Tag: women police

  • ಮಹಿಳಾ ಪೊಲೀಸರಿಂದ ಬುಲೆಟ್ ರ‍್ಯಾಲಿ

    ಮಹಿಳಾ ಪೊಲೀಸರಿಂದ ಬುಲೆಟ್ ರ‍್ಯಾಲಿ

    ಬೆಂಗಳೂರು: ಮಹಿಳೆಯರ ಸುರಕ್ಷತೆ ಮತ್ತು ಜಾಗೃತಿ ಮೂಡಿಸಲು ಬೆಂಗಳೂರು ಪೊಲೀಸರು ಬುಲೆಟ್ ರ‍್ಯಾಲಿ ಹಮ್ಮಿಕೊಂಡಿದ್ರು. ಮೈಸೂರು ರೋಡ್ ನ ಸಿಎಆರ್ ಆವರಣದಲ್ಲಿ ರ‍್ಯಾಲಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಚಾಲನೆ ನೀಡಿದ್ರು.

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ರ‍್ಯಾಲಿ ಆಯೋಜನೆಗೊಂಡಿದ್ದು, 20 ಮಹಿಳಾ ಪಿಎಸ್ ಐ ಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನಿಂದ ಹೊರಟು ಚಿಕ್ಕಬಳ್ಳಾಪುರದ ನಂದಿಬೆಟ್ಟದ ಬಳಿಯಿರುವ ಬೋಗನಂದಿಶ್ವರ ದೇವಸ್ಥಾನದ ತನಕ ಈ ರ‍್ಯಾಲಿ ಹೋಗಿ ವಾಪಸ್ಸಾಗಲಿದೆ.

    ಮಹಿಳೆಯರು ಸುರಕ್ಷಿತ ಎಂಬ ಭಾವನೆ ಮೂಡಿಸಲು ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ನಗರ ಪೊಲೀಸ್ ಆಯುಕ್ತ ರು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ರ‍್ಯಾಲಿಯಲ್ಲಿ ಭಾಗವಹಿಸಿ ಮಹಿಳಾ ಪಿಎಸ್ ಐ ಗಳ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಅಲ್ ದ ಬೆಸ್ಟ್ ಹೇಳಿದರು.

  • ದೇವಾಲಯದಲ್ಲಿ ದಲಿತ ಮಹಿಳಾ ಪೊಲೀಸ್‍ಗೆ ಅವಮಾನ: ವರದಿ ಕೇಳಿದ ಸರ್ಕಾರ

    ದೇವಾಲಯದಲ್ಲಿ ದಲಿತ ಮಹಿಳಾ ಪೊಲೀಸ್‍ಗೆ ಅವಮಾನ: ವರದಿ ಕೇಳಿದ ಸರ್ಕಾರ

    – ಪಬ್ಲಿಕ್ ಟಿವಿ ವರದಿಗೆ ಕೊನೆಗೂ ಸ್ಪಂದನೆ

    ಮಂಗಳೂರು: ದೇವಸ್ಥಾನದಿಂದ ದಲಿತ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಹೊರ ಹಾಕಿದ ಪ್ರಕರಣದ ವರದಿಯನ್ನು ಸರ್ಕಾರ ಕೇಳಿದೆ. ಈ ಮೂಲಕ ಪಬ್ಲಿಕ್ ಟಿವಿಯ ವರದಿಗೆ ಫಲಶೃತಿ ಸಿಕ್ಕಿದ್ದು, ನೊಂದ ಮಹಿಳಾ ಸಿಬ್ಬಂದಿಗೆ ನ್ಯಾಯ ಸಿಗುವ ಸೂಚನೆ ದೊರೆತಿದೆ.

    ಕಳೆದ ಸೋಮವಾರದಂದು ಮೂಡಬಿದ್ರೆ ತಾಲೂಕಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಷಷ್ಠಿ ಮಹೋತ್ಸವದ ದಿನ ದಲಿತ ಮಹಿಳೆಗೆ ಅವಮಾನಿಸಲಾಗಿತ್ತು. ಷಷ್ಠಿ ಮಹೋತ್ಸವದ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಬರುವ ಹಿನ್ನಲೆಯಲ್ಲಿ ಪೊಲೀಸರು ಭದ್ರತೆ ಕಲ್ಪಿಸಿದ್ದರು, ಈ ವೇಳೆ ಮೂಡಬಿದ್ರೆ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಕ್ಷೇತ್ರ ಒಳ ಪ್ರಾಂಗಣದಲ್ಲಿ ಕರ್ತವ್ಯ ನಿರತರಾಗಿದ್ದರು.

