Tag: women

  • ಕೆಂದುಟಿಯ ಅಂದಕ್ಕೆ ಮತ್ತಷ್ಟು ಹೊಳಪು ತರುವ ಬಗೆ-ಬಗೆಯ ಲಿಪ್‌ಸ್ಟಿಕ್ – ಯುವತಿಯರ ಫೇವ್‌ರೆಟ್

    ಕೆಂದುಟಿಯ ಅಂದಕ್ಕೆ ಮತ್ತಷ್ಟು ಹೊಳಪು ತರುವ ಬಗೆ-ಬಗೆಯ ಲಿಪ್‌ಸ್ಟಿಕ್ – ಯುವತಿಯರ ಫೇವ್‌ರೆಟ್

    ಹಿಳೆಯರ ಸೌಂದರ್ಯ (Womens Beauty) ಹೆಚ್ಚಿಸುವಲ್ಲಿ ಲಿಪ್‌ಸ್ಟಿಕ್ (LipStick)ಗಳ ಪಾತ್ರ ಮುಖ್ಯವಾದುದು. ಅದಕ್ಕಾಗಿಯೇ ಮಹಿಳೆಯರು (Women), ಯುವತಿಯರು ಲಿಪ್‌ಸ್ಟಿಕ್ ಹಚ್ಚದೇ ತಮ್ಮ ಮೇಕಪ್ ಪೂರ್ಣಗೊಳಿಸಲು ಸಾಧ್ಯವೇ ಇಲ್ಲ. ಅದರಲ್ಲೂ ಕಚೇರಿ ಕೆಲಸಗಳಿಗೆ ಹೋಗುವವರಂತೂ ಲಿಪ್‌ಸ್ಟಿಕ್ ಇಲ್ಲದೇ ಮನೆಯಿಂದ ಹೊರಗೂ ಬರುವುದಿಲ್ಲ. ಹೆಂಗೆಳೆಯರು ವಿವಿಧ ಬಣ್ಣದ (Colours) ಲಿಪ್ ಸ್ಟಿಕ್‌ಗಳನ್ನ ಟ್ರೈ ಮಾಡ್ತಾರೆ. ಮಹಿಳೆಯರ ಮುಖದಲ್ಲಿ ತುಟಿಯು (Lips) ಎದ್ದುಕಾಣುವಂತಹ ಭಾಗವಾದ್ದರಿಂದ, ಬಣ್ಣ ಹಚ್ಚಿದರೆ ನೋಡಿದಷ್ಟೂ ನೋಡುತ್ತಲೇ ಇರಬೇಕು ಅನ್ನಿಸೋದ್ರಲ್ಲಿ ತಪ್ಪೇನೂ ಇಲ್ಲ.

    ವಾಟರ್ ಪ್ರೂಫ್ ಲಿಪ್‌ಸ್ಟಿಕ್:
    ಲಿಪ್ ಸ್ಟಿಕ್‌ಗಳು ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತವೆ ಮತ್ತು ನಿಮಗೆ ತ್ವರಿತ ಆಕರ್ಷಕ ನೋಟವನ್ನು ನೀಡುತ್ತದೆ. ಅದರಲ್ಲೂ ವಾಟರ್ ಪ್ರೂಫ್ ಲಿಪ್‌ಸ್ಟಿಕ್‌ಗಳು (WaterProof LipStick) ನಿಮಗೆ ಪರಿಪೂರ್ಣ ನೋಟವನ್ನು ನೀಡುತ್ತದೆ. ಕಚೇರಿಯಿಂದ ಪಾರ್ಟಿಗೆ ಅಥವಾ ಪ್ರಯಾಣಿಸುವಾಗ ಇವುಗಳನ್ನು ನೀವು ಬಳಸಬಹುದು. ಇವು ಮಳೆಯಲ್ಲೂ ಬಣ್ಣವನ್ನು ಬಿಡುವುದಿಲ್ಲ. ಇದು ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸುತ್ತವೆ. ಗರ್ಲ್ ಫ್ರೆಂಡ್, ಪತ್ನಿ ಮತ್ತು ಸಹೋದರಿಯರಿಗೂ ಇದನ್ನು ಉಡುಗೊರೆಗಳಾಗಿ ನೀಡಬಹುದು. ಇದನ್ನೂ ಓದಿ: ಇಂಡಿಯನ್ ಸ್ಕಿನ್ ಟೋನ್‌ಗೆ ಈ ಬಣ್ಣದ ಲಿಪ್‌ಸ್ಟಿಕ್‌ಗಳು ಬೆಸ್ಟ್

    ಕೆಂಪು ಲಿಪ್‌ಸ್ಟಿಕ್:
    ಕೆಂಪು ಲಿಪ್ ಸ್ಟಿಕ್ (Red LipStick) ತುಟಿಗಳನ್ನು ಸುಂದರಗೊಳಿಸುವುದಲ್ಲದೇ ತುಟಿಗಳ ಆರೋಗ್ಯವನ್ನೂ ಕಾಪಾಡುತ್ತದೆ. ಈ ಲಿಪ್ ಸ್ಟಿಕ್‌ಗಳಲ್ಲಿ ಎಷ್ಟೇ ಬಣ್ಣಗಳಿದ್ದರೂ ರೆಡ್ ಕಲರ್ ಎಲ್ಲರ ಫೇವರೇಟ್ ಬಣ್ಣ. ಇವುಗಳಿಗೆ ನೈಸರ್ಗಿಕ ಪದಾರ್ಥಗಳನ್ನೂ ಬಳಸೋದ್ರಿಂದ ನಿಮಗೆ ಯಾವುದೇ ಹಾನಿ ಆಗೋದಿಲ್ಲ ಎಂದು ಸೌಂದರ್ಯವರ್ಧಕ ತಜ್ಞರು ಹೇಳುತ್ತಾರೆ.

