Tag: Wishes

  • ಸುದೀಪ್‍ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ನೀರಜ್ ಚೋಪ್ರಾ

    ಸುದೀಪ್‍ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ನೀರಜ್ ಚೋಪ್ರಾ

    ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರು ಸುದೀಪ್ ಜನ್ಮದಿನಕ್ಕೆ ಹಾಗೂ ವಿಕ್ರಾಂತ್ ರೋಣ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

    ನಾಳೆ (ಸೆಪ್ಟೆಂಬರ್2) ಡೆಡ್ ಮ್ಯಾನ್ ಆ್ಯಂಥಮ್ ರಿಲೀಸ್ ಆಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ವಿಕ್ರಾಂತ ರೋಣ ಚಿತ್ರತಂಡ ಟ್ವಿಟರ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ನೀರಜ್ ಚೋಪ್ರಾ ಅವರು ಸುದೀಪ್‍ಗೆ ಬರ್ತ್‍ಡೆ ವಿಶ್ ಮಾಡಿದ್ದಾರೆ. ಜೊತೆಗೆ ಅವರ ಸಿನಿಮಾಗೂ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿ ಜತೆ ಅಚ್ಚರಿ ಕೂಡ ಹೊರ ಹಾಕಿದ್ದಾರೆ.

    ಟೋಕಿಯೋ ಒಲಿಂಪಿಕ್ಸ್ 2020ರಲ್ಲಿ ನೀರಜ್ ಚೋಪ್ರಾ ಅವರು ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಖ್ಯಾತಿ ದೇಶದ ಮೂಲೆಮೂಲೆಗೂ ತಲುಪಿದೆ. ಅವರು ಸುದೀಪ್‍ಗೆ ಬರ್ತ್‍ಡೇ ವಿಶ್ ಮಾಡಿರೋದು ವಿಶೇಷ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದನ್ನೂ ಓದಿ:  ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ

    ಇದು ತುಂಬಾ ಸಿಹಿಯಾಗಿದೆ. ನನ್ನ ಸಹೋದರಿನಿಗೆ ಧನ್ಯವಾದಗಳು. ನಿಮಗೆ ಯಾವಗಲೂ ನನ್ನ ಶುಭ ಹಾರೈಕೆ ಇರುತ್ತದೆ ಎಂದು ಸುದೀಪ್ ನೀರಜ್ ಚೋಪ್ರಾ ಅವರ ವಿಶ್‍ಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.

     

    ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಶುಭ ಹಾರೈಕೆ ವಿಶ್‍ಗಳು ಸುದೀಪ್ ಅವರಿಗೆ ಬರುತ್ತಿವೆ.

  • 78ನೇ ವಸಂತಕ್ಕೆ ಕಾಲಿಟ್ಟ ಸಂಗೀತ ನಿರ್ದೇಶಕ ಇಳಯರಾಜ

    78ನೇ ವಸಂತಕ್ಕೆ ಕಾಲಿಟ್ಟ ಸಂಗೀತ ನಿರ್ದೇಶಕ ಇಳಯರಾಜ

    ಚೆನ್ನೈ: ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ 78ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

    ಈ ವಿಶೇಷದಿನದಂದು ಅಭಿಮಾನಿಗಳು ತಮ್ಮ ನೆಚ್ಚಿನ ಹಾಡುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಇಳಯರಾಜರವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಇಳಯರಾಜರವರು 1,000ಕ್ಕೂ ಹೆಚ್ಚು ಸಿನಿಮಾಗಳಿಗೆ 7,000ಕ್ಕೂ ಹೆಚ್ಚು ಹಾಡುಗಳಿಗೆ ಸಂಗೀತಾ ಸಂಯೋಜಿಸಿದ್ದಾರೆ. ವಿಶ್ವದ ಅತ್ಯುತ್ತಮ ಸಂಗೀತ ನಿರ್ದೇಶಕರಲ್ಲಿ ಇಳಯರಾಜವರು ಕೂಡ ಒಬ್ಬರಾಗಿದ್ದಾರೆ ಎಂದು ಗುರುತಿಸಲಾಗಿದೆ.

    ಕೊರೊನಾ ವೈರಸ್ ಲಾಕ್‍ಡೌನ್‍ನಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಇಳಜರಾಜರವರು ತಮ್ಮ ಚೆನ್ನೈ ನಿವಾಸದಲ್ಲಿ ಕುಟುಂಬದೊಂದಿಗೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇಳಯರಾಜರವರಿಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರುತ್ತಿದ್ದಾರೆ.

    ಇಳಯರಾಜರವರು ನಾಲ್ಕು ದಶಕದ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಹಿಟ್ ಹಾಡುಗಳನ್ನು ನೀಡುವ ಮೂಲಕ ಯಶಸ್ಸು ಪಡೆದುಕೊಂಡಿದ್ದಾರೆ. ಅಲ್ಲದೆ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸಿನಿಮಾಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರಗಳಿಗೆ ಪಾಶ್ಚತ್ಯ ಮಾದರಿಯ ಸಂಗೀತ ತಂತ್ರಗಳನ್ನು ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

    2010 ಮತ್ತು 2018ರಲ್ಲಿ ಇಳಯರಾಜರವರಿಗೆ ಸರ್ಕಾರ ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಇದನ್ನು ಓದಿ: ಸಿಬಿಎಸ್‍ಇ ಪರೀಕ್ಷೆ ರದ್ದು – ಕರ್ನಾಟದಲ್ಲಿ ಏನು?

  • ಸಚಿನ್ ತೆಂಡೂಲ್ಕರ್ ಹುಟ್ಟುಹಬ್ಬ-ಶುಭಾಶಯಗಳ ಮಹಾಪೂರ

    ಸಚಿನ್ ತೆಂಡೂಲ್ಕರ್ ಹುಟ್ಟುಹಬ್ಬ-ಶುಭಾಶಯಗಳ ಮಹಾಪೂರ

    ಮುಂಬೈ: ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಬ್ಯಾಟ್ಸ್‍ಮ್ಯಾನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು 48ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಕ್ರಿಕೆಟಿಗರು ಸೇರಿದಂತೆ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯವನ್ನು ಕೋರಿದ್ದಾರೆ.