    ಆದರೆ ಅವರು ದಲಿತ ಮಹಿಳೆ ಎಂದು ತಿಳಿದ ಕ್ಷೇತ್ರದ ಅರ್ಚಕ ವೃಂದ ಆ ಮಹಿಳೆಯನ್ನು ನೀನು ಇಲ್ಲಿ ಡ್ಯೂಟಿ ಮಾಡಬೇಡ ಹೊರಗೆ ಹೋಗು ಎಂದು ಕಳಿಸಿದ್ದು, ಬಳಿಕ ಆಕೆ ಊಟಕ್ಕೆ ಬಂದಾಗಲೂ ಸಹ ಪಂಕ್ತಿ ಭೋಜನಕ್ಕೆ ಅವಕಾಶ ನೀಡದೆ ಪಂಕ್ತಿಯಿಂದಲೂ ಅರ್ಚಕ ವೃಂದ ಎಬ್ಬಿಸಿದ್ದರು. ಇದನ್ನು ಸ್ಥಳೀಯ ಭಕ್ತರು ವಿರೋಧಿಸಿದ್ದು, ಅವಮಾನವಾದ ಎಲ್ಲಾ ಪೊಲೀಸರು ಕ್ಷೇತ್ರದ ಭೋಜನ ಸ್ವೀಕರಿಸದೆ ಹೋಟೆಲ್ ನಲ್ಲಿ ಊಟ ಮಾಡಿದ್ದರು.

    ಈ ಕುರಿತು ನಿಮ್ಮ ಪಬ್ಲಿಕ್ ಟಿವಿ ಮೊದಲು ಸುದ್ದಿ ಪ್ರಸಾರ ಮಾಡಿತ್ತು. ಈ ವರದಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದ್ದು ಸಾಕಷ್ಟು ಚರ್ಚೆಯೂ ಆಗಿತ್ತು. ಬಳಿಕ ಈ ವಿಚಾರ ಮುಜರಾಯಿ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಗಮನಕ್ಕೆ ಬಂದು ತಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.

    ಇಂದು ಮುಜರಾಯಿ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಕಡಂದಲೆ ದೇವಸ್ಥಾನಕ್ಕೆ ಭೇಟಿ ನೀಡಿ ಅರ್ಚಕ ವೃಂದ ಹಾಗೂ ಆಡಳಿತ ಮಂಡಳಿಯಲ್ಲಿ ಮಾಹಿತಿ ಕಲೆ ಹಾಕಿದೆ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಸ್ಥಾನದಲ್ಲಿ ಬಹಳ ವರ್ಷಗಳಿಂದಲೂ ನೀಚ ಪದ್ದತಿಗಳಿದ್ದು, ಇಂದಿಗೂ ಪಂಕ್ತಿಬೇದ ಇದೆ ಎನ್ನುವುದು ಅಧಿಕಾರಿಗಳಿಗೆ ಇಂದು ಖಚಿತಗೊಂಡಿದೆ. ಜೊತೆಗೆ ಈ ದೇವಸ್ಥಾನದಲ್ಲಿ ಎಷ್ಟು ಅರ್ಚಕರಿದ್ದಾರೆ, ಯಾವ ಯಾವ ಅರ್ಚಕರು ಏನು ಕೆಲಸ ಮಾಡುತ್ತಿದ್ದಾರೆ ಅನ್ನುವ ಮಾಹಿತಿಯೇ ಸರಿಯಾಗಿ ತನಿಖಾ ತಂಡಕ್ಕೆ ಸಿಕ್ಕಿಲ್ಲ.

    ಇದರ ಜೊತೆಗೆ ಘಟನೆಯ ಬಗ್ಗೆಯೂ ಸಾಕಷ್ಟು ಮಾಹಿತಿ ಕಲೆ ಹಾಕಿರುವ ತನಿಖಾ ತಂಡ ಶೀಘ್ರದಲ್ಲೇ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದೆ. ಈ ಘಟನೆಯ ಬಗ್ಗೆ ಸರಿಯಾದ ತನಿಖೆ ನಡೆದು ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೆ ಈ ದೇವಸ್ಥಾನದಲ್ಲಿದ್ದ ಅನಿಷ್ಟ ಪದ್ದತಿಗಳೆಲ್ಲ ಕೊನೆಗೊಳ್ಳಬಹುದು ಎನ್ನುವುದು ಸ್ಥಳೀಯ ಹಿರಿಯರೊಬ್ಬರ ಮಾತು.

  • ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ

    ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ

    ಮಂಗಳೂರು: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

    ಮಂಗಳೂರಿನ ಮೂಡಬಿದ್ರೆ ತಾಲೂಕಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿನ ಅರ್ಚಕರು ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಗೆ ಕಳುಹಿಸಿದ್ದಾರೆ.

    ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಈ ದೇವಸ್ಥಾನದಲ್ಲಿ ಕಳೆದ ಸೋಮವಾರ ಷಷ್ಠಿ ಮಹೋತ್ಸವ ನಡೆದಿದ್ದು, ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ಸುಮಾರು 25 ಸಾವಿರ ಭಕ್ತರು ಈ ಷಷ್ಠಿ ಮಹೋತ್ಸವದಲ್ಲಿ ಭಾಗಿಯಾಗಿದ್ದರಿಂದ ಸ್ಥಳೀಯ ಮೂಡಬಿದ್ರೆ ಪೊಲೀಸರು ಸಂಪೂರ್ಣ ಭದ್ರತೆ ನೀಡಿದ್ದು, ಶಾಂತಿ ಸುವ್ಯವಸ್ಥೆಗೆ ಸಕಲ ಬಂದೋಬಸ್ತ್ ನಡೆಸಿದ್ದರು.

