ನವದೆಹಲಿ: ಕೋವಿಡ್ (Covid-19) ಸಾಂಕ್ರಾಮಿಕದ ನಂತರ ಮದ್ಯಸೇವನೆ (Drinking) ಮಾಡುವುದರಲ್ಲಿ ಮಹಿಳೆಯರ (Women) ಸಂಖ್ಯೆಯೇ ಹೆಚ್ಚಾಗಿದೆ ಎಂದು ಕಮ್ಯುನಿಟಿ ಅಗೇನ್ಸ್ಟ್ ಡ್ರಂಕನ್ ಡ್ರೈವಿಂಗ್ (CADD) ಸರ್ಕಾರೇತರ ಸಂಸ್ಥೆ ನಡೆಸಿದ ಸಮೀಕ್ಷೆ ತೋರಿಸಿದೆ.
ಈ ವರ್ಷ ಆಗಸ್ಟ್ನಿಂದ ಅಕ್ಟೋಬರ್ ವರೆಗೆ 18 ರಿಂದ 68ನೇ ವಯಸ್ಸಿನ 5,000 ಮಹಿಳೆಯರ ಮೇಲೆ ನಡೆಸಿದ ಸಮೀಕ್ಷೆಯ ದತ್ತಾಂಶವು ಮಹಿಳೆಯರಲ್ಲಿ (Women’s) ಮದ್ಯ ಸೇವನೆ ಹೆಚ್ಚಾಗಿರುವುದನ್ನು ಸೂಚಿಸಿದೆ. ಮನೆಯಲ್ಲಿ ಹಾಗೂ ಮನೆಯ ಪಾರ್ಟಿಗಳಲ್ಲಿ (House Parties) ಕುಡಿಯುವವರು ಹೆಚ್ಚಾಗಿದ್ದಾರೆ. ಇನ್ನೂ ಕೆಲ ಮಹಿಳೆಯರು ಪಬ್ಗಳಿಗೆ (Pub) ಹೋಗಿ ಕುಡಿಯಲು ಇಷ್ಟಪಡುತ್ತಾರೆ ಎಂಬುದನ್ನು ಸಮೀಕ್ಷೆ ಸೂಚಿಸಿದೆ. ಇದನ್ನೂ ಓದಿ: ಹೊಸ ಮನೆಗೆ ಕಾಲಿಟ್ಟ ಮಿಲನಾ- ಡಾರ್ಲಿಂಗ್ ಕೃಷ್ಣ ಜೋಡಿ
ಈ ಕುರಿತು ಸಿಎಡಿಡಿ (ACDD) ಸಂಸ್ಥಾಪಕ ಪ್ರಿನ್ಸ್ ಸಿಂಘಾಲ್ ಮಾತನಾಡಿದ್ದು, ಇತ್ತೀಚಿನ ಪ್ರವೃತ್ತಿಗಳು ಮಹಿಳೆಯರಲ್ಲಿ ಮದ್ಯ ಸೇವೆನೆ ಮಾಡುವುದನ್ನು ಹೆಚ್ಚಾಗಿಸಿದೆ. ಕಳೆದ 3 ವರ್ಷಗಳಲ್ಲಿ ಕುಡಿಯುವ ಮಾದರಿಗಳು ಬದಲಾಗಿದೆ. ಸಾಂಕ್ರಾಮಿಕದ ನಂತರ ಅದರ ಒತ್ತಡದಿಂದಾಗಿಯೇ ಹೆಚ್ಚು ಮದ್ಯ ಸೇವಿಸಲು ಆರಂಭಿಸಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಮಹಿಳೆಯರು ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುತ್ತಿದ್ದರು. ನಂತರ ಕನಿಷ್ಠ ಶೇ.30 ಮಹಿಳೆಯರು ತಮ್ಮ ಆಲ್ಕೋಹಾಲ್ (Alcohol) ಸೇವನೆಯನ್ನು ಶೇ.42.3ರಷ್ಟು ಹೆಚ್ಚಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದ್ಯನಾದ್ರೂ ಸೇವಿಸಿ, ಗುಟ್ಕಾ ಬೇಕಾದ್ರೂ ತಿನ್ನಿ – ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ
ಶೇ.45.7 ರಷ್ಟು ಮಹಿಳೆಯರು ಒತ್ತಡದಿಂದ, ಶೇ.30.1 ರಷ್ಟು ಮಹಿಳೆಯರು ಬೇಸರ ಹಾಗೂ ಒಂಟಿ ತನದಿಂದ ಹಾಗೂ ಶೇ.34.4 ರಷ್ಟು ಮಹಿಳೆಯರು ಆಲ್ಕೋಹಾಲ್ ಲಭ್ಯವಾಗುತ್ತಿರುವುದರಿಂದ ಕುಡಿತದ ಸಂಖ್ಯೆ ಹೆಚ್ಚಾಗಿದೆ. ಮಹಿಳೆಯರು ಕುಟುಂಬ ನಿರ್ವಹಣೆ, ಮನೆಗೆಲಸ, ವೃತ್ತಿಪರ ಜೀವನ ನಿರ್ವಹಣೆ ನಿಭಾಯಿಸುವುದರಿಂದ ಪುರುಷರಿಗಿಂತ ಮೂರುಪಟ್ಟು ಹೆಚ್ಚಿನ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಆದ್ದರಿಂದ ಮಹಿಳೆಯರಲ್ಲಿ ಮದ್ಯ ಸೇವನೆ ಮಾಡುವವರ ಸಂಖ್ಯೆ ಸಹಜವಾಗಿಯೇ ಹೆಚ್ಚಾಗಿದೆ ಎಂದು ಸಮೀಕ್ಷೆ ತೋರಿಸಿರುವುದಾಗಿ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ನಿಂದಿಸಿ ಕಿರುಚಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪೊಲೀಸರ ವಾಹನದ ಮೇಲೆ ಮಹಿಳೆಯರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದ ಬಳಿಕ ಪರಿಸ್ಥಿತಿ ಅತೀರೇಕಕ್ಕೆ ತಲುಪಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ವೈರಲ್ ಆಗುತ್ತಿರುವ ವೀಡಿಯೋ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ (Ambedkar Nagar district) ಜಲಾಲ್ಪುರದಾಗಿದ್ದು (Jalalpur), ಇತ್ತೀಚೆಗಷ್ಟೇ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣ ಸಂಬಂಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮಗಳನ್ನು ಕಾಲೇಜಿಗೆ ಬಿಡಲು ಗಳಗಳನೇ ಅತ್ತ ತಂದೆ – ಹೃದಯಸ್ಪರ್ಶಿ ವೀಡಿಯೋ ವೈರಲ್
यूपी: अम्बेडकर नगर में कल से ही विवाद चल रहा था. किसी ने अम्बेडकर की तस्वीर पर कालिख पोत दी थी.
