Tag: women

  • ಗ್ಯಾಂಗ್ ರೇಪ್ – ಮಹಿಳೆಯ ಖಾಸಗಿ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಗ್ಯಾಂಗ್ ರೇಪ್ – ಮಹಿಳೆಯ ಖಾಸಗಿ ಭಾಗಕ್ಕೆ ಸಿಗರೇಟ್‌ನಿಂದ ಸುಟ್ಟು ವಿಕೃತಿ

    ಮುಂಬೈ: ಮಹಿಳೆಯೊಬ್ಬರ (Women) ಮನೆಗೆ ನುಗಿದ್ದ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಹರಿತವಾದ ಕತ್ತಿಯಿಂದ ಹಲ್ಲೆ ಮಾಡಿ, ಸಿಗರೇಟ್ (Cigarettes) ನಿಂದ ಆಕೆಯ ಖಾಸಗಿ ಭಾಗಗಳನ್ನು ಸುಟ್ಟು ವಿಕೃತಿ ಮೆರೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    CRIME COURT

    ಮುಂಬೈನ ಕುರ್ಲಾದಲ್ಲಿರುವ 42 ವರ್ಷದ ಮಹಿಳೆ ಮೇಲೆ ಅತ್ಯಾಚಾರ (Gang Rape) ನಡೆದಿದ್ದು, ಹರಿತವಾದ ಆಯುಧಗಳಿಂದ ಮಹಿಳೆಗೆ ಕಿರುಕುಳ ನೀಡಲಾಗಿದೆ. ಅತ್ಯಾಚಾರ ಎಸಗಿದ ಕಾಮುಕರು ಹಾಗೂ ಸಂತ್ರಸ್ತೆ ಒಂದೇ ಪ್ರದೇಶದವರಾಗಿದ್ದರು ಎಂದು ಪೊಲೀಸರು (Mumbai Police) ತಿಳಿಸಿದ್ದಾರೆ. ಇದನ್ನೂ ಓದಿ: ತುರಹಳ್ಳಿ ಫಾರೆಸ್ಟ್‌ನಲ್ಲಿ ಆಪರೇಷನ್ ಚಿರತೆ- ಬೆಂಗ್ಳೂರಿನಲ್ಲೂ `ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ

    CRIME (1)

    ವಿಕೃತ ಮನಸ್ಥಿತಿ: ಮಹಿಳೆ ಒಂಟಿಯಾಗಿರುವುದನ್ನು ನೋಡಿಕೊಂಡ ಕಾಮುಕರು ಒಬ್ಬೊಬ್ಬರಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ಮನಸ್ಸೋ ಇಚ್ಚೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ ಆಕೆಯ ಖಾಸಗಿ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟಿದ್ದಾರೆ. ಎದೆ ಭಾಗದ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾರೆ. ಅದರಲ್ಲೊಬ್ಬ ಕೃತ್ಯವನ್ನೂ ವೀಡಿಯೋ ಮಾಡಿಕೊಂಡಿದ್ದು, ಪೊಲೀಸರಿಗೆ ಹೇಳಿದ್ರೆ ಜಾಲತಾಣದಲ್ಲಿ (Social Media) ವೀಡಿಯೋ ಹರಿಯಬಿಡೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಘಟನೆ ನಡೆದ ಒಂದೆರಡು ದಿನಗಳ ನಂತರ ಮಹಿಳೆ ನೆರೆಯವರೊಂದಿಗೆ ಕಷ್ಟ ವಿವರಿಸಿದ್ದಾಳೆ. ನಂತರ ಎನ್‌ಜಿಒ ಸಂಸ್ಥೆಯೊಂದು ಸಂಪರ್ಕಿಸಿ ಆಕೆಗೆ ಧೈರ್ಯ ತುಂಬಿದೆ. ನಂತರ ಮಹಿಳೆ ಕುರ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    Crime-Scene

    ಅತ್ಯಾಚಾರ ಎಸಗಿದ ಮೂವರು ಕಾಮುಕರ ವಿರುದ್ಧ ಐಪಿಸಿ (IPC) ಸೆಕ್ಷನ್ 376 (ಅತ್ಯಾಚಾರ), 376 ಡಿ (ಸಾಮೂಹಿಕ ಅತ್ಯಾಚಾರ), 377 (ಅಸ್ವಾಭಾವಿಕ ಲೈಂಗಿಕತೆ), 324 (ಅಪಾಯಕಾರಿ ಆಯುಧದಿಂದ ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು) ಹಾಗೂ ಇತರ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು (Mumbai Police) ಶೋಧ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌

    IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌

    ವಿಜಯಪುರ: ಐಎಎಸ್‌ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಸಂಬಂಧ ʼಪಬ್ಲಿಕ್‌ ಟಿವಿʼಯಲ್ಲಿ ಸರಣಿ ವರದಿಗಳು ಬಿತ್ತರವಾದ ನಂತರ ಎಚ್ಚೆತ್ತ ವಿಜಯಪುರ ಸಿಇಎನ್‌ ಪೊಲೀಸರು ಪ್ರಕರಣ ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಚಿರತೆ ದಾಳಿಗೆ ಎರಡನೇ ಬಲಿ – ಕಂಡಲ್ಲಿ ಗುಂಡು ಹಾರಿಸಲು ಅರಣ್ಯ ಇಲಾಖೆ ಸೂಚನೆ

    ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌ ಫ್ರೆಂಡ್‌ ಆಗಿ ಯುವಕನನ್ನು ವಂಚಿಸಿದ್ದಳು. ಇದಕ್ಕೆ ಆಕೆಯ ಪತಿಯೇ ಸಾಥ್‌ ನೀಡಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ. ಪತಿ ಸ್ವಾಮಿ ಹಾಗೂ ತಾನು ಸೇರಿಯೇ ಈ ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡು ವಂಚನೆ ಮಾಡಿದ್ದೇವೆ ಎಂದು ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ.