    1973ರಲ್ಲಿ ಮುಂಬೈನ ದಾದರ್‍ ನಲ್ಲಿ ಜನಿಸಿದ ಸಚಿನ್, ಒಬ್ಬ ಕ್ರಿಕೆಟ್ ಆಟಗಾರನಾಗಿ ಯಶಸ್ಸಿನ ಉತ್ತುಂಗಕ್ಕೆ ಏರಿದ್ದಾರೆ. ಭಾರತ ಪರ ಅತೀ ಕಿರಿಯ ವಯಸ್ಸಿನಲ್ಲಿ ಬ್ಯಾಟ್‍ಹಿಡಿದು ಮೈದಾನಕ್ಕೆ ಇಳಿದ ಸಚಿನ್ ನೋಡ ನೋಡುತ್ತಲೇ ತನ್ನ ಅದ್ಭುತ ಬ್ಯಾಟಿಂಗ್‍ನಿಂದ ರನ್‍ಶಿಖರವನ್ನು ಕಟ್ಟ ತೊಡಗಿದರು. ನಂತರ ಹಲವು ದಾಖಲೆಗಳ ಒಡೆಯನಾಗಿ ಕ್ರಿಕೆಟ್ ದೇವರಾಗಿ ಎಲ್ಲರ ಮನದಲ್ಲಿ ಕಾಣಿಸಿಕೊಂಡಿದ್ದಾರೆ.

    ಭಾರತದ ಪರ 664 ಪಂದ್ಯಗಳನ್ನು ಆಡಿರುವ ಸಚಿನ್ 34,357 ರನ್‍ಗಳಿಸಿದ್ದಾರೆ. ಇದಲ್ಲದೆ 100 ಶತಕಗಳು ಮತ್ತು 201 ವಿಕೆಟ್ ಕೂಡ ಕಬಳಿಸುವ ಮೂಲಕ ಭಾರತದ ಕ್ರಿಕೆಟ್‍ಗೆ ಕೊಡುಗೆಯನ್ನು ಕೊಟ್ಟಿದ್ದಾರೆ.

    ಸಚಿನ್ ಕಳೆದ ಬಾರಿ ಕೊರೊನಾ ಸೋಂಕು ದೇಶದಾದ್ಯಂತ ಹರಡಿಕೊಂಡಿದ್ದ ಕಾರಣ ಹುಟ್ಟುಹಬ್ಬ ಆಚರಿಸದೆ ಕೊರೊನಾ ವಾರಿಯರ್ಸ್‍ಗಳಿಗೆ ಮತ್ತು ಫ್ರೆಂಟ್‍ಲೈನ್ ವರ್ಕಸ್‍ಗಳಿಗೆ ಗೌರವ ಕೊಡುವ ನಿರ್ಧಾರ ಮಾಡಿಕೊಂಡಿದ್ದರು. ಇದೀಗ ದೇಶದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದೆ. ಕೆಲದಿನಗಳ ಹಿಂದೆ ಸಚಿನ್ ಅವರು ಕೂಡ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದರು ಇದೀಗ ಸೋಂಕು ಗುಣವಾಗಿದ್ದು ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾರೆ.

    ಇದೀಗ ಮುಂಬೈನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಸಚಿನ್ ಅವರು ಅಭಿಮಾನಿಗಳೊಂದಿಗೆ ಈ ಬಾರಿಯು ಹುಟ್ಟುಹಬ್ಬ ಆಚರಿಸದೆ ಇರಲು ನಿರ್ಧಾರಿಸಿದ್ದಾರೆ. ಹಾಗಾಗಿ ಅಭಿಮಾನಿಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು ಸೇರಿದಂತೆ ಸಾವಿರಾರು ಮಂದಿ ಶುಭಾಶಯಗಳನ್ನು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

    ಬಿಸಿಸಿಐ ಅವರ ಸಾಧನೆಯ ಪಟ್ಟಿಯನ್ನು ಹಾಕಿಕೊಂಡು ವಿಶ್ ಮಾಡಿದರೆ, ಹಿರಿಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಸಚಿನ್‍ರೊಂದಿಗೆ ಜೊತೆಯಾಗಿ ಆಡಿದ ದಿನಗಳ ಚಿತ್ರಗಳನ್ನು ಹಾಕಿಕೊಂಡು ಶುಭಾಶಯ ತಿಳಿಸಿದ್ದಾರೆ.

    ಸಚಿನ್ ಕೆಲ ತಿಂಗಳ ಹಿಂದೆ ನಡೆದ ರೋಡ್ ಸೇಪ್ಟಿ ಸೀರಿಸ್‍ನಲ್ಲಿ ಭಾರತದ ಪರ ಬ್ಯಾಟ್‍ಬೀಸಿದ್ದರು ಭಾರತ ಲೆಜೆಂಡ್ ತಂಡ ಈ ಕ್ರಿಕೆಟ್ ಸರಣಿಯ ಚಾಂಪಿಯನ್ ಕೂಡ ಆಗಿತ್ತು. ಈ ಸರಣಿಯಲ್ಲಿ ಸಚಿನ್ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಗಮನಸೆಳೆದಿದ್ದರು.

  • ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡರ ಹುಟ್ಟುಹಬ್ಬಕ್ಕೆ ಗಣ್ಯರಿಂದ ಶುಭಾಶಯ

    ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡರ ಹುಟ್ಟುಹಬ್ಬಕ್ಕೆ ಗಣ್ಯರಿಂದ ಶುಭಾಶಯ

    ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ.

    ಪ್ರಧಾನಿ ಮೋದಿ ಅವರು “ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

    “ಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ ಸನ್ಮಾನ್ಯ ಎಚ್.ಡಿ ದೇವೇಗೌಡ ರವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ದೇವರ ಅನುಗ್ರಹ ತಮ್ಮ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ ತಂದೆಗೆ ಟ್ವಿಟ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. “ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು ದೇವೇಗೌಡರು. ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯಗಳು” ಎಂದು ವಿಶ್ ಮಾಡಿದ್ದಾರೆ.

