Tag: wind

  • ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ – ಓರ್ವ ಗಂಭೀರ

    ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ – ಓರ್ವ ಗಂಭೀರ

    ಹುಬ್ಬಳ್ಳಿ/ಧಾರವಾಡ: ಮಳೆ-ಗಾಳಿಗೆ (Rain) ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಹಳೇ ಹುಬ್ಬಳ್ಳಿಯ ಧಾರವಾಡ ಪ್ಲಾಟ್ ನಿವಾಸಿ ದಾವೂದ್ ಸವಣೂರು (52), ನೂರಾಣಿ ಪ್ಲಾಟ್ ನಿವಾಸಿ ರಫಿಕ್‌ಸಾಬ್ ಚನ್ನಾಪುರ (50) ಮೃತ ಕಾರ್ಮಿಕರು. ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಮಹಾಂತೇಶ ಚವರಗುಡ್ಡ ಎಂಬವರಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮೋದಿ ಹೆಸ್ರಲ್ಲಿ 32 ಲಕ್ಷ ಗಿಫ್ಟ್ ಕಿಟ್ ಕೊಡೋದು ಮುಸ್ಲಿಂ ಓಲೈಕೆ ಅಲ್ವಾ? – ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ನಿರ್ಮಾಣ ಆಗುತ್ತಿರುವ ಕಟ್ಟಡದ ಗಾರೆ ಕೆಲಸಕ್ಕೆ ಕೂಲಿ ಕಾರ್ಮಿಕರು ತೆರಳಿದ್ದರು. ಮಳೆ, ಗಾಳಿ ಜೋರಾಗಿ ಬೀಸಿದ್ದರಿಂದ ಗೋಡೆಯ ಬಳಿ ನಿಂತಿದ್ದರು. ಗಾಳಿ ರಭಸಕ್ಕೆ ಗೋಡೆ ಕುಸಿದು ಕೆಳಗೆ ಸಿಲುಕಿ ಸಾವು ಸಂಭವಿಸಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ ಜನರು ಛತ್ರಿ ಹೇಳಿಕೆ; ಡಿಕೆಶಿ ಜನರ ಕ್ಷಮೆ ಕೇಳಬೇಕು – ಅನ್ನದಾನಿ

  • ಗಾಳಿಯ ಹೊಡೆತಕ್ಕೆ ಕಿತ್ತೇ ಹೋಯ್ತು ಟೋಲ್ ಗೇಟ್‌ನ ಮೇಲ್ಛಾವಣಿ

    ಗಾಳಿಯ ಹೊಡೆತಕ್ಕೆ ಕಿತ್ತೇ ಹೋಯ್ತು ಟೋಲ್ ಗೇಟ್‌ನ ಮೇಲ್ಛಾವಣಿ

    ಧಾರವಾಡ: ತಾಲೂಕಿನ ಕೆಲವು ಕಡೆಗಳಲ್ಲಿ ಭಾರೀ ಗಾಳಿಯ (Wind) ಕಾರಣ ರಾಜ್ಯ ಹೆದ್ದಾರಿಯಲ್ಲಿರುವ ಟೋಲ್ ಗೇಟ್‌ನ (Toll Gate) ಮೇಲ್ಛಾವಣಿ (Rooftop) ಕಿತ್ತು ಹೋಗಿರುವ ಘಟನೆ ಮರೇವಾಡ ರಸ್ತೆಯಲ್ಲಿ ಸಂಭವಿಸಿದೆ.