    ದೇವಸ್ಥಾನದ ಒಳಾಂಗಣದಲ್ಲಿ ಭಕ್ತರ ಜನ ಸಂದಣಿಯನ್ನು ನಿಯಂತ್ರಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ದಲಿತ ಸಮುದಾಯದವರು ಎಂದು ಗೊತ್ತಾಗಿದ್ದೇ ತಡ, ಅಲ್ಲಿನ ಅರ್ಚಕ ವೃಂದದವರು ತಕ್ಷಣ ಆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರಕ್ಕೆ ಕಳಿಸಿದ್ದಾರೆ. ಪಾರ್ಕಿಂಗ್ ಸ್ಥಳದಲ್ಲಿ ಬಂದೋ ಬಸ್ತ್ ಮಾಡಿ, ದೇವಸ್ಥಾನದ ಒಳಗೆ ನಿಮ್ಮನ್ನು ಬಿಟ್ಟದ್ದು ಯಾರು? ಕ್ಷೇತ್ರಕ್ಕೆ ನಿಮ್ಮಿಂದ ಮೈಲಿಗೆಯಾಗಿದೆ ಎಂದು ಸಾವಿರಾರು ಭಕ್ತರ ಮುಂದೆಯೇ ಅವಮಾನಿಸಿ ಹೊರಗಡೆ ಕಳುಹಿಸಿದ್ದಾರೆ.

    ಇದನ್ನು ಕೆಲವರು ವಿರೋಧಿಸಿದರೂ ಅರ್ಚಕ ವೃಂದ ಕ್ಯಾರೇ ಎನ್ನದೆ ದಲಿತ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ್ದಾರೆ. ಮಾತ್ರವಲ್ಲದೆ ಭೋಜನ ವ್ಯವಸ್ಥೆಯಲ್ಲೂ ತಾರತಮ್ಯ ನಡೆಸಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಥಾನದ ಪೂಜೆ ಬಳಿಕ ಬ್ರಾಹ್ಮಣ ಸಮುದಾಯಕ್ಕೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದ್ದು, ಅವರು ಊಟ ಮಾಡಿದ ನಂತರ ಉಳಿದ ಜಾತಿಯ ಭಕ್ತರಿಗೆ ಊಟ ನೀಡಲಾಗಿದೆ.

    ಸಹಪಂಕ್ತಿ ಭೋಜನದ ವ್ಯವಸ್ಥೆ ಆಗಬೇಕೆಂದು ಪೇಜಾವರ ಶ್ರೀಗಳು ಸೇರಿದಂತೆ ಎಲ್ಲರೂ ಒತ್ತಾಯ ಮಾಡುತ್ತಿದ್ದರೂ ಈ ಕ್ಷೇತ್ರದಲ್ಲಿ ಇಂತಹ ಜಾತಿ ಆಧಾರದಲ್ಲಿ ಭೋಜನ ವ್ಯವಸ್ಥೆ ಮಾಡೋದು ಇಂದಿಗೂ ಜೀವಂತವಾಗಿ ಉಳಿದಿದೆ. ಮಾತ್ರವಲ್ಲದೆ ದೇವಳಕ್ಕೆ ಬರುವ ಭಕ್ತರನ್ನು ಇಲ್ಲಿನ ಅರ್ಚಕ ವೃಂದ ಜಾತಿ ಆಧಾರದಲ್ಲಿ ಗುರುತಿಸಿ ಸದಾ ಹೀಯಾಳಿಸುತ್ತಿರುವುದು ಭಕ್ತರ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿದೆ. ಭಕ್ತರು ನೀಡುವ ಕಾಣಿಕೆ ಹಣಕ್ಕೆ ಯಾವುದೇ ಜಾತಿಯನ್ನು ನೋಡದೆ ಕಾಣಿಕೆ ಸಂಗ್ರಹಿಸುವ ಅರ್ಚಕರು, ಕ್ಷೇತ್ರ ಪ್ರವೇಶ, ಭೋಜನ ವ್ಯವಸ್ಥೆಗೆ ಜಾತಿ ಆಧಾರದಲ್ಲಿ ನೋಡುವುದು ಸರಿಯಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹೋಟೇಲಿನಲ್ಲಿ ಪೊಲೀಸರ ಊಟ
    ಷಷ್ಠಿ ಮಹೋತ್ಸವದ ಸಂದರ್ಭ ಸುವ್ಯವಸ್ಥೆಗೆ ನಿಯೋಜನೆಗೊಂಡ ತಮ್ಮ ಸಹದ್ಯೋಗಿ ದಲಿತ ಮಹಿಳಾ ಸಿಬ್ಬಂದಿಗೆ ಅವಮಾನ ಮಾಡಿದ ದೇವಸ್ಥಾನದ ಅರ್ಚಕ ವೃಂದದ ನಡೆಯಿಂದ ಹಾಗೂ ಭೋಜನದಲ್ಲೂ ಪಂಕ್ತಿ ಭೇದ ಮಾಡಿದ ಅರ್ಚಕರ ವರ್ತನೆಯಿಂದ ಕರ್ತವ್ಯನಿರತ ಎಲ್ಲ ಪೊಲೀಸರು ಸ್ಥಳೀಯ ಹೋಟೇಲ್‍ನಲ್ಲಿ ಮಧ್ಯಾಹ್ನದ ಊಟ ಮಾಡಿದ್ದರು. ದೇವಸ್ಥಾನದಲ್ಲಿ 10 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದರೂ ಈ ಘಟನೆಯಿಂದ ಆಕ್ರೋಶಗೊಂಡ ಸ್ವಾಭಿಮಾನಿ ಭಕ್ತರೂ ಕ್ಷೇತ್ರದ ಭೋಜನ ಸ್ವೀಕರಿಸದೇ ಅವರವರ ಮನೆಯಲ್ಲಿ ಊಟ ಮಾಡಿದ್ದು, ಅರ್ಚಕ ವೃಂದದ ಕೃತ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.

