Tag: Wife

  • ಪತ್ನಿ ಜೊತೆಗಿನ ಜೀವನ ನರಕವಾಗಿದೆ, ನಾನು ಜೈಲಲ್ಲೇ ಇರ್ತೀನಿ- ಪೊಲೀಸರಿಗೆ ವ್ಯಕ್ತಿ ಮನವಿ

    ಪತ್ನಿ ಜೊತೆಗಿನ ಜೀವನ ನರಕವಾಗಿದೆ, ನಾನು ಜೈಲಲ್ಲೇ ಇರ್ತೀನಿ- ಪೊಲೀಸರಿಗೆ ವ್ಯಕ್ತಿ ಮನವಿ

    ರೋಮ್: ಈ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣಿನ ಮೇಲೆ ಒಂದಿಲ್ಲೊಂದು ದೌರ್ಜನ್ಯಗಳಾಗುತ್ತಿರುತ್ತವೆ. ಹೆಣ್ಣಿನ ಮೇಲೆ ಪುರುಷ ತಮ್ಮ ಪ್ರಾಬಲ್ಯ ಸಾಧಿಸುತ್ತಿದ್ದಾನೆ. ಮನೆಯಲ್ಲೂ ಸಹ ಆಕೆಯನ್ನು ಹೆದರಿಸಿ, ಬೆದರಿಸಿ ಹದ್ದುಬಸ್ತಿನಲ್ಲಿಟ್ಟಿರುತ್ತಾನೆ. ತಾನು ಹಾಕಿದ ಗೆರೆ ದಾಟುವಂತಿಲ್ಲ ಎಂಬ ಷರತ್ತುಗಳನ್ನೂ ವಿಧಿಸುತ್ತಾನೆ ಎಂಬುದು ವಾಡಿಕೆ. ಆದರೆ ಇದಕ್ಕೆ ಅಪವಾದವೆಂಬಂತೆ ಇಟಲಿಯಲ್ಲಿ ಒಂದು ಅಚ್ಚರಿ ಘಟನೆ ನಡೆದಿದೆ.

    HUSBAND WIFE FIGHT

    ಡ್ರಗ್ಸ್ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಟಲಿಯ ವ್ಯಕ್ತಿಯೊಬ್ಬ ಈಗ ತಾನು ಮನೆಗೆ ಹೋಗಲು ನಿರಾಕರಿಸಿದ್ದಾನೆ. “ನನ್ನನ್ನು ಜೈಲಿನಲ್ಲೇ ಬಂಧಿಸಿ, ಮನೆಗೆ ಕಳುಹಿಸಬೇಡಿ” ಎಂದು ಪೊಲೀಸರಿಗೆ ದುಂಬಾಲು ಬಿದ್ದಿದ್ದಾನೆ. ಪೊಲೀಸರು ಹಲವು ಬಾರಿ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ. ಇದನ್ನೂ ಓದಿ: ನಟಿಯರಿಗೆ ಸಂಕಷ್ಟ: ಎಫ್‌ಎಸ್‌ಎಲ್‌ ವರದಿಯಲ್ಲಿ ಡ್ರಗ್ಸ್‌ ಸೇವನೆ ಸಾಬೀತು

    ನನ್ನ ಪತ್ನಿಯೊಂದಿಗೆ ಮನೆಯಲ್ಲಿ ಇರಲು ಇಷ್ಟ ಇಲ್ಲ. ನಾನು ಜೈಲಿನಲ್ಲೇ ಇರುತ್ತೇನೆ ಎಂದು ವ್ಯಕ್ತಿ ಹಠ ಹಿಡಿದಿದ್ದಾನೆ. ಆತನ ಮನವಿ ಪೊಲೀಸರಲ್ಲಿ ಅಚ್ಚರಿ ಮೂಡಿಸಿದೆ.

    ಗೈಡೋನಿಯಾ ಮಾಂಟೆಸೆಲಿಯೊದಲ್ಲಿ ವಾಸವಾಗಿರುವ 30 ವರ್ಷದ ಅಲ್ಬೇನಿಯನ್ ಎಂಬ ವ್ಯಕ್ತಿ ಇದೇ ಶನಿವಾರ (ಅ.23) ರಂದು ಪೊಲೀಸ್ ಠಾಣೆಗೆ ಆಗಮಿಸಿ, “ಇನ್ನು ಮುಂದೆ ನನ್ನ ಹೆಂಡತಿಯೊಂದಿಗೆ ಗೃಹ ಬಂಧನದಲ್ಲಿ ಇರುವುದಿಲ್ಲ. ಹೆಂಡತಿಯೊಂದಿಗೆ ಬಲವಂತದ ಜೀವನ ನಡೆಸಲು ಸಾಧ್ಯವಿಲ್ಲ” ಎಂದು ಮನವಿ ಮಾಡಿದ್ದಾನೆ ಎಂದು ಕ್ಯಾರಾಬಿನಿಯೇರಿ ಪೊಲೀಸರು ತಿಳಿಸಿದ್ದಾರೆ.