    ನ್ಯೂಡ್ ಪಿಂಕ್ ಲಿಪ್‌ಸ್ಟಿಕ್:
    ನ್ಯೂಡ್ ಪಿಂಕ್ ಕಲರ್ ಲಿಪ್ ಸ್ಟಿಕ್ (NudPink Colour Lipstick) ಹಾಕಿಕೊಂಡರೆ ಅದು ನಿಮ್ಮ ನೈಸರ್ಗಿಕ ತುಟಿ ಬಣ್ಣದಂತೆಯೇ ಕಾಣುತ್ತದೆ. ನೀವು ಕಪ್ಪು ಡ್ರೆಸ್ನಲ್ಲಿ ಪ್ರಕಾಶಮಾನವಾದ ಲಿಪ್‌ಸ್ಟಿಕ್ ಅನ್ನು ಹಾಕುವುದು ತಪ್ಪಿಸಲು ಬಯಸಿದರೆ ನ್ಯೂಡ್ ಪಿಂಕ್ ಬಣ್ಣವು ಪರಿಪೂರ್ಣ ಆಯ್ಕೆಯಾಗಿದೆ. ಇದು ತುಂಬಾ ಸ್ಟೈಲಿಶ್‌, ಆದರೆ ತುಂಬಾ ಬೋಲ್ಡ್ ಲುಕ್ ಪಡೆಯಲು ಸಹಾಯ ಮಾಡುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

    ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್

    ಟೆಹರಾನ್: ಹಿಜಬ್ (Hijab) ಧರಿಸಿಲ್ಲ ಎಂದು ಬಂಧನಕ್ಕೊಳಗಾಗಿದ್ದ ಇರಾನಿ ಯುವತಿ (Iranian Women) ಬಲಿಯಾದ ಪ್ರಕರಣ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಕಳೆದ ಒಂದು ವಾರದಿಂದಲೂ ಹಿಂಸಾತ್ಮಕ ಪ್ರತಿಭಟನೆ (Protest)  ನಡೆಯುತ್ತಿದ್ದು, 700ಕ್ಕೂ ಹೆಚ್ಚು ಮದಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಒಟ್ಟು 739 ಮಂದಿಯನ್ನು ಬಂಧಿಸಿದ್ದು, ಅವರಲ್ಲಿ 60 ಮಂದಿ ಮಹಿಳೆಯರೂ ಇದ್ದಾರೆ ಎಂದು ಇರಾನ್ (Iran) ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಟಿಎಂಸಿಯ 21 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿಯಲ್ಲಿ ಆಕ್ಷೇಪವಿದೆ: ಮಿಥುನ್ ಚಕ್ರವರ್ತಿ

    ಈಗಾಗಲೇ ಪ್ರತಿಭಟನೆ ಹತ್ತಿಕ್ಕಲು ಇಂಟರ್‌ನೆಟ್ (Internet) ಸ್ಥಗಿತಗೊಳಿಸಲಾಗಿದೆ. ವಾಟ್ಸಪ್, ಇನ್‌ಸ್ಟಾಗ್ರಾಮ್ (Instagram) ಬಳಕೆಯನ್ನೂ ನಿಷೇಧಿಸಲಾಗಿದೆ.

    ಸತತ 9ನೇ ದಿನ ಇರಾನ್‌ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರಾರು ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್‌ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

    ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ (Ebrahim Raisi Government) ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೆ ದೇಶದ ವಿವಿಧೆಡೆ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಆದರೂ ಪ್ರತಿಭಟನಾಕಾರರು ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    ಮೃತರ ಸಂಖ್ಯೆ 50ಕ್ಕೆ ಏರಿಕೆಯಾದ ಬೆನ್ನಲ್ಲೇ ಅನಗತ್ಯ ಬಲಪ್ರಯೋಗ ಮಾಡದಂತೆ ವಿಶ್ವಸಂಸ್ಥೆ (UN) ಒತ್ತಾಯಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕಲಬುರಗಿಯಲ್ಲಿ ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿತ

    ಕಲಬುರಗಿಯಲ್ಲಿ ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿತ

    ಕಲಬುರಗಿ: ದಿನೇ ದಿನೇ ಮಕ್ಕಳ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ ಎಂಬುವುದು ಸತ್ಯ. ಆದರೆ ಈ ನಡುವೆ ಉತ್ತರ ಕರ್ನಾಟಕದಲ್ಲಿ (Uttar Karnataka) ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಶಂಕೆ ವ್ಯಕ್ತವಾದವರ ಮೇಲೆ ಹಲ್ಲೆ ನಡೆಸಲಾಗಿದೆ. ಹೌದು, ಮಕ್ಕಳ ಕಳ್ಳರೆಂದು (Child Thieves) ಭಾವಿಸಿ ಇಬ್ಬರು ಮಹಿಳೆಯರಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ.