  • ಡಿಸಿಎಂ ಆಗಮನದ ಬಂದೋಬಸ್ತಿಗೆ ಬಿಸಿಲಲ್ಲಿ ನಿಂತ ತುಂಬು ಗರ್ಭಿಣಿ ಪೇದೆ!

    ಡಿಸಿಎಂ ಆಗಮನದ ಬಂದೋಬಸ್ತಿಗೆ ಬಿಸಿಲಲ್ಲಿ ನಿಂತ ತುಂಬು ಗರ್ಭಿಣಿ ಪೇದೆ!

    ಮಂಗಳೂರು: ತುಂಬು ಗರ್ಭಿಣಿಯಾಗಿದ್ದ ಪೊಲೀಸ್ ಪೇದೆಯೊಬ್ಬರನ್ನು ಡಿಸಿಎಂ ಆಗಮನದ ವೇಳೆ ಬಂದೋಬಸ್ತಿಗೆ ನಿಯೋಜಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಡಿಸಿಎಂ ಅಶ್ವಥ್ ನಾರಾಯಣ್ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಮಣಿಪಾಲಕ್ಕೆ ರಸ್ತೆ ಮೂಲಕ ತೆರಳಿದ್ದರು. ಈ ಸಂದರ್ಭದಲ್ಲಿ ಅವರಿಗೆ ಬಂದೋಬಸ್ತ್ ನೀಡಲು ಮುಲ್ಕಿ ಪೊಲೀಸ್ ಠಾಣೆಯಿಂದ ಗರ್ಭಿಣಿ ಪೇದೆಯನ್ನು ನಿಯುಕ್ತಿಗೊಳಿಸಲಾಗಿತ್ತು. ತುಂಬು ಗರ್ಭಿಣಿಯಾಗಿದ್ದ ಪೇದೆ ರಸ್ತೆಯಲ್ಲಿ ಲಾಠಿ ಹಿಡಿದು ನಿಂತಿರುವ ಚಿತ್ರವನ್ನು ಸಾರ್ವಜನಿಕರು ಮೊಬೈಲ್‍ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

    ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಗರ್ಭಿಣಿ ಪೇದೆಯನ್ನು ಬಂದೋಬಸ್ತಿಗೆ ನಿಯೋಜಿಸಿದ ಮುಲ್ಕಿ ಠಾಣಾಧಿಕಾರಿಯಿಂದ ವರದಿ ನೀಡುವಂತೆ ಆದೇಶಿಸಿದ್ದಾರೆ.

  • ತಲೆಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಮಹಿಳಾ ಪೊಲೀಸ್

    ತಲೆಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದ ಮಹಿಳಾ ಪೊಲೀಸ್

    ತಿರುವನಂತಪುರಂ: ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ತಲೆಕೂದಲನ್ನು ದಾನ ಮಾಡಿ ಮಾದರಿಯಾಗಿದ್ದಾರೆ.

    44 ವರ್ಷದ ಪೊಲೀಸ್ ಅಧಿಕಾರಿ ಅಪರ್ಣಾ ಲವಕುಮಾರ್ ಅವರು ತಮ್ಮ ಉದ್ದನೆಯ ಕೂದಲನ್ನು ದಾನ ಮಾಡಿದ್ದು, ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಾರೆ.

    ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅವರು ತಮ್ಮ ಉದ್ದನೆಯ ಕೂದಲಿಗೆ ಹೆಚ್ಚು ಖ್ಯಾತರಾಗಿದ್ದರು. ಆದರೆ ದಿಢೀರ್ ಎಂದು ಅವರು ಕೂದಲು ಕತ್ತರಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಹಾಗೂ ಪೊಲೀಸರ ನಡುವಿನ ಅಂತರ ಕಡಿಮೆಯಾಗುತ್ತಿದ್ದು, ಇದನ್ನು ಮತ್ತಷ್ಟು ಸುಧಾರಣೆ ಮಾಡುವ ಅಗತ್ಯವಿದೆ. ನನಗೆ ಸೌಂದರ್ಯ ಮುಖ್ಯವಲ್ಲ. ಈ ಹಿಂದೆ ಕ್ಯಾನ್ಸರ್ ರೋಗಿಗಳಿಗೆ ಅರ್ಧ ಕೂದಲನ್ನು ದಾನ ಮಾಡಿದ್ದೆ. ಆದರೆ ಈ ಬಾರಿ ಪೂರ್ತಿ ಕೂದಲನ್ನು ದಾನ ಮಾಡಿದ್ದೇನೆ ಎಂದರು.