    DRUGS

    “ಈ ವ್ಯಕ್ತಿ ಮಾದಕ ವಸ್ತುಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಗೃಹಬಂಧನದಲ್ಲಿದ್ದನು. ಅವನ ಶಿಕ್ಷೆಯ ಅವಧಿ ಇನ್ನೂ ಮುಗಿದಿಲ್ಲ” ಎಂದು ಟಿವೊಲಿ ಕ್ಯಾರಾಬಿನಿಯೇರಿಯ ಕ್ಯಾಪ್ಟನ್ ಫ್ರಾನ್ಸಿಸ್ಕೊ ಜಿಯಾಕೊಮೊ ಫೆರಾಂಟೆ ಹೇಳಿದ್ದಾರೆ. ಇದನ್ನೂ ಓದಿ: ಪೆಗಾಸಸ್ ಮೂಲಕ ಗೂಢಚರ್ಯೆ ಆರೋಪ – ತನಿಖೆಗೆ ಸಮಿತಿ ರಚಿಸಿದ ಸುಪ್ರೀಂಕೋರ್ಟ್

    “ನನ್ನ ಮನೆ ಜೀವನ ನರಕವಾಗಿದೆ. ನಾನು ಅಲ್ಲಿಗೆ ಹೋಗಲು ಬಯಸುವುದಿಲ್ಲ. ನಾನು ಜೈಲಿಗೆ ಹೋಗುತ್ತೇನೆ” ಎಂದು ಪೊಲೀಸರಲ್ಲಿ ಆ ವ್ಯಕ್ತಿ ಮನವಿ ಮಾಡಿದ್ದಾನೆ.

    ಮನೆಗೆ ಹೋಗುವುದನ್ನು ನಿರಾಕರಿಸಿ ಗೃಹಬಂಧನದ ನಿಯಮಗಳನ್ನು ಉಲ್ಲಂಘಿಸಿದ್ದರಿಂದ, ಆ ವ್ಯಕ್ತಿಯ ಮನವಿ ಕಾರ್ಯಗತವಾಯಿತು. ಮಾದಕ ವಸ್ತು ಅಪರಾಧಿಯನ್ನು ಜೈಲಿಗೆ ವರ್ಗಾಯಿಸುವಂತೆ ಸ್ಥಳೀಯ ಪೊಲೀಸರಿಗೆ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ.

  • ಪತ್ನಿಯ ವಿರುದ್ಧವೇ ದೂರು ನೀಡಿದ ಹುಬ್ಬಳ್ಳಿಯ ಖ್ಯಾತ ವೈದ್ಯ

    ಪತ್ನಿಯ ವಿರುದ್ಧವೇ ದೂರು ನೀಡಿದ ಹುಬ್ಬಳ್ಳಿಯ ಖ್ಯಾತ ವೈದ್ಯ

    ಹುಬ್ಬಳ್ಳಿ: ಕುಟುಂಬ ಕಲಹದಿಂದ ಬೇರ್ಪಟ್ಟಿರುವ ವೈದ್ಯ ದಂಪತಿಗಳ ಕಲಹ ಇದೀಗ ಮತ್ತಷ್ಟು ಜಟಿಲಗೊಂಡಿದೆ. ಪತ್ನಿ ಜೀವ ಬೆದರಿಕೆ ಹಾಕಿರುವುದಾಗಿ ಖ್ಯಾತ ವೈದ್ಯರೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ.

    ಹುಬ್ಬಳ್ಳಿಯ ಶಿರೂರ ಪಾರ್ಕ್ ಪ್ರದೇಶದಲ್ಲಿರುವ ಮನೆಗೆ ನುಗ್ಗಿ ತಮ್ಮ ಮೇಲೆ ಕೈಯಿಂದ ಹಾಗೂ ಛತ್ರಿಯಿಂದ ಹೊಡೆದು ಜೀವ ಬೆದರಿಕೆ ಹಾಕಿದ್ದಾರೆಂದು ಪತ್ನಿಯ ವಿರುದ್ಧ ಖ್ಯಾತ ವೈದ್ಯ ಕ್ರಾಂತಿಕಿರಣ್ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ತಮ್ಮ ಮಕ್ಕಳ ಎದುರಿಗೆ ಪತ್ನಿ ಶೋಭಾ ಸುಣಗಾರ ಅಶ್ಲೀಲಪದಗಳನ್ನು ಬಳಸಿ ಮಾತನಾಡಿದ್ದಾರೆಂದು ದೂರಿನಲ್ಲಿ ಕ್ರಾಂತಿಕಿರಣ್ ಅವರು ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ:  ಗಡ್ಡ ಬೆಳೆಸಿ ಒಲಿಂಪಿಕ್ಸ್ ಗೆದ್ದು ಮೀಸೆ ತಿರುವಿದ ಶೂರರು

     

    ಈಗಾಗಲೇ ಕ್ರಾಂತಿಕಿರಣ್ ಅವರ ಪತ್ನಿ ಶೋಭಾ ಸುಣಗಾರ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದಾರೆಂಬುದನ್ನು ದೂರಿನಲ್ಲಿ ತಿಳಿಸಿದ್ದು, ಇನ್ನೂ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲು ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ವಿದ್ಯಾನಗರ ಠಾಣೆ ಪೊಲೀಸರು, ಶೋಭಾ ಸುಣಗಾರರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

  • ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು ಇನ್ನಿಲ್ಲ

    ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು ಇನ್ನಿಲ್ಲ

    ಹೈದರಾಬಾದ್: ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು(64) ವಿಧಿವಶರಾಗಿದ್ದಾರೆ.

    ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಜಾಬಾಬು ಅವರ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿತ್ತು. ಸೀತಮ್ಮ ವಾಕಿತ್ಲೋ ಸಿರಿಮಲ್ಲೆ ಚೆಟ್ಟು, ಸಿಂಧೂರಂ, ಆದವರು ಮಾತು ಅರ್ಥಾಳು ವೆರುಲೆ ಮತ್ತು ಭಾರತ್ ಅನೆ ನೇನು ಸೇರಿದಂತೆ ಇಲ್ಲಿಯವರೆಗೂ 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:  ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಸಲೀಂ ಮೇಲೆ ಕ್ರಮ ಕೈಗೊಂಡ್ರು: ಜಗದೀಶ್ ಶೆಟ್ಟರ್

    ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಮಚಂದ್ರಾಪುರದಲ್ಲಿ ಜನಿಸಿದ ರಾಜಬಾಬು ಅವರು ಕ್ರಿಶಾ ಅವರ ‘ಊರಿಕಿ ಮೊನಗಾಡು’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

    ರಾಜಾಬಾಬು ಅವರು ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದು, ಅಮ್ಮ ಎಂಬ ಸೀರಿಸ್‍ನಲ್ಲಿ ಅಭಿನಯಿಸಿ ನಂದಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದೀಗ ರಾಜಾ ಬಾಬು ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

  • ಪತ್ನಿ ಮಾರಾಟ ಮಾಡಿ ಮೊಬೈಲ್ ಖರೀದಿಸಿದ

    ಪತ್ನಿ ಮಾರಾಟ ಮಾಡಿ ಮೊಬೈಲ್ ಖರೀದಿಸಿದ

    ಒಡಿಶಾ: ಮದುವೆಯಾಗಿ ಒಂದು ತಿಂಗಳಿಗೆ ಹೆಂಡತಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದು, ಬಂದ ಹಣದಲ್ಲಿ ಮೊಬೈಲ್ ಖರೀದಿಸಿರುವ ವಿಚಿತ್ರ  ಘಟನೆ ಒಡಿಶಾದಲ್ಲಿ   ನಡೆದಿದೆ.

    17 ವರ್ಷದ ಅಪ್ರಾಪ್ತ ತನ್ನ 26 ವರ್ಷದ ಪತ್ನಿಯನ್ನು 55 ವರ್ಷದ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದಾನೆ. ಬಂದ ಹಣ್ಣದಲ್ಲಿ ಮೊಬೈಲ್ ಖರೀದಿಸಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನನ್ನು ಒಂದು ತಿಂಗಳು ತಾಲಿಬಾನ್ ಪ್ರದೇಶಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್

    ಅಪ್ರಾಪ್ತ ಬಾಲಕನಿಗೂ 26 ವರ್ಷದ ಯುವತಿಗೆ ಜುಲೈನಲ್ಲಿ ಮದುವೆಯಾಗಿತ್ತು. ಕೆಲಸ ಹುಡುಕಿಕೊಂಡು ಜೋಡಿ ರಾಜಸ್ಥಾನಕ್ಕೆ ಬಂದಿದ್ದರು. ಇಲ್ಲಿನ ಒಂದು ಇಟ್ಟಿಗೆ ಫ್ಯಾಕ್ಟರಿಯಲ್ಲಿ ಪತಿಗೆ ಕೆಲಸ ಸಿಕ್ಕಿತ್ತು. ಪ್ರತಿದಿನ ಕುಡಿದು ಬಂದು ಹೆಂಡತಿ ಜೊತೆ ಗಲಾಟೆ ಮಾಡುತ್ತಿದ್ದ. ಬರನ್ ಜಿಲ್ಲೆಯ 55 ವರ್ಷದ ವ್ಯಕ್ತಿಗೆ ತನ್ನ ಪತ್ನಿಯನ್ನು ಮಾರಾಟ ಮಾಡಿದ್ದಾನೆ. ಪತ್ನಿಯನ್ನು ಮಾರಿ ಬಂದಿದ್ದ ಹಣದಲ್ಲಿ ಹೊಸ ಮೊಬೈಲ್ ಖರೀದಿಸಿದ್ದಾನೆ. ಮಿಕ್ಕ ಹಣದಲ್ಲಿ ಪರಿಚಯಸ್ಥರೊಂದಿಗೆ ಕುಡಿದು ಪಾರ್ಟಿ ಮಾಡಿದ್ದಾನೆ. ಪತ್ನಿ ಮಾರಾಟ ಮಾಡಿರುವ ಹಣ ಖಾಲಿಯಾದ ಬಳಿಕ ಮರಳಿ ಊರಿಗೆ ವಾಪಸ್ ಬಂದಿದ್ದ. ಇದನ್ನೂ ಓದಿ: ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ

    ಪತ್ನಿ ಕಡೆಯವರು ನನ್ನ ಮಗಳು ಎಲ್ಲಿ ಎಂದು ಕೇಳಿದ್ದಾರೆ. ಆಕೆ ನನಗೆ ಮೋಸ ಮಾಡಿ ಬಿಟ್ಟು ಹೋಗಿದ್ದಾಳೆ ಎಂದು ಹೇಳಿದ್ದಾನೆ. ಈತನ ಮಾತು ನಂಬದ ಪತ್ನಿ ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಆಗ ಪೊಲೀಸರ ಬಳಿ ನಡೆದ ಘಟನೆಯನ್ನೆಲ್ಲ ಹೇಳಿದ್ದಾನೆ. ಹೆಂಡತಿಯನ್ನು 55 ವರ್ಷದ ವ್ಯಕ್ತಿಗೆ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಯುವತಿ ಇರುವ ಸ್ಥಳ ತಿಳಿದು, ಕರೆದುಕೊಂಡು ಹೋಗಲು ಪೊಲೀಸರು ಮುಂದಾಗಿದ್ದರು. ಆದರೆ ಆ ಗ್ರಾಮದ ಜನ ಯುವತಿಯನ್ನು ವಾಪಸ್ ಕಳಿಸಲ್ಲ, ಆಕೆಯನ್ನು ದುಡ್ಡು ಕೊಟ್ಟು ಕರೆತರಲಾಗಿದೆ. ಹಣವನ್ನು ಹಿಂದಿರುಗಿಸಿ ಆಕೆಯನ್ನು ಕರೆದುಕೊಂಡು ಹೋಗಿ ಎಂದಿದ್ದಾರೆ. ನಂತರ ಪೊಲೀಸರು ಮನವೊಲಿಸಿ ಯುವತಿಯನ್ನು ರಕ್ಷಿಸಿದ್ದಾರೆ.

  • ಪತ್ನಿ, ಅಣ್ಣನ ಮಗನಿಗೆ ಶೂಟ್ ಮಾಡಿ ಪತಿ ಆತ್ಮಹತ್ಯೆಗೆ ಶರಣು

    ಪತ್ನಿ, ಅಣ್ಣನ ಮಗನಿಗೆ ಶೂಟ್ ಮಾಡಿ ಪತಿ ಆತ್ಮಹತ್ಯೆಗೆ ಶರಣು

    ಮಡಿಕೇರಿ: ಆಸ್ತಿ ಬಗ್ಗೆ ವೈಷಮ್ಯದ ಹಿನ್ನೆಲೆಯಲ್ಲಿ ಸಂಬಂಧಿಕರ ಮಧ್ಯೆ ನಡೆದ ಜಗಳದಲ್ಲಿ ಗುಂಡು ಹಾರಿಸಿ ಪತ್ನಿ ಮತ್ತು ಅಣ್ಣನ ಮಗನನ್ನು ಕೊಂದು ತಾನು ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ.

    ಸೋಮಯ್ಯ ಸಾಗರ್ ಎಂಬುವವರು ತನ್ನ ಪತ್ನಿ ಯಶೋಧ ಮತ್ತು ಅಣ್ಣನ ಮಗ ಮಧುಗೆ ಶೂಟ್ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲೇ ಮಧು(43) ಮೃತಪಟ್ಟಿದ್ದಾರೆ. ಗುಂಡು ಹಾರಿಸಲು ಮುಂದಾದಾಗ ತಡೆಯಲು ಬಂದ ಯಶೋಧ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಯಶೋಧ ಅವರ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯಶೋಧರನ್ನು ಮೈಸೂರಿಗೆ ರವಾನೆ ಮಾಡಲಾಗಿದೆ. ಇಬ್ಬರಿಗೂ ಗುಂಡು ಹೊಡೆದು ಸಾಗರ್ ಮನೆಯ ಸಮೀಪ ಇರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಕೃತಕ ಆನೆ ಬಳಸಿ ದಸರಾ ಮೆರವಣಿಗೆ

