Tag: women

  • ಮಹಿಳೆಯರ ಅಂದ ಹೆಚ್ಚಿಸುವ ಟಾಪ್ 5 ಟ್ರೆಂಡಿ ಹೇರ್‌ಕಟ್‍ಗಳು

    ಮಹಿಳೆಯರ ಅಂದ ಹೆಚ್ಚಿಸುವ ಟಾಪ್ 5 ಟ್ರೆಂಡಿ ಹೇರ್‌ಕಟ್‍ಗಳು

    ಹಿಳೆಯರು ಸ್ಟೈಲಿಶ್ ಆಗಿ ಕಾಣಿಸಲು ತುಂಬಾ ಪ್ರಯತ್ನ ಪಡುತ್ತಾರೆ. ಆದರೆ ಮಹಿಳೆಯರಿಗೆ ಅಂದವನ್ನು ಹೆಚ್ಚಿಸುವುದೇ ಕೂದಲು. ಒಬ್ಬರಿಗೆ ಒಂದೊಂದು ರೀತಿಯ ಹೇರ್‌ಕಟ್‍ ಸೂಟ್ ಆಗುತ್ತದೆ. ಅದಕ್ಕಾಗಿಯೇ ಮಹಿಳೆಯರಿಗಾಗಿಯೇ ವಿಶೇಷ ಹೇರ್‌ಕಟ್‍ ಮಾಡಿಸುವುದು ಹೇಗೆ, ಯಾವ ಸ್ಟೈಲ್ ಹೇರ್‌ಕಟ್‍ ಮಾಡಿಸಿದರೇ ಸುಂದರವಾಗಿ ಕಾಣಿಸುತ್ತಾರೆ ಎಂಬುವುದರ ಬಗ್ಗೆ ಕೆಲವೊಂದು ಟಿಪ್ಸ್‌ಗಳನ್ನು ನಾವು ಇಂದು ನಿಮಗೆ ಹೇಳಿಕೊಡುತ್ತೇವೆ. ಈ ವರ್ಷದ ಕೂಲ್ ಆ್ಯಂಡ್ ಟ್ರೆಂಡಿ ಸ್ಟೈಲ್‍ನ ಟಾಪ್ 5 ಹೇರ್‌ಕಟ್‍ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ. ಈ ಕೆಳಗಿನವುಗಳಲ್ಲಿ ನಿಮಗೆ ಸೂಟ್ ಆಗುವಂತಹ ಹೇರ್‌ಕಟ್‍ ಅನ್ನು ನೀವು ಮಾಡಿಸಿಕೊಳ್ಳಬಹುದಾಗಿದೆ.

    ಶಾರ್ಟ್ ಹೇರ್‌ಕಟ್‍
    13 Feminine Short Haircuts For Wavy Hair: Trending Right Now

    ಶಾರ್ಟ್ ಹೇರ್ ಇರುವವರು ನನ್ನ ಕೊದಲಿಗೆ ಯಾವ ರೀತಿಯ ಹೇರ್‍ಕಟ್ ಮಾಡಿಸಿಕೊಳ್ಳಬೇಕೆಂದು ಯೋಚಿಸುತ್ತಿದ್ದರೆ, ಶಾರ್ಟ್ ಹೇರ್‍ಕಟ್ ಮಾಡಿಸಿಕೊಳ್ಳಿ. ಇದೊಂದು ಟ್ರೆಂಡಿ ಹೇರ್ ಸ್ಟೈಲ್ ಆಗಿದ್ದು, ನೀವು ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸೂಟ್ ಆಗುತ್ತದೆ.

    ಮೀಡಿಯಂ ಹೇರ್‌ಕಟ್‍
    ಕೆಲವರಿಗೆ ಹೇರ್ ತುಂಬಾ ಉದ್ದವಿರುವುದರಿಂದ ಇಷ್ಟವಿಲ್ಲದೇ ಹೋದರೆ, ಈ ಹೇರ್‍ಕಟ್ ಮಾಡಿಸಿಕೊಳ್ಳುವುದು ಉತ್ತಮ. ಏಕೆಂದರೆ ಇದು ನಿಮಗೆ ತುಂಬಾ ಹೇರ್‍ಕಟ್ ಮಾಡಿಕೊಂಡಿದ್ದೇವೆ ಎಂಬ ಫೀಲ್ ನೀಡುವುದಿಲ್ಲ. ಅಲ್ಲದೇ ಈ ಹೇರ್‍ಕಟ್ ನೀವು ಸುಂದರವಾಗಿ ಕಾಣಿಸಿಕೊಳ್ಳಲು ಸಹಾಯಕವಾಗಿದೆ.

    ಲಾಗ್ ಹೇರ್‌ಕಟ್‍


    ಎಷ್ಟೋ ಜನ ಹೆಣ್ಣು ಮಕ್ಕಳಿಗೆ ಲಾಗ್ ಹೇರ್ ಸ್ಟೈಲ್ ತುಂಬಾ ಇಷ್ಟ. ಅದರಲ್ಲಿಯೂ ಕೂದಲು ಚೆನ್ನಾಗಿ ಬೆಳೆದರೆ ಸಾಕಾಪ್ಪ ಎನ್ನುತ್ತಾರೆ. ಲಾಗ್‍ಹೇರ್ ಇದ್ದವರೂ ಈ ರೀತಿಯ ಸ್ಟೈಲಿಶ್ ಹೇರ್‍ಕಟ್ ಮಾಡಿಸಿಕೊಂಡರೆ ನೋಡುವುದಕ್ಕೆ ತುಂಬಾ ಟ್ರೆಂಡಿ ಹಾಗೂ ಕ್ಲಾಸಿಕ್ ಲುಕ್ ನೀಡುತ್ತದೆ.

    ಲೇಯರ್ಡ್ ಹೇರ್‌ಕಟ್‍

    ಈ ಹೇರ್‌ಕಟ್ ಉದ್ದ ಮುಖ ಇರುವವರಿಗೆ ಸಖತ್ ಆಗಿ ಕಾಣಿಸುತ್ತದೆ. ಲೇಯರ್ ಇರುವುದರಿಂದ ಈ ಹೇರ್ ಸ್ಟೈಲ್ ನೋಡುಗರಿಗೆ ತುಂಬಾ ಆಕರ್ಷಣಿಯವಾಗಿ ಕಾಣಿಸುತ್ತದೆ.