ಭೂ ವಿವಾದವಿರುವ ಸ್ಥಳದಲ್ಲಿ ಪ್ರತಿಮೆ ಇರುವುದು ಪ್ರತಿಭಟನೆಗೆ ಕಾರಣವಾಗಿದ್ದು, ಭಾನುವಾರ ಮಹಿಳೆಯರ ಗುಂಪು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ಚದುರಿಸಲು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಹಿರಿಯ ಅಧಿಕಾರಿ ಸೇರಿದಂತೆ ಪೊಲೀಸರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದರು. ಅಲ್ಲದೇ ಕೆಲವು ಮಹಿಳೆಯರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೂದಲು ಹಿಡಿದುಕೊಂಡು ಎಳೆದಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
ನಂತರ ಪ್ರತಿಭಟನಾಕಾರರು ಪೊಲೀಸ್ ಕಾರಿನ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಈ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಪ್ರಹಾರ ನಡೆಸಬೇಕಾಗಿತ್ತು ಎಂದು ಅಂಬೇಡ್ಕರ್ ನಗರ ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ಕುಮಾರ್ ಸಿನ್ಹಾ ಹೇಳಿದ್ದಾರೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?
Live Tv
[brid partner=56869869 player=32851 video=960834 autoplay=true]
ಇಸ್ಲಾಮಾಬಾದ್: ಪ್ರೀತಿ ಅನ್ನುತ್ತಿದ್ದಂತೆ ಅದೆಷ್ಟೋ ಸಿನಿಮಾ ಕಥೆಗಳು (Cinema Story) ಕಣ್ಣ ಮುಂದೆ ಹಾದು ಹೋಗುತ್ತವೆ, ಎಂದೂ ಕುಡಿಯದೇ ಇರುವ ಟೀ ಅನ್ನು ಬೈಟು ಮಾಡಿ ಕುಡಿಯಬೇಕೆನ್ನಿಸುತ್ತದೆ. ಕೊರೆಯುವ ಮೈಚಳಿಗೆ ಬೆಚ್ಚನೆಯ ಅಪ್ಪುಗೆ ಬೇಕೆನ್ನಿಸುತ್ತದೆ. ಹಾಗಾಗಿಯೇ ಪ್ರೀತಿಗೆ (Love) ಕಣ್ಣಿಲ್ಲ ಅನ್ನೋ ಮಾತು ಪದೇ ಪದೇ ಸಾಬೀತಾಗುತ್ತಲೇ ಇದೆ.
ವಿದೇಶದಲ್ಲಿ ನಡೆದಿರುವ ಲವ್ಸ್ಟೋರಿ (Love Story) ನೈಜ ಪ್ರೀತಿಗೆ ಮತ್ತೊಂದು ಸಾಕ್ಷಿಯಾಗಿದೆ. 83 ವರ್ಷದ ವೃದ್ಧೆಯೊಬ್ಬರು ತನ್ನ 28 ವರ್ಷದ ಪ್ರೇಮಿಯನ್ನ (Lover) ಮದುವೆಯಾಗಲು ದೇಶ ಬಿಟ್ಟು ಮತ್ತೊಂದು ದೇಶಕ್ಕೆ ಹೋಗಿದ್ದಾಳೆ. ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ – ಬಿಜೆಪಿ ವಿರುದ್ಧ ಗೆದ್ದು ಬೀಗಿದ ಕೆಸಿಆರ್
ಪೋಲೆಂಡಿನ 83ರ ಬ್ರೋಮಾ ಎಂಬ ವೃದ್ಧೆ, ಪಾಕಿಸ್ತಾನದ (Pakistan) 28ರ ಯುವಕ ಹಫೀಜ್ ಮೊಹಮ್ಮದ್ ನದೀಮ್ ನನ್ನ ಪ್ರೀತಿಸಿ ಮದುವೆಯಾಗಿದ್ದಾರೆ. ಅದಕ್ಕಾಗಿ ತನ್ನ ದೇಶದಿಂದ ಸಾವಿರಾರು ಕಿಮೀ ಪ್ರಯಾಣ ಬೆಳೆಸಿ ಪಾಕಿಸ್ತಾನಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಸೋನು ಬದಲು ದೊಡ್ಮನೆಗೆ ಚಕ್ರವರ್ತಿ ಚಂದ್ರಚೂಡ್ ವೈಲ್ಡ್ ಕಾರ್ಡ್ ಎಂಟ್ರಿ
ವೃತ್ತಿಯಲ್ಲಿ ಆಟೋ ಮೆಕ್ಯಾನಿಕ್ ಆಗಿರುವ ಹಫೀಜ್ ಮೊಹಮ್ಮದ್ ನದೀಮ್ನನ್ನು ಬ್ರೋಮಾ 6 ವರ್ಷಗಳ ಹಿಂದೆ ಮೊದಲ ಬಾರಿಗೆ ಭೇಟಿ ಮಾಡಿದ್ದರು. ನಂತರ ಇಬ್ಬರ ನಡುವೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿ ಇದೀಗ ವಿವಾಹದ ಹಂತಕ್ಕೆ ತಲುಪಿದೆ. ಸಾವಿರಾರು ಕಿಮೀ ನಿಂದ ಬಂದಿದ್ದ ಬ್ರೋಮಾ ಮುಸ್ಲಿಂ ಕಾನೂನಿನ ಪ್ರಕಾರವೇ ಕೈಗೆ ಗೋರಂಟಿ ಧರಿಸಿ, ಸಾಂಪ್ರದಾಯಿಕ ಉಡುಗೆಯುಟ್ಟು ಮದುವೆಯಾಗಿದ್ದಾರೆ. ಸದ್ಯ ಇಬ್ಬರ ಮದುವೆ ವಿಷಯ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ 60 ವರ್ಷದ ಮಹಿಳೆಯೊಬ್ಬರು ತನಗಿಂತ 30 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಲು 14,400 ಕಿಮೀ ಪ್ರಯಾಣ ಬೆಳೆಸಿ ಬಂದಿದ್ದರು. ಆ ನಂತರ 73 ವರ್ಷದ ವೃದ್ಧೆಯೊಬ್ಬರು 18ರ ಯುವಕನನ್ನು ವರಿಸಿ, ಫಿಲಿಪೈನ್ಸ್ನಲ್ಲಿ ಮದುವೆಯಾದ್ದರು. ಇದೀಗ ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಜನರನ್ನ ಅಚ್ಚರಿಗೊಳಿಸಿದೆ.
