Tag: women

  • ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಬೆಂಗಳೂರು: ಪ್ರಿಯತಮ ಬೇರೊಂದು ಮಹಿಳೆಯೊಟ್ಟಿಗೆ ಲಾಡ್ಜ್‌ನಲ್ಲಿರುವುದನ್ನು ಕಂಡು ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಯಶೋಧ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯತಮ ಬೇರೊಂದು ಮಹಿಳೆಯೊಂದಿಗೆ ಇದ್ದ ಓಯೋ ರೂಂ ಮೇಲೆ ದಾಳಿ ಮಾಡಿ ಗಲಾಟೆ ಮಾಡಿದ್ದಳು. ಗಲಾಟೆಗೆ ಪ್ರಿಯತಮ ವಿಶ್ವನಾಥ್ ಸರಿಯಾಗಿ ರೆಸ್ಪಾನ್ಸ್ ಮಾಡಿದಿದ್ದಾಗ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

    ಆತ್ಮಹತ್ಯೆಗೆ ಶರಣಾದ ಯಶೋಧಗೆ ಗಂಡ ಇದ್ದು ಇಬ್ಬರು ಮಕ್ಕಳಿದ್ದಾರೆ. ಹೀಗಿದ್ದರೂ, ಆಕೆ ಪಕ್ಕದ ಏರಿಯಾದ ಮನೆಯಲ್ಲಿ ಆಡಿಟರ್‌ ಆಗಿದ್ದ ವಿಶ್ವನಾಥ್‌ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕಳೆದ 9 ವರ್ಷಗಳಿಂದ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಆದರೆ, ಇತ್ತೀಚೆಗೆ ಯಶೋಧ ತನ್ನ ಸ್ನೇಹಿತೆಯೊಬ್ಬರನ್ನು ಪ್ರಿಯಕರನಿಗೆ ಪರಿಚಯಿಸಿದ್ದರು. ಪ್ರಿಯಕರ ಯಶೋಧ ಸ್ನೇಹಿತೆ ಜೊತೆ ಸಲುಗೆ ಬೆಳೆಸಿ ಪ್ರೇಮದ ಬಲೆಗೆ ಬೀಳಿಸಿದ್ದಾನೆ. ಅಲ್ಲದೇ, ಆಕೆಯನ್ನು ಓಯೋ ರೂಂಗೆ ಕರೆದುಕೊಂಡು ಹೋಗಿದ್ದಾನೆ.

    ಈ ವಿಚಾರ ಯಶೋಧ ಕಿವಿಗೆ ಬಿದ್ದಿದೆ. ಪ್ರಿಯಕರ ಸ್ನೇಹಿತೆಯೊಟ್ಟಿಗೆ ಇರುವ ಲಾಡ್ಜ್‌ಗೆ ಹೋಗಿ ಗಲಾಟೆ ಮಾಡಿದ್ದಾಳೆ. ಆಗ ಪ್ರಿಯಕರ ಸರಿಯಾಗಿ ಸ್ಪಂದಿಸದೇ ಇದ್ದಾಗ, ಮನನೊಂದು ಅಲ್ಲೇ ಪಕ್ಕದ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

  • ಯಾದಗಿರಿ | ಪತ್ನಿ ಶೀಲ ಶಂಕಿಸಿ ಜನ್ಮ ಕೊಟ್ಟ ತಂದೆಯಿಂದಲೇ ಮಕ್ಕಳ ಬರ್ಬರ ಹತ್ಯೆ!

    ಯಾದಗಿರಿ | ಪತ್ನಿ ಶೀಲ ಶಂಕಿಸಿ ಜನ್ಮ ಕೊಟ್ಟ ತಂದೆಯಿಂದಲೇ ಮಕ್ಕಳ ಬರ್ಬರ ಹತ್ಯೆ!

    ಯಾದಗಿರಿ: ಪತ್ನಿಯ (Wife) ಶೀಲ ಶಂಕಿಸಿ ಹೆತ್ತ ತಂದೆಯೇ ತನ್ನ ಮಕ್ಕಳನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.

    ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ ಮೆರೆದ ರಾಕ್ಷಸ ತಂದೆ ಶರಣಪ್ಪ. ತಾಯಿ ಬಹಿರ್ದೆಸೆಗೆ ಹೋಗಿದ್ದಾಗ ಮಕ್ಕಳನ್ನ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ. ಸಾನ್ವಿ (5), ಭರತ (3) ಮೃತ ದುರ್ದೈವಿ ಮಕ್ಕಳು. ಮತ್ತೋರ್ವ ಮಗನ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

    ಶರಣಪ್ಪನ ಪತ್ನಿ ಕಳೆದ ಕೆಲ ದಿನಗಳಿಂದ ಗಂಡನೊಂದಿಗೆ ಹೊಂದಾಣಿಕೆಯಾಗದೇ ತವರು ಮನೆ ಸೇರಿದ್ದಳು. ಹದಿನೈದು ದಿನಗಳ ಹಿಂದಷ್ಟೇ ಪತ್ನಿಯನ್ನ ಶರಣಪ್ಪ ಕರೆತಂದಿದ್ದ. ಮಗಳು ಸಾನ್ವಿ ಜೊತೆ ಹೋಗಿ ಕರೆದುಕೊಂಡು ಬಂದಿದೆ.