    ಅಡಿಕೆ ತೋಟದ ಆಸ್ತಿಯಲ್ಲಿ ಪಾಲುಗಾರಿಕೆ ಬಗ್ಗೆ ಪದೇ ಪದೇ ಸೋಮಯ್ಯ ಹಾಗೂ ಮಧು ಅವರೊಂದಿಗೆ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಕೊಂಡ ಅಸ್ತಿ ವಿಷಯವಾಗಿ ಇಬ್ಬರ ನಡುವೆ ಜಗಳ ಆರಂಭಗೊಂಡಿದೆ ಮಾತಿಗೆ ಮಾತು ಬೆಳೆದು ಸಾಗರ್, ಮನೆಯಲ್ಲಿ ಇದ್ದ ಕೋವಿಯಿಂದ ಮಧು ಮೇಲೆ ಗುಂಡು ಹಾರಿಸಿದ್ದಾರೆ. ಮಧು ಸ್ಥಳದಲ್ಲೇ ಮೃತಪಟ್ಟರೆ, ಯಶೋಧ ತೀವ್ರ ಗಾಯಗೊಂಡಿದ್ದರು. ವಿಷಯ ತಿಳಿದ ಗ್ರಾಮಸ್ಥರು ಯಶೋಧ ಅವರನ್ನು ಗೋಣಿಕೊಪ್ಪ ಅಸ್ಪತ್ರೆ ದಾಖಲು ಮಾಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಾಗರ್ ಅವರ ಮೃತ ದೇಹವನ್ನು ಪೊಲೀಸರು, ಗ್ರಾಮಸ್ಥರ ನೆರವಿನಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

  • ಮಕ್ಕಳಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದೇ ಬಿಟ್ಟ

    ಮಕ್ಕಳಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದೇ ಬಿಟ್ಟ

    – ಆತ್ಮಹತ್ಯೆ ಎಂದು ನಿರೂಪಿಸಲು ಪತ್ರ ಬರೆದಿದ್ದ ಪತಿ

    ನವದೆಹಲಿ: ಮಕ್ಕಳಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪತಿ ಕತ್ತು ಹಿಸುಕಿ ಸಾಯಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.

    ಮೇಘಾ ಆರ್ಯ ಹತ್ಯೆಯಾದ ದುರ್ದೈವಿ. ಕಳೆದ ವಾರ ದೆಹಲಿ ನಿವಾಸಿ ಜಸ್ವೀರ್ ಆರ್ಯ ತನ್ನ ಪತ್ನಿ ಮೇಘಾ ಆರ್ಯನನ್ನು ಬಟ್ಟೆಯಿಂದ ಕತ್ತು ಹಿಸುಕಿ ಸಾಯಿಸಿದ್ದು, ಶವಪರೀಕ್ಷೆಯಲ್ಲಿ ಈ ಪ್ರಕರಣ ಬಯಲಾಯಿದೆ. ಈ ಪರಿಣಾಮ ಜಸ್ವೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಮೇಘಾ ಹತ್ಯೆ ನಂತರ ಜಸ್ವೀರ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಜಸ್ವೀರ್ ತನ್ನ ಹೇಳಿಕೆಯನ್ನು ಹಲವು ಬಾರಿ ಬದಲಾಯಿಸಿದ್ದ. ಕೊನೆಯಲ್ಲಿ ತನ್ನ ಹೆಂಡತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡನು. ಈ ವೇಳೆ ಜಸ್ವೀರ್, ನಮಗೆ ಮಕ್ಕಳಿರಲಿಲ್ಲ. ಅದು ಅಲ್ಲದೇ ಮೇಘಾ ದುಡಿದ ಹಣವನ್ನು ಪೋಷಕರಿಗೆ ನನ್ನ ಅನುಮತಿಯಿಲ್ಲದೇ ಕೊಡುತ್ತಿದ್ದಳು. ಅತ್ತೆ, ಮಾವ ನಮ್ಮ ಕುಟುಂಬದ ವಿಚಾರದಲ್ಲಿ ತುಂಬಾ ಹಸ್ತಕ್ಷೇಪ ಮಾಡುತ್ತಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಇದನ್ನೂ ಓದಿ: ಪೋಕ್ಸೋ ಆರೋಪಿ ಠಾಣೆಯಿಂದ್ಲೇ ಎಸ್ಕೇಪ್ – ನಾಲ್ವರು ಪೊಲೀಸರು ಸಸ್ಪೆಂಡ್

    ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ದಂಪತಿ ಮಧ್ಯೆ ನಡುವೆ ಜಗಳವಾಗಿದ್ದು, ಮೇಘಾ 2ನೇ ಮಹಡಿಗೆ ರೂಮಿನಲ್ಲಿ ಮಲಗಿಕೊಳ್ಳಲು ಹೋಗಿದ್ದಾರೆ. ಈ ವೇಳೆ ಸಿಟ್ಟಿನಿಂದ ಜಸ್ವೀರ್ ಆಕೆ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲೇ ಇದ್ದ ಬಟ್ಟೆಯನ್ನು ಬಳಸಿ ಮೇಘಾ ಅವರನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪತ್ನಿಯ ಸಾವು ಆತ್ಮಹತ್ಯೆ ಎಂದು ನಿರೂಪಿಸಲು ಪತ್ರವನ್ನು ಬರೆದಿದ್ದು, ಕೈ ಬರಹ ಕಂಡುಹಿಡಿಯುತ್ತಾರೆಂಬ ಭಯದಿಂದ ಅದನ್ನು ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಧಿವಿಜ್ಞಾನ ತಂಡವು ಸುಟ್ಟ ಪತ್ರದ ಕುರುಹುಗಳನ್ನು ಸಹ ಪಡೆದುಕೊಂಡಿದೆ. ಇದನ್ನೂ ಓದಿ: ರೈತರ ಮೇಲೆ ಥಳಿತ – ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