Live Tv
[brid partner=56869869 player=32851 video=960834 autoplay=true]
ನವೆಂಬರ್ ತಿಂಗಳು ಬರುತ್ತಿದ್ದಂತೆಯೇ ಚಳಿ, ಗಾಳಿ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಜನ ಚಳಿಯಿಂದ ಬೆಚ್ಚಗಿರಲು ಶಾಲ್, ಟೋಪಿ, ಸ್ವೆಟರ್, ಪುಲ್ಓವರ್, ಸ್ವೆಟ್ಶರ್ಟ್ಗಳ ಮೊರೆಹೋಗಿರುತ್ತಾರೆ. ಅಲ್ಲದೇ ಚಳಿಗಾಲದಲ್ಲಿ ಎಂತಹ ಉಡುಪುಗಳನ್ನು ಧರಿಸಬೇಕು ಎಂಬುವುದು ಕೂಡ ಬಹಳ ಮುಖ್ಯವಾಗಿರುತ್ತದೆ. ವರ್ಷಾಂತ್ಯದಲ್ಲಿ ಬರುವ ಚಳಿಗಾಲದಲ್ಲಿ ಜನರ ಕಣ್ಣು ಕುಕ್ಕುವಂತಹ ನಾನಾ ವೆರೈಟಿ ಹೊದಿಕೆಗಳು, ಸ್ಟೆಟರ್ಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಈ ಕುರಿತ ಒಂದಷ್ಟು ಮಾಹಿತಿ ಈ ಕೆಳಗೆ ನೀಡಲಾಗಿದೆ.
ಅಲೆನ್ ಸೋಲಿ ಮೆನ್ ಸ್ವೆಟ್ಶರ್ಟ್
ಕಿತ್ತಳೆ ಬಣ್ಣದ ಈ ಸ್ವೆಟ್ಶರ್ಟ್ ನಿಮ್ಮನ್ನು ಬೆಚ್ಚಗಿರಿಸುವುದಷ್ಟೇ ಅಲ್ಲದೇ ಸಖತ್ ಅಟ್ರ್ಯಾಕ್ಟಿವ್ ಲುಕ್ ನೀಡುತ್ತದೆ. ಇದು ಚಳಿಗಾಲದಲ್ಲಿಯೂ ಬೇಸಿಗೆ ಎಂಬಂತಹ ಭಾವನೆ ಮೂಡಿಸುವಷ್ಟು ನಿಮ್ಮನ್ನು ಬೆಚ್ಚಗಿರಿಸುತ್ತದೆ. ಜೊತೆಗೆ ಇದು ನಿಮಗೆ ಸ್ಟೈಲಿಶ್ ಲುಕ್ ಕೂಡ ನೀಡುತ್ತದೆ. ನೂಲಿನಿಂದ ಮಾಡಲಾಗಿರುವ ಈ ಜಾಕೆಟ್ ಮದ್ಯದಲ್ಲಿ ಜಿಪ್ ಇರುವುದನ್ನು ಕಾಣಬಹುದಾಗಿದೆ.
ಮಾಂಟೆ ಕಾರ್ಲೊ ವುಮೆನ್ಸ್ ಬ್ಲಾಕ್ ಪಾರ್ಕ್ ಜಾಕೆಟ್
ಮುಂಭಾಗ ಜಿಪ್ ಮತ್ತು ಬಟನ್ಗಳೊಂದಿಗೆ, ದೊಡ್ಡ ಜೇಬಿಗಳಿರುವ ಈ ಜಾಕೆಟ್ ನಿಮ್ಮನ್ನು ಬೆಚ್ಚಗಿರಿಸುವುದರ ಜೊತೆಗೆ ಸಖತ್ ಸ್ಟೈಲಿಶ್ ಆಗಿ ಕಾಣಿಸುತ್ತದೆ. ಫ್ಯಾಶನ್ ಲುಕ್ ನೀಡುವ ಈ ಜಾಕೆಟ್ ಉಷ್ಣಾಂಶವನ್ನು ಹೆಚ್ಚಾಗಿಸುತ್ತದೆ. ಈ ಜಾಕೆಟ್ ಅನ್ನು ಜೀನ್ಸ್ ಜೊತೆಗೆ ಶೂಗಳೊಂದಿಗೆ ಧರಿಸುವುದರಿಂದ ಬೆಸ್ಟ್ ಎಂದೇ ಹೇಳಬಹುದು.
ಜಾಮ್ & ಹನಿ ಬಾಯ್ಸ್ ಸ್ವೆಟರ್
ಸ್ಲೀವ್ಸ್ ಇಲ್ಲದ ಈ ಸ್ವೆಟರ್ ಕುತ್ತಿಗೆ ಪೂರ್ತಿ ಬರುತ್ತದೆ. ಸಾಮಾನ್ಯವಾಗಿ ಬ್ಲಾಕ್ ಕಲರ್ ಉಡುಪು ಚೆನ್ನಾಗಿಯೇ ಕಾಣಿಸುತ್ತದೆ. ಸದ್ಯ ಈ ಸ್ವೆಟರ್ ಕೂಡ ಬ್ಲಾಕ್ ಕಲರ್ ಆಗಿದ್ದು, ಮದ್ಯದಲ್ಲಿ ಬಿಳಿ ಬಣ್ಣದ ಸ್ಟಾರ್ ಡಿಸೈನ್ ಎದ್ದು ಕಾಣುತ್ತದೆ. ವಿಷೇಶವೆಂದರೆ ಈ ಸ್ವೆಟರ್ ಅನ್ನು ಯಾವುದೇ ಶರ್ಟ್ ಮೇಲೆ ಬೇಕಾದರೂ ಧರಿಸಬಹುದಾಗಿದೆ.