    ಬೆಳಗ್ಗೆ ಹೆಂಡತಿ ಬಹಿರ್ದೆಸೆಗೆ ಹೋಗಿದ್ದಾಗ ಮಲಗಿದ್ದ ಮಕ್ಕಳನ್ನ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಒಬ್ಬರು ಮಕ್ಕಳು ಸಾವನ್ನಪ್ಪಿದ್ರೆ, ಮತ್ತೋರ್ವ ಮಗನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಯಾದಗಿರಿ ಡಿವೈಎಸ್ಪಿ ಸುರೇಶ್ ನಾಯಕ್, ಪಿಎಸ್‌ಐ ಹಣಮಂತ ಬಂಕಲಗಿ ಭೇಟಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಸೆ.26ರಿಂದ 5 ದಿನ ಕಾವೇರಿ ಆರತಿ – ಕೆಆರ್‌ಎಸ್‌ಗೆ ಭೇಟಿ ನೀಡಿ, ಸಿದ್ಧತೆ ವೀಕ್ಷಿಸಿದ ಡಿಕೆಶಿ

    ಯಾದಗಿರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೂರು ಮಕ್ಕಳ ತಾಯಿ ಲೀಲಾಳ ಲವ್ವರ್‌ಗೆ ಬಿಯರ್‌ ಬಾಟಲ್‌ನಿಂದ ಹೊಡೆದ ಪತಿ ಮಂಜುನಾಥ್‌

  • ‌ʻಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನ ಹೊತ್ತೊಯ್ತಾರೆʼ – ಮೀರತ್‌ನಲ್ಲಿ ನಡುಕ ಹುಟ್ಟಿಸಿದ ʻನಗ್ನ ಗ್ಯಾಂಗ್‌ʼ

    ‌ʻಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನ ಹೊತ್ತೊಯ್ತಾರೆʼ – ಮೀರತ್‌ನಲ್ಲಿ ನಡುಕ ಹುಟ್ಟಿಸಿದ ʻನಗ್ನ ಗ್ಯಾಂಗ್‌ʼ

    – ರಕ್ಷಣೆಗೆ ಡ್ರೋನ್‌, ಸಿಸಿಟಿವಿ ಕಣ್ಗಾವಲು

    ಲಕ್ನೋ: ʻದಂಡುಪಾಳ್ಯʼ ಸಿನಿಮಾವನ್ನ ನೀವು ನೋಡಿರಬಹುದು, ಈ ಸಿನಿಮಾದಲ್ಲಿ (Cinema) ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡುವ ಗ್ಯಾಂಗ್‌ ಮಹಿಳೆಯರನ್ನ ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್‌ ಆಗ್ತಿತ್ತು. ಇದೀಗ ಅದಕ್ಕಿಂತಲೂ ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ (UP’s Meerut) ಹುಟ್ಟಿಕೊಂಡಿದೆ.

    ಹೌದು.. ಇದಕ್ಕೆ ʻನಗ್ನ ಗ್ಯಾಂಗ್‌ ಅಥವಾ ಬೆತ್ತಲೆ ಗ್ಯಾಂಗ್‌ʼ (Nude Gang) ಅಂತ ಕರೆಯಲಾಗ್ತಿದೆ. ಬೆತ್ತಲೆಯಾಗಿ ಬರುವ ಈ ಗ್ಯಾಂಗ್‌ ಸದಸ್ಯರು ಮಹಿಳೆಯರನ್ನ ಹೊತ್ತೊಯ್ಯುತ್ತಿದ್ದಾರೆ. ಮೀರತ್‌ನಲ್ಲಿ ಇತ್ತೀಚೆಗೆ ಇಂತಹ ನಾಲ್ಕು ಪ್ರಕರಣ ವರದಿಯಾಗಿದ್ದು, ದೌರಾಲಾ ಗ್ರಾಮದ ಮಹಿಳೆಯರಲ್ಲಿ ನಡುಕ ಹುಟ್ಟಿಸಿದೆ. ರಾತ್ರಿ ವೇಳೆ ಮಹಿಳೆಯರು ಮನೆಯಿಂದಾಚೆ ಬರೋದಕ್ಕೆ ಭಯ ಪಡುವಂತಾಗಿದೆ. ವಿಷಯದ ಗಂಭೀರತೆ ಪರಿಗಣಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಗ್ಯಾಂಗ್‌ ಪತ್ತೆಹಚ್ಚಲು ಡ್ರೋನ್‌, ಸಿಸಿಟಿವಿಗಳನ್ನು (Drone And CCTV) ಕಣ್ಗಾವಲಿಗೆ ಇರಿಸಲಾಗಿದೆ.

    ಈ ಕುರಿತು ದೌರಾಲಾ ಗ್ರಾಮದ ಮುಖ್ಯಸ್ಥ ರಾಜೇಂದ್ರ ಕುಮಾರ್ ಮಾತನಾಡಿ, ಕಳೆದ ಕೆಲ ದಿನಗಳಲ್ಲಿ ಮಹಿಳೆಯರನ್ನು ಹೊತ್ತೊಯ್ದ ನಾಲ್ಕು ಘಟನೆಗಳು ವರದಿಯಾಗಿವೆ. ಇದಕ್ಕೂ ಹಿಂದಿನ ಕೆಲ ಘಟನೆಗಳು ಜನರ ಭಯದಿಂದ ಬೆಳಕಿಗೆ ಬಂದಿಲ್ಲ. ಈ ಮೊದಲು ಗ್ರಾಮಸ್ಥರು ಇಲ್ಲಿನ ಘಟನೆಯನ್ನ ಗಂಭೀರವಾಗಿ ಪರಿಗಣಿಸಲಿಲ್ಲ. ಆದ್ರೆ ಈಗ ಪರಿಸ್ಥಿತಿ ಕೈಮೀರಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಈ ಗ್ಯಾಂಗ್‌ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ಹೊತ್ತೊಯ್ಯುತ್ತಿದ್ದಾರೆ. ಪೊಲೀಸರು ಕೂಡಲೇ ಗ್ಯಾಂಗ್‌ಅನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿದ್ದಾರೆ.

    ಸಿಸಿಟಿವಿ, ಡ್ರೋನ್‌ ಕಣ್ಗಾವಲು
    ಪ್ರಕರಣದ ಗಂಭೀರತೆ ಪರಿಗಣಿಸಿದ ಬಳಿಕ ಪೊಲೀಸರು ತನಿಖೆಗಿಳಿದಿದ್ದಾರೆ. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಲವು ಗಂಟೆಗಳ ಕಾಲ ಡ್ರೋನ್‌ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. ಜೊತೆಗೆ ಹತ್ತಿರದ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಲಾಗಿದ್ದು, ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

    ಇನ್ನೂ ಈ ಪ್ರದೇಶದಲ್ಲಿ ಮಹಿಳಾ ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಸ್ಥಳ ಪರಿಶೀಲನೆ ನಡೆಸಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡಾ ತಿಳಿಸಿದ್ದಾರೆ.

  • ಪ್ರಿಯಕರನ ಜೊತೆ ಸೇರಿ ಪತಿ ಕೊಲೆ; ಮೃತದೇಹ ಸುಟ್ಟುಹಾಕಲು ಹೋಗಿದ್ದ ಆರೋಪಿಗಳು ಪೊಲೀಸರಿಗೆ ಲಾಕ್‌

    ಪ್ರಿಯಕರನ ಜೊತೆ ಸೇರಿ ಪತಿ ಕೊಲೆ; ಮೃತದೇಹ ಸುಟ್ಟುಹಾಕಲು ಹೋಗಿದ್ದ ಆರೋಪಿಗಳು ಪೊಲೀಸರಿಗೆ ಲಾಕ್‌

    – ಪೊಲೀಸರ ಕಂಡೊಡನೆ ಶವವಿದ್ದ ಕಾರು ಬಿಟ್ಟು ಎಸ್ಕೇಪ್‌ಗೆ ಮುಂದಾಗಿದ್ದ ಆರೋಪಿಗಳು

    ಕೋಲಾರ: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

    ಪತಿಯನ್ನ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪತ್ನಿ ಸೇರಿ ಮೂವರನ್ನ ಕೋಲಾರದ ರಾಯಲ್ಪಾಡು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಹೋಬಳಿಯ ಎಸ್.ಗೊಲ್ಲಪಲ್ಲಿ ಗ್ರಾಮದ ವೆಂಕಟರಮಣ ಎಂಬವನನ್ನ 2 ದಿನಗಳ ಹಿಂದೆ ಕೊಲೆ ಮಾಡಲಾಗಿತ್ತು. ವೆಂಕಟರಮಣನ ಪತ್ನಿ, ಆಕೆಯ ಪ್ರಿಯಕರ ವೇಣುಗೋಪಾಲ್ ಹಾಗೂ ಆತನಿಗೆ ಸಹಾಯ ಮಾಡಿದ ಬಾಲಾಜಿ ಎಂಬವರನ್ನ ಬಂಧಿಸಲಾಗಿದೆ.

    ಆ.24 ರ ರಾತ್ರಿ ಕೊಲೆ ಮಾಡಿದ್ದ ಆರೋಪಿಗಳು, ವೆಂಕಟರಮಣ ಶವವನ್ನ ಬುಲೆರೋ ಕಾರ್‌ನಲ್ಲಿ ಹಾಕಿಕೊಂಡು ಚಿಕ್ಕಬಳ್ಳಾಪುರ, ತುಮಕೂರು, ಹಿಂದೂಪುರ ಸೇರಿ ಹಲವೆಡೆ ಸುತ್ತಾಡಿದ್ದರು. ಎಲ್ಲಿಯೂ ಶವವನ್ನು ಬಿಸಾಡಲು ಜಾಗ ಸಿಗದೇ ರಾಯಲ್ಪಾಡು ಬಳಿ ಅರಣ್ಯದಲ್ಲಿ ಸುಟ್ಟು ಹಾಕಲು ತೆರಳುವ ವೇಳೆ ಪೊಲೀಸರ ಕಂಡು ಕಾರು ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ.

    ನಂಬರ್ ಪ್ಲೇಟ್ ಮೇಲೆ ಸ್ಟಿಕ್ಕರ್ ಅಂಟಿಸಿದ್ದ ಹಿನ್ನೆಲೆ ಅನುಮಾನಗೊಂಡ ರಾಯಲ್ಪಾಡು ಪಿಎಸ್‌ಐ, ವಾಹನ ಪರಿಶೀಲನೆ ನಡೆಸಿದ ವೇಳೆ ಡಿಕ್ಕಿಯಲ್ಲಿ ವೆಂಕಟರಮಣನ ಶವ ಪತ್ತೆಯಾಗಿತ್ತು. ವೆಂಕಟರಮಣನನ್ನ ಕೊಂದ ಪತ್ನಿ ಸೇರಿ ಆಕೆಗೆ ಸಹಾಯ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

    ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

    ಲಕ್ನೋ: ಕಿವುಡ ಮತ್ತು ಮೂಕ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ದುರುಳರಿಗೆ 24 ಗಂಟೆಯೊಳಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಸೋಮವಾರ ಮನೆಗೆ ಹಿಂದಿರುಗುತ್ತಿದ್ದಾಗ ವಿಶೇಷಚೇತನ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಜಿಲ್ಲೆಯ ಉನ್ನತ ಅಧಿಕಾರಿಗಳ ಮನೆಗಳಿಂದ ಕೆಲವು ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿರುವುದು ಕಂಡುಬಂದಿದೆ. ಘಟನೆ ನಡೆದ 24 ಗಂಟೆಗಳ ಒಳಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮಹಿಳೆ ತನ್ನ ಮಾವನ ಮನೆಯಿಂದ ಬಲರಾಂಪುರ ಜಿಲ್ಲೆಯ ಮನೆಗೆ ಹೋಗುತ್ತಿದ್ದಾಗ, ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಇಬ್ಬರು ಪುರುಷರು ಅತ್ಯಾಚಾರ ಎಸಗಿದ್ದಾರೆ. ಮೂಕಿಯಾಗಿದ್ದರಿಂದ ಮಹಿಳೆ ಸಹಾಯಕ್ಕೆ ಕೂಗಿಕೊಳ್ಳಲು ಸಾಧ್ಯವಾಗಲಿಲ್ಲ.

    ಒಂದು ಗಂಟೆಯ ನಂತರವೂ ಮಹಿಳೆ ಮನೆಗೆ ಹಿಂತಿರುಗದಿದ್ದಾಗ, ಕುಟುಂಬದವರು ಆಕೆಯನ್ನು ಹುಡುಕಲು ಪ್ರಾರಂಭಿಸಿದಾಗ ಪೊಲೀಸ್ ಠಾಣೆಯ ಬಳಿಯ ಹೊಲದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ. ಮಹಿಳೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಮಹಿಳೆಯ ಸಹೋದರ ತನ್ನ ಸಹೋದರಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ ನಂತರ, ಪೊಲೀಸರು ತನಿಖೆ ಆರಂಭಿಸಿ 24 ಗಂಟೆಗಳ ಒಳಗೆ ಇಬ್ಬರು ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಅವರನ್ನು ಬಂಧಿಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ಆಪರೇಷನ್ ತ್ರಿನೇತ್ರ ಅಡಿಯಲ್ಲಿ, ಕಣ್ಗಾವಲು ಹೆಚ್ಚಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಜಿಲ್ಲೆಗಳಾದ್ಯಂತ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದೆ. ಈ ಸಿಸಿಟಿವಿ ಕ್ಯಾಮೆರಾಗಳು ಸಾರ್ವಜನಿಕ ಸ್ಥಳಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ.

  • ಮದುವೆ, ಅಕ್ರಮ ಸಂಬಂಧ, ಚಿತ್ರಹಿಂಸೆ, ಗರ್ಭಪಾತ; ಪತಿಯ ಕಿರುಕುಳಕ್ಕೆ ನೊಂದಿದ್ದ ಗೃಹಿಣಿ ಸಾವು

    ಮದುವೆ, ಅಕ್ರಮ ಸಂಬಂಧ, ಚಿತ್ರಹಿಂಸೆ, ಗರ್ಭಪಾತ; ಪತಿಯ ಕಿರುಕುಳಕ್ಕೆ ನೊಂದಿದ್ದ ಗೃಹಿಣಿ ಸಾವು

    – ವಿವಾಹವಾದ 5 ತಿಂಗಳಲ್ಲೇ ಸಾವಿನ ಮನೆ ಸೇರಿದ ಮಹಿಳೆ

    ಲಕ್ನೋ: ಐದು ತಿಂಗಳ ಹಿಂದಷ್ಟೇ ಮರ್ಚೆಂಟ್ ನೇವಿ ಅಧಿಕಾರಿಯನ್ನು ಮದುವೆಗಿದ್ದ 32 ವರ್ಷದ ಮಹಿಳೆಯೊಬ್ಬಳು ಲಕ್ನೋದ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

    ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿಸಿದ್ದಾರೆ. ಆದರೆ, ಮಧು ಸಿಂಗ್ ಕುಟುಂಬ ಸದಸ್ಯರು, ವರದಕ್ಷಿಣೆಗಾಗಿ ಆಕೆಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆಂದು ಪತಿಯ ವಿರುದ್ಧ ಆರೋಪ ಮಾಡಿದ್ದಾರೆ. ನೇಣು ಬಿಗಿದುಕೊಂಡು ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆ ದೃಢಪಡಿಸಿದೆ. ಆರೋಪಿ ಅನುರಾಗ್ ಸಿಂಗ್‌ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    ಈ ವರ್ಷ ಫೆ.25 ರಂದು ಮಧು, ವೈವಾಹಿಕ ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ ಮೂಲಕ ಸಂಪರ್ಕ ಸಾಧಿಸಿ ಅನುರಾಗ್‌ನನ್ನು ವಿವಾಹವಾಗಿದ್ದರು. ಅನುರಾಗ್ ಹಾಂಗ್‌ಕಾಂಗ್ ಮೂಲದ ಹಡಗು ನಿರ್ವಹಣಾ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಮದುವೆಯ ಸಮಯದಲ್ಲಿ, 15 ಲಕ್ಷ ರೂ. ವರದಕ್ಷಿಣೆಯಾಗಿ ಬೇಡಿಕೆ ಇಟ್ಟಿದ್ದ ಎಂದು ಮಧು ಕುಟುಂಬವು ಆರೋಪಿಸಿದೆ. ಅವರ ಕುಟುಂಬ ಹಂಚಿಕೊಂಡ ವಾಟ್ಸಾಪ್ ಚಾಟ್‌ಗಳಲ್ಲಿ ಅನುರಾಗ್ 15 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.

    ಮಧು ಅವರ ಕುಟುಂಬ ಸದಸ್ಯರು ಕೇವಲ 5 ಲಕ್ಷ ರೂ. ವರದಕ್ಷಿಣೆ ಕೊಡಬಹುದು ಎಂದು ಹೇಳಿದ್ದರು. ಆದರೆ, ಅನುರಾಗ್‌ ಇದಕ್ಕೆ ಒಪ್ಪಿರಲಿಲ್ಲ. ಮಧು ತಂದೆ ಫತೇ ಬಹದ್ದೂರ್ ಸಿಂಗ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ಮದುವೆಯ ನಂತರ ಅನುರಾಗ್ ಪದೇ ಪದೆ ಕರೆ ಮಾಡಿ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

    ಮದುವೆಯ ಒಂದು ತಿಂಗಳಲ್ಲೇ ನಮ್ಮ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅವಳು ತವರಿಗೆ ಬಂದಿದ್ದಳು. ನಂತರ ನಾವು ವರದಕ್ಷಿಣೆ ಕೊಟ್ಟೆವು. ಮಗಳು ಮತ್ತೆ ಗಂಡನ ಮನೆ ಸೇರಿದರು. ಆದರೆ, ಪದೇ ಪದೆ ಆಕೆಯನ್ನು ಗಂಡನ ಮನೆಯವರು ಹಿಂಸಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಅನುರಾಗ್ ವಿವಾಹೇತರ ಸಂಬಂಧ ಹೊಂದಿದ್ದಾನೆ. ಇತ್ತೀಚೆಗೆ ತನ್ನ ಮಾಜಿ ಗೆಳತಿಯೊಂದಿಗೆ ನಗರದ ಹೋಟೆಲ್‌ನಲ್ಲಿ ಒಂದು ರಾತ್ರಿ ಕಳೆದಿದ್ದಾನೆ ಎಂದು ಮಧು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ನನ್ನ ಮಗಳು ಗರ್ಭಿಣಿಯಾಗಿದ್ದಳು. ಗರ್ಭಪಾತ ಮಾಡಿಸುವಂತೆ ಪತಿ ಒತ್ತಾಯಿಸುತ್ತಿದ್ದ. ಮಧು ಸಾವನ್ನಪ್ಪುವ ನಾಲ್ಕು ದಿನಗಳ ಮೊದಲು, ಜು.31 ರಂದು ಹೋಟೆಲ್ ಬುಕಿಂಗ್‌ನ ವಿವರಗಳನ್ನು ಕುಟುಂಬ ಹಂಚಿಕೊಂಡಿದೆ. ಆ.3 ರಂದು, ಅನುರಾಗ್ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಧು ನಮಗೆ ತಿಳಿಸಿದ್ದಳು. ಮಾರನೆ ದಿನವೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಗಂಡನ ಮನೆಯಿಂದ ನಮಗೆ ಕರೆ ಬಂತು. ಇದು ಕೊಲೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  • ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

    ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

    ನವದೆಹಲಿ: ಆಕಸ್ಮಿಕ ವಿದ್ಯುತ್‌ ಆಘಾತದಿಂದ ದೆಹಲಿಯ ದೋಹ್ರದ ವ್ಯಕ್ತಿ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಮೈದುನನ ಜೊತೆ ಸೇರಿಕೊಂಡು ತನ್ನ ಗಂಡನನ್ನೇ ಮಹಿಳೆ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

    ಜು.13 ರಂದು ಕರಣ್ ದೇವ್ (36) ಅವರನ್ನು ಮಾತಾ ರೂಪಾನಿ ಮ್ಯಾಗೊ ಆಸ್ಪತ್ರೆಗೆ ಪತ್ನಿ ಸುಶ್ಮಿತಾ ದಾಖಲಿಸಿದ್ದರು. ಆಕಸ್ಮಿಕವಾಗಿ ವಿದ್ಯುತ್ ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿಕೊಂಡಿದ್ದರು. ವೈದ್ಯಕೀಯ ಪರೀಕ್ಷೆ ನಡೆಸಿದಾಗ, ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮೃತ ವ್ಯಕ್ತಿಯ ವಯಸ್ಸು ಮತ್ತು ಸಾವಿನ ಸಂದರ್ಭವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಿದರು. ಇದಕ್ಕೆ ಮೃತ ವ್ಯಕ್ತಿಯ ಪತ್ನಿ ಮತ್ತು ಆತನ ಸೋದರಸಂಬಂಧಿ ರಾಹುಲ್ ಆಕ್ಷೇಪ ವ್ಯಕ್ತಪಡಿಸಿದರು.

    ಕೊನೆಗೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ರವಾನಿಸಿದರು. ಘಟನೆ ನಡೆದ ಮೂರು ದಿನಗಳ ನಂತರ, ಮೃತ ವ್ಯಕ್ತಿಯ ಕಿರಿಯ ಸಹೋದರ ಕುನಾಲ್ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಕರಣ್‌ನನ್ನು ಆತನ ಪತ್ನಿ ಮತ್ತು ಮೃತನ ಸೋದರಸಂಬಂಧಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಸುಶ್ಮಿತಾ ಮತ್ತು ರಾಹುಲ್ ನಡುವಿನ ಇನ್‌ಸ್ಟಾಗ್ರಾಮ್ ಚಾಟ್‌ನ ಪುರಾವೆಗಳನ್ನು ಸಹ ಒದಗಿಸಿದ್ದಾನೆ. ಚಾಟ್‌ನಲ್ಲಿ ಇಬ್ಬರೂ ಕೊಲೆ ಮಾಡುವ ಬಗ್ಗೆ ಸಂಚು ರೂಪಿಸಿರುವುದು ಬಹಿರಂಗವಾಗಿದೆ.

    ಮೃತನ ಪತ್ನಿ ಮತ್ತು ಆಕೆಯ ಮೈದುನನ ನಡುವೆ ಅನೈತಿಕ ಸಂಬಂಧವಿತ್ತು. ಇದರಿಂದಾಗಿ ಇಬ್ಬರೂ ಸೇರಿಕೊಂಡು ಕರಣ್‌ನನ್ನು ಕೊಲ್ಲಲು ನಿರ್ಧರಿಸಿದ್ದರು. ಊಟದ ಸಮಯದಲ್ಲಿ 15 ನಿದ್ರೆ ಮಾತ್ರೆಗಳನ್ನು ನೀಡಿ ಪ್ರಜ್ಞೆ ತಪ್ಪಿಸಿ, ಆಕಸ್ಮಿಕ ಸಾವು ಎಂದು ಬಿಂಬಿಸಲು ಕರಣ್‌ಗೆ ವಿದ್ಯುತ್ ಶಾಕ್ ನೀಡಿದ್ದಾರೆ.

    ಆರೋಪಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಸಮಯದಲ್ಲಿ ಆಕೆ ತನ್ನ ಪ್ರಿಯಕರ ಮೈದುನನ ಜೊತೆ ಸೇರಿಕೊಂಡು ಪತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಿಸಿಪಿ ದ್ವಾರಕಾ ಅಂಕಿತ್ ಸಿಂಗ್ ಹೇಳಿದ್ದಾರೆ.

  • ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಆಕೆಯ ಅಪ್ಪ-ಅಮ್ಮನನ್ನೇ ಕೊಂದ ದುರುಳ

    ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಆಕೆಯ ಅಪ್ಪ-ಅಮ್ಮನನ್ನೇ ಕೊಂದ ದುರುಳ

    ಲಕ್ನೋ: ಮನೆಗೆ ಬರಲ್ಲ ಎಂದ ಹೆಂಡತಿಯ ಅಪ್ಪ-ಅಮ್ಮನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ವಿಜಯ್ ಖೇಡಾದಲ್ಲಿ ಈ ಘಟನೆ ನಡೆದಿದೆ. ಪತ್ನಿ ಮನೆಗೆ ಬರಲು ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ಪೋಷಕರನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

    ಜಗದೀಪ್ ಸಿಂಗ್ ಕೊಲೆ ಮಾಡಿದ ಆರೋಪಿ. ಆತನ ಪತ್ನಿ ಪೂನಂ ಆತನೊಂದಿಗೆ ಹೋಗಲು ನಿರಾಕರಿಸಿದ್ದಾಳೆ. ಪರಿಣಾಮವಾಗಿ ಆರೋಪಿಯು ತನ್ನ ಮಾವ ಅನಂತರಾಮ್ (80) ಮತ್ತು ಅತ್ತೆ (75) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

    ಅವರ ಕಿರುಚಾಟ ಕೇಳಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು ಎಂದು ಉಪ ಪೊಲೀಸ್ ಆಯುಕ್ತ ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಿ ಉಸಿರುಚೆಲ್ಲಿದ್ದಾರೆ. ಇದನ್ನೂ ಓದಿ: ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿಯಿಂದ ದಾಂಧಲೆ – ನಂದಿನಿ ಪಾರ್ಲರ್‌ಗೆ ನುಗ್ಗಿ ವಸ್ತುಗಳು ಪೀಸ್ ಪೀಸ್

  • ಮಳೆಗಾಲದಲ್ಲಿ ಮಹಿಳೆಯರು ಗಮನಿಸಬೇಕಾದ ಡ್ರೆಸ್ಸಿಂಗ್ ಟಿಪ್ಸ್!

    ಮಳೆಗಾಲದಲ್ಲಿ ಮಹಿಳೆಯರು ಗಮನಿಸಬೇಕಾದ ಡ್ರೆಸ್ಸಿಂಗ್ ಟಿಪ್ಸ್!

    ಅಂತೂ ಇಂತೂ ಮಳೆಗಾಲವೂ ಶುರುವಾಯಿತು. ಈ ಮಳೆಗಾಲದಲ್ಲಿ ಮನೆಯಲ್ಲಿ ಕೂತು ಬಿಸಿ ಬಿಸಿ ಕಾಫಿ, ಟೀ ಜೊತೆ ಬಜ್ಜಿ ಬೋಂಡಾ ತಿಂದು ಕಾಲ ಕಳೆಯೋದು ಒಂದು ಖುಷಿಯಾದ್ರೆ. ಮನೆಯಿಂದ ಹೊರಗೆ ಕಾಲಿಟ್ಟಾಗ ಈ ಚಿತ್ರಣವೇ ಬದಲಾಗುತ್ತದೆ. ಜಿಟಿ ಜಿಟಿ ಸುರಿಯುವ ಮಳೆ, ರಸ್ತೆಯಲ್ಲಿ ನಿಂತ ಕೆಸರು ನೀರಿನಿಂದ ಹೊರಗಡೆ ಹೋಗುವಾಗ ಯಾವ ಬಟ್ಟೆ ಹಾಕೋದು ಯಾವ ಶೂ ಹಾಕೋದು ಅನ್ನೋದೇ ದೊಡ್ಡ ತಲೆನೋವುವಾಗಿದೆ.

    ಈ ಮಳೆಗಾಲದಲ್ಲಿ (Rainy Season) ಬಟ್ಟೆ ಕೇವಲ ಅಂದ ಹೆಚ್ಚಿಸೋದು ಮಾತ್ರವಲ್ಲ. ಮಳೆಗೆ ಸರಿಹೊಂದುವಂತೆ ಹಾಗೂ ದೇಹಕ್ಕೆ ಬೆಚ್ಚಗಿನ ಫೀಲ್ ನೀಡುವುದು ಸಹ ತುಂಬಾ ಮುಖ್ಯ. ಹಾಗಾಗಿ ನಾವು ಬಟ್ಟೆಗಳ ಆಯ್ಕೆಯಲ್ಲಿ ಕೊಂಚ ಚ್ಯೂಸಿಯಾಗಿರಬೇಕು. ಮಳೆಗಾಲದಲ್ಲಿ ಬಟ್ಟೆ ಆಯ್ಕೆ ಹೇಗಿರಬೇಕೆಂದರೆ ಧರಿಸಲು ಕಂಫರ್ಟ್‌ ಇರಬೇಕು. ನೋಡಲು ಸುಂದರವಾಗಿ ಕಾಣುವಂತೆ ಇರಬೇಕು.

    ಗಾಢ ಬಣ್ಣದ ಬಟ್ಟೆಗಳನ್ನು ಆಯ್ಕೆ ಮಾಡಿ
    ಮಳೆಗಾಲದಲ್ಲಿ ಹೊರಗಡೆ ಹೋಗುವಾಗ ಗಾಢ ಬಣ್ಣದ ಬಟ್ಟೆಗಳನ್ನು ಆಯ್ಕೆ ಮಾಡಬೇಕು. ಕೆಂಪು, ಕಪ್ಪು, ಕಡು ನೀಲಿ, ಹಸಿರು ಬಣ್ಣದ ಬಟ್ಟೆಗಳನ್ನು ಧರಿಸಬೇಕು. ಯಾಕೆಂದರೆ ತಿಳಿ ಬಣ್ಣದ ಡ್ರೆಸ್‌ಗಳನ್ನು ಧರಿಸುವುದರಿಂದ ಕೆಸರು ನೀರಿನ ಕಲೆಗಳು, ವಾಹನದ ಗ್ರೀಸ್‌ ಕಲೆಗಳು ಎದ್ದು ಕಾಣುವಂತೆ ಮಾಡುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಡಾರ್ಕ್‌ ಕಲರ್‌ನ ಬಟ್ಟೆಗಳನ್ನು ಧರಿಸುವುದು ಅತ್ಯಂತ ಉತ್ತಮವಾಗಿದೆ.