    ಸಂಜೆ ಹೊತ್ತಿಗೆ ಧಾರವಾಡ ತಾಲೂಕಿನ ಕೆಲ ಗ್ರಾಮಗಳಲ್ಲಿ ಭಾರೀ ಗಾಳಿ ಎದ್ದಿದೆ. ಈ ವೇಳೆ ಟೋಲ್ ಗೆಟ್‌ನ ತಗಡಿನ ಮೇಲ್ಛಾವಣಿ ಕಿತ್ತು ಹೋಗಿದೆ. ಕಬ್ಬಿಣದ ರಾಡ್ ಸಮೇತ ತಗಡುಗಳು ಹೊಲದಲ್ಲಿ ಹಾರಿ ಬಿದ್ದಿವೆ. ಗಾಳಿಯ ರಭಸಕ್ಕೆ ಟೋಲ್ ಗೇಟ್ ಹತ್ತಿರವೇ ಇದ್ದ ಕೆಲ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿವೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ

    ತಗಡಿನ ಮೇಲ್ಛಾವಣಿ ಹಾರಿ ಹೋಗುವ ಸಂದರ್ಭದಲ್ಲಿ ಟೋಲ್ ಸಿಬ್ಬಂದಿ ಕೂಡ ಒಳಗಡೆಯೇ ಇದ್ದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಇದನ್ನೂ ಓದಿ: ಎಂಜಿನಿಯರ್ ಮನೆಯಲ್ಲಿ ಜಿಂಕೆ ಕೊಂಬು ಸಮೇತ 4.75 ಕೋಟಿ ರೂ. ಆಸ್ತಿ ಪತ್ತೆ

  • ಉಡುಪಿಯಲ್ಲಿ ಜಿಟಿಜಿಟಿ ಮಳೆ – ಮತ್ತೆರೆಡು ದಿನ ವರ್ಷಧಾರೆ ಮುನ್ಸೂಚನೆ

    ಉಡುಪಿಯಲ್ಲಿ ಜಿಟಿಜಿಟಿ ಮಳೆ – ಮತ್ತೆರೆಡು ದಿನ ವರ್ಷಧಾರೆ ಮುನ್ಸೂಚನೆ

    ಉಡುಪಿ: ಜಿಲ್ಲೆಯಾದ್ಯಂತ ಜಿಟಿ-ಜಿಟಿ ಮಳೆಯಾಗುತ್ತಿದೆ. ಕಾರ್ಕಳ ಹೆಬ್ರಿ ಭಾಗದಲ್ಲಿ ಭಾರೀ ಮಳೆಯಾಗಿದೆ.

    ಕರಾವಳಿ ಜಿಲ್ಲೆ ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಬಿಟ್ಟು, ಬಿಟ್ಟು ಮಳೆಯಾಗುತ್ತಿದ್ದು, ಇಂದು ಕೊಂಚ ಹೆಚ್ಚು ಮಳೆಯಾಗಿದೆ. ಹವಾಮಾನ ಇಲಾಖೆ ಎರಡು ದಿನ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಕೊಟ್ಟಿದೆ. ಇದನ್ನೂ ಓದಿ: ಉಡುಪಿಯಲ್ಲಿ ಮಹಿಳಾ ಮೀನು ವ್ಯಾಪಾರಿಗಳ ಶೆಡ್ ಧ್ವಂಸ – ಸ್ಥಳೀಯರ ಆಕ್ರೋಶ

    ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಕರಾವಳಿ ತೀರದಲ್ಲೂ ಮಳೆಯಾಗುತ್ತದೆ. ಮಳೆಯ ಜೊತೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಕೂಡ ಬೀಸುತ್ತಿದೆ. ಸಮುದ್ರ ತೀರದ ಜನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ: ಸಿಎಂ ಬೊಮ್ಮಾಯಿ

    ಕರಾವಳಿಯಲ್ಲಿ ಕಳೆದ 15-20 ದಿನಗಳಿಂದ ಮಳೆಯ ಪ್ರಮಾಣ ಬಹಳ ಕ್ಷೀಣವಾಗಿತ್ತು. ಬೇಸಾಯ ಮತ್ತು ಕೃಷಿ ಚಟುವಟಿಕೆಗಳಿಗೆ ನಿಗದಿತ ಪ್ರಮಾಣದಲ್ಲಿ ಮಳೆ ಅವಶ್ಯಕತೆ ಇದೆ. ಗಣೇಶ ಚತುರ್ಥಿಯವರೆಗೂ ಆಗಾಗ ಮಳೆ ಬೀಳಬಹುದು. ಆಳ ಸಮುದ್ರ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರು ಎಚ್ಚರಿಕೆಯನ್ನು ವಹಿಸಬೇಕು ಎಂದು ಉಡುಪಿ ಜಿಲ್ಲಾ ಆಡಳಿತ ಸಂದೇಶವನ್ನು ರವಾನೆ ಮಾಡಿದೆ.