    ಬಾಬ್  ಹೇರ್‌ಕಟ್‍

    ಟಾಮ್ ಬಾಯ್ ಆಗಿರುವ ಹುಡುಗಿಯರು ಈ ರೀತಿಯ ಹೇರ್‌ಕಟ್ ಇಷ್ಟ ಪಡುತ್ತಾರೆ. ಇತ್ತೀಚೆಗೆ ಇದು ತುಂಬಾ ಟ್ರೆಂಡಿಯಾಗಿದ್ದು, ಆಲ್‍ಮೋಸ್ಟ್ ಕಾಲೇಜ್ ಹುಡುಗಿಯರು ಈ ಶೈಲಿಯ ಹೇರ್ ಸ್ಟೈಲ್ ಅನ್ನು ಇಷ್ಟಪಡುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಜಾಹೀರಾತುಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುವಂತಿಲ್ಲ- ಇರಾನ್‌ನಲ್ಲಿ ಆದೇಶ

    ಜಾಹೀರಾತುಗಳಲ್ಲಿ ಮಹಿಳೆಯರು ಕಾಣಿಸಿಕೊಳ್ಳುವಂತಿಲ್ಲ- ಇರಾನ್‌ನಲ್ಲಿ ಆದೇಶ

    ಟೆಹ್ರಾನ್: ಮಹಿಳೆಯರ ಹಿಜಬ್ ವಿಚಾರಕ್ಕೆ ಇಸ್ಲಾಮಿಕ್ ದೇಶಗಳಲ್ಲಿ ಆಗಾಗ ವಿವಾದಗಳು ಆಗುತ್ತಲೇ ಇರುತ್ತವೆ. ಇದೀಗ ಇರಾನ್‌ನಲ್ಲೂ ಹಿಜಬ್ ವಿಚಾರಕ್ಕೆ ಜಾಹೀರಾತುಗಳಲ್ಲಿ ಮಹಿಳೆಯರನ್ನೇ ಬ್ಯಾನ್ ಮಾಡಿರುವುದಾಗಿ ವರದಿಯಾಗಿದೆ.

    ಪ್ರಸಿದ್ಧ ಐಸ್‌ಕ್ರೀಂ ಕಂಪನಿಯ ಜಾಹೀರಾತೊಂದರಲ್ಲಿ ಮಹಿಳೆಯೊಬ್ಬಳು ಸಡಿಲವಾದ ಹಿಜಬ್ ಧರಿಸಿದ್ದು ಕಂಡುಬಂದ ಬಳಿಕ ಇರಾನ್‌ನಾದ್ಯಂತ ಭಾರೀ ವಿವಾದ ಉಂಟಾಯಿತು. ಬಳಿಕ ಇರಾನ್‌ನ ಸಂಸ್ಕೃತಿ ಮತ್ತು ಇಸ್ಲಾಮಿಕ್ ಮಾರ್ಗದರ್ಶನ ಸಚಿವಾಲಯ ಎಲ್ಲಾ ರೀತಿಯ ಜಾಹೀರಾತುಗಳಲ್ಲಿ ಮಹಿಳೆಯರನ್ನು ಪ್ರದರ್ಶಿಸುವುದನ್ನೇ ನಿಷೇಧಿಸುವಂತೆ ಮಾಡಿದೆ. ಇದನ್ನೂ ಓದಿ: ಟಿವಿ ಶೋದಿಂದ ಪ್ರೇರಣೆ- ತನ್ನನ್ನು ತಾನು ಕಿಡ್ನಾಪ್ ಮಾಡ್ಕೊಂಡ ಬಾಲಕ!

    ಈ ಜಾಹೀರಾತು ಇರಾನ್ ಧರ್ಮಗುರುಗಳನ್ನು ಕೆರಳಿಸಿದೆ ಎಂದು ವರದಿಯಾಗಿದೆ. ಅವರು ವಿವಾದಾತ್ಮಕ ಜಾಹೀರಾತನ್ನು ಪ್ರದರ್ಶಿಸಿದ ಸ್ಥಳೀಯ ಐಸ್ ಕ್ರೀಮ್ ತಯಾರಕ ಕಂಪನಿ ವಿರುದ್ಧ ಮೊಕದ್ದಮೆ ಹೂಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಟ್ವಿಟ್ಟರ್ ಪ್ರೊಫೈಲ್ ಫೋಟೋ ಚೇಂಜ್ ಮಾಡಿದ ಸ್ಟಾಲಿನ್

    ಈ ಬಗ್ಗೆ ಇರಾನ್‌ನ ಸಂಸ್ಕೃತಿ ಮತ್ತು ಇಸ್ಲಾಮಿಕ್ ಮಾರ್ಗದರ್ಶನ ಸಚಿವಾಲಯ ಕಲೆ ಮತ್ತು ಸಿನಿಮಾ ಶಾಲೆಗಳಿಗೆ ಪತ್ರ ಬರೆದಿದ್ದು, ಹಿಜಬ್ ಮತ್ತು ಪರಿಶುದ್ಧತೆಯ ನಿಯಮಗಳನ್ನು ಉಲ್ಲೇಖಿಸಿ, ಮಹಿಳೆಯರಿಗೆ ಇನ್ನು ಮುಂದೆ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲು ಅವಕಾಶವಿಲ್ಲ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಸರ್ಪದೋಷ ಪರಿಹಾರ ಮಾಡ್ತೀನೆಂದು, ಮಹಿಳೆ ಬಾಯಿಗೆ ಬಟ್ಟೆ ತುರುಕಿ ಆಶ್ರಮದಲ್ಲೇ ರೇಪ್ ಮಾಡಿದ ಬಾಬಾ!

    ಜೈಪುರ: ರಾಜಸ್ಥಾನದ ಜಲೋರ್ ಜಿಲ್ಲೆಯ ಸಂಚೋರ್ ಪ್ರದೇಶದಲ್ಲಿರುವ ಆಶ್ರಮ ಇದಾಗಿದ್ದು, ಶತಮಾನಗಳಷ್ಟು ಹಳೆಯ ಇತಿಹಾಸ ಹೊಂದಿದೆ. ಆದರೆ ಕಾಳಸರ್ಪ ದೋಷ ನಿವಾರಣೆಯ ಹೆಸರಿನಲ್ಲಿ ಆಶ್ರಮದ ಬಾಬಾ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

    ಅಲ್ಲದೆ ಬಾಬಾ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆಯೂ ಒತ್ತಡ ಹೇರುತ್ತಿದ್ದ ಎಂದು ಹೇಳಲಾಗಿದೆ. 108 ದಿನದಲ್ಲಿ ನೀನು ನನ್ನ ಜೊತೆ 21 ಬಾರಿ ಸಂಬಂಧ ಬೆಳೆಸಬೇಕು. ಇದರಿಂದ ನಿನ್ನ ಕಾಳಸರ್ಪ ದೋಷ ನನ್ನ ಮೇಲೆ ಬರುತ್ತದೆ ಎಂದೆಲ್ಲಾ ಕಥೆ ಕಟ್ಟಿದ್ದಾನೆ. ಆದರೆ ಈ ಕ್ರಮ ಆಕೆಗೆ ಇಷ್ಟವಿರಲಿಲ್ಲವೆಂದೂ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಲಾರಿ ಹರಿದು 10 ವರ್ಷದ ಬಾಲಕ ದುರ್ಮರಣ- ರೊಚ್ಚಿಗೆದ್ದ ಜನ ಮಾಡಿದ್ದೇನು?