    ತೆಲಂಗಾಣದ (Telangana) ಕೊತ್ಲಾಪುರ ಗ್ರಾಮದಿಂದ ಪೋಲಕಪಳ್ಳಿ ಗ್ರಾಮಕ್ಕೆ ಮಹಿಳೆಯರಿಬ್ಬರು ಆಗಮಿಸಿದ್ದರು. ಈ ವೇಳೆ ಇವರನ್ನೇ ಕಳ್ಳಿಯರು ಎಂದು ಭಾವಿಸಿದ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಳಿಕ ಚಿಂಚೋಳಿ ಪೊಲೀಸರಿಗೆ (Chincholi Police) ಮಹಿಳೆಯರನ್ನು ಒಪ್ಪಿಸಿದ್ದರು.  ಇದನ್ನೂ ಓದಿ: ಚೆಕ್ ಬೌನ್ಸ್ ಪ್ರಕರಣ – ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜಾಮೀನು ರಹಿತ ವಾರೆಂಟ್

    ನಂತರ ಈ ಸಂಬಂಧ ವಿಚಾರಣೆ ನಡೆಸಿದ ಪೊಲೀಸರಿಗೆ ಥಳಿತಕ್ಕೊಳಗಾದ ಇಬ್ಬರು ಮಹಿಳೆಯರು ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕಿಸೆಯಲ್ಲಿ ಸಿಕ್ತು ಕಾಂಡೋಮ್‌ನ ರಶೀದಿ- ಮಹಿಳಾ ಪೇದೆಯಿಂದ ಗೆಳೆಯನಿಗೇ ಶೂಟೌಟ್

    Live Tv
    [brid partner=56869869 player=32851 video=960834 autoplay=true]

  • ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    ಇರಾನ್‌ನಲ್ಲಿ ಹಿಜಬ್ ಹೋರಾಟ- ವಾಟ್ಸಪ್, ಇನ್‌ಸ್ಟಾಗ್ರಾಮ್ ಬಳಕೆ ಸ್ಥಗಿತ

    ತೆಹ್ರಾನ್: ಹಿಜಬ್ (Hijab) ಧರಿಸದ್ದಕ್ಕೆ ನೈತಿಕ ಪೊಲೀಸ್‌ಗಿರಿಗೆ (Police) ಯುವತಿ ಬಲಿಯಾದ ಪ್ರಕರಣ ವಿರೋಧಿಸಿ ಇರಾನ್‌ನಲ್ಲಿ ಪ್ರತಿಭಟನೆ (Iran Protest) ಭುಗಿಲೆದ್ದಿದ್ದು, ಇಂಟರ್‌ನೆಟ್ (Internet) ಬಳಕೆಯೊಂದಿಗೆ ವಾಟ್ಸಪ್‌ (WhatsApp), ಇನ್‌ಸ್ಟಾಗ್ರಾಮ್ (Instagram) ಬಳಕೆಯನ್ನೂ ನಿಷೇಧಿಸಲಾಗಿದೆ.

    ಇರಾನ್ ಮಹಿಳೆಯರ (Women) ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯುತ್ತಿದ್ದಂತೆ ಅದನ್ನು ಹತ್ತಿಕ್ಕಲು ಪೊಲೀಸರು (Police) ಪ್ರಯತ್ನಿಸುತ್ತಿದ್ದಾರೆ. ಈ ವೇಳೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

    ಇತ್ತೀಚೆಗೆ ಇರಾನ್‌ನಲ್ಲಿ ಫೇಸ್‌ಬುಕ್ (FaceBook), ಟ್ವಿಟರ್ (Twitter), ಟೆಲಿಗ್ರಾಮ್, ಯೂಟ್ಯೂಬ್ (Youtube) ಮತ್ತು ಟಿಕ್‌ಟಾಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದ (Social Media) ವೇದಿಕೆಗಳ ಮೇಲೆ ನಿರ್ಬಂಧ ವಿಧಿಸಿದ ನಂತರ ವಾಟ್ಸಪ್ ಹಾಗೂ ಇನ್‌ಸ್ಟಾಗ್ರಾಮ್ ವ್ಯಾಪಕವಾಗಿ ಬಳಕೆಯಾಗಿವೆ. ಹಾಗಾಗಿ ತುರ್ತು ಪರಿಸ್ಥಿತಿಯಲ್ಲಿ ಇಂಟರ್‌ನೆಟ್ (Internet) ಬಳಕೆಯನ್ನು ಹೊರತುಪಡಿಸಿ ಉಳಿದೆಲ್ಲ ಕಡೆಗಳಲ್ಲೂ ಇಂಟರ್‌ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.

