Tag: women

  • ಮಹಿಳೆಯರಿಗೆ ಸೂಟ್ ಆಗುವಂತಹ ಸ್ಟೈಲಿಶ್ ಟೋಪಿಗಳು

    ಮಹಿಳೆಯರಿಗೆ ಸೂಟ್ ಆಗುವಂತಹ ಸ್ಟೈಲಿಶ್ ಟೋಪಿಗಳು

    ಟೋಪಿಗಳು ಫ್ಯಾಶನ್ ಹುಡುಗಿಯರಿಗೆ ಬಹಳ ಅಚ್ಚು ಮೆಚ್ಚು ಹಾಗೂ ಅವುಗಳು ಬೆಸ್ಟ್ ಫ್ರೆಂಡ್ ಇದ್ದಂತೆ. ಇತ್ತೀಚೆಗೆ ಇನ್‍ಸ್ಟಾಗ್ರಾಮ್‍ನಲ್ಲಿ ನೋಡಿದರೆ ಸೆಲಿಬ್ರೆಟಿಗಳು ಸೇರಿದಂತೆ ಅನೇಕ ಮಂದಿ ಟೋಪಿಗಳನ್ನು ಧರಿಸಿ ಫೋಟೋ ಹಾಗೂ ವೀಡಿಯೋ ಮಾಡಿರುತ್ತಾರೆ. ಸದ್ಯ ಟೋಪಿಗಳು ಒಂದು ರೀತಿ ಹೊಸ ಟ್ರೆಂಡ್ ಸೃಷ್ಟಿಸಿದೆ ಎಂದೇ ಹೆಳಬಹುದು. ಅಷ್ಟೇ ಅಲ್ಲದೇ ಟೋಪಿಗಳನ್ನು ಹವಾಮಾನ ಅನುಸಾರವಾಗಿ ಕೂಡ ಧರಿಸಲಾಗುತ್ತದೆ. ಬಿಸಿಲು, ಗಾಳಿ, ಮಳೆ ಹಾಗೂ ನಿಮ್ಮ ಕೂದಲನ್ನು ಮರೆಮಾಚಲು ನಿಮ್ಮ ತಲೆಯನ್ನು ರಕ್ಷಿಸಿಕೊಳ್ಳಲು ಟೋಪಿಗಳನ್ನು ಧರಿಸಬೇಕಾಗುತ್ತದೆ. ಜೊತೆಗೆ ನಿಮ್ಮ ಬಟ್ಟೆಗೆ ಸೂಟ್ ಆಗುವಂತೆ ಟೋಪಿ ಯಾವುದು ಎಂದು ತಿಳಿದುಕೊಳ್ಳಬೇಕು. ಈ ಕುರಿತು ಕೆಳಗೆ ಒಂದಷ್ಟು ಮಾಹಿತಿ ನೀಡಲಾಗಿದೆ.

    ಪೋಮ್ ಪೋಮ್ ಟೋಪಿ
    ಕೆನಾಡದಲ್ಲಿ ಟೋಕ್ ಎಂದು ಕರೆಯಲ್ಪಡುವ ಪೋಮ್ ಪೋಮ್ ಟೋಪಿಯನ್ನು ಮಹಿಳೆಯರು ಹೆಚ್ಚಾಗಿ ಚಳಿಗಾಲದಲ್ಲಿ ಧರಿಸುತ್ತಾರೆ. ಇದನ್ನು ಉಲನ್ ನಿಂದ ಹೆಣೆದಿದ್ದು, ಟೋಪಿ ಮೇಲ್ಭಾಗದಲ್ಲಿ ಬಾಬುಲ್ ಒಂದನ್ನು ಇರಿಸಲಾಗಿದೆ. ಈ ಟೋಪಿಗಳು ವಿವಿಧ ಆಕಾರ, ಗಾತ್ರ ಹಾಗೂ ಬಣ್ಣಗಳಲ್ಲಿ ಲಭ್ಯವಾಗುತ್ತದೆ. ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ – ಕೊಡಗಿನಲ್ಲಿ ಉತ್ತಮ ಸ್ಪಂದನೆ, ಬೀದರ್ ನಲ್ಲಿ ಡೋಂಟ್ ಕೇರ್

    ಕ್ಲಾಸಿಕ್ ಫೆಡೋರಾ
    ಕ್ಲಾಸಿಕ್ ಫೆಡೋರಾ ಟೋಪಿಯನ್ನು ಹಿಂದೆ ಪುರುಷರು ಮಾತ್ರ ಧರಿಸುತ್ತಿದ್ದರು, ಆದರೆ ಇದೀಗ ಸುಂದರವಾದ ಮಹಿಳೆಯರು ಕೂಡ ಧರಿಸಲು ಆರಂಭಿಸಿದ್ದಾರೆ. ಫ್ಯಾಬ್ರಿಕ್ ಮತ್ತು ಬಣ್ಣವನ್ನು ಲೆಕ್ಕಿಸದೇ ಮಹಿಳೆ ಈ ಟೋಪಿಯನ್ನು ಧರಿಸುತ್ತಿದ್ದಾರೆ. ಈ ಟೋಪಿ ಮೇಲ್ಭಾಗ ಸಣ್ಣ ರಿಮ್ ಮಾದರಿಯಿದ್ದು, ಇದರ ಸುತ್ತಲೂ ಮಡಚಿದಂತೆ ಕಾಣಿಸುತ್ತದೆ.

    ವೈಡ್ ಬ್ರಮ್ ಫೆಡೋರಾ
    ಈ ಟೋಪಿಯನ್ನು ಸಫಾರಿ ಟೋಪಿಯಂತಲೂ ಕರೆಯುತ್ತಾರೆ. ಈ ಟೋಪಿ ಸ್ಟೈಲಿಶ್ ಹುಡುಗಿಯರಿಗೆ ಬೇಗ ಸೂಟ್ ಆಗುತ್ತದೆ. ಈ ಟೋಪಿ ಒಂದು ರೀತಿ ಕಿರೀಟದಂತಿದ್ದು, ವಿಶಾಲವಾದ ಅಂಚುಗಳನ್ನು ಹೊಂದಿದೆ ಹಾಗೂ ಇದನ್ನು ಉಣ್ಣೆ ಬಟ್ಟೆಯಿಂದ ವಿನ್ಯಾಸಗೊಳಿಸಲಾಗಿದೆ. ನೀವು ಹೇರ್ ವಾಶ್ ಮಾಡಿಲ್ಲದಿರುವಾಗ ಈ ಟೋಪಿ ಧರಿಸುವುದರಿಂದ ಇದು ನಿಮ್ಮ ಕೂದಲನ್ನು ಮರೆಮಾಚುತ್ತದೆ. ಇದನ್ನೂ ಓದಿ:ಬೆಕ್ಕಿಗಾಗಿಯೇ ಎಸಿ ರೂಮ್, ಮಿನಿ ಥಿಯೇಟರ್ ನಿರ್ಮಾಣ – ಗುಜರಾತಿನಲ್ಲೊಬ್ಬ ಕ್ಯಾಟ್ ಪ್ರಿಯ

    ಸ್ಕೂಲ್ ಬಾಯ್ ಹ್ಯಾಟ್
    ಸ್ಕೂಲ್ ಬಾಯ್ ಟೋಪಿ ಎಂದು ಕರೆಯಲ್ಪಡುವ ಈ ಟೋಪಿಯನ್ನು ನ್ಯೂಸ್ ಬಾಯ್ ಟೋಪಿ ಎಂದು ಹೇಳಲಾಗುತ್ತದೆ. ಈ ಟೋಪಿಯನ್ನು ಉಣ್ಣೆಯಿಂದ ಮಾಡಲ್ಪಟ್ಟಿದ್ದು, ಫ್ಯಾಷಶ್ ಪ್ರಿಯರಿಗೆ ಈ ಟೋಪಿ ಇಷ್ಟವಾಗುತ್ತದೆ ಮತ್ತು ಇದರ ಅಂದ ಬಣ್ಣದ ಮೇಲೆ ಅವಲಂಬಿತವಾಗಿರುತ್ತದೆ. ಶಾಲೆಗೆ ತೆರಳುವ ಬಾಲಕಿಯರು ಧರಿಸುವ ಸ್ಕರ್ಟ್‍ಗೆ ಈ ಟೋಪಿ ಬಹಳ ಚೆನ್ನಾಗಿ ಮ್ಯಾಚ್ ಆಗುತ್ತದೆ.

