದ ಪತಿ- ಇಬ್ಬರ ಸ್ಥಿತಿ ಗಂಭೀರ

    ಮೈಸೂರು: ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿರಾಯನೊಬ್ಬ, ತಡೆಯಲು ಬಂದ ನಾಲ್ಕು ಜನರ ಮೇಲೂ ಲಾಂಗ್ ಬೀಸಿದ ಘಟನೆ ನಂಜನಗೂಡು ತಾಲೂಕಿನ ನವಿಲೂರು ಗ್ರಾಮದಲ್ಲಿ ನಡೆದಿದೆ.

    ಈರಯ್ಯ ಕೊಲೆ ಆರೋಪಿ. ಈತ ತನ್ನ ಎರಡನೇ ಪತ್ನಿ ನಿಂಗಮ್ಮನನ್ನು ಕೊಲೆ ಮಾಡಿದ್ದಾನೆ. ಅಲ್ಲದೆ ನಿಂಗಮ್ಮ ತಂದೆ, ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಘಟನೆಯಿಂದ ವೃದ್ಧ ದಂಪತಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ ಈರಯ್ಯನಿಂದ ಹಲ್ಲೆಗೊಳಗಾದ ಮತ್ತಿಬ್ಬರ ಸ್ಥಿತಿಯೂ ಗಂಭೀರವಾಗಿದೆ.

    POLICE JEEP

    ಪತ್ನಿಯ ಅನೈತಿಕ ಸಂಬಂಧ ಹಲ್ಲೆಗೆ ಕಾರಣ ಎನ್ನಲಾಗಿದೆ. ಮೊದಲ ಪತ್ನಿಯನ್ನು ಕೊಂದು ಜೈಲುವಾಸ ಅನುಭವಿಸಿದ್ದ ಈರಯ್ಯ, ಜೈಲಿನಿಂದ ಹೊರ ಬಂದ ಬಳಿಕ ನಿಂಗಮ್ಮನನ್ನು ಮದುವೆ ಆಗಿದ್ದ. ಈಗ ಎರಡನೇ ಪತ್ನಿಯನ್ನೂ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ- ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್

    ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಈರಯ್ಯನನ್ನು ಬಂಧಿಸಿದ್ದಾರೆ. ಇತ್ತ ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕೊಂದಿದ್ದ ಪಾಪಿ ಪತಿ ಕೊನೆಗೆ ಶವವಾಗಿ ಪತ್ತೆ

    ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕೊಂದಿದ್ದ ಪಾಪಿ ಪತಿ ಕೊನೆಗೆ ಶವವಾಗಿ ಪತ್ತೆ

    ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಕ್ರೂರವಾಗಿ ಹತ್ಯೆಗೈದಿದ್ದವನನ್ನು ಪೊಲೀಸರು ಬಂಧಿಸುವಷ್ಟರಲ್ಲಿ ಆರೋಪಿ ಶವವಾಗಿ ಪತ್ತೆಯಾಗಿರುವ ಪ್ರಕರಣ ಬೆಂಗಳೂರಿನ ರಾಜೇಂದ್ರನಗರದಲ್ಲಿ ಬೆಳಕಿಗೆ ಬಂದಿದೆ.

    ಮೃತ ದುರ್ದೈವಿಯನ್ನು ಆಯೇಶಾ ಎಂದು ಗುರುತಿಸಲಾಗಿದ್ದು, ನವೆಂಬರ್ 19ರಂದು ಪತ್ನಿಯ ಶೀಲ ಶಂಕಿಸಿ ಆರೋಪಿ ನಿಸಾರ್ ಪೆಟ್ರೋಲ್ ಸುರಿದು ಕೊಲೆ ಮಾಡಿದ್ದಾನೆ. ಪತ್ನಿಗೆ ಬೆಂಕಿ ಹಚ್ಚಿದ್ದರಿಂದ ಮನೆಯಲ್ಲಿದ್ದ ಸಿಲಿಂಡರ್ ಇದೇ ವೇಳೆ ಬ್ಲಾಸ್ಟ್ ಆಗಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದಾಗಿ ನಿಸಾರ್ ಕೈ ಹಾಗೂ ಮೈ ಭಾಗಕ್ಕೆ ಗಾಯವಾಗಿದ್ದು, ಆಯೇಶಾ ಮೃತಪಟ್ಟಿದ್ದಾರೆ. ಇದೇ ವೇಳೆ ಆರೋಪಿ ನಿಸಾರ್ ಮನೆಯಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಶಿಶುವಿನ ತಲೆ ಕಂಡು ಭಯಭೀತರಾದ ಜನ