    ಅಪರ್ಣಾ ಅವರ ಈ ಕಾರ್ಯಕ್ಕೆ ಇಲಾಖೆ ಕೂಡ ಸಾಥ್ ನೀಡಿದ್ದು, ಮೇಲಾಧಿಕಾರಿಗಳು ಇದಕ್ಕೆ ಅನುಮತಿಯನ್ನು ನೀಡಿದ್ದಾರೆ. ಕೇವಲ ಕೂದಲಷ್ಟೇ ಅಲ್ಲದೇ 2008 ರಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೋಗಿಯೊಬ್ಬರು ಆಸ್ಪತ್ರೆಯ ಬಿಲ್ ನೀಡಲು ವಿಫಲವಾದ ಸಂದರ್ಭದಲ್ಲಿ ಅಪರ್ಣಾ ಅವರು ತಮ್ಮ ಕೈಲಿದ್ದ ಬಂಗಾರದ ಬಳೆಯನ್ನು ನೀಡಿ ಆರ್ಥಿಕ ಸಹಾಯವನ್ನು ಮಾಡಿದ್ದರು. ಇತ್ತೀಚೆಗಷ್ಟೇ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ 5ನೇ ತರಗತಿಯ ಬಾಲಕಿ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದನ್ನು ಕಂಡು ಕೂಡಲು ದಾನ ಮಾಡುವ ನಿರ್ಧಾರ ಮಾಡಿದ್ದರು.

  • ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ – ರೈತ ಸಂಘದ ಉಪಾಧ್ಯಕ್ಷ ಬಂಧನ

    ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ – ರೈತ ಸಂಘದ ಉಪಾಧ್ಯಕ್ಷ ಬಂಧನ

    -ರೈತ ಸಂಘದ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

    ಮೈಸೂರು: ಕೇಸಿನ ವಿಚಾರಣೆ ಸಂಬಂಧ ಪೊಲೀಸ್ ಠಾಣೆಗೆ ಹೋದ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಲೋಕೇಶ್ ರಾಜೇ ಅರಸ್, ಮಹಿಳಾ ಪೊಲೀಸ್ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಂಧಿಸಲಾಗಿದೆ.

    ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಬೆಟ್ಟದಪುರ ಠಾಣೆಯಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ರಾಜೇ ಅರಸ್ ಬಂಧನ ಖಂಡಿಸಿ ರೈತ ಸಂಘ ಕಾರ್ಯಕರ್ತರು ಅಹೋರಾತ್ರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಠಾಣೆ ಮುಂದೆ ಧರಣಿ ನಡೆಸಿದ್ದಾರೆ.

    ಕೇಸಿನ ವಿಚಾರಣೆ ಬಗ್ಗೆ ಠಾಣೆಗೆ ಹೋದಾಗ ಮಹಿಳಾ ಪೇದೆ ಹಾಗೂ ಲೋಕೇಶ್ ರಾಜೇ ಅರಸ್ ನಡುವೆ ಮಾತಿಗೆ ಮಾತು ಬೆಳೆದಿದೆ. ಆಗ ಲೋಕೇಶ್ ತಮ್ಮ ಜೊತೆ ಅನುಚಿತವಾಗಿ ನಡೆದುಕೊಂಡರು ಎಂದು ಮಹಿಳಾ ಪೇದೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಲೋಕೇಶ್ ರಾಜೇ ಅರಸ್‍ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

    ಪೊಲೀಸರ ಕ್ರಮ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿ ಹಲವರು ಭಾಗಿಯಾಗಿದ್ದರು. ಸ್ಥಳಕ್ಕೆ ಅಡಿಷನಲ್ ಎಸ್‍ಪಿ ಸ್ನೇಹಾ ಸೇರಿ  ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

  • ‘ಏ ಹುಡ್ಗ ಯಾಕಿಂಗ್ ಕಾಡ್ತಿ’ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಮಹಿಳಾ ಪೊಲೀಸ್

    ‘ಏ ಹುಡ್ಗ ಯಾಕಿಂಗ್ ಕಾಡ್ತಿ’ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಮಹಿಳಾ ಪೊಲೀಸ್