    ಸಂತ್ರಸ್ತ ಯುವಕನಿಗೆ ಬೆತ್ತಲೆ ಸ್ನಾನ ಮಾಡುವಂತೆ ಒತ್ತಾಯಿಸಿ ವೀಡಿಯೋ ಮಾಡಿಕೊಂಡಿದ್ದ ವಂಚಕರು ಬಳಿಕ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ವಂಚಿಸಿ 40 ಲಕ್ಷ ಹಣ ತನ್ನ ಫೆಡರಲ್ ಬ್ಯಾಂಕ್ ಅಕೌಂಟ್‌ಗೆ ಹಾಕಿಸಿಕೊಂಡಿದ್ದಳು. ಆ ಹಣದಲ್ಲಿ 100 ಗ್ರಾಂ ಬಂಗಾರ, ಹುಂಡೈ ಕಾರ್, ಬೈಕ್ ಖರೀದಿ ಮಾಡಿದ್ದಳು. ಜೊತೆಗೆ ಊರಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದಳು. ಮಂಜುಳಾ ಹಾಗೂ ಪತಿ ಸ್ವಾಮಿ ಬಂಧನದ ಬಳಿಕ ಅಸಲಿ ಪ್ರಕರಣ ಬಯಲಾಗಿದೆ. ಈ ಸಂಬಂಧ ವಿಜಯಪುರ ಸಿಇಎನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    Live Tv
    [brid partner=56869869 player=32851 video=960834 autoplay=true]

  • ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

    ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

    ಮಂಡ್ಯ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ಅನ್ನದಲ್ಲಿ ವಿಷ ಉಣಿಸಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

    ಮದ್ದೂರಿನ ಹೊಳೆಬೀದಿಯಲ್ಲಿ ವಾಸವಿದ್ದ ಉಸ್ನಾ ಕೌಸರ್ (30) ತನ್ನ ಮೂರು ಮಕ್ಕಳಿಗೆ ವಿಷ ಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾರಿಸ್ (7), ಆಲಿಸಾ (4) ಅನಮ್ ಫಾತಿಮಾ (2) ಎಂಬ ಮೂರು ಮಕ್ಕಳು ಮೃತರಾಗಿದ್ದಾರೆ. ಇದನ್ನೂ ಓದಿ: ಈಗ ರಾಗಿಗುಡ್ಡ ಆಂಜನೇಯಸ್ವಾಮಿ ಜಾತ್ರೆಯಲ್ಲೂ ವ್ಯಾಪಾರ ದಂಗಲ್‌

    ಉಸ್ನಾ ಕೌಸರ್‌ ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತು ಕೌಸರ್‌ ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಖಿಲ್ ಅಹಮದ್ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇದಕ್ಕೆ ಪೂರಕ ಎಂಬಂತೆ ಅಖಿಲ್ ಮೊಬೈಲ್‌ನಲ್ಲಿ ಕೌಸರ್‌ಗೆ ಪರ ಸ್ತ್ರೀಯ ಬೆತ್ತಲೆ ಫೋಟೋ ಹಾಗೂ ಆಕೆಯ ಜೊತೆ ಅಖಿಲ್ ಅಹಮದ್ ಇದ್ದ ಫೋಟೋಗಳು ಪತ್ತೆಯಾಗಿವೆ.

    ಇದನ್ನು ಪ್ರಶ್ನೆ ಮಾಡಿದ್ದ ಕೌಸರ್, ಇದೇ ವಿಚಾರಕ್ಕೆ ಮನೆಯಲ್ಲಿ ಜೋರು ಗಲಾಟೆಯೂ‌ ಸಹ ನಡೆದಿದೆ. ನಂತರ ಇಬ್ಬರನ್ನು ಪೋಷಕರು ರಾಜಿ ಮಾಡಿದ್ದು, ಅಕ್ರಮ ಸಂಬಂಧ ಬಿಡುವುದಾಗಿ‌ ಅಖಿಲ್ ಹೇಳಿದ್ದ. ನಿನ್ನೆ ಉರುಫ್ ಹಿನ್ನೆಲೆ ಕೆಲಸ ಮುಗಿಸಿ ಬೇಗಾ ಮನೆಗೆ ಬರ್ತೀನಿ ಎಂದು ಕೆಲಸಕ್ಕೆ‌ ಅಖಿಲ್ ಹೋಗಿದ್ದ. ಸಂಜೆ ಆತ ಮನೆಗೆ ಬೇಗ ಬಾರದಿದ್ದಾಗ ಕಾಸರ್ ಫೋನ್ ಸಹ ಮಾಡಿದ್ದು, ಈ ವೇಳೆ ಇಬ್ಬರ ನಡುವೆ ಫೋನ್‌ನಲ್ಲಿ ಮತ್ತೆ ಜಗಳವಾಗಿದೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೌಸರ್ ಮನೆಗೆ ಬಂದು ಅನ್ನದಲ್ಲಿ ಮಕ್ಕಳಿಗೆ ವಿಷ ಕಲಸಿ ತಿನ್ನಿಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಲ್ಲ: ಬೊಮ್ಮಾಯಿ

    ಇನ್ನೂ ಈ ನಾಲ್ವರನ್ನು ಅಖಿಲ್ ಅಹಮದ್ ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರು ಆರೋಪ ಮಾಡಿದ್ದು, ಸದ್ಯ ಅಖಿಲ್ ಹಾಗೂ ಆತನ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಸದ್ಯ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿದ್ದು, ಪ್ರಕರಣ ಸತ್ಯಾಸತ್ಯತೆಯನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

    ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

    ಬೆಂಗಳೂರು: ಮಹಿಳಾ ಆಯೋಗದಿಂದ (Women’s Commission) ಸ್ವೀಕಾರವಾದ ದೂರುಗಳನ್ನು 7-8 ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ (Investigation) ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಸಿಎಂ ಶುಕ್ರವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ ಜಾಗೃತಿ ಮೂಡಿಸುವುದು ಅಗತ್ಯ. ಅನ್ಯಾಯ ಆಗುವ ಮೂಲದಿಂದಲೇ ಅರಿವು ಮೂಡಿಸಬೇಕು ಎಂದರು.