    ಸತತ 7ನೇ ದಿನ ಇರಾನ್‌ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರ ಸಾವಿರ ಮಂದಿ ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್‌ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಯುದ್ಧ ಭೂಮಿಯಲ್ಲಿ ಹುಟ್ಟಿದವರು. ಬನ್ನಿ ನಮ್ಮನ್ನು ಎದುರಿಸಿ ಎಂದು ಸರ್ಕಾರಕ್ಕೆ ಸವಾಲು ಹಾಕುತ್ತಿದ್ದಾರೆ.

    ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೂ ಪೊಲೀಸರ ಗುಂಡಿಗೆ ದೇಶದ ವಿವಿಧೆಡೆ 8 ಮಂದಿ ಬಲಿಯಾಗಿದ್ದಾರೆ. ಪ್ರತಿಭಟನಾಕಾರರು ಮಾತ್ರ ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    Live Tv
    [brid partner=56869869 player=32851 video=960834 autoplay=true]

  • ತಾಜ್ ಮಹಲ್ ನೋಡಲು ಬಂದಿದ್ದವಳ ಮೇಲೆ ಕೋತಿ ದಾಳಿ- ಗಳಗಳನೆ ಅತ್ತ ಸ್ಪೇನ್ ಸುಂದರಿ

    ತಾಜ್ ಮಹಲ್ ನೋಡಲು ಬಂದಿದ್ದವಳ ಮೇಲೆ ಕೋತಿ ದಾಳಿ- ಗಳಗಳನೆ ಅತ್ತ ಸ್ಪೇನ್ ಸುಂದರಿ

    ಲಕ್ನೋ: ವಿಶ್ವ ಪ್ರಸಿದ್ಧ ತಾಜ್ ಮಹಲ್ (Taj Mahal) ವೀಕ್ಷಣೆಗೆ ಬರುವ ಪ್ರವಾಸಿಗರ (Tourist) ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಿದ್ದಾರೆ. ಹಾಗೆಯೇ ಸ್ಪೇನ್‌ನಿಂದ (Spain) ಬಂದಿದ್ದ ಮಹಿಳೆಯೊಬ್ಬರ ಮೇಲೆ ಕೋತಿ ದಾಳಿ ನಡೆಸಿದೆ.

    ತಾಜ್‌ಮಹಲ್ (Taj Mahal) ಮುಂಭಾಗದ ರಾಯಲ್ ಗೇಟ್ ಬಳಿ ಫೋಟೋ ತೆಗೆಯಲೆಂದು ನಿಂತಿದ್ದ ಸ್ಪೇನ್ ಮಹಿಳೆ (Spanish woman) ಮೇಲೆ ಕೋತಿ ಎರಗಿ ದಾಳಿ ಮಾಡಿದೆ. ಈ ವೇಳೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಿಳೆ ಸ್ಥಳದಲ್ಲೇ ಗಳಗಳನ್ನೆ ಅತ್ತಿದ್ದಾಳೆ. ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    2019ರಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಾಜ್ ಮಹಲ್‌ನ ರಕ್ಷಣೆಯ ಜವಾಬ್ದಾರಿ ವಹಿಸಿತ್ತು. ಈ ವೇಳೆ ಕೋತಿಗಳನ್ನು (Monkey) ಓಡಿಸಲು ಸಿಂಗಲ್‌ಶಾಟ್ ಗನ್ ಬಳಕೆ ಮಾಡಲಾಗುತ್ತಿತ್ತು. ಇದಕ್ಕೆ ಪ್ರಾಣಿಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಇದನ್ನೂ ಓದಿ: ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ

    ಪ್ರವಾಸಿಗರ ಮೇಲೆ ಕೋತಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸಮಸ್ಯೆ ಬಗೆಹರಿಸುವಂತೆ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಭಧ್ರತಾ ಸಿಬ್ಬಂದಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮ್ಯಾನೇಜರ್ ನಂಬರ್ ಕೇಳಿದ್ದೆ ತಪ್ಪಾ? – ಬಟ್ಟೆ ಚಿಂದಿಯಾಗುವಂತೆ ವ್ಯಕ್ತಿಗೆ ಹೊಡೆದ್ರು ಮಹಿಳೆಯರು

    ಮ್ಯಾನೇಜರ್ ನಂಬರ್ ಕೇಳಿದ್ದೆ ತಪ್ಪಾ? – ಬಟ್ಟೆ ಚಿಂದಿಯಾಗುವಂತೆ ವ್ಯಕ್ತಿಗೆ ಹೊಡೆದ್ರು ಮಹಿಳೆಯರು

    ಭೋಪಾಲ್: ಮಹಿಳೆಯರ ಗುಂಪೊಂದು ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಬಟ್ಟೆ ಹರಿದು ಹೋಗುವಂತೆ ನಿರ್ದಯವಾಗಿ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಭಾನುವಾರ ರಾಯಪುರದ ಸ್ವಾಮಿ ವಿವೇಕಾನಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Raipur’s Swami Vivekananda International Airport) ವ್ಯಕ್ತಿಯೊಬ್ಬರು ಈ ವೀಡಿಯೋವನ್ನು ಸೆರೆಹಿಡಿದಿದ್ದು, ವೀಡಿಯೋದಲ್ಲಿ ರೊಚ್ಚಿಗೆದ್ದ ಮಹಿಳೆಯರು ಬೆಲ್ಟ್‌ನಿಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವುದು ಮತ್ತು ಹಣದ ವಿಚಾರವಾಗಿ ಪದೇ, ಪದೇ ಕಪಾಳಮೋಕ್ಷ ಮಾಡಿ, ಗುದ್ದುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ವ್ಯಕ್ತಿ ಧರಿಡಿದ್ದ ಶರ್ಟ್ ಕಿತ್ತುಹೋಗುವಂತೆ ಹೊಡೆದಿದ್ದಾರೆ.

