Tag: Wife

  • ಅನ್ನಕ್ಕೆ ಆರ್ಸೆನಿಕ್ ಎಂಬ ವಿಷ ಬೆರೆಸಿ ಕೊಲೆಗೆ ಯತ್ನ? – ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿರೋ ಪೊಲೀಸರು

    ಅನ್ನಕ್ಕೆ ಆರ್ಸೆನಿಕ್ ಎಂಬ ವಿಷ ಬೆರೆಸಿ ಕೊಲೆಗೆ ಯತ್ನ? – ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿರೋ ಪೊಲೀಸರು

    ಉಡುಪಿ: ಸ್ಲೋ ಪಾಯ್ಸನ್ ನೀಡಿ ಪತಿ ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ವರದಿಗಾಗಿ ಉಡುಪಿ ಪೊಲೀಸರು ಕಾಯುತ್ತಿದ್ದಾರೆ.

    ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ನಿಂದ ಬಾಲಕೃಷ್ಣ ಪೂಜಾರಿ ಎಂಬವರು ಈಚೆಗೆ ಕೊಲೆಯಾಗಿದ್ದರು. ಪ್ರಕರಣ ಸಂಚಲನ ಮೂಡಿಸಿತ್ತು. ಈ ಕುರಿತು ಮಾತನಾಡಿರುವ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್, ಸ್ಲೋ ಪಾಯ್ಸನ್ ನೀಡಿರುವ ಬಗ್ಗೆ ಖಾತ್ರಿಪಡಿಸಲು ಎಫ್‌ಎಸ್‌ಎಲ್ ವರದಿ ಅಗತ್ಯವಿದೆ ಎಂದು ತಿಳಿಸಿದ್ದಾರೆ.

    ಮೃತದೇಹದ ಅಂಶಗಳನ್ನು ಮಣಿಪಾಲ ಕೆಎಂಸಿಗೆ ಅಜೆಕಾರು ಪೊಲೀಸರು ರವಾನಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದ ನಂತರ ವಿಷಕಾರಿ ಪದಾರ್ಥಗಳ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ. ತಜ್ಞ ವೈದ್ಯರ ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದೇವೆ ಎಂದು ಎಸ್‌ಪಿ ಹೇಳಿದ್ದಾರೆ.

    ಕಸ್ಟಡಿಯಲ್ಲಿ ಆರೋಪಿ ದಿಲೀಪ್ ವಿಚಾರಣೆ ಮುಂದುವರಿದಿದೆ. ಅಜೆಕಾರು ಪೊಲೀಸರು ಪ್ರಕರಣದ ಮಹಜರು ಪ್ರಕ್ರಿಯೆ ಮಾಡುತ್ತಿದ್ದಾರೆ. ಅನ್ನಕ್ಕೆ ಆರ್ಸೆನಿಕ್ ಎಂಬ ವಿಷ ಬೆರೆಸಿ ಕೊಲೆಗೆ ಯತ್ನ ನಡೆದಿದೆ ಎಂಬ ಮಾಹಿತಿ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ಕಿದೆ.

    ಉಡುಪಿಯ ಲ್ಯಾಬ್‌ವೊಂದರಿಂದ ದಿಲೀಪ್ ಹೆಗ್ಡೆ ಪಾಯ್ಸನ್ ಖರೀಸಿದ್ದ ಎನ್ನಲಾಗಿದೆ. ಕಾಲೇಜು ಲ್ಯಾಬ್‌ಗಳ ಪ್ರಯೋಗಾಲಯದಲ್ಲಿ ಬಳಸುವ ವಿಷಕಾರಿ ಲಿಕ್ವಿಡ್ ಇದಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು ನಾಲ್ಕು ಮೊಬೈಲ್, ಕಾರು, ಸ್ಕೂಟಿ ವಶಕ್ಕೆ ಪಡೆಯಲಾಗಿದೆ.