    ಮಹಿಳಾ ಆಯೋಗಕ್ಕೆ ಇನ್ನಷ್ಟು ಅಧಿಕಾರದ ಜೊತೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲು ಸಿದ್ಧವಿದೆ. ಇದಲ್ಲದೆ ಕಲ್ಯಾಣ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ. ಮಹಿಳೆಯರ ಪೌಷ್ಟಿಕತೆ ಹೆಚ್ಚಿಸಲು ಕ್ರಮ ವಹಿಸಿದೆ. ಕೆಲಸ ಮಾಡುವ ಗರ್ಭಿಣಿಯರಿಗೆ ವಿಶೇಷ ಸ್ಥಳ ನಿಗದಿ, 5 ಪ್ರಮುಖ ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳೆಯರಿಗೆ ಹಾಸ್ಟೆಲ್, ಐಐಎಂ ತರಬೇತಿ, ಎಲಿವೆಟ್ ಯೋಜನೆಯಡಿ ಸ್ಟಾರ್ಟ್ಅಪ್‌ಗೆ ಅವಕಾಶ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀ ಸಾಮಾರ್ಥ್ಯ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

    5 ಲಕ್ಷ ಮಹಿಳೆಯರಿಗೆ ಸ್ವಯಂ ಉದ್ಯೋಗ ನೀಡುವ ಕೆಲಸ ಮಾಡಲಾಗುತ್ತಿದೆ. 7,500 ಸ್ತ್ರೀಶಕ್ತಿ ಸಂಘಗಳಿವೆ. ಅಮೃತ ಯೋಜನೆಯಡಿ 1 ಲಕ್ಷ ರೂ. ನೀಡಿ ಸ್ವಯಂ ಉದ್ಯೋಗ ನೀಡಲಾಗಿದೆ. ಮಹಿಳೆಯರಿಗೆ ವಿಶೇಷ ಕ್ಲಾಸ್ ರೂಮ್ ನಿರ್ಮಾಣ, ಆಶಾ ಕಾರ್ಯಕರ್ತೆಯರು ಹಾಗೂ ಅಡುಗೆ ಮಾಡುವವರ ಗೌರವಧನ ಹೆಚ್ಚಳ ಮಾಡಿದ್ದೇವೆ. ಎನ್.ಪಿ.ಎಸ್ ಯೋಜನೆ ಮರುಪ್ರಾರಂಭವಾಗಿದೆ. ಈ ವರ್ಷ 4,000 ಹೊಸ ಅಂಗನವಾಡಿ ನಿರ್ಮಾಣವಾಗುತ್ತಿದೆ. ಮಹಿಳೆಯರಿಗೆ ಎಲ್ಲಾ ಹಂತದ ನೆರವು ಒದಗಿಸಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದರು.

     

    ನಿರ್ಭಯ ಅಡಿ ಬೆಂಗಳೂರಿನಲ್ಲಿ 7,500 ಕೃತಕ ಬುದ್ಧಿಮತ್ತೆಯ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ರಾತ್ರಿ ವೇಳೆ ಕೆಲಸ ಮುಗಿಸಿ ಬರುವ ಮಹಿಳೆಯರಿಗೆ ಇದು ಸುರಕ್ಷತೆ ಒದಗಿಸುತ್ತದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿಯನ್ನು ಶಾಲಾ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೀಡಲಾಗುತ್ತಿದೆ ಎಂದರು.

    ಉಳಿತಾಯ ಸಂಸ್ಕೃತಿ:
    ವಿಶ್ವದಲ್ಲಿ ಎಲ್ಲಾ ರಾಷ್ಟ್ರಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಆದರೆ ಭಾರತದಲ್ಲಿ ಮಹಿಳೆಯರ ಉಳಿತಾಯ ಸಂಸ್ಕೃತಿಯಿಂದಾಗಿ, ಅಡುಗೆ ಮನೆಯಲ್ಲಿ ಜೀರಿಗೆ ಡಬ್ಬದಲ್ಲಿ ಇಡುವ ಹಣವೇ ದೇಶದ ಆರ್ಥಿಕತೆ ರಕ್ಷಣೆ ಮಾಡಿದೆ. ತಾಯಿ ಗರ್ಭದಿಂದ ಭೂತಾಯಿ ಗರ್ಭದವರೆಗೆ ಇರುವ ನಮ್ಮ ಬದುಕಿನಲ್ಲಿ ಮಹಿಳೆಯರಿಗೆ ಗೌರವ, ಸಮಾನತೆ ನೀಡಬೇಕು. ದೇಶ ಕಟ್ಟಲು ತಾಯಂದಿರನ್ನು ಸಶಕ್ತ ಮಾಡುವುದು ಬಹಳ ಮುಖ್ಯ. ಈ ಅರಿವಿನಿಂದ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

    ಮಹಿಳೆಯರ ಗೌರವ ಪುನಃ ಸ್ಥಾಪನೆಯಾಗಬೇಕು:
    ಒಂದೆಡೆ ಕಾನೂನು ರಚನೆ, ಶಿಸ್ತಿನ ಕ್ರಮ ತೆಗೆದುಕೊಳ್ಳುವುದು, ಆಯೋಗ ಕೆಲಸ ಮಾಡುವುದು ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯಕ. ಅದರ ಜೊತೆಗೆ ಸಮಾಜದಲ್ಲಿ ಮೌಲ್ಯಗಳ ಪರಿವರ್ತನೆ ಆಗುವುದು ಅಗತ್ಯವಿದೆ. ಸಮಾಜದಲ್ಲಿ ಮೊದಲು ಮಹಿಳೆಯರಿಗೆ ಸಿಗುತ್ತಿದ್ದ ಗೌರವ ಪುನಃ ಸ್ಥಾಪನೆಯಾಗಬೇಕು. ಇದಾದರೆ ಸಮಾನತೆ ಅವಕಾಶಗಳು ತೆರೆದುಕೊಳ್ಳುತ್ತವೆ. ಈ ಕೆಲಸವನ್ನು ಆಯೋಗ ಮಾಡಬೇಕು ಎಂದರು.