    “ದೇಶದ ಹಿರಿಯ ರಾಜಕೀಯ ಮುತ್ಸದ್ಧಿಗಳು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ದೇಶದ ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ನೀಡಲಿ” ಸಚಿವ ಶ್ರೀರಾಮು ಶುಭಾ ಹಾರೈಸಿದ್ದಾರೆ. ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಶುಭ ಕೋರಿದ್ದಾರೆ.

    ಎಚ್.ಡಿ ದೇವೇಗೌಡ ಅವರು ಹುಟ್ಟುಹಬ್ಬಕ್ಕೂ ಮೊದಲೇ ಮನೆಯ ಬಳಿ ಬಾರದಂತೆ ಅಭಿಮಾನಿಗಳು, ನಾಯಕರು, ಕಾರ್ಯಕರ್ತರಿಗೆ ಸಂದೇಶ ರವಾನೆ ಮಾಡಿದ್ದರು. ದೇಶದಲ್ಲಿ ಲಾಕ್‍ಡೌನ್ ನಿಯಮಗಳು ನಡೆಯುತ್ತಿವೆ. ನಿಯಮಗಳನ್ನು ಮೀರುವುದನ್ನ ನಾನು ಒಪ್ಪುವುದಿಲ್ಲ. ಒಂದು ವಾರದಿಂದ ಕೊರೊನಾ ಸೋಂಕು ಹೆಚ್ಚಾಗಿರುವುದು ನನ್ನನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಹೀಗಾಗಿ ನೀವು ಇದ್ದ ಕಡೆಯಿಂದಲೇ ನನಗೆ ಶುಭಾಶಯ ತಿಳಿಸಿ. ಯಾರೂ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದರು.

    ಮೇ 18ರಂದು ಹೂಗುಚ್ಚಗಳೊಂದಿಗೆ ಬಂದು ಶುಭ ಹಾರೈಸುವ ಬದಲು ಕೊರೊನಾ ಸಂಕಷ್ಟ ಪೀಡಿತರಿಗೆ ತಮ್ಮ ಕೈಲಾದ ಸಹಾಯ ಮಾಡಬೇಕೆಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತರಾಗಿರೋಣ ಎಂದು ಹೆಚ್‍ಡಿಡಿ ಹೇಳಿದ್ದರು.

  • ಕ್ರಿಸ್ಮಸ್‍ಗೆ 2 ಅಮೂಲ್ಯ ಗಿಫ್ಟ್ ಕೊಟ್ಟ ಸಂತಾಗೆ ರಾಧಿಕಾ ಥ್ಯಾಂಕ್ಸ್

    ಕ್ರಿಸ್ಮಸ್‍ಗೆ 2 ಅಮೂಲ್ಯ ಗಿಫ್ಟ್ ಕೊಟ್ಟ ಸಂತಾಗೆ ರಾಧಿಕಾ ಥ್ಯಾಂಕ್ಸ್

    ಬೆಂಗಳೂರು: ನಾಡಿನೆಲ್ಲೆಡೆ ಕ್ರಿಸ್‍ಮಸ್ ಸಂಭ್ರಮ ಜೋರಾಗಿದೆ. ಈ ಹಿನ್ನೆಲೆಯಲ್ಲಿ ನಟಿ ರಾಧಿಕಾ ಪಂಡಿತ್ ಕ್ರಿಸ್‍ಮಸ್ ಹಬ್ಬಕ್ಕೆ ಶುಭಾಶಯವನ್ನು ಕೋರಿದ್ದಾರೆ.

    ರಾಧಿಕಾ ಪಂಡಿತ್ ಫೇಸ್‍ಬುಕ್ ಮತ್ತು ಇನ್‍ಸ್ಟಾಗ್ರಾಂನಲ್ಲಿ ಕ್ರಿಸ್‍ಮಸ್ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. “ಕಳೆದ ಎರಡು ಕ್ರಿಸ್‍ಮಸ್‍ಗೆ ಐರಾ ಮತ್ತು ಜೂನಿಯರ್ ಯಶ್ ಅಂತಹ ಅಮೂಲ್ಯವಾದ ಉಡುಗೊರೆಯನ್ನು ನಮಗೆ ನೀಡಿರುವುದಕ್ಕೆ ಸಂತಾಗೆ ಧನ್ಯವಾದಗಳು. ನಮ್ಮ ಜಾರುಬಂಡಿಯ ಮೇಲೆ ಸವಾರಿ ಮಾಡಲು ನಾವು ಸಿದ್ಧ. ಎಲ್ಲರಿಗೂ ಕ್ರಿಸ್‍ಮಸ್ ಹಬ್ಬದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.

    ಕ್ರಿಸ್‍ಮಸ್ ಹಬ್ಬಕ್ಕಾಗಿ ಅಲಂಕೃತವಾಗಿರುವ ಜಾರುಬಂಡಿಯ ಪಕ್ಕದಲ್ಲಿ ಪತಿ ಯಶ್ ಜೊತೆ ರಾಧಿಕಾ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ರಾಧಿಕಾ ವಿಶ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಕ್ರಿಸ್‍ಮಸ್ ಹಬ್ಬಕ್ಕೆ ಶುಭಾಶಯ ಕೋರುತ್ತಿದ್ದಾರೆ.

    ರಾಧಿಕಾ 2018 ಡಿಸೆಂಬರ್ ತಿಂಗಳಲ್ಲಿ ಐರಾಗೆ ಜನ್ಮ ಕೊಟ್ಟಿದ್ದರು. ಇನ್ನೂ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಎರಡನೇ ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಸದ್ಯಕ್ಕೆ ಜೂನಿಯರ್ ಯಶ್‍ನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ.

    https://www.instagram.com/p/B6d8oG0g0Cc/

    ಬೆಂಗಳೂರಿನಲ್ಲಿ ರಾತ್ರಿಯೇ ಕ್ರಿಸ್‍ಮಸ್ ಸಂಭ್ರಮ ಮುಗಿಲು ಮುಟ್ಟಿತ್ತು. ಶಿವಾಜಿನಗರದ ಸೇಂಟ್ ಮೇರಿಸ್ ಬಸೆಲಿಕಾ, ಶಾಂತಿ ನಗರದ ಸೇಂಟ್ ಪ್ಯಾಟ್ರಿಕ್ಸ್ ಚರ್ಚ್, ರಿಚ್ ಮಂಡ್ ರಸ್ತೆಯ ಸ್ಯಾಕ್ರೇಡ್ ಹಾರ್ಟ್ ಚರ್ಚ್ ಸೇರಿದಂತೆ ನಗರದಲ್ಲಿ 80 ರಿಂದ 85 ಚರ್ಚ್ ಗಳಿದ್ದು, ಬಣ್ಣ ಬಣ್ಣದ ಬೆಳಕುಗಳಿಂದ ಕಂಗೊಳಿಸುತ್ತಿವೆ.

