Tag: wildlife Act

  • ಟಿಪ್ಪು ಸುಲ್ತಾನ್ ಹುಲಿ ಕೊಲ್ಲುತ್ತಿರುವ ಫೋಟೋ ಹಾಕಿಕೊಂಡಿರುವವರ ವಿರುದ್ಧವೂ ಕ್ರಮ ಕೈಗೊಳ್ಳಿ – ಆರಗ ಆಗ್ರಹ

    ಟಿಪ್ಪು ಸುಲ್ತಾನ್ ಹುಲಿ ಕೊಲ್ಲುತ್ತಿರುವ ಫೋಟೋ ಹಾಕಿಕೊಂಡಿರುವವರ ವಿರುದ್ಧವೂ ಕ್ರಮ ಕೈಗೊಳ್ಳಿ – ಆರಗ ಆಗ್ರಹ

    ಶಿವಮೊಗ್ಗ: ರಾಜ್ಯದಲ್ಲಿ ಹುಲಿ ಉಗುರು (Tiger Claws) ಧರಿಸಿದ ವ್ಯಕ್ತಿಗಳ ವಿರುದ್ಧ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ಹಲವರನ್ನು ವಶಕ್ಕೆ ಪಡೆಯುತ್ತಿದ್ದಾರೆ. ಈ ಪ್ರಕರಣ ಗಮನಿಸಿದರೆ ಅರಣ್ಯಾಧಿಕಾರಿಗಳು (Forest Officer) ಪ್ರಚಾರದ ಗೀಳಿಗೆ ಬಿದ್ದಂತಿದೆ. ವನ್ಯಜೀವಿ ಕಾಯ್ದೆ (Wildlife Act) ಜಾರಿಗೆ ಬರುವ ಮೊದಲು ಸಂಗ್ರಹ ಮಾಡಿ ಇಟ್ಟುಕೊಂಡಿರುವವರನ್ನು ಬಿಡುಗಡೆ ಮಾಡಿ ಇಲ್ಲವೇ, ಟಿಪ್ಪು ಸುಲ್ತಾನ್ ಹುಲಿ ಕೊಲ್ಲುತ್ತಿರುವ ಫೋಟೋ ಹಾಕಿಕೊಂಡಿರುವವರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಆಗ್ರಹಿಸಿದ್ದಾರೆ.

    ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಇದನ್ನೇ ದಾಳವಾಗಿರಿಸಿಕೊಂಡು ಪೆಂಡೆಂಟ್ ಧರಿಸಿದ ಅನೇಕರ ಫೋಟೋಗಳನ್ನ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಫೋಟೋ ಕಂಡು ಬಂದ ಎಲ್ಲರ ಮೇಲೂ ಕ್ರಮ ಕೈಗೊಳ್ಳಲಾಗುತ್ತಿದೆ. 1972ರ ವನ್ಯಜೀವಿ ಕಾಯ್ದೆ ಹಿಂದಿನ ಪ್ರಕರಣ ಕೈಬಿಡಿ, ಇಲ್ಲವೇ ಟಿಪ್ಪು ಸುಲ್ತಾನ್ (Tipu Sultan) ಹುಲಿ ಕೊಲ್ಲುತ್ತಿರುವ ಫೋಟೋ ಹಾಕಿಕೊಂಡಿರುವವರ ವಿರುದ್ಧವೂ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ಇದು ಸಹ ಹುಲಿ ಕೊಲ್ಲಲ್ಲು ಬೇರೆಯವರಿಗೆ ಪ್ರೇರಣೆ ನೀಡಬಹುದು ಎಂದು ಒತ್ತಾಯಿಸಿದ್ದಾರೆ.

    ಜೊತೆಗೆ ಮಸೀದಿಗಳಲ್ಲಿ ಮುಸ್ಲಿಂ ಮೌಲ್ವಿಗಳು ನವಿಲುಗರಿ ಇಟ್ಟುಕೊಂಡಿರುತ್ತಾರೆ. ನವಿಲುಗರಿಯಿಂದ ತಲೆಯ ಮೇಲೆ, ಭುಜದ ಮೇಲೆ ಹೊಡೆಯುತ್ತಾರೆ. ನವಿಲು ರಾಷ್ಟ್ರೀಯ ಪಕ್ಷಿ ಆಗಿರುವುದರಿಂದ ಅವರ ಮೇಲೆಯೂ ಕ್ರಮ ಕೈಗೊಳ್ಳಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ದಾಳಿ ನಡೆಸಿ ಹಮಾಸ್‌ ಕಮಾಂಡರ್‌ ಹತ್ಯೆ; 36 ಮಂದಿ ಬಂಧಿಸಿದ ಇಸ್ರೇಲ್‌ ರಕ್ಷಣಾ ಪಡೆ