    ಫರ್ ಪಿಲ್ ಬಾಕ್ಸ್ ಟೋಪಿ
    ವಾತವಾರಣದಲ್ಲಿ ಚಳಿ ಹೆಚ್ಚಾದಾಗ ಈ ಟೋಪಿ ಬೆಚ್ಚಗಿರುತ್ತದೆ. ಮಹಿಳೆಯರಿಗೆ ಬೆಚ್ಚಗಿರಿಸುವುದರ ಜೊತೆ ಸ್ಟೈಲಿಶ್ ಲುಕ್ ನೀಡುವ ಈ ಟೋಪಿಯನ್ನು ಜ್ಹಿವಾಗೋ ಟೋಪಿ ಎಂದು ಕೂಡ ಕರೆಯಲಾಗುತ್ತದೆ. 1965ರಲ್ಲಿ ಜೂಲಿ ಕ್ರಿಸ್ಟಿ ನಟಿಸಿದ ಸಿನಿಮಾದ ನಂತರ ಈ ಮೃದುವಾದ ಟೋಪಿ ಸಖತ್ ಫೇಮಸ್ ಆಗಿತ್ತು. ಈ ಟೋಪಿ ಕ್ಯಾಶುಯಲ್ ವೇರ್ ಜೊತೆಗೆ ಸೊಗಸಾಗಿ ಕಾಣಿಸುತ್ತದೆ.ಇದನ್ನೂ ಓದಿ:ರೈಲ್ವೆ ಹಳಿ ಮೇಲೆ ಜ್ಞಾನತಪ್ಪಿ ಬಿದ್ದಿದ್ದ ವ್ಯಕ್ತಿ – ನಿಮಿಷದಲ್ಲಿ ಸಾವಿನ ಅಂಚಿನಿಂದ ಪಾರು

  • ಷರಿಯತ್ ಕಾನೂನು ಎಂದರೇನು? ಅಫ್ಘಾನ್ ತಾಲಿಬಾನ್ ಹೇಗೆ ಅರ್ಥೈಸುತ್ತದೆ?

    ಷರಿಯತ್ ಕಾನೂನು ಎಂದರೇನು? ಅಫ್ಘಾನ್ ತಾಲಿಬಾನ್ ಹೇಗೆ ಅರ್ಥೈಸುತ್ತದೆ?

    ಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಶುರುವಾಗಿದೆ. ಕೆಲವೇ ದಿನಗಳಲ್ಲಿ ಅಧಿಕೃತ ಸರ್ಕಾರ ರಚನೆಯಾಗಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ ಎಂದಿರುವ ವಕ್ತಾರರು ಷರಿಯತ್ ಕಾನೂನಿನ ಅಡಿಯಲ್ಲಿ ಆಡಳಿತ ನಡೆಸುವುದಾಗಿ ಹೇಳಿದ್ದಾರೆ. 1996 ಮಾದರಿಯಲ್ಲಿ ಈಗ ತಾಲಿಬಾನ್ ಈಗ ಇರುವುದಿಲ್ಲ, ಷರಿಯತ್ ವ್ಯಾಪ್ತಿಯಲ್ಲಿ ಮಹಿಳೆಯರಿಗೂ ಸ್ವಾತಂತ್ರ್ಯ ನೀಡುವುದಾಗಿಯೂ ತಾಲಿಬಾನ್ ವಕ್ತಾರರು ಹೇಳಿದ್ದಾರೆ.

    ಆದರೆ ಈ ಹೇಳಿಕೆ ನಡುವೆಯೇ ಅಫ್ಘಾನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯರನ್ನು ಕೆಲಸದಿಂದ ವಜಾ ಮಾಡಲಾಗುತ್ತಿದೆ. ಸರ್ಕಾರಿ ಸಾಮ್ಯದ ಸುದ್ದಿ ವಾಹಿನಿವೊಂದರ ಪ್ರಮುಖ ನಿರೂಪಕಿಯನ್ನೂ ಈಗ ಕೆಲಸದಿಂದ ತೆಗೆದು ಹಾಕಲಾಗಿದೆ. ಮಹಿಳೆಯರಿಗೆ ಸ್ವಾತಂತ್ರ್ಯ ನೀಡುವುದಾಗಿ ಹೇಳಿದ್ದ ತಾಲಿಬಾನ್ ಷರಿಯತ್ ಕಾನೂನು ಹೇಗೆ ಅರ್ಥೈಸಿ ಕೊಳ್ಳುತ್ತಿದೆ ಎನ್ನುವುದು ಇಲ್ಲಿಯವರೆಗೂ ಗೊಂದಲಮಯವಾಗಿದೆ. ಈ ಹಿನ್ನೆಲೆಯಲ್ಲಿ ಷರಿಯತ್ ಕಾನೂನು ಎಂದರೇನು? ಇದನ್ನು ಅಫ್ಘಾನ್ ನಲ್ಲಿ ತಾಲಿಬಾನ್ ಅರ್ಥೈಸಿಕೊಂಡಿದೆ. ಈ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರ ಭವಿಷ್ಯ ಹೇಗಿರಲಿದೆ ಎಂದು ನೋಡೋಣ.

    ಷರಿಯಾ ಎಂದರೇನು?
    ಷರಿಯತ್ ಅಥಾವ ಶರಿಯಾ ಖುರಾನ್, ಪ್ರವಾದಿ ಮುಹಮ್ಮದ್ ಅವರ ಜೀವನ ಕಥೆಗಳು ಮತ್ತು ಧಾರ್ಮಿಕ ವಿದ್ವಾಂಸರ ತೀರ್ಪುಗಳನ್ನು ಆಧರಿಸಿದೆ. ಇದು ಇಸ್ಲಾಂನ ನೈತಿಕ ಮತ್ತು ಕಾನೂನು ಚೌಕಟ್ಟನ್ನು ರೂಪಿಸುತ್ತದೆ. ಖುರಾನ್ ನೈತಿಕ ಜೀವನಕ್ಕೆ ಒಂದು ಮಾರ್ಗವನ್ನು ವಿವರಿಸುತ್ತದೆ, ಆದರೆ ಇಲ್ಲಿ ಒಂದು ನಿರ್ದಿಷ್ಟ ಕಾನೂನುಗಳಿಲ್ಲ. ಷರಿಯತ್‍ನ ಒಂದು ವ್ಯಾಖ್ಯಾನವು ಮಹಿಳೆಯರಿಗೆ ವ್ಯಾಪಕವಾದ ಹಕ್ಕುಗಳನ್ನು ನೀಡಬಲ್ಲದು, ಇನ್ನೊಂದು ಮಹಿಳೆಯರಿಗೆ ಕೆಲವು ಹಕ್ಕುಗಳನ್ನು ಮಾತ್ರ ನೀಡಬಹುದು. ಆದರೆ ತಾಲಿಬಾನ್ ಹೇರುವ ಕೆಲವು ನಿಯಮಗಳು ಷರಿಯತ್ ಕಾನೂನುಗಳನ್ನು ಮೀರಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಷರಿಯತ್ ನ ವ್ಯಾಖ್ಯಾನಗಳು ಮುಸ್ಲಿಂ ಪ್ರಪಂಚದಾದ್ಯಂತ ಚರ್ಚೆಯ ವಿಷಯವಾಗಿದೆ ಮತ್ತು ಎಲ್ಲಾ ಹಲವು ಸರ್ಕಾರಗಳು ತಮ್ಮ ಕಾನೂನು ವ್ಯವಸ್ಥೆಯನ್ನು ಷರಿಯಾದ ಮೇಲೆ ಆಧರಿಸಿವೆ. ತಾಲಿಬಾನ್ ಷರಿಯಾ ಕಾನೂನಿನ ಅಡಿಯಲ್ಲಿ ಸರ್ಕಾರ ಸ್ಥಾಪಿಸುತ್ತಿದ್ದಾರೆ ಎಂದರೆ ಅವರು ಇಸ್ಲಾಮಿಕ್ ವಿದ್ವಾಂಸರು ಅಥವಾ ಇತರ ಇಸ್ಲಾಮಿಕ್ ಅಧಿಕಾರಿಗಳು ಒಪ್ಪುವ ರೀತಿಯಲ್ಲಿ ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಅರ್ಥವಲ್ಲ.