    ನಗರ ಭಾಗದಲ್ಲಿ ಜಿಟಿ, ಜಿಟಿ ಮಳೆಯಿಂದಾಗಿ ಪಾದಾಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಪರಾದಾಡುವಂತಾಗಿದೆ. ಪ್ರಮುಖ ಜಂಕ್ಷನ್‍ಗಳಲ್ಲಿ ಸ್ಲೋ ಮೂವಿ ಟ್ರಾಫಿಕ್‍ಗೆ ಮಳೆ ಕಾರಣವಾಗಿದೆ. ಮುಂದಿನ ಎರಡು ಮೂರು ದಿವಸಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಾಲ್ಕು ದಿನ ಗಾಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಸಿಲುಕಿದ ವೃದ್ಧೆ ರಕ್ಷಣೆ

    ನಾಲ್ಕು ದಿನ ಗಾಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಸಿಲುಕಿದ ವೃದ್ಧೆ ರಕ್ಷಣೆ

    ಮಡಿಕೇರಿ: 4 ದಿನಗಳ ಹಿಂದೆ ಕಣ್ಮರೆಯಾಗಿದ್ದ ವೃದ್ಧೆ ಮಡಿಕೇರಿ ತಾಲೂಕಿನ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟ ಪ್ರದೇಶದ ಪೊದರೆಯೊಂದರ ಬಳಿ ಪತ್ತೆಯಾಗಿದ್ದಾರೆ.

    ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಾಟ್ ಕಾಲೋನಿಯ 80 ವರ್ಷದ ಸೀತಮ್ಮ ಅವರನ್ನು ರಕ್ಷಿಸಲಾಗಿದೆ. ಸೀತಮ್ಮ ಸಂಬಂಧಿಕರ ಮನೆಯಿಂದ ಹೊರಟು ತಮ್ಮ ಮನೆಗೆ ಬರುತ್ತಿರುವಾಗ ದಾರಿ ಸರಿಯಾಗಿ ಗೋತ್ತಿಲ್ಲದ ಕಾರಣ ಬೆಟ್ಟ ಪ್ರದೇಶದ ಸುತ್ತಮುತ್ತ ಓಡಾಟ ನಡೆಸಿದ್ದಾರೆ. ಈ ವೇಳೆ ಕಾಡಿನ ಪೊದೆಯೊಂದರ ಬಳಿ ಆಶ್ರಯ ಪಡೆದಿದ್ರು. ನಾಲ್ಕು ದಿನಗಳಿಂದ ಮನೆಗೆ ಬರದ ಹಿನ್ನೆಲೆ ಗ್ರಾಮಸ್ಥರೆಲ್ಲಾ ಸೇರಿಕೊಂಡು ನಾಲ್ಕು ದಿನಗಳಿಂದ ಹುಡುಕಾಟ ನಡೆಸಿದ್ದಾರೆ.

    ಅಚ್ಚರಿ ಎಂಬಂತೆ ಸೀತಮ್ಮ ಪೊದೆಯಲ್ಲಿ ಸಿಕ್ಕಿದ್ದಾರೆ. ಆದರೆ ಈಕೆ 4 ದಿನಗಳ ಕಾಲ ಊಟ ಮಾಡದೆ ಚಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಜೀವ ಉಳಿಸಿದ್ದೇ ಗ್ರಾಮಸ್ಥರಿಗೆ ವಿಸ್ಮಯ ಮೂಡಿಸಿದೆ. ರೆವೆನ್ಯೂ ಇಲಾಖೆ ಸಿಬ್ಬಂದಿ ಪೂಣಚ್ಚ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ರವೀಂದ್ರ ಮತ್ತಿತರರು ಒಟ್ಟಾಗಿ 4 ದಿನಗಳಿಂದ ಸುತ್ತಮುತ್ತಲಿನ ಕಾಡಿನಲ್ಲಿ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು 