  • ಅಣ್ತಮ್ಮಾ.. ಗಡಿಗಳನ್ನ ಮೀರಿ ಕನ್ನಡ ಗರಿಗೆದರಬೇಕು: ಯಶ್

    ಅಣ್ತಮ್ಮಾ.. ಗಡಿಗಳನ್ನ ಮೀರಿ ಕನ್ನಡ ಗರಿಗೆದರಬೇಕು: ಯಶ್

    ಬೆಂಗಳೂರು: ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಎಲ್ಲಾ ಸ್ಟಾರ್ ನಟ-ನಟಿಯರು, ಸೆಲೆಬ್ರೆಟಿಗಳು ಕೂಡ ಕನ್ನಡಿಗರಿಗೆ ಶುಭಾಶಯವನ್ನು ತಿಳಿಸುತ್ತಿದ್ದಾರೆ. ಆದರೆ ರಾಕಿಂಗ್ ಸ್ಟಾರ್ ಯಶ್ ವಿಭಿನ್ನವಾಗಿ ಕನ್ನಡ ರಾಜ್ಯೋತ್ಸವಕ್ಕೆ ವಿಶ್ ಮಾಡಿದ್ದಾರೆ.

    ಯಶ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ “ಅಣ್ತಮ್ಮಾ.. ಎದೆ ಉಸಿರಂಗೆ ಇರೋ ಕನ್ನಡ ಭಾಷೆ ಕಂಪು ದೇಶ ಪೂರ ಹರಡಬೇಕು. ಗಡಿಗಳನ್ನ ಮೀರಿ ಗರಿಗೆದರಬೇಕು. ಸಾಗರದಾಚೆಗೂ ಚಾಚಿ ನಿಲ್ಲಬೇಕು. ಕನ್ನಡ ಅಂದರೆ ಮೈ ರೋಮ ಎದ್ದೇಳಬೇಕು. ಕನ್ನಡಿಗರು ಅಂದರೆ ಎದೆ ಉಬ್ಬಿಸಿ ನಿಲ್ಲಬೇಕು. ಕನ್ನಡ ಉಳಿಸಿ ಬೆಳಸಿ ಅಂತ ಬೇಡಿಕೊಳ್ಳುವ ಕಾಲ ಹೋಯಿತು. ಈಗೇನಿದ್ದರೂ ಕನ್ನಡ ಕಲಿತು, ಕಲಿಸಿ, ಬಳಸಿ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ” ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ಕನ್ನಡ ರಾಜ್ಯೋತ್ಸವಕ್ಕೆ ‘ಒಡೆಯ’ನ ಗಿಫ್ಟ್- ಟೀಸರ್ ರಿಲೀಸ್

    ರಾಕಿಂಗ್ ಸ್ಟಾರ್ ಶುಭಕೋರಿದ ಒಂದು ಗಂಟೆಯಲ್ಲಿ 14 ಸಾವಿರಕ್ಕೂ ಅಧಿಕ ಜನರು ಲೈಕ್ ಮಾಡಿದ್ದು, 2,800ಕ್ಕೂ ಹೆಚ್ಚು ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. ಈ ಮೂಲಕ ನೆಚ್ಚಿನ ನಾಯಕನಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರುತ್ತಿದ್ದಾರೆ. ಯಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಯಾಕೆಂದರೆ ಎರಡು ದಿನಗಳ ಹಿಂದೆ ರಾಧಿಕಾ ಪಂಡಿತ್ ಅವರು ಜೂನಿಯರ್ ಯಶ್‍ಗೆ ಜನ್ಮ ನೀಡಿದ್ದಾರೆ. ಇದನ್ನೂ ಓದಿ: ತಮ್ಮನಿಗೆ ಐರಾ ವಿಶ್- ರಾಕಿಭಾಯ್ ಫುಲ್ ಖುಷ್

  • ಅದ್ಭುತ, ಅದ್ಭುತ, ಅದ್ಭುತ – ಚಿನ್ನದ ಹುಡುಗಿ ಹಿಮಾದಾಸ್‍ಗೆ ಸಿನಿ ತಾರೆಯರ ವಿಶ್

    ಅದ್ಭುತ, ಅದ್ಭುತ, ಅದ್ಭುತ – ಚಿನ್ನದ ಹುಡುಗಿ ಹಿಮಾದಾಸ್‍ಗೆ ಸಿನಿ ತಾರೆಯರ ವಿಶ್

    ಬೆಂಗಳೂರು: ಭಾರತದ ಹೆಮ್ಮೆಯ ಆಟಗಾರ್ತಿ ಹಿಮಾದಾಸ್ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಲು ಸಾಲು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ಸಾಧನೆಗೆ ಇಡೀ ದೇಶವೇ ಸಂತೋಷ ಪಡುತ್ತಿದ್ದು, ಸಿನಿಮಾ ತಾರೆಯರು ಕೂಡ ಶುಭಾಶಯ ಕೋರುತ್ತಿದ್ದಾರೆ.

    ಹಿಮಾದಾಸ್ ಅವರು 19 ದಿನದಲ್ಲಿ ಬರೋಬ್ಬರಿ 5 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟ್ಸ್ ನಲ್ಲಿ ಹಿಮಾದಾಸ್ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ 5ನೇ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹೀಗೆ ಸಾಲು ಸಾಲು ಚಿನ್ನ ಗೆಲ್ಲುತ್ತಿರುವ ಹಿಮಾ ದಾಸ್‍ಗೆ ಭಾರತೀಯರಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

    ಅಷ್ಟೇ ಅಲ್ಲದೇ ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿ ತಾರೆಯರು ಹಿಮಾದಾಸ್‍ಗೆ ಟ್ವೀಟ್ ಮಾಡುವ ಮೂಲಕ ಅವರ ಸಾಧನೆಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಅವರು “ಅದ್ಭುತ, ಅದ್ಭುತ, ಅದ್ಭುತ” ಎಂದು ಕೈ ಮುಗಿಯುತ್ತಿರುವ ಎಮೋಜಿ ಹಾಕಿ ವಿಶ್ ಮಾಡಿದ್ದಾರೆ.