    ಕಠಿಣ ಕಾನೂನು ಕ್ರಮ:
    ಎಲ್ಲಾ ಸಮಾಜದಲ್ಲಿ ವ್ಯಾಗ್ರ ಚಿಂತನೆಗಳಿರುವ ವ್ಯಕ್ತಿಗಳಿದ್ದಾರೆ. ಅವರಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಅಮಾನವೀಯವಾಗಿ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಅತ್ಯಾಚಾರ ಆಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ರಾಕ್ಷಸ ಕೃತ್ಯ. ಉಗ್ರ ಕಾನೂನು ಇದ್ದರೂ, ಶಿಕ್ಷೆಗೆ ಒಳಪಟ್ಟಿದ್ದರೂ, ಆದರೆ ಆ ಕಾನೂನು ಅಪರಾಧಗಳನ್ನು ತಡೆಹಿಡಿಯಲು ಸಫಲವಾಗಿಲ್ಲ. ಸಾಮಾಜಿಕ ಚಿಂತನೆ ಬದಲಾವಣೆಯ ಜೊತೆಗೆ ಕಠಿಣ ಕಾನೂನು ಕ್ರಮ ಕೂಡ ಅವಶ್ಯಕ. ಮಹಿಳಾ ಆಯೋಗಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದರು. ಇದನ್ನೂ ಓದಿ: ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

    ಜನ್ಮಪೂರ್ವದ ಸಂಬಂಧ:
    ಈ ಭೂಮಿ ಮೇಲೆ ಜನ್ಮ ಪೂರ್ವದ ಸಂಬಂಧ ತಾಯಿಯೊಂದಿಗೆ ಇರುತ್ತದೆ. ತಾಯಿತನ ಎಲ್ಲಕ್ಕಿಂತ ಶ್ರೇಷ್ಠ. ತಾಯಿಯ ಪ್ರೀತಿ ಮಿತಿ ಇಲ್ಲದ್ದು, ನೂರಕ್ಕೆ ನೂರು ಶುದ್ಧವಾಗಿರುತ್ತದೆ. ಹೀಗಾಗಿ ಹೆಣ್ಣು ಮಕ್ಕಳು ಶ್ರೇಷ್ಠ ಎಂದರು.

    ಸಮಾನತೆ:
    ಹೆಣ್ಣಿಗೆ ನಿಸರ್ಗ, ಪುರಾಣ, ಇತಿಹಾಸ ದೊಡ್ಡ ಸ್ಥಾನ ಕೊಟ್ಟಿದ್ದರೂ ಸಮಾಜ ಕೊಡುತ್ತಿಲ್ಲ. ಸಮಾಜ ಯಾವಾಗ ಮಹಿಳೆಯರಿಗೆ ಗೌರವ, ಸಮಾನತೆ ಕೊಡುತ್ತದೆಯೋ ಅಂದು ಮಹಿಳೆಗೆ ಸಮಾನ ಅವಕಾಶಗಳು ದೊರೆಯುತ್ತವೆ ಎಂದರು.

    ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಶಾಸಕಿ ರೂಪಾಲಿ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: ಗುತ್ತಿಗೆದಾರರ ಸಂಘದಲ್ಲಿ ಒಳ ರಾಜಕೀಯ – ಇಕ್ಕಟ್ಟಿನಲ್ಲಿ ಇಂಧನ ಇಲಾಖೆ

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿ ಕಾಣಿಸುತ್ತಾರೆ: ಬಾಬಾ ರಾಮ್‌ದೇವ್

    ಮಹಿಳೆಯರು ಏನೂ ಧರಿಸದಿದ್ರೂ ಚೆನ್ನಾಗಿ ಕಾಣಿಸುತ್ತಾರೆ: ಬಾಬಾ ರಾಮ್‌ದೇವ್

    ಮುಂಬೈ: ತಮ್ಮ ಹೇಳಿಕೆಗಳಿಂದ ಆಗಾಗ ಸುದ್ದಿಯಾಗುವ ಪತಂಜಲಿ ಮುಖ್ಯಸ್ಥ, ಯೋಗ ಗುರು ಬಾಬಾ ರಾಮ್‌ದೇವ್ (Baba Ramdev) ಇದೀಗ ಮಹಿಳೆಯರ ಉಡುಪುಗಳ (Women’s Clothing) ಕುರಿತಾಗಿ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದೆ.

    ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ರಾಮ್ ದೇವ್ ಬಾಬಾ, ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದಾರೆ.

    ರಾಮ್‌ದೇವ್ ಅವರು ಈ ಹೇಳಿಕೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಸಮ್ಮುಖದಲ್ಲಿಯೇ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಕೂಡಾ ಭಾಗಿಯಾಗಿದ್ದರು.