  • ನನ್ನ ಪತ್ನಿ ಟ್ರಾನ್ಸ್‌ಜೆಂಡರ್‌ – ಲಿಂಗತ್ವ ಪರೀಕ್ಷೆಗೆ ಅನುಮತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪತಿ

    ನನ್ನ ಪತ್ನಿ ಟ್ರಾನ್ಸ್‌ಜೆಂಡರ್‌ – ಲಿಂಗತ್ವ ಪರೀಕ್ಷೆಗೆ ಅನುಮತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪತಿ

    ನವದೆಹಲಿ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು (Wife) ಟ್ರಾನ್ಸ್‌ಜೆಂಡರ್ (Transgender) ಎಂದು ಆರೋಪಿಸಿ, ಆಕೆಯ ಲಿಂಗತ್ವ ಪರೀಕ್ಷೆ ನಡೆಸಬೇಕು ಎಂದು ದೆಹಲಿ ಹೈಕೋರ್ಟ್ (Delhi High Court) ಮೊರೆ ಹೋಗಿದ್ದಾನೆ. ಈ ವಿಚಾರವನ್ನು ಮುಚ್ಚಿಟ್ಟು, ಮೋಸದಿಂದ ಮದುವೆ ಮಾಡಲಾಗಿದೆ. ಇದರಿಂದ ಮಾನಸಿಕ ಆಘಾತ ಉಂಟಾಗಿದೆ ಎಂದು ಆತ ಆರೋಪಿಸಿದ್ದಾನೆ.

    ವಕೀಲ ಅಭಿಷೇಕ್ ಕುಮಾರ್ ಚೌಧರಿ ಸಲ್ಲಿಸಿದ ಮನವಿಯಲ್ಲಿ ವ್ಯಕ್ತಿಯ ಲಿಂಗದ ಗುರುತು ಖಾಸಗಿ ವಿಷಯವಾಗಿದೆ ಎಂದು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮದುವೆಯ ಸಂದರ್ಭದಲ್ಲಿ ಆರೋಗ್ಯಕರ ವೈವಾಹಿಕ ಜೀವನವನ್ನು ನಡೆಸಲು ಖಚಿತಪಡಿಸಿಕೊಳ್ಳಲು ಅವಕಾಶವಿದೆ. ಭಾರತದ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಎರಡೂ ವ್ಯಕ್ತಿಗಳ ಜೀವನಕ್ಕೆ ಮೂಲಭೂತ ಹಕ್ಕುಗಳನ್ನು ಗೌರವಿಸುವುದು ಬಹಳ ಮುಖ್ಯ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

    ಕಾನೂನಿನಲ್ಲಿ ಪತ್ನಿ ʻಮಹಿಳೆʼ ಎಂದು ಅರ್ಹತೆ ಹೊಂದಿಲ್ಲದಿದ್ದರೆ ಅರ್ಜಿದಾರರು ಜೀವನಾಂಶವನ್ನು ಪಾವತಿಸಬೇಕಾಗಿಲ್ಲ. ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಕಾನೂನುಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸಬೇಕಾಗಿಲ್ಲ ಎಂದು ವಕೀಲರು ಹೇಳಿದ್ದಾರೆ.

    ಇದಕ್ಕೂ ಮುನ್ನ, ಅರ್ಜಿದಾರರು ತಮ್ಮ ಪತ್ನಿಯ ಪರೀಕ್ಷೆಗಾಗಿ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ಕೋರಲು ಸಿಪಿಸಿಯ ಸೆಕ್ಷನ್ 151 ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ವಿಚಾರಣಾ ನ್ಯಾಯಾಲಯವು ವೈದ್ಯಕೀಯ ಪರೀಕ್ಷೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

  • ಬೆಳಗಾವಿ| ಉದ್ಯಮಿ ಹತ್ಯೆ ಕೇಸ್ – 13 ಹಾರ್ಡ್ ಡಿಸ್ಕ್‌ಗಳಲ್ಲಿ ಸಂತೋಷ್‍ನ ಖಾಸಗಿ ವೀಡಿಯೋ ಪತ್ತೆ!

    ಬೆಳಗಾವಿ| ಉದ್ಯಮಿ ಹತ್ಯೆ ಕೇಸ್ – 13 ಹಾರ್ಡ್ ಡಿಸ್ಕ್‌ಗಳಲ್ಲಿ ಸಂತೋಷ್‍ನ ಖಾಸಗಿ ವೀಡಿಯೋ ಪತ್ತೆ!

    ಬಳ್ಳಾರಿ: ಬೆಳಗಾವಿಯಲ್ಲಿ ಉದ್ಯಮಿ ಸಂತೋಷ್ ಪದ್ಮನ್ನವರ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆತನ ಕರಾಳ ಮುಖದ ಪರಿಚಯವಾಗಿದೆ. ಹತ್ಯೆಯಾದ ಉದ್ಯಮಿಯ ಮನೆ ತಪಾಸಣೆ ವೇಳೆ ಆತ ಬೇರೆ ಬೇರೆ ಹೆಣ್ಣುಗಳ ಜೊತೆ ಕಳೆದ ಖಾಸಗಿ ವೀಡಿಯೋಗಳಿರುವ 13 ಹಾರ್ಡ್ ಡಿಸ್ಕ್‌ಗಳು ಪತ್ತೆಯಾಗಿವೆ.