    ಬಾಲಿವುಡ್‍ನ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು “ಭಾರತೀಯ ಹೆಮ್ಮೆಯ ಹಿಮಾ ದಾಸ್ ಅವರು ಚಂದ್ರನಿಗಿಂತ ಮೀರಿ ಅವರ ಓಟ ಸಾಗಿದೆ. ಈಗ ಹಿಮಾದಾಸ್ ಐದನೇ ಚಿನ್ನ ಗೆದ್ದಿದ್ದಾರೆ. ಹೀಗಾಗಿ ನಾವು ಇನ್ನೊಂದು ಚಂದ್ರನನ್ನು ಸೃಷ್ಟಿಸಬೇಕಾಗಿದೆ. ಅಮೇಜಿಂಗ್” ಎಂದು ಅಮಿತಾಭ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಓಡುತ್ತಿರುವ ಹಿಮಾದಾಸ್ ಹಿಂದೆ ಚಂದ್ರನಿಗೆ ಚಿನ್ನದ ಪದಕದ ಬ್ಯಾಗ್ರೌಂಡ್ ಮಾಡಿ ಫೋಟೋವನ್ನು ಪೋಸ್ಟ್ ಮಾಡಿದ್ದು, ಹಿಮಾದಾಸ್ ಅವರ ಸಾಧನೆಯನ್ನು ಚಂದ್ರನಿಗೆ ಹೋಲಿಸಿದ್ದಾರೆ.

    ಬಾಲಿವುಡ್ ನಟಿ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ, “19 ದಿನಗಳು-5 ಚಿನ್ನದ ಪದಕ-1 ಚಿನ್ನದ ಹುಡುಗಿ, ಅಭಿನಂದನೆಗಳು ಹಿಮಾ ದಾಸ್. ಯುವತಿಯರಿಗೆ ದೊಡ್ಡ ಸ್ಫೂರ್ತಿ ನೀವು” ಎಂದು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

    ಬಾಲಿವುಡ್ ನಟ ಅನಿಲ್ ಕಪೂರ್ ಸೇರಿದಂತೆ ಅನೇಕರು ಹಿಮಾದಾಸ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ-ನಟಿಯರಷ್ಟೆ ಅಲ್ಲದೇ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಸಚಿನ್ ತೆಂಡೂಲ್ಕರ್ ಸೇರಿದಂತೆ ರಾಜಕಾರಣಿಗಳು ಹಿಮಾ ದಾಸ್ ಅವರಿಗೆ ವಿಶ್ ಮಾಡಿದ್ದಾರೆ.

    ಐದು ಚಿನ್ನದ ಪದಕ:
    ಜುಲೈ 2ರಂದು ಪೊಲೆಂಡ್‍ನಲ್ಲಿ ನಡೆದಿದ್ದ ಪೊಜ್ನಾನ್ ಅಥ್ಲೆಟಿಕ್ಸ್ ಪ್ರಿಕ್ಸ್ ನಲ್ಲಿ ಹಿಮಾದಾಸ್ ಅವರು 200 ಮೀಟರ್ ಓಟವನ್ನು 23.65 ಸೆಕೆಂಡ್‍ಗಳಲ್ಲಿ ಮುಗಿಸಿ ಮೊದಲ ಚಿನ್ನದ ಪದಕ ಗೆದ್ದಿದ್ದರು. ನಂತರ ಜುಲೈ 8 ರಂದು ಕುಟ್ನೊ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ದೂರವನ್ನು 23.97 ಸೆಕೆಂಡ್‍ಗಳಲ್ಲಿ ಕ್ರಮಿಸಿ ಎರಡನೇ ಚಿನ್ನ ಪದಕವನ್ನು ಪಡೆದರು.

    ಅದೇ ರೀತಿ ಜುಲೈ 13 ರಂದು ಜೆಕ್ ಗಣರಾಜ್ಯದಲ್ಲಿ ನಡೆದ ಕ್ಲಾಡ್ನೊ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ಸ್ಪರ್ಧೆಯನ್ನು 23.43 ಸೆಕೆಂಡ್‍ಗಳಲ್ಲಿ ಪೂರ್ಣಗೊಳಿಸಿ ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದ್ದರು.

    ಜುಲೈ 18ರಂದು ಜೆಕ್ ರಿಪಬ್ಲಿಕ್‍ನಲ್ಲಿ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ಓಟವನ್ನು 23.25 ಸೆಕೆಂಡಿನಲ್ಲಿ ಪೂರ್ಣಗೊಳಿಸುವ ಮೂಲಕ ನಾಲ್ಕನೇ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಜುಲೈ 20ರಂದು 400 ಮೀಟರ್ ಓಟವನ್ನು 52.09 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ತಮ್ಮ ಐದನೇ ಚಿನ್ನದ ಪದಕವನ್ನು ಗಳಿಸಿದ್ದಾರೆ.

  • ಭೀಷ್ಮ ಅಂಬಿ ಬರ್ತ್ ಡೇಗೆ ಅಭಿಮನ್ಯು ನಿಖಿಲ್ ವಿಶ್

    ಭೀಷ್ಮ ಅಂಬಿ ಬರ್ತ್ ಡೇಗೆ ಅಭಿಮನ್ಯು ನಿಖಿಲ್ ವಿಶ್

    ಬೆಂಗಳೂರು: ಲೋಕಸಭಾ ಚುನಾಚಣೆ ಫಲಿತಾಂಶ ಪ್ರಕಟವಾದ ಬಳಿಕ ನಿಖಿಲ್ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬುಧವಾರ ಅಂಬರೀಶ್ ಅವರ ಹುಟ್ಟುಹಬ್ಬ ನಿಮಿತ್ತ ನಿಖಿಲ್ ವಿಶ್ ಮಾಡಿದ್ದಾರೆ.