    ಸಂತ್ರಸ್ತೆ ಅಂಚೆ ಮೋಲಕ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಜುಲೈ 27ರಂದು ಪೊಲೀಸರು ಈ ಪತ್ರವನ್ನು ಪಡೆದುಕೊಂಡಿದ್ದು, ಜುಲೈ 28ರ ರಾತ್ರಿ 10 ಗಂಟೆ ಸುಮಾರಿಗೆ ಎಫ್‌ಐಆರ್ ದಾಖಲಿಸಿದ್ದಾರೆ. 32 ವರ್ಷದ ಸಂತ್ರಸ್ತೆ ಜಲೋರ್‌ನ ಚಿಟಲ್ವಾನಾ ತಹಸಿಲ್ ನಿವಾಸಿ ಎಂದು ಸಂಚೋರ್‌ನ ಸರ್ವಾನಾ ಪೊಲೀಸ್ ಠಾಣೆಯ ಉಸ್ತುವಾರಿ ಕಿಷ್ಣರಾಮ್ ಬಿಷ್ಣೋಯ್ ಹೇಳಿದ್ದಾರೆ.

    ಜಲೋರ್‌ನ ಮಾನವ ಸೇವಾ ವಿಶ್ವ ಗುರು ಭಗವಾನ್ ದತ್ತಾತ್ರೇಯ ಆಶ್ರಮದ ಬಾಬಾ ತಾಗಾರಾಮ್ ತನ್ನನ್ನು ಅತ್ಯಾಚಾರ ಮಾಡಿದ್ದು, ಅವರ ಸಹಾಯಕಿ ಸಾಧ್ವಿ ಹೇಮಲತಾ ಇದರ ವೀಡಿಯೋ ಮಾಡಿದ್ದಾರೆ. ರೇಪ್ ಮಾಡುವ ವೇಳೆ ಸಂತ್ರಸ್ತೆಯು ಚೀರಾಡುವಾಗ, ಸಾಧ್ವಿ ಆಕೆಯ ಬಾಯಿಗೆ ಬಟ್ಟೆ ತುರುಕುತ್ತಿದ್ದಳು ಎನ್ನುವ ವಿಷಯ ಬಹಿರಂಗವಾಗಿದೆ. ರಾಜಸ್ಥಾನದ ಜಲೋರ್‌ನ ಸಂಚೋರ್‌ನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮಿಡ್-ಡೇ ಮೀಲ್ ಯೋಜನೆಯಿಂದ 11 ಕೋಟಿ ರೂ. ವಸೂಲಿ – ಪ್ರಾಂಶುಪಾಲರ ವಿರುದ್ಧ ಆರೋಪ

    ಸಂತ್ರಸ್ತೆ ಜೋಧಪುರದಲ್ಲಿ ಅವರು ಕೆಲಸ ಮಾಡತ್ತಿದ್ದಾರೆ. ತನ್ನ ಪತಿ ಮತ್ತು ಅತ್ತೆಯಂದಿರು ದೇವತಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆಕೆಯ ಪತಿ 2021ರಲ್ಲಿ ಸಂಚೋರ್‌ನ ಅರ್ವಾ ಜನೈಪುರ ಗ್ರಾಮದಲ್ಲಿನ `ಮಾನವ ಸೇವಾ ವಿಶ್ವ ಗುರು ದತ್ತಾತ್ರೇಯ ಆಶ್ರಮ’ಕ್ಕೆ ಕರೆತಂದಿದ್ದರು. ಇಲ್ಲಿ ಅವರು ಸಾಧ್ವಿ ಹೇಮಲತಾ ಮತ್ತು ಅವರ ಸಹೋದ್ಯೋಗಿ ತಾಗರಾಮ್ ಅವರನ್ನು ಭೇಟಿಯಾಗಿದ್ದರು.

    ಹರಿದ್ವಾರದಲ್ಲಿ ಮೊದಲ ಬಾರಿಗೆ ರೇಪ್: ಆಶ್ರಮದ ಮೇಲಿನ ನಂಬಿಕೆ ಹೆಚ್ಚಾದಾಗ ನವೆಂಬರ್ 2021 ರಲ್ಲಿ ಸಂಸ್ಥೆಯ ಗುಂಪಿನೊಂದಿಗೆ ಮಹಿಳೆ ಹರಿದ್ವಾರಕ್ಕೆ ಹೋಗಿದ್ದರು. 2021ರ ನವೆಂಬರ್ 18 ರಂದು ಹರಿದ್ವಾರದಲ್ಲಿ, ತಾಗರಾಮ್ ರಾತ್ರಿಯ ವೇಳೆ ಮಹಿಳೆಯನ್ನು ಕೋಣೆಗೆ ಕರೆಸಿದ್ದರು. ಒಳಗೆ ಬಂದ ನಂತರ ಬಾಗಿಲನ್ನು ಹಾಕಿ ಅಶ್ಲೀಲ ಕೃತ್ಯ ಎಸಗಿದ್ದಾನೆ. ಇದಾದ ನಂತರ ಹರಿದ್ವಾರದಲ್ಲಿ ನಡೆದ ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಹೆದರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಬಾ ಆಕೆಯ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದ್ದಾರೆ. ಸದ್ಯ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ

    ಮುಜರಾಯಿ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಗಿಫ್ಟ್ – ಮಹಿಳೆಯರಿಗೆ ಬಳೆ, ಅರಿಶಿನ-ಕುಂಕುಮ

    ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಕಸ್ತೂರಿ ಅರಿಶಿನ-ಕುಂಕುಮ, 6 ಹಸಿರು ಬಳೆಗಳ ವಿತರಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ಹೊರಡಿಸಿದ್ದಾರೆ.

    ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಬರುವ ಮಹಿಳೆಯರಿಗೆ ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸುತ್ತೋಲೆಯನ್ನು ಹೊರಡಿಸಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ ಅಭಿಮಾನಿಯಿಂದ ಒಂದೂವರೆ ಕೆ.ಜಿ ತೂಕದ ಬೆಳ್ಳಿ ಮೂರ್ತಿ ಗಿಫ್ಟ್!

    ಮುಜರಾಯಿ ವ್ಯಾಪ್ತಿಯ ದೇಗುಲಗಳು: ಬಸವನಗುಡಿಯ ದೊಡ್ಡಗಣಪತಿ ದೇವಾಲಯ, ಮಹಾಲಕ್ಷ್ಮೀಪುರ ಬಡಾವಣೆಯ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿ ದೇವಾಲಯ, ಜಯನಗರ 4ನೇ ಬಡಾವಣೆಯ ಶ್ರೀ ವಿನಾಯಕ ಸ್ವಾಮಿ ದೇವಾಲಯ, ಗವೀಪುರಂ ರಸ್ತೆಯ ಗವಿಗಂಗಾಧರೇಶ್ವರಸ್ವಾಮಿ ದೇವಾಲಯ, ವಸಂತಪುರದ ಶ್ರೀ ವಸಂತವಲ್ಲಭರಾಯಸ್ವಾಮಿ ದೇವಾಲಯ, ಯಲಹಂಕದ ಗುಂಡಾಂಜನೇಯ ಸ್ವಾಮಿ ದೇವಾಲಯ, ಕೊಡಿಗೇಹಳ್ಳಿ ಗೇಟ್.