    ಮನೆಯಿಂದ ಸುಮಾರು 2 ಕಿ.ಮೀ. ದೂರದ ಬೆಟ್ಟದ ಪೊದೆಯಲ್ಲಿ ಸೀತಮ್ಮ ಪತ್ತೆಯಾಗಿದ್ದಾರೆ. ಅವರನ್ನು ಮನೆಗೆ ಹೊತ್ತು ತಂದು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವಾಹನದಲ್ಲಿ ನಾಪೋಕ್ಲುಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ವೃದ್ಧೆ ಚೇತರಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಯಿತು. ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ಸೇರಿದಂತೆ ಹಲವೆಡೆ ಮುಂಗಾರು ಅಬ್ಬರ – ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿ

    ಬೆಂಗಳೂರು ಸೇರಿದಂತೆ ಹಲವೆಡೆ ಮುಂಗಾರು ಅಬ್ಬರ – ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿ

    ಬೆಂಗಳೂರು: ತಡರಾತ್ರಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರ್ಭಟಿಸುತ್ತಿದೆ. ಭಾರೀ ಗಾಳಿ, ಗುಡುಗು-ಸಿಡಿಲಿನ ಸಮೇತ ಮಳೆ ಸುರಿದಿದೆ. ಮಳೆಯಿಂದಾಗಿ ನಗರದ ಏರ್‍ಪೋರ್ಟ್‍ನಲ್ಲಿ ಪ್ಲಾಸ್ಟಿಕ್ ತಡೆಗೋಡೆಗಳು ಚೆಲ್ಲಾಪಿಲ್ಲಿ ಆಗಿವೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಸದಾಶಿವನಗರ, ಹೆಬ್ಬಾಳ, ಯಲಹಂಕ, ಯಶವಂತಪುರ, ಶೇಷಾದ್ರಿಪುರಂ, ಕೆ.ಆರ್. ಮಾರ್ಕೆಟ್ ಬಳಿ ಭಾರೀ ಮಳೆ ಆಗಿದೆ. ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ನೆಲಮಂಗಲದಲ್ಲಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ಇದನ್ನೂ ಓದಿ: ಮುಂಗಾರು ಮಳೆಯ ಆರ್ಭಟ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

    ಕೊಪ್ಪಳ ಜಿಲ್ಲಾದ್ಯಂತ ಗುಡುಗು – ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಯಲಬುರ್ಗಾ ತಾಲೂಕು ಚಿಕ್ಕಮ್ಯಾಗೇರಿ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದೇವಮ್ಮ ಮುದೇನೂರು (55), ರೇಷ್ಮಾ ಚಲವಾದಿ (27) ಸಿಡಿಲಿಗೆ ಬಲಿಯಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಯಲಬುರ್ಗಾ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

    ಮತ್ತೊಂದೆಡೆ ಬೆಳಗಾವಿಯ ಹುಕ್ಕೇರಿ ತಾಲೂಕಿನ ಮದಹಳ್ಳಿಯಲ್ಲಿ ಬಿರುಗಾಳಿ ಮಳೆಗೆ ಮನೆ, ಕೊಟ್ಟಿಗೆಯ ಮೇಲ್ಛಾವಣಿಗಳು ಹಾರಿ ಹೋಗಿವೆ. ಗದಗದ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ಮಳೆ ಬಂದ ಹಿನ್ನೆಲೆ ಜಮೀನಿನಲ್ಲಿ ಮರದ ಕೆಳಗೆ ನಿಂತಿದ್ದ ಮೂವರು ಯುವಕರಿಗೆ ಸಿಡಿಲು ಬಡಿದು ಗಾಯಗಳಾಗಿದೆ. ಇದೀಗ ಗಾಯಗೊಂಡ 22 ವರ್ಷದ ಸಂಗಪ್ಪ ಇಟಗಿ, 24 ವರ್ಷದ ಜಗದೀಶ್ ಹೊಸಳ್ಳಿ, 25 ವರ್ಷದ ಪ್ರಶಾಂತ್ ಮಲ್ಲಾಪುರ ಅವರನ್ನು ರೋಣಾ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಚಿತ್ರದುರ್ಗದ ಚಳ್ಳಕೆರೆ ಪಟ್ಟಣದ ನೆಹರು ವೃತ್ತದ ಜಲಾವೃತವಾಗಿತ್ತು. ತಗಡಿನ ಶೀಟ್‍ಗಳು ಉರುಳಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್‍ಗಳು, ಆಟೋಗಳು ಜಖಂ ಆಗಿದೆ. ಕೋಲಾರ ಜಿಲ್ಲೆಯ ಮುಳಬಾಗಲು, ಶ್ರೀನಿವಾಸಪುರ, ಕೆಜಿಎಫ್, ಕೋಲಾರ ತಾಲೂಕಿನ ಹಲವೆಡೆ ಮಳೆ ಆಗಿದೆ.

  • ರಾಜ್ಯದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್

    ರಾಜ್ಯದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ರಾಜ್ಯದ ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ

    ಕರಾವಳಿ ಭಾಗದಲ್ಲಿ ಮೇ 18 ಕ್ಕೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಮೇ 18 ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ ಮತ್ತು ಮೇ 17ಕ್ಕೆ ಆರೆಂಜ್ ಅಲರ್ಟ್ ಮತ್ತು ಮೇ 19 ರಿಂದ 21 ರವರೆಗೆ ಎಲ್ಲೋ ಆಲರ್ಟ್ ಘೋಷಿಸಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ 21 ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್

    ಅರಬ್ಬಿ ಸಮುದ್ರದಲ್ಲಿ ತೇವಾಂಶ ತುಂಬಿದ ಗಾಳಿ ಗಂಟೆಗೆ 50-60 kmph ವೇಗದಲ್ಲಿ ಪಶ್ಚಿಮ ದಿಕ್ಕಿನಿಂದ ಬೀಸಲಿದೆ. ಲಕ್ಷದ್ವೀಪ ಭಾಗದಿಂದ ಕರಾವಳಿ ಭಾಗಕ್ಕೆ ಸರಾಸರಿ 3 km ವೇಗದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದ್ದು, ತಮಿಳುನಾಡು ಕರಾವಳಿ ಭಾಗದಿಂದ ರಾಜ್ಯ ಒಳನಾಡು ಭಾಗಕ್ಕೆ ಸರಾಸರಿ 2 km ವೇಗದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದೆ. ಉತ್ತರ ದಕ್ಷಿಣ ಟರ್ಫ್ ಸಮುದ್ರ ಭಾಗದಲ್ಲಿ ಬೀಸುತ್ತಿರುವ ಮೇಲ್ಮೈ ಸುಳಿಗಾಳಿ ಸಮುದ್ರ ಮಟ್ಟದಿಂದ 900 ಮೀ. ಎತ್ತರ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.

  • ಮುಂಬೈನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

    ಮುಂಬೈನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

    ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ಹಲವು ಪ್ರದೇಶಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

    ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢ್‍ದಲ್ಲಿ ಬಿಡುವಿಲ್ಲದೇ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಐಎಂಡಿಯ ಪ್ರಾದೇಶಿಕ ಹವಮಾನ ಕೇಂದ್ರವು ಮುಂಬೈನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದೆ.