    ಮಲೆನಾಡು ಹಾಗೂ ಕರಾವಳಿ ಭಾಗದ ಮನೆಗಳಲ್ಲಿ ನೂರಾರು ವರ್ಷಗಳಿಂದ ಕಾಡೆಮ್ಮೆ, ಜಿಂಕೆ ಕೊಂಬುಗಳನ್ನು ಮನೆಯಲ್ಲಿ ಅಲಂಕಾರಿಕ ವಸ್ತುಗಳಾಗಿ ಬಳಸುತ್ತಿದ್ದಾರೆ. ಈ ಹಿಂದೆ ಹುಲಿ ಉಗುರು ರೀತಿಯ ವಸ್ತುಗಳನ್ನು ಮಾರಾಟ ಮಾಡಲು ಹಳ್ಳಿಗಳ ಕಡೆ ಬರುತ್ತಿದ್ದರು. ಅದನ್ನು‌ ಜನರು ಕೊಂಡುಕೊಳ್ಳುತ್ತಿದ್ದರು. ಮಕ್ಕಳ ಕೊರಳಿಗೆ ಕಟ್ಟಿದ್ದರೆ ಧೈರ್ಯದ ಪ್ರತೀಕ ಎಂದು‌ ಭಾವಿಸಿದ್ದರು. ಇತ್ತೀಚೆಗೆ ಶ್ರೀಮಂತರು ಅದನ್ನು ಚಿನ್ನದ ಸರಕ್ಕೆ ಪೆಂಡೆಂಟ್ ರೂಪದಲ್ಲಿ ಮಾಡಿಸಿಕೊಂಡು ಹಾಕಿಕೊಳ್ಳುತ್ತಿದ್ದಾರೆ. ಆದ್ರೆ ಅರಣ್ಯಾಧಿಕಾರಿಗಳು ಹಿಂದೆ-ಮುಂದೆ ನೋಡದೇ ಕ್ರಮ ಜರುಗಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ನಾನು ವನ್ಯಜೀವಿ ಕಾಯ್ದೆ ವಿರೋಧಿಯಲ್ಲ, ವನ್ಯಜೀವಿ ಕಾಯ್ದೆ ಜಾರಿಗೆ ಬರುವ ಮೊದಲು ಸಂಗ್ರಹ ಮಾಡಿ ಇಟ್ಟುಕೊಂಡಿರುವವರನ್ನು ಬಿಡುಗಡೆ ಮಾಡಬೇಕು. ಎಲ್ಲರನ್ನು ಹಿಡಿದು ಜೈಲಿಗೆ ಹಾಕಿದರೆ, ಈ ರಾಜ್ಯದ ಜೈಲುಗಳು ಸಾಕಾಗುವುದಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಮಧ್ಯ ಪ್ರವೇಶ ಮಾಡಬೇಕು. ಮುಖ್ಯಮಂತ್ರಿ, ಅರಣ್ಯ ಸಚಿವರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕುಳಿತು ಚರ್ಚೆ ಮಾಡಿ ನಂತರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್; ಆರೋಪಿ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ NIA

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾವು ಹಿಡಿದು ಪ್ರದರ್ಶನ – ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು

    ಹಾವು ಹಿಡಿದು ಪ್ರದರ್ಶನ – ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು

    ಚಿಕ್ಕಬಳ್ಳಾಪುರ: ಜೀವಂತ ಹಾವು (Snake) ಕೈಯಲ್ಲಿ ಹಿಡಿದು ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಇಶಾ ಫೌಂಡೇಶನ್ (Isha Foundation) ಸಂಸ್ಥಾಪಕ ಜಗ್ಗಿ ವಾಸುದೇವ್ (Sadhguru Jaggi Vasudev) ವಿರುದ್ಧ ಅರಣ್ಯಾಧಿಕಾರಿಗೆ ದೂರು ನೀಡಲಾಗಿದೆ.

    ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಈ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಎಸ್‌ಪಿಸಿಎ ಸಂಸ್ಥೆ ಸದಸ್ಯ ಹಾಗೂ ಉರಗರಕ್ಷಕ ಪೃಥ್ವಿರಾಜ್ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ (Forest Officer) ರಮೇಶ್ ಅವರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ರಣರೋಚಕ T20 ವಿಶ್ವಕಪ್ ಆರಂಭ – ಟೀಂ ಇಂಡಿಯಾದತ್ತ ಎಲ್ಲರ ಚಿತ್ತ

    ವನ್ಯಜೀವಿಗಳನ್ನು ಹಿಡಿದು ಸಾರ್ವಜನಿಕ ವೇದಿಕೆಗಳಲ್ಲಿ ಪ್ರದರ್ಶನ ಮಾಡುವುದು `ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ’ (Wildlife Act) ಸ್ಪಷ್ಟ ಉಲ್ಲಂಘನೆ ಆಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಚಿರತೆ ಕೊಂದು ಬೇಯಿಸಿಕೊಂಡು ತಿಂದವರು ಅರೆಸ್ಟ್

    ಚಿರತೆ ಕೊಂದು ಬೇಯಿಸಿಕೊಂಡು ತಿಂದವರು ಅರೆಸ್ಟ್

    ತಿರುವನಂತಪುರಂ: ರಾಜ್ಯದ ಇಡುಕ್ಕಿ ಸಮೀಪ ಚಿರತೆಯನ್ನು ಬೇಟೆಯಾಡಿ ಕೊಂದು ತಿಂದ ಆರೋಪದಲ್ಲಿ ಐವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾಗಳು ಬಂಧಿಸಿದ್ದಾರೆ.

    ಆರೋಪಿಗಳನ್ನು ಇಡುಕ್ಕಿಯ ಮನಕುಲಂ ಸಮೀಪದ ವಿನೋದ್ ಪಿ.ಕೆ(45), ವಿ.ಪಿ ಕುರಿಯಾಕೋಸ್ (74), ಸಿ.ಎಸ್.ಬಿನು (50), ಸಾಲಿ ಕುಂಜಪ್ಪನ್ (54) ಮತ್ತು ವಿನ್‍ಸೆಂಟ್ (50) ಎಂದು ಗುರುತಿಸಲಾಗಿದೆ.

    ಆರೋಪಿ ವಿನೋದ್ ಮತ್ತು ಕುರಿಯಾಕೋಸ್ ಸೇರಿಕೊಂಡು ಅರಣ್ಯ ವ್ಯಾಪ್ತಿಯ 100 ಮೀಟರ್ ಅಂತರದಲ್ಲಿದ್ದ ಖಾಸಗಿ ಜಾಗದಲ್ಲಿ ಬಲೆಯನ್ನು ಹಾಕಿ ಚಿರತೆಯನ್ನು ಸೆರೆಹಿಡಿದಿದ್ದರು. 6 ವರ್ಷ ಪ್ರಾಯದ ಗಂಡು ಚಿರತೆಯನ್ನು ಹಿಡಿದ ಆರೋಪಿಗಳು ವಿನೋದ್ ಅವರ ಮನೆಗೆ ತಂದು ಕೊಂದು ಅಡುಗೆ ಮಾಡಿ ತಿಂದಿದ್ದಾರೆ. ನಂತರ ಅದರ ಚರ್ಮ ಮತ್ತು ಹಲ್ಲನ್ನು ಕಿತ್ತು ಮನೆಯ ಒಳಗಡೆ ಇಟ್ಟಿದ್ದರು. ಇದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

    ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಮನಕುಲಂ ರೇಂಜ್ ಆಫೀಸರ್ ವಿ.ಬಿ ಉದಯ ಸೂರ್ಯನ್ ನಾಡ್ಬಾದ್ ಅವರ ನೇತೃತ್ವದಲ್ಲಿ ಆರೋಪಿ ಮನೆಗೆ ದಾಳಿಮಾಡಿ 10 ಕೆಜಿ ಮಾಂಸ ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

    ಅರಣ್ಯ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ವಿನೋದ್ ಚಿರತೆಯ ಬೇಟೆಯಾಡಿದ್ದು ಇತರ ಆರೋಪಿಗಳು ಮಾಂಸವನ್ನು ತಿನ್ನಲು ಜೊತೆಯಾಗಿದ್ದಾರೆ, ಹಾಗಾಗಿ ಭಾರತೀಯ ವನ್ಯಜೀವಿ ಕಾನೂನಿನ ಪ್ರಕಾರ 7 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ ಎಂದು ಸ್ಥಳೀಯ ಪತ್ರಿಕೆಯಲ್ಲಿ ವರದಿಯಾಗಿದೆ.