    ಚಿಕ್ಕಮಗಳೂರು: ನಗರದ ಡಿ.ಆರ್ ಮೈದಾನದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಡಿ.ಆರ್ ಮೈದಾನದಲ್ಲಿ ಇತ್ತೀಚೆಗೆ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಆಯೋಜಿಸಲಾಗಿತ್ತು. ಈ ವೇಳೆ ಸಂಭ್ರಮದಲ್ಲಿದ್ದ ಮಹಿಳಾ ಪಿ.ಎಸ್.ಐ ಹಾಗೂ ಪೇದೆಗಳು ‘ಹೇ ಹುಡುಗ ಯಾಕಿಂಗ್ ಕಾಡ್ತಿ’ ಎನ್ನುವ ಹಾಡಿಗೆ ಹಜ್ಜೆ ಹಾಕಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿಯೇ ಇದ್ದ ಕೆಲವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಮಹಿಳಾ ಪೊಲೀಸ್ ಪೇದೆಗಳು ಮೈದಾನದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಜಾಗದಲ್ಲಿ ಧೂಳು ಕಾಣಿಸಿಕೊಂಡಿತ್ತು. ಇದ್ದರಿಂದಾಗಿ ಕೆಲವರು ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ಹೆಜ್ಜೆ ಹಾಕಿದ್ದಾರೆ. ನೀಲಿ ಜರ್ಸಿ ಹಾಗೂ ಕೆಂಪು ಟಿಶರ್ಟ್ ತೊಟ್ಟ ಚಿಕ್ಕಮಗಳೂರಿನ ಪೊಲೀಸ್ ಸಿಬ್ಬಂದಿಯ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳಾ ಪೊಲೀಸರು ಸೀರೆ ಉಡುವಂತಿಲ್ಲ, ಕೈ ತುಂಬ ಬಳೆ ತೊಡುವಂತಿಲ್ಲ: ಹೊಸ ಡ್ರೆಸ್ ಕೋಡ್‍ನಲ್ಲಿ ಏನಿದೆ?

    ಮಹಿಳಾ ಪೊಲೀಸರು ಸೀರೆ ಉಡುವಂತಿಲ್ಲ, ಕೈ ತುಂಬ ಬಳೆ ತೊಡುವಂತಿಲ್ಲ: ಹೊಸ ಡ್ರೆಸ್ ಕೋಡ್‍ನಲ್ಲಿ ಏನಿದೆ?

    ಬೆಂಗಳೂರು: ಕರ್ತವ್ಯ ನಿರತ ಮಹಿಳಾ ಪೊಲೀಸರು ಇನ್ನು ಮುಂದೆ ಸೀರೆಯ ಬದಲು ಪ್ಯಾಂಟು, ಶರ್ಟ್ ಕಡ್ಡಾಯವಾಗಿ ಧರಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸುತ್ತೋಲೆ ಹೊರಡಿಸಿದ್ದಾರೆ.

    ಈ ಸಂಬಂಧ ಅಕ್ಟೋಬರ್ 16 ರಂದು ಸುತ್ತೋಲೆ ಹೊರಡಿಸಲಾಗಿದ್ದು, ಈಗ ಇಲಾಖೆಯಲ್ಲೇ ಪರ ವಿರೋಧ ಚರ್ಚೆ ಆರಂಭವಾಗಿದೆ. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮತ್ತು ಕೆಲವು ಅಧಿಕಾರಿಗಳ ಸೂಚನೆಯ ಮೇರೆಗೆ ಮಹಿಳಾ ಪೊಲೀಸರಿಗೆ ಖಾಕಿ ಸೀರೆಯ ಬದಲು ಪ್ಯಾಂಟು-ಶರ್ಟ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಇದರಿಂದ ಅಪರಾಧಗಳನ್ನ ತಡೆಯಲು ಸುಲಭವಾಗುತ್ತದೆ ಎಂದು ಎಂದು ಡಿಜಿ ನೀಲಮಣಿ ಎನ್ ರಾಜು ಹೇಳಿದ್ದಾರೆ.

    ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸರಗಳ್ಳತನ ಇತ್ಯಾದಿ ಅಪರಾಧಗಳನ್ನು ಎಸಗುವ ಆರೋಪಿಗಳನ್ನು ಹಿಡಿಯಲು ಸೀರೆ ತೊಟ್ಟ ಮಹಿಳಾ ಸಿಬ್ಬಂದಿಗೆ ಓಡಲು ಕಷ್ಟವಾಗುತ್ತದೆ ಇದರಿಂದ ಖಾಕಿ ಸೀರೆಯ ಬದಲು ಪ್ಯಾಂಟು-ಶರ್ಟ್ ಮತ್ತು ಬೂಟನ್ನು ಧರಿಸಿದ್ರೆ ಹೆಚ್ಚು ಅನುಕೂಲವಾಗುತ್ತದೆ ಎನ್ನುವ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.

    ಈ ಸಂಬಂಧ ಹಿರಿಯ ಅಧಿಕಾರಿಗಳು ಸೇರಿದಂತೆ ಮಹಿಳಾ ಪೊಲೀಸರ ಜೊತೆ ಮಾತುಕತೆ ನಡೆಸಿದ್ದೇವೆ. ಕರ್ತವ್ಯ ನಿರ್ವಹಿಸುವ ಮಹಿಳಾ ಪೊಲೀಸರು ಪ್ಯಾಂಟು, ಶರ್ಟ್ ಧರಿಸುವುದು ಕಡ್ಡಾಯ ಎನ್ನುವ ಕಾನೂನು ಮೊದಲಿನಿಂದಲೇ ಇದೆ. ಆದರೆ ಅದನ್ನು ಕೆಲವು ಬದಲಾವಣೆಯೊಂದಿಗೆ ಈಗ ಜಾರಿಗೆ ತರುತ್ತಿದ್ದೇವೆ ಅಷ್ಟೇ ಎಂದು ನೀಲಮಣಿ ರಾಜು ಸ್ಪಷ್ಟನೆ ನೀಡಿದ್ದಾರೆ.