    ಈ ಕುರಿತು ಮೇಘಾ ತಂದೆ ಪ್ರತಿಕ್ರಿಯಿಸಿದ್ದು, ಮೊದಲು ಜಸ್ವೀರ್ ನನ್ನ ಮಗಳು ಹಾಸಿಗೆಯಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದ. ಆದರೆ ನನ್ನ ಮಗಳ ಮುಖದ ಮೇಲಿನ ಗಾಯವನ್ನು ನೋಡಿ ಪೊಲೀಸರಿಗೆ ದೂರು ನೀಡಿದ್ದೆ ಎಂದು ತಿಳಿಸಿದ್ದಾರೆ.

  • ಮದ್ಯ ಸೇವಿಸಲು ಪತ್ನಿ ಹಣ ನೀಡಿಲ್ಲವೆಂದು ಪತಿ ಆತ್ಮಹತ್ಯೆಗೆ ಶರಣು

    ಮದ್ಯ ಸೇವಿಸಲು ಪತ್ನಿ ಹಣ ನೀಡಿಲ್ಲವೆಂದು ಪತಿ ಆತ್ಮಹತ್ಯೆಗೆ ಶರಣು

    ಕಾರವಾರ: ಮದ್ಯ ಸೇವಿಸಲು ಪತ್ನಿ ಹಣ ನೀಡಲಿಲ್ಲ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಲುವಾದಿಕೇರಿಯಲ್ಲಿ ನಡೆದಿದೆ.

    ಬಷ್ಯ ಲಿಂಗ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಪ್ರತಿ ದಿನ ಮದ್ಯ ಸೇವಿಸುವ ಈತ, ಕೆಲಸ ಮಾಡದೆ ಮನೆಯಲ್ಲೇ ಇರುತಿದ್ದ. ಮದ್ಯ ಸೇವನೆಗಾಗಿ ಪತ್ನಿಯ ಬಳಿ ಹಣಕ್ಕಾಗಿ ಪೀಡಿಸುತಿದ್ದ. ಪ್ರತಿ ದಿನ ಪತ್ನಿ ಹಣ ನೀಡುತ್ತಿದ್ದಳು. ಆದರೆ ಇಂದು ನೀಡದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ನಾಯಿಯಿಂದ ನಾಯಿಗೆ ರಕ್ತದಾನ

    ಪತ್ನಿ ಹಣ ನೀಡದಿದ್ದಕ್ಕೆ ಕೋಪ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

  • ಹೆಂಡತಿಯನ್ನು ತಬ್ಬಿ ಕೊಂದೇ ಬಿಟ್ಟ – ಇದು ಸೂಸೈಡ್‌ ಬಾಂಬರ್‌ ಸಿಟ್ಟಿನ ಕಥೆ

    ಹೆಂಡತಿಯನ್ನು ತಬ್ಬಿ ಕೊಂದೇ ಬಿಟ್ಟ – ಇದು ಸೂಸೈಡ್‌ ಬಾಂಬರ್‌ ಸಿಟ್ಟಿನ ಕಥೆ

    ಐಜ್ವಾಲ್: ಪತ್ನಿಯ ಮೇಲೆ ಕೋಪ ಮಾಡಿಕೊಂಡು ಬೇರೆಯಾಗಿ ವಾಸಿಸುತ್ತಿದ್ದ ಗಂಡನೊಬ್ಬ ಆಕೆಯನ್ನು ಕೊಲ್ಲಲು ತನ್ನ ಬಟ್ಟೆಯೊಳಗೆ ಜಿಲೆಟಿನ್ ಬಾಂಬ್ ಇಟ್ಟುಕೊಂಡು ಆಕೆಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ಬಾಂಬ್ ಸ್ಫೋಟವಾಗಿ ಗಂಡ-ಹೆಂಡತಿ ಇಬ್ಬರೂ ಸಾವನ್ನಪ್ಪಿರುವ ಘಟನೆ ಮಿಜೋರಾಂನ ಲುಂಗೇಲಿಯಲ್ಲಿ ನಡೆದಿದೆ.