    ನಟ ಅಂಬರೀಶ್ ಅವರ ಹುಟ್ಟುಹಬ್ಬದ ವಿಶೇಷವಾಗಿ ನಿಖಿಲ್ ಕುಮಾರ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಂಬಿ ಬಗ್ಗೆ ಬರೆದು ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.

    “ಹುಟ್ಟುಹಬ್ಬದ ಶುಭಾಶಯಗಳು ಅಂಬರೀಶ್ ಅಣ್ಣ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮ ಜೊತೆಗೆ ಕಳೆದ ಕೆಲವು ಅದ್ಭುತ ನೆನಪುಗಳು ನಮ್ಮ ಜೊತೆ ಇವೆ. ಆ ಸಮಯವನ್ನು ಸದಾ ಗೌರವಿಸುತ್ತೇನೆ. ನಿಮ್ಮ ಬಗ್ಗೆ ಹೇಳಲು ತುಂಬ ಇದೆ. ಆದರೆ ಎಲ್ಲವನ್ನು ಹೇಳಲು ನನ್ನ ಬಳಿ ಪದಗಳೇ ಇಲ್ಲ. ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಇಷ್ಟು ಮಾತ್ರ ಹೇಳಲು ಸಾಧ್ಯ” ಎಂದು ಅಂಬಿಯ ಬಗ್ಗೆ ತಮ್ಮ ಮನದ ಮಾತನ್ನು ಹೇಳಿಕೊಂಡಿದ್ದಾರೆ.

    ಅಂಬರೀಶ್ ಅವರ ಜೊತೆಗಿದ್ದ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅಂಬರೀಶ್ ಹುಟ್ಟುಹಬ್ಬದ ದಿನದ ಹಿನ್ನೆಲೆಯಲ್ಲಿ ಕಳೆದ ದಿನ ಮಂಡ್ಯದಲ್ಲಿ ಅದ್ಧೂರಿಯಾಗಿ ಸಮಾರಂಭ ಮಾಡಿದ್ದು, ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ದರು.

    https://www.instagram.com/p/ByDckJOnYsY/

  • ಕಲಿಯುಗ ಕರ್ಣನ ಜನ್ಮದಿನ – ಅಂಬಿ ನೆನಪನ್ನು ಹಂಚಿಕೊಂಡ ಕಲಾವಿದರು

    ಕಲಿಯುಗ ಕರ್ಣನ ಜನ್ಮದಿನ – ಅಂಬಿ ನೆನಪನ್ನು ಹಂಚಿಕೊಂಡ ಕಲಾವಿದರು

    ಬೆಂಗಳೂರು: ಇಂದು ಮಂಡ್ಯದ ಗಂಡು ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ 67ನೇ ಜನ್ಮದಿನ. ಇಂದು ಅವರು ನಮ್ಮ ಜೊತೆ ಇಲ್ಲದಿದ್ದರೂ ಎಂದಿಗೂ ಅಂಬರೀಶ್ ಅಮರ ಎಂದು ಸ್ಯಾಂಡಲ್‍ವುಡ್ ಕಲಾವಿದರು ಪ್ರೀತಿಯ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

    ಒಂದೆಡೆ ಕಿಚ್ಚ ಸುದೀಪ್ ಅವರು ನಿಮ್ಮ ಅನುಪಸ್ಥಿತಿ ಹೆಚ್ಚು ಕಾಡುತ್ತಿದೆ ಎಂದರೆ, ಇನ್ನೊಂದೆಡೆ ಸುಮಲತಾ ಅಂಬರೀಶ್ ಅವರು ಅಂಬಿ ಎಂದಿಗೂ ಅಮರ ಎಂದು ಹಳೆ ನೆನಪನ್ನು ನೆನೆದಿದ್ದಾರೆ. ಅಲ್ಲದೆ ನವರಸ ನಾಯಕ ಜಗ್ಗೇಶ್ ಅವರು ನೇರನುಡಿಯ ಅದ್ಭುತ ಮನುಷ್ಯ ಎಂದು ಹೊಗಳಿ ಅಂಬಿ ಅವರನ್ನು ನೆನೆದು ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಹಾಗೆಯೇ ಸೂಪರ್ ಸ್ಟಾರ್ ಉಪೇಂದ್ರ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಪ್ರಿಯಾಂಕಾ ಉಪೇಂದ್ರ, ಹರ್ಷಿಕಾ ಪೋಣಚ, ಅಕುಲ್ ಬಾಲಾಜಿ ಸೇರಿ ಹಲವು ಸ್ಟಾರ್ಸ್‍ಗಳು ಅಂಬರೀಶ್ ಅವರನ್ನು ಇಂದು ನೆನದು ಹುಟ್ಟುಹಬ್ಬಕ್ಕೆ ಟ್ವಿಟ್ಟರ್ ನಲ್ಲಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ಅಪ್ಪಾಜಿಯವ್ರ ಪ್ರೀತಿ-ಆದರ್ಶ ಕುಟುಂಬ, ಅಭಿಮಾನಿಗಳನ್ನು ಕಾಯ್ತಿರುತ್ತದೆ- ದರ್ಶನ್

    ಟ್ವೀಟ್‍ಗಳಲ್ಲಿ ಏನಿದೆ?
    ಕಿಚ್ಚ ಸುದೀಪ್
    ಮಾಮ ನಿಮ್ಮ ಅನುಪಸ್ಥಿತಿ ಹೆಚ್ಚು ಕಾಡುತ್ತಿದೆ. ನಿಮ್ಮನ್ನು ಸದಾ ಪ್ರೀತಿಸುತ್ತೇನೆ. ಇನ್ನುಮುಂದೆ ಮೇ 29 ಮೊದಲಿನಂತೆ ಇರಲ್ಲ ಎಂದು ಬರೆದು ಅಂಬರೀಶ್ ಅವರ ಹಳೆಯ ಫೋಟೋವೊಂದನ್ನು ಹಾಕಿ ಭಾವುಕ ಟ್ವೀಟ್ ಮೂಲಕ ಶುಭಕೋರಿದ್ದಾರೆ.