    ಹೊಸ ಡ್ರೆಸ್ ಕೋಡ್‍ನಲ್ಲಿ ಹೇಗಿರಬೇಕು?

    ಪ್ಯಾಂಟು-ಶರ್ಟು, ಬೆಲ್ಟ್ ಮತ್ತು ಬೂಟ್ಸ್ ಇರುವ ಸಮವಸ್ತ್ರವನ್ನು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಧರಿಸಬೇಕು. ತಲೆ ಕೂದಲನ್ನು ಇಳಿಬಿಟ್ಟು ಓಡಾಡುವಂತಿಲ್ಲ, ಹೂವನ್ನ ಮುಡಿಯುವಂತಿಲ್ಲ, ಕಪ್ಪು ಬಣ್ಣವನ್ನ ಬಿಟ್ಟರೆ ಬೇರೆ ಯಾವ ಬಣ್ಣವನ್ನು ಕೂದಲಿಗೆ ಹಾಕುವಂತಿಲ್ಲ. ಕೂದಲನ್ನು ಗಂಟು ಕಟ್ಟಿ, ಕಪ್ಪು ಬಣ್ಣದ ನೆಟ್ ಬ್ಯಾಂಡ್ ಕಟ್ಟಿ ಹೇರ್ ಕ್ಲಿಪ್ ಹಾಕಬೇಕು. ಚಿಕ್ಕದಾದ ಕಿವಿಯೋಲೆ ಹಾಕಬಹುದು. ಬಿಂದಿ ಚಿಕ್ಕದಾಗಿರಬೇಕು. ಕೈಗಳಿಗೆ ತಲಾ ಒಂದು ಬಳೆಯನ್ನ ಹಾಕಬಹುದು.

    ಸಿಬ್ಬಂದಿಯಿಂದ ವಿರೋಧ:
    ಹೊಸ ಡ್ರೆಸ್ ಕೋಡ್‍ಗೆ ಕೆಲ ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದ್ದು, ದಪ್ಪಗಿರುವ ಮಹಿಳೆಯರು ಪ್ಯಾಂಟು ಶರ್ಟ್ ಹಾಕಿಕೊಂಡು ಓಡಾಡುವುದು ಕಷ್ಟವಾಗುತ್ತದೆ ಎಂದಿದ್ದಾರೆ. ಅಲ್ಲದೇ 40 ವರ್ಷ ದಾಟಿದ ಮಹಿಳಾ ಸಿಬ್ಬಂದಿಗೆ ಈ ಆದೇಶದಿಂದ ರಿಯಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
  • ಚಾಕಲೇಟ್ ಕದಿಯಲು ಹೋಗಿ ರೇಡ್‍ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮಹಿಳಾ ಪೇದೆ!

    ಚಾಕಲೇಟ್ ಕದಿಯಲು ಹೋಗಿ ರೇಡ್‍ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮಹಿಳಾ ಪೇದೆ!

    ಚೆನ್ನೈ: ಪೊಲೀಸ್ ಪೇದೆಯೊಬ್ಬಳು ಸೂಪರ್ ಮಾರ್ಕೆಟ್‍ನಲ್ಲಿ ಚಾಕಲೇಟ್ ಕದಿಯುತ್ತ ರೇಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ತಮಿಳುನಾಡಿನ ಎಗ್ಮೋರ್ ನಲ್ಲಿ ನಡೆದಿದೆ.

    ಎಂ.ನಂದಿನಿ (34) ಕಳ್ಳತನ ಮಾಡಿ ಸಿಕ್ಕಿ ಬಿದ್ದ ಪೊಲೀಸ್ ಪೇದೆ. ಚಾಕಲೇಟ್ ಕದಿಯುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ಅದನ್ನು ನೋಡಿದ ಮಾಲೀಕ ತಕ್ಷಣ ಪೊಲೀಸ್ ಪೇದೆಯನ್ನು ವಿಚಾರಿಸಿದ್ದಾರೆ.

    ಆಗಿದ್ದು ಏನು?
    ನಂದಿನಿ ಬುಧವಾರ ಸೂಪರ್ ಮಾರ್ಕೆಟ್ ಗೆ ಹೋಗಿದ್ದು, ಅಲ್ಲಿ ಚಾಕಲೇಟ್ ಮತ್ತು ಸೊಳ್ಳೆ ಕ್ರಿಮ್ ಅನ್ನು ಕದ್ದು ಬ್ಯಾಗಿನಲ್ಲಿ ಹಾಕಿಕೊಂಡಿದ್ದಾಳೆ. ಆಕೆಯನ್ನು ವಿಚಾರಿಸಿದಾಗ ಹೆದರಿ ಓಡಲು ಶುರುಮಾಡಿದ್ದಾಳೆ. ಮಾರ್ಕೆಟ್ ಸಿಬಂದಿಯೊಬ್ಬರೂ ಅವಳನ್ನು ಹಿಂಬಾಲಿಸಿ ಆಕೆಯ ಬ್ಯಾಗಿನಲ್ಲಿದ್ದ ಚಾಕಲೇಟ್ ಮತ್ತು ಸೊಳ್ಳೆ ಕ್ರಿಮ್ ಪಡೆದುಕೊಂಡಿದ್ದಾರೆ.