    ಡಿಸ್ಕ್‌ಗಳು, ಸಿಸಿಟಿವಿ ಡಿವಿಆರ್, ಮೂರು ಪೆನ್‍ಡ್ರೈವ್‍ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇವುಗಳನ್ನು ಪರಿಶೀಲನೆಗಾಗಿ ಎಫ್‍ಎಸ್‍ಎಲ್‍ಗೆ ಕಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಉದ್ಯಮಿ ಹತ್ಯೆ – ಪತ್ನಿ ಸೇರಿ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್‌

    ಅ.9ರಂದು ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿದ್ದಾನೆ ಎಂದು ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಬಗ್ಗೆ ಸಂಶಯ ಬಂದು ಅ.14ರಂದು ತಾಯಿ ಸೇರಿ 5 ಜನರ ವಿರುದ್ಧ ಸಂತೋಷ್‍ನ ಮಗಳು ಕೊಲೆ ಕೇಸ್ ದಾಖಲಿಸಿದ್ದರು. ಪ್ರಕರಣ ತನಿಖೆ ನಡೆಸಿದಾಗ, ಪತ್ನಿ ಉಮಾ ಹಾಗೂ ಇಬ್ಬರು ಫೇಸ್‍ಬುಕ್ ಗೆಳೆಯರು ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

    ತನಿಖೆ ವೇಳೆ ಹಾರ್ಡ್ ಡಿಸ್ಕ್‌ನಲ್ಲಿರುವ ಗಂಡನ ಅಶ್ಲೀಲ ವೀಡಿಯೋ ಕುರಿತು ಪತ್ನಿ ಉಮಾ ಮಾಹಿತಿ ನೀಡಿದ್ದಳು. ಅಲ್ಲದೇ ಮಕ್ಕಳೆದುರು ಕೂಡ ಬೆತ್ತಲಾಗಿ ಸಂತೋಷ್ ಓಡಾಡುತ್ತಿದ್ದ ಎಂದು ಹೇಳಿದ್ದಳು.

    ಪ್ರಕರಣ ಸಂಬಂಧ ಸಂತೋಷ್ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿ| ತಂದೆಯ ಸಾವಿನ ಬಗ್ಗೆ ಮಗಳ ಅನುಮಾನ – ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

  • ಬೆಳಗಾವಿ ಉದ್ಯಮಿ ಹತ್ಯೆ – ಪತ್ನಿ ಸೇರಿ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್‌

    ಬೆಳಗಾವಿ ಉದ್ಯಮಿ ಹತ್ಯೆ – ಪತ್ನಿ ಸೇರಿ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್‌

    ಬೆಳಗಾವಿ: ಉದ್ಯಮಿ ಸಂತೋಷ ‌ಪದ್ಮನ್ನವರ (Santosh Padmannavar) ಕೊಲೆ ಪ್ರಕರಣದ (Murder Case) ಮೂವರು ಆರೋಪಿಗಳನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    ಬೆಳಗಾವಿಯಲ್ಲಿ (Belagavi) ಬಡ್ಡಿ ವ್ಯವಹಾರ, ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದ ಸಂತೋಷ ಪದ್ಮನ್ನವರ ಅಕ್ಟೋಬರ್ 9 ರಂದು ಮೃತಪಟ್ಟಿದ್ದರು. ತಂದೆಯ ಸಾವಿನ ಬಗ್ಗೆ ಪುತ್ರಿ ಸಂಜನಾ ಪದ್ಮನ್ನವರ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆ ಪ್ರಕರಣದ ಮೂವರು ಆರೋಪಿಗಳಾದ ಸಂತೋಷ ‌ಪತ್ನಿ ಉಮಾ ಪದ್ಮನ್ನವರ, ಶೋಭಿತ್‌ಗೌಡ, ಪವನ್ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ.

    ಮಂಗಳೂರಲ್ಲಿ ತಲೆ ಮರೆಸಿಕೊಂಡಿದ್ದ ಶೋಭಿತ್‌ಗೌಡ, ಪವನ್ ವಶಕ್ಕೆ ಪಡೆದಿದ್ದ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಇಡೀ ದಿನ ವಿಚಾರಣೆ ಆದ ಬಳಿಕ ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು  14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು ಮೂವರನ್ನೂ ಹಿಂಡಲಗಾ ಜೈಲಿಗೆ ಮಾಳಮಾರುತಿ ಠಾಣೆ ಪೊಲೀಸರು ರವಾನಿಸಿದ್ದಾರೆ.