    ವರದಿಗಳ ಪ್ರಕಾರ ಮಹಿಳೆಯರಿಗಾಗಿ ಯೋಗ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಇದಾದ ಬಳಿಕ ಸಮಾವೇಶ ಆಯೋಜಿಸಲಾಗಿತ್ತು. ಯೋಗ ತರಬೇತಿಯಲ್ಲಿ ಭಾಗಿಯಾಗಿದ್ದ ಮಹಿಳೆಯರು ಸಮಾವೇಶಕ್ಕಾಗಿ ಸೀರೆಯನ್ನೂ ತಂದಿದ್ದರು. ಆದರೆ ಯೋಗ ತರಬೇತಿ ಮುಗಿದ ತಕ್ಷಣವೇ ಸಭೆ ಆರಂಭವಾಗಿತ್ತು. ಇದರಿಂದ ಮಹಿಳೆಯರಿಗೆ ಸೀರೆ ಉಟ್ಟುಕೊಳ್ಳಲು ಸಮಯ ಸಿಕ್ಕಿರಲಿಲ್ಲ. ಇದನ್ನೂ ಓದಿ: ಓಲಾ, ಉಬರ್‌ ಆಟೋಗಳಿಗೆ ಶೇ.5 ಕಮಿಷನ್‌ ದರ ನಿಗದಿ

    ಈ ಕುರಿತು ಹೇಳಿಕೆ ನೀಡಿದ ಬಾಬಾ ರಾಮ್‌ದೇವ್, ಸೀರೆ ಉಡಲು ಸಮಯವಿಲ್ಲದಿದ್ದರೂ ಸಮಸ್ಯೆ ಇಲ್ಲ. ಈಗ ನೀವು ಮನೆಗೆ ಹೋಗಿ ಸೀರೆ ಉಟ್ಟುಕೊಳ್ಳಿ. ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ಸೂಟ್‌ಗಳಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

    ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ವತಿಯಿಂದ ಶುಕ್ರವಾರ ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಅಮೃತಾ ಫಡ್ನವೀಸ್ ಉಪಸ್ಥಿತರಿದ್ದರು. ಈ ವೇಳೆ ಬಾಬಾ ರಾಮದೇವ್ ಮಹಿಳೆಯರೊಂದಿಗೆ ಸಂವಾದ ನಡೆಸುತ್ತಿದ್ದಾಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆಯುತ್ತಿದ್ದಾರೆ: ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ

    Live Tv
    [brid partner=56869869 player=32851 video=960834 autoplay=true]

  • ಪುರುಷರು ಜೊತೆಯಲ್ಲಿರದಿದ್ದರೆ ಮಹಿಳೆಯರಿಗಿಲ್ಲ ಜಾಮಾ ಮಸೀದಿ ಪ್ರವೇಶ

    ಪುರುಷರು ಜೊತೆಯಲ್ಲಿರದಿದ್ದರೆ ಮಹಿಳೆಯರಿಗಿಲ್ಲ ಜಾಮಾ ಮಸೀದಿ ಪ್ರವೇಶ

    ನವದೆಹಲಿ: ಜಾಮಾ ಮಸೀದಿಗೆ (Jama Masjid) ಮಹಿಳೆ (Women) ಒಬ್ಬಳೇ ಅಥವಾ ಮಹಿಳೆಯರ ಗುಂಪು ಪುರುಷರಿಲ್ಲದೇ ಬರುವಂತಿಲ್ಲ ಎಂದು ಆದೇಶ ಹೊರಡಿಸಿದೆ.

    ಪುರುಷರು ಜೊತೆಗಿಲ್ಲದೇ ಮಹಿಳೆಯರು ಜಾಮಾ ಮಸೀದಿ ಪ್ರವೇಶ ನಿಷೇಧಿಸಲಾಗಿದೆ ಎಂದು ಜಾಮಾ ಮಸೀದಿ ನೋಟಿಸ್ ಹೊರಡಿಸಿದೆ. ಕಳೆದ ಕೆಲದಿನಗಳ ಹಿಂದೆ ಈ ಬಗ್ಗೆ ಜಾಮಾ ಮಸೀದಿಯ ಆಡಳಿತ ಮಂಡಳಿ ಪ್ರಕಟನೆಯನ್ನು ಪ್ರವೇಶ ದ್ವಾರದ ಬಳಿ ಹಾಕಿದೆ. ಇದನ್ನೂ ಓದಿ: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಜಾಮಾ ಮಸೀದಿಯ ಈ ಪ್ರಕಟನೆ ಬೆನ್ನಲ್ಲೇ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಜಾಮಾ ಮಸೀದಿ ತೆಗೆದುಕೊಂಡಿರುವ ನಿರ್ಧಾರ ಅಸಂವಿಧಾನಿಕ ಎಂದು ಜರಿದಿದ್ದಾರೆ. ಈ ಹಿಂದೆ ಜಾಮಾ ಮಸೀದಿಗೆ ಮಹಿಳೆಯರಿಗೂ ಪ್ರವೇಶ ನೀಡಲಾಗುತ್ತಿತ್ತು. ಇದೀಗ ಮಸೀದಿ ಪ್ರವೇಶ ನಿಷೇಧಿಸಲು ಮುಂದಾಗಿದೆ. ಇದನ್ನೂ ಓದಿ: ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    Live Tv
    [brid partner=56869869 player=32851 video=960834 autoplay=true]