    ಬುಧವಾರ ಅತೀ ಹೆಚ್ಚು ಮಳೆಯಾಗಿದ್ದರು ರಸ್ತೆ ಮತ್ತು ರೈಲು ಸಂಚಾರಕ್ಕೆ ಮಳೆಯಿಂದಾಗಿ ಯಾವುದೇ ತೊಂದರೆಯುಂಟಾಗಿಲ್ಲ. ಭಾನುವಾರ ಮತ್ತು ಸೋಮವಾರ ಹೆಚ್ಚಾಗಿ ಸುರಿದ ಮಳೆ, ಬುಧವಾರ ಮಧ್ಯಾಹ್ನ ಕೊಂಚ ಕಡಿಮೆಯಾಗಿತ್ತು. ಆದರೆ ಮತ್ತೆ ರಾತ್ರಿ ಇಡೀ ಮಳೆ ಧಾರಕಾರವಾಗಿ ಸುರಿದಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

    ಗುಜರಾತ್‍ನ ಕರಾವಳಿಯಿಂದ ಕರ್ನಾಟಕದ ತೀರದವರೆಗೂ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಮುಂಬೈನಲ್ಲಿ ಕೆಲವು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ, ಬೆಟ್ಟಗಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿಂದು ರೈತರ ಪ್ರತಿಭಟನೆ – ಗಡಿಯಲ್ಲಿ ಬಿಗಿ ಭದ್ರತೆ

  • ಕೊಡಗಿನಲ್ಲಿ ಗಾಳಿ ಸಹಿತ ಮಳೆ ಅರ್ಭಟ – ಉಕ್ಕಿ ಹರಿಯುತ್ತಿರುವ ನದಿಗಳು

    ಕೊಡಗಿನಲ್ಲಿ ಗಾಳಿ ಸಹಿತ ಮಳೆ ಅರ್ಭಟ – ಉಕ್ಕಿ ಹರಿಯುತ್ತಿರುವ ನದಿಗಳು

    ಮಡಿಕೇರಿ: ಕಳೆದ ರಾತ್ರಿಯಿಂದ ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲೂಕಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ಮುಂದುವರೆದಿದೆ.

    ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ನಿರಂತರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹಾರಂಗಿ ವ್ಯಾಪ್ತಿಯಲ್ಲೂ ಮಳೆ ಸುರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಕೃಷಿಕ ವರ್ಗ ಹರ್ಷಗೊಂಡಿದೆ. ಜಿಲ್ಲೆಯ ಬೆಟ್ಟಗುಡ್ಡ ಹಾಗೂ ನದಿ ತೀರದ ನಿವಾಸಿಗಳು ಮಳೆ ಹೆಚ್ಚಾಗುವ ಆತಂಕದಲ್ಲಿದ್ದಾರೆ.

    ಮಡಿಕೇರಿ ನಗರದಲ್ಲಿ ಬೆಳ್ಳಗ್ಗೆಯಿಂದಲೂ, ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಜೊತೆಗೆ, ಚಳಿಯ ವಾತಾವರಣವಿದೆ. ಈ ವಾತಾವರಣದಲ್ಲಿ ಕಾಲ ಕಾಳೆಯಲು ರಾಜ್ಯ ಮತ್ತು ಹೊರ ರಾಜ್ಯದಿಂದ ಪ್ರವಾಸಿಗರ ಆಗಮನವಾಗುತ್ತಿದ್ದು, ಮಳೆಯಿಂದ ಪ್ರವಾಸಿತಾಣಗಳು ಕೂಡ ಹಸಿರಿನಿಂದ ಆಕರ್ಷಣೆ ಪಡೆದುಕೊಂಡಿದೆ. ಜಲಪಾತಗಳು ತುಂಬಿ ಕರೆಯುತ್ತಿವೆ. ಹರಿಯುತ್ತಿದ್ದು, ಪ್ರಕೃತಿ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಇದನ್ನೂ ಓದಿ: ಎರಡು ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ – ಡಬ್ಲ್ಯೂಎಚ್‍ಒ

  • ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬ – ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್

    ಭಾರೀ ಗಾಳಿಗೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬ – ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್