    ಸಾಕ್ಷಿ ಸಮೇತ ಸಿಕ್ಕಿ ಬಿದ್ದ ಆಕೆ ತನ್ನ ವಿರುದ್ಧ ಪೊಲೀಸ್ ದೂರು ನೀಡಬೇಡಿ ಎಂದು ಹೇಳಿ ಕ್ಷಮೆಯಾಚಿಸಿದ್ದಾಳೆ. ಹಾಗಾಗಿ ಮಾಲೀಕರು ಆಕೆಯ ಮೇಲೆ ದೂರು ನೀಡಿರಲಿಲ್ಲ. 115 ರೂ. ಮೌಲ್ಯದ ವಸ್ತುವನ್ನು ಕದ್ದ ಹಿನ್ನೆಲೆಯಲ್ಲಿ ಆಕೆ ಪತ್ರದ ಮೂಲಕ ಕ್ಷಮೆ ಕೇಳಿಕೊಂಡಿದ್ದಾಳೆ.

    ಘಟನೆಯ ನಂತರ ನಂದಿನಿ ಈ ವಿಚಾರವನ್ನು ಪತಿಗೆ ತಿಳಿಸಿದ್ದಾಳೆ. ಬಳಿಕ ನಂದಿನಿಯ ಪತಿ ಮೂವರ ಜೊತೆ ಆಗಮಿಸಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಅಂಗಡಿಯ ಸಿಬ್ಬಂದಿ ಗಲಾಟೆಯನ್ನು ಬಿಡಿಸಲು ಹೋದಾಗ ಅವರ ಮೇಲೆಯೂ ಇವರು ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸುತ್ತಿರುವ ದೃಶ್ಯಗಳು ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಹಲ್ಲೆ ನಡೆದ ಬಳಿಕ ಅಂಗಡಿಯ ಮಾಲೀಕನಿಂದ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆ ಮಹಿಳಾ ಪೊಲೀಸ್ ಪೇದೆಯನ್ನು ಕೆಲಸದಿಂದ ಅಮಾನತುಗೊಳಿಸಿ, ಆಕೆಯ ಪತಿಯನ್ನು ಬಂಧಿಸಿದ್ದಾರೆ.

  • ಪುಂಡ ಯುವಕನಿಗೆ ಮಹಿಳಾ ಸಿಬ್ಬಂದಿಯಿಂದ ಬಿತ್ತು ಸಖತ್ ಗೂಸಾ

    ಪುಂಡ ಯುವಕನಿಗೆ ಮಹಿಳಾ ಸಿಬ್ಬಂದಿಯಿಂದ ಬಿತ್ತು ಸಖತ್ ಗೂಸಾ

    ಮೈಸೂರು: ಗಾಂಜಾ ಮತ್ತು ಮದ್ಯದ ಅಮಲಿನಲ್ಲಿ ಅನುಚಿತವಾಗಿ ವರ್ತಿಸಿದ ಪುಂಡ ಯುವಕನಿಗೆ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ ನೀಡಿದ ಸಖತ್ ಗೂಸಾದ ವಿಡಿಯೋ ಈಗ ವೈರಲ್ ಆಗಿದೆ.

    ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ ಜಲಪಾತದಲ್ಲಿ ಬಳಿ ಈ ಘಟನೆ ನಡೆದಿದೆ. ಜಲಪಾತದ ಬಳಿ ಅರಣ್ಯ ಇಲಾಖೆಯಿಂದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಹಿಳಾ ಸಿಬ್ಬಂದಿ ತನ್ನ ಜೊತೆ ಅನುಚಿತವಾಗಿ ವರ್ತಿಸಿದ ಸಾಲೇಕೊಪ್ಪಲು ಗ್ರಾಮದ ಸುನೀಲ್ ಗೆ ಸರಿಯಾಗಿ ಏಟು ನೀಡಿದ್ದಾರೆ.

    ಜಲಪಾತದ ಬಳಿ ಸುನೀಲ್ ತನ್ನ ಸ್ನೇಹಿತನ ಜೊತೆ ಗಾಂಜಾ ಹೊಡೆದು ಮದ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದನು. ಇದನ್ನು ಸ್ಥಳದಲ್ಲಿದ್ದ ಮಹಿಳಾ ಸಿಬ್ಬಂದಿ ಪ್ರಶ್ನಿಸಿದ್ದಾರೆ. ಆಗ ಸುನೀಲ್, ಮಹಿಳಾ ಸಿಬ್ಬಂದಿ ಜೊತೆಯೂ ಅನುಚಿತವಾಗಿ ವರ್ತಿಸಿದ್ದಾನೆ. ಆಗ ಮಹಿಳಾ ಸಿಬ್ಬಂದಿ ಸುನೀಲ್ ಕಪಾಳಕ್ಕೆ ಎರಡು ಬಿಗಿದು ಕೆ.ಆರ್ ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.