    61 ವರ್ಷದ ಮಹಿಳೆ ಮತ್ತು ಈಕೆಯ ಪತಿ ರೋಹ್‍ಮಿಂಗ್ಲಿಯಾನ ಮೃತರಾಗಿದ್ದಾರೆ. ನಿನ್ನೆ ಮಧ್ಯಾಹ್ನ 12:15ರ ವೇಳೆಗೆ ಬಾಂಬ್ ಸ್ಫೋಟವಾಗಿದೆ. ಆತ್ಮಾಹುತಿ ಬಾಂಬ್ ಸಿಡಿಸಿ ಹೆಂಡತಿಯನ್ನು ಕೊಲ್ಲಲು ಮುಂದಾದ ಗಂಡ, ಆ ರೀತಿಯ ನಿರ್ಧಾರ ತೆಗೆದುಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಒಳಗಡೆ ಇರೋ ವಸ್ತುಗಳನ್ನು ನೋಡಿ ರೆಸಿಪಿ ವಿವರ ನೀಡಲಿದೆ ಅಮೆಜಾನ್‌ ಸ್ಮಾರ್ಟ್‌ ಫ್ರಿಡ್ಜ್‌

     

    ಮಹಿಳೆ ರೋಹ್‍ಮಿಂಗ್ಲಿಯಾನನ್ನು ಎರಡನೇ ಮದುವೆಯಾಗಿದ್ದಳು. ಇಬ್ಬರ ನಡುವೆ ಜಗಳ ನಡೆದಿದ್ದರಿಂದ ಪ್ರತ್ಯೇಕವಾಗಿ ಒಂದು ವರ್ಷದಿಂದ ವಾಸವಾಗಿದ್ದರು. ಆದರೆ ಅವರು ನಿನ್ನೆ ಒಂದೇ ಕಡೆ ಸೇರಿದ್ದರು. ತರಕಾರಿ ಮಾರುತ್ತಿದ್ದ ಆ ಮಹಿಳೆಯನ್ನು ಹುಡುಕಿ ಬಂದ ಆಕೆಯ ಪತಿ, ಆಕೆಯ ಜೊತೆಯಲ್ಲಿದ್ದ ಮಗಳನ್ನು ದೂರ ಕಳಿಸಿದ್ದ. ಮಗಳು ದೂರ ಹೋದ ನಂತರ ಪತ್ನಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಇದನ್ನೂ ಓದಿ:RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಪ್ರತ್ಯಕ್ಷದರ್ಶಿಗಳು ತಿಳಿಸಿರುವ ಪ್ರಕಾರ, ತರಕಾರಿ ಮಾರುತ್ತಾ ಗಾಡಿಯ ಬಳಿ ಕುಳಿತಿದ್ದ ಹೆಂಡತಿಯ ಪಕ್ಕದಲ್ಲೇ ಕುಳಿತ ಆಕೆಯ ಗಂಡ ತನಗಾಗಿ ಒಂದು ಸಿಗರೇಟ್ ತಂದುಕೊಡುವಂತೆ ಕೇಳಿದ್ದ. ಆಕೆ ಸಿಗರೇಟ್ ತಂದು ಕೊಟ್ಟಾಗ ಅದನ್ನು ಬಾಯಿಗಿಟ್ಟುಕೊಂಡ ಆತ ಎದ್ದು ನಿಂತವನೇ ತಲೆ ಸುತ್ತುಬಂದಂತೆ ನಟಿಸಿ ಕೆಳಗೆ ಬೀಳುವವನಿದ್ದ. ಆಗ ಎದ್ದು ನಿಂತ ಆತನ ಹೆಂಡತಿಯನ್ನು ಜೋರಾಗಿ ತಬ್ಬಿಕೊಂಡ ಕೂಡಲೇ ಬಾಂಬ್ ಸ್ಫೋಟವಾಗಿತ್ತು. ಸುತ್ತಮುತ್ತಲಿದ್ದವರು ನೋಡನೋಡುತ್ತಿದ್ದಂತೆಯೇ ಅವರಿಬ್ಬರ ದೇಹ ಛಿದ್ರವಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಪಿಡಿಒನಿಂದ ರಾಷ್ಟ್ರಪತಿವರೆಗೆ RSS ಕಾರ್ಯಕರ್ತರೇ ಇರೋದು- ಹೆಚ್‍ಡಿಕೆಗೆ ಸುನೀ

    ಈ ಘಟನೆ ಬಳಿಕ ಅವರ ಮಗಳು ನಾಪತ್ತೆಯಾಗಿದ್ದಾಳೆ. ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಅನ್ನು ಬಟ್ಟೆಯೊಳಗೆ ಇಟ್ಟುಕೊಂಡಿದ್ದ ಗಂಡ ತಾನೂ ಸತ್ತು ಹೆಂಡತಿಯನ್ನೂ ಕೊಂದಿದ್ದಾನೆ.

  • ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ ಆಲ್ ಒಕೆ ಅಲೋಕ್ ಬಾಬು

    ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ ಆಲ್ ಒಕೆ ಅಲೋಕ್ ಬಾಬು

    ಬೆಂಗಳೂರು: ಕನ್ನಡದಲ್ಲಿ ರ‍್ಯಾಪರ್ ಹಾಡುಗಳ ಮೂಲಕ ಫೇಮಸ್ ಆಗಿರುವ ಅಲೋಕ್ ಬಾಬು ಅಲಿಯಾಸ್ ಆಲ್‍ಓಕೆ ಬಾಬು ಮನೆಗೆ ಹೊಸ ಅತಿಥಿ ಆಗಮಿಸಿದ್ದಾರೆ.