    ಈ ಘಟನೆ ಸಂಬಂಧ ಎರಡೂ ಕಡೆಯವರು ರಾಯ್‍ಪುರ ನಗರದ ಮನ ಪೊಲೀಸ್ ಠಾಣೆಯಲ್ಲಿ (Mana police Station in Raipur city) ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರಾಹುಲ್ ಟ್ರಾವೆಲ್ಸ್ (Rahul Travels) ಎಂಬ ಟ್ರಾವೆಲ್ ಕಂಪನಿಯ ಆಟೋ ಟ್ಯಾಕ್ಸಿ ಚಾಲಕ (Auto Taxi Driver) ದಿನೇಶ್ (Dinesh) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಸ್ತೆಗಾಗಿ ದಶಕಗಳಿಂದ ಹೋರಾಟ – ಆಸ್ಪತ್ರೆಗೆ ದಾಖಲಿಸಲು ವದ್ಧೆಯನ್ನು ಜೋಳಿಗೆಯಲ್ಲೇ ಹೊತ್ತೊಯ್ದರು

    ತಾನು ಟ್ರಾವೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆ. ಆದರೆ ಈ ವರ್ಷ ಮೇ ಮತ್ತು ಜೂನ್ ತಿಂಗಳ ಸಂಬಳವನ್ನೇ ಪಡೆದಿರಲಿಲ್ಲ. ಹೀಗಾಗಿ ಬಾಕಿ ಹಣವನ್ನು ವಸೂಲಿ ಮಾಡಲು ಕಚೇರಿಗೆ ಬಂದಾಗ, ಮಹಿಳಾ ಉದ್ಯೋಗಿಗಳು ತನ್ನೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು ಮತ್ತು ಜಗಳವಾಡಿದರು. ಮ್ಯಾನೇಜರ್‌ನ ನಂಬರ್ ಕೇಳಿದಾಗ, ಮಹಿಳೆಯರ ಗುಂಪು ತನ್ನನ್ನು ಥಳಿಸಿ ನಿಂದಿಸಲು ಪ್ರಾರಂಭಿಸಿದರು ಎಂದು ದಿನೇಶ್  ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

    ಜೊತೆಗೆ ಈ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಟೋ ಚಾಲಕನಿಗೆ ಜಾಕ್‌ಪಟ್‌ – ಓಣಂ ಬಂಪರ್‌ ಲಾಟರಿಯಲ್ಲಿ 25 ಕೋಟಿ ಗೆದ್ದ

    Live Tv
    [brid partner=56869869 player=32851 video=960834 autoplay=true]

  • ಮೋದಿ ಕಾರ್ಯಕ್ರಮಕ್ಕೆ ಹೋಗಿಬರುತ್ತಿದ್ದ ಬಸ್ ಅಪಘಾತ – 20 ಮಹಿಳೆಯರಿಗೆ ಗಾಯ

    ಮೋದಿ ಕಾರ್ಯಕ್ರಮಕ್ಕೆ ಹೋಗಿಬರುತ್ತಿದ್ದ ಬಸ್ ಅಪಘಾತ – 20 ಮಹಿಳೆಯರಿಗೆ ಗಾಯ

    ಭೋಪಾಲ್: ಪ್ರಧಾನಿ ಮೋದಿ (PM Narendra Modi) ಭಾಷಣ ಕೇಳಲು ತೆರಳಿದ್ದ ಸ್ವಸಹಾಯ ಸಂಘದ ಮಹಿಳೆಯರಿದ್ದ (Womens Self Help Group) ಬಸ್ (Bus) ಕರೋನಿ ಕಣಿವೆ ಬಳಿ ಅಪಘಾತಕ್ಕೀಡಾಗಿದ್ದು, 20 ಮಹಿಳೆಯರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    Crime-Scene

    20 ಮಹಿಳೆಯರು (Women) ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಿಮ್ಸ್‌ನಲ್ಲಿ ಸಾವಿನ ಸರಣಿ- ಸುಧಾಕರ್ ಹಠದಿಂದ ನಿರ್ದೇಶಕರ ನೇಮಕ