    ಕೆ.ಆರ್ ರಸ್ತೆಯ ಕೋಟೆ ಶ್ರೀ ವೆಂಕಟರಮಣಸ್ವಾಮಿ ದೇವಾಲಯ, ಬೆಂಗಳೂರು ದಕ್ಷಿಣದಲ್ಲಿರುವ ಕುಮಾರಸ್ವಾಮಿ ದೇವಾಲಯ, ಹಲಸೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ಮಲ್ಲೇಶ್ವರಂನಲ್ಲಿರುವ ಶ್ರೀ ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯ, ಮಲ್ಲೇಶ್ವರಂನಲ್ಲಿರುವ ಶ್ರೀ ಲಕ್ಮೀನರಸಿಂಹಸ್ವಾಮಿ ದೇವಾಲಯ, ಬಳೆಪೇಟೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಮೀನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿರುವ ಶ್ರೀ ಕಾಡುಮಲ್ಲೇಶ್ವರಸ್ವಾಮಿ ದೇವಾಲಯ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರ ನಗ್ನ ವೀಡಿಯೋ ಮಾಡಿ ಹಣ ದೋಚುತ್ತಿದ್ದ ಬೆಂಗ್ಳೂರಿನ ಗ್ಯಾಂಗ್ ಅರೆಸ್ಟ್

    ಮಹಿಳೆಯರ ನಗ್ನ ವೀಡಿಯೋ ಮಾಡಿ ಹಣ ದೋಚುತ್ತಿದ್ದ ಬೆಂಗ್ಳೂರಿನ ಗ್ಯಾಂಗ್ ಅರೆಸ್ಟ್

    – ಮಹಾಲಕ್ಷ್ಮೀ ಲೇಔಟ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

    ಬೆಂಗಳೂರು: ಡಿವೋರ್ಸ್ ಆಗಿರುವ ಹಾಗೂ ಗಂಡ ಸತ್ತು ಒಂಟಿಯಾಗಿರುವ ಮಹಿಳೆಯರನ್ನ ಟಾರ್ಗೆಟ್ ಮಾಡಿ ಟ್ರ್ಯಾಪ್ ಮಾಡಿ ವಿಕೃತಿ ಮೆರೆದು ದೋಚುತ್ತಿದ್ದ ಗ್ಯಾಂಗ್‌ವೊಂದನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

    ಮಂಗಳಾ, ರವಿ, ಶಿವಕುಮಾರ್, ಶ್ರೀನಿವಾಸ್ ಬಂಧಿತ ಆರೋಪಿಗಳು. ಮಂಗಳಾ ಮತ್ತು ರವಿ ಗಂಡ ಹೆಂಡತಿಯರು. ಇವರು ಡಿವೋರ್ಸ್ ಆಗಿರುವ ಹಾಗೂ ಗಂಡ ಸತ್ತು ಒಂಟಿಯಾಗಿರುವ ಮಹಿಳೆಯರನ್ನು ಗುರುತು ಮಾಡಿ, ನಂತರ ಈ ಗ್ಯಾಂಗ್‌ನಲ್ಲಿದ್ದ ಓರ್ವ ಮಹಿಳೆ ಟಾರ್ಗೆಟ್ ಮಾಡಿದ್ದವರ ಗೆಳೆತನ ಸಂಪಾದನೆ ಮಾಡ್ತಿದ್ಲು. ಬಳಿಕ ಫೋನ್ ಮೂಲಕ ಮಾತನಾಡ್ತಿದ್ರು. ಬನ್ನಿ ಮೀಟ್ ಮಾಡೋಣ ಎಂದು ಕರೆಯುತ್ತಿದ್ದರು. ಮೀಟ್ ಮಾಡಲು ಬಂದ ನಂತರ ಮಹಿಳೆಯರನ್ನ ಕಾರಿನ ಒಳಗೆ ಬರಲು ತಿಳಿಸುತ್ತಿದ್ದರು. ಬಳಿಕ ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗುತ್ತಿದ್ದರು.

    ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶದಕ್ಕೆ ಗ್ಯಾಂಗ್ ಕರೆದುಕೊಂಡು ಹೋಗುತ್ತಿದ್ದರು. ಬಹುತೇಕ ಬಾರಿ ತಾವರೆಕೆರೆ ಕಡೆಯ ಅರಣ್ಯ ಪ್ರದೇಶದಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಅಲ್ಲಿ ಮಹಿಳೆಗೆ ಬಟ್ಟೆ ಬಿಚ್ಚಿಲು ಹೇಳುತ್ತಿದ್ದರು. ಒಪ್ಪದೇ ಇದ್ದಾಗ ಹಲ್ಲೆ ಮಾಡಿ ಬಟ್ಟೆ ಬಿಚ್ಚಿಸುತ್ತಿದ್ದರು. ನಂತರ ನಗ್ನ ವೀಡಿಯೋ ಮಾಡಿ ಮೊಬೈಲ್ ಇಟ್ಟುಕೊಳ್ತಿದ್ದ ಗ್ಯಾಂಗ್, ಬಳಿಕ ಈ ವಿಡಿಯೋ ಹೊರಗೆ ಬರಬಾರ್ದು ಅಂದರೆ ಹಣ ನೀಡುವಂತೆ ಒತ್ತಾಯಿಸುತ್ತಿದ್ದರು. ಮಹಾಲಕ್ಷ್ಮೀ ಲೇಔಟ್‌ನ ಮಹಿಳೆ ಓರ್ವರಿಂದ ಒಂದು ಚಿನ್ನದ ಚೈನ್, ಕಿವಿಯೋಲೆ, ಉಂಗುರ ಕಿತ್ತುಕೊಂಡಿದ್ದಾರೆ. ಕೊನೆಗೆ ಫೋನ್ ಫೇ ಮೂಲಕ 84 ಸಾವಿರ ರೂ.ಗಳಷ್ಟು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಮತ್ತೆ ಹಣ ಬೇಕು ಎಂದು ಎಟಿಎಂ ಕಾರ್ಡ್ ಮೂಲಕ 40 ಸಾವಿರ ಡ್ರಾ ಮಾಡಿಸಿದ್ದಾರೆ.

    ನಂತರ ಮೊಬೈಲ್ ಸಿಮ್ ಕಾರ್ಡ್ ಕಿತ್ತುಕೊಂಡು ನಡುರಸ್ತೆಯಲ್ಲಿ ಬಿಟ್ಟುಹೋಗಿದ್ದರು. ಘಟನೆ ನಂತರ ಮಹಾಲಕ್ಷ್ಮೀ ಲೇಔಟ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಮಹಿಳೆ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡಿದ್ದ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಎಂಟು ಮಹಿಳೆಯರಿಗೆ ಹಿಂಸೆ ನೀಡಿ ರಾಬರಿ ಮಾಡಿರುವುದನ್ನೂ ಬಯಲಿಗೆಳೆಯಲಾಗಿದೆ. 8 ಮಹಿಳೆಯರು ಹೆದರಿ ಪೊಲೀಸ್ ಠಾಣೆಗೆ ದೂರನ್ನೆ ನೀಡಿರಲಿಲ್ಲ, ಸದ್ಯ ನೊಂದ ಮಹಿಳೆಯರಿಗೆ ಘಟನೆ ನಡೆದ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಮನವಿ ಮಾಡಲಾಗಿದೆ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಕಲಿ ಶಿಶ್ನ ಬಳಸಿ ಲೈಂಗಿಕ ವಂಚನೆ – ತೃತೀಯಲಿಂಗಿಗೆ 10 ವರ್ಷ ಜೈಲು ಶಿಕ್ಷೆ