ಸಿಂಬಲ್ ಗರ್ಲ್ಸ್ ಜಾಕೆಟ್
ಯೆಲ್ಲೋ ಕಲರ್ನ ಈ ಜಾಕೆಟ್ ಹುಡುಗಿಯರಿಗೇ ಚಳಿಗಾಲದಲ್ಲಿ ಬೆಸ್ಟ್ ಎಂದೇ ಹೇಳಬಹುದು. ಈ ಜಾಕೆಟ್ನ ಮುಂಭಾಗದಲ್ಲಿ ಜಿಪ್ ಇರುತ್ತದೆ. ಈ ಜಾಕೆಟ್ ಒಳಗಡೆ ಕಪ್ಪು ಲೈನಿಂಗ್ ಮತ್ತು ಮ್ಯಾಂಡರಿನ್ ಕಾಲರ್ ಇದೆ. ಇದು ನಿಮ್ಮನ್ನು ಬೆಚ್ಚಗಿರಿಸುವುದರ ಜೊತೆಗೆ ಧರಿಸಲು ಕಂಫರ್ಟ್ ಆಗಿರುತ್ತದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ತುಮಕೂರು (Tumakuru) ಜಿಲ್ಲಾ ಆಸ್ಪತ್ರೆ ವೈದ್ಯೆ ಮತ್ತು ಸಿಬ್ಬಂದಿಯ ಕ್ರೌರ್ಯಕ್ಕೆ ಬಲಿಯಾದ ಬಾಣಂತಿ, ಆಕೆಯ ಇಬ್ಬರು ನವಜಾತ ಶಿಶುಗಳ ದಾರುಣ ಸಾವು ವಿಚಾರದಲ್ಲಿ ಜನರ ದಾರಿ ತಪ್ಪಿಸಲೆತ್ನಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (K.Sudhakar) ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy) ಅವರು ಟೀಕಾಪ್ರಹಾರ ಮುಂದುವರಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ಅಮಾನುಷ ಸಾವುಗಳನ್ನು ಪ್ರಶ್ನಿಸಿದ ತಮ್ಮ ವಿರುದ್ಧವೇ ಲಘುವಾಗಿ ಟ್ವೀಟ್ ಮಾಡಿರುವ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ಸಚಿವ ಸ್ಥಾನಕ್ಕೆ ಸುಧಾಕರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನೈತಿಕತೆ ಇದ್ದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ರಾಜೀನಾಮೆ ಪಡೆಯಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಪಡಿಸಿದ್ದಾರೆ. ಇದನ್ನೂ ಓದಿ: ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು
ಟ್ವೀಟ್ನಲ್ಲೇನಿದೆ?
ಸಚಿವ ಸುಧಾಕರ್ ಅವರ ಮೇಲೆ ನೇರವಾಗಿಯೇ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು, ಮಾನ್ಯ ಸುಧಾಕರ್ ಅವರೇ ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ಸಾವುಗೇಡಿ ಸರ್ಕಾರದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನ ಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ?
ರಾಜ್ಯದಲ್ಲಿ @BJP4Karnataka ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ.9/9
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 3, 2022
ಡಾ.ಸುಧಾಕರ್ ಅವರೇ ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ದಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಃಸ್ಥಿತಿಗೆ ನನ್ನ ಧಿಕ್ಕಾರವಿದೆ.
ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಶ್ರೀ @BSBommai ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು. 8/9
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 3, 2022
ತುಮಕೂರು ಆಸ್ಪತ್ರೆಯಲ್ಲಿ ನಡೆದದ್ದೇನು? ಆ ವೈದ್ಯೆ ಮತ್ತು ಸಿಬ್ಬಂದಿಯ ನಿರ್ದಯ, ಕ್ರೌರ್ಯದ ವರ್ತನೆ, ಆಕೆಯನ್ನು ಆಸ್ಪತ್ರೆಗೆ ಕರೆತಂದ ಮಹಿಳೆಗೆ ಈಗ ಪೊಲೀಸರಿಂದ ಬೆದರಿಕೆ ಹಾಕಿಸುತ್ತಿರುವ ಬಗ್ಗೆ ನನಗೆ ಮಾಹಿತಿ ಇದೆ. ಅಧಿಕಾರ ಇದೆ ಎಂದು ಏನು ಬೇಕಾದರೂ ಮಾಡಬಹುದಾ? ಇನ್ನು ಆರೇ ತಿಂಗಳು, ನಿಮ್ಮ ಅಧಿಕಾರದ ಅಮಲು ಇಳಿಯುತ್ತದೆ. ಇದನ್ನೂ ಓದಿ: ಕಸದಲ್ಲಿ ಸಿಕ್ತು 50 ಗ್ರಾಂ ಮಾಂಗಲ್ಯ ಸರ – ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕ
ಸಚಿವರೇ, ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ @BSBommai ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ನಿಮ್ಮ ಪಕ್ಷಕ್ಕೂ ಅಂಥ ನೈತಿಕತೆ @BJP4Karnataka ಸರಕಾರಕ್ಕೆ ಇದೆಯಾ? 10/10
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2022
ಇಂಥ ದಾರುಣ ಸಾವುಗಳಾದ ಮೇಲೆಯಾದರೂ ಹದಗೆಟ್ಟ ವ್ಯವಸ್ಥೆಯನ್ನು ಸರಿಪಡಿಸುವ ಬದಲು ಅದನ್ನೇ ಸಮರ್ಥಿಸಿಕೊಳ್ಳುವುದು ಎಂದರೆ ವಿಕಾರವಲ್ಲದೆ ಮತ್ತೇನು? ಜಿಲ್ಲಾಸ್ಪತ್ರೆಯಲ್ಲೇ ಇಂಥ ದುಃಸ್ಥಿತಿ ಇದ್ದರೆ ತಾಲೂಕು, ಅದಕ್ಕೂ ಕೆಳಹಂತದ ಆರೋಗ್ಯ ಕೇಂದ್ರಗಳ ಪಾಡೇನು? ಹೇಳಿ ಸಚಿವರೇ? ಆಸ್ಪತ್ರೆಯಿಂದ ನಿರ್ದಯವಾಗಿ ಹೊರಹಾಕಲ್ಪಟ್ಟ ಆ ತಾಯಿ, ನಾಲ್ಕು ಗೋಡೆಗಳ ನಡುವೆ ಇಡೀ ರಾತ್ರಿಯೆಲ್ಲಾ ನರಳಿ ಜೀವ ಚೆಲ್ಲಿದ್ದಾರೆ. ಜನಿಸಿದ ಕ್ಷಣದಲ್ಲೇ ಉಸಿರುಬಿಟ್ಟ ಆ ಎರಡು ಕಂದಮ್ಮಗಳ ಮರಣ ನಿಮ್ಮ ಅಂತಃಕರಣವನ್ನು ಕಲಕಿಲ್ಲವೇ ಸಚಿವರೇ? ಕರ್ನಾಟಕ ಕಂಡ ಅತ್ಯಂತ ಕರಾಳ ಕ್ರೌರ್ಯವಿದು. ಅದನ್ನು ನಾನು ಪ್ರಶ್ನಿಸಿದ್ದೇ ತಪ್ಪಾ?
ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ʼಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲʼ ಸಚಿವರೇ. 9/10
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2022
ನನ್ನ ಸರ್ಕಾರವಿದ್ದಾಗ ಚಾಮರಾಜನಗರದ ಸುಳವಾಡಿಯ ದೇಗುಲದಲ್ಲಿ ನಡೆದ ವಿಷಪ್ರಸಾದ ಪ್ರಕರಣಕ್ಕೂ ಇದಕ್ಕೂ ಸಂಬಂಧವೇನು? ಆ ಘಟನೆ ನಡೆದಾಗ ನಾನು ಚೆನ್ನೈನಲ್ಲಿ ಅಧಿಕೃತ ಪ್ರವಾಸದಲ್ಲಿದ್ದೆ. ವಿಷಯ ಗೊತ್ತಾದ ಕೂಡಲೇ ಹಿಂದಿರುಗಿ ಸ್ಥಳಕ್ಕೆ ಭೇಟಿ ನೀಡಿದ್ದೆ. ಅದಕ್ಕೂ ಇದಕ್ಕೂ ಸಂಬಂಧವೇನು? ಅಲ್ಲಿ ನಡೆದಿದ್ದು ಷಡ್ಯಂತ್ರ, ಇಲ್ಲಿ ನಡೆದದ್ದು ಕ್ರೌರ್ಯ. ಅದೇ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಿಂದ 36 ಜನರ ಸಾವಿಗೆ ಕಾರಣರಾಗಿದ್ದು ಯಾರು? ನಿಮ್ಮ ವೈಫಲ್ಯವಲ್ಲವೇ? ರಾಜ್ಯದ ಉದ್ದಗಲಕ್ಕೂ ನಡೆದ ಸಾವುಗಳ ರಣಕೇಕೆ ನಿಮ್ಮ ಕಿವಿಗೆ ಇಂಪಾಗಿತ್ತಾ? ಕೋವಿಡ್ ಹೆಸರಿನಲ್ಲಿ ನಡೆದ ಕೊಳ್ಳೆ ಬಗ್ಗೆ ನನಗಿಂತ ನಿಮ್ಮ ಪಕ್ಷದವರಿಗೇ ಚೆನ್ನಾಗಿ ಗೊತ್ತು. ಇದನ್ನೂ ಓದಿ: ಶಿಕ್ಷಕಿ ಹೊಡೆತದಿಂದ ವಿದ್ಯಾರ್ಥಿನಿ ಸಾವು ಪ್ರಕರಣ – ನಮಗೆ ಹಣ ಬೇಡ, ನ್ಯಾಯ ಬೇಕು: ವಿದ್ಯಾರ್ಥಿನಿ ಅಜ್ಜಿ
ಮಾನ್ಯ @mla_sudhakar ಅವರೇ; ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? 1/10
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 5, 2022
ಕಾಸಿಗಾಗಿ ಹುದ್ದೆ ಇದು ನಿಮ್ಮ ಸುಲಿಗೆ ನೀತಿ. ವೈದ್ಯರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಬಿಕರಿಗಿಟ್ಟಿದ್ದೀರಿ. ಅವರ ಒಂದು ವರ್ಷದ ವೇತನ ನೀವು ನಿಗದಿ ಮಾಡಿರುವ ದರ. ಬೆಕ್ಕು ಕಣ್ಮುಚ್ಚಿ ಹಾಲು ಕುಡಿಯುತ್ತಿದೆ ಎಂದರೆ ಲೋಕಕ್ಕೆ ಕಾಣುವುದಿಲ್ಲವೇ? ಕಳ್ಳ ಬೆಕ್ಕಿನ ಆಟ ಕಾಲದುದ್ದಕ್ಕೂ ನಡೆಯುವುದಿಲ್ಲ, ನೆನಪಿರಲಿ ಸಚಿವರೇ. ನಿಮ್ಮ ಪರ್ಸಂಟೇಜ್ ವ್ಯವಹಾರದ ಬಗ್ಗೆ ಮಾತನಾಡಿದ ಗುತ್ತಿಗೆದಾರರಾದ ಕೆಂಪಣ್ಣ ಅವರು ಚಿಕ್ಕಬಳ್ಳಾಪುರದ ಕಾರ್ಯಕ್ರಮ ಒಂದಕ್ಕೆ ಬರಬೇಕಿತ್ತು. ಅವರನ್ನು ಬರದಂತೆ ತಡೆಯಲು ಏನೆಲ್ಲಾ ಹೈಡ್ರಾಮಾ ನಡೆಸಿದಿರಿ, ಯಾರ ಕಾಲು ಹಿಡಿದಿರಿ ಎನ್ನುವ ಮಾಹಿತಿ ನನಗೂ ಇದೆ. ಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲ ಸಚಿವರೇ.
ಸಚಿವರೇ ತುಮಕೂರು ಘಟನೆಗೆ ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು. ಆ ನೈತಿಕತೆ ನಿಮಗೆ ಇಲ್ಲದಿದ್ದರೆ, ಅದನ್ನು ಕೊನೆಪಕ್ಷ ನಿಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಾದರೂ ಪ್ರದರ್ಶಿಸಬೇಕು. ನಿಮ್ಮನ್ನು ಸಂಪುಟದಿಂದ ಕಿತ್ತೊಗೆಯಲೇಬೇಕು. ಅಂಥ ನೈತಿಕತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಇದೆಯಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕಾಬೂಲ್: ವಿದ್ಯಾರ್ಥಿನಿಯರು (Students) ಬುರ್ಖಾ (Burkha) ಧರಿಸಿಲ್ಲ ಅಂತ ಅಫ್ಘಾನಿಸ್ತಾನದ (Afghanistan) ವಿಶ್ವವಿದ್ಯಾಲಯಕ್ಕೆ (University) ಪ್ರವೇಶ ನೀಡದ ತಾಲಿಬಾನ್ (Taliban) ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಈ ವೇಳೆ ತಾಲಿಬಾನ್ ಅಧಿಕಾರಿಯೊಬ್ಬರು ವಿದ್ಯಾರ್ಥಿನಿಯರಿಗೆ ಥಳಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ವರದಿಗಳ ಪ್ರಕಾರ ಈ ಘಟನೆ ಈಶಾನ್ಯ ಅಫ್ಘಾನಿಸ್ತಾನದ ಬಡಾಕ್ಷನ್ ವಿಶ್ವವಿದ್ಯಾಲಯದ ಗೇಟ್ ಹೊರಗಡೆ ಭಾನುವಾರ ನಡೆದಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಹಲವು ವಿದ್ಯಾರ್ಥಿನಿಯರು ವಿವಿ ಪ್ರವೇಶಕ್ಕಾಗಿ ಗೇಟ್ ಹೊರಗಡೆ ಕಾದು ನಿಂತಿದ್ದಾರೆ. ಈ ವೇಳೆ ತಾಲಿಬಾನ್ನ ಸರ್ಕಾರಿ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳನ್ನು ಸ್ಥಳದಿಂದ ಚದುರಿಸಲು ಚಾಟಿ ಬೀಸಿರುವುದು ಕಂಡುಬಂದಿದೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ!
Taliban beat female students
Even though the girls are wearing hijabs, why are they not allowed to enter the university?
The #Taliban want to close the universities for #Female students.