    ಷರಿಯಾ ಏನು ಸೂಚಿಸುತ್ತದೆ?
    ಕಳ್ಳತನ ಮತ್ತು ವ್ಯಭಿಚಾರದಂತಹ ಕೆಲವು ನಿರ್ದಿಷ್ಟ ಅಪರಾಧಗಳನ್ನು ಷರಿಯತ್ ಪಟ್ಟಿ ಮಾಡುತ್ತದೆ ಮತ್ತು ಆರೋಪಗಳ ಪರಿಸ್ಥಿತಿಯ ಮಾನದಂಡಗಳ ಆಧಾರದಲ್ಲಿ ಶಿಕ್ಷೆಗಳನ್ನು ವಿಧಿಸುತ್ತದೆ. ಅಲ್ಲದೇ ಇದು ಯಾವಾಗ ಮತ್ತು ಹೇಗೆ ಪ್ರಾರ್ಥನೆ ಮಾಡಬೇಕು, ಮದುವೆ ಅಥಾವ ವಿಚ್ಛೇದನ ಹೇಗೆ ಮಾಡಬೇಕು ಎನ್ನುವುದನ್ನು ನೈತಿಕ ನೆಲೆಗಟ್ಟಿನಲ್ಲಿ ಆಧ್ಯಾತ್ಮಿಕ ಮಾರ್ಗದರ್ಶನ ಮಾಡುತ್ತದೆ. ಪುರುಷ ಬೆಂಗಾವಲು ಇಲ್ಲದೆ ಮಹಿಳೆಯರು ಮನೆಯಿಂದ ಹೊರಬರುವುದನ್ನು ಅಥವಾ ಹೆಚ್ಚಿನ ಉದ್ಯೋಗಗಳಲ್ಲಿ ಕೆಲಸ ಮಾಡುವುದನ್ನು ಷರಿಯತ್ ಕಾನೂನು ತಡೆಯುವುದಿಲ್ಲ.

    ತಾಲಿಬಾನ್ ಈ ಹಿಂದೆ ಷರಿಯಾವನ್ನು ಹೇಗೆ ಅರ್ಥೈಸಿತು?
    1996 ರಿಂದ 2001 ರವರೆಗೆ ತಾಲಿಬಾನ್ ಅಫ್ಘಾನಿಸ್ತಾನವನ್ನು ನಿಯಂತ್ರಿಸಿದಾಗ, ಅವರು ದೂರದರ್ಶನ ಮತ್ತು ಸಂಗೀತ ಉಪಕರಣಗಳನ್ನು ನಿಷೇಧಿಸಿದರು. ನಡವಳಿಕೆ, ಉಡುಗೆ ಮತ್ತು ಚಲನೆಯ ಮೇಲಿನ ನಿರ್ಬಂಧಗಳನ್ನು ಹೇರಿದರು. ಪರಿಶೀಲನೆಗೆ ನೈತಿಕತೆ ಪೊಲೀಸ್ ಅಧಿಕಾರಿಗಳು ನೇಮಿಸಿದರು, ತಮ್ಮ ನಿಯಮಗಳನ್ನು ಪಾಲಿಸದ ಮಹಿಳೆಯರನ್ನು ಅವಮಾನಿಸಿದರು ಮತ್ತು ಚಾವಟಿ ಏಟಿನಿಂದ ಶಿಕ್ಷಿಸಿದರು. 1996 ರಲ್ಲಿ, ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ಮಹಿಳೆಯೊಬ್ಬಳು ಉಗುರು ಬಣ್ಣ ಧರಿಸಿದ್ದಕ್ಕಾಗಿ ಹೆಬ್ಬೆರಳಿನ ತುದಿಯನ್ನು ಕತ್ತರಿಸಿದ್ದರು. ವ್ಯಭಿಚಾರದ ಆರೋಪ ಹೊತ್ತ ಮಹಿಳೆಯರನ್ನು ಕಲ್ಲಿನಿಂದ ಹೊಡೆದು ಸಾಯಿಸಲಾಯಿತು. ಮಹಿಳೆಯರು ಮನೆಯ ಹೊರಗೆ ಕೆಲಸ ಮಾಡುವುದನ್ನು ಅಥವಾ ಪುರುಷ ರಕ್ಷಕರಿಲ್ಲದೆ ಮನೆಯಿಂದ ಹೊರ ಹೋಗುವುದನ್ನು ನಿಷೇಧಿಸಿದರು, ಹುಡುಗಿಯರ ಶಾಲೆಗೆ ಹೋಗದಂತೆ ತಡೆದರು ಮತ್ತು ನಿಯಮ ಉಲ್ಲಂಘಿಸಿದ ಜನರನ್ನು ಸಾರ್ವಜನಿಕವಾಗಿ ಹೊಡೆದು ಶಿಕ್ಷಿಸಿದರು. ಇದನ್ನೂ ಓದಿ: ಪ್ರತಿಭಟನಾಕಾರರ ಮೇಲೆ ತಾಲಿಬಾನಿಗಳಿಂದ ಗುಂಡಿನ ದಾಳಿ

    ಈಗಿನ ಪರಿಸ್ಥಿತಿ ಏನು?
    ಮಹಿಳೆಯರಿಗೆ ಷರಿಯತ್ ಕಾನೂನು ಅಡಿ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗುವುದು ಎನ್ನಲಾಗಿದೆ. ಅದಕ್ಕೆ ಪೂರಕ ಎನ್ನುವಂತೆ ಮಹಿಳಾ ನಿರೂಪಕಿ ತಾಲಿಬಾನ್ ವಕ್ತಾರರ ಸಂದರ್ಶನ ನಡೆಸುವ ಮೂಲಕ ಭರವಸೆ ಹುಟ್ಟಿಸುವ ಪ್ರಯತ್ನ ಮಾಡಲಾಯಿತು. ಆದರೆ ಇದಾದ ಒಂದೆರಡು ದಿನಗಳಲ್ಲಿ ಎಲ್ಲ ಸುದ್ದಿ ಮಾಧ್ಯಮಗಳಲ್ಲಿ ಮಹಿಳೆಯರು ಕಾರ್ಯ ನಿರ್ವಹಿಸದಂತೆ ಒತ್ತಡ ಹೇರಲಾಗಿದೆ. ಮಹಿಳೆಯರನ್ನು ಪ್ರವೇಶ ನೀಡದ ಬಗ್ಗೆ ಮಹಿಳಾ ನಿರೂಪಕಿ ಬಹಿರಂಗವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

    ಸದ್ಯ ಕಾಬೂಲ್‍ನ ಹೊರಗೆ, ಕೆಲವು ಮಹಿಳೆಯರಿಗೆ ಪುರುಷ ಸಂಬಂಧಿಕರ ಸಹಾಯವಿಲ್ಲದೆ ಮನೆಯಿಂದ ಹೊರಹೋಗಬೇಡಿ ಎಂದು ಹೇಳಲಾಗಿದೆ ಮತ್ತು ತಾಲಿಬಾನ್ ಮಹಿಳೆಯರನ್ನು ವಿಶ್ವವಿದ್ಯಾನಿಲಯಕ್ಕೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ತಾಲಿಬಾನಿಗಳು ಕೆಲವು ಮಹಿಳಾ ಚಿಕಿತ್ಸಾಲಯಗಳು ಮತ್ತು ಬಾಲಕಿಯರ ಶಾಲೆಗಳನ್ನು ಮುಚ್ಚಿದ್ದಾರೆ. ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ “ಇಸ್ಲಾಮಿಕ್ ಕಾನೂನಿನ ಮಿತಿಯೊಳಗೆ” ಅಥವಾ ತಮ್ಮ ಹೊಸದಾಗಿ ಸ್ಥಾಪಿತವಾದ ಆಡಳಿತದ ಅಡಿಯಲ್ಲಿ ಶರಿಯಾ ಹಕ್ಕುಗಳನ್ನು ಹೊಂದಿರುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ. ಆದರೆ ಇದರ ಅರ್ಥವೇನೆಂದು ಈವರೆಗೂ ಸ್ಪಷ್ಟವಾಗುತ್ತಿಲ್ಲ. ಇದನ್ನೂ ಓದಿ: “ಜೋರಾದ ಸದ್ದು ಕೇಳಿಸ್ತು.. ನೋಡಿದ್ರೆ ಮನೆ ಮೇಲೆ ಇಬ್ರು ಬಿದ್ದಿದ್ರು”

  • ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು – ವಾಟ್ಸಪ್ ನಲ್ಲಿಯೇ ರೇಟ್ ಫೈನಲ್

    ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು – ವಾಟ್ಸಪ್ ನಲ್ಲಿಯೇ ರೇಟ್ ಫೈನಲ್

    – 8 ಮಹಿಳೆಯರು ಸೇರಿದಂತೆ 16 ಜನ ಪೊಲೀಸರ ವಶಕ್ಕೆ
    – ಬಂದ ಹಣದಲ್ಲಿ ಹುಡುಗಿಯರಿಗೆ ಶೇ.30ರಷ್ಟು ಹಣ
    – ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ

    ಪಾಟ್ನಾ: ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 16 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಇಲಾಖೆಯ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೊಂದು ಹೈ ಪ್ರೊಫೈಲ್ ದಂಧೆಯಾಗಿದ್ದು, ಈ ವ್ಯವಹಾರದಲ್ಲಿ ಭಾಗಿಯಾದವರ ಹೆಸರು ಬೆಳಕಿಗೆ ಬರಬೇಕಿದೆ.

    ಹೋಟೆಲ್ ನಲ್ಲಿ ಸಿಕ್ಕಿರುವ ಮಹಿಳೆಯರು ಕೋಲ್ಕತ್ತಾ ಮತ್ತು ಬನಾರಸ ಮೂಲದವರು ಎಂದು ತಿಳಿದು ಬಂದಿದೆ. ಎಸ್.ಪಿ. ಅಂಬರೀಶ್ ರಾಹುಲ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆದ್ರೆ ಸ್ಥಳೀಯ ಪೊಲೀಸರಿಗೆ ದಾಳಿಯ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ದಾಳಿ ವೇಳೆ ಪೊಲೀಸರು ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ವಾಟ್ಸಪ್ ನಲ್ಲಿಯೇ ಡೀಲ್:
    ಲಾಕ್‍ಡೌನ್ ವೇಳೆಯಲ್ಲಿಯೂ ಇಲ್ಲಿ ಸೆಕ್ಸ್ ದಂಧೆ ನಡೆಯುತ್ತಿತ್ತು. ಇನ್ನು ಇಲ್ಲಿ ಬರುತ್ತಿದ್ದ ಮಹಿಳೆಯರು ವಿವಾಹಿತರಾಗಿದ್ದು, ಈ ವಿಷಯ ಅವರ ಕುಟುಂಬಸ್ಥರಿಗೂ ತಿಳಿದಿದೆ. ಎಲ್ಲ ವ್ಯವಹಾರಗಳು ವಾಟ್ಸಪ್ ಮೂಲಕವೇ ನಡೆಯುತ್ತಿತ್ತು. ಗ್ರಾಹಕರಿಗೆ ವಾಟ್ಸಪ್ ನಲ್ಲಿಯೇ ಫೋಟೋ ತೋರಿಸಿ ಬೆಲೆ ನಿಗದಿ ಮಾಡಿ ಹೋಟೆಲ್ ಗೆ ಕರೆ ತರಲಾಗುತ್ತಿತ್ತು. ಆರು ಸಾವಿರದಿಂದ 18 ಸಾವಿರ ರೂ.ವರೆಗೆ ಬೆಲೆ ಫಿಕ್ಸ್ ಮಾಡಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

    ಹೋಟೆಲ್ ಮಾಲೀಕ ಪಂಕಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ನಡೆಸುವದಾಗಿ ಹೇಳಿ ಪಂಕಜ್ ಕಟ್ಟಡವನ್ನು ಲೀಸ್ ಪಡೆದುಕೊಂಡು ಸೆಕ್ಸ್ ದಂಧೆ ನಡೆಸುತ್ತಿದ್ದನು. ಈ ದಂಧೆಗೆ ಬರುತ್ತಿದ್ದ ಮಹಿಳೆಯರಿಗೆ ಓರ್ವ ಗ್ರಾಹಕನಿಂದ ಬಂದ ಹಣದಿಂದ ಶೇ.30ರಷ್ಟು ನೀಡಲಾಗುತ್ತಿತ್ತು. ಬರೋ ಗ್ರಾಹಕರಿಗೆ ಹೋಟೆಲ್ ನಲ್ಲಿ ಮದ್ಯ, ಕಾಂಡೋಮ್, ಮಾತ್ರೆಗಳ ಸರಬರಾಜು ಮಾಡಲಾಗುತ್ತಿತ್ತು. ಇದನ್ನೂ ಓದಿ: ತಾವು ನಟಿಸಿದ ಸಿನಿಮಾವನ್ನೇ ನೋಡಿ ಗಳಗಳನೇ ಅತ್ತ ಕಿಯಾರಾ

  • ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ತಡೆಯಿಲ್ಲ

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ತಡೆಯಿಲ್ಲ

    ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಪ್ರತ್ಯೇಕ ರಿಟ್ ಅರ್ಜಿಗಳಿಗೆ ಮಧ್ಯಂತರ ಆದೇಶ ನೀಡಲು ಧಾರವಾಡ ಹೈಕೋರ್ಟ್ ಪೀಠ ನಿರಾಕರಿಸಿದೆ.