    ಲೆಹಂಗಾ, ಅನಾರ್ಕಲಿ ಡ್ರೆಸ್‌ಗಳು ಬೇಡ
    ಇನ್ನು ಈ ಮಾನ್ಸೂನ್‌ ಸಮಯದಲ್ಲಿ ಉದ್ದನೆಯ ಬಟ್ಟೆಗಳನ್ನು ಧರಿಸುವುದನ್ನು ಅವಾಯ್ಡ್‌ ಮಾಡಬೇಕು. ಲೆಹಂಗಾ, ಅನಾರ್ಕಲಿ ಅಥವಾ ಜೀನ್ಸ್‌ ಪ್ಯಾಂಟ್‌ಗಳನ್ನು ಬಳಸದೇ ಇರುವುದು ಉತ್ತಮ. ಲೆಹಂಗಾ, ಸೀರೆ, ಅನಾರ್ಕಲಿ ಬಟ್ಟೆಗಳು ಮಳೆಯಲ್ಲಿ ಒದ್ದೆಯಾದರೆ ತುಂಬಾ ಭಾರವೆನಿಸುತ್ತದೆ. ಅಲ್ಲದೇ ಬಳಿಕ ಅನ್‌ಕಂಪರ್ಟ್‌ ಫೀಲ್‌ ಸಹ ನೀಡುತ್ತದೆ. ಜೀನ್ಸ್‌ ಪ್ಯಾಂಟ್‌ಗಳು ಮಳೆಗಾಲದಲ್ಲಿ ಒಣಗಿಸಲು ಹರಸಾಹಸ ಪಡಬೇಕಾಗುತ್ತದೆ. ಆದ್ದರಿಂದ ಇಂತಹ ಬಟ್ಟೆಗಳನ್ನು ಧರಿಸದೇ ಇರುವುದು ಒಳ್ಳೆಯದು.

    ಶಾರ್ಟ್‌ ಡ್ರೆಸ್‌ಗಳು ಉತ್ತಮ
    ಮಳೆಗಾಲದಲ್ಲಿ ಹೆಚ್ಚು ಉದ್ದವಾಗಿರುವ ಬಟ್ಟೆಗಳ ಬದಲಾಗಿ ಶಾರ್ಟ್‌ ಡ್ರೆಸ್‌ಗಳನ್ನು ಧರಿಸಬೇಕು. ಇದು ಮಳೆಯಿಂದ ನಿಮ್ಮ ಬಟ್ಟೆಗಳು ಒದ್ದೆಯಾಗಿ ಕಿರಿಕಿರಿ ಉಂಟು ಮಾಡುವುದನ್ನು ತಪ್ಪಿಸುತ್ತದೆ. ಆದ್ದರಿಂದ ಸಿಂಪಲ್‌ ಕುರ್ತಾ, ಶಾರ್ಟ್‌ ಡ್ರೆಸ್‌, ಲೆಗ್ಗಿನ್ಸ್‌ ಅಥವಾ ಕಾಟನ್‌ ಪ್ಯಾಂಟ್‌ ಧರಿಸುವುದರಿಂದ ಉತ್ತಮ ಅನುಭವ ನೀಡುತ್ತದೆ.

    ಮೇಕಪ್‌ ಬಗ್ಗೆಯೂ ಗಮನವಿರಲಿ
    ಇನ್ನೂ ಹುಡುಗಿಯರಿಗೆ ಈ ಮಳೆಗಾಲದಲ್ಲಿ ಮೇಕಪ್‌ದೇ ಚಿಂತೆಯಾಗಿರುತ್ತದೆ. ಮಳೆಗೆ ಒದ್ದೆಯಾಗಿ ಮೇಕಪ್‌ ಹಾಳಾಗಬಹುದೆಂಬ ಭಯವಿದ್ದರೆ, ಆದಷ್ಟು ಲೈಟ್‌ ಮೇಕಪ್‌ನ್ನು ಮಾಡಬೇಕು. ಇಲ್ಲದಿದ್ದರೆ ವಾಟರ್‌ ಪ್ರೂಫ್‌ ಮೇಕಪ್‌ಗಳನ್ನು ಧರಿಸುವುದರಿಂದ ಮಳೆಗಾಲದಲ್ಲಿ ಚಿಂತೆಯಿಲ್ಲದೆ ಸುತ್ತಾಟಬಹುದಾಗಿದೆ. ಇನ್ನು ಈ ವೇಳೆ ಡಾರ್ಕ್‌ ಲಿಪ್‌ಸ್ಟಿಕ್‌ ಧರಿಸುವುದರಿಂದ ಮಳೆಗಾಲದಲ್ಲಿ ಒದ್ದೆಯಾದರೂ ಆಡ್‌ ಆಗಿ ಕಾಣುವುದಿಲ್ಲ. ಲೈಟ್ ಫೌಂಡೇಶನ್, ವಾಟರ್ ಪ್ರೂಫ್ ಮಸ್ಕರಾ ಮತ್ತು ಟಿಂಟೆಡ್ ಲಿಪ್ ಬಾಮ್ ಉತ್ತಮ ಆಯ್ಕೆಗಳಾಗಿವೆ.

    ಸ್ಲೀಪ್, ಶೂಗಳನ್ನು ಅವಾಯ್ಡ್ ಮಾಡಿ
    ಮಳೆಗಾಲದಲ್ಲಿ ಕೇವಲ ಬಟ್ಟೆ ಮಾತ್ರವಲ್ಲ ಚಪ್ಪಲಿ ಆಯ್ಕೆ ಕೂಡ ಅಷ್ಟೇ ಇಂಪಾರ್ಟೆಂಟ್. ಮಳೆಗಾಲದಲ್ಲಿ ಸ್ಲಿಪ್ಪರ್ ಬಳಕೆಯಿಂದ ಬಟ್ಟೆಗಳು ಕೊಳೆಯಾಗುತ್ತದೆ. ಸ್ಲಿಪ್ಪರ್ ಗಳನ್ನು ಬಳಸಿದರೆ, ಅದರಿಂದ ಬಟ್ಟೆಗಳಿಗೆ ಕೆಸರು ನೀರು ಬಿದ್ದು ಹಾಳುಮಾಡುತ್ತದೆ. ಅದಕ್ಕಾಗಿ ರಬ್ಬರ್ ಶೂಗಳು, ಉಂಗುಷ್ಠವಿರುವ ಚಪ್ಪಲಿಗಳ ಅಥವಾ ಬೆಲ್ಟ್ ಚಪ್ಪಲಿಗಳ ಬಳಕೆ ಒಳ್ಳೆಯದು.