    All OK Alok Babu

    ಹೌದು, 2019ರಲ್ಲಿ ತಮ್ಮ ಬಾಲ್ಯದ ಗೆಳತಿ ನಿಷಾ ಜೊತೆ ಸಪ್ತಪದಿ ತುಳಿದ ಅಲೋಕ್ ಬಾಬು ಇದೀಗ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಇಂದು ಬೆಳಗಿನ ಜಾವ 2.14ಕ್ಕೆ ನಿಷಾ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಕ್ಷೇಮವಾಗಿದ್ದಾರೆ ಎಂದು ಅಲೋಕ್ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: WhatsApp, Facebook, Instagram 9 ಗಂಟೆ ಬಂದ್ – ಜುಕರ್‌ಬರ್ಗ್‌ಗೆ 44 ಸಾವಿರ ಕೋಟಿ ನಷ್ಟ

    All OK Alok Babu

    ಸದ್ಯ ತಂದೆಯಾಗಿರುವ ಅಲೋಕ್ ಬಾಬು, ಪತ್ನಿ ಜೊತೆಗಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಫೋಟೋದಲ್ಲಿ ನಿಷಾ ಬೇಬಿ ಬಂಪ್‍ನಲ್ಲಿ ಕಾಣಿಸಿಕೊಂಡಿದ್ದು, ಅಲೋಕ್ ಪತ್ನಿಯ ಬೇಬಿ ಬಂಪ್ ತೋರಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಕ್ಯಾಪ್ಷನ್‍ನಲ್ಲಿ ನಮಸ್ಕಾರ, ನಮಗೆ ಇಂದು ಗಂಡು ಮಗು ಜನಿಸಿರುವ ವಿಚಾರವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನಿಮ್ಮೆಲ್ಲರ ಪ್ರೀತಿ ಆರೈಕೆಗಳಿಗೆ ತುಂಬು ಹೃದಯದ ಧನ್ಯವಾದಗಳು, ಹರಸಿ, ಹಾರೈಸಿ, ಕೈ ಹಿಡಿದು, ಬೆಳೆಸಿ ಈ ನಮ್ಮ ಪುಟ್ಟ ಕಂದನನ್ನು, ಇನ್ಮುಂದೆ ಇವನು ನಿಮ್ಮ ಸ್ವತ್ತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

     

    View this post on Instagram

     

    A post shared by Alok Babu R (@all_ok_official)

    ಕನ್ನಡದಲ್ಲಿ ಹಲವಾರು ರ‍್ಯಾಪ್ ಸಾಂಗ್ ಹಾಡಿರುವ ಅಲೋಕ್ ಬಾಬು ಅವರು ಇತ್ತೀಚೆಗೆ ಹಾಡಿದ್ದ ಹ್ಯಾಪಿ ಆಗಿದೆ ರ‍್ಯಾಪ್ ಸಾಂಗ್ ಸಿಕ್ಕಾಪಟ್ಟೆ ಜನಪ್ರಿಯಗೊಂಡಿತ್ತು. ಈ ಮುನ್ನ ನಿರ್ದೇಶಕ ಶಿವಮಣಿ ಆ್ಯಕ್ಷನ್ ಕಟ್ ಹೇಳಿದ್ದ 2009ರಲ್ಲಿ ತೆರೆಕಂಡಿದ್ದ ಜೋಶ್ ಸಿನಿಮಾದಲ್ಲಿ ಅಲೋಕ್ ಬಾಬು ಅಭಿನಯಿಸಿದ್ದರು.

  • ಊಟ ಕೊಡಿಸ್ತೀನೆಂದು ಕರೆದೊಯ್ದು 500 ರೂ.ಗೆ ಪತ್ನಿಯನ್ನೇ ಮಾರಿಬಿಟ್ಟ!

    ಊಟ ಕೊಡಿಸ್ತೀನೆಂದು ಕರೆದೊಯ್ದು 500 ರೂ.ಗೆ ಪತ್ನಿಯನ್ನೇ ಮಾರಿಬಿಟ್ಟ!

    ಗಾಂಧಿನಗರ: ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದ ಗಂಡ 500 ರೂಪಾಯಿಗೆ ಪತ್ನಿಯನ್ನು ಮಾರಿದ ಘಟನೆ ಗುಜರಾತ್‍ನಲ್ಲಿ ನಡೆದಿದೆ.

    ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಇದನ್ನೂ ಓದಿ:  ವಿಶ್ವ ಹಿಂದೂ ಪರಿಷತ್‍ನವರು ದೇಶ ಭಕ್ತರಾ?: ರಾಮಲಿಂಗಾರೆಡ್ಡಿ

    ಹೋಟೆಲ್‍ಗೆ ಬಂದಿದ್ದ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಈ ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್, ಸಿಗರೇಟ್, ಸೆಕ್ಸ್‌ಗೆ ಮಗನಿಗೆ ಓಕೆ ಅಂದಿದ್ದೇನೆ: ಶಾರೂಖ್ ವೀಡಿಯೋ ವೈರಲ್

    ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಲಾಗಿದೆ.