ನವದೆಹಲಿ: ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ನಂತರ ಮಗು ಮರಣ ಹೊಂದಿದರೆ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ಕಾಲ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶ ಹೊರಡಿಸಿದೆ.
ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ರಜೆ ಮಾತೃತ್ವ ರಜೆ ಮಂಜೂರು ಮಾಡುವ ಕುರಿತಾಗಿ ಹಲವು ಪ್ರಶ್ನೆಗಳು ಸಿಬ್ಬಂದಿಗಳಿಂದ ಬಂದಿತ್ತು. ಹಾಗಾಗಿ ಸರ್ಕಾರಿ ಮಹಿಳಾ ನೌಕರಿಗೆ ಅನ್ವಯವಾಗುವಂತೆ ಮಗುವಿನ ಮರಣದ ಕಾರಣದಿಂದ ಉಂಟಾಗುವ ಸಂಭಾವ್ಯ ಭಾವನಾತ್ಮಕ ಆಘಾತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಒಪಿಟಿ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: KGF ಸಿನಿಮಾ ಸ್ಫೂರ್ತಿ – ದಿಢೀರ್ ಫೇಮಸ್ ಆಗಲು ನಾಲ್ವರನ್ನು ಚಚ್ಚಿಕೊಂದ ಯುವಕ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ವಿಶೇಷ ಹೆರಿಗೆ ರಜೆಯ ಪ್ರಯೋಜನವು ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ದೊರಕುತ್ತದೆ. ಇದಲ್ಲದೆ ಅಧಿಕೃತ ಆಸ್ಪತ್ರೆಯಲ್ಲಿ ಮಗುವಿನ ಹೆರಿಗೆಗೆ ಮಾತ್ರ ರಜೆ ಸ್ವೀಕಾರಾರ್ಹವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಈ ಆದೇಶಗಳು ಕೇಂದ್ರ ನಾಗರಿಕ ಸೇವೆಗಳ ರಜೆ ನಿಯಮಗಳು 1972ರ ನಿಯಮ 2ರ ಪ್ರಕಾರ ಭಾರತದ ಒಕ್ಕೂಟದ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಾಗರಿಕ ಸೇವೆಗಳು ಮತ್ತು ಹುದ್ದೆಗಳಿಗೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಈ ಆದೇಶ ಬಿಡುಗಡೆಯ ದಿನಾಂಕದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ
Live Tv
[brid partner=56869869 player=32851 video=960834 autoplay=true]
ಧಾರವಾಡ: ಹೊಲಿಗೆಯನ್ನೇ ಸ್ವ-ಉದ್ಯೋಗ ಮಾಡಿಕೊಳ್ಳಲು ಬಯಸುವ ಮಹಿಳೆಯರಿಗೆ ಮುದ್ರಾ ಯೋಜನೆಯಡಿ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಧಾರವಾಡದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಅನುಕೂಲವಾಗುವಂತೆ ಉಚಿತ ವೃತ್ತಿಪರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗ್ರಾಮ ವಿಕಾಸ ಸೊಸೈಟಿ ಅSಖ ಅನುದಾನದಡಿಯಲ್ಲಿ ಹಮ್ಮಿಕೊಂಡಿತ್ತು. ಇದೇ ವೇಳೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿತರಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್
ಈ ವೇಳೆ ಮಾತಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಹಿಳೆಯರು ಬದುಕು ಕಟ್ಟಿಕೊಳ್ಳಲು ಧಾರವಾಡ ಜಿಲ್ಲೆಯಲ್ಲಿ ಉಚಿತ ಕೌಶಲ್ಯ ಅಭಿವೃದ್ಧಿ ಕಾರ್ಮಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿಯವರ ಆಶಯದಂತೆ ಗ್ರಾಮೀಣ ವಿಕಾಸಕ್ಕಾಗಿ ಹಲವು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನ ನಡೆಸಲಾಗ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 4 ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರಗಳನ್ನ ಪ್ರಾರಂಭಿಸಲಾಗಿದ್ದು, 1200 ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಈ ತರಬೇತಿ ಪಡೆದ ಮಹಿಳೆಯರು, ಸ್ವ ಉದ್ಯೋಗ ಕೈಗೊಳ್ಳಲು ಮುಂದಾದರೆ, ಅವರೆಲ್ಲರಿಗೂ ಮುದ್ರಾ ಯೋಜನೆಯಡಿ ಸಾಲ ನೀಡಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ತರಬೇತಿ ಕೇಂದ್ರಗಳಲ್ಲಿರುವ ವ್ಯವಸ್ಥೆಗಳನ್ನ ಜೋಶಿ ಪರಿಶೀಲಿಸಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: 2021ರಲ್ಲಿ ಭಾರತದಲ್ಲಿ ಒಟ್ಟು 31,677 ರೇಪ್ ಕೇಸ್ ದಾಖಲಾಗಿದ್ದು ಸರಾಸರಿ ದಿನಕ್ಕೆ 86 ಕೇಸ್ ಮತ್ತು ಗಂಟೆಗೆ 49 ಮಹಿಳಾ ದೌರ್ಜನ್ಯ ಕೇಸ್ ದಾಖಲಾಗಿರುವ ಬಗ್ಗೆ ಸರ್ಕಾರ ಬಿಡುಗಡೆ ಮಾಡಿರುವ ವರದಿಯೊಂದು ಹೊರಬಿದ್ದಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ‘ಕ್ರೈಮ್ ಇನ್ ಇಂಡಿಯಾ 2021’ ವರದಿ ಪ್ರಕಾರ 2020ರಲ್ಲಿ 28,046 ಮತ್ತು 2019ರಲ್ಲಿ 32,033 ರೇಪ್ ಕೇಸ್ ದಾಖಲಾಗಿತ್ತು. 2021ರಲ್ಲಿ ಇದು 31,677ಕ್ಕೆ ಇಳಿಕೆ ಕಂಡರೂ, ಕೆಲ ರಾಜ್ಯಗಳಲ್ಲಿ ಹೆಚ್ಚಿನ ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: ಚಿಕ್ಕಪ್ಪನಿಂದ 15ರ ಬಾಲಕಿಯ ಮೇಲೆ ಅತ್ಯಾಚಾರ- ಗಂಡು ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತೆ
ರಾಜ್ಯಗಳ ಪೈಕಿ ರಾಜಸ್ಥಾನ 6,337 ಕೇಸ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಮಧ್ಯಪ್ರದೇಶ 2,947, ಮಹಾರಾಷ್ಟ್ರ 2,496, ಉತ್ತರ ಪ್ರದೇಶ 2,845 ಮತ್ತು ದೆಹಲಿಯಲ್ಲಿ 1,250 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು- ಕುಟುಂಬಸ್ಥರ ಆರೋಪವೇನು..?
ಅತ್ಯಾಚಾರ ಹೊರತುಪಡಿಸಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಅತ್ಯಾಚಾರ, ಕೊಲೆಯೊಂದಿಗೆ ಅತ್ಯಾಚಾರ, ವರದಕ್ಷಿಣೆ, ಆಸಿಡ್ ದಾಳಿಗಳು, ಆತ್ಮಹತ್ಯಾ ಪ್ರಚೋದನೆ, ಅಪಹರಣ, ಬಲವಂತದ ಮದುವೆ, ಮಾನವ ಕಳ್ಳಸಾಗಣೆ, ಆನ್ಲೈನ್ ಕಿರುಕುಳ ಮುಂತಾದ ಅಪರಾಧಗಳು ಸೇರಿವೆ.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: ಸಾಮೂಹಿಕ ಸಂತಾನಹರಣ ಶಿಬಿರದ ಅಂಗವಾಗಿ ನಡೆಸಿದ್ದ ಕುಟುಂಬ ಯೋಜನೆ ಶಸ್ತ್ರಚಿಕಿತ್ಸೆಯಿಂದಾಗಿ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಇಬ್ರಾಹಿಂ ಪಟ್ಟಣದಲ್ಲಿ ನಡೆದಿದೆ.
ಆಗಸ್ಟ್ 24 ರಂದು ಇಬ್ರಾಹಿಂ ಪಟ್ಟಣದಲ್ಲಿ 34 ಮಹಿಳೆಯರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯಿಂದ ಉಂಟಾದ ವಿವಿಧ ತೊಡಕುಗಳಿಂದಾಗಿ ಹಲವರು ಅಸ್ವಸ್ಥರಾಗಿದ್ದರು. ಬಳಿಕ ಭಾನುವಾರ ಹಾಗೂ ಸೋಮವಾರ ಇಬ್ಬರು ಮಹಿಳೆಯರು ಹಾಗೂ ಮಂಗಳವಾರ ಇನ್ನಿಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಇನ್ನು 7 ಮಹಿಳೆಯರನ್ನು ಉತ್ತಮ ಚಿಕಿತ್ಸೆಗಾಗಿ ಹೈದರಾಬಾದ್ಗೆ ಸ್ಥಳಾಂತರಿಸಲಾಗಿದೆ ಎಂದು ಸಾರ್ವಜನಿಕ ಆರೋಗ್ಯ ನಿರ್ದೇಶಕ ಜಿ ಶ್ರೀನಿವಾಸ್ ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದಾತ ಅಂಬುಲೆನ್ಸ್ ಬಾಗಿಲು ತೆಗೆಯೋಕಾಗದೆ ಸಾವನ್ನಪ್ಪಿದ!
ಘಟನೆಗೆ ಸಂಬಂಧಿಸಿದಂತೆ ಇಬ್ರಾಹಿಂ ಪಟ್ಟಣ ಸಿಹೆಚ್ಸಿಯ ವೈದ್ಯಕೀಯ ಅಧೀಕ್ಷಕರನ್ನು ಹಾಗೂ ಕುಟುಂಬ ಯೋಜನೆಯ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.
ತೆಲಂಗಾಣ ಸರ್ಕಾರ ಸಾರ್ವಜನಿಕ ಆರೋಗ್ಯ ನಿರ್ದೇಶಕರ ನೇತೃತ್ವದ ಐವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿದ್ದು, ಆರೋಪ ಬಂದಿರುವ ಶಸ್ತ್ರಚಿಕಿತ್ಸೆಗಳ ಬಗ್ಗೆ ವಿಚಾರಣೆಯನ್ನು ನಡೆಸುತ್ತಿದೆ. ತಪ್ಪಿತಸ್ಥರೆಂದು ಸಾಬೀತಾದಲ್ಲಿ ವೈದ್ಯರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ಹದಗೆಟ್ಟ ರಸ್ತೆಯಿಂದ ಗ್ರಾಮಕ್ಕೆ ಬಾರದ ಅಂಬುಲೆನ್ಸ್- ಅರ್ಧ ಕಿ.ಮೀ ನಡೆದು ಬಂದ ತುಂಬುಗರ್ಭಿಣಿ
ತೆಲಂಗಾಣದಾದ್ಯಂತ ಪ್ರತಿ ತಿಂಗಳು ಇಂತಹ ಸಂತಾನಹರಣ ಶಿಬಿರಗಳನ್ನು ನಿಯಮಿತವಾಗಿ ನಡೆಸುವುದು ಸಾಮಾನ್ಯ. ಅನುಭವಿ ವೈದ್ಯರು ಡಬಲ್ ಪಂಕ್ಚರ್ ಲ್ಯಾಪರೊಸ್ಕೋಪಿ(ಡಿಪಿಎಲ್), ಟ್ಯೂಬೆಕ್ಟಮಿ ಮತ್ತು ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆಗಳನ್ನು ಮಾಡುತ್ತಾರೆ. ತೀರಾ ಅಪರೂಪಕ್ಕೆ ಇಂತಹ ಘಟನೆಗಳು ನಡೆಯುತ್ತವೆ. ಆದರೆ ಈಗಿನ ಘಟನೆ ಬಗ್ಗೆ ನಿಖರವಾದ ಕಾರಣವನ್ನು ಹುಡುಕಿ ಬಹಿರಂಗಪಡಿಸುತ್ತೇವೆ ಎಂದರು.
Live Tv
[brid partner=56869869 player=32851 video=960834 autoplay=true]
-ಹೆಂಡ್ತಿಗೆ ಮೇಸೇಜ್ ಮಾಡಿದ ಗಂಡ -ಕೊಲೆಗೈಯಲು 2ನೇ ಗಂಡನಿಂದ ಸಿನಿಮಾ ರೀತಿ ಕಿಡ್ನ್ಯಾಪ್ -ಗಾಡಿ ಕೆಟ್ಟು ಲಾಕ್
ಚಿಕ್ಕಮಗಳೂರು: ಪತ್ನಿಗೆ ಮೆಸೇಜ್ ಮಾಡಿದ ಮೊದಲ ಗಂಡನನ್ನು ಎರಡನೇ ಗಂಡ ಸಿನಿಮಾ ರೀತಿ ಕಿಡ್ನ್ಯಾಪ್ ಮಾಡಿ ಕೊಲೆಗೈಯಲು ಯತ್ನಿಸಿ ಮಾರ್ಗ ಮಧ್ಯೆ ಗಾಡಿ ಕೆಟ್ಟ ಪರಿಣಾಮ ಪೊಲೀಸರಿಗೆ ಲಾಕ್ ಆದ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಕಳೆದ ಐದು ವರ್ಷಗಳ ಹಿಂದೆ ಕಡೂರಿನಲ್ಲಿ ವಾಸಿಸುತ್ತಿದ್ದ ರಾಜಸ್ಥಾನದ ಕುಠಾಣಿ ಮೂಲದ ಮಂಜುಳಾರನ್ನು ಮೋಹನ್ ರಾಮ್ ಎಂಬಾತ ಕಳೆದ ವರ್ಷ ಜೋಧ್ಪುರ್ನಲ್ಲಿ ಪ್ರೀತಿಸಿ ಮದುವೆಯಾಗಿದ್ದನು. ಮದುವೆ ಬಳಿಕ ಮೋಹನ್ ರಾಮ್ ತನ್ನ ಪತ್ನಿಯನ್ನು ಕಡೂರಿಗೆ ಕರೆದುಕೊಂಡು ಬಂದು ಸಂಸಾರ ನಡೆಸುತ್ತಿದ್ದನು. ಕಡೂರಿಗೆ ಬಂದ 2 ತಿಂಗಳ ನಂತರ ರಾಜಸ್ಥಾನಕ್ಕೆ ಹೋಗಿದ್ದ ಹೆಂಡತಿಯನ್ನು ಕಡೂರಿಗೆ ಕರೆದುಕೊಂಡು ಬರಲು ಹೋಗಿದ್ದ ಪತಿ ಮೋಹನ್ ರಾಮ್ ಜೊತೆ ಮಂಜುಳಾ ಬರಲಿಲ್ಲ. ಕಡೂರಿಗೆ ಬರಲು ಆಕೆ ಒಪ್ಪದ ಹಿನ್ನೆಲೆ ಬೇಸತ್ತು ಮೋಹನ್ ಸುಮ್ಮನಾಗಿದ್ದನು.
ಹೆಂಡತಿಯ ಮೇಲಿನ ಪ್ರೀತಿಯಿಂದ ಮೋಹನ್ ಆಗಾಗ್ಗೆ ಅವಳ ಮೊಬೈಲ್ಗೆ ಮೆಸೇಜ್ ಮಾಡಿದರೂ ಆಕೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಕಳೆದ ತಿಂಗಳು ಮತ್ತೆ ಆಕೆಯನ್ನ ಮಾತನಾಡಿಸಿ, ಬುದ್ಧಿ ಹೇಳಿ ಕರೆದುಕೊಂಡು ಬರಲು ಹೋಗಿದ್ದ ಮೋಹನ್ಗೆ ಆಕೆ ಹರಿಯಾಣದ ಪಿಪ್ಲಿವಾಲ ಗ್ರಾಮದ ಓಂ ಪ್ರಕಾಶ್ ಜೊತೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಆಜಾದ್ ಬೆಂಬಲಿಸಿ 51 ನಾಯಕರ ರಾಜೀನಾಮೆ – ಕಾಶ್ಮೀರದಲ್ಲಿ ಕಾಂಗ್ರೆಸ್ಗೆ ಆಘಾತ
ಮೋಹನ್ ತನ್ನ ಪತ್ನಿಗೆ ಮೆಸೇಜ್ ಮಾಡುತ್ತಿರುವ ವಿಷಯ ತಿಳಿದ ಎರಡನೇ ಪತಿ ಓಂ ಪ್ರಕಾಶ್ ಮೊದಲ ಪತಿ ಮೋಹನ್ ನನ್ನ ಮುಗಿಸಲು ಸಂಚು ರೂಪಿಸಿದ್ದ. ಏಳು ಜನರ ತಂಡದೊಂದಿಗೆ ಆ.28ರ ಭಾನುವಾರ ರಾತ್ರಿ ಕಡೂರಿಗೆ ಬಂದ ಓಂ ಪ್ರಕಾಶ್ ಸಿಪಿಸಿ ಕಾಲೋನಿಯಲ್ಲಿರುವ ದಿನಸಿ ಅಂಗಡಿಯಲ್ಲಿದ್ದ ಮೋಹನ್ ರಾಮ್ನನ್ನು ಸಿನಿಮಿಯ ಶೈಲಿಯಲ್ಲಿ ಅಪಹರಿಸಿ ಆತನ ಬಾಯಿಗೆ ಬಟ್ಟೆ ಕಟ್ಟಿ ಥಳಿಸಿ, ಕಾರಿನಲ್ಲಿಯೇ ಕೊಲೆಗೆ ಸಂಚು ನಡೆಸಿದ್ದಾನೆ. ಕಾರಿನಲ್ಲಿ ಅಪಹರಿಸಿಕೊಂಡು ಹೋಗುತ್ತಿದ್ದ ದೃಶ್ಯವನ್ನು ಸ್ಥಳೀಯರು ಗಮನಿಸಿದ ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಕಡೂರು ಪೊಲೀಸರು ಹಂತಕರ ಕಾರನ್ನು ಚೇಸ್ ಮಾಡಿಕೊಂಡು ಹೋಗುವಾಗ ಕಡೂರು ತಾಲೂಕಿನ ಮತಿಘಟ್ಟ ಬಳಿ ಹಂತಕರ ಕಾರು ಕೈಕೊಟ್ಟ ಪರಿಣಾಮ ಎಂಟು ಜನ ಹಂತಕರು ಪೊಲೀಸರ ಬಂಧಿಸಿದ್ದಾರೆ.
ಸಾವಿನ ದವಡೆಯಲ್ಲಿದ್ದ ಮೋಹನ್ ರಾಮ್ ಅದೃಷ್ಟವಶಾತ್ ಪಾರಾಗಿದ್ದಾರೆ. ಸಿನಿಮಿಯ ರೀತಿ ಗಾಡಿಯನ್ನು ಚೇಸ್ ಮಾಡಿದ ಪೊಲೀಸರು ಬೆಂಗಳೂರು ಮೂಲದ ಆರೋಪಿ 2ನೇ ಪತಿ ಓಂ ಪ್ರಕಾಶ್, ಶೈಲೇಂದ್ರ, ಪ್ರದೀಪ್, ದಲ್ಲಾರಾಮ್, ಜಿತೇಂದ್ರ, ಶಂಕರ್ ಪಾಟೀಲ್ ಹಾಗೂ ದಿನೇಶ್ ಎಂಬ ಆರೋಪಿಗಳ ಜೊತೆ ಕೊಲೆಗೈಯಲು ಬಳಸಿದ್ದ ವಿಕೆಟ್ ಹಾಗೂ ಕಾರನ್ನು ವಶಕ್ಕೆ ಪಡೆದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? ಸಿದ್ದು ವಿರುದ್ಧ ರಾಮುಲು ಕಿಡಿ
ಪೊಲೀಸರ ಈ ಕಾರ್ಯಾಚರಣೆಯಲ್ಲಿ ಸಿಪಿಐ ಶಿವುಕುಮಾರ್, ಪಿ.ಎಸ್.ಐ.ಎನ್.ಕೆ. ರಮ್ಯಾ, ಹರೀಶ್, ಸಿಬ್ಬಂದಿಗಳಾದ ಕೃಷ್ಣಮೂರ್ತಿ, ರಾಜಪ್ಪ, ರಮೇಶ್, ಕುಚೇಲ, ಚಂದ್ರಶೇಖರ್ ಹಾಗೂ ಓಂಕಾರ್ ಮತ್ತಿತರು ಪಾಲ್ಗೊಂಡಿದ್ದರು.
Live Tv
[brid partner=56869869 player=32851 video=960834 autoplay=true]
ಲಕ್ನೋ: ಹಿಂಸಾಚಾರದ ಆರೋಪಿಗಳ ವಿರುದ್ಧ ʼಬುಲ್ಡೋಜರ್ ಕಾರ್ಯಾಚರಣೆʼ ನಡೆಸುತ್ತೇವೆಂದು ಹೇಳಿ ಅಮಾಯಕರ ಮನೆಗಳನ್ನೂ ಧ್ವಂಸ ಮಾಡಲಾಗುತ್ತಿದೆ ಎಂಬ ವಿವಾದಕ್ಕೆ ಉತ್ತರ ಪ್ರದೇಶ ಸರ್ಕಾರ ಸಿಲುಕಿತ್ತು. ಆದರೆ ಈ ಯೋಜನೆಯನ್ನು ಪೊಲೀಸರು ಸಕಾರಾತ್ಮಕ ಕಾರ್ಯಗಳಿಗೆ ಬಳಿಸಿಕೊಂಡಿದ್ದಾರೆ.
ಹೌದು, ವರದಕ್ಷಿಣೆಗಾಗಿ ಪತಿ ಮನೆಯಿಂದ ಹೊರಹಾಕಲ್ಪಟ್ಟ ಮಹಿಳೆಗೆ ಸಹಾಯ ಮಾಡಲು ಪೊಲೀಸರು ಮೊದಲ ಬಾರಿಗೆ ʼಬುಲ್ಡೋಜರ್ ಆಪರೇಷನ್ʼ ಪ್ಲ್ಯಾನ್ ಬಳಸಿಕೊಂಡಿದ್ದಾರೆ. ಸಂತ್ರಸ್ತೆ ತನ್ನ ಗಂಡನ ಮನೆಗೆ ಮರಳಲು ಸಹಾಯ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದ ನಂತರ ಬಿಜ್ನೋರ್ ಜಿಲ್ಲೆಯ ಮನೆಯ ಮುಂದೆ ಬುಲ್ಡೋಜರ್ ಘರ್ಜಿಸಿದೆ. ಇದನ್ನೂ ಓದಿ: ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್
ಮಹಿಳೆ ನೂತನಾ ಮಲಿಕ್ ಪತಿ ರಾಬಿನ್ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಕುಟುಂಬದವರಿಗೆ ನ್ಯಾಯಾಲಯದ ಆದೇಶದ ಕುರಿತು ಮನವರಿಕೆ ಮಾಡಿದ್ದಾರೆ. ಆದೇಶ ಪಾಲಿಸದಿದ್ದರೆ ಬುಲ್ಡೋಜರ್ ಆಪರೇಷನ್ ಮಾಡುವ ಎಚ್ಚರಿಕೆ ಕೂಡ ನೀಡಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಹೊರಗಡೆ ಬುಲ್ಡೋಜರ್ ಇರುವ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ
ಮಹಿಳೆಯ ಗಂಡನ ಮನೆಯವರು ಬಾಗಿಲು ಹಾಕಿಕೊಂಡಿದ್ದರು. ʻನಾವು ನಿಮ್ಮನ್ನು ವಿನಂತಿಸುತ್ತೇವೆ ಅಮ್ಮಾ.. ದಯವಿಟ್ಟು ಬಾಗಿಲು ತೆರೆಯಿರಿ. ಇದು ಹೈಕೋರ್ಟ್ನ ಆದೇಶʼ ಎಂದು ಅಧಿಕಾರಿಯೊಬ್ಬರು ಧ್ವನಿವರ್ಧಕದಲ್ಲಿ ಹೇಳುತ್ತಿರುವ ದೃಶ್ಯ ವೀಡಿಯೋದಲ್ಲಿದೆ.
ಪೊಲೀಸ್ ತಂಡವು ಮಹಿಳೆ ತನ್ನ ಅತ್ತೆಯ ಮನೆಗೆ ಮರಳಲು ಸಹಾಯ ಮಾಡಿದೆ. ಈಗ ಪರಿಸ್ಥಿತಿ ತಿಳಿಗೊಂಡಿದೆ ಎಂದು ಬಿಜ್ನೋರ್ ಪೊಲೀಸ್ ಅಧೀಕ್ಷಕ (ನಗರ) ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.
2017ರಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಗಂಡನ ಮನೆಯವರು ಕಿರುಕುಳ ನೀಡಲಾರಂಭಿಸಿದರು. 5 ಲಕ್ಷ ಹಾಗೂ ಬೊಲೆರೊ ಕಾರಿಗೆ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆ ಈಡೇರಿಸದ ನನ್ನ ಮಗಳನ್ನು ಥಳಿಸಿ ಮನೆಯಿಂದ ಹೊರಹಾಕಿದ್ದರು. 2019ರಿಂದ ಮಗಳು ನಮ್ಮೊಂದಿಗೆ ವಾಸವಾಗಿದ್ದಳು ಎಂದು ಮಹಿಳೆಯ ತಂದೆ ಆರೋಪಿಸಿದ್ದರು.
ನಿನ್ನೆ ಪೊಲೀಸರು ಅಲ್ಲಿಗೆ ಹೋದಾಗಲೂ ಮನೆಯವರು ಒಂದು ಗಂಟೆಯವರೆಗೂ ಬಾಗಿಲು ತೆರೆಯಲಿಲ್ಲ. ನಂತರ ಪೊಲೀಸರು ಸ್ಥಳಕ್ಕೆ ಬುಲ್ಡೋಜರ್ ತಂದರು. ಆಗ ನನ್ನ ಮಗಳನ್ನು ಮನೆಗೆ ಸೇರಿಸಿಕೊಂಡರು ಎಂದು ಆಕೆ ತಂದೆ ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕಾಬೂಲ್: ತಾಲಿಬಾನ್ ಅಫ್ಘಾನಿಸ್ತಾನದ ಆಡಳಿತವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಒಂದು ವರ್ಷದ ನಂತರ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೆ ಗ್ರೀನ್ಸಿಗ್ನಲ್ ಕೊಟ್ಟಿದೆ. ಆದರೆ ಚಲನಚಿತ್ರಗಳಲ್ಲಿ ಮಹಿಳಾ ಕಲಾವಿದರ ಪಾತ್ರಗಳಿಗೆ ನಿರ್ಬಂಧ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಒಂದು ವರ್ಷದ ನಂತರ ಆಫ್ಘನ್ನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಸಿಕ್ಕಿರುವುದು ಸಿನಿಪ್ರಿಯರು, ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ದೇಶಕರಲ್ಲಿ ಮಂದಹಾಸ ಮೂಡಿಸಿದೆ. ಇದೇ ವೇಳೆ ಮಹಿಳಾ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತೀವ್ರ ಕಳವಳವೂ ವ್ಯಕ್ತವಾಗಿದೆ. ಈಗಾಗಲೇ 37 ಚಲನಚಿತ್ರಗಳು ಹಾಗೂ ಸಾಕ್ಷ್ಯಾಚಿತ್ರಗಳು ಪ್ರದರ್ಶನಕ್ಕೆ ಸಜ್ಜಾಗಿವೆ. ಆದರೆ ಇತ್ತೀಚಿಗೆ ನಿರ್ಮಿಸಲಾದ ಚಿತ್ರಗಳಲ್ಲಿ ಮಹಿಳಾ ನಟಿ ಅತಿಫಾ ಮೊಹಮ್ಮದಿ ಮಾತ್ರವೇ ಏಕೈಕ ಮಹಿಳಾ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಿಸಿದವರಿಗೆ 5 ಸಾವಿರ ರೂ. ದಂಡ – ಶ್ರೀನಗರ ಕಾಲೇಜು ಆದೇಶ
ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ: ಚಿತ್ರಮಂದಿರ ತೆರೆಯಲು ಅನುಮತಿ ಸಿಕ್ಕಿರುವುದು ಚಲನಚಿತ್ರ ನಿರ್ಮಾಪಕರಲ್ಲಿ ಉತ್ಸಾಹ ತರಿಸಿದ್ದು, ನಿರ್ಮಿಸುವ ಚಲನಚಿತ್ರಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಮ್ಮ ಕೆಲಸವನ್ನು ಸಂತೋಷದಿಂದ ಮಾಡುತ್ತಿದ್ದೇವೆ. ನಮ್ಮ ಪಾಕೆಟ್ ಮನಿಯಿಂದ ಸಿನಿಮಾಕ್ಕೆ ಖರ್ಚು ಮಾಡಿದ್ದೇವೆ. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಹಣ ನೀಡುವಂತೆ ಮನವಿ ಮಾಡಿರುವುದಾಗಿ ಕಲಾವಿದ ಫಯಾಜ್ ಇಫ್ತಿಕರ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಮುಖಂಡ ಝಹ್ರಾ ಮುರ್ತಝಾವಿ, ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರನ್ನು ನಿಷೇಧಿಸಬಾರದು. ಏಕೆಂದರೆ ಇದು ಮಹಿಳೆಯರ ಹಕ್ಕು. ಮಹಿಳೆಯರ ಉಪಸ್ಥಿತಿಯಿಲ್ಲದೇ ಚಲನಚಿತ್ರವು ಉತ್ತಮವಾಗಿ ಮೂಡಿಬರುತ್ತದೆ ಎಂದು ನನಗೆ ಅನ್ನಿಸುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಸಿಯಾಟಲ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ
ತಾಲಿಬಾನ್ ಕಳೆದ ತಿಂಗಳು ಮಹಿಳೆಯರು ಹಾಗೂ ಹುಡುಗಿಯರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಬಾರದಂತೆ ಹಾಗೂ ಮುಖ ತೋರಿಸದಂತೆ ಆದೇಶಿಸಿತ್ತು. ಇದಕ್ಕೂ ಮುನ್ನ ಹೆಣ್ಣುಮಕ್ಕಳಿಗೆ ಮಾಧ್ಯಮಿಕ ಶಿಕ್ಷಣವನ್ನು ನಿಷೇಧಿಸಿತ್ತು.
Live Tv
[brid partner=56869869 player=32851 video=960834 autoplay=true]
ಮಳೆಗಾಲದಲ್ಲಿ ಜೋರಾಗಿ ಗಾಳಿ ಬೀಸುವುದು, ಭಾರೀ ಮಳೆಯಾಗಿ ಹಲವೆಡೆ ಪ್ರವಾಹ ಉಂಟಾಗುವುದನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ವಿಶೇಷವಾಗಿ ಭಾರತದಲ್ಲಿ ಮಳೆಯನ್ನು ಪ್ರೀತಿಸುವುದರ ಜೊತೆಗೆ ದ್ವೇಷಿಸುವವರ ಸಂಖ್ಯೆ ಕೂಡ ಸಮವಾಗಿದೆ. ಅದರಲ್ಲಿಯೂ ಪ್ರಣಯ ಪಕ್ಷಿಗಳಿಗೆ ಮಳೆಗಾಲ ಬಹಳ ಅಚ್ಚುಮೆಚ್ಚು. ಆದರೆ ಎಲ್ಲಾದರೂ ಹೊರಡುವಾಗ ಮಳೆಯಲ್ಲಿ ಸಿಕ್ಕಿಹಾಕಿಕೊಂಡರೇ ಅಷ್ಟೇ ಕಿರಿಕಿರಿ ಕೂಡ ಉಂಟಾಗುತ್ತದೆ. ಎಷ್ಟೋ ಜನ ಮಳೆಗಾಲದಲ್ಲಿ ಛತ್ರಿಯನ್ನು ಉಪಯೋಗಿಸುತ್ತಾರೆ. ಛತ್ರಿ ನಿಮ್ಮ ಮೇಲ್ಭಾಗ ಮಾತ್ರ ತೇವವಾಗುವುದರಿಂದ ರಕ್ಷಿಸಿದರೆ, ನಿಮ್ಮ ಮೊಣಕಾಲಿನಿಂದ ಒದ್ದೆಯಾಗಿಸುತ್ತದೆ. ಇದರಿಂದ ನಿಮಗೆ ನಡೆದಾಡಲೂ ಸಹ ಕಷ್ಟವಾಗುತ್ತದೆ. ಅಲ್ಲದೇ ಮಳೆ ಬರುವ ಸಂದರ್ಭದಲ್ಲಿ ಬ್ಯಾಗ್ಗಳು, ವ್ಯಾಲೆಟ್ಗಳು ಅಥವಾ ಸ್ಮಾರ್ಟ್ಫೋನ್ಗಳ ಜೊತೆಗೆ ಛತ್ರಿಯನ್ನು ಹಿಡಿದಿಟ್ಟುಕೊಳ್ಳಲು ಮತ್ತಷ್ಟು ಕಿರಿಕಿರಿಯಾಗುತ್ತದೆ. ಈ ಎಲ್ಲದಕ್ಕೂ ಪರಿಹಾರ ಅಂದರೆ ರೈನ್ ಕೋಟ್. ಮಳೆಗಾಲದಲ್ಲಿ ರೈನ್ ಕೋಟ್ ಧರಿಸುವುದು ಬಹಳ ಉತ್ತಮವಾಗಿದೆ.
ಮಳೆಗಾಲಗಳು ಛತ್ರಿಗಳಿಗಿಂತಲೂ ಹೆಚ್ಚಾಗಿ ರೈನ್ಕೋಟ್ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಇದು ನಿಮ್ಮ ಬ್ಯಾಗ್ ಅಲ್ಲದೇ ತಲೆಯಿಂದ ಪಾದದವರೆಗೂ ನಿಮ್ಮನ್ನು ಮಳೆಯಿಂದ ರಕ್ಷಿಸುತ್ತದೆ. ಅಲ್ಲದೇ ರೈನ್ ಕೋಟ್ನಲ್ಲಿ ಹಲವಾರು ವೆರೈಟಿ ಡಿಸೈನ್, ಸೈಜ್, ಅನೇಕ ನ್ಯೂ ಪ್ಯಾಟನ್ಗಳು ದೊರೆಯುತ್ತದೆ. ಈ ಕುರಿತಂತೆ ನಿಮಗೆ ತಿಳಿಯದೇ ಇರುವ ಒಂದಷ್ಟು ಮಾಹಿತಿ ಈ ಕೆಳಗಿನಂತಿದೆ.
