Tag: Women Inspector

  • ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ – ಮಹಿಳಾ ಇನ್‌ಸ್ಪೆಕ್ಟರ್‌ ಅಮಾನತು

    ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ – ಮಹಿಳಾ ಇನ್‌ಸ್ಪೆಕ್ಟರ್‌ ಅಮಾನತು

    – ತರಬೇತಿ ಕೊಡೋದು ನಿಮ್ಮ ಕೆಲಸ.. ಅದನ್ನ ಪಡೆಯಬೇಕೋ ಬೇಡವೋ ಅನ್ನೋದು ನನ್ನಿಷ್ಟ ಅಂತ ಅವಾಜ್‌

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Elections 2023) ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಇನ್‌ಸ್ಪೆಕ್ಟರ್‌ವೊಬ್ಬರನ್ನು ಅಮಾನತುಗೊಳಿಸಲಾಗಿದೆ.

    ಮಹಿಳಾ ಇನ್‌ಸ್ಪೆಕ್ಟರ್‌ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗಿತ್ತು. ತರಬೇತಿ ಪಡೆಯುವ ಸಂದರ್ಭದಲ್ಲಿ ಉದ್ಧಟತನ ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ. ಇದನ್ನೂ ಓದಿ: ವೋಟ್ ಹಾಕೋಕೆ 2 ಕಿ.ಮೀ ನಡೆಯಬೇಕು – ಗ್ರಾಮದಲ್ಲಿ ಮತಗಟ್ಟೆ ತೆರೆಯಲು ಒತ್ತಾಯ

    ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮಹಿಳಾ ಇನ್‌ಸ್ಪೆಕ್ಟರ್‌ ತರಬೇತಿಗೆ ಹಾಜರಾಗದೇ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ.

    “ನಾನು ಮಾಡುತ್ತಿರುವುದು ಸರಿ. ತರಬೇತಿ ಕೊಡುವುದು ನಿಮ್ಮ ಕೆಲಸ. ತರಬೇತಿ ಪಡೆಯುವುದು ಬಿಡುವುದು ನಮ್ಮಿಷ್ಟ. ನೀವು ಹೇಳಿದಂತೆ ಕೇಳೋದಕ್ಕೆ ನಾನು ನಿಮ್ಮ ಡಿಪಾರ್ಟ್‌ಮೆಂಟ್ ಅಲ್ಲ.‌ ಈ ತರಬೇತಿ ಉಪಯೋಗಕ್ಕಿಲ್ಲ” ಎಂದು ಉದ್ಧಟತನದ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ವೋಟ್ ಹಾಕಿ, ಶಾಯಿ ಗುರುತು ತೋರಿಸಿದ್ರೆ ಮಾತ್ರ ಪ್ರವಾಸಿತಾಣಗಳಿಗೆ ಎಂಟ್ರಿ – ಕೊಡಗು ಡಿಸಿ

    ಯಾರಿಗಾದರೂ ಹೇಳಿಕೊಳ್ಳಿ ಎಂದಿದ್ದ ಮಹಿಳಾ ಇನ್‌ಸ್ಪೆಕ್ಟರ್‌ ವರ್ತನೆ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಈ ಹಿನ್ನಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಅಮಾನತುಗೊಳಿಸಲಾಗಿದೆ.

  • ತುಂಬು ಗರ್ಭಿಣಿಯಾದ್ರೂ ಕರ್ತವ್ಯ ನಿರ್ವಹಿಸುತ್ತಿರೋ ಇನ್ಸ್‌ಪೆಕ್ಟರ್

    ತುಂಬು ಗರ್ಭಿಣಿಯಾದ್ರೂ ಕರ್ತವ್ಯ ನಿರ್ವಹಿಸುತ್ತಿರೋ ಇನ್ಸ್‌ಪೆಕ್ಟರ್

    – ಇದರಲ್ಲಿ ಏನು ವಿಶೇಷ ಇಲ್ಲ ಎಂದ್ರು

    ಹುಬ್ಬಳ್ಳಿ: ತುಂಬು ಗರ್ಭಿಣಿಯಾದರೂ ಕೂಡ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ರೊಬ್ಬರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

    ಪದ್ಮಮ್ಮ ಶಹರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್. ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದವರಾದ ಪದ್ಮಮ್ಮ, ಶಹರ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೀಗ ತುಂಬು ಗರ್ಭಿಣಿಯಾಗಿದ್ದಾರೆ. ಆದರೂ ಪದ್ಮಮ್ಮ ಅದ್ಯಾವುದನ್ನು ಲೆಕ್ಕಿಸದೆ ತಮ್ಮ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಂತೆ ಡ್ಯೂಟಿ ಮಾಡುತ್ತಿದ್ದಾರೆ.

    ಗುರುವಾರ ಪಾಕ್‍ ಪರ ಘೋಷಣೆ ಕೂಗಿದ ಆರೋಪಿಗಳ ಪರ ವಾದ ಮಂಡಿಸಲು ಬಂದಿದ್ದ ವಕೀಲರ ತಂಡಕ್ಕೆ ಇವರು ರಕ್ಷಣೆ ನೀಡುವ ಜವಾಬ್ದಾರಿಯನ್ನು ಹೊತ್ತಿದರು. ಈ ವೇಳೆ ಇವರನ್ನು ಮಾತನಾಡಿಸಲು ಮುಂದಾದಾಗ ಪದ್ಮಮ್ಮ ಅವರು ಪ್ರತಿಕ್ರಿಯೆ ನೀಡಲು ಹಿಂಜರಿದರು.

    ನಂತರ ಮಾತನಾಡಿದ ಅವರು, ಇದು ನನ್ನ ಕೆಲಸ. ಹೀಗಾಗಿ ಮಾಡುತ್ತಿದ್ದೇನೆ. ಇದರಲ್ಲಿ ಏನು ವಿಶೇಷ ಇಲ್ಲ ಎಂದರು. ಪದ್ಮಮ್ಮ ಅವರ ಕರ್ತವ್ಯ ಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.