    ಮಳೆಗಾಲದಲ್ಲಿ ಯಾವಾಗಲೂ ತೆಳುವಾಗಿರುವ, ಕಾಟನ್ ಡ್ರೆಸ್ ಹಾಗೂ ಒಣಗಿಸಲು ಸುಲಭವಾಗುವ ಬಟ್ಟೆಗಳನ್ನು ಧರಿಸಬೇಕು. ಮಾನ್ಸೂನ್ ಸಮಯದಲ್ಲಿ ಮಹಿಳೆಯರು ಆರಾಮದಾಯಕ ಮತ್ತು ಸ್ಟೈಲಿಶ್ ಆಗಿ ಕಾಣಲು ಸರಿಯಾದ ಉಡುಪುಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

  • ರಸ್ತೆಯಲ್ಲೇ ಮಹಿಳೆಯರನ್ನ ತಬ್ಬಿಕೊಂಡು ತುಟಿಗೆ ಚುಂಬಿಸ್ತಿದ್ದ – ಬೆಂಗಳೂರಿನ ಬೀದಿ ಕಾಮಣ್ಣ ಪೊಲೀಸ್‌ ವಶಕ್ಕೆ

    ರಸ್ತೆಯಲ್ಲೇ ಮಹಿಳೆಯರನ್ನ ತಬ್ಬಿಕೊಂಡು ತುಟಿಗೆ ಚುಂಬಿಸ್ತಿದ್ದ – ಬೆಂಗಳೂರಿನ ಬೀದಿ ಕಾಮಣ್ಣ ಪೊಲೀಸ್‌ ವಶಕ್ಕೆ

    ಬೆಂಗಳೂರು: ರೋಡು.. ಪಾರ್ಕು (Park) ಅಂತ ನೋಡದೇ ಸಿಕ್ಕ ಸಿಕ್ಕ ಮಹಿಳೆಯರನ್ನ ತಬ್ಬಿಕೊಂಡು, ಮುತ್ತು ಕೊಡುತ್ತಿದ್ದ ಬೀದಿ ಕಾಮಣ್ಣನೊಬ್ಬನನ್ನು ಪೊಲೀಸರು (Pulikeshi Nagar Police) ವಶಕ್ಕೆ ಪಡೆದಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಂಧಿತ ಆರೋಪಿಯ (Accused) ಎದುರು ಹೆಣ್ಣುಮಕ್ಕಳು ಓಡಾಡೋದೇ ಕಷ್ಟ ಎನ್ನುವಂತಾಗಿತ್ತು. ರೋಡು, ಪಾರ್ಕು ಅಂತ ನೋಡ್ತಿರಲಿಲ್ಲ, ಬರುವ ಹೋಗುವ ಮಹಿಳೆಯರು (Bengaluru Women), ಹೆಣ್ಣುಮಕ್ಕಳನ್ನ ತಪ್ಪಿಕೊಂಡು ಬಲವಂತವಾಗಿ ತುಟಿಗೆ ಚುಂಬಿಸುತ್ತಿದ್ದ ಎಂದು ಪೊಲೀಸರಿಗೆ ಮಹಿಳೆಯೊಬ್ಬರು ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: Honeymoon Murder | ಕಾಂಟ್ರ್ಯಾಕ್ಟ್‌ ಕಿಲ್ಲರ್ಸ್‌.. ಫೋನ್‌ಕಾಲ್‌ನಲ್ಲೇ ಪಿನ್‌ ಟು ಪಿನ್‌ ಅಪ್ಡೇಟ್‌ – ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ

    ಜೂನ್‌ 6ರಂದು ಸಂಜೆ 7 ಗಂಟೆ ಸುಮಾರಿಗೆ ಕೂಕ್‌ಟೌನ್‌ನ ಮಿಲ್ಟನ್‌ ಪಾರ್ಕ್‌ ಬಳಿ ನಿಂತಿದ್ದ ಮಹಿಳೆಯೊಬ್ಬರ ಬಳಿ ಕಾಮುಕ ದುರ್ವರ್ತನೆ ತೋರಿದ್ದ ಘಟನೆ ಬೆಳಕಿಗೆ ಬಂದಿತ್ತು. ಮಹಿಳೆಯನ್ನ ತಬ್ಬಿಕೊಂಡ ಕಾಮುಕ ಬಲವಂತವಾಗಿ ತುಟಿಗೆ ಮುತ್ತುಕೊಟ್ಟಿದ್ದನಂತೆ. ಮತ್ತೊಂದು ಪಾರ್ಕ್‌ನಲ್ಲೂ ಮಹಿಳೆಯೊಬ್ಬರ ಬಳಿ ಇದೇ ರೀತಿ ವರ್ತಿಸಿದ್ದನಂತೆ. ಮಹಿಳೆ ಪ್ರಶ್ನೆ ಮಾಡಿದ್ರೆ ಯಾರಿಗೆ ಬೇಕಾದ್ರೋ ಹೇಳಿಕೊ ಅಂತ ಎಸ್ಕೇಪ್‌ ಆಗ್ತಿದ್ದನಂತೆ. ಈ ಕುರಿತು ಸಂತ್ರಸ್ತ ಮಹಿಳೆ ಪುಲಕೇಶಿ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಜಾತ್ರೆಯಲ್ಲಿ ಲವ್‌… ಓಯೋ ರೂಮಲ್ಲಿ ಕೆಲಸ ಮುಗಿದ್ಮೇಲೆ ಆಂಟಿಯನ್ನ ಇರಿದು ಕೊಂದ ಟೆಕ್ಕಿ

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಬಗ್ಗೆ ಹೆಚ್ಚಿನ ವಿವರ ಇನ್ನೂ ತಿಳಿದು ಬಂದಿಲ್ಲ. ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡು ಮಾಡೆಲ್ ಆತ್ಮಹತ್ಯೆ