ಪುರುಷರ ರೈನ್ ಕೋಟ್
ಪುರುಷರ ಈ ರೈನ್ ಕೋಟ್ ನಿಮಗೆ ಕೆಳಗಿನವರೆಗೂ ರಕ್ಷಣೆ ನೀಡುತ್ತದೆ. ಇದರಲ್ಲಿ ಜಾಕೆಟ್ ಜೊತೆಗೆ ಬಾಟಮ್ ಕೂಡ ಬರುತ್ತದೆ. ಈ ರೇನ್ಕೋಟ್ ನಿಮಗೆ ಮೇಲಿನ ಮತ್ತು ಕೆಳಗಿನವರೆಗೂ ರಕ್ಷಣೆ ನೀಡುತ್ತದೆ. ಇದು ಜಾಕೆಟ್ ಜೊತೆಗೆ ಬಾಟಮ್ನೊಂದಿಗೆ ಬರುತ್ತದೆ. ಈ ಜಾಕೆಟ್ ಇದು ಡ್ರಾಸ್ಟಿಂಗ್ ಮತ್ತು ಎಲಾಸ್ಟಿಕ್ ವೆಸ್ಟ್ ನೊಂದಿಗೆ ಬರುತ್ತದೆ. ಇದನ್ನು ನೀವು ನಿಮಗೆ ಹೇಗೆ ಬೇಕೋ ಹಾಗೇ ಅಡ್ಜೆಸ್ಟ್ ಮಾಡಿಕೊಳ್ಳಬಹುದು. ಇದು 100% ನಿಮ್ಮನ್ನು ಮಳೆ ಹಾಗೂ ಗಾಳಿಯಿಂದ ರಕ್ಷಣೆ ನೀಡುತ್ತದೆ.
ಮಹಿಳೆಯರ ವಾಟರ್ಪ್ರೂಫ್ ಜಾಕೆಟ್
ಮಹಿಳೆಯರು ಯಾವಾಗಲೂ ಒಂದೇ ರೀತಿಯ ರೈನ್ ಕೋಟ್ ಮೇಲೆ ಅವಲಂಬಿತರಾಗಿರುವುದಿಲ್ಲ. ಹಲವಾರು ವೇಳೆ ರೈನ್ ಕೋಟ್ ಬದಲಾಯಿಸುತ್ತಿರಬೇಕಾಗುತ್ತದೆ. ಸದ್ಯ ಈ ನೀಡಲಾಗಿರುವ ರೈನ್ ಕೋಟ್ ಅನ್ನು ಸೈಕ್ಲಿಂಗ್ ಹಾಗೂ ಬೈಕ್ನಲ್ಲಿ ಸವಾರಿ ಮಾಡುವಾಗ ಧರಿಸಬಹುದಾಗಿದೆ. ಮಳೆ ಬರುವ ವೇಳೆ ರಸ್ತೆಯಲ್ಲಿ ಹೋಗುವಾಗ ಬಸ್, ಕಾರು ಅಥವಾ ಇತರೆ ವಾಹನಗಳು ಜೋರಾಗಿ ಸಂಚರಿಸು ವೇಲೆ ರಸ್ತೆ ಗುಂಡಿಯಲ್ಲಿರುವ ಕೊಚ್ಚೆ ನೀರು, ಮಳೆ ಹನಿಗಳಿಂದ ನಿಮ್ಮನ್ನು ರಕ್ಷಿಸುವುದರ ಜೊತೆಗೆ ನಿಮ್ಮ ಪ್ರಯಾಣವನ್ನು ಸರಾಗಗೊಳಿಸುತ್ತದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದ್ದು, ತನಿಖೆ ನಡೀತಿದೆ: ಬೊಮ್ಮಾಯಿ
ವಾಟರ್ಪ್ರೂಫ್ ಪಾಲಿಯೆಸ್ಟರ್ ರೈನ್ ಪೊಂಚೊ ವಿತ್ ಹುಡ್
ವಾಟರ್ಪ್ರೂಫ್ ಪಾಲಿಯೆಸ್ಟರ್ ರೈನ್ ಪೊಂಚೊ ವಿತ್ ಹುಡ್ ಯುನಿಸೆಕ್ಸ್ ರೈನ್ಕೋಟ್ ಆಗಿದ್ದು, ಇದು ನಿಮ್ಮ ಜೊತೆಗೆ ನಿಮ್ಮ ಬ್ಯಾಗ್ ಅನ್ನು ಸಹ ತೇವದಿಂದ ರಕ್ಷಿಸುತ್ತದೆ. ಇದು ಪ್ಯಾಕಿಂಗ್ ಪೌಚ್ನೊಂದಿಗೆ ಕಾಂಪ್ಯಾಕ್ಟ್ ವಿನ್ಯಾಸವನ್ನು ಹೊಂದಿದೆ. ಈ ರೈನ್ ಕೋಟ್ ಅನ್ನು ಸುಲಭವಾಗಿ ಧರಿಸಬಹುದಾಗಿದೆ.
ಮೆನ್ ವಾಟರ್ಪ್ರೂಫ್ ಡಬಲ್ ಲೇಯರ್ ರಿವರ್ಸಿಬಲ್ ರೈನ್ಕೋಟ್
ಈ ರಿವರ್ಸಿಬಲ್ ರೇನ್ಕೋಟ್ ಪುರುಷರಿಗೆಂದೇ ಮೀಸಲಾಗಿದೆ. ಇದು ಜಾಕೆಟ್ ಜೊತೆಗೆ ಬರುತ್ತದೆ ಮತ್ತು ಭಾರೀ ಮಳೆಯಾಗುತ್ತಿರುವ ವೇಳೆ ಕೂಡ ನಡೆಯಲು ಸಾಕಷ್ಟು ಆರಾಮದಾಯಕವಾಗಿರುತ್ತದೆ. ಈ ರೈನ್ಕೋಟ್ ಅನ್ನು ಭಾರತದಲ್ಲಿಯೇ ತಯಾರಿಸಲಾಗುತ್ತದೆ ಮತ್ತು ಇದು ಬೇಗನೆ ಒದ್ದೆಯಿಂದ ಒಣಗುತ್ತದೆ. ಇದನ್ನೂ ಓದಿ: ಸಾನ್ಯ ಒಳ ಉಡುಪಿನ ಬಗ್ಗೆ ಮಾತನಾಡಿದ್ದ ಉದಯ್- ಚಳಿ ಬಿಡಿಸಿದ ಕಿಚ್ಚ
Live Tv
[brid partner=56869869 player=32851 video=960834 autoplay=true]
ಕಾರವಾರ: ಎರಡು ಮಕ್ಕಳ ತಾಯಿಯೊಂದಿಗೆ ತಮಿಳುನಾಡಿನಿಂದ ಪರಾರಿಯಾಗಿ ಕಾರವಾರದಲ್ಲಿ ನೆಲೆಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆತನ ಪತ್ನಿಯನ್ನೂ ತಮಿಳುನಾಡು ಪೊಲೀಸರು ಬಂಧಿಸಿ, ಕರೆದೊಯ್ದಿದ್ದಾರೆ.
ಎರಡು ಮಕ್ಕಳ ತಾಯಿಯಾಗಿದ್ದ ಆಯೆಷಾ ಫೆ.21ರಂದು ತಮಿಳುನಾಡಿನಿಂದ ನಾಪತ್ತೆಯಾಗಿದ್ದಳು. ಈ ಕುರಿತು ಕುಟುಂಬಸ್ಥರು ತಮಿಳುನಾಡಿನಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ಟ್ರ್ಯಾಕಿಂಗ್ ಹಾಗೂ ಕಾರವಾರ ಪೊಲೀಸರ ನೆರವಿನೊಂದಿಗೆ ಇಬ್ಬರನ್ನೂ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕುಟುಂಬದವರು ವಿದೇಶಕ್ಕೆ ಹೋಗಬಾರದು ಅಂತ ವಿಮಾನದಲ್ಲಿ ಬಾಂಬ್ ಇದೆ ಎಂದ!
