Tag: Wildlife Protection Act

  • ʻಕೈʼ ಶಾಸಕ ತುರವಿಹಾಳ ಪುತ್ರ, ಸಹೋದರನಿಂದ ಮೊಲ ಬೇಟೆ, ಮಾರಕಾಸ್ರ್ತಹಿಡಿದು ಮೆರವಣಿಗೆ

    ʻಕೈʼ ಶಾಸಕ ತುರವಿಹಾಳ ಪುತ್ರ, ಸಹೋದರನಿಂದ ಮೊಲ ಬೇಟೆ, ಮಾರಕಾಸ್ರ್ತಹಿಡಿದು ಮೆರವಣಿಗೆ

    -ಅರಣ್ಯ ಇಲಾಖೆಯಿಂದ ಕೇಸ್ ದಾಖಲು

    ರಾಯಚೂರು: ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರವಿಹಾಳ (Basanagouda Turvihal) ಪುತ್ರ ಹಾಗೂ ಸಹೋದರ ಮೊಲ ಬೇಟೆ ಹಾಗೂ ಶಸ್ತ್ರಾಸ್ತ್ರಗಳೊಂದಿಗೆ ಮೆರವಣಿಗೆ ಮಾಡಿದ್ದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ  (Wildlife Protection Act) ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮೊಲಗಳ ಬೇಟೆ ಹಾಗೂ ಬೇಟೆ ಮಾಡಿದ ಉಪಕರಣಗಳ ಪ್ರದರ್ಶನ ಆರೋಪ ಹಿನ್ನೆಲೆ ವನ್ಯಜೀವಿ ಸಂರಕ್ಷಣಾ ಕಾಯಿದೆ 1972, 51, ಸೆಕ್ಷನ್ 9 ಅಡಿಯಲ್ಲಿ ಎ1 ಶಾಸಕರ ಸಹೋದರ ಸಿದ್ದನಗೌಡ, ಎ2 ಶಾಸಕರ ಪುತ್ರ ಸತೀಶ್ ಗೌಡ, ಸ್ಥಳೀಯ ದುರ್ಗೇಶ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ:ಬುಧವಾರ ವಕ್ಫ್‌ ಬಿಲ್‌ ಮಂಡನೆ – ಬಿಲ್‌ ಪಾಸ್‌ ಆಗುತ್ತಾ? ಲೋಕಸಭೆಯಲ್ಲಿ ಬಲಾಬಲ ಹೇಗಿದೆ?

    ಸಿಂಧನೂರು ತಾಲೂಕಿನ ತುರವಿಹಾಳ ಗ್ರಾಮದಲ್ಲಿ ಯುಗಾದಿ ಹಾಗೂ ಶಂಕರಲಿಂಗೇಶ್ವರ ಜಾತ್ರೆ ಹಿನ್ನೆಲೆ ರಾಯಚೂರಿನ ಮಸ್ಕಿ ಶಾಸಕ ಬಸನಗೌಡ ತುರವಿಹಾಳ ಪುತ್ರ ಹಾಗೂ ಸಹೋದರ ಮೊಲಗಳ ಬೇಟೆಯಾಡಿ, ಬಳಿಕ ಮಾರಕಾಸ್ತ್ರಗಳನ್ನ ಹಿಡಿದು ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದರು. ಪ್ರಾಣಿಗಳನ್ನ ಕೊಂದು ಕಟ್ಟಿಗೆಗೆ ನೇತು ಹಾಕಿ ಮಾರಕಾಸ್ತ್ರ ಹಿಡಿದು ಸಂಭ್ರಮಾಚರಿಸಿದ್ದರು. ಅಲ್ಲದೆ ಯಾವುದೇ ಪಶ್ಚಾತ್ತಾಪವಿಲ್ಲದೆ ಅಟ್ಟಹಾಸದ ವಿಡಿಯೋ, ಫೋಟೋಗಳನ್ನು ವಾಟ್ಸಾಪ್ ಸ್ಟೇಟಸ್‌ಗೆ ಹಾಕಿಕೊಂಡು ಸಂಭ್ರಮಿಸಿದ್ದಾರೆ.

    ಈ ಕುರಿತು ಶಾಸಕ ಬಸನಗೌಡ ತುರವಿಹಾಳ ಮಾತನಾಡಿ, ಈ ಘಟನೆಯ ಹೊಣೆಯನ್ನು ಸಾರ್ವಜನಿಕರ ಮೇಲೆ ಹಾಕಿದ್ದಾರೆ. ಮೆರವಣಿಗೆಗೆ ಹೋದಾಗ ಸಾರ್ವಜನಿಕರು ನಮ್ಮ ಸಹೋದರ ಮತ್ತು ಮಗನನ್ನ ಎತ್ತಿಕೊಂಡು ಮೆರವಣಿಗೆ ಮಾಡಿದ್ದಾರೆ. ಅದು ಆಯುಧಗಳಿಗೆ ಪೂಜೆ ಮಾಡುವ ಕಾರ್ಯಕ್ರಮ. ಆಯುಧಗಳನ್ನು ಯಾವುದೇ ಕೆಟ್ಟ ಕಾರ್ಯಕ್ಕೆ ಬಳಸುವಂತದ್ದು ಅಲ್ಲ. ಯಾವ ರೀತಿಯಾಗಿ ಮೊಲಗಳ ಬೇಟೆಯಾಡಿದ್ದಾರೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