  • ಸ್ವಂತ ಮಗಳನ್ನ ಗುಂಡಿಕ್ಕಿ ಕೊಂದು, ಸೂಟ್‌ಕೇಸ್‌ನಲ್ಲಿ ಬಿಸಾಡಿದ ತಂದೆ

    ಸ್ವಂತ ಮಗಳನ್ನ ಗುಂಡಿಕ್ಕಿ ಕೊಂದು, ಸೂಟ್‌ಕೇಸ್‌ನಲ್ಲಿ ಬಿಸಾಡಿದ ತಂದೆ

    ಲಕ್ನೋ: ಅನ್ಯಜಾತಿಯವನನ್ನು ಮದುವೆಯಾಗಿದ್ದಲ್ಲದೇ (Marriage), ತಡರಾತ್ರಿಯವರೆಗೂ ಹೊರಗೆ ಹೋಗುತ್ತಿದ್ದಳು ಅನ್ನೋ ಕೋಪದಿಂದ ರೊಚ್ಚಿಗೆದ್ದ ತಂದೆ, ತನ್ನ ಮಗಳನ್ನು ಗುಂಡಿಕ್ಕಿ ಕೊಂದು, ಸೂಟ್‌ಕೇಸ್‌ನಲ್ಲಿ ತುಂಬಿ ಉತ್ತರಪ್ರದೇಶದ (UttarPradesh) ಯಮುನಾ ಎಕ್ಸ್‌ಪ್ರೆಸ್‌ವೇ (Yamuna Expressway) ಬಳಿ ಎಸೆದಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಕಳೆದ ವಾರ ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇ (Yamuna Expressway) ಬಳಿ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆಯಾದ ದೆಹಲಿ ಮೂಲದ 22 ವರ್ಷದ ಯುವತಿಯನ್ನ ಆಕೆಯ ತಂದೆಯೇ ಕೊಂದಿದ್ದಾರೆ ಎಂಬುದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆಯುಷಿ ಚೌದರಿ (22) ತಂದೆ ನಿತೇಶ್ ಯಾದವ್‌ನನ್ನ ಬಂಧಿಸಲಾಗಿದೆ ಎಂದು ಉತ್ತಪ್ರದೇಶದ ಮಥುರಾ ಎಸ್ಪಿ ತಿಳಿಸಿದ್ದಾರೆ. ಇದನ್ನೂ ಓದಿ: 25 ಬೌಂಡರಿ, 15 ಸಿಕ್ಸರ್ – 277 ರನ್ ಸಿಡಿಸಿ ವಿಶ್ವದಾಖಲೆ ಬರೆದ ಜಗದೀಶನ್ – ಹಿಟ್‌ಮ್ಯಾನ್ ದಾಖಲೆಯೂ ಉಡೀಸ್

    ಮರ್ಡರ್ ಮಿಸ್ಟ್ರಿ ರೋಚಕ: ದೆಹಲಿ ಮೂಲದ ಆಯುಷಿ ಚೌದರಿ ತನ್ನ ಮನೆಯವರಿಗೆ ಹೇಳದೆ ಬೇರೆ ಜಾತಿಯ ಛತ್ರಪಾಲ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆಕೆಯ ಪೋಷಕರು ತೀವ್ರವಾಗಿ ವಿರೋಧಿಸಿದ್ದರೂ ಆಕೆಯ ಹಠಮಾರಿ ತನದಿಂದ ಒಪ್ಪಿಕೊಂಡಿದ್ದರು. ಈ ಬಗ್ಗೆ ಪೋಷಕರಿಗೆ ಅಸಮಾಧಾನವಿತ್ತು. ಈ ನಡುವೆಯೂ ಮಗಳು ದಿನ ತಡರಾತ್ರಿವರೆಗೂ ಹೊರಗಡೆ ಹೋಗಿಬರುತ್ತಿದ್ದಳು. ಈ ಕೋಪದಿಂದ ತಂದೆ-ಮಗಳ ನಡುವೆ ಜಗಳ ನಡೆದಿದೆ. ಬಳಿಕ ಮಾತಿಗೆ ಮಾತು ಬೆಳೆದಿದು, ರೊಚ್ಚಿಗೆದ್ದ ತಂದೆ ತಾನು ಲೈಸೆನ್ಸ್ ಪಡೆದಿದ್ದ ಗನ್‌ನಿಂದ (Gun) ಗುಂಡು ಹಾರಿಸಿ ಕೊಂದಿದ್ದಾನೆ. ಬಳಿಕ ಪ್ಲಾಸ್ಟಿಕ್‌ನಲ್ಲಿ ಸುತ್ತಿ, ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಬಳಿ ಎಸೆದು ಬಂದಿದ್ದಾನೆ. ಇದನ್ನೂ ಓದಿ: ಒಡಿಶಾದಲ್ಲಿ ಹಳಿ ತಪ್ಪಿ, ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು – 3 ಸಾವು, ಹಲವರಿಗೆ ಗಾಯ

    ಇದಾದ ಒಂದು ವಾರದ ನಂತರ ಸ್ಥಳೀಯ ಕಾರ್ಮಿಕರು ರಕ್ತದ ಮಡುವಿನಲ್ಲಿದ್ದ ಸೂಟ್‌ಕೇಸ್ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಯುವತಿಯ ಶವ ಪತ್ತೆಯಾಗಿದೆ. ಮೃತದೇಹದ ಮುಖ ಮತ್ತು ತಲೆ ಭಾಗದಲ್ಲಿ ರಕ್ತ ಬಂದಿರುವುದು ಹಾಗೂ ದೇಹದ ಹಲವು ಭಾಗಗಳಲ್ಲಿ ಗಾಯದ ಕಲೆಗಳು ಕಂಡುಬಂದಿದ್ದವು. ನಂತರ ಮೃತದೇಹ ಗುರುತಿಸಲು ಪೋಷಕರನ್ನು ಕರೆಸಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಪೋಷಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ಗುಂಡಿಕ್ಕಿ ಕೊಂದ ರಹಸ್ಯ ಬಯಲಾಗಿದೆ. ಕೂಡಲೇ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಮುಂಬೈ ಮೂಲದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಬಯಲಾದ ಬಳಿಕ ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮದುವೆ ನಂತರವೂ ಅಕ್ರಮ ಸಂಬಂಧ ಹೊಂದಿದ್ದಕ್ಕಾಗಿ ತನ್ನ ಮಾಜಿ ಪ್ರೇಯಸಿಯನ್ನ ಕೊಂದು 6 ತುಂಡುಗಳಾಗಿ ಕತ್ತರಿಸಿ ಬಾವಿಗೆ ಎಸೆದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈಗ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಗರ್ಭಿಣಿ ಪತ್ನಿ ಸಾವಿನಿಂದ ಮೆಂಟಲ್ ಶಾಕ್ – ವಿಷ ಸೇವಿಸಿ ಪತಿಯೂ ಆತ್ಮಹತ್ಯೆ