    ಜಗ್ಗೇಶ್
    ಅಭಿಮಾನಿಯೊಬ್ಬರು ಅಂಬಿ ಅಣ್ಣನ ಹುಟ್ಟುಹಬ್ಬದ ಶುಭದಿನದಂದು ನಿಮ್ಮ ಹಾಗೂ ಅವರ ಒಡನಾಟದ ಬಗ್ಗೆ ನಿಮ್ಮ ನುಡಿಯಲ್ಲಿ ಹೇಳಿ ಎಂದು ಮನವಿ ಮಾಡಿದ್ದರು. ಈ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಜಗ್ಗೇಶ್, ಅಂಬರೀಶ್ ಅವರು ನೇರನುಡಿಯ ಮನುಷ್ಯ. ಯಾರೆ ಒಟ್ಟಿಗೆ ಕೆಲಸ ಮಾಡುವಾಗ ತೃಪ್ತಿಯಾಗಿ ಅನ್ನ ತಾನೆ ಬಡಿಸಿ ತಿನಿಸಿ, ಆನಂದಿಸುತ್ತಿದ್ದ ಮನುಷ್ಯ. ಕಷ್ಟ ಎಂದರೆ ಮರು ಮಾತಾಡದೆ ಕೈ ಜೋಬಿಗೆ ಹೋಗುತ್ತಿತ್ತು. ಅವರನ್ನು ಕಾರಲ್ಲಿ ಹಿಂಬಾಲಿಸಿದರೆ ಮಕ್ಕಳ ಜೂಟಾಟದಂತೆ ಅವರ ಕಾರನ್ನು ವೇಗವಾಗಿ ಚಲಾಯಿಸಿ ಕೈಗೆ ಸಿಗದೆ ನಮಗೆ ಆಟ ಆಡಿಸಿ ಖುಷಿ ಪಡೋರು. ಅದ್ಭುತಮನುಷ್ಯ ಅಮರ ನೆನಪು ಎಂದು ಮಂಡ್ಯದ ಗಂಡನ್ನು ಹೊಗಳಿದ್ದಾರೆ.

    ಉಪೇಂದ್ರ
    ಇಂದು ಮಂಡ್ಯದ ಗಂಡು, ಕಲಿಯುಗ ಕರ್ಣ, ಒಂಟಿ ಸಲಗ, ರೆಬೆಲ್ ಸ್ಟಾರ್ ಅಂಬರೀಶ್ ರವರ ಜನ್ಮದಿನ. ದೈಹಿಕವಾಗಿ ನೀವು ನಮ್ಮನ್ನು ಅಗಲಿದರೂ ನಿಮ್ಮೊಂದಿಗಿನ ನೆನಪುಗಳು ಸದಾ ಅಮರ ಎಂದು ಬರೆದು ಅಂಬರೀಶ್ ಅವರ ಫೋಟೋ ಜೊತೆ ಟ್ವೀಟ್ ಮಾಡಿದ್ದಾರೆ.

    ಪ್ರಿಯಾಂಕಾ ಉಪೇಂದ್ರ
    ಹುಟ್ಟುಹಬ್ಬದ ಶುಭಾಶಯಗಳು ಅಂಬರೀಶ್ ಸಾರ್. ನೀವು ಹಾಗೂ ನಿಮ್ಮ ನೆನಪು ಸದಾ ನಮ್ಮ ಹೃದಯದಲ್ಲಿ ಅಮರ ಎಂದು ಬರೆದು ವಿಶ್ ಮಾಡಿದ್ದಾರೆ.

    ಧ್ರುವ ಸರ್ಜಾ
    ನಮ್ಮ ಪ್ರೀತಿಯ ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ , ಡಾ. “ಅಂಬರೀಷ್” ಅಂಕಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಜೈ ಆಂಜನೇಯ ಎಂದು ಬರೆದು ಅಂಬಿ ಅವರ ಹಳೆಯ ಫೋಟೋವೊಂದನ್ನು ಹಾಕಿ ಟ್ವೀಟ್ ಮಾಡಿ ನೆನೆದಿದ್ದಾರೆ.

    ಹರ್ಷಿಕಾ ಪೂಣಚ್ಚ
    ಜನ್ಮದಿನದ ಶುಭಾಶಯಗಳು ಅಂಬರೀಶ್ ಅಂಕಲ್. ಮಿಸ್ ಯು ಎಂದು ರೆಬೆಲ್ ಸ್ಟಾರ್ ಅವರ ಜೊತೆಗೆ ತಾವು ನಿಂತಿರುವ ಫೊಟೋವನ್ನು ಹಾಕಿ ಶುಭಾಶಯ ತಿಳಿಸಿದ್ದಾರೆ.

    ಅಕುಲ್ ಬಾಲಾಜಿ
    ನಮ್ಮ ಕಲಿಯುಗ ಕರ್ಣನಿಗೆ ಶುಭಕೋರುತ್ತಿದ್ದೇನೆ. ಅಂಬರೀಶ್ ಸಾರ್ ಹುಟ್ಟುಹಬ್ಬದ ಶುಭಾಷಯಗಳು. ನೀವು ಇಂದು ನಮ್ಮೊಂದಿಗೆ ಇಲ್ಲದಿದ್ದರೂ, ನಿಮ್ಮ ನೆನಪು ನಮ್ಮನ್ನು ಬಹಳ ಕಾಡುತ್ತಿದೆ. ನಿಮ್ಮನ್ನು ಸದಾ ನೆನಪಿಸಿಕೊಳ್ಳುತ್ತೇವೆ. ಲವ್ ಯು ಅಂಬಿ ಎಂದು ಬರೆದು ರೆಬೆಲ್ ಸ್ಟಾರ್ ಹಾಗು ಸುಮಲತಾ ಅವರ ಜೊತೆ ತಾವಿರುವ ಫೋಟೋ ಹಾಕಿ ಶುಭಾಶಯ ಹೇಳಿದ್ದಾರೆ.