    ಮಧ್ಯಪ್ರದೇಶದ ಶಿಯೋಪುರದ ಕಾರ್‌ಹಾಲ್‌ನಲ್ಲಿ ನಡೆಯುತ್ತಿದ್ದ ಮಹಿಳಾ ಸ್ವಸಹಾಯ ಸಂಘದ (Womens Self Help Group) ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಕೇಳಲು 25 – 30 ಮಹಿಳೆಯರು ಬಸ್‌ನಲ್ಲಿ ತೆರಳಿದ್ದರು. ಮಾರ್ಗಮಧ್ಯೆ ಟ್ರಾಫಿಕ್ (Traffic) ಸಮಸ್ಯೆ ಎದುರಾಗಿದ್ದರಿಂದ ಸಮಾವೇಶ ತಲುಪಲು ಸಾಧ್ಯವಾಗಲಿಲ್ಲ. ಹಿಂದಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ (Accident) ಸಂಭವಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಈ ಬಾರಿ ಅಮ್ಮನ ಬಳಿ ಹೋಗಿ ಆಶೀರ್ವಾದ ಪಡೆಯಲು ಸಾಧ್ಯವಾಗಿಲ್ಲ: ಮೋದಿ

    ಈ ಬಾರಿ ಅಮ್ಮನ ಬಳಿ ಹೋಗಿ ಆಶೀರ್ವಾದ ಪಡೆಯಲು ಸಾಧ್ಯವಾಗಿಲ್ಲ: ಮೋದಿ

    ಭೋಪಾಲ್: ನನ್ನ ಹುಟ್ಟುಹಬ್ಬದಂದು(Birthday) ಪ್ರತಿ ಬಾರಿಯೂ ನನ್ನ ತಾಯಿಯ(Mother) ಬಳಿ ತೆರಳಿ ಅವರ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿದ್ದೆ. ಆದರೆ ಈ ಬಾರಿ ಅದು ಸಾಧ್ಯವಾಗಿಲ್ಲ. ಆದರೆ ಇಂದು ಬುಡಕಟ್ಟು ಪ್ರದೇಶಗಳಲ್ಲಿ ಹಾಗೂ ಹಳ್ಳಿಗಳಲ್ಲಿ ಕಷ್ಟಪಟ್ಟು ದುಡಿಯುವ ಲಕ್ಷಾಂತರ ಮಂದಿ ತಾಯಂದಿರು ನನ್ನನ್ನು ಆಶೀರ್ವದಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.

    ಮಧ್ಯಪ್ರದೇಶದ(Madhya Pradesh) ಶಿಯೋಪುರದಲ್ಲಿ ಸ್ವಸಹಾಯ ಗುಂಪುಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೋದಿ ತಮ್ಮ ತಾಯಿಯನ್ನು ನೆನೆಸಿಕೊಂಡು, ಈ ದಿನ ನಾನು ಸಾಮಾನ್ಯವಾಗಿ ನನ್ನ ತಾಯಿಯ ಬಳಿ ಹೋಗಿ ಆಶೀರ್ವಾದ ಪಡೆಯುತ್ತಿದ್ದೆ. ಆದರೆ ಇಂದು ನಾನು ಆಕೆಯ ಬಳಿ ಹೋಗಲು ಸಾಧ್ಯವಾಗಲಿಲ್ಲ ಎಂದರು.

    ಕಳೆದ ಶತಮಾನದ ಭಾರತ ಮತ್ತು ಈ ಶತಮಾನದ ನವಭಾರತದ ನಡುವೆ ಅಗಾಧ ವ್ಯತ್ಯಾಸವಿದೆ. ಈಗಿನ ನವಭಾರತದಲ್ಲಿ ನಾರಿ ಶಕ್ತಿ ಪ್ರಾತಿನಿಧ್ಯವಾಗಿ ಬಂದಿದೆ. ಪಂಚಾಯತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಮಹಿಳಾ ಶಕ್ತಿಯ ಧ್ವಜ ಹಾರಾಡುತ್ತಿದೆ ಎಂದು ಪ್ರಧಾನಿ ಹೇಳಿದರು. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

    ಕಳೆದ 8 ವರ್ಷಗಳಲ್ಲಿ, ನಾವು ಸ್ವಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸಲು ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದ್ದೇವೆ. ಇಂದು ದೇಶಾದ್ಯಂತ 8 ಕೋಟಿಗೂ ಹೆಚ್ಚು ಮಹಿಳೆಯರು ಈ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಈ ಅಭಿಯಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಗ್ರಾಮೀಣ ಮನೆಯಿಂದ ಕನಿಷ್ಠ ಒಬ್ಬ ಸಹೋದರಿಯನ್ನು ಹೊಂದಲು ನಾವು ಗುರಿಯಿಟ್ಟಿದ್ದೇವೆ ಎಂದು ತಿಳಿಸಿದರು.

    ನಮ್ಮ ಸರ್ಕಾರ ಗ್ರಾಮೀಣ ಆರ್ಥಿಕತೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯ ಮೂಲಕ ನಾವು ಪ್ರತಿ ಜಿಲ್ಲೆಯಿಂದ ಸ್ಥಳೀಯ ಉತ್ಪನ್ನಗಳನ್ನು ದೊಡ್ಡ ಮಾರುಕಟ್ಟೆಗಳಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    Live Tv
    [brid partner=56869869 player=32851 video=960834 autoplay=true]