    ಚಿಕ್ಕಮಗಳೂರು: ವಿದ್ಯುತ್ ಕಂಬವೊಂದು ಭಾರೀ ಗಾಳಿಗೆ ಮನೆ ಮೇಲೆ ಮುರಿದು ಬಿದ್ದು, ಕಂಬ ಬಿದ್ದ ಸ್ಥಳದ ಅಕ್ಕಪಕ್ಕದಲ್ಲಿ ಗ್ರೌಂಡಿಂಗ್ ಆಗುತ್ತಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಬೀಸುತ್ತಿರುವ ರಣ ಗಾಳಿಯಿಂದ ಮುರಿದು ಬಿದ್ದ ಮರ, ವಿದ್ಯುತ್ ಕಂಬಗಳು ಲೆಕ್ಕವೇ ಇಲ್ಲ. ಈ ಮಧ್ಯೆ ಮನೆ ಮೇಲೆ ಬಿದ್ದ ವಿದ್ಯುತ್ ಕಂಬದ ಸುತ್ತಮುತ್ತ ಗ್ರೌಂಡಿಂಗ್ ಆಗಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆ ಅಬ್ಬರ – ಅಜ್ಜಿ ಪಾರು, ಹೆದ್ದಾರಿ ಬಂದ್, ಮನೆ-ಕಟ್ಟಡಗಳ ಕುಸಿತ

    ಹೀಗಾಗಿ ಕೂಡಲೇ ಸ್ಥಳಿಯರು ವಿಷಯವನ್ನು ಮೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮಳೆ ಸುರಿಯುತ್ತಿದೆ, ಸ್ಥಳದಲ್ಲಿ ಗ್ರೌಂಡಿಂಗ್ ಮತ್ತೊಂದು ಅನಾಹುತವಾಗುವುದು ಬೇಡವೆಂದು ಸ್ಥಳೀಯರೇ ಮುಂದಾಗಿ ರಸ್ತೆಗೆ ಮರದ ದಿಮ್ಮೆಗಳನ್ನು ಅಡ್ಡವಿಟ್ಟು ಸಂಚಾರವನ್ನೇ ಬಂದ್ ಮಾಡಿದ್ದಾರೆ.

    ನಂತರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ ವಿಷಯ ತಿಳಿದ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ವೇಳೆ ಸ್ಥಳೀಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಫೋನ್ ಮಾಡಿದ ಬಳಿಕವೂ ತಡವಾಗಿ ಬಂದ ಮೆಸ್ಕಾಂ ಸಿಬ್ಬಂದಿಗೆ ಕೂಡ ಸ್ಥಳೀಯರೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೊಡಗಿನ ವಿವಿಧೆಡೆ ಮುಂದುವರಿದ ಮಳೆ- ಹೆಗ್ಗಳ ಗ್ರಾಮದಿಂದ ಕುಟುಂಬಗಳ ಸ್ಥಳಾಂತರ

  • ಮುಂಗಾರಿನ ಅಬ್ಬರಕ್ಕೆ ಕೊಡಗು ತತ್ತರ – ಗಾಳಿ ಮಳೆಗೆ ವಿದ್ಯುತ್, ರಸ್ತೆ ಸಂಪರ್ಕ ಕಡಿತ

    ಮುಂಗಾರಿನ ಅಬ್ಬರಕ್ಕೆ ಕೊಡಗು ತತ್ತರ – ಗಾಳಿ ಮಳೆಗೆ ವಿದ್ಯುತ್, ರಸ್ತೆ ಸಂಪರ್ಕ ಕಡಿತ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರಿನ ಅಬ್ಬರ ಮತ್ತಷ್ಟು ಹೆಚ್ಚಿದೆ. ಕಳೆದ ರಾತ್ರಿಯಿಂದ ಜಿಲ್ಲಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿದ್ದು, ಕೊಡಗಿನ ವಿವಿಧೆಡೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ಸಂಪರ್ಕ ಹಾಗೂ ರಸ್ತೆ ಅಡಚಣೆಯಾಗಿದೆ.