    ಈ ಘಟನೆ ಬಳಿಕ ಪೊಲೀಸರು ನಿಸಾರ್‌ಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಆದರೆ ನಿಸಾರ್ ಬಸ್ ಹತ್ತಿ ಆಂಧ್ರಪ್ರದೇಶಕ್ಕೆ ತೆರಳಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದನು. ಮೈ, ಕೈ ನೋವಿದ್ದರೂ ಆಸ್ಪತ್ರೆಗೆ ಹೋಗದ ನಿಸಾರ್ ಕೊನೆಗೆ ನೋವು ತೀವ್ರಗೊಂಡಾಗ ಮಗನಿಗೆ ಕರೆ ಮಾಡಿದ್ದಾರೆ. ಇದೇ ವೇಳೆ ಆರೋಪಿಯ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರಿಗೆ ನಿಸಾರ್ ಮದನಪಲ್ಲಿಯಲ್ಲಿರುವ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಸಂಬಂಧಿಕರ ಮನೆಗೆ ಹೋಗಿ ವಾಪಸ್‌ ಬರ್ತಿದ್ದವ ಸೇರಿದ್ದು ಮಸಣ

    ನಂತರ ಆರೋಪಿಯನ್ನು ಬಂಧಿಸಲು ಆಡುಗೋಡಿ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ನಿಸಾರ್ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ವೇಳೆ ಎರಡು ದಿನಗಳ ಹಿಂದೆ ನಿಸಾರ್ ಸಾವನ್ನಪ್ಪಿದ್ದಾಗಿ ವರದಿಯಾಗಿದೆ. ಇದೀಗ ಪೊಲೀಸರು ಯಾರನ್ನು ತನಿಖೆ ಮಾಡಬೇಕೆಂದು ಗೊಂದಲದಲ್ಲಿದ್ದಾರೆ.

  • 2ನೇ ಪತ್ನಿಯ ಕತ್ತು ಕೊಯ್ದ ಪತಿ ಮಹಾಶಯ ಪರಾರಿ

    2ನೇ ಪತ್ನಿಯ ಕತ್ತು ಕೊಯ್ದ ಪತಿ ಮಹಾಶಯ ಪರಾರಿ

    ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡನೇ ಪತ್ನಿಯ ಕತ್ತು ಕೊಯ್ದು ಪತಿಯೊಬ್ಬ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಪಟ್ರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪತಿ ಸುರೇಶ್ ತನ್ನ ಎರಡನೇ ಪತ್ನಿ ಉಷಾ ಅವರ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದು, ಅದೃಷ್ಟವಶಾತ್ ಪತ್ನಿ ಪ್ರಾಣಾಪಯದಿಂದ ಪಾರಾಗಿದ್ದಾರೆ. ಪ್ರಸ್ತುತ ಉಷಾ ಅವರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪುನೀತ್‍ರಂತೆಯೇ ಯಾವಾಗಲು ಒಳ್ಳೆಯ ಕೆಲಸ ಮಾಡೋಣ: ವಿಜಯ ರಾಘವೇಂದ್ರ

    ಏನಿದು ಘಟನೆ?
    ಅಂದರ್ಹಳ್ಳಿ ಗ್ರಾಮದ ಸುರೇಶ್ ಚಿಕ್ಕಬಳ್ಳಾಪುರ ಗೃಹರಕ್ಷಕದಳ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಮೊದಲ ಪತ್ನಿ ಇದ್ದರೂ ಉಷಾ ಜೊತೆ ಎರಡನೇ ಮದುವೆಯಾಗಿದ್ದ. ಇಬ್ಬರು ಪತ್ನಿಯರಿಗೂ ಇಬ್ಬರು ಮಕ್ಕಳು ಸಹ ಇದ್ದಾರೆ. ಆದ್ರೆ ಕಳೆದ 2-3 ವರ್ಷಗಳಿಂದ ಉಷಾ ಮತ್ತು ಸುರೇಶ್ ನಡುವೆ ದಾಂಪತ್ಯದಲ್ಲಿ ಬಿರುಕು ಮೂಡಿ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

    ಉಷಾ ತನ್ನ ಹಾಗೂ ತನ್ನಿಬ್ಬರ ಮಕ್ಕಳ ಜೀವನ ನಿರ್ವಹಣೆಗೆ ಜೀವನಾಂಶದ ಹಣ ಕೊಡುವಂತೆ ಲಾಯರ್ ಮೂಲಕ ಸುರೇಶ್ ಗೆ ನೋಟಿಸ್ ಕಳುಹಿಸಿದ್ದರು. ಇದರಿಂದ ರೋಸಿ ಹೋದ ಸುರೇಶ್ ತವರುಮನೆಯಲ್ಲಿದ್ದ ಉಷಾ ಅವರ ಮನೆಗೆ ಮಕ್ಕಳನ್ನ ನೋಡುವ ನೆಪದಲ್ಲಿ ಹೋಗಿದ್ದ. ಈ ವೇಳೆ ಮನೆಯಲ್ಲಿದ್ದ ಉಷಾ ಅವರ ಕತ್ತನ್ನ ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದಾನೆ. ನಂತರ ಅಕ್ಕಪಕ್ಕದ ಮನೆಯವರು ಉಷಾ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಭ್ರಷ್ಟನಿಗೆ ಅಂಬಿ ಕಾಯಕ ಪ್ರಶಸ್ತಿ

    ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಸುರೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಇನ್ನು ಮುಂದೆ ಪತ್ನಿಯ ಹುಟ್ಟುಹಬ್ಬ ಮರೆತರೆ ಪತಿಗೆ ಜೈಲೇ ಗತಿ!

    ಇನ್ನು ಮುಂದೆ ಪತ್ನಿಯ ಹುಟ್ಟುಹಬ್ಬ ಮರೆತರೆ ಪತಿಗೆ ಜೈಲೇ ಗತಿ!

    ಸಮೋವಾ: ಪತ್ನಿಯರಿಗೆ ಪತಿ ಪ್ರೀತಿ ತೋರಿಸಬೇಕು, ತಮ್ಮನ್ನು ಕಾಳಜಿಯಿಂದ ನೋಡಿಕೊಳ್ಳಬೇಕು ಎಂದು ಅನಿಸುವುದು ಸಹಜ. ಅದೇ ರೀತಿ ತನ್ನ ಹುಟ್ಟುಹಬ್ಬ ನೆನಪಿನಲ್ಲಿ ಇಟ್ಟುಕೊಂಡು ಅದ್ದೂರಿಯಿಂದ ಆಚರಿಸಬೇಕು ಎಂದು ಅನಿಸುತ್ತೆ. ಆದರೆ ಇಲ್ಲಿ ರೂಪಿಸಿರುವ ಕಾನೂನಿನ ಪ್ರಕಾರ ಒಂದು ವೇಳೆ ಪತಿ ಏನಾದರೂ ಹೆಂಡತಿಯ ಹುಟ್ಟುಹಬ್ಬ ಮರೆತರೆ ಆತ ಡೈರೆಕ್ಟ್ ಜೈಲು ಪಾಲು.

    ಹೌದು, ಇದು ನಿಜ. ಏನಿದು ಗಂಡ ಹೆಂಡತಿಯ ಹುಟ್ಟುಹಬ್ಬ ಮರೆತೆರೆ ಜೈಲಾ! ಎಂದು ಹುಬ್ಬೆರಿಸುತ್ತಿದ್ದೀರಾ, ಈ ಕಾನೂನು ಜಾರಿಯಾಗಿರುವುದು ನಿಜ. ಪೆಸಿಫಿಕ್ ಮಹಾಸಾಗರದ ಪಾಲಿನೇಷನ್ ಪ್ರದೇಶದ ಸಮೋವಾ ದ್ವೀಪದಲ್ಲಿ ಇಂತಹದ್ದೊಂದು ಕಾನೂನು ಜಾರಿಯಲ್ಲಿದೆ. ಪತ್ನಿಯ ಹುಟ್ಟುಹಬ್ಬವನ್ನು ಪತಿ ಆಚರಿಸಲೇ ಬೇಕು ಎಂಬ ನಿಯಮ ಇಲ್ಲಿ ಕಡ್ಡಾಯವಾಗಿದೆ. ಒಂದು ವೇಳೆ ಪತಿ ಏನಾದರೂ ಅಸಡ್ಡೆ ತೋರಿಸಿದರೆ ಆತನಿಗೆ ಜೈಲು ಗ್ಯಾರಂಟಿ.

    ಹಾಗಾದರೆ ಗಂಡನ ಹುಟ್ಟುಹಬ್ಬವನ್ನು ಹೆಂಡತಿ ಅಷ್ಟೇ ಗಮನಕೊಟ್ಟು ಮಾಡಬೇಕಾ! ಎಂಬುದಕ್ಕೆ ಉತ್ತರ ಇಲ್ಲ. ಏಕೆಂದರೆ ಇಲ್ಲಿ ಗಂಡ ಮಾತ್ರ ಹೆಂಡತಿಯ ಹುಟ್ಟುಹಬ್ಬಕ್ಕೆ ಹೆಚ್ಚು ಗಮನಕೊಟ್ಟು ಮಾಡಬೇಕು. ಒಂದು ವೇಳೆ ಪತಿಯ ಮೇಲೆ ಪತ್ನಿಗೆ ಅಷ್ಟು ಪ್ರೀತಿ ಇದ್ದರೆ ಆತನಿಗೆ ಇಷ್ಟವಾದ ಯಾವುದಾದರೂ ತಿಂಡಿ ಮಾಡಿದರೆ ಸಾಕು. ಅದು ಇಲ್ಲ ಎಂದರೆ ಆತ ಪತ್ನಿ ಏನು ಮಾಡುತ್ತಾಳೋ  ಅದನ್ನು ತಿಂದು ಮಲಗಬಹುದು. ಇದನ್ನೂ ಓದಿ:  ಜನವರಿಯಿಂದ ಮಕ್ಕಳಿಗೂ ಸಿಗಲಿದೆ ಲಸಿಕೆ?