    ಗರ್ಭಿಣಿ ಪತ್ನಿ ಸಾವಿನಿಂದ ಮೆಂಟಲ್ ಶಾಕ್ – ವಿಷ ಸೇವಿಸಿ ಪತಿಯೂ ಆತ್ಮಹತ್ಯೆ

    ಮುಂಬೈ: ಆಸ್ಪತ್ರೆಗೆ ಗಂಡನ ಜೊತೆಗೆ ತಿಂಗಳ ಚಿಕಿತ್ಸೆಗೆ ಬಂದಿದ್ದ ಗರ್ಭಿಣಿ (Pregnant) ರಸ್ತೆ ಅಪಘಾತದಲ್ಲಿ (Road Accident) ದಾರುಣ ಸಾವಿಗೀಡಾದರು. ಕರಳುಬಳ್ಳಿ ಹೊತ್ತಿದ್ದ ಹೆಂಡತಿಯ ಸಾವನ್ನು ಕಣ್ಣೆದುರೆ ಕಂಡ ಪತಿ ಈ ದುಃಖದಿಂದ ತಾನೂ ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪುಣೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ.

    ದೊಂಡಕರ್ವಾಡಿಯ ರಮೇಶ್ ನವನಾಥ್ ಕಂಸ್ಕರ್ (29) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ ಎಂಟು ತಿಂಗಳ ಹಿಂದೆ ವಿದ್ಯಾ ಕಂಸ್ಕರ್ ನನ್ನು ವಿವಾಹವಾಗಿದ್ದರು (Marriage). ಆಕೆ ಗರ್ಭಿಣಿಯಾಗಿದ್ದು (Pregnant), ಕಳೆದ ವಾರ ಇಲ್ಲಿನ ನಾರಾಯಣ ಗಾಂವ್ ಆಸ್ಪತ್ರೆಗೆ (Hospital) ತಿಂಗಳ ಚಿಕಿತ್ಸೆಗೆ ಬಂದಿದ್ದರು. ಚಿಕಿತ್ಸೆ ಮುಗಿಸಿ ಗಂಡನ ಜೊತೆ ಮನೆಗೆ ಮರಳುತ್ತಿದ್ದ ವೇಳೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಬೈಕ್‌ನಿಂದ ಕೆಳಗೆ ಇಳಿದರು. ಆಗ ಕಬ್ಬು ತುಂಬಿಕೊಂಡು ಬಂದ ಟ್ರ್ಯಾಕ್ಟರ್‌ ವಿದ್ಯಾ ಕಂಸ್ಕರ್‌ಗೆ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್‌ ಚಕ್ರಗಳು ತಲೆಯ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಜ್ಯೂ.ಎನ್‌ಟಿಆರ್ ಎಂಟ್ರಿ: ಇಲ್ಲಿದೆ ಮಾಹಿತಿ

    ಈ ಘಟನೆ ಕಣ್ಣಾರೆ ಕಂಡ ರಮೇಶ್ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಒಂದು ದಿನ ಅವರನ್ನು ಜುನ್ನಾರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡೆಗೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್‌ ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ರಸ್ತೆ 1 ತಿಂಗಳು ಬಂದ್‌

    ನಗರದ ಕಿರಿದಾದ ಮತ್ತು ಕೆಟ್ಟ ರಸ್ತೆಗಳಿಂದಾಗಿ ಈ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬಂತು ಬ್ಯಾಗ್‌ ತುಂಬಾ ಈರುಳ್ಳಿ!

    ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬಂತು ಬ್ಯಾಗ್‌ ತುಂಬಾ ಈರುಳ್ಳಿ!

    ನ್ಯೂಯಾರ್ಕ್: ಆನ್‌ಲೈನ್‌ನಲ್ಲಿ ಸೆಕೆಂಡ್‌ ಹ್ಯಾಂಡ್‌ ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ ಬಂದಿದೆ. ಇದನ್ನು ನೋಡಿ ಮಹಿಳೆ ಶಾಕ್‌ ಆಗಿದ್ದಾರೆ.

    ಬ್ರಿಟಿಷ್ ಸೆಕೆಂಡ್ ಹ್ಯಾಂಡ್ ಫ್ಯಾಶನ್ ಸೈಟ್ ಡೆಪಾಪ್‌ನಲ್ಲಿ ಮಹಿಳೆ ಜೀನ್ಸ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಬ್ಯಾಗ್‌ ತುಂಬಾ ಈರುಳ್ಳಿ ಪಾರ್ಸೆಲ್‌ ಬಂದಿದೆ. ಇದನ್ನು ಕಂಡು ಅಚ್ಚರಿಗೊಂಡ ಮಹಿಳೆ, ಮಾರಾಟಗಾರರನ್ನು ಸಂಪರ್ಕಿಸಿ ಪ್ರಶ್ನಿಸಿದ್ದಾರೆ. ಅವರು ಕೂಡ ಗೊಂದಲಕಾರಿ ಉತ್ತರವನ್ನು ನೀಡಿದ್ದಾರೆ. ಈರುಳ್ಳಿ ಹೇಗೆ ಬಂತು ಎಂಬುದು ನಮಗೂ ಗೊತ್ತಿಲ್ಲ ಎಂದು ಮಹಿಳೆಗೆ ತಿಳಿಸಿದ್ದಾರೆ. ಇದನ್ನೂ ಓದಿ: ಇಂದೋರ್‌ಗೆ ಬಂದ ತಕ್ಷಣ ರಾಹುಲ್ ಗಾಂಧಿಯನ್ನು ಬಾಂಬ್ ಸ್ಫೋಟಿಸಿ ಕೊಲ್ಲುವ ಬೆದರಿಕೆ