    ಕೊಡಗು ಜಿಲ್ಲೆಯಲ್ಲಿ ಮಳೆಯ ಅರ್ಭಟ ನಾಲ್ಕು ಐದು ದಿನಗಳಿಂದ ಹೆಚ್ಚಾಗುತ್ತಿದೆ. ಇದರಿಂದಾಗಿ ಗುಡ್ಡಗಾಡಿನ ಜನರು ಹಾಗೂ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ. ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲುಮುರಿಯಲ್ಲಿ ಪಾರಣೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಬಲುಮರಿ ಸೇತುವೆ ಮೇಲೆ 9 ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ಪಾರಾಣೆ, ಕೂಡು ಪರಂಬು ಮತ್ತು ನಾಲ್ಕು ಮೈಲ್ ಗ್ರಾಮಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಅಷ್ಟು ಗ್ರಾಮದಲ್ಲಿರುವ 60ಕ್ಕೂ ಹೆಚ್ಚು ಕುಟುಂಬಗಳಿಗೆ ಇದೀಗ ಸೇತುವೆ ಸಂಪರ್ಕ ಇಲ್ಲದೆ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಮೇಲ್ಸೇತುವೆ ಬಳಸಿಕೊಂಡು ಸುಮಾರು 7 ಕಿಲೋಮೀಟರ್ ಸುತ್ತಿ ಬಳಸಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿಯಲ್ಲಿ ಮಳೆ ಎರಡು ಮೂರು ದಿನ ಮುಂದುವರಿದರೆ ಬಲುಮುರಿ ಗ್ರಾಮದ ಜನರಿಗೂ ಪ್ರವಾಹದ ಭೀತಿ ಎದುರಾಗಲಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

    ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಮಳೆಯ ಅರ್ಭಟ ಮುಂದುವರಿದಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಅಲ್ಲದೇ ವಿರಾಜಪೇಟೆ ತಾಲೂಕಿನ ಬೇತ್ರಿ ಸೇತುವೆ ಬಳಿಯು ಕಾವೇರಿ ನದಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಅಲ್ಲದೇ ಮಂಜಿನ ನಗರಿ ಮಡಿಕೇರಿಯಲ್ಲೂ ಮಧ್ಯಾಹ್ನದ ಬಳಿಕ ಮಳೆ ತೀವ್ರಗೊಂಡಿದೆ. ಮಡಿಕೇರಿಯ ಸುತ್ತಮುತ್ತ ಧಾರಕಾರ ಮಳೆಯಾಗುತ್ತಿದ್ದು, ಭಾರೀ ಮಳೆಗೆ ಮಡಿಕೇರಿ ನಗರ ಮನೆ-ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.

    ನಗರದ ಕೈಗಾರಿಕಾ ಬಡಾವಣೆ ಕುಮಾರ್ ಎಂಬವರ ಮನೆಗೆ ಕಾಲುವೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿ ಇದ್ದ ಹಲವು ವಸ್ತುಗಳು ನೀರು ಪಾಲಾಗಿದೆ. ಮತ್ತೊಂದು ಮೊಬೈಲ್ ಶಾಪ್ ಗೂ ನೀರು ನುಗ್ಗಿರುವುದರಿಂದ ರವೂಫ್ ಎಂಬವರ ಅಂಗಡಿಯಲ್ಲಿ ಇದ್ದ ಸಾವಿರಾರು ರೂಪಾಯಿ ಮೌಲ್ಯದ ಮೊಬೈಲ್ ಬಿಡಿ ಭಾಗಗಳು ನೀರು ಪಾಲಾಗಿದೆ. ಘಟನ ಸ್ಥಳಕ್ಕೆ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್. ವಾಡ್9ನ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಒಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ನಾಲ್ಕು ಐದು ದಿನದ ಮಳೆಗೆ ಇಲ್ಲಿಲ್ಲದ ಅವಾಂತರಗಳು ಸೃಷ್ಟಿಯಾಗಿದ್ದು, ಗ್ರಾಮೀಣ ಭಾಗದ ಜನರು ಕತ್ತಲೆಯಲ್ಲಿ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ:ಮಲೆನಾಡಲ್ಲಿ ಭಾರೀ ಗಾಳಿ, ಮಳೆ – ಚಾರ್ಮಾಡಿಯಲ್ಲಿ ಧರೆಗುರುಳಿದ ಮರ