  • ಮಳೆಯಲ್ಲೂ ಮೈಚಳಿ ಬಿಡಿಸುವಂತೆ ಮಾದಕ ಲುಕ್ ನೀಡುವ ಹಾಟ್ ನೈಟ್‌ಡ್ರೆಸ್ ಹೇಗಿವೆ ನೋಡಿ

    ಮಳೆಯಲ್ಲೂ ಮೈಚಳಿ ಬಿಡಿಸುವಂತೆ ಮಾದಕ ಲುಕ್ ನೀಡುವ ಹಾಟ್ ನೈಟ್‌ಡ್ರೆಸ್ ಹೇಗಿವೆ ನೋಡಿ

    ದುವೆಯಾಗಿ (Marriage) ಹನಿಮೂನ್ ಹೊರಟಿದ್ದರೆ ಅಥವಾ ನಿಮ್ಮ ಮೊದಲ ರಾತ್ರಿಯನ್ನು ಇನ್ನಷ್ಟು ವಿಶೇಷವಾಗಿಸಲು ಬಯಸಿದ್ದರೆ ಅದಕ್ಕೆಂದೇ ವಿಶೇಷ ರೀತಿಯ ಡ್ರೆಸ್‌ಗಳು (Dress) ಈಗ ಮಾರುಕಟ್ಟೆಯಲ್ಲಿ ಲಭ್ಯವಿದೆ.

    ಮೊದಲ ರಾತ್ರಿಯ ವಿಶೇಷ ಸಂದರ್ಭಗಳು, ಹನಿಮೂನ್, ವಾರ್ಷಿಕೋತ್ಸವ ಅಥವಾ ನಿಮ್ಮ ಪತಿಯನ್ನು ಆಕರ್ಷಿಸಲು ಮಹಿಳೆಯರಿಗೆ ಈ ಹಾಟ್ ಡ್ರೆಸ್ (Hot Dress) ಧರಿಸುವ ಮೂಲಕ ನೀವು ಮಾದಕ ನೋಟ ಬೀರಬಹುದು. ಈ ಎಲ್ಲಾ ರಾತ್ರಿ ಉಡುಪುಗಳನ್ನು ಮೃದು ಗುಣಮಟ್ಟದ ಬಟ್ಟೆಯಿಂದ ತಯಾರಿಸಲಾಗುತ್ತದೆ. ಅದನ್ನು ಧರಿಸಿದರೆ ನಿಮಗೂ ಆರಾಮದಾಯಕವಾಗಿರುತ್ತದೆ. ವಿವಿಧ ಕಂಪೆನಿಗಳೂ ಸಹ ಅದಕ್ಕೆಂದೇ ತರಹೇವಾರಿ ಬ್ರಾಂಡೆಡ್ ಬಟ್ಟೆಗಳನ್ನು ಸಿದ್ಧಪಡಿಸಿ ಮಾರುಕಟ್ಟೆಗೆ ಬಿಟ್ಟಿವೆ. ಇದನ್ನೂ ಓದಿ: ಹಳೆಯ ಆಭರಣಗಳಿಗೆ ಹೊಸ ಹುರುಪು – ಟ್ರೆಂಡಿಯಾಗಿ ಧರಿಸುವ ಬೆಳ್ಳಿ ಒಡವೆಗಳ ಬಗ್ಗೆ ಇಲ್ಲಿದೆ ಸಿಂಪಲ್ ಟಿಪ್ಸ್

    ಬ್ಲಾಕ್ ಬೇಬಿ ಡಾಲ್:
    ಹೊಸದಾಗಿ ಮದುವೆಯಾದ ಮಹಿಳೆಯರಿಗೆ ಈ ನೈಟಿ (Nighty) ರೀತಿಯ ಡ್ರೆಸ್ ಅತ್ಯುತ್ತಮವಾಗಿರುತ್ತದೆ. ಇದು ತುಂಬಾ ಮೃದು (Light Weight) ಹಾಗೂ ಹಗುರವಾಗಿರುತ್ತದೆ. ಇದನ್ನು ಧರಿಸುವುದರಿಂದ ನೀವು ಆರಾಮದಾಯಕ ನಿದ್ರೆ ಮಾಡಲು ಮತ್ತು ಮಾದಕ ನೋಟ ಬೀರಲು ಸಾಧ್ಯವಾಗುತ್ತದೆ.

    ಪಿಂಕ್ ಬ್ಯಾಕ್ ಲೆಸ್ ನೈಟಿ:
    ಇದು ಹೆಚ್ಚಾಗಿ ಪಿಂಕ್ ಹಾಗೂ ಕಪ್ಪು ಬಣ್ಣದಲ್ಲಿ ಇರುತ್ತದೆ. ಇದನ್ನು ಧರಿಸಿದರೆ ನೀವು ಸೆಕ್ಸಿ ಮತ್ತು ಬೋಲ್ಡ್ ಲುಕ್ ನಲ್ಲಿ ಕಾಣುತ್ತೀರಿ. ನೀವು ಈ ಮೊಣಕಾಲಿನ ನೈಟಿಯನ್ನು ಮೊದಲ ರಾತ್ರಿ, ಹನಿಮೂನ್ ಅಥವಾ ಯಾವುದೇ ವಿಶೇಷ ರಾತ್ರಿ ವೇಳೆ ಧರಿಸಬಹುದು.