    ಪಾಲಿಕೆ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರ್ ಹಾಗೂ ಬಸವರಾಜ ತೇರದಾಳರವರು ರಿಟ್ ಅರ್ಜಿ ಸಲ್ಲಿಸಿದ್ದರು. ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಾರ್ಡ್‍ಗಳಲ್ಲಿ ಮಹಿಳೆಯರಿಗೆ ಶೇ.50 ಕ್ಕಿಂತ ಹೆಚ್ಚು ಸ್ಥಾನ, ಉಳಿದ ಮೂರು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ವಾರ್ಡ್‍ಗಳಲ್ಲಿ ಮಹಿಳೆಯರಿಗೆ ಶೇ.50 ಕ್ಕಿಂತ ಕಡಿಮೆ ಸ್ಥಾನ ಹಂಚಿಕೆ ಮಾಡಿ ತಾರತಮ್ಯ ಮಾಡಲಾಗಿದೆ. ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಸಮಾನವಾಗಿ ಶೇ. 50ರಷ್ಟು ವಾರ್ಡ್‍ಗಳನ್ನು ಹಂಚಿಕೆ ಮಾಡಬೇಕೆಂದು ಕೋರಿ ಅಲ್ತಾಫ್ ಕಿತ್ತೂರ್ ಹಾಗೂ ಮೀಸಲಾತಿ ನಿಗದಿಯಲ್ಲಿ ಪರಿಶಿಷ್ಟರಿಗೆ ಅನ್ಯಾಯವಾಗಿದೆ ಎಂದು ಬಸವರಾಜ ತೇರದಾಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ:ಗದ್ದೆಯ ಬದುವಿನ ಮೇಲೆ ರೈತರಂತೆ ನಡೆದ ಹುಲಿ- ಆತಂಕದಲ್ಲಿ ಹಳ್ಳಿಗರು

    ಈ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಪಾಲಿಕೆ ಚುನಾವಣೆಗೆ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಚಾರಣೆಯನ್ನು ಚಾಲ್ತಿಯಲ್ಲಿಟ್ಟು ಮುಂದೂಡಿದೆ. ವಿಚಾರಣೆಯ ಮುಂದಿನ ದಿನಾಂಕವನ್ನು ಸೂಚಿಸಿಲ್ಲ ಎಂದು ತೇರದಾಳ ತಿಳಿಸಿದ್ದಾರೆ. ಪಾಲಿಕೆ ಚುನಾವಣೆಗೆ ತಡೆ ನೀಡುವಂತೆ ಧಾರವಾಡ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಕುರಿತು ಶುಕ್ರವಾರ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಅಲ್ತಾಫ್ ಕಿತ್ತೂರ ತಿಳಿಸಿದ್ದಾರೆ. ಇದನ್ನೂ ಓದಿ:ಹಣದಾಸೆಗೆ ಗಾಂಜಾ ಮಾರಾಟ- 19ರ ಯುವಕ ಅರೆಸ್ಟ್

  • ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇಸ್ಲಾಂ ರಾಷ್ಟ್ರ ಸ್ಥಾಪನೆಗೆ ಮುಂದಾಗುತ್ತೇವೆ ಎಂದು ತಾಲಿಬಾನ್ ಅಧಿಕೃತವಾಗಿ ಹೇಳಿದೆ.

    ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ತಾಲಿಬಾನಿಗಳ ಆಡಳಿತ ಆರಂಭಗೊಂಡ ಬಳಿಕ ಮೊದಲ ಬಾರಿಗೆ ಮಾಧ್ಯಮಗೋಷ್ಠಿ ನಡೆಸಿದ ತಾಲಿಬಾನ್ ತಾನು ಬದಲಾಗಿದ್ದು, ಎಲ್ಲರನ್ನೂ ಕ್ಷಮಿಸಿದ್ದಾಗಿ ಹೇಳಿಕೊಂಡಿದೆ.

    ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹೀದ್ ಮಹಿಳೆಯರ ಹಕ್ಕುಗಳನ್ನು ರಕ್ಷಣೆ ಮಾಡಲಿದ್ದೇವೆ ಎಂದು ಹೇಳಿದ್ದಾನೆ. ಆದರೆ ಅದು ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ ಎಂದು ಸ್ಪಷ್ಟಪಡಿಸಿದ್ದಾನೆ. ಇದನ್ನೂ ಓದಿ: ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ: ಅಫ್ಘಾನಿಸ್ತಾನದ ಮಹಿಳಾ ಮೇಯರ್

    ತಾಲಿಬಾನ್ ಹೇಳಿದ್ದು ಏನು?
    ಆರೋಗ್ಯ ಕೇತ್ರ ಮತ್ತು ಇತರೆ ಕ್ಷೇತ್ರದಲ್ಲಿ ಮಹಿಳೆಯರು ಕೆಲಸ ಮಾಡಬಹುದು. ಮಹಿಳೆಯರ ವಿರುದ್ಧ ನಾವು ಕ್ರಮಕೈಗೊಳ್ಳುವುದಿಲ್ಲ. ಅಫ್ಘಾನ್ ನೆಲವನ್ನು ಬೇರೆ ರಾಷ್ಟ್ರದ ವಿರುದ್ಧದ ಚಟುವಟಿಕೆಗೆ ಬಳಸಲು ಬಿಡುವುದಿಲ್ಲ. ಅಫ್ಘಾನ್ ಮಾದಕ ದ್ರವ್ಯ ಬೆಳೆಸುವ ರಾಷ್ಟ್ರವಾಗಿರಲ್ಲ.

    ಈ ಮೊದಲು ಇದ್ದ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿತ್ತು. ನಾವು ಭ್ರಷ್ಟಾಚಾರ ಎಸಗಲು ಬಿಡುವುದಿಲ್ಲ. ಈ ಮೊದಲಿನ ಸರ್ಕಾರದ ಜೊತೆ ಕೈ ಜೋಡಿಸಿದವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುವುದಿಲ್ಲ. ಎಲ್ಲರನ್ನೂ ಕ್ಷಮಿಸಿದ್ದೇವೆ. ಯಾರೂ ಭಯಪಡುವ ಅಗತ್ಯವಿಲ್ಲ. ಇದನ್ನೂ ಓದಿ: ಉಗ್ರರಿಗೆ ಆಟ, ಮಹಿಳೆಯರಿಗೆ ಪ್ರಾಣ ಸಂಕಟ – ಷರಿಯತ್ ಏನು ಹೇಳುತ್ತದೆ? ತಾಲಿಬಾನ್ ಕಾನೂನು ಏನು?

  • ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಆತಂಕದಲ್ಲಿರುವ ಜನರು ದೇಶ ತೊರೆದು ಪ್ರಾಣ ಉಳಿಸಿಕೊಳ್ಳುತ್ತಿದ್ದಾರೆ. ತಾಲಿಬಾನಿಗಳ ಪ್ರವೇಶದಿಂದ ಕಾಬೂಲ್ ನಲ್ಲಿ ಶಾಲಾ, ಕಾಲೇಜು ಸೇರಿದಂತೆ ವ್ಯವಹಾರ ಚಟುವಟಿಕೆಗಳು ಬಂದ್ ಆಗಿವೆ. ಆದ್ರೆ ಬುರ್ಖಾ ಅಂಗಡಿಗಳು ತೆರೆದಿದ್ದು, ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ. ಅದರಲ್ಲಿಯೂ ದಪ್ಪ ಬಟ್ಟೆಯ ಬುರ್ಖಾಗಳಿಗೆ ಹೆಚ್ಚು ಬೇಡಿಕೆಯುಂಟಾಗಿದೆ.