ಬಾಲ್ಯದಲ್ಲಿ ಸ್ನೇಹಿತ ಹಾಗೂ ದೂರದ ಸಂಬಂಧಿಯೂ ಆಗಿದ್ದ ಬೀರ್ ಮೈದಿನ್ ಕಾರವಾರಕ್ಕೆ ಬಂದು ಸಂಸಾರ ನಡೆಸುತ್ತಿದ್ದರು. ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ್ದ ಮೈದಿನ್ ಕಾರವಾರದಲ್ಲೇ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಕಳೆದ 6 ತಿಂಗಳಿಂದ ಮಹಿಳೆ ಆಯೆಷಾ ರೆಹಮತ್ವುಲ್ಲಾ (24) ಹಾಗೂ ಪ್ರಿಯಕರ ಬೀರ್ ಮೈದಿನ್ ಕಾರವಾರದ ನಗರದ ತಾಮ್ಸೆವಾಡದಲ್ಲಿ ವಾಸವಾಗಿದ್ದರು.
ಇದೀಗ ಮಹಿಳೆ 3 ತಿಂಗಳ ಗರ್ಭಿಣಿಯಾಗಿದ್ದು ಇಬ್ಬರನ್ನೂ ತಮಿಳುನಾಡಿನ ಪಿಎಸ್ಐ ವೀರಮುತ್ತು ಟೀಂ ಕರೆದೊಯ್ದಿದೆ. ಎರಡು ತಿಂಗಳ ಹಿಂದೆ ಹುಡುಕಿಕೊಂಡು ಬಂದಾಗಲೂ ಇವರು ಪತ್ತೆಯಾಗಿರಲಿಲ್ಲ. ಕೊನೆಗೂ ಯುವಕ, ವಿವಾಹಿತೆಯನ್ನ ಪತ್ತೆಮಾಡಿ ಪೊಲೀಸರು ತಮಿಳುನಾಡಿಗೆ ಕರೆದೊಯ್ದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದ ಬೆನ್ನಲ್ಲೇ ವಿವಿಧ ಮಠಗಳ ಮಠಾಧೀಶರು, ಜನಪ್ರತಿನಿಧಿಗಳು ಶ್ರೀಗಳ ಬೆಂಬಲಕ್ಕೆ ನಿಂತಿದ್ದಾರೆ.
ಮಠಕ್ಕೆ ಆಗಮಿಸಿ ಶ್ರೀಗಳೊಂದಿಗೆ ಸಮಾಲೋಚನೆ ನಡೆಸುವ ಜೊತೆಗೆ ಮುರುಘಾ ಶರಣರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.
ಇಂದು ಬೆಳಿಗ್ಗೆಯಿಂದಲೂ ಮೌನವಹಿಸಿದ್ದ ಮುರುಘಾ ಮಠದ ಶ್ರೀಗಳು ತಮ್ಮ ಬೆಂಬಲಿಗರಾದ ಮಾದಾರ ಚನ್ನಯ್ಯ ಶ್ರೀ ಲಿಂಗಮೂರ್ತಿ ಅವರು ಬಂದ ಬಳಿಕ ಸಭೆಯಲ್ಲಿ ಮಾತನಾಡಿದ್ದಾರೆ. ಶ್ರೀಗಳು ಸಭೆಯಲ್ಲಿ ಮಾತನಾಡಿದ್ದ ಆಡಿಯೋ ಇದೀಗ ಪಬ್ಲಿಕ್ ಟಿಗೆ ಲಭ್ಯವಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಮುರುಘಾ ಶರಣರ ವಿರುದ್ಧ ಕೇಸ್
ಘಟನೆ ಬಳಿಕ ಮೊದಲ ಬಾರಿಗೆ ಮಾತನಾಡಿರುವ ಶ್ರೀಗಳು, ನಾವು ಸಂದಾನಕ್ಕೂ ಸಿದ್ಧ ಸಮರಕ್ಕೂ ಬದ್ದರಿದ್ದೇವೆ. ಸಂದಾನ ಮತ್ತೆ ಸಮರ ಎರಡೂ ಆಯ್ಕೆಗಳು ಇವೆ. ಸಂದಾನ ನೀವು ಮಾಡಿ, ಒಂದು ವೇಳೆ ಅದು ಫೇಲ್ ಆದರೆ ಸಮರ ಇದ್ದೇ ಇದೆ. ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಈ ರೀತಿ ಪಿತೂರಿ, ಒಳಸಂಚು ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಆಡಿಯೋನಲ್ಲಿ ಏನಿದೆ?
ನಮ್ಮ ಜೊತೆ ಜಗಳವಾಡಿದ್ರೆ ಏನಾದರೂ ಸಿಗುತ್ತದೆ. ಬೇರೆಯವರ ಜೊತೆ ಜಗಳ ಮಾಡಿದ್ರೆ ಏನು ಸಿಗುತ್ತೆ? ಮುರುಘಾ ಮಠದಲ್ಲಿ ಅಧಿಕಾರಕ್ಕಾಗಿ ಸಂಘರ್ಷ ನಡೆಯುತ್ತಿದೆ. ಕಳೆದ 15 ವರ್ಷಗಳಿಂದ ಮುರುಘಾ ಮಠವನ್ನು ಜನ ನೋಡುವ ಹಾಗೆ ಮಾಡಿದ್ದೇವೆ. ಆದರೆ ಬ್ಲ್ಯಾಕ್ಮೇಲ್ ತಂತ್ರದ ಮೂಲಕ ಅಧಿಕಾರ ಬೇಕು ಎನ್ನುವುದು ಇಲ್ಲಿನ ಧೋರಣೆಯಾಗಿದೆ. ಇದನ್ನೂ ಓದಿ: ಮುರುಘಾ ಮಠದ ಆಡಳಿತಾಧಿಕಾರಿ, ಅಧಿಕಾರಿ ಪತ್ನಿ ವಿರುದ್ಧ ಕೇಸ್
ನಾವು ಸಂದಾನಕ್ಕೂ ಸಿದ್ಧ ಸಮರಕ್ಕೂ ಬದ್ಧರಿದ್ದೇವೆ. ಸಂದಾನ ಮತ್ತೆ ಸಮರ ಎರಡೂ ಆಯ್ಕೆಗಳು ಇವೆ. ಸಂದಾನ ನೀವು ಮಾಡಿ, ಅದು ಫೇಲ್ ಆದರೆ ಸಮರ ಇದ್ದೇ ಇದೆ. ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಈ ರೀತಿ ಪಿತೂರಿ, ಒಳಸಂಚು ಮಾಡಿದ್ದಾರೆ. ಈ ಒಳಸಂಚಿನ ಪ್ರಕ್ರಿಯೆ ನಡೆಯುತ್ತಲೇ ಬಂದಿದೆ. ಈ ಸಮಸ್ಯೆ, ಆರೋಪ ಶಾಶ್ವತವಲ್ಲ. ಇದು ಮುರುಘಾ ಶರಣರ ಅಭಿಮಾನವನ್ನು ಹೆಚ್ಚಿಸುವ ಕೆಲಸವಾಗಿದೆ. ರಾಜ್ಯದ ವಿವಿಧ ಕಡೆಯಿಂದ ಜನರು ಬರ್ತಾ ಇದ್ದಾರೆ, ಫೋನ್ ಮಾಡ್ತಾ ಇದ್ದಾರೆ. ನಿಮ್ಮ ಜೊತೆ ನಾವು ಇದ್ದೇವೆ ಎಂದು ಧೈರ್ಯ ಹೇಳುತ್ತಿದ್ದಾರೆ.
ನಮ್ಮ ಮೇಲಿನ ಅಭಿಮಾನ ಜಾಗೃತವಾಗುತ್ತಿದೆ. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಇದ್ದೇ ಇರುತ್ತೆ. ಮಾನವ ಬಗೆಹರಿಸುವ ಪರಿಹಾರ ಇರುತ್ತೆ. ಕೆಲವೊಂದನ್ನು ಕಾಲವೇ ನಿರ್ಣಯ ಮಾಡುತ್ತೆ. ಕಾಲ ಕೂಡಿ ಬಂದರೆ ಸುಮ್ಮನಾಗುತ್ತೇನೆ, ಇಲ್ಲವಾದ್ರೆ ಹೋರಾಟಕ್ಕೆ ಮುಂದಾಗುತ್ತೇನೆ.
ಕೆಳಗಡೆ ಇದ್ದಾಗ ಗಾಳಿ ಹೊಡೆತ ಕಮ್ಮಿ ಇರುತ್ತವೆ. ಮೇಲೆಕ್ಕೆ ಹೋದಂತೆಲ್ಲ ಗಾಳಿ ಹೊಡೆತ ಬಹಳ ಇರುತ್ತೆ. ಸಣ್ಣವರಿಗೆ ಸಣ್ಣ ಪೆಟ್ಟುಗಳು ಬಂದಂತೆ ದೊಡ್ಡವರಿಗೆ ದೊಡ್ಡ ಪೆಟ್ಟುಗಳು ಬರುತ್ತವೆ. ಎಲ್ಲಾ ಸಮಾಜ ಸುಧಾರಕರ ಕಾಲದಲ್ಲೂ ಈ ರೀತಿ ಸಾತ್ವಿಕ ಶಕ್ತಿ ದುಷ್ಟ ಶಕ್ತಿಗಳು ಎರಡು ಜೊತೆ-ಜೊತೆಯಾಗಿ ಇರುತ್ತವೆ. ಸಾತ್ವಿಕ ಸಮಾಜ ಪುರುಷರು ಸಕಾರಾತ್ಮಕ ಧೋರಣೆ ಹೊಂದಿರುತ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ನಕಾರಾತ್ಮಕ ಧೋರಣೆಯೂ ಇರುತ್ತದೆ.
ಏಸು ಕ್ರಿಸ್ತನನ್ನು ಶಿಲುಭೆಗೆ ಏರಿಸಿದ್ದು ಬೇರೆಯವರಲ್ಲ ಅದೇ ಧರ್ಮದವರು. ಪೈಗಂಬರ್ಗೆ ಟಾರ್ಚರ್ ಮಾಡಿದ್ದೂ ಅದೇ ಧರ್ಮದವರು. ಗೌತಮ ಬುದ್ಧನಿಗೆ ಹಂದಿಯ ಮಾಂಸದ ರಸ ಉಣ್ಣಿಸಿದವರೂ ಅದೇ ಧರ್ಮದವರು. ಸಾಕ್ರೆಟೀಸ್ನ ಜೀವನದಲ್ಲಿಯೂ ಕೂಡ ಇದೇ ಆಗಿದ್ದು. ರಾಜಸತ್ತೆ, ಪ್ರಭುಸತ್ತೆ ವಿರುದ್ಧವಾಗಿ ಅವರ ಹೋರಾಟ ಇತ್ತು. ನಮಗೆ ಸಾಕ್ರೆಟೀಸ್ಗೆ ಸಿಕ್ಕ ಶಿಷ್ಯ ಸಿಕ್ಕಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು. ಶಿಷ್ಯರು ಮರಣದಂಡನೆ ತಪ್ಪಿಸಲು ಎಲ್ಲಾ ಪ್ರಯತ್ನ ಮಾಡುತ್ತಾರೆ. ಆದಾಗ್ಯೂ ಸಾಕ್ರೆಟೀಸ್ ರಾಜಿಯಾಗಲಿಲ್ಲ.
ಜಗತ್ತಿನಲ್ಲಿ ಮೈಗಳ್ಳರು, ಜೀವಗಳ್ಳರು ಇದ್ದಾರೆ. ಏನಾದರೂ ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಅತ್ಯಂತ ಕಳಂಕವಾಗುತ್ತೆ ಎಂದು ಸಾಕ್ರೆಟೀಸ್ ಹೇಳಿದ್ದರು. ಈ ಜಗತ್ತಿನಲ್ಲಿ ಧರ್ಮಾಂಧರು, ಅಂದರು ಈ ರೀತಿಯ ಸನ್ನಿವೇಶ ಎದುರಿಸಿಲ್ಲ. ಯಾರು ತಾತ್ವಿಕತೆ, ಸೈದ್ಧಾಂತಿಕ ತಳಹದಿಯ ಮೇಲೆ ನಡೆಯುತ್ತಾರೆ ಅವರಿಗೆ ಹೆಜ್ಜೆ ಹೆಜ್ಜೆಗೂ ಮುಳ್ಳು ಇರುತ್ತವೆ.
ಗಾಂಧೀಜಿ, ಬಸವಣ್ಣನವರಿಗೂ ಕೂಡ ದುರಂತಗಳು ಆಗಿದೆ. ನಾವು ಕೂಡ ಹೊರತಾಗಿಲ್ಲ. ಕಿತ್ತೂರು, ಪಾಳೆಗಾರ ಸಂಸ್ಥಾನ ಹಾಳಾಗಿದ್ದು ಸ್ವಜಾತಿಯ ಜನರಿಂದಲೇ. ಇದು ಸತ್ಯಯುತವಾಗಿ ಬಂದಿರುವ ಘಟನೆಗಳು. ಮುಸ್ಲಿಂ, ಕ್ರಿಶ್ಚಿಯನ್ನರು ದಲಿತರು, ಎಲ್ಲರೂ ಸೇರಿ ನನಗೆ ಧೈರ್ಯ ತುಂಬಿದ್ದಾರೆ. ನಾವು ಹೇಳಿ ಕರೆಸಿಲ್ಲ, ಮುಂಜಾನೆಯ ಸುದ್ದಿ ನೋಡಿ ನೀವೆಲ್ಲ ಬಂದಿದ್ದೀರಿ. ಈ ಘಟನೆಯಿಂದ ನನಗಿಂತಲೂ ನಿಮಗೇ ಬಹಳಷ್ಟು ನೋವಾಗಿದೆ. ನೋವಿನಿಂದ ನೀವೆಲ್ಲಾ ಬಂದಿದ್ದೀರಿ. ನಮ್ಮ ಮೇಲಿನ ಅಭಿಮಾನ ಜಾಗೃತವಾಗುತ್ತಿದೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]