     

  • ಅನೈತಿಕ ಸಂಬಂಧ; ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ

    ಅನೈತಿಕ ಸಂಬಂಧ; ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ

    – ಆರೋಪಿಗಳು ಅರೆಸ್ಟ್

    ಹಾವೇರಿ: ಪ್ರಿಯಕರನೊಂದಿಗೆ ಅನೈತಿಕ ಸಂಬಂಧ (Immoral relationship) ಹೊಂದಿದ್ದ ಪತ್ನಿ ತನ್ನ ಗಂಡನ ಪ್ರಾಣವನ್ನೇ ತೆಗೆದ ಘಟನೆ ಹಾವೇರಿ (Haveri) ಜಿಲ್ಲೆ ಹಿರೆಕೆರೂರು (Hirekerur) ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.

    ಸಾಧಿಕ್ ಮತ್ತೂರ್ (30) ಕೊಲೆಯಾದ ಪತಿ. ಚಿಕ್ಕೇರೂರು ಗ್ರಾಮದ ಸಾಧಿಕ್ ಮತ್ತೂರು ಜೀವನೋಪಾಯಕ್ಕಾಗಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸಾಧಿಕ್ ನಾಲ್ಕು ವರ್ಷದ ಹಿಂದೆ ಸಲ್ಮಾ ಎಂಬ ಸ್ವಗ್ರಾಮದ ಯುವತಿಯನ್ನೇ ಮದುವೆಯಾಗಿದ್ದ. ಪ್ರಾರಂಭದಲ್ಲಿ ಅನೋನ್ಯವಾಗಿದ್ದ ದಂಪತಿ ನಡುವೆ ಕೌಟುಂಬಿಕ ಕಲಹ ಪ್ರಾರಂಭವಾಗಿತ್ತು. ಆ ಕೌಟುಂಬಿಕ ಕಲಹದ ಹಿಂದೆ ಇದ್ದಿದ್ದು ಅನೈತಿಕ ಸಂಬಂಧ. ಸಲ್ಮಾ, ಜಾಫರ್ ಎಂಬ 28 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇಬ್ಬರು ಸೇರಿ ಗಂಡನನ್ನು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ: ಸೋಮಣ್ಣ ಘೋಷಣೆ

    ಕೊಲೆಯಾದ ಪತಿ

    ಸಾಧಿಕ್‌ನನ್ನು ಮದುವೆ ಆಗುವ ಮೊದಲೇ ಜಾಫರ್ ಹಾಗೂ ಸಲ್ಮಾ ನಡುವೆ ಪ್ರೇಮ ಕಹಾನಿ ನಡೆದಿತ್ತಂತೆ. ಆದರೆ ಅದನ್ನು ಗುಟ್ಟಾಗಿಯೇ ಇಟ್ಟಿದ್ದ ಸಲ್ಮಾ ಮದುವೆ ಆದ ಬಳಿಕವೂ ಪ್ರಿಯಕರ ಜಾಫರ್ ಜೊತೆ ಸರಸ ಸಲ್ಲಾಪ ನಡೆಸಿದ್ದಳು. ಹೆಂಡತಿಯ ಕಾಮಪುರಾಣ ಗೊತ್ತಾಗಿ ಪತಿ ಸಾಧಿಕ್ ಎಚ್ಚರಿಕೆ ನೀಡಿದ್ದ. ನೀವೇನಾದರೂ ಈ ಸಂಬಂಧ ಮುಂದುವರಿಸಿದರೆ ನಿಮ್ಮಿಬ್ಬರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಮನನೊಂದು ಎಚ್ಚರಿಕೆ ಕೂಡಾ ನೀಡಿದ್ದ. ಹೆಂಡತಿ ಬಳಿ ಇದ್ದ ಮೊಬೈಲ್ ಕೂಡಾ ಕಸಿದುಕೊಂಡಿದ್ದ. ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಭದ್ರಕೋಟೆಯೇ ಛಿದ್ರ – ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ

    ಇಬ್ಬರ ಹೆಸರು ಬರೆದಿಟ್ಟು ಸತ್ತರೆ ನಾವು ಜೈಲುಪಾಲಾಗಬಹುದು ಎಂದು ಯೋಚಿಸಿ ಸಲ್ಮಾ ಪ್ರಿಯಕರನ ಜೊತೆ ಸೇರಿ ಗಂಡನ ಸಾವಿಗೆ ಮುಹೂರ್ತ ಫಿಕ್ಸ್ ಮಾಡಿದ್ದಳು. ಇದೀಗ ಪೊಲೀಸ್ ತನಿಖೆಯ ಬಳಿಕ ಪತ್ನಿ ಹಾಗೂ ಪ್ರಿಯಕರ ಜೈಲು ಪಾಲಾಗಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

  • ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

    ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

    – ಹೆಂಡ್ತಿ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಸಲುಗೆ

    ಬೆಂಗಳೂರು: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ (Woman) ಪೆಟ್ರೋಲ್ (Petrol) ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಹುಳಿಮಾವು (Hulimavu) ಅಕ್ಷಯನಗರದಲ್ಲಿ ನಡೆದಿದೆ.

    ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಲೆಗೂ ಮುನ್ನ ರೇಣುಕಾಸ್ವಾಮಿಯನ್ನು ದರೋಡೆ ಮಾಡಿತ್ತು ‘ಡಿ’ಗ್ಯಾಂಗ್!

    ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಹಾಗಿದ್ದರೂ ಪತಿ ಶ್ರೀಹರಿ ಇತರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಳು. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಬಲಮುರಿ ಹಾಗೂ ಎಡಮುರಿ ಗಣಪತಿಗೆ ಇರುವ ವ್ಯತ್ಯಾಸವೇನು?

  • ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    – ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲು

    ಬೆಳಗಾವಿ: ಪತ್ನಿ ಹಾಗೂ ಅತ್ತೆ ಸೇರಿಕೊಂಡು ಸಾಲಗಾರ ಪತಿಯನ್ನು (Husband) ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿಯ ಪೀರವನಾಡಿ ನಿವಾಸಿ ವಿನಾಯಕ್ ಜಾಧವ್ (48) ಕೊಲೆಯಾದ ಪತಿ. ಜುಲೈ 29ರಂದು ರಾತ್ರಿ ಅಮ್ಮ-ಮಗಳು ಸೇರಿಕೊಂಡು ಸಾಲಗಾರ ಪತಿಯನ್ನು ಹತ್ಯೆ ಮಾಡಿದ್ದಾರೆ. ವಿನಾಯಕ್ ಜಾಧವ್ ಉದ್ಯಮಬಾಗದಲ್ಲಿ ಸ್ವಂತ ಉದ್ಯಮ ಹೊಂದಿದ್ದ. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ವಿಪರೀತ ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತು ಮನೆಯನ್ನು ಸಾಲಕ್ಕೆ ಅಡಮಾನವಾಗಿ ಇಟ್ಟು ಜನರ ಕಿರುಕುಳಕ್ಕೆ ನೊಂದು ಬೆಳಗಾವಿ ಬಿಟ್ಟು ಮೂರು ವರ್ಷಗಳಿಂದ ಪರಾರಿಯಾಗಿದ್ದ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

    ಜುಲೈ 29ರಂದು ವಿನಾಯಕ್ ಜಾಧವ್ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಮನೆಯಲ್ಲಿ ಪತ್ನಿ ರೇಣುಕಾ ಜೊತೆಗೆ ವಿಪರೀತ ಜಗಳ ಮಾಡಿದ್ದ. ಬಳಿಕ ಪತಿಯನ್ನು ಹಗ್ಗದಿಂದ ಕುತ್ತಿಗೆ ಕಟ್ಟಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಪತ್ನಿ ರೇಣುಕಾಗೆ ಆಕೆಯ ತಾಯಿ ಶೋಭಾ ಸಾಥ್ ನೀಡಿದ್ದರು. ಹತ್ಯೆ ಬಳಿಕ ಶವವನ್ನು ಮನೆಯ ಮುಂಭಾಗದಲ್ಲಿ ಬಿಸಾಡಿದ್ದರು. ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕರೆದು ಪತಿ ಮದ್ಯಪಾನ ಮಾಡಿ ಬಿದ್ದಿದ್ದಾನೆ. ಇದು ಕೊಲೆಯಲ್ಲ, ಸಹಜ ಸಾವು ಎಂದು ತಾಯಿ, ಮಗಳು ಬಿಂಬಿಸಿದ್ದರು. ಆದರೆ ವಿನಾಯಕ್ ಜಾಧವ್ ಸಹೋದರ ಅರುಣ್ ಸಾವಿನಲ್ಲಿ ಶಂಕೆ ಇದೆ ಎಂದು ದೂರು ನೀಡಿದ್ದರು. ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಕೊಲೆಯ ರಹಸ್ಯ ಬಯಲು ಮಾಡಿದ್ದಾರೆ. ಪ್ರಕರಣ ಸಂಬಂಧ ಪತ್ನಿ ರೇಣುಕಾ ಹಾಗೂ ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

  • ಪತ್ನಿಯ ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಮೈ-ಕೈ ಸುಟ್ಟ ಪಾಪಿ ಪತಿ

    ಪತ್ನಿಯ ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಮೈ-ಕೈ ಸುಟ್ಟ ಪಾಪಿ ಪತಿ

    ಚಿತ್ರದುರ್ಗ: ವ್ಯಕ್ತಿಯೊಬ್ಬ ತನ್ನ ಪತ್ನಿಯ (Wife) ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಆಕೆಯ ಮೈ ಸುಟ್ಟಿರುವುದು ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.

    ನಾಗೇಶ್ ಎಂಬಾತ ಆ.15 ರಂದು ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ, ಪತ್ನಿಯ ಮುಖ, ಕೈ-ಕಾಲು, ತೊಡೆ ಸೇರಿ ಹಲವೆಡೆ ಸುಟ್ಟು ವಿಕೃತಿ ಮೆರೆದಿದ್ದಾನೆ. ಮಹಿಳೆಗೆ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಕೆ ಚೇತರಿಸಿಕೊಂಡಿದ್ದಾರೆ. ಗಾಯಾಳು ಮಹಿಳೆ ಬಳ್ಳಾರಿಯ ತವರುಮನೆಯಲ್ಲಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಕೋರ್ಟ್‍ಗೆ ಹಾಜರಾಗದೇ ಕಳ್ಳಾಟ – ಗೋವಾದಲ್ಲಿ ಲಾಯರ್ ಜಗದೀಶ್ ಅರೆಸ್ಟ್

    ನಾಗೇಶ್‍ನ ತಂದೆ ಚಂದ್ರಣ್ಣನ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿ ಬಂದಿದೆ.

    ಆ.19ರಂದು ಮೊಳಕಾಲ್ಮೂರು ಪೊಲೀಸ್‌ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ನಾಪತ್ತೆಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ. ಇದನ್ನೂ ಓದಿ: ವೈದ್ಯೆ ಜೊತೆ ಅನುಚಿತ ವರ್ತನೆ – ವಿವಾದಿತ ಆಪ್ ಶಾಸಕಿ ರಾಖಿ ಬಿರ್ಲಾ ತಂದೆ ವಿರುದ್ಧ ಎಫ್‍ಐಆರ್

  • ದುಂದುವೆಚ್ಚಕ್ಕೆ ಬೇಸತ್ತ ಗಂಡ – ಗೆಳೆಯರಿಗೆ ಸುಪಾರಿ ಕೊಟ್ಟು ಪತ್ನಿಯ ಕೊಲೆ

    ದುಂದುವೆಚ್ಚಕ್ಕೆ ಬೇಸತ್ತ ಗಂಡ – ಗೆಳೆಯರಿಗೆ ಸುಪಾರಿ ಕೊಟ್ಟು ಪತ್ನಿಯ ಕೊಲೆ

    ಭೋಪಾಲ್: ಪತ್ನಿಯ ದುಂದುವೆಚ್ಚಕ್ಕೆ ಬೇಸತ್ತ ಪತಿಯು ತನ್ನ ಗೆಳೆಯರಿಗೆ ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿರುವ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ನಡೆದಿದೆ.

    ದುರ್ಗಾವತಿ ಕೊಲೆಯಾದ ಮಹಿಳೆ. ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ಹೇಮಂತ್ ಶರ್ಮಾ ಎಂಬಾತ ತನ್ನ ಪತ್ನಿಯು ದುಂದುವೆಚ್ಚ ಮಾಡುತ್ತಿರುವುದಕ್ಕೆ ಬೇಸತ್ತಿದ್ದ. ಗೆಳೆಯರಿಗೆ 2.5 ಲಕ್ಷ ರೂ. ಗೆ ಪತ್ನಿಯ ಕೊಲೆ ಮಾಡಲು ಸುಪಾರಿ ನೀಡಿದ್ದ. ಇದನ್ನೂ ಓದಿ: ಎಸ್‌ಸಿಒ ಸಭೆಗೆ ಮೋದಿಗೆ ಆಹ್ವಾನ ನೀಡಿದ ಪಾಕ್‌ – ಪ್ರಧಾನಿ ಭಾಗವಹಿಸೋದು ಡೌಟ್‌