    2018ರಲ್ಲಿ ಯುನೈಟೆಡ್ ನೇಷನ್ ನಲ್ಲಿ ಅಫ್ಘಾನಿಸ್ತಾನ ಪ್ರತಿನಿಧಿಸಿದ್ದ ಯುವತಿ ಆಯೇಶಾ ಖುರ್ರಮ್ ಈ ಕುರಿತು ಬರೆದುಕೊಂಡಿದ್ದಾರೆ. ತಾಲಿಬಾನಿಗಳ ಎಂಟ್ರಿಯಿಂದಾಗಿ ಬುರ್ಖಾ ವಹಿವಾಟು ಜೋರಾಗಿದ್ದು, ದೇಶದ ವಿವಿಧ ಪ್ರಾಂತ್ಯಗಳಲ್ಲಿ ಈ ದೃಶ್ಯ ಕಾಣಬಹುದಾಗಿದೆ. ತಾಲಿಬಾನಿಗಳ ದೃಷ್ಟಿ ತಮ್ಮ ಮೇಲೆ ಬೀಳದಿರಲಿ ಎಂದು ಮಹಿಳೆಯರು ದಪ್ಪ ಬಟ್ಟೆ ಮತ್ತು ನೀಲಿ ಬಣ್ಣದ ಬುರ್ಖಾ ಖರೀದಿಗೆ ಮುಂದಾಗುತ್ತಿದ್ದಾರೆ. ಬೇಡಿಕೆ ಹೆಚ್ಚಾದ ಹಿನ್ನೆಲೆ ಮಾರುಕಟ್ಟೆಯಲ್ಲಿ ಬುರ್ಖಾ ಬೆಲೆ ಸಹ ಏರಿಕೆ ಕಂಡಿದೆ. ಈ ಹಿಂದೆ ತಾಲಿಬಾನಿಗಳ ನಲುಗಿದ ಮಹಿಳೆಯರು ಎಲ್ಲ ಯುವತಿಯರಿಗೆ ಬುರ್ಖಾ ಧರಿಸುವಿಕೆಯ ಸಲಹೆ ನೀಡುತ್ತಿದ್ದಾರೆ. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    22 ವರ್ಷದ ಆಯೇಶಾ ಕಾಬೂಲ್ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ವ್ಯವಹಾರಿಕ ಸಂಬಂಧಗಳ ಕುರಿತ ವಿಷಯದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅಂತಿಮ ವರ್ಷದ ಪರೀಕ್ಷೆಗೆ ಇನ್ನೂ ಎರಡು ತಿಂಗಳು ಇರುವಾಗಲೇ ತಾಲಿಬಾನಿಗಳ ಪ್ರವೇಶವಾಗಿದೆ. ನಾನು ಪದವಿ ಪಡೆಯುವ ಕನಸು ಕನಸಾಗಿಯೇ ಉಳಿಯಲಿದೆ ಎಂದು ಆಯೇಶಾ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ಇನ್ನೂ ಕೆಲ ದಿಟ್ಟ ಮಹಿಳೆಯರು ತಮ್ಮ ಅಭಿಪ್ರಾಯಗಳನ್ನು ತಾಲಿಬಾನಿಗಳಿಗೆ ತಲುಪಿಸುವ ಪ್ರಯತ್ನದಲ್ಲಿದ್ದಾರೆ. ಕಾಬೂಲ್ ವಿಶ್ವವಿದ್ಯಾಲಯದ ಅಧ್ಯಾಪಕಿ ಮುಸ್ಕಾ ದಸ್ತಗೀರ್ ಸೋಶಿಯಲ್ ಮೀಡಿಯಾದಲ್ಲಿ ತಾಲಿಬಾನಿಗಳನ್ನು ಉದ್ದೇಶಿಸಿ ಲೇಖನಗಳನ್ನು ಪ್ರಕಟಿಸುತ್ತಿದ್ದಾರೆ. ಅಫ್ಘಾನಿಸ್ತಾನದ ಜನರನ್ನ ಬೇಟೆಯಂತೆ ಕಂಡು ಕೊಲ್ಲಲಾಗುತ್ತಿದೆ. ಆದ್ರೆ ಈ ದೇಶದ ಮಹಿಳೆಯರು ಮನೆಯಲ್ಲಿ ಅವಿತುಕೊಳ್ಳಲ್ಲ ಮತ್ತು ನಾವುಗಳು ಹೆದರಲ್ಲ ಎಂದು ಬರೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ

  • ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

    ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

    – ಮನೆಗಳನ್ನು ಹೊಕ್ಕು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಕೃತಿ
    – ಅಫ್ಘಾನಿಸ್ತಾನದ ಮೂರನೇ ಎರಡರಷ್ಟು ಭಾಗ ತಾಲಿಬಾನಿಗಳ ವಶ

    ಕಾಬುಲ್: ತಾಲಿಬಾನಿಗಳ ಅಟ್ಟಹಾಸದಿಂದಾಗಿ ಅಫ್ಘಾನಿಸ್ತಾನದಲ್ಲಿ ರಕ್ಕಸದೃಶ್ಯ ವಾತಾವರಣ ನಿರ್ಮಾಣವಾಗಿದ್ದು, 12 ರಿಂದ 45 ವರ್ಷ ಮೇಲ್ಪಟ್ಟ ಮಹಿಳೆಯರನ್ನು ಬಲವಂತವಾಗಿ ವಿವಾಹವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್‍ನ್ನು ವಶಪಡಿಸಿಕೊಂಡಿದ್ದಾರೆ. ಅಂದರೆ ಅಫ್ಘಾನಿಸ್ತಾನದ ಮೂರನೇ ಎರಡರಷ್ಟು ಭಾಗ ತಾಲಿಬಾನಿಗಳ ಹಿಡಿತದಲ್ಲಿದೆ. ಇಲ್ಲಿನ ಜನ ಪ್ರಾಣ ರಕ್ಷಣೆಗಾಗಿ ಪರಿತಪಿಸುತ್ತಿದ್ದಾರೆ.

    ಉಗ್ರರ ದಾಳಿಯಿಂದಾಗಿ ಅಫ್ಘಾನಿಸ್ತಾನದ ಹೆರಾತ್‍ನಲ್ಲಿ ಸರ್ಕಾರಿ ಅಧಿಕಾರಿಗಳೇ ಶರಣಾಗಿದ್ದಾರೆ. ಹೆರಾತ್ ಪ್ರಾಂತ್ಯದ ಸರ್ಕಾರಿ ಅಧಿಕಾರಿಗಳು, ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಮಾಜಿ ಮುಜಾಹಿದ್ದೀನ್ ನಾಯಕ ಮೊಹಮ್ಮದ್ ಇಸ್ಮಾಯಿಲ್ ಖಾನ್, ಆಂತರಿಕ ಭದ್ರತೆಯ ಉಪಮಂತ್ರಿ ಮತ್ತು 207 ಜಾಫರ್ ಕಾಪ್ರ್ಸ್ ಕಮಾಂಡರ್ ಗಳು ತಾಲಿಬಾಗ್ ಉಗ್ರರಿಗೆ ಶರಣಾಗಿದ್ದಾರೆ.

    ನಿನ್ನೆಯಷ್ಟೇ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್ ಅನ್ನು ವಶಕ್ಕೆ ಪಡೆದುಕೊಂಡಿದ್ದರು. ಇದರಿಂದಾಗಿ ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳ ಪೈಕಿ 12 ರಾಜಧಾನಿಗಳನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಂತಾಗಿದೆ.

    ತಾಲಿಬಾನಿಗಳು ವಶಕ್ಕೆ ಪಡೆದ ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿ ಋತುಮತಿಯರಾದ ಹಾಗೂ 45 ವರ್ಷದೊಳಗಿನ ಯುವತಿಯರು ಹಾಗೂ ಮಹಿಳೆಯರನ್ನು ಎಳೆದು ತರುತ್ತಿದ್ದು, ಬಲವಂತವಾಗಿ ವಿವಾಹವಾಗಿ, ಲೈಂಗಿಕ ಸೇವಕಿಯರನ್ನಾಗಿ ಮಾಡಿಕೊಂಡಿದ್ದಾರೆ. ಉಗ್ರರ ವಶದಲ್ಲಿರುವ ಮಹಿಳೆಯರು ಪ್ರಾಣ ಉಳಿಸಿಕೊಳ್ಳಲು ಪರಿತಪಿಸುತ್ತಿದ್ದಾರೆ, ಅಂಗಲಾಚುತ್ತಿದ್ದಾರೆ ಎಂದು ವರದಿಯಾಗಿದೆ.

    ಈಗಾಗಲೇ ತಾಲಿಬಾನಿಗಳು ಮಹಿಳೆಯರ ಮೇಲೆ ಇಸ್ಲಾಮಿಕ್ ಕಠಿಣ ನಿರ್ಬಂಧಗಳನ್ನು ಹೇರಲು ಆರಂಭಿಸಿದ್ದು, ಹಿಂಸಾಚಾರ ನಡೆಸಿ, ಮಹಿಳೆಯರನ್ನು ಕೊಲೆ ಮಾಡಿದ್ದಾರೆ. ಹಳ್ಳಿ ಹಳ್ಳಿಗಳಿಗೆ ನುಗ್ಗಿ ಪ್ರತಿ ಮನೆಯನ್ನು ತಡಕಾಡಿ ಮಹಿಳೆಯರನ್ನು ಹಾಗೂ ಅಪ್ರಾಪ್ತೆಯರನ್ನು ತಮ್ಮ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದಾರೆ. ಈ ಮೂಲಕ ಅಫ್ಘಾನಿಸ್ತಾನದಲ್ಲಿ ನೆತ್ತರು ಹರಿಸುತ್ತಿದ್ದಾರೆ.