    ನಕಲಿ ಶಿಶ್ನ ಬಳಸಿ ಲೈಂಗಿಕ ವಂಚನೆ – ತೃತೀಯಲಿಂಗಿಗೆ 10 ವರ್ಷ ಜೈಲು ಶಿಕ್ಷೆ

    ಲಂಡನ್: ನಕಲಿ ಶಿಶ್ನ ಬಳಸಿ ಇಬ್ಬರು ಮಹಿಳೆಯರು ಹಾಗೂ ಹದಿಹರೆಯದ ಬಾಲಕಿಯನ್ನು ಲೈಂಗಿಕ ಸಂಬಂಧಕ್ಕೆ ಪ್ರಚೋದಿಸಿದ ಹಾಗೂ ಲೈಂಗಿಕ ಸಂಪರ್ಕ ನಡೆಸಿದ ತೃತೀಯಲಿಂಗಿಗೆ ಲಂಡನ್‌ನಲ್ಲಿರುವ ಸ್ನಾರೆಸ್ ಬ್ರೂಕ್ ಕ್ರೌನ್ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

    ಹನ್ನಾ ವಾಲ್ಟರ್ಸ್ ಎಂಬ ವ್ಯಕ್ತಿ ಹೆಣ್ಣಾಗಿ ಹುಟ್ಟಿ ತಾನು ತರ್ಜಿತ್ ಸಿಂಗ್ (32) ಪುರುಷ ಎಂದು ಗುರುತಿಸಿಕೊಂಡಿದ್ದ. ಈತ ಸಂಭೋಗದ ಸಮಯದಲ್ಲಿ ಬಟ್ಟೆ ಧರಿಸುತ್ತಿದ್ದ. ಕತ್ತಲಿನ ಸಮಯದಲ್ಲಿ ನಕಲಿ ಶಿಶ್ನ ಬಳಸಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ವಿಚಾರಣೆಯ ನಂತರ ತರ್ಜಿತ್ ಸಿಂಗ್‌ಗೆ ದೈಹಿಕ ಹಾನಿ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ದಕ್ಷಿಣಕನ್ನಡದಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್- ನಾಳೆ ಶಾಂತಿ ಸಭೆ

    ಭವಿಷ್ಯದಲ್ಲಿ ಸಿಂಗ್‌ನಿಂದ ಸಾರ್ವಜನಿಕರಿಗೆ ಗಂಭೀರವಾಗಿ ಹಾನಿಯಾಗುವ ಅಪಾಯವಿದೆ. ಮೂವರು ಸಂತ್ರಸ್ತೆಯರ ವಿರುದ್ಧ ಪದೇ-ಪದೇ ಹಿಂಸಾಚಾರ ಮತ್ತು ಹಲ್ಲೆ ಮಾಡಿದ್ದಾನೆ. ಈತ ಅಪಾಯಕಾರಿ ಅಪರಾಧಿ ಹಾಗೂ ಸುಳ್ಳುಗಾರ. ಪ್ರಾಮಾಣಿಕವಾಗಿ ಸಂಭಾಷಣೆ ನಡೆಸುವ ಬದಲು ಮೋಸದ ಮಾರ್ಗ ಆಯ್ಕೆ ಮಾಡಿಕೊಂಡಿದ್ದಾನೆ ಹಾಗಾಗಿ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶ ಆಸ್ಕರ್ ಡೆಲ್ ಫ್ಯಾಬ್ರೊ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಕುರಿತು ಅಳಲು ತೋಡಿಕೊಂಡ ಸಂತ್ರಸ್ತೆ, “ಈ ಘಟನೆ ನನ್ನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ನಾನು ತೀವ್ರ ಆತಂಕ ಮತ್ತು ಖಿನ್ನತೆಗೊಳಗಾಗಿದ್ದಾನೆ. ನಾನು ಇದರಿಂದ ಹೊರಬರಲು ಖಿನ್ನತೆಯ ಔಷಧಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

    ಮತ್ತೊಬ್ಬರು ಸಂತ್ರಸ್ತೆ ತನ್ನ ದೂರಿನಲ್ಲಿ, “ಆ ಸಮಯದಲ್ಲಿ ನನಗೆ ಕೇವಲ 16 ವರ್ಷ ವಯಸ್ಸಾಗಿತ್ತು. ನನ್ನ ಜೀವನದ ಅತ್ಯಂತ ದುರ್ಬಲ ಪರಿಸ್ಥಿತಿ ಎದುರಿಸಬೇಕಾಯಿತು. ಆರೋಪಿ ಕುತಂತ್ರದಾಟಕ್ಕೆ ನನ್ನನ್ನು ಬಳಸಿಕೊಂಡ” ಎಂದು ಆರೋಪಿಸಿದ್ದಾರೆ.

    ಈ ಘಟನೆಯಿಂದ ನನ್ನ ಜೀವನದ ಅಮೂಲ್ಯ ಸಮಯವನ್ನು ನಾನು ಕಳೆದುಕೊಂಡಿದ್ದೇನೆ. ಅಧ್ಯಯನ ಮತ್ತು ಕಾಲೇಜು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ದೀರ್ಘಕಾಲದವರೆಗೆ ನಾನು ಮನೆಯಿಂದ ಹೊರ ಹೋಗಲು ಹೆದರುತ್ತಿದ್ದೆ ಎಂದು 3ನೇ ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • 55ರ ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ – ಮದುವೆ ಎಂದೊಡನೇ ಯುವಕ ಎಸ್ಕೇಪ್

    55ರ ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ – ಮದುವೆ ಎಂದೊಡನೇ ಯುವಕ ಎಸ್ಕೇಪ್

    ನವದೆಹಲಿ: ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಿದೇಶಿ ಮಹಿಳೆಯೊಂದಿಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ಮದುವೆ ವಿಷಯ ಪ್ರಸ್ತಾಪಿಸಿದ ಕೂಡಲೇ ಮಹಿಳೆಯ ನಂಬರ್ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾನೆ.

    ದೆಹಲಿಯ ಸಮೀಪದಲ್ಲೇ ಇರುವ ಗುರುಗ್ರಾಮದಲ್ಲಿ ತೈವಾನ್ ಮೂಲದ ಮಹಿಳೆಯೊಂದಿಗೆ ರವೀಂದ್ರ ವಿಶ್ವಕರ್ಮ ಎಂಬ ವ್ಯಕ್ತಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಮದುವೆ ವಿಷಯ ಪ್ರಸ್ತಾಪಿಸಿದಾಗ ಆಕೆಯ ನಂಬರ್ ಬ್ಲಾಕ್ ಮಾಡಿ, ಎಸ್ಕೇಪ್ ಆಗಿದ್ದಾನೆ. ಇದರಿಂದ ಮದುವೆಯ ನೆಪದಲ್ಲಿ ಯುವಕ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ಆರೋಪಿಸಿ ದೂರು ದಾಖಲಿಸಿದ್ದಾಳೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

    2017ರಲ್ಲಿ ಭಾರತಕ್ಕೆ ಬಂದ ತೈವಾನ್ ಮೂಲದ 55 ವರ್ಷದ ಮಹಿಳೆ ಅಂದಿನಿಂದ ದೆಹಲಿಯ ಗುರುಗ್ರಾಮ್‌ನ ಸೆಕ್ಟರ್-52ನಲ್ಲಿ ವಾಸಿಸುತ್ತಿದ್ದರು. ಎನ್‌ಜಿಒ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ತನಗೆ 29 ವರ್ಷದ ರವೀಂದ್ರ ವಿಶ್ವಕರ್ಮ ಎಂಬ ವ್ಯಕ್ತಿಯೊಂದಿಗೆ ಸ್ನೇಹವಾಗಿತ್ತು. ಇಬ್ಬರ ಗೆಳೆತನ ಪ್ರೀತಿಗೆ ತಿರುಗಿ ರವೀಂದ್ರ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಇದೇ ನೆಪದಲ್ಲಿ ಹಲವು ಬಾರಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ನಂತರ ಮಹಿಳೆ ಅವನನ್ನು ಮದುವೆಯಾಗುವುದಾಗಿ ಕೇಳಿದಾಗ ಅವನು ಹಿಂದೇಟು ಹಾಕಿದ್ದಾನೆ. ಕೂಡಲೇ ಆಕೆಯ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ಆರೋಪಿ ರವೀಂದ್ರ ವಿರುದ್ಧ ಸೆಕ್ಟರ್-53 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ ಎಂದು ಎಂದು ಸಹಾಯಕ ಪಿಎಸ್‌ಐ ಚಂದ್ರಕಾಂತ್ ತಿಳಿಸಿದ್ದಾರೆ.

    ಆರೋಪಿ ರವೀಂದ್ರ ವಿಶ್ವಕರ್ಮ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಆರು ತಿಂಗಳ ಹಿಂದೆ ಇಬ್ಬರೂ ಭೇಟಿಯಾಗಿದ್ದರು. ಮಹಿಳೆಯ ಮನೆಯ ಸಮೀಪವೇ ರವೀಂದ್ರ ವಾಸವಾಗಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಷ್ಯಾದಲ್ಲಿ ಭಾರತ ಹೊರತು ಪಡಿಸಿ 13 ದೇಶಗಳಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ

    ರವೀಂದ್ರ ವಿಶ್ವಕರ್ಮ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತನ್ನ ವಿರುದ್ಧದ ಆರೋಪ ಒಪ್ಪಿಕೊಂಡಿದ್ದಾನೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದೂ ಅವರು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಳೆಯ ಆಭರಣಗಳಿಗೆ ಹೊಸ ಹುರುಪು – ಟ್ರೆಂಡಿಯಾಗಿ ಧರಿಸುವ ಬೆಳ್ಳಿ ಒಡವೆಗಳ ಬಗ್ಗೆ ಇಲ್ಲಿದೆ ಸಿಂಪಲ್ ಟಿಪ್ಸ್

    ಹಳೆಯ ಆಭರಣಗಳಿಗೆ ಹೊಸ ಹುರುಪು – ಟ್ರೆಂಡಿಯಾಗಿ ಧರಿಸುವ ಬೆಳ್ಳಿ ಒಡವೆಗಳ ಬಗ್ಗೆ ಇಲ್ಲಿದೆ ಸಿಂಪಲ್ ಟಿಪ್ಸ್

    ಹೆಂಗಳೆಯರ ಫ್ಯಾಷನ್‌ಗೆ ಕೊನೆಯೇ ಇಲ್ಲ. ಹೊಸತು ಹಳೆಯದ್ದಾಗುತ್ತಿದ್ದಂತೆ ಈಗ ಹಳೆಯ ಕಾಲದ ಆಭರಣಗಳೇ ಟ್ರೆಂಡ್ ಆಗಿವೆ. ಯುವತಿಯರೂ ಸಹ ಅಜ್ಜ – ಅಜ್ಜಿ ಕಾಲದ ಒಡವೆಗಳಿಗೆ ಚಿತ್ತಾಕರ್ಷಕ ರೂಪಕೊಟ್ಟು ಧರಿಸುತ್ತಿದ್ದಾರೆ. ಬೆಳ್ಳಿ ಬಂಗಾರ ಎಂದರೆ ಕಣ್ಣರಳಿಸುವ ಹೆಣ್ಣುಮಕ್ಕಳು ಪ್ರತೀ ಒಡವೆಯನ್ನೂ ಟ್ರೆಂಡಿಯಾಗಿ ಹೇಗೆ ಧರಿಸಬಹುದು ಎಂದೇ ಲೆಕ್ಕಾಚಾರ ಹಾಕುತ್ತಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಬೆಳ್ಳಿ-ಬಂಗಾರ ಎಲ್ಲರ ಮನಗೆಲ್ಲುತ್ತಿದೆ. ಬೆಳ್ಳಿಯ ಆಭರಣಗಳು ಧರಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಎಲ್ಲಾ ರೀತಿಯ ಧಿರಿಸಿಗೆ ಒಪ್ಪುವಂತಹ ಚೆಂದದ ಡಿಸೈನ್ ಬೆಳ್ಳಿ ಪ್ರಿಯರಿಗೆ ಅಚ್ಚುಮೆಚ್ಚು. ಅನಾದಿ ಕಾಲದಿಂದಲೂ ಬೆಳ್ಳಿಯ ಬಳಕೆ ಚಾಲ್ತಿಯಲ್ಲಿದೆ. ಇಂದಿನ ದಿನಮಾನಗಳಲ್ಲೂ ಬೆಳ್ಳಿ ತನ್ನ ಬೇಡಿಕೆಯನ್ನು ಉಳಿಸಿಕೊಂಡಿದೆ. ಕೆಲವರು ಇದೇ ಬೆಳ್ಳಿ ಆಭರನಣಕ್ಕೆ ಚಿನ್ನದ ಹೊಳಪು ನೀಡಿ ಧರಿಸುತ್ತಾರೆ.

    ಬೆಳ್ಳಿ ಆಭರಣಗಳಲ್ಲಿ ಕಿವಿಯೋಲೆಗಳು, ಉಂಗುರಗಳು, ಮೂಗಿನ ನತ್ತುಗಳು, ಬೆಳ್ಳಿಯ ನೆಕ್ಲೆಸ್‌ಗಳು, ಬಳೆ, ಖಡಗಗಳು ಸೇರಿ ಇನ್ನೂ ಅನೇಕವು ಫ್ಯಾಷನ್ ಪ್ರಿಯರ ಲಗ್ಗೆ ಇಟ್ಟಿದೆ. ಅಲ್ಲದೆ ಬೆಳ್ಳಿ ಆರೋಗ್ಯಕ್ಕೂ ಒಳ್ಳೆಯದು. ಹಾಗಾದ್ರೆ ಯಾವೆಲ್ಲ ರೀತಿಯಲ್ಲಿ ಈ ಬೆಳ್ಳಿ ಆಭರಣಗಳನ್ನು ಟ್ರೆಂಡಿಯಾಗಿ ಧರಿಸಬಹುದು ಎನ್ನುವ ಬಗ್ಗೆ ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್.