ಕಳೆದ ವರ್ಷ ಆಗಸ್ಟ್ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಮಹಿಳೆಯರ ಚಲನೆ, ವಾಕ್, ಅಭಿವ್ಯಕ್ತಿ, ಕೆಲಸದ ಅವಕಾಶಗಳು ಹಾಗೂ ಉಡುಪಿನ ಸ್ವಾತಂತ್ರ್ಯದ ಮೇಲೆ ತೀವ್ರ ನಿರ್ಬಂಧಗಳನ್ನು ಹಾಕಿದೆ. 6ನೇ ತರಗತಿಯಿಂದ ಹುಡುಗಿಯರು ಶಾಲೆಗೆ ಹೋಗುವುದನ್ನು ತಡೆಹಿಡಿಯಲಾಗಿದೆ. ಇದನ್ನೂ ಓದಿ: ವೈಫೈ ಪಾಸ್ವರ್ಡ್ ಹಂಚಿಕೊಳ್ಳದ್ದಕ್ಕೆ ನಡೆಯಿತು ಯುವಕನ ಭೀಕರ ಕೊಲೆ
ತಾಲಿಬಾನ್ ಮಹಿಳೆಯರಿಗೆ ಸಾರ್ವಜನಿಕವಾಗಿ ಸರಿಯಾದ ಉಡುಪುಗಳನ್ನು ಧರಿಸಲು ಸೂಚಿಸಿದೆ. ನಿಖಾಬ್ (ಕಣ್ಣು ಹೊರತುಪಡಿಸಿ, ತಲೆ ಮತ್ತು ಮುಖವನ್ನು ಮುಚ್ಚುವ ಮುಸುಕು) ಅಥವಾ ಬುರ್ಖಾವನ್ನು ಮಹಿಳೆಯರು ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಧರಿಸಬೇಕಿದೆ. ಆದರೆ ಈ ಆದೇಶದ ವಿರುದ್ಧ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.
Live Tv
[brid partner=56869869 player=32851 video=960834 autoplay=true]
ಲಕ್ನೋ: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ಅತ್ಯಾಚಾರ (Accused) ಆರೋಪಿ ಯುವತಿಯೊಬ್ಬಳ ಜೀವನದಲ್ಲಿ ಚೆಲ್ಲಾಟವಾಡಿದ್ದಲ್ಲದೇ ಯುವತಿಯ ಗಂಡನಿಗೆ ಸಿನಿಮೀಯ ರೀತಿಯಲ್ಲಿ ಸತ್ಯ ಹೇಳಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅತ್ಯಾಚಾರ ಆರೋಪಿಯನ್ನು ಸೂರಜ್ ಎಂದು ಗುರುತಿಸಲಾಗಿದೆ. ಈತ ಎರಡು ವರ್ಷಗಳ ಹಿಂದೆ ಸಂತ್ರಸ್ತ ಮಹಿಳೆ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದ. ಯುವತಿ (Girl) ಪೋಷಕರೊಂದಿಗೆ ದೂರು ದಾಖಲಿಸಲು ಮುಂದಾದಾಗ ಆರೋಪಿ ಸೂರಜ್ ಯುವತಿಯನ್ನು ಮದುವೆಯಾಗುವುದಾಗಿ ಆಕೆಯ ತಾಯಿಗೆ ಭರವಸೆ ನೀಡಿದ್ದ. ಅದಾದ 2 ತಿಂಗಳ ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ. ಅಷ್ಟರಲ್ಲಾಗಲೇ ಸಂತ್ರಸ್ತ ಯುವತಿ ಗರ್ಭಿಣಿಯಾಗಿದ್ದಳು (Pregnant). ಹೇಗೋ ಯುವತಿಯ ತಂದೆ ಬೇರೊಬ್ಬ ಹುಡುಗನಿಗೆ ಮದುವೆ ಮಾಡಿಸಿದ್ದರು. ಇದನ್ನೂ ಓದಿ: ಬಂಡೇ ಮಠ ಶ್ರೀ ಆತ್ಮಹತ್ಯೆ ಪ್ರಕರಣ – ಮತ್ತೊಂದು ಪ್ರಭಾವಿ ಮಠದ ಶ್ರೀ ಭಾಗಿ?
ಯುವತಿ ಮದುವೆಯಾದ (Marriage) ನಂತರ ತವರು ಮನೆಗೆ ಬಂದಿದ್ದಳು. ಈ ವೇಳೆ ಆರೋಪಿ ಸೂರಜ್ ಮತ್ತೆ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಯುವತಿ ಪ್ರತಿಭಟಿಸಿದ್ದಾಳೆ. ಇದರಿಂದ ಕೋಪಗೊಂಡ ಆರೋಪಿ ಯುವತಿಯ ಪತಿಗೆ `ನಿನ್ನ ಹೆಂಡತಿಯನ್ನು ಗರ್ಭಿಣಿ (Pregnant) ಮಾಡಿದ್ದೇನೆ, ಆಕೆಯ ಹೊಟ್ಟೆಯಲ್ಲಿ ನನ್ನ ಗುರುತು ಇದೆ’ ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡ ಪತಿ ಅದೇ ದಿನ ಪತ್ನಿಯನ್ನು ಬಿಟ್ಟು ಹೋಗಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತ ಯುವತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದನ್ನೂ ಓದಿ: ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ
ಕಳೆದ ಸೆಪ್ಟೆಂಬರ್ 25 ರಂದು ಸೂರಜ್ ಮತ್ತೆ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಯುವತಿ ಎಫ್ಐಆರ್ (FIR) ದಾಖಲಿಸಲು ಹೋದಾಗ ಸೂರಜ್ ಒತ್ತಡಕ್ಕೆ ಮಣಿದು ಪೊಲೀಸ್ ಠಾಣೆಯಲ್ಲಿ (Police Station) ಎಫ್ಐಆರ್ ದಾಖಲಿಸಿಲ್ಲ. ಆದರೆ ಅಕ್ಟೋಬರ್ 8ರಂದು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಸಂತ್ರಸ್ತ ಯುವತಿಯ ಪರವಾಗಿ ಶಿವರಾಜಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆದರೆ ಇಲ್ಲಿಯವರೆಗೆ ಆರೋಪಿ ಸೂರಜ್ನನ್ನು ಪೊಲೀಸರು ಬಂಧಿಸಿಲ್ಲ.
ಡಿಎನ್ಎ ವರದಿ ಬರುವಷ್ಟರಲ್ಲೇ ಕೊಲ್ಲುತ್ತೇನೆ: ಡಿಎನ್ಎ (DNA) ವರದಿ ಬಂದ ಬಳಿಕ ಆರೋಪಿ ಸೂರಜ್ನನ್ನು ಬಂಧಿಸಲಾಗುವುದು ಎಂದು ಕಾನ್ಪುರದ ಪೊಲೀಸರು ತಿಳಿಸಿದ್ದಾರೆ. ಅದಕ್ಕಾಗಿ ಡಿಎನ್ಎ ಪರೀಕ್ಷೆ ಮಾಡಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ವೇಳೆ ಡಿಎನ್ಎ ವರದಿ ಬರುವ ಮುನ್ನವೇ ನಿನ್ನನ್ನು ಸಾಯಿಸುತ್ತೇನೆ ಎಂದು ಆರೋಪಿ ಸೂರಜ್ ಬೆದರಿಕೆ ಹಾಕಿದ್ದಾನೆ.