    ಒಂದು ವೇಳೆ ಗಂಡ ಏನಾದರೂ ಹೆಂಡತಿಯ ಹುಟ್ಟುಹಬ್ಬದ ಸಮಯದಲ್ಲಿ ಮೈಮರೆತರೆ ಅಥವಾ ದುಡ್ಡಿಲ್ಲವೆಂದು ಸುಮ್ಮನಾದರೆ ಆತನ ಕಥೆ ಮುಗಿಯಿತು ಎಂದೇ ಅರ್ಥ. ಆತ ಮಾತ್ರ ಹೆಂಡತಿ ಯಾವ ರೀತಿ ಹುಟ್ಟುಹಬ್ಬ ಆಚರಿಸಬೇಕು ಎಂದು ಕೇಳುತ್ತಾಳೆ ಅಂದೇ ರೀತಿ ಆಕೆಯ ಹುಟ್ಟುಹಬ್ಬ ಆಚರಿಸಬೇಕು. ಒಂದು ವೇಳೆ ಹಣವಿಲ್ಲವೆಂದು ಬಿಟ್ಟರೆ ಆತನನ್ನು ಪೊಲೀಸರು ಬಂದು ಕರೆದುಕೊಂಡು ಹೋಗುತ್ತಾರೆ.

    ಮೊದಲ ಬಾರಿ ಈ ರೀತಿ ತಪ್ಪು ಆದರೆ ಆತನನ್ನು ಕ್ಷಮಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗುತ್ತದೆ. ಮತ್ತೊಮ್ಮೆ ತಪ್ಪು ಪುನಾರವರ್ತನೆಯಾದರೆ ಹೆಂಡತಿಯ ಕೆಂಗಣ್ಣಿಗೆ ಗುರಿಯಾಗಿ ಪತಿರಾಯ ಜೈಲು ಸೇರುತ್ತಾನೆ. ಇದನ್ನೂ ಓದಿ: ಐಎಎಫ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್‍ಗೆ ವೀರ ಚಕ್ರ ಪ್ರಶಸ್ತಿ

    ಈ ರೀತಿಯ ವಿಚಿತ್ರ ಕಾನೂನುಗಳು ಕೇಳಲು ಹಾಸ್ಯವೆನಿಸಿದರೂ ಅದನ್ನು ಅನುಭವಿಸುತ್ತಿರುವವರಿಗೇ ಅದರ ಕಷ್ಟ ಗೊತ್ತಿರುತ್ತೆ. ಇದೇ ರೀತಿ ಹಲವು ವಿಚಿತ್ರವಾದ ಕಾನೂನುಗಳನ್ನು ನಾವು ವಿವಿಧ ದೇಶಗಳಲ್ಲಿ ನೋಡಬಹುದು. ಉತ್ತರ ಕೋರಿಯಾದಲ್ಲಿ ನೀಲಿ ಬಣ್ಣದ ಜೀನ್ಸ್ ಧರಿಸಿ ಮನೆಯಿಂದ ಹೊರ ಬಂದರೆ ಅವರಿಗೆ ಶಿಕ್ಷೆ ಕಾಯಂ. ಪೂರ್ವ ಅಫ್ರಿಕಾದಲ್ಲಿ ಜಾಗಿಂಗ್ ಮಾಡುವಂತಿಲ್ಲ. ಸಿಂಗಾಪುರದಲ್ಲಿ ಚೂಯಿಂಗ್ ಗಂ ಜಗಿಯುವುದೇ ನಿಷಿಧವಾಗಿದೆ. ಇದೇ ರೀತಿ ಹಲವು ದೇಶ-ವಿದೇಶಗಳಲ್ಲಿ ಚಿತ್ರ-ವಿಚಿತ್ರವಾದ ಕಾನೂನುಗಳಿದ್ದು, ಕೇಳುಗರಿಗೆ ಹಾಸ್ಯವೆನಿಸಿದರೆ ಅನುಭವಿಸುವವರಿಗೆ ಪ್ರಾಣ ಸಂಕಟವಾಗಿರುತ್ತೆ.