    ಘಟನೆ ಕುರಿತು ಮಹಿಳೆ ಮಾರಾಟಗಾರರೊಂದಿಗೆ ತನ್ನ ಚಾಟ್‌ನ ತುಣುಕನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ನಾನು ಆರ್ಡರ್ ಮಾಡಿದ ಜೀನ್ಸ್‌ ಬದಲಿಗೆ ಈರುಳ್ಳಿ ಇರುವ ಪಾರ್ಸೆಲ್ ಏಕೆ ಬಂದಿದೆ?” ಎಂದು ಮಾರಾಟಗಾರರನ್ನು ಮಹಿಳೆ ಪ್ರಶ್ನಿಸಿದ್ದಾರೆ. “ಈ ಬಗ್ಗೆ ನಮಗೂ ಗೊಂದಲವಿದೆ. ತಪ್ಪಾದ ಆರ್ಡರ್‌ ಬಂದಿರುವುದಕ್ಕೆ ಕ್ಷಮೆಯಾಚಿಸುತ್ತೇವೆ” ಎಂದು ಮಾರಾಟಗಾರ ಪ್ರತಿಕ್ರಿಯಿಸಿದ್ದಾರೆ.

    ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ಈ ಪೋಸ್ಟ್‌ಗೆ ಕೆಲವರು ತಮಾಷೆಯಾಗಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಇದು ತುಂಬಾ ತಮಾಷೆಯಾಗಿದೆ” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. “ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌” ಎಂದು ಮತ್ತೊಬ್ಬರು ಕಾಮೆಂಟ್‌ ಹಾಕಿದ್ದಾರೆ. ಇದನ್ನೂ ಓದಿ: ಇತಿಹಾಸ ನಿರ್ಮಿಸಿದ ಭಾರತ – ಮೊದಲ ಖಾಸಗಿ ನಿರ್ಮಿತ ರಾಕೆಟ್ ಉಡಾಯಿಸಿದ ಇಸ್ರೋ

    Live Tv
    [brid partner=56869869 player=32851 video=960834 autoplay=true]

  • ಸಲಿಂಗಕಾಮದ ಶಂಕೆ – ಮಹಿಳೆಯರಿಬ್ಬರನ್ನು ಥಳಿಸಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಸುಟ್ಟ ದುರುಳರು

    ಸಲಿಂಗಕಾಮದ ಶಂಕೆ – ಮಹಿಳೆಯರಿಬ್ಬರನ್ನು ಥಳಿಸಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಸುಟ್ಟ ದುರುಳರು

    ಕೋಲ್ಕತ್ತಾ: ಇಬ್ಬರು ಮಹಿಳೆಯರನ್ನು (Women) ಸಲಿಂಗಕಾಮಿಗಳು (Lesbian) ಎಂದು ಶಂಕಿಸಿ, ಮೂವರು ಪರುಷರ ಗುಂಪು ಅವರಿಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಿಸಿ ಕಬ್ಬಿಣದ ರಾಡ್‌ನಿಂದ ಖಾಸಗಿ ಭಾಗವನ್ನು ಸುಟ್ಟಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

    ಆಘಾತಕಾರಿ ಘಟನೆ ಅಕ್ಟೋಬರ್ 25ರಂದು ಜಿಲ್ಲೆಯ ಸಾಗರ್ದಿಘಿ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯರನ್ನು ಪುರುಷರು ಲೈಂಗಿಕ ಪ್ರವೃತ್ತಿಗಾಗಿ ಥಳಿಸಿದ್ದಾರೆ ಎಂದು ತಿಳಿದುಬಂದಿದೆ.

    ಇಬ್ಬರು ಮಹಿಳೆಯರು ಮಲಗಿದ್ದ ಸಂದರ್ಭ ಆರೋಪಿಗಳು ಕೊಠಡಿಯ ಬಾಗಿಲು ಒಡೆದು ಬಂದಿದ್ದಾರೆ. ಇಬ್ಬರು ಮಹಿಳೆಯರು ಒಂದೇ ಬೆಡ್‌ನಲ್ಲಿ ಮಲಗಿದ್ದಕ್ಕೆ ಅವರಿಬ್ಬರು ಸಲಿಂಗಕಾಮಿಗಳು ಎಂದು ಆರೋಪಿಸಿ ಅವರಿಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಬಾಲಕಿ ಮೇಲೆ 6 ಹುಡುಗರಿಂದ ಅತ್ಯಾಚಾರ – ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದು ವಿಕೃತಿ

    ಮೂವರು ಪುರುಷರು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾರೆ. ಆದರೆ ಇಬ್ಬರು ಸಂತ್ರಸ್ತೆಯರು ಸ್ಥಳದಿಂದ ತಪ್ಪಿಸಿಕೊಂಡು ಹೋಗಿ, ಹೊಲದಲ್ಲಿ ಅಡಗಿ ಕೂತಿದ್ದಾರೆ. ಇಬ್ಬರ ಮೇಲೆ ಬೆಂಕಿ ಕಡ್ಡಿ ಹಾಗೂ ಮದ್ಯದ ಬಾಟಲಿಗಳಿಂದಲೂ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

    KILLING CRIME

    ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯರು ನವೆಂಬರ್ 3 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಒಬ್ಬ ಮಹಿಳೆ ಮತ್ತೊಬ್ಬಳೊಂದಿಗೆ ಸಂಬಂಧ ಇದ್ದುದಾಗಿಯೂ ಒಪ್ಪಿಕೊಂಡಿದ್ದಾರೆ. ಆರೋಪಿಗಳಲ್ಲೊಬ್ಬ ಸಂತ್ರಸ್ತೆಯೊಬ್ಬರ ಸಂಬಂಧಿಯೂ ಇದ್ದ ಎಂದು ಮಹಿಳೆಯರು ದೂರು ನೀಡಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ – ಪತಿ ವಿರುದ್ಧ ಪತ್ನಿ ದೂರು

    ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]