Live Tv
[brid partner=56869869 player=32851 video=960834 autoplay=true]
ವಾಷಿಂಗ್ಟನ್: ವಿದೇಶಗಳಲ್ಲಿ ವಿಚ್ಛೇದನ ಪಡೆಯೋದು, ಒಬ್ಬ ಮಹಿಳೆ (US Women) ಹೆಚ್ಚು ಪುರುಷರನ್ನ ವಿವಾಹವಾಗೋದು (Marriage) ಎಲ್ಲವೂ ಕಾಮನ್. ಇಂತಹ ಘಟನೆಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಲೇ ಇರುತ್ತವೆ. ಹಾಗೆಯೇ ಇಲ್ಲೊಬ್ಬಳು ಮಹಿಳೆ ಒಬ್ಬರಲ್ಲ, ಇಬ್ಬರಲ್ಲ 8 ಗಂಡಂದಿರನ್ನು ಹೊಂದಿದ್ದು, 11 ಮಕ್ಕಳನ್ನು ಹೊಂದಿದ್ದಾಳೆ. ಇನ್ನೂ 19 ಮಕ್ಕಳನ್ನು ಮಾಡಿಕೊಳ್ಳುವ ಯೋಜನೆಯಲ್ಲಿದ್ದಾಳೆ.
ಈ ಕುರಿತು ಸ್ವತಃ ಅಮೆರಿಕದ (America) ಮಹಿಳೆಯೇ ಹೇಳಿಕೊಂಡಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. 1 ಲಕ್ಷಕ್ಕೂ ಹೆಚ್ಚು ಜನರು ವೀಡಿಯೋವನ್ನು (Video) ವೀಕ್ಷಣೆ ಮಾಡಿದ್ದಾರೆ. ಅಲ್ಲದೇ ತನ್ನ ನಡೆಗೆ ಕಾರಣ ಏನೆಂಬುದನ್ನೂ ಹೇಳಿಕೊಂಡಿದ್ದಾಳೆ. ಒಟ್ಟಿನಲ್ಲಿ ಮಹಿಳೆಯ ಈ ವೀಡಿಯೋ ಟ್ರೋಲ್ಗಳಿಗೆ ಆಹಾರವಾಗಿದೆ. ಇದನ್ನೂ ಓದಿ: BJP ಸೇರಲು ಕಂಗನಾಗೆ ಗ್ರೀನ್ ಸಿಗ್ನಲ್ ಕೊಟ್ಟು ಆದರೆ.. ಎಂದ ನಡ್ಡಾ
ವೀಡಿಯೋನಲ್ಲಿ ಮಹಿಳೆ ಹೇಳಿದ್ದೇನು?
ತನ್ನ 8 ಗಂಡಂದಿರನ್ನು ಉಲ್ಲೇಖಿಸಿ, ಇದನ್ನು ಸರಳ ಗಣಿತ ಎನ್ನುತ್ತಾರೆ. 8 ಜನ ಗಂಡಂದಿರ ಮಕ್ಕಳಿಗೆ ಜನ್ಮ ನೀಡುವುದರ ಹಿಂದೆ ರಹಸ್ಯ ಕಾರಣವಿದೆ. ನನ್ನ ಮಕ್ಕಳಿಗೆ ಒಬ್ಬನೆ ತಂದೆಯಿದ್ದರೆ, ನಾನು ಸತ್ತ ನಂತರ ಅವರು ಒಂಟಿಯಾಗುತ್ತಿದ್ದರು. ಈಗ 8 ಜನ ಗಂಡಂದಿರಲ್ಲಿ ಮೂವರು ಅಗಲಿದರೂ ಅಥವಾ ಬಿಟ್ಟುಹೋದರೂ ಇನ್ನೂ ಐವರು ತಂದೆಯರು ಇರುತ್ತಾರೆ ಎಂದು ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ
ಅಲ್ಲದೇ ಮಕ್ಕಳು ಹೆರುವುದನ್ನು ಇದೇ ರೀತಿ ಮುಂದುವರಿಸುತ್ತೇನೆ. ಇನ್ನೂ 19 ಮಕ್ಕಳನ್ನು ಹೊಂದುವ ಮೂಲಕ 30 ಮಕ್ಕಳಿಗೆ ಜನ್ಮ ನೀಡಲು ಬಯಸುತ್ತೇನೆ. ಅದಕ್ಕಾಗಿ ಇನ್ನೂ ಹೆಚ್ಚಿನ ಗಂಡಂದಿರನ್ನು ಹೊಂದಿರಲು ಬಯಸಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಕೆಲವರು ಮಹಿಳೆಯ ಈ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಬೆಂಬಲಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಮಹಿಳೆಯರಿಗೆ ಗೌರವ ಏಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತಂತೆ ಟ್ವೀಟ್ (Tweet) ಮಾಡಿರುವ ಕಾಂಗ್ರೆಸ್ (Congress), ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ. ಶಾಸಕ ಅರವಿಂದ್ ಬೆಲ್ಲದ್ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನು ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬೊಮ್ಮಾಯಿ ಅವರೇ? ಇದರ ವಿರುದ್ದ ನಿಮ್ಮ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.
ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿದೆ,@BSBommai ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ?#SayCM
ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್ನೋಟ್ನಲ್ಲಿ ಸ್ಪಷ್ಟವಾಗಿದೆ, ಬಸವರಾಜ್ ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಂಡೆ ಶ್ರೀಗೆ ಖೆಡ್ಡಾ ತೋಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅರೆಸ್ಟ್
◆ಶಾಸಕ ಅರವಿಂದ್ ಲಿಂಬಾವಳಿಯಿಂದ ಮಹಿಳೆಗೆ ನಿಂದನೆ
◆ಸಚಿವ ವಿ.ಸೋಮಣ್ಣರಿಂದ ಮಹಿಳೆಯ ಮೇಲೆ ಹಲ್ಲೆ
◆ಶಾಸಕ ಅರವಿಂದ್ ಬೆಲ್ಲದ್ರಿಂದ ಮಹಿಳೆಗೆ ನಿಂದನೆ
ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ.@BSBommai ಅವರೇ, ಮಹಿಳೆಯರ ಘನತೆ ನಿಮ್ಮ ಅದ್ಯತೆಯಲ್ಲವೇ?#SayCM
ಶಾಸಕ ಅರವಿಂದ್ ಲಿಂಬಾವಳಿಯಿಂದ ಮಹಿಳೆಗೆ ನಿಂದನೆ, ಸಚಿವ ವಿ.ಸೋಮಣ್ಣರಿಂದ ಮಹಿಳೆಯ ಮೇಲೆ ಹಲ್ಲೆ, ಶಾಸಕ ಅರವಿಂದ್ ಬೆಲ್ಲದ್ರಿಂದ ಮಹಿಳೆಗೆ ನಿಂದನೆ, ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ. ಬೊಮ್ಮಾಯಿ ಅವರೇ ಮಹಿಳೆಯರ ಘನತೆ ನಿಮ್ಮ ಅದ್ಯತೆಯಲ್ಲವೇ ಎಂದಿದ್ದಾರೆ. ಇದನ್ನೂ ಓದಿ: ಪ್ರಭಾವಿ ವ್ಯಕ್ತಿಯಿಂದ 1.30 ಕೋಟಿ ಕಿಕ್ಬ್ಯಾಕ್ – ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ
Live Tv
[brid partner=56869869 player=32851 video=960834 autoplay=true]
ಚಿಕ್ಕಮಗಳೂರು: ಫಾರಿನ್ ಪಿ.ಎಚ್.ಡಿ. ಸರ್ಟಿಫಿಕೇಟ್ ಹಿಂದೆ ಬಿದ್ದು ಮಹಿಳೆಯೊಬ್ಬಳು ನಾಲ್ಕು ವರ್ಷದಲ್ಲಿ 75 ಲಕ್ಷ ಹಣ ಕಳೆದುಕೊಂಡು ವಂಚನೆಗೊಳಗಾಗಿದ್ದಾರೆ.
ಕಳೆದ ನಾಲ್ಕು ವರ್ಷಗಳ ಹಿಂದೆ ನಗರದ ಸಾಫ್ಟ್ವೇರ್ ಇಂಜಿನಿಯರ್ ಮಹಿಳೆಯೊಬ್ಬರು ಆನ್ಲೈನ್ನಲ್ಲಿ ನೆಸ್ಟರ್ ಎಂಬ ಯುನಿವರ್ಸಿಟಿಯನ್ನು ಹುಡುಕಿ, ಫಾರ್ಮೆಟ್ ಪೇಪರ್ಸ್ ಎಲ್ಲಾ ಫಿಲ್ ಮಾಡಿ ಕಳಿಸಿದ್ದರು. 2018 ರಿಂದಲೂ ಆಗಾಗ್ಗೆ ನೆಸ್ಟರ್ ಯುನಿವರ್ಸಿಟಿ ಎಂದು ಹೇಳಿ ಕರೆ ಮಾಡಿದಾಗಲೆಲ್ಲಾ ಸುಮಾರು 4 ವರ್ಷದಿಂದಲೂ ಮಹಿಳೆ ಹಣ ಕಳುಹಿಸಿದ್ದಾರೆ. ಇದೀಗ ಆ ಹಣ ಒಟ್ಟು 75 ಲಕ್ಷ ರೂಪಾಯಿ ಆಗಿದೆ. ಇದನ್ನೂ ಓದಿ: ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು – ನರ್ಸ್ ವಿರುದ್ಧ ಕುಟುಂಬಸ್ಥರ ಆಕ್ರೋಶ
ನಾಲ್ಕು ವರ್ಷಗಳ ಬಳಿಕ 75 ಲಕ್ಷ ಹಣ ಹಾಕಿದ್ದರೂ ಕೋರ್ಸ್ ಮುಗಿದಿಲ್ಲ ಎಂದಾಗ ಯೂನಿವರ್ಸಿಟಿ ಅವರು ಒಂದು ಪಿ.ಎಚ್.ಡಿ. ಸರ್ಟಿಫಿಕೇಟ್ ಕಳಿಸಿದ್ದಾರೆ. ಆದರೆ ಈ ಸರ್ಟಿಫಿಕೇಟ್ ಫೇಕ್ ಎಂದು ಮಹಿಳೆಗೆ ಮತ್ತೊಬ್ಬರು ತಿಳಿಸಿದ್ದಾರೆ. ಆಗ ಆಕೆಗೆ ತಾನು ಮೋಸ ಹೋಗಿದ್ದು, ಅಸಲಿಗೆ ಆ ಯುನಿವರ್ಸಿಟಿಯೇ ಇರಲಿಲ್ಲ ಎಂಬ ವಿಚಾರ ಗೊತ್ತಾಗಿದೆ.
ಮಹಿಳೆ ಮಾಡಿರುವ ಎಲ್ಲಾ ವ್ಯವಹಾರ ಕೂಡ ಬ್ಯಾಂಕ್ ಮೂಲಕ ಆಗಿದ್ದು, ಹಣವನ್ನು ಯಾರ ಖಾತೆಗೆ ಹಾಕಿದ್ದಾಳೋ ಎಂಬುವುದು ತಿಳಿದು ಬಂದಿಲ್ಲ. ಇದೀಗ ಪಿ.ಎಚ್.ಡಿ. ಸರ್ಟಿಫಿಕೇಟ್ಗಾಗಿ ನಾಲ್ಕು ವರ್ಷದಲ್ಲಿ 75 ಲಕ್ಷ ಹಣ ಕಳೆದುಕೊಂಡು ಫೇಕ್ ಸರ್ಟಿಫಿಕೇಟ್ ಸಿಕ್ಕ ಮೇಲೆ ತಾನು ಮೋಸ ಹೋಗಿದ್ದೇನೆ ಎಂದು ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಮಸ್ಕ್ ತೆಕ್ಕೆಗೆ ಟ್ವಿಟ್ಟರ್ – ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ ಪ್ರಮುಖರು ವಜಾ
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸಿಐಡಿ, ಬೆಂಗಳೂರು ಸೈಬರ್ ಜೊತೆ ಜಿಲ್ಲಾ ಪೊಲೀಸರು ಸಂಪರ್ಕದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಫಾರಿನ್ ಯೂನಿವರ್ಸಿಟಿಯೇ ಇಲ್ಲ. ಈ ಯುನಿವರ್ಸಿಟಿಯಲ್ಲಿ ಪಿ.ಎಚ್.ಡಿ. ಮಾಡಿದರೆ ನಿಮಗೆ ಫಾರಿನ್ ಹೋಗಲು ಅನುಕೂಲವಾಗುತ್ತದೆ ಎಂದು ನಂಬಿಸಿ ಈ ರೀತಿ ಯಾಮಾರಿಸಿದ್ದಾರೆ ಎಂದು ಮಹಿಳೆಗೆ ತಿಳಿಸಿದ್ದಾರೆ. ಸದ್ಯ ಈ ಸಂಬಂಧ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]