    ಆಫೀಸ್‌ಗಳಲ್ಲೂ ಟ್ರೆಂಡಿ ಲುಕ್:
    ಬೆಳ್ಳಿ ಆಭರಣಗಳು ಒಂದೇ ರೀತಿಯದಲ್ಲ. ಹೀಗಾಗಿ ನೀವು ಅದನ್ನು ಆಫೀಸ್‌ಗೂ ಧರಿಸಿ ಹೋಗಬಹುದು. ಇದನ್ನು ನಿಮ್ಮ ಡೆನಿಮ್ ಶರ್ಟ್ ಅಥವಾ ಫಾರ್ಮಲ್ ಮೇಲೆ ಧರಿಸಬಹುದು. ಅಥವಾ ಕಾಟನ್ ಸೀರೆಗಳ ಮೇಲೂ ಧರಿಸಬಹುದಾಗಿದೆ. ಬೆಳ್ಳಿ ಖಡಗ, ಬೆಳ್ಳಿ ಉಂಗುರ, ನೆಕ್ಲೆಸ್ ಸೇರಿದಂತೆ ಬೆಳ್ಳಿ ನತ್ತುಗಳನ್ನು ಧರಿಸಿದರೆ ಸಖತ್ ಸ್ಟೈಲಿಷ್ ಲುಕ್ ನೀಡುತ್ತದೆ.

    ದೇಸಿ ಸ್ಟೈಲ್‌:
    ಬೆಳ್ಳಿಯ ಆಭರಣಗಳು ಕುರ್ತಾ ಮತ್ತು ಸಲ್ವಾರ್ ಕಮೀಜ್‌ಗಳೊಂದಿಗೆ ಉತ್ತಮವಾಗಿ ಕಾಣುತ್ತವೆ. ಜೊತೆಗೆ ಪಲಾಜೋಸ್ ಮತ್ತು ಇತರ ಟ್ರೆಡೀಷನಲ್ ಉಡುಪುಗಳೊಂದಿಗೆ ಬೆಳ್ಳಿ ಚೆನ್ನಾಗಿ ಒಪ್ಪುತ್ತದೆ. ಬೆಳ್ಳಿ ಬಳೆಗಳು, ಕಿವಿಯೋಲೆಗಳು, ಚೋಕರ್ ಅಥವಾ ನೆಕ್ಲೆಸ್ ರೂಪದಲ್ಲಿ ಧರಿಸಿ ಸ್ಟೈಲಿಷ್ ಆಗಿ ಕಾಣಬಹುದಾಗಿದೆ.

    ಬೊಹಿಮಿಯನ್ ಶೈಲಿ:
    ಬೋಹೀಮಿಯನ್ ಬೆಳ್ಳಿ ಆಭರಣಗಳು ಟ್ರೆಂಡಿ ಮತ್ತು ಆರಾಮದಾಯಕ ಶೈಲಿಯಾಗಿದೆ. ದೊಡ್ಡ ಮೂಗುತಿ ಉಡುಪಿನೊಂದಿಗೆ ಧರಿಸಬಹುದು. ಅಲ್ಲದೇ ಬೆಳ್ಳಿ ಬಳೆ ಮತ್ತು ನೆಕ್ಲೆಸ್‌ಗಳನ್ನು ಕೂಡ ಶರ್ಟ್‌ಗಳ ಮೇಲೆ ಧರಿಸಬಹುದಾಗಿದೆ.

    ಸ್ಟ್ರೀಟ್‌ ಸ್ಟೈಲ್‌:
    ಇಂಡೋ-ವೆಸ್ಟರ್ನ್ ಮತ್ತು ಬೋಹೀಮಿಯನ್ ಶೈಲಿಗಳು ಇಂದು ಹೆಚ್ಚು ಟ್ರೆಂಡಿಂಗ್ ಶೈಲಿಗಳಾಗಿವೆ. ವಿಶೇಷ ಸಂದರ್ಭಗಳಲ್ಲಿ ಅಥವಾ ಶಾಪಿಂಗ್‌ಗೆ ಹೋಗುವಾಗ ನೀವು ಆಭರಣಗಳನ್ನು ಧರಿಸಬಹುದು. ಇದು ಹೀಲ್ಸ್, ಜೆಗ್ಗಿಂಗ್‌ಗಳು ಮತ್ತು ಸಡಿಲವಾದ ಟಾಪ್‌ಗಳೊಂದಿಗೆ ಸಖತ್ ಫ್ಯಾಷನೇಬಲ್ ಆಗಿ ಕಾಣುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ಆರ್ಥಿಕ ಬಿಕ್ಕಟ್ಟು – ಒಂದೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆ ಹಾದಿ ಹಿಡಿಯುತ್ತಿರುವ ಲಂಕಾ ಮಹಿಳೆಯರು

    ಕೊಲಂಬೊ: ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟು ವಿಷಮಸ್ಥಿತಿ ತಲುಪುತ್ತಿದೆ. ಸುಮಾರು 60 ಲಕ್ಷ ಜನರು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ನಡುವೆ ಅಗತ್ಯ ಔಷಧಗಳು ಹಾಗೂ ಎರಡು ಹೊತ್ತಿನ ಊಟಕ್ಕಾಗಿ ವೇಶ್ಯಾವಾಟಿಕೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ವರದಿಯಾಗಿದೆ.

    ಅಂಕಿ-ಅಂಶಗಳ ವರದಿಯ ಪ್ರಕಾರ ಜನರು ಈಗ ಆಹಾರ ಉಳಿಸಲು ದಿನಕ್ಕೆ ಒಮ್ಮೆ ಮಾತ್ರ ಊಟ ಮಾಡುತ್ತಿದ್ದಾರೆ. ಶೇ.25 ರಷ್ಟು ಜನರು ತೀವ್ರ ತೊಂದರೆಯಲ್ಲಿದ್ದು ವೇಶ್ಯಾವಾಟಿಕೆಯಲ್ಲಿ ತೊಡಗಿರುವವರು ಹೆಚ್ಚಾಗುವುದರೊಂದಿಗೆ ಮಹಿಳೆಯರನ್ನು ಬಲವಂತದಿಂದಲೂ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

    ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ಹಣಕ್ಕಾಗಿ ಮಹಿಳೆಯರು ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡುತ್ತಿದೆ. ಆಯುರ್ವೇದ ಮತ್ತು ಸ್ಪಾ ಕೇಂದ್ರಗಳು ಈಗ ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿವೆ. ಮಹಿಳೆಯರು ಈ ವ್ಯವಹಾರದಲ್ಲಿ ವೇಗವಾಗಿ ಸೇರಿಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಕೊಂಚ ಹಣ ಸಂಪಾದಿಸಲು ಸಾಧ್ಯವಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಸ್ಪಾ-ಕೇಂದ್ರಗಳಲ್ಲಿ ಕರ್ಟನ್‌ಗಳನ್ನು ನೇತುಹಾಕುವ ಮೂಲಕ ಲೈಂಗಿಕ ಕ್ರಿಯೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜವಳಿ ಉದ್ಯಮದಲ್ಲಿ ತೊಡಗಿರುವ ಮಹಿಳೆಯರು ಅತ್ಯಂತ ವೇಗವಾಗಿ ಈ ವ್ಯವಹಾರಕ್ಕೆ ಸೇರುತ್ತಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ, ಈ ದೇಶದಲ್ಲಿ ಈ ಪರಿಸ್ಥಿತಿ ಸಂಪೂರ್ಣವಾಗಿ ಹರಡುತ್ತದೆ ಎಂದು ಇಲ್ಲಿನ ತಜ್ಞರು ಹೇಳುತ್ತಿದ್ದಾರೆ. ಜವಳಿ ಉದ್ಯಮ ಮುಚ್ಚುವ ಭೀತಿಯೂ ಎದುರಾಗಿದ್ದು, ಮಹಿಳೆಯರು ಜೀವನ ನಿರ್ವಹಣೆಗಾಗಿ ಪರ್ಯಾಯ ಮಾರ್ಗಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಅದರಲ್ಲಿ ಕೆಲವರು ವೇಶ್ಯಾವಾಟಿಕೆಯನ್ನೇ ವೃತ್ತಿಯಾಗಿ ಮಾಡಿಕೊಳ್ಳುತ್ತಿದ್ದಾರೆ.