    ಅಷ್ಟೇ ಅಲ್ಲದೆ ಈ ಸಂದರ್ಭದಲ್ಲಿ ಸುಮಲತಾ ಅಂಬರೀಶ್ ಅವರು ಕೂಡ ತಮ್ಮ ಪ್ರೀತಿಯ ಪತಿಯನ್ನು ನೆನೆದಿದ್ದಾರೆ. ಎಂದೆಂದಿಗೂ ನಮ್ಮೊಂದಿಗೆ. ಅಂಬಿ ಅಮರ ಎಂದೆಂದಿಗೂ ಅಮರ ಎಂದು ಬರೆದು ಅಂಬರೀಶ್ ಹಾಗೂ ಮಗ ಅಭಿಷೇಕ್ ಅವರ ಜೊತೆ ಇರುವ ಫೋಟೋವನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

  • `ಯಜಮಾನ’ನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಸ್ಯಾಂಡಲ್‍ವುಡ್ ಸ್ಟಾರ್ಸ್

    `ಯಜಮಾನ’ನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಸ್ಯಾಂಡಲ್‍ವುಡ್ ಸ್ಟಾರ್ಸ್

    ಬೆಂಗಳೂರು: ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 42ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್ ಸ್ಟಾರ್ಸ್ ಗಳು ಹಾಗೂ ನಿರ್ದೇಶಕ, ನಿರ್ಮಾಪಕರು ತುಂಬು ಹೃದಯದಿಂದ ಶುಭಾಶಯ ಕೋರಿದ್ದಾರೆ.

    ನಟಿ ಸುಮಲತಾ, ರಕ್ಷಿತಾ ಪ್ರೇಮ್, ನಟ ಜಗ್ಗೇಶ್, ನೆನಪಿರಲಿ ಪ್ರೇಮ್, ಧ್ರುವ ಸರ್ಜಾ, ಆದಿತ್ಯ, ನಿರ್ದೇಶಕರಾದ ಪವನ್ ಒಡೆಯರ್, ಸಂತೋಷ್ ಆನಂದ್ ರಾಮ್, ಎ ಪಿ ಅರ್ಜುನ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಡಿ ಬಾಸ್‍ಗೆ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.

    ಯಾರ ಟ್ವೀಟ್‍ನಲ್ಲಿ ಏನಿದೆ?
    ದರ್ಶನ್ ನಿನಗೆ ಪ್ರೀತಿಯಿಂದ ಆಶೀರ್ವಾದಿಸುತ್ತಿದ್ದೇನೆ. ನೀನು ಜೀವನದಲ್ಲಿ ಸಿಕ್ಕ ಪ್ರತಿಯೊಂದು ಕಷ್ಟದ ಮೆಟ್ಟಿಲು ಹತ್ತಿಕೊಂಡು ಇಂದು ಇಂತಹ ದೊಡ್ಡ ಸ್ಥಾನದಲ್ಲಿದ್ದಿ. ನಿನ್ನ ಯಶಸ್ಸನ್ನು ನಾನು ಹೆಮ್ಮೆಯಿಂದ, ಖುಷಿಯಿಂದ ನೋಡಿಕೊಂಡು ಬಂದಿದ್ದೇನೆ. ಎಂದೆಂದಿಗೂ ನೀನು ಸಂತೋಷದಿಂದ ಇರಲಿ ಎಂದು ಆಶಿಸುತ್ತಾನೆ. ಹುಟ್ಟುಹಬ್ಬದ ಶುಭಾಶಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದು ಬರೆದು ದರ್ಶನ್ ಫೋಟೋ ಹಾಕಿ ಸುಮಲತಾ ಟ್ವೀಟ್ ಮಾಡಿದ್ದಾರೆ.

    ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ಮ್ಯಾನ್ ಆಫ್ ಮಾಸ್ ಎಂದು ಚಾಲೆಂಚಿಂಗ್ ಸ್ಟಾರ್‍ಗೆ ಹೊಸ ಬಿರುದು ನೀಡಿ ಶುಭಕೋರಿದ್ದಾರೆ. ಹಾಗೆಯೇ ಎಪಿ ಅರ್ಜುನ್ “ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಅಣ್ಣ. ನಿಮ್ಮ ಆನೆ ನಡಿಗೆ ಹೀಗೆಯೇ ಮುಂದುವರಿಯಲಿ. ಯಶಸ್ಸು ಸದಾ ನಿಮ್ಮದಾಗಲಿ. ನೂರುಕಾಲ ನಗುತಾ ಸುಖವಾಗಿ ಬಾಳಿ” ಎಂದು ಶುಭ ಹಾರೈಸಿದ್ದಾರೆ.

    ನಟಿ ರಕ್ಷಿತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಹ್ಯಾಪಿ ಬರ್ತ್ ಡೇ ದರ್ಶನ್. ಖುಷಿಯಾಗಿರಿ, ಚೆನ್ನಾಗಿರಿ. ನಿಮಗೆ ದೇವರು ಒಳ್ಳೆಯದು ಮಾಡಲಿ ಎಂದು ಬರೆದು ದರ್ಶನ್ ಅವರನ್ನು ಟ್ಯಾಗ್ ಮಾಡಿ ಶುಭಕೋರಿದರೆ, ಹುಟ್ಟು ಹಬ್ಬದ ಶುಭಾಶಯಗಳು ಚಾಲೆಂಜಿಂಗ್ ಸ್ಟಾರ್ “ಡಿ” ಬಾಸ್, ನೂರು ಕಾಲ ಸುಖವಾಗಿ ಬಾಳಿ. ಜೈ ಆಂಜನೇಯ ಎಂದು ತಾವು ದರ್ಶನ್ ಅವರೊಂದಿಗೆ ಇರುವ ಫೋಟೋವನ್ನು ಹಾಕಿ ಟ್ವೀಟ್ ಮಾಡುವ ಮೂಲಕ ನಟ ಧ್ರುವ ಸರ್ಜಾ ವಿಶ್ ಮಾಡಿದ್ದಾರೆ.

    ದರ್ಶನ್ ಹುಟ್ಟುಹಬ್ಬಕ್ಕೆ ನಟ ಜಗ್ಗೇಶ್ ಸಹ ಶುಭಹಾರೈಸಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ದರ್ಶನ್ ಜೊತೆಗಿನ ಫೋಟೋವನ್ನು ಹಂಚಿಕೊಂಡು, ಒಂದೇ ಸಾಲಿನಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv