Tag: wild cat

  • ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

    ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

    – ಅಳಿವಿನಂಚಲ್ಲಿರುವ ಬಿಳಿ ಹುಲಿ, ಕಾಡು ಬೆಕ್ಕು, ಮೊಸಳೆ ಆಮದು

    ಆನೇಕಲ್: ಪ್ರಾಣಿ ವಿನಿಯಯ ಯೋಜನೆಯಡಿ (Animal Exchange) ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerghatta Biological Park) ನೂತನ ಅಥಿತಿಗಳ ಆಗಮನವಾಗಿದೆ.

    ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯಂತೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಹಾಗೂ ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ. ವಿನಿಮಯದ ಭಾಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಇದರ ಪ್ರತಿಯಾಗಿ ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದ್ದು, ನೂತನ ಪ್ರಾಣಿಗಳ ಆಗಮನದಿಂದ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಭೀಕರ ಕೊಲೆ

    ಬೆಂಗಳೂರಿನ ಹವಾಮಾನಕ್ಕೆ ಹೊಂದಿಕೊಳ್ಳಲು ಈ ಹೊಸ ಪ್ರಾಣಿಗಳನ್ನು ಕೆಲವು ದಿನಗಳವರೆಗೆ ಕ್ವಾರಂಟೈನ್ ಪ್ರದೇಶದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ನಿರಂತರ ವೀಕ್ಷಣೆಯಲ್ಲಿರಲು ಪ್ರತ್ಯೇಕ ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಲಾಗಿದೆ. ಈ ಪ್ರಾಣಿ ವಿನಿಮಯವು ಮೃಗಾಲಯಗಳಲ್ಲಿನ ಪ್ರಾಣಿಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಹೆಚ್ಚಿಸಲು ಸಹಕಾರಿಯಾಗಿದ್ದು, ಪ್ರಾಣಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೂ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಹೊಸ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಗಲಿದೆ. ಇದನ್ನೂ ಓದಿ: ಬೆಂಗಳೂರು| ಬೈಕ್‌ನಲ್ಲಿ ಬಂದು ಪೆಪ್ಪರ್ ಸ್ಪ್ರೇ ಹಾಕಿ ಯುವಕರ ಮೇಲೆ ಹಲ್ಲೆ

    ಪ್ರಾಣಿ ವಿನಿಮಯ ಕಾರ್ಯಕ್ರಮಗಳು ಹೆಚ್ಚಾಗಿ ಆದಾಗ ಸಂರಕ್ಷಣೆ, ಶಿಕ್ಷಣ ಮತ್ತು ವಿಭಿನ್ನ ಪ್ರಾಣಿಗಳ ಜೀವನ ಶೈಲಿ ಸೇರಿದಂತೆ ಜನರಲ್ಲಿ ದೇಶದಾದ್ಯಂತ ಇರುವ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಭಾರತೀಯ ಪ್ರಾಣಿ ಸಂಗ್ರಹಾಲಯ ಈ ಮಹತ್ತರದ ಪ್ರಾಣಿ ವಿನಿಮಯ ಯೋಜನೆಯನ್ನು ಮಾಡಿದೆ. ಇದನ್ನೂ ಓದಿ: ಮಳೆ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ – ಗ್ರಾಹಕರು ಹೈರಾಣು, ಯಾವ ತರಕಾರಿಗೆ ಎಷ್ಟು ಬೆಲೆ?

  • ಕಾಡು ಬೆಕ್ಕು ನುಂಗಿ ಜೀರ್ಣಿಸಿಕೊಳ್ಳಲಾರದೆ ಬಾಯಿಯಿಂದ ಹೊರಹಾಕಿದ ಹೆಬ್ಬಾವು

    ಕಾಡು ಬೆಕ್ಕು ನುಂಗಿ ಜೀರ್ಣಿಸಿಕೊಳ್ಳಲಾರದೆ ಬಾಯಿಯಿಂದ ಹೊರಹಾಕಿದ ಹೆಬ್ಬಾವು

    ಚಾಮರಾಜನಗರ: ಕಾಡು ಬೆಕ್ಕೊಂದನ್ನು ನುಂಗಿದ ಹೆಬ್ಬಾವು ಅದನ್ನು ಜೀರ್ಣಿಸಿಕೊಳ್ಳಲಾರದೆ ಬಾಯಿಯಿಂದ ಹೊರಹಾಕಿದ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ ಮುರಟಿಪಾಳ್ಯದ ಬಳಿ ನಡೆದಿದೆ.

    ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮುರಟಿಪಾಳ್ಯದ ಕಬ್ಬಿನ ಗದ್ದೆಯಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ಕಬ್ಬು ಕಟಾವು ಮಾಡುತ್ತಿದ್ದಾಗ ಸ್ಥಳೀಯರು ಈ ಹೆಬ್ಬಾವನ್ನು ನೋಡಿದ್ದಾರೆ. ಹೆಬ್ಬಾವು ಕಾಡು ಬೆಕ್ಕನ್ನು ನುಂಗಿ ಚಲಿಸಲಾರದೆ ಒದ್ದಾಡುತ್ತಾ ತಾನು ನುಂಗಿದ್ದ ಕಾಡು ಬೆಕ್ಕನ್ನು ಬಾಯಿಂದ  ಹೊರಹಾಕಲು ಹರಸಾಹಸ ಪಟ್ಟಿದೆ. ಇದನ್ನೂ ಓದಿ: ಬಿಲ್ ವಸೂಲಿಗೆ ಹೋದ ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

    ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಂತೇಮರಹಳ್ಳಿಯ ಸ್ನೇಕ್ ಮಹೇಶ್ ಈ ಅಪರೂಪದ ದೃಶ್ಯ ಸೆರೆ ಹಿಡಿದಿದ್ದಾರೆ. ಬಳಿಕ ಹೆಬ್ಬಾವನ್ನು ರಕ್ಷಿಸಿ ಬಿಳಿಗಿರಿರಂಗನಬೆಟ್ಟದ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಇದನ್ನೂ ಓದಿ: ಮಾಂಜ್ರಾನದಿ ದಡದಲ್ಲಿ ಎದುರಾದ ಪ್ರವಾಹ ಸ್ಥಿತಿ – ಸಾವಿರಾರು ಎಕರೆ ಬೆಳೆ ಸರ್ವನಾಶ