    ಈ ಕುರಿತು ಲೈಂಗಿಕ ಕಾರ್ಯಕರ್ತರೊಬ್ಬರು ಮಾತನಾಡಿ, ದೇಶದ ಆರ್ಥಿಕತೆ ಹದಗೆಟ್ಟಿರುವುದು ಮಹಿಳೆಯರನ್ನು ಈ ಉದ್ಯಮಕ್ಕೆ ಬರುವಂತೆ ಮಾಡಿದೆ. ಈ ಸಮಯದಲ್ಲಿ ನಾವು ನೋಡಬಹುದಾದ ಉತ್ತಮ ಪರಿಹಾರವೆಂದರೆ ಲೈಂಗಿಕ ಕೆಲಸ ಎಂದು ನಾವು ನಂಬಿದ್ದೇವೆ. ನಮ್ಮ ತಿಂಗಳ ಸಂಬಳ ಸುಮಾರು 28,000 ರೂ. ಮತ್ತು ನಾವು ಓವರ್‌ಟೈಮ್ ಮೂಲಕ 35 ಸಾವಿರದವರೆಗೆ ಗಳಿಸಬಹುದು. ಲೈಂಗಿಕ ಕೆಲಸದಲ್ಲಿ ತೊಡಗಿಸಿಕೊಳ್ಳುವುದರಿಂದ ನಾವು ಇದಕ್ಕಿಂತ ಹೆಚ್ಚಿನದನ್ನು ಗಳಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ಮಹಿಳೆ ಅಮೆರಿಕದಿಂದ ಏರ್‌ಲಿಫ್ಟ್‌ – 26 ಗಂಟೆ ಪ್ರಯಾಣಕ್ಕೆ 1 ಕೋಟಿ ವೆಚ್ಚ

    ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ಮಹಿಳೆ ಅಮೆರಿಕದಿಂದ ಏರ್‌ಲಿಫ್ಟ್‌ – 26 ಗಂಟೆ ಪ್ರಯಾಣಕ್ಕೆ 1 ಕೋಟಿ ವೆಚ್ಚ

    ವಾಷಿಂಗ್ಟನ್: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬೆಂಗಳೂರು ಮಹಿಳೆಯನ್ನು ಯುಎಸ್‌ನ ಫೋರ್ಟ್‌ಲ್ಯಾಂಡ್‌ನಿಂದ 26 ಗಂಟೆ ಅವಧಿಯಲ್ಲಿ ಭಾರತದ ಚೆನ್ನೈಗೆ ಏರ್‌ಲಿಫ್ಟ್‌ ಮಾಡಲಾಯಿತು.

    ಬೆಂಗಳೂರು ಮೂಲದವರಾದ 67 ವಯಸ್ಸಿನ ಮಹಿಳೆಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಭಾರತದ ಚೆನ್ನೈಗೆ ಅಮೆರಿಕದಿಂದ ಏರ್‌ಲಿಫ್ಟ್‌ ಮಾಡಲಾಯಿತು. ಯುನೈಟೆಡ್ ಸ್ಟೇಟ್ಸ್‌ನ ಪೋರ್ಟ್‌ಲ್ಯಾಂಡ್‌ನಿಂದ 26 ಗಂಟೆಗಳ ಏರ್ ಆಂಬುಲೆನ್ಸ್‌ ವಿಮಾನದಲ್ಲಿ ಐಸ್‌ಲ್ಯಾಂಡ್ ಮತ್ತು ಟರ್ಕಿ ಮೂಲಕ ಚೆನ್ನೈಗೆ ತಲುಪಿಸಲಾಯಿತು. ಇದನ್ನೂ ಓದಿ: ಕೊಲೊಂಬೊದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಅಧಿಕಾರಿಗೆ ಗಂಭೀರ ಗಾಯ

    ಏರ್‌ಲಿಫ್ಟ್‌ಗೆ ಸುಮಾರು 1 ಕೋಟಿ ರೂ.ಗಿಂತಲೂ (133,000 ಡಾಲರ್‌) ವೆಚ್ಚವಾಗಿದೆ. ರೋಗಿಯು ಇಂದಿರಾನಗರದ ನಿವಾಸಿ ಎಂದು ಗುರುತಿಸಲಾಗಿದೆ. ಕೆಲವು ವರ್ಷಗಳ ಕಾಲ ತನ್ನ ಮಕ್ಕಳೊಂದಿಗೆ ಒರೆಗಾನ್‌ನಲ್ಲಿ ವಾಸವಾಗಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ಅಮೆರಿಕದಿಂದ ಏರ್‌ಲಿಫ್ಟ್‌ ಮಾಡಲಾಗಿದೆ.

    ಏರ್ ಆಂಬ್ಯುಲೆನ್ಸ್ ಮಂಗಳವಾರ ನಸುಕಿನ ಜಾವ 2:10 ಕ್ಕೆ ಚೆನ್ನೈಗೆ ಬಂದಿಳಿಯಿತು. ನಂತರ ಮಹಿಳೆಯನ್ನು ಆಂಬುಲೆನ್ಸ್‌ನಲ್ಲಿ ಅಪೋಲೋ ಆಸ್ಪತ್ರೆಗೆ ಸಾಗಿಸಿ ದಾಖಲಿಸಲಾಗಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ರಕ್ಷಣೆ – ಮಸೂದೆ ಅಂಗೀಕರಿಸಿದ ಯುಎಸ್‌ ಹೌಸ್‌

    ಅಮೆರಿಕದಲ್ಲಿ ಚಿಕಿತ್ಸಾ ವೆಚ್ಚ ತುಂಬಾ ದುಬಾರಿ. ಅಲ್ಲಿ ಚಿಕಿತ್ಸೆಗೆ ವ್ಯಯಿಸಬಹುದಾದ ಹಣದಲ್ಲಿ ಭಾರತಕ್ಕೆ ಏರ್‌ಲಿಫ್ಟ್‌ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ಮಹಿಳೆಯನ್ನು ಭಾರತಕ್ಕೆ ಕರೆತರಲಾಗಿದೆ.

    Live Tv
    [brid partner=56869869 player=32851 video=960834 autoplay=true]