Tag: women

  • ‘ಶಕ್ತಿ’ ಯೋಜನೆಯ ಮಹಿಳೆಯರ ಉಚಿತ ಟಿಕೆಟ್‌ ಹೇಗಿರುತ್ತೆ ಗೊತ್ತಾ?

    ‘ಶಕ್ತಿ’ ಯೋಜನೆಯ ಮಹಿಳೆಯರ ಉಚಿತ ಟಿಕೆಟ್‌ ಹೇಗಿರುತ್ತೆ ಗೊತ್ತಾ?

    ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ (Congress Guarantee) ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ (Free Bus Travel) ಯೋಜನೆ ‘ಶಕ್ತಿ’ಗೆ (Shakti Scheme) ರಾಜ್ಯಾದ್ಯಂತ ಇಂದು (ಭಾನುವಾರ) ಚಾಲನೆ ಸಿಗಲಿದೆ. ಇದೇ ಹೊತ್ತಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಫ್ರೀ ಬಸ್‌ ಪ್ರಯಾಣದ ಟಿಕೆಟ್‌ ಬಿಡುಗಡೆ ಮಾಡಿದೆ. ಆ ಟಿಕೆಟ್‌ ಹೇಗಿದೆ ಗೊತ್ತಾ?

    ಮಹಿಳೆಯರಿಗಾಗಿ ಘೋಷಿಸಿದ್ದ ‘ಶಕ್ತಿ’ ಯೋಜನೆ ಚಾಲನೆಗೆ ಕ್ಷಣಗಣನೆ ಶುರುವಾಗಿದ್ದು, ಯೋಜನೆ ಜಾರಿಗೂ ಮೊದಲು ಸಾರಿಗೆಯ ನಾಲ್ಕು ನಿಗಮಗಳು ತಯಾರಿ ನಡೆಸಿದ್ದವು. ಕೆಎಸ್‌ಆರ್‌ಟಿಸಿ ಯಿಂದಲೂ ಉಚಿತ ಟಿಕೆಟ್‌ ತಯಾರಿ ನಡೆದಿತ್ತು. ಇದನ್ನೂ ಓದಿ: ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

    ಹೇಗಿದೆ ಟಿಕೆಟ್?
    ಸರ್ಕಾರಿ ಬಸ್‌ಗಳಲ್ಲಿ ಈವರೆಗೆ ನೀಡುತ್ತಿದ್ದ ಟಿಕೆಟ್‌ಗಳು ಸಾಮಾನ್ಯವಾಗಿ ಬಿಳಿ ಬಣ್ಣದ್ದಾಗಿತ್ತು. ಈಗ ಮಹಿಳೆಯರಿಗೆ ವಿಶೇಷ ಟಿಕೆಟ್‌ ರೂಪುಗೊಳಿಸಲಾಗಿದೆ. ಟಿಕೆಟ್‌ ಪಿಂಕ್‌ ಬಣ್ಣದಿಂದ ಕೂಡಿದೆ. ಮಹಿಳೆಯರ ಪ್ರಯಾಣದ ವೇಳೆ ನಿರ್ವಾಹಕರು ಪಿಂಕ್‌ ಬಣ್ಣದ ಟಿಕೆಟ್‌ ನೀಡುತ್ತಾರೆ.

    ಶಕ್ತಿ ಯೋಜನೆಯಡಿ ಮಹಿಳಾ ಉಚಿತ ಟಿಕೆಟ್‌ ಎಂದು ನಮೂದಿಸಿದೆ. ಎಲ್ಲಿಂದ….. ಎಲ್ಲಿಗೆ….. ಮೊತ್ತ: 0 ರೂ. ಎಂದು ಟಿಕೆಟ್‌ ಮುದ್ರಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ- ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ

    ವಿಧಾನಸೌಧದ ಮುಂಭಾಗ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ. 18,609 ಬಸ್‌ಗಳು ಉಚಿತ ಪ್ರಯಾಣಕ್ಕೆ ಲಭ್ಯ ಇವೆ. 41.80 ಲಕ್ಷ ಮಹಿಳೆಯರು ಈ ಸೌಲಭ್ಯದ ಫಲಾನುಭವಿಗಳು ಎಂದು ಅಂದಾಜಿಸಲಾಗಿದೆ.

  • ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

    ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

    ಬೆಂಗಳೂರು: ಸರ್ಕಾರಿ ಬಸ್‍ (Government Bus) ಗಳಲ್ಲಿ ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಬಹುದು. ಈ ಮಧ್ಯೆ ಖಾಸಗಿ ಬಸ್ ಗಳಲ್ಲಿಯೂ ಫ್ರೀ ಬಸ್ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದ್ದು, ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಗೆ ಈ ಫ್ರೀ ಪ್ರಯಾಣ ಸೇವೆ ಕೊಡುವ ಯೋಚನೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

    ಇಂದು ಅಧಿಕೃತವಾಗಿ 11 ಗಂಟೆಗೆ ಮಹಿಳೆಯ ಉಚಿತ ಪ್ರಯಾಣಕ್ಕೆ ಚಾಲನೆ ಸಿಗಲಿದೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಯಗತ ಮಾಡುತ್ತಿದ್ದೇವೆ. ಪ್ರತಿಪಕ್ಷಗಳು ಟೀಕೆ ಮಾಡುತ್ತಿದ್ದವು. ಈಗ ನಾವು ಜಾರಿ ಮಾಡುತ್ತಿದ್ದೇವೆ. ಈ ಹಿಂದೆ ಭರವಸೆಗಳನ್ನು ಕೊಟ್ಟಿದ್ರು. ಅದರಲ್ಲಿ ಜಾರಿ ಮಾಡಿದ್ದು ಕೆಲವು ಮಾತ್ರ ಎಂದು ವಾಗ್ದಾಳಿ ನಡೆಸಿದರು.

    ಎಲ್ಲಾ ಗ್ಯಾರಂಟಿ (Congress Guarantee) ಕಾರ್ಯಕ್ರಮಗಳು ಯಶಸ್ವಿಯಾಗಿ ಆಗುತ್ತೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಆಯಾ ಶಾಸಕರು, ಸಂಸದರ ಸಮ್ಮುಖದಲ್ಲಿ ಏಕಾಕಲದಲ್ಲಿ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಿಂದ ಮೆಜೆಸ್ಟಿಕ್‍ಗೆ ಬರುತ್ತಾರೆ. ಸ್ಮಾರ್ಟ್ ಕಾರ್ಡ್ (Smart Card) ಆದಷ್ಟು ಬೇಗ ನೀಡುವ ಕೆಲಸ ಆಗುತ್ತೆ. ಸೇವಾ ಸಿಂಧು ಪೋರ್ಟಲ್ ಸರ್ವರ್ ಸ್ಲೋ ಆದ್ರೆ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತೆ ಎಂದು ಸಚಿವರು ತಿಳಿಸಿದರು.

  • ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ- ಬಸ್‍ನಲ್ಲಿ ಸಿಎಂ 4  ಕಿ.ಮೀ ಸಂಚಾರ

    ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ- ಬಸ್‍ನಲ್ಲಿ ಸಿಎಂ 4 ಕಿ.ಮೀ ಸಂಚಾರ

    ಬೆಂಗಳೂರು: ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ (Free Bus Ticket For Women) ಪ್ರಯಾಣ ಮಾಡೋ ದಿನ ಬಂದೇ ಬಿಡ್ತು. ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಮಹಿಳೆಯರನ್ನು ಫ್ರೀ ಬಸ್ ಹತ್ತಿಸೋಕೆ ಸಜ್ಜಾಗಿದ್ದಾರೆ.

    ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳಾ ಮಣಿಗಳಿಗೆ ಬಸ್ ಟಿಕೆಟ್ ಫ್ರೀ. ಎಲ್ಲಿ ಬೇಕಾದ್ರೂ ಸಂಚಾರ ಮಾಡಬಹುದಾಗಿದೆ. ಹೀಗಾಗಿ ಬಸ್ ಏರೋಕೆ ಮಹಿಳೆಯರು ತುದಿಗಾಲಲ್ಲಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾದ ಮಹಿಳೆಯರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡುವ ಶಕ್ತಿ ಯೋಜನೆಗೆ ಇಂದು ಬೆಳಗ್ಗೆ 11 ಗಂಟೆಗೆ ಚಾಲನೆ ಸಿಗಲಿದೆ. ಸ್ಮಾರ್ಟ್‍ಕಾರ್ಡ್, ಲೋಗೋ ಅನಾವರಣ ಆಗಲಿದೆ.

    ಈ ಕಾರ್ಯಕ್ರಮವನ್ನು ಹಬ್ಬದಂತೆ ನಿರ್ವಹಿಸಲು ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಸ್ವತಃ ಸಿದ್ದರಾಮಯ್ಯನವರೇ ಸಿಎಂ ಸಿದ್ದರಾಮಯ್ಯ ಮೊದಲ ಶೂನ್ಯ ಟಿಕೆಟ್ ವಿತರಣೆ ಮಾಡಲಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ- ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ

    ವಿಧಾನಸೌಧದಲ್ಲಿ ಶಜ್ತಿ ಯೋಜನೆಗೆ ಚಾಲನೆ ಕೊಟ್ಟ ನಂತರ ಮುಖ್ಯಮಂತ್ರಿ ಮತ್ತು ಟೀಂ ಬಿಎಂಟಿಸಿ ಬಸ್‍ನಲ್ಲಿ ಮೆಜೆಸ್ಟಿಕ್‍ಗೆ ಪ್ರಯಾಣ ಬೆಳೆಸಲಿದ್ದಾರೆ. ಮೆಜೆಸ್ಟಿಕ್‍ನ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ದೂರದ ಊರುಗಳಿಗೆ ತೆರಳುವ ಬಸ್‍ಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಮೆಜೆಸ್ಟಿಕ್‍ನಿಂದ ವಿಧಾನಸೌಧಕ್ಕೆ ರಿಟರ್ನ್ ಬರಲಿದ್ದಾರೆ.

    ಒಟ್ಟನಲ್ಲಿ ಇಂದು ಕರ್ನಾಟಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದು, ಫ್ರೀ ಬಸ್ ಪ್ರಯಾಣಕ್ಕೆ ನಾರಿಯರು ಉತ್ಸುಕರಾಗಿದ್ದಾರೆ.

  • ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ- ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ

    ಇಂದಿನಿಂದ ಮಹಿಳೆಯರಿಗೆ ಬಸ್ ಫ್ರೀ- ನಗರದಾದ್ಯಂತ 2,000 ಹೋಮ್‍ಗಾರ್ಡ್ಸ್ ನಿಯೋಜನೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇವತ್ತು ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಲಿದ್ದಾರೆ. ಮೊದಲ ಬಾರಿಗೆ ಮಹಿಳೆಯರಿಗೆ ರಾಜ್ಯಾದ್ಯಂತ ಬಸ್ ಫ್ರೀ ಜೊತೆಗೆ ಒಂದಷ್ಟು ಕಿರಿಕ್ ಗಳು ನಡೆಯೋ ಸಾಧ್ಯತೆ ಕೂಡ ಇದೆ. ಇದಕ್ಕೆ ಪೊಲೀಸ್ ಇಲಾಖೆ (Police Department) ಕೂಡ ಮುಂಜಾಗ್ರತೆ ಕ್ರಮ ಕೈಗೊಂಡಿದೆ.

    ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಫ್ರೀ ಆಗಿ ಓಡಾಡೋಕೆ ಖುಷಿಯಿಂದ ಕಾತರರಾಗಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಆದರೆ ಮಹಿಳೆಯರ ಫ್ರೀ ಬಸ್ ಪ್ರಯಾಣಕ್ಕೆ ವೋಟರ್ ಐಡಿ, ರೇಷನ್ ಕಾರ್ಡ್ ಹಾಗೂ ಅಧಾರ್ ಕಾರ್ಡ್ (Adhar card) ಸೇರಿದಂತೆ ಯಾವುದಾರು ಒಂದು ದಾಖಲೆ ಇಟ್ಟುಕೊಳ್ಳಬೇಕಿದೆ. ಹಾಗಾಗಿ ಈ ವಿಚಾರದಲ್ಲಿ ಪ್ರಯಾಣಿಕರು ಮತ್ತು ಬಸ್ ಸಿಬ್ಬಂದಿ ನಡುವೆ ಕಿರಿಕ್ ಆಗೋ ಸಾಧ್ಯತೆಗಳಿವೆ. ಈ ಹಿನ್ನೆಲೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

    ಬೆಂಗಳೂರಿನದ್ಯಂತ ಸುಮಾರು ಎರಡು ಸಾವಿರ ಹೋಮ್ ಗಾರ್ಡ್‍ಗಳನ್ನು ನಿಯೋಜನೆ ಮಾಡಿದ್ದು, ಪ್ರತಿ ಬಸ್‍ನಲ್ಲಿ ಇಬ್ಬರು ಹೋಮ್ ಗಾಡ್ರ್ಸ್, ಬಸ್ ನಿಲ್ದಾಣಗಳಲ್ಲಿ ಹೆಚ್ಚುವರಿ ಹೋಮ್ ಗಾರ್ಡ್‍ಗಳ ನಿಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: 100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡ್ಬೇಕು – ಸಿಎಂ ಪ್ರಶ್ನೆ

    ಪ್ರಯಾಣಿಕರು ಹಾಗೂ ಸಿಬ್ಬಂದಿ ನಡುವೆ ಯಾವುದೇ ಗಲಾಟೆಗಳು, ಗೊಂದಲಗಳು ನಡೆಯದಂತೆ ಎಚ್ಚರಿಕೆ ವಹಿಸಲು ಬೆಂಗಳೂರು ಪೊಲೀಸ್ ಕಮಿಷನರ್ ಸಂಬಂಧಪಟ್ಟ ಡಿವಿಜನ್‍ಗಳ ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್ ಗಳಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಪ್ರತಿ ಡಿವಿಜನ್‍ಗೆ 350 ಹೋಮ್ ಗಾರ್ಡ್‍ಗಳಂತೆ 8 ಡಿವಿಷನ್‍ಗಳಲ್ಲಿ 2 ಸಾವಿರ ಹೋಮ್‍ಗಳನ್ನು ಭದ್ರೆತೆ ನಿಯೋಜನೆ ಮಾಡಲಾಗಿದೆ. ಪೊಲೀಸರು ಕೂಡ ಸಾಥ್ ನೀಡಲಿದ್ದು, ಬಸ್ ನಿಲ್ದಾಣಗಳು, ಮತ್ತು ರಸ್ತೆಗಳಲ್ಲಿ ಹೆಚ್ಚಿನ ಗಸ್ತು ತಿರುಗಲಿದ್ದಾರೆ.

    ಒಟ್ಟಿನಲ್ಲಿ ಇಂದು 1 ಗಂಟೆ ನಂತರ ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಓಡಾಡಬಹುದಾಗಿದೆ. ಯಾವುದೇ ಗೊಂದಲ, ಗಲಾಟೆಗಳು ಆಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

  • ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

    ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

    ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ (Congress Guarantee) ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free Bus Travel for Women) ಯೋಜನೆಯಾಗಿರುವ ಶಕ್ತಿ (Shakti Scheme) ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಇದೇ ಭಾನುವಾರದಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಇದೀಗ ವಿಭಿನ್ನವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ (Siddaramaiah) ಸ್ವತಃ ಬಸ್‌ನ ಕಂಡಕ್ಟರ್ (Bus Conductor) ಆಗಲಿದ್ದಾರೆ.

    ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ವಿತರಿಸಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಕೋಪದಲ್ಲಿ ಅಜ್ಜಿ ಕೊಂದು, ಕೊರಿಯನ್ ವೆಬ್ ಸೀರಿಸ್‌ನಂತೆ ಹೆಣ ಸುಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ

    ಮೆಜೆಸ್ಟಿಕ್‌ನಿಂದ ವಿಧಾನಸೌಧ ಮಾರ್ಗದ ಬಿಎಂಟಿಸಿ ಬಸ್‌ನಲ್ಲೇ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ. ರೂಟ್ ನಂ.43 ಬಸ್‌ನಲ್ಲಿ ಕಂಡಕ್ಟರ್ ರೀತಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಅಂದೇ ಜಿಲ್ಲೆಗಳಲ್ಲಿ ಸಚಿವರಿಂದ ಏಕಕಾಲದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ. ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಂದಲೇ ನಮಗೆ ಸೋಲು – ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಏನಾಯ್ತು?

  • ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಆಟೋ ಚಾಲಕರಿಗೆ ಹೆಚ್ಚಾಯ್ತು ಆತಂಕ

    ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಆಟೋ ಚಾಲಕರಿಗೆ ಹೆಚ್ಚಾಯ್ತು ಆತಂಕ

    ತುಮಕೂರು: ಮಹಿಳೆಯರಿಗೆನೋ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಭಾಗ್ಯ ಕರುಣಿಸಿ “ಶಕ್ತಿ” ತುಂಬಿದೆ. ಆದರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಮಹಿಳೆಯರ ಪ್ರಯಾಣವನ್ನೇ ನಂಬಿ ಬದುಕ್ತಿದ್ದ ಆಟೋ ಚಾಲಕರು (Auto Drivers) ನಿಶ್ಯಕ್ತರಾಗುವ ಆತಂಕದಲ್ಲಿದ್ದಾರೆ.

    ಹೌದು. ಜೂನ್ 11ರಿಂದ ರಾಜ್ಯ ಎಲ್ಲಾ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಜಿಲ್ಲೆಯಿಂದ ಜಿಲ್ಲೆಗೆ, ನಗರ ವ್ಯಾಪ್ತಿ ಎಲ್ಲಿಬೇಕಾದರೂ ಓಡಾಟ ಮಾಡಬಹುದು. ಈ ಉಚಿತ ಭಾಗ್ಯದಿಂದ ಮಹಿಳೆಯರಿಗೆ “ಶಕ್ತಿ” ತುಂಬಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಆದರೆ ಇದರ ಎಫೆಕ್ಟ್ ಒಂದೊಂದೇ ವಲಯದ ಮೇಲೆ ಬೀಳುವ ಲಕ್ಷಣ ಗೋಚರಿಸುತ್ತಿದೆ.

    ನಗರ ಪ್ರದೇಶದಲ್ಲಿ ಮಹಿಳಾ ಪ್ರಯಾಣಿಕರನ್ನೇ ಹೆಚ್ಚು ಅವಲಂಬಿಸಿದ ಆಟೋ ಚಾಲಕರಲ್ಲಿ ಆತಂಕ ಶುರುವಾಗಿದೆ. ನಗರ ಪ್ರದೇಶದಲ್ಲಿನ ಮಹಿಳೆಯರು 5-8 ಕಿ.ಮಿ. ದೂರ ಆಟೋ ದಲ್ಲೇ ಪ್ರಯಾಣಿಸುತಿದ್ದರು. ತುಮಕೂರು ನಗರ ಅಂತರಸನಹಳ್ಳಿ ಮಾರುಕಟ್ಟೆ, ರೇಲ್ವೆ ನಿಲ್ದಾ, ಹೆಗ್ಗೆರೆ, ಸಿದ್ದಗಂಗಾ ಮಠ ಹೀಗೆ ಬಹುತೇಕ ಸಿಟಿ ವ್ಯಾಪ್ತಿಯಲ್ಲಿ ಆಟೋವನ್ನೇ ಅವಲಂಬಿಸಿದ್ರು. ಈ ಮಾರ್ಗವಾಗಿ ಸಂಚರಿಸುವ ಮಹಿಳಾ ಪ್ರಯಾಣಿಕರು (Free Bus Ticket For Women) ಆಟೋ ಚಾಲಕರ ಆದಾಯದ ಮೂಲವಾಗಿದ್ರು. ಇನ್ಮೇಲೆ ಈ ಆದಾಯದ ಮೂಲ ಕಳೆದುಕೊಳ್ಳುವ ಆತಂಕದಲ್ಲಿ ಆಟೋ ಚಾಲಕರಿದ್ದಾರೆ. ಇದನ್ನೂ ಓದಿ: ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ ರೂ.

    ನಗರದಿಂದ ಸಿದ್ದಗಂಗಾ ಮಠಕ್ಕೆ ಹೋಗಲು ಆಟೋ ಪ್ರಯಾಣಕ್ಕೆ 150 ದರ ನಿಗದಿ ಇದೆ. ಈಗ ಬಸ್ ಫ್ರಿ ಇರೊದ್ರಿಂದ ಎಲ್ಲರೂ ಬಸ್ಸಲ್ಲೇ ಪ್ರಯಾಣ ಬೆಳೆಸಲಿದ್ದಾರೆ. ತುಮಕೂರು ನಗರದಿಂದ ಕ್ಯಾತಸಂದ್ರ, ಬಸ್ ನಿಲ್ದಾಣದಿಂದ ಹನುಮಂತಪುರ, ಹೀಗೆ ಬೇರೆ ಮಾರ್ಗದಲ್ಲಿ ಸೀಟ್ ಆಟೋಗಳು ಇದೆ. ಸೀಟ್ ಲೆಕ್ಕದಲ್ಲಿ 10-20 ರೂ ಕೊಟ್ಟು ಮಹಿಳೆಯರು ಪ್ರಯಾಣಿಸುತಿದ್ದರು. ಈಗ ಎಲ್ಲಾ ಮಾರ್ಗದಲ್ಲೂ ಬಸ್‍ಗಳ ಓಡಾಟ ಇದ್ದು ಮಹಿಳೆಯರು ಶುಲ್ಕ ರಹಿತವಾಗಿ ಪ್ರಯಾಣ ಮಾಡಲಿದ್ದಾರೆ. ಹಾಗಾಗಿ ಆಟೋದವರ ಆದಾಯ ತಗ್ಗಲಿದೆ. ಆಟೋ ಮಾರಿ ಕೂಲಿ ಕೆಲಸಕ್ಕೆ ಹೋಗಬೇಕಾಗುತ್ತದೆ ಅನ್ನುವ ಭಯ ಶುರುವಾಗಿದೆ.

    ಸರ್ಕಾರ ಕೊಟ್ಟ ಐದು ಗ್ಯಾರಂಟಿಯಲ್ಲಿ ಉಚಿತ ಬಸ್ ಪ್ರಯಾಣ ಅತ್ಯಂತ ಅಪಾಯಕಾರಿ. ಸಿ.ಎಂ. ಸಿದ್ದರಾಮಯ್ಯ ಈ ಯೋಜನೆ ಕೈ ಬಿಟ್ಟರೆ ನಾವು ಬದುಕಬಹುದು. ಇಲ್ಲಾ ಅಂದರೆ ನಮ್ಮ ಬದುಕು ಮೂರಾಬಟ್ಟೆಯಾಗಲಿದೆ ಎಂದು ಆಟೋ ಚಾಲಕರು ಅಳಲು ತೋಡಿಕೊಂಡಿದ್ದಾರೆ.

  • ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ – ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

    ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ – ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel) ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ರಾಜ್ಯದೊಳಗಿನ ಪುಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದು.

     
    ಮಾರ್ಗಸೂಚಿಯಲ್ಲಿ ಏನಿದೆ?
    ಐಷಾರಾಮಿ (Luxury) ಬಸ್‌ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ (Luxury) ಬಸ್‌ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.  ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

    ಈ ಯೋಜನೆಯಡಿ ನಾಲ್ಕು, ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.

    ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ.

    ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.

  • ಡ್ರಮ್‌ನಲ್ಲಿ ಕೂಡಿ ಹಾಕಿ 4 ಮಕ್ಕಳ ಕೊಂದ ತಾಯಿ – ಬಳಿಕ ತಾನೂ ನೇಣಿಗೆ ಶರಣು

    ಡ್ರಮ್‌ನಲ್ಲಿ ಕೂಡಿ ಹಾಕಿ 4 ಮಕ್ಕಳ ಕೊಂದ ತಾಯಿ – ಬಳಿಕ ತಾನೂ ನೇಣಿಗೆ ಶರಣು

    ಜೈಪುರ: ಮಹಿಳೆಯೊಬ್ಬಳು (Women) ತನ್ನ 4 ಮಕ್ಕಳನ್ನು (Children) ಧಾನ್ಯ ಸಂಗ್ರಹಿಸುವ ಡ್ರಮ್‌ನಲ್ಲಿ (Drum) ಕೂಡಿ ಹಾಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ.

    ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಮಂಡ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜೇಥರಾಮ್ ಅವರ ಪತ್ನಿ ಊರ್ಮಿಳಾ ಶನಿವಾರ ತನ್ನ 4 ಮಕ್ಕಳೊಂದಿಗೆ ಮನೆಯಲ್ಲಿದ್ದಳು. ಆಕೆಯ ಪತಿ ಜೇಥರಾಮ್ ಕೂಲಿಗಾಗಿ ಜೋಧಪುರಕ್ಕೆ ಹೋಗಿದ್ದ ಸಂದರ್ಭ ಮಧ್ಯಾಹ್ನ ಊರ್ಮಿಳಾ ತನ್ನ ಮಕ್ಕಳಾದ ಭಾವನಾ (8), ವಿಕ್ರಮ್ (5), ವಿಮಲಾ (3), ಮತ್ತು ಮನಿಶಾ (2) ರನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾಳೆ. ಬಳಿಕ ಮನೆಯೊಳಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

    ಸಂಜೆಯವರೆಗೂ ಮಕ್ಕಳು ಮತ್ತು ಮಹಿಳೆ ಕಾಣದಿದ್ದಾಗ ಅಕ್ಕಪಕ್ಕದಲ್ಲಿ ವಾಸಿಸುತ್ತಿದ್ದ ಅವರ ಸಂಬಂಧಿಕರು ಊರ್ಮಿಳಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಉರ್ಮಿಳಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಮಕ್ಕಳನ್ನು ಧಾನ್ಯದ ಡ್ರಮ್‌ನಲ್ಲಿ ಕೂಡಿಹಾಕಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

    ತಕ್ಷಣ ಗ್ರಾಮಸ್ಥರು ಹಾಗೂ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ 5 ಮೃತದೇಹಗಳನ್ನು ಕಲ್ಯಾಣಪುರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಉರ್ಮಿಳಾ ಚಿಕ್ಕಪ್ಪ ದುರ್ಗಾರಾಮ್ ಕಳೆದ 5 ವರ್ಷಗಳಿಂದ ಆಕೆಯ ಪತಿ ಹಾಗೂ ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಶುರುವಾಗುತ್ತಾ ಧರ್ಮ ದಂಗಲ್?- ಸಚಿವರ ಹೇಳಿಕೆಗೆ ಹಿಂದೂಪರ ಸಂಘಟನೆಗಳು ಕಿಡಿ

  • ಮಹಿಳೆಯರ ಉಚಿತ ಬಸ್ ಪ್ರಯಾಣ- ಪುರುಷರಿಗೆ ಟೆನ್ಶನ್ ಶುರು!

    ಮಹಿಳೆಯರ ಉಚಿತ ಬಸ್ ಪ್ರಯಾಣ- ಪುರುಷರಿಗೆ ಟೆನ್ಶನ್ ಶುರು!

    ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ (Free Bus Ticket For Women) ವಿಚಾರ ಚರ್ಚೆಯಲ್ಲಿರುವಾಗಲೇ ಪುರುಷರಿಗೆ ಟೆನ್ಶನ್ ಶುರುವಾಗಿದೆ.

    ಹೌದು. ಮಹಿಳೆಯರಿಗೆ ಉಚಿತ ಪ್ರಯಾಣದ ಆಫರ್ ನಿಂದಾಗಿ ಪುರುಷರಿಗೆ ಬಸ್ ನಲ್ಲಿ ಸೀಟ್ ಸಿಗುತ್ತೋ ಇಲ್ವೋ ಅನ್ನೋ ಆತಂಕ ಆರಂಭವಾಗಿದೆ. ಮಹಿಳೆಯರಿಗೆ ಮೀಸಲಾಗಿರುವ ಸೀಟಿನಲ್ಲಷ್ಟೇ ಮಹಿಳೆಯರು ಕೂರಲಿ, ಹಿಂದೆ ಸೀಟಿನಲ್ಲಿ ಕೂತ್ರೆ ದಂಡ ಹಾಕಲಿ ಅಂತಾ ನಯಾ ಬೇಡಿಕೆಯೊಂದು ಎದ್ದಿದೆ.

     

    ಪುರುಷರ ಆಸನದಲ್ಲಿಯೂ ಉಚಿತ ಪ್ರಯಾಣ ಅಂತಾ ಮಹಿಳೆಯರು ಕೂತರೆ ನಾವೆಲ್ಲಿ ಹೋಗೋಣ ಅಂತಾ ಪುರುಷ ಪ್ರಯಾಣಿಕರು ಹೇಳುತ್ತಿದ್ದಾರೆ. ಕೆಲವು ಮಹಿಳೆಯರು ಉಚಿತ ಪ್ರಯಾಣದ ಯೋಜನೆಯನ್ನು ಸ್ವಾಗತಿಸಿದರೆ, ಇನ್ನೂ ಕೆಲವರು ನಮ್ಮ ಸೀಟು ನಮಗೇ ಇರಲಿ ಅಂತಾ ಬೇಡಿಕೆ ಇಟ್ಟಿದ್ದಾರೆ. ಒಟ್ಟಿನಲ್ಲಿ ಮಹಿಳೆಯರ ಫ್ರೀ ಬಸ್ ಪ್ರಯಾಣದಿಂದ ಪುರುಷರಿಗೆ ಸೀಟ್ ಟೆನ್ಶನ್ (Men Seat Tension) ಎದುರಾಗಿರುವುದು ಸುಳ್ಳಲ್ಲ.

    ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿಯಾಗಿದ್ದು, ಈ ಗ್ಯಾರಂಟಿ ಜಾರಿಗೆ ಸರ್ಕಾರಕ್ಕೆ `ಮನಿ’ ಟೆನ್ಷನ್ ಕೂಡ ಶುರುವಾಗಿದೆ. ನಾಳಿನ ಕ್ಯಾಬಿನೆಟ್‍ (Cabinet) ಗೂ ಮುನ್ನ ಆದಾಯ ಕ್ರೂಢೀಕರಣದ ಟೆನ್ಶನ್ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ (Ramalinga Reddy) ನೇತೃತ್ವದಲ್ಲಿ ಸರಣಿ ಸಭೆ ನಡೆಸಲಾಗಿದೆ. ನಿಗಮಗಳ ಕಚೇರಿಯಲ್ಲಿ ಬ್ಯಾಕ್ ಟು ಬ್ಯಾಕ್ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ಮೊನ್ನೆ 4 ನಿಗಮಗಳ ಎಂಡಿಗಳನ್ನ ಕರೆದು ಸಭೆ ನಡೆಸಿದ್ದ ಸಚಿವರು, ಇಂದು ಮತ್ತೆ ಪ್ರತ್ಯೇಕವಾಗಿ ನಿಗಮಗಳಿಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.