    ಆ.13 ರಂದು ದುರ್ಗಾವತಿ ತನ್ನ ಸಹೋದರ ಸಂದೇಶನ ಜೊತೆಗೆ ಬೈಕ್ ಮೇಲೆ ದೇವಸ್ಥಾನಕ್ಕೆ ಹೋಗಿದ್ದಳು. ದೇವಸ್ಥಾನದಿಂದ ವಾಪಸ್ ಬರುವ ಸಮಯದಲ್ಲಿ ಹೇಮಂತ್ ಶರ್ಮಾನಿಗೆ ಪರಿಚಯವಿದ್ದವರು ಕಾರಿನಲ್ಲಿ ಬಂದು ಉದ್ದೇಶಪೂರ್ವಕವಾಗಿ ದುರ್ಗಾವತಿ ಚಲಿಸುತ್ತಿದ್ದ ಬೈಕ್‌ಗೆ ಗುದ್ದಿದ್ದಾರೆ.

    ತಕ್ಷಣವೇ ದುರ್ಗಾವತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಆಕೆ ಮೃತಪಟ್ಟಿದ್ದಾಳೆ. ಆಕೆಯ ಸಹೋದರ ಸಂದೇಶ ಗಂಭೀರವಾಗಿ ಗಾಯಗೊಂಡಿದ್ದಾನೆ. ನಂತರ ಶರ್ಮಾ, ಭಾರೀ ವಾಹನವೊಂದು ವೇಗವಾಗಿ ಬಂದು ಅಪಘಾತ ಮಾಡಿದೆ ಎಂದು ತಿಳಿಸಿ ಸುಮ್ಮನಾಗಿದ್ದ. ಇದನ್ನೂ ಓದಿ: ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಘಟನೆಯಾದ 10 ದಿನದ ನಂತರ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಹೇಮಂತ್ ಶರ್ಮಾನಿಗೆ ಪರಿಚಯವಿದ್ದ ವ್ಯಕ್ತಿಯ ಕಾರು ಬೈಕಿಗೆ ಉದ್ದೇಶಪೂರ್ವಕವಾಗಿ ಗುದ್ದಿದ್ದು ಗೊತ್ತಾಗಿದೆ.

    ತನಿಖೆ ವೇಳೆ ದುರ್ಗಾವತಿಯು ಹೇಮಂತ್ ಶರ್ಮಾನ ಎರಡನೇ ಹೆಂಡತಿ ಎಂದು ಗೊತ್ತಾಗಿದ್ದು, ಅವರಿಬ್ಬರು 2021 ರಿಂದ ಸಂಪರ್ಕದಲ್ಲಿದ್ದರು. ನಂತರ ಅವರು 2023ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು ಎಂದು ತಿಳಿದು ಬಂದಿದೆ.

    ಕೊಲೆ ಮಾಡುವಾಗ ಮೂವರು ಆರೋಪಿಗಳು ಭಾಗಿಯಾಗಿರುವುದು ಖಚಿತವಾಗಿದೆ. ಸದ್ಯಕ್ಕೆ ಹೇಮಂತ್ ಶರ್ಮಾ ಮತ್ತು ಕಾರು ಚಾಲಕನನ್ನು ಬಂಧಿಸಲಾಗಿದೆ. ಇನ್ನಿಬ್ಬರ ಬಂಧನಕ್ಕೆ ಹುಡುಕಾಟ ನಡೆದಿದೆ ಎಂದು ಪೊಲೀಸ್ ಅಧಿಕಾರಿ ನಿರಂಜನ್ ಶರ್ಮಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2,100 ಕೋಟಿ ರೂ. ಚೆಕ್‌ ಕೊಟ್ಟ ದಾನಿ

  • ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

    ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

    – ಗಂಡನ ಮನೆಗೆ ಬೆಂಕಿ ಇಟ್ಟು ಮೃತ ಮಹಿಳೆ ಸಂಬಂಧಿಕರು ಆಕ್ರೋಶ

    ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.

    ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ ಮೃತದೇಹ ಪತ್ತೆಯಾಗಿದೆ. ಮಹಿಳೆ ಸಾವಿನ ಬೆನ್ನಲ್ಲೇ ಸ್ವಾತಿ ಪತಿ ಹಾಗೂ ಆತನ ಪೋಷಕರು ಪರಾರಿಯಾಗಿದ್ದರು. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಮಹಿಳೆ ಸಾವಿನಿಂದ ಆಕ್ರೋಶಿತರಾದರ ಸಂಬಂಧಿಗಳು ಮನೆಗೆ ಬೆಂಕಿ ಇಟ್ಟು, ಪೀಠೋಪಕರಣ ಧ್ವಂಸ ಮಾಡಿ ದಾಂಧಲೆ ಸೃಷ್ಟಿಸಿದ್ದಾರೆ.

    ಮರಣೋತ್ತರ ಪರೀಕ್ಷೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಪೊಲೀಸರು ನಾಪತ್ತೆಯಾಗಿರುವ ಗಂಡ ಹಾಗೂ ಅವನ ಮನೆಯವರಿಗಾಗಿ ಶೋಧಕ್ಕೆ ಮುಂದಾದರು.

    ಪತ್ನಿ ಸಾವಿನ ಬೆನ್ನಲ್ಲೇ ಮೋಹನ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆರೆಯಿಂದ ಮೋಹನ್ ಶವ ಹೊರತೆಗೆಯಲಾಗಿದೆ. ಗ್ರಾಮಸ್ಥರ ಸಹಾಯದೊಂದಿಗೆ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಪತಿ, ಪತ್ನಿ ಸಾವಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮೃತ ಸ್ವಾತಿ ಗಂಡನ ಮನೆ, ಕೊಬ್ಬರಿ ಗೋಡೌನ್‌ಗೆ ಬೆಂಕಿ ಬಿದ್ದಿದೆ. ಗೋಡೌನ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ.

    ಎರಡು ವರ್ಷದ ಹಿಂದೆಯಷ್ಟೆ ಸ್ವಾತಿ-ಮೋಹನ್ ಇಬ್ಬರೂ ಮದುವೆಯಾಗಿದ್ದರು. ಮೃತ ದಂಪತಿಗೆ ಒಂದು ವರ್ಷದ ಹೆಣ್ಣು ಮಗುವಿದೆ. ತಂದೆ, ತಾಯಿ, ಪತ್ನಿ ಜೊತೆ ತೋಟದ ಮನೆಯಲ್ಲಿಯೇ ಮೋಹನ್ ವಾಸವಿದ್ದ. ಸಣ್ಣ-ಪುಟ್ಟ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ಸಂಜೆ ತವರು ಮನೆಯಿಂದ ಪತ್ನಿ ಸ್ವಾತಿಯನ್ನ ತನ್ನ ಮನೆಗೆ ಕರೆತಂದಿದ್ದ. ಮಗುವನ್ನ ಅತ್ತೆ ಮನೆಯಲ್ಲಿಯೇ ಬಿಟ್ಟು ಬಂದಿದ್ದ. ಮನೆಗೆ ಬಂದ ಕೆಲ ಹೊತ್ತಲ್ಲೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಒಂದು ಗಂಟೆ ಬಳಿಕ ಬಾವನ ಮನೆಗೆ ಮಗು ಕರೆದುಕೊಂಡು ಬಂದಿದ್ದ ಸ್ವಾತಿ ಸಹೋದರನಿಗೆ ಶಾಕ್ ಕಾದಿತ್ತು.

    ಈ ವೇಳೆ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾತಿ ಮೃತದೇಹವಿತ್ತು. ಅತ್ತ ಪತಿ ಮೋಹನ್ ಪರಾರಿಯಾಗಿದ್ದ. ಮನೆ ಬಳಿಗ ಬಂದ ಸ್ವಾತಿ ಕುಟುಂಸ್ಥರು ದಾಂಧಲೆ ನಡೆಸಿದ್ದಾರೆ. ಮನೆಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಮನೆಯ ಕಿಟಕಿ ಗಾಜು ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಆಕ್ರೋಶಿತ ಗುಂಪಿನಿಂದ ಕೊಬ್ಬರಿ ಶೇಖರಿಸಿದ್ದ ಮನೆಗೆ ಬೆಂಕಿ ಹಚ್ಚಲಾಗಿದೆ. 10 ಲಕ್ಷಕ್ಕೂ ಅಧಿಕ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ. ಈ ನಡುವೆ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿಯೇ ಮೋಹನ್ ಶವ ಪತ್ತೆಯಾಗಿದೆ.