    ಈ ಹಿಂದೆ ಅಮೆರಿಕ ಸರ್ಕಾರ ಆಫ್ಘಾನಿಸ್ತಾನದಲ್ಲಿನ ತನ್ನ ಕೊನೆಯ ಸೈನಿಕ ತುಕಡಿಯನ್ನು ಹಿಂದಕ್ಕೆ ಕರೆಸಿಕೊಂಡ ಬೆನ್ನಲ್ಲೇ ತಾಲಿಬಾನಿಗಳು ಮತ್ತೆ ಅಟ್ಟಹಾಸ ಆರಂಭಿಸಿ, ಕೇವಲ 15 ದಿನಗಳ ಅಂತರದಲ್ಲಿ ತಾವು ಈ ಹಿಂದೆ ಹಿಡಿತ ಕಳೆದುಕೊಂಡಿದ್ದ ಪ್ರದೇಶಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡಿದೆ. ಈ ಮೂಲಕ ತಾಲಿಬಾನಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ.

  • ಮಹಿಳೆಯರಿಗೆ ಬಳೆ ತೊಡಿಸಿದ ಪರಮೇಶ್ವರ್

    ಮಹಿಳೆಯರಿಗೆ ಬಳೆ ತೊಡಿಸಿದ ಪರಮೇಶ್ವರ್

    ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮಹಿಳೆಯರಿಗೆ ಬಳೆ ತೊಡಿಸಿ ಸಂಭ್ರಮಿಸಿದರು.

    ಗ್ರಾಮದಲ್ಲಿ ನಡೆದ ಮಾರಮ್ಮ ದೇವಿಯ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಪರಮೇಶ್ವರ್, ಅಲ್ಲಿ ನೆರೆದಿದ್ದ ಮಹಿಳೆಯರಿಗೆ ಬಳೆ ಕೊಡಿಸಿ, ಅಣ್ಣನ ಸ್ಥಾನ ತುಂಬಿದರು. ಅಲ್ಲದೆ ತಾವೇ ತಮ್ಮ ಕೈಯಾರೆ ಬಳೆ ತೊಡಿಸಿ ಸಂತಸಪಟ್ಟರು. ಮಾಜಿ ಉಪ ಮುಖ್ಯಮಂತ್ರಿಯೊಬ್ಬರು ಅಣ್ಣನಾಗಿ ಬಳೆ ತೊಡಿಸಿದ್ದಕ್ಕೆ ಗ್ರಾಮದ ಮಹಿಳೆಯರು ಸಂತೋಷ ವ್ಯಕ್ತಪಡಿಸಿದರು.

    ಇಡಿ ದಾಳಿಯ ಕಾರಣ ಗೊತ್ತಿಲ್ಲ
    ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ದಾಳಿ ನಡೆದಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಕೇಂದ್ರ ಸರ್ಕಾರ ಮೊದಲಿನಿಂದಲೂ ಇಡಿ, ಸಿಬಿಐ, ಐಟಿಯನ್ನು ಬಳಕೆ ಮಾಡಿಕೊಳ್ಳುತ್ತದೆ ಎಂದು ಹೇಳುತ್ತ ಬಂದಿದ್ದೇವೆ. ಹೀಗಾಗಿ ಯಾವ ಉದ್ದೇಶಕ್ಕಾಗಿ ದಾಳಿ ನಡೆದಿದೆ ಎಂದು ಗೊತ್ತಿಲ್ಲ, ಅವರೂ ಸ್ಪಷ್ಟಪಡಿಸಿಲ್ಲ. ಮುಂದಿನ ದಿನಗಳಲ್ಲಿ ಯಾವ ಆಧಾರದ ಮೇಲೆ ದಾಳಿ ಮಾಡಿದರು ಎಂಬುದನ್ನು ತಿಳಿಸಲಿದ್ದಾರೆ. ಐಎಂಎ ಕೇಸ್ ಲಿಂಕ್ ಇರುವ ಆಧಾರದ ಮೇಲೆ ದಾಳಿ ಮಾಡಿದ್ದೇನೆ ಎಂದು ಅವರು ಹೇಳಿಲ್ಲ ಎಂದರು.

    ಇದೇ ವೇಳೆ ರಾಜ್ಯದ ನೂತನ ಸಚಿವ ಸಂಪುಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಪುಟದಲ್ಲಿ ಅನುಭವಿಗಳ ಕೊರತೆಯಿದ್ದು, ತಪ್ಪು ಮಾಡಿದರೆ ತಿದ್ದುವವರಿಲ್ಲದ ಸಂಪುಟ ರಚನೆಯಾಗಿದೆ ಎಂದರು.

  • ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗಿದೆ: ನಾಗತಿಹಳ್ಳಿ ಚಂದ್ರಶೇಖರ್

    ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗಿದೆ: ನಾಗತಿಹಳ್ಳಿ ಚಂದ್ರಶೇಖರ್

    ಮಂಡ್ಯ: ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗಿದೆ. ಹೀಗಾಗಿ ಹೆಣ್ಣು ಮಕ್ಕಳು ಇಂದು ಎಲ್ಲ ಕ್ಷೇತ್ರಗಳನ್ನು ಆವರಿಸಿಕೊಂಡಿದ್ದಾರೆ ಎಂದು ಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.

    ಮಂಡ್ಯದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ಕರ್ನಾಟಕ ಸಂಘ ಹಾಗೂ ಚಿರಂತ ಪ್ರಕಾಶನದಿಂದ ಡಾ.ಸುಮಾರಾಣಿಶಂಭು ಅವರ ಮೂರು ಕೃತಿಗಳ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಎಂತಹದ್ದೇ ಅಡೆತಡೆಗಳ ನಡುವೆಯೂ ಸಾಧಿಸುವ ಛಲ ಹೊಂದಿದ್ದಾರೆ. ಪೈಲೆಟ್, ಶಿಕ್ಷಕಿ, ಸಂಶೋಧಕಿಯಾಗಿಯೂ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಚೈತನ್ಯ ಕ್ರಿಯಾಶೀಲರಾಗಿರುತ್ತಾರೆ. ಅಧಿಕಾರ ವಿಕೇಂದ್ರೀಕರಣ ಗ್ರಾಮ ಪಂಚಾಯತಿ ಬಂದ ನಂತರ ಹೆಣ್ಣು ಮಕ್ಕಳು ಪ್ರಚುರವಾದ ತೊಡಗಿದರು. ಅವರಿಗೆ ಅಸ್ಮಿತೆ ಮತ್ತು ಮಾತನಾಡುವ ಶಕ್ತಿ ಬಂತು ಎಂದು ತಿಳಿಸಿದರು.