    ಈ ಕುರಿತು ರಾಯಚೂರು ಡಿಎಫ್‌ಓ ಪ್ರವೀಣ್ ಮಾತನಾಡಿ, ಪ್ರಕರಣದ ತೀವ್ರತೆ ಮೇಲೆ ಕ್ರಮ ಜರುಗಿಸುತ್ತೇವೆ. ಶಾಸಕನ ಸಹೋದರ, ಶಾಸಕನ ಪುತ್ರ ಅಂತೇನೂ ಇಲ್ಲಾ, ಯಾರೇ ತಪ್ಪು ಮಾಡಿದ್ದರೂ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.ಇದನ್ನೂ ಓದಿ:ವಕ್ಫ್ ಮಸೂದೆಯ ಪರ ಮತ ಹಾಕಿ – ಸಂಸದರಿಗೆ ಕೇರಳ ಕ್ಯಾಥೋಲಿಕ್ ಬಿಷಪ್ ಸಂಘಟನೆ ಕರೆ

  • ಸಾರಸ್ ಕೊಕ್ಕರೆಯನ್ನು ಸಾಕಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

    ಸಾರಸ್ ಕೊಕ್ಕರೆಯನ್ನು ಸಾಕಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

    ಲಕ್ನೋ: ಸಾರಸ್ ಕೊಕ್ಕರೆಯನ್ನು ರಕ್ಷಣೆ ಮಾಡಿ ಒಂದು ವರ್ಷಗಳ ಕಾಲ ಸಾಕಿದ್ದ ಉತ್ತರ ಪ್ರದೇಶದ (Uttar Pradesh) ವ್ಯಕ್ತಿಯೊಬ್ಬನಿಗೆ ಅರಣ್ಯ ಇಲಾಖೆ (Forest department) ನೋಟಿಸ್ ಜಾರಿಗೊಳಿಸಿದೆ.

    ಅಮೇಥಿ ಜಿಲ್ಲೆಯ ಮಂಡ್ಖಾ ಗ್ರಾಮದ ಆರೀಫ್ ಖಾನ್ ಗುರ್ಜರ್ ಅವರು ತಮ್ಮ ಹೊಲದಲ್ಲಿ ಸಿಕ್ಕಿದ್ದ ಕೊಕ್ಕರೆಯನ್ನು ಮನೆಗೆ ಕೊಂಡೊಯ್ದು ಸಾಕಿದ್ದರು. ಈಗ ಅರಣ್ಯ ಇಲಾಖೆ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ (Wildlife Protection Act)ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು

    ಅರಣ್ಯ ಇಲಾಖೆ ಅಧಿಕಾರಿಗಳು ಪಕ್ಷಿಯನ್ನು ಸಮಸ್ಪುರ್‍ನ ಅಭಯಾರಣ್ಯಕ್ಕೆ ಸ್ಥಳಾಂತರಿಸಿದ್ದು, ನೈಸರ್ಗಿಕವಾಗಿ ವಾಸಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

    ಸಮಾಜವಾದಿ ಪಕ್ಷದ ನಾಯಕ (Samajwadi Party) ಅಕಿಲೇಶ್ ಯಾದವ್ (Akhilesh Yadav), ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ. ಇಲಾಖೆಗೆ ಪ್ರಧಾನಿ ನಿವಾಸದ ನವಿಲನ್ನು ಕೊಂಡೊಯ್ಯುವ ಧೈರ್ಯ ಇದೆಯೇ ಎಂದು ಪ್ರಶ್ನಿಸಿದ್ದಾರೆ.

    ಸಾರಸ್ ಹಾಗೂ ಆರೀಫ್‍ನ ಒಡನಾಟದ ಬಗ್ಗೆ ಕೇಳಿದ್ದ ಅಖಿಲೇಶ್ ಯಾದವ್, ರೈತನನ್ನು ಭೇಟಿಯಾಗಿ ಕೊಕ್ಕರೆಯೊಂದಿಗೆ ಫೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

    ಯಾದವ್ ಹೇಳಿಕೆಗೆ ಅರಣ್ಯಾಧಿಕಾರಿ ಡಿ.ಎನ್ ಸಿಂಗ್ ಪ್ರತಿಕ್ರಿಯಿಸಿ, ಆರೀಫ್ ಒಪ್ಪಿಗೆಯೊಂದಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಪಕ್ಷಿಗಳು ಯಾವಾಗಲೂ ಜೋಡಿಯಾಗಿ ಜೀವಿಸುತ್ತವೆ ಎಂದಿದ್ದಾರೆ. ಇದನ್ನೂ ಓದಿ: ದೇವಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾದ್ರಾ ಸಿದ್ದರಾಮಯ್ಯ?

  • ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR

    ಕಾಜಿರಂಗ ಉದ್ಯಾನವನದಲ್ಲಿ ಜೀಪ್ ಚಾಲನೆ – ಸದ್ಗುರು, ಹಿಮಂತ ಬಿಸ್ವಾ ಶರ್ಮಾ ವಿರುದ್ಧ FIR

    ಗುವಹಾಟಿ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ (Kaziranga National Park) ಜೀಪ್ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಶಾ ಫೌಂಡೇಶನ್‍ನ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.

    ಸದ್ಗುರು ಜಗ್ಗಿ ವಾಸುದೇವ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ವಾಹನ ಚಲಾಯಿಸಿದರು ಎಂಬ ಕಾರಣಕ್ಕೆ ಅವರಿಬ್ಬರ ವಿರುದ್ಧ ಉದ್ಯಾನವನದ ಹತ್ತಿರದ ಎರಡು ಗ್ರಾಮಗಳ ಇಬ್ಬರು ನಿವಾಸಿಗಳು ದೂರು ದಾಖಲಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ್ನು ಪ್ರವಾಸಿಗರಿಗಾಗಿ ಶನಿವಾರ ತೆರೆಯಲಾಗಿತ್ತು. ಅಂದು ರಾತ್ರಿ ಸದ್ಗುರು ಜಗ್ಗಿ ವಾಸುದೇವ್ ಉದ್ಯಾನದ ಒಳಗೆ ಜೀಪ್ ಚಾಲನೆ ಮಾಡಿದ್ದಾರೆ. ಅವರ ಪಕ್ಕ ಸಿಎಂ ಹಿಮಂತ ಬಿಸ್ವಾ ಶರ್ಮಾ ಕುಳಿತಿದ್ದರು. ಅಸ್ಸಾಂ ಸಂಪುಟ ಸಚಿವ ಜಯಂತ ಮಲ್ಲ ಮತ್ತಿತರರು ಕೂಡಾ ಜೀಪ್‍ನಲ್ಲಿ ರಾತ್ರಿ ಉದ್ಯಾನದಲ್ಲಿ ಸಂಚರಿಸಿದ್ದರು. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ನಷ್ಟ

    ಇದೀಗ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ (Wildlife Protection Act) ಸ್ಥಳೀಯರಾದ ಸೋನೇಶ್ವರ್ ನಾರಾ ಮತ್ತು ಪ್ರವೀಣ್ ಪೆಗು ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬೊಕಾಕಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಫಾರಿ ವನ್ಯಜೀವಿ ಸಂರಕ್ಷಣೆ ಕಾಯ್ದೆ, 1972ರ ಉಲ್ಲಂಘನೆಯಾಗಿದೆ ಎಂದು ಎಫ್‍ಐಆರ್‌ನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ಕೇರಳದ ಬೀದಿಗಳಲ್ಲಿ ಫುಟ್‍ಬಾಲ್ ಆಡಿದ ರಾಹುಲ್

    ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಉದ್ಯಾನದೊಳಗೆ ಜೀಪ್ ಸಂಚಾರವನ್ನು ನಿಷೇಧಿಸಲಾಗಿದೆ. ಆದರೂ ಸದ್ಗುರು ಮತ್ತು ಹಿಮಂತ ಬಿಸ್ವಾ ಶರ್ಮಾ ಜೀಪ್ ಚಾಲನೆ ಮಾಡಿದ್ದಾರೆ. ಇಂತಹ ಘಟನೆಗಳಿಂದ ಕಾಜಿರಂಗ ಮತ್ತು ಅಲ್ಲಿಯ ಪ್ರಾಣಿಗಳ ಸಂರಕ್ಷಣೆಗೆ ಅಪಾಯ. ಕಾನೂನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಅವರಿಬ್ಬರನ್ನು ಬಂಧಿಸಿ ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಅವರಿಬ್ಬರೂ ಸಾರ್ವಜನಿಕರರೊಂದಿಗೆ ಕ್ಷಮೆ ಕೇಳಬೇಕು. ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಆರೋಪದ ಬೆನ್ನಲ್ಲೇ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ಜೀಪ್ ಚಾಲನೆ ಮಾಡಿಲ್ಲ. ರಾತ್ರಿ ವೇಳೆ ಉದ್ಯಾನವನಕ್ಕೆ ಭೇಟಿ ಕೊಡಬಾರದೆಂದು ಕಾನೂನಿಲ್ಲ ಎಂದು ಹಿಮಂತ ಬಿಸ್ವಾ ಶರ್ಮಾ ಆರೋಪವನ್ನು ಅಲ್ಲಗಳೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]