    ರಿಬ್ಬನ್ ಬಾರ್ಡರ್ ನೈಟಿ:
    ಬೆಡ್‌ರೂಂನಲ್ಲಿ ನಿಮ್ಮ ಸಂಗಾತಿಯನ್ನು ಆಕರ್ಷಿಸಲು ಈ ಹಾಟ್ ನೈಟ್ ಡ್ರೆಸ್ ಅತ್ಯುತ್ತಮವಾಗಿರುತ್ತದೆ. ಹಾಟ್‌ನೈಟ್‌ನಲ್ಲಿ ರಿಬ್ಬನ್ ಬಾರ್ಡರ್ ವಿನ್ಯಾಸ ನಿಮ್ಮ ಅಂದವನ್ನು ಹೆಚ್ಚಿಸುತ್ತದೆ. ಅದೇ ಸಮಯದಲ್ಲಿ, ನಿಮ್ಮ ಗಂಡನ ಚಿತ್ತಾಕರ್ಷಕ ನೋಟವು ನಿಮ್ಮಿಂದ ದೂರ ಸರಿಯದಂತೆ ನೋಡಿಕೊಳ್ಳಲೂಬಹುದು.

    ಬ್ಯಾಕ್ ಲೆಸ್ ನೈಟಿ:
    ಆರಾಮದಾಯಕ ನಿದ್ರೆ ಮಾಡಲು ಬಯಸುವ ಮಹಿಳೆಯರು ಈ ರೀತಿಯ ನೈಟ್ ಡ್ರೆಸ್‌ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಬೆನ್ನು ಕಡಿತ, ಬೆನ್ನುನೋವು ಮೊದಲಾದ ತೊಂದರೆಗಳನ್ನು ದೂರ ಮಾಡಿ, ಆರಾಮಯದಾಯಕ ನಿದ್ರೆ ಬರಿಸುತ್ತದೆ.

    ವಿ-ಶೇಪ್ ಸ್ಟ್ರಚಬಲ್‌ ನೈಟಿ:
    ಕೆಂಪು, ಕಪ್ಪು, ನೇರಳೆ ಹಾಗೂ ಗುಲಾಬಿ ಬಣ್ಣದ ಆಯ್ಕೆಗಳನ್ನು ಹೊಂದಿರುವ ಈ ವಿ-ಶೇಪ್ ಸ್ಟ್ರಚಬಲ್‌ ನೈಟಿ ಮೃದು ಸ್ವಭಾವದಿಂದ ಕೂಡಿರುತ್ತದೆ. ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಿದ ನಂತರವೂ ಕೋಟ್ ಮಾದರಿಯಲ್ಲಿ ಇದನ್ನು ಬಳಸಬಹುದು. ಜೊತೆಗೆ ಪತಿಯನ್ನು ಹೆಚ್ಚು ಆಕರ್ಷಿಸುವ ಮಾದಕ ನೋಟ ಬೀರಬಹುದು.

    Live Tv
    [brid partner=56869869 player=32851 video=960834 autoplay=true]

  • ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳಿ – ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು

    ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳಿ – ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು

    ಚಿಕ್ಕಬಳ್ಳಾಪುರ: ಯುವಕರು, ಪುರುಷರಿಂದಲೇ ಸರಗಳ್ಳತನಕ್ಕೆ (Chain Snatch) ಯತ್ನಿಸುತ್ತಿದ್ದ ದೃಶ್ಯಗಳು ಕಂಡು ಬರುವುದು ಸಾಮಾನ್ಯ. ಆದರೆ ಈಗ ಮಹಿಳೆಯೊಬ್ಬಳು (Women) ಸರ ಕದಿಯಲು ಯತ್ನಿಸಿ, ಗ್ರಾಮಸ್ಥರಿಂದಲೇ ಗೂಸಾ ತಿಂದಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯಲ್ಲಿ ನಡೆದಿದೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಬಳಿ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದ ಕಳ್ಳಿಗೆ ಗ್ರಾಮಸ್ಥರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ (Police) ಒಪ್ಪಿಸಿದ್ದಾರೆ. ಸರಗಳ್ಳಿಯನ್ನು ನಂದಿನಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ವಿರೋಧದ ಮಧ್ಯೆ ಮತಾಂತರ ನಿಷೇಧ ಮಸೂದೆ ಅಂಗೀಕಾರ

    crime

    ಮಧುರೈ-ಹೆಸರುಘಟ್ಟ ರಸ್ತೆಯಲ್ಲಿ ಬೆಳಿಗ್ಗೆಯಿಂದಲೂ ಬೈಕ್ (Bike) ಸವಾರನೊಂದಿಗೆ ಮಹಿಳೆ ಸುತ್ತಾಡುತ್ತಿದ್ದಳು. ನಂತರ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತುಕೊಳ್ಳಲು ಯತ್ನಿಸಿ, ಬೈಕ್‌ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಈ ವೇಳೆ ಬೈಕ್ ಸವಾರ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಸಿಕ್ಕಿಬಿದ್ದ ಸರಗಳ್ಳಿಗೆ ಗ್ರಾಮಸ್ಥರು ಥಳಿಸಿ, ದೊಡ್ಡಬೆಳವಂಗಲ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಪ್ರೇಮ್-ಧ್ರುವ ಹೊಸ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ ತೌಫಿಕ್ ಖುರೇಷಿ

    ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]