    ಹೈನುಗಾರಿಕೆ ಪ್ರತಿನಿತ್ಯ ಆರ್ಥಿಕ ಶಕ್ತಿ ತುಂಬುವ ಉದ್ಯಮವಾಗಿದೆ. ಹೆಣ್ಣು ಮಕ್ಕಳು ಕೂಡ ಇದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಳ್ಳಿ ಹೆಣ್ಣು ಮಕ್ಕಳು ಎಷ್ಟೋ ನೋವುಗಳು ಇದ್ದರೂ ಅದನ್ನು ತಾಳಿಕೊಂಡೇ ಬದುಕುತ್ತಾರೆ. ದುಃಖ ದುಮ್ಮಾನಗಳ ನಡುವೆಯೇ ಬದುಕು ನಡೆಸುತ್ತಾರೆ. ತಮ್ಮ ಭಾವನೆಗಳನ್ನು ಹೊರ ಹಾಕಲು ಹಿಂಜರಿಯುತ್ತಾರೆ. ಪುರುಷ ಜಗತ್ತು ಕಿವುಡತ್ವ, ಅಂಧತ್ವ, ಜಡತ್ವ ಹೊಂದಿದ್ದು, ಸ್ತ್ರಿಯನ್ನು ಎರಡನೇ ದರ್ಜೆ ಎಂದು ಹೇಳುವ ನಾವು ಮತ್ತೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪುರುಷರು ಹೆಣ್ಣು ಮಕ್ಕಳನ್ನೇ ಕೇಂದ್ರವಾಗಿಟ್ಟುಕೊಂಡು ಏಕೆ ಬೈಗುಳಗಳನ್ನು ಸೃಷ್ಟಿಸಿಕೊಂಡಿದ್ದಾರೆ. ಬದಲಾದ ಕಾಲದಲ್ಲಿ ಇಂಥ ಸೂಕ್ಷ್ಮ ವಿಚಾರಗಳ ಬಗ್ಗೆ ಯೋಚಿಸಬೇಕು ಎಂದರು.

  • ಮಾನ್ಸೂನ್ ವೇಳೆ ಧರಿಸಬಹುದಾದ 7 ಶೈಲಿಯ ಡ್ರೆಸ್‍ಗಳು

    ಮಾನ್ಸೂನ್ ವೇಳೆ ಧರಿಸಬಹುದಾದ 7 ಶೈಲಿಯ ಡ್ರೆಸ್‍ಗಳು

    ಳೆಗಾಲವನ್ನು ಸ್ವಲ್ಪ ಜನ ಇಷ್ಟಪಟ್ಟರೆ ಮತ್ತುಷ್ಟು ಮಂದಿ ಇಷ್ಟಪಡುವುದಿಲ್ಲ. ಮಾನ್ಸೂನ್ ವೇಳೆ ಎಷ್ಟೋ ಜನರಿಗೆ ಯಾವ ರೀತಿಯ ಬಟ್ಟೆಗಳನ್ನು ಹಾಕಿಕೊಳ್ಳಬೇಕು ಎಂದು ತಿಳಿದಿರುವುದಿಲ್ಲ. ಅಂತಹವರಿಗೆ ಮಳೆಗಾಲದಲ್ಲಿ ಯಾವ ರೀತಿಯ ಡ್ರೆಸ್ ಧರಿಸಬೇಕು ಎಂಬುವುದಕ್ಕೆ ಕೆಲವೊಂದು ಟಿಪ್ಸ್ ಈ ಕೆಳಗೆ ನೀಡಲಾಗಿದೆ.

    ಕುಲೋಟ್ಸ್
    ಹಳೆಯ ಶೈಲಿಯ ಡೆನಿಮ್ ಮತ್ತು ಪ್ಯಾಂಟ್‍ಗಳನ್ನು ಧರಿಸಿ ಬೇಸರಗೊಂಡಿರುವವರು ಇದನ್ನು ಚೂಸ್ ಮಾಡಬಹುದು. ಟೀ ಶರ್ಟ್, ಚಿಕ್ಕ ಕುರ್ತಾ ಅಥವಾ ಕ್ರಾಪ್ ಟಾಪ್‍ನೊಂದಿಗೆ ಇದು ಬಹಳ ಚೆನ್ನಾಗಿ ಸೂಟ್ ಆಗುತ್ತದೆ.

    ಪ್ಲೇ ಸೂಟ್
    ಪ್ಲೇ ಸೂಟ್ ಧರಿಸುವುದಕ್ಕೆ ಬಹಳ ಕಂಫರ್ಟ್ ಆಗಿರುತ್ತದೆ. ಮನ್ಸೂನ್ ವೆದರ್‍ಗೆ ಬ್ರೈಟ್ ಆಗಿರುವ ಬಣ್ಣದ ಪ್ಲೇಟ್ ಸೂಟ್‍ನನ್ನು ಆಯ್ಕೆ ಮಾಡಿಕೊಳ್ಳಿ. ಅದರಲ್ಲಿಯೂ ನೈಲಾನ್ ಮತ್ತು ಕಾಟನ್ ನಿಂದ ತಯಾರಿಸಲ್ಪಟ್ಟ ಬಟ್ಟೆಗಳನ್ನು ಆರಿಸಿಕೊಳ್ಳುವುದು ಉತ್ತಮ.

    ಪ್ರಿಂಟೆಡ್ ಡ್ರೆಸ್
    ದಿನನಿತ್ಯ ಒಂದೇ ತರಹದ ಡ್ರೆಸ್‍ಗಳನ್ನು ಧರಿಸಲು ಬೋರಿಂಗ್ ಅನಿಸಬಹುದು. ಹಾಗಾಗಿ ಅದರ ಮೇಲೆ ಪ್ರಿಂಟೆಡ್ ಇರುವ ಡ್ರೆಸ್‍ಗಳನ್ನು ಧರಿಸಿ ಇದು ನಿಮಗೆ ಫ್ಯಾಷನ್ ಲುಕ್ ನೀಡುತ್ತದೆ. ಅದರಲ್ಲೂ ಲೇಯರ್ ಇರುವಂತಹ ಡ್ರೆಸ್‍ಗಳನ್ನು ಹೆಚ್ಚಾಗಿ ಬಳಸಿ, ಇದು ಸಿಂಪಲ್ ಲುಕ್ ನೀಡುವುದರ ಜೊತೆಗೆ ನಿಮ್ಮನ್ನು ಬೆಚ್ಚಗೆ ಇರಿಸುತ್ತದೆ.

    ಸ್ಕರ್ಟ್‍ಗಳು
    ಸ್ಕಟ್ ಹಾಗೂ ಟಾಪ್‍ಗಳು ಕ್ಲಾಸಿಕ್ ಕಾಂಬಿನೇಷನ್ ಡ್ರೆಸ್ ಎಂದೇ ಹೆಳಬಹುದು. ಉದ್ಯೋಗದ ಸ್ಥಳದಲ್ಲಿ ನೀವು ಫಾರ್ಮಲ್ ಸ್ಕರ್ಟ್‍ಗಳನ್ನು ಧರಿಸಿ ಇದು ನಿಮಗೆ ಫ್ಯಾಶನ್ ಲುಕ್ ನೀಡುತ್ತದೆ. ಶರ್ಟ್‍ಗಳ ಜೊತೆಗೆ ಸ್ಕರ್ಟ್‍ಗಳನ್ನು ಧರಿಸಬಹುದು. ಆರಾಮವಾಗಿ ಓಡಾಡಲು ಪೆನ್ಸಿಲ್ ಸ್ಕರ್ಟ್ ಗಳಿಗಿಂತ ಎ-ಲೈನ್ ಅಥವಾ ಮಿಡಿ ಸ್ಕರ್ಟ್ ಬಹಳ ಸುಂದರವಾಗಿ ಕಾಣಿಸುತ್ತದೆ.

    ಜೀನ್ಸ್
    ನೀವು ಜೀನ್ಸ್ ಪ್ರಿಯರಾಗಿದ್ದರೆ, ಸ್ಲಿಮ್ ಫಿಟ್ ಜೀನ್ಸ್‍ಗಿಂತ ಬಾಯ್‍ಫ್ರೆಂಡ್ ಜೀನ್ಸ್‍ನನ್ನು ಹೆಚ್ಚಾಗಿ ಆಯ್ಕೆ ಮಾಡಿ. ಇದು ಮಳೆಗಾಲದಲ್ಲಿ ಧರಿಸಲು ಸುಲಭಕರವಾಗಿರುತ್ತದೆ.